ಸಾಮಾನ್ಯ ಜ್ಞಾನ (ವಾರ 2) : ಮಹಾಂತೇಶ್ ಯರಗಟ್ಟಿ

೧. ಮಹಮದ್ ರಫಿ ಕನ್ನಡ ಚಿತ್ರವೊಂದರಲ್ಲಿ ಹಾಡಿದ್ದಾರೆ. ಆ ಚಿತ್ರ ಯಾವುದು? ೨. ಅಚ್ಚ ಕನ್ನಡದ ಮೊದಲ ಕರ್ನಾಟಕ ದೊರೆ ಯಾರು? ೩. ಒಂದು ವರ್ಷದ ಪಿ.ಯು.ಸಿ ಶಿಕ್ಷಣವನ್ನು ಯಾವ ವರ್ಷದಲ್ಲಿ ೨ವರ್ಷಕ್ಕೆ ಹೆಚ್ಚಿಸಲಾಯಿತು? ೪. ಕರ್ನಾಟಕ ಯಾವ ಜಿಲ್ಲೆಯಲ್ಲಿ ಒಂಟೆಗಳ ಜಾತ್ರೆ ನಡೆಯುತ್ತದೆ? ೫. ಕನ್ನಡದ ಮೊದಲ ನಾಟಕ ಯಾವುದು? ೬. ಅಂಚೆ ಚೀಟಿಯ ಮೇಲೆ ಪ್ರಪ್ರಥಮವಾಗಿ ಮೂಡಿ ಬಂದ ಕನ್ನಡ ಸಾಹಿತಿ ಯಾರು? ೭. ಮ್ಯಾಗ್ಸೆಸೆ ಪ್ರಶಸ್ತಿ ಪಡೆದ (ರಂಗಭೂಮಿ ಸೇವೆಗೆ) ಮೊದಲ ಕನ್ನಡಿಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ನಟರಂಗ್’ ಎಂಬ ಅದ್ಭುತ ಮರಾಠಿ ಸಿನಿಮಾ: ಶ್ರೀಧರ ಬನವಾಸಿ

ಇತ್ತೀಚಿನ ದಿನಗಳಲ್ಲಿ ನಾನು ನೋಡಿದ ಕೆಲವು ಸಿನಿಮಾಗಳಲ್ಲಿ ನನ್ನನ್ನು ಅತ್ಯಂತ ಕಾಡಿದ ಸಿನಿಮಾವೆಂದರೆ ಮರಾಠಿಯ ನಟರಂಗ್’ ಚಿತ್ರ. ಸಿನಿಮಾವನ್ನು ಕಳೆದ ಒಂದು ವಾರದಲ್ಲೇ ನಾಲ್ಕೈದು ಬಾರಿ ನೋಡಿಬಿಟ್ಟೆ. ಚಿತ್ರದ ಒಂದೊಂದು ಸನ್ನಿವೇಶಗಳು, ನಾಯಕನ ಅಭಿನಯ, ಸಂಗೀತವು ನೋಡುಗರನ್ನು ಸೆಳೆದುಕೊಂಡು ನೋಡಿಸಿಕೊಂಡು ಹೋಗುತ್ತದೆ. ಅದ್ಭುತ ಹಾಗೂ ಮನಸ್ಸಿಗೆ ತುಂಬಾ ನಾಟುವಂತಹ, ಬದುಕಿಗೆ ತುಂಬಾ ಹತ್ತಿರವಾದಂತಹ ಸಿನಿಮಾ ಅಂತ ಹೇಳಬಹುದು. ಇಡೀ ಸಿನಿಮಾ ನೋಡಿದ ಮೇಲೆ ಯಾರಿಗೇ ಆಗಲಿ ಒಂದು ಅಮೂರ್ತವಾದಂತಹ ಅನುಭವ ನಿಮ್ಮನ್ನು ಕಾಡದೇ ಬಿಡದು. ‘ನಟರಂಗ್’ ಚಿತ್ರದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೀಪಾವಳಿ: ಪ್ರಶಸ್ತಿ ಅಂಕಣ

ಪೀಠಿಕೆ: ಮುಂಚೆಯೆಲ್ಲಾ ದೀಪಾವಳಿ,ದಸರಾಗಳೆಂದರೆ ಮನೆ ತುಂಬಾ ಜನ. ಎಲ್ಲೇ ಇದ್ದರೂ ವರ್ಷಕ್ಕೊಮ್ಮೆಯಾದರೂ ಹಬ್ಬದ ಸಂದರ್ಭ ಮಕ್ಕಳೆಲ್ಲಾ ತಮ್ಮ ಮೂಲಮನೆಗೆ ಹೋಗೋದು ಪದ್ದತಿ. ಎಲ್ಲಾ ಸೇರಿ ಖುಷಿ ಖುಷಿಯಾಗಿ ಹಬ್ಬ ಆಚರಿಸುತ್ತಿದ್ದ ಖುಷಿಯೇ ಬೇರೆ. ಅವಿಭಕ್ತ ಕುಟುಂಬಗಳೆಲ್ಲಾ ಕಡಿಮೆಯಾಗುತ್ತಿದ್ದಂತೆಯೇ, ಜನರಲ್ಲಿ ಸ್ವಾರ್ಥ, ಅಸೂಯೆಗಳು ಹೆಚ್ಚಾಗುತ್ತಾ ಬರುತ್ತಿದ್ದಂತೆಯೇ, ಹಳ್ಳಿಗಳಿಂದ ಪಟ್ಟಣಗಳತ್ತ ವಲಸೆ ಮುಂದುವರೆದಂತೆಯೇ ಈ ಖುಷಿ, ನಗು ಕಮ್ಮಿಯಾಗುತ್ತಾ ಬರುತ್ತಿದೆ. ಎಂದೂ ಮುಗಿಯದ ಮಕ್ಕಳ ಎಕ್ಸಾಮಿನ ಟೆನ್ಷನ್ನು, ಅವರು ಏನೂ ಮಾಡಿರದಿದ್ದರೂ ಅವರನ್ನು ಯಾಕೆ ಕರೆಯಬೇಕೆಂಬ ಹಳ್ಳಿಯವರ ಬೇಸರವೂ, ನಮಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರಂಗದ ಗೆಳೆಯ: ಸುಮನ್ ದೇಸಾಯಿ ಅಂಕಣ

