ಸಾಮಾನ್ಯ ಜ್ಞಾನ (ವಾರ 16): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    π(ಪೈ) ಇದರ ಬೆಲೆಯನ್ನು ತೋರಿಸಿಕೊಟ್ಟ ಭಾರತೀಯ ಗಣಿತಜ್ಞ ಯಾರು? ೨.    ಇಂದಿನ ಸಸ್ಯಶಾಸ್ತ್ರ (Botany) ಹಿಂದೆ ಯಾವ ಹೆಸರಿನಿಂದ ಪ್ರಸಿದ್ಧವಾಗಿತ್ತು? ೩.    ಅಂಧರಿಗಾಗಿ ಲಿಪಿ ಕಂಡು ಹಿಡಿದವರು ಯಾರು? ೪.     ಭಾರತ ದೇಶದವರು ತಯಾರಿಸಿದ ಪ್ರಥಮ ಕಂಪ್ಯೂಟರಿನ ಹೆಸರೇನು? ೫.    ಭಾರತದ ಮಾನವ ಮಸ್ತಿಷ್ಕ ಯಂತ್ರ (Man Computer) ಎಂದು ಪ್ರಸಿದ್ಧಳಾದ ಮಹಿಳೆ ಯಾರು? ೬.    ಭಾರತದ ರಾಷ್ಟ್ರಗೀತೆ ’ಜನಗಣಮನ’ ವನ್ನು ಪ್ರಥಮ ಬಾರಿಗೆ ರಾಷ್ಟ್ರಗೀತೆಯಾಗಿ ಹಾಡಿದ ವರ್ಷ ಮತ್ತು ಸ್ಥಳ ಯಾವುದು? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಣುವ ಅನಾಚಾರಕ್ಕೆ, ಕಾಣದ ಅಸಮಂಜಸ ಉಪಮೆಗಳೇಕೆ?: ಸುಮನ್ ದೇಸಾಯಿ

   ಈಗೀಗ ದೇಶದೊಳಗ ಅತ್ಯಾಚಾರದ ಪ್ರಕರಣಗೊಳು ಅತೀ ಸರ್ವೆ ಸಾಮಾನ್ಯ ಅನ್ನೊ ಹಂಗ ನಡಿಲಿಕತ್ತಾವ. ಮನುಷ್ಯನ ಮನಸ್ಥಿತಿ ಎಷ್ಟು ವಿಕೃತಿಗಳ ಕಡೆಗೆ ವಾಲೆದಂದ್ರ ಇವತ್ತ ಸಂಬಂಧಗಳ ಪವಿತ್ರತೆಯನ್ನು ಸುದ್ಧಾ ಮರೆತು ಮನುಷ್ಯ ಮೃಗಗಳಂಗ ವರ್ತಿಸ್ಲಿಕತ್ತಾನ. ಇಂಥಾ ವಿಕೃತ ಮನಸಿಗೆ, ಸಣ್ಣ ಮಕ್ಕಳು, ಅಕ್ಕ ತಂಗಿ, ಕಡಿಕ ತಾ ಹಡದ ಮಗಳು ಅನ್ನೊದನ್ನು ಮರೆತು ಕಾಮಾಂಧ ಆಗ್ಯಾನ. ಗಾಂಧೀ ಅಜ್ಜನ ರಾಮ ರಾಜ್ಯದ ಕನಸು ನೆನಸಾಗೊ ಯಾವ ಲಕ್ಷಣಗಳು ಈ ಯುಗಾಂತ್ಯದ ತನಕಾ ಇಲ್ಲಾ ಅನಿಸ್ತದ.  ರಾಮ ರಾಜ್ಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಗರದ ಮಾರಿಕಾಂಬ ಜಾತ್ರೆ: ಪ್ರಶಸ್ತಿ ಪಿ.

