ನನ್ನೊಳಗಿನ ಗುಜರಾತ (ಭಾಗ 9): ಚಿನ್ಮಯ್ ಮಠಪತಿ

  ಬದಲಾಗುತ್ತಿರುವ ಜೀವನ ಕ್ರಮವನ್ನೊಮ್ಮೆ ಸಿಂಹಾವಲೋಕನ ಮಾಡಬೇಕು. ಇಂತಹ ಒಂದು ಅವಲೋಕನ ಮಾಡಿದರೆ, ಎಷ್ಟೋ ವಿಸ್ಮಯಗಳು ನಮ್ಮನ್ನು ಯಾವದೋ ಒಂದು ಮಾಯಾಲೋಕಕ್ಕೆ ಕರೆದೊಯ್ದು ಒಂದು ಸುತ್ತು ಸುತ್ತಾಡಿಸಿಕೊಂಡು ಬರುತ್ತವೆ.  ಈ ನಡುವೆ ನಮ್ಮಲ್ಲಿ ಹಲವಾರು ಪ್ರಶ್ನೆಗಳು ಹುಟ್ಟುತ್ತವೆ ಮತ್ತು ಉತ್ತರವನ್ನು ಕೆಲವೊಂದಿಷ್ಟು ಪ್ರಶ್ನೆಗಳು ಕಂಡುಕೊಳ್ಳುತ್ತವೆ. ಕೆಲವು ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಯುತ್ತವೆ. ಮೊನ್ನೆ, ನೆನ್ನೆ ಮತ್ತು ಇವತ್ತೆಂಬ ಈ ಪುಟ್ಟ ಕಾಲಾಂತರದಲ್ಲಿ ಕಾಣ ಸಿಗುವ ಅಮೋಘ ಬದಲಾವಣೆಗಳ ಜೊತೆ,  ಚೂರು ಹಿಂದೆ ಸರಿದು ಹಿಂದಿನ ವಿದ್ಯಮಾನಗಳನ್ನು ಅವಲೋಕಿಸಿದರೆ ಅದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಮಾತುರಾಣಾಂ: ಉಪೇಂದ್ರ ಪ್ರಭು

'ಏ ಚೆನ್ನಾಗಿ ಥಳಿಸು. ಜೀವಮಾನವಿಡೀ ಮರೀಬಾರ್ದು. ಮಾನಗೇಡಿ, ಏನಂದ್ಕೊಂಡಿದ್ದಾನೆ?' 'ಹಾಡುಹಗಲಲ್ಲೇ ಈ ಥರ ವರ್ತಿಸೋರು ಇನ್ನು ರಾತ್ರೆ ಏನೆಲ್ಲಾ ಮಾಡಿಯಾರೋ?' 'ಎಷ್ಟು ಕೊಬ್ಬು. ಅವಳ ಅಪ್ಪನ ವಯಸ್ಸಾಗಿರಬಹುದು!' 'ಕಾಮಾತುರನಿಗೆ ಎಲ್ಲಿಯ ಭಯ , ಎಲ್ಲಿಯ ಲಜ್ಜೆ !' 'ಎಲ್ಲಾ ಈ ಕುಡಿತದಿಂದ.  ದಿನಾ ನೋಡ್ತಿದ್ದೀವಿ. ಮಧ್ಯಾಹ್ನ, ಸಂಜೆ, ರಾತ್ರೆ, ಹೊತ್ತಿಲ್ಲ ಗೊತ್ತಿಲ್ಲ, ತೂರಾಡುತ್ತಲೇ ಇರುತ್ತಾನೆ.  ಈ ಗೌರ್‍ಮೆಂಟ್ನವ್ರೂ ಅಷ್ಟೆ. ತಮ್ಮ ಲಾಭಕ್ಕೆ ಎಲ್ಲಾರ್ಗೂ ಲೈಸನ್ಸ್ ಕೊಟ್ಟ್‍ಬಿಟ್ಟಿದ್ದಾರೆ. ಹೆಜ್ಜೆಗೊಂದೊಂದು ಬಾರ್, ಸಾರಾಯಿ ಅಂಗಡಿ!'  'ಚಪ್ಲಿಯಿಂದ ಬಾರಿಸ್ರೋ, ಸತ್ರೂ ಸಾಯ್ಲಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೂ ಒಂದು ಪ್ರೇಮ ಪತ್ರ: ಶೀತಲ್ ವನ್ಸರಾಜ್

ಪ್ರೀತಿಯೊಂದಿಗೆ ಪೂರ್ಣತೆ ತಂದವಳೇ ,               ಅಪ್ಪ,ಅಮ್ಮ,ಕಸಿನ್ಸ್ ,ಫ್ರೆಂಡ್ಸ್ ಎಲ್ಲರೂ ಇದ್ದರೂ ಎನೋ ಒಂದು ಕೊರತೆ ಇತ್ತು ಜೀವನದಲ್ಲಿ.. ಕೇಕ್ ಮೇಲೆ ಚೆರ್ರಿ ಮಿಸ್ ಆದಂತೆ,ಕಾಫಿಯಲ್ಲಿ ಕೊಂಚ ಸಕ್ಕರೆ ಕಡಿಮೆ ಇದ್ದಂತೆ,ಸಿಂಗರಿಸಿಕೊಂಡ ಹೆಣ್ಣು ಕುಂಕುಮವಿಡುವುದ ಮರೆತರೆ ಹೀಗೆ ಏನೇನೊ ಅಪೂರ್ಣ…ನೀ ಬಂದಾಗ ಅದಕ್ಕೆಲ್ಲಾ ಪೂರ್ಣತೆ ಸಿಕ್ಕಂತೆ,ಜೀವನಕ್ಕೊಂದು ಅರ್ಥ ಸಿಕ್ಕಿತು ನೀ ನನಗೆ ಸ್ವಂತವಾದ ದಿನವೇ…ನಾವಿಬ್ಬರು ಸೇರಿ ನಡೆಸಿದ ಜೀವನ ಸರಸ -ವಿರಸಗಳೊಡನೆ  ನೀ ಕರೆಯುತ್ತಿದ್ದಾಗ ಒಮ್ಮೊಮ್ಮೆ ನನ್ನ 'ಜೀ' ಎಂದು, 'ವನ್' ಎಂಬುದು ಇರದಿದ್ದರೂ ಜೀವನವೊಂತು ಸಂಪೂರ್ಣವಾಗಿತ್ತು…ಈಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ಕಥೆ: ಸುನಿಲ್ ಗೌಡ

