ಮೂವರ ಕವಿತೆಗಳು: ಮಂಜುನಾಥ್ ಪಿ., ವಿಶ್ವನಾಥ್ ಎಂ., ಅನುಪಮಾ ಎಸ್. ಗೌಡ.

          ಹರಿಯುವ ನದಿ ಅದೆಲ್ಲೋ ಉಗಮ ಮೈದುಂಬಿಕೊಳ್ಳುತ್ತ  ಕೈ-ಕಾಲು ಮೂಡಿಸಿಕೊಳ್ಳುತ್ತ  ಸಾಗುವ ದಾರಿಯನ್ನು ಮಾಡಿಕೊಳ್ಳುತ್ತ ಸುಗಮ  ಹಠಕ್ಕೆ ಬಿದ್ದು ಅನುಸಂಧಾನವೊಂದನ್ನು ಉಳಿಸಿಕೊಳ್ಳುವಂತೆ….   ಸವೆಸುವ ದಾರಿ ಶಿಶುವಿನ ಹಾಡೆ? ಸಹಿಸಬೇಕು ಮಧ್ಯೆ ಮತ್ತೆ ಹಾಕಿದರೆ ಕಟ್ಟೆಯ ತಡೆಗೋಡೆ? ಆದರೂ ಹರಿಯಬೇಕೆನ್ನುವ ಧಾವಂತ ನಿರಂತರ ಒಳಗೊಳಗೆ ಅದುವೆ ಆದ್ಯಂತ….   ಕಟ್ಟೆಯಲ್ಲಾದರೂ ಎಷ್ಟೆಂದು ಇರಬಹುದು ಒಂದಿಲ್ಲ ಒಂದು ದಿನ ತುಂಬಿ ಧುಮ್ಮಿಕ್ಕಲೇಬೇಕು ನಿಧಾನಕ್ಕಾದರೂ ಗೋಡೆ ಒಡೆದಾದರೂ…   ಸತ್ಯ ಯಾವತ್ತೂ ಹೀಗೆಯಲ್ಲವೆ?!  ’ಸ್ಥಾವರ’ಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 15): ಹನುಮಂತ ಹಾಲಿಗೇರಿ

  (ಇಲ್ಲಿಯವರೆಗೆ)   ಇಳಿಸಂಜೆಯ ಹೊತ್ತು ನಾನು ಮತ್ತು ದೀಪಾ ಮೆಜೆಸ್ಟಿಕ್ ಹತ್ತಿರಕ್ಕೆ ಬಂದಿದ್ದೆವು. ಶಾರಿ ಇಲ್ಲಾದರೂ ಸಿಗಬಹುದೆ ಎಂಬ ದೂರದ ನಿರೀಕ್ಷೆಯೊಂದಿಗೆ. ಅಲ್ಲೆಲ್ಲ ಅಸಂಖ್ಯಾತ ದಂಧೆಯ ಮಹಿಳೆಯರು. ಯಾರೋ ದೀಪಾಳ ಹೆಸರು ಹಿಡಿದು ಕೂಗಿದಂತಾಯಿತು. ಹಿಂದೆ ತಿರುಗಿ ನೋಡಿದರೆ ಬಾಯ್ತುಂಬ ನಗುತ್ತಾ ಒಬ್ಬಾಕೆ ಹತ್ತಿರ ಬಂದು ದೀಪಾಳ ಮುಂದೆ ಬಂದು ನಿಂತಳು. ದೀಪಾ ಕೂಡ ಅವಳನ್ನು ಮೀರಿಸುವಂತೆ ನಕ್ಕು ಆತ್ಮೀಯತೆಯಿಂದ ಅವಳ ಕೈ ಹಿಡಿದುಕೊಂಡಳು. ‘ಇವಳು ಮಂಜುಳಾ ಅಂತ. ನಮ್ಮ ಸಂಸ್ಥೆಯಿಂದ ಆರೋಗ್ಯ ಕುರಿತು ತರಬೇತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿಂಗ್ ಆಫ್ ಕಾಮಿಡಿ: ವಾಸುಕಿ ರಾಘವನ್ ಅಂಕಣ

ಅದ್ಭುತ ನಟರೇ ಹಂಗೆ. ತುಂಬಾ ಸಾಮಾನ್ಯವಾದ ಸಿನಿಮಾದಲ್ಲಿ ಕೂಡ ತಮ್ಮ ಛಾಪನ್ನು ಮೂಡಿಸುತ್ತಾರೆ. ಸಾಧಾರಣತೆಯ ಮಧ್ಯೆಯೂ ತಮ್ಮ ಉತ್ಕೃಷ್ಟತೆಯಿಂದ ಎದ್ದು ಕಾಣುತ್ತಾರೆ. ರಾಬರ್ಟ್ ಡಿನಿರೋ ಅಂತಹ ಒಬ್ಬ ಅಪ್ರತಿಮ ಕಲಾವಿದ. “ಕಿಂಗ್ ಆಫ್ ಕಾಮಿಡಿ” ನನ್ನ ಪ್ರಕಾರ ಹೇಳಿಕೊಳ್ಳುವಂತಹ ಚಿತ್ರ ಅಲ್ಲದಿದ್ದರೂ, ಕೇವಲ ಡಿನಿರೋ ನಟನೆಯನ್ನು ಸವಿಯಲು ನಾನು ಎಷ್ಟೋ ಬಾರಿ ಈ ಚಿತ್ರವನ್ನು ನೋಡಿದ್ದೀನಿ. 1983ರಲ್ಲಿ ಬಿಡುಗಡೆಯಾದ ಮಾರ್ಟಿನ್ ಸ್ಕಾರ್ಸೆಸೆ ನಿರ್ದೇಶನದ ಚಿತ್ರ “ಕಿಂಗ್ ಆಫ್ ಕಾಮಿಡಿ”. ಅಭಿಮಾನಿಗಳ ಮನಸ್ಥಿತಿ, ಅವರ ಹುಚ್ಚು, ಅವರ ಅತಿರೇಕಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪಿನಾಳದಿಂದ (ವಿಷ್ಣು ಸಂದರ್ಶನ): ಗುಂಡೇನಹಟ್ಟಿ ಮಧುಕರ್ ಕುಲಕರ್ಣಿ

