ಸ್ಮರಣಾ ಲೇಖನ: ಡಾ. ಎಚ್.ಎಸ್. ಚಂದ್ರೇಗೌಡ

“ಕನ್ನಡ ಮೇಷ್ಟ್ರುಗಳ ಮೇಷ್ಟ್ರು”-ಎಸ್.ಆರ್.ಮಳಗಿ “ಮೇಷ್ಟ್ರುಗಳ ಮೇಷ್ಟ್ರು” ಎನಿಸಿಕೊಂಡಿದ್ದ ಪ್ರೊ. ಸೇತುರಾಮ ರಾಘವೇಂದ್ರ ಮಳಗಿ ಕನ್ನಡ ಸಾಹಿತ್ಯವಲಯದಲ್ಲಿ ಎಸ್.ಆರ್.ಮಳಗಿ ಎಂದೇ ಜನಜನಿತರಾಗಿದ್ದರು. ೧೦೩ ತುಂಬು ವಸಂತಗಳನ್ನು ಪೂರೈಸಿದವರನ್ನು ತಮ್ಮೆಲ್ಲಾ ಶಿಷ್ಯರು “ಮಳಗಿ ಮೇಷ್ಟ್ರು” ಎಂದೇ ಕರೆಯುತ್ತಿದ್ದರು. ಅಂಥ ಒಂದು ವಿಶಿಷ್ಟ ಪರಂಪರೆಯ ಕೊಂಡಿಯಾಗಿದ್ದ ಮಳಗಿ ಮೇಷ್ಟ್ರು, ತಮ್ಮ ೧೦೩ ವಯಸ್ಸಿನಲ್ಲಿ ಅಂದರೆ, ಡಿಸೆಂಬರ್ ೨೪ ರಂದು ವಿಧಿವಶರಾದರು. ಕನ್ನಡದ ಗುರುಪರಂಪರೆಯಲ್ಲಿ ಮಳಗಿ ಮೇಷ್ಟ್ರ ಹೆಸರು ಅಜರಾಮರ. ತದನಿಮಿತ್ತ ಈ ಸ್ಮರಣಾ ಲೇಖನ. ಕನ್ನಡದ ಕಣ್ವ, ಆಧುನಿಕ ಕವಿಗಳ ಗುರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಏ ಜಿಂದಗಿ ಗಲೇ ಲಗಾ ಲೇ: ಅಮರ್ ದೀಪ್ ಪಿ. ಎಸ್.

ಒಮ್ಮೊಮ್ಮೆ ಬದುಕು ಹಾಗೆ ರಿವೈಂಡ್ ಆಗಿ ನಮ್ಮನ್ನು ನಾವೇ ನೋಡಿಕೊಂಡರೆ ನಾವು ನಮ್ಮ ಸಣ್ಣ  ಭಯವನ್ನು, ಸಂಕೋಚವನ್ನು ಇನ್ಫೀರೀಯಾರಿಟಿ ಕಾಂಪ್ಲೆಕ್ಸ್ ಎಲ್ಲವನ್ನೂ ಆಗಿಂದಲೇ ದೂರ ಮಾಡಿಕೊಳ್ಳುವ ಒಂದು ಅವಕಾಶವನ್ನು ಹುಡುಕಿಕೊಳ್ಳಲು ವಿಫಲವಾಗಿದ್ದೆವು ಅನ್ನಿಸುತ್ತದೆ. ಒಂದು ವೇಳೆ ಅದಾಗಿದ್ದರೆ ? ಆ ದಿನದಿಂದಲೇ ನಾವು ಮುನ್ನಡೆಯುವ ದಾರಿಯನ್ನು ಸರಿಯಾದ ಕ್ರಮದಲ್ಲಿ ನಡೆಸಲು ಭರವಸೆ ಮೂಡುತ್ತಿತ್ತು.  ಶಾಲಾ ದಿನದಿಂದಲೇ ನಮ್ಮ ಮನಸ್ಸಿನಲ್ಲಿ ಒಂದೊಂದು ಕಲ್ಪನೆಗಳು ಮನೆ ಮಾಡಿರುತ್ತವೆ, ಮತ್ತವು ಕಲ್ಪನೆಗಳು ಮಾತ್ರವೇ ಎಂಬುದೂ ಸಹ ಗೊತ್ತಿದ್ದರೂ ಅವುಗಳು ನೀಡುವ ಬೆಚ್ಚನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳದಿಂಗಳ ಕಡಲಲ್ಲಿ ನೆನಪಿನ ಅಲೆಗಳು:ರೇಷ್ಮಾ ಎ.ಎಸ್.

