ಮೂವರ ಕವಿತೆಗಳು: ಮಂಜುನಾಥ್ ಪಿ., ವಿಶ್ವನಾಥ್ ಎಂ., ಅನುಪಮಾ ಎಸ್. ಗೌಡ.
ಹರಿಯುವ ನದಿ ಅದೆಲ್ಲೋ ಉಗಮ ಮೈದುಂಬಿಕೊಳ್ಳುತ್ತ ಕೈ-ಕಾಲು ಮೂಡಿಸಿಕೊಳ್ಳುತ್ತ ಸಾಗುವ ದಾರಿಯನ್ನು ಮಾಡಿಕೊಳ್ಳುತ್ತ ಸುಗಮ ಹಠಕ್ಕೆ ಬಿದ್ದು ಅನುಸಂಧಾನವೊಂದನ್ನು ಉಳಿಸಿಕೊಳ್ಳುವಂತೆ…. ಸವೆಸುವ ದಾರಿ ಶಿಶುವಿನ ಹಾಡೆ? ಸಹಿಸಬೇಕು ಮಧ್ಯೆ ಮತ್ತೆ ಹಾಕಿದರೆ ಕಟ್ಟೆಯ ತಡೆಗೋಡೆ? ಆದರೂ ಹರಿಯಬೇಕೆನ್ನುವ ಧಾವಂತ ನಿರಂತರ ಒಳಗೊಳಗೆ ಅದುವೆ ಆದ್ಯಂತ…. ಕಟ್ಟೆಯಲ್ಲಾದರೂ ಎಷ್ಟೆಂದು ಇರಬಹುದು ಒಂದಿಲ್ಲ ಒಂದು ದಿನ ತುಂಬಿ ಧುಮ್ಮಿಕ್ಕಲೇಬೇಕು ನಿಧಾನಕ್ಕಾದರೂ ಗೋಡೆ ಒಡೆದಾದರೂ… ಸತ್ಯ ಯಾವತ್ತೂ ಹೀಗೆಯಲ್ಲವೆ?! ’ಸ್ಥಾವರ’ಕ್ಕೆ … Read more