ಮಳೆಯೆ೦ಬ ಮಧುರ ಆಲಾಪ: ಸ್ಮಿತಾ ಅಮೃತರಾಜ್.

ಒ೦ದು ಬರಸಿಡಿಲು, ಕಿವಿಗಡಚಿಕ್ಕುವ ಗುಡುಗು,ಕಣ್ಣು ಕೋರೈಸುವ ಮಿ೦ಚು. ಇವೆಲ್ಲ ಮಳೆ ಬರುವ ಮುನ್ನಿನ ಪೀಠಿಕೆಯಷ್ಟೆ. ಮತ್ತೆ ಇದ್ಯಾವುದೇ ತಾಳ ಮೇಳಗಳಿಲ್ಲದೆ, ಅ೦ಜಿಕೆ ಅಳುಕಿಲ್ಲದೆ ದಿನವಿಡೀ ಸುರಿಯುತ್ತಲೇ ಇರುತ್ತದೆ ಒ೦ದು ಧ್ಯಾನಸ್ಥ ಸ್ಥಿತಿಯ೦ತೆ. "ಮಳೆ" ಇದು ಬರೇ ನೀರ ಗೆರೆಯಲ್ಲ.ಕೂಡಿಟ್ಟ ಬಾನಿನ ಭಾವದ ಸೆಲೆ.ಬಾನ ಸ೦ಗೀತ ಸುಧೆ ಮಳೆಯಾಗಿ ಹಾಡುತ್ತಿದೆ.ಎ೦ಥ ಚೆ೦ದದ ಆಲಾಪವಿದು.. ಮಳೆ ಶುರುವಾದಾಗ ಒ೦ದು ತರಹ, ನಿಲ್ಲುವಾಗ ಮತ್ತೊ೦ದು,ಬಿರುಸಾಗಿ ಸುರಿಯುವಾಗ  ಇನ್ನೊ೦ದು, ಮಳೆ ಪೂರ್ತಿ ನಿ೦ತ ಮೇಲೂ ಕೊನೆಯದಾಗಿ ಉರುಳುವ ಟಪ್ ಟಪ್ ಹನಿಯ ರಾಗವೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಲಿಯಾಗದಿರಲಿ ಯುವಜನತೆಯ ಮನಸು..ಕನಸು: ಪದ್ಮಾ ಭಟ್