ಸಂಜಿಮುಂದ ದೇವರಿಗೆ ದೀಪಾ ಹಚ್ಚಿ. ಅಂಗಳದಾಗಿನ ತುಳಸಿ ಕಟ್ಟಿ ಮ್ಯಾಲೆ ಕೂತು ಮಕ್ಕಳಿಗೆ ಸಾಯಂಕಾಲದ ಪೂರೋಚಿ(ಸಾಯಂಕಾಲದ ಸ್ತೊತ್ರಗಳು) ಹೇಳಿಕೊಡಲಿಕತ್ತಿದ್ದೆ. ಮೊಬೈಲ್ ರಿಂಗಾಗಿದ್ದು ಕೇಳಿ ಎದ್ದು ಒಳಗ ಹೋದೆ. ಯಾವದೊ ಅಪರಿಚಿತ ನಂಬರ್ ಇತ್ತು. ಅಂಥಾಪರಿ ಏನು ಕೂತುಹಲ ಇಲ್ಲದ ಫೋನ್ ತಗೊಂಡು ಹಲೊ ಅಂದೆ. ಅತ್ಲಾಕಡೆಯಿಂದ ಬಂದ ಧ್ವನಿ ನನ್ನ ಉಸಿರಿಗೆ ಪರಿಚಿತ ಅದ ಅನ್ನೊ ಭಾವನೆ ಬರಲಿಕತ್ತು. ಕ್ಷಣ ಮಾತ್ರ ಆಧ್ವನಿಯ ಒಡತಿ ನನ್ನ ಬಾಲ್ಯದ ಗೆಳತಿ ಜಾನು ದು ಅಂತ ಗೊತ್ತಾತು. ಎಷ್ಟು ವರ್ಷದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಿ ಬರ್ಡ್ಸ್:ವಾಸುಕಿ ರಾಘವನ್ ಅಂಕಣ

ಹಾರರ್ / ಸಸ್ಪೆನ್ಸ್ ಚಿತ್ರಗಳು ಅಂದಾಕ್ಷಣ ಮೊದಲು ನೆನಪಿಗೆ ಬರುವ ಹೆಸರೇ ಅಲ್ಫ್ರೆಡ್ ಹಿಚ್ಕಾಕ್. ಸುಮಾರು ಐವತ್ತು ಚಿತ್ರಗಳನ್ನು ನಿರ್ದೇಶಿಸಿದ್ದಾರೆ ಇವರು. ಒಂದು ಚಿತ್ರಪ್ರಕಾರದೊಂದಿಗೆ ಒಬ್ಬ ನಿರ್ದೇಶಕ ಈ ಮಟ್ಟಿಗೆ ಗುರುತಿಸಿಕೊಳ್ಳುವುದು ತುಂಬಾನೇ ವಿರಳ. ಇಂಗ್ಲೆಂಡಿನಲ್ಲಿ ಇಪ್ಪತ್ತರ ದಶಕದಲ್ಲೇ ತಮ್ಮ ವೃತ್ತಿಜೀವನ ಆರಂಭಿಸಿದ ಹಿಚ್ಕಾಕ್, ಖ್ಯಾತಿಯ ಉತ್ತುಂಗಕ್ಕೆ ಏರಿದ್ದು ಮಾತ್ರ ಹಾಲಿವುಡ್ಡಿಗೆ ಬಂದ ಮೇಲೆ. ಅವರ ಅತ್ಯುತ್ತಮ ಚಿತ್ರಗಳು 1954ರಿಂದ 1960ರಲ್ಲಿ ಬಂದವು. ಡಯಲ್ ಎಂ ಫಾರ್ ಮರ್ಡರ್, ರೇರ್ ವಿಂಡೋ, ವರ್ಟಿಗೋ, ನಾರ್ತ್ ಬೈ ನಾರ್ತ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಿರೀಶ ಕಾರ್ನಾಡರ ಯಯಾತಿ ನಾಟಕದಲ್ಲಿ ಪಾತ್ರಗಳ ಭಾವಗಳೇರಿಳಿತಗಳು: ದಿವ್ಯ ಆಂಜನಪ್ಪ

'ಯಯಾತಿ'- ನಾಲ್ಕಂಕದ ಸಣ್ಣ ನಾಟಕವಾಗಿ ಕಾಣುವ ನಮಗೆ ಪಾತ್ರಗಳಾರರಲ್ಲಿ ಮನುಷ್ಯನ ವಿರಾಟ ದರ್ಶನವನ್ನು ನೀಡುತ್ತದೆ.  ನಾಟಕದ ಪ್ರಾರಂಭದಲ್ಲಿ ನಟಿಯೊಡನೆ ಸೂತ್ರಧಾರ ಬರುತ್ತಾರೆ. ಪ್ರೇಕ್ಷಕರನ್ನುದ್ದೇಶಿಸಿ ಸೂತ್ರಧಾರ ನಾಟಕದ ಕುರಿತು ಒಂದು ಕುತೂಹಲಭರಿತ ಮುನ್ನುಡಿಯನ್ನು ನೀಡುತ್ತಾನೆ. ಅಂತ್ಯದಲ್ಲಿ ಅವನಾಡುವ ಮಾತು ಪ್ರಸ್ತುತ ಮತ್ತು ಸರ್ವಕಾಲಿಕ ಸತ್ಯವಾಗಿ ನಿಲ್ಲುತ್ತದೆ. " ಒಮ್ಮೊಮ್ಮೆ ದಾರಿಗುಂಟ ಹೋಗುವಾಗ ನಮ್ಮ ದಾರಿ ಒಡೆದು ಎರಡಾಗುವುದಿಲ್ಲವೇ? ನಾವು ಒಂದನ್ನು ಮಾತ್ರ ಆರಿಸಬಹುದು. ಅದರೊಡನೆ ತತ್ಪೂರ್ತ ನಮ್ಮ ಗುರಿಯೂ ಗೊತ್ತಾಗುತ್ತದೆ. ಆದರೆ ನಮ್ಮ ಹಿಂದೆ ಕಿವಿಗಳ ಸನಿಹದಲ್ಲಿ, ಕೇಳದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಗುರುಪ್ರಸಾದ ಹೆಗಡೆ