  "ಎಲ್ಲಾ ಕೆಲ್ಸ ಮುಗ್ಸಿ ತಿಂಡಿ ಮಾಡಿದ್ರು ಇನ್ನೂ ಬಿದ್ದಿದ್ದೀಯಲ್ಲಾ, ಚಿಂತೆ ಇಲ್ದೋನ್ಗೆ ಚಿತೆ ಮೇಲೆ ಮಲ್ಗಿಸಿದ್ರು ನಿದ್ದೆ ಬರ್ತವಂತೆ. ಎದ್ದು ತೋಟ ನೋಡೋಗೊ ಸೋಮಾರಿ, ಈಗೀನ್ ಕಾಲದ್ ಹುಡುಗ್ರು ಮಲ್ಗದು ಏಳದು ಯಾವ್ದು ಸರಿ ಮಾಡಲ್ಲ". ಅಡುಗೆಯ ಮನೆಯಿಂದ ವಗ್ಗರಣೆಯ ತುಪ್ಪದ ವಾಸನೆ ಜೊತೆ ಸರ್ರನೆ ಬಂದ ಅಮ್ಮನ ಧ್ವನಿಗೆ ಕಿವಿ ಮುಚ್ಚಿ ವಗ್ಗರಣೆಯ ವಾಸನೆಯನ್ನು ಆಸ್ವಾದಿಸಲು ಮುಂದಾದೆ, "ಏಳ್ತೇನೆ ತಡಿಯಮ್ಮ, ಯಾಕೆ ಈ ತರಹಾ ಕಿರುಚ್ತೀಯ, ಆ ವಾಯ್ಸ್ ನನ್ ಕಿವೀಲಿ ಕೇಳೋಕೆ ಆಗಲ್ಲಾ.." … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಚುಟುಕಗಳು: ಶಂಕರ್ ಕೆಂಚನೂರು, ಪ್ರತಾಪ್ ಬ್ರಹ್ಮವಾರ್, ರಾಜಶೇಖರ (ಬಂಡೆ)

ಪರಿತ್ಯಕ್ತರು ಆ ಅರಳಿ ಕಟ್ಟೆಮೇಲೆ ಒಂದಷ್ಟು ಜನ ಹಿರಿಯರು, ಇನ್ನೊಂದು ಕಡೆ ಗಾಜು ಒಡೆದಿದ್ದಕ್ಕೆ ಚಿತ್ರ ಮಾಸಿದ್ದಕ್ಕೆ ಪೂಜೆಯ ಅರ್ಹತೆ ಕಳೆದುಕೊಂಡ ದೇವರ ಫೋಟೋಗಳು -ಶಂಕರ್ ಕೆಂಚನೂರು ಅನಾಥ ನಿರೀಕ್ಷೆ ತುಕ್ಕು ಹಿಡಿದ ತಕ್ಕಡಿಯಂತ ಹೃದಯವನ್ನಾ  ಅದ್ಯಾರದೋ ಮನಸ್ಸಿಗೆ ತೂಕಕಿಟ್ಟೆ   ಅದೂ ಪಕ್ಕಾ ವ್ಯಪಾರಿ  ತೂಕಿಸಿಕೊಂಡು  ಮತ್ತೆ ಕೆಲಸಕೆ ಬರದ ತಕ್ಕಡಿಯೆಂದು ನನ್ನತ್ತ ತಳ್ಳಿತು  ಅನಾಥ ಹೃದಯ ಮತ್ತೆ ಎತ್ತಿಕೊಳುವ  ಮನಸಿಗೆ ಕಾಯುತಿಹುದು ಶಬರಿ ಕಾದಂತೆ   -ಪ್ರತಾಪ್ ಬ್ರಹ್ಮವಾರ್   ಬಂಡೆಯ ಚುಟುಕಗಳು ಮುಳುಗಡೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆತ್ಮ ಮತ್ತು ಮನಸ್ಸುಗಳಿಗೆ ಆನಂದ ತರುವದೆ, ಆಧ್ಯಾತ್ಮ: ಕೆ.ಎಂ. ವಿಶ್ವನಾಥ

ಈ ಭೂಮಿಯಲ್ಲಿ ಯಾವುದೂ ಶಾಶ್ವತವಲ್ಲ, ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ. ಅದರಲ್ಲಿ ಉಳಿವುದೊಂದೇ ಜೀವಾತ್ಮ. ಅದನ್ನು ಸದಾ ಸಂತೋಷವಾಗಿಡುವ ಏಕೈಕ ಅಸ್ತ್ರವೆಂದರೆ ಅದೇ ಆಧ್ಯಾತ್ಮ . ಸಂಸಾರದ ಈ ಸಾಗರದಲ್ಲಿ ತಾಪತ್ರಯಗಳು, ವೇದನೆ  ನೋವು, ಜಿಗುಪ್ಸೆ, ಹತಾಶೆ, ಸಂತೋಷ, ಇವೆಲ್ಲ ತಪ್ಪಿದಲ್ಲ, ಎಲ್ಲವೂ ನಮ್ಮನ್ನು ತಿಂದು ಹಾಕುವುದು, ಸದಾ ನಮ್ಮ ಮನಸ್ಸು ಮತ್ತು ಆತ್ಮಗಳಿಗೆ ಚಿಂತನೆಗೆ ಹಚ್ಚುವುದು. ನಿಂತಲ್ಲಿ ನಿಲ್ಲದೆ, ಕೂತಲ್ಲಿ ಕೂಡದೆ ಹೋಗುವುದು, ಅತ್ತಿಂದ ಇತ್ತ ಮಂಗದಂತೆ ಜಿಗಿದಾಡುವದು, ನಾವು ವಿನಾಕಾರಣ ಕೋಪಗೊಳ್ಳುವುದು, ಮತ್ತೊಬ್ಬರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ

ಪಂಜು ಅಂತರ್ಜಾಲ ವಾರಪತ್ರಿಕೆ ಮತ್ತು ಪಂಜು ಪ್ರಕಾಶನದ ವತಿಯಿಂದ ಚುಟುಕ ಸ್ಪರ್ಧೆಗೆ ನಿಮ್ಮ ಚುಟುಕಗಳನ್ನು ಆಹ್ವಾನಿಸಲಾಗಿದೆ. ಒಬ್ಬರು ಕನಿಷ್ಠ 25 ಚುಟುಕಗಳನ್ನು ಕಳುಹಿಸಬೇಕು (ಗರಿಷ್ಠ ಮಿತಿ 30). ಚುಟುಕಗಳು ಸ್ವಂತ ರಚನೆಗಳಾಗಿರಬೇಕು. ಚುಟುಕಗಳನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com   ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಚುಟುಕ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. ಮಿಂಚಂಚೆಯಲ್ಲಿ ನಿಮ್ಮ ಹೆಸರು, ವಿಳಾಸ, ಮಿಂಚಂಚೆ, ಮೊಬೈಲ್ ಸಂಖ್ಯೆ, ನಿಮ್ಮ ಕಿರು ಪರಿಚಯ ಹಾಗು ಫೇಸ್ ಬುಕ್ ಲಿಂಕ್ ಕಳುಹಿಸಿ.. ಚುಟುಕಗಳು ತಲುಪಬೇಕಾದ ಕೊನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಣ್ಮುಚ್ಚಿ ತವಕಿಸುವ ಜೀವೋನ್ಮಾದ: ರಘುನಂದನ ಹೆಗಡೆ

    ಕ್ಲಬ್ಬಿನಲಿ ಕವಿದ ಮಬ್ಬು ಬೆಳಕಿನ ಮುಸುಕಿನಲ್ಲಿ ಉನ್ಮಾದದ ಝಲಕು ಮೂಲೆಯಲಿ ಒತ್ತಿ ನಿಂತವರ ಸುತ್ತ ಸೆಂಟಿನ ಘಾಟು ಬಣ್ಣ ಬಣ್ಣದ ಶೀಷೆಗಳಲ್ಲಿ ಕಣ್ಮುಚ್ಚಿ ತವಕಿಸಿದೆ ಜೀವೋನ್ಮಾದ ಇಲ್ಲಿ ಪರಿಮಳವೂ ಉಸಿರುಗಟ್ಟಿಸುತ್ತದೆ ಬೆಳಕೂ ಕಪ್ಪಿಟ್ಟಿದೆ…   ರಾತ್ರಿ ಪಾಳಿಯ ಬಡ ದೇಹಕ್ಕೂ ದುಬಾರಿ ಸಿಗರೇಟೇ ಬೇಕು ಸುಡಲು ನಗರ ವ್ಯಾಮೋಹದ ಕಿಡಿಯಲ್ಲಿ ಹಳ್ಳಿಗಳೆಲ್ಲ ವೃದ್ಧರ ಗೂಡು-ಸುಡುಗಾಡು ಇಲ್ಲ ಶಹರದಲಿ ತಾರೆಗಳ ಹೊಳಪು ಇರುಳೆಲ್ಲ ಕೃತಕ ದೀಪಗಳ ಬಿಳುಪು ನುಗ್ಗಿ ಬರುವ ಪತಂಗಗಳ ಜೀವ ಭಾವ – … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಂತ್ರ: ರಾಘವೇಂದ್ರ ತೆಕ್ಕಾರ್

  ಅವನು ಎಲ್ಲರಂತಿರಲಿಲ್ಲ, ಕುರುಚಲು ಗಡ್ಡಧಾರಿಯಾಗಿ ಹರಕಲು ಉಡುಪುಗಳ ಜೊತೆ ನನ್ನ ಮುಂದು ನಿಂತಿದ್ದ. ಏನು? ಎಂದಿದ್ದೆ. ಭಿಕ್ಷುಕ ವೇಷಧಾರಿಯಂತೆ ಕಾಣುವ ಆತ ಭಿಕ್ಷುಕನೆಂದು ಒಪ್ಪಿಕೊಳ್ಳದಂತೆ ಮಾಡಿದ್ದು ಆತನ ದೃಷ್ಟಿಯಲ್ಲಿದ್ದ ಹರಿತ. ಚಿಂಗಾಣಿ ಬೆಟ್ಟದ ಕಡೆ ಹೋಗ್ಬೇಕು ದಾರಿಯೆಂತು ? ಎಂದು ತನ್ನ ಗೊಗ್ಗರು ದನಿಯಲ್ಲಿ ಕೇಳಿದ. ನನ್ನ ಎಡಕ್ಕೆ ಕಾಣುವ ದೊಡ್ಡ ಬೆಟ್ಟದ ಕಡೆ ಕೈ ತೋರಿ ನೀ ಕೇಳುತ್ತಿರುವ ಬೆಟ್ಟ ಅದೆ ಎಂದು ಕೈ ತೋರಿದ್ದೆ. ಆತ ನನ್ನೆಡೆಗೆ ಒಂದು ಕ್ಷಣ ನೋಡಿ ನಸು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದಲ್ಲಿನ ‘ತುಂಟ’ ಚಿತ್ರಗೀತೆಗಳು: ವಾಸುಕಿ ರಾಘವನ್

  ಒಂದು ಹಾಡನ್ನ ಹೀಗೇ ಅಂತ ವಿಂಗಡಿಸೋದು ತುಂಬಾ ಕಷ್ಟ. ಒಬ್ಬರಿಗೆ ಮಜಾ ಕೊಡುವ ಹಾಡು ಇನ್ನೊಬ್ಬರಿಗೆ ಅತಿರೇಕ ಅನ್ನಿಸಬಹುದು. ಒಬ್ಬರ ‘ತುಂಟ’ ಹಾಡು ಇನ್ನೊಬ್ಬರಿಗೆ ಅಶ್ಲೀಲ ಅಥವಾ ‘ಪೋಲಿ ಹಾಡು’ ಅನ್ನಿಸಬಹುದು. ನನಗೆ ಈ ‘ತುಂಟ’ ಹಾಡುಗಳು ಬೇರೆ ಬೇರೆ ಕಾರಣಗಳಿಗೆ ಇಷ್ಟವಾಗಿವೆ – ಆಯ್ದುಕೊಂಡಿರುವ ವಿಷಯಗಳು, ವಿಷಯವನ್ನು ಹೇಳಿರುವ ರೀತಿ, ಪದಗಳಲ್ಲಿ ಪನ್ ಮಾಡಿರುವುದು, ಒಂದಕ್ಕಿಂತ ಹೆಚ್ಚು ಅರ್ಥ ಕೊಡುವ ಸಾಲುಗಳು ಅಥವಾ “ಹೀಗೂ ಉಂಟೇ” ಅನ್ನುವಂಥ ಅಸಂಬದ್ಧತೆ! ಇಲ್ಲಿದೆ ನೋಡಿ ನನ್ನ ಅಚ್ಚುಮೆಚ್ಚಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಏಕಾಂಗಿ ಮನಸು ಮತ್ತು ಅವಳ ಕನಸು: ರವಿಕಿರಣ್

