10k ಓಟ: ಪ್ರಶಸ್ತಿ ಅಂಕಣ

  ಹಿಂದಿನ ವರ್ಷ ಇದೇ ಸಮಯ. ಬೆಂಗಳೂರಿಗೆ ಕಾಲಿಟ್ಟ ಹೊಸತು. ಗೆಳೆಯರ ಬಾಯಲ್ಲಿ  10k 10k 10k.. ಎಂಬ ಝೇಂಕಾರ.. ಯಾರಾದ್ರೂ ಓಡ್ರಪ್ಪ, ಇದು ನನ್ನಿಂದೆಂತೂ ಆಗದ ಕೆಲಸ ಅಂತ ನನ್ನ ಭಾವನೆ. ಹಾಗಾಗಿ ಯಾರೇ ಈ ಬಗ್ಗೆ ಮಾತಾಡಕ್ಕೆ ಬಂದ್ರೂ ನಾನು ಇದ್ದ ಬುದ್ದಿಯನ್ನೆಲ್ಲಾ ಉಪಯೋಗಿಸಬೇಕಾಗಿ ಬಂದ್ರೂ ಉಪಯೋಗಿಸಿ ಅಲ್ಲಿಂದ ಎಸ್ಕೇಪ್ 🙂 ದಿನಾ ಬೆಳಬೆಳಗ್ಗೆ ಎದ್ದು ಓಡೋದಂದ್ರೆ ಏನು ಹುಡುಗಾಟನ ? ಬೆಂಗ್ಳೂರಿಗೆ ಬಂದ ಮೇಲೆ ಆಲಸ್ಯವೇ ನಾನು ಅಂತಾಗಿದ್ದೋನು ಮತ್ತೆ ಎದ್ದು ಓಡೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುಂಬೈಗೆ ಕಿರಣ್ ಳ ಪ್ರೇಮಪತ್ರ: ವಾಸುಕಿ ರಾಘವನ್

  ಜಾಗಗಳೂ ಕೂಡ ಪಾತ್ರಗಳಾದಾಗ ಚಿತ್ರಗಳಿಗೆ ಇನ್ನೊಂದು ಆಯಾಮ ಸೇರಿಕೊಳ್ಳುತ್ತದೆ. “ನಾಗರಹಾವು” ಚಿತ್ರದ ಚಿತ್ರದುರ್ಗ, “ಕಹಾನಿ” ಚಿತ್ರದ ಕೋಲ್ಕೊತ, “ಸತ್ಯ”ದ ಮುಂಬೈ, “ಗಾಡ್ ಫಾದರ” ನ ಸಿಸಿಲಿ – ಈ ಎಲ್ಲಾ ಚಿತ್ರಗಳಲ್ಲೂ ಆ ಜಾಗಗಳೇ ಒಂದು ಪಾತ್ರವಾಗಿವೆ.  ಇದಕ್ಕೆ ಹೋಲಿಸಿದರೆ, ಜಾಗವನ್ನೇ ಪ್ರಮುಖ ಪಾತ್ರವಾಗಿ ಇಟ್ಟುಕೊಂಡು ತೆಗೆದಿರುವ ಚಿತ್ರಗಳು ಕಡಿಮೆ. ಕಿರಣ್ ರಾವ್ ನಿರ್ದೇಶನದ “ಧೋಬಿ ಘಾಟ್” ಅಂತಹ ಒಂದು ಅಪರೂಪದ ಚಿತ್ರ. ಇದು ಮುಂಬೈಗೆ ಆಕೆ ಬರೆದಿರುವ ಪ್ರೇಮಪತ್ರ! ಚಿತ್ರದಲ್ಲಿ ನಾಲ್ಕು ಎಳೆಗಳಿವೆ.  ಅರುಣ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-4):ಹಿಪ್ಪರಗಿ ಸಿದ್ದರಾಮ್

  ಹಿಂದಿನ ಭಾಗ ಓದಲು ಇಲ್ಲಿ ಕ್ಲಿಕ್ಕಿಸಿ. ಈ ಮೊದಲಿನ ದೃಶ್ಯಗಳಲ್ಲಿ ಕೌರವಕುಲೇಂದ್ರನ್, ಕುರುಪತಿ, ಕೌರವೇಂದ್ರ, ಕುರುಚಕ್ರವರ್ತಿ, ದುರ್ಯೋಧನನೆಂದು ಪಾತ್ರಗಳ ಸಂಭಾಷಣೆಗಳಲ್ಲಿ ಉಲ್ಲೇಖವಾಗುತ್ತಿದ್ದ ಪಾತ್ರವು ರಂಗದಲ್ಲಿ ಬರುವುದರೊಂದಿಗೆ ನಾಟಕವು ಉತ್ತುಂಗಸ್ಥಿತಿಗೇರಿ ಕಳೆಕಟ್ಟಲಾರಂಭಿಸುವುದು ಆರನೇಯ ದೃಶ್ಯದಿಂದ, ರಣಭೂಮಿಯ ಕರಾಳತೆಯು ತುಂಬಿಕೊಂಡಿರುವ ವೈಶಂಪಾಯನ ಸರೋವರದ ದಡದಲ್ಲಿ ಕತ್ತಲೆ ಕವಿದಿರುವಾಗ ಗದಾಯುದ್ಧದಲ್ಲಿ ಕೃಷ್ಣನ ಕುತಂತ್ರದ ಫಲವಾಗಿ ಭೀಮನಿಂದ ತೊಡೆಮುರಿದುಕೊಂಡು ವಿಷಾದದ ನೋವಿನೊಂದಿಗೆ ನೆಲಕ್ಕುರುಳಿರುವ ಅಷ್ಟಾದಶಾಕ್ಷೋಹಿಣೀ ಒಡೆಯನಾಗಿ ಮೆರೆದಾಡಿದ್ದ ಚಕ್ರವರ್ತಿ ದುರ್ಯೋಧನ ಮಹಾರಾಜರು ದೇಸಿಗನಂತೆ ಹೊರಳಾಡುತ್ತಿದ್ದಾರೆ. ‘ಎಲವೋ ಅಗಸ್ತ್ಯ ನಕ್ಷತ್ರವೇ…’ಎಂಬರ್ಥದಲ್ಲಿ ಇದ್ದರೂ ಇಲ್ಲದವನಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡಿಪೋ ಅಕ್ಕಿ: ಹನಿಯೂರು ಚಂದ್ರೇಗೌಡ