೧) ಪಾರು  ಕೈ- ಕೊಟ್ಟಳು ಹುಡುಗಿ  ಕಂಗೆಟ್ಟ  ಹುಡುಗ,  ಅಯ್ಯೋ ಎಲ್ಲ ಮುಗಿದೇ  ಹೋಯಿತೆಂದರು ಜನ. – ಹುಡುಗ ಬಚಾವಾಗಿದ್ದ!    ೨) ಜೀವ  ಅಕ್ವೆರಿಯಮ್ಮಿನಿಂದ ಚಿಮ್ಮಿದ  ಮೀನು – ಹೊರಗೆ ಏನು ಇಲ್ಲವೆಂಬ  ಸತ್ಯವ ಅರಿತು ಮತ್ತೆ ನೀರಿಗೆ ಹಾರಿತು.    ೩) ಸೌಂದರ್ಯ ಪ್ರಜ್ಞೆ  ಬ್ಯೂಟಿ – ಪಾರ್ಲರಿನಿಂದ   ಬಂದ ಬೆಡಗಿಯ  ಕೈಯ ಹಿಡಿದು  ಮೊಮ್ಮಗ  ಮನೆಗೆ ಕರೆದೊಯ್ದ.    ೪) ಗಡಿಯಾರ  ವರ್ಷಗಟ್ಟಲೆ ತಿರುಗಿತು  ಗಡಿಯಾರದ ಮುಳ್ಳು, ಎಷ್ಟು ಸುತ್ತಿದರೂ  ತಲುಪಿದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 5): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ಇತ್ತ ಸಂಜೆ ಆಫೀಸಿನಿಂದ ಮನೆಗೆ ಎಂದ ರಾಜೇಶ ತುಂಬಾ ಖುಷಿಯಾಗಿರುವದನ್ನು ಗಮನಿಸಿದ ಪದ್ಮಮ್ಮ ಏನೋ ರಾಜೇಶ ಇವತ್ತು ತುಂಬಾ ಖುಷಿಯಾಗಿದೆಯಲ್ಲೋ ಏನಾದರೂ ಲಾಟರಿ ಹೊಡೆಯಿತೇನೋ ಎಂದಳು. ಆಗ ರಾಜೇಶನಿಗೆ ಬೇಸರವಾಗಿ ಹೋಗಮ್ಮ ನಿನಗ್ಯಾವಾಗಲು ದುಡ್ಡಿನದೇ ಚಿಂತೆ ಎನ್ನುತ್ತಾ ತನ್ನ ರೂಮಿಗೆ ಹೋದ. ಅವನಿಗೆ ಬೇಗ ನಿದ್ದೆ ಬರದೆ ತನ್ನ ಕಾಲೇಜಿನ ದಿನಗಳು ನೆನಪಾದವು. ತನ್ನ ಸಹಪಾಠಿಯಾದ ಸುನಿತಾಳನ್ನು ತುಂಬಾ ಪ್ರೀತಿಸುತ್ತಿದ್ದ. ದಿನಾ ಅವಳನ್ನು ನೋಡುತ್ತಾ ತನ್ನ ಮನದಲ್ಲಿರೋದನ್ನ ಅವಳಿಗೆ ಹೇಳಬೇಕು ಅಂತ ಎಷ್ಟೊಂದು ಬಾರಿ ಪ್ರಯತ್ನಿಸಿದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೨): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಇಷ್ಟು ಬೇಗ ಬೆಳಕಾಯ್ತೆ!? ಒಂದೊಂದು ಸಲ ನಿದ್ದೆ ಸಾಲದಾದಾಗ, ಏಳಲೇಬೇಕಾದ ಅನಿವಾರ್ಯತೆಯಿದ್ದಾಗ ಹಾಗನ್ನಿಸಿಬಿಡುತ್ತದೆ! ಇನ್ನೂ ಹಳೆಯದರಂತೇ ಗೋಚರಿಸುವ ಬಂಗಾಲದ  New Jalpaiguri ಎಂಬ ಊರಿನಲ್ಲಿ ಗಂಟು ಮೂಟೆಗಳೊಂದಿಗೆ ಬೆಳ್ಳಂ ಬೆಳಿಗ್ಗೆ ಟ್ರೇನಿನಿಂದ ಇಳಿದಾಗ, ಇಲ್ಲಿ ಹೊಸ (New) ದೇನಿರಬಹುದು ಅಂತ ಯೋಚಿಸುತ್ತಲೇ ಹೊರಗೆ ಬಂದಾಗ ಎರಡು ಝೈಲೋ ಗಾಡಿಗಳು ಹಾಗೂ ಇಬ್ಬರು ಸಾರಥಿಗಳು ನಮಗಾಗಿ ಕಾಯ್ದಿದ್ದರು. ಒಬ್ಬನ ಹೆಸರು ಸರೋಜ್ ಇನ್ನೊಬ್ಬ ನೀ ಮಾ. ಇಬ್ಬರೂ ನೇಪಾಳಿಗಳು. ನೀ ಮಾ ಅಂದರೆ  ನೇಪಾಳೀ ಭಾಷೆಯಲ್ಲಿ ಸುರ್ಯೋದಯವಂತೆ.  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ಭಾಗ 1): ಮಹಾಂತೇಶ್ ಯರಗಟ್ಟಿ

೧. ಕನ್ನಡದ ಮೊದಲ ರಾಷ್ಟ್ರಕವಿ ಯಾರು? ೨. ಕರ್ನಾಟಕಕ್ಕೆ ಕಾಫಿ ಬೀಜ ತಂದವರು ಯಾರು? ೩. ಸಂಸತ್ತಿನಲ್ಲಿ ಮೊದಲು ಕನ್ನಡ ಮಾತನಾಡಿದ ಕರ್ನಾಟಕದ ಸಂಸದ ಯಾರು? ೪. ಕರ್ನಾಟಕದ ಮೊದಲ ಉಪ ಮುಖ್ಯಮಂತ್ರಿ ಯಾರು? ೫. ಕರ್ನಾಟಕದಲ್ಲಿ ಮೊದಲ ಸ್ವತಂತ್ರ ಘೋಶಿಸಿಕೊಂಡ ಗ್ರಾಮ ಯಾವುದು? ೬. ಸಾವಿರ ಹಾಡುಗಳ ಸರದಾರ ಯಾರು? ೭. ಕರ್ನಾಟಕದ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ? ೮. ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸಕ್ಕಾಗಿ ಮೊಟ್ಟ ಮೊದಲ ರಾಷ್ಟ್ರೀಯ ಪುರಸ್ಕಾರವನ್ನು ಪಡೆದ ಸಂಸ್ಥೆ ಯಾವುದು? ೯. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕ್ಯಾಮೆರಾ ಖರೀದಿ ಕತೆ: ಪ್ರಶಸ್ತಿ ಅಂಕಣ

