ಅಕ್ಷಯ ತೃತೀಯದಲ್ಲಿ ಚಿನ್ನ ಕೊಳ್ಳುವುದು ಅಂದರೆ…:ವಿ.ಆರ್.ಕಾರ್ಪೆಂಟರ್

ನನ್ನ ಸ್ನೇಹಿತನೊಬ್ಬ ಸೇನೆಯಲ್ಲಿದ್ದಾನೆ. ಕಳೆದ ವಾರವಷ್ಟೇ ರಜೆಯ ಮೇಲೆ ಊರಿಗೆ ಬಂದಿದ್ದಾನೆ. ಅವನಿಗೆ ಅವನ ತಂಗಿಯ ಕಡೆಯವರು ಅವನ ಮದುವೆಯ ವಾರ್ಷಿಕೋತ್ಸವ ಸಮಾರಂಭಕ್ಕೆಂದು ಸ್ವಲ್ಪ ದುಬಾರಿ ಉಂಗುರವನ್ನು ಉಡುಗೊರೆಯಾಗಿ ನೀಡಿದ್ದನ್ನು ಹೆಚ್ಚಿಗೆ ಅನ್ನಿಸುವಷ್ಟು ಉಬ್ಬಿಕೊಂಡು ನನ್ನ ಬಳಿ ಹೇಳಿಕೊಂಡ. ಇಂದು ತನಗೆ ಸಿಕ್ಕ ಈ ಅನಿರೀಕ್ಷಿತ ಉಡುಗೊರೆಯ ಹಿನ್ನೆಲೆಯನ್ನು ಹೇಳಿಕೊಂಡ. ಅದು ಮುಂದಿನಂತಿದೆ. ಕಳೆದ ಎರಡು ವಾರದ ಯಾವುದೋ ದಿನ ಅಕ್ಷಯ ತೃತೀಯವಂತೆ. ಅಂದು ಅವನ ಹೆಂಡತಿ ’ರೀ ಇವತ್ತು ಅಕ್ಷಯ ತೃತೀಯ ಜಾಸ್ತೀ ಅಲ್ಲದಿದ್ದರೂ ಚೂರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ:ಶಿವು.ಕೆ ಅವರ ಚುಟುಕಗಳು

೧. ಜೀನ್ ಜಿನುಗದೆ ಕವಿ ಹೃದಯದ ಜೀನ್ ಜಿನುಗದೆ ದಿನವೂ ತೊಳಲಾಡುತ್ತಿದ್ದೇನೆ ನಾ ಕವನ ಬರೆಯಲಾಗದೆ ಕಣ್ಣ ಕದ ತೆರೆದು ಓದುತ್ತೀಯಾ ನನ್ನೊಳಗಿನ ಕವಿತೆಗಳನ್ನು ೨. ಬೇರಿನೊಳಗೆ ಅಡಗಿ ಕುಳಿತ ಆಕಾಶದಗಲದ ದೊಡ್ಡಮರದಂತೆ ನನ್ನ ಪುಟ್ಟ ಹೃದಯದೊಳಗೆ ಬಚ್ಚಿಟ್ಟಿರುವ ಸಾಗರದಗಲದ ಒಲವು ನಿನಗೆ ಗೊತ್ತಾ? ೩. ಹಸಿರು-ಉಸಿರು ಆವಿಯಾದ ಸಾಗರದನಿಗಳು ಆಕಾಶಕ್ಕೇರಿ ಪರಸ್ಪರ ಡಿಕ್ಕಿಸಿದಾಗ ಮಳೆಸುರಿದು ನೆಲವೆಲ್ಲಾ ಹಸಿರು ದೈನಂದಿನ ಚಿತ್ರಗಳು ನನ್ನೆದೆಯಲ್ಲಿ ಭಾವಗಳಾಗ ಪರಸ್ಪರ ಡಿಕ್ಕಿಸಿದಾಗ ಪದ ಸುರಿದು ಕಾಗದದಲ್ಲಿ ಕವನದ ಉಸಿರು. ೪.  ಬದುಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಕದ್ದಾಲಿಕೆ: ಹರಿಪ್ರಸಾದ್

ನನಗೆ ನಾಲಿಗೆ ಬಗ್ಗೆ ಒಲವು ಇಲ್ಲದಿದ್ದರೂ ಕಿವಿಯ ಬಗ್ಗೆ ಅಪಾರ ಪ್ರೀತಿ. ಈ ಕಿವಿಗಳಾದರೋ ಎಲ್ಲೇ ಹೋದರೂ ಸುಮ್ಮನಿರುವುದಿಲ್ಲ. ಏನಾದರೂ ಕೇಳಿಸಿಕೊಳ್ಳುತ್ತಲೇ ಇರುತ್ತವೆ. ಕೇಳಿಸಿಕೊಂಡು ಅವು ಸುಮ್ಮನಿರುವುದಿಲ್ಲ. ನನ್ನನ್ನು ವಿನಾಕಾರಣ ಪೀಡಿಸುತ್ತಿರುತ್ತವೆ. ಒಂದಿನ ಟೀ ಅಂಗಡೀಲಿ ಯಾರೋ ಮಾತಾಡಿದ್ದು ಕೇಳಿಸಿಕೊಂಡು ಬಂದಿದ್ದವು. ರಾತ್ರಿ ನಿದ್ದೆ ಮಾಡಲು ಬಿಡದೆ ಪೀಡಿಸಿದವು. ಆ ಪೀಡನೆಯೇ ಸಾರಾಂಶವೇ ಈ ಬರಹ. ಅವನು ಏನೋ ಮದುವೆ ಆಕ್ಕುಲ್ವ? ಇವನು ಆಯ್ತಿನಿ ಅವನು ಅಂಗಾರೆ ಉಡ್ಗಿ ನೋಡ್ಕಂಡಿದೀಯ, ಯಾವ ಕ್ಯಾಷ್ಟು ಇವನು ನಿಂಗೆ ನನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಘಟಶ್ರಾದ್ಧ:ಮಹಾದೇವ ಹಡಪದ

