ಕನ್ನಡ ಪ್ರೇಮಿ: ಮಹಾಂತೇಶ್ ಯರಗಟ್ಟಿ

ನರಕಕ್ ಇಳ್ಸಿ, ನಾಲ್ಗೆ ಸೀಳ್ಸಿ ಬಾಯ್ ವೊಲಿಸ್ಯಾರೆದ್ರೊವೆ|| ಮೂಗ್ನಲ್ ಕನ್ನಡ ಪದವಾಡ್ತೀನಿ ನನ್ನ ಮನಸನ್ ನೀ ಕಾಣೆ|| ಈ ಮೇಲಿನ ಸಾಲುಗಳನ್ನು ಓದಿದರೆ ತುಂಬಾ ರೋಮಾಂಚನ ಅನಿಸುತ್ತೆ ಅಲ್ವಾ..? ನಮ್ಮ ನಾಡಿನ ಗಡಿ ಜಿಲ್ಲೆಯಾದ ಚಾಮರಾಜನಗರದ, ಗುಂಡ್ಲುಪೇಟೆಯ ಹಿರಿಯ ಸಾಹಿತಿಗಳಾದ ಶ್ರೀ ಜಿ.ಪಿ.ರಾಜರತ್ನಂರವರ ಈ ಸಾಲುಗಳು ನಿಜಕ್ಕೂ ಪ್ರತಿಯೊಬ್ಬ ಕನ್ನಡಿಗನನ್ನು ಬಡಿದ್ದೆಬ್ಬಿಸುತ್ತವೆ. ಅವರ ಅಪ್ಪಟ ಕನ್ನಡಾಭಿಮಾನವನ್ನು ಬಿಂಭಿಸುವ, ಈ ಸಾಲುಗಳಂತೆ ಇದೇ ಗುಂಡ್ಲುಪೇಟೆಯ “ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ” ದಲ್ಲಿ ಕಂಡಕ್ಟರಾಗಿ ಕೆಸಲನಿರ್ವಹಿಸುತ್ತಿರುವ, ಶ್ರೀ ನಟರಾಜ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಸ್ಯಾಹಾರ ವರ್ಸಸ್ ಮಾಂಸಾಹಾರ: ಅಖಿಲೇಶ್ ಚಿಪ್ಪಳಿ ಅಂಕಣ

  ಮೊನ್ನೆ ಪರಿಚಿತರೊಬ್ಬರು ಸಿಕ್ಕಿದ್ದರು. ಮಾತು ದೇಶ-ವಿದೇಶಗಳನ್ನು ಸುತ್ತಿ, ಕಡೆಗೆ ನಾವು ಸೇವಿಸುವ ಆಹಾರದ ಬಗ್ಗೆ ಹೊರಳಿತು. ತಟ್ಟನೆ ಆ ಪರಿಚಿತರು ಪ್ರತಿಕ್ರಯಿಸಿದರು. ಮಾರಾಯ ಈಗಿನ ಪೀಡೆನಾಶಕದ ಹಾವಳಿಯಲ್ಲಿ ತರಕಾರಿಗಿಂತ ಕೋಳಿ ತಿನ್ನೋದೆ ಸ್ವಲ್ಪ ಮಟ್ಟಿಗೆ ಒಳ್ಳೆದು ಅಂತ ಕಾಣ್ತದೆ ಎಂದರು. ಯಾಕೆ ಎಂದೆ. ನೋಡು ತರಕಾರಿಗಳಿಗೆ ಇಂತದೇ ವಿಷ ಹಾಕ್ತಾರೆ ಅಂತ ಹೇಳೊಕಾಗಲ್ಲ. ಪಾದರಸದಿಂದ ಹಿಡಿದು ಎಂಡೋಸಲ್ಪಾನ್‍ವರೆಗೂ ಎಲ್ಲಾ ತರಹದ ಔಷಧ ಹೊಡಿತಾರೆ. ಯಾವುದೇ ನಿಯಮಗಳನ್ನೂ ಪಾಲಿಸೋದಿಲ್ಲ. ಕೋಳಿಯಾದ್ರೆ ಜೀವಂತ ಪ್ರಾಣಿ ಹಾಗಾಗಿ ಅದಕ್ಕೆ ಯದ್ವಾತದ್ವಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಬಿಫೋರ್” ಟ್ರೈಲಾಜಿ: ವಾಸುಕಿ ರಾಘವನ್ ಅಂಕಣ

“ಫ್ರಾನ್ಚೈಸೀ” ಚಿತ್ರಗಳಲ್ಲಿ, ಮೊದಲ ಚಿತ್ರದಷ್ಟೇ ಉತ್ತಮವಾಗಿ ನಂತರದ ಚಿತ್ರಗಳು ಬರುವುದು ಬಹಳ ಅಪರೂಪ. ಅದಕ್ಕೆ ಕಾರಣ ಸೀಕ್ವೆಲ್ಲುಗಳನ್ನು ಮಾಡುವ ಹಿಂದಿರುವ ಸಾಮಾನ್ಯ ಮನಸ್ಥಿತಿ – ಮೊದಲ ಚಿತ್ರ ಗೆದ್ದಿತ್ತು, ಆ ಗೆಲುವಿನ ಬೆನ್ನೇರಿ ಇನ್ನೊಂದಷ್ಟು ದುಡ್ಡು ಮಾಡಿಕೊಳ್ಳೋಣ ಅನ್ನುವುದು. ಅದಕ್ಕೆ ಅಪವಾದ ರಿಚರ್ಡ್ ಲಿಂಕ್ಲೇಟರ್ ನಿರ್ದೇಶನದ “ಬಿಫೋರ್” ಟ್ರೈಲಾಜಿ. 1995ರಲ್ಲಿ ಬಂದ “ಬಿಫೋರ್ ಸನ್ರೈಸ್” ಸಾರ್ವಕಾಲಿಕ ಅತ್ಯುತ್ತಮ ರೋಮ್ಯಾನ್ಸ್ ಚಿತ್ರಗಳಲ್ಲಿ ಒಂದು. ಯೂರೋಪಿನ ಟ್ರೈನಿನಲ್ಲಿ  ಪ್ರಯಾಣ ಮಾಡುವಾಗ ಅಮೆರಿಕಾದ ಯಾತ್ರಿಕ ಜೆಸ್ಸಿ ಮತ್ತು ಫ್ರೆಂಚ್ ಯುವತಿ ಸೆಲೀನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಮಂಜು ಹಿಚ್ಕಡ್, ಚೇತನ್ ಕೆ ಹೊನ್ನವಿಲೆ, ಕಾಜೂರು ಸತೀಶ್