ವಿಷ್ಣುವರ್ಧನ ಅವರೊಂದಿಗೆ ನಡೆಸಿದ ಸಂದರ್ಶನ ಸುಮಾರು ಹತ್ತು ವರ್ಷಗಳ ಹಿಂದಿನದ್ದು. ನಾನು ಅವರೊಂದಿಗೆ ಮಾತನಾಡಬೇಕೆಂದು ಕುಳಿತಿದ್ದಾಗ ಅವರು ಸಂಪೂರ್ಣವಾಗಿ ಆಧ್ಯತ್ಮಿಕದತ್ತ ವಾಲಿದ್ದು ಅವರ ಮಾತುಗಳಿಂದ ಗೊತ್ತಾಗುತ್ತಿತ್ತು. ಪ್ರತಿಯೊಂದು ವಿಷಯದ ಬಗ್ಗೆ ಹೇಳುವಾಗಲೂ ಪರಮಾತ್ಮನ ಆಶಿರ್ವಾದ ಇದ್ದರೆ ಆಗುತ್ತದೆ. ಎಲ್ಲವೂ ಅವನದ್ದು ನನ್ನೇನೂ ಇಲ್ಲ ಎಂದು ಆಕಾಶದೆಡೆ ಕೈ ಮಾಡಿ ತೋರಿಸುತ್ತಿದ್ದರು. ಸರಳಜೀವಿ ಸ್ನೇಹ ಜೀವಿ ಎಂಬುದು ಅವರೊಂದಿಗೆ ನಾನು ಮಾತನಾಡಿದ ಮಾತುಕತೆಯಿಂದಾಗಿ ನನ್ನ ಮನಸ್ಸಿಗೆನ್ನಿಸಿತು.  ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಬಂದಿದ್ದ ಕ್ಯಾಮರಾಮನ್ ನಿಜವಾಗಿಯೂ ಕ್ಯಾಮರಾಮನ್ ಆಗಿರಲಿಲ್ಲ. ಯಾವುದೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಾಸಶ್ರೇಷ್ಠ ಪುರಂದರದಾಸರು: ರಶ್ಮಿ ಕುಲಕರ್ಣಿ

ದಾಸ ಸಾಹಿತ್ಯವು ಕನ್ನಡ ಸಾಹಿತ್ಯದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಹೊಂದಿರುವುದು 12ನೇ ಶತಮಾನದಿಂದ 19ನೇ ಶತಮಾನದವರೆಗೆ ಅನೇಕ ದಾಸರು ಪದಗಳನ್ನು ರಚಿಸಿದ್ದಾರೆ. ವಿಜಯದಾಸರು,ಗೋಪಾಲದಾಸರು,ಜಗನ್ನಾಥದಾಸರು,ಕನಕದಾಸರು,ಹೀಗೆ ಇನ್ನೂ ಅನೇಕ ದಾಸರು ದೇವರನ್ನು ಸ್ತುತಿಸುತ್ತ ಕೊಂಡಾಡುತ್ತ ಹಲವಾರು ಪದಗಳನ್ನು ರಚಿಸಿದ್ದಾರೆ. ಇವರಲ್ಲಿ ಪುರಂದರದಾಸರು ಶ್ರೇಷ್ಠರೆನಿಸಿಕೊಂಡಿದ್ದಾರೆ. "ದಾಸರೆಂದರೆ ಪುರಂದರದಾಸರಯ್ಯಾ…….."ಎಂದು ಸ್ವತಃ ಗುರು ವ್ಯಾಸರಾಯರಿಂದಲೇ ಕೊಡಾಡಿಸಿಕೊಂಡ ಹಿರಿಮೆ ಇವರದು.  ದೇವತೆಗಳಲ್ಲಿ ಸಂಗೀತ ವಿಶಾರದ ನಾರದ ಮಹರ್ಷಿಗಳ ಅವತಾರವೇ ಪುರಂದರದಾಸರೆಂಬ ಪ್ರತೀತಿಯೂ ಇದೆ. ಶಾಲಿವಾಹನ ಶೆಕೆ 1858 ರಲ್ಲಿ ಮಹಾರಾಷ್ಟ್ರದ ಪಂಡರಪುರದ ಹತ್ತಿರದ ಗ್ರಾಮವೊಂದರಲ್ಲಿ ಬ್ರಾಹ್ಮಣ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅನಿರೀಕ್ಷಿತ: ಪ್ರಶಸ್ತಿ ಅಂಕಣ

ನಗರದ ದೊಡ್ಡ ಆಸ್ಪತ್ರೆ ಎಂದೇ ಖ್ಯಾತ ಜಗರಾಂ ಆಸ್ಪತ್ರೆಯ ಡಾ|| ಜಗರಾಂಗೆ ರಾತ್ರಿ ನಿದ್ದೆಯಲ್ಲೆಲ್ಲಾ ಏನೋ ಕಸಿವಿಸಿ. ನಿದ್ದೆಯಲ್ಲೆಲ್ಲಾ ಮೈಮೇಲೆ ಬಿದ್ದಂತೆ ಬಂದು ಕಾಡಿದ ದುಸ್ವಪ್ನಗಳಿಂದ ನಾಳೆ ಏನೋ ಗಂಡಾಂತರ ಕಾದಿದೆ ಎಂದೇ ಅಂಜಿಕೆ ಶುರುವಾಯ್ತು. Dreams are modified versions of memory ಎನ್ನುತ್ತಾರೆ. ಅಂದರೆ ನಾವು ನೋಡಿದ್ದು, ಯೋಚಿಸಿದ್ದೇ ರೂಪಾಂತರವಾಗಿ ಕನಸಾಗುತ್ತೆ ಅಂತ.. ಆದರೆ ತಾವು ನೋಡದ್ದು ಯಾಕೆ ಕನಸಾಗ್ತಿದೆ ಅಂತ ನಿದ್ದೆ ಬಾರದೇ ಎದ್ದು ಕುಳಿತ ಜಗರಾಂ ಯೋಚಿಸುತ್ತಾ ಕುಳಿತು ,ಕುಳಿತಲ್ಲಿಯೇ ತೂಕಡಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವ್ಯವಸಾಯ ಎಂದರೆ: ಚೇತನ್ ಹೊನ್ನವಿಲೆ

