ದ್ವಂದ್ವ:ಸಂಯುಕ್ತಾ ಪುಲಿಗಲ್ ಬರೆದ ಸಣ್ಣಕತೆ

“ವಾಟ್ ಅಬೌಟ್ ಯುವರ್ ಪ್ರೋಪೋಸಲ್ಸ್ ಯಾ?”, ಡಬ್ಬಿಯಲ್ಲಿನ ಚಿತ್ರಾನ್ನದ ಸಾಸಿವೆ ಕಾಳನ್ನು ಸ್ಪೂನಿಂದ ಕೆದಕುತ್ತಾ ಕುಳಿತಿದ್ದ ಪೂರ್ಣಿಗೆ ತನ್ನ ಸಹೋದ್ಯೋಗಿ ನಿರ್ಮಲ ಕೇಳಿದ ಪ್ರಶ್ನೆ. ನಿರ್ಮಲ ತನ್ನ ಬಾಳಿನ ಸಾಕಷ್ಟು ಸಿಕ್ಕುಗಳನ್ನು ಈಗಾಗಲೇ ಬಿಡಿಸಿಕೊಂಡು ತಕ್ಕಮಟ್ಟಿಗೆ ನೆಮ್ಮದಿಯ ಬದುಕು ಸಾಗಿಸುತ್ತಿರುವವಳು. ತಮಿಳುನಾಡಿನಿಂದ ಬಂದ ಈಕೆಯದು ಒಟ್ಟು ಕುಟುಂಬ, ಶಾಲೆ ಕಲಿಯುವ ಮಗ, ಈಗೊಮ್ಮೆ ಆಗೊಮ್ಮೆ ಕರೆಮಾಡುವ ಯಜಮಾನ. ಇದು ನಿರ್ಮಲಳ ಪ್ರಪಂಚ. ಸ್ವಲ್ಪ ಮುಂಗೊಪಿಯಾಗಿದ್ದರೂ ಪೂರ್ಣಿಗಿವಳು ಒಳ್ಳೆಯ ಸಹೋದ್ಯೋಗಿ. ನಿರ್ಮಲಳ ಪ್ರಶ್ನೆಗೆ ಪೂರ್ಣಿ ಉತ್ತರಿಸುವಷ್ಟರಲ್ಲೇ ತನ್ನ ಹೊಳಪಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಿಟ್ಟು ಕುಟುರದ ಮರಿಗಳ ಕತೆ: ಅಖಿಲೇಶ್ ಚಿಪ್ಪಳಿ ಅಂಕಣ

ಮಲೆನಾಡು ಈಗ ಅಕ್ಷರಶಃ: ಮಳೆನಾಡು. ಹಾಗೆಯೇ ಪ್ರಕೃತಿಯ ಅಚ್ಚರಿಗಳ ಗೂಡು. ಲಕ್ಷಗಟ್ಟಲೆ-ಕೋಟಿಗಟ್ಟಲೆ ಖರ್ಚು ಮಾಡಿ, ಪರಿಸರದಿಂದ ಬಗೆದು ತಂದ ಕಲ್ಲು-ಮರಳು-ಕಬ್ಬಿಣದ ಮಾನವ ನಿರ್ಮಿತ ತಾರಸಿ ಮನೆಗಳು ಧಾರಾಳವಾಗಿ ಸೋರುತ್ತಿವೆ. ಮನೆಯೆಲ್ಲಾ ಥಂಡಿ-ಥಂಡಿ. ಇಂತಹ ಮಳೆಗಾಲದಲ್ಲೂ ಹಕ್ಕಿಗಳು ಒಣ ಎಲೆಯನ್ನು, ಹುಲ್ಲನ್ನು ಎಲ್ಲಿಂದ ಸಂಪಾದಿಸಿ ತರುತ್ತವೆ ಎಂಬುದು ಚಿದಂಬರ ರಹಸ್ಯವೇ ಸೈ. ಸಾಗರ ತಾಲ್ಲೂಕಿನ ಹೊಸೂರಿನಲ್ಲಿ ಒಬ್ಬರ ಮನೆಯ ಹಿತ್ತಲಲ್ಲಿ 3 ಇಂಚು ಅಗಲದ ಪಿ.ವಿ.ಸಿ ಪೈಪೊಂದನ್ನು ಹಿತ್ತಿಲಿನ ಧರೆಗೆ ಆನಿಸಿ ನಿಲ್ಲಿಸಿದ್ದರು. ಅದನ್ನು ಉಪಯೋಗಿಸದೇ ವರ್ಷಗಳೇ ಆಗಿತ್ತು. ಚಿಕ್ಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನು,ಗುರಿ ಮತ್ತು ಅಶ್ವಿನಿ ಸ್ಟುಡಿಯೋ: ಹೃದಯಶಿವ ಅಂಕಣ

ಆಗಿನ್ನೂ  ನಾನು  ಅವಕಾಶಗಳ  ಹುಡುಕಾಟದಲ್ಲಿದ್ದೆ. ಗುರುಕಿರಣ್  ಬೆನ್ನು ಬಿದ್ದಿದ್ದೆ. ಅಶ್ವಿನಿಸ್ಟುಡಿಯೋ  ಮುಂದೆ  ಕೆ.ಎ.19ರಿಂದ  ಶುರುವಾಗುವ  ನಂಬರ್  ಪ್ಲೇಟುಳ್ಳ, ಹಿಂಬದಿಯ  ಗ್ಲಾಸಿನ  ಮೇಲೆ  ಕಂಟ್ರಿಕ್ಲಬ್ಬಿನ  ಸ್ಟಿಕ್ಕರುಳ್ಳ  ಒಂದು  ಸ್ಯಾಂಟ್ರೋ ಕಾರು  ಅಲ್ಲಿ  ನಿಂತಿತ್ತು  ಅಂದ್ರೆ  ಗುರುಕಿರಣ್ ಸ್ಟುಡಿಯೋ  ಒಳಗಡೆ  ಇದ್ದಾರೆ  ಅಂತ ಅರ್ಥ. ಅವರು  ಹೊರಗೆ  ಬರುವವರೆಗೂ  ನಾನು  ಕಾಯಬೇಕು. ಎಷ್ಟು  ಹೊತ್ತಿಗೆ  ಬರುತ್ತಾರೋ  ಯಾರಿಗೆ ಗೊತ್ತು?  ಒಂದು  ವೇಳೆ  ಕೆಲಸದ  ಗುಂಗಿನಲ್ಲಿ  ಬರದೇ  ಅಲ್ಲೇ ಉಳಿದುಬಿಟ್ಟರೆ  ಏನು ಗತಿ?  ನನ್ನ  ಬಾಡಿಗೆಮನೆ  ಇರೋದು  ಬನ್ನೇರುಘಟ್ಟ ರೋಡಿನ  ತುದಿಯಲ್ಲಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾಜಿಕ ಮಾಧ್ಯಮಗಳು ಮತ್ತು ಸಮಾಜ:ಪ್ರಶಸ್ತಿ ಅಂಕಣ