  "ನ್ಯಾಯಬೆಲೆ ಅಂಗಡಿ" ಎಂಬೀ ಮೂರಕ್ಷರದ ಬೋರ್ಡಿನತ್ತ ಗಮನವಹಿಸಿದರೆ, ನನ್ನ ಮನವು ಪುಲಕಿತಗೊಳ್ಳುತ್ತದೆ. ಚನ್ನಪಟ್ಟಣ ತಾಲೂಕು ಬಹುತೇಕವಾಗಿ ಮಳೆಯನ್ನಾಶ್ರಯಿಸಿದ, ಅಲ್ಲಲ್ಲಿ ಕೊಂಚ ಪಂಪ್ ಸೆಟ್ಟನ್ನಾಶ್ರಯಿಸಿದ ಬೇಸಾಯ ಪದ್ದತಿಯನ್ನು ಹೊಂದಿದೆ. ಇಂಥ ತಾಲೂಕಿನ ನಮ್ಮನ್ನೂ ಸೇರಿಸಿ ಎಷ್ಟೋ ಜನರಿಗೆ ಅನ್ನದ ಆಸರೆಯಾಗಿದ್ದು ಮಾತ್ರ ಈ ಸೊಸೈಟಿಯ ಅಕ್ಕಿಯೇ. ನಾನು ಚಿಕ್ಕವನಾಗಿದ್ದಾಗ ನನ್ನ ಅಪ್ಪ-ಅವ್ವನ ಜತೆಯಲ್ಲಿ ತಿಂಗಳಿಗೊಂದಾವರ್ತಿ ಬರುತ್ತಿದ್ದ ಈ ಅಕ್ಕಿಯನ್ನು ತರಲು ಡಿಪೋ ಅಥವಾ ಸೊಸೈಟಿಗೆ ಹೋಗುತ್ತಿದ್ದದ್ದು, ಅದನ್ನು ನಾನೇ ಬಹಳ ಉತ್ಸಾಹದಿಂದ ಹೊತ್ತು ತರುತ್ತಿದ್ದದ್ದು ಈಗಲೂ ಪುಳಕಗೊಳಿಸುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮಪ್ಪನೇ ಈಗ ಸೊಸೈಟಿಯ ಅಧ್ಯಕ್ಷ: ಡಾ. ಗವಿ ಸ್ವಾಮಿ

  ನಮ್ಮ ಸಂಪಾದಕರ  ಟೈಮ್ ಲೈನನ್ನು ಜಾಲಾಡುತ್ತಿದ್ದೆ. ಅರೆ, ಡಿಪೋ ಅಕ್ಕಿಯ ಬಗ್ಗೆ ಲೇಖನ ಕಳಿಸಬೇಕಂತೆ ಪಂಜು ವಿಶೇಷ ಸಂಚಿಕೆಗಾಗಿ! ಛೇ ನಾನು ಇದನ್ನು ಮೊದಲೇ ಗಮನಿಸಬಾರದಿತ್ತಾ. ಇನ್ನೊಂದೇ ದಿನ ಬಾಕಿ ಇದೆ. 18ಕ್ಕೆ ಡೆಡ್ ಲೈನ್. ಬರೆಯಲೇಬೇಕು.  ಏನಾದರೂ ಬರೆಯಲೇಬೇಕು. ಆ ಹಕ್ಕು ನನಗಿದೆ. ಬಹುಶಃ ಡಿಪೋ ಅಕ್ಕಿಯ ಬಗ್ಗೆ  ಅಧಿಕಾರಯುತವಾಗಿ ಮಾತನಾಡುವ ಹಾಗು ಬರೆಯುವ ಹಕ್ಕು ಇರುವುದು ಅದರ ರುಚಿ ನೋಡಿದವರಿಗೆ ಮಾತ್ರ! ಅವರಲ್ಲಿ ನಾನೂ ಒಬ್ಬ . ಅದಕ್ಕೇ ಹೇಳಿದ್ದು ನನಗೆ ಹಕ್ಕಿದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಿರೀಶ ಕಾಸರವಳ್ಳಿ ಮತ್ತು ಚಲನಚಿತ್ರಗಳು: ಮಹದೇವ ಹಡಪದ್

  ಮನುಷ್ಯ ಪ್ರೀತಿ, ಮಾನವೀಯ ಅನುಕಂಪ, ಪರಿಸರ ಕಾಳಜಿ, ದೇಶ-ಭಾಷೆ, ಸಂಬಂಧಗಳು, ಸಮಾಜದ ಓರೆ-ಕೋರೆ, ತೊಡುಕು-ಕೆಡುಕಗಳನ್ನು ತನ್ನ ಹೊಟ್ಟೆಯಲ್ಲಿಟ್ಟುಕೊಂಡಿರುವ ಕಲುಷಿತ ಸಾಮಾಜಿಕ ಆವರಣ, ಆ ಆವರಣದ ನಡುವೆ ಬದುಕಿಗಾಗಿ ಹಂಬಲಿಸುವ, ಮನಮಿಡಿಯುವ ಮುಗ್ಧತೆ, ನ್ಯಾಯಕ್ಕಾಗಿ ಹೋರಾಡುವ, ಇರುವಿಕೆಯನ್ನು ಮುಟ್ಟಿನೋಡಿಕೊಳ್ಳುವ ಪಾತ್ರಗಳು… ಇಂಥ ಅನುಭವವನ್ನು ಗಾಢವಾಗಿ ಕಟ್ಟಿಕೊಡುವ ಶಕ್ತಿ ಕಾಸರವಳ್ಳಿಯವರ ಎಲ್ಲಾ ಸಿನೆಮಾಗಳ ಆವರಣದಲ್ಲಿದೆ. ಕತೆ, ಘಟನೆಯ ಓಘದಲ್ಲಿ ಪಾತ್ರಗಳು  ಅನಾವರಣಗೊಳ್ಳುವ ಬಗೆಯನ್ನು ಸಮರ್ಥವಾಗಿ ಚಿತ್ರದ ಚೌಕಟ್ಟಿನಲ್ಲಿಟ್ಟಿರುವ ಹಲವು ಚಿತ್ರಗಳ ಗೊಂಚಲು  ಕನ್ನಡದಲ್ಲಿ ಬಂದಿವೆ. ಅವೆಲ್ಲವವೂ ಮೂಲ ಆಕರವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಣಬು ಸುಡುವುದು: ರಾಜೇಂದ್ರ ಶೆಟ್ಟಿ

