ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ ಭಾಗ – 2: ಅಖಿಲೇಶ್ ಚಿಪ್ಪಳಿ

ಇಲ್ಲಿಯವರೆಗೆ [ಶ್ರೀ ನಾಗರಾಜ್ ಅಡ್ವೆಯವರು ದೆಹಲಿಯ ಇಂಡಿಯನ್ ಕ್ಲೈಮೇಟ್ ಜಸ್ಟೀಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಎಂ.ಫಿಲ್. ಪದವಿ ಪಡೆದಿದ್ದಾರೆ. ಇವರು ಅಭ್ಯಸಿಸಿದ ಮುಖ್ಯ ವಿಷಯ “ಹವಾಮಾನ ಬದಲಾವಣೆ” ಕುರಿತೇ ಆಗಿದೆ. ದೇಶದ ಎಲ್ಲಾ ಪ್ರಮುಖ ಪತ್ರಿಕೆಗಳಿಗೂ ಹವಾಮಾನ ಬದಲಾವಣೆ ಕುರಿತ ಲೇಖನಗಳನ್ನು ಬರೆಯುತ್ತಾರೆ. ಇವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್‍ನಲ್ಲಿ ಪ್ಯಾರೀಸ್‍ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆತ್ಮೀಯ ಎಂದರೆ soulmate ಅಂತ: ಲಾವಣ್ಯ ಆರ್.

ಹಾಯ್ ಆತ್ಮೀಯ, ತಪ್ಪು ತಿಳಿಯಬೇಡ ನಾನಂದದ್ದು ಆತ್ಮೀಯ ಎಂದು ಪ್ರೇಮಿಯೆಂದಲ್ಲ, ನೀನೆಂದು ನನ್ನ ಪ್ರೇಮಿಯಾಗಿರಲಿಲ್ಲ. ಆತ್ಮೀಯ ಎಂದರೆ soulmate ಅಂತ. ಇದೇನು ಇದ್ದಕಿದ್ದ ಹಾಗೆ ನೀನು ಅನ್ನುತ್ತಿದ್ದಾಳೆ ಅಂತ ಹುಬ್ಬು ಗಂಟಿಕ್ಕಬೇಡ ಇದು ಮನಸಿನ ಮಾತು ಇಲ್ಲಿ ಏಕವಚನ ಬಹುವಚನದ ಲೇಪನ ಅನವಶ್ಯಕ. ಅದು ಎಲ್ಲಿದ್ದೊ ತಿಳಿಯದು, ದಿಢೀರನೆ ಪ್ರತ್ಯಕ್ಷವಾದೆ ನನ್ನಲ್ಲಿ ನೂರಾರು ಬದಾಲಾವಣೆ ತಂದೆ, ಯಾರನ್ನು ಕುಡಿ ನೋಟದಲ್ಲು ನೋಡದವಳು ನಿನ್ನ ಕಿರುಗಣ್ಣಿನ ಕೊನೆಯಲ್ಲಿ ನೋಡುವ ಹಾಗೆ ಮಾಡಿದೆ, ಮಾತಿಗಿಂತ ಮೌನವನ್ನೆ ಆಶ್ರಯಿಸುವವಳಲ್ಲಿ ಆಡಿದರು ಮುಗಿಯದಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಸಿರಿ, ಶ್ರೀಶೈಲ ಮಗದುಮ್ಮ, ವಿನಾಯಕ ಭಟ್

