ತರಾವರೀ ತರ್ಕ ಮತ್ತು ಹಾಸ್ಯ (ಭಾಗ 2): ಎಂ.ಎಸ್. ನಾರಾಯಣ

(ಇಲ್ಲಿಯವರೆಗೆ) ಯಾಕೋ ಏನೋ ಪುಟ್ಟಿಯನ್ನು ಬಿಡುಗಡೆಗೊಳಿಸಿದ ನಾನೇ ಯಾವುದೋ ಬಂಧನಕ್ಕೆ ಸಿಕ್ಕಿಕೊಂಡಿದ್ದ ಹಾಗೆ ಅನುಭವವಾಗಲಾರಂಭಿಸಿತು. ನನ್ನ ತಲೆಯನ್ನು ಹೊಕ್ಕಿದ್ದ ತರ್ಕವೆಂಬ ಹುಳದ ಗುಂಯ್ಗಾಟ ನಿಲ್ಲುವಂತೆಯೇ ಕಾಣಲಿಲ್ಲ. ನಿಜಕ್ಕೂ ತರ್ಕಶಾಸ್ತ್ರವೊಂದು ಮಹಾ ಸಾಗರ. ಆವರಣದ ಸತ್ಯಾಸತ್ಯತೆಯಲ್ಲಿ ತರ್ಕಶಾಸ್ತ್ರಕ್ಕೆ ಆಸಕ್ತಿ ಇಲ್ಲ. ತರ್ಕವು ಕೇವಲ ಸಾಕ್ಷೀ ಪ್ರಮಾಣ ಕೇಂದ್ರೀಕೃತವಾಗಿರುತ್ತದೆ. ಶುದ್ಧತರ್ಕವಲ್ಲದೆ, ತರ್ಕದೋಷಗಳೆನ್ನಬಹುದಾದ ಅತರ್ಕ, ವಿತರ್ಕ, ಕುತರ್ಕ, ಚಕ್ರತರ್ಕ, ವಕ್ರತರ್ಕ…..! ಎಂದು ಎಷ್ಟೆಲ್ಲಾ ವೈವಿಧ್ಯತೆ ಅನ್ನಿಸಿತು. ಪುಟ್ಟಿಯ ಲೆವೆಲ್ಲಿಗೆ ಇದೆಲ್ಲಾ ಟೂ ಮಚ್ಚೆಂದೂ ಅನಿಸಿತು. ತರ್ಕಶಾಸ್ತ್ರದಂಥಾ ಜಟಿಲವಾದ ವಿಷಯವನ್ನು ಕಠಿಣವಾದ ಭಾಷೆಯಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಜೈಕುಮಾರ್ ಎಚ್.ಎಸ್., ಪ್ರಶಾಂತ್ ಭಟ್, ರಾಣಿ ಪಿ.ವಿ.

ತೇಪೆ ಚಡ್ಡಿ ಮತ್ತು ನಕ್ಷತ್ರ ಶನಿವಾರದ ಬೆಳ್ಳಂಬೆಳಗ್ಗೆ ಒಪ್ಪತ್ತಿನ ಶಾಲೆಗೆ ಹೊಂಟಿದ್ದೆ ಎದುರಿಗೆ ಸಿಕ್ಕ ಜಮೀನ್ದಾರನ ಸೊಕ್ಕಿನ ಹೈದ 'ನಿಂದು ಪೋಸ್ಟ್ ಆಗಿದೆ' ಎಂದ! ನನಗ್ಯಾವ ಲೋಕದವರು ಪತ್ರ ಬರೆವರೆಂದು ನೋಡಿದರೆ ಅವನ ಕಣ್ಣುಗಳು ನೆಟ್ಟಿದ್ದು ಒಡೆದುಹೋಗಿರುವ ನನ್ನ ಚಡ್ಡಿ ಮೇಲೆ! ಹೋದ್ವಾರ ಅವ್ವ ತವರಿಂದ ತಮ್ಮನ ಚಡ್ಡಿ ತಂದು ಇಕ್ಕಿಸಿದ್ದಳು, ಇದೇ ಹಲ್ಕಟ್ ಹೈದ, 'ದೊಗಳೆ ಚಡ್ಡಿ' ಎಂದು ಆಗಲೂ ಛೇಡಿಸಿದ್ದ. ಅಪ್ಪ ಗದ್ದೆಗೆ ಪಲಾಯನಗೈವ ಮೊದಲೇ ಹಿಡಿಯಲೆಂಬಂತೆ ಓಡಿದೆ ಮನೆ ಎದುರು ಏರು ಕಟ್ಟುತ್ತಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಮ್ಮೆ ಮಾತ್ರ ಕೇಳುತ್ತಿದ್ದ ಕಥೆಗಳು !: ಪ್ರಜ್ವಲ್ ಕುಮಾರ್