ಕುಂಟೆಯ ಮೇಲೆ ಕೂತು, ಎತ್ತಿನ ಬಾಲ ಮುರಿದು, ' ಹೋಯ್ ' ಎಂದು ಅಬ್ಬರಿಸುವಾಗ, ಕುಂಟೆಯ ಅಲುಗಿಗೆ ತಗಲುವ ಮಣ್ಣಿನ ಎಂಟೆಗಳನು ಒಡೆದು ಪುಡಿ ಮಾಡುತ್ತಾ ಓಟ ಕೀಳುವ..' ಎತ್ತುಗಳ ಸ್ಟೇರಿಂಗು ಹಿಡಿದರೆ… ಅದೊಂತರ ರೋಲರ್ ಕೋಸ್ಟರ್ ರೈಡಿನ ಅನುಭವ. ದೂರದ ಊರಿನಲ್ಲಿ ಆದ ಬಸ್ಸಿನ ಹಾರನ್ನು ಕೇಳಿ, ಊಟದ ನೆನಪಾಗಿ, ಬಾಳೆಎಲೆ-ಅಡಿಕೆಆಳೆ ಕುಯ್ದು, ಸಣ್ಣಗೆ ಹರಿಯುವ ಕಾಲುವೆಯ ಪಕ್ಕದಲ್ಲಿಯೇ ಕುಳಿತು, ಸಾರು ಚೆಲ್ಲಿರುವ ಡಬ್ಬಿಯನ್ನು ಉಗುರಿನ ಕೈಯಲ್ಲಿ ತೆಗೆದು, ಒಂದಕ್ಕೊಂದು ಅಂಟಿಕೊಂಡು ಚಪ್ಪಟೆಯಮ್ತಾಗಿರುವ ಮುದ್ದೆಯನ ಬಿಡಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶೀಗೀ ಹುಣ್ಣಿಮಿ ಮುಂದಾ | ಸೋಗಿನಾ ಚಂದ್ರಮ: ಸುಮನ್ ದೇಸಾಯಿ ಅಂಕಣ

             ನಮ್ಮ ಪಾರಂಪರಿಕ ಪಧ್ಧತಿಗೊಳು ಮರಿಯಾಗಿ ಹೋಗಲಿಕತ್ತ ಈ ದಿನಮಾನಗಳೊಳಗ ಎಲ್ಲೋ ಒಂದ ಕಡೆ ಮಿಣುಕ ಮಿಣುಕಾಗಿ ಕಾಣಸಿಗತಾವ ಅಂದ್ರ ಅದು ಹಳ್ಳಿಗಳೊಳಗ ಮಾತ್ರ. ನಮ್ಮ ಉತ್ತರ ಕರ್ನಾಟಕದ ಹಳ್ಳಿಗೊಳೊಳಗ ಇಂಥಾ ಭಾಳಷ್ಟು ಆಚರಣೆಗಳವ. ನೆರೆಹೊರೆಯವರು ಕೂಡಿ ಭಾಳ ಸಂತೋಷದಿಂದ ಆಚರಿಸ್ತಾರ. ವಿಶೇಷತಃ ಹೆಣ್ಣು ಮಕ್ಕಳು ಆಚರಿಸೊ ಪಧ್ಧತಿಗಳೆ ಭಾಳ ಇರತಾವ. ಶಹರದೊಳಗಾದ್ರ ಹೆಣ್ಣು ಮಕ್ಕಳಿಗೆ, ಓದು, ಕಲೆ, ನೌಕರಿ, ಮಹಿಳಾ ಮಂಡಳ, ಸಮಾಜಸೇವೆ, ರಾಜಕೀಯ ಅಂತೆಲ್ಲಾ ತಮ್ಮನ್ನ ತಾವು ತೊಡಗಿಸಿಕೊಂಡಿರತಾರ. ಇನ್ನ ಮನೊರಂಜನೆಗೆ ಅಂತ ಸಿನೇಮಾ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೀಪ..!!: ಸಚಿನ್ ಎಂ. ಆರ್.

ದೀಪ..!! ಕತ್ತಲೆಯ ಬಾಳಲ್ಲಿ ನೀನಾಗುವೆಯಾ ದೀಪ…? ಅರಸುತಿದೆ ಮನವು ಮುಗ್ಧತೆಯ ಪಾಪಾ.. ಹಳೆಯ ನೋವೆಲ್ಲವೂ ಘನಘೋರ ಶಾಪ.. ಬೇಡ ನನಗಾವುದೇ ಅನುಕಂಪದ ತಾಪ.. ದೀಪದ ಬುಡದಲ್ಲಿ ಕತ್ತಲೆ… ಕತ್ತಲೆಯ ಮೇಲೊಂದು ದೀಪ… ನನ್ನ ಬಾಳಿನ ಕತ್ತಲೆಗೆ ನೀನಾಗುವೆಯಾ ದೀಪ.. ನಂದದಾ ದೀಪ.. ಹುಡುಕುತಿದೆ ಮನವು ಬೆಳಕು ಕರೆದ ಎಡೆಗೆ.. ಕಿಡಿಗೇಡಿ ಬುದ್ಧಿಗೆ, ನನಬಾಳು ಒಡೆದ ಗಡಿಗೆ… ದುಡುಕಿದ ಮನಕೆ ಬೇಕೊಂದು ಭಾವ.. ಮಡಿದ ಮನಸಿಗೆ ಕೊಡುವೆಯಾ ಜೀವ…!! ಹಾಳಾದ ಮನಸು ಈ ಲೆವೆಲ್‌ಗೆ ಕವನ ಗೀಚ್ಕೊಂಡು, ಬಡಬಡಾಯಿಸಿಕೊಂಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೈಸೂರು ದಸರಾ ಎಷ್ಟೊಂದು ಸುಂದರ: ಪ್ರಶಸ್ತಿ ಅಂಕಣ

ಮೈಸೂರು ದಸರಾ. ಎಷ್ಟೊಂದು ಸುಂದರ.. ಎಂಬ ಹಾಡನ್ನು ಕೇಳಿದ್ನೇ ಹೊರತು ಅದ್ನ ಕಣ್ಣಾರೆ ನೋಡೋ ಭಾಗ್ಯ ಇತ್ತೀಚೆಗಿನವರೆಗೂ ಸಿಕ್ಕಿರಲಿಲ್ಲ. ತೀರಾ ಸಣ್ಣವನಿದ್ದಾಗ ನನ್ನಪ್ಪ, ನನ್ನ ಮುತ್ತಜ್ಜ(ಅಜ್ಜಿಯ ಅಪ್ಪ) ಮೈಸೂರು ದಸರಾಕ್ಕೆ ಹೋದ ಕತೆ, ಅಲ್ಲಿ ನನ್ನ ಮುತ್ತಜ್ಜನ ಒಳಜೇಬನ್ನೇ ಕತ್ತರಿಸಿದ ಕಳ್ಳರ ಕಥೆ , ಮೈಸೂರಿಗೆ ದಸರಾ ಸಮಯದಲ್ಲಿ ಹೋದ್ರೆ ಕಾಲಿಡೋಕೂ ಆಗಲ್ಲ ದಸರಾನಾ ರಸ್ತೆ ಮೇಲೆ ನೋಡೋದು ಹೋಗ್ಲಿ ಮನೆ ಮಹಡಿ ಮೇಲೆ ನಿತ್ತು ನೋಡೋದಕ್ಕೂ ಕಷ್ಟಪಡ್ಬೇಕು ಎಂಬ ಮಾತುಗಳೇ ದಸರಾಕ್ಕೆ ಹೋಗದಂತೆ ತಡೀತಿದ್ವಾ ಅಥವಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಕೊನೆಯ ಭಾಗ): ಶಿವು ಕೆ.

