ಸುಷ್ಮಾ: ಕುಸುಮ ಆಯರಹಳ್ಳಿ

ಸುಮಾರು ಹನ್ನೆರಡು ವರ್ಷಗಳೇ ಕಳೆದಿರಬೇಕು. ಅದರೂ ಈ ಘಟನೆ ಮಾತ್ರ ನನ್ನ ಮನಸಿನಲ್ಲಿ ಇಂದಿಗೂ ಹಸಿ ಹಸಿಯಾಗಿದೆ. ಹತ್ತನೇ ಕ್ಲಾಸಿನವರೆಗೂ ಚಾಮರಾಜನಗರದ ಅಜ್ಜಿಮನೆಯಲ್ಲಿ ಬೆಳೆದ ನಾನು ಆಗಷ್ಟೇ ಅಪ್ಪ,ಅಮ್ಮನನ್ನೂ, ಸ್ವಂತ ಹಳ್ಳಿಯನ್ನೂ, ಪಿಯುಸಿಯನ್ನೂ ಸೇರಿದ್ದೆ. ಸುತ್ತಮುತ್ತಲ ಹಳ್ಳಿಗಳಿಗೆ ಇದ್ದದ್ದು ಅದೊಂದೇ ದೇವಲಾಪುರದ ಪಿಯು ಕಾಲೇಜು. ಬುದ್ದಿವಂತರೂ, ಒಂದಷ್ಟು ಸಾಹಿತ್ಯಾಸಕ್ತಿಯೂ ಇದ್ದ ಸುತ್ತಲ ಹಳ್ಳಿ ಹುಡುಗ-ಹುಡುಗಿಯರಲ್ಲಿ ತುಂಬ ಜನ ಇದೇ ಬ್ಯಾಚಲ್ಲಿದ್ದರು. ಹೆಚ್ಚೆಂದರೆ 100 ಜನ ವಿಧ್ಯಾರ್ಥಿಗಳಿದ್ದ, ಎರಡೇ ಕ್ಲಾಸಿನ ಆ ಕಾಲೇಜಿನಲ್ಲಿ ನಾವು ಚರ್ಚಾಸ್ಪರ್ಧೆ ಮುಂತಾದವಕ್ಕೆ ದೀಪ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಂಬಂಧ: ಡಾ. ಗವಿ ಸ್ವಾಮಿ

ಬೆಂಗಳೂರಿನ ಬಿಸ್ಕೆಟ್ ಫ್ಯಾಕ್ಟರಿಯೊಂದರಲ್ಲಿ ಹೆಲ್ಪರ್ ಆಗಿದ್ದ ಇಪ್ಪತ್ತರ ವಯಸ್ಸಿನ ಸ್ವಾಮಿ ತನ್ನ ತಾತ ನಿಂಗಣ್ಣನ ಸಾವಿನ ಸುದ್ದಿ ತಿಳಿದು ಊರಿಗೆ ತಲುಪುವಷ್ಟರಲ್ಲಿ ಮಧ್ಯಾಹ್ನ ಮೂರು ಘಂಟೆಯಾಗಿತ್ತು. ನೆತ್ತಿಯ ಮೇಲೆ ಕಾರ್ಮೋಡಗಳು ಕವಿಯುತ್ತಿದ್ದವು. ಮೂರು ಮಂದಿ ತುರಾತುರಿಯಲ್ಲಿ ನಿಂಗಣ್ಣನನ್ನು ಎತ್ತಿ ತಂದು ಬಿಳಿಪಲ್ಲಕ್ಕಿಯ ಒಳಗೆ ಕೂರಿಸಿದರು. ಅತ್ತಿತ್ತ ವಾಲಾಡುತ್ತಿದ್ದ ಕುತ್ತಿಗೆಗೆ ಮೆಟರೆಕಡ್ಡಿ ಕೊಟ್ಟು ಸರಿ ಮಾಡಿದರು. ಸ್ವಾಮಿ ಒಮ್ಮೆ  ಕೆಳಗೆ ಬಾಗಿ ತಾತನನ್ನು ಕಣ್ತುಂಬಿಕೊಂಡ. ತಾತನ  ಒಟ್ಟು ಆಕಾರದಲ್ಲಿ ಏನೋ ಒಂದು ಕೊರತೆಯಿದೆ ಅನ್ನಿಸಿತು . ಯೆಸ್. ತಾತನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಸವಣ್ಣನಿಂದ ಭಗೀರಥನವರೆಗೆ: ಕೆ. ಆರ್. ಹರಿಪ್ರಸಾದ್

