ಒಂದು ತಂತಿ ಪರ್ಸಂಗ …. ! : ಶ್ರೀಕಾಂತ್ ಮಂಜುನಾಥ್

ಐದು ಮಂದಿ ಹಳ್ಳಿಕಟ್ಟೆಯಲ್ಲಿ ಬೀಡಿ ಸೇದುತ್ತಾ ಲೋಕಾಭಿರಾಮವಾಗಿ ಮಾತಾಡುತ್ತ ಕುಳಿತಿದ್ದರು…    "ನೀನು ಏನೇ ಹೇಳು.. ಈ ಪರ್ಪಂಚದಲ್ಲಿ ಏಟೊಂದು ಬದಲಾವಣೆ ಆಗಿ ಬಿಡ್ತು!"   "ಹೌದು ಕಣಣ್ಣ..  ಮೊದ್ಲು ಮೊದ್ಲು ಒಬ್ಬರನ್ನ ಒಬ್ಬರು ಭೇಟಿ ಮಾಡೋಕೆ ಆನಾಡಿ ಕಷ್ಟ ಪಡ್ತಾ ಇದ್ವಿ.. ಈಗ ಎಲ್ಲಾ ಚಿಟಿಕೆ ಚಿಟಿಕೆ ಹೊಡೆಯೋದರಲ್ಲಿ ಮುಗಿಯುತ್ತೆ"   "ಗುರುವೇ ನಿನಗೆ ಗೊತ್ತಾ… ಈ ಟೆಲಿಗ್ರಾಂ ಅಂದ್ರೆ ತಂತಿ ಸೇವೆ ಐತಲ್ಲ ಅದನ್ನ ನಿಲ್ಲಿಸಿ ಬಿಡ್ತಾರಂತೆ.. ಈ ತಂತಿ ಸೇವೆ ಬಗ್ಗೆ ನಿನ್ನ ಅನುಭವ ಹೇಳ್ರಣ್ಣಾ!"   "ಓಹ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮ ವೈಫಲ್ಯ: ವಾಸುಕಿ ರಾಘವನ್

ಎರಡು ಕನಸು, ಬಂಧನ, ಪಲ್ಲವಿ ಅನುಪಲ್ಲವಿ, ಅಮೆರಿಕಾ ಅಮೆರಿಕಾ, ನಮ್ಮೂರ ಮಂದಾರ ಹೂವೇ, ಅಮೃತವರ್ಷಿಣಿ, ಮಾನಸ ಸರೋವರ…ಹಾಗೂ “ಏ” ಚಿತ್ರಗಳಲ್ಲಿ ಮುಖ್ಯವಾಗಿ ಏನು ಕಾಮನ್ ಆಗಿದೆ? ಹೌದು, “ಪ್ರೇಮ ವೈಫಲ್ಯ”, ಅದರಲ್ಲೂ ಹೀರೋ ವೈಫಲ್ಯವನ್ನು ಅನುಭವಿಸೋದು! ಆದರೆ “ಏ” ಚಿತ್ರಕ್ಕೂ ಬೇರೆ ಚಿತ್ರಗಳಿಗೂ ಒಂದು ಪ್ರಮುಖ ವ್ಯತ್ಯಾಸ ಏನು ಗೊತ್ತಾ? ಈ ಸನ್ನಿವೇಶವನ್ನು ಹೀರೋ ಹ್ಯಾಂಡಲ್ ಮಾಡಿದ ರೀತಿ. “ಎರಡು ಕನಸು” ಚಿತ್ರದಲ್ಲಿ ತನ್ನ ಹಳೆಯ ಪ್ರೇಯಸಿಯನ್ನು ಮರೆಯಲಾಗದ ನಾಯಕ, ಹೆಂಡತಿಯನ್ನು ಕಡೆಗಣಿಸುತ್ತಾನೆ. “ಬಂಧನ” ಚಿತ್ರದಲ್ಲಿ ತಾನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೀಪ: ದಿವ್ಯ ಆಂಜನಪ್ಪ

ಅಂಧಕಾರವನ್ನು ತೊಲಗಿಸಿ, ಬೆಳಕನ್ನು ನೀಡಿ ದಾರಿ ತೋರುವ 'ದೀಪ'ವು ಜ್ಞಾನದ ಸಂಕೇತವಾಗಿದೆ. ಸಾಂಪ್ರದಾಯಕ ದೃಷ್ಟಿಯಿಂದಲೂ ದೀಪವು ಶ್ರೇಷ್ಟ ಸ್ಥಾನವನ್ನು ಪಡೆದಿದೆ. ಪೂಜೆ ಆಚರಣೆಗಳಲ್ಲಿ, ಆರತಿ ಬೆಳಗುವಲ್ಲಿ, ಯಾವುದೇ ಒಂದು ಕಾರ್ಯಕ್ರಮದ ಉದ್ಘಾಟನೆಯಲ್ಲಿ, ದೀಪ ಬೆಳಗಿಸುವ ಕಾರ್ಯವೇ ಮೊದಲಾಗಿದೆ. ಹೀಗೆ ನಮ್ಮ ಮನಸ್ಸು, ನಮ್ಮ ಸಂಸ್ಕೃತಿ ಮತ್ತು ನಮ್ಮ ಬುದ್ಧಿಯೂ ದೀಪವನ್ನು ಶ್ರೇಷ್ಠ ಸ್ಥಾನದಲ್ಲಿಟ್ಟು ನೋಡುತ್ತದೆ. ಭಾವನಾತ್ಮಕವಾಗಿಯೂ ಮತ್ತು ಸಾಹಿತ್ಯಾತ್ಮಕವಾಗಿಯೂ ದೀಪವು ನಮ್ಮ ಮನಗಳನ್ನು ಬೆಳಗಿಸಿವೆ ಎಂದೇ ಹೇಳಬಹುದು. ದೀಪವು ಬೆಳಕಿನ, ಜ್ಞಾನದ, ಕ್ರಾಂತಿಯ ದ್ಯೋತಕವಾಗಿ ಅನೇಕ ಕವಿತೆಗಳಾಗಿವೆ. ಕವಿಗಳಿಗೆ ಸ್ಪೂರ್ತಿಯಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಯುವವ-ಕೊಲ್ಲುವವ: ಅಖಿಲೇಶ್ ಚಿಪ್ಪಳಿ