ಅವನು ತುಂಬಾ ಬುದ್ದಿವಂತನಾಗಿದ್ದರೂ ಕೆಟ್ಟ ಚಟಗಳ ಸಹವಾಸದಿಂದ ಬದುಕನ್ನೇ ಸ್ಮಶಾನದತ್ತ ಒಯ್ದುಬಿಟ್ಟ..ಊರಿನಲ್ಲಿರುವ ಅಪ್ಪಅಮ್ಮ ತನ್ನ ಮಗ ಚನ್ನಾಗಿ ಓದುತ್ತಿದ್ದಾನೆಂದು ಹಾಸ್ಟೇಲಿನಲ್ಲಿಟ್ಟರೆ ಡ್ರಗ್ಸ್‌ ಜಾಲಕ್ಕೆ ಬದುಕನ್ನು ಬಲಿಯಾಗಿಸಿಕೊಂಡ..ಇದು ಉದಾಹರಣೆಯಷ್ಟೇ.. ಇಂತಹ ಹಲವಾರು ವಿಚಾರಗಳು ದೈನಂದಿನ ಬದುಕಿನಲ್ಲಿ ನಡೆಯುತ್ತಲೇ ಇರುತ್ತದೆ..ಎಷ್ಟು ಬುದ್ದಿವಂತನಾದರೇನು? ಗುಣವಿದ್ದರೇನು..? ಬದುಕು ಯಾರಿಗೂ ಯಾವತ್ತೂ ಪದೇ ಪದೇ ಅವಕಾಶಗಳನ್ನು ಕೊಡುವುದಿಲ್ಲ..ಯಾರ ಜೊತೆಗೂ ಅವರಿಗೆ ಬೇಕಾದ ಹಾಗೆ ಹೊಂದಾಣಿಕೆಯನ್ನು ಮಾಡಿಕೊಳ್ಳುವುದೂ ಇಲ್ಲವಲ್ಲ. ಇಂದಿನ ಯುವಜನತೆಯು ಹಲವಾರು ಕ್ಷೇತ್ರಗಳಲ್ಲಿ ಬುದ್ದಿವಂತರೇ ಆಗಿದ್ದರೂ ಇಂತಹ ಕೆಟ್ಟ ಚಟಗಳು, ಇನ್ನೊಂದು ಕಡೆಯಿಂದ ಅವನತಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 34): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು:  ೧. ಜಾಮೀಯ ಮಿಲಿಯ ಇಸ್ಲಾಮಿ ವಿಶ್ವವಿದ್ಯಾಲಯ ಎಲ್ಲಿದೆ? ೨. ಆರ್. ಎಫ್.ಕಿಟೆಲ್ಲರಿಗೆ ಗೌರವ ಡಾಕ್ಟರೇಟ್ ನೀಡಿದ ವಿಶ್ವವಿದ್ಯಾಲಯ ಯಾವುದು? ೩. ದೇವದಾಸ ಕೃತಿಯ ಲೇಖಕರು ಯಾರು? ೪. ಬಂದೂಕುಗಳಿಗೆ ಕೊಬ್ಬು ಹಚ್ಚುವುದನ್ನು ವಿರೋಧಿಸಿ ಬ್ರಿಟಿಷ್‌ರಿಂದ ಪ್ರಾಣ ಕಳೆದುಕೊಂಡ ವ್ಯಕ್ತಿ ಯಾರು? ೫. ಭಾರತದಲ್ಲಿ ಚಿನ್ನದ ನಾಣ್ಯಗಳನ್ನು ಮೊದಲು ಪರಿಚಿಯಿಸಿದವರು ಯಾರು? ೬. ಜಲಿಯನ್ ವಾಲಾಬಾಗ್ ಹತ್ಯಾಕಾಂಡಕ್ಕೆ ಕಾರಣವಾದ ಜನರಲ್ ಡಯರ್‌ನನ್ನು ಕೊಂದವರು ಯಾರು? ೭. ಅನ್ನಪೂರ್ಣ ಪರ್ವತ ಶಿಖರ ಎಲ್ಲಿದೆ? ೮. ಭಾರತದ ಪ್ರಥಮ ಪೈಲಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಠ: ಹೃದಯಶಿವ

  ಜವರಯ್ಯ ದಡಾರನೆ ಎದ್ದು ಕುಳಿತ. ತನ್ನ ಪುಟ್ಟ ಮೊಮ್ಮಗ ಬೆನ್ನ ಮೇಲೆ ಕುಣಿಯುತ್ತಿರುವಂತೆ ಕನಸು ಕಂಡು ಒಮ್ಮೆಲೇ ಎಚ್ಚರಗೊಂಡಿದ್ದ. ಆದರೆ ಅಲ್ಲಿ ಯಾವ ಮೊಮ್ಮಗನೂ ಇಲ್ಲ. ಮಠದ ದೀಪಗಳ ಬೆಳಕು ಇರುಳನ್ನು ಹಗಲಾಗಿಸಿತ್ತು. ತನ್ನ ಪಕ್ಕದಲ್ಲೇ ಹರಿದ ಚಾಪೆಯ ಮೇಲೆ ಒಂದಿಷ್ಟು ಸಾಧುಗಳು ಮಲಗಿದ್ದರು. ಅವರು ಎಲ್ಲೆಲ್ಲಿಂದಲೋ ಬಂದು ಸದ್ಯಕ್ಕೆ ಇಲ್ಲಿ ನೆಲೆಸಿದ್ದರು. "ಈ ಜಲ್ಮ ಇರೋಗಂಟ ಈ ಹಟ್ಟಿ ಕಡೆ ತಲೆ ಹಾಕುದ್ರೆ ಕೇಳಮ್ಮಿ" ಜವರಯ್ಯ ಹೆಂಡತಿಗೆ ಸವಾಲು ಹಾಕಿ ಬಂದಿದ್ದ, "ಈ ಹಟ್ಟೀಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ಯಾ ಕೊಡ್ತೀವಿ, ವರ ಹೆಂಗೇ?: ಅಮರ್ ದೀಪ್ ಪಿ.ಎಸ್.

