ಹಳೇ ಬಟ್ಟೆ ಮತ್ತು ಹೊಸಾ ಪರ್ಸು: ಅನಿತಾ ನರೇಶ್ ಮಂಚಿ

ಮಳೆಗಾಲ ಬಂತೆಂದರೆ ಹಳ್ಳಿಯವರಾದ ನಮಗೆ ಸ್ವಲ್ಪ ಬಿಡುವು ಸಿಕ್ಕಿದ ಹಾಗೆ. ಬೇಸಿಗೆಯಿಡೀ ತೋಟಕ್ಕೆ ನೀರು ಹನಿಸುವ ಕೆಲಸ, ಆ ನೀರಿನ ಪೈಪುಗಳು ತುಂಡಾದರೆ ಜೋಡಿಸುವ ಕೆಲಸ, ಅದಕ್ಕೆ ಬೇಕಾದ ಸಲಕರಣೆಗಳು ಇಲ್ಲದಿದ್ದರೆ ಪೇಟೆಗೆ ಓಡುವ ಕೆಲಸ ಹೀಗೆ ಒಂದರ ಹಿಂದೊಂದು ಅಂತ ಪುರುಸೊತ್ತೇ ಇರೋಲ್ಲ, ಜಿಟಿ ಪಿಟಿ ಮಳೆ ಬೀಳಲು ಸುರುವಾಯ್ತೆಂದರೆ ಈ ಕೆಲಸಗಳಿಗೆಲ್ಲ ಮುಕ್ತಿ ಸಿಕ್ಕಿದಂತಾಗುತ್ತದೆ. ಮೊದಲಿಗೆ ಸುಮ್ಮನೇ ಕುಳಿತು ದಿನ ದೂಡುವುದರಲ್ಲೇ ಸುಖ ಅನುಭವಿಸಿದರೂ ಮತ್ತೆ ನಿಧಾನಕ್ಕೆ ಹೊತ್ತು ಕಳೆಯುವುದು ಹೇಗಪ್ಪಾ ಅನ್ನುವ ಚಿಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದಲಾವಣೆ-ಬಟ್ಟಂಗಿಗಳು-ಸ್ವಂತಿಕೆ: ರಾಘವೇಂದ್ರ ತೆಕ್ಕಾರ್

ನಮ್ಮೊಂದಿಗೆ ಸದಾ ಇದ್ದು ತುಸು ಹೆಚ್ಚಾಗೆ ನಮ್ಮನ್ನು ಹೊಗಳುತ್ತಿರುವವರನ್ನು ತುಸು ದೂರವೆ ಇಡೋಣ. ಸುಮ್ಮನೆ ಸುಮ್ಮನೆ ಹಲುಬುವವರನ್ನು ನಿರ್ಲಕ್ಷಿಸೋಣ. ಅನುಕೂಲಕ್ಕೆ ತಕ್ಕಂತೆ ವ್ಯಕ್ತಿತ್ವವನ್ನ ಬದಲಾಯಿಸಿಕೊಳ್ಳುವ ಒಂದು ವರ್ಗದ ಜನರಿವರು. ಯಾವತ್ತು ಇಂಥವರನ್ನು ನಾವು ನಿರ್ಲಕ್ಷಿಸಿಕೊಂಡು ಮುಂದುವರಿಯುತ್ತೇವೆಯೊ ಅದು ನಮ್ಮಲ್ಲಿನ ಕ್ರೀಯಾಶೀಲತೆಯನ್ನು ಸಾಣೆ ಹಿಡಿಯುತ್ತಲೆ ನಾವು ಮುನ್ನಡೆಯುತಿದ್ದೇವೆ ಎಂಬುದರ ಅರ್ಥ. ಮನುಷ್ಯ ಹೊಸ ಸವಾಲುಗಳನ್ನು ಎದುರಿಸುತ್ತ ಕೆಲವೊಮ್ಮೆ ಗೊತ್ತಿದ್ದು ಇನ್ನೂ ಕೆಲವೊಮ್ಮೆ ತನಗೆ ಗೊತ್ತಿಲ್ಲದಂತೆ ಕೂಡ ತನ್ನೊಳಗೆ ಅಪ್ ಡೇಟ್ ಆಗುತ್ತಾನೆ ಇರುತ್ತಾನೆ.ಹಾಗೆ ನೋಡಿದಲ್ಲಿ ಹೊಸ ಬದಲಾವಣೆಗೆ ತೆರದುಕೊಳ್ಳದವರ್ಯಾರು?ಎಲ್ಲೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಿಕಾಡ ಎಂಬ ಸಂಗೀತ: ಅಖಿಲೇಶ್ ಚಿಪ್ಪಳಿ

