ಮರಣ ತರುವ ಬಿಸಿಗಾಳಿ!: ಅಖಿಲೇಶ್ ಚಿಪ್ಪಳಿ

ಮೇ ತಿಂಗಳೆಂದರೆ ಎಲ್ಲೆಡೆ ಬಿಸಿಲು-ತೀರಲಾರದ ಬೇಸಿಗೆ. ಮುಂಗಾರು ಶುರುವಾಗುವ ಮುಂಚಿನ ತಿಂಗಳು. ಒಂಥರಾ ಅನಾಹುತಗಳ ತಿಂಗಳು. ಕೆಲವಡೆ ಹಿಂಗಾರಿನ ಹೊಡೆತಕ್ಕೆ ಸಿಕ್ಕು ನಲುಗುವವರು, ಮತ್ತೆ ಕೆಲವೆಡೆ ಬಿಸಿಲಿನ ತಾಪಕ್ಕೆ ಕರಗುವವರು. ಫಸಲು ಕೈಗೆ ಬರುವಷ್ಟರಲ್ಲಿ ವರುಣನ ಅವಕೃಪೆಯಿಂದಾಗಿ ಬೆಳೆ ನಷ್ಟ, ರೈತನ ಇಡೀ ಶ್ರಮ ನೀರಿನಲ್ಲಿ ಹೋಮ. ಪ್ರತಿವರ್ಷ ನೈಸರ್ಗಿಕ ವಿಕೋಪಗಳು ಹೆಚ್ಚಾಗುತ್ತಿವೆ. ದಕ್ಷಿಣ ಭಾರತದಲ್ಲೇ ಎರಡು ರೀತಿಯ ನೈಸರ್ಗಿಕ ವಿಕೋಪಗಳ ತಾಂಡವ ನೃತ್ಯ ನಡೆಯಿತು. ಬಳ್ಳಾರಿಯಂತಹ ಬಿರುಬೇಸಿಗೆ ನಾಡಿನಲ್ಲಿ ಆಲಿಕಲ್ಲು ಮಳೆ ಬಂದು ಇಳೆ ಕೊಂಚ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇಹವೆಂದರೆ………..: ಅಮರ್ ದೀಪ್ ಪಿ.ಎಸ್.

ಸಮಾಧಿ ******  ಮಾಂಸ ಮಣ್ಣಲ್ಲಿ ಕರಗಿ  ಬಳಿಕ ಬಿಕರಿಯಾಗದೇ ಉಳಿವ ಸವೆಯದ ಬಿಡಿ ಮೂಳೆಗಳ ಮುಚ್ಚಿದ ದುಖಾನು …. ಒಂದೆರಡು ವರ್ಷಗಳ ಹಿಂದೆ ಈ ಸಾಲುಗಳನ್ನು ಬರೆದಿದ್ದೆ. ಈ ಸಾವು, ಸಮಾಧಿ ಮತ್ತು ಸುಡುಗಾಡು ಅನ್ನುವಾಗೆಲ್ಲಾ ಒಂದು ಬಗೆಯ ಮನಸ್ಥಿತಿಗೆ ಒಳಗಾಗುತ್ತಲೇ ಇರುತ್ತೇನೆ. ನಾವು ಕೆಲವು ಮಾತಿಗೆ ಕೆಟ್ಟ ಬೇಸರ ಮಾಡಿಕೊಂಡು “ಇದೇನ್ ಸುಡುಗಾಡಲೇ” ಅನ್ನುತ್ತಿರುತ್ತೇವೆ.   ಯಾರಾದರೂ ಸತ್ತರೆ ಮಾತ್ರ ಮಣ್ಣು ಮಾಡಲು ನೆನಪಾಗುವ ಸ್ಥಳ.  ಅದು ಬಿಟ್ಟು ಇಷ್ಟ ಪಟ್ಟು ಖುಷಿಯಲ್ಲಿ ಹೋದಂತೆ ಪಾರ್ಕು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೋಲ್ವೋ: ಪ್ರಶಸ್ತಿ

