ಪಂಜು ಚುಟುಕ ಸ್ಪರ್ಧೆ: ರಘು ನಿಡುವಳ್ಳಿ ಅವರ ಚುಟುಕಗಳು

1 ಸಮಾನತೆ ಭೋರ್ಗರೆವ ಶರಧಿ ಅದರ ಸೆರಗಲ್ಲೆ  ಮಹಾಮೌನಿ 'ಹಿನ್ನೀರು' ದಿಗ್ಗನೆ ಬೆಳಗುವ ದೀಪ  ಅದರ ಬದಿಯಲ್ಲೆ ದಿವ್ಯಧ್ಯಾನಿ 'ಕತ್ತಲು ಸೃಷ್ಟಿಗಿಲ್ಲ  ಅದರ ದೃಷ್ಟಿಗಿಲ್ಲ  ಭೇಧ ಬಿನ್ನ ಪಕ್ಷಪಾತ ಹುಟ್ಟು ಸಾವು ನೋವು ನಲಿವು ಎಲ್ಲ ನಮ್ಮ ನಿಮ್ಮ ವರಾತ!   2  ಚೋದ್ಯ ಕತ್ತಲೆಗೆ ಗೊತ್ತಿರುವ.. ಗುಟ್ಟು.. ಬೆಳಕಿನ ಪಾಲಿಗೆ ಅಪರಿಚಿತ  ಹಣತೆ ಕಂಡಿರೋ ಸತ್ಯ.. ಕತ್ತಲಪಾಲಿಗೆ ಅದೃಶ್ಯ .. ಇದು ಸೃಷ್ಟಿಯ..ಚೋದ್ಯ   3 ಅಪೂರ್ಣ ಒರಟು ವಜ್ರಕ್ಕೆ..ಹೊಳಪು ಕೊಟ್ಟ.. ಸುವಾಸನೆ ಕೊಡಲಿಲ್ಲ.. ಮೃದುಲ..ಮಲ್ಲಿಗೆಯಲಿ.. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದಾನೊಂದು ಕಾಲದಲ್ಲಿ ಹೊಳಲ್ಕೆರೆ ಎಂಬ ಚಿಕ್ಕ ಹಳ್ಳಿ ಇತ್ತು : ಹೊಳಲ್ಕೆರೆ ವೆಂಕಟೇಶ್

ನಮ್ಮ ಹೊಳಲ್ಕೆರೆ ಮನೆ. ನಾವು ಚಿಕ್ಕವರಾಗಿದ್ದಾಗ, ಅಮ್ಮ, ಮತ್ತು ನಮ್ಮಣ್ಣ ತಲೆಯ ಬಳಿ  ಕುಳಿತು ತಲೆಗೂದಲನ್ನು  ನೇವರಿಸುತ್ತಾ ಪ್ರೀತಿಯಿಂದ ನಮಗೆ ನಿದ್ದೆ ಬರುವವರೆಗೂ ಕಥೆಗಳನ್ನು ಹೇಳುತ್ತಿದ್ದರು. ಅಮ್ಮನ ಕಥೆಗಳು ಹೆಚ್ಚಾಗಿ ರಾಜಕುಮಾರ,  ರಾಜಕುಮಾರಿ ಕುದುರೆ ಸವಾರಿ, ಅರಮನೆ, ಮದುವೆ ಮೊದಲಾದವುಗಳನ್ನು ಒಳಗೊಂಡಿರುತ್ತಿತ್ತು. ನಮ್ಮಣ್ಣ ಹೇಳುತ್ತಿದ್ದ ಕಥೆಗಳು   ಕಾಡು, ಹುಲಿ ಬೇಟೆ, ರಾಜ, ನದಿ ಇತ್ಯಾದಿಗಳನ್ನು ತಿಳಿಸುವ ಪ್ರಯತ್ನದ್ದಾಗಿತ್ತು.  ನಾನು ಬೊಂಬಾಯಿಗೆ ಬಂದಮೇಲೆ ಮದುವೆಯಾಗಿ ಮಕ್ಕಳಾದಾಗ ನನ್ನ ಮಕ್ಕಳಿಗೆಕಥೆ ಹೇಳುವ ಪ್ರಮೇಯ ಬಂತು. ಆದರೆ ನನ್ನ ತಲೆ ಖಾಲಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

1 35+5 36 40: ಬಸವರಾಜು ಕ್ಯಾಶವಾರ

ನನ್ನ ನೆನಪ ರಾಡಿಯಲ್ಲಿ ಅವಳೊಂದು ನೈದಿಲೆ ಅತ್ತರೆ ಕಣ್ಣೀರಾಗಿ ಸ್ರವಿಸುವಳು ನೊಂದರೆ ನೋವಾಗಿ ಖಾಲಿಯಾಗುವಳು ನಗುತ್ತಲೆ ಇದ್ದರೆ ಸುಮ್ಮನೆ ತೊನೆಯುವಳು, ಕೆನೆಯುವಳು ಮತ್ತೆ ಮತ್ತೆ ಹುಟ್ಟುವಳು ನನ್ನ ನೆನಪ ರಾಡಿಯಲ್ಲಿ ಮುದ್ದು ನೈದಿಲೆ. ಇದು 1998ರಲ್ಲಿ ನೀನು ಬರೆದ ಕವನ. ಹಚ್ಚ ಹಸಿರು ಹೊಲದಲ್ಲಿ ಪುಟಾಣಿ ಹುಡುಗಿಯೊಬ್ಬಳು ಕುರಿ ಮರಿಯನ್ನು ಎತ್ತಿ ಮುದ್ದಾಡುತ್ತಿರುವ ನೀನೇ ಬರೆದ ಚಿತ್ರದ ಗ್ರೀಟಿಂಗ್ ಕಾಡರ್್ನ್ನ ಹೊಸ ವರ್ಷದ ಶುಭಾಷಯವಾಗಿ ಕೊಟ್ಟಿದ್ದೆ. ಮೇಲೆ ನೋಡಿದ್ರೆ ಹೊಸ ವರ್ಷದ ಹಾಧರ್ಿಕ ಶುಭಾಷಯಗಳನ್ನು ಅಂತಿತ್ತು. ಆದ್ರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೋಟಾರ್ ಸೈಕಲ್ ಡೈರೀಸ್: ವಾಸುಕಿ ರಾಘವನ್

