ಪುಷ್ಪ: ಈಶ್ವರ ಭಟ್ ಕೆ

ಇತ್ತೀಚೆಗೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಬರುತ್ತಿರುವ ಸುದ್ಧಿಗಳನ್ನು ನೋಡುತ್ತಾ, ನಿರೀಕ್ಷೆಗೂ ಮೀರಿ ಜಗತ್ತು ಬೆಳೆದರೂ ವಾಹಿನಿಗಳಲ್ಲಿ ಸುದ್ಧಿಯೇ ಆಗದ ಒಂದು ಕತೆಯಿದೆ. ನಮ್ಮೂರಿನ ಪುಷ್ಪಕ್ಕ ದಿನ ಕಳೆದಂತೆ ಜನರಿಗೆ ಅಚ್ಚರಿಯೂ ಜನರ ಅನುಕಂಪಕ್ಕೂ ಕಾರಣಳಾಗಿ ಉಳಿದ ಕತೆ. ಈ ಕತೆ ಹೇಳುವ ನನಗೆ ಆಗ ಹದಿನೇಳು ವಯಸ್ಸು, ಈಗ ಇಪ್ಪತ್ತೆಂಟು. ಈ ಪುಷ್ಪಕ್ಕ ಎನ್ನುವ ನನ್ನ ಕತೆಯ ನಾಯಕಿಯ ಪೂರ್ಣ ಹೆಸರು ಪುಷ್ಪಲತ. ಊರು ಎರಡು ಮೂರು ಬೆಟ್ಟಗಳ ನಡುವಿನ ಗ್ರಾಮ. ವಿಶಾಲವಾದ ಗ್ರಾಮದಲ್ಲಿ ಸುಮಾರು ನಲುವತ್ತು ಮನೆಗಳಷ್ಟೇ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೩): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಟೈಗರ್ ಹಿಲ್ ನ ಸುರ್ಯೋದಯ ನೋಡಿ ಬಂದು ಒಂಭತ್ತು ಗಂಟೆಗೆಲ್ಲಾ ತಯಾರಾಗಿ ಹೋಟೆಲ್ ಹೊರಗೆ ನಿಂತವರ ಮುಖಗಳು ಲವಲವಿಕೆಯಿಂದ ಕಂಗೊಳಿಸುತ್ತಿದ್ದವು. ಯಾಕಂತೀರಾ? ಬೆಂಗಳೂರು ಬಿಟ್ಟ ಮೇಲೆ ಮೊದಲ ಬಾರಿಗೆ ಎಲ್ಲರಿಗೂ ಸ್ನಾನ ಮಾಡುವ ಅವಕಾಶ ಸಿಕ್ಕಿದ್ದು ಅವತ್ತೇ! ತಾನು ಹೇಳಿದ್ದ ಟೈಮಿಗೆ ನಾವು ಸರಿಯಾಗಿ ಬಂದಿಲ್ಲಾ ಅಂತ ನೀಮಾ ಮುಖ ಸಿಂಡರಿಸಿಕೊಂಡಿದ್ದ. ಮೊದಲೇ ಕೆಂಪಗಿದ್ದವನು ಇನ್ನೂ ಕೆಂಪಾಗಿದ್ದ ಏನೇನೋ ಪ್ರಯತ್ನಗಳನ್ನು ಮಾಡಿ ಅವನ ಮುಖದ ಗಂಟುಗಳನ್ನು ಯಶಸ್ವಿಯಾಗಿ ಬಿಡಿಸಿದೆವು. ನೀ ಮಾ ಮೂಕನಾದರೆ ನಮಗೆ ಮಾಹಿತಿಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಕೊನೆಯ ಭಾಗ): ಹನುಮಂತ ಹಾಲಿಗೇರಿ