ಜೂನ್ ತಿಂಗಳಲ್ಲಿ ಮುಂಗಾರು ಪ್ರಾರಂಭವಾಗದೆ, ಈ ವರುಷದ ಗಿಡ ನೆಡುವ ಕಾರ್ಯಕ್ರಮ ಮುಂದಕ್ಕೆ ಹೋಯಿತು. ಅಂತೂ ಜುಲೈ ತಿಂಗಳಲ್ಲಿ ಮಳೆಗಾಲ ಶುರುವಾಯಿತೇನೊ ಎನಿಸಿ, ಗಿಡ ನೆಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಮಳೆ ಬಂದು ಇಳೆಯೇನೋ ತಂಪಾಯಿತು. ಗಿಡ ನೆಟ್ಟ ಮೇಲೆ ಬಿರು ಬೇಸಿಗೆ ಶುರುವಾಯಿತು. ನೆಟ್ಟ ಗಿಡಗಳು ಇನ್ನೆರೆಡು ದಿನ ಮಳೆ ಬಾರದಿದ್ದಲ್ಲಿ ಸತ್ತೇ ಹೋಗುವ ಸಂದರ್ಭ. ಮನುಷ್ಯರ ಕತೆ ಹೀಗಾದರೆ, ಮಳೆಗಾಲದಲ್ಲೇ ಜನ್ಮ ತಳೆಯುವ ಅದೆಷ್ಟೋ ಕೀಟಗಳು ಸಂಕಷ್ಟಕ್ಕೆ ಸಿಲುಕಿದ್ದವೋ. ನಮ್ಮಲ್ಲಿ ಮಳೆಗಾಲದಲ್ಲಿ ಸಾಮಾನ್ಯವಾಗಿ ಕಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ರವಿಶಂಕರ್.ಎನ್. ಕೆ., ಬಿದಲೋಟಿ ರಂಗನಾಥ್, ಸಿಪಿಲೆ ನಂದಿನಿ

ಬದುಕುವೆನು ನಾನು  ಬರೆಯುವ ಮೊದಲೇ ಮರೆತು ಹೋಗಿದೆ  ನನ್ನಿಷ್ಟದ ಸಾಲು , ಹೇಗೆ ಹೇಳಲಿ …? ಏನು ಮಾಡಲಿ…? ಜಿಗಿದಾಡುವ ಮನದ ಮೂಲೆಯಲ್ಲಿ ಜೋಕಾಲಿಯಂತೆ ಜೀಕುವಾಗ ನೀನು  ಸುಡುವ ಪ್ರೇಮದ ಒಡಲೊಳಗೆ ಕಾಡುವ ನಿನ್ನದೇ ನೆನಪಿನ ಜಗದೊಳಗೆ ತುಸು ಯಾಮಾರಿದಾಗ ಹೇಗೆ ಹೇಳಲಿ …? ಏನು ಮಾಡಲಿ …? ಜಗದ ಕೊನೆಯ ತುದಿಯ ಬಳಿ ನಿಂತು  ಕೂಗುವಾಗ ಸಾವಿರ ಸಲ ಹೇಳ ಹೆಸರಿಲ್ಲದಂತೆ ಮರೆತು ಹೋಗಿ ಬಿಡು  ಮತ್ತೆ ಬಾರದಂತೆ ನೀನು, ಬದುಕಬಹುದು ನಾನು. ನೀನಿಲ್ಲದೆ…! ಏನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುಂದ್ಲಳ್ಳಿ ಕೆರೆ: ಪ್ರಶಸ್ತಿ