ನಾವು ಚಿಕ್ಕವರಿದ್ದಾಗ, ರಾತ್ರಿ ಮಲಗುವಾಗ 'ಕಥೆ ಹೇಳಿ' ಎಂದು ಪೀಡಿಸುತ್ತಿದ್ದ ನಮ್ಮಿಂದ ಮುಕ್ತಿ ಪಡೆಯಲು ನನ್ನ ತಂದೆಯಾದಿಯಾಗಿ ನಮ್ಮ ಹಿರಿಯರು ಹೇಳುತ್ತಿದ್ದ ಕೆಲವು ಕಥೆಗಳು. ಈ ಕಥೆಗಳ ವಿಶೇಷವೆಂದರೆ ಒಮ್ಮೆ ನಾವು ಈ ಕಥೇನ ಕೇಳಿದ್ರೆ, ಆ ಕಥೆ ಹೇಳಿದವರ ಹತ್ರ ಮತ್ಯಾವತ್ತೂ ಕಥೆ ಕೇಳೋಕೆ ಹೋಗ್ತಿರ್ಲಿಲ್ಲ! ಇನ್ನು ಮುಂದೆ ಒಂದಾದ ಮೇಲೊಂದರಂತೆ ನಾಲ್ಕು ಕಥೆಗಳು! ಕಥೆಯ ಘಟನೆ ಒಂದು : "ಗುಬ್ಬಚ್ಚಿ ಮತ್ತು ಭತ್ತದ ಕಾಳು" "ಒಂದೂರಲ್ಲಿ ಒಂದು ದೊಡ್ಡ ಕಣ (ಭತ್ತವನ್ನು ಅದರ ಗಿಡದಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದುಕು ಜಟಕಾ ಬಂಡಿ, ವಿಧಿ ಅದರ ಮಾಲೀಕ: ಸುಮನ್ ದೇಸಾಯಿ

ನಸಿಕಲೆ ೫.೩೦ ಗಂಟೆ ಹೊತ್ತದು, ಬಾಗಲಾ ಬಾರಿಸಿದ ಸಪ್ಪಳಕ್ಕ ಎಚ್ಚರಾತು, ಶ್ರೀ ಬಂದ್ಲಂತ ಕಾಣಸ್ತದ ಅಂತ ಹೋಗಿ ಬಾಗಲಾ ತಗದೆ. ನೀರಿಕ್ಷಿಸಿದ ಪ್ರಕಾರ ಆಕಿನ ನಿಂತಿದ್ಲು.ಯಾಕೊ ಭಾಳ ಖಿನ್ನ ಆಗಿತ್ತು ಮುಖಾ.ಪ್ರಯಾಣದ ಆಯಾಸ ಇರಬಹುದು ಅಂತ ಸುಮ್ನಾದೆ. ಅಕಿ ಹೋಗಿ ಮುಖಾ ತೊಳ್ಕೊಂಡ ಬರೊದ್ರಾಗ,ಬಿಸಿ ಬಿಸಿ ಚಹಾ ಮಾಡ್ಕೊಂಡ ಬಂದು ಆಕಿಗೊಂದ ಕಪ್ಪ್ ಕೊಟ್ಟು ನಾನು ಆಕಿ ಮುಂದನ ಕುತೆ.ಆದ್ರು ಯಾಕೊ ಆಕಿ ಎನೊ ಚಿಂತಿ ಮಾಡಲಿಕತ್ತಾಳ ಅನಿಸ್ತು. ಯಾಕಂದ್ರ ನನ್ನ ರೂಮ್ ಮೇಟ್, ಸಹೊದ್ಯೋಗಿ,ನನ್ನ ಜೀವನದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರುಜನ್ಮ: ಪ್ರಶಸ್ತಿ ಪಿ.