  ಹಬ್ಬಕ್ಕೊಂದು ಹೊಸ ಕ್ಯಾಮೆರಾ ಖರೀದಿಸಬೇಕೆಂಬ ಹಂಬಲ ಸ್ವಲ್ವ ಜಾಸ್ತಿಯೇ ಅನ್ನುವಷ್ಟು ಮೂಡತೊಡಗಿತ್ತು.ಹೊಸ ಕ್ಯಾಮೆರಾ ಅಂದ ತಕ್ಷಣ ಈಗೊಂದು ಕ್ಯಾಮೆರಾ ಇತ್ತೆಂದಲ್ಲ. ಮುಖಹೊತ್ತಿಗೆಯಲ್ಲಿ. ಟ್ರಿಪ್ಪು, ಗ್ರೂಪುಗಳಲ್ಲಿ ಎಲ್ಲರ ಕೈಯಲ್ಲೂ ತರಾವರಿ ಥಳಥಳಿಸೋ ಕ್ಯಾಮೆರಾ ಕಂಡು ಕರುಬುವ ಮನಕ್ಕೆ ಸ್ವಂತದ್ದೊಂದು ಡಿಜಿಟಲ್ ಕ್ಯಾಮೆರಾ ಕೊಳ್ಳಬೇಕೆಂಬ ಆಸೆ ನಿಧಾನಕ್ಕೆ ಮೂಡಿತ್ತು. ಪದವಿಯ ಕೊನೆಯ ವರ್ಷದಿಂದಲೂ ಪದವಿಯಾಗಿ ಎರಡು ವರ್ಷವಾಗೋವರೆಗೂ ಇದ್ದ ನೋಕಿಯಾ ೨೭೦೦ ಕ್ಲಾಸಿಕ್ ಮೊಬೈಲಿನ ೨ ಮೆಗಾಪಿಕ್ಸಲ್ ಕ್ಯಾಮೆರಾದಲ್ಲೇ ಸಂತೃಪ್ತವಾಗಿದ್ದ  ಮನಸ್ಸು ಇದ್ದಕ್ಕಿದ್ದಂತೆ ಡಿಜಿಟಲ್ ಕ್ಯಾಮೆರಾದತ್ತ ಹೊರಳಿದ್ದೇಕೆ ? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಟಾಕಿ: ಸಂತೋಷ್ ಕುಮಾರ್ ಎಲ್. ಎಂ.

ಅದು ಬೃಹದಾಕಾರವಾಗಿ ಬೆಳೆದ ನಗರದ ಮೂಲೆಯಲ್ಲಿ, ಇನ್ನೂ ತಲೆಯೆತ್ತಿ ನಿಲ್ಲಲೂ ಕಷ್ಟಪಡುತ್ತಿರುವ ಒಂದು ಬಡವರ್ಗದವರ ಏರಿಯಾ. ನಾಲ್ಕು ಗಂಟೆಗೆಲ್ಲ ಎದ್ದು ಕೂಲಿಗೆ ಹೊರಡುವ ಶ್ರಮಜೀವಿಗಳು ಮತ್ತೆ ವಾಪಸ್ಸು ಬರುವುದೇ ಸಂಜೆ ಸೂರ್ಯ ಮುಳುಗುವ ಹೊತ್ತಿಗೆ.  ಮನೆಯೊಳಗೆ ಅಜ್ಜಿಯ ಕೈತುತ್ತು ತಿಂದು ಮಲಗಿದ ಪುಟ್ಟಿ ದೀಪಳಿಗೆ ನಿದ್ರೆ ಬರುತ್ತಿಲ್ಲ. ಅಜ್ಜಿ ನಾಳೆಯ ದಿನ ದೀಪಾವಳಿ ಅಂತ ಹೇಳಿದ್ದಾಳೆ. ಅಪ್ಪ ಹುಟ್ಟಿದಾಗಿನಿಂದ ಇಲ್ಲಿಯವರೆಗೆ ಯಾವತ್ತಿಗೂ ಪಟಾಕಿ ತರುವುದನ್ನು ಮರೆತಿಲ್ಲ. ಯಾವುದಕ್ಕೂ ದುಡ್ಡಿಲ್ಲದಿದ್ದರೂ ಪ್ರತೀ ತಿಂಗಳು ಪಟಾಕಿಗೆಂದೇ ಇಂತಿಷ್ಟು ಅಂತ ಒಂದಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಿಸಿಲು ಬಸಪ್ಪ ಮತ್ತು ಉನ್ನಾವ್ ಕೋಟೆ: ಅಖಿಲೇಶ್ ಚಿಪ್ಪಳಿ ಅಂಕಣ

  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಐತಿಹಾಸಿಕ ಸ್ಥಳಗಳು ಸಾಕಷ್ಟಿವೆ. ಇಕ್ಕೇರಿ, ಕೆಳದಿ, ಕಲಸಿ, ಹಳೆಇಕ್ಕೇರಿಯ ಕೋಟೆ ಇತ್ಯಾದಿ ಇತ್ಯಾದಿ. ನಮ್ಮ ಊರಿನಲ್ಲಿ ಇರುವುದೊಂದೇ ವೀರಶೈವರ ಮನೆ ಮತ್ತು ಅವರಿಗೊಂದು ವೀರಭದ್ರ ದೇವಸ್ಥಾನ. ದೇವಸ್ಥಾನದಿಂದ ಕೊಂಚ ದೂರದಲ್ಲಿ ಒಂದು ಬಸವಣ್ಣ. ಅದರ ಹೆಸರು ಬಿಸಿಲು ಬಸಪ್ಪ. ಪ್ರತಿವರ್ಷ ಆಯ್ದ ದಿನಗಳಲ್ಲಿ ಅದಕ್ಕೆ ಪೂಜೆ. ವಿಶೇಷವಾಗಿ ತುಳಸಿಪೂಜೆ, ದೀಪಾವಳಿಗಳಂದು ವರ್ಷವಿಡೀ ಬಿಸಿಲಿನಲ್ಲೇ ಮಲಗಿದ ಬಸಪ್ಪನಿಗೆ ಪೂಜೆ. ಬಿಸಿಲು-ಮಳೆಗಳಿಂದ ರಕ್ಷಿಸಲು ಆ ಬಸಪ್ಪನಿಗೆ ಕಟ್ಟಡವಿರಲ್ಲಿಲ್ಲ. ಬಿಸಿಲಿನಲ್ಲೇ ಇರುವುದರಿಂದಾಗಿ ಬಿಸಿಲು ಎಂಬುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿಟ್ಟುಮಾಮಾನ ದೀಪಾವಳಿ: ಸುಮನ್ ದೇಸಾಯಿ ಅಂಕಣ

