ಸಾಮಾನ್ಯ ಜ್ಞಾನ (ವಾರ 5): ಮಹಾಂತೇಶ್ ಯರಗಟ್ಟಿ

೧. ಕರ್ನಾಟಕದಲ್ಲಿ ರೈಲು ಸಂಪರ್ಕವಿಲ್ಲದ ಜಿಲ್ಲೆ ಯಾವುದು? ೨. ಕನ್ನಡದಲ್ಲಿ ಭಾವಗೀತೆ ಎಂಬ ಮಹಾಪ್ರಬಂಧ ಬರೆದು ಕನ್ನಡದ ಪ್ರಪ್ರಥಮ ಪಿ.ಎಚ್.ಡಿ ಪದವಿ ಪಡೆದ ಹಿರಿಮೆಗೆ ಪಾತ್ರರಾಗಿರುವವರು ಯಾರು? ೩. ಕರ್ನಾಟಕದ ಉದ್ದವಾದ ನದಿ ಯಾವುದು? ೪. ಕರ್ನಾಟಕದಲ್ಲಿ ದೊಡ್ಡ ಆಲದ ಮರವಿರುವ ಊರು ಯಾವುದು? ೫. ಕನ್ನಡದಲ್ಲಿ ಅತೀ ಹೆಚ್ಚು ಪತ್ತೆದಾರಿ ಕಾದಂಬರಿಗಳನ್ನು ಬರೆದವರು ಯಾರು? ೬. ಭಾರತದ ಮೊದಲ ಆಕಾಶವಾಣಿ ಕೇಂದ್ರವು ಯಾವ ವರ್ಷ ಮತ್ತು ಯಾವ ಊರಿನಲ್ಲಿ ಸ್ಥಾಪಿಸಲಾಯಿತು? ೭. ರೈಡರ್ ಕಫ್ ಯಾವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕಿರು ಲೇಖನಗಳು: ಹೆಚ್.ಕೆ. ಶರತ್, ಸಂದೇಶ್ ಎಲ್. ಎಂ.

ಬದುಕಿನ ಬುಡದಲ್ಲಿ ಅದೆಷ್ಟು ದ್ವಂದ್ವಗಳು? ಮಡುಗಟ್ಟಿದ ಮೌನ. ಮಾತಿನ ಮನೆಯಲ್ಲಿ ಸೂತಕ. ಸಂತಸ ಹೊತ್ತು ಮೆರೆಯುತ್ತಿದ್ದ ಮನಸ್ಸು ನೀರವತೆಯ ದಡದಲ್ಲಿ ನಿಸ್ತೇಜವಾಗಿ ಕೂತಿದೆ. ಅಕಾರಣವಾಗಿ ಬದುಕು ಬೇಸರವೆನಿಸಿದೆ. ಎಲ್ಲದಕ್ಕೂ ಕಾರಣ ಹುಡುಕುವ ಬುದ್ಧಿಗೆ ಸವಾಲೊಡ್ಡುವ ಅಕಾರಣಗಳ ನಡುವಲ್ಲಿ ಬದುಕಿನ ಬಹುದೊಡ್ಡ ಸಡಗರವಿದೆ. ಹಾದಿ ಬದಿಯಲ್ಲಿ ಕಣ್ಣಿಗೆ ಬಿದ್ದ ಅವಳನ್ನು ಆವಾಹಿಸಿಕೊಳ್ಳುವುದರಲ್ಲಿ ಇರುವುದು ಕೇವಲ ಅಕಾರಣ. ಎಲ್ಲವನ್ನೂ ಲೆಕ್ಕಾಚಾರದ ತಕ್ಕಡಿಯೊಳಗೆ ತೂಗಲು ಸಾಧ್ಯವಾದರೆ ಬದುಕು ಸಿದ್ಧ ಮಾದರಿಯೊಳಗೆ ಸಮಾಧಿಯಾದಂತಲ್ಲವೇ? ತಿಕ್ಕಲುತನ ಮೈಗಂಟಿಸಿಕೊಳ್ಳದೇ ಹೋದರೆ ಮನಸು ಹಗುರಾಗಿಸಿಕೊಳ್ಳುವುದು ಹೇಗೆ? ಗಾಂಭೀರ್ಯದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ಟೂನ್ ಕಾರ್ನರ್: ಪಿ.ಜಿ. ನಾರಾಯಣ, ಗಣೇಶ್ ಹಾರುಗಾರ್, ಅರುಣ್ ನಂದಗಿರಿ, ರಂಗನಾಥ್ ಸಿದ್ದಾಪುರ

      ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಂಬಳಿಹುಳದ ಕತೆ: ಅಖಿಲೇಶ್ ಚಿಪ್ಪಳಿ ಅಂಕಣ

  ಚಿಕ್ಕವನಿದ್ದಾಗ ಎಂದು ಹೇಳಬಹುದು. ಹಲವು ಘಟನೆಗಳು ಕಾಲಾನುಕ್ರಮದಲ್ಲಿ ಮರೆತು ಹೋಗುತ್ತವೆ. ಕೆಲವು ಘಟನೆಗಳು ಮರೆತು ಬಿಡಬೇಕೆಂದರು ಮರೆಯಲಾಗುವುದಿಲ್ಲ. ನಮ್ಮದು ಆವಾಗ ಜೋಡು ಕುಟುಂಬ. ೧೮ ಅಂಕಣದ ಸೋಗೆ ಮನೆಯಲ್ಲಿ ಎಲ್ಲಾ ಒಟ್ಟು ಸೇರಿ ಹತ್ತಾರು ತಿನ್ನುವ ಬಾಯಿಗಳು. ಪ್ರತಿವರ್ಷ ಇಡೀ ಮನೆಯ ಸೋಗೆಯನ್ನು ಬದಲಾಯಿಸಿ ಹೊಸದನ್ನು ಹೊದಿಸಬೇಕು. ಅದೊಂದು ವಾರದ ಕಾರ್ಯಕ್ರಮ. ಹತ್ತಾರು ಆಳು-ಕಾಳುಗಳು ಅವರಿಗೆ ಊಟ-ತಿಂಡಿ, ಬೆಲ್ಲದ ಕಾಫಿ ಇತ್ಯಾದಿಗಳು. ಅದಿರಲಿ ಈಗ ಹೇಳ ಹೊರಟಿರುವ ಕತೆಗೆ ಹಿಂದಿನ ವಾಕ್ಯಗಳು ಪೂರಕವಷ್ಟೆ. ವರ್ಷದಲ್ಲೊಂದು ಬಾರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನೇಕೆ ಬರೆಯುವುದಿಲ್ಲ?: ಎಂ. ಎಸ್. ನಾರಾಯಣ