ಈ ಫೇಸ್ಬುಕ್ಕು, ಟ್ವಿಟ್ಟರ್ರು, ಆರ್ಕುಟ್ಗಳಂತಹ ಸಾಮಾಜಿಕ ಮಾಧ್ಯಮಗಳು ಅಂದರೆ ಬರೀ ಟೈಂಪಾಸಿಗೆ ಅನ್ನೋ ಮನೋಭಾವ ಹಲವರಲ್ಲಿದೆ. ಏನಪ್ಪಾ ಇಪ್ಪತ್ನಾಲ್ಕು ಘಂಟೆ ಫೇಸ್ಬುಕ್ಕಲ್ಲಿ ಇರ್ತೀಯ ಅನ್ನೋದು ಮುಂಚೆ  "ಇಡೀ ದಿನ ಊರೂರು ಅಲಿತಿರ್ತಾನೆ, ಅಬ್ಬೇಪಾರಿ .. "ಅಂತ ಬಯ್ತಿದ್ದ ಶೈಲಿಯ ಬಯ್ಗುಳವಾಗಿಬಿಟ್ಟಿದೆ. ಒಟ್ನಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸ್ತಾ ಇರೋರು ಅಂದ್ರೆ ಬರೀ ಕಾಲಹರಣ ಮಾಡೋರು, ಬೇರೆ ಯಾವ್ದೂ ಕೆಲಸ ಇಲ್ದೇ ಇದ್ದೋರು ಅನ್ನೋ ಭಾವ. ಅವು ತಕ್ಕಮಟ್ಟಿಗೆ ನಿಜವಾದ್ರೂ ಅದೇ ನಿಜವಲ್ಲ. ಈ ಸಾಮಾಜಿಕ ಮಾಧ್ಯಮಗಳಿಂದ ಸಖತ್ ಲಾಭಗಳಾಗೋದೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 7): ಹನುಮಂತ ಹಾಲಿಗೇರಿ

ಹಾವೇರಿಯ ಸಂವರ್ಧನ ಎನ್‍ಜಿಓದಲ್ಲಿ ನನಗೆ ತರಬೇತಿಯಾದ ಮೇಲೆ ಹಾವೇರಿ ಮೂಲೆಯೊಂದರಲ್ಲಿರುವ ಹಳ್ಳಿಯ ಸ್ವಸಹಾಯ ಸಂಘಗಳ ಸಮುದಾಯ ಅಧಿಕಾರಿ ಎಂದು ಕಳುಹಿಸಿಕೊಟ್ಟಿದ್ದರು. ನಾನು ಹಲಗೇರಿಗೆ ಬಂದಿಳಿದಾಗ ನನ್ನನ್ನು ಆ ಸುಡು ಬಿಸಿಲಿನಲ್ಲಿ ಎದುರುಗೊಂಡವನು ತಿಪ್ಪೇಶಿ. ಅವನು ಅಲ್ಲಿ ನನಗೆ ಆ ಹಳ್ಳಿಯ ಮಾಹಿತಿ ನೀಡುವ ಫೀಲ್ಡ್ ಗೈಡ್ ಆಗಿ ಕೆಲಸ ಮಾಡತಿದ್ದ. ನಮ್ಮ ಸಂಸ್ಥೆ ಕೆಲಸ ಮಾಡುವ ಪ್ರತಿ ಹಳ್ಳಿಯಿಂದಲೂ ತಿಪ್ಪೇಶಿಯಂತಹ ಒಬ್ಬರನ್ನು ಸಂಘಗಳ ಅಧಿಕಾರಿ ಎಂದು ನೇಮಿಸಿಕೊಂಡಿರುತ್ತಿದ್ದರು. ತಿಪ್ಪೇಶಿ ಹೊರಲಾರದಂತಹ ನನ್ನ ಎರಡು ಬ್ಯಾಗುಗಳನ್ನು ಹೆಗಲಿಗೆ ನೇತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಠಡಿ ಪುರಾಣ: ಶ್ರೀವಲ್ಲಭ

ಮ್ಯಾಲಿನ ಈ ಶೀರ್ಷಿಕೆಯನ್ನು ನೋಡಿದಾಗ ನಿಮಗ ಗೊತ್ತಾಗಿರಬೇಕು ನಾ ಏನು ಹೇಳಲಿಕ್ಕೆ ಹೊ೦ಟೇನಿ ಅ೦ತ. ನೀವು ಅನ್ಕೊ೦ಡ ಹ೦ಗ ನಾನು ನನ್ನ ಮಾಸ್ತರಕಿ ವೇಳ್ಯಾದಾಗ ಕ್ಲಾಸ (ಕೊಠಡಿ) ಒಳಗ ಏನೇನು ಮಜಾ ಮಜಾ ಸುದ್ದಿ ಇರತಾವು ಅನ್ನೋದನ್ನ ಹೇಳತೆನಿ ಕೇಳ್ರಿ… ಈ ಹುಡುಗರು (ಹುಡುಗಿಯರು ಕೂಡ) ಒ೦ದು ಭಾಳ ವಿಚಿತ್ರ ಜನಾ೦ಗ ರೀ. ಮು೦ಜಾನೆ ಎದ್ದು ಠಾಕು ಠೀಕು ಅ೦ತ ತಯ್ಯಾರ ಆಗಿ ಅಗದಿ ಸೀರಿಯಸ್ ಮೂಡ್ ನ್ಯಾಗ ಕಾಲೇಜಿಗೆ ಬರತಾರ, ಇವತ್ತ ನಾ ಕ್ಲಾಸಿಗೆ ಚಕ್ಕರ ಹಾಕ೦ಗಿಲ್ಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೀಗರನ ಕಳಸೊ ಸಂಭ್ರಮ: ಸುಮನ್ ದೇಸಾಯಿ ಬರೆವ ನಗೆ ಅಂಕಣ

ನನ್ನ ಜೊಡಿ ಕೆಲಸ ಮಾಡೊ ಗೆಳತಿ ಸುಧಾ ಅವರ ಊರಿಗೆ ಜಾತ್ರಿಗೆ ಅಂತ ಅವರ ಹಳ್ಳಿಗೆ ಹೋಗಿದ್ದೆ. ಸಣ್ಣದಿದ್ರು ಸಮೄಧ್ಧಿಯಿಂದ ಕೂಡಿದ ಊರು. ನನ್ನ ಗೆಳತಿಯವರದು ಅವಿಭಕ್ತ ಕುಟುಂಬ. ದೊಡ್ಡ ಮನಿ, ಮನಿ ತುಂಬ ಮಂದಿ. ಹೇಳಿಕೇಳಿ ಹಳ್ಳಿ ಮಂದಿ. ಎಲ್ಲಾರು ಹೆಜ್ಜಿ ಹೆಜ್ಜಿಗು ಉಪಚಾರ ಮಾಡೊವರನ. ಅವತ್ತ ಎಲ್ಲಾರು ಮಾತಾಡಕೊತ ಕೂತಾಗ ಹಿಂಗಾ ಆತು. ಸಂಜಿಮುಂದ ಐದ ಗಂಟೆ ಆಗಿತ್ತು. ಚಹಾದ ಟೈಮ್ ಆಗಿತ್ತು. ಅಷ್ಟರಾಗ ಒಳಗಿಂದ ಒಂದ ಐದು ವರ್ಷದ ಸುಧಾನ ತಮ್ಮನ ಮಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-16) : ಹಿಪ್ಪರಗಿ ಸಿದ್ದರಾಮ್