ಸಾಗರದ ಹಬ್ಬಗಳು ಅಂದ್ರೆ ಮೊದಲು ನೆನಪಾಗೋದು ಮೂರು ವರ್ಷಕ್ಕೊಮ್ಮೆ ಬರೋ ಮಾರಿ ಜಾತ್ರೆ. ಸಾಗರದ ಮಧ್ಯಭಾಗದಲ್ಲಿರುವ ಶ್ರೀ ಮಾರಿಕಾಂಬೆ ದೇವಿಯ ಒಂಭತ್ತು ದಿನಗಳ ಜಾತ್ರೆಯೆಂದರೆ ಸಾಗರಿಗರ ಪಾಲಿಗೆ ಅಂದೊಂದು ದೊಡ್ಡ ಹಬ್ಬವೇ. ಮೊದಲನೇ ದಿನ ಅದೇ ಬೀದಿಯಲ್ಲಿರುವ ತನ್ನ ತವರು ಮನೆಯಲ್ಲಿರುತ್ತಾಳಂತೆ ತಾಯಿ. ಅವತ್ತು ಮಾಂಸ ಮಧ್ಯಗಳಿಲ್ಲದ ಸಸ್ಯಾಹಾರಿ ಪೂಜೆ. ಆಮೇಲಿನ ದಿನಗಳಲ್ಲಿ ಕುರಿ, ಕೋಳಿಗಳ ಕಡಿತವೆಂದು ಮಾಂಸಾಹಾರಿಗಳ ಹಬ್ಬ. ಆ ಬೀದಿಯ ಮಾಂಸದಂಗಡಿಯಲ್ಲಿ ಮೊದಲ ದಿನವೇ ಮೂವತ್ತೊಂದು ಕುರಿ ಕಡಿದರಂತೆ  ಆ ಮನೆಯಲ್ಲಿ ಬಂದ ನೆಂಟರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭೀಷ್ಮ ಪ್ರತಿಜ್ಞೆ: ಡಾ . ಸಿ.ಎಂ.ಗೋವಿಂದರೆಡ್ಡಿ

ಶ್ರೀ ವ್ಯಾಸಮಹರ್ಷಿಗಳು ತಮ್ಮ ಶಿಷ್ಯರಿಗೆ ಹೇಳಿದ ಮಹಾಭಾರತ ಕಥೆಯನ್ನು, ಅರ್ಜುನತನಯನಾದ ಅಭಿಮನ್ಯುವಿನ ಪುತ್ರ ಪರೀಕ್ಷಿತನ ಮಗನಾದ ಜನಮೇಜಯನು ಸರ್ಪಯಾಗ ಮಾಡುವ ಕಾಲದಲ್ಲಿ ವೈಶಂಪಾಯನನಿಂದ ಕೇಳಿ ತಿಳಿದನು : ಮಹರ್ಷಿ ವಿಶ್ವಾಮಿತ್ರ ಮೇನಕೆಯರ ಮಗಳೂ ಕಣ್ವಮಹರ್ಷಿಗಳ ಸಾಕುಮಗಳೂ ಆದ ಶಕುಂತಲೆಯನ್ನು ವರಿಸಿದವನು ಚಂದ್ರವಂಶದ ರಾಜನಾದ ದುಷ್ಯಂತ. ಈ ದುಷ್ಯಂತ ಶಕುಂತಲೆಯರ ಮಗನೇ ಭರತ. ಭರತನಿಂದಲೇ ಭಾರತವಂಶವಾಯಿತು. ಭರತನ ಮಗ ಸುಹೋತ್ರ ; ಸುಹೋತ್ರನ ಮಗ ಹಸ್ತಿ. ಇವನಿಂದಲೇ ರಾಜಧಾನಿಗೆ ಹಸ್ತಿನಾಪುರವೆಂಬ ಹೆಸರು ಬಂದದ್ದು. ಹಸ್ತಿಯ ಮಗ ಸಂವರಣ ; … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಿಕ್ಕಪುಟ್ಟ ಕಾಳಜಿಯಲ್ಲಿ: ಪದ್ಮಾ ಭಟ್

