ನನ್ನೊಳಗಿನ ಗುಜರಾತ…!!! ಭಾಗ-4

ಯಾಕೋ ಮನಸ್ಸು ಒಮ್ಮೊಮ್ಮೆ ಅಗಣಿತ ಮುಖವಾಡಗಳನ್ನು ಹಾಕುತ್ತದೆ. ಹಾಕಿ, ಜಗದ ಜನರ ಮುಂದೆ ಏನೆಲ್ಲ ತಾನೇ ಆಗಿ ಗಿರ್ರೆಂದು ತಿರುಗುವ ಬುಗುರಿಯ ಹಾಗೆ ತಿರುಗುತ್ತದೆ. ತುತ್ತೂರಿಯಾಗಿ ಏರು ದನಿಯಲ್ಲಿ ಕೂಗಿ, ಮಾರ್ದನಿಸಿ ಸದ್ದು ಗದ್ದಲೆಬ್ಬಿಸಿ ಒಳಮಾನಸದೊಳು ಭೀಮ ಅಲೆಗಳನ್ನು ಎಬ್ಬಿಸುತ್ತದೆ. ನೃತ್ಯ ಕಲಾ ಪ್ರವೀಣೆ ಚೆಂದುಳ್ಳಿ ಚೆಲುವೆ ನರ್ತಕಿಯಾಗಿ ಕುಣಿಯುತ್ತದೆ. ಬುಗುರಿಯಾಗಿ ಸುತ್ತಿ, ತುತ್ತೂರಿಯಾಗಿ ಕೂಗಿ, ನರ್ತಕಿಯಾಗಿ ಕುಣಿದು, ತಾನಷ್ಟೆ ಒಳ ಸುಖಿಸಿ, ಸ್ಖಲಿಸಿ ಎಲ್ಲವುಗಳನ್ನು ಅನುಭವಿಸುವ ಹಕ್ಕನ್ನು ತಾನೇ ಪಡೆದಿದ್ದರೆ, ಅದರ ಹಿಂದಿಂದೆಯೇ ಬಿಡಿಸಿಕೊಳ್ಳಲಾಗದ ಸೂತ್ರದಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರ್ಜಾಲ ಕನ್ನಡ ಬ್ಲಾಗ್ ಹಾಗೂ ಪತ್ರಿಕೆಗಳು ಮತ್ತು ಕನ್ನಡದ ಕಾಯಕ

ಬದಲಾಗುತ್ತಿರುವ ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ ಪರಭಾಷಾ ಹಾವಳಿ ಹಾಗೂ ಆಂಗ್ಲ ಭಾಷೆಯ ವ್ಯಾಮೋಹ ನಮ್ಮನ್ನು ತೀರಾ ಕಾಡುತ್ತಿರುವ ವಿಷಯಗಳು ಏಕೆಂದರೆ ಈ ಎರಡೂ ವಿಷಯಗಳು ಕನ್ನಡದ ಉಳಿವಿಗೆ ಸಂಚಕಾರ ತಂದೊಡ್ಡಬಹುದು ಎನ್ನುವ ಮಾತನ್ನು ತಿರಸ್ಕರಿಸುವಂತಿಲ್ಲ. ಆದರೆ ಕನ್ನಡ ಸಾವಿಲ್ಲದ ಸಾವಿರ ಕಾಲ ಬದುಕುವ ಕನ್ನಡಿಗರ ಉಸಿರಾಗಿರುವ ಭಾಷೆ. ಆದರೆ ಪ್ರಸ್ತುತ ಸನ್ನಿವೇಷದಲ್ಲಿ ಕನ್ನಡ ಕಟ್ಟುವ ಕೆಲಸ ಅತ್ಯವಶ್ಯಕ. ಇಂತಹ ಕನ್ನಡ ಕಟ್ಟುವ ಕೆಲಸವನ್ನು ಹಲವಾರು ಸಂಸ್ಥೆಗಳು, ಸಂಘಟನೆಗಳು ನಿರ್ವಹಿಸುತ್ತಿವೆಯಾದರು ಕೆಲವೊಂದು ಕಾರ್ಯಗಳು  ಮಾತ್ರ ಕೇವಲ ಪತ್ರಿಕೆಗಳ ಸುದ್ದಿಗಷ್ಟೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಾರ ಮೂರು….. :)))

  ಕಳೆದ ವಾರ ಫೇಸ್ ಬುಕ್ ನಲ್ಲಿ ಚಿಕ್ಕಲ್ಲೂರು ಅನ್ನೋ ಹೆಸರು ನೋಡಿ ಆಶ್ಚರ್ಯವಾಗಿತ್ತು.  ಹಿರಿಯ ಪತ್ರಕರ್ತರಾದ ಕುಮಾರ ರೈತ ಅವರು ಚಿಕ್ಕಲ್ಲೂರು ಜಾತ್ರೆಯ ಚಿತ್ರಗಳನ್ನು ಫೇಸ್ ಬುಕ್ ನಲ್ಲಿ ಹಂಚಿಕೊಳ್ಳುವುದರ ಜೊತೆಗೆ "ಜನಪದ ನಾಯಕ ಸಿದ್ದಪ್ಪಾಜಿ ಸ್ಮರಣೆಗೆ ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರಿನಲ್ಲಿ ಜಾತ್ರೆ ನಡೆಯುತ್ತದೆ. ಜ. 27ರಂದು ನಾನು ಹೋಗಿದ್ದೆ. ಅಲ್ಲಿನ ಚಂದ್ರಮಂಡಲದ ಬೆಂಕಿ ಎತ್ತ ಹೆಚ್ಚು ಉರಿಯುವುದೋ ಅತ್ತ ಮುಂದಿನ ಹಂಗಾಮಿನಲ್ಲಿ ಸಮೃದ್ಧತೆ ಇರುತ್ತದೆ ಎಂಬುದು ನಂಬಿಕೆ" ಎಂಬ ಸಾಲನ್ನು  ಫೋಟೋಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ನಾಡರ “ಹಯವದನ”