ಊರಾಚೆಯ ಒಂದು ನಾಲೆ. ಚಿಕ್ಕಂದಿನಲ್ಲಿ ಈಜು ಬೀಳುತ್ತಿದ್ದ, ಬಟ್ಟೆ ತೊಳೆಯೊ, ಕೆಲವರ ಎಮ್ಮೆ ತೊಳೆಯೋ.. ಹೀಗೆ ಊರ ಎಲ್ಲಾ ಕೊಳೆಗಳ ತೊಳೆಯೋ ಪವಿತ್ರ ಸ್ಥಳವದು ! ಸಂಜೆಯ ಹೊತ್ತಾಗಿದ್ದರಂದ ಬಟ್ಟೆ ತೊಳೆವ ಹೆಂಗಸರು, ಈಜು ಬೀಳೋ ಮಕ್ಕಳೂ,ಎಮ್ಮೆ ತೊಳೆಯೋ ರೈತರೂ ಮನೆ ಸೇರಿದ್ದರೆಂದು ಕಾಣುತ್ತೆ. ನಾಲೆಯ ದಡದಲ್ಲಿ ಕೂತಿದ್ದ ಈತನನ್ನು, ನಾಲೆಯಲ್ಲಿ ಪ್ರತಿಬಿಂಬಿಸುತ್ತಿದ್ದ ಕೇಸರಿ ರವಿಯನ್ನುಳಿದು ಇನ್ಯಾರೂ ಇರಲಿಲ್ಲ. ಆಗಾಗ ಬಂದು ನೇಪಥ್ಯದಲ್ಲಿ ಮರೆಯಾಗುತ್ತಿದ್ದ ಹಕ್ಕಿಗಳ ಸಾಲುಗಳು ಹಾರೋ ಹಕ್ಕಿಯಂತೆ ಸ್ವಚ್ಚಂದವಾಗಿದ್ದ ಹಿಂದಿನ ದಿನಗಳನ್ನು ನೆನಪಿಸುತ್ತಿದ್ದವು. ಒಮ್ಮೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪತ್ರಗಳು: ರಘು ಕೆ.ಟಿ.

ಜಾಹಿರಾತಿಗೆ ಅಂಕುಶ. . .  ಮಾನ್ಯರೆ, ಕೊನೆಗೂ ಆ ದಿನ ಬಂದೇಬಿಟ್ಟಿತು ನೋಡಿ.. .. ..  ಸುಳ್ಳು ಮತ್ತು ನಂಬಲಾರ್ಹವಲ್ಲದ ಜಾಹಿರಾತುಗಳನ್ನು ನೀಡಿ ಗ್ರಾಹಕರ ಕಣ್ಣಿಗೆ ಮಣ್ಣೆರಚ್ಚುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸುಲಭವಾಗಿ ಹಣಮಾಡುತ್ತಿರುವ ಬಹುರಾಷ್ಟ್ರೀಯ ಹಾಗೂ ಇತರೆ ಜಾಹಿರಾತು ಕಂಪನಿಗಳಿಗೆ ಕೇಂದ್ರೀಯ ಗ್ರಾಹಕ ರಕ್ಷಣೆ ಮಂಡಳಿಯು ಕೊನೆಗೂ ಅಂಕುಶವನ್ನು ಹಾಕಲು ನಿರ್ಧರಿಸಿರುವುದ ಸಂತೋಷದ ವಿಷಯ. ತಮ್ಮ ಉತ್ಪನ್ನಗಳನ್ನು ಮಾರಾಟಮಾಡಲು ಕಂಪನಿಗಳು ನಾನಾ ಬಗೆಯ ತಂತ್ರಗಳನ್ನು ಬಳಸಿಕೊಳ್ಳುವುದು ಸಾಮಾನ್ಯವಾಗಿದೆ. ಇದಕ್ಕೆ ಇಂಬುಕೊಡುವಂತೆ ವಿವಿಧ ಕ್ಷೇತ್ರಗಳ ದೊಡ್ಡ ದೊಡ್ಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಾಳಿ ಕಟ್ಟಿದ ಶುಭ ವೇಳೆ ….ಕೊರಳಲ್ಲಿ ಅದ್ಯಾವ ಮಾಲೆ?: ಅಮರ್ ದೀಪ್ ಪಿ.ಎಸ್.