ಹೂ-ದುಂಬಿ  ಹೂಬನದಿ ಆಗತಾನೇ ಅರಳಿದ ಹೂ ಕಾದಿಹುದು ದುಂಬಿ ತನ್ನ ಚುಂಬಿಸಲೆಂದು.   ಮುಂಜಾವಿನ ತಂಗಾಳಿಗೆ ಮೈಯೊಡ್ಡಿ ಕಾದಿಹುದು ಎಂದು ಸೂರ್ಯ, ಉದಯಿಸಿಹೆನೆಂದು.   ಪಕಳೆಗಳ ಅರಳಿಸಿ ಕಾದಿಹ ಸುಮವ ಕಂಡು ತಾ ಮೋಹಗೊಂಡು ಹಾರಿತು ದುಂಬಿ ಆಗತಾನೆ ಅರಳಿನಿಂತ ಆ ಸುಮದೆಡೆಗೆ.   ಝೇಂಕರಿಸಿ ತನ್ನೆಡೆಗೆ ಹಾರಿ ಬಂದ ದುಂಬಿಗೆ ತನ್ನ ಮೈ ಅಲುಗಿಸಿ ಸ್ವಲ್ಪ ಸತಾಯಿಸಿ ಸಹಕರಿಸಿತು ದುಂಬಿಗೆ ತನ್ನ ಮಕರಂದ ಹೀರಲು.   ಮಕರಂದ ಹೀರಿ ತನ್ನಾಸೆ ತೀರಿತೆಂದು ಹಾರಿತು ದುಂಬಿ ಇನ್ನೊಂದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 3): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ…)  ಇತ್ತ ಗೆಳತಿಯರಿಬ್ಬರು ಮುಂದೇನು ಎಂದು ಚಿಂತಿಸತೊಡಗಿದರು. ಆಗ ರೇಖಾನೆ ಮೊದಲಿಗಳಾಗಿ ಸುಧಾ ನಾಳೆ ಬೆಳಿಗ್ಗೆ ನಾವಿಬ್ಬರು ಮೊದಲು ಎಲ್ಲಾದರೂ ರೂಮು ಬಾಡಿಗೆಗೆ ಸಿಗುತ್ತದಾ ಅಂತ ನೋಡೋಣಾ ಎಂದಳು. ಗೆಳತಿಯ ಮಾತಿಗೆ ಸುಧಾ ಸಮ್ಮತಿಸಿದಳು. ಅನಂತರ ಪಕ್ಕದ ರೂಮಿನ ಹುಡುಗಿಯೊಬ್ಬಳು ಬಂದು ಊಟಕ್ಕೆ ಬರ್ರಿ ಎಂದು ಹೇಳಿ ಹೋದಳು. ಅದರಂತೆ ರೇಖಾ ಮತ್ತು ಸುಧಾ ಇಬ್ಬರು ಊಟದ ಹಾಲಿಗೆ ಬಂದಾಗ ಕನಿಷ್ಟ ನಲವತ್ತು ಹುಡುಗಿಯರು ಊಟಕ್ಕೆ ಕುಳಿತ್ತಿದ್ದರು. ಇವರು ಹೋಗಿ ಕುಳಿತರು. ಆಗ ಹುಡುಗಿಯರೆಲ್ಲ ಒಬ್ಬೊಬ್ಬರಂತೆ ಇವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 17): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಇಲ್ಲಿಗೆ ಬಂದ ಮೇಲೆ ಇಲ್ಲಿನ ಕೆಲಸ ಎಲ್ಲರಿಗೂ ಸಿಗುವ ಪರಿಧಿಯಲ್ಲ ಅಂತ ಗೊತ್ತಾಯಿತು. ಈ ಕ್ಷೇತ್ರದಲ್ಲಿ ಹತ್ತಾರು ವರ್ಷ ದಕ್ಷತೆಯಿಂದ ದುಡಿಮೆ ಹೆಸರು, ಅನುಭವ ಗಳಿಸಿದರಷ್ಟೇ ಇಂಥ ಕಾಂಟ್ರಾಕ್ಟ್ ಗಳನ್ನು ನಿಭಾಯಿಸಲು ಸಾಧ್ಯ. ಇಲ್ಲಿ ನಂಬಿಕೆ, ವಿಶ್ವಾಸ ಎಲ್ಲಕ್ಕಿಂತ ಮುಖ್ಯವಾಗಿ ಸೌಂದರ್ಯ ಮತ್ತು ನಾಜೂಕತೆ ಮುಖ್ಯವಾಗುತ್ತದೆ. ತುಂಬಾ ಜವಾಬ್ದಾರಿಯ ಕೆಲಸ ಇದು. ಆಕಸ್ಮಾತ್ತಾಗಿ ಸ್ವಲ್ಪ ಲೀಕಾದ್ರೂ ನಮ್ಮನ್ನು ಇಟ್ಟುಕೊಂಡ ಘರ್‍ವಾಲಿಗಳ ಪ್ರಾಣಕ್ಕೆ ಕುತ್ತು ಬರುವುದರಲ್ಲಿ ತಪ್ಪುವುದಿಲ್ಲ. ಹೀಗಾಗಿ ಅವರು ತಮ್ಮ ಕಾರ್ಯವನ್ನು ಅತೀವ ಎಚ್ಚರದಿಂದ ನಿರ್ವಹಿಸುತ್ತಾರೆ.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪುನರ್ ಮಿಲನ: ಸುಮನ್ ದೇಸಾಯಿ ಅಂಕಣ