(ಇಲ್ಲಿಯವರೆಗೆ)  ಮೂರನೇ ದಿನ ಸಂಜೆ ಮತ್ತೆ ದುರಂತೋ ರೈಲಿನಲ್ಲಿ ಹೊರಟು ಹೌರಾ ತಲುಪುವ ಹೊತ್ತಿಗೆ ಸಂಜೆ ಏಳುಗಂಟೆ.  ಹೂಗ್ಲಿ ನದಿಯ ಮೇಲೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ಅಲ್ಲಿ ದೊಡ್ದ ದೊಡ್ದ ಬೋಟುಗಳ ವ್ಯವಸ್ಥೆಯಿದೆ.  ನಾವು ಆ ಬೋಟಿನೊಳಗೆ ಸೇರಿಕೊಂಡೆವು. ಬೋಟ್ ನಿದಾನವಾಗಿ ಚಲಿಸುತ್ತಾ ದೊಡ್ದದಾದ ಹೌರ ಬ್ರಿಡ್ಜ್ ಕೆಳಗೆ ಸಾಗುತ್ತಾ…ಅದನ್ನು ದಾಟಿ ಮುಂದೆ ರವಿಂದ್ರ ನಾಥ್ ಠಾಕೂರ್ ಸಮಾಧಿ, ಧಾಟಿಕೊಂಡು ಮುಂದೆ ಸಾಗಿದಾಗ ನಾವೆಲ್ಲ ಬಲಗಡೆಗೆ ಇಳಿದುಕೊಂಡೆವು. ಅಲ್ಲಿಗೆ ನಮ್ಮ ಜೊತೆಯಲ್ಲಿ ಬಂದಿದ್ದ ಪಶ್ವಿಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓಜೋನ್-ವಿನಾಶ ಅನಿಲಗಳ ನಿಯಂತ್ರಣ: ಜೈಕುಮಾರ್

ದೈತ್ಯ ಕಂಪನಿಗಳ ಪರ ನಿಂತಿರುವ ಅಮೇರಿಕಾ ಅಮೇರಿಕಾ ದೇಶದ ಬಹುರಾಷ್ಟ್ರೀಯ ಕಂಪನಿಗಳು ಉತ್ಪಾದಿಸುವ ಅನಿಲಗಳನ್ನು ಮಾತ್ರವೇ ಶೀತಲೀಕರಣ (ರೆಫ್ರಿಜರೇಶನ್) ಉಪಕರಣಗಳಲ್ಲಿ ಉಪಯೋಗಿಸುವಂತೆ ಅಮೇರಿಕಾವು ಭಾರತದ ಮೇಲೆ ಒತ್ತಡ ಹಾಕುತ್ತಿದೆ. ಶೀತಲೀಕರಣಗಳಲ್ಲಿ ಬಳಸುವ ಅನಿಲಗಳು ಇತರೆ ಹಸಿರು ಮನೆ ಅನಿಲಗಳಂತೆ ಭೂಮಿಯ ತಾಪಮಾನಕ್ಕೆ ಕಾರಣವಾಗುತ್ತವೆ ಎಂಬ ಕಾರಣವೊಡ್ಡಿ ಅಮೇರಿಕಾ ತನ್ನ ಕಂಪನಿಗಳಿಗೆ ಭಾರತದಲ್ಲಿ ಮಾರುಕಟ್ಟೆ ಹುಡುಕುತ್ತಿದೆ.  ಶೀತಲೀಕರಣ ಅನಿಲಗಳನ್ನು ಎರಡು ಅಂತರಾಷ್ಟ್ರೀಯ ಒಪ್ಪಂದಗಳ ವ್ಯಾಪ್ತಿಗೆ ತರಲಾಗಿದೆ: ಮಾಂಟ್ರಿಯಲ್ ಒಡಂಬಡಿಕೆ ಮತ್ತು ಹವಾಮಾನದ ಬದಲಾವಣೆ ಕುರಿತ ವಿಶ್ವಸಂಸ್ಥೆ ಚೌಕಟ್ಟುಗಳ ಒಪ್ಪಂದ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾನಸ ಸರೋವರದಲ್ಲಿ ವೇದತರಂಗ: ಹೃದಯಶಿವ ಅಂಕಣ

  ಶಿವರುದ್ರಪ್ಪನವರಿಗೆ ವಂದಿಸುತ್ತಾ… ಜೆಎಸ್ಸೆಸ್ ಎಂದೇ ಖ್ಯಾತರಾಗಿರುವ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪನವರು ಕನ್ನಡ ಸಾರಸ್ವತ ಲೋಕದ ಅಗ್ರಪಂಕ್ತಿಯಲ್ಲಿ ನಿಲ್ಲುವ ಕವಿಜೀವ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ೧೯೨೬ರ ಫೆಬ್ರವರಿ ೭ನೇ ತಾರೀಖು ಜನಿಸಿದ ಈ ಸಮನ್ವಯ ಕವಿಯ ಸಾಹಿತ್ಯಕೃಷಿ ನವೋದಯದಲ್ಲಿ ಶುರುವಾಗಿ ನವ್ಯದಲ್ಲಿ ಮುಂದುವರೆಯುತ್ತಿದೆ. ವೃತ್ತಿಯಲ್ಲಿ ಅಧ್ಯಾಪಕರಾಗಿ ಸಾವಿರಾರು ಚಿಂತನಾ ಜೀವಿಗಳನ್ನು ಹುಟ್ಟುಹಾಕಿದ ಇವರು ರಾಷ್ಟ್ರಕವಿ ಕೆ.ವಿ.ಪುಟ್ಟಪ್ಪನವರ ಪಟ್ಟಶಿಷ್ಯ. ಇದುವರೆಗೂ ಸಾಮಗಾನ, ಒಲವು-ಚೆಲುವು, ತೆರೆದಮನ, ದೀಪದ ಹೆಜ್ಜೆ, ಕಾವ್ಯಾರ್ಥ ಚಿಂತನೆ, ಕಾವ್ಯರ್ಥ ಲೋಕ, ವಿಮರ್ಶೆಯ ಪೂರ್ವಪಶ್ಚಿಮ ಒಳಗೊಂಡಂತೆ ಇನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಟೋನಿ ಮಾರ್ಕಿಸ್‌ಯೆಂಬ ಪರಮ ಘಾತುಕ: ಅಖಿಲೇಶ್ ಚಿಪ್ಪಳಿ ಅಂಕಣ