ಗಿರೀಶ ಕಾಸರವಳ್ಳಿಯ “ಘಟಶ್ರಾದ್ಧ” ನನ್ನ ಕತೆಯ ಜೊತೆ ಅತ್ಯಂತ ನಿಕಟವಾದ ಸಂಬಂಧ ಇಟ್ಟುಕೊಂಡಿದೆ. ನಾನು ಬೆಳೆದ ಪರಿಸರ ಗಿರೀಶ ಕಾಸರವಳ್ಳಿ ಬೆಳೆದ ಪರಿಸರಗಳ ನಡುವೆ ಅನೇಕ ಸಾಮ್ಯಗಳಿವೆ. ಒಬ್ಬ ಹುಡುಗ ಬೆಳೆದು ದೊಡ್ಡವನಾಗುವ ಕಷ್ಟ, ಮುಗ್ಧತೆ ಕಳೆದುಕೊಳ್ಳಬೇಕಾದ ಅನಿವಾರ್ಯ, ಅದರ ಸಂಕಟ, ನೈತಿಕ ಪ್ರಜ್ಞೆ ಬೆಳೆಸುವ ಮಾನವೀಯ ಸಂಬಂಧಗಳಲ್ಲಿ ಹುಟ್ಟುವ ತೊಡಕುಗಳು – ಇಂಥ ವಿಷಯಗಳಲ್ಲಿ ನನ್ನ ಅನುಭವಗಳೆಲ್ಲ ತನ್ನ ಸ್ವಂತ ಅನುಭವಗಳು ಎನ್ನುವಂತೆ ಗಿರೀಶ ಕಾಸರವಳ್ಳಿ “ಘಟಶ್ರಾದ್ಧ ” ಮಾಡಿದ್ದಾರೆ. – ಯು.ಆರ್.ಅನಂತಮೂರ್ತಿ ಸಾರ್ವಕಾಲಿಕವಾದದ್ದು ಯಾವಾಗ ಕಂಡರೂ, ಕಾಣಿಸಿದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಾರೂ ನೋಡಿರದ ಎವರ್-ಗ್ರೀನ್ ಕ್ಲಾಸಿಕ್:ವಾಸುಕಿ ರಾಘವನ್

ನಿಮಗೆ ಈ ಚಿತ್ರದ ಎಲ್ಲಾ ಹಾಡುಗಳು ಗೊತ್ತಿರಬಹುದು. ಕೇಳಿದ್ದರೆ ಮರೆತಿರಲಿಕ್ಕೆ ಸಾಧ್ಯಾನೇ ಇಲ್ಲ ಬಿಡಿ. ಆದರೂ ನೀವು ಈ ಸಿನಿಮಾ ನೋಡಿರೋ ಸಾಧ್ಯತೆಗಳು ಕಡಿಮೆ. ನಿಮಗೆ ಪರಿಚಯ ಇರೋರಲ್ಲಿ ಕೂಡ ಈ ಚಿತ್ರವನ್ನ ಯಾರೂ ನೋಡಿರಲಾರರು. ಚಾನ್ಸ್ ಸಿಕ್ಕರೆ ಈ ಚಿತ್ರವನ್ನ ನೋಡ್ತೀರಾ ಅಂದ್ರೆ ಇಲ್ಲಪ್ಪಾ ಅಂತೀರ! ಇದ್ಯಾವ ಚಿತ್ರನಪ್ಪಾ ಅಂತ ತಲೆ ಕೆರ್ಕೊತಾ ಇದೀರಾ? ತಡೀರಿ ಆ ಚಿತ್ರದ ಒಂದು ಹಾಡು ಇಲ್ಲಿದೆ: ಕಣ್ಣು ಕಡಲ ಹೊನ್ನು ನಸು ನಾಚಿದಾಗ ನೀನು ಸೌಂದರ್ಯ ನಿನ್ನ ನೋಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಂಗಳೂರಿನ ದಾಖಲೆ ಮಳೆ: ಪ್ರಶಸ್ತಿ ಅಂಕಣ

  ಟ್ರಾಫಿಕ್ ಜಾಂಗೂ ಬೆಂಗ್ಳೂರಿಗೂ ಖಾಸಾ ಖಾಸಾ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯನೇ..ಆದರೆ ಬೆಂಗ್ಳೂರಲ್ಲಿ ದಾಖಲೆ ಮಳೆಯೆಂಬ ದಾಖಲೆಯಲ್ಲಿ ದಾಖಲಾಗಿದ್ದು, ಮುಕ್ಕಾಲು ಘಂಟೆಯ ಪಯಣ ಮಳೆರಾಯನಿಂದ ಮೂರು ಘಂಟೆಯಷ್ಟಾಗಿದ್ದು  ಮಾತ್ರ ಮರೆಯಲಾರದ ನೆನಪುಗಳು..   ಮೊನ್ನೆ ಎಂದಿನಂತೆ ಶುಭ ಶುಕ್ರವಾರ. ಅಕ್ಷರಶ: ಸೆಕೆಯಲ್ಲಿ ಬೇಯ್ತಿರೋ ಬೆಂಗಳೂರಿಂದ ದೂರ ನನ್ನ ಹುಟ್ಟೂರೆಡೆಗೆ ತೆರಳೋ ಖುಷಿಯಿಂದ ಸಹಜವಾಗೇ ಶುಕ್ರವಾರ ಶುಭದ್ದೆನಿಸಿತ್ತು. ಆದರೆ ಸಂಜೆ ಆರು ಘಂಟೆಯಾಗುತ್ತಿದ್ದಂತೆಯೇ ಎಲ್ಲಿಂದಲೋ ಕವಿದ ಮೋಡಗಳು ಅದ್ಯಾವ ಮಾಯೆಯಲ್ಲಿ ಮಳೆ ಸುರಿಸತೊಡಗಿದವೋ ತಿಳಿಯಲೇ ಇಲ್ಲ…ಯಾರೋ  ಬಾಗಿಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಾಯಿಯ ಮನಸ್ಸು: ಲಿಂಗರಾಜು

