ನೈಟೀ ಪುರಾಣ: ಕ್ರಾಕ್ ಬಾಯ್

          ಹಿಂಗೇ ಮೊನ್ನೆ ಮಾಡಕ್ ಕ್ಯಾಮೆ ಇಲ್ದೆ ಭಟ್ರಂಗಡಿ ಕಟ್ಟೆ ಮೇಲ್ ಕುಂತ್ಕಂಡ್ ಓತ್ಲಾ ವಡೀತಿದ್ದೆ, ನನ್ನಂಗೆ ಮಾಡಕ್ ಕ್ಯಾಮೆ ಇಲ್ದಿರೋ ಐಕ್ಳೆಲ್ಲಾ, ಅಣ್ ತಮ್ಮಂದ್ರೆಲ್ಲಾ ನನ್ ಜೊತೆ ಸೇರ್ಕಂಡಿದ್ರು, ಅದೂ, ಇದೂ, ಆಳೂ, ಮೂಳೂ, ಮಣ್ಣೂ, ಮಸಿ, ಹಿಂಗೇ ಮಾತಾಡ್ಕಂಡ್ ಕುಂತಿದ್ವಿ, ಅಸ್ಟೊತ್ತಿಗೆ ಮೂಲೆ ಮನೆ ಆಂಟಿ ಕೊತ್ಮೆರಿ ಸಪ್ ತಗಳಕ್ಕೆ ಭಟ್ರಂಗ್ಡಿಗೆ ಬಂದ್ರು, ಅವ್ರ್ ಬಂದ್ ತಗಂಡ್ ವೋಗಿದ್ರಲ್ ಏನೂ ಇಸೇಸ ಇರ್ಲಿಲ್ಲಾ ಆದ್ರೆ ಅವ್ರು ನೈಟೀ ಹಾಕಂಡ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸತ್ತವರ ಬಾಯಾಗ ಮಣ್ಣು-ಇದ್ದವರ ಬಾಯಾಗ ಹೋಳಿಗಿ-ತುಪ್ಪಾ: ಸುಮನ್ ದೇಸಾಯಿ

ಈಗ ಸ್ವಲ್ಪ ದಿವಸದ್ದ ಹಿಂದ ಒಂದರಮ್ಯಾಲೊಂದ ಗಣ್ಯರ ನಿಧನದ ಸುದ್ದಿ ಕೇಳಿದ್ವಿ. ಒಂದ ಘಳಿಗಿ ಹಿಂಗಾಗಬಾರದಿತ್ತು ಅನಿಸಿದ್ರು, ರಜಾ ಸಿಕ್ತಲ್ಲಾ ಅಂತ ಖುಷಿ ಆದವರ ಹೆಚ್ಚು. ಎಲ್ಲಾರು ಸೂಟಿ ಸಿಕ್ಕಿದ್ದಕ್ಕ ಒಂದ ನಮುನಿ ಖುಷಿಯ ಮುಗುಳ್ನಗಿ ಮುಖದಮ್ಯಾಲೆ  ತಂದಕೊಂಡು “ ಅಯ್ಯ ಪಾಪ ಹಿಂಗಾಗಬಾರದಿತ್ತ ” ಅಂತ ಅಂದವರ ಭಾಳ ಮಂದಿ. ಜಗತ್ತು ಎಷ್ಟ ವಿಚಿತ್ರ ಅಲ್ಲಾ? ನಮ್ಮ ಉತ್ತರ ಕರ್ನಾಟಕದ್ದ ಕಡೆ ಒಂದು ಆಡು ಮಾತದ ಎನಂದ್ರ “ ಸತ್ತವರ ಬಾಯಾಗ ಅಷ್ಟ ಮಣ್ಣು, ಉಳಿದವರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾತಿಗೊಂದು ಗಾದೆ, ಗಾದೆಗೊಂದು ಬೋಧೆ: ವಿಶ್ವನಾಥ ಸುಂಕಸಾಳ

’ವೇದ ಸುಳ್ಳಾದರೂ ಗಾದೆ ಸುಳ್ಳಾಗದು’ ಎನ್ನುವಂತೆ ಹಿರಿಯರ ಅನುಭವ ವೇದಾಂತವಾದ ಗಾದೆ ಮಾತುಗಳು ಕನ್ನಡದ ಸುಭಾಷಿತಗಳಿದ್ದಂತೆ. ”ಆಡು ಮುಟ್ಟದ ಸೊಪ್ಪಿಲ್ಲ’ ಎಂಬಂತೆ ಗಾದೆ ತಲುಪದ ಕ್ಷೇತ್ರವಿಲ್ಲ. ಗಾದೆ ಮಾತುಗಳು ನಮ್ಮ ಅರಿವನ್ನು ವಿಸ್ತರಿಸುತ್ತವೆ. ’ಆರಕ್ಕೇರಿಲ್ಲ ಮೂರಕ್ಕೆ ಇಳೀಲಿಲ್ಲ” ಎಂಬಂಥ ಜೀವನದಲ್ಲಿ ಗಾದೆಗಳು ಜೀವನೋತ್ಸಾಹವನ್ನು ತುಂಬಿ ಮಾರ್ಗದರ್ಶನವನ್ನು ಮಾಡಬಲ್ಲವು. ’ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು” ಎಂಬಂತೆ ಒಂದೇ ವಾಕ್ಯದಲ್ಲಿ ಚುಟುಕಾಗಿ ಜೀವನ ಸಂದೇಶವನ್ನು ಬಿತ್ತರಿಸಬಲ್ಲವು. ನಮ್ಮ ಹಿರಿಯರು ಬಾಯಿ ತೆರೆದರೆ ಒಂದು ಗಾದೆ ಮಾತು ಹೇಳುತ್ತಿದ್ದರು. ಅಷ್ಟೇ ಅಲ್ಲ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓ ಬಾಲ್ಯವೇ ಮರಳಿ ಬರಲಾರೆಯಾ?:ಪದ್ಮಾ ಭಟ್