                ಎಷ್ಟೋ ಬಾರಿ ಚಿಕ್ಕಪುಟ್ಟ ವಿಷಯಗಳು ಅರ್ಥವಾಗುವುದೇ ಇಲ್ಲ. ಎಲ್ಲದರ ನಡುವೆ ಇದ್ದುಕೊಂಡೇ ಏನೂ ಗೊತ್ತಿಲ್ಲದ, ಅಭಿವ್ಯಕ್ತಿ ಪಡಿಸಲಾಗದ ರೀತಿಯಾಗಿಬಿಡುತ್ತದೆ.. ನಮ್ಮನ್ನು ಅವರು ಅರ್ಥ ಮಾಡ್ಕೋಬೇಕು, ಇವರು ಅರ್ಥಮಾಡಿಕೋಬೇಕು ಎಂದು ಹಂಬಲಿಸುವ ನಾವೇ ಯಾಕೆ ಬೇರೆಯವರನ್ನು ಅರ್ಥ ಮಾಡಿಕೊಳ್ಳುವಲ್ಲಿ ಮೂಕರಾಗುತ್ತೇವೆಯೋ ಪ್ರಶ್ನಿಸಿಕೊಳ್ಳಬೇಕಿದೆ. ಪ್ರೀತಿಯ ನಡುವೆ, ಪ್ರೀತಿಸುವ ಜನರ ನಡುವೆ ನಾವೂ ಪ್ರೀತಿಯ ಜೀವಿಯಾಗಿದ್ದರೇ ಚಂದ. ಎಲ್ಲವನ್ನೂ ಹಗುರವಾಗಿ, ಸಡಿಲವಾಗಿ ತೆಗೆದುಕೊಳ್ಳುವಾಗ ಒಂದೆರಡು ನಿಮಿಷವಾದರೂ ಆ ವ್ಯಕ್ತಿಯ ಬಗ್ಗೆಯೋ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನೆಗೆ ಬಂದ ಮೋಹಿನಿ: ಪಾರ್ಥಸಾರಥಿ. ಎನ್.

ಅದೇನೊ ಈ ಟೀವಿಗಳ ಹಾವಳಿ ಜಾಸ್ತಿಯಾದನಂತರ ಎಲ್ಲರ ಮನೆಗಳಲ್ಲಿ ರಾತ್ರಿ ಮಲಗುವ ಸಮಯವೆ ಹೆಚ್ಚು ಕಡಿಮೆ ಆಗಿಹೋಗಿದೆ. ಮೊದಲೆಲ್ಲ ರಾತ್ರಿ ಹತ್ತು ದಾಟಿತು ಅಂದರೆ ಸಾಕು ಎಲ್ಲರ ಮನೆಯ ದೀಪಗಳು ಆರುತ್ತಿದ್ದವು. ಈಗಲಾದರೆ ಅರ್ಧರಾತ್ರಿ ದಾಟಿದರು ಯಾವುದೊ ಚಾನಲ್ ನೋಡುತ್ತ ತೂಕಡಿಸುತ್ತ ಕುಳಿತಿರುವವರೆ ಜಾಸ್ತಿ.  ಕಳೆದ ವಾರ ಹೀಗೆ ಆಯಿತು. ಮನೆಯಲ್ಲಿ ಹೆಂಡತಿ ಹಾಗು ಮಗಳು ರಾತ್ರಿ ಹತ್ತೂವರೆ ಆಯಿತೆಂದು ಹೋಗಿ ಮಲಗಿಬಿಟ್ಟರು, ನಾನು ವಿದೇಶಿ ಚಾನಲ್ ನ ಹಾರರ್ ಸಿನಿಮಾ ನೋಡುತ್ತ ಕುಳಿತಿದ್ದವನು, ಟೀವಿ ಆರಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕವಿತೆಗಳು: ಮಹಿ, ಅಕುವ

          ಭ್ರೂಣ ಆಗಷ್ಟೇ ಕಿತ್ತು ಬಿದ್ದ ಗಾಳಿಪಟ, ಹೊಟ್ಟೆಯೊಳಗೆ ನುಲಿವ ಸಂಕಟ  ಜೀವ ಪ್ರಕ್ರಿಯೆಗೆ ಅನುಗೊಳ್ಳುವ ದೇಹ  ರಕ್ತಮಯ  ತೊಡೆಗಳ ನಡುವೆ ಚಿಗುರುವ ಚಿಟ್ಟೆ ಮೊಟ್ಟೆ  ದಿನಕಳೆದಂತೆಲ್ಲಾ ಬಟ್ಟೆಯಂತೆ ದೇಹ  ಒಗೆದು ಹರಡುವ ಬಯಕೆ  ದಾರಿತಪ್ಪದೇ ಅಮ್ಮನ ಎದೆಗವಿತು ಆಶ್ರಯ  ಪ್ರತಿ ಹುಡುಗನಲ್ಲು ಕಾಡುವ ರೋಮಿಯೋ  ಥೇಟ್ ಕ್ಲಿಯೊಪಾತ್ರಳದ್ದೆ ನೃತ್ಯ ನಡಿಗೆಗೆ  ಜಂಬದ ಕೊಂಬು ಹಾರು ಕೂದಲ ಮೇಲೆ  ಮಿಗ್ ವಿಮಾನದ್ದೆ ವೇಗ  ಸ್ಕೊಟಿಗೆ  ಹಾದಿಗಳ ಹಾದು, ಹಳ್ಳ ಕೊಳ್ಳಗಳ  ದಾಟಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓಯಸಿಸ್: ನಿನಾದ (ಭಾಗ 2)