ವಿಷ್ಣುವರ್ಧನ್ ಅಭಿನಯದ ಒಂದು ಸಿನೆಮಾ ಬಂದಿತ್ತು." ನೀನು ನಕ್ಕರೆ ಹಾಲು ಸಕ್ಕರೆ"ಅಂತ.    ಅದರಲ್ಲಿ ಒಬ್ಬರಲ್ಲಾಂತ ನಾಲ್ಕು ನಾಲ್ಕು ಜನ ಹಿರೋಯಿನ್ ಗಳು.  ವಿಷ್ಣುವರ್ಧನ್ ಜೊತೆ  ಒಬ್ಬರಿಗೂ ಒಂದೊಂದು ಡುಯೆಟ್ ಸಾಂಗ್, ಕಾಮಿಡಿ ಎಲ್ಲಾ ಇದೆ.   ಕೊನೆಗೆ ವಿಷ್ಣುವರ್ಧನ್ ಗೆ  ಒಂದು ಹುಡುಗೀನು ಸಿಗಲ್ಲ. ಆ ಸಿನೆಮಾದಲ್ಲಿ ಹುಡುಗ ಓದಿರೋನು, ಒಂದಷ್ಟು ಆಸ್ತಿ ಇರುತ್ತೆ.  ಕಡಿಮೆ ಅಂದ್ರೆ ಅವನ ಬಾಳಿ ನಲ್ಲಿ ಒಂದು ಹುಡುಗಿ ಎಂಟ್ರಿ ಮತ್ತು ಅವನ ಮದುವೆ. ಅದು ಸಿನೆಮಾದಲ್ಲಿ ಕಡೆಗೂ ಆಗೋದಿಲ್ಲ ಅನ್ಸುತ್ತೆ. ಸಿನೆಮಾ ನೋಡಿ ತುಂಬಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಗ್ಗರಣೆ: ಅನಿತಾ ನರೇಶ್ ಮಂಚಿ

ಮಿಕ್ಸಿಯೊಳಗೆ ಅಕ್ಕಿ ಮತ್ತು ಉದ್ದಿನಬೇಳೆಗಳು ಮರುದಿನದ ಇಡ್ಲಿಗಾಗಿ ಯಾವುದೇ ಡಯಟ್ ಮಾಡದೇ ಸಣ್ಣಗಾಗುತ್ತಿದ್ದವು. ನನ್ನ ಮಿಕ್ಸಿಯೋ .. ಹೊರಗೆ ಸೂಪರ್ ಸೈಲೆಂಟ್ ಎಂದು  ಕೆಂಪು ಪೈಂಟಿನಲ್ಲಿ ಬರೆಯಲ್ಪಟ್ಟದ್ದು. ಅದು ಎಂತಹ ಮೌನಿ ಎಂದರೆ ಪಕ್ಕದಲ್ಲಿ ಬಾಂಬ್ ಸ್ಪೋಟವಾದರೂ ಅದರ ಸದ್ದಿಗೆ ಕೇಳುತ್ತಿರಲಿಲ್ಲ. ಇದರಿಂದಾಗಿ ನೂರು ಮೀಟರ್ ದೂರದಲ್ಲಿದ್ದ ಪಕ್ಕದ ಮನೆಯವರಿಗೂ ಬೆಳಗ್ಗಿನ ತಿಂಡಿಗೆ ನಾನು ಚಟ್ನಿ ಮಾಡದಿದ್ದರೆ ತಿಳಿದುಬಿಡುತ್ತಿತ್ತು. ಇದರ ಸದ್ದಿಗೆ ಪ್ರಪಂಚದ ಉಳಿದೆಲ್ಲಾ ಸದ್ದುಗಳು ಮೌನವಾಗಿ ಹೊರಗಿನಿಂದ ಇವರು ಒಂದು ಗ್ಲಾಸ್ ಕಾಫೀ ಎನ್ನುವುದೋ , … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನ್ಯಾನೊ ದ್ರವ; ವಿಜ್ಞಾನಿಗಳಲ್ಲಿ ಹುಟ್ಟಿಸಿರುವ ಕೌತುಕತೆಯ ಮಾಯದ್ರವ: ಪ್ರಸನ್ನ ಗೌಡ