ಹಾಸ್ಟೇಲಿನ ಬಳಿ ಬಂದಿದ್ದ ಪುಟ್ಟ ಹುಡುಗಿಯ ಹತ್ತಿರ ನಿನಗೆ ಲಗೋರಿ ಆಟ ಆಡೋಕೆ ಬರುತ್ತಾ ಎಂದು ಕೇಳಿದಾಗ  ಅವಳಿಂದ ಬಂದ ಉತ್ತರ ನಂಗೆ ಕಾರ್ ರೇಸ್ ಬರುತ್ತೆ, ಹಂಗ್ರಿ ಬರ್ಡ್ ಬರುತ್ತೆ, ಛೋಟಾ ಭೀಮ್ ಬರುತ್ತೆ ಎಂದು ಒಂದೇ ಸಮನೆ ಕಂಪ್ಯೂಟರಿನ, ಮೊಬೈಲ್ ನ ಆಟಗಳನ್ನು ಹೇಳಹೊರಟಿದ್ದಳು.. ಮಣ್ಣಿನಲ್ಲಿ ನಾನು ಆಟ ಆಡೋಲ್ಲ. ನನ್ನ ಡ್ರೆಸ್ ಗಲೀಜ್ ಆಗುತ್ತೆ ಎಂದು ಅಮ್ಮ ಬೈತಾಳೆ ಎಂದಳು..ಇದನ್ನೆಲ್ಲಾ ಕೇಳುತ್ತಿದ್ದಂತೆ ಮನಸ್ಸು ಹೇಳದೇ ಕೇಳದೆ ನೆನಪಿನ ಕದವನ್ನು ತಟ್ಟಿಯೇ ಬಿಟ್ಟಿತು..ಬಾಲ್ಯದ ನೆನಪುಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಡಿಗೆ ದೇಹ: ನಾಗರಾಜ್ ಹರಪನಹಳ್ಳಿ

          ಇಡೀ ನಗರ ತಲ್ಲಣಿಸಿದಂತೆ ಕಂಡಿತು. ದೇಹಗಳನ್ನ ಬಾಡಿಗೆ ನೀಡಲು ಅವರು ಗಿರಾಕಿಗಳಿಗಾಗಿ ಕಾಯುತ್ತಿದ್ದರು. ಒಂದು ಕಾಲದಲ್ಲಿ ನಗರದ ಯೌವ್ವನವನ್ನೇ ಆಳಿದವರು ಈಗ ಗಿರಾಕಿಗಳಿಲ್ಲದೇ ಅಂಡಲೆದು ಹೊಸಬರನ್ನ ದಂಧೆಗೆ ಇಳಿಸುತ್ತಿದ್ದರು. ದೇಹದ ಸೌಂದರ್ಯ, ಎಳಸುತನ ನೋಡಿ ದೇಹಗಳು ಗಂಟೆ ಲೆಕ್ಕದಲ್ಲಿ ಬಾಡಿಗೆ ನೀಡಲಾಗುತ್ತಿತ್ತು. ದೊಡ್ಡ ದೊಡ್ಡ ಕುಳಗಳು ತಿಂಗಳಿಗೊಮ್ಮೆ ಮೋಜಿಗಾಗಿ ಬಾಡಿಗೆ ಪಡೆದವರನ್ನು ಹೂವಿನಷ್ಟೆ ಮೃದುವಾಗಿ ಎತ್ತಿಕೊಂಡು ಹೋಗುತ್ತಿದ್ದರು. ಇದಕ್ಕಾಗಿ ನಗರದ ರಸ್ತೆಗಳು ಸಾಕ್ಷಿಯಾಗುತ್ತಿದ್ದವು. ಎಷ್ಟು ಸಲೀಸಾಗಿ ಈ ವ್ಯಾಪಾರ ನಡೆದುಹೋಗುತ್ತಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಕಳೆದು ಹೋಗು”ವ, ಮತ್ತೆ ಮತ್ತೆ “ಹುಡುಕು”ವ ಪರಿ: ಅಮರ್ ದೀಪ್ ಪಿ. ಎಸ್.

  ಹಳೆಯ ಸಿನೆಮಾಗಳಲ್ಲಿ ನಾವು ನೋಡುತ್ತಿದ್ದೆವು. ಬಾಲ್ಯದಲ್ಲಿ ತಂದೆ ತಾಯಿಯೊಂದಿಗಿರುವ ಮಕ್ಕಳು ಜಾತ್ರೆಯಲ್ಲೋ, ಭಯಂಕರ ಗಿಜಿಗುಡುತ್ತಿರುವ ರೈಲಿನ ಭೊಗಿಯಲ್ಲೋ, ಗಲಭೆಯಲ್ಲೋ … ಆಟಿಕೆ ಆಡುತ್ತಾ,  ಐಸ್  ಕ್ರೀಮ್ ತರಲು ಹೋಗಿಯೋ , ಆಗುವ ಅನಾಹುತದಿಂದ ತಪ್ಪಿಸಿಕೊಳ್ಳಲು  ಅವಸರವಸರ ವಾಗಿ ಓಡಿ ಹೋಗುವ ಭರಾಟೆಯಲ್ಲೋ ಮಕ್ಕಳ ಪುಟ್ಟ ಪುಟ್ಟ ಕೈಗಳನ್ನು ಭಧ್ರತೆ ಫೀಲ್  ಕೊಟ್ಟು ಹಿಡಿದಿಟ್ಟುಕೊಂಡ ತಂದೆ ತಾಯಿಯು ಅದಾವ ಮಾಯೆಯಲ್ಲೋ ಕೈ ಬಿಟ್ಟು  ತಂದೆ ತಾಯಿ ಅವರನ್ನು "ಕಳೆದುಕೊಂಡು" ಮಕ್ಕಳನ್ನು ಹುಡುಕುತ್ತಾರೆ, ಮಕ್ಕಳು ಅಳುತ್ತಾ ಅತ್ತಿತ್ತ  ಸಾಗುತ್ತಿರುತ್ತಾರೆ.  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಾಗುತ್ತಿರುವ ಮದುವೆಮನೆಯ ಸಂಭ್ರಮಗಳು: ಸುಮನ್ ದೇಸಾಯಿ