           ಅಂದು ಸೋಮವಾರ, ನಾನು ಒಬ್ಬ ಮುಖ್ಯ ವ್ಯಕ್ತಿಯೊಬ್ಬರನ್ನು ಬೇಟಿ ಮಾಡಲು ಬೆಂಗಳೂರಿನ ಗಾಂದಿನಗರದ ಕಡೆ ಹೋಗಬೇಕಾಗಿತ್ತು..ಬೆಳಿಗ್ಗೆ 10 ಗಂಟೆಯ ಸಮಯ, ಕೆಂಪೇಗೌಡ ಬಸ್ ನಿಲ್ಧಾಣದಲ್ಲಿ ಬಸ್ಸಿನಿಂದ ಇಳಿದು ನಿಂತೆ.  ಸುತ್ತಲೂ ನೋಡಿ ಒಮ್ಮೆ ಬೆರಗಾದೆ ಎತ್ತ ನೋಡಿದರೂ ಜನರ ಗಜಿಬಿಜಿ. ಒಂದು ರಸ್ತೆಯಿಂದ ಮತ್ತೂಂದು ರಸ್ತೆಗೂ ದಾಟಲು ಅಸಾದ್ಯವಾದ ವಾಹನಗಳ ಸಾಲು.          ಮನಸ್ಸಿನಲ್ಲಿ ಏನೋ ಗೊಂದಲ, ಒಂದು ಕಡೆ ಸುಮ್ಮನೆ ನಿಂತುಬಿಟ್ಟೆ. ತಕ್ಷಣ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಪ್ರಭಾಕರ ತಾಮ್ರಗೌರಿ, ನಾಗರಾಜ್ ಹರಪನಹಳ್ಳಿ, ಸುಷ್ಮಾ ಮೂಡುಬಿದರೆ

ಕನ್ನಡಿ ಜಲ  ವಿಶಾಲವಾದ ತಿಳಿಗೊಳ ಅದರೊಳಗೆ ಇಣುಕಿ ನೋಡಿದರೆ ಕಾಣುವುದು ಮಿರಿಮಿರಿ ಮಿಂಚುವ ತಳ ಪ್ರತಿಬಿಂಬ ಕಾಣಲು ಸಾಕು ಈ ಕನ್ನಡಿ ಜಲ ..! ಅಪಾಯವೇನೂ ಇಲ್ಲವಾದರೂ ಇದರಲ್ಲಿ ಯಾರೂ ಸ್ನಾನ ಮಾಡಬೇಡಿ ; ಈಸಬೇಡಿ…. ಅತ್ತಿತ್ತ ಚಲಿಸುತ್ತಾ ಮನಕ್ಕೆ ಮುದ ನೀಡುವ ಬಣ್ಣ ಬಣ್ಣದ ಮೀನುಗಳ ಹಿಡಿದು ಕೊಲ್ಲಬೇಡಿ ಕಸಕಡ್ಡಿ , ಕಲ್ಲೆಸೆಯಬೇಡಿ ಕಾಲು , ಕೋಲು ಹಾಕಿ ಕಲಕಿ ತಿಳಿ ನೀರ ಕೆಡಿಸುವುದು ತಪ್ಪು ಕೊಳಕ ತೊಳೆಯಲು ಇದು ಜಾಗವೇ ಅಲ್ಲ ಶುದ್ದ ಜಲ…! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫಿಟ್ಟಿಂಗ್ ನಲ್ಲಿ ಫಿಕ್ಸಿಂಗ್ ಫಿಕ್ಸು..!: ಎಂ. ಆರ್. ಸಚಿನ್

ಇವ ಸುಮ್ನೆ ಗೀಚ್ತಾನೆ, ಸೀರಿಯಸ್ ಆಗ್ಬೇಡಿ..!! ಮೊನ್ನೇ ದಾರೀಲಿ ಒಬ್ನೇ ನಡೆದುಕೊಂಡು ಹೋಗ್ತಾ ಇದ್ದೇ. ಎಳಿಯೋಕೆ ಯಾರ ಕಾಲೂ ಸಿಗದೇ, ಜೊತೆಗೆ ಯಾರೂ ಇಲ್ದೆ, ಸಿಕ್ಕಾಪಟ್ಟೆ ಬೋರಾಗ್ತಾ ಇತ್ತು. ಅದೇ ಸಮಯಕ್ಕೆ ಸರಿಯಾಗಿ ಒಂದು ನಾಲ್ಕೈದು ಮಂದಿ ಕೈಲಿ ಕೆಲ ಕ್ರಿಕೇಟ್ ಆಟಗಾರರ ಮಕಕ್ಕೆ ಮಸಿ ಬಳಿದ ಪಟ, ಬ್ಯಾನರ್ ಎಲ್ಲ ಹಿಡಿದು, ಘೋಷಣೆ ಕೂಗುತ್ತಾ ತಮ್ಮ ಹಳೇ ಚಪ್ಪಲಿಯಿಂದ ಪಟಪಟ ಅಂತಾ ಬಾರಿಸುತ್ತಿದ್ದರು. ನಾ ಕೇಳಿದೆ "ಸಾರ್ ಎಂಥಾ ಆಗ್ತಾ ಉಂಟು ಇಲ್ಲಿ? ನೀವ್ಯಾಕೆ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಲವ್ ಕಹಾನಿ!: ನವೀನ್ ಮಧುಗಿರಿ