ಆತ್ಮೀಯ ಓದುಗಪ್ರಭುಗಳೇ, ಷೇಕ್ಸ್ ಪಿಯರ್‍‍ನ ‘ಹ್ಯಾಮ್ಲೆಟ್’ ನಾಟಕದ ಆತ್ಮವನ್ನು ಇಟ್ಟುಕೊಂಡು ಶರೀರವಾಗಿಯೆಂಬಂತೆ ಕನ್ನಡದ ಪರಿಸರಕ್ಕೆ ಸ್ವತಂತ್ರ ಕಥಾನಕವೆನಿಸುವಂತೆ ರೂಪಾಂತರಿಸಿದ ‘ರಕ್ತಾಕ್ಷಿ’ ರಂಗಕೃತಿಯ ಸಂದರ್ಭದಲ್ಲಿ ಮೂಲಕೃತಿಯ ತಾತ್ವಿಕತೆಗೆ ಭಿನ್ನವಾದ ದೃಷ್ಟಿಕೋನವನ್ನು ಮಹಾಕವಿಗಳು ಪ್ರತಿಪಾದಿಸುವ ಮೂಲಕ ಸಾಂಸ್ಕೃತಿಕವಾಗಿ ಒಂದು ಮಹತ್ವದ ಬದಲಾವಣೆಯೆಂಬಂತೆ, ಅದರಲ್ಲೂ ಮುಖ್ಯವಾಗಿ ಶಪಿಸಲಾರದ, ಕೇವಲ ಆಶೀರ್ವದಿಸಬಲ್ಲ ಮನಸ್ಸು ‘ರಕ್ತಾಕ್ಷಿ’ಯಲ್ಲಿ ಪ್ರಧಾನವಾಗಿ ಕಂಡು ಬರುತ್ತದೆ. ಇಂತಹ ಮಹಾನ್ ರಂಗಕೃತಿಯನ್ನು ಕನ್ನಡ ನಾಡಿನ ಇತಿಹಾಸದ ನೈಜ ಘಟನೆಯೊಂದಕ್ಕೆ ತಳುಕು ಹಾಕಿ, ಮೈಸೂರು ಪ್ರಾಂತದ ಬಿದನೂರಿನ ರಾಜಮನೆತಕ್ಕೆ ಸಂಬಂಧ ಕಲ್ಪಿಸಿಕೊಂಡು ರೂಪಾಂತರಿಸಿರುವುದನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವ್ಯಕ್ತಿತ್ವಗಳ ಸಂಘರ್ಷದ “ಕ್ರಿಮ್ಸನ್ ಟೈಡ್”:ವಾಸುಕಿ ರಾಘವನ್ ಅಂಕಣ

ಆಕ್ಷನ್ ಚಿತ್ರ ಅಂದ ಮಾತ್ರಕ್ಕೆ ‘ಪಾತ್ರ’ಗಳ ಕಡೆ ನಿರ್ಲಕ್ಷ್ಯ ಹರಿಸುವಂತಿಲ್ಲ. ಹೊಡೆದಾಟದ ಥ್ರಿಲ್ ಕೊಡುತ್ತಲೇ ಕಥೆಯಲ್ಲಿನ ಹಲವು ಪದರಗಳನ್ನು ತೋರಿಸುತ್ತಾ, ಪಾತ್ರಗಳಿಗೆ ತಮ್ಮದೇ ಆದ ಮೆರಗುಗಳನ್ನು ಕೊಡುತ್ತಾ ಹೋದರೆ ಚಿತ್ರಕ್ಕೆ ಹಲವು ಆಯಾಮಗಳು ಸಿಗುತ್ತವೆ. ಆಗ ಮಾತ್ರ ಒಂದು ಆಕ್ಷನ್ ಚಿತ್ರ ‘ಡಿಶೂಂ ಡಿಶೂಂ’ ಚಿತ್ರವನ್ನು ಮೀರಿ ಬೆಳೆಯುತ್ತದೆ. 1995ರ ಟೋನಿ ಸ್ಕಾಟ್ ನಿರ್ದೇಶನದ “ಕ್ರಿಮ್ಸನ್ ಟೈಡ್” ನಮ್ಮನ್ನು ಚಿಂತನೆಗೆ ಹಚ್ಚುವ ಅಂತಹ ಒಂದು ಆಕ್ಷನ್ ಚಿತ್ರ. ಇಡೀ ಚಿತ್ರ ನಡೆಯುವುದು ಒಂದು ಸಬ್ ಮರೀನ್ ಒಳಗೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಾಪ (ಕೊನೆಯ ಭಾಗ):ಪಾರ್ಥಸಾರಥಿ ಎನ್.

ನೋಡಿದರೆ ಖಾಲಿ ಜಾಗ, ಎದುರು ರಾಮಕೃಷ್ಣಯ್ಯ ಹಾಗು  ಅವರ ಪತ್ನಿ ಜಾನಕಿ ನಿಂತಿದ್ದರು, ಅವರ ಎರಡು ವರ್ಷದ ಮಗು  ಅಲ್ಲೆಲ್ಲ ಓಡಿಯಾಡುತ್ತ ಆಡಿಕೊಳ್ಳುತ್ತಿತ್ತು. “ನೋಡು  ಈ ಸೈಟ್ ನಮ್ಮದಾಗುವ ಹೊತ್ತಿಗೆ ಸಾಕು ಸಾಕಾಯಿತು, ಎಂತ ಕಾಲ ಬಂದಿತು, ನನ್ನಿಂದ ಅಡ್ವಾನ್ಸ್ ಹಣವನ್ನು ಪಡೆದ   ಅ ದಲ್ಲಾಳಿ ನಂತರ ಸೈಟ್ ಬೇರೆ ಯಾರಿಗೊ ಆಗಿದೆ ಅನ್ನುತ್ತಾನಲ್ಲ, ಹಾಗೆಂದು ಇಲ್ಲಿ ಸೈಟ್ಗಳಿಗೆ ಅಂತಾ ಬೆಲೆ ಏನು ಇಲ್ಲ, ನಮ್ಮ ಹತ್ತಿರ ನಾಟಕವಾಡಿ ಸೈಟಿನ ಬೆಲೆ ಏರಿಸಲು ಪ್ರಯತ್ನಿಸಿದ, ಹೇಗೊ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೈ.ಬಿ.ಹಾಲಬಾವಿ ಅವರ ಚುಟುಕಗಳು