ಮೊನ್ನೆ ಸಂಜಿಮುಂದ ಮನಿ ಹತ್ರ ಇರೊ ವೇಂಕಪ್ಪನ ಗುಡಿಗೆ ಹೋಗಿದ್ವಿ. ಅಲ್ಲೆ ಇದ್ದ ಕಲ್ಯಾಣಮಂಟಪದಾಗ ಮದುವಿ ಇತ್ತಂತ ಕಾಣಸ್ತದ. ಬ್ಯಾಂಡ ಭಂಜಂತ್ರಿಯವರು ಮಸ್ತ ಯಾವದೊ ಒಂದ ಸಿನೇಮಾ ಹಾಡಿನ ಬಾಜಾ ಬಾರಿಸ್ಲಿಕತ್ತಿದ್ರು. ಈಗೆಲ್ಲಾ ಕಡೆ ಒಂದ ಹೊಸಾ ಪಧ್ಧತಿ ಎದ್ದದ ಎನಂದ್ರ ಈ ಉತ್ತರಭಾರತದ ಕಡೆ ಮದುವಿಗೊಳೊಳನ್ಯಾಗ ಹೆಂಗ ವರನ್ನ ಕುದರಿಮ್ಯಾಲೆ ಕೂಡಿಸಿಕೊಂಢ ಬ್ಯಾಂಡ ಬಾಜಾ ಬಾರಿಸ್ಕೊತ, ಡ್ಯಾನ್ಸ ಮಾಡ್ಕೊತ ಕರ್ಕೊಂಡ ಬರತಾರ ಹಂಗ ಇಲ್ಲೆನು ವೇಂಕಪ್ಪನ ಗುಡಿಯಿಂದ ಕುದರಿಮ್ಯಾಲ ವರನ್ನ ಕುಡಿಸಿ ಬ್ಯಾಂಡ ಬಾಜಾ ಬಾರಿಸ್ಕೋತ,ಸಣ್ಣ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿಯ ಭಾವನೆಗಳನ್ನ ಬದಿಗೊತ್ತಿ ಸ್ನೇಹಕ್ಕೆ ಕೈ ಚಾಚುತ್ತಿರುವೆ: ಶುಭ ಆರ್.

  ನನ್ನ ಆತ್ಮೀಯ ಹುಡುಗನಿಗೆ,  ಮರೆಯಲಾಗದು ನಿನ್ನೊಡನೆ ಕಳೆದ ಆ ಸುಂದರ ದಿನಗಳು. ಮನದ ತುಂಬಾ ಮೂಡಿದ  ನೂರಾರು ಕನಸಿನ ಚಿತ್ತಾರಗಳು. ಖಾಲಿಯಿದ್ದ ನಮ್ಮ ಪಕ್ಕದ ಮನೆಗೆ ಬಂದ  ಹುಡುಗ ನೀನು. ಅಪರಿಚನಾಗಿದ್ದವನು ಸ್ವಲ್ಪ ದಿನಗಳ ಬಳಿಕ ಪರಿಚಯವಾಗಿ ಆತ್ಮೀಯ ಒಡನಾಟ ಬೆಳೆಯಿತು. ನಿನ್ನ ಮುದ್ದಾದ ನಗು ನನ್ನನ್ನು ನಾಚುವಂತೆ ಮಾಡುತ್ತಿತ್ತು. ನಿನ್ನ ಸುಂದರ ನೋಟದಲ್ಲೇ ನನ್ನ ಸೆರೆ ಹಿಡಿದ. ಸುಮಧುರ ಮಾತುಗಳಲ್ಲೇ ನನ್ನ ಹೃದಯವನ್ನೇ ಗೆದ್ದ. ಒಟ್ಟಿನಲ್ಲಿ ಗುಣದಲ್ಲಿ ಅಪರಂಜಿಯಂತಹ  ಹುಡುಗ, ನಿನ್ನ ಚೆಲುವಿಗೆ ನಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಸ್ಮಯಭರಿತ ವಿರಾಟ ವಿಶ್ವ (ಭಾಗ 1): ನಾರಾಯಣ ಎಂ.ಎಸ್.

ನಿಮಗೆ ನೆನಪಿರಬಹುದೇನೋ? ಇಲ್ಲ, ಖಂಡಿತವಾಗಿಯೂ ನೆನಪಿದ್ದೇ ಇರುತ್ತದೆ. ಏಕೆಂದರೆ, ಬಾಲ್ಯದ ಉತ್ಕಟ ಅನುಭವಗಳ ನೆನಪು ಎಲ್ಲಕ್ಕಿಂತ ಸ್ಪಷ್ಟ ಮತ್ತು ನಿಚ್ಚಳವಾಗಿರುತ್ತದಂತೆ. ನಮ್ಮ ಕೈ ಸೋಕಿದೊಡನೆ ನಾಚಿ ಮುದುಡುವ ಆ ಮುಟ್ಟಿದರೆ ಮುನಿ ಗಿಡ, ಕತ್ತಲಲ್ಲಿ ಮಿಂಚುವ ಆ ಮಿಣಿಕೆ ಹುಳ, ಆ ಬಣ್ಣದ ಚಿತ್ತಾರದ ಪಾತರಗಿತ್ತಿ, ಪರಿಸರಕ್ಕೆ ತಕ್ಕಂತೆ ಬಣ್ಣ ಬದಲಿಸುವ ಆ ಊಸರವಳ್ಳಿ, ಕಾರ್ಮುಗಿಲಿನಲ್ಲಿ ಕಂಡ ಆ ಬೆಳ್ಳಿ ಮಿಂಚು ಮತ್ತು ಆಗಸದಲ್ಲಿನ ರಂಗು ರಂಗಾದ ಮಳೆಬಿಲ್ಲು ಇತ್ಯಾದಿಗಳನ್ನು ನಾವು ನಮ್ಮ ಬೆರಗು ಕಣ್ಗಳಿಂದ ಮನದಣಿಯೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಅಕುವ, ಕೃಷ್ಣಮೂರ್ತಿ ನಾಯಕ್, ಶ್ರೀವಲ್ಲಭ ಕುಲಕರ್ಣಿ.

          ದಾನಿಗಳೇ…..   ಇಲ್ಲಿ ಎಲ್ಲರೂ ದಾನಿಗಳು ಹಲವರು ಅಲ್ಪದಾನಿಗಳು ಕೆಲವರು ಮಹಾದಾನಿಗಳು ಮತ್ತುಳಿದವರು ಅಗ್ರಮಾನ್ಯರು ಆದರೂ ಯಾರೂ ಕರ್ಣನಾಗಲ್ಲಿಲ್ಲ ಶಿಬಿಯ ಮೀರಲಿಲ್ಲ !!   ದೇವರ ಹೆಸರೆತ್ತಿದ್ದರೆ ಹೇಸದೆ ಕೊಡುವರು ಸಾರ್ಥಕತೆಯ ಮಂಕಿಗೆ ಬೆರಗಾಗಿರುವರು ದಟ್ಟನೆ ಸಭೆಯಲಿ ಸಾಲು ಹೊದಿಯುವರು ಬೆನ್ನಲ್ಲಿಯೇ ಮೆತ್ತನೆ ವಾಪಾಸು ಕೇಳುವರು !!   ನನ್ನೂರ ಹಾದಿಯ ಇಕ್ಕೆಲ್ಲದಲಿ ಬಸ್ಸು ತಂಗುದಾಣಗಳು ದೇಗುಲದ ರಸ್ತೆಗೆ ಮೇಲೆದ್ದ ಸ್ವಾಗತ ಗೋಪುರಗಳು ಬುಡದಲ್ಲಿ ಕೆತ್ತಿದ ದಾನಿಗಳ ನಾಮ ಫಲಕಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಿಡುವು: ಪ್ರಶಸ್ತಿ ಪಿ.ಸಾಗರ