ಮದವಿಮನಿ ಅಂದ್ರ ಅದರ ಕಳೆನ ಬ್ಯಾರೆ ಇರತದ. ಹೆಣ್ಣು ಮಕ್ಕಳ ಹರಟಿ, ಸಣ್ಣ ಮಕ್ಕಳ ನಗುವಿನ ಕಲರವ. ಹಸಿರು ತೋರಣ, ಮಂಗಳಕರ ಚಪ್ಪರ. ನಗು, ಹಾಸ್ಯ, ಗಡಿಬಿಡಿಯಿಂದ ತುಂಬಿರತದ. ಅದರೊಳಗಂತು ಹಳ್ಳಿಯೊಳಗಿನ ಮದುವಿ ಸಂಭ್ರಮ ಅಂತು ಒಂಥರಾ ಬ್ಯಾರೆನ ಇರತದ.ಅದೊಂದ ಹಳೆಕಾಲದ್ದ ದೊಡ್ಡಂಕಣದ್ದ ಮನಿ. ಯಾವ ಆಡಂಬರ ಇಲ್ಲದ ಬಿಳಿಸುಣ್ಣದಿಂದ ಸಾರಿಸಿ ಅಲ್ಲಲ್ಲೆ ಇಳಿಬಿಟ್ಟ ಕೆಂಪು ಕ್ಯಾಂವಿ ಮಣ್ಣಿನ ಜೋರು. ಬಾಗಲಿಗೆ ಕಟ್ಟಿದ ಮಾವಿನ ತೊಳಲಿನ ತೊರಣ, ಮನಿಮುಂದ ಓಣಿಯ ತುಂಬ ಹಾಕಿದ ಹಂದರ ಹಂದರದೊಳಗ ಬಳೆಗಾರರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೇರಾ ಲವ್ಲೀ ಕನ್ನಡ…!!: ಸಚಿನ್ ಎಂ. ಆರ್.

 ಹಂಗೆ ಬಸ್ ಸ್ಟಾಪಲ್ಲಿ ಕಾಯ್ತಾ ಇದ್ದೆ (ಬಸ್ಸಿಗೆ)…!! ಪಕ್ಕದಲ್ಲಿ ಮೂವರು ಬುದ್ಧಿಜೀವಿಗಳು (ಬಿಳಿ ಗಡ್ಡ ಇದ್ದಿದ್ರಿಂದ ಹಂಗಂದುಕೊಂಡೆ) ಮಾತಾಡ್ತಾ ನಿಂತಿದ್ರು…!! ಅಷ್ಟರಲ್ಲಿ ಅಲ್ಲೇ ಇದ್ದ ಬಸ್ಸಿನಿಂದ ಇಳಿದುಬಂದ  ಸುಂದರ ಯುವತಿಯೊಬ್ಬಳು ನನ್ನತ್ರ ಅಡ್ರೆಸ್ಸ್ ತೆಲುಗಲ್ಲಿ ಕೇಳಿದ್ಳು..! ಕನ್ನಡ ಬರಲ್ಲ ಅಂತ ತೆಲುಗಲ್ಲೇ ಹೇಳಿದಳು ಕೂಡಾ.. ನಾನೂ ಒಬ್ಬ ಕನ್ನಡಿಗನಾದ್ದರಿಂದ ಅವಳ ವಿಳಾಸಾನ ತೆಲುಗಲ್ಲೇ ಹೇಳಿದೆ..!! ಇದು ನಮ್ಮ ಕನ್ನಡ ಬುದ್ಧಿಜೀವಿಗಳಿಗೆ ಸ್ವಲ್ಪ ರೇಗಿಸಿತು ಅನ್ಸತ್ತೆ..! “ತಮ್ಮಾ ಬಾ” ಅಂದ್ರು. ಹತ್ತಿರ ಹೋದೆ. “ನೀನ್ ಯಾವೂರು? ನಿನ್ ಭಾಷೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನ್ಯಾನೋ ಕತೆಗಳು: ಸುನೀತಾ ಮಂಜುನಾಥ್, ನವೀನ್ ಮಧುಗಿರಿ

ಒಂದಷ್ಟು ವಾಸ್ತವಗಳು ……….!!! ಬೆಳಗು ಬೈಗಿನ ಅನ್ನಕ್ಕೆ ಆ ಹೋಟಲಲ್ಲಿ ದುಡಿವ ಅವನು ಚೆಂದದ ಹುಡುಗ ನನ್ನ ಮಗಳ ವಯಸ್ಸೇ ಏನೋ … ಒಂದಷ್ಟು ನೀರೆದು ಹೊಸ ಬಟ್ಟೆ ಹಾಕಿದರೆ ನನ್ನ ಮಕ್ಕಳಿಗಿಂತ ಚೆಂದವೇನೋ … ಒಂದಷ್ಟು ಓದು ನೀಡಿದರೆ ನನ್ನ ಮಕ್ಕಳಿಗಿಂತ ಎತ್ತರಕ್ಕೇರುವನೇನೊ …. 'ಶಾಲೆಗೆ ಹೋಗುವೆಯೇನೋ ಪುಟ್ಟ'ಅಂದೆ 'ಈಗ ಹೋಗಿಬಂದೆ ಅವ್ವ, ಟೀ ಕೊಟ್ಟು ಬಂದೆ' ಅಂದ …. !!!!!!! 'ನಾ ಅಮ್ಮ ಆಗ್ತಾ ಇದ್ದೀನಿ ' ಅಂದ್ಲು ಅವನ ಕಣ್ಣಲ್ಲಿ ಖುಷಿ …. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳದಿಂಗಳ ಬಾಲೆ: ಸುಬ್ರಹ್ಮಣ್ಯ ಹೆಗಡೆ

೧.           ಪ್ರತೀ ದಿನದಂತೆ, ಕೋರಮಂಗಲದ ನಮ್ಮ ಮನೆಯಿಂದ ಬನಶಂಕರಿಯ ಕಾಲೇಜಿಗೆ ಹೊರಟವನು ಹಾಗೇ JP ನಗರದ ವೈಷ್ಣವಿಯ ಮನೆಯ ಕಡೆಗೆ ಗಾಡಿಯನ್ನು ತಿರುಗಿಸಿದೆ, ಅದೇನೂ ಕಾಲೇಜಿಗೆ ಹೋಗುವ ದಾರಿಯಲ್ಲಿ ಇಲ್ಲದಿದ್ದರೂ, ವೈಷ್ಣವಿ ಇಷ್ಟು ಹೊತ್ತಿಗೆ ಕಾಲೇಜು ಬಸ್ ನ್ನು ಹಿಡಿಯಲು ಮನೆಯಿಂದ ಹೊರಟಾಗಿರುತ್ತದೆ ಎಂದು ತಿಳಿದಿದ್ದರೂ. ಪ್ರೀತಿಸಿದ ವ್ಯಕ್ತಿ ಇದ್ದ ಜಾಗ ಎಂಬ ವಿಷಯ ಇದೆಯಲ್ಲಾ, ಅವಳು ನಡೆದ ದಾರಿಯ ಘಮ ಇಲ್ಲೇ ಹಬ್ಬಿದೆ ಎಂಬ ಭ್ರಮಾಭರಿತ ಸೊಗಸು ಮಾತಿನ ಅಗತ್ಯವಿಲ್ಲದೇ, ಕಾಲದೇಶಗಳ ಹಂಗಿಲ್ಲದೇ, ವ್ಯಕ್ತವಾಗುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಗೆ ಪಕ್ಷ! ಕೋಗಿಲೆ ಪಕ್ಷ!! : ಎಸ್.ಜಿ.ಶಿವಶಂಕರ್