ರಾಜಿಯ ದಾಂಪತ್ಯದ ಬದುಕಿನ ಬಗ್ಗೆ ಶಾರದೆಯ ಮೂಲಕ ದೀಪಾಳಿಗೂ, ದೀಪಾಳ ಮೂಲಕ ನನಗೂ ಗೊತ್ತಾಗುತ್ತಿತ್ತು. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಶಾರೀಯ ಮೈಯ್ಯ ಮತ್ತು ಮುಖದ ಮೇಲಿನ ಕಳೆ ಮಾಯವಾಗುತ್ತಿರುವುದು ಶಾರದೆಯ ಗಮನಕ್ಕೂ ಬಂದಿತಂತೆ. ರಾಜಿಯ ದಾಂಪತ್ಯದೊಳಗೆ ಹೊಗೆಯಾಡಲಿಕ್ಕೆ ಶುರುವಾಗಿದೆ ಎಂಬುದನ್ನು ಅವಳು ಅರಿತುಕೊಂಡಿದ್ದಳು. ಅಳಿಯ ಕೆಲಸಕ್ಕೆ ಹೋಗೋದನ್ನು ಬಿಟ್ಟು ಪೂರ್ತಿಯಾಗಿ ಕುಡಿತಕ್ಕೆ ಅಂಟಿಕೊಂಡಿದ್ದ. ಕೆಲಸಕ್ಕೆ ಹೋಗು ಅಂತ ರಾಜಿ ಗಂಡನನ್ನು ಒತ್ತಾಯಿಸಿದಾಗ ಆತ ತನ್ನೊಳಗೆ ಅಡಗಿದ್ದ ಲಾವಾರಸಾನ ಹೊರ ಉಕ್ಕಿಸಿದ್ದ. ‘ನಿಮ್ಮಮ್ಮನ್ನ ತಂದ್ಹಾಕು ಅಂತ ಹೇಳು. ಒಬ್ಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಲದ ವಿಷಯ (ಕೊನೆಯ ಭಾಗ): ಸೂರಿ ಹಾರ್ದಳ್ಳಿ

(ಇಲ್ಲಿಯವರೆಗೆ) ಈ ಘಟನೆಯ ನಂತರ ನಿಮಗೆ ನನ್ನ ರೂಪ ಅಸಹ್ಯವಾಗಿ ಕಾಣಿಸುತ್ತದೆ. ನಾನು ಎಲ್ಲಾ ದುರ್ಗುಣಗಳ ಘನೀಕೃತ ರೂಪವಾಗಿ, ಕೀಚಕನಾಗಿ, ವೀರಪ್ಪನ್ ಆಗಿ ಕಾಣುತ್ತೇನೆ. ಆದರೆ ಏನೂ ಮಾಡಲಾಗದ ಪರಿಸ್ಥಿತಿ ನಿಮ್ಮದು. ನನ್ನದು ಮೃದು ಹೃದಯ. ಇಲ್ಲ ಎಂದು ಹೇಳಿ ನಿಮ್ಮನ್ನು ಗಾಸಿಗೊಳಿಸಲು ಇಷ್ಟವಿಲ್ಲ. ಅದಕ್ಕಾಗಿ ನಾನು, ’ರೀ, ಗೆಳೆಯನೊಬ್ಬನಿಗೆ ಎರಡು ಲಕ್ಷ ಕೊಟ್ಟಿದ್ದೆ. ಎರಡು ವಾರ ಬಿಟ್ಟು ಕೊಡ್ತೀನಿ ಎಂದು ಹೇಳಿದ್ದಾನೆ. ನೀವು ಎರಡು ವಾರ ಬಿಟ್ಟು ಬನ್ನಿ, ಕೊಟ್ಟರೆ ನಿಮಗೆ ಖಂಡಿತಾ ಹತ್ತು ಸಾವಿರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ವಾರ 2) : ಮಹಾಂತೇಶ್ ಯರಗಟ್ಟಿ

೧. ಮಹಮದ್ ರಫಿ ಕನ್ನಡ ಚಿತ್ರವೊಂದರಲ್ಲಿ ಹಾಡಿದ್ದಾರೆ. ಆ ಚಿತ್ರ ಯಾವುದು? ೨. ಅಚ್ಚ ಕನ್ನಡದ ಮೊದಲ ಕರ್ನಾಟಕ ದೊರೆ ಯಾರು? ೩. ಒಂದು ವರ್ಷದ ಪಿ.ಯು.ಸಿ ಶಿಕ್ಷಣವನ್ನು ಯಾವ ವರ್ಷದಲ್ಲಿ ೨ವರ್ಷಕ್ಕೆ ಹೆಚ್ಚಿಸಲಾಯಿತು? ೪. ಕರ್ನಾಟಕ ಯಾವ ಜಿಲ್ಲೆಯಲ್ಲಿ ಒಂಟೆಗಳ ಜಾತ್ರೆ ನಡೆಯುತ್ತದೆ? ೫. ಕನ್ನಡದ ಮೊದಲ ನಾಟಕ ಯಾವುದು? ೬. ಅಂಚೆ ಚೀಟಿಯ ಮೇಲೆ ಪ್ರಪ್ರಥಮವಾಗಿ ಮೂಡಿ ಬಂದ ಕನ್ನಡ ಸಾಹಿತಿ ಯಾರು? ೭. ಮ್ಯಾಗ್ಸೆಸೆ ಪ್ರಶಸ್ತಿ ಪಡೆದ (ರಂಗಭೂಮಿ ಸೇವೆಗೆ) ಮೊದಲ ಕನ್ನಡಿಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