‘ನಾನೇಕೆ ಬರೆಯುವುದಿಲ್ಲ’ ಎಂಬ ಪ್ರಶ್ನೆ ಈ ಹಿಂದೆಯೂ ಕೆಲವೊಮ್ಮೆ ನನ್ನನ್ನು ಕಾಡಿರುವುದು ನಿಜ. ಹೌದು, ಎಲ್ಲರೂ ಬರೆಯಲೇಬೇಕೆಂಬ ನಿಯಮವೇನೂ ಇಲ್ಲ. ಅಸಲು, ಕೆಲವರು ಬರೆಯದೇ ಇರುವುದೇ ಕ್ಷೇಮ. ಆದರೆ ಒಂದು ಮಟ್ಟಿಗೆ ಓದಿಕೊಂಡಿರುವ ನನ್ನಲ್ಲಿ ಬರೆಯಬೇಕೆಂಬ ಕಾಂಕ್ಷೆಗೇನೂ ಕೊರತೆಯಿಲ್ಲ. ಸಮಸ್ಯೆ ಏನೆಂದರೆ, ನನ್ನ ತಿಳುವಳಿಕೆಯಂತೆ ನನಗೆ ಸುಮಾರಾಗಿ ಬರುವ ಇಂಗ್ಲೀಷಿನಷ್ಟೂ ಚೆನ್ನಾಗಿ ಕನ್ನಡ ಬರುವುದಿಲ್ಲ. ಜೊತೆಗೆ ಗಣಕಯಂತ್ರದಲ್ಲಿ ಕನ್ನಡ ಬರೆಯುವ ಕೌಶಲ್ಯವೂ ಕಡಿಮೆಯೇ. ಇಷ್ಟೆಲ್ಲಾ ಇತಿಮಿತಿಗಳಿರುವಾಗ, ನಾನು ಬರೆದು ಏನಾಗಬೇಕು? ನಾನು ಬರೆಯದೇ ಇದ್ದಲ್ಲಿ ಸಮಸ್ತ ಕನ್ನಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಹಾ! ಪುರುಷ ಜಗತ್ತೇ…”:ರೇಷ್ಮಾ ಎ.ಎಸ್.

ಸೀರೆಯ ನಿರಿಗೆಗಳನ್ನು ಜೋಡಿಸುತ್ತಾ ಹಾಸಿಗೆಯಲ್ಲಿ ಮಲಗಿದ್ದ ಪುಟ್ಟ ಮಗುವನ್ನಾಕೆ ನೋಡಿದಳು. ಮಗುವಿನ ಮುಖ ಬಾಡಿದ ಹೂವಿನಂತೆ ಸೊರಗಿತ್ತು. ಕಣ್ಣುಗಳು ಜ್ವರದ ತಾಪದಿಂದ ಬಸವಳಿದು ಒಣಗಿದ ಗುಲಾಬಿ ದಳದಂತಾಗಿದ್ದವು. ಜ್ವರ ಬಿಟ್ಟ ಸೂಚನೆಯಾಗಿ ಹಣೆಯ ಮೇಲೆ ಮೂಡಿದ್ದ ಬೆವರ ಹನಿಗೆ ಹಣೆಯಂಚಿನ ಗುಂಗುರು ಕೂದಲು ತೊಯ್ದು ಅಂಟಿಕೊಂಡಿತ್ತು. ಅವಳು ಸೆರಗಿನಿಂದ ಬೆವರನ್ನು ಹಗುರವಾಗಿ ಮಗುವಿಗೆ ಎಚ್ಚರವಾಗದಂತೆ ಒರೆಸಿದಳು. ರಾತ್ರಿಯಿಡೀ ಮಗು ಮಲಗಿರಲಿಲ್ಲ. ಜ್ವರದಿಂದ ಚಡಪಡಿಸುತ್ತಿತ್ತು. ಹನ್ನೊಂದು ಘಂಟೆಯವರೆಗೆ ಹೇಗೋ ಕುಳಿತಿದ್ದ ಅವಳ ಪತಿ "ಇನ್ನು ನಂಗಾಗೋಲ್ಲ, ನಿದ್ರೆ ಕೆಟ್ರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡುಂಡಿ ಅರಣ್ಯಕನೊಬ್ಬ ಗಣಪತಿಯಾದ ಕಥೆ: ಮಂಜು ಅರ್ಕಾವತಿ

ಸುರರು ಹರಸಲೆಂದು ನಾನು ಕರಗಳೆತ್ತಿ ಬೇಡಿದೆ. ಅಸುರರು ಕೈಹಿಡಿದು ನನ್ನ ಜತನದಿ ಕಾಪಾಡಿದರು ಕಾಣದೆಲ್ಲೋ ಅವಿತಿರುವ ದೇವರುಗಳ ವಂದಿಸಿದೆ ಎದುರಿರುವ ನನ್ನಂತಹ ನರರುಗಳನೇ ನಿಂದಿಸಿದೆ ದೇವರುಗಳನು ಮಾಡಲು ಹೋದೆ ಅತಿಸನ್ಮಾನ ನನ್ನ ನಾನು ಮಾಡಿಕೊಂಡಿದ್ದು ಅತಿ ಅವಮಾನ ಸಾಕಿನ್ನು ಬೇಡುವ, ಕಾಡುವ ವ್ಯರ್ಥ ಕೆಲಸಗಳು ಜೋಡಣೆಯಾಗಲಿ ಹರಿದಿರುವ ಬದುಕುಗಳು  ತಾನು ಪೂಜಿಸಿದ ಆರ್ಯರ ಪಡೆಯಿಂದ ಸಾವಿನಂಚಿಗೆ ಹೋಗಿ ಡುಂಡಿಯ ಗಣದಿಂದ ಕಾಪಾಡಲ್ಪಟ್ಟ ಯಾಜ್ಞಿಕನ ನುಡಿ.  ಶಂಬರನೆನ್ನುವ ಅರಣ್ಯಕನೊಬ್ಬ ಯಾಜ್ಞಿಕನೆಂಬ ಭ್ರಾಹ್ಮಣನೊಬ್ಬನ ಜೊತೆ ಮರಣ ಶಯ್ಯೆಯಲ್ಲಿರುವ ಡುಂಡಿಯನ್ನು ನೋಡಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸ (ಕೊನೆಯ ಭಾಗ): ಗುರುಪ್ರಸಾದ ಕುರ್ತಕೋಟಿ

