ಕಥಾಸಂಗಮ:ವಾಸುಕಿ ರಾಘವನ್

ಪುಟ್ಟಣ್ಣ ಕಣಗಾಲ್ ಒಬ್ಬ ದೈತ್ಯ ಪ್ರತಿಭೆ. ನಿರ್ದೇಶಕನ ಸ್ಥಾನಕ್ಕೆ ಸಿಗಬೇಕಾದ ಮಾನ್ಯತೆ ತಂದುಕೊಟ್ಟವರು. ಸಾಮಾನ್ಯವಾಗಿ ಹೀರೋಗಳಿಂದ ಚಿತ್ರಗಳನ್ನು ಗುರುತಿಸುವ ವಾಡಿಕೆ ನಮ್ಮಲ್ಲಿ. ಆದರೆ “ಎಡಕಲ್ಲು ಗುಡ್ಡದ ಮೇಲೆ” ಚಂದ್ರಶೇಖರ್ ಪಿಚ್ಚರ್ ಅಂತ ಆಗಲೀ, “ಮಾನಸ ಸರೋವರ” ಶ್ರೀನಾಥ್ ಪಿಚ್ಚರ್ ಅಂತಾಗ್ಲೀ ಯಾರೂ ಹೇಳಲ್ಲ. ಅವೆಲ್ಲ ಗುರುತಿಸಿಕೊಳ್ಳೋದು ಪುಟ್ಟಣ್ಣ ಅವರ ಫಿಲಂಗಳು ಅಂತಲೇ! ಪುಟ್ಟಣ್ಣ ಅವರ ಅತ್ಯುತ್ತಮ ಚಿತ್ರಗಳು ಅನ್ನೋ ವಿಷಯ ಬಂದಾಗ ಸಾಕ್ಷಾತ್ಕಾರ, ಗೆಜ್ಜೆ ಪೂಜೆ, ಶರಪಂಜರ, ರಂಗನಾಯಕಿ, ನಾಗರಹಾವು, ಶುಭಮಂಗಳ, ಮಾನಸಸರೋವರ – ಇವು ಸಾಮಾನ್ಯವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಂಜಯಂತಿಯಲ್ಲೊಂದು ಸುತ್ತು:ಪ್ರಶಸ್ತಿ ಪಿ

  ಹಿಂಗೇ ಹಿಂದಿನ ಶುಕ್ರವಾರ ಶಿರಸಿಯಲ್ಲೊಂದು ಮದುವೆ. ಆ ಮದುವೆಯ ದಿನ ಶಿರಸಿ ಮಾರಿಕಾಂಬೆಯ ದರ್ಶನ ಪಡೆದು ಹೊರಬಂದಾಗ ಎದುರಿಗೆ ಕಂಡಿದ್ದು ಪ್ರವಾಸೋದ್ಯಮ ಇಲಾಖೆಯ ಬೋರ್‍ಡು. ಹಾಗೇ ಕಣ್ಣಾಡಿಸುತ್ತಿದ್ದಾಗ ಕಂಡಿದ್ದು ಸೋಂದಾ-೨೩ ಕಿ.ಮೀ, ಬನವಾಸಿ-೨೨ ಕಿ.ಮೀ ಅಂತ. ಅರೆ! ಬನವಾಸಿ ಇಷ್ಟು ಹತ್ರವಾ.. ಹಾಗಾದ್ರೆ ಇವತ್ತು ಅಲ್ಲಿಗೆ ಹೋಗೇ ಊರಿಗೆ ಮರಳ್ಬೇಕು ಅಂದ್ಕೊಂಡೆ. ಆದ್ರೆ  ಮದುವೆ ಊಟ ಮುಗಿಸಿದ ಮೇಲೆ ಸೀದಾ ಸಾಗರದ ಬಸ್ಸು ಹತ್ತಿದ್ದಾಯ್ತು, ಬನವಾಸಿ ಮಿಸ್ಸಾಯ್ತು. ಆದರೆ ಸಿಗಬೇಕೆಂದಿದ್ದದ್ದು ಸಿಕ್ಕೇ ಸಿಗುತ್ತೆ ಅಂತಾರೆ ಹಲವರು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉಪದ್ವ್ಯಾಪಿ:ಉಮೇಶ್ ದೇಸಾಯಿ

  ಹುಬ್ಬಳ್ಳಿಯಿಂದ ಬಿಟ್ಟ ರಾಜಹಂಸ ಹರಿಹರಕ್ಕ ಬಂದಾಗ ಲೇಟಾಗಿತ್ತು. ಸೀಟ್ ನಂ೭ರಲ್ಲಿ ಕುಳಿತ ನಮ್ಮ ನಾಯಕನಿಗೆ ಎಚ್ಚರವಾಗಿದ್ದು ಅಲ್ಲಿ ಹತ್ತಿದ ಪ್ರಯಾಣಿಕ ಕಂಡಕ್ಟರ್ ಜೋಡಿ ವಾದಕ್ಕಿಳಿದಾಗ. ಪ್ರಯಾಣಿಕ ಮುಂಗಡ ಟಿಕೆಟ್ ಮಾಡಿಸಿದ್ದ. ಯಶವಂತಪುರದಾಗ ಮುಂದ ಹೋಗಲಿಕ್ಕೆ  ಗಾಡಿ ಹಿಡಿಯುವನಿದ್ದ. ಬಸ್ಸು ಹರಿಹರಕ್ಕ ಮುಟ್ಟಿದ್ದು ಒಂದು ತಾಸು ತಡಾ. ಇದು ಅವನ ಕ್ಷೋಭೆಗೆ ಕಾರಣ. ಆ ಪಯಣಿಗನ ಜೋಡಿ ಹೆಂಡತಿ,ಎರಡು ಮಕ್ಕಳು ಇದ್ರು. ಅಕಿನೂ ಚಾಲಕ/ನಿರ್ವಾಹಕರಿಗೆ ಮಂಗಳಾರತಿ ಎತ್ತಿದ್ಲು. ಬಸ್ಸು ಹುಬ್ಬಳ್ಳಿ ಹತ್ತಿರದ ವರೂರ ಹತ್ರ ಊಟಕ್ಕ ನಿಲ್ಸಿದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ ಫಲಿತಾಂಶ