ಈ ಶೀರ್ಷಿಕೆ ಓದಿ ಇದೇನಿದು ವಿಚಿತ್ರವಾಗಿದೆ? ಅಂತ ನಿಮಗೆ ಅನ್ನಿಸಿದರೆ, ನಿಮ್ಮ ಅನಿಸಿಕೆ ಸರಿಯಾಗೇ ಇದೆ. ಒಬ್ಬ ಚಾರಿತ್ರಿಕ ಮನುಷ್ಯ, ಮತ್ತೊಬ್ಬ ಪುರಾಣಪುರುಷ. ಇವರಿಗೆ ಹೇಗೆ ಸಂಬಂಧ ಅನ್ನುವ ನಿಮ್ಮ ಪ್ರಶ್ನೆಗೆ ಉತ್ತರವನ್ನು ಒಂದು ಸಾಲಿನಲ್ಲಿ ಹೇಳಲು ಕಷ್ಟ. ಅರ್ಥಾತ್ ನೀವು ಮುಂದೆ ಓದಲೇಬೇಕು. ನಮ್ಮದೊಂದು ಗೆಳೆಯರ ಬಳಗವಿದೆ. ನಾವು ಅದರ ಮೂಲಕ ನಾಟಕ, ಪ್ರತಿಭಟನೆ, ಜಾಥಾ, ಪ್ರಕಟಣೆ ಇತ್ಯಾದಿ ಏನೇನೋ ಮಾಡುತ್ತಿರುತ್ತೇವೆ. ಈ ಏನೇನೋ ಮಾಡುವ ನಮಗೆ ರಂಗಭೂಮಿ ಪ್ರಧಾನ ಮಾಧ್ಯಮ. ಒಮ್ಮೆ ನಾವು ಬಸವಣ್ಣನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಸವೇ ಜನನ, ವಿರಸವೇ ಮರಣ, ಸಮರಸವೇ ಜೀವನ: ವಿಶ್ವನಾಥ ಕಂಬಾಗಿ

ಬಹುಶಃ ಮನುಷ್ಯನಿಗೆ ಇನ್ನೊಂದೆರಡು ಮೆದುಳುಗಳೇನಾದರು ಇದ್ದಿದ್ದರೆ ಇಡೀ ಪೃಥ್ವಿ  ಎರಡಂತಸ್ತಿನ ಜಗತ್ತಾಗುತ್ತಿತ್ತು. ಯಾವ ಒಂದು  'ಅರಿವು' ಇರದೇ ಇರುವಾಗಿನ ಮನುಷ್ಯ ಪ್ರಾಣಿಯನ್ನು ಊಹಿಸಿಕೊಂಡಾಗ ಕಾಲ, ಸ್ಥಳ ಎರಡೂ ನಿಜಕ್ಕೂ ಶುಭ್ರವಾಗಿದ್ದವೆನೋ? ಎಂದೆನಿಸುತ್ತದೆ. ಆಗ ಮನುಷ್ಯ ಕೂಡ ಇತರೆ ಪ್ರಾಣಿಯಂತೆ ತಾನೂ ಒಂದು ಪ್ರಾಣಿ. ಎಲ್ಲರೊಳೊಂದಾಗಿ ಬದುಕಿದ ಆತ ಎಲ್ಲರಂತೆಯೇ ಬೆಳೆಯುತ್ತಿದ್ದ. ಎಲ್ಲದರ ಮಧ್ಯ ಎಲ್ಲವೂ ಆಗಿದ್ದ ಈ ಪ್ರಾಣಿಯ ಮೆದುಳು ಗಡ್ಡೆಯಲ್ಲಿ ಅದೆಂತಹ ನರಗಳು ಕವಲೊಡೆದು ಬೆಳೆದವೋ! ಆತನ ಇರುವಿಕೆಗೂ ಇತರೇ ಪ್ರಾಣಿಗಳ ಇರುವಿಕೆಯ ಮಧ್ಯ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆ ..ಊ.. ಔಚ್.. ಗಾಯಬ್: ಅನಿತಾ ನರೇಶ್ ಮಂಚಿ