ಸದ್ದಿಲ್ಲದೇ ಒಳ ನುಗ್ಗಿದವನಿಗೆ ಭದ್ರವಾಗಿ ಮುಚ್ಚಿ, ಕೀಲಿ ಹಾಕಿದ್ದ ನನ್ನೆದೆಯ ಗುಬ್ಬಿ ಬಾಗಿಲನು ನಿನ್ನದೇ ಸ್ವಂತ ಸ್ವತ್ತೆಂಬಂತೆ ರಾಜ ಗಾಂಭೀರ್ಯದಲ್ಲಿ ತೆರೆದು  ಸದ್ದಿಲ್ಲದೇ ಒಳನುಗ್ಗಿ,  ಸಿಂಹಾಸನಾರೂಢನಾದೆಯಲ್ಲೋ ನಿನಗದೆಂತಹ ಸೊಕ್ಕು…? ಇಷ್ಟಾದರೆ ಸಹಿಸಿಕೊಳ್ಳುತ್ತಿದ್ದೆ ಪಾಪ, ಸುಸ್ತಾಗಿದ್ದಿರಬಹುದೇನೋ ಕುಳಿತು ಕೊಂಚ ಸುಧಾರಿಸಿಕೊಳ್ಳಲಿ ಎಂದು ಆದರೆ ಸುಮ್ಮನಿರದ ನೀನು ನನ್ನ ಕನಸುಗಳನ್ನೆಲ್ಲ  ವಶ ಪಡಿಸಿಕೊಂಡೆಯಲ್ಲೋ ನಿನಗದೆಂತಹ ಛಾತಿ…? ಇರಲಿ, ಜುಜೂಬಿ ಕನಸುಗಳಿಗಾಗಿ ಕೊರಗುವುದೇ..? ಹಾಳಾಗಲಿ  ಹೊಸ ಕನಸು ಹೆಣೆದರಾಯಿತು ಎಂದು ನನ್ನ ಮನಸಿಗೆ ಸಮಾಧಾನ ಹೇಳಿ ತಿರುಗಿ ನೋಡುವಷ್ಟರಲ್ಲಿ ನೀನು ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ದತ್ತು ಹಕ್ಕಿಮರಿಯ ಕತೆ ಒಂದಾನೊಂದು ಕಾಲದಲ್ಲಿ ಹಾರಲಾರದ ಹೆಣ್ಣು ಪಕ್ಷಿಯೊಂದಿತ್ತು. ಕೋಳಿಯಂತೆ ನೆಲದ ಮೇಲೆ ನಡೆದಾಡುತ್ತಿದ್ದ ಅದಕ್ಕೆ ಕೆಲವು ಪಕ್ಷಿಗಳು ನಿಜವಾಗಿಯೂ ಹಾರುತ್ತಿದ್ದವು ಎಂಬುದು ತಿಳಿದಿತ್ತು. ಒಂದು ದಿನ ಅದು ಹಾರುವ ಪಕ್ಷಿಯ ಪರಿತ್ಯಕ್ತ ಮೊಟ್ಟೆಯೊಂದನ್ನು ನೋಡಿತು. ಮೊಟ್ಟೆಯೊಡೆದು ಮರಿ ಹೊರಬರುವ ವರೆಗೆ ಅದಕ್ಕೆ ಕಾವು ಕೊಡಲು ತೀರ್ಮಾನಿಸಿತು. ಯುಕ್ತ ಸಮಯಾನಂತರ ಮೊಟ್ಟೆಯನ್ನು ಒಡೆದುಕೊಂಡು ಮರಿ ಹೊರಬಂದಿತು. ಅದು ಹಾರುವ ಸಾಮರ್ಥ್ಯವಿದ್ದ ಪಕ್ಷಿಯ ಮೊಟ್ಟಯಿಂದ ಹೊರಬಂದ ಮರಿಯಾದ್ದರಿಂದ ಅದಕ್ಕೂ ಹಾರುವ ಸಾಮರ್ಥ್ಯ ಹುಟ್ಟುವಾಗಲೇ ಇತ್ತು. ತುಸು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇವು ನಮ್ಮ ಕನ್ನಡ ಸಿನೆಮಾಗಳ ಹೆಸರುಗಳು!: ಸೂರಿ ಹಾರ್ದಳ್ಳಿ

