ಗಾಂಧಿಯನ್ನು ಕೊಂದವರ್‍ಯಾರು?:ಅಖಿಲೇಶ್ ಚಿಪ್ಪಳಿ ಅಂಕಣ

ಭೌತಿಕವಾದ ಗಾಂಧಿಯನ್ನು ಕೊಂದಿದ್ದು ನಾಥುರಾಮ್ ಗೋಡ್ಸೆ. ಗಾಂಧಿಯನ್ನು ಕೊಂದ ತಾನು ನೇಣಿಗೇರಿ ಸತ್ತ. 600 ಚಿಲ್ಲರೆ ರಾಜರನ್ನು ಹೊಂದಿದ ಪುರಾತನ ಭಾರತವನ್ನು ಒಡೆದಾಳಿ, ಗುಲಾಮಗಿರಿಗೆ ತಳ್ಳಿ ಮೆರೆದಿದ್ದು ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಕರೆಯಲಾಗುವ ಬ್ರೀಟಿಷರ ಹೆಗ್ಗಳಿಕೆ. ದೇಶಾಭಿಮಾನ ಮತ್ತು ಸ್ವಾಭಿಮಾನ ಮೇಳೈಸಿ, ಗುಲಾಮತನಕ್ಕೆ ಒಗ್ಗಿಹೋಗಿದ್ದ ಲಕ್ಷಾಂತರ ಭಾರತೀಯರಿಗೆ ಸ್ವದೇಶಿ, ಸ್ವಾಭಿಮಾನ, ಸ್ವಾತಂತ್ರ್ಯವೆಂಬ ಊರುಗೋಲುಗಳನ್ನು ನೀಡಿ ಎಬ್ಬಿಸಿ ನಿಲ್ಲಿಸಿದವರಲ್ಲಿ ಗಾಂಧಿ ಪ್ರಮುಖರು. ಇದಕ್ಕಾಗಿಯೇ ಗಾಂಧಿಯನ್ನು ಇಡೀ ದೇಶ ರಾಷ್ಟ್ರಪಿತನೆಂದು ಒಪ್ಪಿಕೊಂಡಿದೆ. ಸ್ವಾತಂತ್ರ್ಯ ಪಡೆದ ನಂತರದಲ್ಲಿ ರಚಿತವಾದ ಸರ್ಕಾರಗಳ ಧೋರಣೆಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತೆರೆದ ಮನೆ ಬಾಗಿಲಿಗೊಂದು ಬೆಳಕಿನ ತೋರಣ:ಹೃದಯಶಿವ ಅಂಕಣ

ರಸಋಷಿಯ ರಮ್ಯಲೋಕದೆಡೆಗೆ ಬಾಲ್ಯದಲ್ಲಿ ಆಂಗ್ಲ ಸಾಹಿತ್ಯದ ವ್ಯಾಮೋಹಕ್ಕೊಳಗಾಗಿ ಹಲವು ಆಂಗ್ಲಕವಿತೆಗಳನ್ನು ಬರೆದರೂ ಕ್ರಮೇಣ ಕನ್ನಡ ಸಾಹಿತ್ಯ ಕೃಷಿಗೆ ಕೈ ಹಾಕಿ ಇಂದು ಕನ್ನಡ, ಕರ್ನಾಟಕದಷ್ಟೇ ಪ್ರಾಮುಖ್ಯತೆ ಪಡೆದಿರುವ ಕೆ.ವಿ.ಪುಟ್ಟಪ್ಪನವರು 1904ರಲ್ಲಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದವರು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಮಲೆನಾಡಿನೊಂದಿಗೆ ಆಟವಾಡುತ್ತ, ಮೋಹಕ ಮಂಜಿನೊಂದಿಗೆ ಮಾತಿಗಿಳಿಯುತ ಬೆಳೆದ ಇವರು ಮೂಲತಃ ನಿಸರ್ಗದ ಆರಾಧಕರಾಗಿದ್ದರು.  ಪ್ರೌಢರಾಗುತ್ತಾ ಹೃದಯ ವಾಸ್ತವಕ್ಕೆ ತೆರೆದುಕೊಳ್ಳುತ್ತಿದ್ದಂತೆಯೇ ತಮ್ಮ ಅಂತಃಸತ್ವಕ್ಕೆ ಅಕ್ಷರ ರೂಪ ಕೊಡುತ್ತಾ ಹೋದಂಥವರು. ಹೊಸ ತಲೆಮಾರಿನ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನು ಬಡವ?:ಗುರುಪ್ರಸಾದ್ ಕುರ್ತಕೋಟಿ

ಮೂರ್ತಿ ಯಾವುದೋ ಒಂದು ಪುಸ್ತಕದಲ್ಲಿ ಗಹನವಾಗಿ ಮುಳುಗಿದ್ದವರು ನಿಟ್ಟುಸಿರು ಬಿಟ್ಟು ಹೀಗೆ ಅರುಹಿದರು… ಮೂರ್ತಿ: "ಗುರು, ಹಿಂದಿನ ಕಾಲದಲ್ಲಿ ನಮ್ಮ ದೇಶದಲ್ಲಿ ಎಂಥಾ ಸುಭಿಕ್ಷೆ ಇತ್ತಂತೆರೀ… ನಿಮಗೊತ್ತಾ? ಆಗ ವಿಜಯನಗರ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಬಂಗಾರಗಳನ್ನ ತರಕಾರಿಗಳ ತರ ಸಂತೆಲಿ ಮಾರುತ್ತಿದ್ದರಂತೆ!" ಗುರು: "ಹೌದು, ಆದ್ರೆ ಆಗಿನ ಕಾಲಕ್ಕೆ ಈಗಿನ ಕಾಲಕ್ಕೆ ಅಷ್ಟೆಲ್ಲಾ ಡಿಫರನ್ಸು ಇಲ್ಲಾ ಬಿಡ್ರೀ." ಮೂ: "ಅಧೆಂಗ್ರೀಪಾ?" ಗು: "ಈಗ ತರಕಾರಿಗಳನ್ನ ಮುತ್ತು, ರತ್ನ, ಬಂಗಾರಗಳ ರೇಟಿನಲ್ಲಿ ಮಾರ್ತಾರೆ ಅಷ್ಟೆ!!" ಮೂ: "ಹ್ಹ ಹ್ಹ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಲ್ಲಿ ಕ್ರಿಕೆಟ್ಟು, ಲಗೋರಿ ಹಾಗೂ ಫೆರಾರಿ:ಪ್ರಶಸ್ತಿ ಅಂಕಣ