ವೋಲ್ವೋದ ಜಂಟಿ ಸೀಟಲ್ಲಿ ಒಂಟಿಯಾಗಿ ಕೂತು ಮಳೆಯಿಲ್ಲದ ಬೇಸಿಗೆಯ ತಂಪಾದ ಹವೆಯ ಸವಿ ಅನುಭವಿಸುತ್ತಾ ಹೆಚ್ಚು ಹೊತ್ತೇನಾಗಿರಲಿಲ್ಲ. ಪಕ್ಕದಲ್ಲೊಬ್ಳು ಮುಸುಕಿಣಿ ಅವತರಿಸಿದಳು. ವೈತರಿಣಿ, ಮಂಜೂಷಾ ಕಿಣಿ ಅನ್ನೋ ತರ ಇದ್ಯಾವ ಹುಡುಗಿ ಹೆಸ್ರಪ್ಪಾ ಅಂದ್ಕೊಂಡ್ರಾ ? ಅದು ಹೆಸರಲ್ಲ, ಮುಸುಕು ! ಈ ಮೊದ್ಲು ಹೇಳಿದ ಹೆಸ್ರು ಯಾರು ಅಂದ್ರಾ ? ಅದ್ರ ವಿಚಾರಕ್ಕೆ ಇನ್ನೊಮ್ಮೆ ಬರೋಣ. ಮುಸುಕುಧಾರಿಣಿ ಮುಸುಕು ತೆಗೆಯೋ ತನಕ ಅವಳನ್ನೇ ದುರುಗುಟ್ಟಿ ನೋಡೋದು ಸಜ್ಜನಿಕೆ ಅಲ್ಲವಂತ ಪಕ್ಕದಲ್ಲಿ ಏನೂ ಕಾಣದಿದ್ರೂ ಕಿಟಕಿಯ ಹೊರಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ನೂರುಲ್ಲಾ ತ್ಯಾಮಗೊಂಡ್ಲು, ಅಜ್ಜೀಮನೆ ಗಣೇಶ್, ಬಿದಲೋಟಿ ರಂಗನಾಥ್

ಗೊಹರ್     ಮನದ ಹರಕೆಯು ಕನಸಾಗಿ ಕಾಡಿದೆ ಕಣ್ಣಿನಾಳದಲಿ ಮಗನೆ ನೀ ಬೆಳೆದು ಬಳಕುವ ಬಳ್ಳಿಯೊಡಲಲಿ ಹೂಗಳು ನಗುತಲಿರಲಿ ಘಮ್ಮನೆ. ಬೆಳೆದು ದೊಡ್ಡವನಾಗಿ ಹಾರದಿರು ನಕ್ಷತ್ರದ ಸುಳಿಗೆ  ಇಲ್ಲೆ ಕೂಡಿಬಾಳೊ ಇರುವ ಗುಡಿಯೆ ಸ್ವರ್ಗ  ನಮಗೆ. ಸಾವಿರಾರು ವ್ಯೆಭೋಗದಾಭರಣಗಳು ಸಮುದ್ರ  ದೊಡಲಿನ ಸಿಂಗಾರಕೆ? ಹೃದಯ ಸಮುದ್ರದಲ್ಲಿನ ಮುತ್ತನ್ನು (ಗೊಹರ್) ಹೊತ್ತ ಎನಗೆ ಯಾವುದೇತರಹಂಗೆ? ನಡೆ,ನಿನ್ನ ಅಂಬೆಗಾಲುಗಳಲಿ ಹೊನ್ನಕಿರಣಗಳು ಸೂಸಲಿ ನಾಳಿನಾಸೆಯ ಎಮ್ಮಮನಗಡಲಲಿ ಹರ್ಷದಲೆಗಳು ಏಳಲಿ. -ನೂರುಲ್ಲಾ ತ್ಯಾಮಗೊಂಡ್ಲು         ಜಗತ್ತು …. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೂಫಿ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಹಂಡೆ ಸತ್ತಿದೆ ಕೋಜಿಯಾ ಒಂದು ದಿನ ಕಂಚುಗಾರನಿಂದ ಹಂಡೆಯೊಂದನ್ನು ಎರವಲು ಪಡೆದು ಮನೆಗೆ ಒಯ್ದನು. ಮರುದಿನ ಅದರೊಳಗೆ ದುಂಡನೆಯ ಪುಟ್ಟ ಬೋಗುಣಿಯೊಂದನ್ನು ಹಾಕಿ ಹಿಂದಿರುಗಿಸಿದ. ಮಾಲಿಕ ಹಂಡೆಯೊಳಗಿದ್ದ ಪುಟ್ಟ ಬೋಗುಣಿಯನ್ನು ತೋರಿಸಿ ಕೇಳಿದ, “ಇದೇನು?” ಅದನ್ನು ನೋಡಿದ ಕೋಜಿಯಾ ಉದ್ಗರಿಸಿದ, “ಇದೇನು? ಹಂಡೆ ಒಂದು ಮರಿ ಹಾಕಿದೆ!”