ದಿನಾ ಆಫೀಸಿಂದ ಲೇಟಾಗಿ ಮನೆಗೆ ಬರುವವನಿಗೆ ಒಂದು ದಿನ ಬೇಗ ಮನೆಗೆ ಬಂದು ಬಿಟ್ರೆ ಎಲ್ಲಿಲ್ಲದ ಚಡಪಡಿಕೆ. ಮನೆಯಲ್ಲಿರುವರ ಮಾತಾಡಿಸುವಿಕೆಗಿಂತ ಆಫೀಸಿನದೇ ಚಿಂತೆ. ಅಲ್ಲಿ ಕೆಲಸವಿದ್ದುದ್ದನ್ನು ಬಿಟ್ಟು ಬಂದುದಕಲ್ಲ, ಏನೂ ಕೆಲಸವಿಲ್ಲದಿದ್ದರೂ ಇದೇ ತರ. ಸಮಸ್ಯೆ ಕೆಲಸದ್ದಲ್ಲ. ಅದಿಲ್ಲದಿದ್ದಾಗ ಇರೋ ಬಿಡುವಿನದು. ದಿನಾ ಶಾಲೆ. ಟ್ಯೂಷನ್ನು, ಹೋಂವರ್ಕು ಅಂತ ಓದಿನಲ್ಲೇ ಮುಳುಗಿ ಹೋಗಿ ಮನೆಗೆ ಬಂದವರನ್ನು ಮಾತಾಡಿಸಲೂ ಬಿಡುವಿಲ್ಲದ ಮಗನಿಗೆ ಓದಿನ ಒಂದು ಹಂತ ದಾಟಿದ ನಂತರ ತೀರಾ ಕಸಿವಿಸಿ. ಮುಂದಿನ ಹಂತ ಏನೆಂದು ನಿರ್ಧರಿತವಾಗಿದ್ದರೂ ಅಲ್ಲಿಯವರೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಐದು ಫೇವರಿಟ್ ದೃಶ್ಯಗಳು: ವಾಸುಕಿ ರಾಘವನ್ ಅಂಕಣ

ರಿಕ್ವೀಮ್ ಫಾರ್ ಅ ಡ್ರೀಮ್  ಈ ಚಿತ್ರ ಮಾದಕ ವ್ಯಸನಕ್ಕೆ ಸಿಲುಕಿ ಛಿದ್ರಗೊಳ್ಳುವ ನಾಲ್ಕು ಜನರ ಜೀವನದ ಕಥಾನಕ. ಈ ಚಿತ್ರದ ಕೊನೆಯಲ್ಲಿ ಬರುವ ದೃಶ್ಯ ಬಹಳ ಶಕ್ತಿಶಾಲಿಯಾಗಿದೆ. ಆ ನಾಲ್ಕೂ ಜನರ ಬದುಕು ಹೇಗೆ ನರಕಸದೃಶವಾಯಿತು ಅಂತ ಒಬ್ಬೊಬ್ಬರ ಶಾಟ್ ಗಳನ್ನು ಒಂದಾದಮೇಲೊಂದು ಜೋಡಿಸಿ ತೋರಿಸಿದ್ದಾರೆ ನಿರ್ದೇಶಕ ಆರೋನಾಫ್ಸ್ಕಿ. ನಿಧಾನಗತಿಯಲ್ಲಿ ಸಾಗುವ ದೃಶ್ಯಗಳ ಜೊತೆಯಲ್ಲೇ ವಿಷಾದಭಾವದ ಸಂಗೀತ. ಬರಬರುತ್ತಾ ಸಂಕಲನ ವೇಗ ಪಡೆದುಕೊಳ್ಳುತ್ತದೆ, ಸಂಗೀತ ತಾರಕಕ್ಕೇರುತ್ತದೆ. ಅಷ್ಟೇ ಪರಿಣಾಮಕಾರಿಯಾಗಿ ಮೂಡಿರುವುದು ಇದರ ನಂತರದ ದೃಶ್ಯ. ಒಬ್ಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 10): ಮಹಾಂತೇಶ್ ಯರಗಟ್ಟಿ

೧.    ಇಸ್ರೋದ ಅಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ೨.    ಸಿಖ್ಖರ ಪವಿತ್ರ ಗ್ರಂಥ ಯಾವುದು? ೩.    ಮತದಾನದ ವಯಸ್ಸನ್ನು ೨೧ ವರ್ಷದಿಂದ ೧೮ ವರ್ಷಕ್ಕೆ ಯಾವ ವರ್ಷದಲ್ಲಿ ಇಳಿಸಲಾಯಿತು? ೪.    ಮರಾಠಾ ಒಕ್ಕೂಟಕದ ಸ್ಥಾಪಕ ಯಾರು? ೫.    ವಿಶ್ವವನ್ನು ಸುತ್ತಿ ಬಂದ ಭಾರತೀಯ ನೌಕೆಯ ಹೆಸರೇನು? ೬.    ಗ್ರಾಮ್ ಸ್ವರಾಜ್ ಎಂಬ ವಿಚಾರವನ್ನು ಪ್ರತಿಪಾದಿಸಿದವರು ಯಾರು? ೭.    ಮದರ್ ತೆರೆಸ್ ಮಹಿಳಾ ವಿಶ್ವವಿದ್ಯಾಲಯ ಎಲ್ಲಿದೆ? ೮.    ’ಪೆನಾಲ್ಟಿ ಕಾರ್ನರ್’ ಯಾವ ಕ್ರೀಡೆಗೆ ಸಂಬಂಧಿಸಿದ್ದು? ೯.    ಪೋಲಿಯೋ ಕಾಯಿಲೆಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೇನು-ಸವಿಜೇನು: ಅಖಿಲೇಶ್ ಚಿಪ್ಪಳಿ ಅಂಕಣ