ತಮ್ಮದು ಕನ್ನಡ ಸಿನೆಮಾ ಎಂದು ತಾವೇ ಕರೆದುಕೊಳ್ಳುವ ಸಿನೆಮಾಗಳಲ್ಲಿ ಭಾಷೆ ಹೇಗಿದೆಯೋ ಗೊತ್ತಿಲ್ಲವಾದರೂ ಅವು ಹೊಂದಿರುವ ಹೆಸರುಗಳು ಹೇಗಿರುತ್ತವೆ ಗೊತ್ತಾ? ಈ ಕೆಳಗಿನವನ್ನು ಓದಿ. 1.    ಪೂರ್ತಿ ಬೇರೆ ಭಾಷೆಯ ಹೆಸರುಗಳು ದುನಿಯಾ, ಲಾಕಪ್ ಡೆತ್, ಮಾಸ್ಟರ್ ಮೈಂಡ್, ರೈನ್ ಕೋಟ್, ಕೇರ್ ಆಫ್ ಫುಟ್‍ಪಾತ್, ಐ ಆ್ಯಮ್ ಇನ್ ಲವ್, ಲವ್ ಯು ಆಲಿಯಾ, ಲವ್ ಬ್ಯಾಂಡ್, ಫೇರ್ ಅಂಡ್ ಲವ್ಲಿ, ಲವ್ ಈಸ್ ಪಾಯ್ಸನ್, ಲವ್ ಇನ್ ಮಂಡ್ಯ, ಡಾರ್ಲಿಂಗ್, ಕ್ರೇಜಿ ಸ್ಟಾರ್, ಲಿಟಲ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಾಲ್ಫ್ ಕ್ಲಬ್ ಗುಂಡುಗೋಷ್ಠಿಯೂ… ಅಲ್ಲಿನ ರೂಲ್ಸೂ…: ಎಚ್.ಕೆ.ಶರತ್

ಗೆಳೆಯನನ್ನು ಭೇಟಿ ಮಾಡಲು ಇತ್ತೀಚೆಗೆ ಮೈಸೂರಿಗೆ ಹೋಗಿದ್ದೆ. ಹೆಂಡತಿ ತವರು ಮನೆಗೆ ಹೋಗಿದ್ದ ಕಾರಣ ‘ಗುಂಡು ಪಾರ್ಟಿ’ಯಲ್ಲಿ ಪಾಲ್ಗೊಳ್ಳುವ ಅವಕಾಶ ಅವನಿಗೆ ಒಲಿದಿತ್ತು. ಅಪರೂಪಕ್ಕೆ ಸಿಗುವ ಇಂಥ ಚಾನ್ಸ್ ಮಿಸ್ ಮಾಡಿಕೊಳ್ಳಬಾರದೆಂದು ಮೈಸೂರಿನಲ್ಲಿದ್ದ ತನ್ನ ಗೆಳೆಯರಿಗೆಲ್ಲ ಕರೆ ಮಾಡಿ ಪಾರ್ಟಿ ಮಾಡುವ ಪ್ಲ್ಯಾನು ಇರುವುದಾಗಿ ತಿಳಿಸಿದ. ಗಾಲ್ಫ್ ಕ್ಲಬ್ ಮೆಂಬರ್ ಆಗಿರುವವನೊಬ್ಬ, ಕ್ಲಬ್‍ಗೆ ಹೋಗೋಣ ಹಾಗಾದ್ರೆ ಅಂತಂದ. ನಾವು ರೆಡಿಯಾದ್ವಿ. ನಮ್ಮನ್ನು ಕರೆದೊಯ್ಯಲು ಬಂದವನು, ನಮ್ಮ ಅವತಾರ ಕಂಡು ಅವಾಕ್ಕಾದ. ಈ ಡ್ರೆಸ್‍ನಲ್ಲಿ ಬಂದ್ರೆ ನಿಮ್ಮನ್ನು ಕ್ಲಬ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮನವ ಗೆದ್ದವನೇ ಮಹಾ ಶೂರ!”: ಹೊರಾ.ಪರಮೇಶ್ ಹೊಡೇನೂರು