ಇತ್ತೀಚೆಗೆ ಹಿಂದಿಯ "ಫೆರಾರಿ ಕಿ ಸವಾರಿ" ಅನ್ನೋ ಚಿತ್ರ ನೋಡ್ತಾ ಇದ್ದಾಗ ಯಾಕೋ ಬಾಲ್ಯದ ದಿನಗಳು ಬೇಡವೆಂದರೂ ನೆನಪಾದವು. ಬಾಲ್ಯದ ನೆನೆಪುಗಳೆಂದ ತಕ್ಷಣ ನೆನಪಾಗಿದ್ದು ಶಾಲೆಯ ಮಾಸ್ತರೋ, ತಿಂದ ಏಟುಗಳೋ, ಸುತ್ತಿದ ನೆಂಟರ ಮನೆಗಳೋ, ಅಪ್ಪ-ಅಮ್ಮನ ಬೆಚ್ಚನೆ ಬೈಗುಳ/ಅಪ್ಪುಗೆಗಳೋ ಅಲ್ಲ. ಆ ಸಿನಿಮಾ ನೆನೆಸಿದ್ದು ನಮ್ಮ ಬಾಲ್ಯದ ಲಗೋರಿ, ಗೋಲಿ, ಕ್ರಿಕೆಟ್ಟುಗಳ ನೆನಪುಗಳನ್ನ. MRF, ಬ್ರಿಟಾನಿಯ ಬ್ಯಾಟುಗಳನ್ನ ಟೀವಿಯಲ್ಲಿ ಮಾತ್ರ ನೋಡುತ್ತಾ ನಮ್ಮದೇ ದಬ್ಬೆ (ಅಡಿಕೆ ಮರವನ್ನು ಕೊಯ್ದು ಮಾಡಿದ), ಮರದ ದಿಮ್ಮಿಯ ಬ್ಯಾಟುಗಳಲ್ಲಿ, ಅದೂ ಇಲ್ಲದಿದ್ದಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂದಾಜ್ ಅಪ್ನಾ ಅಪ್ನಾ:ವಾಸುಕಿ ರಾಘವನ್ ಅಂಕಣ

ಸಿನಿಮಾ ವಿಮರ್ಶಕ ರಾಜಾ ಸೇನ್ ಅವರು ಒಂದು ಆರ್ಟಿಕಲ್ ಅಲ್ಲಿ ಹೀಗೆ ಬರೆದಿದ್ದ ನೆನಪು. ಆಮೀರ್ ಖಾನ್ ಅವರ ಈ ಚಿತ್ರ ನೆನಪಿದೆಯಾ ನಿಮಗೆ? ಇದರಲ್ಲಿ ನಾಯಕಿಯನ್ನು ಅತಿಯಾಗಿ ಇಷ್ಟಪಡುವ ನಾಯಕ, ತಲೆಗೆ ಬಲವಾದ ರಾಡ್ ಇಂದ ಪೆಟ್ಟು ತಿಂದು, ತನ್ನ ನೆನಪಿನ ಶಕ್ತಿಯನ್ನು ಕಳೆದುಕೊಳ್ಳುತ್ತಾನೆ. ಇದರಿಂದಾಗಿ ಮುಂದೆ ಚಿತ್ರವಿಚಿತ್ರವಾದ ಘಟನೆಗಳು ಜರುಗಿ, ಅವನನ್ನು ಫಜೀತಿಗೆ ಒಡ್ಡುತ್ತವೆ. ಗೊತ್ತಾಯ್ತಾ? ನೀವೂ “ಘಜಿನಿ” ಅಂದು ಬಿಟ್ರಾ? ಛೆ! ಇದೇ ನೋಡಿ, ಈಗಿನ ನೂರು ಕೋಟಿ ಗಳಿಕೆಯ ಸಾಧಾರಣ ಚಿತ್ರಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 13): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಅವತ್ತು ಪೂರ್ತಿ ನಾನು ರೂಮಿನಲ್ಲಿ ಏಳಲೂ ಆಗದೆ ಮಲಗಲು ಆಗದೆ ಬಿದ್ದುಕೊಂಡಿದ್ದೆ. ಕಿವಿಯಲ್ಲಿ ಶಾರಿಯ ಮಾತುಗಳೆ ಗುಂಯ್ಗುಡುತ್ತಿದ್ದವು. ಒಂದಿಷ್ಟು ಮಂಪರು, ಒಂದಿಷ್ಟು ಅರೆ ಎಚ್ಚರ ಮತ್ತೆ ಮಂಪರು. ಶಾರಿ ಬದುಕಿನ ಗೋಳಿಗೆ ಇತಿಶ್ರೀ ಹಾಡುವುದೆಂತು ಎಂದು ಯೋಚಿಸಿದ್ದೇ ಬಂತು. ಒಮ್ಮೊಮ್ಮೆ ನೆಮ್ಮದಿಯಿಂದ ಇರುವ ನಾನು ಶಾರಿಯ ಗದ್ದಲದಲ್ಲಿ ಯಾಕೆ ಸಿಲುಕಿಕೊಳ್ಳಬೇಕು? ನಾನು ಮೊದಲಿನಂತಾಗಬೇಕಾದರೆ ಶಾರಿಯನ್ನು ಮತ್ತೆ ಭೇಟಿಯಾಗಲೇಬಾರದು ಎನಿಸಿತು. ಆದ್ರೆ ಮನಸ್ಸಿಗೆ ಒಗ್ಗಲಿಲ್ಲ. ವರದಿ ತಯಾರಿಸಿಕೊಂಡು ಬಾ ಎಂದ ರಾಜನ್ ಹೇಳಿದ್ದು ನೆನಪಾಯಿತು. ಈಗ ಆಗಿರೋದನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಗಿ ಕಾಗಿ ಕವ್ವಾ…:ಸುಮನ್ ದೇಸಾಯಿ ನಗೆ ಅಂಕಣ