ಸುಡು ಸುಡು ಬಿಸಿಲಿನ ಬೇಸಿಗೆಯ ಒಂದು ಮಧ್ಯಾಹ್ನ. ಸಿಮೆಂಟು ಕಾಡಿನ ಮಧ್ಯೆ ಅಪರೂಪಕ್ಕೆ ಅಲ್ಲಲ್ಲಿ ಕಾಣಿಸುವ ರಸ್ತೆ ಬದಿಯಲ್ಲಿರುವ  ಒಂದೆರಡು ಮರಗಳೂ ಸಹ ತಲೆಬಾಗುವುದನ್ನು ಮರೆತು ತಟಸ್ಥ ಧ್ಯಾನಕ್ಕೆ ಶರಣಾಗಿವೆ. ಸೂರ್ಯೋದಯದ ನಂತರ ಆ ಊರಿನಲ್ಲಿ ಒಮ್ಮೆಯೂ ಗಾಳಿ ಬೀಸಿಲ್ಲ. ಒಂದೆಲೆಯೂ ಅಲುಗಿಲ್ಲ. ಮರದ ರೆಂಬೆಗಳು  ಬಿಸಿಲ ಬೇಗೆಗೆ ಬೆಂದು, ಚಲನವಿಲ್ಲದೆ ನಿರ್ಜೀವ ವಸ್ತುವಿನಂತೆ (ಸತ್ತಂತೆ) ಮಲಗಿವೆ.  ಆ ಊರಿನ ಯಾವುದೋ ಒಂದು ಬೀದಿಯಲ್ಲಿನ ಒಂದು ಮೂಲೆಯಲ್ಲಿ ಆಗಷ್ಟೇ ಗೃಹ ಪ್ರವೆಶವೋ, ನಾಮಕರಣವೋ, ಅಥವಾ ಇನ್ನಾವುದೋ ಕಾರ್ಯಕ್ರಮವು ನಡೆದಿತ್ತು. ಬಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಾವುದು ತಪ್ಪು? ಯಾವುದು ಸರಿ?: ಸುಬ್ರಹ್ಮಣ್ಯ ಹೆಗಡೆ

ಟಿಪ್ಪಣಿ: ನಮ್ಮ ಜೀವನವೇ ಹಾಗೆ ಅಲ್ಲವೇ, ಜೀವನಪೂರ್ತಿ ನಾವು ಬದುಕುವುದೇ ಹಾಗೆ. ನಮಗೆ ಯಾವುದು ಸರಿಯಾಗಿ ಕಾಣುತ್ತದೆಯೋ ಅದನ್ನೇ ನಾವು ಮಾಡುತ್ತೇವೆ. ನಮಗೆ ಸರಿಯಾಗಿ ಕಂಡ ನಿರ್ಧಾರ ನಮ್ಮೆದುರಲ್ಲಿರುವವರಿಗೆ ಸಹ ಸರಿಯಾಗಿ ಕಾಣಬೇಕೆಂದೇನಿಲ್ಲ. ಅಷ್ಟೇ ಅಲ್ಲ, ಸ್ವಲ್ಪ ಸಮಯದ ನಂತರ ನಮ್ಮ ನಿರ್ಧಾರ ನಮಗೇ ಸರಿಯಾಗಿ ಕಾಣದೇ ಹೋಗಬಹುದು. ಇಬ್ಬರ ನಡುವಿನ ಒಂದು ವಾದದಲ್ಲಿಯೇ ಆಗಲೀ, ಜೀವನದ ಅತಿಮುಖ್ಯ ನಿರ್ಧಾರಗಳಲ್ಲಿಯೇ ಆಗಲೀ, ಇನ್ನೊಬ್ಬರ ಬಗೆಗಿನ ಸರಿತಪ್ಪುಗಳ ನಿರ್ಣಯದಲ್ಲಿಯೇ ಆಗಲೀ, ಒಂದೇ ಸರಿ ಮತ್ತು ಒಂದೇ ತಪ್ಪು ಇರಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-5):ಹಿಪ್ಪರಗಿ ಸಿದ್ದರಾಮ್

1931ರಲ್ಲಿ ರಚನೆಯಾದ ಮಹಾಕವಿ ಕುವೆಂಪರವರ ‘ಸ್ಮಶಾನ ಕುರುಕ್ಷೇತ್ರಂ’ ರಂಗಕೃತಿಯು ಇಂದಿಗೂ ಅತ್ಯಂತ ಪ್ರಸ್ತುತವಾಗುತ್ತಾ, ನಮ್ಮನ್ನು ಸದಾಕಾಲ ಸಾಮಾಜಿಕ ಸನ್ನಿವೇಶಗಳೊಂದಿಗೆ ಅನುಸಂಧಾನ ಮಾಡುವ ಕಥಾವಸ್ತು ಹೊಂದಿರುವ ಈ ರಂಗಕೃತಿಯಲ್ಲಿ ಯುದ್ಧೋತ್ತರ ಮಹಾಭಾರತದ ಚಿತ್ರಣ, ಪಂಪ, ರನ್ನ ಮುಂತಾದ ಕವಿಗಳು ಕುರುಕ್ಷೇತ್ರದ ಯುದ್ಧದ ಕೊನೆಯ ದೃಶ್ಯಗಳನ್ನು ತಮ್ಮ ಕಾವ್ಯಗಳಲ್ಲಿ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿರುವುದನ್ನು ತಮ್ಮ ಪ್ರಾಂಜಲ ಮನದಿಂದ ಪರೋಕ್ಷವಾಗಿ ಮಹಾಕವಿಗಳು ಕೃತಜ್ಞತೆಯೊಂದಿಗೆ ಸ್ಮರಿಸಿಕೊಳ್ಳುತ್ತಾರೆ. ಇಂದಿನ ಜಾಗತೀಕರಣೋತ್ತರ ಭಾರತ ಮತ್ತು ಸಮಕಾಲೀನ ಸಂದರ್ಭದ ಜಗತ್ತಿನ ಪ್ರಭಲ ರಾಷ್ಟ್ರಗಳೆಲ್ಲವೂ ಸ್ವರಕ್ಷಣೆಯ ನೆಪದಲ್ಲಿ ಸಿಡಿಮದ್ದು, ಕ್ಷಿಪಣಿಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಈಶ್ವರ ಭಟ್ ಅವರ ಚುಟುಕಗಳು