            ಗಾಳಿಗಿಂತಲೂ ವೇಗವಾಗಿ ಚಲಿಸುವುದು ನಮ್ಮ "ಮನಸ್ಸು" ಎಂಬುದು ಸರ್ವವಿಧಿತ. ಏಕೆಂದರೆ, ನಮ್ಮ ಮನಸ್ಸಿನಲ್ಲಿ ಒಂದು ವಸ್ತು, ನೋಡಿದ ಸ್ಥಳ, ಕಾಡುವ ಹುಡುಗಿ, ಬೇಡುವ ದೇವರು ಮೊದಲಾದವುಗಳನ್ನು ಕಲ್ಪಿಸಿಕೊಂಡು ಮನಸ್ಸನ್ನು ಹರಿಯಬಿಟ್ಟರೆ ಅಥವಾ ಅಂದುಕೊಂಡರೆ ಸಾಕು, ನಮ್ಮ ಸ್ಮೃತಿಯೊಳಗೆ ಅವುಗಳ ಚಿತ್ರಣ ಹಾದು ಹೋಗಿ ಕಣ್ಣೆದುರೇ ಬಂದಂತೆ ಭಾಸವಾಗುವುದು ಸೃಷ್ಟಿಯ ಅದ್ಭುತ ಕೊಡುಗೆಯಾಗಿದೆ. ಇದೇ ಮನಸ್ಥಿತಿಯ ಈ ಸಾಮರ್ಥ್ಯವನ್ನು ಬಳಸಿಕೊಂಡೇ ಇಂದು ನಾವೆಲ್ಲರೂ ಅಪಾರವಾದ ಜ್ಞಾನವನ್ನು, ಅದರೊಳಗೆ ಜೀವನ ಸೊಬಗನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಕ್ಕಿ ಭಾಗ್ಯ….: ರಾಘವೇಂದ್ರ ತೆಕ್ಕಾರ್

ನನಗೆ ದೋಸೆ, ಇಡ್ಲಿ, ಕಡುಬು ಈ ತರದ ಅಕ್ಕಿತಿಂಡಿಗಳೆಂದರೆ ಪಂಚ ಪ್ರಾಣ. ಬೆಳಿಗ್ಗಿನ ಉಪಹಾರಕ್ಕೆ ಈ ಚೌ ಚೌ ಬಾತ್, ಬೇಳೆ ಬಾತ್,ಪೂರಿ, ಪಲಾವು, ರೈಸ್ ಬಾತ್ ಇವುಗಳೆಲ್ಲ ಅಷ್ಟಕಷ್ಟೆ. ಏನಿದ್ದರೂ ಅಕ್ಕಿ ರುಬ್ಬಿ ಮಾಡಿದ ತಿಂಡಿಗಳತ್ತಲೆ ನನ್ನೊಲುಮೆ. ಅಪರೂಪಕ್ಕೆ ಅನ್ನವನ್ನು ಲಿಂಬೂ ನೀರು ಹಿಂಡಿದ ಈರುಳ್ಳಿ ವಗ್ಗರಣೆಗೆ ಬೆರೆಸಿದ ಚಿತ್ರಾನ್ನ ತರದೆಂತದ್ದನ್ನೊ ತಿನ್ನುವದು ಇದೆ.ಈ ನನ್ನ ಚಪಲ ನನ್ನ ಮನೆಯಾಕೆಗೆ ನುಂಗಲಾರದ ತುತ್ತು. ಆ ಮಿಕ್ಸಿಯಲ್ಲಿ ಗಿರ ಗಿರ ಸದ್ದು ಮಾಡಿಸುತ್ತಾ ಅಕ್ಕಿ ರುಬ್ಬ ಬೇಕಾದುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪುಣೇಕರರು ಹಾಗೂ ಅವರ ಆಂಗ್ಲ ಶ್ರೀರಾಮಾಯಣ ದರ್ಶನಂ: ಶ್ರೀನಿವಾಸ ದೇಸಾಯಿ