  ಚುಮುಚುಮು ಛಳಿಗಾಲದಾಗ  ಬರೊ ದೀಪದ ಹಬ್ಬ ದೀಪಾವಳಿ ನೆನಿಸಿಕೊಂಡ್ರನ ಎನೊ ಒಂಥರಾ ಖುಷಿ ಆಗತದ. ನರಕಚತುರ್ದಶಿ ಹಿಂದಿನ ದಿನದಿಂದನ ದೀಪಾವಳಿ ಹಬ್ಬದ ಸಂಭ್ರಮ ಸುರು ಆಗತದ. ಅಂದ್ರ ನಮ್ಮ ಉತ್ತರ ಕರ್ನಾಟಕದ ಕಡೆ ನರಕಚತುರ್ದಶಿ ಹಿಂದಿನ ದಿನಾ ನೀರು ತುಂಬೊ ಹಬ್ಬ ಅಂತ ಮಾಡತೇವಿ. ಅವತ್ತ ಸಂಜಿಮುಂದ ಎಲ್ಲಾರು ಅಂಗಳಾ  ಸಾರಿಸಿ ಥಳಿ ಹೋಡದು ಛಂದನ ದೊಡ್ಡ ದೊಡ್ಡ ರಂಗೋಲಿ ಹಾಕಿ,ಮನಿಮುಂದ ಬಣ್ಣ ಬಣ್ಣದ ಆಕಾಶಬುಟ್ಟಿ ಕಟ್ಟಿರತಾರ. ಮನ್ಯಾಗಿನ ಹಿತ್ತಾಳಿ ತಾಮ್ರದ ಹಂಡೆ ಮತ್ತ ಕೊಡಗೊಳನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಪ್ರವೀಣ, ನಳಿನಾ ಡಿ., ಶಶಿಕಿರಣ್

ಎದ್ದಾಗ ಸುತ್ತೆಲ್ಲ ಕತ್ತಲು ಸಾಯುವ ದಿನ ನಿಕ್ಕಿಯಿಲ್ಲವೆಂದು ನಾಳೆ ನಾಡಿದ್ದುಗಳ ಚಾಪೆಯ ಮೇಲೆ ಸುರಿದು ತಿಂದುಬಿಡುವ ಕಾತುರಕೆ ಹಸಿವು ಸಾಯುವುದಿಲ್ಲ.   ಇದ್ದ ಎಣ್ಣೆಯನೆಲ್ಲ ದೀಪಕೆ ಸುರುವಿ ಬೆಳಕನು ಹೊದ್ದು ಗಡದ್ದು ನಿದ್ದೆ ಎದ್ದಾಗ ಸುತ್ತೆಲ್ಲ ಕತ್ತಲು.   ನಿರ್ದಯ ದೈವದೆದುರು ಮುಗಿದ ಕೈಗಳು ನೈವೇದ್ಯದ ಸಕ್ಕರೆ ಇರುವೆ ತಿಂದು ಖಾಲಿ ಎದೆಯ ಬೇಗೆ ಶಬ್ದಗಳ ಮುಷ್ಠಿಗೆ ಸಿಗದೆ ಖಾಲಿ ಪುಟದ ತುಂಬೆಲ್ಲ ರಾಡಿ.   ಅತಿರಥ ಮಹಾರಥ ಭಗೀರಥ ಪ್ರಯತ್ನ ಆಗಸ ಮುಟ್ಟುವ ಹುತ್ತಿನ ಪರ್ವತದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಲದ ವಿಷಯ (ಭಾಗ 2): ಸೂರಿ ಹಾರ್ದಳ್ಳಿ

(ಇಲ್ಲಿಯವರೆಗೆ) ಈಗಿನ ಕಾಲದಲ್ಲಿ ಕ್ರೆಡಿಟ್ ಕಾರ್ಡಿಲ್ಲದವನು, ಮೊಬೈಲ್ ಫೋನಿರದವನು ಶ್ವಾನಕಿಂತ ಕಡೆಯೆಂದ ಸರ್ವಜ್ಞ! ದೂರವಾಣಿ ಮಾಡಿ ತಲೆ ತಿನ್ನುವ ಕ್ರೆಡಿರ್ಟ್ ಕಾರ್ಡು ಕಂಪನಿಯವರನ್ನು ನಾನು ಒಮ್ಮೆ ಸತಾಯಿಸಿದ್ದು ಹೀಗೆ. ’ಸರ್, ದಯವಿಟ್ಟು ನಿಮ್ಮ ಕೆಲ ನಿಮಿಷಗಳನ್ನು ಬಳಸಿಕೊಳ್ಳಲೇ?’ ಕರ್ಣಾನಂದಕರ ದನಿ, ಆಂಗ್ಲ ಭಾಷೆಯಲ್ಲಿತ್ತು. ’ಸರಿ, ಹೇಳಿ,’ ’ನಾವು… ಬ್ಯಾಂಕಿನವರು. ನಿಮಗೆ ಕ್ರೆಡಿಟ್ ಕಾರ್ಡನ್ನು ಫ್ರೀಯಾಗಿ ಕೊಡುತ್ತೇವೆ.’ ನಾನು ಅವಳ ಮಾತು ಮುಂದುವರಿಸುವ ಮೊದಲೇ ಹೇಳಿದೆ, ’ಹೌದಾ? ನನಗೆ ನಿಜವಾಗಿಯೂ ಕ್ರೆಡಿಟ್ ಕಾರ್ಡಿನ ಅವಶ್ಯಕತೆ ಇದೆ. ನಾನು ಈಗಾಗಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭೂತಯ್ಯನ ಮಗ ಅಯ್ಯು: ವಾಸುಕಿ ರಾಘವನ್ ಅಂಕಣ