ಅದೊಂದು ಅದ್ಭುತವಾದ ಸಿನೆಮಾ.  "ಬೆಂಕಿಯಲ್ಲಿ ಅರಳಿದ ಹೂ "   ಬಹುಶಃ 1983 ರಲ್ಲಿ ಬಂದ ಕೆ. ಬಾಲ ಚಂದರ್ ಅವರ ನಿರ್ಧೇಶನದ ಸಿನೆಮಾ ಅದು.  ತನ್ನೊಳಗಿನ ವೈಯುಕ್ತಿಕ ಆಸೆ ಮತ್ತು ಬದುಕಿನ ಕನಸು ಗಳನ್ನು ಅದುಮಿಟ್ಟುಕೊಂಡು ತನ್ನ ಕುಟುಂಬದವರ ಹಿತಕಾಗಿಯೇ ತಾನು ತನ್ನ ನಗುವನ್ನು ಜೀವಂತವಾಗಿಟ್ಟು ದುಡಿಯಲು ಸಿಟಿ ಬಸ್ಸು ಹತ್ತುವುದರಲ್ಲೇ ಕೊನೆಗೊಳ್ಳುವ ಸಿನೆಮಾದಲ್ಲಿ ಸುಹಾಸಿನಿ ಎಂಬ ಚೆಲುವೆ ತನ್ನ ಕಣ್ಣಲ್ಲೇ ನಗುವನ್ನು  ಮತ್ತು ನಗುವಿನಲ್ಲೇ ದುಃಖವನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ.  ನಿಜ ಬದುಕಿನ ಹಲವರ ಸನ್ನಿವೇಶಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳದಿಂಗಳ ನೋಡ: ಉಮೇಶ್ ದೇಸಾಯಿ

:೧: ಕಮಲಾಬಾಯಿ ನಿರಾಳವಾದರು ಎರಡು ದಿನಗಳಿಂದ ಬಹಳ ತಳಮಳಿಸಿದ್ದರು. ತಾವು ನೋಡಿದ ವಿಷಯ ಮೊದಲು ಯಜಮಾನರಿಗೆ ತಿಳಿಸಿದ್ದರು. ಅವರ ನೀರನ ಪ್ರತಿಕ್ರಿಯೆ ಅವರನ್ನು ನಿರುತ್ಸಾಹಗೊಳಿಸಿದರಲಿಲ್ಲ. ತಪ್ಪು ನಡೆಯುತ್ತಿದೆ ಎಂದು ಗೊತ್ತಿದ್ದೂ ನೋಡುತ್ತ ಸುಮ್ಮನೆ ಕುಳಿತುಕೊಳ್ಳುವ ಜಾಯಮಾನ ಅವರದಲ್ಲ. ಅದರಲ್ಲೂ ತಮ್ಮ ಪ್ರೀತಿಯ ಮಂಗಲಾಳ ಮಗಳು ತಪ್ಪು ಹಾದಿ ತುಳಿಯುತ್ತಿದ್ದಾಳೆ. ಇದರ ಬಗ್ಗೆ ಮಂಗಲಾಳಿಗೆ ಹೇಳಲೇಬೇಕು ಎಂದು ನಿರ್ಧರಿಸಿದರು. ಆಗಿದ್ದಿಷ್ಟೆ… ಎರಡು ದಿನದ ಹಿಂದಿನ ಮಧ್ಯಾಹ್ನ ಕಮಲಾಬಾಯಿ ಅಪಾರ್ಟಮೆಂಟಿನ ಮುಂದಿನ ಲಾನ್‌ನಲ್ಲಿ ಕುಳಿತಾಗ, ಮುಖ್ಯ ರಸ್ತೆಯ ತಿರುವಿಗೆ ಬೈಕ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಕರಾರಿನ ತರಕಾರಿ-ತಲೆನೋವಿನ ಎಳನೀರು: ಅಖಿಲೇಶ್ ಚಿಪ್ಪಳಿ