ಬರಹ "ಸೋತು ಬರೆಯುವ ಚಟ ನಿನಗೆ ಎಂದು ಜರೆಯದಿರು; ಗೆದ್ದಾಗ ಸಂಭ್ರಮಿಸುತ್ತೇನೆ ಬರೆಯಲಾಗುವುದಿಲ್ಲ."   ಒಳಗಿಳಿಯುವುದು "ಕೆಲವು ಬಣ್ಣಗಳು ಹೀಗೇ ಗಾಢವಾಗುತ್ತಾ ಕಾಡುತ್ತವೆ. ಕೊನೆಗೆ ಕಪ್ಪು ಎಂದೇ ಅನಿಸುತ್ತದೆ."   ಕೃಷ್ಣ "ಕಪ್ಪು?.. ನೀಲ ಮುರಳೀಲೋಲ ಹಗಲು ಗೊಲ್ಲ ರಾತ್ರಿ ನಲ್ಲ!"   ಸು-ಭಾಷಿತ "ಓ ಹುಡುಗಿ ದಾರಿಯಲಿ ನೆನೆನೆನೆದು ಕೃಷ್ಣನನು ಪಡೆಯದಿರು ಸೀರೆಯನು ಉಳಿಸೆ ಮಾನ! ಈ ಬಾರಿ ಕತ್ತಿಯನು ಬೇಡಿಕೋ ಓ ಹುಡುಗಿ ಉಳಿಸಲಾರರು ಯಾರೂ ನಿನ್ನ ಪ್ರಾಣ!"   ನಾನಾಗುವುದು "ನಾನು ಕಡಲೆಂದುಕೊಂಡಿದ್ದೇನೆ! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಾಂಧಿ @ ಕೂರ್ಮಾವತಾರ:ಮಹಾದೇವ ಹಡಪದ

ಸಾಹಿತ್ಯದ ಜೊತೆಗಿನ ಸಿನೆಮಾ ನಂಟು ಬಹಳ ಹಳೆಯದು. ಸಿನೆಮಾ ಅಂದ್ರೆ ಪ್ರಾಯೋಗಿಕವಾಗಿ ನಿರ್ದೇಶಕನೇ ಕುಂತು ಕತೆಗಾರನೊಂದಿಗೆ ಕತೆ ಕಟ್ಟುತ್ತ ಹೋಗುತ್ತಾನೆ. ಆದರೆ ಸಾಹಿತ್ಯಿಕ  ಕಥಾವಸ್ತುವೊಂದನ್ನು ಆಯ್ದುಕೊಂಡು ಅದನ್ನು ಚಿತ್ರದ ವಿನ್ಯಾಸದಲ್ಲಿ ಅಳವಡಿಸುವುದು ಗಿರೀಶ ಕಾಸರವಳ್ಳಿಯವರ ವಿಶೇಷ ವ್ಯಾಕರಣವಾಗಿದೆ. ಘಟಶ್ರಾದ್ಧದಿಂದ ಕೂರ್ಮಾವತಾರದ ವರೆಗಿನ ಪಯಣದಲ್ಲಿ ಅವರು ಕತೆಯ ಆಯ್ಕೆಯಲ್ಲಿ ವಿಶೇಷವಾದ ಆಸಕ್ತಿ ತೋರಿಸಿದ್ದಾರೆ. ಕನ್ನಡದ ಪ್ರಸಿದ್ಧ ಕತೆಗಾರರಾದ ಕುಂವೀ ಅವರ ಸಣ್ಣ ಕತೆಯಾಧಾರಿತ ಕೂರ್ಮಾವತಾರ ಸಿನೆಮಾವನ್ನು ಕನ್ನಡದ ಪ್ರಸಿದ್ಧ ಚಿತ್ರನಿರ್ದೇಶಕರಾದ ಕಾಸರವಳ್ಳಿಯವರು ನಿರ್ದೇಶಿಸಿದ್ದಾರೆ. ಮೊದಲ ದೃಶ್ಯದಲ್ಲಿಯೇ ಗಾಂಧಿ ಸಾವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾಗಿರಥಿ:ಪಾರ್ಥಸಾರಥಿ ಎನ್

ಗಂಗೋತ್ರಿಯ ಹೋಟೆಲ್ 'ಮಂದಾಕಿನಿ'  ಕೊಠಡಿಯ ಕಿಟಿಕಿಯಿಂದ ಒಮ್ಮೆ ಹೊರಗಡೆ   ನೋಡಿದೆ,  ಹಸಿರು ಬೆಟ್ಟಗಳ ಸಾಲು.  ಕೊರೆಯುವ ಚಳಿ . ಬೆಂಗಳೂರಿನಂತಲ್ಲದೆ ಅಲ್ಲಿಯದೆ ಆದ ಸಂಸ್ಕೃತಿ , ಜನಗಳು,   ಮನೆಗಳು, ರಸ್ತೆ ಎಲ್ಲವು ಹೊಸ ಲೋಕವೊಂದನ್ನು ನನ್ನೊಳಗೆ ಸೃಷ್ಟಿಸಿತ್ತು. "ದ ಗ್ರೇಟ್ ಹಿಮಾಲಯನ್ ಟ್ರಕ್ಕಿಂಗ್ ಅಸೋಸಿಯೇಷನ್"  ನನ್ನ ಹಲವು ವರ್ಷಗಳ ಕನಸಿಗೆ ನಿಜ ರೂಪ ಕೊಡಲು ಸಿದ್ದವಾಗಿದ್ದ ಸಂಸ್ಥೆ.  ಚಿಕ್ಕವಯಸಿನಿಂದಲು ಬೆಟ್ಟಗುಡ್ಡ ಏರುವದರಲ್ಲಿ ಎಂತದೊ ಆಸಕ್ತಿ. ಹೈಸ್ಕೂಲಿನ ಎನ್ ಸಿ ಸಿ ಸಹ ಅದಕ್ಕೆ ಪೂರಕವಾಗಿತ್ತು. ಕಾಲೇಜಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಸ್ ಸ್ಟ್ಯಾಂಡ್ ಬದುಕು:ಗವಿಸ್ವಾಮಿ

