ಪ್ರತಿಭೆಗಿಂತ ಹುಚ್ಚು ದೊಡ್ಡದು: ವಾಸುಕಿ ರಾಘವನ್ ಅಂಕಣ

ಪ್ರತಿಭೆಗೆ ನಮ್ಮ ದೇಶದಲ್ಲಿ ಸಿಗುವಷ್ಟು ಮಾನ್ಯತೆ ಬಹುಷಃ ಪ್ರಪಂಚದ ಯಾವ ದೇಶದಲ್ಲೂ ಸಿಗಲಿಕ್ಕಿಲ್ಲ. ನನ್ನ ಹೇಳಿಕೆ ನೀವು ದೇಶಾಭಿಮಾನದ ಹೆಮ್ಮೆಯಿಂದ ಬೀಗುವಂತೆ ಮಾಡಿದ್ದರೆ ಕ್ಷಮಿಸಿ, ನಾನು ಅದನ್ನು ವ್ಯಂಗ್ಯವಾಗಿ ಹೇಳಿದೆ. ನೀವು ಯಾವುದೇ ಕ್ಷೇತ್ರದಲ್ಲಿ ಯಶಸ್ವಿಯಾದವರ ಬಗ್ಗೆ ಮಾತಾಡುವಾಗ ಗಮನಿಸಿ, ನಿಮಗೆ ಕೇಳಸಿಗುವುದು ಅವರ “ಟ್ಯಾಲೆಂಟ್” ಅಥವಾ “ಬುದ್ಧಿವಂತಿಕೆ”ಯ ಬಗ್ಗೆ.   “ನೀನು ನಿನಗಿಂತ ಬುದ್ಧಿವಂತರ ಜೊತೆ ಸ್ನೇಹ ಮಾಡಬೇಕು” ಅಂತ ಸದುದ್ದೇಶದಿಂದಲೇ ಹೇಳುವ ಟಿಪಿಕಲ್ ಮಿಡ್ಲ್ ಕ್ಲಾಸ್ ಪೇರೆಂಟ್ಸ್ ಇರಬಹುದು, “ಆಶಾ ಭೋಸ್ಲೆ ಎಂತಹ ಗಿಫ್ಟೆಡ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎರಡು ಕವಿತೆಗಳು: ಸಂತೆಬೆನ್ನೂರು ಫೈಜ್ನಟ್ರಾಜ್, ಶ್ರೀಧರ ನಾಯಕ

          ನಾಳೆಯ ಕತೆ        ಸುಮ್ಮನಿರುವುದಕ್ಕಿಂತ  ಏನಾದರೂ ಹೇಳಿ ಬಿಡು ’ನಾಳೆ’ ಬಂದಿತೋ ಇಲ್ಲವೋ…. ಎದಯ ತಲ್ಲಣ ಕಣ್ಣ ನೀರು ಹೃದಯದ ಮಾತು ಗಳ ಮುಚ್ಚಿಡಬೇಡ ’ಇಂದೇ’ ಹೊರಹಾಕು ನಾಳೆ ಕಂಡವರ್‍ಯಾರು?   ಕಳೆದುದ ಹುಡುಕಿಯೇನು ಸುಖ ಗೆಳತಿ; ಎಲ್ಲರೂ ಏನಾದರೊಂದು ಕಳೆದು ಕೊಂಡೇ ಇರ್ತಾರೆ ನನ್ನಂತೆ, ನಿನ್ನಂತೆ! ಇರುವುದ ಕಂಡು ಸುಖಿಸು ’ನಾಳೆ’ ಗಳಿಗೆ ನಿಟ್ಟುಸಿರೇಕೆ? ಏನಾದರೂ ಮಾಡುತಿರು ಎಂಬ ಮಾತಂತೆ ಹಾಡು ಮನದ ಹಾಡು, ಕವಿತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಈ ಬಾಳ ಪುಟಗಳಲ್ಲಿ ಭಾಮಿನಿ: ಉಮೇಶ್ ದೇಸಾಯಿ