ಅತಿಸಾರದಿಂದ ಬಳಲುತ್ತಿರುವ ವ್ಯಕ್ತಿಯೊಬ್ಬ ಚಿತ್ರದುರ್ಗದ ಖಾಸಗಿ (ಹೆಸರು ನೆನಪಿಲ್ಲ) ಆಸ್ಪತ್ರೆಗೆ ದಾಖಲಾಗುತ್ತಾನೆ. ಅಲ್ಲಿನ ತಜ್ಞವೈದ್ಯರು ಒಂದು ವಾರ ಆತನಿಗೆ ಸೂಕ್ತ ಚಿಕಿತ್ಸೆ ನೀಡಿ ಬಿಡುಗಡೆ ಮಾಡುತ್ತಾರೆ. ಅತಿಸಾರದಿಂದ ಬಳಲಿದ ರೋಗಿಗೆ ಹೆಚ್ಚು-ಹೆಚ್ಚು ದ್ರವರೂಪದ ಆಹಾರಗಳನ್ನು ಸೇವಿಸಲು ಹೇಳುತ್ತಾರೆ. ಹಾಗೆಯೇ ಎಳನೀರನ್ನು ಹೆಚ್ಚು ಸೇವಿಸಿ ಎಂದೂ ಸಲಹೆ ನೀಡುತ್ತಾರೆ. ಬಿಡುಗಡೆಯಾಗಿ ಹೋದ ರೋಗಿ ಮೂರನೇ ದಿನಕ್ಕೆ ಮತ್ತೆ ವಾಪಾಸು ಬರುತ್ತಾನೆ. ಈ ಬಾರಿ ಇನ್ನೂ ಹೆಚ್ಚು ಸುಸ್ತಿನಿಂದ ಬಳಲಿರುತ್ತಾನೆ. ಮುಖ ಬಿಳಿಚಿಕೊಂಡಿರುತ್ತದೆ. ಚಿಕಿತ್ಸೆಯಲ್ಲಿ ಏನೂ ವ್ಯತ್ಯಾಸ ಆಗಿರುವುದಿಲ್ಲ ಎಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೆಲ್ಲಿ ಚಲೋ .. : ಪ್ರಶಸ್ತಿ ಪಿ.

ಹೆಂಗಿದ್ರೂ ರಜೆಯಿದ್ಯಲ್ಲ ಬಾರೋ, ಉತ್ತರ ಭಾರತ ಸುತ್ತಬಹುದು ಅಂತ ಮೀರತ್ತಿನಲ್ಲಿದ್ದ ಮಾವ ಕರೆದಾಗ ದೇಶ ಸುತ್ತಬೇಕೆಂಬ ಬಯಕೆ ಗರಿಗೆದರಿ ನಿಂತಿತ್ತು. ದೇಶ ಸುತ್ತಬೇಕೆಂಬ ಮನ ಚಲೋ ದಿಲ್ಲಿ ಎಂದು ಹೊರಟು ನಿಂತಿತ್ತು. ದೆಲ್ಲಿಗೆಂದು ಹೊರಟಿದ್ದೆಂತು ಹೌದು. ಆದರೆ ಬೆಂಗಳೂರಿಂದ ದಿಲ್ಲಿಗೆ  2,153 ಕಿ.ಮೀಗಳ ಪಯಣ ಸುಲಭದ್ದೇನಲ್ಲ. ಸಣ್ಣವನಿದ್ದಾಗ ನಮ್ಮೂರು ಸಾಗರಕ್ಕೆ ಬರುತ್ತಿದ್ದ ರೈಲನ್ನು ದೂರದಿಂದ ನೋಡುವುದರಲ್ಲೇ ಖುಷಿ ಪಡುತ್ತಿದ್ದ ನನಗೆ ಮುಂದೊಮ್ಮೆ ಅದೇ ರೈಲಿನಲ್ಲಿ ದಿನಗಟ್ಟಲೇ ಪಯಣಿಸುವ ಭಾಗ್ಯ ಸಿಗುತ್ತೆ ಅಂತ ಕನಸಲ್ಲೂ ಅನಿಸಿರಲಿಲ್ಲ. ಯಾಕೆಂದರೆ ದೆಲ್ಲಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮತ್ತೊಂದಿಷ್ಟು ವರುಷ ಸಿಗಲಾರೆಯಾ?: ಪದ್ಮಾ ಭಟ್

                  ಸರಿಯಾಗಿ ಲೆಕ್ಕ ಹಾಕಿದ್ರೆ ಇನ್ನು ಒಂದು ತಿಂಗಳು  ಮಾತ್ರ ನಾ ನಿನ್ ಜೊತೆ ಇರೋದು..ಆಮೇಲೆ  ನೆನಪುಗಳಷ್ಟೆ.. ಏನೇ ಹೇಳು ನಿನ್ನನ್ನು ತುಂಬಾ ಮಿಸ್ ಮಾಡ್ಕೋಳ್ತೀನಿ ಕಣೇ.. ಎಂದು ರೂಂ ಮೇಟ್ ಶ್ರೇಯಾ ಹೇಳುತ್ತಿದ್ದರೆ, ನಾ ನನ್ನ ಪಾಡಿಗೆ ಅಷ್ಟೊಂದು ಲಕ್ಷ್ಯವಿಲ್ಲದೇ ಯಾವುದೋ ಪುಸ್ತಕವನ್ನು ಓದುತ್ತ ಕುಳಿತಿದ್ದೆ.. ಹೂಂ.. ಕಣೇ ನಾನೂ ನಿನ್ ಮಿಸ್ ಮಾಡ್ಕೊಳ್ತೀನಿ ಅಂತಾ ಬಾಯಿಂದ ಮಾತು ಬಂದರೂ ಓದುವ ಪುಸ್ತಕದ ಕಡೆಗೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಶಿದ್ರಾಮ ತಳವಾರ್, ವೆಂಕಟೇಶ ನಾಯಕ್, ಲೋಕೇಶಗೌಡ ಜೋಳದರಾಶಿ