ಹತ್ತು ವರ್ಷಗಳು! ಹೇಗೆ ಕಳೆದು ಹೋದವು. ಅಂದು, ಇಂತಹದೇ ಬಸ್ಸಿನಲ್ಲಿ ಮುಂಬಾಯಿಗೆ ಓಡಿ ಹೋಗಿದ್ದೆ. ಇಂದು ರಜಾದಲ್ಲಿ ಹಿಂದೆ ಬರುತ್ತಿದ್ದೇನೆ. ಈ ಹತ್ತು ವರ್ಷಗಳಲ್ಲಿ ಊರಲ್ಲಿ ಏನೇನು ಆಗಿದೆಯೋ, ಯಾರು ಇದ್ದಾರೋ, ಯಾರು ಇಲ್ಲವೋ ಯಾರಿಗೆ ಗೊತ್ತು. ಇಷ್ಟೊಂದು ದಿನಗಳಲ್ಲಿ ಊರಿಗೆ ಪತ್ರವನ್ನೇ ಬರೆದಿಲ್ಲ. ಊರಿಗೆ ಬರುವುದು ಸಹ ಯಾರಿಗೂ ಗೊತ್ತಿಲ್ಲ. ಜೀವನದಲ್ಲಿ ಎಷ್ಟೊಂದು ತಿರುವುಗಳು! ಅಪ್ಪನ ಕಿಸೆಯಿಂದ ಹಣ ತೆಗೆದಿದ್ದೆ –ಐಸ್ ಕ್ಯಾಂಡಿ ತಿನ್ನಲು. ಅದು ಕಳ್ಳತನವೆಂದು ಅಪ್ಪ ಎಷ್ಟು ಹೊಡೆದಿದ್ದ. ಆವಾಗ ನನ್ನ ವಯಸ್ಸಾದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನವೀನ ಕಹಾನಿ: ನವೀನ್ ಮಧುಗಿರಿ

ದೇವರ ದರ್ಶನ  ದೇವರಲ್ಲಿ ನನಗೆನಂಬಿಕೆಯಿಲ್ಲವಾದ್ದರಿಂದ, ಬೆಳಗೆದ್ದ ಕೂಡಲೇ ದೇವರ ಮುಖ ನೋಡಬೇಕು. ಬಲಕ್ಕೆ ಏಳಬೇಕು ಎಂಬೆಲ್ಲಾ ಯಾವ ನಿಯಮ ಮತ್ತು ಕಟ್ಟುಪಾಡುಗಳು ನನಗಿಲ್ಲ. ಇವತ್ತು ನಾನು ಮೇಲೆದ್ದಿದ್ದೇ  ಎಡಮಗ್ಗುಲಿನಲ್ಲಿ! ಎದ್ದು ಕೂತು ಕಣ್ ಬಿಡುವ ವೇಳೆಗೆ ಕಣ್ಣೆದುರಿಗಿದ್ದ ಅಮ್ಮಾ ಹೇಳಿದಳು- "ದೇವರ ಮುಖ ನೋಡು" ನಾನೆಂದೆ- "ಅಮ್ಮಾ, ನೀನೇ ನನ್ನ ದೇವರು!" ಭಾವುಕಳಾದ ಅಮ್ಮಾ ತನ್ನೆರಡೂ ಕೈಗಳಲ್ಲಿ ನನ್ನ ಕೆನ್ನೆ ಸವರಿ ನೆಟಿಗೆ ತೆಗೆದಳು!! ದೃಷ್ಟಿ-ಸೃಷ್ಟಿ  "ಮಾಂಸಾಹಾರಗಳನ್ನ ಯಾರು ಕೊಟ್ಟರೂ ತಿನ್ನಬೇಡ. ಎಲ್ಲಿಯೂ ತಿನ್ನಬೇಡ. ಅದು ನಮ್ಮ ಮನೆ ದೇವರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಳೆಯಲ್ಲಿ ಇಳೆಯ ತೊರೆದವಳು: ರಾಮಚ೦ದ್ರ ಶೆಟ್ಟಿ

ಮಳೆ ಜೊರ್ರನೆ ಸದ್ದು ಮಾಡುತ್ತ ಕ೦ಡಕ೦ಡಲ್ಲಿ ಬೀಳತೊಡಗಿತ್ತು….ಎಲ್ಲೆಲ್ಲು ಮಳೆ ಧಾರಾಕಾರ ಮಳೆ….ಅಲ್ಲಿ ಗಾಳಿಯಲ್ಲಿ ತೇಲಾಡುತ್ತ ಓಲಾಡುತ್ತ ನಶೆಯೇರಿದ ಕುಡುಕನ೦ತೆ ಬುವಿಯ ದಾರಿ ಹಿಡಿದು ಅವುಗಳು.. ಮಳೆಹನಿಗಳು ನಡೆದುಬರುತ್ತಿರುವ ನೋಟ ಮೋಹಕವಾಗಿತ್ತು..ಮಲೆನಾಡಿನಲ್ಲಿ ಈ ತರದ ಮಳೆ, ಮಳೆಗಾಲದಲ್ಲಿನ ಈ ತರದ ವಾತಾವರಣ ಹೊಸದೆ..? ಮನದಲ್ಲೆ ಕೇಳಿಕೊ೦ಡನವನು..ಈ ಪ್ರಶ್ನೆಯು ಹೊಸದಲ್ಲ..ಕಳೆದು ಹೋದ ಮಳೆಗಾಲದಲ್ಲೆಲ್ಲ ಮೂಡಿದ್ದು೦ಟು. !ಎದುರಿನ ಆಗು೦ಬೆ ಬೆಟ್ಟ ತನ್ನ ಅಗಾಧವಾದ ರೂಪರಾಶಿಯನ್ನು ಮಳೆಯ ಹಿ೦ದೆ ಮರೆಮಾಚಿದ್ದು ಅಸ್ಪಷ್ಟತೆಯ ದೃಷ್ಟಿ ನೋಟದ ಮೂಲಕ ಅರಿವಿಗೆ  ಬರುತ್ತಿದೆ..ನಿನ್ನೆ ಆಗು೦ಬೆಯ ರಸ್ತೆಯಲ್ಲಿ ದೊಡ್ಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಹನುಮಂತ ಹಾಲಿಗೇರಿ, ನಾಗರಾಜ್ ಹರಪನಹಳ್ಳಿ, ಅಕ್ಷತಾ ಕೃಷ್ಣಮೂರ್ತಿ