1 ಸಫಲತೆ ಬಂದು ನಿಂತಿದೆ ಬಾಗಿಲಿಗೆ ಅದೆಷ್ಟೋ ವಿಫಲತೆಗಳು ಬಂದೊದಗಿದ ಮೇಲೆ ನೋವಿನಲ್ಲೇ ಬದುಕು ಅರಳಿ ನಿಂತಿದೆ ಅದೆಷ್ಟೋ ಪ್ರಯತ್ನಗಳು ಫಲಿಸಿದ ಮೇಲೆ…!   2 ಮೌನದಲ್ಲಿ ಅದೆಷ್ಟು ಮಾತುಗಳಿವೆ ಬೀಜದಲ್ಲಿನ ವೄಕ್ಷದಂತೆ ಅನಂತತೆಯಲ್ಲಿ ಅದೆಷ್ಟು ನಕ್ಷತ್ರಗಳಿವೆ ಅಣುವಿನಲ್ಲಿ ಅಣುವಾದಂತೆ…!   3 ದಾರಿ ಈಗ ಸ್ಪಷ್ಟವಾಗಿದೆ ಅದೆಷ್ಟೋ ಹೆಜ್ಜೆ ನಡೆದ ಮೇಲೆ ಬಾಳ ಗುರಿ ಈಗ ನಿಚ್ಚಳವಾಗಿದೆ ಅದೆಷ್ಟೋ ಭ್ರಾಂತಿ ಅಳಿದ ಮೇಲೆ…!   4 ಎಲ್ಲ ಎಲ್ಲೆಗಳ ಮೀರಿ ಬೆಸವ ಅಹಿಂಸೆಗೆಲ್ಲಿದೆ ಭಾಷೆ…? ಜೀವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮ್ಮಾ –ಕಂದ: ನಳಿನ ಡಿ.

ಅಮ್ಮಾ ನಿನೊಡನಿರುವೆ ಮನೆಯಲ್ಲಿ, ಕುಣಿಯುವೆ ನಿನ್ನಯ ತೋಳಲ್ಲಿ, ಪಾಠವು ನನಗೆ ಬೇಡಮ್ಮ, ಕೈತುತ್ತನು ಮೆಲ್ಲಗೆ ತಾರಮ್ಮ, ಮಲಗಲು ಮಡಿಲು ನೀಡಮ್ಮ, ಆಡವಾಡಿಸು ಬಾ ಗುಮ್ಮಾ ಬಂತು ಗುಮ್ಮಾ ಪುಟ್ಟ ಕಂದನೇ ಏನಾಯ್ತು? ಪಾಠವೇತಕೆ ಬೇಡಾಯ್ತು?   ಮೇಷ್ಟು ಮಂಕುತಿಮ್ಮ ಅಂದರು, ಮಗ್ಗಿ ತಪ್ಪಿಸಿದ್ದಕ್ಕೆ ಬೈದರು, ಕೋಲನು ಕಂಡು ಕಾಗುಣಿತ ಬಾರದು, ಎಬಿಸಿಡಿ ಕಲಿಯಲು ನನ್ನಿಂದಾಗದು,   ಕಂದಾ, ವಿದ್ಯೆಯು ಬೇಕು ಬಾಳಿಗೆ, ನನ್ನನ್ನು ಸಾಕಲು ನಾಳೆಗೆ, ಅದೇ ದಾರಿ ತೋರುವ ದೀವಿಗೆ, ವಿದ್ಯೆ ಇಲ್ಲದೆ ಅಸಾಧ್ಯವೋ ಏಳಿಗೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಬ್ಬರ ಕವನಗಳು: ಪರಶಿವ ಧನಗೂರು, ಪ್ರಭಾಕರ ತಾಮ್ರಗೌರಿ

"ಕಾಡು” ಎಷ್ಟೊಂದು ಸ್ವಾತಂತ್ರ್ಯ..!!  ಎಲ್ಲಿ ನೋಡಿದರಲ್ಲಿ ಕಣ್ಣು ಬಿಟ್ಟಲ್ಲಿ ಜೀವಂತ ಸೊಗಡು ಕಾಡು…!   ಇಲ್ಲಿ ಎಲ್ಲವೂ ಪರಿಶುದ್ಧ ನಿಷ್ಕಲ್ಮಶ ನಿಸ್ವಾರ್ಥ! ಅಷ್ಟೇ ಸ್ವಾಭಾವಿಕ..!;   ಹಸಿವು ಆಹಾರದ ಸರಪಳಿ ನಡುವೆ ಎಷ್ಟೊಂದು ಸ್ವಾತಂತ್ರ..! ಮೋಡ ಕರಗಲಿಲ್ಲವೆಂದು ಮರ ಮುನಿಸಿಕೊಳ್ಳುವುದಿಲ್ಲ! ಬಿಸಿಲು ನೋಯಿಸುತ್ತಿದೆಯೆಂದು ಹೂಗಳು ಬಯ್ಯುವುದಿಲ್ಲ!   ಉಕ್ಕಿ ಹರಿವ ಹಳ್ಳವು ನನ್ನನು ನುಂಗಿಬಿಟ್ಟಿದೆಯೆಂಬ ಭ್ರಮೆ ಇಲ್ಯಾವ ಬಂಡೆಗೂ ಇಲ್ಲ! ಹಣ್ಣಾಗಿ ನೆಲಸೇರಿ ಗೊಬ್ಬರವಾಗುವುದ ಇಲ್ಯಾವ ಎಲೆಯೂ ಮರೆತಿಲ್ಲ!   ಹೊಟ್ಟೆ ತುಂಬಿದ ಹುಲಿಯ ಮುಂದೆ ಜಿಂಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇತಿಹಾಸವನ್ನು ಓದುವ ಬದಲು ಒಮ್ಮೊಮ್ಮೆ ಕಿವಿಗೊಟ್ಟು ಕೇಳಬೇಕು: ನಟರಾಜು ಎಸ್. ಎಂ.

ನಮ್ಮ ಆಫೀಸಿನಲ್ಲಿ ಇಬ್ಬರು ಡ್ರೈವರ್ ಇದ್ದಾರೆ. ಒಬ್ಬ ತುಂಬಾ ಚುರುಕು ಮತ್ತು ಆಫೀಸ್ ಕೆಲಸದಲ್ಲಿ ಆಸಕ್ತಿ ಉಳ್ಳವನಾದರೆ ಮತ್ತೊಬ್ಬ ಮಹಾನ್ ಸೋಮಾರಿ. ಫೀಲ್ಡ್ ವಿಸಿಟ್ ಗಳಿಲ್ಲದ ದಿನ ಆ ಸೋಮಾರಿ ನನ್ನ ಚೇಂಬರ್ ಗೆ ಬಂದು "ರಾಜು ದಾ ಇವತ್ತು ಯಾವುದು ಫೀಲ್ಡ್ ವಿಸಿಟ್ ಇಲ್ಲವಾ? ಕೆಲಸ ಇಲ್ಲದೆ ತುಂಬಾ ಬೇಜಾರಾಗಿದೆ. ಯಾವುದಾದರು ಪ್ರೊಗ್ರಾಮ್ ಇದ್ದರೆ ತಿಳಿಸಿ" ಎಂದು ಕೇಳುತ್ತಾನೆ. ಫೀಲ್ಡ್ ವಿಸಿಟ್ ಇರುವ ದಿನ ಇವತ್ತು ಗಾಡಿ ರಿಪೇರಿ ಇದೆ ರಾಜು ದಾ ಎಂದು ಹೇಳುತ್ತಲೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 6): ಹನುಮಂತ ಹಾಲಿಗೇರಿ