. ಮಾಲಿಕ ಬೋಗುಣಿಯನ್ನೂ ಹಂಡೆಯನ್ನೂ ತನ್ನ ಸುಪರ್ದಿಗೆ ತೆಗೆದುಕೊಂಡ. ಇನ್ನೊಂದು ದಿನ ಕೋಜಿಯಾ ಪುನಃ ಹಂಡೆಯನ್ನು ಎರವಲು ಪಡೆದು ಮನೆಗೆ ಒಯ್ದ. ಐದು ದಿನಗಳಾದರೂ ಅದನ್ನು ಕೋಜಿಯಾ ಹಿಂದಿರುಗಿಸದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾನಸಿ: ಮಹಾದೇವ ಹಡಪದ

        ಬರೋ…. ಬಂಧು ಬಳಗ ದೊಡ್ಡದು, ಆದ್ದರಿಂದ ಮದುವಿ ಮನಿ ತುಂಬ ಬರೇ ಹೊಯ್ಯ-ನಯ್ಯ ಮಾತುಕತೆ ಜೋರಾಗಿ ನಡೆದಿತ್ತು. ಅತ್ತಿ ಮಾವ ಬಂದ ಮಂದೀನ ಸಂಭಾಳಸಲಿಕ್ಕ ಮತ್ತು ಯಾವ ಅನಾನುಕೂಲ ಆಗಧಂಗ ನೋಡಕೊಳ್ಳಲಿಕ್ಕ ಒದ್ದಾಡೊ ಆ ಹೊತ್ತಿನಾಗ ಮನುಕುಮಾರ ಮತ್ತವನ ವಿಧವೆ ತಾಯಿ ಶಿವಕ್ಕ ಧೂಳಸಂಜಿ ಅಷ್ಟೊತ್ತಿಗೆ ಬಂದ್ರು. ‘ಇದೇನವಾ ಬೆಂಗ್ಳೂರು ಸೇರಿದ್ದ ಮಗರಾಯ ಅಪರೂಪಕ್ಕ ಅತ್ತಿ ಮನೀಗೆ ಬಂದನಲ’್ಲ ಸಣ್ಣತ್ತಿ ಚಾಷ್ಟಿ ಮಾಡಿದಳು. ಹೌದು ನಾಟಕ, ಹಾಡು, ಕುಣಿತ ಅಂತ ತಿರುಗೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿವಿ ಕಚ್ಚುವುದು!: ಎಸ್.ಜಿ.ಶಿವಶಂಕರ್

ಅರೆ..ಹಾಗಂದರೇನು? ಎಂದು ಹುಬ್ಬೇರಿಸಿದ್ದೀರೇನು? ನೀವು ಈ ಮಾತು ಈವರೆಗೆ ಕೇಳಿಯೇ ಇಲ್ಲವೆ?  ‘ಇಲ್ಲ’ ಎಂಬ ನಿಮ್ಮ ಮಾತನ್ನು ನಾನು ಖಂಡಿತಾ ನಂಬುವುದಿಲ್ಲ! ಎಲ್ಲಿಯಾದರೂ ಅಪರೂಪಕ್ಕಾದರೂ ಈ ಮಾತು ನೀವು ಕೇಳಿಯೇ ಇರುತ್ತೀರಿ. ಕೇಳಿದಾಗ ಈ ಪದದ ಅರ್ಥವಾಗಿರಬಹುದು ಇಲ್ಲ ಅರ್ಥವಾಗದೆ ಮರೆತಿರಬಹುದು!  ಕಿವಿಕಚ್ಚುವುದು ಎಂದಾಕ್ಷಣ ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯ ಕಿವಿಯನ್ನು ಕಚ್ಚುತ್ತಿರುವುದನ್ನು ಕಲ್ಪಿಸಿಕೊಳ್ಳಬೇಡಿ! ಈ ಪದ ನನ್ನ ಕಿವಿಯ ಮೇಲೆ ಬಿದ್ದುದು ಕೇವಲ ವಾರದ ಹಿಂದೆ. ಆಗಿನಿಂದಲೂ ಇದರ ಅರ್ಥ, ವ್ಯಾಪ್ತಿಗಳ ಬಗೆಗೇ ಚಿಂತಿಸುತ್ತಿರುವೆ ಎಂದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುಜರಿ ಬದುಕಿನ ದಾರಿ: ಅಮರ್ ದೀಪ್ ಪಿ.ಎಸ್.