ಮನುಷ್ಯನ ಅಪೂರ್ಣತೆಯ ಬಗೆಗೆ ಆಲೋಚಿಸಲು, ಕಾರ್ನಾಡರ “ಹಯವದನ” ಓದಬೇಕು. ನಾಟಕ ಆರಂಭ ಆಗುವುದು ಗಣೇಶನ ಅಪೂರ್ಣತೆಯ ಉಲ್ಲೇಖನದಿಂದ. ಇಲ್ಲಿ ಕಂಡುಬರುವುದು ಬರೇ ಮೂರು ಮುಖ್ಯ ಪಾತ್ರಗಳು – ಪದ್ಮಿನಿ, ದೇವದತ್ತ ಹಾಗೂ ಕಪಿಲ. ಇಲ್ಲಿ ಅಪೂರ್ಣತೆಯ ಪ್ರತೀಕ ಅನ್ನುವಂತೆ ಹಯವದನನಿದ್ದಾನೆ.  ಇಲ್ಲಿನ ಕಥೆ ಸಾಮಾನ್ಯವಾಗಿ ಗೊತ್ತಿರುವಂತಹದೆ. ಯಾವುದೇ ಕಾರಣಕ್ಕೆ ಇಬ್ಬರು ಮನುಷ್ಯರ ತಲೆ ಅದಲು ಬದಲಾದರೆ, ತಲೆ ಇರುವವನನ್ನು ಅವನ ಹೆಸರಿನಿಂದ ಗುರುತಿಸುತ್ತೇವೆ, ಯಾಕೆಂದರೆ ತಲೆ ಮುಖ್ಯ. ಈ ಸಣ್ಣ ತುಣುಕನ್ನು ಹಿಡಿದುಕೊಂಡು ಕಾರ್ನಾಡರು ತುಂಬಾ ವಿಚಾರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓ ನಾಗರಾಜ ಅಪ್ಪಣೆಯೇ…

  ನಮ್ಮ ಆಫೀಸಿನ ಎದುರು ಬೈಕುಗಳು ಸಾಲಾಗಿ ನಿಲ್ಲುವ ಜಾಗದಲ್ಲಿ ಮೊನ್ನೆ ನಾಗರಹಾವೊಂದು ಬಂದು ಮಲಗಿತ್ತು. ಅದೇನು ಬೈಕಿನಂತೆ ಸರದಿ ಸಾಲಿನಲ್ಲಿ ಇರಲಿಲ್ಲ. ಯಾರದೋ ಬೈಕಿನ ಟ್ಯಾಂಕ್ ಕವರ್‌ನಲ್ಲಿ ಬೆಚ್ಚಗೆ ಪವಡಿಸಿತ್ತು. ಸದ್ಯ ಬೈಕಿನ ಸವಾರನಿಗೆ ಅದೇನು ಮಾಡಲಿಲ್ಲ. ಗಾಬರಿಯಿಂದ ಇಳಿದು ಯಾವುದೋ ಚರಂಡಿ ಹುಡುಕಿಕೊಂಡು ಹೋಯಿತು. ಆವತ್ತೆಲ್ಲ ಆ ಹಾವಿನ ಬಗ್ಗೆ ಗುಲ್ಲೋ ಗುಲ್ಲು. ಅಲ್ಲಿದ್ದವರೆಲ್ಲ ಹಾವು ಅಲ್ಲಿಗೆ ಏಕೆ ಬಂತು ಎಂಬುದರ ಬಗ್ಗೆ ಒಂದು ವಿಚಾರಸಂಕಿರಣಕ್ಕೆ ಆಗುವಷ್ಟು ಮಾತಾಡಿದರು ಎನ್ನಿ. ಹಾವುಗಳು ಯಾರಿಗೆ ತಾನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರಂಗದ ಗಂಗೆ

ಆಫೀಸ್‍ಗೆ ಮುಂಚೆ ಬರುವ ಅಭ್ಯಾಸವಿದ್ದರೆ ಇದೊಂದು ಮುಜುಗರ. ಒಳಗೆಲ್ಲ ಕಸ ಗುಡಿಸುತ್ತಿದ್ದರು. ಹಾಗಾಗಿ ಸೆಕ್ಷನ್ನಿನ ಹೊರಗೆ ನಿಂತಿದ್ದೆ. ನಾನು  ನಿಂತಿರುವುದನ್ನು  ಗಮನಿಸಿದ ಆಕೆ ಬೇಗ-ಬೇಗ ಎಂಬಂತೆ ಗುಡಿಸಿ, ಹಾಗೆ ಒಳಗಿದ್ದ ಡಸ್ಟ್ ಬಿನ್ ಗಳ ಎಲ್ಲ ಕಾಗದಗಳನ್ನು ಒಂದೆ ಬ್ಯಾಸ್ಕೆಟ್ ಗೆ ಹಾಕಿಹೊರಬಂದಳು. ಒಳಗೆ ಗುಡಿಸಿದಾಗ ಎದ್ದ  ಧೂಳು ಸ್ವಲ್ಪ  ಸರಿಯಾಗಲಿ ಎಂದು ಒಂದೆರಡು ನಿಮಿಷ ನಿಂತಿದ್ದೆ. ಆಕೆ ಒಳಗಿನಿಂದ ತಂದ ಕಸವನ್ನೆಲ್ಲಹೊರಗಿನ ದೊಡ್ಡ ಕಸದಡಬ್ಬಿಗೆ ಹಾಕುವ ಮುನ್ನ ಅದೇನೋ  ಗಮನಿಸಿದಳು.  ಈ ಅಕ್ಷರಜ್ಞಾನವಿಲ್ಲದಿರುವ ಕೆಲಸದವರಲ್ಲಿ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕಾವ್ಯಗಳು