ಮತ್ತೊಂದು ಗೋಮುಖ ಓ ಜನರೆ ನನಗೂ ಬಯಕೆಗಳಿವೆ, ಬಯಕೆ ಬೆಂಕಿಯ ಬೇಗೆ ತಾಳಲಾರೆ,  ಒಮ್ಮೆ ಅನುಭವಿಸಲು ಬಿಡಿ ನಿಮಗೆ ದಮ್ಮಯ್ಯ ಅಂತಿನಿ   ಅನ್ನದೆ ವಿಧಿಯಿಲ್ಲ, ಪ್ರತಿಭಟನೆಯ ದಾರಿ ಕಾಣದ, ಮತಿ ಇರದ ಮಾತು ಬಾರದ, ದನ ನಾನು ಹುಟ್ಟಿದಾಗ ತಾಯಿ ಕೆಚ್ಚಲಿಗೆ ಬಾಯಿ ಹಾಕಿದರೆ ಜಗ್ಗಿ ಕಟ್ಟಿದಿರಿ ತೊರೆ ಬಿಟ್ಟ  ತಾಯ ಕೆಚ್ಚಲ ಬಕೇಟಿಗೆ ಬಸಿದಿರಿ ಮುಸು ಮುಸು ಮುಸುಗುಟ್ಟಿ ಮೌನವಾದಳು ನನ್ನ ಮೂಕ ತಾಯಿ ನನ್ನ ಪಾಲದು ನನಗೆ ಕೊಡಿ ಎಂದು ಹಕ್ಕಿನ ಮಾತಾಡಿಲಿಲ್ಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಚಿಕ್ಕಾತಿಚಿಕ್ಕ ಪಾತ್ರಗಳು:ವಾಸುಕಿ ರಾಘವನ್

  “ಪೂರೇ ಪಚಾಸ್ ಹಜಾರ್” ಮೂರೇ ಪದಗಳು! ಹೇಳಿದವನು ಮಕಿಜಾನಿ ಮೋಹನ್ ಅಲಿಯಾಸ್ ಮ್ಯಾಕ್ ಮೋಹನ್. ಸಾಮಾನ್ಯವಾಗಿ ಖಳನಾಯಕನ ಚೇಲಾ ಪಾತ್ರಗಳಿಂದ ನಮಗೆ ಪರಿಚಿತನಾಗಿರುವ ಆತ ನಟಿಸಿರುವ ಇನ್ನೂರಕ್ಕೂ ಹೆಚ್ಚು ಚಿತ್ರಗಳ ತೂಕ ಒಂದಾದರೆ, ಈ ಪಾತ್ರದ್ದೇ ಒಂದು. ಇದು ಪೋಷಕ ಪಾತ್ರ ಅಂತಲೂ ಹೇಳಲಾಗದಷ್ಟು ಚಿಕ್ಕಾತಿಚಿಕ್ಕ ಪಾತ್ರ. ಆದರೆ ಇವತ್ತಿಗೂ ಗಬ್ಬರ್ ಸಿಂಗ್ ಎಷ್ಟು ಫೇಮಸ್ ಆಗಿದ್ದಾನೋ ಮೂರೇ ಪದ ಹೇಳಿರುವ ಸಾಂಭಾ ಕೂಡ ಅಷ್ಟೇ ಫೇಮಸ್! “ಮೇರೆ ಸಪ್ಪನೋ ಕೀ ರಾಣಿ ಕಬು ಆಯೇಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ಮಾಲಿನಿ ಭಟ್ ರವರ ಚುಟುಕಗಳು

  ೧.)   ಹುಚ್ಚುಮನಸು ಕಂಡೂ ಕಾಣದ ಮನದ ಚಿತ್ತದಲ್ಲಿ ಸುಪ್ತವಾಗಿ ಕದಡಿ ನಿಂತಿದೆ, ಯಾರು ಕೇಳದಂತಹ ಕಲ್ಪನೆ ರೂಪ ನೀಡಲಾಗದೆ ಅವಿತಿದೆ.   ೨.)ಸ್ವಾರ್ಥ ಜೀವನದ ಪ್ರತಿಕ್ಶಣನು ಬಯಸುತ್ತೇವೆ ನಮಗಾಗಿ ಒಂದು ಜೀವ ಇರಬೇಕು ಆದರೆ ಯಾವ ಸಮಯವು ಯೋಚಿಸುವುದಿಲ್ಲ ಬೇರೆಯವರಿಗಾಗಿ ನಾವು ಇರಬೇಕು   ೩) ಬದುಕಲ್ಲಿ ದುಃಖವೋ ಸುಖವೋ ಏನುಂಟು ಏನಿಲ್ಲ ಹೇಳಲಾಗದ ಚಿತ್ರಿಸಲಾಗದ ಒಗಟನ್ನು ಬಿಡಿಸುವ ಪರಿ ಏನು?   ೪) ಕಣ್ಣು ಕಾಣದಾದಾಗ ಎಷ್ಟು ವೈಭವ ಇದ್ದರೇನು ಮನಸು ಸೋತಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-3):ಹಿಪ್ಪರಗಿ ಸಿದ್ದರಾಮ್

  ಹೆಣ್ಣಿನ ಆತ್ಮವಿಶ್ವಾಸ, ಛಲ ಮತ್ತು ಅಸಾಧ್ಯವಾದುದನ್ನು ಸಾಧ್ಯಮಾಡುವ ಶಕ್ತಿಯ ದ್ಯೋತಕವಾದ ಮಹಾಕವಿ ಕುವೆಂಪುರವರ ‘ಯಮನ ಸೋಲು’ ರಂಗಕೃತಿಯಲ್ಲಿ ಪ್ರೇಮಾನುರಾಗವು ಧರ್ಮವನ್ನು ಮೀರಿದುದು ಎಂಬ ಮಾತನ್ನು ಸಾಧಿಸುವುದರೊಂದಿಗೆ ಪ್ರೇಮಮಯಿಯಾದ ಸಾವಿತ್ರಿಗೆ ಯಮರಾಯನು ಸೋತಿದ್ದು ಆಶ್ಚರ್ಯಕರ ಸಂಗತಿಯಲ್ಲ ಎನ್ನುವ ಆಶಾಭಾವದ ನುಡಿಯೊಂದಿಗೆ, ಇಲ್ಲಿ ಯಮರಾಯನ ಸೋಲು ಹೆಣ್ಣಿನ ಆತ್ಮವಿಶ್ವಾಸದ ಮೂಲಕ ಸಾಧ್ಯ ಎಂಬ ವಿಚಾರವನ್ನು ಮಹಾಕವಿಗಳು ಪ್ರಸ್ತುತಪಡಿಸಿರುವುದನ್ನು ಹಿಂದಿನ ಸಂಚಿಕೆಯಲ್ಲಿ ನೋಡಿದ್ದೇವೆ. ಈಗ ಮಹಾಕವಿಗಳ ರಂಗಯಾತ್ರೆಯಲ್ಲಿಯ ಮತ್ತೊಂದು ಪೌರಾಣಿಕ ರಂಗಕುಸುಮ ಮತ್ತು ಕಳೆದ ಶತಮಾನದಲ್ಲಿ ಅನೇಕ ವೃತ್ತಿನಾಟಕ ಕಂಪನಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಕ್ಷಕ-ಪರಿಣಾಮ : ಮಹದೇವ ಹಡಪದ್