ಚೆ ಗೆವಾರ ನಿಮಗೆಲ್ಲರಿಗೂ ಗೊತ್ತಿರಬಹುದು. ಚರಿತ್ರೆಯನ್ನು ಅಷ್ಟಾಗಿ ಓದಿಲ್ಲದವರಿಗೂ ಟಿ-ಶರ್ಟ್ ಮೇಲಿನ “ಆ ಮುಖ” ಅಂತಾದ್ರೂ  ಪರಿಚಯ ಇದ್ದೇ ಇರುತ್ತೆ. ನನಗೆ ಅವನ ಸಿದ್ಧಾಂತಗಳು, ನಿಲುವುಗಳು, ಆದರ್ಶಗಳ ಬಗ್ಗೆ ಆಳವಾದ ಅರಿವು ಇಲ್ಲ, ಆದರೂ ಅವನ ಜೀವನವನ್ನು ಬದಲಿಸಿದ ಕಥೆ ಇರುವ ಈ ಚಿತ್ರ ಬಹಳ ಇಷ್ಟವಾಯಿತು. ಆ ಚಿತ್ರವೇ 2004ರಲ್ಲಿ ಬಂದ ಅದೇ ಹೆಸರಿನ ಆತ್ಮಕಥನದ ಪುಸ್ತಕವನ್ನು ಆಧರಿಸಿದ “ಮೋಟಾರ್ ಸೈಕಲ್ ಡೈರೀಸ್”.   ಎರ್ನೆಸ್ಟೋ ‘ಚೆ’ ಗೆವಾರ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ನಮ್ಮಂಥ ಒಬ್ಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓದುವ ಬರೆಯುವ ಸುಖಕ್ಕೆ ಸೀಮಾರೇಖೆಗಳ ಹಂಗೇಕೆ: ನಟರಾಜು ಎಸ್. ಎಂ.

ಕೋಲ್ಕತ್ತಾದಲ್ಲಿದ್ದ ದಿನಗಳಲ್ಲಿ ಕನ್ನಡ ಪೇಪರ್ ಗಳು ಸಿಗದ ಕಾರಣ ಟೈಮ್ಸ್ ಆಫ್ ಇಂಡಿಯಾ ಪೇಪರ್ ಓದುವ ಅಭ್ಯಾಸವಿತ್ತು. ಬೆನೆಟ್ ಕೋಲೆಮನ್ ಕಂಪನಿ ಹೆಸರಿನಲ್ಲಿ 390 ರೂಪಾಯಿಯ ಚೆಕ್ ಒಂದರ ಜೊತೆ ಆ ಪೇಪರ್ ನ ಚಂದಾದಾರರಾಗುವ ಅರ್ಜಿಯೊಂದನ್ನು ಸ್ಥಳೀಯ ಪೇಪರ್ ವೆಂಡರ್ ಗೆ ನೀಡಿದರೆ ಒಂದು ವರ್ಷ ಪೂರ್ತಿ ಆ ಪೇಪರ್ ಮನೆ ಬಾಗಿಲಿಗೆ ಬಂದು ಬೀಳುತ್ತಿತ್ತು. ಆ ಒಂದು ವರ್ಷದಲ್ಲಿ ಪಡೆದ ಪೇಪರ್ ಗಳನ್ನು ತೂಕಕ್ಕೆ ಹಾಕಿದರೆ ಸುಮಾರು 200 ರೂಪಾಯಿ ತೂಕ ಹಾಕಿದ ಪೇಪರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಮಾಷೆ: ಮಾಲತಿ ಶೆಣೈ

“ಒಂದು ರೊಟ್ಟಿಯ ತುಣುಕು ಕೊಡಿ” “ಏನಾದರೂ ತಿನ್ನಲು ಕೊಡಿ " ಆಕೆ ದೈನ್ಯತೆಯಿಂದ ಬೇಡಿದಳು. ಗಟ್ಟಿ ಕಲ್ಲಿನ ಅಂಗಳದ ಸುಡು ಬಿಸಿಲಿನಲ್ಲಿ ನಿಂತಿದ್ದಳು ಹುಡುಗಿ. ಮೈಯಲ್ಲಿ ಮಾಂಸದ ಹೆಸರೇ ಇರಲಿಲ್ಲ, ಎಲುಬಿನ ಗೂಡು. ಮಕ್ಕಳಿಗೆ  ಅನಾಟಮಿಯ  ಪಾಠ ಕಲಿಸುವಷ್ಟು ಅವಳ ಎಲುಬು ನಿಚ್ಚಳವಾಗಿ ಮೈಯಿಂದ ಕಾಣುತ್ತಿದ್ದವು. “ಅಮ್ಮ ಅವಳಿಗೆ ಸ್ವಲ್ಪ ತಿಂಡಿ ಕೊಡು. ನಿನ್ನೆಯಿಂದ ತಿಂಡಿಗೋಸ್ಕರ ಆಕೆ ಬೀದಿ ಬೀದಿ ಅಲೆಯುತ್ತಿದ್ದಾಳೆ’ ಕನಿಕರದಿಂದ ತನ್ನ ಅಮ್ಮನಿಗೆ ಹೇಳಿದ ಅದಿಲ್. “ಹೋಗಾಚೆ”- ಅಮ್ಮ ಗಟ್ಟಿ ದನಿಯಿಂದ ಗದರಿದರು. “ನಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 1): ಹನುಮಂತ ಹಾಲಿಗೇರಿ

ಒಬ್ಬೊಬ್ಬರ ಬದುಕು ಒಂದೊಂಥರಾ. ಒಂದರೊಳಗ ಸಿಕ್ಕ ಹಾಕ್ಕೊಂಡವರು ಅದರಿಂದ ಬಿಡಿಸಿಕೊಳ್ಳಾಕ ಅವರ ಹಿಂದಿನ ಬದುಕಿನ ಅಧ್ಯಾಯಗಳು ಅಷ್ಟು ಸರಳ ಬಿಡುದಿಲ್ಲ. ಸುತ್ತಲಿನ ಪ್ರಪಂಚವನ್ನು ಕಣ್ಣರಳಿಸಿ ನೋಡುವ ಮುನ್ನವೇ, ಯಾರದೋ ಹುನ್ನಾರಕ್ಕೆ ಬಲಿಯಾಗಿ, ತಾವು ಮಾಡದ ತಪ್ಪಿಗಾಗಿ, ಎಷ್ಟೋ ಹೆಣ್ಮಕ್ಕಳು ಇಂದು ತಮ್ಮ ಮೈಯನ್ನೇ ಸಂತೆಯೊಳಗ ಬಿಕರಿಗಿಟ್ಟು ತುತ್ತಿನ ಚೀಲ ತುಂಬಿಸಿಕೊಳ್ಳಾಕ ಹತ್ಯಾರ. ಅಂಥ ಮೈ ಮಾರೊಳ ಹೊಟ್ಟಿಯೊಳಗಿಂದ ಭೂಮಿಗೆ ಇಳಿದು ಬಂದವ ನಾ. ಹಿಂದೆ, ಇಂದು, ಮುಂದೆಂದೂ ಈ ಬ್ಯಾನಿ ನನ್ನನ್ನು ಬಿಟ್ಟು ಬಿಡದ ಕಾಡಕೋತನ ಇರತೈತಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ೦ಜು ನಾ ಕ೦ಡ೦ತೆ: ವೆಂಕಟೇಶ್ ಪ್ರಸಾದ್