ಮನಸ್ಸೆಂಬ ಚಿಟ್ಟೆ ************* ಚಿಟ್ಟೆ ಚಿಟ್ಟೆ ಬಣ್ಣದ ಚಿಟ್ಟೆ  ನೋಡಲು ಕಣ್ಣುಗಳು ಸಾಲದು ಮೈಯ ಮೇಲೆಲ್ಲಾ ಕಪ್ಪು ಕಂಗಳು ನೋಡುಗರ ಕಣ್ಮನ ಸೆಳೆಯುವುದು    ಅಲ್ಲಿಂದಿಲ್ಲಿಗೆ ಹಾರುವೆ  ಹಿಡಿಯಲು ಹೋದರೆ ಓಡುವೆ  ಜಗದ ಸೃಷ್ಟಿಯ ಮೆಚ್ಚಲೇ ಬೇಕು  ನಿನಗೆ ನೀನೆ ಸಾಟಿಯಿರಬೇಕು    ಒಮ್ಮೆ ಇಲ್ಲಿ ಒಮ್ಮೆ ಇನ್ನೆಲ್ಲೋ  ಹಾರುವ ನಿನ್ನನು ನೋಡಿದರೆ  ಮನಸು ಕೂಡ ನಿನ್ನೊಡನೆಯೇ  ಕುಣಿಯುತ ಹೊರಡುವುದು ಬೇರೆಡೆಗೆ !! -ಅರ್ಪಿತಾ ರಾವ್  ನವಮಾಸ  ********* ನವಮಾಸ ಬಂದಿದೆ ಆಹ್ಲಾದವ ತಂದಿದೆ ಎನ್ನ ಬಾಳಿನಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಂಟೆಕ್ಸ್ಟ್

ಮನುಷ್ಯನ ಭಾವನೆಗಳು ಸಾರ್ವತ್ರಿಕ. ಆದರೆ ಅವುಗಳ ಅಭಿವ್ಯಕ್ತಿ ಬದಲಾಗುತ್ತದೆ – ಬೇರೆ ಬೇರೆ ದೇಶಗಳಲ್ಲಿ, ಭಾಷೆಗಳಲ್ಲಿ, ಕಾಲಘಟ್ಟಗಳಲ್ಲಿ ಕಾಣಬರುವ ರೀತಿಯಲ್ಲಿ ಭಿನ್ನತೆಯಿರುತ್ತದೆ. ಇದನ್ನು ‘ಕಾಂಟೆಕ್ಸ್ಟ್’ ಅಂತೀನಿ ನಾನು. ಈ ಕಾಂಟೆಕ್ಸ್ಟ್ ಗೊತ್ತಿದ್ದಾಗ ಮಾತ್ರ ಕೆಲವು ಪಾತ್ರಗಳು, ಸನ್ನಿವೇಶಗಳು, ಚಿತ್ರಗಳನ್ನು ಅಪ್ಪ್ರಿಶಿಯೇಟ್ ಮಾಡಲಿಕ್ಕೆ ಸಾಧ್ಯ! ಇದಕ್ಕೆ ಉದಾಹರಣೆಯಾಗಿ ಒಂದಕ್ಕಿಂತ ಒಂದು ವಿಭಿನ್ನವಾಗಿರುವ ಎರಡು  ಮಹಾನ್ ಚಿತ್ರಗಳ ಬಗ್ಗೆ ಹೇಳಲು ಇಷ್ಟಪಡುತ್ತೇನೆ – “೧೨ ಆಂಗ್ರಿ ಮೆನ್” ಹಾಗು “ದಿ ಗುಡ್, ದಿ ಬ್ಯಾಡ್ ಅಂಡ್ ದಿ ಅಗ್ಲಿ”. ಪ್ರತಿಯೊಬ್ಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾತೃ ಭಾಷೆಗೆ ಸಿಕ್ಕ ಮನ್ನಣೆ

  ಹಚ್ಚೇವು ಕನ್ನಡದ ದೀಪ  ಕರು ನಾಡ  ದೀಪ  ಸಿರಿನುಡಿಯ ದೀಪ ಒಲವೆತ್ತಿ ತೋರುವಾ ದೀಪ l            ನಾಲ್ಕು ವರ್ಷಗಳ ಹಿಂದೆ ಮೊದಲ ಬಾರಿಗೆ ಭಾರತದ ನನ್ನ ಹಳ್ಳಿ ಬಿಟ್ಟು ಈ ಮರುಭೂಮಿಗೆ ಬಂದು ಇಳಿದಾಗ ಅಸಾಧ್ಯ ಭಯ ಇತ್ತು. ದೇವರೇ! ಹೇಗೆ ನಾನು ಬದುಕಿ ಉಳಿದೇನಾ ಅಂತ. ಆದರೆ ನಾನು ಇದ್ದ ಜಾಗ ತುಂಬಾ ಸುರಕ್ಷಿತವಾಗಿತ್ತು. ನನ್ನ ಬಹು ಮಹಡಿ ಕಟ್ಟಡದಲ್ಲಿ ಹಾಗೂ ಸುತ್ತಲೂ ಎಲ್ಲವೂ ಇತ್ತು. ಕ್ಲಿನಿಕ್, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ…! ಭಾಗ 3

ಯಾರಿಗುಂಟು ಯಾರಿಗಿಲ್ಲ…!! ಇದನ್ನು ಅದೃಷ್ಟ ಅನ್ನುತ್ತಿರೊ ಅಥವಾ ದುರಾದೃಷ್ಟ ಅನ್ನುತ್ತಿರೊ ನಾನರಿಯೆ. ಆದರೆ, ನಾನು ಮಾತ್ರ ಬಾಲ್ಯದಲ್ಲಿಯೇ ಈ ಬದುಕಿನ ಆದಿ ಅಂತ್ಯಗಳೆಂಬ ಜನನ ಮರಣಗಳನ್ನು ಬಲು ಸನಿಹದಿಂದ ಕಣ್ಣು ತುಂಬ ಕಂಡವನು. ಅವುಗಳ ಅರ್ಥವನ್ನು ತಿಳಿಯುವ ಮೊದಲೇ ಬೆಳ್ಳಿ ಪರದೆಯ ಮೇಲೆ ಮೂಡಿ ಬರುವ ಅದ್ದೂರಿ ವೈಭವಿಕ ಚಲನಚಿತ್ರದ ದೃಶ್ಯದಂತೆ ಎರಡರ ಜೀವಂತ ದೃಶ್ಯವಿದ್ಯಮಾನಗಳನ್ನು ಕಂಡು, ಬುದ್ಧಿ ಬೆಳೆಯುತ್ತಿದ್ದಂತಯೇ ಅವುಗಳ ಆಳ ಮತ್ತು ವಿಸ್ತಾರಗಳನ್ನು ತಿಳಿಯುವ ಪ್ರಯತ್ನಕ್ಕೆ ಇಳಿದವನು. ಪುಟ್ಟು ಊರಲ್ಲಿ ಹುಟ್ಟಿ, ಗ್ರಾಮೀಣ ಬದುಕನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಟ್ಟದ ಅ೦ಗಳದಲ್ಲೊ೦ದು ದಿನ