ಕೊಲ್ಲುವುದು ಸುಲಭ. ಕಾಯುವುದು ಕಷ್ಟ. ಒಂದು ಗಿಡವನ್ನು ನೆಟ್ಟು, ಪೋಷಿಸಿ, ರಕ್ಷಿಸಿ ಮರವಾಗುವತನಕ ನೋಡಿಕೊಳ್ಳುವುದು ತಪಸ್ಸಿನಂತೆ. ಕೊಲ್ಲುವುದಕ್ಕೆ ಒಂದು ಕತ್ತಿಯೇಟು ಸಾಕು. ಹಾಗೆ ಕೆಲಬಾರಿ ಪ್ರಕೃತಿಯಲ್ಲಿ ರಕ್ಷಿಸುವ ಪ್ರಯತ್ನವೂ ವಿಫಲಗೊಳ್ಳುವುದಕ್ಕೆ ಪ್ರತ್ಯಕ್ಷವಾಗಿ ನಾವೇ ಕಾರಣವಾಗುವುದು ಇದೆ. ಕಾಯುವ ಪ್ರಯತ್ನದಲ್ಲಿ ಸಫಲಗೊಂಡು ಸಂತೋಷದಿಂದ ಬೀಗಿದ ಘಟನೆಯ ಜೊತೆಗೆ ವಿಫಲಗೊಂಡು ದು:ಖ ಅನುಭವಿಸಿದ ಕತೆಯೂ ಇಲ್ಲಿದೆ. ನಾನು ಕೆಲಸ ಮಾಡುವ ಜಾಗದಲ್ಲಿ ಜನರ ತಿರುಗಾಟ ಹೆಚ್ಚು. ಜೋಡಿ ಪಿಕಳಾರಗಳಿಗೆ ಗೂಡು ಕಟ್ಟಲು ಜಾಗವೊಂದು ಬೇಕು, ಕಾಂಕ್ರೀಟ್ ಕಾಡಿನಲ್ಲಿ ಅವಕ್ಕೆ ಪ್ರಶಸ್ತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆರ್ಕೆಸ್ಟ್ರಾಗಳೂ ಎಕ್ಸಾಮುಗಳೂ: ಪ್ರಶಸ್ತಿ ಅಂಕಣ

ಮೊನ್ನೆ ಬೆಳಗ್ಗೆ ಟೀವಿ ಹಾಕ್ತಿದ್ದ ಹಾಗೇ ಯಾವ್ದೋ ಕಾರ್ಯಕ್ರಮ. ನಿಮ್ಮ ಆರ್ಮ್ ನ ರೈಟ್ಗೆ ೪೫ ಡಿಗ್ರಿ ರೊಟೇಟ್ ಮಾಡಿ. ಆಮೇಲೆ ಲೆಗ್ಸ ನ ಹಾಗೇ ಪುಷ್ ಮಾಡಿ. ಹಾಗೇ ೨೦ ರೌಂಡ್ಸ್ ರಿಪೀಟ್ ಮಾಡಿ… ಯಪ್ಪಾ, ಇದ್ಯಾವ ಭಾಷೆಯೋ ಶಿವನೇ. ಬೆಂಗ್ಳೂರ ಕನ್ನಡ ಇಷ್ಟು ಕರಾಬ್ ಆಯ್ತಾ ಅಂತ ಬೇಜಾರಾಗಿ ಟೀವೀನೆ ಆಫ್ ಮಾಡ್ತೆ. ಸಂಜೆ ಮನೆಗೆ ವಾಫಾಸ್ ಬಂದ್ರೂ ಮತ್ತೆ ಟೀವಿ ಹಾಕೋ ಮಸಸ್ಸಾಗಿರ್ಲಿಲ್ಲ. ಮುಖಹೊತ್ತಿಗೆ(FB 🙂 ) ತೆಗಿತಾ ಇದ್ದೆ. ಅದೇ ಸಮಯಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಜ್ವಲ್ ಫೋಟೋಗ್ರಾಫಿ: ಪ್ರಜ್ವಲ್ ಕುಮಾರ್

ಯಶಸ್ವಿಯಾಗಿ ಬಾವುಟ ಹಾರಿಸಿದೆ  ಇಂಡಿಯನ್ ಬುಲ್ ಫ್ರಾಗ್ ಹೆಲಿಕ್ಯಾಪ್ಟರ್ ಚಿಟ್ಟೆಯ ಗಟ್ಟಿ ಹಿಡಿತ ಹಸಿರು ಹುಳ ಕರೆಂಟ್ ಇಲ್ಲದಿದ್ದಾಗ ಉಪಯೋಗಿಸುತ್ತಿದ್ದ ನಮ್ಮನೆ ದೀಪ ಮಲೆನಾಡ ನೆಲ ಓಟ ನಟ್ಟು ಬೋಲ್ಟು :)) ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುವ ಪ್ರಕಾಶಕನೊಬ್ಬನ ಅಂತರಾಳದ ಮಾತುಗಳು: ನಟರಾಜು ಎಸ್. ಎಂ.

ಒಮ್ಮೆ ಪುಸ್ತಕವೊಂದನ್ನು ಪ್ರಕಟಿಸುವ ಕನಸು ಕಂಡಿದ್ದೆ. ಗೆಳೆಯನೊಬ್ಬ ತಾನೆ ಆ ಪುಸ್ತಕವನ್ನು ತನ್ನ ಪ್ರಕಾಶನದ ಮೂಲಕ ಪ್ರಕಟಿಸುವೆನೆಂದು ಮಾತು ನೀಡಿದ್ದ. ಟೈಪಿಂಗ್ ನಿಂದ ಹಿಡಿದು ಕರಡು ಪ್ರತಿ ತಿದ್ದುವ ಕೆಲಸವನ್ನು ಸಹ ಶ್ರದ್ಧೆಯಿಂದ ಮಾಡಿ ಮುಗಿಸಿ, ಪುಸ್ತಕ ಪ್ರಕಟವಾಗುತ್ತದೆ ಎಂದು ಆಸೆಯಿಂದ ಬರೋಬ್ಬರಿ ಹತ್ತು ತಿಂಗಳು ಜಾತಕ ಪಕ್ಷಿಯಂತೆ ಕಾದಿದ್ದೆ. ಕವರ್ ಪೇಜ್ ಡಿಸೈನ್ ನಿಂದ ಹಿಡಿದು ಸಣ್ಣ ಪುಟ್ಟ ಕೆಲಸಗಳವರೆಗೆ ಎಲ್ಲವೂ ಮುಗಿದು ಆ ಪುಸ್ತಕ ಅಚ್ಚಿಗೆ ಹೋಗುವುದಷ್ಟೇ ಬಾಕಿ ಇತ್ತು. ವಿಪರ್ಯಾಸವೆಂದರೆ ಆ ಗೆಳೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹನುಮಂತ ಹಾಲಿಗೇರಿಯವರ ‘ಕೆಂಗುಲಾಬಿ’ ಕಾದಂಬರಿ ಪ್ರಾರಂಭ