ನಾನೊಂದು ಖಾಲಿ ಸೀಸೆ ನಾನೊಂದು ಖಾಲಿ ಸೀಸೆ ಈಗ ನಾ 'ನೊಂದೆ', ಮತ್ತು ತರುವ ಮದಿರೆ ತುಂಬಿಹೆ ನನ್ನೊಳು ಪೂರ್ತಿ, ಬರೀ ಮೈಗಷ್ಟೇ ಮತ್ತು; ಮತ್ತೇನಿಲ್ಲ ದಾಹದಿ ಮದಿರೆಯ ದಾಸರು ಕೊಂಡು ಹೀರಿದರೆಲ್ಲ ನನ್ನೊಳ ಮತ್ತು ; ಮತ್ತೇನೂ ಅಷ್ಟೇ ಮತ್ತೇನಿಲ್ಲ, ದಾಹದಿ ಹೀರಿ ಮೋಹದಿ ಇವರು ಮುತ್ತಿಕ್ಕಿ ಮತ್ತೆಲ್ಲ ಹೀರಿ ಮತ್ತೂ ಮುತ್ತಿಕ್ಕಿ; ಕೊನೆಗೊಮ್ಮೆ ಬಿಸಾಕಿದರೆನ್ನ ಬೀದಿಯಲಿ ಅಷ್ಟೇ ನನ್ನೊಳು ಮತ್ತೇನಿಲ್ಲ, ತೂರಾಡುತಲಿ ಕೂಗಾಡುತಲಿ ಬೈಯುತಲಿ ನನ್ನನೂ; ಬೈಸಿಕೊಳುತಲಿ ತಮ್ಮನೂ ಕಕ್ಕುತಿಹರು ಮನದೊಳಗಣ ಕಿಚ್ಚನು ಇಷ್ಟೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 24): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು :  ೧.    ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಆಗಿದ್ದ ಇಬ್ಬರು ಕನ್ನಡಿಗರು ಯಾರು? ೨.    ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ ಎಲ್ಲಿದೆ? ೩.    ಗಾಂಧಿ ೧೯೧೯ರಲ್ಲಿ ನವ ಜೀವನ್ ಪತ್ರಿಕೆ ಸಂಪಾದಕೀಯಕ್ಕೆ ಇಳಿದರು. ಯಾವ ಭಾಷೆಯಲ್ಲಿ ಈ ಪತ್ರಿಕೆ ಇದ್ದಿತು? ೪.    ಮಹಿಳೆಯರು ಒಲಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿದ್ದು ಯಾವ ವರ್ಷ? ೫.    ಟೆಲಿಫೋನ್ ಕಂಡು ಹಿಡಿದವರು ಯಾರು? ೬.    ಮೃತ ಸಮುದ್ರ (ಡೆಡ್‌ಸೀ) ಯಾವ ದೇಶದಲ್ಲಿದೆ? ೭.    ಅಮೇರಿಕಾದ ಸಿಲಿಕಾನ್ ವ್ಯಾಲಿ ಎಂಬುದು ಏತಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಂತಿ: ಬಸವರಾಜು ಕ್ಯಾಶವಾರ