ಅದು ೨೦೧೧ ನವ೦ಬರ ಆಗ ನಾನು ಅ೦ತಿಮ ವರ್ಷದ ಪದವಿಯಲ್ಲಿದ್ದೆ. ಎಲ್ಲಾ ಕಾಲೇಜು ಹುಡುಗರ೦ತೆ ನಾನೂ ಫೇಸ್ ಬುಕ್ಕನ್ನು ಬಲವಾಗಿ ಅ೦ಟಿ ಕೊ೦ಡಿದ್ದೆ. ದಿನಾ ಬೆಳಗಾದರೆ ಫೇಸ್ಬುಕ್ ನೋಡದೆ ಮುಖ ಪ್ರಕ್ಷಾಳನ ಮಾಡಿಕ್ಕೊಳ್ಳುತ್ತಿರಲಿಲ್ಲ. ಹೀಗೆ ಒ೦ದು ದಿನ  ಫೇಸ್ ಬುಕ್ ನಲ್ಲಿ ಸ೦ಚರಿಸುತ್ತಿದ್ದಾಗ ‘ಕನ್ನಡ ಬ್ಲಾಗ್’ ಎ೦ಬ ಮಿತ್ರರ ಸಮೂಹದ ಪರಿಚಯವಾಯಿತು. ‘ಕನ್ನಡದ ಕ೦ಪ’ನ್ನು ಪಸರಿಸುವ ತಾಣಕ್ಕೆ ನಾನೂ ಸೇರಿಕೊ೦ಡೆ. ಅದರಲ್ಲಿ ಪ್ರಕಟವಾಗುತ್ತಿದ್ದ ಕಥೆ , ಕವನ , ಹಾಸ್ಯ ಲೇಖನ ಇತ್ಯಾದಿಗಳನ್ನ ಓದಿ/ಓದದೇ ಒ೦ದು ‘ಲೈಕ್’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-10): ಹಿಪ್ಪರಗಿ ಸಿದ್ದರಾಮ್

ಆತ್ಮೀಯ ರಂಗಾಸಕ್ತ ಓದುಗಸ್ನೇಹಿತರೇ, ಇಲ್ಲಿಯವರೆಗೆ ಮಹಾಕವಿಗಳ ರಂಗಕೃತಿಗಳ ಪೌರಾಣಿಕ ಲೋಕದಲ್ಲಿ ವಿಹರಿಸುತ್ತಾ, ಅವರ ಪ್ರತಿಭಾಜ್ವಾಲೆಯಲ್ಲಿ ಅರಳಿದ ಹಲವು ಪೌರಾಣಿಕ ಪ್ರಸಂಗಗಳು ಆಧುನಿಕ ರಂಗರೂಪದೊಂದಿಗೆ ಹೊರಹೊಮ್ಮುವುದರೊಂದಿಗೆ, ಇಂದಿಗೂ ಕನ್ನಡ ರಂಗಭೂಮಿಯಲ್ಲಿ ಹೊಸತನಕ್ಕೆ ಪ್ರಚೋಧನಾತ್ಮಕವಾಗಿರುವ ಪೌರಾಣಿಕ ರಂಗಕೃತಿಗಳ ಕುರಿತಾಗಿ ಇಲ್ಲಿಯವರೆಗೆ ನೋಡಿದ್ದೇವೆ. ಮಹಾಕವಿಗಳು ಕೇವಲ ಪೌರಾಣಿಕ ಪ್ರಸಂಗಗಳಿಗೆ ಸೀಮಿತವಾಗದೇ ಮುಂದುವರೆದು ತಮ್ಮ ಲೇಖನಿಯಲ್ಲಿ ಐತಿಹಾಸಿಕ ಕಥನಕಗಳನ್ನು ಸಹ ಹೊಸ ರೂಪಾಂತರದೊಂದಿಗೆ ಇಂದಿನ ಕಾಲದ ರಂಗಕರ್ಮಿಗಳ ಪ್ರತಿಭೆಗೆ ಸವಾಲೊಡ್ಡುವಂತಹ ವಿಷಯಾಧಾರಿತ ಮತ್ತು ಪ್ರಸಂಗಾಧಾರಿವಾದ ರಂಗಕೃತಿಗಳನ್ನು ನೀಡಿದ್ದಾರೆ. ಅವುಗಳನ್ನು ನಾವೀಗ ಅವುಗಳ ರಚನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ಪಂಜು’ ವಿಗೆ ಹೃದಯ ಪೂರ್ವಕ ಶುಭಾಶಯಗಳು: ಸುಮನ್ ದೇಸಾಯಿ

             ತನ್ನ ಪ್ರಖರ ಬೆಳಕಿನ ಸೊಬಗಿನಿಂದ ಹೊಳೆಯುತ್ತ ೨೫ ನೇ ವಾರಕ್ಕೆ ಕಾಲಿಡುತ್ತಿರುವ " ಪಂಜು" ವಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ಸಾಹಿತ್ಯದ ಮತ್ತ ಓದುವ ಹಪಹಪಿಯಿರುವ ನಾನು ಒಂದು ದಿನಾ ಹಿಂಗ ಕನ್ನಡ ವೆಬ್ ತಾಣಗಳನ್ನ ಹುಡಕಲಿಕತ್ತಾಗ ನನ್ನ ಕಣ್ಣಿಗೆ ಬಿದ್ದಿದ್ದು ಈ " ಪಂಜು" ಇ-ಪತ್ರಿಕೆ. ಆವಾಗಾಗಲೆ ಪತ್ರಿಕೆ ಶುರುವಾಗಿ ಒಂದ ೧೫ ವಾರ ಆಗಿದ್ವು ಅನಿಸ್ತದ. ಕೂತುಹಲದಿಂದ ಒಂದೊಂದ ವಾರದ ಸಂಚಿಕೆಗಳನ್ನ ತಗದು ನೋಡಿದ್ರ, ಹಬ್ಬದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತೊಟ್ಟಿಕ್ಕೋ ಕಾವ್ಯದ ಹನಿಗಳು!: ಸಂತೆಬೆನ್ನೂರು ಫೈಜ್ನಟ್ರಾಜ್