ಈ ಬಾರಿಯ ರಜಾ ಮಜಾವನ್ನು ಅನುಭವಿಸಲು ಮಿತ್ರರೆಲ್ಲ ಸೇರಿ ಭೂ ಲೋಕದ ‘ಸ್ವರ್ಗ’ ಕೊಡಗಿಗೆ ಹೋಗುವುದೆ೦ದು ತೀರ್ಮಾನಿಸಿದೆವು. ನಮ್ಮ ಪ್ರವಾಸದ ಮುಖ್ಯ ವೀಕ್ಷಣಾ ತಾಣವಾಗಿ ಆರಿಸಿಕೊ೦ಡದ್ದು ಮುಗಿಲುಪೇಟೆಯೆ೦ದೇ ಖ್ಯಾತಿ ಗಳಿಸಿರುವ ಮಾ೦ದಲಪಟ್ಟಿ ಪರ್ವತ ಸಾಲುಗಳನ್ನು. ಅ೦ತೆಯೇ ನಿಗದಿತ ದಿನಾ೦ಕದ೦ದು ಮು೦ಜಾನೆ ಉಡುಪಿಯಿ೦ದ ಮ೦ಗಳೂರಿಗಾಗಿ ಕೊಡಗಿಗೆ ಹೊರಟೆವು,ಹೊರಟಾಗ ಮು೦ಜಾನೆ ೫ಃ೩೦. ಮು೦ಜಾನೆಯ ಚುಮು ಚುಮು ಚಳಿಯಲ್ಲಿ ಗಾಡಿ ಓಡಿಸುವುದು ತು೦ಬಾ ಮಜವಾಗಿತ್ತು. ನಾನು ಜೀವನದಲ್ಲಿ ಮೊತ್ತ ಮೊದಲ ಬಾರಿಗೆ ಸೂರ್ಯೋದಯ ನೊಡಿದ್ದೇ ಅ೦ದು ! ಹಾಗೂ ಸೂರ್ಯ ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಬ್ಬರ ಚುಟುಕಗಳು

  ನಿಸ್ವಾರ್ಥ.. ಒಕ್ಕಲಿಗ ನೆಟ್ಟ ಗಿಡ ಇಂದು ದೊಡ್ಡ ಮರವಾಗಿ ನೆರಳಾಗಿ ನಿಂತಿದೆ ದಣಿದ ದೇಹಕೆ ಯಾವ ಭೇದವನ್ನು ತೋರದೆ ಫಲ! ಭೂ ತಾಯಿ ಕೊಟ್ಟ ನೀರಿಂದ ರೈತ ಸುರಿಸಿದ ಬೆವರಿಂದ ಫಲಸಿಕ್ಕಿತು! ಹೊಟ್ಟೆಗೆ ಅನ್ನ ಜೊತೆಗೆ ಮುಚ್ಚಿಕೊಳ್ಳಲು ಮಾನ!! -ಮಂಜು ವರಗಾ   ಕಣ್ಣೀರು ಅತ್ತುಬಿಡು ಎಂದಾಗ,  ಬರದ ಹನಿ, ಅಳಬೇಡ ತಡೆಯೆಂದಾಗ, ಉಕ್ಕಿ ಹರಿವ ಧಾರೆ!! ಹೃದಯ ಇದ್ದಾಗ,  ಕೊಂಚವೂ ಗೋಚರಿಸದ , ತನ್ನನ್ನೇ ಕೊಟ್ಟು ಬರಿದಾದ ಮೇಲೆ,  ಭಾರ ತೋರುವ,  ಏಕೈಕ  ವೈಚಿತ್ರ್ಯ!! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೂವು, ಮರ, ಬಾನು

               ಮುರಳಿ ಮೋಹನ್ ಕಾಟಿ                                    ಪ್ರಸಾದ್ ಶೆಟ್ಟಿ ವಿ.ಸೂ.: ಹೂವಿನ ಚಿತ್ರಗಳನ್ನು ಪ್ರಸಾದ್ ಶೆಟ್ಟಿಯವರು ಲಾಲ್ ಬಾಗ್ ನ ಪುಷ್ಪಮೇಳದಲ್ಲಿ ತೆಗೆದಿದ್ದಾರೆ.             ಕೊನೆಯ ಮೂರು ಚಿತ್ರಗಳನ್ನು ಮುರಳಿ ಮೋಹನ್ ರವರು ತೆಗೆದಿದ್ದಾರೆ. ಕನ್ನಡದ ಬರಹಗಳನ್ನು ಹಂಚಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮ ಮುಂದಿನ ಸಂಚಿಕೆಯಲ್ಲಿ ನಿರೀಕ್ಷಿಸಿ…..

