ಈ ಬಾಳ ಪುಟಗಳಲ್ಲಿ ಭಾಮಿನಿ: ಉಮೇಶ್ ದೇಸಾಯಿ
ಅವ ಬಂದಾಗ ಎದಿರಾಗಬಾರದು ಎಂಬ ಹಿಂಜರಿಕೆ ಇತ್ತು. ಹೀಗಾಗಿಯೇ ನೆವ ಮಾಡಿ ಬಾಜೂ ಮನೆಯ ಶಾಮರಾಯರ ಕಡೆ ಹೋಗಿದ್ದೆ. ವಾಸು ಮಾಮಾನ ಜೊತೆ ಅವನ ಹರಟೆ ಜೋರಾಗಿ ನಡೆದಿತ್ತು. ಸ್ವಲ್ಪ ಅನ್ನುವುದಕ್ಕಿಂತ ಪೂರ್ತಿಯೇ ಬದಲಾಗಿದ್ದ. ಕೂದಲಿಗೆ ಢಾಳಾಗಿ ಬಣ್ಣ ಬಡಿದುಕೊಂಡಿದ್ದ. ಬೊಜ್ಜು ಸ್ವಲ್ಪ ಅತಿ ಅನಿಸುವಂತಿತ್ತು. ಒಬ್ಬನೇ ಬಂದಿದ್ದಾನೆ. ಇದಾಗಲೇ ಶಾಮರಾಯರ ಮನೆಯಲ್ಲಿ ಸುದ್ದಿ ಹಬ್ಬಿತ್ತು. ಪಡಸಾಲೆಯಲ್ಲಿ ಕುಳಿತ ಅವನ ಮುಂದೆ ಹಾದೇ ಅಡಿಗೆ ಮನೆಗೆ ಹೋಗಬೇಕು. ನನ್ನ ನೋಡಿದವನೋ ಇಲ್ಲವೋ ಗೊತ್ತಾಗಲಿಲ್ಲ. ಹರಟೆ ಜೋರಾಗಿತ್ತು. ಗಮನಿಸಿರಲಿಕ್ಕಿಲ್ಲ … Read more