  ಇತರೆ ಪ್ರಾಣಿಗಳಿಗೆ ಹೋಲಿಸಿದರೆ ಶಾರೀರಿಕವಾಗಿ ಬಲಿಷ್ಟನಲ್ಲದ ಮಾನವ ಇವತ್ತು ಜಗತ್ತನ್ನು ಆಳುತ್ತಿದ್ದಾನೆ ಎಂದರೆ ಅದಕ್ಕೆ ಕಾರಣ ಇವನಿಗಿರುವ ಆಲೋಚನಾ ಶಕ್ತಿ, ಬುದ್ಧಿಮತ್ತೆ ಇತ್ಯಾದಿಗಳು. ಮನುಷ್ಯನ ವಿದ್ಯೆ-ಬುದ್ಧಿಗಳು ಜಗತ್ತಿನ ಒಳಿತಿಗೆ ಪೂರಕವಾದಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆ. ಇದನ್ನೇ ದುಷ್ಕಾರ್ಯಗಳಿಗೆ ಬಳಸಿದರೆ ಸಿಗುವುದು ಹಿಂಸೆ-ಅಶಾಂತಿ ಇತ್ಯಾದಿಗಳು. ಎಲ್ಲಾ ಪ್ರಾಣಿಗಳಿಗೂ ಹೊಟ್ಟೆ ತುಂಬಿದ ಮೇಲೆ ಮನೋರಂಜನೆ ಬೇಕು. ಬೆಕ್ಕು ಚಿನ್ನಾಟವಾಡುವ ಹಾಗೆ, ಆಟಗಳು ದೈಹಿಕವಾಗಿ ಬಲಿಷ್ಟವಾಗಿರಲು ಮತ್ತು ಮನಸ್ಸಿನ ನೆಮ್ಮದಿ-ಆರೋಗ್ಯಕ್ಕೆ ಪೂರಕ. ಆಧುನಿಕ ಮನುಷ್ಯ ರೂಡಿಸಿಕೊಂಡ ಆಟಗಳು ಸಾವಿರಾರು. ಇದರಲ್ಲಿ ಹೆಚ್ಚಿನವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರತಿಭೆಗಿಂತ ಹುಚ್ಚು ದೊಡ್ಡದು: ವಾಸುಕಿ ರಾಘವನ್ ಅಂಕಣ

ಪ್ರತಿಭೆಗೆ ನಮ್ಮ ದೇಶದಲ್ಲಿ ಸಿಗುವಷ್ಟು ಮಾನ್ಯತೆ ಬಹುಷಃ ಪ್ರಪಂಚದ ಯಾವ ದೇಶದಲ್ಲೂ ಸಿಗಲಿಕ್ಕಿಲ್ಲ. ನನ್ನ ಹೇಳಿಕೆ ನೀವು ದೇಶಾಭಿಮಾನದ ಹೆಮ್ಮೆಯಿಂದ ಬೀಗುವಂತೆ ಮಾಡಿದ್ದರೆ ಕ್ಷಮಿಸಿ, ನಾನು ಅದನ್ನು ವ್ಯಂಗ್ಯವಾಗಿ ಹೇಳಿದೆ. ನೀವು ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾದವರ ಬಗ್ಗೆ ಮಾತಾಡುವಾಗ ಗಮನಿಸಿ, ನಿಮಗೆ ಕೇಳಸಿಗುವುದು ಅವರ “ಟ್ಯಾಲೆಂಟ್” ಅಥವಾ “ಬುದ್ಧಿವಂತಿಕೆ”ಯ ಬಗ್ಗೆ.   “ನೀನು ನಿನಗಿಂತ ಬುದ್ಧಿವಂತರ ಜೊತೆ ಸ್ನೇಹ ಮಾಡಬೇಕು” ಅಂತ ಸದುದ್ದೇಶದಿಂದಲೇ ಹೇಳುವ ಟಿಪಿಕಲ್ ಮಿಡ್ಲ್ ಕ್ಲಾಸ್ ಪೇರೆಂಟ್ಸ್ ಇರಬಹುದು, “ಆಶಾ ಭೋಸ್ಲೆ ಎಂತಹ ಗಿಫ್ಟೆಡ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕವಿತೆಗಳು: ಸಂತೆಬೆನ್ನೂರು ಫೈಜ್ನಟ್ರಾಜ್, ಶ್ರೀಧರ ನಾಯಕ

          ನಾಳೆಯ ಕತೆ        ಸುಮ್ಮನಿರುವುದಕ್ಕಿಂತ  ಏನಾದರೂ ಹೇಳಿ ಬಿಡು ’ನಾಳೆ’ ಬಂದಿತೋ ಇಲ್ಲವೋ…. ಎದಯ ತಲ್ಲಣ ಕಣ್ಣ ನೀರು ಹೃದಯದ ಮಾತು ಗಳ ಮುಚ್ಚಿಡಬೇಡ ’ಇಂದೇ’ ಹೊರಹಾಕು ನಾಳೆ ಕಂಡವರ್‍ಯಾರು?   ಕಳೆದುದ ಹುಡುಕಿಯೇನು ಸುಖ ಗೆಳತಿ; ಎಲ್ಲರೂ ಏನಾದರೊಂದು ಕಳೆದು ಕೊಂಡೇ ಇರ್ತಾರೆ ನನ್ನಂತೆ, ನಿನ್ನಂತೆ! ಇರುವುದ ಕಂಡು ಸುಖಿಸು ’ನಾಳೆ’ ಗಳಿಗೆ ನಿಟ್ಟುಸಿರೇಕೆ? ಏನಾದರೂ ಮಾಡುತಿರು ಎಂಬ ಮಾತಂತೆ ಹಾಡು ಮನದ ಹಾಡು, ಕವಿತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಈ ಬಾಳ ಪುಟಗಳಲ್ಲಿ ಭಾಮಿನಿ: ಉಮೇಶ್ ದೇಸಾಯಿ

