ಸೂಪರ್ ಗಾಡ್ ಸಣ್ಣಯ್ಯ (ಕಥೆ): ಹೃದಯಶಿವ ಅಂಕಣ
"ಸಿಸುಮಗನೇ ನಾನೇಳಿದಷ್ಟು ಮಾಡು. ನಿಂಗೆ ಒಳ್ಳೇದಾಗ್ಲಿಲ್ಲ ಅಂದ್ರೆ ನನ್ನೆಸ್ರು ಬದಲಾಯಿಸಿಕೊಳ್ತೀನಿ" ಎಂದು ಮೈಮೇಲೆ ಬಸಪ್ಪದೇವರು ಬಂದಿದ್ದ ಸಣ್ಣಯ್ಯ ಹೇಳಿದಾಗ ಸುತ್ತ ನೆರೆದಿದ್ದ ರಾಗಿದೊಡ್ಡಿಯ ಜನ ದೂಸ್ರಾ ಮಾತಾಡದೆ ಕೈ ಮುಗಿದರು. ನಾವೆಲ್ಲಾ ಅದನ್ನು ನೋಡಿ ಕಂಗಾಲಾದೆವು. ಅಷ್ಟೊತ್ತಿಗಾಗಲೇ ಸಣ್ಣಯ್ಯ ತನ್ನೆದುರು ಬಿಡಿಸಿದ್ದ ರಂಗೋಲಿಯನ್ನು ತನ್ನ ಬಲಗೈಯಿಂದ ಉಜ್ಜಿ ಉಜ್ಜಿ ಚುಕ್ಕಿ ಹಾಗೂ ಗೆರೆಗಳ ಗುರ್ತು ಸಿಗದಂತೆ ಮಾಡಿ ಆರ್ಭಟಿಸಿದ್ದ. ಸಗಣಿ ಉಂಡೆಯ ಮೇಲಿದ್ದ ಮಣ್ಣಿನ ದೀಪ ಆಕಳಿಸುತ್ತಿತ್ತು. ನಾವು ತೂಕಡಿಸುತ್ತಿದ್ದೆವು. ಸಣ್ಣಯ್ಯ ಕಡೆಗೂ 'ಅರಾ ಅರಾ … Read more