ಅವ ಬಂದಾಗ ಎದಿರಾಗಬಾರದು ಎಂಬ ಹಿಂಜರಿಕೆ ಇತ್ತು. ಹೀಗಾಗಿಯೇ ನೆವ ಮಾಡಿ ಬಾಜೂ ಮನೆಯ ಶಾಮರಾಯರ ಕಡೆ ಹೋಗಿದ್ದೆ. ವಾಸು ಮಾಮಾನ ಜೊತೆ ಅವನ ಹರಟೆ ಜೋರಾಗಿ ನಡೆದಿತ್ತು. ಸ್ವಲ್ಪ ಅನ್ನುವುದಕ್ಕಿಂತ ಪೂರ್ತಿಯೇ ಬದಲಾಗಿದ್ದ. ಕೂದಲಿಗೆ ಢಾಳಾಗಿ ಬಣ್ಣ ಬಡಿದುಕೊಂಡಿದ್ದ. ಬೊಜ್ಜು ಸ್ವಲ್ಪ ಅತಿ ಅನಿಸುವಂತಿತ್ತು. ಒಬ್ಬನೇ ಬಂದಿದ್ದಾನೆ. ಇದಾಗಲೇ ಶಾಮರಾಯರ ಮನೆಯಲ್ಲಿ ಸುದ್ದಿ ಹಬ್ಬಿತ್ತು. ಪಡಸಾಲೆಯಲ್ಲಿ ಕುಳಿತ ಅವನ ಮುಂದೆ ಹಾದೇ ಅಡಿಗೆ ಮನೆಗೆ ಹೋಗಬೇಕು. ನನ್ನ ನೋಡಿದವನೋ ಇಲ್ಲವೋ ಗೊತ್ತಾಗಲಿಲ್ಲ. ಹರಟೆ ಜೋರಾಗಿತ್ತು. ಗಮನಿಸಿರಲಿಕ್ಕಿಲ್ಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನಪಿನ ಜೋಕಾಲಿ: ಸುಮನ್ ದೇಸಾಯಿ ಅಂಕಣ

ಎಲ್ಲಾರ ಜೀವನದೊಳಗು ಈ ಬಾಲ್ಯ ಅನ್ನೊದು ಅಮೂಲ್ಯವಾಗಿದ್ದಿರತದ. ಯಾವ ಕಲ್ಮಷ ಇಲ್ಲದ, ನಾಳಿನ ಚಿಂತೆ, ನೋವು ಇಲ್ಲದ ಆಡಿ ಬೆಳದ ಸಮಯ ಅದಾಗಿರತದ. ಈ ಬಾಲ್ಯದೊಳಗ ಏನೆ ಮಾಡಿದ್ರು ಛಂದನ ಇರತದ.” ಬಾರಾ ಖೂನಿ ಮಾಫ” ಅಂತಾರಲ್ಲಾ ಹಂಗ ಎಂಥಾ ಮಂಗ್ಯಾನಾಟಾ ಮಾಡಿದ್ರು ನಡಿತಿರತದ. ಅದರೊಳಗ ಈ ಹತ್ತರಿಂದ ಹದಿನಾರನೇ ವಯಸ್ಸಿನೊಳಗಿನ ಮನಸ್ಸಂತು ಯಾರ ಕೈಗು ಸಿಗದ ಬೀಸೊಗಾಳಿ ಹಂಗಿರತದ ಬಿಂದಾಸಾಗಿ ಆಡಿಕೊಂಡ ಎದುರಿಗೆ ಸಿಕ್ಕಿದ್ದನ ತನ್ನ ತುಂಟಾಟದ ರಭಸಕ್ಕ ನಡುಗಿಸೊ ಹಂಗ. ಬಾಲ್ಯ ಎಷ್ಟು ದಟ್ಟವಾಗಿರತದೊ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚುಟುಕಗಳು: ಗುರುನಾಥ್ ಬೋರಗಿ