ಮುಂಝಾನೆ ಹತ್ತು ಗಂಟೆ ಸುಮಾರ ನಾ ಆಫೀಸನ್ಯಾಗ ಇದ್ದೆ. ನಮ್ಮ ತಮ್ಮನ ಫೋನ್ ಬಂತು. ಇಗ ಇನ್ನ ಹೊಸದಾಗಿ ಮದುವಿ ಮಾಡಕೊಂಡಾನ. ಮದ್ವಿಕಿಂತಾ ಮದಲ ಯಾವಾಗರೆ ಒಮ್ಮೆ ಫೋನ್ ಮಾಡಾಂವಾ ಈಗೀಗ ಎರಡ ದಿನಕ್ಕ ಒಮ್ಮೆ ಮಾಡತಿದ್ದಾ. ತನ್ನ ಗೋಳ ತೋಡ್ಕೊತಿದ್ದಾ.  ಪಾಪ ಇತ್ಲಾಕಡೆ ಅಮ್ಮ ಮತ್ತ ಅತ್ಲಾಕಡೆ ಹೆಂಡ್ತಿ ಕೈಯ್ಯಾಗ ಸಿಕ್ಕು ’ಧೋಬಿ ಕಾ ಕುತ್ತಾ ನಾ ಘರ್ ಕಾ ನ ಘಾಟ್ ಕ’ ಅನ್ನೊಹಂಗ ಆಗಿತ್ತು ನನ್ನ ತಮ್ಮನ ಬಾಳು. ಆವತ್ತು ಫೋನ್ ಮಾಡಿದಾಗನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತುರುಬಿಗೆ ತರುಬಿದ ಮನಸು: ನಾಗರಾಜ ಅಂಗಡಿ

ನಾನು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಕನ್ನಡ ಪಾಠ ಮಾಡುತ್ತಿದ್ದೆ. ಅದು ಚಂದ್ರಶೇಖರ ಕಂಬಾರವರ ಆಹ್ವಾನವೆಂಬ ಪದ್ಯವನ್ನು  ವಿಶ್ಲೇಷಿಸುತ್ತಿರುವಾಗ ಆ ಪದ್ಯದಲ್ಲಿಯ ಒಂದು ಸಾಲು  ಹಳೆಯ ಪ್ರಕೃತಿಯ ತುರುಬು ಜಗ್ಗಿ ಆಚೆಗೆ ನೂಕಿ ಎಂಬುದು ಗಕ್ಕನೆ ನನ್ನ ಮನಸ್ಸು ತರುಣಿಯ ತುರುಬಿಗೆ ವಾಲಿಸಿತು. ಪಾಠವನ್ನು ಮುಗಿಸಿ ಬಂದ ಮೇಲೆ ತುರುಬಿನ ಬಗ್ಗೆಯೇ ಚಿಂತೆಯೇ ಶುರುವಾಯಿತು. ಹಾಗೆ ನೋಡಿದರೆ ಪಂಪನಿಂದ ಹಿಡಿದು ಕುವೆಂಪುವರೆಗೆ ಕೂದಲಿನ ಬಗ್ಗೆ ಬರೆಯದವರೇ ಇಲ್ಲವೆಂದು ಹೇಳಬೇಕು. ನಾರಿಗೆ ಗುಣವೇ ಶೃಂಗಾರವೆಂಬಂತೆ ನಾರಿಗೆ ಕೇಶವೇ ಶೃಂಗಾರವೆಂದು ಹೇಳಬಹುದು. ನಾರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೃಹ ಪ್ರವೇಶ, ಹುಟ್ಟುಹಬ್ಬ, ಸನ್ಮಾನ ಮತ್ತು ಸಂಗೀತದ ಹೊನಲು: ಅಮರ್ ದೀಪ್ ಪಿ.ಎಸ್.

ನಾನು ಇತ್ತೀಚಿಗೆ ಕಂಡಂಥ ಪ್ರಸಂಗವೊಂದನ್ನು ಹಂಚಿಕೊಳ್ಳಬಯಸುತ್ತೇನೆ . ನಿಜ, ಬೇರೆಲ್ಲೋ ಈ ತರಹ ಭಾವನಾತ್ಮಕ ಕಾರ್ಯಕ್ರಮಗಳು ನಡೆದಿರಬಹುದಾದರೂ ನಾನು ವಯುಕ್ತಿಕವಾಗಿ ಇದನ್ನು ಕಂಡದ್ದು ಮಾತ್ರ ನನಗೆ ಹೊಸ ಅನುಭವ .  ಕೊಪ್ಪಳಕ್ಕೆ ಬಂದ  ನಂತರ ಇತ್ತೀಚಿಗೆ ನಾನು ತಬಲಾ ಕಲಿಯಲು ಸೇರಿಕೊಂಡ ಶ್ರೀ ಗವಿಸಿದ್ದೇಶ್ವರ ಮಠದ ಸಂಗೀತ ಪಾಥಶಾಲೆಯಲ್ಲಿ ಸಂಪರ್ಕಕ್ಕೆ ಬಂದ ಹಿರಿಯ ಸ್ನೇಹಿತರಾದ ಶ್ರೀ ಶ್ರೀನಿವಾಸ ಜೋಷಿ ಇವರು ಶಿಕ್ಷಣ ಇಲಾಖೆಯಲ್ಲಿ ಸೇವೆಯಲ್ಲಿದ್ದು,  ಪ್ರಸ್ತುತ ಕೊಪ್ಪಳ ಜಿಲ್ಲಾ ಸಂಸದರಾದ ಶ್ರೀ ಶಿವರಾಮೇಗೌಡ ಇವರ ಬಳಿ ಆಪ್ತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೈಬರ್ ಕ್ರಾಂತಿ ಮಾರಕವೇ?: ಸಂದೀಪ ಫಡ್ಕೆ, ಮುಂಡಾಜೆ

ಡಿಜಿಟಲ್ ತಂತ್ರಜ್ಞಾನವನ್ನು ಬಗಲಲ್ಲಿಟ್ಟುಕೊಂಡು ಇಲೆಕ್ಟ್ರಾನಿಕ್ ಮಾಧ್ಯಮ ಮತ್ತು ಸಾಮಾಜಿಕ ತಾಣಗಳು ವಿಶ್ವವನ್ನೇ ಅಂಗೈಯಲ್ಲಿ ತಂದು ಕೂರಿಸಿವೆ. ಎಲ್ಲ ಕ್ಷೇತ್ರಗಳ ವಿದ್ಯಮಾನ ಮತ್ತು ದೈನಂದಿನ ಬದುಕಿನ ಪುಟ-ಪುಟಗಳು ಮುಕ್ತವಾಗಿ ಹರಡಲು ಅನುವು ಮಾಡಿಕೊಟ್ಟಿದೆ. ಇಷ್ಟೇ ಅಲ್ಲದೇ, ವಿವಿಧ ಸಂಘಟನೆಗಳ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಲೂ ಇವು ಹಿಂಜರಿಯುವುದಿಲ್ಲ. ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲರ ಗಮನ ಸೆಳೆಯುವಂತೆ ಮಾಡುವ ಉದಾರ ಗುಣ ಸೈಬರ್ ಕ್ರಾಂತಿಯ ಬೆನ್ನೆಲುಬು. ವಿವಾದಾತ್ಮಕ ಹೇಳಿಕೆಗಳ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ಮಂದಿಗೆ ಹೇಳಿ ಮಾಡಿಸಿದಂತಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿರಂತರತೆಯಲಿ ನಾನೊಂದು…?:ಅವಿನಾಶ್ ಸೂರ್ಯ