“ಗ್ರಾಮೀಣ ಚಿತ್ರ”ಗಳಲ್ಲಿ ಬರುವ ಕ್ಲೀಷೆಗಳಿಗೆ ಲೆಕ್ಕವಿಲ್ಲ. ಹಸಿರು ಹಸಿರಾಗಿ ಉದ್ದಗಲಕ್ಕೂ ಹರಡಿಕೊಂಡಿರುವ ಗದ್ದೆಗಳು, ಲಂಗ ದಾವಣಿ ಹಾಕಿರೋ ನಾಯಕಿ, ಹೆಗಲ ಮೇಲೆ ಬಿಳೀ ಮೇಕೆಮರಿಯನ್ನು ಎತ್ತಿಕೊಂಡು “ಅಯ್” ಅನ್ನುವ ಮುಖಭಾವ, ಸದಾ ಎಲೆಯಡಿಕೆ ಜಗಿಯುವ ಹುಳುಕಲು ಹಲ್ಲಿನ ಅಜ್ಜಿ, ಆ ಅಜ್ಜಿ ಒಮ್ಮೆಯಾದರೂ “ಬೋ ಪಿರುತಿ” ಅನ್ನುವ ಕೃತಕ ವಾಕ್ಯಪ್ರಯೋಗ, ಹಳ್ಳಿಯವರೆಲ್ಲಾ ಒಳ್ಳೆಯವರು, ಹೊರಗಿಂದ ಬಂದ ಪಟ್ಟಣದವರು ಮಾತ್ರ ಕೆಟ್ಟವರು ಅನ್ನುವ ಧೋರಣೆ ಇತ್ಯಾದಿ ಇತ್ಯಾದಿ. ಈ ಪ್ರಕಾರದಲ್ಲಿ ಬಂದಿರುವ ಲೆಕ್ಕವಿಲ್ಲದಷ್ಟು ಕೆಟ್ಟ ಚಿತ್ರಗಳನ್ನು ನೋಡಿದ್ದ ನನಗೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳೆಯುವ ಸಿರಿ ಮೊಳಕೆಯಲ್ಲಿ: ಡಾ. ವಾಣಿ ಸುಂದೀಪ್

ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ, ಮಕ್ಕಳ ಒಲವು ಯಾವ ಕಡೆ ಎಂಬುದು ಪೋಷಕರಿಗೆ ಮಕ್ಕಳು ಚಿಕ್ಕವರಿರುವಾಗಲೇ ಅರ್ಥವಾಗಬೇಕು.  ಮಕ್ಕಳನ್ನು ಬೆಳೆಸುವುದು, ಪಾಲಿಸುವುದು ಸುಲಭದ ಕೆಲಸವಲ್ಲ. ಮಕ್ಕಳ ಆಟ, ಹಟ, ನಗು, ಬಾಲ್ಯತನ ಎಲ್ಲವೂ ಹಿತ ನೀಡುತ್ತವೆ. ಆದರೆ ಮಕ್ಕಳ ಜವಾಬ್ದಾರಿಯ ವಿಚಾರ ಬಂದಾಗ ಎಲ್ಲ ತಂದೆ-ತಾಯಿಯರೂ ಜಾಗೃತರಾಗಬೇಕು. ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸಿ, ಅದರ ಜೊತೆಗೆ ಹೊರ ಜಗತ್ತಿನ ಅನುಭವವನ್ನು ಮಾಡಿಸಬೇಕು. ಮಕ್ಕಳ ಆಸೆಗಳನ್ನೂ ಪೂರೈಸಬೇಕು.   ಮಗು ಹಠ ಮಾಡುತ್ತಿದೆ ಎಂದು ಕೈಲಾಗದ ವಸ್ತುಗಳನ್ನು ತರಲು ಸಾಧ್ಯವಿಲ್ಲ. ಮೊದಲನೆಯದಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೃದಯದ ಹಂದರದಲ್ಲೊಂದು ಸ್ನೇಹ ಸಿಂಚನಾ: ರಾಮು ಗುಂಡೂರು