   ೧ ನಾನು ನಿನಗೆ  ಪ್ರೀತಿಸುವುದು  ಹೇಗೆಂದು  ಹೇಳಿ ಕೊಟ್ಟೆ. ನೀನದನು  ಇನ್ನೊಬ್ಬನಲಿ  ಪ್ರಯೋಗಿಸಿ ಬಿಟ್ಟೆ   ೨ ಚುಚ್ಚಿ ಗಾಯಗೊಳಿಸುವ  ದರ್ಜಿಯ ಸೂಜಿಗೆ,  ಎರಡನೊಂದಾಗಿಸುವ  ಹಿರಿಗುಣವೂ ಇದೆ.   ೩ ಬಿಳಿ ಕಾಗದ ಮೇಲೆ  ದುಂಡಾಗದೆಯೇ  ಸತಾಯಿಸಿದ ನನ್ನ  ಅಕ್ಷರಗಳು, ನಿನ್ನ ಕೆನ್ನೆ, ತುಟಿ ಮೇಲೆ  ಬರೆದಾಕ್ಷಣವೇ  ಸಾಲು ಮುತ್ತಾದವು    ೪ ಹರಯದ ಅವಸರಕ್ಕೆ ಮೊಳೆತ ಭ್ರೂಣಕೆ, ದವಾಖಾನೆ ದಾದಿಯರ ಕೈಗವುಸುಗಳದ್ದೇ ಭಯ   ೫ ಗೆಳತೀ.. ನನ್ನ ಪಾಲಿಗೆ ; ನಿನ್ನ ನೆನಪುಗಳೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 14): ಹನುಮಂತ ಹಾಲಿಗೇರಿ

  (ಇಲ್ಲಿಯವರೆಗೆ) ಕಾಲ ಹೀಗೆ ಬರುತ್ತೆ ಅಂತ ಹೇಳಲಿಕ್ಕಾಗುವುದಿಲ್ಲ. ಮದುವೆಯಾಗಿ ವರ್ಷ ತುಂಬಿ ಎರಡನೇ ವರ್ಷಕ್ಕೆ ಕಾಲಿಟ್ಟರಲಿಲ್ಲ. ಇನ್ನೂ ನಾನು ನನ್ನ ಹೆಂಡತಿ ಲಲಿತಾ ಪರಸ್ಪರ ಅರ್ಥ ಮಾಡಿಕೊಳ್ಳುವುದರಲ್ಲಿದ್ದೆವು. ಮದುವೆಯಾದ ತಕ್ಷಣವೇ ನಾನು ನನ್ನ ಹೆಂಡತಿಗೆ ನನ್ನ ಕೆಲಸದ ವಿಷಯ, ಶಾರಿಯ ವಿಷಯಗಳನ್ನು ಮುಕ್ತವಾಗಿ ಹೇಳಿದ್ದೆ. ಅಷ್ಟೇ ಅಲ್ಲದೆ ಅವಳನ್ನು ಶಾರಿಯ ಮನೆಗೆ ಕರೆದುಕೊಂಡು ಹೋಗಿದ್ದೆ ಕೂಡ. ಅಲ್ಲಿ ನಮ್ಮಿಬ್ಬರ ಪ್ರೀತಿ ವಿಶ್ವಾಸವನ್ನು ಗಮನಿಸಿದ ಲಲ್ಲಿ ಅಂದಿನಿಂದ ತಾನು ನನ್ನೊಂದಿಗೆ ನಡೆದುಕೊಳ್ಳುವ ಪದ್ದತಿಯನ್ನೇ ಬದಲಿಸಿದಳು. ಅವಳಲ್ಲಿ ಅನುಮಾನದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಿಕ್ಷಕರಿಗೊಂದು ಸೆಲ್ಯೂಟ್: ಪ್ರಜ್ವಲ್ ಕುಮಾರ್