ಒಂದಾನೊಂದು ಕಾಲದಲ್ಲಿ ಬೆಂಗಳೂರನ್ನೋದು ಉದ್ಯಾನನಗರಿ ಅನ್ನುವಂತೆಯೇ ಕೆರೆಗಳ ನಗರವೂ ಆಗಿತ್ತಂತೆ. ಈಗ ಕೆರೆಯಿದ್ದೆಡೆಯೆಲ್ಲಾ ಅಪಾರ್ಟುಮೆಂಟುಗಳೋ, ಸ್ಟೇಡಿಯಮ್ಮುಗಳೋ ತಲೆಯೆತ್ತಿ ಬೇಸಿಗೆ ಬರೋದ್ರೊಳಗೇ ನೀರಿಗೆ ಹಾಹಾಕಾರ. ಸಾವಿರ ಅಡಿ ಕೊರೆದ್ರೂ ಬೋರಲ್ಲಿ ನೀರಿಲ್ಲ ಅನ್ನೋ ಸಮಸ್ಯೆ ಒಂದೆಡೆಯಾದ್ರೆ ಇರೋ ಕೆರೆಗಳ ನೀರಿಗೂ ವಿಪರೀತ ಪ್ರಮಾಣದ ರಾಸಾಯನಿಕಗಳ ಸುರುವಿ ಅದನ್ನೂ ಹಾಲಾಹಲವಾಗಿಸುತ್ತಿರುವ ಸಮಸ್ಯೆ ಇನ್ನೊಂದೆಡೆ. ವೈಟ್ ಫೀಲ್ಡೆಂಬ ಏರಿಯಾವನ್ನೇ ತಗೊಂಡ್ರೆ ಸುತ್ತಲ ಏಳೆಂಟು ಕೆರೆಗಳಿದ್ದಿದ್ದನ್ನ ಕಾಣಬಹುದು(ಚಿತ್ರ:lakes around whitefield).ಇದ್ದಿದ್ದು ಅಂತ್ಯಾಕೇ ಹೇಳ್ತಿದೀನಾ ? ಇನ್ನೂ ಇಲ್ವಾ ಆ ಕೆರೆಗಳು ಅಂತ ಅಂದ್ರಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಸ್ಪತ್ರೆಯಲ್ಲಿ ಹೀಗೊಂದು ಮಾತುಕತೆ…: ಎಚ್.ಕೆ.ಶರತ್

ಅದು ಆಸ್ಪತ್ರೆಯ ಜನರಲ್ ವಾರ್ಡು. ನಾಲ್ವರು ನಾಲ್ಕು ಪ್ರತ್ಯೇಕ ಹಾಸಿಗೆಗಳ ಮೇಲೆ ಮಲಗಿಕೊಂಡೇ ಮಾತಿಗಿಳಿದಿದ್ದಾರೆ. ಡಾಕ್ಟರ್ ಒಬ್ಬನ ಹೊಟ್ಟೆ ಭಾಗದಲ್ಲಿ ಅರ್ಧ ಅಡಿ ಉದ್ದ ಕೊಯ್ದು ಆಪರೇಷನ್ ಮಾಡಿದ್ದಾರೆ. ಮತ್ತೊಬ್ಬ ಬೈಕ್ ಮೇಲಿಂದ ಬಿದ್ದು ಬೆನ್ನಿನ ಮೂಳೆಗೆ ಪೆಟ್ಟು ಮಾಡಿಕೊಂಡಿದ್ದಾನೆ. ಇನ್ನೊಬ್ಬ ಬೇರೊಬ್ಬರ ತಪ್ಪಿಗೆ ತಾನು ನೋವು ಅನುಭವಿಸುತ್ತಿದ್ದಾನೆ. ರಸ್ತೆ ಬದಿಯಲ್ಲಿ ಸುಮ್ಮನೆ ನಿಂತಿದ್ದ ಅವನಿಗೆ ಬೈಕೊಂದು ಬಂದು ಗುದ್ದಿದ ಪರಿಣಾಮ ಹಣೆ ಹಾಗೂ ಕಾಲಿಗೆ ಪೆಟ್ಟಾಗಿದೆ. ಕಾಲಿನ ಚರ್ಮ ಕಿತ್ತು ಹೋಗಿದೆ. ತೊಡೆಯ ಚರ್ಮ ಕಿತ್ತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಮೊಳೆ ಒಂದು ಮೊಳೆ ಮತ್ತು ಒಬ್ಬ ಮನುಷ್ಯನ ನಡುವೆ ನಡೆದ ಸಂಭಾಷಣೆ ಇಂತಿದೆ: ಮೊಳೆ: “ಅನೇಕ ವರ್ಷಗಳಿಂದ ಈ ಫಲಕಕ್ಕೆ ಅಂಟಿಕೊಂಡಿರುವ ನಾನು ಭವಿಷ್ಯದಲ್ಲಿ ನನಗೆ ಏನಾಗಬಹುದೆಂಬುದರ ಕುರಿತು ಅನೇಕ ಸಲ ಕುತೂಹಲದಿಂದ ಆಲೋಚಿಸಿದ್ದೇನೆ.” ಮನುಷ್ಯ: “ನೀನು ಈಗ ಇರುವ ಸನ್ನಿವೇಶದಲ್ಲಿ ಅನೇಕ ಸಾಧ್ಯತೆಗಳು ಹುದುಗಿವೆ. ಯಾರಾದರು ಚಿಮುಟದಿಂದ ನಿನ್ನನ್ನು ಎಳೆದು ಹಾಕಬಹುದು, ನೀನಿರುವ ಫಲಕ ಸುಟ್ಟು ಹೋಗಬಹುದು, ನೀನಿರುವ ಫಲಕವನ್ನು ಹುಳು ತಿನ್ನಬಹುದು – ಹೀಗೆ ಅನೇಕ ಸಾಧ್ಯತೆಗಳಿವೆ. ಮೊಳೆ: “ಇಂಥ ಮೂರ್ಖ ಪ್ರಶ್ನೆಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉಪವಾಸ ನಿರತ ಕಾಲ ರಂಜಾನ್: ಬಂದೇಸಾಬ. ಮೇಗೇರಿ ರಾಮಾಪುರ