ಶಂಕರ ಮೊಕಾಶಿ ಪುಣೇಕರ ಕನ್ನಡ ಸಾಹಿತ್ಯದ ವಿಶಿಷ್ಟ ವ್ಯಕ್ತಿ. ಎರಡು ಅಡ್ಡಹೆಸರು ಪಡೆದವರು, ಮಾತೃಭಾಷೆ ಕನ್ನಡ ಹಾಗೂ ವಿಶ್ವಭಾಷೆ ಆಂಗ್ಲಭಾಷೆ ಎರಡರಲ್ಲೂ ಪ್ರತಿಭಾನ್ವಿತರು. ದ್ವಿಭಾಷಾ ಸಾಹಿತಿ ಎಂದು ಪ್ರಸಿದ್ಧರು. ಹಾಗೇ ದೇವಭಾಷೆ ಸಂಸ್ಕೃತವೂ ಚೆನ್ನಾಗಿ ಬರುತ್ತಿತ್ತು. ಪುಣೇಕರರ ಬದುಕಿನ ಪಥವಂತೂ ಅವರೇ ಹೇಳಿಕೊಂಡಂತೆ, ಕಾರವಾನ್(Carvan)ತರಹದ್ದಾಗಿದೆ. ಬಾಲ್ಯದಿಂದಲೂ ಜೀವಕ್ಕೆ ಅಂಟಿಗೊಂಡ ಓದಿನ ಗೀಳು ಬದುಕಿನ ಅಂತ್ಯದವರೆಗೆ ಸಾಗಿತ್ತು. ಬಿ.ಎಂ.ಶ್ರೀ., ಪ್ರೊ. ಮೆನಜಿಸ್, ಡಾ. ಗೋಕಾಕರಂತಹ ಶ್ರೇಷ್ಠ ಶಿಕ್ಷಕರ ಅಡಿಯಲ್ಲಿ ಕಾಲೇಜು ಶಿಕ್ಷಣ ನಡೆದು, ಎಂ.ಎ. (ಇಂಗ್ಲಿಷ್) ಹಾಗೂ ಯೇಟ್ಸ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮ್ಮನ ನೆನಪಿನ ಧಾರೆ: ಮಾಲಾ

ಅಮ್ಮನ ನೆನಪು, ಸಂಪುಟ ೧,  ಸಂಪಾದನೆ: ಚಂದ್ರಕಾಂತ ವಡ್ಡು,  ಅಂಕುರ ಪ್ರಕಾಶನ, ನಂ. ೧೧೪೮, ೧ನೇ ಮಹಡಿ,  ೨ನೇ ಅಡ್ಡರಸ್ತೆ, ಪಡುವಣ ರಸ್ತೆ,  ಮೈಸೂರು ೫೭೦೦೨೩,  ಪುಟಗಳು ೨೦೦,  ಬೆಲೆ ರೂ. ೧೫೦ ಮಕ್ಕಳ ಪ್ರಪಂಚದಲ್ಲಿ ಮೊದಲಿಗೆ ಅಮ್ಮನಿಗೇ ಸ್ಥಾನ. ಅಮ್ಮ ಎಂಬ ಪದವೇ ಸಾಕು ನಮಗೆ ಹರುಷ ತರಲು.  ಎಲ್ಲ ಮಕ್ಕಳಿಗೂ ಅಮ್ಮನ ನೆನಪು ಅವಳಿಲ್ಲದಿರುವಾಗಲೇ ಹೆಚ್ಚು ಕಾಡುತ್ತದೆ ಎಂದು ನನಗನಿಸುತ್ತದೆ. ಈ ಹೊತ್ತಗೆಯಲ್ಲಿ ೩೬ ಜನ ಮಕ್ಕಳು ಅವರ ತಾಯಿ ಬಗ್ಗೆ ತಮ್ಮ ನೆನಪನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಜಾಲದಲ್ಲಿ ಸಮಾನತೆ’ (ಭಾಗ 2): ಜೈಕುಮಾರ್.ಹೆಚ್.ಎಸ್