                ಶಿಕ್ಷಕರು ಅಂದ್ರೆ ದೇವರಿದ್ದಂತೆ, ಶಿಕ್ಷಕರು ಎಷ್ಟು ಒಳ್ಳೆಯವರಾಗಿರ್ತಾರೋ ಅವರ ವಿದ್ಯಾರ್ಥಿಗಳೂ ಅಷ್ಟೇ ಒಳ್ಳೆಯವರಾಗಿರ್ತಾರೆ ಅಂತೆಲ್ಲಾ ಕೊರೀತಾ ಕೂತ್ರೆ ಒಂದು ನಕ್ಷತ್ರ ಹುಟ್ಟಿ ಅದು ಕಪ್ಪು ರಂಧ್ರ ಸ್ಥಿತಿ ತಲುಪುವವರೆಗೂ ಕೊರೀಬಹುದು. ಇಂಥವೆಲ್ಲಾ ಬಿಟ್ಟು ಬೇರೆ ಏನಾದ್ರೂ ಹೇಳೋಣಾ ಅಂದ್ರೆ ಅವರನ್ನು ಬಯ್ಯೋದೋ, ಹೊಗಳೋದೋ ಅಥವಾ ಹೀಗೇ ನೆನಪು ಮಾಡ್ಕೊಳ್ತಾ ಇರೋದೋ ಗೊತ್ತಾಗ್ತಿಲ್ಲ.   ಒಂದು ಕಡೆಯಿಂದ ಶುರು ಮಾಡುವುದಾದರೆ ನಾವೆಲ್ಲಾ ಅಂಗನವಾಡಿ ಅಥವಾ ಶಿಶುವಾರಕ್ಕೆ ಹೋಗುವಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವಿನ ವ್ಯಾಖ್ಯಾನ: ಅಜ್ಜಿಮನೆ ಗಣೇಶ್

ಅಪರೂಪಕ್ಕೆ ಎಂಬಂತೆ ಈ ವರ್ಷ ಶರಾವತಿ ಲಿಂಗನಮಕ್ಕಿ ಅಣೆಕಟ್ಟೆಯನ್ನ ದಾಟಿ ಹರಿಯುತ್ತಿದ್ದಾಳೆ. ಬೇಸಿಗೆಯಲ್ಲಿ ತನ್ನ ಪಾಲಿನ ಹದಿನೈದು ಪರ್ಸೆಂಟ್ ವಿದ್ಯುತ್ ನ್ನ ಶರಾವತಿ ಖಂಡಿತಾ ಕೊಡುತ್ತಾಳೆ. ಇದಕ್ಕೆ ಪೂರಕವಾಗಿ ಕಣಿವೆ ಪ್ರದೇಶದ ವಿದ್ಯುತ್ ತಯಾರಿಕಾ ಯಂತ್ರಗಳು ಸಹ ಕೆಲಸ ಶುರುವಿಟ್ಟುಕೊಡಿದೆ. ನಾಡು ಸಂತೋಷದಲ್ಲಿದೆ, ಸರ್ಕಾರ ತೃಪ್ತಿಯಾಗಿದೆ. ಆದರೆ ಶರಾವತಿಯ ಮಡಿಲಲ್ಲಿ ನಡೆದ ಘಟನೆಯೊಂದು ಮಾತ್ರ ನನ್ನನ್ನ, ಕಳೆದೊಂದು ತಿಂಗಳಿನಿಂದಲೂ, ಬಿಡದೆ ಕಾಡುತ್ತಿದೆ.ಅಲ್ಲಿ ನಡೆದ ಸಾವಿನ ಘಟನೆಯೊಂದು, ನನ್ನನ್ನ ಮರಣ ಚಿಂತನೆಯಲ್ಲಿ ತೊಡಗಿಸಿದೆ.  ಮನಸ್ಸಿನ ಗೂಗಲ್ ನಲ್ಲಿ ಮೃತ್ಯು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶೋಭರಾಜ್ ಫೋಟೋಗ್ರಾಫಿ