ಅಲ್ಲಿ ನನಗೊಂದು ಹೊಸ ಬಟ್ಟೆಯಿಂದ ಮುಖ ಒರೆಸಿ ಒರೆಸಿ ಇಕ್ಕಟ್ಟಾದ ಜಾಗದಲ್ಲಿ ಮಲಗಿಸಿದ್ದರು.  ಆ ಜಾಗದಲ್ಲಿ ನನ್ನಂತೆ ಇತರರಿಗೂ ಅದೇ ಸ್ಥಿತಿ.   ಅಲ್ಲಿ ಬಂದು ಹೋಗುವ ನೂರಾರು ಮಂದಿ ನಮ್ಮನ್ನೆಲ್ಲಾ ಮುಟ್ಟಿ, ತಟ್ಟಿ, ತಲೆ ಹಿಡುದು, ತಿರುವ್ಯಾಡಿ, ಕಾಲು ಜಗ್ಗಿ, ಮೈ ಬೆಂಡು ಮಾಡಿ, ನೋಡಿ “ಉಹ್ಞೂಂ. ಬ್ಯಾಡ” ಅನ್ನೋ ಮಂದಿ. ಇನ್ನೂ ಕೆಲವರು “ಇಷ್ಟಕ್ಕಾದ್ರ ಕೊಡು, ಇಲ್ಲಾಂದ್ರ ಬ್ಯಾಡ, ದುಬಾರಿಯಾತು”, ಅನ್ನುವವರು. ಅವರೆಲ್ಲಾ ಬರೀ ಹೆಂಗಸರು.  ಹಿಂಡು ಮಂದಿ ಕಲೆಯುವ ಜಾತ್ರಯೊಳಗೆ ಕೆಟ್ಟ ಬಿಸಿಲಲ್ಲಿ ನನ್ನಂಥವರನ್ನು ಮಲಗಿಸಿ, ಕುಕ್ಕರಗಾಲಲ್ಲಿ ಕುಂದ್ರಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಣಿಗಳಿಂದ ಪಾಠ ಕಲಿಯುವ ಕಾರ್ಪೋರೇಟ್ ಪ್ರಪಂಚ: ಅಖಿಲೇಶ್ ಚಿಪ್ಪಳಿ

ಬಿರುಬಿಸಿಲಿನ ಈ ದಿನದಲ್ಲಿ ಕಾಗೆಯೊಂದಕ್ಕೆ ಬಾಯಾರಿಕೆಯಾಗಿತ್ತು. ಮಡಿಕೆಯಲ್ಲಿ ಅರ್ಧ ಮಾತ್ರ ನೀರು. ಬುದ್ಧಿವಂತ ಕಾಗೆ ಹತ್ತಿರದಲ್ಲಿದ್ದ ಕಲ್ಲುಗಳನ್ನು ಕೊಕ್ಕಿನಿಂದ ಕಚ್ಚಿಕೊಂಡು ಬಂದು ಮಡಿಕೆಗೆ ಹಾಕುತ್ತದೆ. ಮಡಿಕೆಯಲ್ಲಿದ್ದ ನೀರು ಮೇಲೆ ಬರುತ್ತದೆ. ಕೊಕ್ಕಿನಿಂದ ಆ ನೀರನ್ನು ಹೀರಿ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುತ್ತದೆ. ಇಂತದೊಂದು ಕತೆಯಿತ್ತು. ಈ ಕತೆ ಕಲ್ಪನೆಯದ್ದೇ ಇರಬಹುದು. ಆದರೂ ನಮ್ಮ ಕಲ್ಪನೆಗೂ ಮೀರಿ ಪ್ರಾಣಿಲೋಕ ತನ್ನ ಮಿತಿಯಲ್ಲಿ ಬುದ್ಧಿವಂತಿಕೆ ತೋರುತ್ತವೆ. ಈಗೀಗ ಕಾರ್ಪೋರೇಟ್ ವಲಯದಲ್ಲಿ ಮ್ಯಾನೇಜ್‍ಮೆಂಟಿನದ್ದೇ ಸವಾಲಾಗಿದೆ. ಒಂದು ಕಂಪನಿಯನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವುದು ಪೈಪೋಟಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ಅಜ್ಜೀಮನೆ ಗಣೇಶ್, ನಗೆಮಲ್ಲಿಗೆ, ಕಮಿ (ಪುಟ್ಟಕ್ಕ)