ಕೆಲವೇ ಕ್ಷಣದಲ್ಲಿ ಸೂರ್ಯ ಪ್ರತಿ ದಿನದ ಮುಕ್ತಾಯಕ್ಕೆ ಪೂರ್ಣ ವಿರಾಮ ತೆಗೆದುಕೊಳ್ಳುವ ಸಮಯ. ಬೆಳಕು ತನ್ನ ಅಸ್ತಿತ್ವ ಕಳೆದುಕೊಂಡು ಕತ್ತಲೆಯಲ್ಲಿ ಮರೆಯಾಗುವ ವೇಳೆಗೆ, ಮನಸಿನ ಮೂಲೆಯಲ್ಲಿ ಕುಳಿತ ಅನಾಮಿಕನ ಪ್ರಶ್ನೆಯೊಂದು ನೆನಪಾಯಿತು! ಪ್ರಶ್ನೆಗೆ ಉತ್ತರ ಸಿಗುವುದೋ ಇಲ್ಲವೋ? ಇಲ್ಲ ಶಾಶ್ವತವಾಗಿ ಕಾಲದ ಅನಂತತೆಯ ಪಥದಲ್ಲಿ ಎಲ್ಲವೂ ಬದಲಾಗುವುದೋ ಇಲ್ಲವೋ ತಿಳಿಯದು. ಯಾವುದಕ್ಕೂ ಇಲ್ಲಿ ಉತ್ತರ ಪ್ರಶ್ನೆಗಳಿಲ್ಲ. ಅಂದ ಹಾಗೆ ನನ್ನನ್ನು ಪರಿಚಯ ಮಾಡಿಕೊಳ್ಳುವ ವಿಷಯವೇ ಮರೆಯಿತು ನೋಡಿ, ಮಹಾನಗರದ ಒಂದು ಉದ್ಯಾನದಲ್ಲಿ ನಾನೊಂದು ಕುರ್ಚಿ. ಏನಪ್ಪಾ ಕುರ್ಚಿಯದೇನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರೆಡು ಕವಿತೆಗಳು:ಅನಿತಾ, ಶಾಂತಿ ಅಪ್ಪಣ್ಣ

ಸಣ್ಣ ತಪ್ಪಿಗಾಗಿ ಎದುರು ನಿಂತು ನೀ ನಿಂದಿಸುವಾಗ ಹೆದರಿದ ನನ್ನ ಮೊಗವ ಕಂಡು ಮೌನ ತಳೆವ ಆ ನಿನ್ನ ಒಲವಿನ ಪರಿ ಚಂದ…   ಮುಸ್ಸಂಜೆಯಲಿ ಮುತ್ತಿಟ್ಟು, ಮರು ಮುತ್ತಿಗಾಗಿ ಕಾಯುವಾಗ ಕೊಡದೆ ನಾ ಕಾಡುವಾಗ, ಹುಸಿಕೋಪಗೊಂಡ ಆ ನಿನ್ನ ಮುದ್ದು ಮೊಗ ಚೆಂದ….   ನಾ ಮಾಡಿದ ಚೇಷ್ಟೆಯನ್ನೆಲ್ಲಾ ಮರೆತು, ನೀ ನನ್ನ ಮಗುವಂತೆ ಎಂದು ಎದೆಗಪ್ಪಿ ಸಂತೈಸುವ ಆ ನಿನ್ನ ಸಹನೆಯ ಗುಣ ಚೆಂದ…   ನಿನ್ನ ಪ್ರೀತಿಯ ನನ್ನೆದುರು ನಿರೂಪಿಸಿ, ಕಾಯುವಾಗ ನನ್ನ ಸಮ್ಮತಿಗಾಗಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಪರೇಷನ್ ಡೆಂಗ್ಯೂ (ಭಾಗ 2): ನಟರಾಜು ಎಸ್ ಎಂ

ಇಲ್ಲಿಯವರೆಗೆ ಸಿಲಿಗುರಿಯನ್ನು ಎರಡನೇ ಕೋಲ್ಕತ್ತಾ ಎನ್ನುತ್ತಾರೆ. ಸಿಲಿಗುರಿ ಈಶಾನ್ಯ ರಾಜ್ಯಗಳಿಗೆ ಹೆಬ್ಬಾಗಿಲು ಇದ್ದಂತೆ. ಇಂತಹ ಸಿಲಿಗುರಿಯನ್ನು ತಲುಪುತ್ತಿದ್ದಂತೆ ನಾವು ಮಾಡಿದ ಮೊದಲ ಕೆಲಸವೆಂದರೆ ಸಿಲಿಗುರಿಯ ನಕ್ಷೆಯನ್ನು ಒಂದು A4 ಹಾಳೆಯಲ್ಲಿ ಪ್ರಿಂಟ್ ಮಾಡಿಸಿಕೊಂಡೆವು. ಸಿಲಿಗುರಿಯ ನಕ್ಷೆಯನ್ನು ಪ್ರಿಂಟ್ ಮಾಡಿಸಿಕೊಂಡ ಕಾರಣವೇನೆಂದರೆ ಸಿಲಿಗುರಿಗೆ ಸೇರಿದ ಒಟ್ಟು 47 ವಾರ್ಡ್ ಗಳಲ್ಲಿ ನಮ್ಮ ಜಲ್ಪಾಯ್ಗುರಿಗೆ ಸೇರಿದ 14 ವಾರ್ಡ್ ಗಳಲ್ಲಿ ಯಾವ ವಾರ್ಡ್ ಗಳ ಜನರು ಡೆಂಗ್ಯೂ ಜ್ವರದಿಂದ ಹೆಚ್ಚು ಬಳಲುತ್ತಿದ್ದಾರೆ ಎಂಬುದನ್ನು ಮೊದಲು ತಿಳಿಯಬೇಕಿತ್ತು. ನಮ್ಮ ಬಳಿಯಿದ್ದ ಡಾಟಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಚಾರವಾದಿ ಡಾ. ನರೇಂದ್ರ ದಾಬೋಲ್ಕರ್ ಕಗ್ಗೊಲೆ ವೈಚಾರಿಕತೆಯ ಮೇಲಿನ ಧಾಳಿ: ಜೈಕುಮಾರ್