ಬೆಳಿಗ್ಗೆ ನಾಲ್ಕೂವರೆಗೆ ಪ್ರತಿನಿತ್ಯ ಏಳಲೇಬೇಕಾದ ಅನಿವಾರ್ಯುತೆ ನನ್ನದು. ಎಷ್ಟೇ ಕಾಳಜಿ ವಹಿಸಿದರೂ ಒಮ್ಮೊಮ್ಮೆ ತಡವಾಗಿ ಎಚ್ಚರವಾಗಿ ಇಡೀ ದಿನದ ಕಾರ್ಯಕ್ರಮವೆಲ್ಲಾ ಅಸ್ತವ್ಯಸ್ತವಾಗಿ ಸಾಕೋ ಸಾಕಾಗಿ ಹೋಗುವುದೂ ಉಂಟು. ಕೆಲದಿನಗಳ ಹಿಂದೆ ಒಳ್ಳೆಯ ನಿದ್ರೆಯಲ್ಲಿದ್ದಾಗ ಕಾಗೆಗಳ ಕರ್ಕಶ ಕೂಗಿನಿಂದ ಬಡಿದೆಬ್ಬಿಸಿದಂತಾಗಿ ಗಡಬಡಿಸಿ ಕಣ್ಣು ಬಿಟ್ಟೆ. ಕಿಟಕಿಯತ್ತ ನೋಡಿದಾಗ ಬೆಳ್ಳನೆಯ ಬೆಳಕು. ಆಯ್ತು, ಬೆಳಗಾಗೇ ಬಿಟ್ಟಿತು. ಈ ದಿನವೆಲ್ಲ ನನ್ನದು ಹಾಳು. ಹಾಳು ನಿದ್ದೆ ಎಂದು ಶಪಿಸುತ್ತಾ ಗಡಿಯಾರದತ್ತ ನೋಡಿದರೆ ರಾತ್ರಿ ಎರಡು ಗಂಟೆಯಷ್ಟೇ. ಅಚ್ಚರಿಯಿಂದ ಕಿಟಕಿಯ ಬಳಿ ಬಂದುನಿಂತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 7): ಮಹಾಂತೇಶ್ ಯರಗಟ್ಟಿ

            1. ಭಾರತ ರತ್ನ ಪಡೆದ ಮೊದಲಿಗ ಯಾರು? 2. ಭಾರತದ ಪ್ರಥಮ ಮಹಿಳಾ ಚಿತ್ರ ನಿರ್ದೇಶಕಿ ಯಾರು? 3. ಭಾರತದ ಹೈಕೋರ್ಟ್ ಒಂದರ ಪ್ರಥಮ ಮಹಿಳಾ ಮುಖ್ಯ ನ್ಯಾಯಾಧೀಶರು ಯಾರು? 4. ಅಬ್ದುಲ್ ಕಲಾಂರ ಪೂರ್ಣ ಹೆಸರೇನು? 5. ಭಾರತದ ವಿಸ್ತೀರ್ಣವೆಷ್ಟು? 6. ಟೆಸ್À್ಟ ಕ್ರಿಕೆಟ್‍ನಲ್ಲಿ ವಿಶ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಪ್ರಥಮ ಭಾರತೀಯ ಯಾರು? 7. ಬ್ರಿಟಿಷ್ ಪಾರ್ಲಿಮೆಂಟಿನ ಸದಸ್ಯನಾದ ಪ್ರಥಮ ಭಾರತೀಯ ಯಾರು? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೂಗ ಪುರಾಣ: ಅಖಿಲೇಶ್ ಚಿಪ್ಪಳಿ ಅಂಕಣ