ಅವ ಬಂದಾಗ ಎದಿರಾಗಬಾರದು ಎಂಬ ಹಿಂಜರಿಕೆ ಇತ್ತು. ಹೀಗಾಗಿಯೇ ನೆವ ಮಾಡಿ ಬಾಜೂ ಮನೆಯ ಶಾಮರಾಯರ ಕಡೆ ಹೋಗಿದ್ದೆ. ವಾಸು ಮಾಮಾನ ಜೊತೆ ಅವನ ಹರಟೆ ಜೋರಾಗಿ ನಡೆದಿತ್ತು. ಸ್ವಲ್ಪ ಅನ್ನುವುದಕ್ಕಿಂತ ಪೂರ್ತಿಯೇ ಬದಲಾಗಿದ್ದ. ಕೂದಲಿಗೆ ಢಾಳಾಗಿ ಬಣ್ಣ ಬಡಿದುಕೊಂಡಿದ್ದ. ಬೊಜ್ಜು ಸ್ವಲ್ಪ ಅತಿ ಅನಿಸುವಂತಿತ್ತು. ಒಬ್ಬನೇ ಬಂದಿದ್ದಾನೆ. ಇದಾಗಲೇ ಶಾಮರಾಯರ ಮನೆಯಲ್ಲಿ ಸುದ್ದಿ ಹಬ್ಬಿತ್ತು. ಪಡಸಾಲೆಯಲ್ಲಿ ಕುಳಿತ ಅವನ ಮುಂದೆ ಹಾದೇ ಅಡಿಗೆ ಮನೆಗೆ ಹೋಗಬೇಕು. ನನ್ನ ನೋಡಿದವನೋ ಇಲ್ಲವೋ ಗೊತ್ತಾಗಲಿಲ್ಲ. ಹರಟೆ ಜೋರಾಗಿತ್ತು. ಗಮನಿಸಿರಲಿಕ್ಕಿಲ್ಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪಿನ ಜೋಕಾಲಿ: ಸುಮನ್ ದೇಸಾಯಿ ಅಂಕಣ

ಎಲ್ಲಾರ ಜೀವನದೊಳಗು ಈ ಬಾಲ್ಯ ಅನ್ನೊದು ಅಮೂಲ್ಯವಾಗಿದ್ದಿರತದ. ಯಾವ ಕಲ್ಮಷ ಇಲ್ಲದ, ನಾಳಿನ ಚಿಂತೆ, ನೋವು ಇಲ್ಲದ ಆಡಿ ಬೆಳದ ಸಮಯ ಅದಾಗಿರತದ. ಈ ಬಾಲ್ಯದೊಳಗ ಏನೆ ಮಾಡಿದ್ರು ಛಂದನ ಇರತದ.” ಬಾರಾ ಖೂನಿ ಮಾಫ” ಅಂತಾರಲ್ಲಾ ಹಂಗ ಎಂಥಾ ಮಂಗ್ಯಾನಾಟಾ ಮಾಡಿದ್ರು ನಡಿತಿರತದ. ಅದರೊಳಗ ಈ ಹತ್ತರಿಂದ ಹದಿನಾರನೇ ವಯಸ್ಸಿನೊಳಗಿನ ಮನಸ್ಸಂತು ಯಾರ ಕೈಗು ಸಿಗದ ಬೀಸೊಗಾಳಿ ಹಂಗಿರತದ ಬಿಂದಾಸಾಗಿ ಆಡಿಕೊಂಡ ಎದುರಿಗೆ ಸಿಕ್ಕಿದ್ದನ ತನ್ನ ತುಂಟಾಟದ ರಭಸಕ್ಕ ನಡುಗಿಸೊ ಹಂಗ. ಬಾಲ್ಯ ಎಷ್ಟು ದಟ್ಟವಾಗಿರತದೊ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಗುರುನಾಥ್ ಬೋರಗಿ

   ೧ ನಾನು ನಿನಗೆ  ಪ್ರೀತಿಸುವುದು  ಹೇಗೆಂದು  ಹೇಳಿ ಕೊಟ್ಟೆ. ನೀನದನು  ಇನ್ನೊಬ್ಬನಲಿ  ಪ್ರಯೋಗಿಸಿ ಬಿಟ್ಟೆ   ೨ ಚುಚ್ಚಿ ಗಾಯಗೊಳಿಸುವ  ದರ್ಜಿಯ ಸೂಜಿಗೆ,  ಎರಡನೊಂದಾಗಿಸುವ  ಹಿರಿಗುಣವೂ ಇದೆ.   ೩ ಬಿಳಿ ಕಾಗದ ಮೇಲೆ  ದುಂಡಾಗದೆಯೇ  ಸತಾಯಿಸಿದ ನನ್ನ  ಅಕ್ಷರಗಳು, ನಿನ್ನ ಕೆನ್ನೆ, ತುಟಿ ಮೇಲೆ  ಬರೆದಾಕ್ಷಣವೇ  ಸಾಲು ಮುತ್ತಾದವು    ೪ ಹರಯದ ಅವಸರಕ್ಕೆ ಮೊಳೆತ ಭ್ರೂಣಕೆ, ದವಾಖಾನೆ ದಾದಿಯರ ಕೈಗವುಸುಗಳದ್ದೇ ಭಯ   ೫ ಗೆಳತೀ.. ನನ್ನ ಪಾಲಿಗೆ ; ನಿನ್ನ ನೆನಪುಗಳೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 14): ಹನುಮಂತ ಹಾಲಿಗೇರಿ

  (ಇಲ್ಲಿಯವರೆಗೆ) ಕಾಲ ಹೀಗೆ ಬರುತ್ತೆ ಅಂತ ಹೇಳಲಿಕ್ಕಾಗುವುದಿಲ್ಲ. ಮದುವೆಯಾಗಿ ವರ್ಷ ತುಂಬಿ ಎರಡನೇ ವರ್ಷಕ್ಕೆ ಕಾಲಿಟ್ಟರಲಿಲ್ಲ. ಇನ್ನೂ ನಾನು ನನ್ನ ಹೆಂಡತಿ ಲಲಿತಾ ಪರಸ್ಪರ ಅರ್ಥ ಮಾಡಿಕೊಳ್ಳುವುದರಲ್ಲಿದ್ದೆವು. ಮದುವೆಯಾದ ತಕ್ಷಣವೇ ನಾನು ನನ್ನ ಹೆಂಡತಿಗೆ ನನ್ನ ಕೆಲಸದ ವಿಷಯ, ಶಾರಿಯ ವಿಷಯಗಳನ್ನು ಮುಕ್ತವಾಗಿ ಹೇಳಿದ್ದೆ. ಅಷ್ಟೇ ಅಲ್ಲದೆ ಅವಳನ್ನು ಶಾರಿಯ ಮನೆಗೆ ಕರೆದುಕೊಂಡು ಹೋಗಿದ್ದೆ ಕೂಡ. ಅಲ್ಲಿ ನಮ್ಮಿಬ್ಬರ ಪ್ರೀತಿ ವಿಶ್ವಾಸವನ್ನು ಗಮನಿಸಿದ ಲಲ್ಲಿ ಅಂದಿನಿಂದ ತಾನು ನನ್ನೊಂದಿಗೆ ನಡೆದುಕೊಳ್ಳುವ ಪದ್ದತಿಯನ್ನೇ ಬದಲಿಸಿದಳು. ಅವಳಲ್ಲಿ ಅನುಮಾನದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಿಕ್ಷಕರಿಗೊಂದು ಸೆಲ್ಯೂಟ್: ಪ್ರಜ್ವಲ್ ಕುಮಾರ್