ಇಲ್ಲಿಯವರೆಗೆ ನಂತರದ ದಿನಗಳಲ್ಲಿ ಇಂಟರ್ ನೆಟ್ ನ ವಿನ್ಯಾಸ ರಚನೆ ಕೂಡ ಬದಲಾವಣೆಗೊಂಡಿದೆ. ಈ ಮುಂಚಿನ ಕೇಂದ್ರೀಕೃತ ಸರ್ವರ್ ಗಳು ಮತ್ತು ನೋಡ್ ಗಳಿಲ್ಲದ, ಪ್ರತಿಯೊಬ್ಬರೂ ಪರಸ್ಪರ ನೇರವಾಗಿ ಕಂಪ್ಯೂಟರಿಗೆ ಸಂಪರ್ಕ ಮಾಡಿಕೊಳ್ಳುವ ವಿನ್ಯಾಸ ರಚನೆಯ ಸ್ಥಳದಲ್ಲಿ ಇಂದು ಬಳಕೆದಾರರು ಇಂಟರ್ನೆಟ್ ದೈತ್ಯ ಕಂಪನಿಗಳ ಕೇಂದ್ರೀಕೃತ ಸರ್ವರ್ ಗಳನ್ನು ಅವಲಂಬಿಸುತ್ತಿದ್ದಾರೆ. ಇದನ್ನೇ ಕ್ಲೌಡ್ ಕಂಪ್ಯೂಟಿಂಗ್ ಎಂದು ಕರೆಯುವುದು. ಇಂಟರ್ ನೆಟ್ ನ ಸ್ವರೂಪದಲ್ಲಾಗಿರುವ ಈ ಮೂಲಭೂತ ಬದಲಾವಣೆಯು ಜಾಗತಿಕ ಇಂಟರ್ನೆಟ್ ಕಂಪನಿಗಳ ಏಳಿಗೆಯ ಜೊತೆ ಜೊತೆಗೇ ನಡೆದಿದೆ.  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಂತೀ(selpfie): ಪ್ರಶಸ್ತಿ

ಈ ಸ್ವಂತೀ ಅಥವಾ ಸೆಲ್ಪೀ ಅನ್ನೋ ಪದದ ಬಗ್ಗೆ ಕೇಳದ ಸಾಮಾಜಿಕ ತಾಣಗಳ ಬಳಕೆದಾರರು ಇಲ್ಲವೇ ಇಲ್ಲ ಅಂದರೆ ತಪ್ಪಾಗಲಾರದೇನೋ . ಗೆಳೆಯನೊಬ್ಬ ಅಥವಾ ಗೆಳತಿಯೊಬ್ಬಳು ನಮ್ಮ ಪಟ ತೆಗೆಯೋದಕ್ಕೆ ಕಾಯೋ ಬದಲು ನಮ್ಮ ಚಿತ್ರ ನಾವೇ ತೆಗೆದುಕೊಳ್ಳೋದಕ್ಕೆ  ಸೆಲ್ಫೀ ಅಥವಾ ಸ್ವಂತೀ(ಕೃಪೆ: ಮುಖಹೊತ್ತುಗೆಯ "ಪದಾರ್ಥ ಚಿಂತಾಮಣಿ" ಗುಂಪು)ಅಂತ ಕರೆಯುತ್ತಾರೆ ಎಂಬುದು ನಿಮಗೆಲ್ಲಾ ಗೊತ್ತಿರುವಂತದ್ದೇ ಆದರೂ ಆ ಪದವನ್ನು ಮೊದಲು ಹುಟ್ಟುಹಾಕಿದ್ದು ಯಾರಂತ ಗೊತ್ತೇ ? ಆಕ್ಸವರ್ಡ ಪದಕೋಶದಿಂದ ೨೦೧೩ರ "ವರ್ಷದ ಪದ" ಎಂಬ ಬಿರುದು ಪಡೆದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತೀಯ ಸನ್ನಿವೇಶದಲ್ಲಿ ಹವಾಮಾನ ಬದಲಾವಣೆ – ಒಂದು ನೋಟ: ಅಖಿಲೇಶ್ ಚಿಪ್ಪಳಿ