ಇದ್ದಕ್ಕಿದ್ದಂತೆ ಎಂದು ಹೇಳಲು ಸಾಧ್ಯವಿಲ್ಲದಿದ್ದರೂ  ಯಾವುದೇ ಘನ ಗಂಭೀರ ಕಾರಣಗಳಿಲ್ಲದೆ ನನ್ನ ಬಲದ  ಕೈಯ ತೋರು ಬೆರಳಿನಲ್ಲಿ ನೋವು ಕಾಣಿಸಿಕೊಂಡಿತು. ನೋವು ಎಂದರೆ ಅದೇನು ಅಂತಹ ಸಹಿಸಲಸಾಧ್ಯವಾದ ಭಯಂಕರ ನೋವೇನೂ ಅಲ್ಲ. ಆದರೆ ದಿನವಿಡೀ ನಾನಿದ್ದೇನೆ ಎಂದು ಹಣಕಿ ಇಣುಕಿ ಹೋಗುತ್ತಿತ್ತು. ಹೀಗೆ ನೋವುಗಳು ಎಲ್ಲೇ ಪ್ರಾರಂಭವಾದರೂ ನಾನು ಅದರ ಇತಿಹಾಸವನ್ನು ಕೆದಕಲು ಹೊರಡುತ್ತೇನೆ. ಅವುಗಳ ಹುಟ್ಟು, ಬೆಳವಣಿಗೆಗಳ ಬಗ್ಗೆಯೇ ಕುತೂಹಲ ನನಗೆ. ಹಾಗಾಗಿ ನೋವು ಶುರು ಆದದ್ದು  ಹೇಗೆ, ಯಾವಾಗ, ಎಷ್ಟು ಗಳಿಗೆಗೆ, ಮುಂತಾದವುಗಳಿಗೆ ಉತ್ತರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲ್ಕು ಕವಿತೆಗಳು: ವೈ.ಬಿ.ಹಾಲಬಾವಿ, ಮೌಲ್ಯ ಎಂ., ಸಾಬಯ್ಯ ಸಿ.ಕಲಾಲ್, ಶೀತಲ್ ವನ್ಸರಾಜ್

ಪ್ರೀತಿ ಬೆರೆಸೋಣ… ಹೇಳುವುದು ಬಹಳಷ್ಟಿದೆ ಏಳುತ್ತಿಲ್ಲ ನಾಲಿಗೆ ಸೀಳಲ್ಪಟ್ಟಿದೆ ಹೊಲಿಯಲ್ಪಟ್ಟಿವೆ ತುಟಿಗಳು ಆದರೂ; ಮಾತಾಡೋಣ ಬಾ ಗೆಳಯ ನಮ್ಮ ಎದೆಗಳಿಂದ ನೂತ ನೋವಿನ ಎಳೆಗಳಿಂದ… ಕೇಳುವುದು ಬಹಳಷ್ಟಿದೆ ಸುರಿದ ಸೀಸ ಇನ್ನೂ ಆರಿಲ್ಲ ಕಿವುಡಾಗಿವೆ ಕಿವಿಗಳು ಪಿಸುಗುಡುತ್ತಿವೆ ಸನಾತನ ಗೋಡೆಗಳು ಆದರೂ; ಆಲಿಸೋಣ ಬಾ ಗೆಳಯ ನಮ್ಮ ಎದೆಬಡಿತದ ಸದ್ದುಗಳಿಂದ… ನೋಡುವುದು ಬಹಳಷ್ಟಿದೆ ಕುರುಡಾಗಿವೆ ಕಣ್ಣುಗಳು ನೆಟ್ಟ ಅವರ ಕ್ರೂರ ನೋಟಗಳಿಂದ ಆದರೂ; ಬೆಸೆಯೋಣ ಬಾ ಗೆಳೆಯ ನಮ್ಮ ಅಂತರಂಗದ ನೋಟಗಳನ್ನು ಎದೆಗೂಡಿನಲ್ಲಿ ಬಚ್ಚಿಟ್ಟ ಕನಸುಗಳಿಂದ… ನಡೆಯುವುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 23): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದ ಪ್ರಥಮ ಉಪಗ್ರಹ ಆರ್ಯಭಟವನ್ನು ಯಾವ ದೇಶದ ಉಡವಣಾ ಕೇಂದ್ರದಿಂದ ಹಾರಿಬಿಡಲಾಯಿತು? ೨.    ಪಂಜಾಬ್ ರಾಜ್ಯವಾಗಿ ಆಸ್ತಿತ್ವಕ್ಕೆ ಬಂದ ವರ್ಷ ಯಾವುದು? ೩.    ಸ್ವತಂತ್ರ ಭಾರತದ ಮೊದಲ ಭಾರತೀಯ ಗವರ್ನರ್ ಜನರಲ್ ಯಾರು? ೪.    ಮೊದಲ ಭಾರತ – ಪಾಕ್ ಯುದ್ಧ ನಡೆದಾಗ ಭಾರತದ ಕಮಾಂಡರ್ ಆಗಿ ಸೇವೆಯಲ್ಲಿದ್ದ ಕನ್ನಡಿಗ ಯಾರು? ೫.    ಬನಾರಸ್ ಹಿಂದೂ ವಿಶ್ವವಿದ್ಯಾಲಯ ಎಲ್ಲಿದೆ? ೬.    ೧೯೫೭-೫೮ರ ಅವಧಿಯಲ್ಲಿ ವಿಶ್ವದಾದ್ಯಂತ ವಿಜ್ಞಾನಿಗಳು ಒಟ್ಟುಗೂಡಿ ಭೂಮಿ ಮತ್ತು ಪರಿಸರಗಳ ಅಧ್ಯಯನ ನಡೆಸಿದರು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಲೋ ಡಾಕ್ಟರ್: ಅಮರ್ ದೀಪ್ ಪಿ.ಎಸ್.