            ಶೋಭರಾಜ್ ರವರು ತೆಗೆದಿರುವ ಮತ್ತಷ್ಟು ಛಾಯಾಚಿತ್ರಗಳನ್ನು ನೋಡಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ಕಿಸಿ.. https://www.facebook.com/ShobrajPhotography ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಟ್ಟು ಹಬ್ಬದ ಶುಭಾಶಯಗಳು ಸರ್: ರೇಣುಕಾ ಶಿಲ್ಪಿ, ಹೂವಿನಹಡಗಲಿ.

ಕನ್ನಡ ಸಾರಸ್ವತ ಲೋಕದಲ್ಲಿ ತಮ್ಮದೇ ಆದ ವಿಶಿಷ್ಟ ಕಥನ ಶೈಲಿಯಿಂದ ಜನಪ್ರಿಯರಾಗಿರುವ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕ್ರತ ಕತೆಗಾರ ಕುಂ.ವೀರಭದ್ರಪ್ಪ ಅವರಿಗೆ ಇದೇ ಅಕ್ಟೋಬರ್ 1 ರಂದು ಜನ್ಮದಿನದ ಸಂಭ್ರಮ. ಈ ಸುಸಂದರ್ಭದಲ್ಲಿ ‘ಕುಂವೀ ಯವರಿಗೆ ಈ ಕಿರು ಪರಿಚಯಾತ್ಮಕ ಲೇಖನದ ಮೂಲಕ ಶುಭ ಕೋರುವ ಪುಟ್ಟ ಪ್ರಯತ್ನವಿದು. ನಾನು ಮೊದಲ ಬಾರಿ ಅವರನ್ನು ಕಂಡದ್ದು ನನ್ನ ಹೈಸ್ಕೂಲು ದಿನಗಳಲ್ಲಿ. ಸರಿಸುಮಾರು ಹದಿನೈದು ವರ್ಷಗಳ ಹಿಂದೆ, ನನ್ನೂರು ಹೂವಿನಹಡಗಲಿಯಲ್ಲಿ- ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಲ್ಕತ್ತ-ದಿಘಾ ನಾಲ್ಕು ದಿನದ ಪ್ರವಾಸ (ಭಾಗ 2): ಶಿವು ಕೆ.

(ಇಲ್ಲಿಯವರೆಗೆ) ಮೊದಲ ಭಾರಿಗೆ ಅಲ್ಲಿನ ಲೋಕಲ್ ರೈಲು ನಿಲ್ದಾಣದೊಳಗೆ ಕಾಲಿಟ್ಟಿದ್ದೆ. ಎಷ್ಟೊಂದು ಜನ ಅಂತೀರಿ! ನೂರಾರು ಸಾವಿರಾರು ಜನರು ತಮ್ಮ ಕೆಲಸ ಕಾರ್ಯಗಳಿಗೆ ಸಿದ್ದರಾಗಿ ಬರುವ ರೈಲುಗಾಡಿಗಳಿಗೆ ಕಾಯುತ್ತಿದ್ದರು. ಆ ಕ್ಷಣದಲ್ಲಿ ಮಲ್ಲೇಶ್ವರಂ ರೈಲು ನಿಲ್ದಾಣ ನೆನಪಾಯ್ತು. ಸದಾ ಶಾಂತವಾಗಿರುವ ನಮ್ಮ ಮಲ್ಲೇಶ್ವರಂ ರೈಲು ನಿಲ್ದಾಣವೆಲ್ಲಿ! ಗಿಜಿಗುಟ್ಟುವ ಈ ನಿಲ್ದಾಣವೆಲ್ಲಿ! ಖಂಡಿತ ಹೋಲಿಸಕೊಳ್ಳಬಾರದು ಸುಮ್ಮನೆ ಇಲ್ಲಿನ ದೃಶ್ಯಗಳನ್ನು ಕಣ್ತುಂಬಿಕೊಳ್ಳುತ್ತಾ ಆಸ್ವಾದಿಸಬೇಕೆಂದುಕೊಂಡು ಅಭಿಜಿತ್ ಡೆ ಮತ್ತು ಇತರರೊಂದಿಗೆ ನಾನು ರೈಲು ನಿಲ್ದಾಣದ ಪ್ಲಾಟ್ ಫಾರಂ ಕಡೆಗೆ ನಡೆದೆ. ಆಗಲೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಾಂಧಿಯನ್ನು ಕೊಂದವರ್‍ಯಾರು?:ಅಖಿಲೇಶ್ ಚಿಪ್ಪಳಿ ಅಂಕಣ