ನೀವು ನ್ಯಾನೊ ಕಾರ್ ಬಗ್ಗೆ ಕೇಳಿದ್ದೀರಿ, ನ್ಯಾನೊ ಸಿಮ್ ಬಗ್ಗೆ ಕೇಳಿರಬಹುದು ಆದರೆ ನ್ಯಾನೊ ದ್ರವದ ಬಗ್ಗೆ ಕೇಳಿದ್ದೀರಾ?. ಏನಿದು ನ್ಯಾನೊ ದ್ರವ (Nanofluid) ಎಂದು ನಿಮ್ಮಲ್ಲಿ ಕೌತುಕತೆ ಹುಟ್ಟುವುದು ಸಹಜ.  ನಾವು ಬಳಸುವ ದಿನನಿತ್ಯದ ಹಲವಾರು ಉಪಕರಣಗಳಾದಂತಹ ರೆಫ್ರೀಜಿರೇಟರ್, ಎಸಿ/ಏರ್‌ಕಂಡಿಷನ್, ಲ್ಯಾಪ್‌ಟಾಪ್/ಕಂಪ್ಯೂಟರ್ ಹಾಗೂ ಕಾರ್ ರೇಡಿಯೇಟರ್‌ಗಳಲ್ಲಿ ಶಾಖವರ್ಗಾವಣೆಯಾಗುವುದನ್ನು ಗಮನಿಸಿದ್ದಿರಾ?.  ಕಂಪ್ಯೂಟರ್/ಲ್ಯಾಪ್‌ಟಾಪ್‌ಗಳಲ್ಲಿ ಕೂಲಿಂಗ್ ಪ್ಯಾನ್ ಬಳಸುವುದರಿಂದ ಗಾಳಿಯಿಂದ ಶಾಖವರ್ಗಾವಣೆಯಾಗುತ್ತದೆ. ರೆಫ್ರೀಜಿರೇಟರ್‌ನಲ್ಲಿ ಸಿ.ಎಫ್.ಸಿ(ಕ್ಲೋರೊ ಪ್ಲೋರೊ ಕಾರ್ಬನ್) ಎಂಬ ರಾಸಯನಿಕ ದ್ರವವನ್ನು ಮತ್ತು ಕಾರ್ ರೇಡಿಯೇಟರ್‌ನಲ್ಲಿ ನೀರನ್ನು ಬಳಸಿ ಶಾಖವರ್ಗಾವಣೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೆವ್ವದ ಮನೆ: ಗುರುಪ್ರಸಾದ ಕುರ್ತಕೋಟಿ

(ಇದು ನನ್ನ ತಂದೆ ಶಶಿಕಾಂತ ಕುರ್ತಕೋಟಿ ಅವರಿಗೆ ಆದ ಒಂದು ಅನುಭವ, ಅವರೇ ಹೇಳಿದ್ದು. ಮೂಲ ಕತೆಗೆ ಧಕ್ಕೆ ಬರದಂತೆ, ಓದಿಸಿಕೊಂಡು ಹೋಗಲಿ ಅಂತ ಸಲ್ಪ ಮಸಾಲೆ ಬೆರೆಸಿದ್ದೇನೆ. ಅದು ಅಜೀರ್ಣಕ್ಕೆ ಕಾರಣವಾಗಲಿಕ್ಕಿಲ್ಲವೆಂಬ ನಂಬಿಕೆ ನನ್ನದು!) ಕಣ್ಣು ತೆರೆದಾಗ ನಾನು ಆಸ್ಪತ್ರೆಯಲ್ಲಿದ್ದೆ. ಕೈಗೆ ಸಲಾಯಿನ್ ಹಚ್ಚಿದ್ದರು. ನನ್ನ ಹೃದಯದ ಬಡಿತ ನನಗೆ ಸ್ಪಷ್ಟವಾಗಿ ಕೇಳುತ್ತಿತ್ತು. ಕಣ್ಣಿಗೆ ಕತ್ತಲೆ ಬಂದಿದ್ದಷ್ಟೆ ನನಗೆ ನೆನಪು. ಆಮೇಲೇನಾಯ್ತು? ಯಾರು ನನ್ನನ್ನಿಲ್ಲಿ ತಂದದ್ದು ಒಂದು ನನಗೆ ಅರ್ಥವಾಗುತ್ತಿಲ್ಲ.  "ಸರ್ ಕಣ್ಣು ತಗದ್ರು!" ಅಂತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂದಳಿಲು-ಚೆಂದದಳಿಲು: ಅಖಿಲೇಶ್ ಚಿಪ್ಪಳಿ