‘ನಟರಂಗ್’ ಎಂಬ ಅದ್ಭುತ ಮರಾಠಿ ಸಿನಿಮಾ: ಶ್ರೀಧರ ಬನವಾಸಿ

ಇತ್ತೀಚಿನ ದಿನಗಳಲ್ಲಿ ನಾನು ನೋಡಿದ ಕೆಲವು ಸಿನಿಮಾಗಳಲ್ಲಿ ನನ್ನನ್ನು ಅತ್ಯಂತ ಕಾಡಿದ ಸಿನಿಮಾವೆಂದರೆ ಮರಾಠಿಯ ನಟರಂಗ್’ ಚಿತ್ರ. ಸಿನಿಮಾವನ್ನು ಕಳೆದ ಒಂದು ವಾರದಲ್ಲೇ ನಾಲ್ಕೈದು ಬಾರಿ ನೋಡಿಬಿಟ್ಟೆ. ಚಿತ್ರದ ಒಂದೊಂದು ಸನ್ನಿವೇಶಗಳು, ನಾಯಕನ ಅಭಿನಯ, ಸಂಗೀತವು ನೋಡುಗರನ್ನು ಸೆಳೆದುಕೊಂಡು ನೋಡಿಸಿಕೊಂಡು ಹೋಗುತ್ತದೆ. ಅದ್ಭುತ ಹಾಗೂ ಮನಸ್ಸಿಗೆ ತುಂಬಾ ನಾಟುವಂತಹ, ಬದುಕಿಗೆ ತುಂಬಾ ಹತ್ತಿರವಾದಂತಹ ಸಿನಿಮಾ ಅಂತ ಹೇಳಬಹುದು. ಇಡೀ ಸಿನಿಮಾ ನೋಡಿದ ಮೇಲೆ ಯಾರಿಗೇ ಆಗಲಿ ಒಂದು ಅಮೂರ್ತವಾದಂತಹ ಅನುಭವ ನಿಮ್ಮನ್ನು ಕಾಡದೇ ಬಿಡದು. ‘ನಟರಂಗ್’ ಚಿತ್ರದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೀಪಾವಳಿ: ಪ್ರಶಸ್ತಿ ಅಂಕಣ

ಪೀಠಿಕೆ: ಮುಂಚೆಯೆಲ್ಲಾ ದೀಪಾವಳಿ,ದಸರಾಗಳೆಂದರೆ ಮನೆ ತುಂಬಾ ಜನ. ಎಲ್ಲೇ ಇದ್ದರೂ ವರ್ಷಕ್ಕೊಮ್ಮೆಯಾದರೂ ಹಬ್ಬದ ಸಂದರ್ಭ ಮಕ್ಕಳೆಲ್ಲಾ ತಮ್ಮ ಮೂಲಮನೆಗೆ ಹೋಗೋದು ಪದ್ದತಿ. ಎಲ್ಲಾ ಸೇರಿ ಖುಷಿ ಖುಷಿಯಾಗಿ ಹಬ್ಬ ಆಚರಿಸುತ್ತಿದ್ದ ಖುಷಿಯೇ ಬೇರೆ. ಅವಿಭಕ್ತ ಕುಟುಂಬಗಳೆಲ್ಲಾ ಕಡಿಮೆಯಾಗುತ್ತಿದ್ದಂತೆಯೇ, ಜನರಲ್ಲಿ ಸ್ವಾರ್ಥ, ಅಸೂಯೆಗಳು ಹೆಚ್ಚಾಗುತ್ತಾ ಬರುತ್ತಿದ್ದಂತೆಯೇ, ಹಳ್ಳಿಗಳಿಂದ ಪಟ್ಟಣಗಳತ್ತ ವಲಸೆ ಮುಂದುವರೆದಂತೆಯೇ ಈ ಖುಷಿ, ನಗು ಕಮ್ಮಿಯಾಗುತ್ತಾ ಬರುತ್ತಿದೆ. ಎಂದೂ ಮುಗಿಯದ ಮಕ್ಕಳ ಎಕ್ಸಾಮಿನ ಟೆನ್ಷನ್ನು, ಅವರು ಏನೂ ಮಾಡಿರದಿದ್ದರೂ ಅವರನ್ನು ಯಾಕೆ ಕರೆಯಬೇಕೆಂಬ ಹಳ್ಳಿಯವರ ಬೇಸರವೂ, ನಮಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರಂಗದ ಗೆಳೆಯ: ಸುಮನ್ ದೇಸಾಯಿ ಅಂಕಣ