  "ಗಾಳಿ ಯಾಕೆ ಶಬ್ದ ಮಾಡುತ್ತೆ ಗೊತ್ತಾ ನಿಂಗೆ?"  ಕುತೂಹಲಕ್ಕೆ ಕೇಳಿದ್ಲಾ? ಚೇಷ್ಟೆಗೆ ಕೇಳಿದ್ಲಾ? ಅರ್ಥವಾಗಲಿಲ್ಲ. ಹೌದು ಗಾಳಿ ಯಾಕೆ ಸದ್ದು ಮಾಡತ್ತೆ? ನಾನೂ ಚಿಂತೆ ಎನ್ನುವ ಚಿತೆಗೆ ಜಾರಿದಂತಾಯ್ತು. ಎಲ್ಲೋ ಪೇಟೆಯ ಮಧ್ಯವೋ, ಬಸ್ಸಿನಲ್ಲಿ, ಬೈಕಿನಲ್ಲಿ ಹೋಗುವಾಗಲೋ, ಇಲ್ಲ ಯಾವುದೋ  ಪಾರ್ಕು,ಹೋಟೆಲ್,ಮನೆ,ದೇವಸ್ಥಾನ,ಚರ್ಚ್ ಎಲ್ಲೇ ಈ ಪ್ರಶ್ನೆ ಕೇಳಿದ್ದರೂ, ಉತ್ತರ ಕೊಡುವ ಪ್ರಯತ್ನ ಮಾಡಬಹುದಿತ್ತು. ನ್ಯೂಟ್ರಾನ್,ಪ್ರೋಟಾನ್,ಎಲೆಕ್ಟ್ರಾನುಗಳ ಜೊತೆ ಗಾಡ್ ಪಾರ್ಟಿಕಲನ್ನೂ ಬಳಸಿ, ನ್ಯೂಟನ್ ನಿಯಮಗಳನ್ನು ದ್ವೈತಾದ್ವೈತಗಳ ಜೊತೆ ಮಿಶ್ರಮಾಡಿ ಹೇಳಲು ಪ್ರಯತ್ನಿಸಿ ಹಾದಿ ತಪ್ಪಿಸುವ ಪ್ರಯತ್ನವನ್ನಾದರೂ ಮಾಡಬಹುದಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲ್ವರ ಹನಿಗಳು: ಹುಸೇನ್ ಎನ್, ಶೀತಲ್, ಉಪೇಂದ್ರ ಪ್ರಭು, ಹರಿಪ್ರಸಾದ್ ಎ.

  ದನಿಯಾಗದ ಹನಿಗಳು  ೧. ನೆನಪಿನ ಪುಟಗಳಲ್ಲಿ ಅಡರಿ ಬಿದ್ದ  ನಿನ್ನೆಗಳಲ್ಲಿ ನನ್ನ ಪ್ರಣಯಕ್ಕೆ  ನಿನ್ನ ರೂಪವಿತ್ತು.. ಇಂದು ನನ್ನ ವಿರಹಕ್ಕೂ…!     ೨. ದುಃಖ ಸತ್ಯಗಳು  ನನ್ನ ನೋಡಿ  ನಗುತಿದೆ; ದುಃಖ ಮರೆಯಲು  ನಾನೂ..!     ೩. 'ಯಾಕಾಗಿ ನೀನನ್ನ ಉಪೇಕ್ಷಿಸಿದ್ದು?'  ಕೇಳಿತು ಕಣ್ಣೀರ ಹನಿ … ಕಣ್ಣಲ್ಲಿ. 'ನಾನನುಭವಿಸುವ ನೋವು ನಿನಗೆ ತಿಳಿಯದಿರಲು..!'   ಉತ್ತರಿಸಿತು ಕಣ್ಣು.     ೪. ಎಲೆಗಳು ಪರಸ್ಪರ ತಾಕದಿರಲು ದೂರ ದೂರದಲಿ ನೆಟ್ಟ  ಮರದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ್ (ಭಾಗ 8): ಚಿನ್ಮಯ್ ಮಠಪತಿ

ಪ್ರಾರ್ಥಿಸುವ ತುಟಿಗಳಿಗಿಂತ ಸಹಾಯದ ಹಸ್ತಗಳು ದೊಡ್ಡವು ಅಂತೆ. ನಿಜ ! ಆವತ್ತು ಹಿಂದೆ ಮುಂದೆ ನೋಡದೆಯೇ ಸಮಯಕ್ಕೆ ಗಮನ ಕೊಡದೇ, ಮೆಹಸಾನಾದಿಂದ ಗಾಂಧಿ ನಗರಕ್ಕೆ ಪ್ರಯಾಣ ಬೆಳೆಸಿದ್ದೆ. ಯಾವದೋ ಕೆಲಸದ ಮೇಲೆ  ಮೆಹಸಾನಾ ನಗರಕ್ಕೆ ಹೋಗಿದ್ದ ನಾನು, ಅಲ್ಲಿಂದ ಬಿಡುವಾಗ ಸಮಯ ಸರಿಯಾಗಿ ಏಳು ಗಂಟೆಯಾಗಿತ್ತು. ಸೀದಾ ಗಾಂಧಿ ನಗರಕ್ಕೆ ಬಸ್ಸು ಇರದ ಕಾರಣ ಹಿಮ್ಮತ್ತ ನಗರದವರೆಗೆ ಹೋಗುವ ಬಸ್ಸು ಹಿಡಿದು ಪ್ರಯಾಣ ಬೆಳೆಸಿದೆ. ದಿನವಿಡೀ ಉರಿ ಬಿಸಿಲಲ್ಲಿ ಸುತ್ತಾಡಿ ತುಂಬ ಸುಸ್ತಾಗಿದ್ದೆ. ಅಲ್ಲಿಂದ ಬಸ್ಸು ಹೊರಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಂಕು….ಕೊಂಚ ಕಚಗುಳಿಗೆ !: ಸಂತೋಷ್ ಕುಮಾರ್ ಎಲ್ ಎಮ್