  ಪಂಜು ಚುಟುಕ ಸ್ಪರ್ಧೆಯ 2013 ಫಲಿತಾಂಶ….   ಮೊದಲ ಬಹುಮಾನ:  ಸುಷ್ಮಾ ಮೂಡುಬಿದರೆ ಎರಡನೇ ಬಹುಮಾನ:  ಮಂಜುನಾಥ್ ಪಿ. ಮೂರನೇ ಬಹುಮಾನ:  ಕೃಷ್ಣಮೂರ್ತಿ ಎನ್.   ಸಮಾಧಾನಕರ ಬಹುಮಾನಗಳು: ಶರತ್ ಚಕ್ರವರ್ತಿ, ಈಶ್ವರ ಕಿರಣ ಭಟ್, ಮಾಲಿನಿ ವಿ. ಭಟ್ಟ, ರಾಘವೇಂದ್ರ ಭಟ್ಟ, ಡಂಕಿನ್ ಝಳಕಿ..   ಒಟ್ಟು 42 ಜನ ಕವಿಗಳು ನಾಡಿನ ಮೂಲೆಮೂಲೆಗಳಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.    ಖ್ಯಾತ ಕವಿಗಳಾದ ಪ್ರೊ. ಎಲ್.ಎನ್. ಮುಕುಂದರಾಜ್ ಈ ಚುಟುಕ ಸ್ಪರ್ಧೆಯ ತೀರ್ಪುಗಾರರಾಗಿದ್ದರು.   ಬಹುಮಾನಿತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪುಸ್ತಕ ಬಿಡುಗಡೆ ಸಮಾರಂಭ

  ಪುಸ್ತಕ ಬಿಡುಗಡೆ 'ಪಂಜು ಅಂತರ್ಜಾಲ ಪತ್ರಿಕೆ' ಚುಟುಕ ಸ್ಪರ್ಧೆಯ ಬಹುಮಾನ ವಿತರಣೆ ಈಶಾನ್ಯ ಭಾರತೀಯ ನೃತ್ಯಗಳ ಕಿರುಚಿತ್ರ ಪ್ರದರ್ಶನ     ಡಾ. ಎಸ್.ಎಂ.ನಟರಾಜು ಅವರ 'ವಂಡರ್ ಲ್ಯಾಂಡಿನ ಪುಟ್ಟ ರಾಜಕುಮಾರನೂ… ಮತ್ತು ಖುಷಿನಗರಿಯ ಆತನ ನಲ್ಮೆಯ ಗೆಳತಿಯೂ…' ಹಾಗೂ 'ಎಲೆಮರೆಕಾಯಿ' ಕೃತಿಗಳ ಬಿಡುಗಡೆ ಗೋಪಾಲ ವಾಜಪೇಯಿ ಅವರಿಂದ 'ಪಂಜು' ಅಂತರ್ಜಾಲ ತಾಣ ಬಿಡುಗಡೆ: ಡಾ. ಬಾನಂದೂರು ಕೆಂಪಯ್ಯ, ಗಾಯಕರು, ಅಧ್ಯಕ್ಷರು, ಜಾನಪದ ಅಕಾಡೆಮಿ ಚುಟುಕ ಸ್ಪರ್ಧೆಯ ಬಹುಮಾನ ವಿತರಣೆ:  ಜರಗನಹಳ್ಳಿ ಶಿವಶಂಕರ್, ಕವಿಗಳು ಅಧ್ಯಕ್ಷತೆ: … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೋಡುವಳ್ಳಿಯ ಕರೆ:ಪಾರ್ಥಸಾರಥಿ ಎನ್

  ನಾಲ್ವರು ಗೆಳತಿಯರು ಬೆಂಗಳೂರಿನ ಮೆಜಿಸ್ಟಿಕ್ ಬಸ್ ಸ್ಟಾಪ್ ನಲ್ಲಿ ಸಂತಸದಿಂದ ಹರಟುತ್ತಿದ್ದರು. ರಾತ್ರಿ ಆಗಲೇ ಹತ್ತು ಘಂಟೆ ದಾಟಿದ್ದು, 10:40 ಕ್ಕೆ ಚಿಕ್ಕಮಂಗಳೂರಿಗೆ ಹೊರಡುವ ರಾಜಹಂಸ ಬಸ್ಸಿಗೆ ಕಾಯುತ್ತಿದ್ದರು. ಎಲ್ಲರದ್ದೂ ಹೆಚ್ಚು-ಕಡಿಮೆ ಒಂದೇ ವಯಸ್ಸು. ಹತ್ತೊಂಬತ್ತು ಇಪ್ಪತ್ತರ ಉತ್ಸಾಹದ ಚಿಲುಮೆಗಳು. ಮೈಸೂರು ರಸ್ತೆಯಲ್ಲಿರುವ ಡಾನ್ ಬಾಸ್ಕೋನಲ್ಲಿ ಇಂಜಿನೀಯರಿಂಗ್ ಕಾಲೇಜಿನ ಐ.ಎಸ್ ವಿಭಾಗದ ಮೂರನೆ ಸೆಮಿಸ್ಟರ್ ಪರೀಕ್ಷೆಗಳನ್ನು ಮುಗಿಸಿದ ಎಲ್ಲರೂ, ರಜೆ ಇರುವ ಕಾರಣ ಒಂದು ವಾರ ಸಮಯ ಕಳೆಯಲು ಪ್ರಕೃತಿಯ ಮಡಿಲು ಚಿಕ್ಕಮಗಳೂರಿಗೆ ಹೊರಟಿರುವರು.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚೇತನ: ದಿವ್ಯ ಆಂಜನಪ್ಪ

"ಜಗತ್ಚೇತನದೆದುರು, ನಾನು ನನ್ನದು ಎಂಬ ಅಹಂ ಭಾವಕ್ಕಿಂತ, ನೀನು ನಿನ್ನದು ನಿನ್ನದೇ ಎಂಬ ಸಮರ್ಪಣಾ ಮನೋಭಾವ ಮಿಗಿಲು. ಸಕಲ ಜೀವ-ಸಂಕುಲಗಳನ್ನು ನಿಯಮಬದ್ದವಾಗಿ, ನಿಖರವಾಗಿ, ಆಯಾಯ ಪಾತ್ರಗಳನ್ನು ಸಮರ್ಪಕವಾಗಿ ನಿರ್ವವಹಿಸುವಂತೆ ಮಾಡುವ ವ್ಯವಸ್ಥಾಪಕ-ಕಾಣದ ಕೈಯೊಂದು ಇರಲೇಬೇಕು" ಎಂದು ಎಷ್ಟೋ ಸಂದರ್ಭಗಳಲ್ಲಿ ನಮ್ಮೆಲ್ಲರ ಮನಸ್ಸಿಗೆ ಅನ್ನಿಸಿರುತ್ತದೆ. ಆ ಕಾಣದ ಕೈ ಕೆಲವೊಮ್ಮೆ ವರಕೊಡುವ ಕೈಯಾಗಿಯೂ, ಬುದ್ಧಿ ಕಲಿಸುವ ಕೈಯಾಗಿಯೂ, ದಾರಿ ತೋರುವ ಕೈಯಾಗಿಯೂ ನಮ್ಮ ಅನುಭವಕ್ಕೆ ಬಂದಿರುವುದು. ಜೀವಸಂಕುಲದಲ್ಲಿನ ಬುದ್ಧಿ ಜೀವಿ ಮಾನವಕುಲವೊಂದು ತನ್ನ ಉಪಕುಲಗಳು-ಧರ್ಮಗಳ ನೆಲೆಗಳಲ್ಲಿ ಆ ಕೈಯನ್ನು 'ದೇವ'ನೆಂದು:ಕೃಷ್ಣ, ಏಸು, ಬುದ್ಧ, ಜಿನ, ಅಲ್ಲಾ ಎಂದು ಅವರವರಂತೆ ಕರೆದಿರುವುದುಂಟು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಳಿ ಸಂಜೆಯ ಮೌನ… ಮಂಜುಗಣ್ಣಿನ ಮಾತು:ಶ್ರೀವತ್ಸ ಕಂಚೀಮನೆ