ದಿಬ್ಬಣದ ಸೂತಕ ಸೇರನೊದೆಯುವ ಹೊತ್ತಲ್ಲಿ ಹೊಸ್ತಿಲಲ್ಲೇ ಸತ್ತು ಬಿದ್ದಿತ್ತು.. ಸುಡುವ ಮನೆ ಹುಡುಗನಿಗೆ ಹೂಳುವ ವಂಶದ ಹೆಣ್ಣನು ಬೆಸದಿದ್ದ ಪ್ರೇಮ.. ಸಂಭ್ರಮ ಸರಿದಲ್ಲೀಗ ಸೂತಕ ಹೊಕ್ಕಿದೆ, ಮೌನ ಮಿಕ್ಕಿದೆ, ಅನುಕಂಪವೂ ಸಾಕಷ್ಟಿದೆ ದುಃಖವೊಂದೇ ಕಾಣುತ್ತಿಲ್ಲ.. ಅಂಗಳದಿ ಸೌದೆ ಸುಟ್ಟು ಚಪ್ಪರದ ಗಳಕಿತ್ತು ಚಟ್ಟಕ್ಕಿಟ್ಟು ತೋರಣವ ತಳದಿ ತುಂಬಿಟ್ಟು ಅಳುವವರ ಕರೆಸಿ ಡಂಕನಕ ಹಾಡಿತು ಬ್ಯಾಂಡ್ಸೆಟ್ಟು.. ಹೂವಿನ ಖರ್ಚಿಲ್ಲ, ಮೈಲಿಗೆಯ ಹಂಗಿಲ್ಲ ಬರುವವರಿಲ್ಲ,ಬಂಧುಗಳ್ಯಾರಿಲ್ಲ ಏನು ಬಂತು ಫಲ ಸಂಜಿಯೊಳಗೆಲ್ಲಾ, ಮುಗಿವ ಲಕ್ಷಣವಿಲ್ಲ ಹೊತ್ತು ಮೀರಿದೆ ಹೊರಡಬೇಕಿದೆ ಮೆರವಣಿಗೆ ಅರಸುತಿಹರಿನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೈರಸ್ಸಿಲ್ಲದ ಲೋಕದಲ್ಲಿ: ಪ್ರಶಸ್ತಿ

ಏ ನನ್ನ ಕಂಪ್ಯೂಟರ್ ಸಿಕ್ಕಾಪಟ್ಟೆ ನಿಧಾನವಾಗ್ಬಿಟ್ಟಿದೆ, ಒಂದು ಫೋಲ್ಡರ್ ತೆರೆಯೋಕೆ ೨-೩ ನಿಮಿಷ ಬೇಕು. ಅದೆಂತದೋ ವೈರಸ್ ಬಂದು ಕೂತ್ಬಿಟ್ಟಿದೆ ಕಣೋ ಅಂತಿದ್ದ ಫ್ರೆಂಡು.ಹೂಂ, ಇವ ಯಾವುದೇ ಜಾಲತಾಣ ತೆರೆದ್ರೂ ಅದೆಂತದೋ ಜಾಹೀರಾತು ಬಂದು ಕುಣ್ಯತ್ತೆ ಮಾರಾಯ. ವೈರಸ್ಸು, ಟ್ರೋಜನ್ನು, ಮಾಲ್ವೇರು.. ಇನ್ನೆಂತೆಂತ ಹಾಳು ಮೂಳು ಬಂದು ಕೂತಿದ್ಯೋ ಇದ್ರಲ್ಲಿ ಅಂದ ಇನ್ನೊಬ್ಬ.ಈ ವಿಂಡೋಸು, ಇದ್ರ ದುಬಾರಿ ದುಡ್ಡು ಕೊಟ್ರೂ ಕೆಲಸ ಮಾಡದ . ಎಂಥದದು ? ಆಂಟಿ ವೈರಸ್ಸಾ ? ಅದ್ನ ಹಾಕೂ ಈ ಕತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವರದಕ್ಷಿಣೆ ಎಂಬ ಉರುಳು: ಲಾವಣ್ಯ ಆರ್.