ರಂಜಾನ್ ಮುಸ್ಲಿಮರ ಪಾಲಿನ ವಸಂತ ಮಾಸವಾಗಿದೆ. ರಂಜಾನ್ ಮಾಸವು ಪುಣ್ಯಗಳನ್ನು ಬಾಚಿಕೊಳ್ಳುವ ತಿಂಗಳಾಗಿದೆ. ಜಗತ್ತಿನ ಎಲ್ಲ ಮುಸ್ಲಿಮರು ಭಯ, ಭಕ್ತಿಯಿಂದ ಆಚರಿಸುವ ಹಬ್ಬ ಇದಾಗಿದೆ. ಈ ತಿಂಗಳಲ್ಲಿ ಮುಸ್ಲಿಮ್ ಬಾಂಧವರೆಲ್ಲ ಪುಳಕಿತಗೊಳ್ಳುತ್ತಾರೆ. ಏಕೆಂದರೆ ಇದು ಪವಿತ್ರ ಕುರ್‍ಆನ್ ಅವತರಿಸಿದ ಮಾಸ. ಒಳ್ಳೆಯ ಕೆಲಸಗಳನ್ನು ಮಾಡುತ್ತ ನಮಾಜ್, ದಾನ-ಧರ್ಮ(ಜಕಾತ್) ದಂತಹ ಪುಣ್ಯ ಕರ್ಮಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ವಿಶೇಷವಾಗಿ ರಂಜಾನ್ ತಿಂಗಳಲ್ಲೇ ಮಹಮ್ಮದ್(ಸ) ಪೈಗಂಬರರು ಈ ಮಾಸದಲ್ಲಿ ಬಲು ಉದಾರಿಗಳಾಗಿದ್ದರು ಎಂದು ಇತಿಹಾಸದಿಂದ ತಿಳಿದು ಬರುತ್ತದೆ. ಹಗಲು ರಾತ್ರಿಯೆಲ್ಲಾ ಸೃಷ್ಠಿಕರ್ತನ ಆರಾಧನೆಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಮಾಜವಾದಿ ಕ್ಯೂಬಾದ ವೈದ್ಯಕೀಯ ಕ್ರಾಂತಿ; ಜಗತ್ತಿಗೇ ಮಾದರಿ: ಜೈಕುಮಾರ್ ಹೆಚ್.ಎಸ್.

ಬೆಂಗಳೂರಿನಷ್ಟು ಜನಸಂಖ್ಯೆ ಹೊಂದಿರುವ ಪುಟ್ಟ ದೇಶ ಕ್ಯೂಬಾ ವೈದ್ಯಕೀಯ ರಂಗದಲ್ಲಿ ಮಾಡುತ್ತಿರುವ ಹೊಸ ಆವಿಷ್ಕಾರಗಳು ಮತ್ತು ಅದರ ವಿಶಿಷ್ಟ ಆರೋಗ್ಯ ವ್ಯವಸ್ಥೆಯ ಕಾರ್ಯಕ್ಷಮತೆ ಪ್ರತಿದಿನ ಸುದ್ದಿಯಲ್ಲಿವೆ. ಅಲ್ಲಿಯ ಜನರ ಜೀವಿತಾವಧಿ ಸುಮಾರು 78 ವರ್ಷ ಮತ್ತು ಅಲ್ಲಿನ ಹಲವು ಆರೋಗ್ಯ ಸೂಚ್ಯಂಕಗಳು ಅಭಿವೃದ್ಧಿ ಹೊಂದಿದ ದೇಶಗಳ ಮಟ್ಟದಲ್ಲಿದೆ. ಭೂಕಂಪ, ಚಂಡಮಾರುತ, ಇತ್ಯಾದಿ ವಿಪತ್ತಿನ ಕಾಲದಲ್ಲಿಯಂತೂ ವಿಶ್ವದಾದ್ಯಂತ ಕ್ಯೂಬಾದ ವೈದ್ಯರು ತಮ್ಮ ಅನುಪಮ ಸೇವೆಯಿಂದ ಮೇಲ್ಪಂಕ್ತಿಯಲ್ಲಿದ್ದಾರೆ. ಮಿಷನ್ ಐ ಹೆಸರಿನ ಕಾರ್ಯಕ್ರಮದಡಿ ಇತರೆ ದೇಶಗಳಲ್ಲಿ ಸುಮಾರು 35 ಲಕ್ಷ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೋಮರಸಕ್ಕೆ ರಾಜಮಾರ್ಗ- ೨: ಆದರ್ಶ ಸದಾನ೦ದ ಅರ್ಕಸಾಲಿ

  ಸರ್ಕಾರಿ ಮದ್ಯದಂಗಡಿಯಿ೦ದ ಕೈಯಲ್ಲಿ ಬಾಟಲಿ ಹಿಡಿದುಕೊಂಡು ಹೊರಬಿದ್ದಾಗ ಮಳೆರಾಯ ಕರುಣೆತೋರುತ್ತಾ ತನ್ನ ವಿರಾಟರೂಪದಿ೦ದ ಸೌಮ್ಯರೂಪಧಾರಿಯಾಗಿದ್ದ. ಕೆಲವರು ತಮ್ಮ ಬಾಟಲಿಗಳನ್ನು ರದ್ದಿಪೇಪರನಲ್ಲಿ ಸುತ್ತಿದ್ದರೆ, ಕೆಲವರು ತಮ್ಮ ಟವೇಲ್ ನಲ್ಲಿ ಬಚ್ಚಿಟ್ಟಿದ್ದರು, ಇವರಡೂ ದೊರಕದ ಹಲವರು, ತ೦ತಮ್ಮ ಲು೦ಗಿಗಳಲ್ಲಿ ಆಶ್ರಯ ಕೊಟ್ಟು ಸ್ಮಗ್ಲರ್ ಗಳ ತರ ಹೊರಹೋಗುತ್ತಿದ್ದರು. ಸುಮ್ಮನೆ ಕೈಯಲ್ಲಿ ಹಿಡಿದುಕೊ೦ಡು ಹೋಗಿದ್ದರೆ ಅಷ್ಟೇನೂ ಸ೦ಶಯ ಬರುತ್ತಿರಲಿಲ್ಲವೇನೋ , ಆದರೆ ಬಾಟಲಿಗಳಿಗೆ ನೋಡುಗರ ದೃಷ್ಟಿ ತಾಕಬಾರೆನ್ನುವ ನೈತಿಕ ಹೊಣೆಗಾರಿಕೆಯೋ ಇಲ್ಲಾ ಸಮಾಜದಲ್ಲಿ ತಮ್ಮ ಇಮೇಜ್ ಗೆ ಮಡಿವಂತಿಕೆ ಮನಸ್ಥಿತಿಯಿರುವವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಾಸ್ತವಕ್ಕೆ ಮುಖಮಾಡದ ಸಾವುಗಳು: ರಾಘವೇಂದ್ರ ತೆಕ್ಕಾರ್

ಕಳೆದೆರಡು ವಾರದ ಎರಡು ದಿನಗಳಲ್ಲಿ ಎರಡು ಡೆತ್ ನೋಟ್ಗಳನ್ನು ನೋಡಿದೆ of course ಸಾವನ್ನು ಕೂಡ. ವಯಸ್ಸು ಆಜುಬಾಜು 24 ರಿಂದ 28ರ ಮಂದಿ. ಮಹಿಳೆ ಒಳಗೊಂಡಂತೆ ಮತ್ತೋರ್ವ. ಇಬ್ಬರು ವಿವಾಹಿತರು. 2ರಿಂದ 3 ವರುಷದ ದಾಂಪತ್ಯ ಜೀವನ ಇವರುಗಳದ್ದು. ನಾವೆಲ್ಲರೂ ಪ್ರೇಮಿಗಳು ಸಂಗಾತಿಗಳಾಗಲು ಸಾದ್ಯವಿಲ್ಲ ಮನೆಯವರು ಒಪ್ಪಲ್ಲ ಜಾತಿ ಸಮಸ್ಯೆ ಇತ್ಯಾದಿ ಇತ್ಯಾದಿ ಗಳಿಂದಾಗಿ ಆತ್ಮಹತ್ಯೆಗೆ ಶರಣಾಗುವದನ್ನು ಕೇಳಿಯೆ ಇರುತ್ತೇವೆ. ಆದರೆ ಇವಕ್ಕೆ ಹೊರತಾದದ್ದು ಮೇಲೆ ತಿಳಿಸಿದ ಎರಡು ಸಾವುಗಳು.ಕಾರಣ ಕೌಟುಂಬಿಕ ಕಲಹ, ಜೀವನದಲ್ಲಿ ಜಿಗುಪ್ಸೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನು ಮತ್ತು ಅವನು……: ಚೈತ್ರಾ ಎಸ್.ಪಿ.