  ಏಳು ದಶಕಗಳ ಹಣ್ ಹಣ್ಣು ಬದುಕು…ಹೆಸರು ಆನಂದರಾವ್… ಮಣ್ಣ ಮನೆಯಲಿ ಮಲಗುವ ಮುನ್ನಿನ ಮಂಜುಗಣ್ಣಿನ ಹಿನ್ನೋಟದಲ್ಲಿ, ಹೆಸರಲ್ಲಿ ಮಾತ್ರ ಕಂಡ ಆನಂದದ ಅರ್ಥ ಹುಡುಕುತ್ತಾ ಕಂಗಾಲಾಗಿದ್ದೇನೆ… ಈದೀಗ ಮನದಿ ಸುಳಿದಿರುಗುತ್ತಿರೋ ಭಾವ ಇದೊಂದೇ "ಎಷ್ಟುಕಾಲ ಬದುಕಿದ್ದೊಡೇನು – ಜೀವಿಸಲಾಗದಿದ್ದೊಡೆ ನನ್ನಂತೆ ನಾನು…" ಈ ಬದುಕಿಗೆ (ನನ್ನನ್ನೂ ಸೇರಿ ಈ ಜನಕ್ಕೆ) ಅದ್ಯಾಕೆ ಅಷ್ಟೊಂದು ಪ್ರೀತಿಯೋ ಮುಖವಾಡಗಳ ಮೇಲೆ…ಇಂದೀಗ ಬಯಲ ಹಸಿರ ತಂಗಾಳಿ ನಡುವೆಯೂ ಉಸಿರುಗಟ್ಟುವ ಭಾವ ನನ್ನಲ್ಲಿ… ಏನೆಲ್ಲ ಇತ್ತಲ್ಲವಾ ಬದುಕ ದಾರೀಲಿ…ಸೊಗಸಾದದ್ದು, ಆಹ್ಲಾದವನೀಯುವಂಥದ್ದು…ಪುಟ್ಟ ಪುಟ್ಟದು…ಆಸ್ವಾದಿಸಿದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಪರೂಪಕ್ಕೊಂದ್ ಮದ್ವಿಗಿ ಹೋಗಿದ್ನಿರಿ: ರುಕ್ಮಿಣಿ ಎನ್.

ಹುಟ್ಟಿದಾಗಿನಿಂದ ಇವತ್ತಿನವರ್ಗು ನಾ ಮದ್ವಿ ಮುಂಜಿ, ಜಾತ್ರೀ ಅಂತ್ ಹೇಳಿ ಊರೂರ್ ತಿರಿಗಿದ್ ಭಾಳ ಕಡಿಮಿ ರೀ. ಮದ್ವಿಅಂದ್ರ್ ಸಿನಿಮಾದಾಗ್ ನೋಡು ಸೀನ್ ಅಷ್ಟ್ ಗೊತ್ತಿತ್ರ್ ನಂಗ್. ಅದರೀ.. ಹುಡುಗನ ಕಡೆಯಿಂದ ಅವನ್ ಗೆಳ್ಯಾರು, ಹುಡುಗಿ ಕಡೆಯಿಂದ ಅಕಿ ಗೆಳತ್ಯಾರು, ಮದ್ವಿ ಒಂದ್ ವಾರ್ ಇರುತ್ಲೇನ್ ಬರಾತಾರು. ಏನೇನರ ಕೆಂತಿ ಮಾಡ್ತಾರು, ಯಾರಗೋ ಯಾರದೋ ಮ್ಯಾಲ್ ಲವ್ವ್ ಅಕ್ಕೈತಿ… ಮದ್ವಿ ದಿನ, ಊಟ ಮದಲ್ ಇರ್ತೈತಿ. ಆಮ್ಯಾಕ್ ಅಕ್ಕಿಕಾಳ್ ಒಗಿತಾರು. ಮದ್ವಿ ಆತ್ ಆತ್ ಅನುಗುಡ್ದ, ಹುಡುಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನ ಪುಟ್ಟ ಕನಸು:ವೀರ್ ಸಂತೋಷ್

  ನನ್ನ ಪುಟ್ಟ ಕನಸಿನ ಹೆಸರು, “ಪೂರ್ವಿ”. ಅವಳು ನನ್ನ ಜೀವನಕ್ಕೆ ಬಂದು ಇವತ್ತಿಗೆ ಸರಿಯಾಗಿ ಒಂದು  ವರ್ಷವಾಯ್ತು. ಒಂದು ವರ್ಷದ ಹಿಂದೆ ಇದ್ದ ಸಂತೋಷ ಇವತ್ತಿಗೂ ಹಾಗೇ ಇದೆ. ದಿನದಿಂದ ದಿನಕ್ಕೆ ಅವಳ ಮೇಲಿನ ಪ್ರೀತಿ ಜಾಸ್ತಿಯಾಗ್ತಾ ಇದೆ. ಅವಳನ್ನು ನೋಡಿದ ಮೊದಲನೇ ದಿನ ಇನ್ನೂ ನನ್ನ ಕಣ್ಣಲ್ಲಿ ಹಸಿರಾಗಿದೆ. ಅವಳನ್ನು ನೋಡಿದ ಮರುಕ್ಷಣವೇ ನನ್ನ ಜೀವನ ಪರಿಪೂರ್ಣವಾಯಿತು. ಅವಳ ನೋಟದ ಶಕ್ತಿಯೇ ಅಂತಹದ್ದು.  ಅವಳ ಪುಟ್ಟ ಕೈ ಬೆರಳುಗಳು ನನ್ನ ಕನಸಿನ ಲೋಕವನ್ನು ಚಿತ್ರಿಸಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು:ಈಶ್ವರ ಭಟ್,ಎಂ.ಎಸ್.ಕೃಷ್ಣಮೂರ್ತಿ,ಅಶೋಕ್ ಕುಮಾರ್ ವಳದೂರು