ಸಂಜೆ ಏಳಾಗಿತ್ತು. ಮಳೆ ಬೀಳುವ ಎಲ್ಲಾ ಮುನ್ಸೂಚನೆಗಳೂ ಕಾಣುತ್ತಿದ್ದವು. ಆದರೂ, ಒಂದು chance ತೆಗೆದುಕೊಂಡು ಊರಿನತ್ತ ಬೈಕ್ ಸ್ಟಾರ್ಟ್ ಮಾಡಿದೆ. ಎರಡು ಮೂರು ಕಿಮೀ ಮುಂದೆ ಹೋಗುವಷ್ಟರಲ್ಲಿ ಟಪ್ ಟಪ್ ಟಪ್ ಟಪ್ ಅಂತ ಚುಚ್ಚತೊಡಗಿದವು ದಪ್ಪ ದಪ್ಪ ಹನಿಗಳು. ಮುಂದೆ ಹೋದಂತೆ ಮಳೆಯ ರಭಸ ಇನ್ನೂ ಹೆಚ್ಚಾಯಿತು. ಹೇಗೋ ಸಹಿಸಿಕೊಂಡು ಒಂದು ಮೈಲಿಯಷ್ಟು ಮುಂದೆ ಹೋಗಿ ಹಳ್ಳಿಯೊಂದರ  ಬಸ್ ಸ್ಟ್ಯಾಂಡ್ ತಲುಪಿಕೊಂಡೆ. ಅಲ್ಲಾಗಲೇ ಐದಾರು ಬೈಕುಗಳು ನೆನೆಯುತ್ತ ನಿಂತಿದ್ದವು.  ಬಸ್ ಸ್ಟ್ಯಾಂಡ್ ಅಕ್ಷರಷಃ ಹೌಸ್ಫುಲ್ಲಾಗಿತ್ತು. ಆಗ ತಾನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಈ ತು ಮಾಮ ತಂಬ್ಯೆನ್:ವಾಸುಕಿ ರಾಘವನ್

ನೀವು ತುಂಬಾ ಮಡಿವಂತರಾ? ನಿಮ್ಮ ಭಾವನೆಗಳು ಸುಲಭವಾಗಿ ಹರ್ಟ್ ಆಗ್ತವಾ? ನಿಮಗೆ "ನೈತಿಕತೆ" ಕನ್ನಡಕ ಬಿಚ್ಚಿಟ್ಟು ಪ್ರಪಂಚವನ್ನ ನೋಡೋ ಅಭ್ಯಾಸಾನೇ ಇಲ್ವಾ? ಹಂಗಿದ್ರೆ ಈ ಚಿತ್ರ ನಿಮಗಲ್ಲ ಬಿಡಿ. ಈ ಆರ್ಟಿಕಲ್ ಕೂಡ ನಿಮಗೆ ಸರಿಹೋಗಲ್ಲ! ನೀವು ಈ ಗುಂಪಿಗೆ ಸೇರಿಲ್ವಾ? ಹಾಗಾದ್ರೆ ಇನ್ನೇನ್ ಯೋಚ್ನೆ ಇಲ್ಲ, ಬನ್ನಿ ಈ ಫಿಲ್ಮ್ ಬಗ್ಗೆ ಮಾತಾಡೋಣ! ಆಲ್ಫೊನ್ಸೋ ಕ್ವಾರೋನ್ ನಿರ್ದೇಶನದ "ಈ ತು ಮಾಮ ತಂಬ್ಯೆನ್" ("ನಿನ್ನ ಅಮ್ಮ ಕೂಡ") 2001ರಲ್ಲಿ ಬಿಡುಗಡೆಯಾದ ಮೆಕ್ಸಿಕನ್ ಚಿತ್ರ. "ಕಮಿಂಗ್ ಆಫ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಐಸ್ ಕ್ರೀಂ ನೆನಪುಗಳಲ್ಲಿ..:ಪ್ರಶಸ್ತಿ

ಸಣ್ಣವನಿದ್ದಾಗ ಬೆಂಗಳೂರು ಎಂದರೆ ಉದ್ಯಾನನಗರಿ ಎಂಬ ಹೆಮ್ಮೆಯಿತ್ತು. ಎರಡು ಬಾರಿ ಬಂದಾಗಲೂ ಇಲ್ಲಿದ್ದ ತಣ್ಣನೆಯ ಹವೆ ಖುಷಿ ನೀಡಿತ್ತು. ಆದರೆ ಈಗ.. ಬೆಂಗಳೂರು ಅಕ್ಷರಶ: ಬೇಯುತ್ತಿದೆ. ಸುಡ್ತಿರೋ ಬಿಸಿಲಲ್ಲಿ, ಆಗಾಗ ಬಂದು ಫೂಲ್ ಮಾಡೋ ಮಳೆಯಿದ್ರೂ ಯಾಕೋ ಕಾಡೋ ಐಸ್ ಕ್ರೀಂ ನೆನಪುಗಳು.. ನೆನಪಾದಾಗೆಲ್ಲಾ ನಗಿಸೋ ಬಿಸಿ ಐಸ್ ಕ್ರೀಂ :-).. ಹೀಗೆ ಸುಡ್ತಿರೋ ಸೆಖೆಗೊಂಚೂರು ತಣ್ಣನೆ ನೆನಪುಗಳು ..    ಬಾಲ್ಯಕ್ಕೂ ಐಸಿಗೂ ಸಖತ್ ನಂಟಿದೆ 🙂 ಐಸ್ ಕ್ರೀಂ ಗಿಂತಲೂ ಮುಂಚೆ ನೆನಪಾಗೋದು ಐಸ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವ್ಯೂಹ:ಬೆಳ್ಳಾಲ ಗೋಪಿನಾಥ ರಾವ್