ಸಂಜಿಮುಂದ ದೇವರಿಗೆ ದೀಪಾ ಹಚ್ಚಿ. ಅಂಗಳದಾಗಿನ ತುಳಸಿ ಕಟ್ಟಿ ಮ್ಯಾಲೆ ಕೂತು ಮಕ್ಕಳಿಗೆ ಸಾಯಂಕಾಲದ ಪೂರೋಚಿ(ಸಾಯಂಕಾಲದ ಸ್ತೊತ್ರಗಳು) ಹೇಳಿಕೊಡಲಿಕತ್ತಿದ್ದೆ. ಮೊಬೈಲ್ ರಿಂಗಾಗಿದ್ದು ಕೇಳಿ ಎದ್ದು ಒಳಗ ಹೋದೆ. ಯಾವದೊ ಅಪರಿಚಿತ ನಂಬರ್ ಇತ್ತು. ಅಂಥಾಪರಿ ಏನು ಕೂತುಹಲ ಇಲ್ಲದ ಫೋನ್ ತಗೊಂಡು ಹಲೊ ಅಂದೆ. ಅತ್ಲಾಕಡೆಯಿಂದ ಬಂದ ಧ್ವನಿ ನನ್ನ ಉಸಿರಿಗೆ ಪರಿಚಿತ ಅದ ಅನ್ನೊ ಭಾವನೆ ಬರಲಿಕತ್ತು. ಕ್ಷಣ ಮಾತ್ರ ಆಧ್ವನಿಯ ಒಡತಿ ನನ್ನ ಬಾಲ್ಯದ ಗೆಳತಿ ಜಾನು ದು ಅಂತ ಗೊತ್ತಾತು. ಎಷ್ಟು ವರ್ಷದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಿ ಬರ್ಡ್ಸ್:ವಾಸುಕಿ ರಾಘವನ್ ಅಂಕಣ

ಹಾರರ್ / ಸಸ್ಪೆನ್ಸ್ ಚಿತ್ರಗಳು ಅಂದಾಕ್ಷಣ ಮೊದಲು ನೆನಪಿಗೆ ಬರುವ ಹೆಸರೇ ಅಲ್ಫ್ರೆಡ್ ಹಿಚ್ಕಾಕ್. ಸುಮಾರು ಐವತ್ತು ಚಿತ್ರಗಳನ್ನು ನಿರ್ದೇಶಿಸಿದ್ದಾರೆ ಇವರು. ಒಂದು ಚಿತ್ರಪ್ರಕಾರದೊಂದಿಗೆ ಒಬ್ಬ ನಿರ್ದೇಶಕ ಈ ಮಟ್ಟಿಗೆ ಗುರುತಿಸಿಕೊಳ್ಳುವುದು ತುಂಬಾನೇ ವಿರಳ. ಇಂಗ್ಲೆಂಡಿನಲ್ಲಿ ಇಪ್ಪತ್ತರ ದಶಕದಲ್ಲೇ ತಮ್ಮ ವೃತ್ತಿಜೀವನ ಆರಂಭಿಸಿದ ಹಿಚ್ಕಾಕ್, ಖ್ಯಾತಿಯ ಉತ್ತುಂಗಕ್ಕೆ ಏರಿದ್ದು ಮಾತ್ರ ಹಾಲಿವುಡ್ಡಿಗೆ ಬಂದ ಮೇಲೆ. ಅವರ ಅತ್ಯುತ್ತಮ ಚಿತ್ರಗಳು 1954ರಿಂದ 1960ರಲ್ಲಿ ಬಂದವು. ಡಯಲ್ ಎಂ ಫಾರ್ ಮರ್ಡರ್, ರೇರ್ ವಿಂಡೋ, ವರ್ಟಿಗೋ, ನಾರ್ತ್ ಬೈ ನಾರ್ತ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಿರೀಶ ಕಾರ್ನಾಡರ ಯಯಾತಿ ನಾಟಕದಲ್ಲಿ ಪಾತ್ರಗಳ ಭಾವಗಳೇರಿಳಿತಗಳು: ದಿವ್ಯ ಆಂಜನಪ್ಪ

'ಯಯಾತಿ'- ನಾಲ್ಕಂಕದ ಸಣ್ಣ ನಾಟಕವಾಗಿ ಕಾಣುವ ನಮಗೆ ಪಾತ್ರಗಳಾರರಲ್ಲಿ ಮನುಷ್ಯನ ವಿರಾಟ ದರ್ಶನವನ್ನು ನೀಡುತ್ತದೆ.  ನಾಟಕದ ಪ್ರಾರಂಭದಲ್ಲಿ ನಟಿಯೊಡನೆ ಸೂತ್ರಧಾರ ಬರುತ್ತಾರೆ. ಪ್ರೇಕ್ಷಕರನ್ನುದ್ದೇಶಿಸಿ ಸೂತ್ರಧಾರ ನಾಟಕದ ಕುರಿತು ಒಂದು ಕುತೂಹಲಭರಿತ ಮುನ್ನುಡಿಯನ್ನು ನೀಡುತ್ತಾನೆ. ಅಂತ್ಯದಲ್ಲಿ ಅವನಾಡುವ ಮಾತು ಪ್ರಸ್ತುತ ಮತ್ತು ಸರ್ವಕಾಲಿಕ ಸತ್ಯವಾಗಿ ನಿಲ್ಲುತ್ತದೆ. " ಒಮ್ಮೊಮ್ಮೆ ದಾರಿಗುಂಟ ಹೋಗುವಾಗ ನಮ್ಮ ದಾರಿ ಒಡೆದು ಎರಡಾಗುವುದಿಲ್ಲವೇ? ನಾವು ಒಂದನ್ನು ಮಾತ್ರ ಆರಿಸಬಹುದು. ಅದರೊಡನೆ ತತ್ಪೂರ್ತ ನಮ್ಮ ಗುರಿಯೂ ಗೊತ್ತಾಗುತ್ತದೆ. ಆದರೆ ನಮ್ಮ ಹಿಂದೆ ಕಿವಿಗಳ ಸನಿಹದಲ್ಲಿ, ಕೇಳದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಗುರುಪ್ರಸಾದ ಹೆಗಡೆ

೧) ಪಾರು  ಕೈ- ಕೊಟ್ಟಳು ಹುಡುಗಿ  ಕಂಗೆಟ್ಟ  ಹುಡುಗ,  ಅಯ್ಯೋ ಎಲ್ಲ ಮುಗಿದೇ  ಹೋಯಿತೆಂದರು ಜನ. – ಹುಡುಗ ಬಚಾವಾಗಿದ್ದ!    ೨) ಜೀವ  ಅಕ್ವೆರಿಯಮ್ಮಿನಿಂದ ಚಿಮ್ಮಿದ  ಮೀನು – ಹೊರಗೆ ಏನು ಇಲ್ಲವೆಂಬ  ಸತ್ಯವ ಅರಿತು ಮತ್ತೆ ನೀರಿಗೆ ಹಾರಿತು.    ೩) ಸೌಂದರ್ಯ ಪ್ರಜ್ಞೆ  ಬ್ಯೂಟಿ – ಪಾರ್ಲರಿನಿಂದ   ಬಂದ ಬೆಡಗಿಯ  ಕೈಯ ಹಿಡಿದು  ಮೊಮ್ಮಗ  ಮನೆಗೆ ಕರೆದೊಯ್ದ.    ೪) ಗಡಿಯಾರ  ವರ್ಷಗಟ್ಟಲೆ ತಿರುಗಿತು  ಗಡಿಯಾರದ ಮುಳ್ಳು, ಎಷ್ಟು ಸುತ್ತಿದರೂ  ತಲುಪಿದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ನೇಹ ಭಾಂದವ್ಯ (ಭಾಗ 5): ನಾಗರತ್ನಾ ಗೋವಿಂದನ್ನವರ