ಪಂಜುವಿನ ನಲ್ಮೆಯ ಓದುಗರಿಗಾಗಿ ಲೇಖಕ, ಪತ್ರಕರ್ತ ಹನುಮಂತ ಹಾಲಿಗೇರಿಯವರ ಪ್ರಶಸ್ತಿ ವಿಜೇತ ಕಾದಂಬರಿ "ಕೆಂಗುಲಾಬಿ" ಈ ಸಂಚಿಕೆಯಿಂದ  ಪ್ರಾರಂಭ… ಈ ಗರ್ಭ ಹೊತ್ತಾಗಿನ ತಳಮಳ ಹೇಳತೀರದು: ಕೆಂಗುಲಾಬಿಯ ಆತ್ಮ  ನನ್ನ ಮಸ್ತಕದ ಗರ್ಭದಲ್ಲಿ ಮೊಳಕೆ ಮೂಡಿ ಬೆಳೆಯುತ್ತಿರುವಾಗಲೆಲ್ಲಾ ನಾನು ತಳಮಳಕ್ಕೆ ಈಡಾಗುತ್ತ ಖಿನ್ನನಾಗುತ್ತಿದ್ದೆ. ಇದನ್ನು ಬರೆಯಬೇಕಾ ಬೇಡವಾ  ಎಂದು ತಾಕಲಾಟದಲ್ಲಿಯೆ ಬಹಳಷ್ಟು ದಿನಗಳನ್ನು ದೂಡಿದೆ. ನಾನು ಬರೆಸಿಕೊಂಡೆ ತೀರುತ್ತೇನೆ ಎಂದು ಇದು ಹಟ ಹಿಡಿದಂತೆಲ್ಲಾ ನಾನು ಸೋಲುತ್ತ ಹಿಂದೆ ಸರಿಯುತ್ತಲೆ ಇದ್ದೆ. ನನ್ನೊಡನೆ, ಶಾಲಿಗೆ ಬರುತ್ತಿದ್ದ, ರಜೆಯಲ್ಲಿ ಬಾಗಲಕೋಟೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಸ್ಥಿರ ಅಭಿವೃದ್ಧಿ-ಕೃಷ್ಣಾ ನದಿ: ಅಖಿಲೇಶ್ ಚಿಪ್ಪಳಿ

ಭರತ ಖಂಡ ಎಂದು ಕರೆಸಿಕೊಂಡ ಸಮಗ್ರ ಭಾರತ ಹಲವಾರು ಸಾರಿ ಛಿದ್ರವಾಯಿತು. ಚೀನಾ ಅತಿಕ್ರಮಿಸಿದರೆ, ಪಾಕಿಸ್ತಾನವನ್ನು ನಾವೇ ಕೊಟ್ಟೆವು. ಇಷ್ಟಾಗ್ಯೂ ನೂರಾರು ನದಿಗಳ ಭವ್ಯ ಪರ್ವತಗಳ, ಗಿರಿ ಶಿಖರಗಳ ನಾಡು. ಹೇರಳ ನೈಸರ್ಗಿಕ ಸಂಪತ್ತಿನ ಬೀಡು ಭಾರತ. ಪ್ರಪಂಚದ ಎಲ್ಲಾ ಖಂಡಗಳಲ್ಲೂ ನಾಗರೀಕತೆ ಅರಳಿದ್ದು, ನದಿಗಳ ದಂಡೆಗಳ ಮೇಲೆ. ಪವಿತ್ರ ಗಂಗಾನದಿ ಅದೆಷ್ಟು ಜನರಿಗೆ ಆಧಾರವಾಗಿದೆ. ಅದೆಷ್ಟು ಆಹಾರ ಧಾನ್ಯವನ್ನು ಇದೇ ನದಿಯ ನೀರನ್ನುಪಯೋಗಿಸಿ ಬೆಳೆಯಲಾಗುತ್ತಿದೆ. ಜನಸಂಖ್ಯೆ ಮತ್ತು ಅಭಿವೃದ್ಧಿಯೆಂಬೆರೆಡು ಗಂಗಾನದಿಗೆ ಕಂಟಕವಾಗಿ ಪರಿಣಮಿಸಿದ್ದೊಂತು ದುರಂತವೇ ಸೈ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-9): ಹಿಪ್ಪರಗಿ ಸಿದ್ದರಾಮ್, ಧಾರವಾಡ

ಆತ್ಮೀಯರೇ, ಈ ಹಿಂದಿನ ಸಂಚಿಕೆಯಲ್ಲಿ ನಾವು ಮಹಾಕವಿಗಳ ‘ಚಂದ್ರಹಾಸ’ ರಂಗಕೃತಿಯ ಕುರಿತು ನೋಡಿದ್ದೇವೆ. ಆ ರಂಗಕೃತಿಯು ಲಕ್ಷ್ಮೀಶನಂತಹ ಪ್ರಾಚೀನ ಕನ್ನಡಕವಿಗಳು ಕಾವ್ಯರೂಪದಲ್ಲಿ (ನಾನು ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿದ್ದಾಗ (1986-87) ಚಂದ್ರಹಾಸೋಪಾಖ್ಯಾನದಲ್ಲಿಯ ‘ಚಂದ್ರಹಾಸನ ಬಾಲ್ಯ’ ಭಾಗವು ಪದ್ಯ-ಪಠ್ಯವಾಗಿತ್ತು. ವೈಭವದಿಂದ ಮೆರೆದಾಡಬೇಕಿದ್ದ ಚಂದ್ರಹಾಸನ ದುರ್ದೈವದ ಸ್ಥಿತಿಗೆ, ಆತನನ್ನು ಸಲಹುತ್ತಿರುವ ಮುದುಕಿಯಾಗಿರುವ ರಾಜದಾಸಿಯು ವ್ಯಥೆಪಡುವ ಪ್ರಸಂಗವನ್ನು ದುಃಖಿಸುತ್ತಲೇ ಪಾಠ ಮಾಡಿದ ಗುರುಗಳನ್ನು ಮರೆಯಲಾಗುವುದಿಲ್ಲ) ಚಿತ್ರಿಸಿದ ಕಥಾನಕವನ್ನು ಅದ್ಭುತ ದೃಶ್ಯಾವಳಿಗಳ ಸೃಷ್ಟಿಯೊಂದಿಗೆ ಕಟ್ಟಿಕೊಡುವ ಒಂದು ಪ್ರಯತ್ನವಾಗಿ ಮಹಾಕವಿಗಳು ರಂಗಕೃತಿಯಲ್ಲಿ ಆಕಸ್ಮಿಕಗಳ ಸರಮಾಲೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಷ್ಟು ಕಾಲ ಒಟ್ಟಿಗಿದ್ದು, ಎಷ್ಟು ಬೆರೆತರೂ…: ದಿವ್ಯ ಆಂಜನಪ್ಪ