1.ವೈಶಾಲ್ಯ ಮನೆ ಸುತ್ತಾ ಕಾಂಪೌಂಡ್ ಹಾಕಿಕೊಳ್ಳುವ ನಾವು ಮನದ ಅದಮ್ಯ ಬಯಕೆಗಳಿಗೆ ಯಾವ ಬೇಲಿಯೂ ಹಾಕದ ವಿಶಾಲಿಗಳು !   2.ಸಡಗರ ಬೀಳೋ ಮಳೆಗೆ ಭೂಮಿ ಸೇರೋ ತವಕ ಭೂಮಿಗೋ ಒಡಲ ತುಂಬಿಕೊಳ್ವ ತವಕ !   3.ಒಲವೇ ನಿನ್ನೊಲವೇ ನನ್ನ ಕಾಯುವುದು ಕಣ್ಮುಚ್ಚಿ ತೆರೆದರೆ ಬರಿ ನಿನ್ನ ನೆನಪೇ ಕಾಡುವುದು !   4.ವಿಪರ್ಯಾಸ ಕತ್ತಲ ವಾಸಕ್ಕಂಜಿ ಬೆಳಕ ಹಂಚುತ್ತಾ ಹೊರಟ ಹಣತೆ ಕೊನೆಗೆ ಅದೇ ಕತ್ತಲಲ್ಲಿ ಕಣ್ಮುಚ್ಚಿತು!   5.ಹೂ-ಚುಕ್ಕಿ ನಕ್ಕ ಹೂ ನೋಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ತಂತಿ ಪರ್ಸಂಗ …. ! : ಶ್ರೀಕಾಂತ್ ಮಂಜುನಾಥ್

ಐದು ಮಂದಿ ಹಳ್ಳಿಕಟ್ಟೆಯಲ್ಲಿ ಬೀಡಿ ಸೇದುತ್ತಾ ಲೋಕಾಭಿರಾಮವಾಗಿ ಮಾತಾಡುತ್ತ ಕುಳಿತಿದ್ದರು…    "ನೀನು ಏನೇ ಹೇಳು.. ಈ ಪರ್ಪಂಚದಲ್ಲಿ ಏಟೊಂದು ಬದಲಾವಣೆ ಆಗಿ ಬಿಡ್ತು!"   "ಹೌದು ಕಣಣ್ಣ..  ಮೊದ್ಲು ಮೊದ್ಲು ಒಬ್ಬರನ್ನ ಒಬ್ಬರು ಭೇಟಿ ಮಾಡೋಕೆ ಆನಾಡಿ ಕಷ್ಟ ಪಡ್ತಾ ಇದ್ವಿ.. ಈಗ ಎಲ್ಲಾ ಚಿಟಿಕೆ ಚಿಟಿಕೆ ಹೊಡೆಯೋದರಲ್ಲಿ ಮುಗಿಯುತ್ತೆ"   "ಗುರುವೇ ನಿನಗೆ ಗೊತ್ತಾ… ಈ ಟೆಲಿಗ್ರಾಂ ಅಂದ್ರೆ ತಂತಿ ಸೇವೆ ಐತಲ್ಲ ಅದನ್ನ ನಿಲ್ಲಿಸಿ ಬಿಡ್ತಾರಂತೆ.. ಈ ತಂತಿ ಸೇವೆ ಬಗ್ಗೆ ನಿನ್ನ ಅನುಭವ ಹೇಳ್ರಣ್ಣಾ!"   "ಓಹ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮ ವೈಫಲ್ಯ: ವಾಸುಕಿ ರಾಘವನ್

ಎರಡು ಕನಸು, ಬಂಧನ, ಪಲ್ಲವಿ ಅನುಪಲ್ಲವಿ, ಅಮೆರಿಕಾ ಅಮೆರಿಕಾ, ನಮ್ಮೂರ ಮಂದಾರ ಹೂವೇ, ಅಮೃತವರ್ಷಿಣಿ, ಮಾನಸ ಸರೋವರ…ಹಾಗೂ “ಏ” ಚಿತ್ರಗಳಲ್ಲಿ ಮುಖ್ಯವಾಗಿ ಏನು ಕಾಮನ್ ಆಗಿದೆ? ಹೌದು, “ಪ್ರೇಮ ವೈಫಲ್ಯ”, ಅದರಲ್ಲೂ ಹೀರೋ ವೈಫಲ್ಯವನ್ನು ಅನುಭವಿಸೋದು! ಆದರೆ “ಏ” ಚಿತ್ರಕ್ಕೂ ಬೇರೆ ಚಿತ್ರಗಳಿಗೂ ಒಂದು ಪ್ರಮುಖ ವ್ಯತ್ಯಾಸ ಏನು ಗೊತ್ತಾ? ಈ ಸನ್ನಿವೇಶವನ್ನು ಹೀರೋ ಹ್ಯಾಂಡಲ್ ಮಾಡಿದ ರೀತಿ. “ಎರಡು ಕನಸು” ಚಿತ್ರದಲ್ಲಿ ತನ್ನ ಹಳೆಯ ಪ್ರೇಯಸಿಯನ್ನು ಮರೆಯಲಾಗದ ನಾಯಕ, ಹೆಂಡತಿಯನ್ನು ಕಡೆಗಣಿಸುತ್ತಾನೆ. “ಬಂಧನ” ಚಿತ್ರದಲ್ಲಿ ತಾನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೀಪ: ದಿವ್ಯ ಆಂಜನಪ್ಪ