ಹಿರಿಯ ಪರ್ತಕರ್ತ ಸ್ನೇಹಿತರಾದ ಅ.ರಾ.ಶ್ರೀನಿವಾಸ್ ಫೋನ್ ಮಾಡಿದ್ದರು. ಸಮಸ್ಯೆಯೆಂದರೆ ಅವರ ಪುಟ್ಟ ತೋಟದಲ್ಲಿರುವ ಹೈಬ್ರೀಡ್ ನೆಲ್ಲಿ ಮರದಲ್ಲಿ ಹೂವಿದ್ದರೂ ಕಾಯಿಗಟ್ಟುತ್ತಿರಲಿಲ್ಲ. ಜೇನಿನ ಅಭಾವವೇ ಈ ಸಮಸ್ಯೆಗೆ ಕಾರಣವೆಂದು ಮನಗಂಡು, ತಮ್ಮಲ್ಲಿರುವ ಹಳೇ ಜೇನುಪೆಟ್ಟಿಗೆಯಲ್ಲಿ ಜೇನು ಸಾಕಬೇಕೆಂಬ ತೀರ್ಮಾನ ಮಾಡಿದ್ದರು. ಅದಕ್ಕಾಗಿ ಜೇನು ತುಂಬಿ ಕೊಡಲು ಸಾಧ್ಯವೆ? ಎಂದು ಕೇಳಿದರು. ವಿನೋಬ ನಗರದಲ್ಲಿ ದೊಡ್ಡದೊಂದು ದೂರವಾಣಿ ಕೇಬಲ್ ಸುತ್ತಿಡುವ ಪ್ಲೈವುಡ್‌ನಿಂದ ತಯಾರಿಸಿದ ಉರುಟಾದ ಗಾಲಿಯೊಂದಿತ್ತು. ಅದರ ಮಧ್ಯಭಾಗದಲ್ಲಿ ೬ ಇಂಚು ಅಗಲದ ದುಂಡನೆಯ ರಂಧ್ರ. ಒಮ್ಮೆ ಅತ್ತ ಗಮನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಟ್ಟು ದರಿದ್ರವಾಗಿದ್ದರೆ ಏನು? ಸಾವು ಚರಿತ್ರೆ ಆಗಿರಬೇಕು: ಸಂತೋಷ್ ಗುರುರಾಜ್

          ಮೊನ್ನೆ ನನ್ನ ಫೇಸ್ ಬುಕ್ ಅಕೌಂಟ್ ನ ಗೋಡೆಯ ಮೇಲೆ ಒಂದು ಸ್ಟೇಟಸ್ ಬಂದಿತ್ತು ,ಆ ಸ್ಟೇಟಸ್ ನೋಡಿ ನನಗೂ ತಕ್ಷಣ ಮನಸ್ಸಿಗೆ ಒಂದು ತರಹದ ಕುತೂಹಲ ಉಂಟಾಯಿತು . ಮತ್ತೆ ಬೇರೆ ಯಾವುದೇ ಸ್ಟೇಟಸ್ ಸಹ ಅಷ್ಟೊಂದು ಮನಸ್ಸಿಗೆ ಹಿಡಿಸಿದ್ದಿಲ್ಲ.ಮತ್ತು ಆ ಸ್ಟೇಟಸ್ ನೋಡಿದಾಗಿನಿಂದ ನಾನು ಅದನ್ನು ಅನುಸರಿಸಬೇಕು ಎಂದು ಅನಿಸತೊಡಗಿತು ಆ ಸ್ಟೇಟಸ್ ಹೀಗಿದೆ ನೋಡಿ  "ಹುಟ್ಟು ದರಿದ್ರವಾಗಿದ್ದರೆ ಏನು? ಸಾವು ಚರಿತ್ರೆ ಆಗಿರಬೇಕು" ಇದರಲ್ಲಿ ಬಹಳಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ಟೂನ್ ಕಾರ್ನರ್

‘ಅಕ್ಷಯ’ ಬೆಳ್ಳಿಹಬ್ಬ ಸಾಹಿತ್ಯ ಸ್ಪರ್ಧೆಯ ವ್ಯಂಗ್ಯಚಿತ್ರ ವಿಭಾಗದಲ್ಲಿ ಸಿದ್ದಾಪುರದ ರಂಗನಾಥ ವಿ.ಶೇಟ್‌ರವರ ‘ಅಡುಗೆ ಅನಿಲ ಮಹತ್ವ’ ಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಪಂಜುವಿಗಾಗಿ ನಿರಂತರವಾಗಿ ತಮ್ಮ ವ್ಯಂಗ್ಯಚಿತ್ರಗಳನ್ನು ಕಳುಹಿಸಿಕೊಡುವ ರಂಗನಾಥರವರಿಗೆ ಪಂಜು ಬಳಗ ಅಭಿನಂದನೆಗಳನ್ನು ಸಲ್ಲಿಸುತ್ತದೆ.  ******   ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನೆಯ ಮೂಲೆ: ಅನಿತಾ ನರೇಶ್ ಮಂಚಿ

  ಕೋಣೆ ಅನ್ನುವುದು ಹೆಚ್ಚಿನೆಲ್ಲಾ ಮನೆಗಳಲ್ಲಿ ಚೌಕವೋ ಆಯತವೋ ಇರುವುದರಿಂದ ಒಂದು ಕೋಣೆಗೆ ನಾಲ್ಕು ಮೂಲೆಗಳು ಇದ್ದೇ ಇರುತ್ತವೆ. ಅವುಗಳಲ್ಲಿ ಒಂದೆರಡು ಹೊರ ಜಗತ್ತಿಗೆ ತೆರೆದಿದ್ದರೆ ಮತ್ತುಳಿದವು ತಮ್ಮನ್ನು ಮಂಚವೋ, ಮೇಜೋ, ಕುರ್ಚಿಯೋ ಹೀಗೇ ಯಾವುದಾದರೂ ವಸ್ತುಗಳಿಂದ ಆವರಿಸಿಕೊಂಡಿರುತ್ತವೆ. ಇವುಗಳೇ ಮನೆಯ ಅತ್ಯದ್ಭುತ ಸ್ಥಳ ಎಂದು ನನ್ನ ಅಭಿಪ್ರಾಯ. ಇವುಗಳು ಮುಚ್ಚಿಟ್ಟುಕೊಂಡಿರುವ ರಹಸ್ಯಗಳೇ ಹಾಗಿರುತ್ತವೆ.   ಪಕ್ಕನೆ ಮನೆ ಒಳಗೆ ನುಗ್ಗಿದವರಿಗೆ ಕಾಣಬಾರದ, ಕಸ,  ಕಸಬರಿಕೆ, ಬಿಸುಡಲು ಮನಸ್ಸಿಲ್ಲದ ಹಳೆಯ ಬಟ್ಟೆಯ ಗಂಟು, ಮುರಿದ ಪಾತ್ರೆ ಪಡಗಗಳು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಮಂದ್ರ: ಹರಿ ಪ್ರಸಾದ್