ಅಡಕೆಯಿಂದ ಹೋದ ಮಾನ ಆನೆ ಕೊಟ್ಟರೂ ಬರದು ಎಂಬುದೊಂದು ಮಾತಿದೆ. ಅಂದರೆ ಒಂದು ಅಡಕೆಯನ್ನು ಕದ್ದೊಯ್ದರೆ ತಿರುಗಿ ಆನೆಯನ್ನೇ ವಾಪಾಸು ಕೊಟ್ಟರೂ ಹೋದ ಮಾನ ವಾಪಾಸು ಬರುವುದಿಲ್ಲ. ದಿನೇ ದಿನೇ ಸಾಮಾನ್ಯ ಜನರ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಈ ಬಿಗಡಾಯಿಸುವಿಕೆಗೆ ಕಾರಣ ಬೆಲೆಯೇರಿಕೆ, ಬಿಸಿಯೇರಿಕೆ, ಸರ್ಕಾರದ ನೀತಿ ಇತ್ಯಾದಿಗಳು. ಅತ್ಯಂತ ಸಂಪದ್ಭರಿತ ನಾಡು ಮಲೆನಾಡು. ಪಶ್ಚಿಮಘಟ್ಟಗಳ ಸೊಬಗು ಎಂತವರನ್ನೂ ಆಕರ್ಷಿಸುತ್ತದೆ. ಜೀವಿವೈವಿಧ್ಯದ ತವರೂರು ಈ ಮಲೆನಾಡು. ಪ್ರಕೃತಿದತ್ತವಾಗಿ ಅತ್ಯಂತ ಸುರಕ್ಷಿತ ಪ್ರದೇಶವೂ ಹೌದು. ಸುನಾಮಿಯ ಭಯವಿಲ್ಲ. ಚಂಡಮಾರುತವಿಲ್ಲ. ಜ್ವಾಲಾಮುಖಿಗಳಿಲ್ಲ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಿನ್ನಿ-ಪಲ್ಲು ಪ್ರಹಸನ: ಸುಮನ್ ದೇಸಾಯಿ ಅಂಕಣ

  ಪಿನ್ನಿ ಮಾಡಿಕೊಟ್ಟ ದಪ್ಪ ದಪ್ಪ ಥಾಲಿಪೆಟ್ಟಿನ ನಾಷ್ಟಾ ಗಡದ್ದಾಗಿ ತಿಂದು ಪೆಪರ್ ಓದಕೊತ ಕುತಿದ್ದಾ ಪಲ್ಲ್ಯಾ (ಪಲ್ಲಣ್ಣ). ಅಲ್ಲೆ ಅವನ ಬಾಜುಕ್ಕ ಪಿನ್ನಿ ಸಾಕಿದ್ದ ನಾಯಿ “ ಬ್ರೌನಿ “ ನು ಕೂತು ತುಕಡಿಸ್ಲಿಕತ್ತಿತ್ತು. ಒಬ್ಬರಿಗೊಂದ ಇನ್ನೊಬ್ಬರಿಗೊಂದ ಎಲ್ಲೆ ಬ್ಯಾರೆ ಬ್ಯಾರೆ ಮಾಡೊದಂತ, ಪಿನ್ನಿ ನಾಯಿಗು ಮತ್ತ ಪಲ್ಲ್ಯಾಗು ಒಂದಸಲಾ ದಪ್ಪ ದಪ್ಪನ್ನು 4 ಥಾಲಿಪೆಟ್ಟ ಮಾಡಿ ತಿನ್ನಿಸಿ ಕೈಬಿಟ್ಟಿದ್ಲು. ಗಡದ್ದ ಹೊಟ್ಟಿ ತುಂಬಿದ್ರಿಂದ ನಾಯಿಗು ಮೈ ವಝ್ಝಾ ಆಗಿ ಅಲ್ಲೆ ಮೆತ್ತನ್ನ ಕಾರ್ಪೇಟ್ ಮ್ಯಾಲೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಪ್: ವಾಸುಕಿ ರಾಘವನ್ ಅಂಕಣ