ಅಂಧಕಾರವನ್ನು ತೊಲಗಿಸಿ, ಬೆಳಕನ್ನು ನೀಡಿ ದಾರಿ ತೋರುವ 'ದೀಪ'ವು ಜ್ಞಾನದ ಸಂಕೇತವಾಗಿದೆ. ಸಾಂಪ್ರದಾಯಕ ದೃಷ್ಟಿಯಿಂದಲೂ ದೀಪವು ಶ್ರೇಷ್ಟ ಸ್ಥಾನವನ್ನು ಪಡೆದಿದೆ. ಪೂಜೆ ಆಚರಣೆಗಳಲ್ಲಿ, ಆರತಿ ಬೆಳಗುವಲ್ಲಿ, ಯಾವುದೇ ಒಂದು ಕಾರ್ಯಕ್ರಮದ ಉದ್ಘಾಟನೆಯಲ್ಲಿ, ದೀಪ ಬೆಳಗಿಸುವ ಕಾರ್ಯವೇ ಮೊದಲಾಗಿದೆ. ಹೀಗೆ ನಮ್ಮ ಮನಸ್ಸು, ನಮ್ಮ ಸಂಸ್ಕೃತಿ ಮತ್ತು ನಮ್ಮ ಬುದ್ಧಿಯೂ ದೀಪವನ್ನು ಶ್ರೇಷ್ಠ ಸ್ಥಾನದಲ್ಲಿಟ್ಟು ನೋಡುತ್ತದೆ. ಭಾವನಾತ್ಮಕವಾಗಿಯೂ ಮತ್ತು ಸಾಹಿತ್ಯಾತ್ಮಕವಾಗಿಯೂ ದೀಪವು ನಮ್ಮ ಮನಗಳನ್ನು ಬೆಳಗಿಸಿವೆ ಎಂದೇ ಹೇಳಬಹುದು. ದೀಪವು ಬೆಳಕಿನ, ಜ್ಞಾನದ, ಕ್ರಾಂತಿಯ ದ್ಯೋತಕವಾಗಿ ಅನೇಕ ಕವಿತೆಗಳಾಗಿವೆ. ಕವಿಗಳಿಗೆ ಸ್ಪೂರ್ತಿಯಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಯುವವ-ಕೊಲ್ಲುವವ: ಅಖಿಲೇಶ್ ಚಿಪ್ಪಳಿ

ಕೊಲ್ಲುವುದು ಸುಲಭ. ಕಾಯುವುದು ಕಷ್ಟ. ಒಂದು ಗಿಡವನ್ನು ನೆಟ್ಟು, ಪೋಷಿಸಿ, ರಕ್ಷಿಸಿ ಮರವಾಗುವತನಕ ನೋಡಿಕೊಳ್ಳುವುದು ತಪಸ್ಸಿನಂತೆ. ಕೊಲ್ಲುವುದಕ್ಕೆ ಒಂದು ಕತ್ತಿಯೇಟು ಸಾಕು. ಹಾಗೆ ಕೆಲಬಾರಿ ಪ್ರಕೃತಿಯಲ್ಲಿ ರಕ್ಷಿಸುವ ಪ್ರಯತ್ನವೂ ವಿಫಲಗೊಳ್ಳುವುದಕ್ಕೆ ಪ್ರತ್ಯಕ್ಷವಾಗಿ ನಾವೇ ಕಾರಣವಾಗುವುದು ಇದೆ. ಕಾಯುವ ಪ್ರಯತ್ನದಲ್ಲಿ ಸಫಲಗೊಂಡು ಸಂತೋಷದಿಂದ ಬೀಗಿದ ಘಟನೆಯ ಜೊತೆಗೆ ವಿಫಲಗೊಂಡು ದು:ಖ ಅನುಭವಿಸಿದ ಕತೆಯೂ ಇಲ್ಲಿದೆ. ನಾನು ಕೆಲಸ ಮಾಡುವ ಜಾಗದಲ್ಲಿ ಜನರ ತಿರುಗಾಟ ಹೆಚ್ಚು. ಜೋಡಿ ಪಿಕಳಾರಗಳಿಗೆ ಗೂಡು ಕಟ್ಟಲು ಜಾಗವೊಂದು ಬೇಕು, ಕಾಂಕ್ರೀಟ್ ಕಾಡಿನಲ್ಲಿ ಅವಕ್ಕೆ ಪ್ರಶಸ್ತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆರ್ಕೆಸ್ಟ್ರಾಗಳೂ ಎಕ್ಸಾಮುಗಳೂ: ಪ್ರಶಸ್ತಿ ಅಂಕಣ

ಮೊನ್ನೆ ಬೆಳಗ್ಗೆ ಟೀವಿ ಹಾಕ್ತಿದ್ದ ಹಾಗೇ ಯಾವ್ದೋ ಕಾರ್ಯಕ್ರಮ. ನಿಮ್ಮ ಆರ್ಮ್ ನ ರೈಟ್ಗೆ ೪೫ ಡಿಗ್ರಿ ರೊಟೇಟ್ ಮಾಡಿ. ಆಮೇಲೆ ಲೆಗ್ಸ ನ ಹಾಗೇ ಪುಷ್ ಮಾಡಿ. ಹಾಗೇ ೨೦ ರೌಂಡ್ಸ್ ರಿಪೀಟ್ ಮಾಡಿ… ಯಪ್ಪಾ, ಇದ್ಯಾವ ಭಾಷೆಯೋ ಶಿವನೇ. ಬೆಂಗ್ಳೂರ ಕನ್ನಡ ಇಷ್ಟು ಕರಾಬ್ ಆಯ್ತಾ ಅಂತ ಬೇಜಾರಾಗಿ ಟೀವೀನೆ ಆಫ್ ಮಾಡ್ತೆ. ಸಂಜೆ ಮನೆಗೆ ವಾಫಾಸ್ ಬಂದ್ರೂ ಮತ್ತೆ ಟೀವಿ ಹಾಕೋ ಮಸಸ್ಸಾಗಿರ್ಲಿಲ್ಲ. ಮುಖಹೊತ್ತಿಗೆ(FB 🙂 ) ತೆಗಿತಾ ಇದ್ದೆ. ಅದೇ ಸಮಯಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಜ್ವಲ್ ಫೋಟೋಗ್ರಾಫಿ: ಪ್ರಜ್ವಲ್ ಕುಮಾರ್

ಯಶಸ್ವಿಯಾಗಿ ಬಾವುಟ ಹಾರಿಸಿದೆ  ಇಂಡಿಯನ್ ಬುಲ್ ಫ್ರಾಗ್ ಹೆಲಿಕ್ಯಾಪ್ಟರ್ ಚಿಟ್ಟೆಯ ಗಟ್ಟಿ ಹಿಡಿತ ಹಸಿರು ಹುಳ ಕರೆಂಟ್ ಇಲ್ಲದಿದ್ದಾಗ ಉಪಯೋಗಿಸುತ್ತಿದ್ದ ನಮ್ಮನೆ ದೀಪ ಮಲೆನಾಡ ನೆಲ ಓಟ ನಟ್ಟು ಬೋಲ್ಟು :)) ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುವ ಪ್ರಕಾಶಕನೊಬ್ಬನ ಅಂತರಾಳದ ಮಾತುಗಳು: ನಟರಾಜು ಎಸ್. ಎಂ.