  ಆವರ್ತಿತ ಮಂಜುಹನಿಗಳು ಹೀಗೆ ಆವಿಯಾಗುವ ಮೊದಲು ಕಿರಣಗಳು ಹೊಳಪಿಸಿದ ಬಣ್ಣಗಳನು ನೋಡಿ ನಾ ಮರುಗುವೆನು ಬಣ್ಣ ಶಾಶ್ವತವೇನು? ಇಂತ ಸ್ಥಿತ್ಯಂತರಕೆ ಸಾಕ್ಷಿ ನಾನು.  ಇದು ಕೆಂಪು ನಾಲಗೆಯು ಹೊರಳಿ ಕೇಸರಿಯಾಗಿ ಮೂಡಿ ಕಾಮನಬಿಲ್ಲು ಹನಿಗಳೊಳಗೆ ಮತ್ತೇನನೋ ತಂದು ತನ್ನ ವ್ಯಾಪ್ತಿಯ ಪರಿಧಿ ಮೀರಿ ಸಾಗುವ ಮನಕೆ ಎಷ್ಟು ಘಳಿಗೆ? ಸತ್ಯಕ್ಕೆ ಬಿಳಿಮುಖವೆ? ರವಿಯಕಿರಣವು ನೆಪವೆ? ಆರಿಹೋಗುವುದೇನು ಖಚಿತ ಸಾವೆ? ಮಂಜು ಹುಟ್ಟುವುದೆಂತು ಹನಿಯ ಹಡೆಯುವುದೆಂತು ರಾತ್ರಿ ಬೆಳಗಿನ ವರೆಗೆ ಸುಖದ ನಾವೆ ನಾಳೆ ನಾ ಕಾಯುವೆನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನ ಜೀವನವನ್ನು ಬದಲಿಸಿದ ಆ ಚಿತ್ರ:ವಾಸುಕಿ ರಾಘವನ್

  ಬಹುಶಃ 1998ರ ಆಗಸ್ಟ್ ಇರಬೇಕು. ಸೆಮಿಸ್ಟರ್ ಕೊನೆಯ ದಿನ ಕಾಲೇಜಿನಿಂದ ಹಾಲ್ ಟಿಕೆಟ್ ಇಸ್ಕೊಂಡು ಬರಕ್ಕೆ ಹೋಗಿದ್ದೆ. ವಾಪಸ್ಸು ಮನೆಗೆ ಬಾರೋವಾಗ ನನಗೇ ಗೊತ್ತಿಲ್ಲದಂತೆ ವುಡ್-ಲ್ಯಾಂಡ್ಸ್ ಥೀಯೇಟರ್ ಕಡೆಗೆ ನನ್ನ ಗಾಡಿ ತಿರುಗಿಸಿದ್ದೆ. ಆ ಚಿತ್ರದ ಬಗ್ಗೆ ಒಳ್ಳೆ ವಿಮರ್ಶೆ ಓದಿದ್ದೆನಾ ಅಥವಾ ಪರೀಕ್ಷೆ ಶುರು ಆಗೋದರ ಒಳಗೆ ಒಂದು ಸಿನಿಮಾ ನೋಡಿಬಿಡಬೇಕು ಅನ್ನೋ ಚಡಪಡಿಕೆ ಇತ್ತಾ ನೆನಪಿಗೆ ಬರ್ತಾ ಇಲ್ಲ. ನನಗೆ ಆಗ ಆ ಚಿತ್ರದ ನಿರ್ದೇಶಕನಾಗಲೀ, ನಟರಾಗಲೀ ಯಾರೂ ಗೊತ್ತಿರಲಿಲ್ಲ. ಆದರೆ ಚಿತ್ರಮಂದಿರದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭ್ರಮೆ:ಪ್ರವೀಣ್ ಕೆ

  ಗುರು ಕಾಡು ದಾಟಿ ಹೊಳೆಯ ದಂಡೆಗೆ ಬಂದು ಹಸಿಮಣ್ಣು ಕಂಡರೂ ಅದರ ಮೇಲೆ ಕುಳಿತುಕೊಂಡ.  ಕಾಡಿನ ಗವ್ವೆನ್ನುವ ಧ್ವನಿ, ನದಿಯ ಜುಳುಜುಳು ನಾದ, ಹಕ್ಕಿಗಳ ಕಲರವ ಯಾವುದೂ ಅವನ ಕಿವಿ ಸೇರುತ್ತಿರಲಿಲ್ಲ.  ತಾನು ಇಷ್ಟು ದಿನ ನಂಬಿಕೊಂಡು ಬಂದಿದ್ದ ಬದುಕು ಹೀಗೆ ತನ್ನನ್ನೇ ತಿನ್ನುವ ರಾಕ್ಷಸವಾಗುತ್ತದೆ ಎಂದು ಅವನು ಅಂದುಕೊಂಡಿರಲಿಲ್ಲ.   ನದಿ ತನ್ನ ಪಾಡಿಗೆ ತಾನು ಹರಿಯುತ್ತಿತ್ತು.  ಅದರ ಗುರಿ ಸಮುದ್ರ ಸೇರುವುದು ಎಂದು ಯಾರೋ ಹೇಳಿದ್ದನ್ನು ಕೇಳಿ ಗಹಗಹಿಸಿ ನಕ್ಕಿದ್ದ.  ಅದಕ್ಕೇನ್ ತಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೇಳಿ-ಕೇಳಿ…: ಗೋಪಾಲ ವಾಜಪೇಯಿ

  ನಾಲ್ಕು ಮಾತ ನೀನು ಹೇಳು, ನಾಲ್ಕು ನನ್ನ ಮಾತ ಕೇಳು…  ನಾಲ್ಕು ದಿನದ ಬಾಳು ಅಲ್ಲಾ, ನಾಲ್ಕು ಹೆಜ್ಜಿ ನಡೆಯಿದಲ್ಲಾ… ಹೇಳಿ-ಕೇಳಿ, ಕೇಳಿ-ಹೇಳಿ ಬಾಳಿ ಬದುಕುವಾ…  ಗೆಳತಿ, ಬಾಳಿ ಬದುಕುವಾ… ಬಾರೆ, ಬಾಳಿ ಬದುಕುವಾ…                                          ನಾಲ್ಕು ಜನರ ಓಣಿಯೊಳಗ, ನಾಲ್ಕು ಜನರು ಬಂಧು ಬಳಗ…  ನಾಲ್ಕು ಹೆಜ್ಜಿ ತಪ್ಪದಾಂಗ, ನಾಲ್ಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ (ಭಾಗ 10): ಚಿನ್ಮಯ್ ಮಠಪತಿ