ಉಪದೇಶ, ಸಂದೇಶ, ನೀತಿಯನ್ನು ಹೆಳಬೇಕಾದ್ದು ಕಲೆಯ ಉದ್ಧೇಶವೆಂದೂ ಅದೇ ವಿಧಾನದಲ್ಲಿಯೇ ಪ್ರದರ್ಶನಗಳು ಆಸ್ವಾದನೆಗೆ ಸಿಕ್ಕಬೇಕೆಂದು ಬಯಸುವುದು ಸಾಮಾನ್ಯವಾಗಿ ಎಲ್ಲ ವಯೋಮಾನದ ಪ್ರೇಕ್ಷಕರಲ್ಲೂ ಇದ್ದೆ ಇರುತ್ತದೆ. ಈ ಜನಪ್ರಿಯ ಬೇಡಿಕೆಯೂ ಆಯಾ ವಯಸ್ಸಿಗನುಗುಣವಾದ ರೀತಿಯಲ್ಲಿ ವ್ಯಕ್ತಗೊಳ್ಳುತ್ತದೆ. ಹುಸಿ ಮೌಲ್ಯಗಳನ್ನ ಬಿತ್ತರಿಸುವುದನ್ನು ಪ್ರೇಕ್ಷಕ ಬಯಸುತ್ತಾನೆಂದು ರುಚಿ ಬದಲಿಸುವ ಪ್ರಯತ್ನ ಮಾಡದಿರುವುದು ತಪ್ಪು. ಕನ್ನಡದ ಚಿತ್ರರಂಗ ಚರಿತ್ರೆಯಲ್ಲಿ ಹೊಸ ಅಲೆಯ ಸಿನೆಮಾಗಳಲ್ಲಿ ಮೊತ್ತಮೊದಲಿನದು ಎಂದು ಗುರುತಿಸಲಾಗುವ “ಸಂಸ್ಕಾರ”ದ ಯಶಸ್ಸಿಗೆ ಕಾರಣರಾದ ಅದೆ ಜನ ಈಗ ಆ ಶೈಲಿಯ ಸಿನೆಮಾಗಳನ್ನು ನೋಡಲಾರರೆಂದು ಹೇಳುವುದಾದರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಹಸ-ಸಾವುಗಳ ನಡುವಣ ಚಾರಣ..: ಪ್ರಶಸ್ತಿ ಅಂಕಣ

  ನೀರಿದ್ದಲ್ಲೆಲ್ಲಾ ಹೋಗದಾದ್ರೆ ಹೋಗ್ಲೇಬೇಡ ಅನ್ನೋ ಅಮ್ಮ, ಹುಡುಗ್ರು.. ಏನೋ ಆಸೆ ಪಟ್ತಿದಾರೆ ಸೇಫಾಗಿ ಹೋಗ್ಬರ್ಲಿ ಬಿಡು ಅನ್ನೋ ಅಪ್ಪ, ಹುಚ್ಚುಕೋಡಿ ಮನಸು.. ಇದು ಹದಿನಾರರ ವಯಸು ಎಂಬೋ ಕವಿವಾಣಿಯ ತರಹದ ಹುಚ್ಚು ಮನಸಿನ ಸ್ವಲ್ಪ ಹೆಚ್ಚೇ ಧೈರ್ಯದ , ರೋಚಕ ಕನಸುಗಳ ಹುಡುಗರು… ಯಾವುದೇ ಚಾರಣ ಅಂದಾಗ ಈ ಮೂರು ಚಿತ್ರಗಳು ಮನಸ್ಸಿಗೆ ಬಂದೇ ಬರುತ್ತೆ. ಚಾರಣದಲ್ಲಿ ಸಾಹಸ ಮತ್ತು ಸಾವುಗಳ ನಡುವೆ ಕೂದಲೆಳೆಯ, ಕೆಲವಕ್ಷರಗಳ ವ್ಯತ್ಯಾಸವಷ್ಟೇ. ಕುಮಾರಪರ್ವತದಿಂದ ಕೊಡಚಾದ್ರಿಯವರೆಗಿನ ಚಾರಣಗಳಲ್ಲಿ, ಜಲಪಾತದ ಜಾರುಗಳಲ್ಲಿ, ನೀರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾತಿ! :ಡಾ. ಗವಿ ಸ್ವಾಮಿ

  ನಾಗರಹೊಳೆ ಮತ್ತು ಬಂಡಿಪುರ ರಾಷ್ಟ್ರೀಯ ಉದ್ಯಾನವನಗಳ ನಡುವೆ ಓಂಕಾರ್ ರೇಂಜ್ ಎಂಬ ಅರಣ್ಯ ಇದೆ. ಅದರ ಸೆರಗಿನಲ್ಲಿ ಶಿವಕುಮಾರಪುರ ಎಂಬ ಗ್ರಾಮ ಇದೆ. ಆ ಗ್ರಾಮದ ಜನರಿಗೆ ನಿತ್ಯವೂ ಕಾಡುಪ್ರಾಣಿಗಳೊಂದಿಗೆ ಸಂಘರ್ಷ ನಡೆಸಬೇಕಾದ ಪರಿಸ್ಥಿತಿ . ಇಂಡೋ-ಪಾಕ್ ಗಡಿಗಿಂತ ಒಂದು ಕೈ ಹೆಚ್ಚು ಉದ್ವಿಗ್ನತೆಯನ್ನು ಇಲ್ಲಿ ಕಾಣಬಹುದು. ಕಾಡು ಪ್ರಾಣಿಗಳೇ ಇಲ್ಲಿ ರೈತರ ಪಾಲಿನ terrorist ಗಳು! ರೈತರಿಗೂ ಫಾರೆಸ್ಟಿನವರಿಗೂ ಇಲ್ಲಿ ನಿರಂತರ ತಿಕ್ಕಾಟ. ನಮ್ಮ ದನಗಳನ್ನು ಫಾರೆಸ್ಟಿನ  ಬೌಂಡರಿ ದಾಟಲು ಬಿಡುವುದಿಲ್ಲ; ಹಿಂದೆಲ್ಲಾ ಸಣ್ಣ ಪುಟ್ಟ ಕಟ್ಟಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡಿಗರ ಬೇಜವಾಬ್ದಾರಿಯಿಂದಲ್ಲವೆ ಕನ್ನಡನಾಡು ಪರಭಾಷಿಕರಿಂದ ತುಂಬುತ್ತಿರುವುದು….? : ನಿಶಾಂತ್ ಜಿ.ಕೆ

