ಆಲ್ ನ್ಯಾಚುರಲ್ ಎಂಬ ಮರಾಮೋಸ:ಅಖಿಲೇಶ್ ಚಿಪ್ಪಳಿ ಅಂಕಣ
ಮನುಷ್ಯನ ಬುದ್ಧಿ ಒಂದೊಂದು ಬಾರಿ ಪೂರ್ವಜನುಮದ ಸ್ಮರಣೆಗೆ ಹೋಗುತ್ತದೆ. ಕೋತಿ ಬುದ್ಧಿ. ಮೊನ್ನೆ ನಮ್ಮ ಹಿರಿಯ ಸ್ನೇಹಿತರೊಬ್ಬರು ಬೆಂಗಳೂರಿಗೆ ಹೋಗಿದ್ದರು. ಈಶಾನ್ಯ ಭಾಗದಿಂದ ಬಂದ ಒಂದಿಷ್ಟು ಜನ ಬಿದಿರಿನಿಂದ ಮಾಡಿದ ಅಲಂಕಾರಿಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಇದೇನು ಹೊಸ ವಿಷಯವಲ್ಲ. ಗುಡಿ ಕೈಗಾರಿಕೆಗಳಲ್ಲಿ ತಯಾರಿಸಿದ ವಸ್ತುಗಳನ್ನು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಮಾರಾಟ ಮಾಡುತ್ತಾರೆ. ರಸ್ತೆ ಬದಿಗಳಲ್ಲಿ ಗಿಡಮೂಲಿಕೆ ಔಷಧಗಳನ್ನು ಮೈಕಿನಲ್ಲಿ ಕೂಗುತ್ತಾ ಮಾರಾಟ ಮಾಡುವ ಜನ ಆಗಾಗ ಕಾಣ ಸಿಗುತ್ತಾರೆ. ಇವರು ಕೊಡುವ ಮೂಲಿಕೆಗಳಿಂದ ಎಲ್ಲಾ … Read more