1. ಮೊದಲು ಓದುಗನಾಗು:       ಕಾರ್ನಾಡರ “ಹಯವದನ”- ರಾಜೇಂದ್ರ ಬಿ. ಶೆಟ್ಟಿ 2. ಪಂಜು ವಿಶೇಷ:       ಓ ನಾಗರಾಜ ಅಪ್ಪಣೆಯೇ…-ಹರಿ ಪ್ರಸಾದ್ 3. ಕಥಾಲೋಕ:      ಅಂತರಂಗದ ಗಂಗೆ – ಪಾರ್ಥಸಾರಥಿ ನರಸಿಂಗರಾವ್ 4. ಕಾವ್ಯಧಾರೆ:      ಮೂರು ಕಾವ್ಯಗಳು -ಅರ್ಪಿತಾ ರಾವ್, ಕಾಂತರಾಜು ಕೆ ಮತ್ತು ರಾಜಹಂಸ 5. ಸಿನಿ-ಲೋಕ:       ಕಾಂಟೆಕ್ಸ್ಟ್- ವಾಸುಕಿ ರಾಘವನ್ 6. ಪಂಜು-ವಿಶೇಷ:     ಮಾತೃ ಭಾಷೆಗೆ ಸಿಕ್ಕ ಮನ್ನಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದ್ವಿತೀಯ ಸಂಚಿಕೆ ನಿಮ್ಮ ಮಡಿಲಿಗೆ….

  ಸಹೃದಯಿಗಳೇ, ಪಂಜುವಿನ ದ್ವಿತೀಯ ಸಂಚಿಕೆಯನ್ನು ನಿಮ್ಮ ಮಡಿಲಿಗೆ ಹಾಕುವ ಮೊದಲು ಪಂಜುವಿನ ಮೊದಲ ಸಂಚಿಕೆಗೆ ನೀವು ತೋರಿದ ಪ್ರೀತಿ ಪ್ರೋತ್ಸಾಹ ಸಹಕಾರಕ್ಕೆ ನಾನು ತುಂಬು ಹೃದಯದ ವಂದನೆಗಳನ್ನು ಸಲ್ಲಿಸಬೇಕು. ನಿಮ್ಮ ಪ್ರೀತಿ ಪಂಜುವಿನ ಮೇಲೆ ಹೀಗೆಯೇ ಇರಲಿ. ಒಮ್ಮೆ ಅಂತರ್ಜಾಲ ತಾಣವೊಂದರಲ್ಲಿ ಲೇಖನವೊಂದನ್ನು ಬರೆದಿದ್ದಾಗ ಆತ್ಮೀಯರೊಬ್ಬರು ಕರೆ ಮಾಡಿ "ನೀವು ಬರೆದಿರೋದನ್ನು ಓದುಗರು ಓದ್ತಾ ಇರ್ತಾರೆ. ಸುಮ್ಮಸುಮ್ಮನೆ ಏನೇನೋ ಬರೆಯಲು ಹೋಗಬೇಡಿ." ಎಂದು ಎಚ್ಚರಿಸಿದ್ದರು. ಅಂತರ್ಜಾಲ ತಾಣದಲ್ಲಿ ಬರೆಯುವ ಪ್ರಕಟಿಸುವ ಸ್ವಾತಂತ್ರ್ಯವಿದೆಯೆಂದು ನಮ್ಮಿಚ್ಚೆಯಂತೆ ಬರೆಯುತ್ತಾ ಪ್ರಕಟಿಸುತ್ತಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇದೇ ಮೇಲಲ್ಲವೇ?

  "ದೇವರಮನೆ ಬಾಗಿಲು ಮುಚ್ಚಿಬಿಡೇ" ಅಪರೂಪಕ್ಕೆ ಬಂದ ಗೆಳತಿ ಅಸ್ಪೃಶ್ಯಳಂತೆ ಬಾಗಿಲಲ್ಲೇ ನಿಂತು ಹೇಳುತ್ತಿದ್ದಳು. ಯಾಕೆಂದು ಕೇಳುವ ಅಗತ್ಯವಿರಲಿಲ್ಲ. ನಾನು ಹೋಗಿ ಮುಚ್ಚಿದೆ. "ಅಯ್ಯೋ ಬಿಡೇ ನೀನೊಬ್ಬಳು ಅಡಗೂಲಜ್ಜಿ ತರಹ ಆಡ್ತೀಯಮ್ಮಾ"-ಜೊತೆಯಲ್ಲಿದ್ದ ಇನ್ನೊಬ್ಬ ಗೆಳತಿಯ ಪ್ರತಿಕ್ರಿಯೆ. ಅವಳಲ್ಲಿ ಉತ್ತರವಿರಲಿಲ್ಲ, ಮುಖ ಪೆಚ್ಚಾಯಿತು. ಅದೊಂದು ನಂಬಿಕೆಯಷ್ಟೆ. ನಂಬಿಕೆಯೊಳಗೆ ಪ್ರಶ್ನೆಗಳೂ ಹುಟ್ಟುವುದಿಲ್ಲ, ಹಾಗೂ ಉತ್ತರಗಳೂ ಇರುವುದಿಲ್ಲ. ಪ್ರಶ್ನೆ ಇದ್ದರದು ನಂಬಿಕೆಯಾಗಿರುವುದಿಲ್ಲ, ಒಂದು ಸಂಶಯವಾಗಿರುತ್ತದೆ. ಸಂಪ್ರದಾಯಸ್ಥ ಮನೆಗಳಿಂದ ಬಂದ ಇಂದಿನ ಹೆಣ್ಣುಮಕ್ಕಳೆಲ್ಲರೂ ಇದೊಂದು ಅರ್ಥವಿಲ್ಲದ ಆಚರಣೆ ಎಂದು ತಿಳಿದಿದ್ದರೂ, ಅದನ್ನೊಂದು ಸಹಜಪ್ರಕ್ರಿಯೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮತ್ತೆ ಮತ್ತೆ ತೇಜಸ್ವಿ