ಭೌತಿಕವಾದ ಗಾಂಧಿಯನ್ನು ಕೊಂದಿದ್ದು ನಾಥುರಾಮ್ ಗೋಡ್ಸೆ. ಗಾಂಧಿಯನ್ನು ಕೊಂದ ತಾನು ನೇಣಿಗೇರಿ ಸತ್ತ. 600 ಚಿಲ್ಲರೆ ರಾಜರನ್ನು ಹೊಂದಿದ ಪುರಾತನ ಭಾರತವನ್ನು ಒಡೆದಾಳಿ, ಗುಲಾಮಗಿರಿಗೆ ತಳ್ಳಿ ಮೆರೆದಿದ್ದು ಸೂರ್ಯ ಮುಳುಗದ ಸಾಮ್ರಾಜ್ಯವೆಂದು ಕರೆಯಲಾಗುವ ಬ್ರೀಟಿಷರ ಹೆಗ್ಗಳಿಕೆ. ದೇಶಾಭಿಮಾನ ಮತ್ತು ಸ್ವಾಭಿಮಾನ ಮೇಳೈಸಿ, ಗುಲಾಮತನಕ್ಕೆ ಒಗ್ಗಿಹೋಗಿದ್ದ ಲಕ್ಷಾಂತರ ಭಾರತೀಯರಿಗೆ ಸ್ವದೇಶಿ, ಸ್ವಾಭಿಮಾನ, ಸ್ವಾತಂತ್ರ್ಯವೆಂಬ ಊರುಗೋಲುಗಳನ್ನು ನೀಡಿ ಎಬ್ಬಿಸಿ ನಿಲ್ಲಿಸಿದವರಲ್ಲಿ ಗಾಂಧಿ ಪ್ರಮುಖರು. ಇದಕ್ಕಾಗಿಯೇ ಗಾಂಧಿಯನ್ನು ಇಡೀ ದೇಶ ರಾಷ್ಟ್ರಪಿತನೆಂದು ಒಪ್ಪಿಕೊಂಡಿದೆ. ಸ್ವಾತಂತ್ರ್ಯ ಪಡೆದ ನಂತರದಲ್ಲಿ ರಚಿತವಾದ ಸರ್ಕಾರಗಳ ಧೋರಣೆಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತೆರೆದ ಮನೆ ಬಾಗಿಲಿಗೊಂದು ಬೆಳಕಿನ ತೋರಣ:ಹೃದಯಶಿವ ಅಂಕಣ