  ಅವು ತುಂಬು ಸಿಹಿಯಾದ ಅನುಭವಗಳು. ಅವುಗಳ ಕಡೆಗೆಯೇ ಸಾಗಿ ಮತ್ತೆ ಮತ್ತೆ ಅಲ್ಲಿಗೆ ನುಸುಳುತ್ತಿತ್ತು ಮನಸ್ಸು, ತುಂಬು ಚಿತ್ತವನ್ನು ತನ್ನ ಬೆನ್ನೇರಿಸಿಕೊಂಡು. ಎಷ್ಟೇ ಪ್ರಯತ್ನ ಪಟ್ಟರು ಆ ವಲಯದಿಂದ ಹೊರ ಬರಲಾಗಲೇ ಇಲ್ಲ. ಯಾಕೆ ನಾವು  ಒಮ್ಮೊಮ್ಮೆ ಇನ್ನೊಬ್ಬರು ಧಾರೆ ಎರೆವ ಪ್ರೀತಿ ವಿಶ್ವಾಸಗಳ ಅಭಿಮಾನಿಗಳಾಗಿ ಬಿಡುತ್ತೇವೆ? ಅವರನ್ನು ಅಷ್ಟಾಗಿ ಹಚ್ಚಿಕೊಂಡು ಬಿಡುತ್ತೇವೆ ? ಅವರ ಜೊತೆಗಾರಿಕೆ, ಸಾಂಗತ್ಯಕ್ಕೆ ಹಾತೋರೆಯುತ್ತೇವೆ? ಅವರಿಲ್ಲದ ಕ್ಷಣಗಳಲ್ಲಿ ಅವರಿಗಾಗಿ ಕನವರಿಸುತ್ತೇವೆ? ಎಲ್ಲವುಗಳಿಗೆ ಉತ್ತರವಂತೂ ಇದ್ದೆ ಇದೇ. ಅದೇ ಪ್ರೀತಿ ವಿಶ್ವಾಸವಲ್ಲವೇ? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ- ಡಿವಿಜಿ: ಹನಿಯೂರು ಚಂದ್ರೇಗೌಡ

  ಕನ್ನಡ ನಾಡಿನ ಸಾಹಿತ್ಯ ಲೋಕದ ಅದ್ವಿತೀಯ ಧ್ರುವತಾರೆ ಡಿವಿಜಿ.ಇವರ ಅನೇಕ ಅನನ್ಯ  ಸಾಧನೆಗಳ  ನಡುವೆ ನಮಗೆ ಶ್ರೇಷ್ಠವೆನಿಸಿರುವುದು  ತತ್ವಾಧಾರಿತವಾದ ಅವರ ಕಾವ್ಯಗಳಾದ "ಮಂಕುತಿಮ್ಮನ ಕಗ್ಗ" ಮತ್ತು "ಮರುಳ ಮುನಿಯನ ಕಗ್ಗ" ಗಳೇ  ಎನ್ನುವುದು ಸರ್ವವಿದಿತ. ಪತ್ರಿಕೋದ್ಯಮವೇ ಸರ್ವಸ್ವವೆಂದು ತಿಳಿದಿದ್ದ ಡಿವಿಜಿ ಸಾಹಿತ್ಯ ಲೋಕಕ್ಕೆ ಪಾದವಿರಿಸಿದ್ದು ಮಾತ್ರ ಅನಿರೀಕ್ಷಿತವೇ.ಆದರೂ ಅವರೊಬ್ಬ ದಾರ್ಶನಿಕ ಬರಹಗಾರ. 1887 ರ ಮಾರ್ಚ್ 17 ಜನಿಸಿದ  ಇವರಿಗೆ ಇಂದಿಗೆ  (ಮಾರ್ಚ್ 17, 2013ಕ್ಕೆ ) 126 ವಸಂತದ ಸಂಭ್ರಮ. ಈ ನೆಪದಲ್ಲೊಂದು ಅವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಪರಿಚಿತ: ರುಕ್ಮಿಣಿ ಎನ್.

ಆಗ ಸಮಯ ಅಪರಾಹ್ನದ ೩ ಘಂಟೆ ೨೦ ನಿಮಿಷಗಳು. ದಾದರ್ ನಿಂದ ಧಾರವಾಡಕ್ಕೆ ಹೋಗುವ ಮುಂಬೈ-ಧಾರವಾಡ ಎಕ್ಸ್‌ಪ್ರೆಸ್ ಟ್ರೈನ್ ಹೊರಡುವುದು ಕೇವಲ ೫ ನಿಮಿಷಗಳು ಮಾತ್ರ ಬಾಕಿ ಇತ್ತು. ಅತ್ತಲಿಂದ ಒಬ್ಬ ತರುಣೆ ಟ್ರೈನ್ ತಪ್ಪಿ ಹೋಗಬಹುದೆಂಬ ಭೀತಿಯಲ್ಲಿ, ಅಕ್ಕ-ಪಕ್ಕದವರನ್ನು ಲೆಕ್ಕಿಸದೇ ಎದುರಿಗೆ ಬಂದವರನ್ನು ನೂಕುತ್ತ, ಮತ್ತೆಲ್ಲೋ ಕಣ್ಣಾಡಿಸುತ್ತ ಓಡುತ್ತಲೇ ಇದ್ದಳು. ಟ್ರೈನ್ ಹಸಿರು ನಿಶಾನೆ ತೋರಿಸಿ ಕೊನೆಗೊಮ್ಮೆ ಹಾರ್ನ್ ಹಾಕಿ ಇನ್ನೇನು ಹೊರಟೆ ಬಿಟ್ಟಿತು ಅನ್ನೋವಷ್ಟರಲ್ಲಿ ಅವಳು ಟ್ರೈನ್ ಹತ್ತಿಬಿಟ್ಟು, ಸ್ವಲ್ಪ ತಡವಾಗಿದ್ದರೂ ಟ್ರೈನ್ ತಪ್ಪಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವನಗಳು: ರಾಜಹಂಸ, ಸೋಮೇಶ್ ಎನ್ ಗೌಡ, ಕೆ.ಮುರಳಿ ಮೋಹನ್ ಕಾಟಿ