ಗೆಳೆಯ ಪರಮೇಶ್ವರ್ ಮತ್ತು ನನಗೂ ತುಂಬಾ ದಿನಗಳ ನಂಟು. ಈ ನಂಟನ್ನು ನನಗೆ ಕರುಣಿಸಿದ್ದು ಫೇಸ್ ಬುಕ್. ಫೇಸ್ ಬುಕ್ ನಲ್ಲಿ ಪರಿಚಯವಾದ ಈ ಗೆಳೆಯ ತನ್ನ ಕನಸುಗಳನ್ನು ಫೋನಿನಲ್ಲಿ ಎಷ್ಟೋ ಬಾರಿ ಹಂಚಿಕೊಂಡಿದ್ದಾರೆ. ಇವತ್ತು ಅವರ ಬಹುದಿನದ ಕನಸು ಎನ್ನಬಹುದಾದ ತೇಜಸ್ವಿಯವರ ಕುರಿತ ಸಾಕ್ಷ್ಯಚಿತ್ರವನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿ ನಮ್ಮೆದುರು ಅದರ ತುಣುಕುಗಳನ್ನು ಯೂ ಟೂಬ್ ನಲ್ಲಿ ಹಾಕುವುದರ ಮೂಲಕ ಹಂಚಿಕೊಂಡಿದ್ದಾರೆ. 'ಮತ್ತೆ ಮತ್ತೆ ತೇಜಸ್ವಿ' ಎಂಬ ಶೀರ್ಷಿಕೆ ಹೊತ್ತ ಸಾಕ್ಷ್ಯಚಿತ್ರದ ಐದು ನಿಮಿಷದ ಪ್ರೊಮೋ ನೋಡಿದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಂಚಲ

ನಾ ಬರೆವ ಮುನ್ನ ಎದೆಯಲಿ ಕವಿತೆಯಾಗಿ ಹೊಮ್ಮಿದೆ ನೀನು, ಅದನು ಹಾಳೆಗಿಳಿಸುವ ಮುನ್ನ ನನಗೇ ಅರಿವಿರಲಿಲ್ಲ, ನನ್ನೊಳಗಿನ ನೀನು..!          ನನ್ನ-ನಿನ್ನ ಆಂತರಿಕ ಸಂಘರ್ಷದ        ಚಂಚಲತೆಯ ಭಯದಲಿ ಕರಗುತಿರುವೆ ನಾನು,        ಕಾಣದೇ ಅಂತರ್ಮುಖಿಯಾಗಿ ಕಾಡುವ        ನಿನಗೆ ನಾ ತಿಳಿಸಲಿ ಏನನು..?   ಬರೆಯುವುದೇನನು? ಪದಗಳೇ ಇರದ ಭಾವನೆಗಳ, ಕಾಗದದಿ ಬಣ್ಣದ ಶಾಹಿಯಲಿ.. ಬರಿಯ ವರ್ಣ ಮಿಶ್ರಿತ ಅಸ್ಪಷ್ಟ ಮನದ ಪುಟದಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಊರು-ಕೇರಿ ನಡುವ ನಾಗರಾವು ಮಿಸುಕಾಡಿ…

ಶ್ರಾವಣ ತಿಂಗಳ ಕೊನಿ ಸೋಮವಾರ. ಊರ ಬಸನದೇವ್ರ ಗುಡಿಯೊಳಗ ತಿಂಗಳಾನುಗಟ್ಲೆ ನಡೆದ ಬಸವ ಪುರಾಣಕ್ಕೆ ಅಂದು ಮಂಗಳ ಹೇಳೋ ದಿವ್ಸ. ಹೇಳಿಕೇಳಿ ಅದು ಲಿಂಗಾಯತರು ಬಾಳ ಮಂದಿ ಇರೋ ಬಸವನೂರು. ಲಿಂಗಾಯತರಿಗೆ ಬಸವಪುರಾಣದ ಮಂಗಲೋತ್ಸವೆಂದರೆ ಕೇಳಬೇಕೆ. ಪ್ರತಿಯೊಂದು ಮನೆಗೆ ಸಾವಿರಾರು ರೂ.ಪಟ್ಟಿ ವಸೂಲು ಮಾಡಿದ್ರು. ಊರು ಜನರು ಬುಟ್ಟಿಗಟ್ಟಲೆ ರೊಟ್ಟಿ, ಚೀಲಗಟ್ಟಲೆ ಜ್ವಾಳ-ಗೋದಿ ಕೊಟ್ಟು ‘ಬಸಣ್ಣ ನಿನ್ನ ಜಾತ್ರಿ ಚಂದಂಗ ನಡಿಯುವಂಗ ನೋಡಕೋಳ್ಳಪೋ. ಎಲ್ಲಾ ನಿನ್ನ ಕೂಡೇತಿ’ ಎಂದು ಬೇಡಿಕೊಂಡಿದ್ದರು. ಬಸಣ್ಣದೇವ್ರ ಗುಡಿಮುಂದಿನ ದೊಡ್ಡ ಪೆಂಡಾಲದೊಳಗ ಊರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ..!!! ಭಾಗ-2

  ಆಗಷ್ಟ ತಿಂಗಳಲ್ಲಿ ನಮ್ಮ ಕರ್ಣಾಟಕದೆಲ್ಲೆಡೆ ಮುಂಗಾರು ಮಳೆಗಾಲ, ನಾವುಗಳು ಇಲ್ಲಿದ್ದುಕೊಂಡು ಸೂಯ್ಯೆಂದು ಸುರಿವ ಮಳೆಯ ಜೊತೆಗೆ ಚೆಂದದ ತಂಪನೆಯ ಹವಾಮಾನವನ್ನು ಸವಿಯುತ್ತಿರುತ್ತೇವೆ. ಆದರೆ, ಭೌಗೋಳಿಕವಾಗಿ ಇಲ್ಲಿಗೂ ಮತ್ತು ಗುಜರಾತಿನ ಹವಾಮಾನಕ್ಕೂ ತುಂಬಾ ವ್ಯತ್ಯಾಸವಿದೆ. ಆ ಆಗಷ್ಟ ಮಾಸದಲ್ಲಿ ಅಲ್ಲಿದ್ದಂತಹ ತಾಪಮಾನ ಸರಿ ಸುಮಾರು 42’ ಡಿಗ್ರಿ ಸೆಲ್ಸಿಯಸ್. ಉರಿಯುವ ಕೆಂಡದಂತಹ ತಾಪಮಾನಕ್ಕೆ ಬಳಲಿ ಬೆಂಡಾಗಿ ಅವರ ಮನೆ ತಲುಪಿದೆ. ಆ ಮೊದಲೇ ರಂಜನ ಪಟೇಲ್ ರವರನ್ನು ನಾನು ಒಂದೆರಡು ಬಾರಿ ನಮ್ಮ ಕರ್ಣಾಟಕಕ್ಕೆ ಬಂದಾಗ ಭೇಟಿಮಾಡಿದ್ದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವುಡೀ ಆಲೆನ್ ಮತ್ತು ವಾಸುಕಿ ರಾಘವನ್