ರಾಮಮಂದಿರ ಅಂದರೆ ಏನೇನೋ ಚಿತ್ರಗಳು ಮೂಡುವ ಈ ಕಾಲದಲ್ಲಿ, ನನಗಂತೂ ನಮ್ಮ ಸೋದರತ್ತ್ತೆ  ಊರಿನ ಮಧ್ಯದಲ್ಲಿದ್ದ ರಾಮಮಂದಿರವೇ ಕಣ್ಮುಂದೆ ಬರುತ್ತದೆ. ಸುಮಾರು ನೂರೈವತ್ತು ಮನೆಗಳ ಪುಟ್ಟ ಊರದು. ನನ್ನ ಬಾಲ್ಯ ಬಹುಪಾಲು ಕಳೆದಿದ್ದು ಆ ಊರಿನಲ್ಲೆ. ನನ್ನ ಬಾಲ್ಯದ ಅನೇಕ ಚಟುವಟಿಕೆಗಳು ಅದರ ಸುತ್ತಮುತ್ತ ಹರಡಿಹೋಗಿವೆ. ಆದ್ದರಿಂದ ಆ ಚಿತ್ರ ಮನಸಿನಿಂದ ಹೋಗಲೊಲ್ಲದು. ಕೆಮ್ಮಣ್ಣು ಗೋಡೆಯ ಅದರ ಒಳಭಾಗದಲ್ಲಿ ಇಪ್ಪತ್ತು ಜನ ಕೂರುವಷ್ಟು ಜಾಗ. ಈಚೆ ಪಡಸಾಲೆಯಲ್ಲಿ ಒಳಕ್ಕಿಂತ ತುಸು ಚಿಕ್ಕದಾದ ಜಾಗ. ಬೀದಿಭಾಗಕ್ಕೆ ಮರ ಮತ್ತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಾದಿಗಳಿಲ್ಲದ ಬದುಕು: ರೇಷ್ಮಾ ಎ.ಎಸ್.

ಆಕೆ ನನ್ನ ಸಹೋದ್ಯೋಗಿ ಮಾತ್ರವಲ್ಲದೆ ನನ್ನ ಆತ್ಮೀಯ ಗೆಳತಿಯೂ ಆಗಿದ್ದಾಕೆ. ವಯಸ್ಸಿನಲ್ಲಿ ನನಗಿಂತ ಸಾಕಷ್ಟು ಹಿರಿಯಳಾಗಿದ್ದರೂ ಸ್ನೇಹಕ್ಕೇನೂ ಕೊರತೆ ಇರಲಿಲ್ಲ. ತಂದೆಯನ್ನು ಕಳೆದುಕೊಂಡು ವಯಸ್ಸಾದ ತಾಯಿ, ಚಿಕ್ಕ ತಂಗಿಯೊಡನಿರುತ್ತಿದ್ದ ಆಕೆ ಸಾಧಾರಣ ರೂಪವಂತೆಯಾಗಿದ್ದರೂ ಉದ್ಯೋಗಸ್ಥಳಾದ್ದರಿಂದ ಮದುವೆಯಾಗಲು ಮುಂಬರುತ್ತಿದ್ದ ಗಂಡುಗಳಿಗೇನೂ ಕೊರತೆ ಇರಲಿಲ್ಲ. ಎಲ್ಲ ಸರಿ ಇದೆಯಲ್ಲ ಎಂದು ಉಳಿದವರಿಗೆಲ್ಲ ಅನಿಸುತ್ತಿದ್ದರೂ ಆಕೆ ಕೊನೆಯಲ್ಲಿ ಏನಾದರೂ ಒಂದು ಕಾರಣ ನೀಡಿ ಮದುವೆ ನಿರಾಕರಿಸಿ ಬಿಡುತ್ತಿದ್ದಳು. ಒಬ್ಬ ವರನಂತೂ ನಮಗೆಲ್ಲ ತುಂಬಾ ಸೂಕ್ತನಾದವನು ಎಂದೆನಿಸಿದ್ದು ಆಕೆ ಏನೋ ನೆವ ತೆಗೆದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪವನ್ ಒಡೆಯರ್ ಸಂದರ್ಶನ ಲೇಖನ: ಗುಂಡೇನಟ್ಟಿ ಮಧುಕರ

ಇತ್ತೀಚೆಗೆ ಬೆಳಗಾವಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ’ಪ್ರೀತಿ ಗೀತಿ ಇತ್ಯಾದಿ’  ಚಿತ್ರದ ಚಿತ್ರಕರಣ ನಡೆದಿತ್ತು. ಈ ಚಿತ್ರದ ನಾಯಕ ಪ್ಯಾರೆ ಆಗಬಿಟ್ಟೈತೆ ಪವನ ಒಡೆಯರ. ಗೋವಿಂದಾಯ ನಮಃ ಚಿತ್ರದಲ್ಲಿಯ ಆ ಉರ್ದು ಮಿಶ್ರಿತ ಹಾಡು ನನಗೆ ಮತ್ತೆ ಮತ್ತೆ ಕೇಳುವಂತೆ ಮಾಡಿತ್ತು. ಅದನ್ನು ಬರೆದಿರುವವರು ಪವನ ಒಡೆಯರ ಎಂದು ತಿಳಿದಾಗ ಅಚ್ಚರಿಪಟ್ಟಿದ್ದೆ. ಇಷ್ಟೊಂದು ಕಿರುವಯಸ್ಸಿನಲ್ಲಿ ಇಂತಹ ಒಂದು ಒಳ್ಳೆಯ ಸಾಹಿತ್ಯವನ್ನು ನೀಡಿರುವ ಪವನನ್ನನ್ನು ಭೇಟಿಯಾಗಿ ಮಾತನಾಡಬೇಕೆಂದು ಅಂದೇ ಅಂದುಕೊಂಡಿದ್ದೆ. ಅನಂತರ ಹಲವಾರು ಬಾರಿ ಸಂದರ್ಶನ ಮಾಡುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 9): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ’ಅಣು ವಿಜ್ಞಾನಿ’ ಎಂದು ಖ್ಯಾತಿ ಪಡೆದವರು ಯಾರು? ೨.    ವಿಶ್ವ ಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಪಡೆದ ಭಾರತೀಯ ಚಿತ್ರ ಯಾವುದು? ೩.    ಭಾರತದ ಮೊಟ್ಟಮೊದಲ ರೈಲು ನಿಲ್ದಾಣ ಯಾವುದು? ೪.    ಭಾರತದ ಮೊದಲ ವೃತ್ತ ಪತ್ರಿಕೆ ಯಾವುದು? ೫.    ಭಾರತದ ಅತಿದೊಡ್ಡ ಗಾತ್ರದ ಅಂಚೆಚೀಟಿ ಯಾವುದು? ೬.    ಭಾರತದ ರೈಲ್ವೆಯ ಪಶ್ಚಿಮ ವಲಯದ ಕೇಂದ್ರ ಕಛೇರಿ ಎಲ್ಲಿದೆ? ೭.    ಭಾರತದಲ್ಲಿ ಮೊದಲ ಬಸ್ ಸಂಚಾರವು ಯಾವಾಗ ಆರಂಭವಾಯಿತು? ೮.    ಭಾರತದಲ್ಲಿ ಶಹನಾಯಿ ವಾದ್ಯಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೊಸ ವರುಷ ಹರುಷವೇ!?: ಅಖಿಲೇಶ್ ಚಿಪ್ಪಳಿ ಅಂಕಣ