  ಕೆಲ ಸುದ್ದಿಗಳು ಟಿವಿಯಲ್ಲಿ ಬಂದಾಗ ಒಮ್ಮೊಮ್ಮೆ ನಾವು ಹೀಗೆ ಮಾತಾಡಿಕೊಳ್ಳುವುದುಂಟು. ಇದು ಆ ಕ್ಷಣದಲ್ಲಿ ಬರುವ ತಕ್ಷಣದ ಪ್ರತಿಕ್ರಿಯೆ. ಕೇವಲ ಹಾಸ್ಯದ ದೃಷ್ಟಿಯಿಂದಷ್ಟೇ ಈ "ಕೊಂಕು" ಬರಹ. ಯಾವುದೇ ಕೊಂಕನ್ನು ವೈಯುಕ್ತಿಕವಾಗಿ ತೆಗೆದುಕೊಳ್ಳಬಾರದಾಗಿ ವಿನಂತಿಸಿಕೊಳ್ಳುತ್ತಾ… ಸುದ್ದಿ: ಕೇವಲ ಜನಸೇವೆ ಸಾಕು, ನನಗೆ ಅಧಿಕಾರ ಬೇಡ- ಯೆಡ್ಡಿ ಕೊಂಕು: ಸುಮ್ನಿರಿ ಸಾರ್, ಜನರಿಗೆ ಆಸೆ ತೋರಿಸಬೇಡಿ!! ಸುದ್ದಿ: ಲಾರಿ ಮಗುಚಿ, ತುಂಬಿದ್ದ ನ್ಯೂಸ್ ಪೇಪರ್ ಗಳೆಲ್ಲ ಚೆಲ್ಲಾಪಿಲ್ಲಿ ಕೊಂಕು: ನಾಳೆ ಈ ಸುದ್ದಿ ಜನಗಳಿಗೆ ಹೇಗೆ ತಲುಪುತ್ತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೌತಮನ ಘಾಟುವಾಸನೆ: ಪ್ರವರ ಕೊಟ್ಟೂರು

  ನಾಲ್ಕು ಗೋಡೆಗಳು ನಾಲ್ಕು ಮೂಲೆಗಳು ಜೇಡರಬಲೆಯೊಳಗಿಂದ ನುಗ್ಗಿದ್ದ ಧೂಳು, ನನ್ನ ಮುಖದ ಮೇಲೊಷ್ಟು ನೋವ ಮುಚ್ಚುವ ಕತ್ತಲು, ಹಿಡಿ ಸುಣ್ಣದ ಪುಡಿ ತೂರಿದಂತೆ ಬೆಳಕು, ಸುತ್ತಲೂ   ನನ್ನನ್ನೇ ದುರುಗುಟ್ಟುತಿದ್ದ ನೆರಳುಗಳೇ ಮೆಲ್ಲಗೆ ಮೂರ್ನಾಲ್ಕು ಬಾರಿ ಪಿಸುನುಡಿದಂತೆ ಧೂಳ ಕಣಗಳ ನಡುವೆ "ಸತ್ತರೆ ಮಣ್ಣ ಸೇರುತ್ತಾನೆ ಕೊಳೆಯದಿದ್ದರೆ ಕೊಳ್ಳಿ ಇಡುವ ಬೂದಿಯಾಗಲಿ ಮೂಳೆ"   ಬಾಗಿಲ ಕಿಂಡಿಯಲ್ಲಿ ತೂರಿ ಬಂದ ತಂಡಿ ಗಾಳಿ ಎದೆಯ ಬೆವರ ಬೆನ್ನ ನೇವರಿಸಿದ ಸಾಂತ್ವಾನ, ಜೊಲ್ಲು ಇಳಿಸುತ್ತಾ ಅಡಗಿದ್ದ ಜೇಡರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಾರಕೊಮ್ಮೆ ಯಶವಂತಪುರ ಸಂತೆ: ಶಿವು ಕೆ.

                   ಇತ್ತೀಚೆಗೆ ತೇಜಸ್ವಿಯವರ "ಸಂತೆ" ಕಥೆ ಓದಿದಾಗ ನನಗೂ ಸಂತೆಗೆ ಹೋಗಬೇಕೆನಿಸಿತ್ತು.  ನನ್ನ ಮಡದಿ ಪ್ರತಿ ಭಾನುವಾರ  ಸಂಜೆ  ಯಶವಂತಪುರ ಸಂತೆಗೆ ತರಕಾರಿ ಹಣ್ಣು ಹೂಗಳನ್ನು ತರಲು ಹೋಗುತ್ತಿದ್ದಳು.  ಹೋಗುವ ಮೊದಲು ನಾನು ಜೊತೆಯಲ್ಲಿ ಬರಬೇಕೆಂದು ತಾಕೀತು ಮಾಡುತ್ತಿದ್ದಳು.  ಮೊದಮೊದಲು ಅವಳು ಕರೆದಾಗ ನಾನು ಉತ್ಸಾಹದಿಂದ ಹೋಗುತ್ತಿದ್ದೆನಾದರೂ ಅಲ್ಲಿ ಆಗಾಗ ಆಗುವ ಕೆಲವು ಬೇಸರದ ಅನುಭವಗಳು ನೆನಪಾಗಿ,  ನನಗೆ ಬ್ಲಾಗು, ಫೋಟೊಗ್ರಫಿ ಇತ್ಯಾದಿ ಕೆಲಸಗಳಿದೆಯೆಂದು ತಪ್ಪಿಸಿಕೊಳ್ಳುತ್ತಿದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಪರ್ಯಾಸ: ಬದರಿನಾಥ ಪಲವಳ್ಳಿ