“ಪಿಕ್ಸಾರ್ ಅನಿಮೇಷನ್ ಸ್ಟುಡಿಯೊಸ್” ನಿರ್ಮಾಣದಲ್ಲಿ 2009ರಲ್ಲಿ ಬಿಡುಗಡೆಯಾದ ಚಿತ್ರ “ಅಪ್”. ಮತ್ತೆ ಮತ್ತೆ ನೋಡಿದಾಗಲೂ ಅಷ್ಟೇ ರಂಜನೀಯವೆನಿಸುವ ಚಿತ್ರ ಇದು. ಕಾರ್ಲ್ ಮತ್ತು ಎಲ್ಲೀ ಇಬ್ಬರೂ ಬಾಲ್ಯದಿಂದಲೇ ಸಾಹಸಪ್ರಿಯರು, ಪ್ರಕೃತಿಯನ್ನು ಇಷ್ಟಪಡುವವರು. ಎಲ್ಲೀಗೆ ದಕ್ಷಿಣ ಅಮೆರಿಕಾದ ದಟ್ಟ ಕಾಡುಗಳ ನಡುವೆ ಇರುವ “ಪ್ಯಾರಡೈಸ್ ಫಾಲ್ಸ್” ಅನ್ನುವ ಸುಂದರ ಜಲಪಾತದ ಬಳಿ ತನ್ನ ಮನೆ ಇರಬೇಕೆಂಬ ಕನಸು. ಮುಂದೆ ಇವರಿಬ್ಬರೂ ಮದುವೆಯಾಗುತ್ತಾರೆ. ಆದರೆ ಜೀವನ ಪೂರ್ತಿ ಏನೇನೋ ತಾಪತ್ರಯಗಳ ಕಾರಣದಿಂದ ಅಲ್ಲಿಗೆ ಪ್ರವಾಸ ಹೋಗಲು ಆಗುವುದೇ ಇಲ್ಲ. ವಯಸ್ಸಾಗುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆದದ್ದೆಲ್ಲಾ ಒಳಿತೇ ಆಯಿತು: ಎಂ. ಎಸ್. ನಾರಾಯಣ.

ಇತ್ತೀಚೆಗೆ ನಾನೂ ಮತ್ತು ನನ್ನ ಮಡದಿ ಕಾರಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಬಿಡದಿಯ ಬಳಿ ದುರದೃಷ್ಟವಶಾತ್ ಭಾರೀ ರಸ್ತೆ ಅಪಘಾತಕ್ಕೊಳಗಾಗಿಬಿಟ್ಟೆವು. ನಮ್ಮ ಗಾಡಿಯೂ, ನಮ್ಮಿಬ್ಬರ ಬಾಡಿಗಳೂ ಚೆನ್ನಾಗಿಯೇ ಜಖಂಗೊಳಾಗಾದುವು. ನಮ್ಮಿಬ್ಬರಿಗೂ, ಮೂಲಾಧಾರವಾದ ಬೆನ್ನು ಮೂಳೆಗೇ ಪೆಟ್ಟು ಬಿದ್ದು ನನ್ನ ಹೆಂಡತಿಗೊಂದು ದೊಡ್ಡ ಶಸ್ತ್ರಚಿಕಿತ್ಸೆಯೂ ಮಾಡಿಸಬೇಕಾಗಿ ಬಂತು. ನನ್ನ ಹೆಮ್ಮೆಯ ಸ್ನೇಹವರ್ತುಲದ ಇನ್ನಿಲ್ಲದ ಸಹಕಾರ ಹಾಗೂ ಬೆಂಬಲದಿಂದ ನಾವು ಆ ಭೀಕರ ಸನ್ನಿವೇಶದಿಂದ ಬಹುಬೇಗ ಪಾರಾಗಿ ಹೊರಬರಲು ಸಾಧ್ಯವಾಯಿತೆಂಬುದನ್ನು ನಾನಿಲ್ಲಿ ಹೇಳಲೇಬೇಕು. ಈ ಸಂಧರ್ಭದಲ್ಲಿ ನಾವು ಪಟ್ಟ ಬೇಗೆ ಬವಣೆಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅರ್ಧ: ಪ್ರಶಸ್ತಿ ಅಂಕಣ