ಬದುಕಿನಲ್ಲಿ ಎಲ್ಲವನ್ನು ಸೀರಿಯಸ್ ಆಗಿ ತಗೋಳೋ ನಾನು ಕೆಲವೊಂದು ಸೀರಿಯಸ್ ವಿಚಾರಗಳನ್ನ ತಮಾಷೆಯಾಗಿ ತಗೊಂಡು ನನ್ನನ್ನ ಅದ್ಯಾವುದೋ ಲೋಕಕ್ಕೆ ಲಾಕ್ ಮಾಡ್ಕೊಂಡಿದ್ದೀನಿ ಅನ್ನಿಸ್ತಾ ಇದೆ. ಬೇಡವೆಂದರೂ ಮತ್ತೆ ಹಚ್ಚಿಕೊಂಡೆ. ಪ್ರೀತಿಯೆಂಬ ಮಾಯೆಯೊ, ಸಂತೋಷವೋ ಅಲ್ಲ ಕೊರಗೋ !! ಯಾವುದೋ ಒಂದು ಭಾವಕ್ಕೆ ಮಣಿದೆ. ಪ್ರೀತಿಸಿದೆ, ಮುದ್ದಿಸಿದೆ, ಗೋಳಾಡಿದೆ, ಕಣ್ಣೀರಾದೆ.  ನನ್ನೆಲ್ಲ ಹುಚ್ಚಾಟಗಳನ್ನು ತಿದ್ದಿ ಬುದ್ದಿ ಹೇಳಿ ಒಂದು ರೂಪ ಕೊಟ್ಟು, ಪ್ರೀತಿಯ ಧಾರೆಯೆರೆದು ನನ್ನನ್ನು ಧಾರೆಯೆರೆಸಿಕೊಳ್ಳಲಾರೆನೆಂಬ ದುಃಖದ ಕೂಪಕ್ಕೆ ತನ್ನನ್ನು ತಾನೇ ತಳ್ಳಿಕೊಂಡ ಆ ಜೀವಕ್ಕೆ ನಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನೋದಿದ ಹೊತ್ತುಗೆ ಪೆರುವಿನ ಪವಿತ್ರ ಕಣಿವೆಯಲ್ಲಿ: ಪ್ರಶಸ್ತಿ

ಬೇಸಿಗೆರಜೆ ಮತ್ತು ಚಳಿಗಾಲದ ರಜೆ ಬಂತು ಅಂದ್ರೆ ಎಲ್ಲಿಲ್ಲದ ಖುಷಿ ನಂಗೆ. ಅಜ್ಜಿ ಮನೆ, ದೊಡ್ಡಪ್ಪನ ಮನೆ ಅಂತ ಒಂದು ಕಡೆ ಇಂದ ಹೊರಟ್ರೆ ಅಲ್ಲಿಂದ ಹತ್ತಿರ ಇರ್ತಿದ್ದ ಮತ್ತೊಂದು ಮಾವನ ಮನೆ, ಅಲ್ಲಿಂದ ಮತ್ತೊಂದು ಚಿಕ್ಕಪ್ಪನ ಮನೆ ಅಂತ ಸುಮಾರಷ್ಟು ಕಡೆ ತಿರುಗಿ ರಜಾ ಮುಗಿಯೋ ಹೊತ್ತಿಗೆ ಮನೆ ತಲುಪುತ್ತಿದ್ದೆ. ದಿನಾ ಮನೆಗೆ ಫೋನ್ ಮಾಡಿ ಎಲ್ಲಿದ್ದೀನಿ ಅಂತ ಹೇಳ್ಬೋಕು ಅನ್ನೋದನ್ನ ಬಿಟ್ರೆ ಬೇರ್ಯಾವ ನಿರ್ಬಂಧಗಳೂ ಇಲ್ಲದ ಸ್ವಚ್ಛಂದ ಹಕ್ಕಿಯ ಭಾವವಿರುತ್ತಿದ್ದ ದಿನಗಳವು. ಮನೆ ಬಿಟ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಕು.ಸ.ಮಧುಸೂದನ್, ಶ್ರೀಮಂತ್.ಎಮ್.ವೈ, ವೆಂಕಟೇಶ ನಾಯಕ್, ಮಂಗಳೂರು