ಒಮ್ಮೆ ಪುಸ್ತಕವೊಂದನ್ನು ಪ್ರಕಟಿಸುವ ಕನಸು ಕಂಡಿದ್ದೆ. ಗೆಳೆಯನೊಬ್ಬ ತಾನೆ ಆ ಪುಸ್ತಕವನ್ನು ತನ್ನ ಪ್ರಕಾಶನದ ಮೂಲಕ ಪ್ರಕಟಿಸುವೆನೆಂದು ಮಾತು ನೀಡಿದ್ದ. ಟೈಪಿಂಗ್ ನಿಂದ ಹಿಡಿದು ಕರಡು ಪ್ರತಿ ತಿದ್ದುವ ಕೆಲಸವನ್ನು ಸಹ ಶ್ರದ್ಧೆಯಿಂದ ಮಾಡಿ ಮುಗಿಸಿ, ಪುಸ್ತಕ ಪ್ರಕಟವಾಗುತ್ತದೆ ಎಂದು ಆಸೆಯಿಂದ ಬರೋಬ್ಬರಿ ಹತ್ತು ತಿಂಗಳು ಜಾತಕ ಪಕ್ಷಿಯಂತೆ ಕಾದಿದ್ದೆ. ಕವರ್ ಪೇಜ್ ಡಿಸೈನ್ ನಿಂದ ಹಿಡಿದು ಸಣ್ಣ ಪುಟ್ಟ ಕೆಲಸಗಳವರೆಗೆ ಎಲ್ಲವೂ ಮುಗಿದು ಆ ಪುಸ್ತಕ ಅಚ್ಚಿಗೆ ಹೋಗುವುದಷ್ಟೇ ಬಾಕಿ ಇತ್ತು. ವಿಪರ್ಯಾಸವೆಂದರೆ ಆ ಗೆಳೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹನುಮಂತ ಹಾಲಿಗೇರಿಯವರ ‘ಕೆಂಗುಲಾಬಿ’ ಕಾದಂಬರಿ ಪ್ರಾರಂಭ

ಪಂಜುವಿನ ನಲ್ಮೆಯ ಓದುಗರಿಗಾಗಿ ಲೇಖಕ, ಪತ್ರಕರ್ತ ಹನುಮಂತ ಹಾಲಿಗೇರಿಯವರ ಪ್ರಶಸ್ತಿ ವಿಜೇತ ಕಾದಂಬರಿ "ಕೆಂಗುಲಾಬಿ" ಈ ಸಂಚಿಕೆಯಿಂದ  ಪ್ರಾರಂಭ… ಈ ಗರ್ಭ ಹೊತ್ತಾಗಿನ ತಳಮಳ ಹೇಳತೀರದು: ಕೆಂಗುಲಾಬಿಯ ಆತ್ಮ  ನನ್ನ ಮಸ್ತಕದ ಗರ್ಭದಲ್ಲಿ ಮೊಳಕೆ ಮೂಡಿ ಬೆಳೆಯುತ್ತಿರುವಾಗಲೆಲ್ಲಾ ನಾನು ತಳಮಳಕ್ಕೆ ಈಡಾಗುತ್ತ ಖಿನ್ನನಾಗುತ್ತಿದ್ದೆ. ಇದನ್ನು ಬರೆಯಬೇಕಾ ಬೇಡವಾ  ಎಂದು ತಾಕಲಾಟದಲ್ಲಿಯೆ ಬಹಳಷ್ಟು ದಿನಗಳನ್ನು ದೂಡಿದೆ. ನಾನು ಬರೆಸಿಕೊಂಡೆ ತೀರುತ್ತೇನೆ ಎಂದು ಇದು ಹಟ ಹಿಡಿದಂತೆಲ್ಲಾ ನಾನು ಸೋಲುತ್ತ ಹಿಂದೆ ಸರಿಯುತ್ತಲೆ ಇದ್ದೆ. ನನ್ನೊಡನೆ, ಶಾಲಿಗೆ ಬರುತ್ತಿದ್ದ, ರಜೆಯಲ್ಲಿ ಬಾಗಲಕೋಟೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಸ್ಥಿರ ಅಭಿವೃದ್ಧಿ-ಕೃಷ್ಣಾ ನದಿ: ಅಖಿಲೇಶ್ ಚಿಪ್ಪಳಿ

ಭರತ ಖಂಡ ಎಂದು ಕರೆಸಿಕೊಂಡ ಸಮಗ್ರ ಭಾರತ ಹಲವಾರು ಸಾರಿ ಛಿದ್ರವಾಯಿತು. ಚೀನಾ ಅತಿಕ್ರಮಿಸಿದರೆ, ಪಾಕಿಸ್ತಾನವನ್ನು ನಾವೇ ಕೊಟ್ಟೆವು. ಇಷ್ಟಾಗ್ಯೂ ನೂರಾರು ನದಿಗಳ ಭವ್ಯ ಪರ್ವತಗಳ, ಗಿರಿ ಶಿಖರಗಳ ನಾಡು. ಹೇರಳ ನೈಸರ್ಗಿಕ ಸಂಪತ್ತಿನ ಬೀಡು ಭಾರತ. ಪ್ರಪಂಚದ ಎಲ್ಲಾ ಖಂಡಗಳಲ್ಲೂ ನಾಗರೀಕತೆ ಅರಳಿದ್ದು, ನದಿಗಳ ದಂಡೆಗಳ ಮೇಲೆ. ಪವಿತ್ರ ಗಂಗಾನದಿ ಅದೆಷ್ಟು ಜನರಿಗೆ ಆಧಾರವಾಗಿದೆ. ಅದೆಷ್ಟು ಆಹಾರ ಧಾನ್ಯವನ್ನು ಇದೇ ನದಿಯ ನೀರನ್ನುಪಯೋಗಿಸಿ ಬೆಳೆಯಲಾಗುತ್ತಿದೆ. ಜನಸಂಖ್ಯೆ ಮತ್ತು ಅಭಿವೃದ್ಧಿಯೆಂಬೆರೆಡು ಗಂಗಾನದಿಗೆ ಕಂಟಕವಾಗಿ ಪರಿಣಮಿಸಿದ್ದೊಂತು ದುರಂತವೇ ಸೈ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-9): ಹಿಪ್ಪರಗಿ ಸಿದ್ದರಾಮ್, ಧಾರವಾಡ