ಅರೆಬೆಂದ ತರಕಾರಿ, ಅಡ್ಡಗೋಡೆಯ ಮೇಲಿಟ್ಟಂತೆ ಅರ್ಧ ಪೂರ್ತಿ ಮಾಡಿದ ಮಾತು, ಒಂದೇ ಹೃದಯವೆನ್ನುವಂತಿದ್ದಾಗ ದೂರಾದ ಎರಡು ಅರ್ಧಗಳು, ಅರ್ಧಾಂಗಿ ದೂರಾಗಿ ವಿರಹವೇದನೆಯಿಂದ ಬಳಲುತ್ತಿರೋ ಉಳಿದರ್ಧ..  ಹೀಗೆ ಅರ್ಧವೆನ್ನೋದು ಕೊಡೋ ವೇದನೆ ಅಷ್ಟಿಷ್ಟಲ್ಲ. ಅರೆಬರೆದ ಕವನವೋ, ಕತೆಯೋ ಮುಗಿಸಲಾಗದಿದ್ದರೆ ನನ್ನನ್ನು ಶುರುವಾದರೂ ಯಾಕೆ ಮಾಡಿದೆಯೋ ಎನ್ನುವಾಗ ಆಗೋ ನರಳಾಟವೂ ಕಮ್ಮಿಯಲ್ಲ , ಅರೆಕ್ಷಣದಲ್ಲಿ ಒಲಿಂಪಿಕ್ ಪದಕ ತಪ್ಪಿದಾಕೆ, ಅರೆಕ್ಷಣ ಮೈಮರೆತಿದ್ದೆ ಜೀವನವೇ ಹಾಳಾಯ್ತು ಅನ್ನೋ ವ್ಯಕ್ತಿ, ಅರೆಕ್ಷಣ ನಿದ್ರೆ ತೂಕಡಿಸಿತ್ತಷ್ಟೇ.. ಎಚ್ಚೆತ್ತುಕೊಳ್ಳೋದ್ರಲ್ಲಿ ಅನಾಹುತ ಘಟಿಸಿಹೋಗಿತ್ತು ಅನ್ನೋ ಡ್ರೈವರುಗಳು ಆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನ ದರ್ಶನ (ಭಾಗ 1): ಪಾರ್ಥಸಾರಥಿ. ಎನ್.

ಊರಿಗೆ ಬಂದು ಇಪ್ಪತ್ತು ವರ್ಷಗಳೆ ಕಳೆದಿತ್ತು. ಮೊದಲಿಗೆ ಅಪ್ಪ ಅಮ್ಮನಿರುವವರೆಗೂ ಇದ್ದ ಆಕರ್ಷಣೆ ಈಗೇನು ಇರಲಿಲ್ಲ. ಅಲ್ಲದೆ ನಾನು ಊರು ಬಿಟ್ಟು ಊರೂರು ಸುತ್ತತ್ತ ಹೆಂಡತಿ ಮಕ್ಕಳೊಡನೆ ಓಡಾಡಿದ್ದೆ ಆಯಿತು, ಸರಕಾರಿ ಚಾಕರಿಯೆ ಹಾಗೆ ಬಿಡಿ.  ಈಗ ಮತ್ತೆ ಕರ್ನಾಟಕಕ್ಕೆ ಬಂದ ನಂತರ ಬೆಂಗಳೂರಿನಲ್ಲಿ ಮನೆ ಮಾಡಿ ಆರು ತಿಂಗಳಾಗುತ್ತ ಬಂದು, ಹುಟ್ಟಿದ ಊರನ್ನು ನೋಡಬೇಕೆಂಬ ಆಸೆ ಪ್ರಭಲವಾಯಿತು. ಅಲ್ಲಿ ಇದ್ದವನು ಅಣ್ಣನೊಬ್ಬನೆ. ಒಂದಿಷ್ಟು ವ್ಯಾಪಾರ ಅದು ಇದು ಎಂದು ಒದ್ದಾಡಿಕೊಂಡಿದ್ದ. ಮಕ್ಕಳನ್ನು ಚೆನ್ನಾಗಿ ಓದಿಸಿದ್ದ. ಮಗಳಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 10): ನಾಗರತ್ನಾ ಗೋವಿಂದನ್ನವರ