ಪ್ರಪಂಚದ ಬಹುತೇಕ ದೇಶಗಳಲ್ಲಿ ಹೊಸವರ್ಷ ಪ್ರಾರಂಭವಾಗಿದೆ. ಜನವರಿ ೨೦೧೪. ಕಾಲಚಕ್ರದಡಿಯಲ್ಲಿ ಸುತ್ತಿ ಮತ್ತೊಮ್ಮೆ ಹೊಸವರುಷದ ಹರುಷದಲ್ಲಿ ಮಿಂದೆದ್ದು, ಹೊಸ ಸವಾಲುಗಳಿಗೆ, ಹೊಸ ಸಾಧನೆಗಳಿಗೆ ನಿಧಾನವಾಗಿ ಜಗತ್ತು ತೆರೆದುಕೊಳ್ಳುತ್ತಿದೆ. ಪ್ರತಿದೇಶವೂ ತಾನು ಮುಂದುವರೆದ ರಾಷ್ಟ್ರವಾಗಬೇಕು ಎಂದು ಹಂಬಲಿಸುತ್ತದೆ. ಈ ಹಂಬಲಿಕೆಯನ್ನು ಸಾಕಾರಗೊಳಿಸಲು ಯೋಜನೆಗಳನ್ನು ರೂಪಿಸಿಕೊಂಡು, ಕಾರ್ಯರೂಪಕ್ಕಿಳಿಸುವ ಪ್ರಯತ್ನ ಮಾಡುತ್ತವೆ. ಹಿಂದಿನ ವರ್ಷದ ವೈಫಲ್ಯಗಳೇನು ಎಂಬುದನ್ನು ಪಟ್ಟಿ ಮಾಡಿ ಪ್ರಚುರಪಡಿಸಲು ವಿವಿಧ ಕ್ಷೇತ್ರಗಳಲ್ಲಿ ತಜ್ಞರ ಪಡೆಯೇ ಇದೆ. ವಿಜ್ಞಾನ-ತಂತ್ರಜ್ಞಾನದಲ್ಲಿ ಪ್ರಗತಿಯನ್ನು ಸಾಧಿಸಲು ಆಯಾ ಕ್ಷೇತ್ರದ ವಿಜ್ಞಾನಿಗಳು ತಮ್ಮ ಶ್ರಮವನ್ನು ಧಾರೆಯರೆಯುತ್ತಾರೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಅನುಪಮಾ ಎಸ್. ಗೌಡ, ಆಶಾದೀಪ, ಪವಿತ್ರ ಸತೀಶ್ ಕುಮಾರ್

ಬರೆಯುತ್ತೇನೆ ನಾನು  ಹೆತ್ತವರ ಕಂಬನಿಯ  ನೋವನು ಕುರಿತು   ಅತ್ಮಸಾಕ್ಷಿ ಇಲ್ಲದವರ ಮೇಲೆ  ಮಣ್ಣಿಗಾಗಿ ಬಡಿದಾಡುವ  ಬಂಧುಗಳ ಕುರಿತು ಬರೆಯುತ್ತೇನೆ ನಾನು  ಸನ್ಯಾಸತ್ವ ಪಡೆದವರ ಮೇಲೆ  ವ್ಯಾಮೋಹ ಬಿದಡಿರುವುದನು ಕುರಿತು  ಅವರಲ್ಲಿರುವ ಕ್ರೋದ  ನಯವಂಚನೆಯ ಕುರಿತು  ಬರೆಯುತ್ತೇನೆ ನಾನು  ಆತ್ಮನಾನು ಪರಮಾತ್ಮತಂದೆ   ಅನ್ನುವವರ ಮೇಲೆ  ತನ್ನದಲ್ಲದನ್ನು ತನ್ನದೆಂದು  ವಾದಿಸುವವರ ಕುರಿತು  ಮಣ್ಣಾಗುವಾಗ ಬಿಡಿಗಾಸಿರದೆ  ಬರಿಗೈಯಲ್ಲಿ ಹೋಗುವ  ಪ್ರತಿಯೊಬ್ಬರ ಎಣಿಸಿ -ನಗೆಮಲ್ಲಿಗೆ  ಅನುಪಮ ಎಸ್  ಗೌಡ            ನಿರೀಕ್ಷೆ ಕೊಡವದಿರಿ ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೊಟ್ಟೆ!:ಪ್ರಶಸ್ತಿ ಪಿ.ಸಾಗರ

                  "ಎಲ್ಲಾರು ಮಾಡುವುದು ಹೊಟ್ಟೆಗಾಗಿ, ತುಂಡು ಬಟ್ಟೆಗಾಗಿ.." ಅನ್ನೋ ಪುರಂದರದಾಸರ ಕೀರ್ತನೆ ನೆನಪಾಗುತ್ತಿತ್ತು. ಇದಕ್ಕೆ ಕಾರಣ ನಿನ್ನೆ ರಾತ್ರೆ ಗೆಳೆಯನ ಮನೆಗೆ ಹೋಗಿ ಅವನ ಅನಿರೀಕ್ಷಿತ ಒತ್ತಾಯಕ್ಕೆ ಮಣಿದು ಹತ್ತಿದ ನಳಪಾಕಕ್ಕೂ ಬಯ್ಯಲಾರದೇ ಹೋದ ಅರ್ಧ ತುಂಬಿದ ಹೊಟ್ಟೆಯೋ ಇಂದು ಬೆಳಗ್ಗೆಯ ಗಡಿಬಿಡಿಯ ತಿಂಡಿಯೋ ಮಧ್ಯಾಹ್ನದ ಕಾರ್ಯಕ್ರಮದಲ್ಲಿ ದಕ್ಕಿದ ಅರೆಹೊಟ್ಟೆ ಮೊಸರನ್ನವೋ ಗೊತ್ತಿಲ್ಲ. ಮಧ್ಯಾಹ್ನ ಹನ್ನೆರಡಾಗೋವಷ್ಟರಲ್ಲೇ ತನ್ನ ಇರುವ ಸಾರುತ್ತಿದ್ದ ಹೊಟ್ಟೆ ಟ್ರಿಪ್ಪು ಟ್ರಿಪ್ಪೆಂದು ಹುಚ್ಚನಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಛೂಕು ಭೂಕು ರೈಲು: ಸುಮನ್ ದೇಸಾಯಿ