ಹೆಚ್.ಎಸ್. ವೆಂಕಟೇಶ ಮೂರ್ತಿ ರವರ ಕವನ:- ಇಷ್ಟು ಕಾಲ ಒಟ್ಟಿಗಿದ್ದು, ಎಷ್ಟು ಬೆರೆತರೂ, ಅರಿತೆವೇನು ನಾವು ನಮ್ಮ ಅಂತರಾಳವಾ… ಕವಿಯು ತಮ್ಮ ಈ ಕವನದಲ್ಲಿ ಮಾನವ ಸಂಬಂಧಗಳ ನಡುವಿನ ಅಂತರವನ್ನು ವಿಶ್ಲೇಷಿಸಿದ್ದಾರೆ. ನಾವು ನಮ್ಮೊಂದಿಗಿರುವ ಜನರೊಂದಿರೆ ಎಷ್ಟೇ ಕಾಲ ಒಟ್ಟಿಗೆ ಕಳೆದರೂ, ಒಬ್ಬರಿಗೊಬ್ಬರು ಅಂತರಾತ್ಮವನ್ನು ತೆರೆದುಕೊಂಡಿರುವುದಿಲ್ಲ ಎಂದು ಕವಿ ಹೇಳುವಾಗ ಹೋಲಿಕೆಗಳನ್ನು ಹೀಗೆ ನೀಡುತ್ತಾರೆ. ಕಡಲ ಮೇಲೆ ಸಾಗುವ ದೋಣಿ ಎಷ್ಟೇ ದೂರ ಸಾಗಿದರೂ ಕಡಲ ಆಳವನ್ನು ತಿಳಿಯುವ ಗೊಡವೆಗೆ ಹೋಗುವುದಿಲ್ಲ. ಸಾಗರಕ್ಕೂ ದೋಣಿಗೂ ತೀರ ಅಂಟಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದದ್ದ ಬೂಗು ಕಟ್ಟಿದಾಗ !: ಪ್ರಜ್ವಲ್ ಕುಮಾರ್

ಹೊರಗಿನಿಂದ ಬರುತ್ತಿದ್ದ ಗಾಳಿಗೋ, ರೂಮಿನಲ್ಲಿ ತಿರುಗುತ್ತಿದ್ದ ಫ್ಯಾನ್ ಗಾಳಿಗೋ ಗೊತ್ತಿಲ್ಲ; ಗೋಡೆಗೆ ನೇತುಹಾಕಿದ್ದ ಕ್ಯಾಲೆಂಡರ್ ಆಚೀಚೆ ಅಲ್ಲಾಡುತ್ತಾ ಶಬ್ದ ಮಾಡುತ್ತಿತ್ತು. ಸಾಮಾನ್ಯವಾಗಿ ನನಗೆ ಮಲಗಿದ ಹತ್ತು-ಹದಿನೈದು ನಿಮಿಷಕ್ಕೆಲ್ಲಾ ನಿದ್ದೆ ಬರ್ತಿತ್ತು. ಇವತ್ತು ಹನ್ನೆರಡು ಘಂಟೆ ಆದ್ರೂ ನಿದ್ದೆ ಬರದೆ ಆಚೀಚೆ ಹೊರಳಾಡ್ತಾ ಇದ್ದ ನನ್ನನ್ನ ನೋಡಿ ಪಕ್ಕದಲ್ಲಿದ್ದ ರೂಮ್ ಮೇಟ್ ಕೇಳ್ದ. “ಯಾಕೋ? ಇನ್ನೂ ನಿದ್ದೆ ಬಂದಿಲ್ವಾ?” “ಇಲ್ಲಾ ಕಡೋ, ಬೂಗು ಕಟ್ಟಿದೆ” ಅಂದೆ. “ಏನು?! ಏನು ಕಟ್ಟಿದೆ?” ಜೋರಾಗಿ ನಗುತ್ತಾ ಮತ್ತೆ ಕೇಳಿದ. “ಬೂಗು! ಕಡೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ: ಅನುಪಮಾ ಎಸ್. ಗೌಡ ಅವರ ಚುಟುಕಗಳು

1) ರಾಮ-ಶಾಮ ಕೃಷ್ಣನನ್ನೇ ಪೂಜಿಸೋ  ಎನ್ನ ಮಡದಿಗೆ  ನಾನೆಂದೂ "ರಾಮ" ಕೈತಪ್ಪಿ ಹೋದ  ನನ್ನ ನನ್ನೊಲವ ರಾಧೆ  ಹೇಳುತಿದ್ದಳು  ನಿನ್ನೊಳಗಿಹನೊಬ್ಬ  "ತುಂಟ ಶಾಮ" …………………… 2) ಹಾಫ್ ಶರ್ಟ್   ಹಾಫ್ ಶರ್ಟ್ ಮೇಲೆ ರಾರಜಿಸುತಿದ್ದ ಹಾರ್ಟ್ ಕಂಡು ಮೌನವಾಗಿ ಕೇಳಿದಳು  ಅರ್ಧಾಂಗಿ  ಯಾರು ಕೊಟ್ಟ  ಗಿಪ್ಟು ಈ ಅಂಗಿ? ………………… 3) ಬಯಕೆ   ಸಿಕ್ಕರೆ ರಾಮನಂಥ ಗಂಡ ಸಿಗಬೇಕೆಂದು ದೇವರಲ್ಲಿ  ಕೋರುವ ಬಯಕೆ..!   ಮೆಲ್ಲೆಗೆ  ಪಿಸುಗುಟ್ಟಿತು ಮನ ಮಾಡ್ಯನು ಶಂಕೆ ಕಾಡಿಗೆ ಅಟ್ಯಾನು  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಡ್ಡ: ಪ್ರಶಸ್ತಿ ಅಂಕಣ

ಹಾಡ್ತಾ ಹಾಡ್ತಾ ರಾಗ, ನರಳತಾ ನರಳಾತಾ ರೋಗ ಅಂದಗೇನೇ ನೆನಿತಾ ನೆನಿತಾ ನೆನಪು ಅಂತನೂ ಹೇಳ್ಬೋದೇನೋ. ಸುಮ್ನೆ ಎಲ್ಲೋ ಹೊಳೆದ ಎಳೆಯೊಂದು ಕತೆಯಾಗಿಯೋ, ಕವಿತೆಯಾಗಿಯೋ ರೂಪುಗೊಳ್ಳಬಹುದು. ಕೆಲವೊಂದು ಎಳೆಗಳು ನೆನಪಿನಾಳಕ್ಕಿಳಿದು ನೋವ ಅಲೆಗಳನ್ನ ಕೆದಕಬಹುದು. ತನ್ನನ್ನೇ ಹಾಸ್ಯವಾಗಿಸಿ ನಗುವ ಕಡಲಲ್ಲಿ ತೇಲಿಸಲೂಬಹುದು. ಆ ಕ್ಷಣಕ್ಕೆ ಅದೇ ದೊಡ್ಡ ಹಾಸ್ಯ. ಮಿಸ್ಸಾದರೆ ಏನೂ ಇಲ್ಲ.  ತೆರೆಗಳು ಸರಿದಾಗ ಮರಳ ತಡಿಯಲ್ಲಿ ಮೂಡೋ ಚಿತ್ರಗಳಂತೆ.. ಮತ್ತೊಂದು ಅಲೆ ಬಂದು ಅದನ್ನು ತೊಳೆದು ಹಾಕೋ ತನಕ.. ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫ್ಲಾಪೀ ಬಾಯ್ ಕಂಡ ಕೆಂಪುತೋಟ: ಸಚಿನ್ ಎಂ. ಆರ್.