ಮಾರ್ಚ್ ೨೦ ೨೦೧೪ ರಾತ್ರಿ ಖ್ಯಾತ ಪೆರ್ಡೂರು ಮೇಳದ ಯಕ್ಷಗಾನ ಸಾಗರ ಸಮೀಪದ ಕರ್ಕಿಕೊಪ್ಪದಲ್ಲಿ.  ಸಂಜೆಯಾದ ಮೇಲೆ ಮತ್ತಿಕೊಪ್ಪದಿಂದ ಒಳದಾರಿಯಲ್ಲಿ ಕರ್ಕಿಕೊಪ್ಪ ತಲುಪಲು ಬಹಳ ಹೊತ್ತು ಬೇಕಾಗಿಲ್ಲ. ದಟ್ಟ ಕಾನನದ ಕಚ್ಚಾರಸ್ತೆಯಲ್ಲಿ ಹೊರಟರೆ ೨ ಕಿ.ಮಿ. ತಲುಪಲು ಬರೀ ಅರ್ಧಗಂಟೆ ಸಾಕು. ಆಟ ಶುರುವಾಗುವುದು ಹೇಗೂ ೧೦ ಗಂಟೆಗೆ ತಾನೆ. ಊಟ ಮುಗಿಸಿಯೇ ಹೊರಡುವುದೆಂಬ ತೀರ್ಮಾನದಲ್ಲಿದ್ದ ಆದಿತ್ಯ. ಸೆಕೆಂಡ್ ಪಿ.ಯು.ನಲ್ಲಿ ಪಾಸಾಗದೇ ಅನಿವಾರ್ಯವಾಗಿ ಕರ್ಕಿಕೊಪ್ಪದಲ್ಲೇ ಗ್ಯಾರೇಜ್ ಸೇರಿ ಹೆಸರು ಮಾಡಿದ್ದ ಆದಿತ್ಯ ಕೈ ತೊಳೆದು ಊಟಕ್ಕೆ ಕೂರಬೇಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

  ಆಗಷ್ಟೇ … ಸ್ನಾನ ಮುಗಿಸಿ, ತಿಂಡಿ ತಿಂದು  ಒಂದರ್ಧ ಗಂಟೆ ನಿದ್ರಿಸಿದರೆ ಹೇಗೆ…? ಆಯಾಸದ ಮೈಮನಸ್ಸಿಗೂ… ಕೊಂಚ ಆರಾಮ ಆನಂತರ ಆಸ್ಪತ್ರೆಗೆ ಹೋದರಾಯ್ತೆಂದು  ಹಾಸಿಗೆಯ ಮೇಲೆ ಹಾಗೆಯೇ….  ಮೈ ಚೆಲ್ಲಿ  ಇನ್ನೇನು ಮಲಗಿ ವಿಶ್ರಮಿಸಬೇಕು ಒಮ್ಮೆಲೇ… ಬಾಗಿಲ ದಬ ದಬ ಬಡಿವ ಸದ್ದು ಜೊತೆಗೆ ಕಾಲಿಂಗ್ ಬೆಲ್ ನ ಜೋರು ಶಬ್ಧ  ಹಾಳಾದ್ದು ನೆಮ್ಮದಿಯಾಗಿ ನಿದ್ರಿಸುವಂತಿಲ್ಲ ಅಭೀ… ಅಭೀ… ಹೋಗಿ ನೋಡ ಬಾರದೆ ಕರೆದರೂ… ಇವಳ ಸುಳಿವಿಲ್ಲ, ಉತ್ತರವಿಲ್ಲ ಐದು ತಿಂಗಳ ಗರ್ಭಿಣಿ ಬೇರೆ, ಎಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉತ್ತರವಿಲ್ಲದ ಪ್ರಶ್ನೆಗಳ ಹಿಂದೆ: ಪ್ರಶಸ್ತಿ. ಪಿ.