ಭೂಲೋಕದ ಸ್ವರ್ಗ ಭೂಲೋಕದ ಸ್ವರ್ಗ ಈ ಕರ್ನಾಟಕ ಯಾತ್ರಿಕರ ಹೃದಯಕ್ಕೊಂದು ಪುಳಕ ಕೈಮುಗಿದು ಬಿನ್ನಹಿಸಿ ಈ ನಾಡಿಗೆ ನಮ್ಮಮ್ಮ ಭುವನೇಶ್ವರಿ  ಮಾತೆಗೆ   ಹಗಲಿರುಳು ದುಡಿಯಿರಿ ವಾಙ್ಮಯದಭಿವೃದ್ಧಿಗೆ ಎಡಬಿಡದೆ ಶ್ರಮಿಸಿರಿ ಸಿರಿಗನ್ನಡದೇಳಿಗೆಗೆ ಎಂದೆಂದಿಗೂ ಕಡೆಗಣಿಸದಿರಿ ಸವಿಗನ್ನಡನುಡಿಗೆ ಸಿರಿಗನ್ನಡನಾಡಿಗೆ ಚಿನ್ನದ ಮಣ್ಣಿಗೆ ಪುಣ್ಯದ ಭೂಮಿಗೆ ಬೆಳದಿಂಗಳಬೀಡಿಗೆ   ಉಸಿರಿರುವರೆಗೂ ನುಡಿಯಲಿ ನಮ್ಮ ನಾಲಿಗೆ ಅಮೃತ ಸವಿಯ ಜೇನು ರುಚಿಯ ಕನ್ನಡ ನುಡಿಗೆ ಒಗ್ಗಟ್ಟಾಗಿ ಹೋರಾಡ ಬನ್ನಿರಿ ತಾಯಿನಾಡಿನರಕ್ಷಣೆಗೆ ಕನ್ನಡದ ಛಲವೊಂದೆ ಕನ್ನಡದ ನೆಲವೊಂದೆ ಕನ್ನಡದ ನುಡಿವೊಂದೆ ಕನ್ನಡದ ಮನವೊಂದೆ!  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಲಾಮಾರ್ಗೀಯ ಸಿನೆಮಾ ಎಂಬ ಕೌಶಲದ ಸಂವೇದನೆ…: ಮಹದೇವ ಹಡಪದ್

ನಮ್ಮ ಹಳ್ಳಿಗಳಲ್ಲಿ ಇನ್ನೂ ಕತೆ ಕೇಳುವ ಮತ್ತು ಹೇಳುವ ಹಂಬಲ ಕಮ್ಮಿಯಾಗಿಲ್ಲ. ಎಷ್ಟೋ ಕಥನಗಳು ಕಟ್ಟೆಯ ಮುಶೈರಾಗಳಲ್ಲಿ ಹಾಗೆ ಉಳಿದಿದ್ದಾವೆ ಎಂದರೆ ಉತ್ತರಕ್ಕಾಗಿ ಮಾಯಾಪೆಟ್ಟಿಗೆಯ ಕಡೆ ನೋಡಬೇಕಾಗುತ್ತದೆ. ಅಲ್ಲಿನ ಆರಂಭದ ಅಪಲಾಪದಿಂದ ಹಿಡಿದು ಜಾಹಿರಾತಿನ ತುಣುಕು ಸುರುವಾಗುವತನಕ ನೆಟ್ಟನೋಟದಿಂದ ಆಚೀಚೆ ಸರಿದಾಡದೇ ಕುಳಿತುಬಿಡುವವರ ವಯಸ್ಸಿಗೆ ನಿರ್ಬಂಧವೇ ಇಲ್ಲ. ಹಾಗೆ ನೋಡುವವರ ಮತ್ತು ನೋಡಿಸಿಕೊಳ್ಳಲ್ಪಡುವವರ ಕುರಿತು ವ್ಯವಹಾರಿಕ ಅಧ್ಯಯನ ಏನೇ ಹೇಳಿರಲಿ ಅಲ್ಲಿ ಸಹಜ ಅನುಕಂಪಗಳೇ ಬಂಡವಾಳವಾಗುತ್ತ ಹೋಗುವ ರೀತಿ ಮಾತ್ರ ಸಮಾಜದ ಆಂತರಿಕ ಸ್ಥಿರತೆಗೆ ಪೆಟ್ಟುಕೊಡುವುದಂತೂ ಖಚಿತ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುದ್ಧವೆಂದರೆ ಬರೀ ಸೋಲು ಗೆಲುವಲ್ಲ: ವಾಸುಕಿ ರಾಘವನ್

ನಮ್ಮಲ್ಲಿ ಯುದ್ಧದ ಸಿನಿಮಾಗಳೇ ಬಹಳ ಅಪರೂಪ. ಐತಿಹಾಸಿಕ ಚಿತ್ರವಾದರೆ ಯುದ್ಧ ಅಂದರೆ ರಾಜರ ಕಾಲದ ಕಾಸ್ಟ್ಯೂಮ್ ಧರಿಸಿ ಮಾಡುವ ಫೈಟಿಂಗ್ ಅಷ್ಟೇ. ಈಗಿನ ಕಾಲದ ಕಥೆ ಆಗಿದ್ದರೆ ಅದು ಯಾವುದಾದರೊಂದು ಯುದ್ಧದ ಡಾಕ್ಯುಮೆಂಟರಿ ಥರ ಇರುತ್ತೆ. ಜೊತೆಗೆ ಅದೇ ಕ್ಲೀಷೆಗಳು – ಮಗನ ಬರುವಿಕೆಗಾಗಿ ಕಾಯುತ್ತಿರುವ ವಿಧವೆ ಅಮ್ಮ, ಪರ್ಸಿನಲ್ಲಿ ಇರೋ ಹೆಂಡತಿ ಫೋಟೋ ನೋಡ್ತಾ ಸಾಯೊ ಸೈನಿಕ, ಯೋಧರು ಅಂದರೆ ಬರೀ ಒಳ್ಳೆಯವರು ಅನ್ನೋ ಭಾಷಣ. ನಮ್ಮಲ್ಲಿ anti-war ಸಿನಿಮಾಗಳು ಇಲ್ಲವೇ ಇಲ್ಲ. ಸ್ವಲ್ಪ ಮಟ್ಟಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುವೆಂಪುರವರ ಸೂರ್ಯಗೀತೆ; ಆನಂದಮಯ ಈ ಜಗಹೃದಯ: ದಿವ್ಯ ಆಂಜನಪ್ಪ