ಇಲ್ಲಿಯವರೆಗೆ… ಅದೊಂದು ದಿನ ನಿಶಾಂತ್ ಫೋನ್ ಗೆ ಕರೆ  ಮಾಡಿ ಮಾಡಿ ಸೋತು ಹೋಗಿ ನಿನಾದ ಫೋನ್ ಗೆ ಕರೆ ಮಾಡಿದ. ನಂಗೆ ತುರ್ತಾಗಿ ಕೆಲವು ವಿಷಯ ಕೇಳಬೇಕಿತ್ತು. ನಿಶಾಂತ್ ಎಲ್ಲಿ ?? ನಿನಾದ ಶಾಂತವಾಗಿ,  ಬಹುಶಃ  ನಿಶಾಂತ್ ಬ್ಯುಸಿ ಏನು ಕೇಳಬೇಕಿತ್ತು ? ಮನೆಗೆ ಬಂದ ಮೇಲೆ ವಾಪಾಸು ಕರೆ ಮಾಡಲು ಹೇಳುವೆ ಅಂದು ಉತ್ತರಿಸಿದಳು. ಏನೋ ಸುಮಾರು ಹೊತ್ತು ನಿಶಾಂತ್ & ಜೈನ್ ಮಾತನಾಡಿಕೊಂಡಿದ್ದರು. ದಿನಗಳು ಸಾಗಿ ಹೋಗುತ್ತಿದ್ದವು.. ಆಗೊಮ್ಮೆ ಈಗೊಮ್ಮೆ ನಿನಾದ ಕರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಲವತ್ತರ ಆಸು ಪಾಸಿನ ಪ್ರೀತಿ ಫಜೀತಿ: ಅಮರ್ ದೀಪ್ ಪಿ.ಎಸ್.

ಈ ಸೀರೆಯಲ್ಲಿ  ಈ  ಮೇಕಪ್ ನಲ್ಲಿ   ಹೇಗೆ ಕಾಣಿಸ್ತೇನೆ ? ಕೇಳಿದಳು .    ಅಂದು ಆಕೆ ಬಲಗಡೆ ಸೆರಗು ಹೊದ್ದು ಅವಳ ತೂಕಕ್ಕೆ  ಭಾರವೆನಿಸುವ ಸೀರೆಯನ್ನು ತುಂಬಾ ಇಷ್ಟಪಟ್ಟು ಒಂದೂವರೆ ತಾಸಿಗಿಂತ ಹೆಚ್ಚು ಸಮಯ ತೆಗೆದುಕೊಂಡು ರೆಡಿಯಾಗಿ ಬಂದಿದ್ದಳು. ಎಂದಿಗಿಂತ ತುಸು ಹೆಚ್ಚೇ ಎನ್ನುವಷ್ಟು ಮೇಕಪ್ ಮಾಡಿಕೊಂಡಿದ್ದಳು. ತುಟಿಗಳು ರಂಗಾಗಿದ್ದವು. ಅಂದು ಸಂಜೆ ಕಾಕ್ ಟೈಲ್  ಪಾರ್ಟಿ ಗೆ ಆಹ್ವಾನಿಸಿದ ಮೇರೆಗೆ ಬಹಳ ಉಲ್ಲಸಿತಳಾಗಿ ತನ್ನ ಎಲ್ಲ ನಾಲ್ಕು ದಿನದಿಂದೀಚೆಗೆ ಆದ ಗೆಳತಿಯರೊಂದಿಗೆ ಬಂದಿಳಿದಿದ್ದಳು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಂಗಾರಮ್ ಎಂಬ ಹುಲಿಯೂ-ಸಾಗರದ ಮಾರಿಜಾತ್ರೆಯೂ: ಅಖಿಲೇಶ್ ಚಿಪ್ಪಳಿ