ಶ್ರೀ ನಾಗರಾಜ್ ಅಡ್ವೆಯವರು ಇಡೀ ಭಾರತವನ್ನು ಸುತ್ತಾಡಿ, ಹವಾಮಾನ ಬದಲಾವಣೆಯಿಂದಾದ ವ್ಯತ್ಯಾಸಗಳನ್ನು ಗುರುತಿಸಿ, ದಾಖಲಿಸಿದ್ದಾರೆ. ಇದೇ ವರ್ಷದ ಡಿಸೆಂಬರ್‍ನಲ್ಲಿ ಪ್ಯಾರೀಸ್‍ನಲ್ಲಿ ನಡೆಯಲಿರುವ ಜಾಗತಿಕ ಹವಾಮಾನ ವೈಪರೀತ್ಯ ಸಮಾವೇಶದ ಹೊತ್ತಿನಲ್ಲಿ, ಈ ಮಾಹಿತಿಗಳು ಅತ್ಯಂತ ಮಹತ್ವ್ತಪೂರ್ಣವೆನಿಸುತ್ತದೆಯಾದ್ದರಿಂದ ಇಲ್ಲಿ ಅವರು ಬರೆದ ಕಿರುಪುಸ್ತಕದ ಭಾವಾನುವಾದವನ್ನು ನೀಡಲಾಗಿದೆ. ಗುಜರಾತಿನಲ್ಲಿ ಏನು ಹೇಳಿದರು? ಮೂರು ವರ್ಷಗಳ ಹಿಂದೆ ಪೂರ್ವ ಗುಜರಾತಿ ಮೆಕ್ಕೆಜೋಳ ಬೆಳೆಯುವ ರೈತರನ್ನು ಮಾತನಾಡಿಸಲಾಯಿತು. ಕೆಲವು ವರ್ಷಗಳಿಂದ ಬಿಸಿಯಾಗುತ್ತಿರುವ ಚಳಿಗಾಲದಿಂದಾಗಿ, ಅಲ್ಲಿ ಇಬ್ಬನಿ ಬೀಳುವುದು ತೀವ್ರವಾಗಿ ಕಡಿಮೆಯಾಗಿದೆ. ಅತ್ಯಂತ ಕಡಿಮೆ ನೀರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿಯ ಯಾನಕ್ಕೆ: ವಸಂತ ಬಿ ಈಶ್ವರಗೆರೆ

ಪ್ರೀತಿಯ ಯಾನಕ್ಕೆ ಏರಿಳಿತಗಳ ಓಟ, ನನ್ನವಳು ಜೊತೆಗಿದ್ದರೇ ಅದ ಮರೆವ ಆಟ ನನ್ನ(ಅ)ವಳ ಪ್ರೀತಿಗೆ ಇಂದು 8 ವರ್ಷಗಳ ‘ವಸಂತ’. ಎಂದೂ, ಯಾವತ್ತೂ ದೂರಾಗಿದ್ದಿಲ್ಲ. ಭಾವನೆಗಳ ತೋಯ್ದಾಟದಲ್ಲಿ ನಾವಿಬ್ಬರೂ ಎಂದು ಒಂದೆಂಬ ಭಾವನೆ. ಕಲ್ಪನೆಯ ಗೂಡಲ್ಲಿ ಜೋತೆಯಾಗಿ ಹುಟ್ಟಿದ ಹಕ್ಕಿಗಳೆಂಬ ಭಾವನೆ ನಮ್ಮೊಳಗೆ.  ಅದೇಕೋ ಮುನಿಸು ನಮ್ಮಲ್ಲಿಲ್ಲ, ಪ್ರೀತಿಯೇ ನಮ್ಮೊಳಗೆಲ್ಲ. ನೋಡಿದ ಎಲ್ಲರೂ ಕಲಿಯುಗದ ಅಮರ ಪ್ರೇಮಿಗಳು ಎಂಬ ಭಾವನೆಯಿಂದಲೇ ನಮ್ಮನ್ನ ಕಂಡವರು. ಎಲ್ಲರ ಹಾಗೇ ನಾವು ಸುತ್ತಾಟ, ತಿರುಗಾಟ ಮಾಡಿದ್ದು ಅಲ್ಪವೇ, ಅದರೇ ಮನಸ್ಸೆಂಬ ಭಾವನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುರಿದದ್ದು ಮಳೆ, ಕರಗಿದ್ದು ಒಡಲು: ಸಂಗೀತ ರವಿರಾಜ್