ಹೀಗೆ ವಾರದ ಹಿಂದೆ ನಡೆದ ಘಟನೆ ನನ್ನ ಹೊಸ ಸೀರೆಗೆ ರವಿಕೆ ಹೊಲೆಸಲು ಬೋಟಿಕ್ ಗೆ ಹೋಗಿದ್ದೆ. ಅಲ್ಲಿಗೆ ಒಂದು ನಡುವಯಸ್ಸಿನ ಹುಡುಗಿ ಮತ್ತು ಆಕೆಯ ತಾಯಿ ಬಂದರು. ಆ ಹುಡುಗಿಯ ನಿಶ್ಚಿತಾರ್ಥಕ್ಕೆ ರವಿಕೆ ಹೊಲಿಸಲು ಬಂದವರು ಸುಮಾರು ತರಹದ ಡಿಸೈನ್ಗಳನ್ನೂ ನೋಡಿ ಅವನ್ನು ಆಕೆ ಮದುವೆಯಾಗುವ ಹುಡುಗನಿಗೆ ವಾಟ್ಸ್ ಆಪ್ನಲ್ಲಿ ಫೋಟೋ ಕಳುಹಿಸಿ ಸೆಲೆಕ್ಟ್ ಮಾಡಲು ಹೇಳಿದಳು.  ನಾನೆಂದುಕೊಂಡೆ ಇಬ್ಬರದು ಲವ್ ಮ್ಯಾರೇಜ್ ಇರಬಹುದು ಅದಕ್ಕಾಗಿಯೆಂದು. ಆದರೆ ನಂತರ ಆತ ಅವರಮ್ಮನ ನಂಬರ್ ಕೊಟ್ಟು ಕೇಳಲು ಹೇಳಿದ. ಆಗಲು ನಾನು ಸಾಮಾನ್ಯವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಅಮರ್ ನಾಥ್ ಪಿ.ಸಿ., ಗಣೇಶ್ ಭಟ್

ಎಂದೆಂದೂ ನಿನ್ನವನು………… ಕಣ್ಣು ಬಿಟ್ಟರೂ ನೀನೆ ಕಣ್ಣು ಮುಚ್ಚಿದರೂ ನೀನೆ! ಯಾಕೇ ಹೀಗೆ ಕಾಡ್ತಿದಿಯಾ..? ಅದ್ಯಾವ ಘಳಿಗೇಲಿ ನಿನ್ನ ನೋಡಿದ್ನೋ ನಿನ್ ರೂಪ ನನ್ ಕಣ್ಣಲ್ಲಿ ಹಾಗೆ ತುಂಬಿಕೊಂಡು ಬಿಟ್ಟಿದೆ. ಆಚೆ ಈಚೆ ಸುಳಿತಾನು ಇಲ್ಲ ಕಣೇ. ಒಂಥರಾ ಸನ್ಯಾಸಿ, ಹೆಚ್ಚೆಚ್ಚು ವನವಾಸಿಯಾಗಿದ್ದೆ ನಾನು. ಕಣ್ಣುಗಳಿಗೂ ಕನಸುಗಳಿಗೂ ಎಣ್ಣೆ ಸೀಗೆಕಾಯಿ ಸಂಬಂಧ ಇತ್ತು. ಎದೆ ಗೂಡು ಹಳೆ ಕಾಲದ ಪಾಳು ಮನೆಯಂತಾಗಿತ್ತು. ಮನಸಂತೂ ಬೆಳಕೇ ಬೀಳದಿರೊ ಕಗ್ಗತ್ತಲ ಕಾಡಾಗಿತ್ತು. ಎಲ್ಲೆಂದರಲ್ಲಿ ಅಲೀತಾ, ಕಾರಣಗಳಿಲ್ಲದ ಕೆಲಸ ಮಾಡ್ತಾ, ಕನಸುಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಝೆನ್ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ನಿನ್ನ ಬಟ್ಟಲನ್ನು ತೊಳೆ ಹೊಸದಾಗಿ ಸಂನ್ಯಾಸತ್ವ ಸ್ವೀಕರಿಸಿದವನೊಬ್ಬ ಗುರು ಜೋಶುವಿನ ಬಳಿಗೆ ಬಂದು ಕೇಳಿದ, “ನಾನು ಈಗ ತಾನೇ ಈ ಆಶ್ರಮಕ್ಕೆ ಸೇರಿದ್ದೇನೆ. ಝೆನ್‌ನ ಮೊದಲನೇ ತತ್ವವನ್ನು ಕಲಿಯಲು ನಾನು ಕಾತುರನಾಗಿದ್ದೇನೆ.” ಜೋಶು ಕೇಳಿದ, “ನಿನ್ನ ಊಟವಾಯಿತೇ?”  ನವಶಿಷ್ಯ ಉತ್ತರಿಸಿದ, “ನನ್ನ ಊಟವಾಯಿತು.” ಜೋಶು ಹೇಳಿದ, “ಸರಿ ಹಾಗದರೆ, ಈಗ ನಿನ್ನ ಬಟ್ಟಲನ್ನು ತೊಳೆ.” ***** ೨. ದಣಿದಾಗ ವಿದ್ಯಾರ್ಥಿಯೊಬ್ಬ ಗುರುವನ್ನು ಕೇಳಿದ, “ಗುರುಗಳೇ, ನಿಜವಾದ ಅರಿವು ಅಂದರೇನು?” ಗುರುಗಳು ಉತ್ತರಿಸಿದರು, “ಹಸಿವಾದಾಗ ಊಟ ಮಾಡು, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೈನ್ ರೋಡ್ನಲ್ಲೊಂದು ಮನೆ ಮಾಡಿ..!: ಎಸ್.ಜಿ.ಶಿವಶಂಕರ್

"ಏ..ಏ…" ನಾನು ಕೂಗುತ್ತಲೇ ಇದ್ದೆ! ನನ್ನ ಮಾತಿಗೆ ಕ್ಯಾರೇ ಅನ್ನದೆ, ಹಿಂದಿನ ಮನೆಯ ಕಾಂಪೌಂಡಿನಿಂದ ಕಸ ತುಂಬಿದ ಪ್ಲಾಸ್ಟಿಕ್ ಕವರು ದೊಪ್ಪನೆ ಖಾಲಿ ಸೈಟಿಗೆ ಬಿತ್ತು! ಅದರಿಂದ ನಿಮಗೇನು ತೊಂದರೆ? ಎನ್ನುತ್ತೀರಾ? ಆ ಖಾಲಿ ಸೈಟು ಪಕ್ಕದ್ದೇ ನನ್ನ ಮನೆ! ಹಿಂದಿನ ಮನೆಯವರು ಪ್ರತಿ ದಿನ ಹೀಗೆ ಫಾಸ್ಟ್ ಬೌಲರುಗಳತೆ ದಿನವೂ ಎಸೆಯುತ್ತಿದ್ದ ಕಸ ರಾಶಿಯಾಗಿತ್ತು! ಅದು ಹರಡಿದ್ದ ಸೈಟಿನಲ್ಲ್ಲಿ ತಿಪ್ಪೆ   ಸೃಷ್ಟಿಯಾಗಿತ್ತು! ದುರಾದೃಷ್ಟಕ್ಕೆ ನನ್ನ ಮನೆಯ ಎರಡು ಪಕ್ಕದ ಸೈಟುಗಳು ಖಾಲಿಯೇ! ಎಡ ಪಕ್ಕದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾನ್ ಎಂಬ ಬಿರುಗಾಳಿಯ ಮುನ್ಸೂಚನೆ…: ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಜಾನ್ ಆಯೋಜಿಸಿದ್ದ ಪಾರ್ಟಿ ಮುಗಿಸಿ ಮನೆಗೆ ಬಂದ ವೆಂಕಣ್ಣನ ಮುಖ ತುಂಬಾ ಚಿಂತೆಯಲ್ಲಿದ್ದಂತೆ ಕಂಡು ಬಂದದ್ದರಿಂದ ಜಾನು ಗೆ ಕಳವಳವಾಯಿತು.  “ಯಾಕ್ರೀ ಪಾರ್ಟಿಯೊಳಗ ಯಾರರೆ ಏನರೆ ಅಂದರೋ ಏನು?” ಅಂತ ಹತ್ತಿರಕ್ಕೆ ಹೋಗಿ ವಿಚಾರಿಸಿದಳು. ಹಾಗೆ ಹತ್ತಿರ ಹೋಗಿದ್ದಕ್ಕೆ ಇನ್ನೊಂದು ಕಾರಣವೂ ಇತ್ತು. ಗಂಡ ವಿದೇಶಕ್ಕೆ ಬಂದು ಅವರ ತರಹವೇ ಪಾರ್ಟಿಲಿ ಗುಂಡು ಹಾಕೋಕೂ ಶುರು ಹಚ್ಚಿಕೊಂಡನೋ ಹೇಗೆ ಎಂಬ ಪರೀಕ್ಷೆ ಅದಾಗಿತ್ತು. “ಯಾರೇನ್ ಅಂದ್ರೂ ನಾ ತಲಿ ಕೆಡಿಸ್ಕೊಳೋದಿಲ್ಲ ಬಿಡು. ಆದ್ರ ಆ ಜೇ.ಸಿ.ಬಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಮೂ..ಊ ..ಊ..: ಅನಿತಾ ನರೇಶ್ ಮಂಚಿ

ಕಾಮೂ..ಊ ..ಊ.. ನನ್ನನ್ಯಾರು ಈ ರೀತಿ ಹೆಸರು ಹಿಡಿದು ಕರೆಯುವವರು ಎಂದು ಸಿಟ್ಟಿನಲ್ಲೇ ಒಳಮನೆಯಿಂದ ಸೌಟುಧಾರಿಣಿಯಾಗಿಯೇ ಹೊರ ಬಂದಳು ಕಾಮಾಕ್ಷಮ್ಮ.. ಹೊರ ಬಾಗಿಲಲ್ಲಿ ವರದರಾಜ ರಾಯರು ದೊಡ್ಡ ಹೂವಿನ ಹಾರ ಹಾಕಿಸಿಕೊಂಡು ಒಂದು ಕೈಯಲ್ಲಿ  ಹೂವಿನ ಬುಕೆ,   ಹೆಗಲ ಮೇಲೆ ಶಾಲು, ಪ್ಲಾಸ್ಟಿಕ್ ಚೀಲದ ತುಂಬಾ ಹಣ್ಣುಗಳು ಮತ್ತು  ಬಣ್ಣದ ಕಾಗದದಿಂದ ಸುತ್ತಿದ್ದ ದೊಡ್ಡದೊಂದು ಡಬ್ಬ ಹಿಡಿದು ನಿಂತಿದ್ದರು. ಯಾಕ್ರೀ ಏನಾಯ್ತು? ಈ ಅವತಾರದಲ್ಯಾಕೆ ಈ ಹೊತ್ತಲ್ಲಿ ಮನೆಗೆ ಬಂದಿರಿ? ಇವತ್ತು ಆಫೀಸ್ ಇಲ್ವಾ ಎಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