ಮಧ್ಯಾಹ್ನ ೧.೩೦ ಆಗಿತ್ತು, ಮಂತ್ರಾಲಯದ ರೇಲ್ವೆ ಸ್ಟೆಷನ್ನ್ಯಾಗ ಗುಲಬರ್ಗಾಕ್ಕ ಹೋಗೊ ಟ್ರೇನಿನ ಸಲುವಾಗಿ ಕಾಯಕೊತ ನಿಂತಿದ್ವಿ. ಮಂತ್ರಾಲಯದಾಗ ರಾಯರ ಸನ್ನಿಧಿಯೊಳಗ ಹೆಂಗ ಮೂರ ದಿನಾ ಕಳದ್ವು ಗೊತ್ತಾಗಲೆಯಿಲ್ಲಾ. ರಾಯರ ಸನ್ನಿಧಿ ಅಂದ್ರ ಅಮ್ಮನ ಮಡಿಲಿನ್ಯಾಗ ಮಲ್ಕೊಂಡಷ್ಟ ಹಿತಾ ಇರತದ.ಮನಸ್ಸು ಪ್ರಶಾಂತ ಇರತದ. ವಾಪಸ ಊರಿಗೆ ಹೋಗ್ಲಿಕ್ಕೆ ಮನಸಾಗಲಾರದ ಒಲ್ಲದ ಮನಿಸಿನಿಂದ ಸ್ಟೇಷನ್ನಿಗೆ ಬಂದ ನಿಂತಿದ್ವಿ. ಮುಂಬೈಕ್ಕ ಹೋಗೊ ಟ್ರೇನ್ ಬಂತು ನಾವು ಲೇಡಿಸ್ ಬೋಗಿಯೊಳಗ ಹತ್ತಿದ್ವಿ. ಬೋಗಿ ಪೂರ್ತಿ ಖಾಲಿನ ಇತ್ತು. ನಮ್ಮ ಫ್ಯಾಮಿಲಿಯವರ ಮಾತ್ರ ಇದ್ವಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಲ್ಯದ ಮೆಚ್ಚಿನ ಚಿತ್ರಗಳು: ವಾಸುಕಿ ರಾಘವನ್ ಅಂಕಣ

ನಿಮಗೆ ಬಾಲ್ಯದಲ್ಲಿ ತುಂಬಾ ಇಷ್ಟವಾಗಿದ್ದ ಸಿನಿಮಾಗಳನ್ನ ಜ್ಞಾಪಿಸಿಕೊಳ್ಳಿ. ಈಗ ನಿಮಗೆ ಅವು ಅಂಥ ವಿಶೇಷವೇನಲ್ಲ ಅನ್ನಿಸಬಹುದು, ಆದರೂ ಅವು ಮನಸ್ಸಿಗೆ ಬಹಳ ಹತ್ತಿರವಾಗಿರುತ್ತವೆ. ಅವು ಶ್ರೇಷ್ಠ ಕಲಾಕೃತಿಗಳೇ ಆಗಬೇಕೆಂದಿಲ್ಲ. ನೋಡಿದಾಗಿನ ನಮ್ಮ ಮನಸ್ಥಿತಿಯೋ, ಜೊತೆಗಿದ್ದ ಗೆಳೆಯರೋ, ಇನ್ಯಾವುದೋ ಕಾರಣಗಳಿಂದಲೋ ಅವು ಸ್ಮರಣೀಯವಾಗಿರುತ್ತವೆ. ನನ್ನ ಬಾಲ್ಯದ ಮೆಚ್ಚಿನ ಹತ್ತು ಚಿತ್ರಗಳನ್ನು ಪಟ್ಟಿಮಾಡಲು ಪ್ರಯತ್ನಿಸಿದ್ದೇನೆ. ಇವೇ ಹತ್ತು ಅತ್ಯಂತ ಪ್ರಮುಖ ಚಿತ್ರಗಳಾ ಗೊತ್ತಿಲ್ಲ, ಈ ಕ್ಷಣದಲ್ಲಿ ಜ್ಞಾಪಕ ಬಂದ ಹತ್ತು ಚಿತ್ರಗಳು ಇವು.  ಧ್ರುವತಾರೆ ನನಗೆ ನೆನಪಿರುವಂತೆ ನಾನು ನೋಡಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನ ದರ್ಶನ (ಕೊನೆಯ ಭಾಗ): ಪಾರ್ಥಸಾರಥಿ. ಎನ್.

          (ಇಲ್ಲಿಯವರೆಗೆ…) ಮನುಷ್ಯನ ಮನವೇ ಹಾಗೇ ಧರ್ಮ , ಹಣ , ಅಧಿಕಾರ ಇವುಗಳನ್ನೆಲ್ಲ ಕಂಡರೆ ವಿಭ್ರಮೆಗೆ ಒಳಗಾಗುತ್ತೆ. "ಇಲ್ಲಿ ಮಾತು ಬೇಡ , ಸರಿಯಾಗಲ್ಲ, ಹೀಗೆ ನಡೆಯುತ್ತ ಹೋದರೆ ನಮ್ಮ ತೋಟ ಸಿಗುತ್ತೆ ಬಾ ಅಲ್ಲಿ ಹೋಗೋಣ" ಎನ್ನುತ್ತ ಹೊರಟ. ರಸ್ತೆಯ ಅಕ್ಕಪಕ್ಕ ಅಂಗಡಿಗಳು ಇದ್ದವು,  ಅವುಗಳಲ್ಲೆಲ್ಲ ತೆಂಗಿನಕಾಯಿ, ಎಳ್ಳೆಣೆಯ ಪೊಟ್ಟಣಗಳು, ಕಪ್ಪುವಸ್ತ್ರ, ದೀಪಗಳು, ವಿವಿದ ಪುಸ್ತಕಗಳು, ತುಳಸಿಹಾರದ ಅಂಗಡಿಗಳು ಇಂತಹುವುಗಳೆ, ಎಲ್ಲ ಕಡೆ ತುಂಬಿರುವ ಜನ. ಅಂಗಡಿಯಲ್ಲಿರುವ ಕೆಲವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