                                 ಈ ನೆನಪೆ ಶಾಶ್ವತವು ಮಿಂಚಿದ ಶಾಲದಿನವು ಈ ಹಾಡು ನಮ್ಮ ಕಥೆಗೆ ಎಷ್ಟು ಸಾಮ್ಯತೆಯಿದೆಯೆಂದರೆ….? ನನ್ನ ನೆನಪಿನ ಸಂಚಿಯ ಪ್ರತಿ ನೆನಪಿಗೂ ಜೀವ ತುಂಬಬಲ್ಲ ಶಕ್ತಿಯಿದೆ ಎಂದರೆ ಅತಿಯೋಶಕ್ತಿಯಾಗಲಾರದು. ನನ್ನ ಮನದಾಳದ ವ್ಯತೆಯನ್ನು ಕಥೆಯಾಗಿ ಹೇಳುವೆ ಗೆಳತಿ ಮನಸಾರೆ ಕೇಳುವೆಯೆಂಬ ನಿರೀಕ್ಷೆಯೊಂದಿಗೆ ನನ್ನ ಪತ್ರವನ್ನು ಆರಂಭಿಸುತ್ತೇನೆ. ಡಿಯರ್ ಗೆಳತಿ ನಿನ್ನೊಂದಿಗೆ ಕಳೆದ ಶಾಲಾದಿನಗಳು ಎಷ್ಟೊಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 18): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಆಕೆಯ ಬದುಕಿನಲ್ಲಿ ಎದುರಾಗುತ್ತಿರುವ ತಿರುವು ಮುರುವುಗಳನ್ನು ನನ್ನನ್ನು ಕೂಡ ಆತಂಕಗೊಳಿಸಿದ್ದವು. ನಮ್ಮ ಆಫೀಸ್‍ನಲ್ಲಿ ಹಿರಿಯ ಲೈಂಗಿಕ ಕಾರ್ಮಿಕರನ್ನು ಕಾಂಡೋಮ್ ಹಂಚುವ 'ಸಂರಕ್ಷಾ ಸಖಿ'ಯರನ್ನಾಗಿ ನೇಮಕ ಮಾಡಿಕೊಳ್ಳುವ ಬಗ್ಗೆ ಚರ್ಚೆ ಮಾಡಿದ್ದು ನೆನಪಾಗಿ ನಾನು ಆಕೆಗೆ ವಿಷಯವನ್ನೆಲ್ಲ ತಿಳಿಸಿದೆ. ನಮ್ಮ ಕಚೇರಿಯ ವಿಳಾಸ ಕೊಟ್ಟು ಹೊರ ಬಂದೆ. ಮನೆಯ ಬಾಗಿಲಿನಲ್ಲಿ ಕುಳಿತಿದ್ದ ರಾಜಿಯ ಅರಳುತ್ತಿರುವ ಚೆಲುವನ್ನು ನೋಡಿ ನನಗೆ ಸಂತೋಷ, ಗಾಬರಿಗಳೆರಡು ಒಟ್ಟೊಟ್ಟಿಗೆ ಆದವು. ಮತ್ತೆ ಮನೆಯೊಳಗೆ ಹೋಗಿ ರಾಜಿ ಬಗ್ಗೆ ವಿಶೇಷ ಎಚ್ಚರಿಕೆವಹಿಸಬೇಕು ಎಂದು ಕಿವಿಮಾತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 4): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ಆ ದಿನ ರಾತ್ರಿ ಸುಧಾಳಿಗೆ ನಿದ್ದೆ ಹತ್ತಿರ ಸುಳಿಯದಾಯಿತು ಈ ವಿಷಯವನ್ನು ಹೇಗಾದರೂ ಮಾಡಿ ರೇಖಾಳಿಗೆ ತಿಳಿಸಬೇಕು. ಊರಿಗೆ ಬಂದು ಐದಾರು ದಿನಗಳು ಕಳೆದಿವೆ ಆದರೂ ರೇಖಾಳನ್ನು ಭೇಟಿಯಾಗಿಲ್ಲ. ಈ ಬಿಕ್ಕಟ್ಟಿನಿಂದ ಹೇಗಾದರೂ ಪಾರಾಗಬೇಕೆಂದು ಚಿಂತಿಸುತ್ತ ಮಲಗಿದವಳಿಗೆ ಬೆಳಕು ಹರಿದಿದ್ದೆ ತಿಳಿಯಲಿಲ್ಲ. ಏಳೇ ಸುಧಾ ಇನ್ನು ಮಲಗೆ ಇದ್ದೀಯಲ್ಲೆ. ಗಂಡಿನ ಕಡೆಯವರು ಬರುವುದರೊಳಗಾಗಿ ಮನೆಯ ಕೆಲಸವೆಲ್ಲ ಮುಗಿಯಬೇಕು ಎಂದು ಕಾವೇರಮ್ಮ ಎಬ್ಬಿಸಿದಾಗಲೇ ಸುಧಾಳಿಗೆ ಎಚ್ಚರ. ಸುಧಾ ಎದ್ದು ಬೇಗ ಬೇಗನೆ ಮನೆಗೆಲಸದಲ್ಲಿ ತಾಯಿಗೆ ಸಹಾಯ ಮಾಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಪ್ರವಾಸ ಕಥನ ಸ್ಪರ್ಧೆ

  ಪಂಜು ಅಂತರ್ಜಾಲ ವಾರಪತ್ರಿಕೆ (https://www.panjumagazine.com/) ಮತ್ತು ಪಂಜು ಪ್ರಕಾಶನದ ವತಿಯಿಂದ ಪಂಜು ಪ್ರವಾಸ ಕಥನ ಸ್ಪರ್ಧೆಗೆ ನಿಮ್ಮ ಪ್ರವಾಸ ಕಥನಗಳನ್ನು ಆಹ್ವಾನಿಸಲಾಗಿದೆ. ಲೇಖನಗಳು ಸ್ವಂತ ರಚನೆಗಳಾಗಿರಬೇಕು. ಒಬ್ಬರು ಒಂದಕ್ಕಿಂತ ಹೆಚ್ಚು ಲೇಖನಗಳನ್ನು ಕಳುಹಿಸಬಹುದು (ಗರಿಷ್ಠ ಮಿತಿ 3 ಲೇಖನಗಳು). ಪ್ರತಿ ಲೇಖನಗಳು ಕನಿಷ್ಠ 3000 ಪದಗಳಿಂದ ಕೂಡಿರಬೇಕು (ಗರಿಷ್ಠ ಮಿತಿ 5 ಸಾವಿರ ಪದಗಳು). ಲೇಖನಗಳಲ್ಲಿ ಸ್ಥಳೀಯ, ರಾಜ್ಯ, ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರವಾಸಗಳ ವೈವಿಧ್ಯತೆ ಇರಲಿ. ಸಾಧ್ಯವಾದರೆ ಲೇಖನಗಳ ಜೊತೆಗೆ ಲೇಖನಕ್ಕೆ ಹೊಂದುವ ನೀವೇ ತೆಗೆದಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕರಿಮುಗಿಲುಗಳ ನಡುವೆ: ಜಯರಾಮ ಚಾರಿ

"ಬೆಳಕಿನ ವೇಗದಲ್ಲಿ ನೀನಿದ್ದಾಗ ಎಲ್ಲವೂ ಶೂನ್ಯವಾದಂತೆ ಭಾಸವಾಗುತ್ತದೆ; ಅಸಲು ಶೂನ್ಯವೇ ಆಗಿರುತ್ತದೆ" ಯಾವುದೋ ಅನಾಮಧೇಯ ವಿಜ್ಞಾನಿಯ ಈ ವಾಕ್ಯ ನನ್ನೊಳಗೆ ಎನನ್ನೋ ಹುಟ್ಟಿಹಾಕಿರಬೇಕು!. ಇಲ್ಲದಿದ್ದರೆ ಇಷ್ಟೊಂದು ಕಾಡುವ ಅಗತ್ಯವೇನಿತ್ತು? ಈ ಪ್ರವಾಹಭರಿತ 'ಜಲಧಾರಿನಿ' ತುಂಬಿ ಹರಿವಾಗ, ಅದರಲ್ಲಿ ಕೊಚ್ಚಿಹೋಗೋ ಸಾವಿರ ಕಲ್ಮಶಗಳ ನಡುವೆ ಇಂತಹುದೊಂದು ಪ್ರಶ್ನೆ ಯಾಕೆ ನನ್ನ ಕಾಡಬೇಕು? ಅದು ನನ್ನದಲ್ಲದ ಪ್ರಶ್ನೆಗೆ!. ಕರಿಮುಗಿಲಕಾಡು; ಈ ಹೆಸರೇ ವಿಚಿತ್ರತೆರನದು ಕರಿಮುಗಿಲೆಂದರೆ ಕಪ್ಪಾದ ಮುಗಿಲುಗಳು. ಮುಗಿಲುಗಳು ಸೇರಿ ಕಾಡಾದೀತೆ? ಕಾದಾಡಿತಷ್ಟೇ. ಇಂತಹುದೊಂದು ವಿಚಿತ್ರ ಊರಿಗೆ ನಾಗರೀಕತೆ ತುದಿಯಲ್ಲಿರೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಲದ ವಿಷಯ (ಭಾಗ 1): ಸೂರಿ ಹಾರ್ದಳ್ಳಿ