ರೇಖಾ ಇನ್ನು ಎರಡು ದಿನಕ್ಕೆ ತಿರುಗಿ ಶಿವಮೊಗ್ಗಕ್ಕೆ ಹೋಗಬೇಕಾಗಿತ್ತು. ಆದ್ದರಿಂದ ಸುಧಾಳನ್ನು ಇನ್ನೊಂದು ಸಲ ನೋಡಬೇಕು ಎಂದುಕೊಂಡಳು. ಸಾಯಂಕಾಲ ರಾಜೇಶ ಸುಧಾಳನ್ನು ಮನೆಗೆ ಕರೆತಂದ. ಆಗ ಕಾವೇರಮ್ಮ ಬರ್ರಿ ಅಳಿಯಂದ್ರೆ ಎಂದಳು. ಸುಧಾ ಒಳಗೆ ಹೋದಳು. ರಾಜೇಶ ಅತ್ತೆ ನಾನು ಹೋಗ್ತಿನಿ ಅಂದ. ಕಾಫಿ ಕುಡಿದು ಹೋಗುವಿರಂತೆ ಎಂದಳು. ಬೇಡಾ ಅತ್ತೆ ಮನೆಯಲ್ಲಿ ಅಮ್ಮ ಕಾಯ್ತಿರ್‍ತಾಳೆ ಹೋಗ್ತಿನಿ ಎಂದು ಹೋಗಿಯೆಬಿಟ್ಟ. ಮರುದಿನ ರೇಖಾ ಸುಧಾಳ ಮನೆಗೆ ಹೋಗಬೇಕೆಂದು ಕೊಂಡವಳು ಅವಳತ್ತೆಗೆ ನನ್ನ ಕಂಡರೆನೆ ಆಗಲ್ಲಾ ಏನು ಮಾಡೋದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಹರ್ಷವರ್ಧನ್

  ೧. ವಿಪರ್ಯಾಸ ಕೋಟಿ ಕೋಟಿ ಕೊಂಡೊಯ್ಯುವರು ಹುಂಡೀಲಿ ಕಟ್ಟಲು.. ಕಾಣದೇ ಇವರಿಗೆ ಹಸಿದ ಜನರ ಖಾಲಿ ಬಟ್ಟಲು! *** ೨. ಕಿಚ್ಚು ಒಂದೊಂದು ಬಲ್ಬುಗಳ ಉರಿಸಲು ಬೇಕು ಒಂದೊಂದು ಸ್ವಿಚ್ಚು, ಆದರೆ ನೂರಾರು ಹಣತೆಗಳ ಉರಿಸಲು ಸಾಕು ಒಂದೇ ಕಿಚ್ಚು! *** ೩. ಮನೆ ಎನ್ನೆದೆ, ಶಿಥಿಲಗೊಂಡಿಹ ಗೂಡು ಎಂದೋ ಹಾರಿದ ಹಕ್ಕಿಯದು.. ಈಗ ನನ್ನ ಮನೆ!! *** ೪. ಬಡವ ನಾನು ಬಡವ, ಪ್ರೀತಿಸುವ ಜೀವ ಸಿಗದ ಹೊರತು ಯಾರೂ ಶ್ರೀಮಂತರಲ್ಲ.. ಎಲ್ಲ ಬಡವರೇ!! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇಶಕ್ಕೋಸ್ಕರ ಏನಾದರೂ ಮಾಡಬೇಕೆ೦ಬ ನನ್ನ ಉತ್ಸಾಹ: ಪ್ರಶಾ೦ತ ಕಡ್ಯ