  ಬೆಳಿಗ್ಗೆ ಎದ್ದಾಗಲಿಂದಲೂ ಏಕೋ ಸಣ್ಣಗೆ ತಲೆಯ ನೋವು. ಸ್ವಲ್ಪ ಕಾಫಿ ಕಾಯಿಸಿಕೊಳ್ಳೋಣ ಎಂದು ಮೂರು ಗಂಟೆಯಿಂದ ಯೋಚಿಸಿದ್ದೇ ಬಂತು. ಯಾಕೋ ಅದಕ್ಕೂ ಬೇಸರ. ಯಜಮಾನರು ತೀರಿಕೊಂಡ ಮೇಲೆ ನಾನು ನಾನು ತೀರಾ ಅಂತರ್ಮುಖಿಯಾಗುತ್ತಿದ್ದೇನೆ ಅನಿಸುತ್ತದೆ. ಮೂರು ಕೋಣೆಗಳ ಈ ವಿಶಾಲವಾದ ಫ್ಲಾಟಿನಲ್ಲಿ ಈಗ ನಾನು ಒಬ್ಬಂಟಿ. ತುಂಬಾ ಮನೆಗಳಿರುವ ವಿಶಾಲವಾದ ಸೊಸೈಟಿ ಇದು. ಪಕ್ಕದ ಮನೆಯವರು ಯಾರೆಂದು ನನಗೂ ಇಲ್ಲಿಯವರೆಗೂ ಗೊತ್ತಿಲ್ಲ. ಕೆಲಸದವಳು ಬೆಳಿಗ್ಗೆ ಬಂದು ಮನೆ ಕೆಲಸಗಳನ್ನು ಮುಗಿಸಿ ಹೊರಟಳೆಂದರೆ ಇಡೀ ದಿನ ನಾನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡಾ. ಅನಸೂಯಾದೇವಿಯವರ ಕೃತಿ “ಪ್ರಕೃತಿ ಮತ್ತು ಪ್ರೀತಿ”: ಹನಿಯೂರು ಚಂದ್ರೇಗೌಡ

  ಕೃತಿ ವಿವರ: ಪುಸ್ತಕದ ಹೆಸರು        : ಪ್ರಕೃತಿ ಮತ್ತು ಪ್ರೀತಿ- ವೈಚಾರಿಕ ಲೇಖನಗಳ ಸಂಗ್ರಹ ಲೇಖಕಿ                    : ಡಾ.ಅನಸೂಯಾ ದೇವಿ ಬೆಲೆ                        :  ೩೫೦ ರೂ. ಪ್ರಕಾಶನ ಸಂಸ್ಥೆ         : ದೇಸಿ ಪುಸ್ತಕ, ವಿಜಯನಗರ, ಬೆಂ.-೪೦ ಪ್ರಕಟಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಾಂತಿ ನಿವಾಸ: ರುಕ್ಮಿಣಿ ಎನ್.

ಎಷ್ಟೋ ದಿನಗಳಿಂದ ತೆರೆದುಕೊಂಡಿದ್ದ ಮನೆ-ಕಿಟಕಿ ಬಾಗಿಲುಗಳು ತೆರೆದುಕೊಂಡತೆಯೇ ಇದ್ದವು. ರಭಸವಾಗಿ ಬಿದ್ದ ಮಳೆಗೆ ಮಣ್ಣಿನ ಮೇಲ್ಛಾವಣಿ ಕುಸಿದು ಬಿದ್ದಿತ್ತು. ಕಿಟಕಿ ಬಾಗಿಲುಗಳಲ್ಲಿ ಜೇಡರ ಮಹಾರಾಯ ಸುಖಾಂತವಾಗಿ ತನ್ನ ಸುತ್ತ ಬಲೆಯನ್ನು ಹೆಣೆದುಕೊಂಡು ಮನೆ ತುಂಬಾ ಮುತ್ತಿಗೆ ಎಂಬಂತೆ ತನ್ನ ಸಾಮ್ರಾಜ್ಯ ವಿಸ್ತರಿಸುತ್ತಲೇ ಇದ್ದ. ಮನೆಯ ಪಕ್ಕದಲ್ಲಿ ಇದ್ದ ಬೇವಿನ ಮರದ ಫಲ-ಪುಷ್ಪಗಳು ಮನೆಯ ಮೆಟ್ಟಿಲುಗಳನ್ನು ಶೃಂಗರಿಸಿದ್ದವು. ಸಂಜೆಯಾಗುತ್ತಿದ್ದಂತೆ ಕಟ್ಟೆಗೆ ಕೂತು ಹರಟುತ್ತಿದ್ದ ವಯೋವೃದ್ದರ ಬಾಯಲ್ಲಿ ಎದುರಿನಲ್ಲಿದ್ದ ಹಾಳು ಬಿದ್ದ  ಮನೆಯ ಕತೆಯೇ ವಿಷಯ ವಸ್ತುವಾಗಿರುತ್ತಿತ್ತು. ಆ ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೋಮವಾರದ ಸಂಚಿಕೆಯಲ್ಲಿ ನಿರೀಕ್ಷಿಸಿ…

1. ಚುಟುಕ ನಾಲ್ವರ ಹನಿಗಳು: ಹುಸೇನ್ ಎನ್, ಶೀತಲ್, ಉಪೇಂದ್ರ ಪ್ರಭು, ಹರಿಪ್ರಸಾದ್ ಎ. 2. ಸಿನಿಲೋಕ ಕನ್ನಡದಲ್ಲಿನ ‘ತುಂಟ’ ಚಿತ್ರಗೀತೆಗಳು: ವಾಸುಕಿ ರಾಘವನ್ 3. ಕಾವ್ಯಧಾರೆ  ಗೌತಮನ ಘಾಟುವಾಸನೆ: ಪ್ರವರ ಕೊಟ್ಟೂರು ಕಣ್ಮುಚ್ಚಿ ತವಕಿಸುವ ಜೀವೋನ್ಮಾದ: ರಘುನಂದನ ಹೆಗಡೆ 4. ಹಾಸ್ಯ  ಕೊಂಕು….ಕೊಂಚ ಕಚಗುಳಿಗೆ!!:ಸಂತು 5. ಪ್ರೀತಿ ಪ್ರೇಮ  ಏಕಾಂಗಿ ಮನಸು ಮತ್ತು ಅವಳ ಕನಸು: ರವಿಕಿರಣ್ 6. ಕಥಾಲೋಕ  ತಂತ್ರ: ರಾಘವೇಂದ್ರ ತೆಕ್ಕಾರ್ 7. ಕಥಾಲೋಕ  ವಿಪರ್ಯಾಸ: ಬದರಿನಾಥ ಪಲವಳ್ಳಿ 8. ಸರಣಿ ಬರಹ  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಣ್ಣಿಲ್ಲದೆ ಮನೆಯೊಂದು ಮನೆಯಲ್ಲ: ಸಿ ಎಸ್ ಮಠಪತಿ