      ಮೊನ್ನೆ ಧಾರವಾಡದಿಂದ ಬೆಂಗಳೂರಿಗೆ ಹೋಗಿದ್ದೆ ಹಾಗೆ ಕಾರ್ಯ ನಿಮಿತ್ತ ಹೋದವನು ಅಲ್ಲೆ ರಾಜರಾಜೇಶ್ವರಿ ನಗರದಲ್ಲಿರುವ ಅಕ್ಕನ ಮನೆಗೆ ಭೇಟಿ ಇತ್ತೆ, ಹೋದ ಕೂಡ್ಲೆ ಎಲ್ಲಿಲ್ಲದ ಖುಷಿಯಿಂದ ಓಡಿ ಬಂದ ಪುಟ್ಟ ಪ್ರಾರ್ಥನ ಕೈ ಹಿಡಿದು ಒಳಗೆ ಎಳೆದೊಯ್ದು ತನ್ನ ಹೊಸ ಆಟಿಕೆಗಳನ್ನ ತೋರಿಸೋಕೆ ಶುರು ಮಾಡಿದ್ಲು, ಸ್ವಲ್ಪ ಸಮಯ ವಿಶ್ರಾಂತಿ ಬಳಿಕ ಮತ್ತೆ ಅವರು ಕಟ್ಟಿಸುತ್ತಿರುವ ಹೊಸ ಮನೆ ತೋರಿಸೋಕೆ ಇಲ್ಲೆ ವಾಕಿಂಗ್ ಹೋಗೋಣ ಬಾ ಮಾಮ ಅಂತ ಕರೆದುಕೊಂಡ್ ಹೋದ್ಲು. ಹೋದ ಸ್ವಲ್ಪ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅರ್ಥವಾಗದವರು:ಉಮೇಶ್ ದೇಸಾಯಿ

  ವಾಸುದೇವ ಸುಳ್ಳದ ಗಲಿಬಿಲಿಗೊಂಡಿದ್ದ ಅವನ ಸ್ಥಿತಿಗೆ ಕಾರಣ ಬೆಂಗಳೂರಿನ ಗಿಜಿಗುಡುವ ಟ್ರಾಫಿಕ್ ಮಾತ್ರ ಕಾರಣವಾಗಿರದೇ ಅಂದು ಮುಂಜಾನೇ ಅವ್ವ ಮಾಡಿದ ಫೋನೂ ಕಾರಣವಾಗಿತ್ತು. ಅವ್ವ ಫೋನು ಮಾಡಿ ಅಂದು ಸಂಜೆ ಕಲ್ಯಾಣ ಕಾಕಾನಿಗೆ ಭೇಟಿಯಾಗಬೇಕೆಂದೂ ಹೆಚ್ಚಿನ ವಿಷಯ ಅವನಿಂದಲೇ ತಿಳಿಯುವುದಾಗಿ ಹೇಳಿದ್ದಳು. ವಾಸು ಕೆದಕಿ ಕೇಳಿದರೂ ಅವ್ವ ಬಾಯಿ ಬಿಟ್ಟಿರಲಿಲ್ಲ. ಮಧ್ಯಾಹ್ನ ಲಂಚ ನಲ್ಲಿ ಕಲ್ಯಾಣಕಾಕಾನ ಫೋನು ಬಂದಾಗ ವಾಸು ಅಂದಿನ ಸಂಜೆ ಭೇಟಿಯಾಗುವುದಾಗಿ ಹೇಳಿದ್ದ. ಆ ಕಾರ್ಯಕ್ರಮದ ಅನ್ವಯವೇ ಆಫೀಸಿನಿಂದ ಬೇಗನೆ ಹೊರಟವ ಕಾರ್ಪೊರೇಷನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು

  ಅಮ್ಮ ಲಾಲಿ ಜೋ  ಅಮ್ಮ ನೀನೆ ಬಂದು ನೋಡು  ಬರೆದ ನಾನು ನಿನ್ನ ಮೊಗವ  ನಾ ನಿನಗೆ ತೋರುವ ಮುನ್ನಾ  ಯಾಕೆ ಅಮ್ಮ ದೂರವಾದೆ ಇನ್ನಾ  ಪುಟ್ಟ ಕಂಗಳು ಸುತ್ತ ನೋಡಿ  ಕೇಳುತಿಹವು ನನ್ನಾ … ನೀ ಬಂದು ಲಾಲಿ ಹಾಡೆ  ಅಮ್ಮ  ಲಾಲಿ ಲಾಲಿ ಜೋ ಲಾಲಿ ಹಾಡೆ  ಅಮ್ಮ  ಲಾಲಿ ಲಾಲಿ ಜೋ ಲಾಲಿ ಹಾಡೆ  ಅಮ್ಮ    ಕಣ್ಣೆ ಇರದ ಶಿವನೆ ನೋಡು  ಕರುಳ ಬಳ್ಳಿ ಕತ್ತರಿಸಿ ಕೊಟ್ಟ ಅವಳ  ಎದೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂಕ ಪ್ರೇಮ: ಮಹಾಂತೇಶ್ ಯರಗಟ್ಟಿ