ಅಲೆಅಲೆಯಾಗಿ ತೇಲಿ ಬಂತು ಕೋಗಿಲೆಯ ಮಧುರ ಸ್ವರ. ಕೇಳುತ್ತಲೇ ವಿಶಾಲೂ ಮುಖ ಅರಳಿತು, ಮಂದಹಾಸ ಮಿನುಗಿತು. ಉಲ್ಲಸಿತಗೊಂಡಳು! ಪೇಪರಿನಿಂದ ತಲೆ ಎತ್ತಿ ಸ್ವರ ಬಂದ ದಿಕ್ಕನ್ನು ಗುರುತಿಸಲು ಪ್ರಯತ್ನಿಸಿದಳು. ’ದರಿದ್ರ, ಮತ್ತೆ ಬಂದು ವಕ್ಕರಿಸಿತು’ ವಿಶ್ವ ಶಪಿಸಿದ! ವಿಶಾಲೂ ಬೆಚ್ಚಿದಳು! ಇಂತವರೂ ಇರ್ತಾರ? ಅಚ್ಚರಿಪಟ್ಟಳು! ಕೋಗಿಲೆಯ ಇಂಪಾದ ರಾಗವನ್ನು ದರಿದ್ರ ಎಂದು ಭಾವಿಸ್ತಾರಾ..? ಬೆಳ್ಳಂಬೆಳಿಗ್ಗೆ ಗಡ್ಡ ಮೀಸೆಗಳಿರುವ ಜಾಗದಲ್ಲಿ ಚೂರುಚೂರೇ ಬೆಳೆದು ’ನೀನು ಮುದುಕನಾಗುತ್ತಿರುವೆ’ ಎಂಬುದನ್ನು ಜಗಜ್ಜಾಹೀರು ಮಾಡಲು ಹವಣಿಸುತ್ತಿದ್ದ ಬಿಳಿಕೂದಲುಗಳನ್ನು ನಿರ್ದಯದಿಂದ ಬೋಳಿಸುವ, ನವನಾಗರೀಕ ಭಾಷೆಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುಂಡೆಕುಸ್ಕ ಬಂತು: ಅಖಿಲೇಶ್ ಚಿಪ್ಪಳಿ

ಹವಾಮಾನ ಬದಲಾವಣೆಯ ಪರಿಣಾಮವೋ ಏನೋ ಮಲೆನಾಡಿನಲ್ಲಿ ಇನ್ನೂ ಮಳೆ ಬಿಟ್ಟಿಲ್ಲ. ಮೇಲಿಂದ ಮೇಲೆ ಚಂಡಮಾರುತಗಳು ರುಧ್ರನರ್ತನಗೈಯುತ್ತಿವೆ. ಪ್ರಕೃತಿವಿಕೋಪಕ್ಕೆ ಸಿಕ್ಕ ಮಾನವನ ಬದುಕು ಮೂರಾಬಟ್ಟೆಯಾಗಿದೆ. ಸ್ವಯಂಕೃತಾಪರಾಧವೆನ್ನಬಹುದೆ? ಮಳೆಗಾಲ ಕ್ಷೀಣವಾಗಿ ನಿಧಾನವಾಗಿ ಚಳಿ ಹೆಜ್ಜೆಯ ಮೇಲೆ ಹೆಜ್ಜೆಯಿಡುತಾ ಬರುವಾಗಿನ ಸಂಭ್ರಮ ಮತ್ತು ಅದರ ಮಜ ಬೇರೆ. ತೆಳ್ಳಗಿನ ಇಬ್ಬನಿ ಎಲೆಗಳ ಮೇಲೆ ಹುಲ್ಲಿನ ಮೇಲೆ, ಜೇಡದ ಬಲೆಯಲ್ಲಿ ಮುತ್ತು ಪೋಣಿಸಿದಂತೆ ಅತ್ಯಾಕರ್ಷಕವಾಗಿ ತೋರುತ್ತದೆ. ಚಳಿಗಾಲದ ಮುಂಜಾವಿನ ಸೊಗಸನ್ನು ಅನುಭವಿಸಿದವನೇ ಧನ್ಯ. ಸೂರ್ಯವಂಶಿಗಳಿಗೆ ಈ ಭಾಗ್ಯವಿಲ್ಲ. ಇವರೆದ್ದು ವಾತಾವರಣದ ಸಂಪರ್ಕಕ್ಕೆ ಬರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಲೇಜ್ ಕಹಾನಿ: ಪ್ರಶಸ್ತಿ ಅಂಕಣ