ರಸಋಷಿಯ ರಮ್ಯಲೋಕದೆಡೆಗೆ ಬಾಲ್ಯದಲ್ಲಿ ಆಂಗ್ಲ ಸಾಹಿತ್ಯದ ವ್ಯಾಮೋಹಕ್ಕೊಳಗಾಗಿ ಹಲವು ಆಂಗ್ಲಕವಿತೆಗಳನ್ನು ಬರೆದರೂ ಕ್ರಮೇಣ ಕನ್ನಡ ಸಾಹಿತ್ಯ ಕೃಷಿಗೆ ಕೈ ಹಾಕಿ ಇಂದು ಕನ್ನಡ, ಕರ್ನಾಟಕದಷ್ಟೇ ಪ್ರಾಮುಖ್ಯತೆ ಪಡೆದಿರುವ ಕೆ.ವಿ.ಪುಟ್ಟಪ್ಪನವರು 1904ರಲ್ಲಿ ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಎಂಬ ಗ್ರಾಮದಲ್ಲಿ ಹುಟ್ಟಿದವರು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಮಲೆನಾಡಿನೊಂದಿಗೆ ಆಟವಾಡುತ್ತ, ಮೋಹಕ ಮಂಜಿನೊಂದಿಗೆ ಮಾತಿಗಿಳಿಯುತ ಬೆಳೆದ ಇವರು ಮೂಲತಃ ನಿಸರ್ಗದ ಆರಾಧಕರಾಗಿದ್ದರು.  ಪ್ರೌಢರಾಗುತ್ತಾ ಹೃದಯ ವಾಸ್ತವಕ್ಕೆ ತೆರೆದುಕೊಳ್ಳುತ್ತಿದ್ದಂತೆಯೇ ತಮ್ಮ ಅಂತಃಸತ್ವಕ್ಕೆ ಅಕ್ಷರ ರೂಪ ಕೊಡುತ್ತಾ ಹೋದಂಥವರು. ಹೊಸ ತಲೆಮಾರಿನ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನು ಬಡವ?:ಗುರುಪ್ರಸಾದ್ ಕುರ್ತಕೋಟಿ

ಮೂರ್ತಿ ಯಾವುದೋ ಒಂದು ಪುಸ್ತಕದಲ್ಲಿ ಗಹನವಾಗಿ ಮುಳುಗಿದ್ದವರು ನಿಟ್ಟುಸಿರು ಬಿಟ್ಟು ಹೀಗೆ ಅರುಹಿದರು… ಮೂರ್ತಿ: "ಗುರು, ಹಿಂದಿನ ಕಾಲದಲ್ಲಿ ನಮ್ಮ ದೇಶದಲ್ಲಿ ಎಂಥಾ ಸುಭಿಕ್ಷೆ ಇತ್ತಂತೆರೀ… ನಿಮಗೊತ್ತಾ? ಆಗ ವಿಜಯನಗರ ಸಾಮ್ರಾಜ್ಯದಲ್ಲಿ ಮುತ್ತು, ರತ್ನ, ಬಂಗಾರಗಳನ್ನ ತರಕಾರಿಗಳ ತರ ಸಂತೆಲಿ ಮಾರುತ್ತಿದ್ದರಂತೆ!" ಗುರು: "ಹೌದು, ಆದ್ರೆ ಆಗಿನ ಕಾಲಕ್ಕೆ ಈಗಿನ ಕಾಲಕ್ಕೆ ಅಷ್ಟೆಲ್ಲಾ ಡಿಫರನ್ಸು ಇಲ್ಲಾ ಬಿಡ್ರೀ." ಮೂ: "ಅಧೆಂಗ್ರೀಪಾ?" ಗು: "ಈಗ ತರಕಾರಿಗಳನ್ನ ಮುತ್ತು, ರತ್ನ, ಬಂಗಾರಗಳ ರೇಟಿನಲ್ಲಿ ಮಾರ್ತಾರೆ ಅಷ್ಟೆ!!" ಮೂ: "ಹ್ಹ ಹ್ಹ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಲ್ಲಿ ಕ್ರಿಕೆಟ್ಟು, ಲಗೋರಿ ಹಾಗೂ ಫೆರಾರಿ:ಪ್ರಶಸ್ತಿ ಅಂಕಣ