ಪೀಠಿಕೆ: ಪ್ರೀತಿಯೋ ದ್ವೇಷವೋ ಕವಿತೆಯಾಗೋದುಂಟು. ತಿರಸ್ಕಾರ, ನೋವುಗಳು ಕವಿತೆಯ ಮಿತಿ ದಾಟಿ ಕತೆಗಳಾಗೋದೂ ಉಂಟು. ಆದ್ರೆ ನಿಜಜೀವನದ ನೋವಿಗೊಂದು ಮಾತಿನ ರೂಪ ಸಿಕ್ಕರೆ ? ವಿದ್ಯಾರ್ಥಿಯೊಬ್ಬ ತನ್ನ ಇಂಟರ್ನಲ್ಸು, ಎಕ್ಸಾಮುಗಳನ್ನೇ ಕತೆಯ ವಸ್ತುವಾಗಿಸಿದ್ರೆ ?  ಡಾಕ್ಟರೊಬ್ಬ ತನ್ನ ಆಪರೇಷನ್ನುಗಳ ಸುತ್ತ, ಕಂಪ್ಯೂಟರ್ ಉದ್ಯೋಗಿಯೊಬ್ಬ ತನ್ನ ಜೀವನ ಶೈಲಿಯ ಬಗ್ಗೆ, ಆಟಗಾರನೊಬ್ಬ ತಾನು ಈಗಿನ ಹಂತಕ್ಕೆ ಬರಲು ಕಷ್ಟಪಟ್ಟ ಬಗ್ಗೆಯೋ ಬರದ್ರೆ ? ಸದ್ಯಕ್ಕಂತೂ ಗೊತ್ತಿಲ್ಲ. ರಕ್ತದಾನ ಮಾಡಲೆಂದು ಹೋಗಿ, ಇತ್ತ ಸಂಜೆಯ ತಿಂಡಿಯೂ ಇಲ್ಲದೇ, ಅತ್ತ ಬಸ್ಸೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದ್ರೌಪದಿಗೇಕೆ ಪತಿಗಳೈವರು??: ಸುಮನ್ ದೇಸಾಯಿ

ನಮ್ಮ ಭಾರತದ ಸಂಸ್ಕೃತಿಯು ಬಹಳಷ್ಟು ಪುರಾಣ, ಪುಣ್ಯ ಕಥೆಗಳ ನೆಲೆಗಟ್ಟಿನ ಮ್ಯಾಲೆ ನಿಂತದ. ಪ್ರಾಚೀನ ಪೌರಾಣಿಕ ಕಾಲದೊಳಗಿನ ವಿಚಾರಗಳನ್ನ ಸೂಷ್ಮವಾಗಿ ಪರಿಶೀಲಿಸಿದಾಗ ಎಲ್ಲ ಘಟನೆ, ಅವತಾರಗಳ ಹಿಂದೆನು ಒಂದೊಂದು ಉದ್ದೇಶದ ನಿಮಿತ್ತ ಕಾಣಿಸ್ತದ. ಒಂದೊಂದ ಘಟನೆನು ಮುಂದ ದೊಡ್ಡದೊಂದು ಇತಿಹಾಸನ ಸೃಷ್ಠಿ ಮಾಡೇದ. ಒಂದೊಂದು ಮಹಾ ಇತಿಹಾಸದ ಹಿಂದ ಕಥೆ, ಉಪಕಥೆಗಳ ಜೋಡಣೆಯ ಹಂದರನ ಅದ. ಮೂಲಪೂರುಷನ ಅವತಾರದ ಹಿಂದನು ಒಂದೊಂದು ನಿಮಿತ್ತನ ಅದ ಅನ್ನೊದು ಜಗಪ್ರಸಿದ್ಧ. ಒಂದ ದಿನಾ ಹಿಂಗ ಕೂತಾಗ ಯೋಚನೆ ಬಂತು ಅದೇನಂದ್ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ಲೇಖನಗಳು: ಕಿರಣ್ ಕುಮಾರ್ ರೆಖ್ಯಾ, ಶರತ್ ಹೆಚ್. ಕೆ.