  ಕಾಲಿಮ್ ಫಾಂಗ್ ನಿಂದ ಗ್ಯಾಂಗ್ ಟಾಕ್ ಗೆ ಹೋಗುತ್ತಿದ್ದಾಗ ಮಧ್ಯೆ ದಾರಿಯಲ್ಲಿ ನಮಗರಿವಿಲ್ಲದಂತೆ ಒಮ್ಮೆಲೆ ಬೆಂಗಳೂರಿನ ನೆನಪಾಯಿತು. ಅದಕ್ಕಿದ್ದ ಒಂದೇ ಕಾರಣವೆಂದರೆ… ಈ ಪ್ರವಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಅರ್ಧ ಗಂಟೆ ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕೊಂಡಿದ್ವಿ! ಅಂತೂ ಪೋಲಿಸರಿಲ್ಲದಿದ್ದರೂ ಹೇಗೋ ಆ ಜಾಮ್ ಕರಗಿ ನಮ್ಮ ಪಯಣ ಮುಂದುವರಿಯಿತು.    ಗ್ಯಾಂಗ್ ಟಾಕ್, ಸಿಕ್ಕಿಂ ಎಂಬ ಪುಟ್ಟ ರಾಜ್ಯದ ರಾಜಧಾನಿ. ಆ ಊರಿಗೆ ಪ್ರವೇಶಿಸುವುದಕ್ಕೆ ಮೊದಲು, ಬಂಗಾಲ ಹಾಗೂ ಸಿಕ್ಕಿಂ ನ ಗಡಿಯಲ್ಲಿ ಅಗಸೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುದುರೆ ಧ್ಯಾನದ ಚಿತ್ರಸಂತ: ಆನಂದ್ ಕುಂಚನೂರು

ಚಿತ್ರಕಲೆಯಲ್ಲಿ ತೊಡಗಿರುವವರದು ಒಂದೊಂದು ರೀತಿಯ ಯಶಸ್ಸು, ಸಾಧನೆ. ಬಣ್ಣಗಳ ಮೂಲಕ ತಮ್ಮ ವಿಶಿಷ್ಟ ಅಭಿವ್ಯಕ್ತಿ, ಸಂವೇದನೆಗಳಿಂದ ಗಮನ ಸೆಳೆದವರು ಹಲವಾರು ಜನ. ಅಂತಹ ಕೆಲವು ಕಲೆಗಾರರಲ್ಲಿ ಇತ್ತೀಚಿನ ದಿನಗಳಲ್ಲಿ ಕೊಂಚ ಭಿನ್ನವಾಗಿ ನಿಲ್ಲುವ ಹಾಗೂ ಚಿತ್ರಕಲೆಯ ಇನ್ನೊಂದು ಆಯಾಮದಂತೆ ತಮ್ಮ ಕಲೆಯಿಂದ ಚಿತ್ರ ರಸಿಕರ ಗಮನ ಸೆಳೆದಿರುವ ಕಲಾವಿದ, ರವಿ ಪೂಜಾರಿ. ಕುದುರೆ ಇವರ ಕಲೆಯ ಮೂಲದ್ರವ್ಯ. ಕುದುರೆಯ ವಿವಿಧ ಭಂಗಿ, ಆಕಾರ, ಭಾವನೆಗಳನ್ನು ಸೆರೆಹಿಡಿಯುವ ಮೂಲಕ ಅದನ್ನೇ ಧ್ಯಾನಿಸುತ್ತಾ ತಮ್ಮ ಕಲಾ ಅಭಿವ್ಯಕ್ತಿಯ ಮಾಧ್ಯಮವಾಗಿ ಬಳಸಿಕೊಂಡಿದ್ದಾರೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಲ್ ನ್ಯಾಚುರಲ್ ಎಂಬ ಮರಾಮೋಸ:ಅಖಿಲೇಶ್ ಚಿಪ್ಪಳಿ ಅಂಕಣ

  ಮನುಷ್ಯನ ಬುದ್ಧಿ ಒಂದೊಂದು ಬಾರಿ ಪೂರ್ವಜನುಮದ ಸ್ಮರಣೆಗೆ ಹೋಗುತ್ತದೆ. ಕೋತಿ ಬುದ್ಧಿ. ಮೊನ್ನೆ ನಮ್ಮ ಹಿರಿಯ ಸ್ನೇಹಿತರೊಬ್ಬರು ಬೆಂಗಳೂರಿಗೆ ಹೋಗಿದ್ದರು. ಈಶಾನ್ಯ ಭಾಗದಿಂದ ಬಂದ ಒಂದಿಷ್ಟು ಜನ ಬಿದಿರಿನಿಂದ ಮಾಡಿದ ಅಲಂಕಾರಿಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಇದೇನು ಹೊಸ ವಿಷಯವಲ್ಲ. ಗುಡಿ ಕೈಗಾರಿಕೆಗಳಲ್ಲಿ ತಯಾರಿಸಿದ ವಸ್ತುಗಳನ್ನು ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಮಾರಾಟ ಮಾಡುತ್ತಾರೆ. ರಸ್ತೆ ಬದಿಗಳಲ್ಲಿ ಗಿಡಮೂಲಿಕೆ ಔಷಧಗಳನ್ನು ಮೈಕಿನಲ್ಲಿ ಕೂಗುತ್ತಾ ಮಾರಾಟ ಮಾಡುವ ಜನ ಆಗಾಗ ಕಾಣ ಸಿಗುತ್ತಾರೆ. ಇವರು ಕೊಡುವ ಮೂಲಿಕೆಗಳಿಂದ ಎಲ್ಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂಟಿಬುಡಕ! :ಪ್ರಶಸ್ತಿ ಅಂಕಣ