ನೀರವ ರಾತ್ರಿ. ಜೀವನವೇ ಜಿಗುಪ್ಸೆಯಾಗಿ , ಮನಶ್ಯಾಂತಿಯನ್ನು ಹುಡುಕಿ ಅಲೆಯುತ್ತಿರೋ ಅಲೆಮಾರಿಯಂತೆ ಒಬ್ಬ ಕೆರೆಯನ್ನೇ ದಿಟ್ಟಿಸುತ್ತಾ ಅದರ ದಡದಲ್ಲಿ ಕುಳಿತಿದ್ದ. ಬೆಳದಿಂಗಳ ರಾತ್ರಿ. ಕೆರೆಯ ಅಲೆಗಳಲ್ಲಿ ಪ್ರತಿಬಿಂಬಿಸುತ್ತಿದ್ದ ಚಂದ್ರನ ಬಿಂಬ ನೋಡುತ್ತಿದ್ದರೆ ಆಗಸದ ಆ ಶಶಿ ಈತನಿಗೆ ಸಾಂತ್ವನ ಹೇಳಲೆಂದೇ ಭುವಿಗಿಳಿದು ಬಂದು ಕೆರೆಯಲ್ಲಿ ಈಜಾಡುತ್ತಿದ್ದಾನೇನೋ ಅನಿಸುತ್ತಿತ್ತು. ರೋಹಿಣೀಪತಿ ಪ್ರಭೆಯ ರಾತ್ರಿ ಸಭೆಗೆ ಆಗಮಿಸಿದ್ದ ತಾರೆಗಳೆಲ್ಲಾ ಮಿಂಚುತ್ತಾ ಆಗಸದಲ್ಲಿ ಚಿತ್ರ ವಿಚಿತ್ರ ಆಕೃತಿಗಳನ್ನು ಮೂಡಿಸುತ್ತಿದ್ದವು. ಸೃಷ್ಟಿಕರ್ತನ ಚುಕ್ಕಿಯಾಟಕ್ಕೋ , ರಂಗೋಲಿಗೋ ಅಂಗಳವಾದಂತಿದ್ದವು. ತಂಗಾಳಿಗೆ ಗತ್ತು ಬಂದಂತೆ ಕೊಂಬೆಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆತ್ಮಹತ್ಯೆ; ಒಂದು ಚಿಂತನೆ: ದಿವ್ಯಾ ಆಂಜನಪ್ಪ

ಇತ್ತೀಚೆಗೆ ನಾಲ್ಕನೇ ತರಗತಿಯಲ್ಲಿ ವಿಜ್ಞಾನ ಪಾಠವೊಂದರ ಕುರಿತು ಚರ್ಚಿಸುತ್ತಿದ್ದ ಸಮಯ. ಪಾಠದ ಹೆಸರು "ಮಣ್ಣು". ಮಕ್ಕಳಿಗೆ ಮಣ್ಣು ಹೇಗಾಯಿತು? ಮಣ್ಣಿನ ರಚನೆ, ಮಣ್ಣಿನ ಉಪಯೋಗಗಳನ್ನು ಹೇಳುವಾಗ, ಇಂಧನವಾದ ಕಲ್ಲಿದ್ದಲು ಕುರಿತು ಚರ್ಚೆ ಬೆಳೆಯಿತು. ಹಾಗಾಗಿ ಪಾಠಕ್ಕೆ ಹೊರತಾಗಿದ್ದು ಹೆಚ್ಚಿನ ಮಾಹಿತಿಯೆಂದೇ ತಿಳಿದು ವಿಷಯಾಂತರವಾದರೂ ಸರಿಯೇ ಎಂದು ಅದರ ಬಗ್ಗೆಯೂ ಮಾಹಿತಿ ನೀಡುತ್ತಿದ್ದೆ. ಈಗಿನ ಶಿಕ್ಷಣ ಕ್ರಮದಲ್ಲಿ ವಿಷಯಾಂತರ ಎಂಬ ಮಾತಿಲ್ಲ. ಕನ್ನಡ ಪಾಠದಲ್ಲಿ ವಿಜ್ಞಾನದ ವಿಷಯಾಂಶ ಬಂದರೂ ಅದನ್ನು ಭೋದಿಸಿಯೇ ಮುಂದೆ ನಡೆಯಬೇಕು. ಮಕ್ಕಳಲ್ಲಿ ಯಾವುದೊಂದು ಪ್ರಶ್ನೆಯೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 2): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ…) ಮರುದಿನ ಎಂದಿನಂತೆಯೆ ಗೆಳತಿಯರಿಬ್ಬರು ಅಂದುಕೊಂಡಂತೆಯೇ ಅದೇ ಮಾವಿನ ಮರದ ಕೆಳಗೆ ಭೇಟಿಯಾದರು. ಆಗ ರೇಖಾಳೆ ಮಾತಿಗಾರಂಭಿಸಿದಳು. ಏ ಸುಧಾ ಈಗಾಗಲೇ ಕಾಲೇಜ್ ಅಡ್ಮೀಷನ್ ಶುರು ಆಗಿ ನಾಲ್ಕೈದು ದಿನಗಳಾಗಿವೆ. ಇನ್ನು ಹತ್ತು ದಿನದೊಳಗಾಗಿ ನಾವು ಪಟ್ಟಣಕ್ಕೆ ಹೋಗಿ ಅಡ್ಮೀಷನ್ ಮಾಡಿಸಿ ಬರಬೇಕು. ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಹೌದು ಕಣೆ ರೇಖಾ ಆದಷ್ಟು ಬೇಗ ಈ ಕೆಲಸ ಮಾಡಬೇಕು. ಇಲ್ಲದಿದ್ದರೆ ನಾವು ಕಾಲೇಜನ್ನ ಮರೆತು ಮನೆಯಲ್ಲಿದ್ದ ಬಿಡಬೇಕಾಗುತ್ತದೆ ಎಂದಳು. ಈಗೇನು ಮಾಡೋದು ಅಂತ ಮೊದಲು ಹೇಳು ಸುಧಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಕ ಸ್ಪರ್ಷ: ಸುಮನ್ ದೇಸಾಯಿ ಅಂಕಣ

ಮುಂಝಾನಿಂದ ಯಾಕೊ ಮನಸ್ಸು ಭಾಳ ತಳಮಳಸ್ಲಿಕತ್ತಿತ್ತು. ಇವತ್ತ ಆಂವಾ ಬರಾಂವ ಇದ್ದಾ. ಯಥಾಪ್ರಕಾರ ಕೈ ತಮ್ಮ ಕೆಲಸಾ ಮಾಡಲಿಕತ್ತಿದ್ವು. ಆದ್ರ ಮನಸ್ಸು ಮಾತ್ರಾ ಆಂವನ್ನ ನೆನಿಕೊಳ್ಳಿಕತ್ತಿತ್ತು. ಆಂವಗ ಇಷ್ಟ ಆಗೊ ಅಡಿಗಿ ಎಲ್ಲಾ ಮಾಡಿದ್ದೆ. ಆಂವಗ ನನ್ನ ಕೈ ಅಡಿಗಿ ಅಂದ್ರ ಭಾಳ ಸೇರತದ. ಊರಾಗ ಇದ್ದಾಗ ಎಷ್ಟ ಹೊತ್ತಾದ್ರು , ಹಸಿವ್ಯಾದ್ರು ಹೊರಗ ಏನು ತಿನ್ನಲಾರದ ಉಪವಾಸ ಮನಿಗೆನ ಊಟಕ್ಕ ಬರತಿದ್ದಾ. ನನ್ನ ಮುಂದ ಕೂಡಿಸಿಕೊಂಡು ನನ್ನ ಜೋಡಿ ಸರಸವಾಡಕೊತ ಊಟಾ ಮಾಡೊದಂದ್ರ ಆಂವಗ ಭಾಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಲವು ಚಿಕ್ಕ ಪದ್ಯಗಳು: ಉರ್ಬಾನ್ ಡಿ’ಸೋಜ, ಮೇಗರವಳ್ಳಿ ರಮೇಶ್