ಅದೊಂದು ಓಣಿಯಲ್ಲಿ ಆಗಾಗ ವಯಸ್ಸಿನ ಹುಡುಗರ ನಡುವೆ ಹಾಕ್ಯಾಟ, ಜಗಳ ನಡೆಯುತ್ತಿದ್ದವು. ಮತ್ತೇನಿಲ್ಲ, ರಜಾ ದಿನ ಬಂತೆಂದರೆ, ಹಬ್ಬ ಹರಿದಿನಗಳು ಬಂದವೆಂದರೆ, ಇಲ್ಲವೇ ಮದುವೆ ಸೀಜನ್ನು ಇದ್ದರೆ ಹೀಗೆ… ಅಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟು ಆಡುವ ಖಯಾಲಿ ಅವರಿಗೆ. ಅಲ್ಲಿಗೆ ಇಸ್ಪೀಟು ಆಡುವವರು ಮಾತ್ರವೇ ಆಲ್ಲ ಆಡದವರೂ ಸಹ ಇರುತ್ತಿದ್ದರು. ಹಿಂದೆ ಸಾಲ ಕೊಟ್ಟು ಆಡಿಸಲು, ಇಸ್ಪೀಟು  ಆಡಲು ಹುರಿದುಂಬಿಸಿ ಮತ್ತೆ ಮತ್ತೆ ಸಾಲಗಾರರನ್ನಾಗಿಸಲು ಅಷ್ಟೇ.  ಅದಿದ್ದದ್ದೇ ಬಿಡಿ. ಅದಲ್ಲ ನಾನು ಹೇಳುತ್ತಿದ್ದುದು ಹೀಗೆ ಆಡುತ್ತಿದ್ದ ವಯಸ್ಸಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಸರಿಡದ ಕತೆಯೊಂದು (ಭಾಗ 5): ಪ್ರಶಸ್ತಿ ಪಿ.

ಇಲ್ಲಿಯವರೆಗೆ:  ಕಿಟ್ಟಿ-ಶ್ಯಾಮ ಶಾರ್ವರಿ-ಶ್ವೇತರಿಗೆ ಬಾಲ್ಯದಿಂದಲೂ ಸ್ನೇಹ. ಕಿಟ್ಟಿ ಹತ್ತಕ್ಕೆ ಓದು ನಿಲ್ಲಿಸಿ ಗ್ಯಾರೇಜ್ ಸೇರಿದ್ರೆ ಉಳಿದವರೆಲ್ಲಾ ಓದು ಮುಂದುವರೆಸಿ ಬೇರ್ಬೇರೆ ಕೆಲಸ ಹಿಡಿಯುತ್ತಾರೆ. ಕೆಲಸವಿಲ್ಲದ ಶ್ಯಾಮನ ಒದ್ದಾಟದ ದಿನಗಳು ಮುಗಿದು ಕೊನೆಗೂ ಒಂದು ಕೆಲಸವೊಂದು ಸಿಕ್ಕಿದೆ ಅವನಿಗೆ. ಶಾರ್ವರಿಗೆ ಕಾಲೇಜಲ್ಲೇ ಒಂದು ಕಂಪೆನಿಯಲ್ಲಿ ಆಯ್ಕೆಯಾಗಿದ್ದರೆ ಶ್ವೇತ ಬಾನುಲಿ ಉದ್ಘೋಷಕಿಯಾಗುವತ್ತ ಹೆಜ್ಜೆ ಹಾಕುತ್ತಾಳೆ. ಹಿಂಗೆ ಗೆಳೆಯರದ್ದು ಒಂದೊಂದು ದಿಕ್ಕು, ಒಂದೊಂದು ಗುರಿ. ಕಾಲೇಜಲ್ಲಿದ್ದ ಶ್ಯಾಮ-ಶಾರ್ವರಿಯ ನಡುವಿನ ಸಮಾನ ಮನಸ್ಥಿತಿ, ಆಕರ್ಷಣೆಗಳು ಅವರನ್ನು ಬದುಕಿನೋಟದಲ್ಲಿ ಒಂದು ಮಾಡುತ್ತಾ ಅಥವಾ ಬದುಕನ್ನೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಲನ್ ಆಗ್ಬಿಟ್ರಲ್ಲೋ ರಾಧೇಶ! ಸೀತೇಶ!!: ಅಖಿಲೇಶ್ ಚಿಪ್ಪಳಿ