  ಕೆಲವು ಚಿತ್ರಗಳೇ ಹಾಗೆ. ಮೊದಲ ಬಾರಿ ನೋಡಿದಾಗ ಅಷ್ಟೊಂದು ಅದ್ಭುತ ಅಂತ ಅನ್ನಿಸಿರೋಲ್ಲ. ಅದಕ್ಕೆ ನಾವು ನೋಡಿದಾಗಿನ ಮನಸ್ಥಿತಿ ಕಾರಣ ಇರಬಹುದು, ಅಥವಾ ಅಷ್ಟೊಂದು ವೈವಿಧ್ಯಮಯ ಚಿತ್ರಪ್ರಕಾರಗಳ ಪರಿಚಯ ಇಲ್ಲದಿರುವುದು ಕೂಡ. ನಂತರದ ಮರುವೀಕ್ಷಣೆಗಳಲ್ಲಿ ಆ ಚಿತ್ರಗಳು ಹೊಸ ಹೊಸ ಡೈಮೆನ್ಶನ್ ಗಳನ್ನು ತೋರುತ್ತವೆ. “ಅಯ್ಯೋ, ಇದನ್ನ ನಾನು ಗಮನಿಸಿಯೇ ಇರಲಿಲ್ಲ ಅಲ್ವಾ” ಅಂತ ನಮ್ಮನ್ನು ಚಕಿತಗೊಳಿಸುತ್ತವೆ. ಅಂತಹ ಒಂದು ಅದ್ಭುತ ಚಲನಚಿತ್ರ "ಆನೀ ಹಾಲ್". ಇದು ನನಗೆ ವೈಯಕ್ತಿಕವಾಗಿ ತುಂಬಾ ಪ್ರಿಯವಾದ ಚಿತ್ರವೂ ಹೌದು! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಡತೊರೆಯ ಜಾಡಿನಲ್ಲಿ ಜೀವನ ಪ್ರೀತಿಯ ಚಿಲುಮೆ…

ಕಡಿದಾಳು ಶಾಮಣ್ಣನವರ ಬಗ್ಗೆ ತೇಜಸ್ವಿಯವರ ಪುಸ್ತಕಗಳಲ್ಲಿ, ಆವಾಗಿವಾಗ ಪತ್ರಿಕೆಗಳಲ್ಲಿ ಓದಿದ್ದೆನಷ್ಟೇ. ಅವರ ಆತ್ಮಕಥೆಯ ಕೆಲವು ಭಾಗಗಳನ್ನು ಮಯೂರ ಮಾಸಪತ್ರಿಕೆಯಲ್ಲಿ ಓದಿ ಆಸಕ್ತಗೊಂಡಿದ್ದೆನಾದರೂ ಪುಸ್ತಕ ಖರೀದಿಸಿರಲಿಲ್ಲ. ಕುಪ್ಪಳ್ಳಿಯಲ್ಲಿ ‘ನಾವು ನಮ್ಮಲ್ಲಿ’ ತಂಡ ಏರ್ಪಡಿಸಿದ್ದ ‘ಕರ್ನಾಟಕ ಕಂಡ ಚಳುವಳಿಗಳು’ ಸಂವಾದಗೋಷ್ಠಿಯಲ್ಲಿ ಕಡಿದಾಳು ಶಾಮಣ್ಣನವರನ್ನು ಮುಖತಃ ಭೇಟಿಯಾದಾಗ ಅವರಲ್ಲಿದ್ದ ಲವಲವಿಕೆ, ಉತ್ಸಾಹ ಕಂಡು ಅಚ್ಚರಿಪಟ್ಟಿದ್ದೆ. ಚಳುವಳಿಗಳ ಬಗ್ಗೆ ಬಹುತೇಕರಲ್ಲಿ ಸಿನಿಕತೆಯ ಭಾವವೇ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲಿ ಯಾವ ನ್ಯಾಯಯುತ ಹೋರಾಟವೂ ವ್ಯರ್ಥವಾಗುವುದಿಲ್ಲ ಎಂಬ ಶಾಮಣ್ಣನವರ ಮನಸ್ಥಿತಿ ಮೆಚ್ಚುಗೆಯಾಗಿತ್ತು. ಅವರ ಜೀವನಗಾಥೆಯನ್ನು ಸಂಪೂರ್ಣ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಂಬಲ

ಹಂಬಲ ಈ ದಾರಿಯ ತಿರುವಲ್ಲಿ ಒಂದು ಗುಡಿಸಲಿರಲಿ.. ಒಳಗೆ ಮಣ್ಣ ನೆಲದ ಮೇಲೆ ಚಿತ್ತಾರ ಅರಳಿರಲಿ… ಒಳಗಿನ ತಮ ಹೋಗಿಸುವಷ್ಟು ಬೆಳಕಿರಲಿ.. ಅನ್ನಪಾತ್ರೆ ಖಾಲಿಯಾದರೂ ಚಿಂತೆ ಇಲ್ಲ… ಒಡಕಲು ಮಡಿಕೆಯ ಕೆಳಗೆ ನಾಲ್ಕು ಹನಿ ಮಧು ಇರಲಿ.. ಸಖಿ ಅಲ್ಲಿ ನಿನ್ನ ನೆರಳಿರಲಿ… -ಉಮೇಶ್ ದೇಸಾಯಿ ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಶ್ರಾಂತ