[ಇಲ್ಲಿಯವರೆಗೆ…] ಈ ಎಲ್ಲ ವಿವರಗಳನ್ನು ಸವಿವರವಾಗಿ ಬರೆದುಕೊಂಡು ನಾನು ರಾಜನ್ ಸರ್ ಚೇಂಬರಿಗೆ ಹೋದೆ. ನನ್ನ ವರದಿ ಮೇಲೆ ಸುಮ್ಮನೆ ಒಮ್ಮೆ ಕಣ್ಣಾಡಿಸಿದ ಅವರು ನನ್ನ ಕಡೆ ಒಂದು ಮೆಚ್ಚುಗೆಯ ನೋಟ ಬೀರಿ, ’ವೆರಿ ಗುಡ್ ಮಲ್ಲೇಶಿ. ಆದ್ರೆ, ನೀನು ಈ ದಂದೆಯ ಬಗ್ಗೆ ಇನ್ನಷ್ಟು ತಿಳಕೊಬೇಕಾದರೆ ಒಂದಿಷ್ಟು ದಂದೆಯಲ್ಲಿದ್ದ ಮಹಿಳೆಯರನ್ನು ಮಾತಾಡಿಸಬೇಕಿತ್ತು’ ಎಂದು ನನ್ನ ಕಣ್ಣುಗಳನ್ನು ಕೆಣಕಿದರು. ’ನಾನು ಮಾತಾಡಿಸಬೇಕೆಂದೇ ಆ ನಡು ವಯಸ್ಸಿನವಳ ಹಿಂದ್ಹಿಂದೆ ಹೋಗಿ ಆಟೊ ಹತ್ತಿದ್ದು ಸರ್. ಆದ್ರೆ, ನ್ನನ್ನು ಅವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉಯ್ಯಾಲೆ:ವಾಸುಕಿ ರಾಘವನ್ ಅಂಕಣ

ತುಂಬಾ ದಿನಗಳಿಂದ ಈ ಚಿತ್ರ ನೋಡಬೇಕು ಅನ್ಕೊಂಡಿದ್ದೆ. ಆದರೆ ಅದಕ್ಕೆ ಸಮಯ ಸಿಕ್ಕಿದ್ದು ಹೋದ ವಾರ. ಸಿನಿಮಾದ ಹೆಸರು “ಉಯ್ಯಾಲೆ”. 1964ರಲ್ಲಿ ಬಿಡುಗಡೆಯಾದ ರಾಜಕುಮಾರ್, ಕಲ್ಪನಾ, ಅಶ್ವಥ್ ಅಭಿನಯದ ಈ ಚಿತ್ರದ ನಿರ್ದೇಶಕರು ಎನ್.ಲಕ್ಷ್ಮೀನಾರಾಯಣ. ಆಗಿನ ಕಾಲಕ್ಕಂತೂ ಬಹಳ ವಿಭಿನ್ನವಾದ, ಬೋಲ್ಡ್ ಆದ ಕಥೆಯನ್ನು ಹೊಂದಿದ್ದರಿಂದ ಇದು ಕುತೂಹಲ ಹೆಚ್ಚಿಸಿತ್ತು.   ಅಶ್ವಥ್, ಕಲ್ಪನಾ ತಮ್ಮ ಮುದ್ದು ಮಗಳಿನೊಂದಿಗೆ ವಾಸಿಸುತ್ತಿರುವ ದಂಪತಿಗಳು. ಅಶ್ವಥ್ ಕಾಲೇಜ್ ಪ್ರೊಫೆಸರ್, ಸದಾ ಓದುವುದರಲ್ಲೇ ಮುಳುಗಿಹೋಗಿರುವ ಪುಸ್ತಕದ ಹುಳು. ಅವನಿಗೆ ಬೇರೆ ಇನ್ಯಾವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳ್ಳಿಮೋಡದಲ್ಲಿ ಬೇಂದ್ರೆ ಭಾವಗೀತ: ಹೃದಯಶಿವ ಅಂಕಣ

  'ಬೆಂದ್ರೆ  ಬೇಂದ್ರೆ !'   ಅಂಬಿಕಾತನಯದತ್ತ  ಎನ್ನುವ  ಕಾವ್ಯನಾಮದಿಂದ  ಕನ್ನಡಮಣ್ಣಿನಲ್ಲಿ  ಹೆಮ್ಮರವಾಗಿ  ಬೆಳೆದು ನಿಂತಿರುವ  ದತ್ತಾತ್ರೇಯ  ರಾಮಚಂದ್ರ  ಬೇಂದ್ರೆಯವರು  ೧೮೮೯ರಲ್ಲಿ  ಧಾರವಾಡದಲ್ಲಿ  ಜನಿಸಿ ೧೯೮೧ ರಲ್ಲಿ  ನಿಧನರಾದ  ಕವಿಸಾಮ್ರಾಟ. ಉತ್ತರ  ಕರ್ನಾಟಕದ  ಜನಪದ,  ಗ್ರಾಮೀಣಭಾಷೆಯನ್ನು ತಮ್ಮ  ಕಾವ್ಯದಲ್ಲಿ  ತಂದು  ಕನ್ನಡಸಾಹಿತ್ಯವನ್ನು  ಶ್ರೀಮಂತಗೊಳಿಸಿದ  ವರಕವಿ  ಇವರು. ವೃತ್ತಿಯಲ್ಲಿ ಉಪಾಧ್ಯಾಯರಾಗಿದ್ದುಕೊಂಡು  ಸಾಹಿತ್ಯಕೃಷಿ  ಮಾಡಿದ  ಇವರು  ಕನ್ನಡದಷ್ಟೇ  ಮರಾಠಿ ಭಾಷೆಯಲ್ಲಿಯೂ  ಅಪಾರವಾದ ಪಾಂಡಿತ್ಯ  ಹೊಂದಿದ್ದರು.  ಮಹಾರಾಷ್ಟ್ರ  ಹಾಗೂ  ಉತ್ತರ ಕರ್ನಾಟಕದ  ಜನಜೀವನ  ಸಾಂಸ್ಕೃತಿಕ  ನೆಲೆಗಟ್ಟನ್ನು  ತೀರಾ  ಹತ್ತಿರದಿಂದ  ಬಲ್ಲವರಾಗಿದ್ದರು.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಣ್ಣು ನಡೆದುಬಂದ ಹಾದಿ: ಗಾಯತ್ರಿ ಸಚಿನ್ ಹೆಗಡೆ