ಲೇ ಊಂಟಗೇಡಿ “ನೀನು ಹೆಣ್ಣಾಗಿ ಹುಟ್ಟ ಬಾರದಿತ್ತಾ.. ನೀ ಹೆಣ್ಣಾಗಿ ಹುಟ್ಟಿದ್ರ ನಾಳೆ ಮದ್ವಿ ಆದ್ ಮ್ಯಾಗ ಒಂದೆರಡ ಮಕ್ಳನ್ನ ಹಡ್ದು ಅವ್ನ ಬಾಳ್ ಚೆಲೋತಂಗೆ ಸಾಕ್ತಿದ್ದಿ. ಆ ದೇವ್ರ್ ನಿನ್ನ ಯಾಕರ ಗಂಡಾಗಿ ಹುಟ್ಸಿದಾ ಅನ್ಸಾಕತ್ತೈತಿ ನಂಗ” ಖರೇನ್ ಹೇಳ್ ತೀನಿ, ನೀ ಏನರಾ ಹೆಣ್ಣಾಗಿ ಹುಟ್ಟಿದ್ದಿ ಅಂದ್ರ, ನನ್ನ ಮಮ್ಮಗಗ ತಗೋಂಡು ಮನಿ ಸ್ವಸಿ ಮಾಡ್ಕೊಂಡ್ ಬಿಡ್ತಿದ್ನಿ.! ದೇವ್ರು ಮೋಸ ಮಾಡ್ದಾ.  ತಪ್ಪಾಗಿ ನಿನ್ನ ಗಂಡ್ಸಾಗಿ ಹುಟ್ಸಿದಾ..!! ನಮ್ಮ “ಬಸವ್ವ” ಆಯಿ ಹಿಂಗಂತ ನಂಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಪ್ರೀತೀಶ, ದಿಲೀಪ್ ರಾಥೋಡ್, ಸ್ವರ್ಣ ಎನ್.ಪಿ.

  ನೀ ಕೊಟ್ಟೆ ಪರೀಕ್ಷೆ ಸೀತೆ, ನೂರು ದುಗುಡಗಳ ತುಂಬಿಕೊಂಡು ಸುಮ್ಮನೆ ಕೂತುಬಿಟ್ಟೆಯಲ್ಲೇ ಶೋಕವನದೊಳಗೆ;   ಅಯ್ಯೋ ಪಾಪ ಸೀತೆ ಅಷ್ಟೈಶ್ವರ್ಯ ಬಿಟ್ಟು ಕಾಡಿಗೆ ಹೋದಳು ಎಂದು ನೊಂದ ಕವಿಯ ಕಂಡು ನೊಂದುಕೊಂಡೆವಲ್ಲೇ? ಹೊಳೆಯಲೇ ಇಲ್ಲ ನಮಗೆ ನಿನಗೆ, ನಿನ್ನ ಜೊತೆಗೆ ಕೈ ಹಿಡಿದು ನಡೆವ ಕಣ್ಣೀರು ತೊಡೆವ ಮುತ್ತುಗಳ ಮತ್ತಿನಲ್ಲಿ ಮೈಮರೆಸುವ, ಚಿಗುರುತ್ತಿಹ ಜವ್ವನದ ಸಂಭ್ರಮಗಳ ತಣಿಸುವ ನಲ್ಲನಿದ್ದಾನೆಂದು! ಉರ್ಮಿಳೆಯಂತೆ ಬರೀ ವೈಢೂರ್ಯಗಳು ಮಾತ್ರ ಇಲ್ಲವೆಂದು.   ಕೂತು ಬಿಟ್ಟೆ ನೆಪವಾಗಿ ಕೈಕಾಲು ಆಡಿಸದೆ ರಾವಣ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಮಾಜ ಸುಧಾರಕಿ, ಮಹಿಳಾವಿಮೋಚಕಿ ಕ್ರಾಂತಿಜ್ಯೋತಿ ಮಾತೆ ಸಾವಿತ್ರಿಬಾಯಿ ಫುಲೆ: ಹಿಪ್ಪರಗಿ ಸಿದ್ದರಾಮ್

  ಪ್ರಾಚೀನ ಕಾಲದಿಂದಲೂ ನಮ್ಮ ದೇಶದ ಪರಂಪರೆಯನ್ನು ಅವಲೋಕಿಸುತ್ತಾ ಹೋದಂತೆ ಭರತಖಂಡವು ಅಮೂಲ್ಯವಾದ ಸಾಮಾಜಿಕ ಸಮಾನತೆಯ ವೈಚಾರಿಕ, ಪ್ರಗತಿಪರ ಮನಸ್ಸುಗಳಿಂದೊಡಗೂಡಿದ ಅಪೂರ್ವ ರತ್ನಗಳ ಗಣಿಯಾಗಿದೆ. ಸಮಾಜ ಸೇವೆ, ಸಾಹಿತ್ಯ, ಸಂಗೀತ, ಕಲೆ, ಸಂಸ್ಕೃತಿ ಹೀಗೆ ಹಲವಾರು ಸಂಗತಿಗಳನ್ನು ಆಯಾ ಕಾಲಘಟ್ಟವು ತನ್ನ ಮಡಿಲಲ್ಲಿ ಹುದುಗಿಸಿಟ್ಟುಕೊಂಡಿರುವುದನ್ನು ಕಾಣಬಹುದು. ಹೀಗಿದ್ದರೂ ಕೆಲವು ಸಂಗತಿಗಳು ಸಮಾಜದಲ್ಲಿ ಐಕ್ಯತೆಯ ಮಂತ್ರದೊಂದಿಗೆ ಸಾಮರಸ್ಯವನ್ನುಂಟು ಮಾಡುವಲ್ಲಿ ಯಶಸ್ವಿಯಾದರೂ ಮತ್ತೆ ಕೆಲವೊಮ್ಮೆ ಸಾಮಾಜಿಕವಾಗಿ ಬಲಿಷ್ಟರು, ತಾವೇ ಶ್ರೇಷ್ಟರು ಎಂಬ ದುರಂಹಕಾರ ಮನೋಭಾವದ ಕುಹಕಿಗಳ ಕಪಟತನಕ್ಕೆ ಸಾಕ್ಷಿಭೂತವಾಗಿ ಕಹಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಲುವಿನಂಗಳದಿ ಮೂಡುತಿದೆ ಗೆಜ್ಜೆ ಕಾಲ್ಗಳ ಹೆಜ್ಜೆ ಗುರುತು: ಶ್ರೀವತ್ಸ ಕಂಚೀಮನೆ