(ಇಲ್ಲಿಯವರೆಗೆ) ಇತ್ತ ಸಂಜೆ ಆಫೀಸಿನಿಂದ ಮನೆಗೆ ಎಂದ ರಾಜೇಶ ತುಂಬಾ ಖುಷಿಯಾಗಿರುವದನ್ನು ಗಮನಿಸಿದ ಪದ್ಮಮ್ಮ ಏನೋ ರಾಜೇಶ ಇವತ್ತು ತುಂಬಾ ಖುಷಿಯಾಗಿದೆಯಲ್ಲೋ ಏನಾದರೂ ಲಾಟರಿ ಹೊಡೆಯಿತೇನೋ ಎಂದಳು. ಆಗ ರಾಜೇಶನಿಗೆ ಬೇಸರವಾಗಿ ಹೋಗಮ್ಮ ನಿನಗ್ಯಾವಾಗಲು ದುಡ್ಡಿನದೇ ಚಿಂತೆ ಎನ್ನುತ್ತಾ ತನ್ನ ರೂಮಿಗೆ ಹೋದ. ಅವನಿಗೆ ಬೇಗ ನಿದ್ದೆ ಬರದೆ ತನ್ನ ಕಾಲೇಜಿನ ದಿನಗಳು ನೆನಪಾದವು. ತನ್ನ ಸಹಪಾಠಿಯಾದ ಸುನಿತಾಳನ್ನು ತುಂಬಾ ಪ್ರೀತಿಸುತ್ತಿದ್ದ. ದಿನಾ ಅವಳನ್ನು ನೋಡುತ್ತಾ ತನ್ನ ಮನದಲ್ಲಿರೋದನ್ನ ಅವಳಿಗೆ ಹೇಳಬೇಕು ಅಂತ ಎಷ್ಟೊಂದು ಬಾರಿ ಪ್ರಯತ್ನಿಸಿದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೂರ್ವ ಹಾಗೂ ಈಶಾನ್ಯ ಭಾರತದ ಪ್ರವಾಸದ ಅನುಭವ (ಭಾಗ ೨): ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ಇಷ್ಟು ಬೇಗ ಬೆಳಕಾಯ್ತೆ!? ಒಂದೊಂದು ಸಲ ನಿದ್ದೆ ಸಾಲದಾದಾಗ, ಏಳಲೇಬೇಕಾದ ಅನಿವಾರ್ಯತೆಯಿದ್ದಾಗ ಹಾಗನ್ನಿಸಿಬಿಡುತ್ತದೆ! ಇನ್ನೂ ಹಳೆಯದರಂತೇ ಗೋಚರಿಸುವ ಬಂಗಾಲದ  New Jalpaiguri ಎಂಬ ಊರಿನಲ್ಲಿ ಗಂಟು ಮೂಟೆಗಳೊಂದಿಗೆ ಬೆಳ್ಳಂ ಬೆಳಿಗ್ಗೆ ಟ್ರೇನಿನಿಂದ ಇಳಿದಾಗ, ಇಲ್ಲಿ ಹೊಸ (New) ದೇನಿರಬಹುದು ಅಂತ ಯೋಚಿಸುತ್ತಲೇ ಹೊರಗೆ ಬಂದಾಗ ಎರಡು ಝೈಲೋ ಗಾಡಿಗಳು ಹಾಗೂ ಇಬ್ಬರು ಸಾರಥಿಗಳು ನಮಗಾಗಿ ಕಾಯ್ದಿದ್ದರು. ಒಬ್ಬನ ಹೆಸರು ಸರೋಜ್ ಇನ್ನೊಬ್ಬ ನೀ ಮಾ. ಇಬ್ಬರೂ ನೇಪಾಳಿಗಳು. ನೀ ಮಾ ಅಂದರೆ  ನೇಪಾಳೀ ಭಾಷೆಯಲ್ಲಿ ಸುರ್ಯೋದಯವಂತೆ.  … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಮಾನ್ಯ ಜ್ಞಾನ (ಭಾಗ 1): ಮಹಾಂತೇಶ್ ಯರಗಟ್ಟಿ

೧. ಕನ್ನಡದ ಮೊದಲ ರಾಷ್ಟ್ರಕವಿ ಯಾರು? ೨. ಕರ್ನಾಟಕಕ್ಕೆ ಕಾಫಿ ಬೀಜ ತಂದವರು ಯಾರು? ೩. ಸಂಸತ್ತಿನಲ್ಲಿ ಮೊದಲು ಕನ್ನಡ ಮಾತನಾಡಿದ ಕರ್ನಾಟಕದ ಸಂಸದ ಯಾರು? ೪. ಕರ್ನಾಟಕದ ಮೊದಲ ಉಪ ಮುಖ್ಯಮಂತ್ರಿ ಯಾರು? ೫. ಕರ್ನಾಟಕದಲ್ಲಿ ಮೊದಲ ಸ್ವತಂತ್ರ ಘೋಶಿಸಿಕೊಂಡ ಗ್ರಾಮ ಯಾವುದು? ೬. ಸಾವಿರ ಹಾಡುಗಳ ಸರದಾರ ಯಾರು? ೭. ಕರ್ನಾಟಕದ ಗಾಂಧಿ ಎಂದು ಯಾರನ್ನು ಕರೆಯುತ್ತಾರೆ? ೮. ವಿಜ್ಞಾನವನ್ನು ಜನಪ್ರಿಯಗೊಳಿಸುವ ಕೆಲಸಕ್ಕಾಗಿ ಮೊಟ್ಟ ಮೊದಲ ರಾಷ್ಟ್ರೀಯ ಪುರಸ್ಕಾರವನ್ನು ಪಡೆದ ಸಂಸ್ಥೆ ಯಾವುದು? ೯. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕ್ಯಾಮೆರಾ ಖರೀದಿ ಕತೆ: ಪ್ರಶಸ್ತಿ ಅಂಕಣ