ಇವತ್ತಿನ ಕವಿತೆಗಳು. 1. ಇವತ್ತಿನ ರಾತ್ರಿ ಮುಗಿದು ಹೋಗೋದ್ರೊಳಗೆ ಚುಕ್ಕಿಗಳೆಲ್ಲ ಲೆಕ್ಕ ಚುಕ್ತಾ ಮಾಡಿ ಪುಸ್ತಕ ಮುಚ್ಚೋದ್ರೊಳಗೆ ಚಂದ್ರ ಪಾಳಿ ಮುಗಿಸಿ  ಖೋಲಿ ಸೇರೋದ್ರೊಳಗೆ ಬಿಲ ಬಿಟ್ಟ ಹಾವು ಇಲಿ ಬಲಿ ನುಂಗಿ ನೊಣೆದು ತೇಗೋದ್ರೊಳಗೆ ಗಿಡುಗನಂತವನು ಗಿಣಿಯಂತೋಳ ಜೊತೆ ಸುರತ ನಡೆಸಿ ಸ್ಖಲಿಸಿ ಬಿಡೋದ್ರೊಳಗೆ ಸೂರ್ಯ ಅನ್ನೋ ಮೂಧೇವಿ ಬೆಳೆಗ್ಗೆ ಬಂದು  ಬ್ಯಾಟರಿ ಹಾಕಿ ಬೆಳಕ ಹರಿಸೋದ್ರೊಳಗೆ ತಿಕ ಸುಟ್ಟ ಬೆಕ್ಕು ಮುಂಜಾನೆ ಮಿಯಾಂವ್ ಅಂತ ಹಿಮ್ಮಡಿ ನೆಕ್ಕೋದ್ರೊಳಗೆ ಹೀಗೇ ಸುಮ್ಮ ಸುಮ್ಮನೇ ಸತ್ತು ಹೋಗಿಬಿಡಬೇಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡು (ವ) ದಿಟ್ಟೆಯರು!!: ಅಖಿಲೇಶ್ ಚಿಪ್ಪಳಿ

ಲೋಕಾಯುಕ್ತ ಕಚೇರಿಯಲ್ಲೇ ಲಂಚಾವತಾರ. ರೈತರ ಸರಣಿ ಆತ್ಮಹತ್ಯೆಗಳು. ರೈತನ ಪಾಲಿಗೆ ಕಬ್ಬಿನ ಬೆಳೆ ಕಬ್ಬಿಣದ ಶೂಲವಾಗಿ ಪರಿಣಮಿಸಿದ್ದು, ತನ್ಮಧ್ಯೆ ಮಳೆ ಕೊರತೆಯಿಂದ ಉಂಟಾಗಬಹುದಾದ ಬರಗಾಲದ ಛಾಯೆ. ಕ್ರಿಕೇಟ್ ಆಟಕ್ಕೆ ಸಂಬಂಧಿಸಿದಂತೆ ಲಲಿತ್ ಮೋದಿಯ ವೀಸಾಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಮತ್ತು ರಾಜಾಸ್ಥಾನದ ಮಹಿಳಾ ಮುಖ್ಯಮಂತ್ರಿಯ ಮೇಲೆ ಬಂದ ಗಂಭೀರ ಆರೋಪ. ವ್ಯಾಪಂ ಹಗರಣದ ಸರಣಿ ಸಾವುಗಳು. ಒಟ್ಟಾರೆ ಋಣಾತ್ಮಕ ಅಂಶಗಳೇ ಹೆಚ್ಚು. ಈ ಮಧ್ಯದಲ್ಲೂ ಅನೇಕ ಮಹಿಳೆಯರು ಭೂಆರೋಗ್ಯದ ಕುರಿತು ಚಿಂತಿಸಿ, ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಋಣಮುಕ್ತವಲ್ಲದ ಬದುಕು ನಮ್ಮದು: ಗಾಯತ್ರಿ ಬಡಿಗೇರ