  ೧. ಸಂಶಯ ೧೦.೦೪.೨೦೧೨  "ಮಂಜೂ ನನ್ನ ಡೈರಿ ತೆಗೆದ್ಯಾ…….???" "ಇಲ್ಲ ಸರ್, ನಾನ್ಯಾಕೆ ನಿಮ್ ಡೈರಿ ತೆಗೀಲಿ ಸಾರ್.." "ಅಲ್ಲಪ್ಪಾ .. ಇಲ್ಲೇ ಮೇಜಿನ ಮೇಲೇ ಇಟ್ಟಿದ್ದೆ, ನೀನೇನಾದರೂ ನೋಡಿದ್ಯಾ ಅಂತ ಕೇಳಿದ್ದೆ ಅಷ್ಟೆ. ಅದು ಬೇಕೇ ಬೇಕು ಎಲ್ಲಾ ಡಿಟೈಲ್ಸ್ ಬೇರೆ ಅದರಲ್ಲೇ ಬರೆದಿಟ್ಟಿದ್ದೆ. ಇನ್ನು ಸೀನಿಯರ್ ಕಲ್ಲೂರಾಮ್ ಕರೆದ್ರೆ ಮುಗ್ದೇ ಹೋಯ್ತು ನನ್ನ ಕಥೆ. ಎಲ್ಲಾದರೂ ಸಿಕ್ಕಿದ್ರೆ ಹೇಳು ಆಯ್ತಾ." ಕರೆಕರೆ ವಾಣಿ ಗುರ್ರ್ರೆಂತು. ಹೋಮ್ ಮಿನಿಸ್ಟರ್.ಅರ್ಥಾತ್ ನನ್ನ ಧರ್ಮ ಪತ್ನಿ… "ಏನ್ರೀ..??" "ಆಯ್ತು…. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರೋಗ ಯಾವುದೆಂದು ಕೇಳುವ ವ್ಯವಧಾನವಿಲ್ಲದಿದ್ದರೂ…:ಶರತ್ ಎಚ್ ಕೆ

ಮೊನ್ನೆ ಬೆಳಿಗ್ಗೆ ಆಗಷ್ಟೇ ತಿಂಡಿ ತಿಂದು ಮನೆಯವರೆಲ್ಲ ಟೀವಿ ನೋಡುತ್ತ, ಪೇಪರ್ ಓದುತ್ತಾ ಕುಳಿತಿದ್ದೆವು. ಗೇಟ್ ತೆರೆದ ಸದ್ದಾಯಿತು. ಯಾರೆಂದು ನೋಡಿದರೆ ಚರಂಡಿ ಶುಚಿಗೊಳಿಸುವ ಮತ್ತು ಹೂದೋಟದ ಕಳೆ ಕೀಳುವ ಕೆಲಸ ಮಾಡುವ ಹುಡುಗ. ಅವನು ಈ ಹಿಂದೆ ಒಂದೆರಡು ಬಾರಿ ನಮ್ಮ ಮನೆ ಹೂದೋಟದ ಕಳೆ ಕಿತ್ತಿದ್ದ. ’ಕೆಲಸ ಇದ್ಯ’ ಅಂತ ಕೇಳ್ದ. ಬಾಗಿಲು ತೆರೆದ ಅಮ್ಮ ’ಇಲ್ಲ ಹೋಗಪ್ಪ’ ಅಂತೇಳಿ ಒಂದೇ ಮಾತಲ್ಲಿ ಅವನನ್ನು ಸಾಗಾಕಲು ಮುಂದಾದರು. ತಕ್ಷಣವೇ ಬಾಗಿಲು ಹಾಕಿದರು. ’ಅಮ್ಮ ತಿಂಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಚ್ಚು ಪ್ರೀತಿ:ದಿವ್ಯ ಆಂಜನಪ್ಪ

  ಹುಚ್ಚು ಖೋಡಿ ಮನಸು ಅದು ಹದಿನಾರರ ವಯಸು ಮಾತು ಮಾತಿಗೇಕೋ ನಗು ಮರು ಘಳಿಗೆಯೇ ಮೌನ ಕನ್ನಡಿ ಮುಂದಷ್ಟು ಹೊತ್ತು ಬರೆಯದಿರುವ ಕವನ… (ಹೆಚ್.ಎಸ್. ವೆಂಕಟೇಶ್ ಮೂರ್ತಿ)   ಹುಚ್ಚು ಪ್ರೀತಿ ಎಂದಾಕ್ಷಣ ಬಿ.ಆರ್.ಛಾಯಾರವರು ಹಾಡಿದ ಈ ಸಾಲುಗಳು ನೆನಪಾಗುತ್ತದೆ. ಎಷ್ಟು ಅರ್ಥಪೂರ್ಣ ಹಾಗೂ ಸತ್ಯ. ಮಾತು ಮಾತಿಗೂ ನಗು, ಸದಾ ಕಾಲ ಖುಷಿ, ಅದೇಕೋ ಮೌನ, ತನ್ನಂದವ ತಾನೇ ನೋಡಿ ನಲಿವ ಮನಸ್ಸು, ಹೇಗೆ ಕಾಣುವೆನೋ ತಿಳಿಯಲು ಕನ್ನಡಿ ಮುಂದಷ್ಟು ಹೊತ್ತು ಕಳೆವ, ಮನದಲ್ಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಪರೂಪಕ್ಕೊಂದ್ ಮದ್ವಿಗಿ ಹೋಗಿದ್ನಿರಿ (ಭಾಗ-೩):ರುಕ್ಮಿಣಿ ಎನ್.

ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ ಮನಸಿಗೆ ಹೌಸಿ ತರು ಮಲ್ನಾಡ್ ಸೀಮಿ ಅಲ್ಲ ಬಟ್ಟಾ ಬಯಲ್ ಸೀಮಿ ರೀ ನಮ್ದು. ದಾರಿ ಆಚಿಕ್-ಇಚಿಕ್ ಪೀಕ್ ಜಾಲಿ ಗಿಡಗೋಳ್, ಅಲ್ಲೆಟ್ ಇಲ್ಲೆಟ್ ಹಸಿ ಬಿಸಿ ಬೆಳದ್ ನಿಂತ ಬಂಬಲಕ್ಕಿ, ಹಂಗ ಬಂದಕ್ಯಾಸ್ ಸೊಡ್ಡನ್ ಮಕಕ್ಕ ಬಡದ್ ನೆತ್ತಿ ಸುಟ್ಟ ಹೋಗ್ತೈತೆನೋ ಅನ್ನು ಸುಡು-ಸುಡು ಬಿಸಲ್. ಕೆಂಡ್ ಉಡ್ಯಾಗಿಟ್ಕೊಂಡ್ ಬೀಸೂ ಬಿರುಗಾಳಿ, ಉರಿ ಉರಿ ಝಳ. ಗಾಳಿ ಪದರಿನ್ಯಾಗ್ ಕಟ್ಕೊಂಡ್ ಬರು ಹಾಳ್ ಮಣ್ಣ ಮಕದ ಮ್ಯಾಲ್ ಮನಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾವಕ್ಕೆ ಜೊತೆಯಾಗೋ ಭಾವ:ಭಾಗ್ಯ ಭಟ್