  [ಈ ಕತೆಯಲ್ಲಿ ಬರುವ ವ್ಯಕ್ತಿಗಳ ಹೆಸರು ಕ್ರಮವಾಗಿ ರಾಧೇಶ ಮತ್ತು ಸೀತೇಶ. ರಾಧೇಶ ಬಂಡವಾಳಶಾಹಿ ಮತ್ತು ಸೀತೇಶ ಹೋರಾಟಗಾರ. ವಾಸ್ತವಿಕತೆಯಿಂದ ತುಂಬಾ ದೂರ ನಿಂತು ಯೋಚಿಸಿದ ಪರಿಣಾಮವಾಗಿ ಇವರಿಬ್ಬರು ಖಳನಾಯಕರಾಗಿದ್ದಾರೆ. ಹೇಗಾದರೂ ಕಾರ್ಯಸಾಧನೆ ಮಾಡಬೇಕೆಂಬ  ಕಾನೂನುಬಾಹಿರವಾದ ಇವರ ಹಠಕ್ಕೆ ಬಲಿಷ್ಟವಾದ ಹಲಸಿನ ಮರ ಬಲಿಯಾಗಿದೆ. ಪೂರ್ಣಪಾಠವನ್ನು ಮುಂದೆ ಓದಿ] ಈ ಹಿಂದೆ “ಮಾವು-ಹಲಸಿನ ಮರವುಳಿಸಿದ ಕತೆ” ಎಂಬ ಲೇಖನವನ್ನು ಬರೆಯಲಾಗಿತ್ತು. ಲೇಖನ ಓದಿದ ನಂತರ ಖಾಸಗಿ ಪೆಟ್ರೋಲ್ ಬಂಕ್ ಮಾಲಿಕ ರಾಧೇಶನ ಮನ:ಪರಿವರ್ತನೆಯಾಗಬಹುದು ಎಂದು ಭಾವಿಸಲಾಗಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಶಸ್ಸಿನ ಗುಟ್ಟು…ಅಧ್ಯವಸಾಯ: ಸುಮನ್ ದೇಸಾಯಿ

ನಾವು ಮಾನವ ಜನ್ಮ ತಳೆದಿದ್ದು ಒಂದೇ ರಾತ್ರಿಯಲ್ಲಲ್ಲ. ಯುಗಯುಗಾಂತರಗಳಲ್ಲಿ ಸುಮಾರು ಎಂಭತ್ನಾಕು ಕೋಟಿ ಜೀವರಾಶಿಯಾಗಿ ಪರಿವರ್ತನೆಯಾಗಿದ್ದೇವೆ,ಈ ಮಾನವ ಜನ್ಮ ಅತ್ಯಂತ ದುರ್ಲಭವಾದುದು. ನಮ್ಮ ಐದು ಬೆರಳುಗಳು ಹೇಗೆ ಸಮನಾಗಿರುವ್ದಿಲ್ಲವೋ ಹಾಗೆಯೇ ಪ್ರತಿ ಮನುಷ್ಯನ ಆಂತರಿಕ ಶಕ್ತಿಯು ಕೂಡಾ ಭಿನ್ನ ವಿಭಿನ್ನವಾಗಿರುತ್ತದೆ. ಭಗವಂತನ ದಿವ್ಯ ಸನ್ನಿಧಿಯಲ್ಲಿ ಏಕನಿಷ್ಠೆಯಿಂದ ಪ್ರಾರ್ಥನೆ ಮಾಡುವದರಿಂದ ನಮ್ಮಲ್ಲಿಯ ಆಂತರಿಕ ಶಕ್ತಿ ದ್ವಿಗುಣವಾಗುವದರ ಜೊತೆಗೆ ದೇಹಕ್ಕೆ ವಿಶೇಷ ಚೈತನ್ಯ ಲಭಿಸುತ್ತದೆ.ಹಾಗಂತ ಬರೀ ಮೂರೂ ಹೊತ್ತು ಭಗವಂತನ ಮುಂದೆ ಮಂಡಿಯೂರಿ ಪ್ರಾರ್ಥಿಸುವದರಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ. ನಾವುಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾನನದ ನೀರವತೆಯ ನಡುವೆ ರೈಲು ಹಳಿಗಳ ಮೇಲೊಂದು ಪಯಣ (ಕೊನೆಯ ಭಾಗ): ನಿಶಾಂತ್ ಜಿ.ಕೆ.