ನಮ್ಕಡೆ  ಒಂದು ಪದ ಇದೆ "ಒಂಟಿಬುಡುಕ" ಅಂತ. ಪದ ಅನ್ನೋದಕ್ಕಿಂತ ಅದನ್ನೊಂದು ಸ್ವಭಾವ ಅನ್ನಬಹುದು. ಏನನ್ನೂ, ಯಾರಿಗೂ ಹಂಚದೇ ತಿನ್ನುವ, ಅನುಭವಿಸೋ ಸ್ವಭಾವದವನು/ದವಳಿಗೆ ಒಂಟಿಬುಡುಕ ಆಗ್ಬೇಡ. ಒಳ್ಳೇದಲ್ಲ ಅದು ಅಂತ ಅಪ್ಪ-ಅಮ್ಮ, ಹಿರಿಯರು ಕಿವಿ ಮಾತು ಹೇಳ್ತಿರುತ್ತಾರೆ. ಆ ಸ್ವಭಾವವಿದ್ದವರಿಗೆ ಏನೂ ಅನಿಸದಿದ್ದರೂ, ಹೊರಗಿನವರ ದೃಷ್ಟಿಯಲ್ಲಿ ಕೆಟ್ಟ ಅಭಿಪ್ರಾಯವನ್ನು ಮೂಡಿಸುತ್ತಿರುತ್ತೆ. ಇಂದು ಅದೇ ಸ್ವಭಾವದ ಬಗ್ಗೆ ಒಂದಿಷ್ಟು ಮಾತುಗಳು..ಯಾರದೋ ವ್ಯಕ್ತಿಗತ ನಿಂದೆ ಅಂತಲ್ಲ. ನಮ್ಮ ನಿಮ್ಮೊಳಗೂ ಅರಿಯದೇ ಅವಿತಿರುವ ಈ ಮರಿ ರಾಕ್ಷಸನ ಗುರುತಿಸಿ ಹೊರಗಾಕಲನುವಾಗಲೊಂದು ಪ್ರಯತ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿರಾಳ: ಶರತ್ ಚಕ್ರವರ್ತಿ

“ನಾನು ಹೊರಟಿದ್ದೇನೆ” ಅಂತ ಅವಳ ಮೆಸೆಜ್ ಬಂದೊಡನೆ ತರಾತುರಿಯಲ್ಲಿ ಟವಲ್ಲು, ಅಂಡರಿವೆಯನ್ನ ಹಿಡಿದುಕೊಂಡೋಗಿ ಬಚ್ಚಲ ಬಾಗಿಲು ಜಡಿದುಕೊಂಡ. ಗಡ್ಡ ಬಿಟ್ಟುಕೊಂಡು ಹೋಗುವುದೋ, ಟ್ರಿಮ್ ಮಾಡಿಕೊಂಡು ಹೋಗುವುದೋ ಎಂಬ ಮೂರು ದಿನಗಳ ಜಿಜ್ಞಾಸೆಗೆ ಕತ್ತರಿ ಬಿದ್ದು ಅವನ ಹರಕಲು ಗಡ್ಡು ನೂರು ತುಕುಡಾಗಳಾಗಿ ಉದುರಿಕೊಂಡಿತ್ತು. ಏಳು ವರ್ಷಗಳ ನಂತರ ಅವಳು ಸಿಗುತ್ತಿರುವುದು. ಅಂದು ಹನಿಮಳೆಯೊಳಗೆ ಕಣ್ಣು ತೀಡುತ್ತಾ ಹೋದವಳ ಬೆನ್ನು ನೋಡುತ್ತಾ ನಿಂತವನು ಅಲ್ಲಿಯೇ ಸ್ತಬ್ಧವಾಗಿದ್ದ. ಕಣ್ಣೀರಿಡುತ್ತಾ ಅವಳು ಸೊರಗುಟ್ಟಿದ ಸದ್ದು ಇನ್ನೂ ಕಿವಿಯ ಗೋಡೆಗಳಿಗೆ ಗುದ್ದಿಕೊಳ್ಳುತ್ತಾ ಹೊರಬರಲಾಗದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕವಿತೆಗಳು: ಅನುರಾಧ ಪಿ. ಸಾಮಗ, ಅಶೋಕ್ ಕುಮಾರ್ ವಳದೂರು

ಒಮ್ಮೊಮ್ಮೆ.. ಜಾಗೃತಾವಸ್ಥೆಯೊಂದು ರಾಜ್ಯ, ನಂಬಿಕೆಯ ನಿರಂಕುಶಪ್ರಭುತ್ವ. ಅನಭಿಷಿಕ್ತ ದೊರೆ, ಸರಾಗ ಆಳ್ವಿಕೆ. ಎಲ್ಲೋ ಒಮ್ಮೊಮ್ಮೆ ಪರಿಸ್ಥಿತಿ ದಂಗೇಳುತ್ತವೆ, ಪಟ್ಟ ಅಲ್ಲಾಡುತದೆ, ಕಿರೀಟವುರುಳಿ ಮೀಸೆ ಮಣ್ಣುಮುಕ್ಕಾಗಿ…. ಹೊರಗಿಷ್ಟೆಲ್ಲ ಆದರೂ ಒಳಸುಳಿಯಲೆಲ್ಲೋ ಅದೇ ರಾಜನುಳಿಯುತಾನೆ, ಅಹಿತಕಾಲದ ಹೆಜ್ಜೆಗೆ ಯತ್ನದ ಗೆಜ್ಜೆ ತೊಡಿಸುತಲೇ ಸಕಾಲ ಪ್ರಕಟನಾಗುತ್ತಾನೆ.   ಸ್ವಪ್ನಸಾಮ್ರಾಜ್ಯದಲೆಲ್ಲ ಬುಡಮೇಲು ತಟ್ಟೆಯ ಕಾಳು ಬಿಟ್ಟು ಭ್ರಮನಿರಸನದ ಗೊಬ್ಬರಗುಂಡಿಯಲಿ ಅಪನಂಬಿಕೆಯ ಹುಳಕೆ ಕೆದಕುವ ಕೋಳಿಕನಸ ರಾಜ್ಯಭಾರ. ಒಮ್ಮೊಮ್ಮೆ ಸಂತೃಪ್ತ, ಒಮ್ಮೊಮ್ಮೆ ಅಲ್ಲ.   ಭಯಸಂಶಯ ಕೆಡುಕೆದುರು ನೋಡುತಾವೆ ಚಂದ್ರನೂ ಸೂರ್ಯನಂತುರಿಯುತಾ, ತಾರೆಸಾಲು ಮಿಂಚೆರಗಿದಂತೆರಗುತಾ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಿಂಗಿನ್ ಇನ್ ದ ರೈನ್:ವಾಸುಕಿ ರಾಘವನ್ ಅಂಕಣ