ಅದೆಲ್ಲೋ ಇದ್ದು ಮುಖವನ್ನೂ ನೋಡದಿರೋರ ಮಧ್ಯ ಸುಂದರ ಸ್ನೇಹವೊಂದು ಹೆಮ್ಮರವಾಗಿ ಬೆಳೆಯೋದು ಸಾಧ್ಯವೇ ಅನ್ನೋ ಅವಳ ಪ್ರಶ್ನೆಗೆ ನೇರಾ ನೇರಾ ಉತ್ತರ ಸಿಕ್ಕಿತ್ತು ಅವತ್ತು … "ಗೆಳತಿ, ಆತ್ಮೀಯತೆ ಬೆಳೆಯೋಕೆ ಇಂತದ್ದೆ ಸ್ಥಳ ಬೇಕೆಂದಿಲ್ಲ. ನನ್ನ ನಿನ್ನ ಈ ಸ್ನೇಹ ಎದುರು ಕೂತು ಮುಖ ನೋಡಿ ಮಾತಾಡಿಲ್ಲ ! ಗಂಟೆಗಟ್ಟಲೇ ಹರಟಿಲ್ಲ. ತೋಳಲ್ಲಿ ಮುಖ ಹುದುಗಿಸಿ ಅತ್ತಿಲ್ಲ….ಸಾಹಿತ್ಯವನ್ನು ಬಿಟ್ಟು ಬೇರೆ ಯಾವ ವೈಯಕ್ತಿಕ ಮಾತನ್ನೂ ಆಡಿರದ ಸ್ನೇಹ ಇದು! ಆದರೂ ಎದುರು ಬದುರು ಕೂತು ಮಾತಾಡಿದ,ಒಟ್ಟಿಗೆ ಕೂತು ಹರಟಿದ, ಕಣ್ಣಂಚಿನ ಕಣ್ಣೀರ ಒರೆಸಿದ ನನ್ನ ತುದಿಬೆರಳ ಸ್ನೇಹಕ್ಕಿಂತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕವಿತೆಗಳು:ನವೀನ್ ಮಧುಗಿರಿ ಹಾಗೂ ಎನ್.ಕೃಷ್ಣಮೂರ್ತಿ

ನಾನು ಕವಿಯಲ್ಲ ಪ್ರೇಮಿ..!   ನಿನ್ನಷ್ಟಕ್ಕೆ ನೀನು ಹೊಸೆ  ನನ್ನಿಷ್ಟಕ್ಕೆ ನಾನು ಬರೆವೆ!  ನಿನ್ನದು ಚಿಂತನ ಕಾವ್ಯ  ನನ್ನದು ಒಲವಿನ ಪದ್ಯ    ಮುಂದಿನ ಚರಣಗಳಿಗೆ ನಿನ್ನದು  ಪದಗಳ ಹುಡುಕಾಟದ ಪರದಾಟ  ನನ್ನದೇನಿಲ್ಲ ಪೂರಾ ಪದ್ಯವೂ  ಎದೆಯಾಳದಿಂದ ಬಂದ ಖುಷಿ-ಕಣ್ಣೀರುಗಳ ಸಮ್ಮಿಲನ    ನೀನು ಬರೆಯುವುದೆಲ್ಲ ನಿನಗೋ? ಕೃತಿಗಳ ಸಂಖ್ಯೆಗೋ? ಜನರಿಗೋ? ಜನಪ್ರಿಯತೆಗೋ? ಗೊತ್ತಿಲ್ಲ! ನಾನು ಬರೆಯುವುದು ಮಾತ್ರ ಬರೀ ನನಗೆ  ನನ್ನ ಕಣ್ಣೀರು-ಖುಷಿಗೆ.. ಅವಳ ಮರೆಯಬಾರದೆಂಬ ಕಾಳಜಿಗೆ!   ನಿನ್ನ ಕವಿತೆಗಳನ್ನೋದಿ ಮೆಚ್ಚಿಕೊಂಡದ್ದು  ಬೆನ್ನುತಟ್ಟಿದ್ದು ಬರೀ ಸಾಹಿತ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಡಂಕಿನ್ ಝಳಕಿ ರವರ ಚುಟುಕಗಳು

ರೋಷ   ಗಾಂಧಿಯಬುರುಡೆಯ ಮೇಲೆ   ಕೂತು ಕಾಗೆಯೊಂದು   ಕುಕ್ಕುತ್ತಿತ್ತು ರೋಷದಲಿ   ಬಳಿಸಾರಿ ಕೇಳಿದೆ ಏತಕ್ಕೆಂದು.   “ಮೂರ್ಖನಿವನು, ಗುಡಿಸಿಬಿಟ್ಟ   ಕೊಳಚೆ ಪ್ರದೇಶವನು   ಸಾಯಬೇಕಾಗಿದೆ ಹಸಿವಿನಿಂದ ನಾವಿನ್ನು”,   ಎಂದಿತು ನೊಂದು.   ಯಾರಿಗೆ?   ದುಂಬಿಗಳೆಲ್ಲಾ   ಮಲಗಿದ ಮೇಲೆ   ರಾತ್ರಿರಾಣಿ ಮೆಲ್ಲಗೆ   ವದ್ದೆ ಕನಸುಗಳ   ಕಂಪ ಚೆಲ್ಲಿ   ಕರೆವುದಾದರೂ   ಯಾರಿಗೆ? ದೃಷ್ಟಿ   ಬೈಬಲ್ ಪ್ರಾರ್ಥನೆ ನಡೆಯುತ್ತಿತ್ತು…   “ಒಂದು ಹಣ್ಣಿಗಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