‘ಸ್ತ್ರೀ’ ಎಂದರೆ ಅಷ್ಟೇ ಸಾಕೆ?  ಎಂಬ ಕವಿವಾಕ್ಯವನ್ನು ಓದುವಾಗ ಈ ಪದ ಎಲ್ಲಿಂದ ಶುರುವಾಗಿರಬಹುದು ಎಂಬ ಯೋಚನೆ ಬಂತು. ಬಹುಶಃ ಭೂಮಿಯ ಜನನದಿಂದಲೇ ಪ್ರಾರಂಭವಾಯ್ತೇನೋ!! ಅದಕ್ಕೇ ಭೂಮಿಯನ್ನು ತಾಯಿ ಅಂತ ಕರೆದದ್ದಿರಬಹುದು. ಭೂಮಿಯನ್ನು ಸ್ತ್ರೀಯಾಗಿಸಿದ್ದು ಅಥವಾ ಸ್ತ್ರೀಯನ್ನು ಭೂಮಿಗೆ ಹೋಲಿಸಿದ್ದು ಅವರ ಕ್ಷಮಾಗುಣ ಮತ್ತು ಸಹನೆಯ ಕಾರಣದಿಂದಲೇ.. ಎಲ್ಲವನ್ನೂ ಸಹಿಸುವ ಮತ್ತು ಕ್ಷಮಿಸುವ ಗುಣ ಹೆಣ್ಣಿಂದಲ್ಲದೇ ಬೇರೆಯವರಿಂದ ಸಾಧ್ಯವೇ!? ಸಹನೆಯನ್ನು ದೌರ್ಬಲ್ಯವೆಂದು  ತುಳಿದು ಮಿತಿ ಮೀರಿದರೆ ಒಂದು ಕಂಪನ ಸಾಕು ಅವಳ ಶಕ್ತಿ ಅರಿವಾಗಲು ಇಂಥ ‘ಹೆಣ್ಣು’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ರಾತ್ರಿ:ಪ್ರಶಸ್ತಿ ಅಂಕಣದಲ್ಲಿ ಸಣ್ಣಕಥೆ

ಹೀಗೇ ಒಂದು ರಾತ್ರಿ. ಬೆಂಕಿಪಟ್ಟಣದಂತಹ ಬಾಡಿಗೆ ರೂಮಿನಲ್ಲೂ ಸುಖನಿದ್ರೆಯಲ್ಲಿದ್ದ ಬ್ಯಾಚುಲರ್ ಗುಂಡನಿಗೆ ಯಾರೋ ಬಾಗಿಲು ಕೆರೆದಂತಾಗಿ ದಡಕ್ಕನೆ ಎಚ್ಚರವಾಯಿತು. ಪಕ್ಕನೆ ಪಕ್ಕಕ್ಕಿದ್ದ ಲೈಟು ಹಾಕಿದರೂ ಅದು ಹತ್ತಲಿಲ್ಲ.  ಎಷ್ಟೆಷ್ಟೊತ್ತಿಗೋ ಕರೆಂಟು ತೆಗಿಯೋ ಕೆಯಿಬಿಯವರಿಗೆ ಬಯ್ಯುತ್ತಾ ಯಾರು ಅಂದ. ಶಬ್ದವಿಲ್ಲ. ಯಾರಿರಬಹುದು ಈ ನಡು ರಾತ್ರಿಯಲ್ಲಿ ಅಂದುಕೊಂಡ. ನಡುರಾತ್ರಿಯೇ ? ಗೊತ್ತಿಲ್ಲ. ಕಾಲೇಜಿಂದ ಸಂಜೆ ಸುಸ್ತಾಗಿ ಬಂದವನಿಗೆ ಹಾಗೇ ಜೊಂಪು ಹತ್ತಿತ್ತು. ಮೈಮರೆತು ಹಾಗೆಯೇ ಎಷ್ಟೊತ್ತು ಮಲಗಿದ್ದನೋ ಗೊತ್ತಿಲ್ಲ. ಈ ಬಾಗಿಲು ಕೆರೆಯೋ ಶಬ್ದದಿಂದಲೇ ದಡಕ್ಕನೆ ಎಚ್ಚರವಾಗಿ ಒಮ್ಮೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವವಿರೋಧಿ ಕೀಟನಾಶಕಗಳು:ಅಖಿಲೇಶ್ ಚಿಪ್ಪಳಿ ಅಂಕಣ

ಭದ್ರಾವತಿ ಹುಡುಗಿ ಸಾಗರದ ಜ್ಯೂನಿಯರ್ ಕಾಲೇಜಿನಲ್ಲಿ ಓದುತ್ತಿದ್ದಳು. ಪರೀಕ್ಷೆ ಬರೆದು ಫಲಿತಾಂಶ ಬಂದಾಗ ಫೇಲ್ ಆಗಿದ್ದಳು. ಸೀದಾ ಕೀಟನಾಶಕಗಳನ್ನು ಮಾರುವ ಅಂಗಡಿಗೆ ಹೋಗಿ ಫಾಲಿಡಾಲ್ ಬಾಟಲಿ ಕೊಡಿ ಎಂದಳು. ಅಂಗಡಿಯವ ಏನು ಎತ್ತ ವಿಚಾರಿಸದೆ ದುಡ್ಡು ಇಸಿದುಕೊಂಡು ಫಾಲಿಡಾಲ್ ಬಾಟಲಿಯನ್ನು ಕೊಟ್ಟ. ನೆಹರು ಮೈದಾನಕ್ಕೆ ಬಂದವಳು ಯಾರಿಗೂ ಕಾಣಬಾರದೆಂದು ಕೊಡೆ ಬಿಡಿಸಿಕೊಂಡು, ಬಾಟಲಿಯ ಮುಚ್ಚಳವನ್ನು ತೆಗೆದು ಗಟ-ಗಟ ಕುಡಿದೇ ಬಿಟ್ಟಳು. ೫ ನಿಮಿಷದಲ್ಲಿ ಮೈದಾನದಲ್ಲಿ ಬಿದ್ದು ಹೊರಳಾಡುತ್ತಿದ್ದಳು. ಆಟೋದವನು ನೋಡಿದವನು ತಕ್ಷಣ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಲಿಲ್ಲ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉಪನ್ಯಾಸಕರ ಅಮೂಲ್ಯ ಸಸ್ಯ ಸಂಪತ್ತ ವನ: ಹನಿಯೂರು ಚಂದ್ರೇಗೌಡ