ಪಶ್ಚಿಮ ಬಂಗಾಳದ ದಾಬಾ ಅರಣ್ಯ ಪ್ರದೇಶದಲ್ಲಿ ೨೦೦೯ರಲ್ಲಿ ಹುಲಿಮರಿಯೊಂದು ಅನಾಥವಾಗಿ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿತ್ತು. ಮುದ್ದಾದ ಪುಟ್ಟ ಹುಲಿ ಮರಿ ತಾಯಿಯಿಂದ ಬೇರ್ಪಟ್ಟು ಅಸಹಾಯಕವಾಗಿ ಅನಾಥವಾಗಿತ್ತು. ಅರಣ್ಯಾಧಿಕಾರಿಗಳು ತಾಯಿ ಬರುವುದೆಂದು ಕಾದು ನೋಡಿದರು. ತಾಯಿ ಬರಲಿಲ್ಲ. ಮರಿಯನ್ನು ತಂದು ಬೋರ್ ವನ್ಯಜೀವಿ ಉದ್ಯಾನವನಕ್ಕೆ ತಂದು ಬೆಳೆಸಿದರು. ಹುಲಿ ಮರಿ ಬೆಳದ ಮೇಲೆ ಮತ್ತೆ ಅರಣ್ಯಕ್ಕೆ ಬಿಡುವ ಯೋಜನೆ ಅರಣ್ಯ ಇಲಾಖೆಯದಾಗಿತ್ತು. ಎಲ್ಲಾ ಮೃಗಾಲಯ ಮತ್ತು ಸಂರಕ್ಷಿತ ಉದ್ಯಾನವನಗಳಲ್ಲಿ ಹಿಂಸ್ರ ಪ್ರಾಣಿಗಳಿಗೆ ಆಹಾರವಾಗಿ ಸಾಮಾನ್ಯವಾಗಿ ದನದ ಮಾಂಸವನ್ನು ನೀಡುತ್ತಾರೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೂಗಲ್ಡೂಡಲ್ ಪುರಾಣ: ಪ್ರಶಸ್ತಿ ಪಿ.

ಮೊನ್ನೆ ಎಂದಿನಂತೆ ಗೂಗಲ್ ತೆರೆತಿದ್ದೋನಿಗೆ ಸಿಕ್ಕಾಪಟ್ಟೆ ಖುಷಿ ಆಯ್ತು. ಕಾರಣ ಏನಪ ಅಂದ್ರೆ ನಮ್ಮ ಭಾರತದ ಕೋಗಿಲೆ(nightangle of india) ಎಂದೇ ಖ್ಯಾತ ಸರೋಜಿನಿ ನಾಯ್ಡು ಅವರ ಮುಖಚಿತ್ರ ಗೂಗಲ್ನಲ್ಲಿ ರಾರಾಜಿಸ್ತಾ ಇತ್ತು. ಸಣ್ಣವರಿದ್ದಾಗ ಪಠ್ಯದಲ್ಲಿ ನೋಡಿದ ಅವರ ಮುಖ ಇವತ್ತು ಗೂಗಲ್ನಲ್ಲಿ ಕಂಡಾಗ ಏನೋ ಖುಷಿ. ಗೂಗಲ್ನಲ್ಲಿ ಭಾರತೀಯರ ಬಗ್ಗೆ ಬಂದೇ ಇಲ್ವಾ ಅಂತಲ್ಲ. ಬಂದಿದೆ. ಶ್ರೀನಿವಾಸ ರಾಮಾನುಜಂ ಜನ್ಮದಿನ, , ಜಗತ್ ಸಿಂಗ್, ಜಗದೀಶ ಚಂದ್ರ ಬೋಸ್ ಜನ್ಮದಿನ, ಗಾಂಧೀಜಯಂತಿ, ಹೋಳಿ, ದೀಪಾವಳಿ, ಪ್ರತೀವರ್ಷದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನರಂಜನಾ ಮಾಲಿನ್ಯ: ಅಖಿಲೇಶ್ ಚಿಪ್ಪಳಿ