“ನಿನ್ನ ಮೈ ಗಟ್ಟಿಯಾಗೇ ಇದೆ, ದುಡಿಯಲು ಏನು ಸ೦ಕಟ. ಆರಾಮದಲ್ಲಿ ತಿನ್ನುವ ಆಸೆಯೇ”, “ಮೈ ಬಗ್ಗಿಸಿ ದುಡಿ, ದೇಶಕ್ಕಾದರೂ ಪ್ರಯೋಜನ ಆಗುತ್ತದೆ”, “ನಿಮ್ಮ೦ತವರು ಇರೋದಕ್ಕಿ೦ತ ಸತ್ತರೇ ದೇಶಕ್ಕೆ ಲಾಭ” ಹೀಗೇ ನಮ್ಮನ್ನು ಕ೦ಡಾಗ ಜನರಿಗೆ ಅವರು ಹೇಗೇ ಇದ್ದರೂ ನಮ್ಮನ್ನು ಬೈಯ್ಯುವ ಎ೦ದು ಅನಿಸುತ್ತದೆ. ನಾನು, ನನ್ನ ಅಪ್ಪ ಮತ್ತು ನನ್ನ ತಮ್ಮ ಮೂವರು ನಾವಿರುವುದು. ಚಿಕ್ಕ೦ದಿನಲ್ಲೇ ಅಮ್ಮನನ್ನು ಕಳಕೊ೦ಡೆ. ಅಮ್ಮನೆ೦ದರೆ ಅವಳು ಭೂಮಿಯಲ್ಲಿರುವ ದೇವರ೦ತೆ. ಆದರೆ ನನಗೆ ದೇವರು ಎ೦ದರೆ ಏನು ಎ೦ದು ತಿಳಿಯುವ ಮೋದಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲೇಖನಗಳ ಆಹ್ವಾನ…

  ಸಹೃದಯಿಗಳೇ, ಹೊಸ ವರ್ಷ ಎರಡು ಸಾವಿರದ ಹದಿನಾಲ್ಕರ ಮೊದಲ ವಾರ ಬಂದರೆ ಪಂಜುವಿನ 50 ನೇ ಸಂಚಿಕೆ ನಿಮ್ಮ ಮಡಿಲು ಸೇರುತ್ತದೆ. 50ನೇ ಸಂಚಿಕೆ ಪ್ರಕಟಗೊಂಡ ಎರಡು ವಾರಕ್ಕೆ ಅದೇ ಜನವರಿ ತಿಂಗಳಿನಲ್ಲಿ ಪಂಜು ತನ್ನ ಪ್ರಥಮ ಹುಟ್ಟುಹಬ್ಬವನ್ನು ಸಹ ಆಚರಿಸಿಕೊಳ್ಳುವ ಸಂಭ್ರಮದಲ್ಲಿದೆ. ಪಂಜುವಿನ ಈ ಎರಡು ಶುಭ ಸಾಹಿತ್ಯ ಸಂಭ್ರಮಗಳನ್ನು ನಿಮ್ಮ ಬರಹಗಳ ಮೂಲಕ ಇಡೀ ಜನವರಿ ತಿಂಗಳು ಆಚರಿಸುವ ಆಶಯ ಪಂಜುವಿನದು. ತಡವೇಕೆ ನಿಮ್ಮ ಅಪ್ರಕಟಿತ ಕತೆ, ಕವನ, ಲೇಖನ, ಪುಸ್ತಕ ವಿಮರ್ಶೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆ ಹಸಿದ ಕಣ್ಣುಗಳಲ್ಲಿ ಉರಿದ ಬೆಂಕಿ: ರೇಷ್ಮಾ ಎ.ಎಸ್.