          ಮೂಢನಂಬಿಕೆ, ಅಂಧಶ್ರದ್ಧೆ, ಕಂದಾಚಾರ ಹಾಗೂ ಜಾತಿ ತಾರತಮ್ಯಗಳ ವಿರುದ್ದ ಮಹಾರಾಷ್ಟ್ರದಲ್ಲಿ ಕಳೆದ ೨೫ ವರ್ಷಗಳಿಂದ ಹೋರಾಟ ಮಾಡುತ್ತಿದ್ದ ಖ್ಯಾತ ವಿಚಾರವಾದಿ ಡಾ: ನರೇಂದ್ರ ದಾಬೋಲ್ಕರ್ ರವರನ್ನು ಎರಡು ವಾರಗಳ ಹಿಂದೆ ಕೊಲೆ ಮಾಡಿರುವುದು ಎಲ್ಲೆಡೆ ಪ್ರತಿಭಟನೆ ಮತ್ತು ಆತಂಕಕ್ಕೆ ಕಾರಣವಾಗಿದೆ. ಅವರು ದಿ: ೨೦.೦೮.೨೦೧೩ ರಂದು ವಾಯುವಿಹಾರಕ್ಕೆ ಹೋಗಿದ್ದಾಗ ಅವರನ್ನು ಸಮಾಜಘಾತುಕ ಶಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮಾಯ, ಮಾಟ, ಮಂತ್ರಗಳಿಂದ ಅವರನ್ನು ಕೊಲ್ಲಲಾಗಿಲ್ಲ! ಡಾ: ನರೇಂದ್ರ ದಾಬೋಲ್ಕರ್ ರವರು ಮೂಲತ: … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಭಾಗ 1): ಶಿವು ಕೆ.

ಕೊಲ್ಕತ್ತ ವಿಮಾನ ನಿಲ್ದಾಣದ ೩ಎ ಗಾಜಿನ ಬಾಗಿಲಿಂದ ಹೊರಬರುತ್ತಿದ್ದಂತೆ ಸಣ್ಣಗೆ ಮಳೆ.  ನನಗಾಗಿ ಕಾಯುತ್ತಿದ್ದ "ಅಭಿಜಿತ್ ಡೆ" ಹೆಸರಿನ ನನಗಿಂತ ಸ್ವಲ್ಪ ಹೆಚ್ಚೇ ವಯಸ್ಸಿನ, ಹೆಚ್ಚೇ ಗಾತ್ರದ ಮತ್ತು ಜಾಸ್ತಿ ಬೆಳ್ಳಗಿನ ವ್ಯಕ್ತಿಯೊಬ್ಬ, "ಹಾಯ್ ಶಿವುಜೀ, ಕೆಸಾ ಹೇ, ಪ್ಲೇನ್ ನೇ ಕೊಯಿ ಪ್ರಾಬ್ಲಂ ನಂ ತಾ:  ಸಬ್ ಕುಚ್ ಟೀಕ್ ಹೇನಾ," ಎಂದು ನನ್ನನ್ನು ಗಟ್ಟಿಯಾಗಿ ಬಿಗಿದಪ್ಪಿಕೊಂಡನಲ್ಲ, ಅಲ್ಲಿಗೆ ನನ್ನ ಮನಸ್ಸಿನ ಚಿಂತೆಗಳಲ್ಲಿ ಅರ್ಧದಷ್ಟು ದೂರವಾಗಿತ್ತು. ಮೊದಲ ಬಾರಿಗೆ ನನ್ನ ಮಟ್ಟಿಗೆ ತುಂಬಾ  ದೂರದ ಕೊಲ್ಕತ್ತಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಳೆ ಎನ್ನುವುದು ಒಂಥರಾ ಆಕ್ಸಿಡೆಂಟ್!: ಹೃದಯಶಿವ ಅಂಕಣ

  ತುಂಟ ಕವಿಯ ಗಾಂಭೀರ್ಯತೆ   ನವ್ಯ ಕಾಲದಲ್ಲಿ ಹೊಸಕಾವ್ಯವೆಂದರೆ ಕೇವಲ ದುರಂತಮಯವಾದದ್ದು, ಕ್ಲಿಷ್ಟವಾದದ್ದು, ಸಿನಿಕತನದ್ದು ಎಂಬಂತಹ ತಿಳುವಳಿಕೆ ರೂಢಿಯಲ್ಲಿತ್ತು. ಉತ್ಸಾಹದಿಂದ ಜೀವಂತ ಕಾವ್ಯ ರಚಿಸಿದ ಬಿ. ಆರ್. ಲಕ್ಷ್ಮಣ್ ರಾವ್ ಕಳೆದ ಮೂರು ದಶಕಗಳಲ್ಲಿ ತಮ್ಮದೇ ಶೈಲಿಯ ಕಾವ್ಯ ರಚಿಸಿದವರು ಎಂದು ಖ್ಯಾತ ವಿಮರ್ಶಕ ನರಹಳ್ಳಿ ಬಾಲಸುಬ್ರಮಣ್ಮ್ಯಂ ಪ್ರಸ್ತಾಪಿಸಿರುತ್ತಾರೆ.   ಹೌದು, ಬಿ.ಆರ್.ಎಲ್. ಮೇರೆಗಳನ್ನು ದಾಟಿ ನಿಂತವರು. ಸಾಹಿತ್ಯ ಸರೋವರದಲ್ಲಿ ತಮ್ಮದೇ ವಿನೂತನ ಶೈಲಿಯ ತರಂಗಗಳನ್ನು ಸೃಷ್ಟಿಸಿದವರು. ಗಂಭೀರ ವಿಷಯಗಳನ್ನು ಸರಳವಾಗಿ ಕಾವ್ಯಕ್ಕೆ ಇಳಿಸಿ ಗಮನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಸ್ ಹೂ ಇಸ್ ಕಮಿಂಗ್ ಟು ಡಿನ್ನರ್: ವಾಸುಕಿ ರಾಘವನ್ ಅಂಕಣ