                                     ಚುಟುಕ -೧   ಪ್ರೇಮಿಕಾ ನಿನ್ನೆಯವರೆಗೆ ಸಿಹಿ ಮಾತುಗಳನ್ನಾಡದ ನನ್ನ ನಲ್ಲೆ ಇ೦ದಿನಿ೦ದ ಅದನ್ನೇ ಮಾತಾನಾಡುತ್ತಿದ್ದಾಳೆ… ನಿನ್ನೆ ನಮ್ಮ ಮೊದಲ ರಾತ್ರಿ ಅವಳು ಜೇನು ಕುಡಿದಿದ್ದಾಳೆ.    ಚುಟುಕ:೨  – ಬುದ್ದಿ ಅವರು ಇವರು ಜಾರಿ ಬಿದ್ದಾಗ ನಕ್ಕವಳು ತಾನು ಬಿದ್ದಾಗ ಅವರು ಇವರು ನಕ್ಕಾಗ ಸಿಡಿಮಿಡಿಗೊ೦ಡಳು.    ಚುಟುಕ:೩  – ನಗು ಮಗಳು ನಕ್ಕಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಲವ ಒಳಗಣ ಮಥನ: ಸಂತೆಬೆನ್ನೂರು ಫೈಜ್ನಟ್ರಾಜ್

ನಿನ್ನ ಕಣ್ಣ ಕಡಲಲೀ…………… ನನ್ನ ಬಾಳಿದು ಬೆಳಗಲಿ, ಸರಿದು ಹೋಗೋ ಭಾವದಿ ಪ್ರೀತಿ ದೋಣಿ ತೇಲಲಿ……………………. ಇಡೀ ಪದ್ಯದಿ ಇದೊಂದು ಚರಣ ಅಲ್ವೇ ನಿಮ್ಮೆಡೆಗೆ ತಿರುಗುವಂತೆ ಮಾಡಿದ್ದು ನಿಮ್ಮ ವಿಳಾಸ ಪ್ರಕಟವಾಗಿದ್ದ ಸಾಪ್ತಾಹಿಕದಿಂದಲೇ ಪಡೆದು ನಿಮ್ಮ ಈ ಕವಿತೆಗಾಗಿ ಹಂಬಲಿಸಿ ಅಭಿನಂದನೆ ತಿಳಿಸಿದ್ದು. ಕಾಣದ ನಿಮ್ಮ ಕಾಣುವ ಬರಹದ ತನಕ ತಂದು ನಿಲ್ಲಿಸಿದ್ದು ತಿಂಗಳಿಗೆರಡರಂತೆ ನಮ್ಮ-ನಿಮ್ಮ ಪತ್ರ ವಿನಿಮಯ ಭಾವ ಬಂಧುರದ ತನಕ ತಂದು ನಿಲ್ಲಿಸಿದೆ ಕೊನೆಗೆ ಈ ಪತ್ರ ತಾನತೆ ಎಲ್ಲಿ ಒರೆಗೆ ? ನಿಮ್ಮೆಲ್ಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಜಾನ್ ಸುಂಟಿಕೊಪ್ಪ, ಉಷಾಲತಾ, ಜೊ. ಸಿ. ಸಿದ್ದಕಟ್ಟೆ

ಬೇಡದ ಜೀವ ಹಸಿದ ಕತ್ತಲು ಲೊಚಗುಟ್ಟುತ್ತದೆ ಹೊಸೆದ ಬಿರುಸು ಬಂಧನಕ್ಕಾಗಿ,.. ಬಿಸಿಯುಸಿರು ಅಸ್ತವ್ಯಸ್ತವಾಗುತ್ತದೆ ಕ್ರೌರ್ಯ ಕಂಡ ಗೋಡೆಗಳಿಗಾಗಿ… ಏದುಸಿರು…ಅಸಹನೆ ಸಾಕ್ಷಿಯಾಗುತ್ತದೆ ನಿಗೂಢ ಮೌನವಾಗಿ…. ಬಗಲಲಿ ಮಲಗಿದ  ಮೊದಲ ಕೂಸಿಗೂ ಆಗಲೆ ಮೊಳಕೆಯೊಡೆದ ಮುಗ್ಧ ಪಿಂಡಕ್ಕೂ ಏನು ಅಂತರ,,!? ಉತ್ತರವಿಷ್ಟೇ- ಕೆಲವೊಮ್ಮೆ ತೊಟ್ಟಿಲು ತೂಗುತ್ತದೆ, ಕೆಲವೊಮ್ಮೆ…. ತೊಟ್ಟಿ ತುಂಬುತ್ತದೆ.,… ಮೊಳಕೆಯೊಡೆದ ಪಿಂಡ ಕೆಂಪು ಕೆಂಪಾಗಿ ತೊಟ್ಟಿಕ್ಕುತ್ತದೆ… ಕಾಣದ ಜೀವದ ಮೌನರೋಧನಕೆ ಹೊಸದೊಂದು ನ್ಯಾಪ್ಕಿನ್ ಕೆಂಪಾಗುತ್ತದೆ….  –ಜಾನ್ ಸುಂಟಿಕೊಪ್ಪ.             ಕೊನೆ ಎಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 16): ಹನುಮಂತ ಹಾಲಿಗೇರಿ