ನಮ್ಮ ನಡುವೆ ಎರಡು ಮಾದರಿಯ ಜನರಿರುತ್ತಾರೆ; ಒಂದು ಮಾದರಿ, ಕೆಲಸ ಮಾಡುವುದರ ಬದಲು ಕೇವಲ ಉಪದೇಶಿಸುವವರು;  ಮತ್ತಿನ್ನೊಂದು ಮಾದರಿ, ಉಪದೇಶಿಸುವುದಷ್ಟೇ ಅಲ್ಲ ಆ ಕೆಲಸವನ್ನು ಸ್ವತಃ ಮಾಡಿ ತೋರಿಸುವವರು. ಮೊದಲನೆ ಸಾಲಿನಲ್ಲಿ ನಿಲ್ಲಬಲ್ಲವರು ಅನೇಕರು ಅನಾಯಾಸವಾಗಿ ನಮಗೆ ದೊರಕುತ್ತಾರೆ. ಆದರೆ, ಎರಡನೆಯ ಮಾದರಿಯ ಜನರು ಸಿಗುವುದು ಬಹಳ ವಿರಳವೇ.  ಅಂಥ ವಿರಳಾತಿ ವಿರಳ ವ್ಯಕ್ತಿಗಳಲ್ಲಿ ರಾಮನಗರ ಜಿಲ್ಲೆ, ಗೊಂಬೆನಗರ ಚನ್ನಪಟ್ಟಣ ತಾಲೂಕಿನ ಎಲೆಭೂಹಳ್ಳಿಯ, ವೃತ್ತಿಯಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿರುವ ಭೂಹಳ್ಳಿ ಪುಟ್ಟಸ್ವಾಮಿ ಒಬ್ಬರು.  ಇವರು ಪ್ರವೃತ್ತಿಯಲ್ಲಿ ಕವಿ, ಸಾಹಿತಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-15) : ಹಿಪ್ಪರಗಿ ಸಿದ್ದರಾಮ್, ಧಾರವಾಡ

ಆತ್ಮೀಯ ರಂಗಾಸಕ್ತ ಓದುಗಪ್ರಭುಗಳೇ, ನಾವೀಗ ಮಹಾಕವಿ ಷೇಕ್ಸ್ ಪಿಯರ್‍ನ ‘ಹ್ಯಾಮ್ಲೆಟ್’ ನಾಟಕಕೃತಿಯನ್ನು ಯುಗದಕವಿ ಕುವೆಂಪುರವರು ಕನ್ನಡದಲ್ಲಿ ರೂಪಾಂತರವಾಗಿಸುವುದರೊಂದಿಗೆ ಸುದೀರ್ಘವಾಗಿರುವ ರುದ್ರರಸ ಪ್ರಧಾನ ‘ರಕ್ತಾಕ್ಷಿ’ ರಂಗಕೃತಿಯ ಕುರಿತು ಹಿಂದಿನ ಸಂಚಿಕೆಯಿಂದ ನೋಡುತ್ತಿದ್ದೇವೆ. ಅದರ ಮುಂದುವರಿದ ಕಥಾನಕ ನಿಮಗಾಗಿ…   ಸೆರೆಮನೆಯಲ್ಲಿದ್ದ ಬಸವಯ್ಯ ಮತ್ತು ಲಿಂಗಣ್ಣನವರನ್ನು ಬಿಡುಗಡೆ ಮಾಡಲು ಸನ್ಯಾಸಿಯ ಮಾರ್ಗದರ್ಶನದಲ್ಲಿ ಶಿವಯ್ಯ ಮತ್ತು ಹೊನ್ನಯ್ಯ ಯಶಸ್ವಿಯಾಗುತ್ತಾರೆ. ನಂತರ ಅವರನ್ನು ಕಂಸಿ ಮಾರ್ಗವಾಗಿ ಶಿವಮೊಗ್ಗೆಯ ಹತ್ತಿರ ತುಂಗಾತೀರದಲ್ಲಿರುವ ಹೈದರಾಲಿಯ ಬಿಡಾರಕ್ಕೆ ಕಳುಹಿಸುವುದರೊಂದಿಗೆ ತೀಕ್ಷ್ಣಮತಿಯೂ, ಕುಶಲಮತಿಯೂ ಆದ ಸನ್ಯಾಸಿಯೂ ಬಿಡುಗಡೆಯ ವಿಷಯದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಂಪಕಮಾಲಾ…!: ಸುಮನ್ ದೇಸಾಯಿ ಬರೆವ ನಗೆ ಅಂಕಣ

ಆವತ್ತ ಆಫೀಸಿಗೆ ಸೂಟಿ ಇತ್ತು. ಎಲ್ಲಾ ಕೆಲಸಾ ಮುಗಿಸಿ ಆರಾಮಾಗಿ ಟಿವ್ಹಿಯೊಳಗ ‘ಅಡಿಗೆ ಅರಮನಿ’ ನೊಡ್ಕೋತ ಕೂತಿದ್ದೆ. ಗಂಗಾವತಿ ಪ್ರಾಣೇಶ ಅವರು ತಮ್ಮ ಹಾಸ್ಯ ಪ್ರಹಸನದೊಳಗ ಹೇಳೋಹಂಗ ಇವರು ಮಾಡಿ ತೋರೆಸೋ ಅಡಗಿಗಿಂತಾ ಅವರ ರೇಷ್ಮಿ ಸೀರಿ, ಹಾಕ್ಕೊಂಡಿದ ದಾಗಿನಾ, ಮಾಡ್ಕೊಂಡ ಮೇಕಪ್, ಹೇರ್ ಸ್ಟೈಲ್ ನ ಮಸಾಲಿಕಿಂತಾ ಖಡಕ ಇದ್ವು. ಯಾವದೋ ಒಂದು ಸೊಪ್ಪಿನ ಸೂಪ್ ಮಾಡೋದ ಹೆಂಗಂತ ಹೇಳಿಕೊಡ್ಲಿಕತ್ತಿದ್ಲು. ಆಕಿ ಖುಲ್ಲಾ ಬಿಟಗೊಂಡ ಕೂದಲಾ ಎಲ್ಲೆ ಆಕಿ ಮಾಡೊ ಸೂಪಿನ ರುಚಿ ನೋಡತಾವೊ ಅನಿಸ್ತಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಾಪ (ಭಾಗ-2):ಪಾರ್ಥಸಾರಥಿ ಎನ್.

[ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ] ಲಕ್ಷ್ಮೀಶನ ಮುಖ ಸ್ವಲ್ಪ ಗಂಭೀರವಾಯಿತು. ಅವನು ಏನು ಉತ್ತರ ಕೊಡುತ್ತಿದ್ದನೋ, ಅಷ್ಟರಲ್ಲಿ ಅವನ ತಂದೆ ಶ್ರೀನಿವಾಸ  ಬಂದನು.   ಒಳಗೆ ಬರುವಾಗಲೇ, "ದಯಮಾಡಿ ಕ್ಷಮಿಸಿ, ಬೇಗಬರುವೆ ಅಂತ ಹೋಗಿ ನಿಮ್ಮನ್ನು ಕಾಯಿಸಿದೆ, ನಿಮಗೆ ತೊಂದರೆಯಾಯಿತು ಅನ್ನಿಸುತ್ತೆ" ಅಂದವನು ಅಲ್ಲೆ ಕುಳಿತಿದ್ದ ಅವನ ಮಗನತ್ತ, ಅವನ ಅಮ್ಮನತ್ತ, ನನ್ನತ್ತ ನೋಡಿ, "ಇವನ ಹತ್ತಿರ ಮಾತನಾಡುತ್ತಿದ್ದಿರಾ, ನಿಮಗೆ ಏನು ಬೇಸರವಾಗಲಿಲ್ಲ ತಾನೆ?" ಅಂದನು ಆತಂಕದಿಂದ. ನಾನು ನಕ್ಕುಬಿಟ್ಟೆ. "ಬನ್ನಿ ಕುಳಿತುಕೊಳ್ಳಿ, ಯಾವ ಆತಂಕವು ಬೇಡ, ನನಗೆ ಯಾವ ಬೇಸರವು ಇಲ್ಲ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜ್ಞಾನದ ಹರಿವಿನ ಸ್ಥಿತಿಗತಿ. ಏನು? ಎತ್ತ?: ರಕ್ಷಿತ್ ಶೆಟ್ಟಿ