ಮಕ್ಕಳು ಆಟದ ಬಯಲಿನಲ್ಲಿ ಸೈಕಲ್ ಕಲಿಯುತ್ತಲಿದ್ದರು. ಜೊತೆಗೆ ಹೋಗಿದ್ದ ನಾನು ಮೈದಾನದಂಚಿನಲ್ಲಿ ಹುಲ್ಲಿನ ಮೇಲೆ ಕರ್ಚೀಫು ಹಾಸಿ ಕುಳಿತಿದ್ದೆ. ಆಗೀಗ ಅತ್ತಿತ್ತ ದೃಷ್ಟಿ ಹರಿಯುತ್ತಿತ್ತು. ಒಂದಷ್ಟು ದೂರದಲ್ಲಿ ಒಂದು ಅಲೆಮಾರಿ ಸಂಸಾರ. ಮೈದಾನದ ಒಂದು ಪಕ್ಕಕ್ಕೆ ಇದ್ದ ರಂಗಮಂಟಪವೇ ಅವರ ತತ್ಕಾಲದ ಬಿಡದಿ. ಎಣ್ಣೆ ಕಾಣದ ಕೆದರಿದ ಕೂದಲ, ಪಳಪಳನೆ ಮಿನುಗುವ ಕಂಗಳ, ಹರಕಲು ಬಟ್ಟೆಯಲ್ಲೂ ಗುಂಡುಗುಂಡಾಗಿ ಕಾಣುವ ಮೂವರು ಮಕ್ಕಳು ಆಟದ ಬಯಲಿನಲ್ಲಿ ಸೈಕಲ್ ಕಲಿಯುತ್ತಲಿದ್ದರು. ಜೊತೆಗೆ ಹೋಗಿದ್ದ ನಾನು ಮೈದಾನದಂಚಿನಲ್ಲಿ ಹುಲ್ಲಿನ ಮೇಲೆ ಕರ್ಚೀಫು ಹಾಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನರಭಕ್ಷಕ ವ್ಯಾಘ್ರ ವರ್ಸಸ್ ವ್ಯಾಘ್ರಭಕ್ಷಕ ನರ: ಅಖಿಲೇಶ್ ಚಿಪ್ಪಳಿ ಅಂಕಣ

ದಿನಾಂಕ:02/12/2013ರ ಒಂದು ರಾಜ್ಯಮಟ್ಟದ ಕನ್ನಡ ದಿನಪತ್ರಿಕೆ ಮುಖಪುಟದಲ್ಲಿ “ನರಭಕ್ಷಕ ವ್ಯಾಘ್ರಕ್ಕೆ ಗುಂಡಿಕ್ಕಿ: ಉಲ್ಲಾಸ ಕಾರಂತ” ಹೇಳಿಕೆಯಿತ್ತು. ವನ್ಯಜೀವಿ ಮತ್ತು ಹುಲಿಸಂರಕ್ಷಣೆಯ ಕ್ಷೇತ್ರದಲ್ಲಿ ಉಲ್ಲಾಸರದ್ದು ದೊಡ್ಡ ಹೆಸರು. ಕಡಲತೀರದ ಭಾರ್ಗವ ದಿ.ಶಿವರಾಮ ಕಾರಂತರ ಪುತ್ರರೂ ಆದ ಉಲ್ಲಾಸ ಕಾರಂತರ ಈ ಹೇಳಿಕೆ ಒಂದು ಕ್ಷಣ ದಿಗ್ಭ್ರಮೆ ಮೂಡಿಸಿತು. ಗಾಯಗೊಂಡ ಅಥವಾ ವಯಸ್ಸಾದ ಹುಲಿಗಳು ಸಾಮಾನ್ಯವಾಗಿ ನರಭಕ್ಷರವಾಗಿ ರೂಪುಗೊಳ್ಳುವುದು ಸಹಜ. ಇಡೀ ಘಟನೆಯನ್ನು ಮಾನವ ಹಕ್ಕು ಮತ್ತು ಪ್ರಾಣಿಗಳ ಹಕ್ಕು ಎಂಬಡಿಯಲ್ಲಿ ನೋಡಿದಾಗ, ಕಾರಂತರ ಗುಂಡಿಕ್ಕಿ ಹೇಳಿಕೆ ಮಾನವ ಪಕ್ಷಪಾತಿಯಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