ಇಲ್ಲಿಯವರೆಗೆ ಆಗ್ಲೇ ನಮ್ಮ ಪಯಣ ಅಥವಾ ನಡಿಗೆ ಸ್ಟಾರ್ಟ ಆಗಿ ೪ ಘಂಟೆಗಳ ಮೇಲಾಗಿತ್ತು ಅನ್ಸುತ್ತೆ, ನಡಿತಾ ಹಾಗೇ ಮುಂದೆ ಹೋದೊರಿಗೆ ಕಣ್ಣಿಗ್ ಬಿತ್ತು ನೋಡಿ ಗೋವಾ ರಾಜ್ಯದ ಭಾಗಕ್ಕೆ ಒಳಪಟ್ಟಿದ್ದ ಒಂದು ಸಣ್ಣ ರೈಲು ನಿಲ್ದಾಣ. ಅಲ್ಲೆ ಹಳಿಗಳ ದುರಸ್ಥಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಇನ್ನೆಷ್ಟು ದೂರ ಎಂದು ವಿಚಾರಿಸಿದಾಗ   ಅವರು ಹೇಳಿದ್ದು ಕೇಳಿ ನಮ್ ಹುಡ್ಗುರೆಲ್ಲಾ ತಕ್ಷಣ ಹೌಹಾರಿ ಉಸ್ಸಪ್ಪಾ ಎಂದ್ರು..ನಾವಿನ್ನು ಆ ರೈಲ್ವೇ ಸ್ಟೇಷನ್ ಇಂದ ಸುಮಾರು ೮ ಕಿ.ಮೀ ಕ್ರಮಿಸಬೇಕಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲೇಖನಗಳ ಆಹ್ವಾನ

ಸಹೃದಯಿಗಳೇ,  "ಅಸ್ಪೃಶ್ಯತೆ" ಕುರಿತ ನಿಮ್ಮ ಅನುಭವಗಳನ್ನು, ಚಿಂತನೆಗಳನ್ನು, ಕತೆ, ಕವಿತೆ, ಲೇಖನಗಳ ರೂಪದಲ್ಲಿ ಪಂಜುವಿಗೆ ಕಳುಹಿಸಿಕೊಡಿ.. ನಿಮ್ಮ ಬರಹಗಳು ದಿನಾಂಕ 11.04.2014 ರ ಒಳಗೆ ನಮಗೆ ತಲುಪಲಿ. ನಮ್ಮ ಈ ಮೇಲ್ ವಿಳಾಸ editor.panju@gmail.com, smnattu@gmail.com ಪಂಜು ಬಳಗದ ಪರವಾಗಿ ನಟರಾಜು ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಯಿ ನಕ್ಕಿದ್ದು ಯಾಕೆ?!: ಗುರುಪ್ರಸಾದ ಕುರ್ತಕೋಟಿ