ಎಲ್ಲಾ ನಕ್ಕ ಮೇಲೆ ದಡ್ಡ ನಕ್ಕನಂತೆ. ಈ ಭುವಿಯ ಮೇಲೆ ಲಕ್ಷಾಂತರ ಸಸ್ಯ-ಪ್ರಾಣಿ-ಪಕ್ಷಿ ಪ್ರಭೇದಗಳಿವೆ. ಆಧುನಿಕ ಮಾನವನ ಅತಿಲಾಲಸೆ, ದುರಾಸೆ, ಅಭಿವೃದ್ಧಿಯ ಹಪಾಹಪಿ, ತಂತ್ರಜ್ಞಾನದ ಅವಲಂಬನೆ, ಸುಖಲೋಲುಪತೆ, ಕೂಡಿಡುವ ಪ್ರವೃತ್ತಿ, ಸೋಮಾರಿತನ, ಶೊಂಬೇರಿತನ, ಹುಂಬತನ, ಮೋಜು-ಮಸ್ತಿ, ಕ್ರೌರ್ಯ ಇತ್ಯಾದಿಗಳಿಂದಾಗಿ ಹಲವು ಪ್ರಭೇದಗಳು ನಾಶವಾಗಿವೆ. ನಾಶವಾಗುವ ಹೊಸ್ತಿಲಿನಲ್ಲಿ ಮತ್ತಷ್ಟಿವೆ. ಅಷ್ಟೇಕೆ ಖುದ್ದು ಭೂಮಿಯೇ ಅಳಿವಿನಂಚಿನಲ್ಲಿ ಬಂದು ನಿಂತಿದೆ. ಪರಿಸರ ಪ್ರಾಜ್ಞರು, ಪರಿಸರ-ವಿಜ್ಞಾನಿಗಳು, ಭೂಪುತ್ರರು ಸೇರಿ ಭೂಮಿಯನ್ನುಳಿಸುವ ಪ್ರಯತ್ನ ಮಾಡುತ್ತಾರೆ. ಕುಂಬಾರನಿಗೆ ವರುಷ ದೊಣ್ಣೆಗೆ ನಿಮಿಷ ಎಂಬ ಗಾದೆಯಂತೆ, ಭೂಮಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓಯಸಿಸ್: ನಿನಾದ

ಅಂದು ಶನಿವಾರ ನಿನಾದಳಿಗೆ ಮನೆಯಲ್ಲಿ ಒಬ್ಬಳೆ  ಕೂತು ಸಾಕಾಗಿ ಹೋಗಿತ್ತು. ಸಾಮಾನ್ಯವಾಗಿ ನಿಶಾಂತ್ ಗೆ ಶುಕ್ರವಾರ, ಶನಿವಾರ ವಾರದ ರಜೆ. ಆದರೆ ಅವನ ಟೀಂ ಲೀಡರ್ ಒಂತರಾ ವಿಚಿತ್ರ ಮನುಷ್ಯ. ರಜೆ ಅಂದ್ರು ಮನೆಯಲ್ಲಿ ಇರೋಕೆ ಬಿಡುತ್ತಿರಲಿಲ್ಲ. ಹೀಗಾಗಿ ಎಲ್ಲ ಶನಿವಾರಗಳು ಆಫೀಸ್ ಗೆ ಹೋಗೋದು ಅನಿವಾರ್ಯ ಆಗಿತ್ತು. ಇತ್ತ ನಿನಾದ ಕಿರಿ ಕಿರಿ ಮಾಡಿದ್ದಕ್ಕೆ ಸರಿ ನೀನು ಬಾ ನನ್ನ ಜೊತೆಗೆ ಅಂದು ನಿಶಾಂತ್ ಆಫೀಸ್ ಗೆ ಹೊರಟ. ಹೀಗೆ ನಿನಾದ ನಿಶಾಂತ್ ಜೊತೆ ಆಫೀಸ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹನಿಮೂನ್: ಅನಿತಾ ನರೇಶ್ ಮಂಚಿ

ಸಂಜೆಯ ಹೊತ್ತು.. ಹೂಗಿಡಗಳ ಮೇಲಿನಿಂದ ಬೀಸಿ ಬರುವ ಗಾಳಿ ಪಾರಿಜಾತದ ಕಂಪನ್ನು ಒಳ ಹೊತ್ತು ಬರುತ್ತಿತ್ತು.ಅಂಗಳದ ಮೂಲೆಯಲ್ಲಿ ಅರಳಿದ ಸಂಜೆ ಮಲ್ಲಿಗೆಯನ್ನು ನೇವರಿಸುತ್ತಾ ’ಜೀವ ತುಂಬಿ ಭಾವ ತುಂಬಿ ಮನದ ದೀಪ ಬೆಳಗಿ ಬಾ..’ ಎಂದು ಹಾಡುತ್ತಿರುವಾಗಲೇ  ದೀಪ ಹೊತ್ತಿಸುವ ಹೊತ್ತಾಯಿತೆಂದು ನೆನಪಾಗಿದ್ದು. ಒಳಗಡಿಯಿಟ್ಟೆ. ಮಬ್ಬುಗತ್ತಲಲ್ಲಿ ತಲೆ ತಗ್ಗಿಸಿ ಕೂತಿದ್ದ ಆಕಾರವೊಂದನ್ನು ಕಂಡು ಅಲ್ಲಿಯವರೆಗಿದ್ದ ರೋಮ್ಯಾಂಟಿಕ್ ಮೂಡ್   ಒಮ್ಮೆಲೇ ಮಾಯವಾಗಿ  ಹೃದಯ ಹಾರಿ ಬಾಯಿಗೆ ಬರುವಂತಾಯಿತು. ನನ್ನನ್ನು ಕಂಡು ಪಕ್ಕನೇ ಎದ್ದ ಆಕಾರ ಪರಿಚಯದ್ದು ಅನ್ನಿಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಮೇಗರವಳ್ಳಿ ರಮೇಶ್, ಮಹೇಶ್ ಕಲಾಲ್, ರಾಜ ಹಂಸ