ಆತ್ಮೀಯರೇ, ಈ ಹಿಂದಿನ ಸಂಚಿಕೆಯಲ್ಲಿ ನಾವು ಮಹಾಕವಿಗಳ ‘ಚಂದ್ರಹಾಸ’ ರಂಗಕೃತಿಯ ಕುರಿತು ನೋಡಿದ್ದೇವೆ. ಆ ರಂಗಕೃತಿಯು ಲಕ್ಷ್ಮೀಶನಂತಹ ಪ್ರಾಚೀನ ಕನ್ನಡಕವಿಗಳು ಕಾವ್ಯರೂಪದಲ್ಲಿ (ನಾನು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿದ್ದಾಗ (1986-87) ಚಂದ್ರಹಾಸೋಪಾಖ್ಯಾನದಲ್ಲಿಯ ‘ಚಂದ್ರಹಾಸನ ಬಾಲ್ಯ’ ಭಾಗವು ಪದ್ಯ-ಪಠ್ಯವಾಗಿತ್ತು. ವೈಭವದಿಂದ ಮೆರೆದಾಡಬೇಕಿದ್ದ ಚಂದ್ರಹಾಸನ ದುರ್ದೈವದ ಸ್ಥಿತಿಗೆ, ಆತನನ್ನು ಸಲಹುತ್ತಿರುವ ಮುದುಕಿಯಾಗಿರುವ ರಾಜದಾಸಿಯು ವ್ಯಥೆಪಡುವ ಪ್ರಸಂಗವನ್ನು ದುಃಖಿಸುತ್ತಲೇ ಪಾಠ ಮಾಡಿದ ಗುರುಗಳನ್ನು ಮರೆಯಲಾಗುವುದಿಲ್ಲ) ಚಿತ್ರಿಸಿದ ಕಥಾನಕವನ್ನು ಅದ್ಭುತ ದೃಶ್ಯಾವಳಿಗಳ ಸೃಷ್ಟಿಯೊಂದಿಗೆ ಕಟ್ಟಿಕೊಡುವ ಒಂದು ಪ್ರಯತ್ನವಾಗಿ ಮಹಾಕವಿಗಳು ರಂಗಕೃತಿಯಲ್ಲಿ ಆಕಸ್ಮಿಕಗಳ ಸರಮಾಲೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಷ್ಟು ಕಾಲ ಒಟ್ಟಿಗಿದ್ದು, ಎಷ್ಟು ಬೆರೆತರೂ…: ದಿವ್ಯ ಆಂಜನಪ್ಪ

ಹೆಚ್.ಎಸ್. ವೆಂಕಟೇಶ ಮೂರ್ತಿ ರವರ ಕವನ:- ಇಷ್ಟು ಕಾಲ ಒಟ್ಟಿಗಿದ್ದು, ಎಷ್ಟು ಬೆರೆತರೂ, ಅರಿತೆವೇನು ನಾವು ನಮ್ಮ ಅಂತರಾಳವಾ… ಕವಿಯು ತಮ್ಮ ಈ ಕವನದಲ್ಲಿ ಮಾನವ ಸಂಬಂಧಗಳ ನಡುವಿನ ಅಂತರವನ್ನು ವಿಶ್ಲೇಷಿಸಿದ್ದಾರೆ. ನಾವು ನಮ್ಮೊಂದಿಗಿರುವ ಜನರೊಂದಿರೆ ಎಷ್ಟೇ ಕಾಲ ಒಟ್ಟಿಗೆ ಕಳೆದರೂ, ಒಬ್ಬರಿಗೊಬ್ಬರು ಅಂತರಾತ್ಮವನ್ನು ತೆರೆದುಕೊಂಡಿರುವುದಿಲ್ಲ ಎಂದು ಕವಿ ಹೇಳುವಾಗ ಹೋಲಿಕೆಗಳನ್ನು ಹೀಗೆ ನೀಡುತ್ತಾರೆ. ಕಡಲ ಮೇಲೆ ಸಾಗುವ ದೋಣಿ ಎಷ್ಟೇ ದೂರ ಸಾಗಿದರೂ ಕಡಲ ಆಳವನ್ನು ತಿಳಿಯುವ ಗೊಡವೆಗೆ ಹೋಗುವುದಿಲ್ಲ. ಸಾಗರಕ್ಕೂ ದೋಣಿಗೂ ತೀರ ಅಂಟಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದದ್ದ ಬೂಗು ಕಟ್ಟಿದಾಗ !: ಪ್ರಜ್ವಲ್ ಕುಮಾರ್

ಹೊರಗಿನಿಂದ ಬರುತ್ತಿದ್ದ ಗಾಳಿಗೋ, ರೂಮಿನಲ್ಲಿ ತಿರುಗುತ್ತಿದ್ದ ಫ್ಯಾನ್ ಗಾಳಿಗೋ ಗೊತ್ತಿಲ್ಲ; ಗೋಡೆಗೆ ನೇತುಹಾಕಿದ್ದ ಕ್ಯಾಲೆಂಡರ್ ಆಚೀಚೆ ಅಲ್ಲಾಡುತ್ತಾ ಶಬ್ದ ಮಾಡುತ್ತಿತ್ತು. ಸಾಮಾನ್ಯವಾಗಿ ನನಗೆ ಮಲಗಿದ ಹತ್ತು-ಹದಿನೈದು ನಿಮಿಷಕ್ಕೆಲ್ಲಾ ನಿದ್ದೆ ಬರ್ತಿತ್ತು. ಇವತ್ತು ಹನ್ನೆರಡು ಘಂಟೆ ಆದ್ರೂ ನಿದ್ದೆ ಬರದೆ ಆಚೀಚೆ ಹೊರಳಾಡ್ತಾ ಇದ್ದ ನನ್ನನ್ನ ನೋಡಿ ಪಕ್ಕದಲ್ಲಿದ್ದ ರೂಮ್ ಮೇಟ್ ಕೇಳ್ದ. “ಯಾಕೋ? ಇನ್ನೂ ನಿದ್ದೆ ಬಂದಿಲ್ವಾ?” “ಇಲ್ಲಾ ಕಡೋ, ಬೂಗು ಕಟ್ಟಿದೆ” ಅಂದೆ. “ಏನು?! ಏನು ಕಟ್ಟಿದೆ?” ಜೋರಾಗಿ ನಗುತ್ತಾ ಮತ್ತೆ ಕೇಳಿದ. “ಬೂಗು! ಕಡೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ: ಅನುಪಮಾ ಎಸ್. ಗೌಡ ಅವರ ಚುಟುಕಗಳು