ಹೊಟ್ಟೆ ಹಸಿವೆಯಿಂದ ಗುರುಗುಡುತ್ತಿತ್ತು. ಯಾಕಿವತ್ತು ಇನ್ನೂ ತಟ್ಟೆಯ ಸಪ್ಪಳವೇ ಇಲ್ಲಾ? ನಾಲಿಗೆ ಹೊರ ಚಾಚಿ, ಮುಚ್ಚಿರುವ ತಲಬಾಗಿಲನ್ನೊಮ್ಮೆ ದಿಟ್ಟಿಸಿ ನೋಡುತ್ತಾ, ತಲೆಯ ಮೇಲೆ ಸುಡುತ್ತಿರುವ ಸೂರ್ಯನ ಶಾಖವನ್ನು ತಾಳಲಾರದೇ ತನ್ನ ಗೂಡಿನೆಡೆಗೆ ಕುಂಯ್ ಗುಡುತ್ತಾ ರಾಜಾ ವಾಪಸ್ಸಾದ. ಗೂಡಿನಲ್ಲಿ ತಾಪ ಇನ್ನೂ ಜಾಸ್ತಿಯಿತ್ತು. ತಾನು ಆ ಮನೆಯನ್ನು ಸೇರಿದ್ದು ಚಿಕ್ಕ ಕುನ್ನಿಯಾಗಿದ್ದಾಗ. ತನ್ನ ಅಮ್ಮ ಟ್ರಕ್ಕಿನಡಿಯಲ್ಲಿ ಸಿಕ್ಕಿ ಸತ್ತು ತಾನು ತಬ್ಬಲಿಯಾದಾಗ, ಮುದ್ದಾಗಿದ್ದೆನೆಂದೋ ಅಥವಾ ಮುಂದೆ ಮನೆ ಕಾಯುವೆನೆಂದೋ ತನ್ನನ್ನು ಮನೆಗೆ ತಂದು ಸಾಕಿದ್ದು ಈ ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಮಂಜು ಎಂ. ದೊಡ್ಡಮನಿ

1 ಒಲವಿನ ನೋಟಿಗೆ ಕನಸುಗಳ ಚಿಲ್ಲರೆ ಕೊಟ್ಟ ಹುಡುಗಿ.. ನನ್ನ ಹೃದಯವನೆಂದು ಕ್ರಯಕ್ಕೆ ಪಡೆಯುತ್ತಿಯ..? 2 ನಿನ್ನೆದುರು ನಾ ಹಾಕುವ ಕಣ್ಣಿರಿಗೆ ಬೆಲೆ ಸಿಗದಿದ್ದರೂ ಚಿಂತೆಯಿಲ್ಲ ಆ ಕಣ್ಣುಗಳ ಕಣ್ಣಿರಿಗೆ ನೀನೆಂದು ಕಾರಣಳಾಗಬೇಡ..! 3 ನನ್ನೆದೆಗೆ ಗುಂಡಿಡುವ ಮೊದಲು ಗುರಿಯನ್ನೊಮ್ಮೆ ಸರಿಯಾಗಿ ನೋಡು ಗುಂಡುಗಳು ನಿನ್ನೆದೆಯ ಹೊಕ್ಕಾವು..! 4 ಸಾಧನೆಗಳ ಸಾಧಕರ ಜೀವನವ ಓದುವಾಗ ಬೆನ್ನುಡಿಯಲ್ಲಿ ಸಿಕ್ಕಿದ್ದು ; ಬರೀ ನೋವು ಸಂಕಟ ಬಡತನ ಮತ್ತು ಅವಮಾನಗಳ ಬೃಹತ್ ಗಂಟು..! 5 ನನ್ನ ಹೃದಯದ ಗೋಡೆಗಳಿಗೆ ನೀನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೀಗೊಂದು ಪ್ರಲಾಪ: ಅಖಿಲೇಶ್ ಚಿಪ್ಪಳಿ