  ಆಗಿನ್ನೂ ಅಮೇರಿಕಾದಲ್ಲಿ ವರ್ಣಬೇಧ ಹೆಚ್ಚು ಇದ್ದ ಕಾಲ. ಬಿಳಿಯರು ಮತ್ತು ಕರಿಯರು ಬಸ್ಸುಗಳಲ್ಲಿ ಒಟ್ಟಿಗೆ ಕೂರುವಂತಿರಲಿಲ್ಲ. ಇಬ್ಬರ ನಡುವೆ ಮದುವೆಯಂತೂ ದೂರದ ಮಾತು, ಸುಮಾರು ರಾಜ್ಯಗಳಲ್ಲಿ ಅದು ಶಿಕ್ಷಾರ್ಹ ಅಪರಾಧ ಕೂಡ ಆಗಿತ್ತು. ಅದೇ ಸಮಯದಲ್ಲಿ ಬಿಡುಗಡೆಯಾದ ಸ್ಟಾನ್ಲಿ ಕ್ರೇಮರ್ ನಿರ್ದೇಶನದ “ಗೆಸ್ ಹೂ ಇಸ್ ಕಮಿಂಗ್ ಟು ಡಿನ್ನರ್” ಈ ವರ್ಣಬೇಧ ಮತ್ತು ಜನರಲ್ಲಿರುವ ತಾರತಮ್ಯದ ಬಗೆಗಿನ ಚಿತ್ರಣ ಹೊಂದಿದೆ. ಜೋಯೀ ಮುಕ್ತ ಮನಸ್ಸಿನ ಹದಿಹರೆಯದ ಹುಡುಗಿ. ಪತ್ರಿಕೋದ್ಯಮಿ ತಂದೆ ಮ್ಯಾಟ್ ಮತ್ತು ಅಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ಮಾತು: ಶ್ರೀವತ್ಸ ಕಂಚೀಮನೆ

ಕಳೆದ ಮಹಿಳಾ ದಿನಾಚರಣೆಗಾಗಿ ಒಂದು ಲೇಖನ ಬರೆದಿದ್ದೆ. ಬರೆದ ವಿಷಯ ಸತ್ಯವೇ. ತುಂಬಾ ಜನ ಮೆಚ್ಚಿಕೊಂಡರು ಕೂಡ. ಆದರೆ ನನಗೇ ಯಾಕೋ ಸಂತೃಪ್ತ ಅನ್ನಿಸಿಲ್ಲ. ಬರೆದ ಬರಹದಲ್ಲಿ ದೇಹ ಸದೃಢವಾಗೇ ಇದ್ದರೂ ಯಾಕೋ ಆತ್ಮ ಇಲ್ಲ ಅನ್ನಿಸ್ತಾ ಇತ್ತು. ಕಾರಣ ಇಷ್ಟೇ ನನ್ನ ಮನಸು ಪುರುಷ ಪ್ರಧಾನ ಮತ್ತು ಸ್ತ್ರೀ ಪ್ರಧಾನ ಎಂಬ ಎರಡೂ ವಾದಗಳನ್ನು ಒಪ್ಪಲಾರದು. ನಾನೆನ್ನುತ್ತೇನೆ ನಮ್ಮನೆಲ್ಲ ಸಷ್ಟಿಸಿದ ಪ್ರಕೃತಿ ಮಾತ್ರ ಪ್ರಧಾನ. ಅದರ ಪ್ರಾಧಾನ್ಯತೆಯನ್ನು ಒಪ್ಪಿಕೊಳ್ಳದ ನಾವು, ಅದು ನೀಡಿದ ಮಿತಿಗಳನ್ನು ಮೀರಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುಂದಿನ ಪೀಳಿಗೆಗೊಂದು ಪುಟ್ಟ ಪತ್ರ: ಅಖಿಲೇಶ್ ಚಿಪ್ಪಳಿ ಅಂಕಣ

ಭವಿಷ್ಯದ ಪುಟಾಣಿಗಳೆ, ಈ ಭೂಮಿ ಹುಟ್ಟಿ ೪೬೦ ಕೋಟಿ ಅಗಾಧ ವರ್ಷಗಳಾದವು. ನವಮಾಸಗಳು ಹೊತ್ತು-ಹೆತ್ತು ಇವತ್ತು ಜಗತ್ತಿಗೆ ಬಂದು ಕಣ್ಬಿಡುವ ಹೆಚ್ಚಿನ ನೀವುಗಳು ಖಾಸಗಿ-ಸರ್ಕಾರಿ ಆಸ್ಪತ್ರೆಗಳ ಫಿನೈಲ್-ಡೆಟಾಲ್‌ಗಳ ವಾಸನೆಗಳನ್ನೇ ಸೇವಿಸಿ ವಿಸ್ಮಿತರಾಗಿ ಹೊರಜಗತ್ತನ್ನು ಗಮನಿಸುತ್ತೀರಿ. ಕಲುಷಿತ ವಾತಾವರಣ ನಿಮಗೆ ಥಂಡಿ-ಜ್ವರ-ಕಫಗಳನ್ನು ಧಾರಾಳವಾಗಿ ಧಾರೆಯೆರೆಯುತ್ತದೆ. ಗಾಬರಿಗೊಂಡ ತಂದೆ-ತಾಯಿ, ಅಜ್ಜ-ಅಜ್ಜಿಯರನ್ನು ಸಮಾಧಾನ ಮಾಡಲು ಜೊತೆಗೆ ನಿಮಗಾದ ಜಡ್ಡನ್ನು ಹೋಗಲಾಡಿಸಲು ಹಲವಾರು ಮದ್ದುಗಳಿವೆ, ಚುಚ್ಚುಮದ್ದುಗಳಿವೆ, ಸಿರಫ್‌ಗಳಿವೆ ಇತ್ಯಾದಿ ಸಾವಿರಗಳಿವೆ. ಇವುಗಳನ್ನು ಪೂರೈಸಿ ತಮ್ಮ ಹಣದ ಥೈಲಿಯನ್ನು ತುಂಬಿಸಿಕೊಳ್ಳಲು ಅಂತಾರಾಷ್ಟ್ರೀಯ ಕಂಪನಿಗಳು ತುದಿಗಾಲಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವಿತ್ರಿ: ಡಾ. ಗವಿಸ್ವಾಮಿ