  ಹಬ್ಬಕ್ಕೊಂದು ಹೊಸ ಕ್ಯಾಮೆರಾ ಖರೀದಿಸಬೇಕೆಂಬ ಹಂಬಲ ಸ್ವಲ್ವ ಜಾಸ್ತಿಯೇ ಅನ್ನುವಷ್ಟು ಮೂಡತೊಡಗಿತ್ತು.ಹೊಸ ಕ್ಯಾಮೆರಾ ಅಂದ ತಕ್ಷಣ ಈಗೊಂದು ಕ್ಯಾಮೆರಾ ಇತ್ತೆಂದಲ್ಲ. ಮುಖಹೊತ್ತಿಗೆಯಲ್ಲಿ. ಟ್ರಿಪ್ಪು, ಗ್ರೂಪುಗಳಲ್ಲಿ ಎಲ್ಲರ ಕೈಯಲ್ಲೂ ತರಾವರಿ ಥಳಥಳಿಸೋ ಕ್ಯಾಮೆರಾ ಕಂಡು ಕರುಬುವ ಮನಕ್ಕೆ ಸ್ವಂತದ್ದೊಂದು ಡಿಜಿಟಲ್ ಕ್ಯಾಮೆರಾ ಕೊಳ್ಳಬೇಕೆಂಬ ಆಸೆ ನಿಧಾನಕ್ಕೆ ಮೂಡಿತ್ತು. ಪದವಿಯ ಕೊನೆಯ ವರ್ಷದಿಂದಲೂ ಪದವಿಯಾಗಿ ಎರಡು ವರ್ಷವಾಗೋವರೆಗೂ ಇದ್ದ ನೋಕಿಯಾ ೨೭೦೦ ಕ್ಲಾಸಿಕ್ ಮೊಬೈಲಿನ ೨ ಮೆಗಾಪಿಕ್ಸಲ್ ಕ್ಯಾಮೆರಾದಲ್ಲೇ ಸಂತೃಪ್ತವಾಗಿದ್ದ  ಮನಸ್ಸು ಇದ್ದಕ್ಕಿದ್ದಂತೆ ಡಿಜಿಟಲ್ ಕ್ಯಾಮೆರಾದತ್ತ ಹೊರಳಿದ್ದೇಕೆ ? … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಟಾಕಿ: ಸಂತೋಷ್ ಕುಮಾರ್ ಎಲ್. ಎಂ.

ಅದು ಬೃಹದಾಕಾರವಾಗಿ ಬೆಳೆದ ನಗರದ ಮೂಲೆಯಲ್ಲಿ, ಇನ್ನೂ ತಲೆಯೆತ್ತಿ ನಿಲ್ಲಲೂ ಕಷ್ಟಪಡುತ್ತಿರುವ ಒಂದು ಬಡವರ್ಗದವರ ಏರಿಯಾ. ನಾಲ್ಕು ಗಂಟೆಗೆಲ್ಲ ಎದ್ದು ಕೂಲಿಗೆ ಹೊರಡುವ ಶ್ರಮಜೀವಿಗಳು ಮತ್ತೆ ವಾಪಸ್ಸು ಬರುವುದೇ ಸಂಜೆ ಸೂರ್ಯ ಮುಳುಗುವ ಹೊತ್ತಿಗೆ.  ಮನೆಯೊಳಗೆ ಅಜ್ಜಿಯ ಕೈತುತ್ತು ತಿಂದು ಮಲಗಿದ ಪುಟ್ಟಿ ದೀಪಳಿಗೆ ನಿದ್ರೆ ಬರುತ್ತಿಲ್ಲ. ಅಜ್ಜಿ ನಾಳೆಯ ದಿನ ದೀಪಾವಳಿ ಅಂತ ಹೇಳಿದ್ದಾಳೆ. ಅಪ್ಪ ಹುಟ್ಟಿದಾಗಿನಿಂದ ಇಲ್ಲಿಯವರೆಗೆ ಯಾವತ್ತಿಗೂ ಪಟಾಕಿ ತರುವುದನ್ನು ಮರೆತಿಲ್ಲ. ಯಾವುದಕ್ಕೂ ದುಡ್ಡಿಲ್ಲದಿದ್ದರೂ ಪ್ರತೀ ತಿಂಗಳು ಪಟಾಕಿಗೆಂದೇ ಇಂತಿಷ್ಟು ಅಂತ ಒಂದಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಿಸಿಲು ಬಸಪ್ಪ ಮತ್ತು ಉನ್ನಾವ್ ಕೋಟೆ: ಅಖಿಲೇಶ್ ಚಿಪ್ಪಳಿ ಅಂಕಣ

  ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಐತಿಹಾಸಿಕ ಸ್ಥಳಗಳು ಸಾಕಷ್ಟಿವೆ. ಇಕ್ಕೇರಿ, ಕೆಳದಿ, ಕಲಸಿ, ಹಳೆಇಕ್ಕೇರಿಯ ಕೋಟೆ ಇತ್ಯಾದಿ ಇತ್ಯಾದಿ. ನಮ್ಮ ಊರಿನಲ್ಲಿ ಇರುವುದೊಂದೇ ವೀರಶೈವರ ಮನೆ ಮತ್ತು ಅವರಿಗೊಂದು ವೀರಭದ್ರ ದೇವಸ್ಥಾನ. ದೇವಸ್ಥಾನದಿಂದ ಕೊಂಚ ದೂರದಲ್ಲಿ ಒಂದು ಬಸವಣ್ಣ. ಅದರ ಹೆಸರು ಬಿಸಿಲು ಬಸಪ್ಪ. ಪ್ರತಿವರ್ಷ ಆಯ್ದ ದಿನಗಳಲ್ಲಿ ಅದಕ್ಕೆ ಪೂಜೆ. ವಿಶೇಷವಾಗಿ ತುಳಸಿಪೂಜೆ, ದೀಪಾವಳಿಗಳಂದು ವರ್ಷವಿಡೀ ಬಿಸಿಲಿನಲ್ಲೇ ಮಲಗಿದ ಬಸಪ್ಪನಿಗೆ ಪೂಜೆ. ಬಿಸಿಲು-ಮಳೆಗಳಿಂದ ರಕ್ಷಿಸಲು ಆ ಬಸಪ್ಪನಿಗೆ ಕಟ್ಟಡವಿರಲ್ಲಿಲ್ಲ. ಬಿಸಿಲಿನಲ್ಲೇ ಇರುವುದರಿಂದಾಗಿ ಬಿಸಿಲು ಎಂಬುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿಟ್ಟುಮಾಮಾನ ದೀಪಾವಳಿ: ಸುಮನ್ ದೇಸಾಯಿ ಅಂಕಣ

  ಚುಮುಚುಮು ಛಳಿಗಾಲದಾಗ  ಬರೊ ದೀಪದ ಹಬ್ಬ ದೀಪಾವಳಿ ನೆನಿಸಿಕೊಂಡ್ರನ ಎನೊ ಒಂಥರಾ ಖುಷಿ ಆಗತದ. ನರಕಚತುರ್ದಶಿ ಹಿಂದಿನ ದಿನದಿಂದನ ದೀಪಾವಳಿ ಹಬ್ಬದ ಸಂಭ್ರಮ ಸುರು ಆಗತದ. ಅಂದ್ರ ನಮ್ಮ ಉತ್ತರ ಕರ್ನಾಟಕದ ಕಡೆ ನರಕಚತುರ್ದಶಿ ಹಿಂದಿನ ದಿನಾ ನೀರು ತುಂಬೊ ಹಬ್ಬ ಅಂತ ಮಾಡತೇವಿ. ಅವತ್ತ ಸಂಜಿಮುಂದ ಎಲ್ಲಾರು ಅಂಗಳಾ  ಸಾರಿಸಿ ಥಳಿ ಹೋಡದು ಛಂದನ ದೊಡ್ಡ ದೊಡ್ಡ ರಂಗೋಲಿ ಹಾಕಿ,ಮನಿಮುಂದ ಬಣ್ಣ ಬಣ್ಣದ ಆಕಾಶಬುಟ್ಟಿ ಕಟ್ಟಿರತಾರ. ಮನ್ಯಾಗಿನ ಹಿತ್ತಾಳಿ ತಾಮ್ರದ ಹಂಡೆ ಮತ್ತ ಕೊಡಗೊಳನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