  ಕೌಸಲ್ಯ ರಾಮ ಪೂಜಾ ಸಂಧ್ಯಾ ಪ್ರವ. . . . .! ಎಂದೂ ಸುಪ್ರಭಾತ ಕಿವಿಗೆ ಕೇಳುತ್ತಲೇ ಕಣ್ಣುತೆರೆದು ಗಡಿಯಾರ ಕೈಗೆತ್ತಿಕೊಂಡು ನೋಡಿದರೆ ಬೆಳಿಗ್ಗೆ ೬.೩೦ರ ಸಮಯ ಹೊದ್ದ ಹಾಸಿಗೆಯಲ್ಲ ಬದಿಗೆ ಸರಿಸಿ ಎದ್ದು ಲೈಟ್ ಆನ್ ಮಾಡಿದರೆ ಕರೆಂಟೇ ಇಲ್ಲಾ. ರಾಜ್ಯಧಾನಿಗೂ ತಗುಲಿದ ವಿದ್ಯುತ್ ಶಾಕ್ ಹಳ್ಳಿಗಳಿಗೆ ಒಂಭತ್ತು ಘಂಟೆಗಳ ಕಾಲ ಮಾತ್ರ ವಿದ್ಯುತ್ ಎಲ್ಲೋ ದಿನ ಪತ್ರಿಕೆಯಲ್ಲಿ ಓದಿದ್ದು ನೆನಪಾಯಿತು ಇದ್ಯಾರಪ್ಪ ಟೇಪರೆಕಾರ್ಡ್‌ರು ಅಂತಾ ಬಾಗಿಲು ತೆರೆದು ನೋಡಿದರೆ – ಗುಳಿಕೆನ್ನೆ ಹುಡುಗಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಮಲು ಮೋಜಿನ ಜೀವನದಲ್ಲಿ ಬದುಕಿಗೊಂದು ಸಂಕಲ್ಪ ಬೇಕು: ಪ್ರವೀಣ್ ದಾನಗೌಡ

    ಅರೆ ಉಪದೇಶಿಸುತ್ತಿರುವೆ ಎಂದುಕೊಂಡ್ರಾ, ಇಲ್ಲ ಉಪದೇಶವಲ್ಲಾ ಇದು ಒಂದು ಮಸ್ತಿ ಮಜದ ಘಟನೆ !  ಇದಕ್ಕೆ ನೀವು ಒಪ್ಪುತ್ತಿರೊ ಇಲ್ಲವೋ , ಈ ಜಗತ್ತು ಇಂದ್ರ ಲೋಕವನ್ನು ಮೀರಿದ ಸುಖ ಹಾಗೂ ಸೌಂದರ್ಯವನ್ನು ಹೊಂದಿದ ಜಗತ್ತು. ಇಲ್ಲಿ ರಂಬೆ ,ಊರ್ವಶಿ, ಮೇನಕೆಯರನ್ನು ಮೀರಿದ ರೂಪಶಿಯರು ಉಂಟು ಎಂದ ಮೇಲೆ ಈ ಜಗತ್ತು ಅಲ್ಲಿಗಿಂತಲು ಸೌಂದರ್ಯ ಪೂರಿತ ಜಗತ್ತೆ ಸರಿ, ಇನ್ನು ಅಮಲಿಗೆ ಮೋಜಿಗೆ ಸುಖಕ್ಕೆ ಇಂದ್ರನೇ ಇಲ್ಲಿಯ ಅಲ್ಕೋ ಹಾಲ್ ಬ್ರ್ಯಾಂಡ್ ಗಳನ್ನು ಆಮದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಿಳಿಯ ಮರ್ಸಿಡೀಸ್ ಬೆಂಝ್: ಉಪೇಂದ್ರ ಪ್ರಭು

  ’ಏನ್ ಬಾಬಾ ನೀನು, ಯಾವಾಗ ನೋಡಿದ್ರೂ ಬರೇ ಕನ್ನಡ ಕಥೆಗಳನ್ನೇ ಬರೀತೀಯಾ. ಇಂಗ್ಲಿಷ್‌ನಲ್ಲಿ ಬರೆದ್ರೆ ನಾವೂ ಓದ್‌ಬಹುದಲ್ವಾ’ ಕಂಪ್ಯೂಟರ್ ಎದುರು ಕೂತು ಟೈಪ್ ಮಾಡುವಲ್ಲಿ ಮಗ್ನನಾಗಿದ್ದ ನನ್ನನ್ನು ರೇಗಿಸುತ್ತಾಳೆ ಹದಿಹರೆಯಕ್ಕೆ ಕಾಲಿಡುತ್ತಿರುವ ದ್ವಿತೀಯ ಸುಪುತ್ರಿ ಸ್ವಾತಿ. ’ಏ ಹುಡ್ಗಿ, ಕಥೆಗಳಲ್ಲಿ ಕನ್ನಡ ಕಥೆ ಇಂಗ್ಲಿಷ್ ಕಥೆ ಎಂದೇನೂ ಇಲ್ಲ. ಕನ್ನಡ ಕಥೆಗಳನ್ನೇ ಬರೀತೀಯಾ ಅನ್ನುವ ಬದಲು ಕನ್ನಡದಲ್ಲೇ ಕಥೆಗಳನ್ನು ಬರೀತೀಯಾ ಅನ್ನೋದು ವ್ಯಾಕರಣಬದ್ಧವಾಗುತ್ತದೆ’- ನನ್ನ ಕನ್ನಡ ಪಾಂಡಿತ್ಯವನ್ನು ಕನ್ನಡ ಓದಲು ಬರೆಯಲು ಬಾರದ ನನ್ನ ಹೆಂಡತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದ ರಾಘವೇಂದ್ರ ಭಟ್ ರವರ ಚುಟುಕಗಳು

  ಕವಿತೆ ಹುಟ್ಟಿದ್ದು : ಭಾವಗಳು ಬತ್ತಿ ಹೋದಾವೆಂದು ಪದೇ ಪದೇ ನಿನ್ನೆದುರಲ್ಲೇ ಕುಳಿತೆ.| ನೀನು ಕಣ್ಣು ಮಿಟುಕಿಸಿ ಆಶ್ಚರ್ಯ ತೋರಿದಾಗಲೆಲ್ಲ ರೂಪುಗೊಂಡಿದ್ದೇ ಈ ಕವಿತೆ ||   ತಾಯಿ : ನಿನ್ನ ಮನದ ಹರಹು ಕಂಡದ್ದು ವಿಶಾಲ ಸಾಗರದೊಡಲಲ್ಲಿ | ವಿಶಾಲ ಸಾಗರದಷ್ಟು ಪ್ರೀತಿ ಉಂಡಿದ್ದು ತಾಯೇ ನಿನ್ನಯ ಮಡಿಲಲ್ಲಿ ||   ನೀ ಹೋಗುವಾಗ.. ಮರಳ ದಂಡೆಯಲಿ ಗೆಜ್ಜೆ ಪಾದಗಳ ಹೆಜ್ಜೆ ಗುರುತುಗಳ ಅಳಿಸಿದೆ | ಎನ್ನ ಹೃದಯದಲಿ ಹಚ್ಚೆ ಮೂಡಿಸಿ ಏಕೆ ಪ್ರೀತಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತ್ತರಿ ಕೈಗಳ ಕಲಾವಿದ:ವಾಸುಕಿ ರಾಘವನ್