ಜಾಗತಿಕ ಸಿನಿಮಾಗಳಲ್ಲಿ “ಮ್ಯೂಸಿಕಲ್” ಅನ್ನುವ ಪ್ರತ್ಯೇಕ ಪ್ರಕಾರವುಂಟು. ಅದರ ವಿಶೇಷವೆಂದರೆ ಚಿತ್ರಗಳಲ್ಲಿ ಹೆಚ್ಚಾಗಿ ಹಾಡು-ಕುಣಿತದ ಬಳಕೆ. ಹಲವು ಬಾರಿ ಈ ಹಾಡುಗಳು ಪಾತ್ರಗಳನ್ನು ಪರಿಚಯಿಸಲೋ ಅಥವಾ ಕಥೆಯನ್ನು ಮುಂದುವರಿಸಲೋ ಸಹಾಯ ಮಾಡಿದರೆ, ಕೆಲವು ಸಲ ಕಥೆಗೆ ಸಂಬಂಧವಿರದಿದ್ದರೂ ಬರೀ ರಂಜನೆಯ ದೃಷ್ಟಿಯಿಂದ ಇರುತ್ತದೆ. ಭಾರತೀಯ ಚಿತ್ರಗಳನ್ನು ನೋಡಿ ಬೆಳೆದಿರುವವರಿಗೆ ಇದೂ ಒಂದು ಚಿತ್ರಪ್ರಕಾರವೇ ಅಂತ ತಮಾಷೆಯಾಗಿ ಕಾಣಬಹುದು. ನಮ್ಮ ಸಿನಿಮಾಗಳಲ್ಲಿ ಹಾಡು-ಕುಣಿತ ಅಷ್ಟೊಂದು ಅವಿಭಾಜ್ಯ ಅಂಗಗಳಾಗಿವೆ. ಅವಿಲ್ಲದೆಯೂ ಚಿತ್ರಗಳನ್ನು ಮಾಡಬಹುದು ಅನ್ನುವ ಆಲೋಚನೆಗಳೂ ಕೂಡ ಇತ್ತೀಚಿನವರೆಗೆ ಅಪರೂಪವಾಗಿದ್ದವು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 7): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ರೇಖಾ ಶಿವಮೊಗ್ಗಕ್ಕೆ ಹೋದಳು. ಅವಳಿಗೆ ಮಾತ್ರ ತಾನು ಸ್ವಚ್ಛಂದವಾಗಿ ಆಕಾಶದಲ್ಲಿ ಹಾರಾಡುವ ಹಕ್ಕಿ ತಾನಾಗಬೇಕು ಎಂದೆನಿಸಿತು. ಸುಧಾಳ ಬಗ್ಗೆ ಅವಳಿಗೆ ಅತೀವ ದುಃಖವಾಯಿತು. ತನ್ನ ಗೆಳತಿಯ ಜೀವನ ಹೀಗೇಕಾಯಿತು ಅಂದು ಚಿಂತಿಸುತ್ತಿದ್ದಳು.       ಈ ಸಲ ದೀಪಾವಳಿ ಹಬ್ಬಕ್ಕೆ ಅಳಿಯ-ಮಗಳನ್ನು ಮನೆಗೆ ಕರೆದುಕೊಂಡು ಬರಬೇಕು ಎಂದು ವೆಂಕಟಗಿರಿಗೆ ಕಾವೇರಮ್ಮ ಹೇಳಿದರು. ಅದರಂತೆ ಹೌದು ಕಣೆ ಮರೆತುಬಿಟ್ಟಿದ್ದೆ. ಇವತ್ತೆ ಹೋಗಿ ಹೇಳಿ ಬರುತ್ತೇನೆ ಎಂದು ವೆಂಕಟಗಿರಿ ಸುಧಾಳ ಮನೆಗೆ ಹೋದರು. ಬಾಗಿಲಲ್ಲಿ ಕುಳಿತಿದ್ದ ರಮಾನಂದರು ವೆಂಕಟಗಿರಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಲವಿನ ಶಾಪ:ಸುಮನ್ ದೇಸಾಯಿ ಅಂಕಣ

ಮೂರುಸಂಜಿ ಆರು ಘಂಟೆ ಆಗಿತ್ತು. ಮಾಗಿಯ ಕಾಲ ಇದ್ದದ್ದರಿಂದ ಲಗೂನ ಕತ್ತಲಿ ಆವರಿಸಲಿಕತ್ತಿತ್ತು. ಎಂಟು ದಿನದಿಂದ ಒಂದ ಸಮನಾ ಕಾಯ್ದ ಜ್ವರದಿಂದ ಮೈಯ್ಯಾಗ ನಿಶಕ್ತಿ, ಆಯಾಸ ತುಂಬಿದ್ವು. ಮಕ್ಕಳು ಇನ್ನು ಟ್ಯೂಶನ್ ನಿಂದ ಬಂದಿರಲಿಲ್ಲ. ಅವರು ಕೆಲಸದ ಮ್ಯಾಲೆ ಊರಿಗೆ ಹೋಗಿದ್ರು. ಏಕಾಂಗಿಯಾಗಿರೊದು ನಂಗ ಹೊಸದೆನಲ್ಲಾ. ಆದ್ರ ಯಾಕೊ ಇವತ್ತ ಈ ಏಕಾಂಗಿತನ ಅಸಹನೀಯ ಆಗಿತ್ತು. ಸಣ್ಣಾಗಿ ತಲಿಶೂಲಿ ಶುರುವಾಗಿತ್ತು. ಬಿಸಿ ಚಹಾ ಬೇಕನಿಸಿತ್ತು. ಎದ್ದು ಕೂತ್ರ ಕಡಕೊಂಡ ಬಿಳತೇನೊ ಅನ್ನೊ ಅಷ್ಟು ಆಯಾಸ. ಯಾರರ ಹತ್ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯರಾಗಿ ನಮಗೂ ಭಯವಿದೆ .. ಆದರೆ ಎಲ್ಲದರಲ್ಲ: ಸಂತೋಷ್ ಗುರುರಾಜ್

ಸ್ನೇಹಿತರೇ ,   ಈ ಶೀರ್ಷಿಕೆ ಕೊಡಲು ಒಂದು ಮುಖ್ಯ ಉದ್ದೇಶವಿದೆ. ಭಾರತೀಯರಾದ ಮತ್ತು ದೇಶಭಕ್ತರಾದ ನಾವು ಕೆಲ ವಿಷಯಗಳಿಗೆ ಹೆದರುತ್ತೇವೆ ಮತ್ತು ಹೆದರುತ್ತಲೇ ಇರುತ್ತೇವೆ. ಆದರೆ ಅದು ಯಾರೋ ಏನೋ ಮಾಡುವರೆಂದು ಅಲ್ಲ ಅಥವಾ ಎಲ್ಲಿಂದಲೋ ಆಪತ್ತು ಬರುವುದು ಎಂದೂ ಅಲ್ಲ. ನಮ್ಮ ದೇಶದಲ್ಲಿರುವ ಕೆಲವು ಬೆಲೆಬಾಳುವ ವಸ್ತು ಅಥವಾ ಆ ಮಾಹಾನ್ ಶಕ್ತಿಗಳನ್ನು ಎಲ್ಲಿ ಕಳೆದು ಕೊಳ್ಳುತ್ತವೋ ಎನ್ನುವ ಭಯ ಅಷ್ಟೇ. ಅದನ್ನು ವಿವರವಾಗಿ ತಿಳಿಸುವುದಾದರೆ ಕೇವಲ ಒಂದು ಲೇಖನದಲ್ಲಿ ಆಗುವುದಿಲ್ಲ. ಆದರೆ ಸಾಧ್ಯವಾದಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 4): ಮಹಾಂತೇಶ್ ಯರಗಟ್ಟಿ