ಕೆಲವರಿದ್ದಾರೆ, ಅವರಿಗೆ ಒಣ ಪ್ರತಿಷ್ಠೆ. ಯಾವುದೇ ಕಿವಿ ಸಿಕ್ಕರೂ, ಅದು ಮರದ್ದೇ ಆಗಿರಬಹುದು, ಮಣ್ಣಿನದ್ದೇ ಆಗಿರಬಹುದು, ಬೊಗಳೆ ಬಿಡುತ್ತಾರೆ: ತಾನು ಯಾವ ಸಾಲವನ್ನೂ ಮಾಡಿಲ್ಲ, ಹಾಲಪ್ಪನಿಂದ ಕೂಡಾ. ಹಾಗಾಗಿ ಸಾಲ ಕೊಟ್ಟವರು ಯಾರೂ ತನ್ನ ಮನೆಯ ಬಾಗಿಲನ್ನು ತಟ್ಟುವಂತಿಲ್ಲ, ಎಂದು, ಎದೆ ತಟ್ಟಿಕೊಂಡು, ತಲೆ ಎತ್ತಿಕೊಂಡು! ಆದರೆ ಹಾಗೆ ಯಾರೂ ಹೇಳುವಂತಿಲ್ಲ. ಯಾಕೆಂದರೆ ಸಿನೆಮಾ ಹಾಡೊಂದು ಹೇಳುತ್ತದೆ, ‘ಹಿಂದಿನ ಸಾಲ ತೀರಿಸಲೆಂದು ಬಂದಿಹೆವಯ್ಯಾ ಜನ್ಮವ ತಳೆದು…’ ಎಂದು. ಸಾಲ ತೀರಿದ ನಂತರವೇ ಮರುಜನ್ಮದ ಸರಣಿಯಿಂದ ಬಿಡುಗಡೆ ಎಂಬುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೧): ಗುರುಪ್ರಸಾದ ಕುರ್ತಕೋಟಿ

"ಯಾವುದೆ ಪ್ರವಾಸದಲ್ಲಿ ಅನುಭವಿಸುವ ಅನಂದಕ್ಕಿಂತ ಆ ಪ್ರವಾಸಕ್ಕಾಗಿ ಮಾಡುವ ಸಿಧ್ಧತೆ ಹಾಗೂ ಅದರ ಕಲ್ಪನೆಯಲ್ಲಿ ಸಿಗುವ ಮಜವೇ ಅದ್ಭುತ!" ಅಂತ ನಮ್ಮ ಕೃಷ್ಣ ಮೂರ್ತಿ ಅವರ ಅಂಬೋಣ. ಅದು ನಿಜವೂ ಹೌದು. ಹಾಗೂ ಆ ಮಾತು ಪ್ರವಾಸಕ್ಕಷ್ಟೇ ಸೀಮಿತವಲ್ಲ. ಯಾವುದೇ ವಿಷಯದಲ್ಲೂ ಕಲ್ಪನೆಯಲ್ಲಿರುವ ಖುಷಿಯೇ ಬೇರೆ. ಹೀಗೆ ನಮ್ಮ ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಪರಿಕಲ್ಪನೆ ಶುರುವಾದದ್ದು ಮೂರು ತಿಂಗಳ ಹಿಂದೆ. ಎಲ್ಲೆಲ್ಲಿ ಹೋಗುವುದು, ಏನೇನು ಸಿದ್ಧತೆಗಳು, ಎಲ್ಲಿ ಪ್ಲೇನು, ಎಲ್ಲಿ ಟ್ರೇನು ಅನ್ನುವ ಹಲವಾರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎತ್ತರದ ಗಡಿಯಲ್ಲಿ..: ಪ್ರಶಸ್ತಿ ಅಂಕಣ

"ಉತ್ತರೇ ಯತ್ಸಮುದ್ರಸ್ಯ, ಹಿಮಾದ್ರೇಶ್ಚೈವ ದಕ್ಷಿಣಾತ್. ವರ್ಷೇ ತದ್ಭಾರತಂ ನಾಮ, ಭಾರತೀಯತ್ರ ಸಂತತಿ:"  ಅಂತೊಂದು ಶ್ಲೋಕ ಇತ್ತು ಹೈಸ್ಕೂಲಲ್ಲಿ. ಹುಟ್ಟುತ್ತಿರೋ ಸೂರ್ಯ ನಿಮ್ಮ ಎಡಭಾಗದಲ್ಲಿರುವಂತೆ ನೀವು ಈ ದೇಶದ ಯಾವುದೋ ಭಾಗದಲ್ಲಿ ನಿಂತಿದ್ದೀರ ಎಂದು ಕಲ್ಪಿಸಿಕೊಂಡರೆ ಈ ಶ್ಲೋಕವನ್ನು ಅರ್ಥ ಮಾಡಿಕೊಳ್ಳೋದು ಸುಲಭ. ಯಾವ ದೇಶದ ಉತ್ತರದಲ್ಲಿ(ಕೆಳಭಾಗ) ಕಣ್ಣು ಹಾಯಿಸಿದಷ್ಟೂ ಮುಗಿಯದ  ಸಮುದ್ರವಿದೆಯೋ , ದಕ್ಷಿಣದಲ್ಲಿ ಹಿಮಾಲಯದಂತಹ ವಿಶ್ವದ ಅತಿ ಎತ್ತರದ ಪರ್ವತಶ್ರೇಣಿಯಿದೆಯೋ, ಎಲ್ಲಿ ಭಾರತೀಯರೆಂಬ ಸಂತತಿಯಿದೆಯೋ ಆ ದಿವ್ಯ ಭಾರತ ನನ್ನದು ಅಂತ.. ಕೇಳುತ್ತಾ ಇದ್ರೆ ಎಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