ಸದಾ ನೆನಪಿನಲ್ಲಿ ಉಳಿಯುವ ರಾಕೆಟ್.. ಪಿಯುಸಿ ವ್ಯಾಸಂಗದ ದಿನಗಳವು. ಮಧ್ಯಾಹ್ನದ ನಂತರ ಯಾವಾಗಲು ಒಂದು ತರಗತಿ ಪಠ್ಯೇತರ ಚಟುವಟಿಕೆಗೆ ಮೀಸಲು. ಕನ್ನಡ ಸರ್ ಬಿತ್ತಿಪತ್ರಿಕೆಗೆ ಲೇಖನ ಬರೆಯುದರ ಬಗ್ಗೆ ಮಾಹಿತಿ ನೀಡಿ ಎಲ್ಲರಿಗು ಒಂದೊಂದು ಲೇಖನವನ್ನು ಅಸೈನ್ ಮಾಡಿ ತೆರಳಿದರು. ಅ ದಿನಗಳಲ್ಲಿ ಹುಡುಗಿಯರ ಹೆಸರನ್ನು ಹುಡುಗರ ಹೆಸರಿನೊಂದಿಗೆ ಸೇರಿಸಿ ಹಾಸ್ಯ ಮಾಡುವ ಹುಚ್ಚು. ಲೇಖನ ಬರೆಯುತ್ತಿದ್ದ ನಾನು ತಕ್ಷಣ ನನ್ನ ನೋಟ್ಸ್‌ನ ಒಂದು ಕಾಗದ ಹರಿದು "ಐ ಲವ್ ಯೂ.." ಜೊತೆಗೆ ತರಗತಿಯ ಒಂದು ಹುಡುಗಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 33): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ೨೦೧೩ ಆಗಸ್ಟ್‌ನಲ್ಲಿ ರಿಜರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಎಂದು ಯಾರನ್ನು ನೇಮಿಸಲಾಯಿತು? ೨.    ದಿ ಮೇಕಿಂಗ್ ಆಫ್ ದಿ ಮಹಾತ್ಮ ಚಲನಚಿತ್ರದ ನಿರ್ದೇಶಕರು ಯಾರು? ೩.    ಲಂಡನ್‌ನ ೨ನೇಯ ದುಂಡು ಮೇಜಿನ ಸಮ್ಮೇಳನ ನಡೆದ ಸ್ಥಳ ಯಾವು ಯಾವುದು?  ೪.    ಅರಾಮ್ ಹರಾಮ್ ಹೈ ಎನ್ನುವ ಘೋಷಣೆ ಕೊಟ್ಟವರು ಯಾರು? ೫.    ಭಾರತದಲ್ಲಿ ಅತ್ಯಧಿಕ ಗ್ರಾಫೈಟ್ ಉತ್ಪಾದಿಸುವ ರಾಜ್ಯ ಯಾವುದು? ೬.    ಕ್ಷಯ ರೋಗವನ್ನು ತಡೆಯಲು ಹಾಕುವ ಚುಚ್ಚುಮದ್ದು ಯಾವುದು? ೭.    ಎಷ್ಪನೇಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಿಕಾರಿ: ಡಾ. ಗವಿ ಸ್ವಾಮಿ

ಎರಡು ವರ್ಷದ ಎಳೆಗೂಸು  ತನ್ನ ಶಕ್ತಿಯನ್ನೆಲ್ಲ ಒಗ್ಗೂಡಿಸಿ ಅವನನ್ನು ಅಲುಗಾಡಿಸುತ್ತಿದ್ದಳು. ಆತ ತೆರೆದ ಕಣ್ಣುಗಳಿಂದ ಛಾವಣಿಯನ್ನು ದಿಟ್ಟಿಸುತ್ತಾ ಮರದ ಕೊರಡಿನಂತೆ ಬಿದ್ದಿದ್ದ . ತನ್ನನ್ನು ಎಬ್ಬಿಸಲು ಹೆಣಗಾಡುತ್ತಿದ್ದ ಮುದ್ದಿನ ಮಗಳಿಗೆ ಒಂಚೂರೂ ಸ್ಪಂದಿಸದೇ ನಿತ್ರಾಣನಾಗಿ ಹಾಸಿಗೆಗೆ ಅಂಟಿಕೊಂಡಿದ್ದ. ಮೂರ್ನಾಲ್ಕು ಬಾರಿ ಅಪ್ಪನನ್ನು ಜಗ್ಗಾಡಿ ಸುಸ್ತಾದ ಕಂದನ ಕಣ್ಣುಗಳಲ್ಲಿ ಹತಾಶೆ ಮಡುಗಟ್ಟಿತು. ತನ್ನನ್ನು ಮೊರದಗಲದ ಅಂಗೈ ಮೇಲೆ ಕೂರಿಸಿಕೊಂಡು ಮುದ್ದಿಸುತ್ತಿದ್ದ ಅಪ್ಪ.. ಗೊಂಬೆಯಂತೆ ಎಸೆದು ಆತುಕೊಳ್ಳುತ್ತಿದ್ದ ಅಪ್ಪ ಈಗ ಸ್ಪಂದಿಸದೇ ಮರದ ಕೊಂಟಿನಂತೆ ಮಲಗಿರುವುದನ್ನು ನೋಡಿ ಪುಟ್ಟ ಕಣ್ಣುಗಳಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