ಈ ಫ್ಲಾಪೀ ಬಾಯ್‍ಗೆ ಕೆಲಸ ಇಲ್ಲ. ಇದ್ದರೂ ಅವ ಮಾಡೊಲ್ಲ. ಅಂತಹ ಈ ನಿಮ್ಮ ಹುಡುಗ ಹೀಗೆ ಒಂದು ದಿನ ಎಲ್ಲಾ ಬಿಟ್ಟು ಅವನ ಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ನಮ್ಮ ಬೆಂಗಳೂರಿನ ಲಾಲ್‍ಬಾಗ್ ಗೆ ಹೊಂಟ. ಅಲ್ಲಿ ಅವನು ಏನೇನು ನೋಡಿದ, ಏನೇನು ಮಾಡಿದ ಅನ್ನುವ ಕುತೂಹಲವಿದ್ದರೆ ಮುಂದೆ ಒದಿ. ಬೆಳಿಗ್ಗೆ ಹತ್ತು ಮೂವತ್ತರ ಸಮಯ. ಒಳಗೆ ಹೋಗುವಾಗ ಒಬ್ಬನೇ ಏಕಾಂಗಿ ಫ್ಲಾಪೀಬಾಯ್, ಆದರೆ ಹೊರಬರುವಾಗ ಅವನ ತಲೆಯಲ್ಲಿತ್ತು ಏನೇನೋ ಆಲೋಚನೆಗಳು, ವಿಚಾರಗಳು ಅವೆಲ್ಲ ಏನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಸೆಗಳು ನನ್ನವು ಸಾವಿರಾರು: ವಾಸುಕಿ ರಾಘವನ್

ಜವಹರಲಾಲ್ ನೆಹರು ಅವರ “ಟ್ರಿಸ್ಟ್ ವಿತ್ ಡೆಸ್ಟಿನಿ” ನಮ್ಮ ದೇಶದ ಅತ್ಯಂತ ಪ್ರಸಿದ್ಧ ಭಾಷಣ ಅನ್ಸುತ್ತೆ. ಸುಧೀರ್ ಮಿಶ್ರಾ ಅವರ “ಹಜಾರೋ ಖ್ವಾಹಿಷೇ ಏಸೀ” ಚಿತ್ರ ಶುರುವಾಗುವುದೇ ಈ ಭಾಷಣದ ಧ್ವನಿ ಮುದ್ರಿಕೆಯೊಂದಿಗೆ. “ವಿಧಿಯೊಂದಿಗೆ ನಮ್ಮ ಒಪ್ಪಂದ ಯಾವಾಗಲೋ ಆಗಿದೆ, ಅದರೆಡೆಗೆ ಮುನ್ನುಗ್ಗುವ ಪಣವನ್ನು ಇಂದು ತೊಡೋಣ. ಮಧ್ಯರಾತ್ರಿಯ ಈ ಹೊತ್ತಿನಲ್ಲಿ, ಇಡೀ ಪ್ರಪಂಚವೇ ಮಲಗಿರುವಾಗ, ಭಾರತ ಸ್ವಾತ್ರಂತ್ರ್ಯದೆಡೆಗೆ, ಬೆಳಕಿನೆಡೆಗೆ ಸಾಗುತ್ತದೆ”. ದಾಸ್ಯದಲ್ಲಿ ಸಿಕ್ಕಿ ನರಳುತ್ತಿದ್ದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನ ಇಂಥ ಒಂದು ಭಾಷಣ ಕೇಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಬ್ಬರ ಕವನಗಳು: ಸಚಿನ್ ನಾಯ್ಕ್, ಪರಶಿವ ಧನಗೂರು

ಹೀಗೊಂದು ಸಂಜೆ…! ಇಳಿಸಂಜೆಯ ಹೊತ್ತಲ್ಲಿ ತಂಗಾಳಿಯ ಹಂಬಲಕೆ ಮೆಲ್ಲನೆ ತೆರೆದುಕೊಳ್ಳುತ್ತೇನೆ ಕಡುಕಪ್ಪು ಹಾಸಿನ ರಸ್ತೆಯಲ್ಲಿ ಲಯಬದ್ದ ಹೆಜ್ಜೆಗಳೊಂದಿಗೆ… ತಲೆಯ ಮೇಲೆ ಸಾಗುತಿಹ ಅರ್ಧ ಚಂದ್ರನ ಮೊಗದಲ್ಲೂ ನನ್ನದೇ ಒಂಟಿಬಿಂಬ ಕಂಡಾಗ ನಗಬೇಕೆನಿಸಿದರೂ ನಗುಬಾರದವನಂತೆ ಮುಂದೆ ಸಾಗುತ್ತೇನೆ… ಬೆಳದಿಂಗಳಿಗೂ ಪೈಪೋಟಿ ಎಂಬಂತೆ ಬೆಳಗುತಿಹ ಹಳದಿ ಬೀದಿ ದೀಪಗಳು; ತರಗೆಲೆಯು ಸದ್ದು ಮಾಡುವ ಗಾಡ ಮೌನದ ಜೊತೆಗೆ ಹೊಸ ಸಂಭಂದ ಬೆಳೆಸಿ ಹುನ್ನಾರ ನಡೆಸಿದಂತಿದೆ…! ಯಾಕೊ ಕಳೆದು ಹೋದದ್ದೆಲ್ಲಾ ನೆನಪಾಗಿ ಕಣ್ಣಂಚಲಿ ಸಂತಾಪದ ಹನಿಗಳು ಜಾರಿದಾಗ ಎದೆಭಾರ ಕಳಚಿದಂತೆ ಹಗುರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಾಕೀಟಿನ್ಮುಂದೆ ಓಸಿ ಪಾಸಿಯೆಲ್ಲ ಪುಟ್ಗೋಸಿ ಇದ್ದಂಗೆ! : ಎಚ್.ಕೆ.ಶರತ್