    (ಇಲ್ಲಿಯವರೆಗೆ) ಜನನಿಬಿಡ ಮಾರುಕಟ್ಟೆಯಲ್ಲಿ ರಸ್ತೆಯ ಎರಡು ಬದಿಗೆ ಶಾರದೆಗಾಗಿ ಕಣ್ಣು ಹಾಯಿಸುತ್ತಾ ನಡೆದಿದ್ದಾಗ ದೀಪಾಳ ಹಿಂದಿನಿಂದ ದೊಡ್ಡ ಹೊಟ್ಟೆಯ ಮುದಿ ಹೆಂಗಸೊಂದು ಧಾವಿಸಿ ಮುಂದೆ ಬಂದಿತು. ನಾವಿಬ್ಬರು ಒಂದು ಕ್ಷಣ ದಂಗುಗೀಡಾದೆವು. ಸ್ವಲ್ಪ ಹೊತ್ತಿನಲ್ಲಿ ದೀಪಾ ಸಾವರಿಸಿಕೊಂಡು ಆ ಮುದಿ ಮಹಿಳೆಯನ್ನು ಸಮಾಧಾನಿಸಿಕೊಂಡು ಬಾಗಿಲು ಮುಚ್ಚಿದ ಅಂಗಡಿ ಮುಂಗಟ್ಟೆಯ ಹತ್ತಿರಕ್ಕೆ ಕರೆದುಕೊಂಡು ಬಂದಳು. ಮುಂಗಟ್ಟೆ ಮೇಲೆ ಕುಳಿತು ನಿಮಿಷಗಳೇ ಉರುಳಿದ್ದರೂ ಆ ಮುದಿ ಹೆಂಗಸು ಜೋರಾಗಿ ಉಸಿರಾಡುತ್ತಲೆ ಇತ್ತು. ಆಕೆ ತಡಬಡಾಯಿಸುತ್ತಲೇ ಬಯ್ಯಲು ಬಾಯ್ತೆರೆದಳು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಥ್ಯಾಂಕ್ಯೂ ಫಾರ್ ಸ್ಮೋಕಿಂಗ್: ವಾಸುಕಿ ರಾಘವನ್ ಅಂಕಣ

ಜನರನ್ನ ನಗಿಸೋದು ಕಷ್ಟ. ಯಾವುದೋ ಒಂದಷ್ಟು ಜೋಕುಗಳನ್ನ ಹೇಳಿ ಒಂದೈದು ನಿಮಿಷ ನಗಿಸಿಬಿಡಬಹುದು. ಆದರೆ ಎರಡು ಮೂರು ಗಂಟೆಗಳ ಚಿತ್ರದುದ್ದಕ್ಕೂ ನಗಿಸುವುದು ಸುಲಭವಲ್ಲ. ಕಾಮಿಡಿ ಚಿತ್ರಗಳ ಒಂದು ವಿಭಾಗ ಸಟೈರ್ ಅಥವಾ ವಿಡಂಬನೆ. ಒಂದು ಗಂಭೀರವಾದ ವಿಷಯ ತೆಗೆದುಕೊಂಡು, ಎಲ್ಲೂ ಸಿಲ್ಲಿ ಅನ್ನಿಸದಂತೆ, ವ್ಯಂಗ್ಯವನ್ನು ಹದವಾಗಿ ಬೆರೆಸಿ, ಹುಳುಕುಗಳನ್ನು ಎತ್ತಿತೋರಿಸುವ ಕೆಲಸ ಇನ್ನೂ ಕಷ್ಟದ್ದು. ವಿಡಂಬನೆ ಅಂದಾಗ ಹೆಚ್ಚು ಕಂಡುಬರುವುದು ರಾಜಕೀಯ, ಮೂಢನಂಬಿಕೆ, ಸಾಮಾಜಿಕ ಸಮಸ್ಯೆಯ ವಿಷಯಗಳ ಬಗ್ಗೆ. “ಡಾರ್ಕ್ ಕಾಮಿಡಿ” (ಕನ್ನಡದಲ್ಲಿ ಇದಕ್ಕೆ ಸಮಾನವಾದ ಪದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಂಸ್ಕೃತಿ: ನೇಮಿನಾಥ ತಪಕೀರೆ

ಪುರಾತನ ಇತಿಹಾಸ, ಅನನ್ಯವಾದ ಭೌಗೋಳಿಕ ರಚನೆ, ವೈವಿಧ್ಯಮಯವಾದ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು, ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆಯ ರಾಷ್ಟ್ರಗಳ ಪ್ರಭಾವಗಳು ಇವೆಲ್ಲ ಒಟ್ಟುಗೂಡೆ ಭಾರತೀಯ ಸಂಸ್ಕೃತಿಯನ್ನು ಅನನ್ಯವಾಗಿಸಿವೆ. ಸಿಂಧು ಕಣಿವೆಯ ನಾಗರಿಕತೆ ಅಥವಾ ಅದಕ್ಕೂ ಪೂರ್ವದಲ್ಲಿಯೇ ಆರಂಭಗೊಂಡ ಭಾರತೀಯ ಭವ್ಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಶಾಧಾರಣ ವಿಕಸನವನ್ನು ಕಂಡಿತು. ಸದನಂತರದಲ್ಲಿ ಬೌದ್ಧ, ಜೈನಧರ್ಮಗಳ ಉನ್ನತಿ ಮತ್ತು ಅವನತಿ, ಮುಸ್ಲಿಂ ಆಳ್ವಿಕೆ, ಯುರೋಪಿಯನ್ನರ ವಸಾಹತು ಆಳ್ವಿಕೆ ಈ ಸಂಸ್ಕೃತಿಯ ವಿಕಸನಕ್ಕೆ ಇನ್ನಷ್ಟು ಇಂಬು ನೀಡಿತು. ವೈವಿಧ್ಯಮಯವಾಗಿಸಿತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 1): ನಾಗರತ್ನಾ ಗೋವಿಂದನ್ನವರ