  ಕೂಗು ಹಾಕುತ್ತಿದ್ದ ಮಸೀದಿಯ ಅಲ್ಲಾಹು…ಆವಾಜಿಗೆ ಎದುರಾಗಿ ಊರಿನ ಇದ್ದಬಿದ್ದ ನಾಯಿಗಳೆಲ್ಲ ಹಾಡತೊಡಗಿದಾಗ ಒಳ ಕೋಣೆಯ ಕತ್ತಲಲ್ಲಿ ಮಲಗಿದ್ದ ಅಂಜನಪ್ಪನಿಗೆ ಆಗಷ್ಟೆ ಗ್ರಾಸ ಬಡಧಂಗ ಬಡಕೊಂಡಿದ್ದ ನಿದ್ದೆಯ ಅಮಲು ತಟ್ಟನೆ ಹಾರಿ ಹೋಯಿತು. ಎಚ್ಚರಿಕೆಗೆ ಹೆದರಿಕೊಂಡು ಮತ್ತಷ್ಟು ಕೌದಿಯ ಮುಸುಕಿನೊಳಗೆ ಹುದುಗಲು ಚಡಪಡಿಸುತ್ತಿದ್ದಾಗ- ಹೊತ್ತುಕೊಂಡಿದ್ದ ಹಾಸಿಗೆ ಎಡ-ಬಲ ಸರಿದಾಡಿ ಕಾಲಕೆಳಗೆ ಬಂದು ಬಿಡುತ್ತಿರುವುದು ತಿಳ್ಳಿ ಆಟದಂತಾಗಿ ಬಿಟ್ಟಿತ್ತು. ನಿವೃತ್ತಿ ಸಿಕ್ಕಮ್ಯಾಲ. ದೇಶದಾಗಿನ ಎಲ್ಲ ದೇವಸ್ಥಾನ ತೋರಿಸತೀನಿ ಅಂತ ಹೆಂಡತಿಗೆ ಮಾತು ಕೊಟ್ಟಿದ್ದರೂ, ಮನಸ್ಸಿಗೆ ವಿಶ್ರಾಂತಿ ಸಿಕ್ಕದಾಗಿತ್ತು. ಮಗನೊಬ್ಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮ-ನಿಮ್ಮ ಕದ ತಟ್ಟಿದೆ ಈ ಬೆಳಕಿನ ‘ಪಂಜು’

  ಒಮ್ಮೆ ಪ್ರಜಾವಾಣಿಯಲ್ಲಿ ಒಂದು ಸುಂದರ ವ್ಯಂಗ್ಯ ಚಿತ್ರ ಪ್ರಕಟವಾಗಿತ್ತು. ಅದನ್ನು ಬರೆದದ್ದು ಯಾರೆಂದು ಮರೆತಿದ್ದೇನೆ. ಆ ಚಿತ್ರ ಹೀಗಿತ್ತು: ಒಬ್ಬ ಯುವಕ, ಸಾಕಷ್ಟು ದಿನ ಕೂದಲು ಗಡ್ಡ ಟ್ರಿಮ್ ಮಾಡಿಸದೆ ಫಲವತ್ತಾಗಿ ಬೆಳೆದುಬಿಟ್ಟಿದೆ. ಆತ ಒಂದು ಕಂಪ್ಯೂಟರಿನ ಮುಂದೆ ಕುಳಿತಿದ್ದಾನೆ. ಆತನು ಆಚೀಚೆ ಅಲುಗಾಡದಂತೆ ಕುಳಿತಿದ್ದುದಕ್ಕೆ ಸಾಕ್ಷಿಯೆಂಬಂತೆ ಆತನ ಗಡ್ಡ–ಮುಖಕ್ಕೂ ಮತ್ತು ಆ ಕಂಪ್ಯೂಟರಿನ ಮಾನೀಟರಿಗೂ ದಟ್ಟಾದ ಜೇಡರ ಬಲೆ ಹೆಣೆದುಕೊಂಡುಬಿಟ್ಟಿದೆ. ಈ ಅರ್ಥವತ್ತಾದ ಚಿತ್ರ ಹೇಳುವಂತೆ ನಾವೆಲ್ಲರೂ ಇಂದು ಕಂಪ್ಯೂಟರ್, ಅಂತರ್ಜಾಲ ಎಂಬ ಮೋಹಕತೆಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನೊಳಗಿನ ಗುಜರಾತ..!!!

ಜೀವನಯೆಂದರೇನು? ಎಂಬ ಈ ಜಟಿಲ ಪ್ರಶ್ನೆಗೆ ನನ್ನ ಮನಸ್ಸು ತಡಬಡಿಸುತ್ತ ಇಲ್ಲಿಯವರೆಗೂ ಅದೆಷ್ಟು ಉತ್ತರ ನೀಡಿದೆಯೋ ಏನೋ. ಬಾಲ್ಯದ ದಿನಗಳಲ್ಲಿಯೇ ನನ್ನ ಮನಸ್ಸಿಗೆ ಆ ದೇವರು ಯವ್ವನವನ್ನು ನೀಡಿಯಾಗಿತ್ತೇನೊ. ಆವತ್ತಿನಿಂದ ಇವತ್ತಿನವರೆಗೂ ತನ್ನನ್ನೇ ತಾನು ಪ್ರಶ್ನಿಸುತ್ತ ತನಗೆ ತಾನೆ ಉತ್ತರಿಸುತ್ತಿರುವ ನನ್ನ ಮನಸಿಗೆ, ಇದೊಂದು ನಿರಂತರ ಕೆಲಸವಾಗಿ ಹೋಗಿದೆ. ಅಂಥದುದರಲ್ಲಿ ಒಂದಿಷ್ಟು ಉತ್ತರಗಳು ನೆಮ್ಮದಿ ನೀಡಿವೆಯಾದರು ಇನ್ನು ನಿಖರ ಉತ್ತರಕ್ಕಾಗಿ ಕಾಯುತ್ತಿದೆ. ನನು ಏಳನೆ ತರಗತಿ ಓದುವಾಗ ಈ ಪ್ರಶ್ನೆಗೆ ಎರಡು ಉತ್ತರವನ್ನು ಬರೆದು ನನ್ನ ಪುಸ್ತಕದಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