          ತು೦ಬಿ ಹರಿದಿದ್ದಳ೦ದು ತು೦ಗೆ…..! (ಮಿ೦ಚಿ ಮಾಯವಾದವಳಿಗೊ೦ದು ನೆನಪಿನ ಒಸಗೆ)      ಅ೦ದು ಆಗಸದಲ್ಲಿ ಕರಿ ಮುಗಿಲುಗಳ ಜಾತ್ರೆ. ತಟ ಪಟನೆ ಸುರಿವ ಮಳೆಯ ಹನಿಗಳ ನಡುವೆ ತೂರಿ ಬ೦ದು ನನ್ನ ಕಣ್ಣ ಕೋರೈಸಿದ್ದು ಮುಗಿಲೊಡಲ ಮಿ೦ಚಲ್ಲ  ನಿನ್ನ ಕಣ್ಣ೦ಚು! ಮೌನ ಮೊಗ್ಗೆಯನೊಡೆದು ಅರಳದ ಮಾತು ಘಮ ಘಮಿಸಿತ್ತು ನಿನ್ನೊಳಗೆ. ಅದ ಹೊತ್ತು ತ೦ದ ಶ್ರಾವಣದ ತ೦ಗಾಳಿ ಹೊಸ ಪುಳಕಗಳನೆಬ್ಬಿಸಿತ್ತು ನನ್ನೊಳಗೆ! ಒದ್ದೆ ನೆಲವನು ಗೆಬರುತ್ತ ನಿ೦ತಿದ್ದೆ ನಿನ್ನ ಕಾಲ್ಬೆರಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಮ್ಮ ಹೆಸರು ನಮ್ಮ ಮನದಲ್ಲಿದೆ: ಅಮರ್ ದೀಪ್ ಪಿ.ಎಸ್.

ವರ್ಷದ ಕನಿಷ್ಠ ಆರು ತಿಂಗಳಾದರೂ ಮದುವೆ ಸೀಜನ್ನು ಮುಂದುವರೆದಿರುತ್ತದೆ. ಸೀಜನ್ನು ಬಂತೆಂದರೆ ಲಗ್ನ ಪತ್ರಿಕೆಗಳನ್ನು ಜೋಡಿಸಿಟ್ಟು ಕುಟುಂಬ ಸಮೇತವಾಗಿ ಹೋಗುವಂಥವು, ಒಬ್ಬರೇ ಹೋದರೂ ನಡೆಯುತ್ತದೆನ್ನುವಂಥವುಗಳನ್ನೂ ಲೆಕ್ಕ ಹಾಕಿ ಓಡಾಡಲಿಕ್ಕೆ ಒಂದಷ್ಟು ದುಡ್ಡು ಎತ್ತಿಟ್ಟು ಅನಣಿಯಾಗಲೇಬೇಕು. ಹೋಗದಿದ್ದರೆ ಏನಂದುಕೊಂಡಾರೋ ಎನ್ನುವ ಮುಲಾಜು ಅಥವಾ ಸಂಭಂಧ ಗಳ ನವೀಕರಣಕ್ಕೆ, ಖುಷಿಯ ಸಂಧರ್ಭದಲ್ಲಿ ಎಲ್ಲರನ್ನು ಭೇಟಿಯಾಗುವ ಅವಕಾಶಕ್ಕಾದರೂ ಹೊರಡು ತ್ತೇವೆ. ಮೊನ್ನೆ ನೆಂಟರೊಬ್ಬರು ಬಂದು ತಮ್ಮ ಮನೆಯಲ್ಲಿ ನಡೆಯಲಿರುವ ಮದುವೆ  ಸಮಾರಂಭಕ್ಕೆ ಆಹ್ವಾನ ಪತ್ರಿಕೆ ನೀಡಲು ಬಂದಿದ್ದರು.  ಹೆಸರು ಬರೆದರೂ ನಿಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರು ತೆರೆಯಲ್ಲಿ ಕನ್ನಡ: ಶಿದ್ರಾಮ ಸುರೇಶ ತಳವಾರ