ಹಾಳೂರಿನ ಫುಲ್‍ಟೈಟು ಪಾರ್ಟಿಗಳಾದ ನೈಂಟಿ, ಫೋರ್‍ಟ್ವೆಂಟಿ ಮತ್ತು ಪಂಟಿ ಕರುಳ ತಳಮಳ ತಾಳಲಾರದೇ ‘ಕಿಕ್ಕೇಶ್ವರ’ ಲಿಕ್ಕರ್ ಶಾಪಿನೆಡೆಗೆ ದಾಪುಗಾಲಿಟ್ಟರು. ನೈಂಟಿ: ಸಿದ್ರಾಮಣ್ಣ ನಮ್ ಕಷ್ಟ ಅರ್ಥ ಮಾಡ್ಕಂದು ಚೀಪ್ ಅಂಡ್ ಬೆಸ್ಟು ಹೆಂಡನಾ ನಮ್ಗೆಲ್ಲ ಕುಡ್ಸೋಕೆ ಹೊಂಟಿತ್ತಪ್ಪ. ಯಾರ್ಯಾರೋ ಸೇರ್ಕಂದು ಅದ್ಕೆ ಕಲ್ಲಾಕ್ಬುಟ್ರು. ಫೋರ್‍ಟ್ವೆಂಟಿ: ಈಗಿರೋ ಸಿಸ್ಟಮ್ಮೇ ಸರ್ಯಾಗೈತೆ ಸುಮ್ಕಿರಪ್ಪ. ಈಗೆಂಗೋ ದಿನಾ ದುಡ್ಕಂದು ಸಂಜೆ ಹೊತ್ ಮಾತ್ರ ಕುಡ್ಕಂದು ನ್ಯಾಯ್ವಾಗಿ ಬದುಕ್ತಿದ್ದೀವಿ. ಚೀಪಾಗಿರೋ ಹೆಂಡನಾ ಮಾರ್ಕೆಟ್ಟಿಗೆ ಬಿಟ್ರೆ ವಾರ್ದಲ್ಲಿ ಮೂರ್ದಿನ ದುಡ್ದು ಏಳ್ದಿನಾನೂ ಕುಡ್ದು ಕಳ್ಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಾರ್ ಮನ ಮುರ್ದ್ ಬುಟ್ಟು ಬಂದ ಬಡ್ಡೈದ ಇವತ್ತು: ಡಾ. ಗವಿ ಸ್ವಾಮಿ

ವಾರದ ಹಿಂದೆ ಒಬ್ಬ ರೈತ ಬಂದಿದ್ದ. ”ನೆನ್ನ ರಾತ್ರ ಅಸು ಈಯ್ತು.. ಇನ್ನೂ ಮ್ಯಾಲ್ಕೇ ಎದ್ದಿಲ್ಲ.. ತಲ ಇಟ್ಬುಟ್ಟದ ಒಂಚೂರ್ ಬಿರ್ರನ್  ಬನ್ನಿ ಸಾ , ಮನಲಿ ಎಮ್ಕ ಬಾಯ್  ಬಡ್ಕಂಡು ಅಳತ್ ಕೂತರ” ಅವನನ್ನು ಬೈಕಿನಲ್ಲಿ ಕೂರಿಸಿಕೊಂಡು ಅವನ ಊರಿಗೆ ಹೊರಟೆ. ಪೂರ್ತಿ ತೆಂಗಿನ ಗರಿಯಲ್ಲಿ ಕಟ್ಟಿದ ಕೊಟ್ಟಿಗೆ ಅದು. ಹಸು ತಲೆಯನ್ನು ಹೊಟ್ಟೆಯ ಮೇಲೆ ನುಲಿದುಕೊಂಡು ಮಲಗಿತ್ತು. ಮೈ ತಣ್ಣಗಿತ್ತು. ಕರು ಹಾಕಿದ ನಂತರ, ಹಸುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ  ‘ಮಿಲ್ಕ್ ಫೀವರ್’ ನ ಲಕ್ಷಣಗಳು ಕಾಣುತ್ತಿದ್ದವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗುಲಾಬಿ ಟಾಕಿಸ್ – ಅರಕಳಿಯಾದ ಅಂತರಂಗ: ಮಹದೇವ ಹಡಪದ್

ಹೆಣ್ಣಿನ ಸುತ್ತ ಹಾಕಿರುವ ಬೇಲಿಯನ್ನು ಮೀರುವ ಹಂಬಲದ ಕತೆ ಸಿನಿಮಾ ಆಗುವಾಗ ಸಂಕುಚಿತವಾಗಿದೆ. ವ್ಯವಸ್ಥೆಯೇ ಬೇಲಿಯಾಗಿರುವಾಗ ಗುಲಾಬಿ ತನ್ನಿಚ್ಛೆಯಂತೆ ತಾನು ಬದುಕುತ್ತಿದ್ದಳು… ಆಕೆಯೂ ತಲಾಖ್ ಕೊಡಲಾರದ ಗಂಡನಿಗಾಗಿ ಬದುಕಿದ್ದಾಳೆ. ಮಲಮಗನ ಮೇಲಿನ ಹಂಬಲದಲ್ಲಿ ಜೀವಿಸುತ್ತಿದ್ದಾಳೆ. ಹೊಸ ಸಿನಿಮಾಗಳು ಹೇಳುವ ಬಗೆಬಗೆಯ ಕತೆಗಳನ್ನು ನೋಡುವ ಆತುರದಲ್ಲಿದ್ದಾಳೆ. ತೀರ ಸಾಮಾನ್ಯನ ಬದುಕಿನಲ್ಲಿ ಒಂದು ಕಲಾತ್ಮಕ ಆವರಣ ಇದ್ದೆ ಇರುತ್ತದೆ. ಆ ಆವರಣವನ್ನು ಲಿಲ್ಲಿಬಾಯಿಯ ಜೀವನದಲ್ಲಿ ಕಾಣುತ್ತೇವೆ. ಆದರೆ ಗುಲಾಬಿ ಟಾಕೀಸ್ ಸಿನೆಮಾದ ಕೆಲವು (ಶಾಟ್)ಚಿತ್ರಿಕೆಗಳಲ್ಲಿ ಕಾಣಿಸಿದರೂ ಇನ್ನುಳಿದಂತೆ ಅದೊಂದು ಉದ್ಧೇಶಪೂರ್ವಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಿನಿಮಾ ಪ್ಯಾರಡಿಸೋ: ವಾಸುಕಿ ರಾಘವನ್