                ಶಿಕ್ಷಕರು ಅಂದ್ರೆ ದೇವರಿದ್ದಂತೆ, ಶಿಕ್ಷಕರು ಎಷ್ಟು ಒಳ್ಳೆಯವರಾಗಿರ್ತಾರೋ ಅವರ ವಿದ್ಯಾರ್ಥಿಗಳೂ ಅಷ್ಟೇ ಒಳ್ಳೆಯವರಾಗಿರ್ತಾರೆ ಅಂತೆಲ್ಲಾ ಕೊರೀತಾ ಕೂತ್ರೆ ಒಂದು ನಕ್ಷತ್ರ ಹುಟ್ಟಿ ಅದು ಕಪ್ಪು ರಂಧ್ರ ಸ್ಥಿತಿ ತಲುಪುವವರೆಗೂ ಕೊರೀಬಹುದು. ಇಂಥವೆಲ್ಲಾ ಬಿಟ್ಟು ಬೇರೆ ಏನಾದ್ರೂ ಹೇಳೋಣಾ ಅಂದ್ರೆ ಅವರನ್ನು ಬಯ್ಯೋದೋ, ಹೊಗಳೋದೋ ಅಥವಾ ಹೀಗೇ ನೆನಪು ಮಾಡ್ಕೊಳ್ತಾ ಇರೋದೋ ಗೊತ್ತಾಗ್ತಿಲ್ಲ.   ಒಂದು ಕಡೆಯಿಂದ ಶುರು ಮಾಡುವುದಾದರೆ ನಾವೆಲ್ಲಾ ಅಂಗನವಾಡಿ ಅಥವಾ ಶಿಶುವಾರಕ್ಕೆ ಹೋಗುವಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವಿನ ವ್ಯಾಖ್ಯಾನ: ಅಜ್ಜಿಮನೆ ಗಣೇಶ್

ಅಪರೂಪಕ್ಕೆ ಎಂಬಂತೆ ಈ ವರ್ಷ ಶರಾವತಿ ಲಿಂಗನಮಕ್ಕಿ ಅಣೆಕಟ್ಟೆಯನ್ನ ದಾಟಿ ಹರಿಯುತ್ತಿದ್ದಾಳೆ. ಬೇಸಿಗೆಯಲ್ಲಿ ತನ್ನ ಪಾಲಿನ ಹದಿನೈದು ಪರ್ಸೆಂಟ್ ವಿದ್ಯುತ್ ನ್ನ ಶರಾವತಿ ಖಂಡಿತಾ ಕೊಡುತ್ತಾಳೆ. ಇದಕ್ಕೆ ಪೂರಕವಾಗಿ ಕಣಿವೆ ಪ್ರದೇಶದ ವಿದ್ಯುತ್ ತಯಾರಿಕಾ ಯಂತ್ರಗಳು ಸಹ ಕೆಲಸ ಶುರುವಿಟ್ಟುಕೊಡಿದೆ. ನಾಡು ಸಂತೋಷದಲ್ಲಿದೆ, ಸರ್ಕಾರ ತೃಪ್ತಿಯಾಗಿದೆ. ಆದರೆ ಶರಾವತಿಯ ಮಡಿಲಲ್ಲಿ ನಡೆದ ಘಟನೆಯೊಂದು ಮಾತ್ರ ನನ್ನನ್ನ, ಕಳೆದೊಂದು ತಿಂಗಳಿನಿಂದಲೂ, ಬಿಡದೆ ಕಾಡುತ್ತಿದೆ.ಅಲ್ಲಿ ನಡೆದ ಸಾವಿನ ಘಟನೆಯೊಂದು, ನನ್ನನ್ನ ಮರಣ ಚಿಂತನೆಯಲ್ಲಿ ತೊಡಗಿಸಿದೆ.  ಮನಸ್ಸಿನ ಗೂಗಲ್ ನಲ್ಲಿ ಮೃತ್ಯು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶೋಭರಾಜ್ ಫೋಟೋಗ್ರಾಫಿ

            ಶೋಭರಾಜ್ ರವರು ತೆಗೆದಿರುವ ಮತ್ತಷ್ಟು ಛಾಯಾಚಿತ್ರಗಳನ್ನು ನೋಡಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ಕಿಸಿ.. https://www.facebook.com/ShobrajPhotography ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಟ್ಟು ಹಬ್ಬದ ಶುಭಾಶಯಗಳು ಸರ್: ರೇಣುಕಾ ಶಿಲ್ಪಿ, ಹೂವಿನಹಡಗಲಿ.

ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಕಥನ ಶೈಲಿಯಿಂದ ಜನಪ್ರಿಯರಾಗಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಕತೆಗಾರ ಕುಂ.ವೀರಭದ್ರಪ್ಪ ಅವರಿಗೆ ಇದೇ ಅಕ್ಟೋಬರ್ 1 ರಂದು ಜನ್ಮದಿನದ ಸಂಭ್ರಮ. ಈ ಸುಸಂದರ್ಭದಲ್ಲಿ ‘ಕುಂವೀ ಯವರಿಗೆ ಈ ಕಿರು ಪರಿಚಯಾತ್ಮಕ ಲೇಖನದ ಮೂಲಕ ಶುಭ ಕೋರುವ ಪುಟ್ಟ ಪ್ರಯತ್ನವಿದು. ನಾನು ಮೊದಲ ಬಾರಿ ಅವರನ್ನು ಕಂಡದ್ದು ನನ್ನ ಹೈಸ್ಕೂಲು ದಿನಗಳಲ್ಲಿ. ಸರಿಸುಮಾರು ಹದಿನೈದು ವರ್ಷಗಳ ಹಿಂದೆ, ನನ್ನೂರು ಹೂವಿನಹಡಗಲಿಯಲ್ಲಿ- ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಭಾಗ 2): ಶಿವು ಕೆ.