  ಈ ವಾರ ಬೇರೇನೋ ಬರೆಯೋಣ ಅಂತ ಯೋಚನೆ ಮಾಡ್ತಾ ಇದ್ದೆ. ಆದರೆ ಈ ಸಿನಿಮಾ ನೋಡಿದೆ ನೋಡಿ, ಇದರ ಬಗ್ಗೆ ಬರೀದೇ ಇರಕ್ಕೆ ಆಗೋದೇ ಇಲ್ಲ ಅನ್ನಿಸಿಬಿಡ್ತು. ಆ ಚಿತ್ರ ಟಿಮ್ ಬರ್ಟನ್ ನಿರ್ದೇಶನದ ಜಾನಿ ಡೆಪ್ ಅಭಿನಯದ “ಎಡ್ವರ್ಡ್ ಸಿಜರ್ ಹ್ಯಾಂಡ್ಸ್”. “ಏವಾನ್” ಸೌಂದರ್ಯವರ್ಧಕ ಕಂಪನಿಯ ಸೇಲ್ಸ್ ವುಮನ್ ಪೆಗ್, ಗ್ರಾಹಕರನ್ನು ಹುಡುಕುತ್ತಾ ಹೊರಟಿರುವಾಗ ಪಾಳು ಬಿದ್ದ ಒಂದು ಮಹಲಿಗೆ ಬರುತ್ತಾಳೆ.  ಅಲ್ಲಿ ಅವಳಿಗೆ ಎಡ್ವರ್ಡ್ ಭೇಟಿ ಆಗುತ್ತೆ. ಮನುಷ್ಯರ ಒಡನಾಟವೇ ಇಲ್ಲದ ಎಡ್ವರ್ಡ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೀನಿಲ್ಲದೆ ನನಗೇನಿದೆ … : ಟಿ . ಜಿ. ನಂದೀಶ್

  ಜೀವದ ಗೆಳತಿ , ಆ ದಿನಗಳು, ಆ ಕ್ಷಣಗಳು ನನ್ನ ಪಾಲಿಗೆ ಸದಾ ಹಸಿರು. ಯಾಕಂದ್ರೆ ನನ್ನ ಉಸಿರು ನಿನ್ನ ತಾಕುವಷ್ಟು ಹತ್ತಿರದಲ್ಲಿದ್ದೆ ನೀನು, ನನ್ನುಸಿರು ನಿನ್ನ ಹೆಸರನ್ನೇ ಉಸಿರಾಗಿಸಿಕೊಂಡು ಉಸಿರಾಡುತ್ತಿದ್ದ ದಿನಗಳವು. ನಿನ್ನ ಮುದ್ದು ಮುಖ ನೋಡದೆ ಹತ್ತಿರತ್ತಿರ ಎರಡು ವರುಷಗಳೇ ಸರಿದು ಹೋದವು . ಕಾಲಗಳು ಬದಲಾದವು , ವ್ಯಕ್ತಿಗಳು ಬದಲಾದರೂ , ಕೊಂಚ ಮಟ್ಟಿಗೆ ಬದುಕು ಬದಲಾಯಿತಾದರೂ , ನಿನ್ನ ಮೇಲಿನ ನನ್ನ ಪ್ರೀತಿ ಒಂದಿನಿತು ಬದಲಾಗಲಿಲ್ಲ, ಬಡವಾಗಲಿಲ್ಲ , ಅದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತೆ – ಚಿತ್ರಕತೆ – ನಿರ್ದೇಶಕ..:ಮಹದೇವ ಹಡಪದ್

  ಒಂದು ಕೃತಿಯ ಜೀವಾಳವೆಂದರೆ ಸಾರ್ವತ್ರಿಕ ಕಾಲವನ್ನು ಹಿಡಿದಿಡುವ ಶಕ್ತಿಯನ್ನು ಹೊಂದಿರುವಂಥದ್ದು. ಆಳವಾದ ಅನುಭವ, ಜ್ಞಾನದ ಅನುಭಾವ, ಸಂತೃಪ್ತ ಭಾವಗಳು ಎಲ್ಲಿ ಮೇಳೈಸಿಕೊಂಡಿರುತ್ತವೋ ಅಲ್ಲಿ ಪ್ರದರ್ಶನಕ್ಕಿಂತ ಪರಾಮರ್ಶನಕ್ಕೆ ಹೆಚ್ಚಿನ ಆದ್ಯತೆ ಇರುತ್ತದೆ. ಕಲಾಕಾರರು ತಮ್ಮ ಅನುಭವ ಮತ್ತು ಜೀವನದ ವಿರೋಧಾವಿರೋಧಗಳನ್ನೆಲ್ಲ ಕೃತಿಯಾಗಿಸುವ ನಿಟ್ಟಿನಲ್ಲಿಯೇ ಉತ್ಸುಕರಾಗಿರುತ್ತಾರೆ. ಅಭಿವ್ಯಕ್ತಿ ಅನ್ನುವುದು ಕೂಡ ಕಲಾದೃಷ್ಟಿಯ ಅಂತಃಪಠ್ಯವಾಗಿ ಸತ್ಯಶೋಧನೆ  ಹುಡುಕಾಟದಲ್ಲಿ ತೊಡಗಿರುತ್ತದೆ. ವಾಸ್ತವವನ್ನು ಗ್ರಹಿಸುವುದೇ ಸಿನೆಮಾ ಮಾರ್ಗದಲ್ಲಿ ಮೂಲ ಪಠ್ಯವಾಗಿರುತ್ತದೆ. ಲೂಮಿಯೇರ್ ಸಹೋದರರು ತಮ್ಮ ಮೊದಲ ಚಿತ್ರಗಳನ್ನು ಇಂಥ ವಾಸ್ತವಿಕ ಅಂಶಗಳನ್ನು ಸೆರೆಹಿಡಿಯುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