ಆನಂದಮಯ ಈ ಜಗಹೃದಯ……… ಕುವೆಂಪುರವರ ಸೂರ್ಯಗೀತೆಗಳಲ್ಲಿ ಪ್ರಸಿದ್ಧವಾದ ಈ ಗೀತೆಯೂ ಒಂದು. ಕವಿಗಳು ಈ ಜಗತ್ತಿನ ಎಲ್ಲಾ ಆಗೂ-ಹೋಗುಗಳ ಮೂಲವು 'ಶಿವ'ನೆಂದು ಭಾವಿಸುತ್ತಾರೆ. ಹಸುರಿನಿಂದ ನಳನಳಿಸುವ ಸಹ್ಯಾದ್ರಿಯಂತಹ ಬೆಟ್ಟಗಳು-ಅರಣ್ಯಗಳು. ಭೋರ್ಗರೆವ ಸಾಗರ, ನೀಲಿ ಆಕಾಶ, ಧುಮ್ಮಿಕ್ಕುವ ಜಲಧಾರೆ, ಸೋನೆ ಮಳೆ, ಹಕ್ಕಿಗಳ ಚಿಲಿಪಿಲಿ, ಮೋಡಗಳ ಘರ್ಜನೆ, ಹಾಡುವ ಕೋಗಿಲೆಗಳ ಕಂಠ ಸಿರಿ- ಹೀಗೆ ಪ್ರಕೃತಿಯ ಪ್ರತೀ ಸೌಂದರ್ಯದಲ್ಲೂ ಶಿವನ ಹೃದಯವು ವಿಸ್ತರಿಸಿದೆ ಎಂದು ಕವಿ ಉನ್ಮತ್ತರಾಗಿ ಹಾಡಿದ್ದಾರೆ. ಪ್ರಕೃತಿಯಲ್ಲಿ ಸಾಧಾರಣವಾಗಿ ಸಂಭವಿಸುವ ಸೂರ್ಯೋದಯ ಚಂದ್ರೋದಯವೂ ದೇವನ ದಯೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ (ಭಾಗ 9): ಚಿನ್ಮಯ್ ಮಠಪತಿ

  ಬದಲಾಗುತ್ತಿರುವ ಜೀವನ ಕ್ರಮವನ್ನೊಮ್ಮೆ ಸಿಂಹಾವಲೋಕನ ಮಾಡಬೇಕು. ಇಂತಹ ಒಂದು ಅವಲೋಕನ ಮಾಡಿದರೆ, ಎಷ್ಟೋ ವಿಸ್ಮಯಗಳು ನಮ್ಮನ್ನು ಯಾವದೋ ಒಂದು ಮಾಯಾಲೋಕಕ್ಕೆ ಕರೆದೊಯ್ದು ಒಂದು ಸುತ್ತು ಸುತ್ತಾಡಿಸಿಕೊಂಡು ಬರುತ್ತವೆ.  ಈ ನಡುವೆ ನಮ್ಮಲ್ಲಿ ಹಲವಾರು ಪ್ರಶ್ನೆಗಳು ಹುಟ್ಟುತ್ತವೆ ಮತ್ತು ಉತ್ತರವನ್ನು ಕೆಲವೊಂದಿಷ್ಟು ಪ್ರಶ್ನೆಗಳು ಕಂಡುಕೊಳ್ಳುತ್ತವೆ. ಕೆಲವು ಪ್ರಶ್ನೆಗಳು ಪ್ರಶ್ನೆಗಳಾಗಿಯೇ ಉಳಿಯುತ್ತವೆ. ಮೊನ್ನೆ, ನೆನ್ನೆ ಮತ್ತು ಇವತ್ತೆಂಬ ಈ ಪುಟ್ಟ ಕಾಲಾಂತರದಲ್ಲಿ ಕಾಣ ಸಿಗುವ ಅಮೋಘ ಬದಲಾವಣೆಗಳ ಜೊತೆ,  ಚೂರು ಹಿಂದೆ ಸರಿದು ಹಿಂದಿನ ವಿದ್ಯಮಾನಗಳನ್ನು ಅವಲೋಕಿಸಿದರೆ ಅದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಮಾತುರಾಣಾಂ: ಉಪೇಂದ್ರ ಪ್ರಭು

'ಏ ಚೆನ್ನಾಗಿ ಥಳಿಸು. ಜೀವಮಾನವಿಡೀ ಮರೀಬಾರ್ದು. ಮಾನಗೇಡಿ, ಏನಂದ್ಕೊಂಡಿದ್ದಾನೆ?' 'ಹಾಡುಹಗಲಲ್ಲೇ ಈ ಥರ ವರ್ತಿಸೋರು ಇನ್ನು ರಾತ್ರೆ ಏನೆಲ್ಲಾ ಮಾಡಿಯಾರೋ?' 'ಎಷ್ಟು ಕೊಬ್ಬು. ಅವಳ ಅಪ್ಪನ ವಯಸ್ಸಾಗಿರಬಹುದು!' 'ಕಾಮಾತುರನಿಗೆ ಎಲ್ಲಿಯ ಭಯ , ಎಲ್ಲಿಯ ಲಜ್ಜೆ !' 'ಎಲ್ಲಾ ಈ ಕುಡಿತದಿಂದ.  ದಿನಾ ನೋಡ್ತಿದ್ದೀವಿ. ಮಧ್ಯಾಹ್ನ, ಸಂಜೆ, ರಾತ್ರೆ, ಹೊತ್ತಿಲ್ಲ ಗೊತ್ತಿಲ್ಲ, ತೂರಾಡುತ್ತಲೇ ಇರುತ್ತಾನೆ.  ಈ ಗೌರ್‍ಮೆಂಟ್ನವ್ರೂ ಅಷ್ಟೆ. ತಮ್ಮ ಲಾಭಕ್ಕೆ ಎಲ್ಲಾರ್ಗೂ ಲೈಸನ್ಸ್ ಕೊಟ್ಟ್‍ಬಿಟ್ಟಿದ್ದಾರೆ. ಹೆಜ್ಜೆಗೊಂದೊಂದು ಬಾರ್, ಸಾರಾಯಿ ಅಂಗಡಿ!'  'ಚಪ್ಲಿಯಿಂದ ಬಾರಿಸ್ರೋ, ಸತ್ರೂ ಸಾಯ್ಲಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೂ ಒಂದು ಪ್ರೇಮ ಪತ್ರ: ಶೀತಲ್ ವನ್ಸರಾಜ್

ಪ್ರೀತಿಯೊಂದಿಗೆ ಪೂರ್ಣತೆ ತಂದವಳೇ ,               ಅಪ್ಪ,ಅಮ್ಮ,ಕಸಿನ್ಸ್ ,ಫ್ರೆಂಡ್ಸ್ ಎಲ್ಲರೂ ಇದ್ದರೂ ಎನೋ ಒಂದು ಕೊರತೆ ಇತ್ತು ಜೀವನದಲ್ಲಿ.. ಕೇಕ್ ಮೇಲೆ ಚೆರ್ರಿ ಮಿಸ್ ಆದಂತೆ,ಕಾಫಿಯಲ್ಲಿ ಕೊಂಚ ಸಕ್ಕರೆ ಕಡಿಮೆ ಇದ್ದಂತೆ,ಸಿಂಗರಿಸಿಕೊಂಡ ಹೆಣ್ಣು ಕುಂಕುಮವಿಡುವುದ ಮರೆತರೆ ಹೀಗೆ ಏನೇನೊ ಅಪೂರ್ಣ…ನೀ ಬಂದಾಗ ಅದಕ್ಕೆಲ್ಲಾ ಪೂರ್ಣತೆ ಸಿಕ್ಕಂತೆ,ಜೀವನಕ್ಕೊಂದು ಅರ್ಥ ಸಿಕ್ಕಿತು ನೀ ನನಗೆ ಸ್ವಂತವಾದ ದಿನವೇ…ನಾವಿಬ್ಬರು ಸೇರಿ ನಡೆಸಿದ ಜೀವನ ಸರಸ -ವಿರಸಗಳೊಡನೆ  ನೀ ಕರೆಯುತ್ತಿದ್ದಾಗ ಒಮ್ಮೊಮ್ಮೆ ನನ್ನ 'ಜೀ' ಎಂದು, 'ವನ್' ಎಂಬುದು ಇರದಿದ್ದರೂ ಜೀವನವೊಂತು ಸಂಪೂರ್ಣವಾಗಿತ್ತು…ಈಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ಕಥೆ: ಸುನಿಲ್ ಗೌಡ