ಬಾಲ್ಯದಲ್ಲಿ ಸಿನಿಮಾ ನೋಡುವಾಗಿನ ಅನುಭವವೇ ಬೇರೆ ಇತ್ತು. ನನ್ನ ಬೆರಗುಗಣ್ಣಿಗೆ ಸಾಧಾರಣ ಚಿತ್ರಗಳೂ ಅದೆಷ್ಟು ಅಚ್ಚರಿ ಮಾಡಿಸುತ್ತಿದ್ದವು. ಈಗ ಬಹಳ ಸಿನಿಮಾ ನೋಡಿರುವುದರಿಂದಲೋ ಏನೋ, ಸಿನಿಮಾಪ್ರೇಮಿಯೊಡನೆ ಒಬ್ಬ ಸಿನಿಕನೂ ನನ್ನಲ್ಲಿ ಹುಟ್ಟಿದ್ದಾನೆ. ಈಗ ಬೇಕೆಂದರೂ ಆ ಮುಗ್ಧ ಮನಸ್ಥಿತಿ ಸಿಗುವುದಿಲ್ಲ. ಹಾಗಾಗಿ ಹತ್ತರಲ್ಲಿ ಒಂಭತ್ತು ಚಿತ್ರಗಳು ನಿರಾಶೆ ಮೂಡಿಸುತ್ತವೆ. ಆದರೆ ಆ ಒಂದು ಚಿತ್ರ ಇಷ್ಟ ಆಗುತ್ತೆ ನೋಡಿ, ಆ ಖುಷಿಯ ತೀವ್ರತೆ ಬೇರೆಯವರಿಗಿಂತ ಹೆಚ್ಚಾಗಿ ಅನುಭವಿಸುತ್ತೇನೆ! ಈಗಿನ ವಿಮರ್ಶಾತ್ಮಕ ಮನಸ್ಥಿಯಲ್ಲೂ ಮೆಚ್ಚಿಸುವ ಚಿತ್ರಗಳು ಸಾಕಷ್ಟಿವೆ, ಆದರೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-8): ಹಿಪ್ಪರಗಿ ಸಿದ್ದರಾಮ್

ಕಾಡಿನ ಸಂಸ್ಕೃತಿಯಲ್ಲಿ ತನ್ನ ಸೃಜಶೀಲತೆಯನ್ನು ಬೆಳೆಸಿಕೊಂಡ, ವಿದ್ಯೆಯನ್ನು ಅರ್ಜಿಸಿಕೊಂಡ ಏಕಲವ್ಯನು ದ್ರೋಣನನ್ನು ಕಲ್ಪಿತ ಗುರುವನ್ನಾಗಿ ಇಟ್ಟುಕೊಂಡು ಏಕಾಗ್ರತೆಯಿಂದ ವಿದ್ಯೆಯನ್ನು ಗಳಿಸಿದರೂ, ವ್ಯವಸ್ಥೆ ಅದಕ್ಕೆ ಪ್ರತಿಫಲವನ್ನು ಕೇಳುವುದರೊಂದಿಗೆ ಬಲಿ ತೆಗೆದುಕೊಳ್ಳ್ಳುತ್ತದೆ. ಆದರೆ ಇಂತಹ ಅಮಾನುಷ ದೌರ್ಜನ್ಯಗಳಿಗೆ ಮುಂದೊಂದು ದಿನ ತನ್ನ ಪ್ರತಿಕಾರವೊಂದು ಕಾದಿದೆ ಎನ್ನುವ ಧ್ವನಿ/ವಿಚಾರ ತುಂಬ ಶಕ್ತಿಶಾಲಿಯಾದದ್ದು. ಹೀಗಾಗಿ ‘ಶೂದ್ರ ತಪಸ್ವಿ’ ರಂಗಕೃತಿಗಿಂತಲೂ ಭಿನ್ನವಾಗಿ ಕೆಳವರ್ಗದ ಪ್ರತಿಭಟನೆಯ ಇನ್ನೊಂದು ಮಾದರಿ ‘ಬೆರಳ್-ಗೆ-ಕೊರಳ್’ ರಂಗಕೃತಿಯ ಸಂದರ್ಭದಲ್ಲಿ ನಾವು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ. ಈ ರಂಗಕೃತಿಯು ಆಗಿನ ಸಂದರ್ಭದಲ್ಲಿ ಆಧುನಿಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಸ್ತ ಬಲಿ: ಚೀಮನಹಳ್ಳಿ ರಮೇಶಬಾಬು

ಹಸ್ತ ಮಳೆ ಕಾಲಿಟ್ಟಾಗಿನಿಂದ ಒಂದು ದಿನವೂ ಮಳೆ ತಪ್ಪಿದ್ದಲ್ಲ. ಮುಂಜಾನೆ ಚಿಕ್ಕ ಚಿಕ್ಕ ಹತ್ತಿಯ ತುಂಡುಗಳಂತೆ ಗಾಳಿಯಲ್ಲಿ ತೇಲುತ್ತಾ ಸಾಗುವ ಮೋಡಗಳು ಬಿಸಿಲು ಏರಿದಂತೆಲ್ಲಾ ಸಾಂದ್ರವಾಗುತಾ, ಸೂರ್ಯ ಪಶ್ಚಿಮದ ಕಡೆ ಜಾರಿದಂತೆಲ್ಲಾ ಹಿಮಾಲಯದ ಬೆಟ್ಟಗಳ ರೀತಿ ಬೃಹದಾಕಾರ ತಳೆದು, ಪಡುವಣದ ಕೆನ್ನೆ ಕೆಂಪಾಗಾಗುತ್ತಿದ್ದಂತೆ ಕನಿಷ್ಠವೆಂದರೆ ಒಂದು ಹದ ಮಳೆಯಾಗುವುದು ಹಸ್ತ ಮಳೆ ಕಾಲಿಟ್ಟ ಗಳಿಗೆಯಿಂದ ನಡೆದು ಬಂದ ಮಾಮೂಲಿ ಕ್ರಿಯೆ. ಇನ್ನು ಅದರ ಸಮಯಪಾಲನೆಯೋ ಖಚಿತವಾಗಿ ಹೆಚ್ಚು ಕಮ್ಮಿ ಅದೇ ವೇಳೆಗೆ ಸುರಿಯುವ ಅದೂ ಕೂಡ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ: ಹುಸೇನ್ ಎನ್. ಅವರ ಚುಟುಕಗಳು