೧. ರೂಪಕ ಸಾಮ್ರಾಜ್ಯದ ಚಕ್ರವರ್ತಿ ಎಂದು ಯಾರನ್ನು ಕರೆಯುತ್ತಾರೆ? ೨. ಕರ್ನಾಟಕದಲ್ಲಿ ಪ್ರಥಮವಾಗಿ ವಿದ್ಯುತ್ ಸಂಪರ್ಕ ಪಡೆದ ನಗರ ಯಾವುದು? ೩. ’ಮಾಲ್ಗುಡಿ ಡೇಸ್’ ಕೃತಿ ಬರೆದವರು ಯಾರು? ೪. ಏಷ್ಯಾದಲ್ಲೇ ಹೆಚ್ಚು ಕಬ್ಬಿಣ ನಿಕ್ಷೇಪವುಳ್ಳ ಕರ್ನಾಟಕದ ಸ್ಥಳ ಯಾವುದು? ೫. ಬಿ.ಡಿ.ಜತ್ತಿಯವರು ಯಾವ ರಾಜ್ಯದ ರಾಜ್ಯಪಾಲರಾಗಿದ್ದರು? ೬. ಕರ್ನಾಟಕದಲ್ಲಿ ಕೇಂದ್ರೀಯ ಆಹಾರ ಸಮಶೋಧನಾ ಸಂಸ್ಥೆ ಎಲ್ಲಿದೆ? ೭. ದುಡಿತವೇ ನನ್ನ ದೇವರು ಇದು ಯಾರ ಆತ್ಮಕಥೆ? ೮. ಕರ್ನಾಟಕದ ದೊಡ್ಡ ಪಕ್ಷಿಧಾಮ ಯಾವುದು? ೯. ಪಟ್ಟದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ಟೂನ್ ಕಾರ್ನರ್: ಗಣೇಶ್ ಹಾರುಗಾರ್, ರಂಗನಾಥ್ ಸಿದ್ದಾಪುರ, ಅರುಣ್ ನಂದಗಿರಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಣ್ಣು:ಎರಡು ಚಿತ್ರಗಳು-ರೇಷ್ಮಾ ಎ.ಎಸ್.

ಗೆಳತಿಯ ತಂಗಿ ಅಂಜಲಿಗೆ ಮಗುವಾಗಿದೆ, ಮೂರನೆಯದು. ನರ್ಸಿಂಗ್ ಹೋಂಗೆ ಮಗು-ಬಾಣಂತಿಯನ್ನು ನೋಡಲು ಹೋಗಿದ್ದೆ. ಮುದ್ದಾದ ಹೆಣ್ಣು ಮಗು ತೊಟ್ಟಿಲಲ್ಲಿ  ಮಲಗಿತ್ತು. ಗುಲಾಬಿ ಬಣ್ಣ, ಕಪ್ಪು ಗುಂಗುರು ಕೂದಲು, ಸುಂದರ ಮಗು. ಆದರೆ ಮಗುವಿನ ತಾಯಿಯ ಕಣ್ಣುಗಳು ಕೆಂಪಡರಿ ಊದಿಕೊಂಡಿದ್ದವು, ತುಂಬಾ ಅತ್ತ ಹಾಗೆ. ಗೆಳತಿ ಮತ್ತು ಅವಳ ತಾಯಿಯ ಮುಖ ಒಣಗಿ ಕಳಾಹೀನವಾಗಿತ್ತು. ಆಶ್ಚರ್ಯದಿಂದ ಕಾರಣ ಕೇಳಿದಾಗ ಬಾಣಂತಿ ಬಿಕ್ಕಳಿಸಿ ಅಳತೊಡಗಿದಳು. ಗೆಳತಿ ಸಪ್ಪೆ ಮುಖದಿಂದಲೇ ಬಾಯಿಬಿಟ್ಟಳು. "ಈ ಸಾರಿ ಗಂಡು ಮಗೂನೇ ಆಗುತ್ತೇಂತ ಎಲ್ರೂ ತುಂಬಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಲಿ ಪಾಶಾಣ ಮಾರುವವನ ಜೀವನ ಪ್ರೀತಿ: ನಟರಾಜು ಎಸ್. ಎಂ.

ಜಲ್ಪಾಯ್ಗುರಿಯ ಮಧ್ಯ ಭಾಗದಲ್ಲಿ ಒಂದು ಪುಟ್ಟ ನದಿ ಹರಿಯುತ್ತೆ. ಆ ನದಿಯ ಹೆಸರು ಕರೋಲ. ಬಹುಶಃ ಬೆಂಗಾಲಿಯಲ್ಲಿ ಕರೋಲ ಅಂದರೆ ಹಾಗಲಕಾಯಿ. ಈ ನದಿಗೆ ಅಲ್ಲಲ್ಲಿ ಪುಟ್ಟ ಪುಟ್ಟ ಸೇತುವೆಗಳಿವೆ. ಅಂತಹ ಒಂದು ಪುಟ್ಟ ಸೇತುವೆ ದಿನ್ ಬಜಾರ್ ಮೋಡ್ ಎನ್ನುವ ಜಾಗದ ಬಳಿ ಇದೆ. ದಿನ್ ಬಜಾರ್, ಜಲ್ಪಾಯ್ಗುರಿಯಲ್ಲಿ ವ್ಯಾಪಾರ ವಹಿವಾಟು ನಡೆಯುವ ಒಂದು ಪ್ರಮುಖ ಜಾಗ. ನಾನು ಮನೆಯಿಂದ ಆಫೀಸಿಗೆ ಹೊರಡಬೇಕಾದರೆ ಈ ದಿನ್ ಬಜಾರ್ ಅನ್ನು ದಾಟಿಯೇ ಹೋಗಬೇಕು. ನನ್ನ ಮನೆಯಿಂದ ಆಫೀಸಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುಂಗಾರು ಮಳೆ ಮತ್ತು ಗಾಳಿಪಟ:ವಾಸುಕಿ ರಾಘವನ್ ಅಂಕಣ