ಮೊನ್ನೆ ಮುಂಜಾನೆ ಗಣ್ಯರೊಬ್ಬರು ಕೆಲಸದ ಮೇಲೆ ನೋಡಲು ಬರುವವರಿದ್ದರು, ಗಣ್ಯರಿಗೆ ಒತ್ತಡಗಳಿರುತ್ತವೆ ಹಾಗೂ ಸರಿಯಾದ ಸಮಯಕ್ಕೆ ಬರಲು ಸಾಧ್ಯವಾಗದಿರುವುದು ಅಚ್ಚರಿಯ ವಿಷಯವಲ್ಲ. ೫-೧೦ ನಿಮಿಷದಲ್ಲಿ ಬರುತ್ತಾರೆ ಎಂಬುದನ್ನು ಗಣ್ಯರ ಸಹಾಯಕ ಜಂಗಮವಾಣಿಯ ಮುಖಾಂತರ ತಿಳಿಸುತ್ತಿದ್ದ. ಸರಿ ಮತ್ತೇನು ಮಾಡಲು ತೋಚದೆ, ರಸ್ತೆಗೆ ಬಂದು ನಿಂತೆ. ಮುಂಜಾನೆಯ ಹಕ್ಕಿಗಳ ಕಲರವದ ನಡುವೆ ನಾನೇನು ಕಡಿಮೆಯೆಂಬಂತೆ ಪುಟ್ಟ ಇಣಚಿಯೊಂದು ನಿರ್ಕಾಯ್ ಮರವನ್ನು ಜಿಗಿ-ಜಿಗಿದು ಏರುತಿತ್ತು. ನಗರದ ಹೊಲಸನ್ನು ಸ್ವಚ್ಚ ಮಾಡುವ ಪ್ರಯತ್ನದಲ್ಲಿ ಕಾಗೆಗಳ ಸಂತತಿ ಮಗ್ನವಾಗಿದ್ದವು. ಕೈವಾರದಿಂದ ಗೀರಿದಷ್ಟು ಕರಾರುವಕ್ಕಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 22): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಸಂವಿಧಾನದ ಯಾವ ತಿದ್ದುಪಡಿಯಲ್ಲಿ ಮತದಾನದ ವಯಸ್ಸು ೨೧ ರಿಂದ ೧೮ಕ್ಕೆ ವರ್ಷಕ್ಕೆ ಇಳಿಸಲಾಯಿತು? ೨.    ರಾಜಾಸಂಸಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿದೆ? ೩.    ಜಾರ್ಖಂಡ್ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು? ೪.    ರಾಮನಾಥ ಅಂಕಿತವಿಟ್ಟು ವಚನಗಳನ್ನು ಬರೆದ ವಚನಕಾರ ಯಾರು? ೫.    ಭಾಷಾವಾರು ಪ್ರಾಂತ್ಯಗಳ ಮೇರೆಗೆ ಸ್ಥಾಪನೆಗೊಂಡ ಮೊದಲ ಭಾರತೀಯ ರಾಜ್ಯ ಯಾವುದು? ೬.    ಗೋಬರ್ ಗ್ಯಾಸ್‌ನಲ್ಲಿರುವ ಅನಿಲ ಯಾವುದು? ೭.    ಮೊದಲ ಬಾರಿಗೆ ಭೂಮಿಯ ಮೇಲೆ ಕಾಣಿಸಿಕೊಂಡ ಸಸ್ಯಜಾತಿ ಯಾವುದು? ೮.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಧುನಿಕ ಮಹಿಳೆಯರು ಶಿಲುಬೆಗೇರುವ ಪರಿ: ಶ್ರೀದೇವಿ ಕೆರೆಮನೆ

ನಾನು ಸೀತೆಯಷ್ಟು ಸಹಿಷ್ಣು, ಸರ್ವ ಸಹನೆಯವಳಲ್ಲ. ಅವಶ್ಯಕತೆ ಉಂಟಾದಲ್ಲಿ ನಾನು ವಿಪ್ಲವ ಮಾಡ ಬಲ್ಲೆ… ಪ್ರತಿ ಹಿಂಸೆಯನ್ನೂ ಮಾಡಬಲ್ಲೆ. ಕಳೆದ ಎರಡು ತಿಂಗಳಿಂದ ಡಾ. ಪ್ರತಿಭಾ ದೇವಿಯವರು ಬರೆದ, ಮೂತಿದೇವಿ ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ’ಯಾಜ್ಞಸೇನಿ’ ಕೃತಿಯನ್ನು ಗೌತಮ ಗಾಂವಕರರು ನನ್ನ ಕೈಗಿಟ್ಟಾಗಿನಿಂದ ಕನಿಷ್ಟ ಸಾವಿರ ಸಲ ಈ ವಾಕ್ಯವನ್ನು ಓದಿದ್ದೇನೆ. ಆಸ್ವಾದಿಸಿದ್ದೇನೆ. ಒಳಗೊಳಗೇ ಈ ವಾಕ್ಯವನ್ನು ಮಥಿಸಿದ್ದೇನೆ, ಈ ವಾಕ್ಯವನ್ನು ನನ್ನದಾಗಿಸಿಕೊಳ್ಳಲು ಪ್ರಯತ್ನವನ್ನೂ ಮಾಡಿದ್ದೇನೆ. ಬಹುಶಃ ಮಹಿಳಾ ವಾರಾಚರಣೆಯ ಈ ಸಂದರ್ಭದಲ್ಲಿ ಈ ಮಾತು ಕೇವಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