ಕಾರ್ಯೇಶು ದಾಸಿ – ಕರಣೇಶು ಮಂತ್ರಿ – ಪೂಜ್ಯೇಶು ಮಾತಾ – ಕ್ಷಮಯಾ ಧರಿತ್ರಿ – ರೂಪೇಶು ಲಕ್ಷ್ಮಿ – ಶಯನೇಶು ರಂಭಾ ಎಂದು ಹೆಣ್ಣಿಗೆ ಹಲವಾರು ಶ್ರೇಷ್ಠ ಗುಣಗಳನ್ನು ಆರೋಪಿಸಿ, ತ್ಯಾಗ ಮೂರ್ತಿಯಾಗಿ ಚಿತ್ರಿಸಿ, ಹೊಗಳಿ ಅಟ್ಟಕ್ಕೇರಿಸಿ ಆಕೆಯ ಕಾರ್ಯ ವ್ಯಾಪ್ತಿಯನ್ನು ತನ್ನ ಮನೆಯ ಅಡಿಗೆ ಕೋಣೆ ಮತ್ತು ಶಯನಾಗಾರಕ್ಕೆ ಮಾತ್ರ ಸೀಮಿತಗೊಳಿಸಿದ ಪುರುಷ ಸಮಾಜ ಇಂದು ಸಣ್ಣಗೆ ಕಂಪಿಸುವಂತಾಗಿದೆ. ಕಾರಣ ಹೆಣ್ಣು ನಿಧಾನವಾಗಿ ಅಡಿಗೆ ಕೋಣೆಯ ಕಿಟಕಿಯಿಂದ ಆಚೆ ಗಂಡು ಕೇವಲ ತನ್ನದು ಎಂದುಕೊಂಡಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮತ್ತೆ ಬಂದಿದೆ ಮಹಿಳೆಗೊಂದು ದಿನ !!: ಭಾಗ್ಯ ಭಟ್

  ಹಾಗೆ ನೋಡಿದ್ರೆ ಎಲ್ಲಾ ದಿನವೂ ಮಹಿಳೆಯರ ದಿನವೇ …. ಬೆಳಿಗ್ಗೆ ಎದ್ದು ಬಾಗಿಲಿಗೆ ನೀರು ಬಿಟ್ಟು ರಂಗೋಲಿ ಹಾಕೋದ್ರಿಂದ ಶುರು ಆಗಿ ರಾತ್ರಿ ಅರೆ ಊಟ ಮಾಡಿ ಮಗುವನ್ನು ಮಲಗಿಸಲು ಹೋಗೋ ತನಕ ಅದು ಅವಳಿಗೇ ಮೀಸಲಾದ ದಿನ … ಅವಳದ್ದೇ ದಿನಗಳೇ…  ಬಿಡುವಿಲ್ಲದ ದಿನಚರಿ ….  ಕೆಲವೊಂದಿಷ್ಟು ಕನಸುಗಳು … ಕಣ್ಣ ಮುಂದಿನ ಗುರಿ …. ಹೆಗಲ ಮೇಲೆ ಬೆಟ್ಟದಷ್ಟು ಜವಾಬ್ದಾರಿಗಳು … ಅತ್ತೆ ಮಾವಂದಿರ ಮೇಲಿನ ಕಾಳಜಿ ,ಅಪ್ಪ ಅಮ್ಮನ ಮರೆಯಲಾರದ ವಾತ್ಸಲ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೈದೇಹಿಯವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ‘ಕ್ರೌಂಚ ಪಕ್ಷಿಗಳು’: ಮೋಹನ್ ಕೊಳ್ಳೇಗಾಲ

ವೈದೇಹಿಯವರ ‘ಕ್ರೌಂಚ ಪಕ್ಷಿಗಳು’ ಹತ್ತು ಕಥೆಗಳನ್ನೊಳಗೊಂಡ ಒಂದು ಕಥಾಸಂಕಲನ. ಎಲ್ಲಾ ಕಥೆಗಳಲ್ಲಿಯೂ ಹೊಸ ಹುಡುಕಾಟವಿದೆ, ಅದ್ಭುತ ಮತ್ತು ನೈಜವೆನಿಸಿಕೊಳ್ಳುವ ಭಾವನೆಗಳನ್ನು ಎಳೆ ಎಳೆಯಾಗಿ ಹರಿಯಬಿಡುವ ನಿರೂಪಣೆಯಿದೆ, ಹೊಸ ಹೊಸ ಭಾವನೆಗಳ ಮಿಳಿತವಿದೆ, ನೋವಿನ ಜೊತೆಗೆ ನಲಿವಿದೆ, ನಂಬಿಕೆ ಅಪನಂಬಿಕೆಗಳ ನಡುವಿನ ಗುದ್ದಾಟವಿದೆ, ಅರ್ಧದಾರಿಗೇ ನಮ್ಮನ್ನು ನಿಲ್ಲಿಸಿಹೋಗುವ ಒಗಟುಗಳಿವೆ, ಪ್ರಶ್ನೆಯಾಗಿ ಕಾಡಿ ಪ್ರಶ್ನೆಯಾಗಿಯೇ ಉಳಿದುಕೊಳ್ಳುವ ಭಾವನೆಗಳಿವೆ, ಜೊತೆಗೆ ಕುಂದಾಪುರ ಕನ್ನಡದ ನವಿರು ಸೊಗಡಿನ ದುಡಿಮೆಯಿದೆ. ಇವೆಲ್ಲಕ್ಕಿಂತಲೂ ಈ ಕಥೆಗಳಲ್ಲಿ ಪ್ರಮುಖವಾಗಿ ಗ್ರಹಿಸಿಕೊಳ್ಳಬಹುದಾದ ಅಂಶವೆಂದರೆ ‘ಪ್ರತಿ ಕಥೆಯಲ್ಲೂ ವಿರುದ್ಧಭಾವಗಳು ಒಟ್ಟೊಟ್ಟಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