ಪ್ರೀತಿಯ ಚಂದ್ರು,   ಕಳೆದ ಹತ್ತು ವರ್ಷಗಳಿಂದ್ಲೂ ದಿನವೂ ಪುಸ್ತಕ ತೆಗೆದು ಮತ್ತೆ ಮತ್ತೆ ನೋಡ್ತಾನೇ ಇದ್ದೀನಿ, ಆದರೆ ನೀನು ಕೊಟ್ಟ ನವಿಲುಗರಿ ಮರಿ ಹಾಕಿಲ್ಲ. ಆದ್ರೆ ಇವತ್ತಲ್ಲ ನಾಳೆ ಅದು ಮರಿ ಹಾಕುತ್ತೆ ಅಂತ ಕಾಯುತ್ತಿದ್ದೇನೆ. ವಿಶೇಷ ಅಂದ್ರೆ ನಮ್ಮಿಬ್ಬರ ನಡುವೆ ಇದ್ದ ಗೆಳೆತನ ಮಾಗಿ ಪ್ರೇಮದ ಮರಿ ಹಾಕಿದೆ.   ಬೆಂಗಳೂರಿನ ಕಾಂಕ್ರೀಟ್ ಕಾಡಿನಲ್ಲೂ ಹಳ್ಳಿಯ ಆ ಹೈಸ್ಕೂಲಿನ ದಿನಗಳು, ನಮ್ಮಿಬ್ಬರ ಬಾಲ್ಯದ ಸಂತಸದ ಕ್ಷಣಗಳು ಮತ್ತೆ ಮತ್ತೆ ನೆನಪಾಗ್ತಿವೆ. ನನ್ನ ಕೋಣೆ ತುಂಬೆಲ್ಲಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಖದ ವ್ಯಾಧಿ: ಸುಮನ್ ದೇಸಾಯಿ

ಮುಂಝಾನೆ ನಸುಕಿನ್ಯಾಗ ಮೂಲಿಮನಿ ನಿಂಗವ್ವನ ಕೋಳಿ ಕೂಗಿದ್ದ ಕೇಳಿ ’ಪಾರು’ ಗ ಎಚ್ಚರಾತು. ದಿನಾ ಹಿಂಗ ಒದರಿ ಒದರಿ ತಂಗಳ ನಿದ್ದಿ ಕೆಡಸತಿದ್ದ ಕೋಳಿಗೆ ಹಿಡಿಶಾಪಾ ಹಾಕಿ ಮತ್ತ ಹೊಚಕೊಂಡ ಮಲಗತಿದ್ದ ಪಾರು, ಇವತ್ತ ಹಂಗ ಮಾಡಲಿಲ್ಲ. ಆವತ್ತ ತನ್ನ ಪ್ರೀತಿಯ ಅಕ್ಕನ ಊರಿಗೆ ಹೋಗೊದಿತ್ತು. ಲಗು ಲಗು ಎದ್ದು ಮಾರಿ ತೊಳಕೊಂಡು, ಅಡುಗಿ ಮನಿಗೆ ಬಂದ್ಲು. ಆಗಲೆ ಅವ್ವ ಮಗಳ ಊರಿಗೆ ಬುತ್ತಿಗೆಂತ ರೊಟ್ಟಿ, ಪಲ್ಯಾ, ಸಜ್ಜಿಗಿ ವಡಿ, ಕೆಂಪಖಾರ, ಮೊಸರನ್ನ ಎಲ್ಲಾ ಮಾಡಿ ಮುಗಿಸಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತರಾವರೀ ತರ್ಕ ಮತ್ತು ಹಾಸ್ಯ: ಎಂ.ಎಸ್. ನಾರಾಯಣ

‘ತರ್ಕ ಅಂದ್ರೇನಪ್ಪಾ?’ ಎಂದು ಬೆಳಬೆಳಗ್ಗೇನೇ ರಾಗ ಎಳೆದಳು ಮೊದಲ ಪೀಯೂಸಿ ಕಲಿಯುತ್ತಿರುವ ನನ್ನ ಮಗಳು.  ಹಾಗೆಲ್ಲಾ ಅವಳು ಸುಮ್ಮ ಸುಮ್ಮನೆ ಏನನ್ನೂ ಕೇಳುವುದಿಲ್ಲವೆಂದರಿತಿದ್ದ ನಾನು ಓದುತ್ತಿದ್ದ ಪೇಪರಿನಿಂದ ತಲೆಯೆತ್ತದೆ ‘ಯಾಕೇ?’ ಅಂದೆ. ‘ಕನ್ನಡಾ ಮ್ಯಾಮ್ ಅಸೈನ್ಮೆಂಟ್ ಕೊಟ್ಟೀದಾರಪ್ಪ, ತರ್ಕದ ಬಗ್ಗೆ ಎಸ್ಸೆ ಬರ್ಕೊಂಡೋಗ್ಬೇಕು’ ಎಂದುಲಿಯಿತು ಕಾನ್ವೆಂಟಿನಲ್ಲಿ ಕಲಿತ ನನ್ನ ಕನ್ನಡದ ಕಂದ.  ‘ತರ್ಕ ಅಂದ್ರೆ ಲಾಜಿಕ್ಕು ಕಣಮ್ಮಾ’ ಎಂದೊಡನೆ ಅಸಡ್ಡೆಯಿಂದ ‘ಓ, ಲಾಜಿಕ್ಕಾ…?’ ಎಂದವಳೇ ಪ್ರಬಂಧ ಬರೆಯಲು ಸಿದ್ಧತೆ ನಡೆಸತೊಡಗಿದಳು. ಸೀದಾ ಲ್ಯಾಪ್ಟಾಪ್ ತೆಗೆದವಳೇ ಇಂಟೆರ್ನೆಟ್ಟಿನಲ್ಲಿ ‘ಎಸ್ಸೇಸ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆರಳಿಲ್ಲದ ಹಕ್ಕಿಯೂ. . ಹಕ್ಕಿಯಂತ ಕವಿತೆಯೂ. . :ಸ್ಮಿತಾ ಅಮೃತರಾಜ್