           ಶಿವಮೊಗ್ಗ ಜಿಲ್ಲೆಯಲ್ಲಿರುವ ಅಗಸವಳ್ಳಿ ಇದೊಂದು ಪ್ರಕೃತಿಯ ಮಧ್ಯ ಇರುವ ಸುಂದರವಾದ ಹಳ್ಳಿ. ಈ ಹಳ್ಳಿಯಲ್ಲಿ ಮಧ್ಯಮ ಕುಟುಂಬದಲ್ಲಿ ಜನಿಸಿರುವ ಇಬ್ಬರು ಹುಡುಗಿಯರ ಕತೆ ಇದು. ಮೊಬೈಲ್ ಬಳಕೆ ಇನ್ನು ಆರಂಭವಾಗಿರದ ಸಮಯವದು.      ಹಾಳಾದ ಕರೆಂಟು ಯಾವಾಗಂದ್ರೆ ಆವಾಗ ಕೈಕೊಟ್ಟು ಬಿಡುತ್ತದೆ ಎಂದು ಅಡುಗೆ ಮನೆಯಲ್ಲಿದ್ದ ರಾಧಮ್ಮ ಗೊಣಗುತ್ತಿದ್ದಳು. ಹಾಲಿನಲ್ಲಿ ಕುಳಿತಿದ್ದ ಶಿವಾನಂದನಿಗೆ ಇದು ಕಿರಿಕಿರಿ ಎನಿಸಿತು. ಏನೇ ನಿನ್ನದು ಬೇಗ ದೀಪಾ ಹಚ್ಚಬಾರದೇನೆ ಎಂದು ಹೆಂಡತಿಗೆ ಹೇಳಿದ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವನ್ಯಾಪಘಾತಗಳು ಮತ್ತು ಪರಿಹಾರ: ಅಖಿಲೇಶ್ ಚಿಪ್ಪಳಿ ಅಂಕಣ

ಮೊನ್ನೆ ಕೇರಳದ ಮುಖ್ಯಮಂತ್ರಿ ಚಾಂಡಿ ಬಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಒಂದು ಮನವಿಯನ್ನು ಸಲ್ಲಿಸಿದರು. ಕರ್ನಾಟಕ-ಕೇರಳದ ಮಧ್ಯೆ ಸಂರಕ್ಷಿತ ವನ್ಯಪ್ರದೇಶದಲ್ಲಿ ಹಾದು ಹೋಗುವ ಹೈವೇಯಲ್ಲಿ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಬೇಕು ಎಂಬುದು ಮನವಿಯ ಸಾರಾಂಶ. ಕರ್ನಾಟಕದ ಮುಖ್ಯಮಂತ್ರಿಗಳು ಸಧ್ಯಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ. ಕರ್ನಾಟಕದ ಮುಖ್ಯಮಂತ್ರಿಗಳ ಈ ನಿಲುವು ಸಂತೋಷದ ವಿಚಾರವೇ ಸೈ. ಜನಸಂಖ್ಯೆ ಬೆಳೆದ ಹಾಗೆ ಪಟ್ಟಣಗಳು ನಗರಗಳಾಗುತ್ತವೆ. ಹಳ್ಳಿಗಳು ಪೇಟೆಯ ಸ್ವರೂಪ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಾನೊಂದು ಬಗೆದರೆ: ಮಮತಾ ಕೀಲಾರ್

ರಾಜೇಶನದು ಸುಂದರ ದಾಂಪತ್ಯ.ಮನ ಮೆಚಿದ್ದ ಮಡದಿ ಸ್ವಾತಿ. ಒಳ್ಳೆಯ ಉದ್ಯೋಗದಿಂದಾಗಿ ಕೈತುಂಬಾ ಸಂಬಳ, ಕಾರು ಬಂಗಲೆ ಎಲ್ಲ ಇದ್ದ ಶ್ರೀಮಂತ ಜೀವನ. ಕೊರತೆಯೊಂದೆ ಮದುವೆಯಾಗಿ ಹತ್ತು ವರುಷ ಕಳೆದರೂ ಅವರ ಹೆಸರು ಹೇಳೋ ವಂಶದ ಕುಡಿ ಮೂಡದಿರುವದು. ಸ್ವಾತಿಗಾದರೋ ಮಕ್ಕಳುಎಂದರೆ ಪಂಚಪ್ರಾಣ. ದಿನಾಲೂ ಸಾಯಂಕಾಲ ತಮ್ಮ ಮನೆಯಿದಿರು ಇರುವ ಉದ್ಯಾನದಲ್ಲಿ ಆಡುವ ಮಕ್ಕಳನ್ನು ಕಿಟಕಿಯಿಂದ ಗಂಟೆಗಟ್ಟಲೇ ನೋಡುತ್ತಾ ಮೈಮರೆಯುತ್ತಿದ್ದಳು. ಆದರೂ ರಾಜೇಶನ ಮನಸ್ಸಿಗೆ ಬೇಸರವಾಗಬಾರದೆಂದು ತನ್ನ ನೋವನ್ನು ಅಡಗಿಸಿ ಸತ್ತ ನಗುವಿಗೆ ಜೀವತುಂಬೊ ಪ್ರಯತ್ನ ಮಾಡುತ್ತಿದ್ದಳು. ಮಡದಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಘಾತ: ಬೆಳ್ಳಾಲ ಗೋಪಿನಾಥ ರಾವ್

  ತಲೆ ಎತ್ತಿ ನೋಡಿದರು ಮೇಜರ್ ಮತ್ತೊಮ್ಮೆ ಸರಿ ಪಡಿಸಿಕೊಳ್ಳುತ್ತಾ ಕನ್ನಡಕದೊಳಗಿಂದ ಮಿಲಿಂಡ್ ನನ್ನು.   ಏನ್ ಸಾರ್ ಅರ್ಜೆಂಟ್ ಆಗಿ ಬರ ಹೇಳಿದಿರಿ, ವಿಷಯ ಸೀರಿಯಸ್ ಎಂತ ಗೊತ್ತಾಯ್ತು.   ನಿನ್ನೆ ಒಂದು ಪೈಲ್ ಕಳಿಸಿದ್ದೆ ಸಿಕ್ಕಿತಾ,   "ಹೌದು ಮಂಜು ಕೊಟ್ಟ ಸಂಜೆ, ಅದನ್ನು ಓದಿದೆ, . ಅದು ನಿಮ್ಮ ಕಾಲೊನಿಯ ಮುನ್ನೂರು ಭವನಗಳ ಸಮುಚ್ಚಯ ( ಫ್ಲಾಟ್ ಗಳ) ವಾರ್ಷಿಕ ದುರಸ್ತಿ ಮತ್ತು ಸುಣ್ಣ ಬಣ್ಣಗಳ ಕಾರ್ಯಗಳ ಹತ್ತು ಲಕ್ಷದ ಕಾಂಟ್ರಾಕ್ಟ್ ಎಗ್ರಿಮೆಂಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