  "ಎಲ್ಲಾ ಕೆಲ್ಸ ಮುಗ್ಸಿ ತಿಂಡಿ ಮಾಡಿದ್ರು ಇನ್ನೂ ಬಿದ್ದಿದ್ದೀಯಲ್ಲಾ, ಚಿಂತೆ ಇಲ್ದೋನ್ಗೆ ಚಿತೆ ಮೇಲೆ ಮಲ್ಗಿಸಿದ್ರು ನಿದ್ದೆ ಬರ್ತವಂತೆ. ಎದ್ದು ತೋಟ ನೋಡೋಗೊ ಸೋಮಾರಿ, ಈಗೀನ್ ಕಾಲದ್ ಹುಡುಗ್ರು ಮಲ್ಗದು ಏಳದು ಯಾವ್ದು ಸರಿ ಮಾಡಲ್ಲ". ಅಡುಗೆಯ ಮನೆಯಿಂದ ವಗ್ಗರಣೆಯ ತುಪ್ಪದ ವಾಸನೆ ಜೊತೆ ಸರ್ರನೆ ಬಂದ ಅಮ್ಮನ ಧ್ವನಿಗೆ ಕಿವಿ ಮುಚ್ಚಿ ವಗ್ಗರಣೆಯ ವಾಸನೆಯನ್ನು ಆಸ್ವಾದಿಸಲು ಮುಂದಾದೆ, "ಏಳ್ತೇನೆ ತಡಿಯಮ್ಮ, ಯಾಕೆ ಈ ತರಹಾ ಕಿರುಚ್ತೀಯ, ಆ ವಾಯ್ಸ್ ನನ್ ಕಿವೀಲಿ ಕೇಳೋಕೆ ಆಗಲ್ಲಾ.." … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಚುಟುಕಗಳು: ಶಂಕರ್ ಕೆಂಚನೂರು, ಪ್ರತಾಪ್ ಬ್ರಹ್ಮವಾರ್, ರಾಜಶೇಖರ (ಬಂಡೆ)

ಪರಿತ್ಯಕ್ತರು ಆ ಅರಳಿ ಕಟ್ಟೆಮೇಲೆ ಒಂದಷ್ಟು ಜನ ಹಿರಿಯರು, ಇನ್ನೊಂದು ಕಡೆ ಗಾಜು ಒಡೆದಿದ್ದಕ್ಕೆ ಚಿತ್ರ ಮಾಸಿದ್ದಕ್ಕೆ ಪೂಜೆಯ ಅರ್ಹತೆ ಕಳೆದುಕೊಂಡ ದೇವರ ಫೋಟೋಗಳು -ಶಂಕರ್ ಕೆಂಚನೂರು ಅನಾಥ ನಿರೀಕ್ಷೆ ತುಕ್ಕು ಹಿಡಿದ ತಕ್ಕಡಿಯಂತ ಹೃದಯವನ್ನಾ  ಅದ್ಯಾರದೋ ಮನಸ್ಸಿಗೆ ತೂಕಕಿಟ್ಟೆ   ಅದೂ ಪಕ್ಕಾ ವ್ಯಪಾರಿ  ತೂಕಿಸಿಕೊಂಡು  ಮತ್ತೆ ಕೆಲಸಕೆ ಬರದ ತಕ್ಕಡಿಯೆಂದು ನನ್ನತ್ತ ತಳ್ಳಿತು  ಅನಾಥ ಹೃದಯ ಮತ್ತೆ ಎತ್ತಿಕೊಳುವ  ಮನಸಿಗೆ ಕಾಯುತಿಹುದು ಶಬರಿ ಕಾದಂತೆ   -ಪ್ರತಾಪ್ ಬ್ರಹ್ಮವಾರ್   ಬಂಡೆಯ ಚುಟುಕಗಳು ಮುಳುಗಡೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆತ್ಮ ಮತ್ತು ಮನಸ್ಸುಗಳಿಗೆ ಆನಂದ ತರುವದೆ, ಆಧ್ಯಾತ್ಮ: ಕೆ.ಎಂ. ವಿಶ್ವನಾಥ

ಈ ಭೂಮಿಯಲ್ಲಿ ಯಾವುದೂ ಶಾಶ್ವತವಲ್ಲ, ಎಲ್ಲವೂ ಒಂದು ದಿನ ನಶಿಸಿ ಹೋಗುತ್ತದೆ. ಅದರಲ್ಲಿ ಉಳಿವುದೊಂದೇ ಜೀವಾತ್ಮ. ಅದನ್ನು ಸದಾ ಸಂತೋಷವಾಗಿಡುವ ಏಕೈಕ ಅಸ್ತ್ರವೆಂದರೆ ಅದೇ ಆಧ್ಯಾತ್ಮ . ಸಂಸಾರದ ಈ ಸಾಗರದಲ್ಲಿ ತಾಪತ್ರಯಗಳು, ವೇದನೆ  ನೋವು, ಜಿಗುಪ್ಸೆ, ಹತಾಶೆ, ಸಂತೋಷ, ಇವೆಲ್ಲ ತಪ್ಪಿದಲ್ಲ, ಎಲ್ಲವೂ ನಮ್ಮನ್ನು ತಿಂದು ಹಾಕುವುದು, ಸದಾ ನಮ್ಮ ಮನಸ್ಸು ಮತ್ತು ಆತ್ಮಗಳಿಗೆ ಚಿಂತನೆಗೆ ಹಚ್ಚುವುದು. ನಿಂತಲ್ಲಿ ನಿಲ್ಲದೆ, ಕೂತಲ್ಲಿ ಕೂಡದೆ ಹೋಗುವುದು, ಅತ್ತಿಂದ ಇತ್ತ ಮಂಗದಂತೆ ಜಿಗಿದಾಡುವದು, ನಾವು ವಿನಾಕಾರಣ ಕೋಪಗೊಳ್ಳುವುದು, ಮತ್ತೊಬ್ಬರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