                ಯೋಗರಾಜ್ ಭಟ್ಟರ ಚಿತ್ರಗಳ ಬಗೆಗಿನ ಚರ್ಚೆಗಳು ಯಾವಾಗಲೂ ಸ್ವಾರಸ್ಯಕರವಾಗಿರುತ್ತವೆ. “ಭಟ್ರು ಏನ್ ಸೂಪರ್ ಆಗಿ ಹಾಡುಗಳನ್ನ ಡೈಲಾಗುಗಳನ್ನ ಬರೀತಾರೆ ಗುರೂ, ಸಕ್ಕತ್ತು ತಮಾಷೆಯಾಗಿ ಇರುತ್ತಪ್ಪಾ” ಅನ್ನುವುದರಿಂದ ಹಿಡಿದು “ಭಟ್ರು ಪಿಚ್ಚರಲ್ಲಿ ಅದೇ ಬೇಜವಾಬ್ದಾರಿ ಉಡಾಫೆ ಹೀರೋ, ಸುಮ್ನೆ ಉದ್ದುದ್ದ ಡೈಲಾಗ್ ಹೊಡ್ಕೊಂಡು ಅಲೀತಾ ಇರ್ತಾರಪ್ಪ ಅಷ್ಟೇ, ಛೇ ಅವ್ರು ಬೇರೆ ಥರ ಯಾವುದಾದರೂ ಫಿಲಂ ಮಾಡ್ಬೇಕಪ್ಪಾ” ಅನ್ನುವವರೆಗೂ ಅಭಿಪ್ರಾಯಗಳು ಕೇಳಿಬರುತ್ತವೆ! “ಭಟ್ಟರ ಬೆಸ್ಟ್ ಫಿಲಂ ಯಾವುದು?” … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಿಟೈರಾದ ದೇವರು : ಪ್ರಶಸ್ತಿ ಅಂಕಣ

"ದೇವರು ರಿಟೈರಾಗುತ್ತಿದ್ದಾನೆ"!!. ಕೆಲವರಿಗೆ ಈ ಶೀರ್ಷಿಕೆಯೇ ವಿಚಿತ್ರವೆನಿಸಿದರೆ ಉಳಿದವರಿಗೆ ನಾನಿಂದು ಯಾರ ಬಗ್ಗೆ ಹೇಳಹೊರಟಿರುವೆನೆಂದು ಹೊಳೆದಿರಬಹುದು. ಹಾಂ, ಹೌದು . ಹೇಳಹೊರಟಿರುವುದು ಇಂದಷ್ಟೇ ತನ್ನ ಕ್ರಿಕೆಟ್ ಜಗತ್ತಿನ ಎಲ್ಲಾ ಪ್ರಕಾರಗಳಿಂದ ಕ್ರಿಕೆಟ್ ಲೋಕದ ದಿಗ್ಗಜನ ಬಗ್ಗೆ. ದಾಖಲೆಗಳ ಮೇಲೆ ದಾಖಲೆಗಳ ಬರೆಯುತ್ತಾ ಹೋದ ಅವನೆಲ್ಲಾ ದಾಖಲೆಗಳು ಕ್ರಿಕೆಟ್ ಪ್ರಿಯರಿಗೆ ಎರಡರ ಮಗ್ಗಿಯಂತೆ ನೆನಪಲ್ಲಿದ್ದರೂ ದಾಖಲಾಗದ ಹಲವು ಸವಿನೆನಪುಗಳು ಅವನ ಆಟದ ಸುತ್ತ. ಕ್ರಿಕೆಟ್ ಜಗತ್ತಿನ ಬಂಗಾರದ ಮನುಷ್ಯ, ಹೆಸರಲ್ಲೇ ಚಿನ್ನ ಇಟ್ಟುಕೊಂಡಿರೋ ಸಚಿನ್ ಎಂದು ಯಾರಾದರೂ ಅಂದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಲ್ಯ ವಿವಾಹವೆಂಬ ಪಿಡುಗು:ಅಖಿಲೇಶ್ ಚಿಪ್ಪಳಿ ಅಂಕಣ

 [ನವಂಬರ್ ೧೪ ಮಕ್ಕಳ ದಿನಾಚರಣೆ. ಸ್ವತಂತ್ರ ಲಭಿಸಿ ೬೬ ವರ್ಷಗಳು ಸಂದರೂ ಭಾರತದಲ್ಲಿ ಹಾಗೂ ವಿಶ್ವದಲ್ಲಿ ಅವಧಿಪೂರ್ವ ವಿವಾಹಗಳು ನಡೆಯುತ್ತವೆ. ಮಕ್ಕಳನ್ನು ಮಧುಮಕ್ಕಳನ್ನಾಗಿ ಮಾಡಿ ಅವರ ಜೀವನವನ್ನು ದುರ್ಭರ ಮಾಡುವ ಪದ್ಧತಿಯಿದೆ. ಸರ್ವರಿಗೂ ಸಮಾನ ಶಿಕ್ಷಣ ಲಭಿಸಿದಾಗ ಈ ಅನಿಷ್ಟ ಪದ್ಧತಿ ನಿಲ್ಲಬಹುದು ಎಂಬ ಆಶಾಭಾವನೆಯೊಂದಿಗೆ ಮಕ್ಕಳ ದಿನಾಚರಣೆ ನಿಮಿತ್ತ ಈ ಲೇಖನ]       ಬಾಲ್ಯ ಎಂಬುದು ಪ್ರತಿಯೊಬ್ಬರ ಜೀವನದಲ್ಲಿ ಅತ್ಯಂತ ಸುಂದರವಾದ, ಮಧುರವಾದ ಕ್ಷಣಗಳು. ಬಾಲ್ಯವೆಂಬುದು ಪ್ರಕೃತಿಯ ಪ್ರತಿಯೊಂದನ್ನು ಅಚ್ಚರಿಯಿಂದ ಗಮನಿಸುವ ಹಂತ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸ (ಭಾಗ 4): ಗುರುಪ್ರಸಾದ ಕುರ್ತಕೋಟಿ

(ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ)          ಅವತ್ತು ಬೆಳಿಗ್ಗೆ ದಾರ್ಜಿಲಿಂಗ್ ಗೆ ವಿದಾಯ ಹೇಳಿ ಕಾಲಿಮ್ ಪಾಂಗ್‍ಗೆ  ನಮ್ಮ ಸವಾರಿ ಸಾಗಿತ್ತು. ಮಾರ್ಗ ಮಧ್ಯದಲ್ಲಿ ಒಂದು ಅದ್ಭುತ ಜಾಗದಲ್ಲಿ ಟ್ರೆಕ್ಕಿಂಗ್‍ಗೆ ಕರೆದೊಯ್ಯುವುದಾಗಿ ಭರವಸೆ ಕೊಟ್ಟು ನಮ್ಮನ್ನು ಕುತೂಹಲಿಗಳನ್ನಾಗಿರಿಸಿದ್ದ ನಮ್ಮ ನೀ ಮಾ. ನಾವು ಹೊರಟು ಸುಮಾರು ಎರಡು ಗಂಟೆಗಳಾಗಿತ್ತೇನೊ ಲಾಮಾ ಹಟ್ಟಾ ಅನ್ನುವ ಒಂದು ಹಳ್ಳಿಯಲ್ಲಿ ನಮ್ಮ ಗಾಡಿ ನಿಂತಿತು. ಅದು ಮುಖ್ಯ ರಸ್ತೆಯಲ್ಲೇ ಇರುವ ಒಂದು ಹಳ್ಳಿ. ವಿಚಿತ್ರವೆಂದರೆ ಅಲ್ಲಿಂದಲೂ ಕಾಂಚನಜುಂಗಾದ ಮತ್ತೊಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಹರ್ಷ ಮೂರ್ತಿ

೧. ವಿರಹ ನೋಡಲು ನಿನ್ನನೆ ಪುನಃ ಕಾಡಿದೆ ಮನಸು ವಿನಃ ಬರಲು ನಾ ನಿನ್ನ ಸನಿಹ ತಡೆದಿದೆ ಈ ವಿರಹ   ೨. ಬೇಸ್ತು ಅದು ಕೂಡ blade ಕಂಪನಿ ಎಂದು ತಿಳಿದು ಬಂದಾಗ ಹಣ ಕಳೆದುಕೊಂಡ ಸ್ನೇಹಿತರ ಕಂಡು ಬಿದ್ದು ಬಿದ್ದು ನಕ್ಕಿದ್ದ ಗುಂಡ ದೊಡ್ಡದಾಗಿ.. ನಂತರ ಬಾಯಿ ಬಡಿದುಕೊಳ್ಳತೊಡಗಿದನು ತಾನೂ ಅಲ್ಲೇ ಹಣ ಇಟ್ಟಿದ್ದು ನೆನಪಾಗಿ!    ೩. ಶುದ್ಧ-ಅಶುದ್ಧ ಶುದ್ಧವಾಗಿದ್ದರೆ  holy.. ಕೆಟ್ಟು ಹೋಗಿದ್ದರೆ  ಪೋಲಿ!    ೪. ತರಲೆ ಪಕ್ಕದ್ಮನೆ ಹುಡುಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಳವ್ವನ ಬಾಳುವೆ: ನೇಮಿನಾಥ ಬಸವಣ್ಣಿ ತಪಕೀರೆ

ಸಾವಕಾರ್ರ ನಂಗ ಐವತ್ತು ರೂಪಾಯಿ ಕೊಡ್ರಿ ಸಾವಕಾರ್ರ… ಮನೀಗಿ ಅಕ್ಕಿ ತಗೊಂಡು ಹೋಗಬೇಕ್ರಿ ಸಾವಕಾರ್ರ, ಐವತ್ತು ರೂಪಾಯಿ ಕೊಡ್ರಿ ಎಂದು ಅಂಗಲಾಚುತ್ತಿದ್ದ ಸಾರಾಯಿಯ ಅರೆ ನಶೆಯಲ್ಲಿದ್ದ ರಾಮಪ್ಪ. ಸಾವಕಾರ್ರ ಸಿದ್ದಪ್ಪನ ಮುಂದೆ.  ಅಲ್ಲೋ ರಾಮಾ!? ನೀ ಹೀಂಗ ದುಡದಿದ್ದ ರೊಕ್ಕ ಎಲ್ಲ ತಗೊಂಡು ಹೋಗಿ ಶೆರೇದ ಅಂಗಡ್ಯಾಗ ಇಟ್ಟರ ನಿನ್ನ ಹೆಂಡ್ತಿ ಮಕ್ಕಳ ಗತಿ ಏನಾಗಬೇಕೋ ಖೋಡಿ? ದಾರು ಕುಡ್ಯೋದು ಬಿಟ್ಟಬಿಡೋ! ಸಾವಕಾರ್ರ ಸಿದ್ದಪ್ಪ ಬುದ್ಧಿವಾದ ಹೇಳುತಿದ್ದ.  ಏನ್ ಮಾಡಲ್ರೀ ಸಾವಕಾರ್ರ ನಂಗ ಕುಡಿಲಿಕ್ಕಂದ್ರ ನಿದ್ದೀನ ಹತ್ತಂಗಿಲ್ಲ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೀರೆ ಎಕ್ಸ್‌ಚೇಂಜ್: ರಶ್ಮಿ.ಆರ್. ಕುಲಕರ್ಣಿ

ಮಹಿಳೆಯರು ಒಂದು ಕಡೆ ಸೇರಿದರೆ ಅವರಲ್ಲಿ ಚರ್ಚಿಸುವ ಮುಖ್ಯವಾದ ವಿಷಯಗಳೆಂದರೆ, ಸೀರೆ ಮತ್ತು ಚಿನ್ನದ ವಡವೆಗಳು,ಚಿನ್ನದ ಬೆಲೆ ಗಗನಕ್ಕೇರಿದ ಮೇಲೆ ಸೀರೆಗಳಿಗೆ ಹೆಚ್ಚಿನ ಪ್ರಾಮುಖ್ಯತೆಯನ್ನು  ಕೊಡುತ್ತಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ ಸೀರೆಗೆ ವಿಶಿಷ್ಟವಾದ ಸ್ಥಾನ ನೀಡಲಾಗಿದೆ. ಹಿಂದಿನ ಕಾಲದಲ್ಲಿ ಒಂಭತ್ತು ವಾರಿ ಸೀರೆಗಳಿದ್ದವು,  ಮುಂದೆ ಆರು ವಾರಿ ಸೀರೆಗಳು ಬಂದವು. ಈಗೀಗ ರೆಡಿ ಸೀರೆಗಳು ಮಾರುಕಟ್ಟೆಗೆ ಬಂದಿವೆ. ಸಲ್ವಾರ ಕಮೀಜ,ಸೀರೆ ಜೊತೆಗೆ ಪೈಪೋಟಿಗಿಳಿದರೂ ಕೂಡ ಸೀರೆ ತನ್ನದೇ ಆದ  ಸ್ಥಾನ ಉಳಸಿಕೊಂಡಿದೆ ಎನ್ನುವದಕ್ಕೆ ನಮ್ಮ ಮಹಿಳೆಯರೇ ಸಾಕ್ಷಿ.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