            ಅದು ಎರಡಂಕಣದ ಗುಡಿಸಲು. ಅಲ್ಲಲಿ ಸುಣ್ಣದ ಚಕ್ಕೆಎಡೆದು  ಕೆಂಪಗೆ ಗಾಯಗೊಂಡಂತೆ ಕಾಣುತ್ತಿದೆ. ಛಾವಣಿಯ ಗರಿಗಳು ಮಳೆ-ಬಿಸಿಲಿನ   ಹೊಡೆತಕ್ಕೆ ಜೀರ್ಣವಾಗಿ ಬೂದಿ ಬಣ್ಣಕ್ಕೆ ತಿರುಗಿದೆ. ಒಂದು ಕೆಂಚಬೆಕ್ಕು ಛಂಗನೆ ಛಾವಣಿ  ಮೇಲೆ ನೆಗೆಯಿತು. ಅದು ನೆಗೆದು ಕೂತ ರಭಸಕ್ಕೆ ಛಾವಣಿ ಮೇಲೆ ಜಲಿಜಿಲಿಜಲಿಜಲಿ ಅಂತಾ ಸದ್ದಾಯಿತು. ''ತತ್ತದ ಇಲ್ಲಿ ಇಟ್ಟನ್ದೊಣ್ಯಾ, ಮನಗಸ್ಬುಡ್ತಿನಿ ಒಂದೇ ಏಟ್ಗಾ.. ಇಲ್ಲ್ಯಾರ್ ಆಟ್ ಇದ್ದದು ಅಂತ್ಯಾಕಣಿ ಗಳ್ಗಸೊತು ಬಂದದು'' ಎಂದು ಬೈಯುತ್ತಾ ಕಾಳಮ್ಮ ಗುಡಿಸಿಲಿನಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತೀಶನ ಚುಟುಕಗಳು

೧. ಸಾಧ್ಯ ಮರಳುಗಾಡಿನಲೂ  ಹೂದೋಟ ಬೆಳೆಯಬಲ್ಲೆ ನಾನು, ಭಾವಗಳು ಹುಟ್ಟಬೇಕಷ್ಟೇ.   ೨. ಪರಿಹಾರ ಹೃದಯಕೊಂದು  ಒಡೆದ ಗಾಜು ನೆಟ್ಟಿದೆ, ಕಿತ್ತೊಗೆಯಲೊಂದು ಹೂವು ಬೇಕಿದೆ.   ೩. ಅರಿವು ಕೊಳಕು ಮೆತ್ತಿದ್ದು ಬಟ್ಟೆಗೆ ತಿಳಿಯಬೇಕಿಲ್ಲ ಕೊಳೆಗೆ ಗೊತ್ತಾಗಬೇಕು ಇಲ್ಲ ಸಾಬೂನು ಅರಿಯಬೇಕು.   ೪. ತಪ್ಪು ಮಡದಿ ಸಿಟ್ಟಾದರೆ ತಪ್ಪು ಯಾರದ್ದೇ ಆಗಿರಬಹುದು ಮಗ ಕೋಪಿಸಿಕೊಂಡರೆ ಮಾತ್ರ ತಪ್ಪು ನನ್ನದೇ.   ೫. ಗುರಿ ನದಿ ಹುಟ್ಟಿದಾರಭ್ಯ ಸಮುದ್ರ ಹುಡುಕಿ ಹೊರಡುವುದಿಲ್ಲ; ಹರಿಯುತ್ತ ಹೋಗುವುದು ಅನಿವಾರ್ಯ ಕರ್ಮವದಕೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎದೆಯೊಳಗೆ ನದಿಯೊಂದು ಹರಿಯುತಿದೆ ಪ್ರೀತಿಯ ಹೊತ್ತು: ನಾಗರಾಜ್ ಹರಪನಹಳ್ಳಿ

          * ಆವತ್ತು ಬೆಳದಿಂಗಳ ರಾತ್ರಿ. ಅಕ್ಟೋಬರ್ ತಿಂಗಳ ಒಂದು ದಿನ. ಸರಿಯಾಗಿ ನೆನಪಿಲ್ಲ. ದಂಡೆಯಲ್ಲಿದ್ದ ಜನ ಮನೆಗೆ ಮರಳಿಯಾಗಿತ್ತು. ಕತ್ತಲನ್ನು  ತನ್ನೊಳಗೆ ಹೀರಿದ ಬೆಳದಿಂಗಳು ಮೆರೆಯುತ್ತಿತ್ತು. ಒಂದೊಂದೆ ನಕ್ಷತ್ರಗಳು ಮಿನುಗುತ್ತಿದ್ದವು. ಸಣ್ಣಗೆ ಮೊರೆಯುತ್ತಿತ್ತು ಕಡಲು. ಬೆಳದಿಂಗಳಿಗೆ ನಾದ ಹರಡಿದಂತಿತ್ತು. ರವೀಂದ್ರನಾಥ ಟ್ಯಾಗೋರ ಹೆಜ್ಜೆಯಿಟ್ಟು ಓಡಾಡಿದ ದಂಡೆಯಲ್ಲಿ  ನಾನು ಎಷ್ಟೋ ಗಂಟೆಗಳ ಕಾಲ ಕುಳಿತಿದ್ದವನು ಜನ ಮರೆಯಾಗುತ್ತಿದ್ದಂತೆ, ದಂಡೆಯ ಮೇಲೆ ಒರಗಿಕೊಂಡೆ. ಆಕಾಶಕ್ಕೆ  ಮುಖಮಾಡಿ. ಆಕಾಶವನ್ನ ದಿಟ್ಟಿಸಿ ನೋಡುವುದೇ ಸೊಗಸು. ಅದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತಿಮ ನಮನ: ಸುಮನ್ ದೇಸಾಯಿ ಅಂಕಣ

        ಮುಂಜಾನೆ  ನಸಿಕಲೇ 5 ಗಂಟೆ ಆಗಿತ್ತು. ಅದ ಇನ್ನು ಜಂಪ ಹತ್ತಲಿಕತ್ತಿತ್ತು. ಅತ್ತಿಯವರ ನರಳಾಟ ಕೇಳಿ ಸುಧಾಗ ಎಚ್ಚರಾತು. ರಾತ್ರಿಯೆಲ್ಲಾ ಮಲಗಿದ್ದೆಯಿಲ್ಲ. ಅದೇನ ಸಂಕಟಾ ಆಗಲಿಕತ್ತಿತ್ತೊ ಅವರಿಗೆ ಗೊತ್ತು. ಸಾಯೋ ಮುಂದಿನ ಸಂಕಟಾ ಭಾಳ ಕೆಟ್ಟ ಇರತದಂತಾರ ಇದ ಏನೊ ಅನಿಸ್ತು. ಆದ್ರ ಸುಧಾಗ ಅದ ಕ್ಷಣಾ ಅಂಥಾ ಪರಿಸ್ಥಿತಿಯೊಳಗ ನಗುನು ಬಂತು. ಅಲ್ಲಾ ತಮ್ಮಷ್ಟಕ್ಕ ತಾವು ಅತೀ ಶಾಣ್ಯಾರ ಅನಕೊಂಡ ದೀಡ ಪಂಡಿತರು “ ಸಾಯೊ ಸಂಕಟಾ ಭಾಳ ಕೆಟ್ಟ ಇರತದ “ ಅಂತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 12): ಹನುಮಂತ ಹಾಲಿಗೇರಿ