1) ರಾಮ-ಶಾಮ ಕೃಷ್ಣನನ್ನೇ ಪೂಜಿಸೋ  ಎನ್ನ ಮಡದಿಗೆ  ನಾನೆಂದೂ "ರಾಮ" ಕೈತಪ್ಪಿ ಹೋದ  ನನ್ನ ನನ್ನೊಲವ ರಾಧೆ  ಹೇಳುತಿದ್ದಳು  ನಿನ್ನೊಳಗಿಹನೊಬ್ಬ  "ತುಂಟ ಶಾಮ" …………………… 2) ಹಾಫ್ ಶರ್ಟ್   ಹಾಫ್ ಶರ್ಟ್ ಮೇಲೆ ರಾರಜಿಸುತಿದ್ದ ಹಾರ್ಟ್ ಕಂಡು ಮೌನವಾಗಿ ಕೇಳಿದಳು  ಅರ್ಧಾಂಗಿ  ಯಾರು ಕೊಟ್ಟ  ಗಿಪ್ಟು ಈ ಅಂಗಿ? ………………… 3) ಬಯಕೆ   ಸಿಕ್ಕರೆ ರಾಮನಂಥ ಗಂಡ ಸಿಗಬೇಕೆಂದು ದೇವರಲ್ಲಿ  ಕೋರುವ ಬಯಕೆ..!   ಮೆಲ್ಲೆಗೆ  ಪಿಸುಗುಟ್ಟಿತು ಮನ ಮಾಡ್ಯನು ಶಂಕೆ ಕಾಡಿಗೆ ಅಟ್ಯಾನು  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಡ್ಡ: ಪ್ರಶಸ್ತಿ ಅಂಕಣ

ಹಾಡ್ತಾ ಹಾಡ್ತಾ ರಾಗ, ನರಳತಾ ನರಳಾತಾ ರೋಗ ಅಂದಗೇನೇ ನೆನಿತಾ ನೆನಿತಾ ನೆನಪು ಅಂತನೂ ಹೇಳ್ಬೋದೇನೋ. ಸುಮ್ನೆ ಎಲ್ಲೋ ಹೊಳೆದ ಎಳೆಯೊಂದು ಕತೆಯಾಗಿಯೋ, ಕವಿತೆಯಾಗಿಯೋ ರೂಪುಗೊಳ್ಳಬಹುದು. ಕೆಲವೊಂದು ಎಳೆಗಳು ನೆನಪಿನಾಳಕ್ಕಿಳಿದು ನೋವ ಅಲೆಗಳನ್ನ ಕೆದಕಬಹುದು. ತನ್ನನ್ನೇ ಹಾಸ್ಯವಾಗಿಸಿ ನಗುವ ಕಡಲಲ್ಲಿ ತೇಲಿಸಲೂಬಹುದು. ಆ ಕ್ಷಣಕ್ಕೆ ಅದೇ ದೊಡ್ಡ ಹಾಸ್ಯ. ಮಿಸ್ಸಾದರೆ ಏನೂ ಇಲ್ಲ.  ತೆರೆಗಳು ಸರಿದಾಗ ಮರಳ ತಡಿಯಲ್ಲಿ ಮೂಡೋ ಚಿತ್ರಗಳಂತೆ.. ಮತ್ತೊಂದು ಅಲೆ ಬಂದು ಅದನ್ನು ತೊಳೆದು ಹಾಕೋ ತನಕ.. ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫ್ಲಾಪೀ ಬಾಯ್ ಕಂಡ ಕೆಂಪುತೋಟ: ಸಚಿನ್ ಎಂ. ಆರ್.

ಈ ಫ್ಲಾಪೀ ಬಾಯ್‍ಗೆ ಕೆಲಸ ಇಲ್ಲ. ಇದ್ದರೂ ಅವ ಮಾಡೊಲ್ಲ. ಅಂತಹ ಈ ನಿಮ್ಮ ಹುಡುಗ ಹೀಗೆ ಒಂದು ದಿನ ಎಲ್ಲಾ ಬಿಟ್ಟು ಅವನ ಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮ ಬೆಂಗಳೂರಿನ ಲಾಲ್‍ಬಾಗ್ ಗೆ ಹೊಂಟ. ಅಲ್ಲಿ ಅವನು ಏನೇನು ನೋಡಿದ, ಏನೇನು ಮಾಡಿದ ಅನ್ನುವ ಕುತೂಹಲವಿದ್ದರೆ ಮುಂದೆ ಒದಿ. ಬೆಳಿಗ್ಗೆ ಹತ್ತು ಮೂವತ್ತರ ಸಮಯ. ಒಳಗೆ ಹೋಗುವಾಗ ಒಬ್ಬನೇ ಏಕಾಂಗಿ ಫ್ಲಾಪೀಬಾಯ್, ಆದರೆ ಹೊರಬರುವಾಗ ಅವನ ತಲೆಯಲ್ಲಿತ್ತು ಏನೇನೋ ಆಲೋಚನೆಗಳು, ವಿಚಾರಗಳು ಅವೆಲ್ಲ ಏನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಸೆಗಳು ನನ್ನವು ಸಾವಿರಾರು: ವಾಸುಕಿ ರಾಘವನ್

ಜವಹರಲಾಲ್ ನೆಹರು ಅವರ “ಟ್ರಿಸ್ಟ್ ವಿತ್ ಡೆಸ್ಟಿನಿ” ನಮ್ಮ ದೇಶದ ಅತ್ಯಂತ ಪ್ರಸಿದ್ಧ ಭಾಷಣ ಅನ್ಸುತ್ತೆ. ಸುಧೀರ್ ಮಿಶ್ರಾ ಅವರ “ಹಜಾರೋ ಖ್ವಾಹಿಷೇ ಏಸೀ” ಚಿತ್ರ ಶುರುವಾಗುವುದೇ ಈ ಭಾಷಣದ ಧ್ವನಿ ಮುದ್ರಿಕೆಯೊಂದಿಗೆ. “ವಿಧಿಯೊಂದಿಗೆ ನಮ್ಮ ಒಪ್ಪಂದ ಯಾವಾಗಲೋ ಆಗಿದೆ, ಅದರೆಡೆಗೆ ಮುನ್ನುಗ್ಗುವ ಪಣವನ್ನು ಇಂದು ತೊಡೋಣ. ಮಧ್ಯರಾತ್ರಿಯ ಈ ಹೊತ್ತಿನಲ್ಲಿ, ಇಡೀ ಪ್ರಪಂಚವೇ ಮಲಗಿರುವಾಗ, ಭಾರತ ಸ್ವಾತ್ರಂತ್ರ್ಯದೆಡೆಗೆ, ಬೆಳಕಿನೆಡೆಗೆ ಸಾಗುತ್ತದೆ”. ದಾಸ್ಯದಲ್ಲಿ ಸಿಕ್ಕಿ ನರಳುತ್ತಿದ್ದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನ ಇಂಥ ಒಂದು ಭಾಷಣ ಕೇಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