ಪ್ರಸಕ್ತ ದಿನಗಳಲ್ಲಿ ಮಹಿಳೆಯರೂ ಸೇರಿದಂತೆ ಹಲವಾರು ಪುರುಷರೂ ಕೂಡಾ ಕಿರುತೆರೆಯಲ್ಲಿ ಪ್ರಸಾರವಾಗುವ ಧಾರಾವಾಹಿಗಳ ದಾಸರಾಗಿದ್ದಾರೆ. ಮುಂಚೆ ಅದೆಷ್ಟೋ  ಕೌಟುಂಬಿಕ  ಎಂಬ ಶೀರ್ಷಿಕೆಯಡಿ ಧಾರಾವಾಹಿಗಳು ಬರುತ್ತಿದ್ದವು. ಅವುಗಳನ್ನು ಚಿಕ್ಕಂದಿನಲ್ಲಿದ್ದಾಗ ನಾವೂ ನೋಡಿದ್ದೇವೆ. ಆ ನಿರ್ದೇಶಕರ ಹೆಸರುಗಳನ್ನು  ನಾವು ಸರಿಯಾಗಿ ನೆನಪಿಟ್ಟುಕೊಳ್ಳದೇ ಹೋದರೂ ಆ ಧಾರಾವಾಹಿಗಳಿಂದ ನಾವು ಸಾಕಷ್ಟು ವಿಷಯಗಳೊಂದಿಗೆ ಕನ್ನಡ, ಕನ್ನಡದ ಪದಗಳನ್ನು ತಿಳಿದುಕೊಂಡು ಕಲಿತುಕೊಂಡಿದ್ದೇವೆ. ಇದು ಸಂತಸದ ವಿಷಯವಷ್ಟೇ. ಇತ್ತೀಚಿನ ಕೆಲ ವರ್ಷಗಳಿಂದ ಕನ್ನಡದ ಸುಮಾರು ಚಾನೆಲ್‌ಗಳು ದೃಶ್ಯ ಮಾಧ್ಯಮದಲ್ಲಿವೆಯಾದರೂ ಯಾವ ಮಾಧ್ಯಮವೂ ಸ್ಪಷ್ಠ ಕನ್ನಡದ ಉಚ್ಛಾರಣೆಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 15): ಮಹಾಂತೇಶ್ ಯರಗಟ್ಟಿ

ಪ್ರಶ್ನೆಗಳು: ೧.    ಭಾರತದಲ್ಲಿ ಇಂಗ್ಲೀಷ್ ವಿಧ್ಯಾಭ್ಯಾಸವನ್ನು ಜಾರಿಗೆ ತಂದವರು ಯಾರು? ೨.    ’ನೆಲಗಡಲೆ’ ಇದು ಮೂಲತಃ ಯಾವ ದೇಶದ ಬೆಳೆ? ೩.    ಭಾರತದಲ್ಲಿ ಅತ್ಯಂತ ಹೆಚ್ಚು ಪ್ರಸಾರ ಸಂಖ್ಯೆಯುಳ್ಳ (Combined net sales) ದಿನ ಪತ್ರಿಕೆ ಯಾವುದು? ೪.    ಹತ್ತು ರೂಪಾಯಿ ನೋಟಿನ ಮೇಲೆ ಯಾರ ಸಹಿ ಇರುತ್ತದೆ? ೫.    ಭಾರತದ ನೈಟಿಂಗೇಲ್ ಎಂದು ಯಾರನ್ನು ಕರೆಯುತ್ತಾರೆ? ೬.    ರೋಮಿಯೋ ಜೂಲಿಯೆಟ್ ನಾಟಕದ ಕರ್ತೃ ಯಾರು? ೭.    ನೇತ್ರಾದಾನದಲ್ಲಿ ಕಣ್ಣಿನ ಯಾವ ಭಾಗವನ್ನು ಬೇರೆಯವರಿಗೆ ಅಳವಡಿಸಬಹುದು? ೮.   … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