ಇಳೆಯು ಬಯಸಿದ ಪ್ರೇಮ ಕಾವ್ಯವೇ ಮಳೆ ಎಂಬುದು ಅವಳಿಗಷ್ಟೆ ತಿಳಿದಿದೆ. ಈ ಕಾವ್ಯಕ್ಕೆ ನದಿ, ತೊರೆಯ ಹಂಗಿಲ್ಲ. ಇಳೆಯಲ್ಲೇ ಇಂಗಿ ಅಲ್ಲೇ ಒರತೆಯಾಗುವ ಹುಮ್ಮಸ್ಸು ಮಾತ್ರ. ಸುಮಧುರ ಮನಸ್ಸಿಗೆ, ಸುಮಧುರ ಕಾವ್ಯದ ಹಿತ ಕೊಡುವ ಮಳೆ ಅವನಿಯಂತೆ ಅಚಲ. ಭೋರ್ಗರೆಯುತ್ತಾ ಸುರಿಯುವ ನಿನಾದಕ್ಕೆ ಮನದ ಸಂಗೀತ ಎಲ್ಲೆ ಮೀರಿ ಹಾಡುತ್ತಿದೆ. ಆ ರಾಗಕ್ಕೆ ಸ್ವರಗಳು ಶ್ರುತಿಯ ಮೀಟುತ್ತಿದೆ. ಪದಗಳಿಲ್ಲದ ಆಲಾಪವೆಂದರೆ ಅದು ವರ್ಷಾಧಾರೆ ಎಂಬುದನ್ನು ಒಂದೇ ಕೊಡೆಯಡಿಯಲ್ಲಿ ನಡೆದಾಡಿದಾಗ ಉಸುರಿದ್ದು ಈಗ ನೆನಪುಗಳು. ಪದಪದಗಳ ಪಲ್ಲವಿ ಕಟ್ಟಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ರಾಘವ ಹರಿವಾಣಂ, ಸಿಪಿಲೆನಂದಿನಿ, ಜಾನ್ ಸುಂಟಿಕೊಪ್ಪ

ಇರುವೆ ಇರುವೆಯೇ ಮನುಜರಿಗೆ ನೀ ಮಾದರಿಯಾಗಿರುವೆ ಕಾರ್ಯಕೂ ಮೊದಲು ಧ್ಯೇಯವನು ನಿರ್ಧರಿಸುವೆ ಹಿಡಿದೊಂದು ಕಾರ್ಯದಿ ಶಿಸ್ತಿನ ಸಿಪಾಯಿಯಾಗುವೆ ಗುರಿತಪ್ಪದೆ ಮುಂದ್ಸಾಗುವ ಛಲದಂಕಮಲ್ಲ ನೀನಾಗುವೆ   ಕಣಕಣವ ಸೇರಿಸುತ ಮಹಾರಾಶಿಯ ಕೂಡಿಸುವೆ ಆಳರಸನಾಗುತ ಗುಂಪನು ಪಥದಿ ಮುಂದೊಯ್ಯುವೆ                                                           … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕಲಾವಿದರ ಕತೆ ಸುಲ್ತಾನ ಶೋಯೆಬ್‌ನ ಸಮ್ಮುಖದಲ್ಲಿ ಚೀನೀ ಕಲಾವಿದರ ಹಾಗೂ ಗ್ರೀಕ್‌ ಕಲಾವಿದರ ಪುಟ್ಟ ಗುಂಪುಗಳ ನಡುವೆ ಯಾರಲ್ಲಿ ಮೇಲ್ದರ್ಜೆಯ ಕಲಾ ಕುಶಲತೆ ಇದೆ ಎಂಬುದರ ಕುರಿತು ಜಗಳವಾಯಿತು. ಮಹಾನ್‌ ಕುಶಲತೆಗಳು ಅಧಿಕ ಸಂಖ್ಯೆಯಲ್ಲಿ ತಮ್ಮಲ್ಲಿ ಇವೆಯೆಂದು ಚೀನೀ ಕಲಾವಿದರು ಘೋಷಿಸಿದರು, ತಾವು ಕಲೆಯ ಮೇಲೆ ಪ್ರಭುತ್ವ ಸಾಧಿಸಿರುವುದಾಗಿ ಗ್ರೀಕ್‌ ಕಲಾವಿದರು ಘೋಷಿಸಿದರು. ಅವೆರಡೂ ಗುಂಪುಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸುವುದರ ಮೂಲಕ ವಿವಾದವನ್ನು ಪರಿಹರಿಸಲು ಸುಲ್ತಾನ ನಿರ್ಧರಿಸಿದ. ಅರಮನೆಯ ಸಮೀಪದಲ್ಲಿ ಇದ್ದ ಬೆಟ್ಟದ ತುದಿಯಲ್ಲಿ ಎರಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