೧.ಒಳಗೊಳಗೇ ಅತ್ತು ಸತ್ತು ಹೋದ ನನ್ನ ಕನಸುಗಳ ಗೋರಿಗೆ ನಿನ್ನ ಹೆಸರಿಟ್ಟಿದ್ದೇನೆ..! —- ೨.ನಿನ್ನೆದುರು ದನಿಯಾಗಲು ಸೋತ ಮಾತುಗಳು ಕಮ್ಮನೆ ಕುಳಿತಿವೆ.. ಮಡುಗಟ್ಟಿದ ಕಣ್ಣೀರಿಗೆ ಜೊತೆಯಾಗಿ..! —- ೩.ನನಗಸೂಯೆ..! ಅವಳನ್ನು ಸೋಕಿ ಹೋಗುವ ತಂಗಾಳಿ ಮೇಲೆ ಅವಳ ಮೈ ಮೇಲೆರಗುವ ಬಿಸಿಲ ಮೇಲೆ ನನಗೊಂದಿಷ್ಟು ಜಾಗ ನೀಡದ ಅವಳ ಮನಸಿನ ಮೇಲೆ ..!   —- ೪. ನಿನ್ನ ಮಾತಿಗಿಂತ ಮೌನವೇ ಎನಗಿಷ್ಟ.. ಮೌನದೊಳು ನೀನಾಡದ ಅದೆಷ್ಟು ಮಾತುಗಳು…!!   —– ೫. ಶಶಿಯಾಗಮನದಿ ಜಿಲ್ಲೆಂದು ಪುಳಕಗೊಂಡಿದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವರಿದ್ದಾನೆ: ರಾಶೇಕ್ರ

  ಹಳೇ ಪಿಕ್ಚರಿನ ಕ್ಲೈಮ್ಯಾಕ್ಸು ಸೀನಿನಲಿ ಹೀರೋಯಿನ್ನು ಕಟ್ಟಿದ ಬೇವಿಗೆ ಬೆದರಿ ಅಲ್ಲಾಡುವ ಅದೆಷ್ಟೋ ಗಂಟೆಗಳು ಒಮ್ಮೆಲೇ ಢಣ್ಣೆನ್ನುವಾಗ ದೇವರಿದ್ದಾನೆ.. ಪೂಜಾರಿಯ ಆರತಿ ತಟ್ಟೆಗೆ ಬಿದ್ದ ಒಂದೆರಡು ರೂಪಾಯಿ ಕಾಸು ಠಣ್ಣೆನ್ನುವಾಗ ಕಂಪಿಸಿದ ಕಂಪನದಲಿ ಪೂಜಾರಿಯ ತಮುಲದಲಿ ದೇವರಿದ್ದಾನೆ.. ಬಿಳಿ ಟೊಪ್ಪಿಗೆ ಏರಿಸಿ ಬರಿಗೋಡೆಯ ಎದುರು ಭಕ್ತಿಭಾವದಿಂದ ಇಡೀ ಕಾಯವ ಉಲ್ಟಾ ಮಾಡುವ ಸತತ ಪ್ರಯತ್ನಗಳಲಿ ದೇವರಿದ್ದಾನೆ.. ಧನಾತ್ಮಕ ಚಿಹ್ನೆಯನು ಬರೆಯಲು ಬಾರದವರು ಶಿಲುಬೆಯೆಂದುಕೊಂಡು ದೇವಧೂತನ ಅದಕೆ ಆನಿಸಿ ಮೊಳೆಯೊಡೆವ ಮೂರ್ಖತನದಲಿ ದೇವರಿದ್ದಾನೆ.. ಊರ ನಡುವಿನ ಅರಳೀಕಟ್ಟೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೀಜಿ ಪುರಾಣ: ಪ್ರಶಸ್ತಿ ಅಂಕಣ

  ಅ: ಹಾಯ್, ನೀವೆಲ್ಲಿರೋದು ? ಬ: ಬೆಂಗ್ಳೂರು ಅ: ಓ. ಹೌದಾ.. ಬೆಂಗ್ಳೂರಲ್ಲೇನ್ ಮಾಡ್ಕೊಂಡಿದೀರಿ ? ಬ:ಪೀಜಿ ಅ:ಪೀಜಿ ಅಂದ್ರೆ ಪೋಸ್ಟ್ ಗ್ರಾಜುಯೇಷನ್ನಾ ? ಬ:ಅಲ್ಲ ಮಾರ್ರೆ.ಪೇಯಿಂಗ್ ಗೆಸ್ಟು !:-) ಈ ಬೆಂದಕಾಳೂರಿಗೆ ಬಂದು ಬಾಳ ಬೇಳೆ ಬೇಯಿಸ್ಕೊಳೋಕೆ ಶುರು ಮಾಡಿದಾಗಿನಿಂದ ಮೇಲಿನ ಪೀಜಿ PJ ಬೇಜಾರ್ ಬರೋವಷ್ಟು ಕಾಮನ್ನಾಗಿ ಹೋಗಿದೆ 🙁 ಅಲ್ಲ, ಈ ಕಾಲ ಅನ್ನೋದು ನಮ್ಮ ಕಲ್ಪನೆ, ನಂಬಿಕೆಗಳನ್ನೆಲ್ಲಾ ಎಷ್ಟು ಬದಲಾಯಿಸತ್ತೆ ಅಲ್ವಾ ? ಕೆಲವೊಂದು ಸಲ ನಂಬಿಕೆಗಳನ್ನ  ಬುಡಮೇಲೇ ಮಾಡ್ಬಿಡುತ್ತೆ. ನಾವು ಎಷ್ಟೇ ಅಂದ್ಕೊಂಡ್ರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓಡಿ ಹೋಗುವ ಮುನ್ನ ಓದಿ ಹೋಗಿ: ಪ್ರವೀಣ್ ಕುಲಕರ್ಣಿ

ಹಲೋ ಹಲೋ ಥೂ ಈ ಹುಡುಗರು ಸರಿಯಾದ ಟೈಮ್ ಗೆ ಬರೋದು ಇಲ್ಲ ಫೋನ್ ಎತ್ತೋದು ಇಲ್ಲ ಹಲೋ …. ಹಾಂ ಹ..ಲೊ ..ಇನ್ನೂ ಎದ್ದಿಲ್ವ ದಂಡ ಪಿಂಡ ನೀನು..? ಇಲ್ಲಿ ನನಗೆ ಒಂದೊಂದು ನಿಮಿಷ ಉಸಿರು ಕಟ್ತಾ ಇದೆ ಏಳೋ ಬೇಗ .. ಅಯ್ಯೋ ಎದ್ದೆ ತಡಿಯೇ… ಮಾತಾಡಿದ ನಿಮ್ಮ ಅಮ್ಮ ಅಪ್ಪನ ಹತ್ತಿರ ಏನಂತೆ ? ಮರ್ಯಾದೆಯಾಗಿ ಮದುವೆ ಮಾಡಿಕೊಟ್ಟು ದೊಡ್ಡವರು ಅನ್ನಿಸಿಕೊಳ್ತಾರೋ  ಇಲ್ವಾ ಫಿಲ್ಮಲ್ಲಿ ತೋರಿಸೋ ಹಾಗೆ ಇಲ್ಲ ಆಗಲ್ಲ ಅಂದ್ಕೊಂಡು ತಲೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