(ಇಲ್ಲಿಯವರೆಗೆ) ಮೊದಲ ಭಾರಿಗೆ ಅಲ್ಲಿನ ಲೋಕಲ್ ರೈಲು ನಿಲ್ದಾಣದೊಳಗೆ ಕಾಲಿಟ್ಟಿದ್ದೆ. ಎಷ್ಟೊಂದು ಜನ ಅಂತೀರಿ! ನೂರಾರು ಸಾವಿರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಸಿದ್ದರಾಗಿ ಬರುವ ರೈಲುಗಾಡಿಗಳಿಗೆ ಕಾಯುತ್ತಿದ್ದರು. ಆ ಕ್ಷಣದಲ್ಲಿ ಮಲ್ಲೇಶ್ವರಂ ರೈಲು ನಿಲ್ದಾಣ ನೆನಪಾಯ್ತು. ಸದಾ ಶಾಂತವಾಗಿರುವ ನಮ್ಮ ಮಲ್ಲೇಶ್ವರಂ ರೈಲು ನಿಲ್ದಾಣವೆಲ್ಲಿ! ಗಿಜಿಗುಟ್ಟುವ ಈ ನಿಲ್ದಾಣವೆಲ್ಲಿ! ಖಂಡಿತ ಹೋಲಿಸಕೊಳ್ಳಬಾರದು ಸುಮ್ಮನೆ ಇಲ್ಲಿನ ದೃಶ್ಯಗಳನ್ನು ಕಣ್ತುಂಬಿಕೊಳ್ಳುತ್ತಾ ಆಸ್ವಾದಿಸಬೇಕೆಂದುಕೊಂಡು ಅಭಿಜಿತ್ ಡೆ ಮತ್ತು ಇತರರೊಂದಿಗೆ ನಾನು ರೈಲು ನಿಲ್ದಾಣದ ಪ್ಲಾಟ್ ಫಾರಂ ಕಡೆಗೆ ನಡೆದೆ. ಆಗಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಾಂಧಿಯನ್ನು ಕೊಂದವರ್‍ಯಾರು?:ಅಖಿಲೇಶ್ ಚಿಪ್ಪಳಿ ಅಂಕಣ

ಭೌತಿಕವಾದ ಗಾಂಧಿಯನ್ನು ಕೊಂದಿದ್ದು ನಾಥುರಾಮ್ ಗೋಡ್ಸೆ. ಗಾಂಧಿಯನ್ನು ಕೊಂದ ತಾನು ನೇಣಿಗೇರಿ ಸತ್ತ. 600 ಚಿಲ್ಲರೆ ರಾಜರನ್ನು ಹೊಂದಿದ ಪುರಾತನ ಭಾರತವನ್ನು ಒಡೆದಾಳಿ, ಗುಲಾಮಗಿರಿಗೆ ತಳ್ಳಿ ಮೆರೆದಿದ್ದು ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಕರೆಯಲಾಗುವ ಬ್ರೀಟಿಷರ ಹೆಗ್ಗಳಿಕೆ. ದೇಶಾಭಿಮಾನ ಮತ್ತು ಸ್ವಾಭಿಮಾನ ಮೇಳೈಸಿ, ಗುಲಾಮತನಕ್ಕೆ ಒಗ್ಗಿಹೋಗಿದ್ದ ಲಕ್ಷಾಂತರ ಭಾರತೀಯರಿಗೆ ಸ್ವದೇಶಿ, ಸ್ವಾಭಿಮಾನ, ಸ್ವಾತಂತ್ರ್ಯವೆಂಬ ಊರುಗೋಲುಗಳನ್ನು ನೀಡಿ ಎಬ್ಬಿಸಿ ನಿಲ್ಲಿಸಿದವರಲ್ಲಿ ಗಾಂಧಿ ಪ್ರಮುಖರು. ಇದಕ್ಕಾಗಿಯೇ ಗಾಂಧಿಯನ್ನು ಇಡೀ ದೇಶ ರಾಷ್ಟ್ರಪಿತನೆಂದು ಒಪ್ಪಿಕೊಂಡಿದೆ. ಸ್ವಾತಂತ್ರ್ಯ ಪಡೆದ ನಂತರದಲ್ಲಿ ರಚಿತವಾದ ಸರ್ಕಾರಗಳ ಧೋರಣೆಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತೆರೆದ ಮನೆ ಬಾಗಿಲಿಗೊಂದು ಬೆಳಕಿನ ತೋರಣ:ಹೃದಯಶಿವ ಅಂಕಣ

ರಸಋಷಿಯ ರಮ್ಯಲೋಕದೆಡೆಗೆ ಬಾಲ್ಯದಲ್ಲಿ ಆಂಗ್ಲ ಸಾಹಿತ್ಯದ ವ್ಯಾಮೋಹಕ್ಕೊಳಗಾಗಿ ಹಲವು ಆಂಗ್ಲಕವಿತೆಗಳನ್ನು ಬರೆದರೂ ಕ್ರಮೇಣ ಕನ್ನಡ ಸಾಹಿತ್ಯ ಕೃಷಿಗೆ ಕೈ ಹಾಕಿ ಇಂದು ಕನ್ನಡ, ಕರ್ನಾಟಕದಷ್ಟೇ ಪ್ರಾಮುಖ್ಯತೆ ಪಡೆದಿರುವ ಕೆ.ವಿ.ಪುಟ್ಟಪ್ಪನವರು 1904ರಲ್ಲಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದವರು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಮಲೆನಾಡಿನೊಂದಿಗೆ ಆಟವಾಡುತ್ತ, ಮೋಹಕ ಮಂಜಿನೊಂದಿಗೆ ಮಾತಿಗಿಳಿಯುತ ಬೆಳೆದ ಇವರು ಮೂಲತಃ ನಿಸರ್ಗದ ಆರಾಧಕರಾಗಿದ್ದರು.  ಪ್ರೌಢರಾಗುತ್ತಾ ಹೃದಯ ವಾಸ್ತವಕ್ಕೆ ತೆರೆದುಕೊಳ್ಳುತ್ತಿದ್ದಂತೆಯೇ ತಮ್ಮ ಅಂತಃಸತ್ವಕ್ಕೆ ಅಕ್ಷರ ರೂಪ ಕೊಡುತ್ತಾ ಹೋದಂಥವರು. ಹೊಸ ತಲೆಮಾರಿನ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