  ಇಲ್ಲಿಯವರೆಗೆ   ಮರುದಿನ ನಮ್ಮನ್ನು ಹುಡುಕಿಕೊಂಡು ರತ್ನಮ್ಮನ ಪ್ರಿಯಕರನೆನಿಸಿಕೊಂಡಿದ್ದ, ರತ್ನಮ್ಮ ಇಲ್ಲದಿದ್ದಾಗ ಗಲ್ಲೆ ಮೇಲೆ ಕೂಡ್ರುತ್ತಿದ್ದ ಧರ್ಮಣ್ಣ ಪೊಲೀಸ್ ಸ್ಟೇಷನ್ನಿನೊಳಗೆ ನಾವಿರುವ ಕಡೆ ಬಂದಿದ್ದ. ಆತನನ್ನು ಅದ್ಹೇಗೋ ಪೋಲೀಸರು ಒಳಗೆ ಬಿಟ್ಟಿದ್ದರು. ಇಲ್ಲಿಂದ ಬಿಡಿಸಿಕೊಂಡು ಹೋಗಲು ಸಾವಿರಾರು ರೂಪಾಯಿ ಖರ್ಚಾಗುತ್ತವೆ. ರತ್ನಮ್ಮ ಹತ್ತು ಸಾವಿರ ಹೊಂದಿಸಿ ನಿಮ್ಮನ್ನು ಬಿಡಿಸಿಕೊಳ್ಳಾಕ ತಯಾರದಾಳ. ನೀವು ಮೇಲಿನ ಖರ್ಚುಗಳಿಗಾಗಿ ಪ್ರತಿಯೊಬ್ಬರು ಐದೈದು ನೂರು ಕೊಡಬೇಕು ಎಂದು ಕರಾರು ಮಾಡಿದ. ಆದರೆ ನಮ್ಮಲ್ಲಿ ಯಾರೊಬ್ಬರಲ್ಲಿಯೂ ಹಣವಿರಲಿಲ್ಲ. ಅದು ಅವನಿಗೂ ಗೊತ್ತಿತ್ತು. ‘ಈಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲೂಸಿಯಾ: ಪ್ರಶಸ್ತಿ ಅಂಕಣ

ಫಿಲ್ಮಿಗೆ ಹೋಗಿ ಕೂತಿದ್ವಿ. ನಿನ್ನೊಳೆಗೆ ಮಾಯೆಯೋ, ಮಾಯೆಯೊಳಗೆ ನೀನೋ ಅಂತ ಶುರುವಾಯ್ತು..ಹೆಸರು ತೋರಿಸುವವ ಹೊತ್ತಿಗೆ ಹೂವೊಳಗೆ ಸುಗಂಧವೋ, ಸುಗಂಧದೊಳಗೆ ಹೂವೋ, ಜಿಘ್ರಾಣಿಸುವುದರೊಳಗೆ ಇವೆರಡೋ.. ಅಂತ ಮುಂದುವರಿಯೋ ಅಲ್ಲಮಪ್ರಭುವಿನ ವಚನ. ಅದು ಕನಕದಾಸರ ರಚನೆ ಅಂತ ಆಮೇಲೆ ತೋರಿಸುವವರಿಗೂ ಕೆಲವರಿಗೆ ಪಕ್ಕಾ ಕನ್ಫ್ಯೂಷನ್ನು. ಸರಿ, ನಿರ್ದೇಶಕ ಪವನ, ನಿರ್ಮಾಪಕರು .. ? ಏನಿದು, ಹತ್ತಾರು ಹೆಸರುಗಳು, ಸಹ ನಿರ್ಮಾಪಕರು, ನೂರಾರು ಹೆಸರುಗಳು.. ಯಪ್ಪಾ.. ಒಟ್ಟು ನೂರಾ ಏಳು ಜನ ನಿರ್ಮಾಪಕರು ಸೇರಿ ನಿರ್ಮಿಸಿದ ಚಿತ್ರ.ಅಂದರೆ ಜನರ ಚಿತ್ರ..ನಾನು ಯಾವ ಚಿತ್ರದ ಬಗ್ಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪದ್ದಿಯ ಪತ್ರ: ಅಣ್ಣಪ್ಪ ಆಚಾರ್ಯ, ಹೊನ್ನಾವರ

ಪ್ರೀತಿಯ ಪತಿದೇವರಿಗೆ.., ನಿಮ್ಮ ಪ್ರಾಣಕಾಂತೆ ಪದ್ದಿಯ ‘ಸಕ್ಕರೆಗಿಂತ ಸಿಹಿ’ಯಾದ ಮುತ್ತುಗಳು..! ಏನ್ರೀ.., ನಾನು ಪ್ರೀತಿಯಿಂದ ನಾಲ್ಕು ಮಾತು ಬೈಯ್ದೆ ಅಂತ ಮನೆ ಬಿಟ್ಟು, ಆ ಸತ್ಯಾನಂದ ಸ್ವಾಮಿ ಆಶ್ರಮ ಸೇರುವುದಾ..? ಗಣೇಶನ ಹಬ್ಬಕ್ಕೆ ಬಿಗ್‍ಬಜಾರ್‍ನಲ್ಲಿ ಡಿಸ್ಕೌಂಟ್‍ನಿಂದ ನಾಲ್ಕು ಸೀರೆಯನ್ನು 2000 ರೂಪಾಯಿಗೆ ತಂದು 5000 ರೂಪಾಯಿ ಬಿಲ್ ತೊರಿಸಿದ್ದಕ್ಕೆ ಬೇಜಾರಾ..? ಅಥವಾ ಹಬ್ಬದ ದಿನ ನಾನು ಅಡುಗೆ ಮಾಡಿದ್ದಕ್ಕಾ..?! ರೀ.., ಇನ್ಮುಂದೆ ಹಬ್ಬದ ದಿನವೂ ನೀವೇ ಅಡುಗೆಮಾಡಿ. ಗಣೇಶನ ಹಬ್ಬದ ದಿನ ನಾನು ಮಾಡಿದ ಅಡುಗೆ ಎಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫೋಟೋಗ್ರಾಫಿ:ಪ್ರಭು ಕೆ.ಎನ್.

ಬೆಂಗಳೂರಿನ Advanced Centre for Plant Biotechnologyಯ ಸಂಶೋಧನಾ ವಿದ್ಯಾರ್ಥಿ ಪ್ರಭು ಕೆ.ಎನ್. ಕ್ಯಾಮರಾಕ್ಕೆ ಸೆರೆಸಿಕ್ಕ ನಿಸರ್ಗವಿದು… ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