ಪ್ರತಿ ನಿತ್ಯವೂ ನಮ್ಮ ಮನೆಯ ಮುಂದಿನ ಅಂಗಳದಲ್ಲಿ ಕಪ್ಪು ಬಿಳಿ ಬಣ್ಣದ ಎರಡು ಹಕ್ಕಿಗಳು, ಮೇಲೆ ಕೆಳಗೆ ಬಾಲ ಕುಣಿಸುತ್ತಾ, ಅಂಗಳದ ತುಂಬೆಲ್ಲಾ ಅದೂ ಇದೂ ಹೆಕ್ಕುತ್ತಾ ಗಹನವಾಗಿ ಅದೇನೋ ಅಳೆಯುತ್ತಿರುವಂತೆ ತುಂಬಾ ಹೊತ್ತಿನವರೆಗೂ ಓಲಾಡುತ್ತಲೇ ಇರುತ್ತವೆ. ಅದಕ್ಕೇ ಇರಬೇಕು ಆ ಹಕ್ಕಿಗಳಿಗೆ ಭೂಮಿ ತೂಗುವ ಹಕ್ಕಿ ಅಂತ  ಕರೆಯೋದು. ಆ ಜೋಡಿ ಹಕ್ಕಿಗಳಲ್ಲಿ ಒಂದಕ್ಕೆ  ಒಂದು ಕಾಲಿನಲ್ಲಿ ಬೆರಳುಗಳೇ ಇಲ್ಲ. ಹೆಣ್ಣು ಹಕ್ಕಿಯೋ? ಗಂಡು ಹಕ್ಕಿಯೋ? ಗೊತ್ತಿಲ್ಲ. ಪಾಪ! ಅದಕ್ಕೆ ಅಂಗವಿಕಲತೆ. ಆದರೂ ಬರೇ ಪಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವರ ಹೆಣ ನಿಮಗೆ ಇಷ್ಟ ಅಲ್ವಾ?: ನಟರಾಜು ಎಸ್. ಎಂ.

ಒಂದೂರಲ್ಲಿ ಒಂದು ಗಟ್ಟಿಮುಟ್ಟಾದ ಆರೋಗ್ಯವಂತ ಹಸು ಕಾಡಿಗೆ ಮೇಯಲು ಹೋಗಿ ಇದ್ದಂಕ್ಕಿದ್ದಂತೆ ಕಾಡಿನಲ್ಲೇ ಸತ್ತು ಹೋಗಿರುತ್ತದೆ. ತನ್ನ ಮಾವನ ರೇಡಿಯೋ ರಿಪೇರಿಯ ಕಲೆಯನ್ನು ಒಬ್ಬ ಹುಡುಗ  ತದೇಕಚಿತ್ತದಿಂದ ನೋಡುತ್ತಾ ಕುಳಿತ್ತಿರುತ್ತಾನೆ. ಯಾರೋ ಬಂದು ಹಸು ಸತ್ತು ಹೋಗಿರುವ ಸುದ್ದಿಯನ್ನು ಆ ಹುಡುಗನ ಮಾವನಿಗೆ ತಿಳಿಸಿದಾಗ ಆ ಹುಡುಗನ ಮಾವ "ಮಗ, ತಗೋಳು ಸೈಕಲ್ ನ." ಎಂದು ಹೇಳಿ ಮನೆ ಒಳಗೆ ಹೋದವನು ಒಂದು ಚೂರಿ, ಮಚ್ಚು, ಕುಡ್ಲು, ಹಾಗು ಎರಡು ಪ್ಲಾಸ್ಟಿಕ್ ಚೀಲದೊಂದಿಗೆ ಮನೆಯಿಂದ ಹೊರಗೆ ಬರುತ್ತಾನೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