                  ತಂದೆ ತಾಯಿ ನಾವ ಹುಟ್ಟಿದಮ್ಯಾಗ ತುಸು ಖರ್ಚು ಮಾಡಿ ಹೆಸರಿಟ್ಟಿರಂಗಿಲ್ರಿ. ಹುಟ್ಟಿದ ಜಾತಕ ತಗಸಿ ಅದು ಇದು ಅಂತಾ ಪಾಪಾ ಬಾಳ ತಿರಗ್ಯಾಡಿ ಬಂಗಾರದಂಗ ಹೆಸರ ಇಟ್ಟಿರತಾರ.. ನಾವ ದೀಡ ಪಂಡಿತ್ರ ಅದೀವಿ ಅಲ್ಲ. ‘ಅಂದ ಅನಸ್ಕೊದ ಚಂದಗೇಡಿಂತ’ ಹಂಗ ಎತ್ತಾಗರ ಪತ್ತಾಗರ ಅರ್ಧಂಬರ್ಧಾ ಹೆಸರ ಕರಕೋತ ನಾಯಿ, ನರಿ, ಹಂದಿ, ಮಗಾ, ಮಚ್ಚಾ, ಮಾಮಾ, ಮಾಮಿ ಅದು ಇದು ಸುಡಾಗಾಡ ಸಂತಿ ವಟ್ಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕಪ್ಪೆಗಳು ಕಪ್ಪೆಗಳ ಗುಂಪೊಂದು ಕಾಡಿನ ಮೂಲಕ ಎಲ್ಲಿಗೋ ಪಯಣಿಸುತ್ತಿದ್ದಾಗ ಅವುಗಳ ಪೈಕಿ ಎರಡು ಕಪ್ಪೆಗಳು ಒಂದು ಆಳವಾದ ಗುಂಡಿಯೊಳಕ್ಕೆ ಬಿದ್ದವು. ಉಳಿದ ಕಪ್ಪೆಗಳು ಗುಂಡಿಯ ಮೇಲೆ ಸುತ್ತಲೂ ನಿಂತು ಗುಂಡಿ ಎಷ್ಟು ಆಳವಿದೆ ಎಂಬುದನ್ನು ಅಂದಾಜಿಸಿದವು. ತದನಂತರ ಗುಂಡಿಯೊಳಕ್ಕೆ ಬಿದ್ದ ದುರದೃಷ್ಟವಂತ ಕಪ್ಪೆಗಳಿಗೆ ಅವು ಎಂದೆಂದಿಗೂ ಹೊರಬರಲು ಸಾಧ್ಯವಾಗುವುದಿಲ್ಲ ಎಂಬುದಾಗಿ ಹೇಳಿದವು. ಆ ಎರಡು ಕಪ್ಪೆಗಳು ಈ ಹೇಳಿಕೆಯನ್ನು ನಿರ್ಲಕ್ಷಿಸಿ ಗುಂಡಿಯಿಂದ ಹೊರಕ್ಕೆ ಹಾರಲು ಪ್ರಯತ್ನಿಸತೊಡಗಿದವು.   ಆ ಗುಂಡಿಯೊಳಗೇ ಸಾಯುವುದು ಖಚಿತವಾದ್ದರಿಂದ ವೃಥಾ ಶ್ರಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಸರಿಲ್ಲ: ಸಖ್ಯಮೇಧ (ವಿಶ್ವನಾಥ ಗಾಂವ್ಕರ್)

ಸಾಲು ಅಡಿಕೆ ಮರಗಳು ಮುರಿದು ಬೀಳುತ್ತವೇನೋ ಎಂಬಂತೆ ತೂಗುತ್ತಿದ್ದವು  ಬೀಸುಗಾಳಿಗೆ… ಹುಚ್ಚುಗಾಳಿಯು ತರಗೆಲೆಗಳನ್ನು ಧೂಳನ್ನು ಹೊತ್ತು ತರುತ್ತಿತ್ತು… ತೋಟದಾಚೆ ಬಹುದೂರ ಕಾಣುವ ಬೆಟ್ಟದಲ್ಲಿ ಮಳೆ ಸುರಿಯುವುದು ಅಸ್ಪಷ್ಟವಾಗಿ ಕಾಣುತ್ತಿತ್ತು… ಇನ್ನೇನು ಇಲ್ಲೂ ಮಳೆಯಾಗುತ್ತದೆ.. ತಂಪು ಗಾಳಿ ಬೀಸತೊಡಗಿದೆ.. ಮೋಡ ಕವಿದ ಮಲೆನಾಡ ಕತ್ತಲು… ಅವಳೂ ಮಳೆಗಾಗಿಯೇ ಕಾದಿದ್ದಾಳೆ… ಮಳೆಗಾಗಿ ಎನ್ನುವುದಕ್ಕಿಂತ ಮಳೆಯೊಡನೇ ಒತ್ತಿ ಬರುವ ಅವನ ನೆನಪುಗಳಿಗಾಗಿ…ಕಳೆದ ಮಳೆಗಾಲದಲ್ಲಿ ಅವನ ಜೊತೆಯಾಗಿ ಸವಿದ ಮಲೆನಾಡ ಮಳೆಯ ಸವಿನೆನಪು ಮಾತ್ರ ಅವಳ ಪಾಲಿಗೆ ಉಳಿದಿರುವುದು.. ಅವಳ ಹಾಗೂ ಅವನ ಅಭಿರುಚಿಗಳಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