ಒಂದು ಕಾಲವಿತ್ತು. ಬರಹಗಾರರು ಹಗಲಿರುಳೆನ್ನದೇ ಬರೆದು ತಮ್ಮ ಕೃತಿಗಳನ್ನು ಮುದ್ರಿಸಿ ಉರಿ ಮಳೆ ಚಳಿಯಲ್ಲಿಯೂ ಅಲೆದು ಪ್ರತಿಯನ್ನು ಮಾರುತ್ತಿದ್ದರು. ನಾಡು ನುಡಿಗಾಗಿ ಭಾಷೆಯ ಹಲವು ಮಗ್ಗುಲಲ್ಲಿ ಸಾಹಿತ್ಯ ಕೃಷಿ ಮಾಡಿ ಓದುಗರೊಡನೆ ಭಾವನೆಗಳನ್ನು ಬೆಸೆದುಕೊಳ್ಳುತ್ತಿದ್ದ ಸಮಯವದು. ಇಂಗ್ಲೀಷಿನ ಬರಹಗಾರರಿಗೆ ವಿಶೇಷ ಸ್ಕೋಪ್ ಸಿಗುತ್ತಿದ್ದರೂ ಸ್ವಭಾಷೆಯನ್ನು ಕೃತಿಗಳಲ್ಲಿ ಮೈತಾಳಿಸಿಕೊಂಡು ಭಾಷಾ ಸೇವೆ ಮಾಡಿರವುದು ಕೇವಲ ಕನ್ನಡಕ್ಕಷ್ಟೇ ಸೀಮಿತವಲ್ಲದ್ದು. ಅಂದಿನ ಓದು :- ಕೃತಿಯೊಂದನ್ನು ಮನೆಯವರೆಲ್ಲರೂ ಕಿತ್ತಾಡಿಕೊಂಡು ಆದಷ್ಟು ಬೇಗ ಓದುತ್ತಿದ್ದ ಕಾಲವಿತ್ತು. ಕಾಲ ಸಂದರ್ಭವೂ ಪೂರಕವಾಗಿದ್ದುದು ಬೇರೆ ಮಾತು. ವರ್ಷದಲ್ಲಿ ದುಡಿಯೋದನ್ನ ತಿಂಗಳಲ್ಲಿ ದುಡಿಯೋ ಧಾವಂತ ಆಗಿರಲಿಲ್ಲ. ಅನಕ್ಷರತೆಯಿಂದ ಅಕ್ಷರಸ್ಥತೆಯೆಡೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಿಶು ಗೀತೆ ಮತ್ತು ಚಿತ್ರ

  ನಿಖಿಲ್ ೩ ನೇ ತರಗತಿ ಜಿ ಪಿ ಎಚ್ ಎಸ್ ನಂಜೈಗರಹಳ್ಳಿ     ಕಿಟ್ಟು ಪುಟ್ಟು   ಕಿಟ್ಟು ಪುಟ್ಟು ಇಬ್ಬರು ತುಂಬಾ ಒಳ್ಳೆ ಗೆಳೆಯರು ಅಕ್ಕ-ಪಕ್ಕದ ಮನೆಯ ಹುಡುಗರು   ಒಂದೇ ಊರು ಒಂದೇ ಶಾಲೆ ಅಣ್ಣ-ತಮ್ಮನಂತೆ ಇವರು ತುಂಬಾ ಒಳ್ಳೇ ಹುಡುಗರು   ಕಿಟ್ಟು ಅಮ್ಮ ತಿಂಡಿ ಕೊಡಲು ಪುಟ್ಟು ಜೊತೆಗೆ ಹಂಚಿ ತಿನುವ ಪುಟ್ಟು ಕೂಡ ಅಪ್ಪ ತರುವ ಪೇಟೆ ತಿಂಡಿ ಹಂಚಿ ತಿನುವ ಕಿಟ್ಟು ಜೊತೆಯಲೇ..   ಜೊತೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಎಂಬ ನಂದಾದೀಪ: ಮಂಜು ಎಂ. ದೊಡ್ಡಮನಿ

  ಅಲ್ಲಿ ಎಲ್ಲಿಯೂ ಎಳ್ಳಷ್ಟು ನಿಮ್ಮ ತಪ್ಪು ಇರುವುದಿಲ್ಲ, ಇದ್ದರೂ ನೀವು ಬೇಕೆಂದು ತಪ್ಪು ಮಾಡಿರುವುದಿಲ್ಲ ನಿಮ್ಮ ಗಮನಕ್ಕೆ ಬಾರದೆ ಆದ ಸಣ್ಣದೊಂದು ತಪ್ಪನ್ನು ಅವರು ದೊಡ್ಡದಾಗಿಸಿ ನಿಮ್ಮದೇ ತಪ್ಪು ಎನ್ನುವಂತೆ ತಮ್ಮನ್ನು ತಾವು  ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ನಿಮ್ಮೆದುರು ನಿಂತು ಪ್ರತಿಪಾದಿತ್ತಾರೆ, ಇಲ್ಲ ಸಲ್ಲದ ಆರೋಪಗಳನ್ನು ನಿಮ್ಮ ಮೇಲೆ ಹೊರಿಸುತ್ತಾರೆ, ಕಿಂಚಿಂತು ಬೆಲೆ ಕೊಡದೆ ಫುಲ್ ಸ್ಟಾಪ್ ಇಲ್ಲದೆ ಬಡ ಬಡ ಮಾತಾಡಿ, ಬಾಯಿಗೆ ಬಂದಂತೆ ಉವಾಚಿಸುತ್ತಾರೆ, ನೀವು ಎಷ್ಟೇ ಕಾರಣಕೊಟ್ಟರು ಏನೇ ಹೇಳಿದರು ಕೊನೆಗೆ ಸ್ವಾಭಿಮಾನ ಮರೆತು ಮಾಡದ ತಪ್ಪಿಗೆ ಕ್ಷಮೆ ಕೇಳಿದರೂ  ಅವರು ನಿಮ್ಮ  ಯಾವುದೇ justification ಅಥವಾ reason … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