ಇತ್ತೀಚೆಗೆ ಹಿಂದಿಯ "ಫೆರಾರಿ ಕಿ ಸವಾರಿ" ಅನ್ನೋ ಚಿತ್ರ ನೋಡ್ತಾ ಇದ್ದಾಗ ಯಾಕೋ ಬಾಲ್ಯದ ದಿನಗಳು ಬೇಡವೆಂದರೂ ನೆನಪಾದವು. ಬಾಲ್ಯದ ನೆನೆಪುಗಳೆಂದ ತಕ್ಷಣ ನೆನಪಾಗಿದ್ದು ಶಾಲೆಯ ಮಾಸ್ತರೋ, ತಿಂದ ಏಟುಗಳೋ, ಸುತ್ತಿದ ನೆಂಟರ ಮನೆಗಳೋ, ಅಪ್ಪ-ಅಮ್ಮನ ಬೆಚ್ಚನೆ ಬೈಗುಳ/ಅಪ್ಪುಗೆಗಳೋ ಅಲ್ಲ. ಆ ಸಿನಿಮಾ ನೆನೆಸಿದ್ದು ನಮ್ಮ ಬಾಲ್ಯದ ಲಗೋರಿ, ಗೋಲಿ, ಕ್ರಿಕೆಟ್ಟುಗಳ ನೆನಪುಗಳನ್ನ. MRF, ಬ್ರಿಟಾನಿಯ ಬ್ಯಾಟುಗಳನ್ನ ಟೀವಿಯಲ್ಲಿ ಮಾತ್ರ ನೋಡುತ್ತಾ ನಮ್ಮದೇ ದಬ್ಬೆ (ಅಡಿಕೆ ಮರವನ್ನು ಕೊಯ್ದು ಮಾಡಿದ), ಮರದ ದಿಮ್ಮಿಯ ಬ್ಯಾಟುಗಳಲ್ಲಿ, ಅದೂ ಇಲ್ಲದಿದ್ದಾಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂದಾಜ್ ಅಪ್ನಾ ಅಪ್ನಾ:ವಾಸುಕಿ ರಾಘವನ್ ಅಂಕಣ

ಸಿನಿಮಾ ವಿಮರ್ಶಕ ರಾಜಾ ಸೇನ್ ಅವರು ಒಂದು ಆರ್ಟಿಕಲ್ ಅಲ್ಲಿ ಹೀಗೆ ಬರೆದಿದ್ದ ನೆನಪು. ಆಮೀರ್ ಖಾನ್ ಅವರ ಈ ಚಿತ್ರ ನೆನಪಿದೆಯಾ ನಿಮಗೆ? ಇದರಲ್ಲಿ ನಾಯಕಿಯನ್ನು ಅತಿಯಾಗಿ ಇಷ್ಟಪಡುವ ನಾಯಕ, ತಲೆಗೆ ಬಲವಾದ ರಾಡ್ ಇಂದ ಪೆಟ್ಟು ತಿಂದು, ತನ್ನ ನೆನಪಿನ ಶಕ್ತಿಯನ್ನು ಕಳೆದುಕೊಳ್ಳುತ್ತಾನೆ. ಇದರಿಂದಾಗಿ ಮುಂದೆ ಚಿತ್ರವಿಚಿತ್ರವಾದ ಘಟನೆಗಳು ಜರುಗಿ, ಅವನನ್ನು ಫಜೀತಿಗೆ ಒಡ್ಡುತ್ತವೆ. ಗೊತ್ತಾಯ್ತಾ? ನೀವೂ “ಘಜಿನಿ” ಅಂದು ಬಿಟ್ರಾ? ಛೆ! ಇದೇ ನೋಡಿ, ಈಗಿನ ನೂರು ಕೋಟಿ ಗಳಿಕೆಯ ಸಾಧಾರಣ ಚಿತ್ರಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 13): ಹನುಮಂತ ಹಾಲಿಗೇರಿ

(ಇಲ್ಲಿಯವರೆಗೆ) ಅವತ್ತು ಪೂರ್ತಿ ನಾನು ರೂಮಿನಲ್ಲಿ ಏಳಲೂ ಆಗದೆ ಮಲಗಲು ಆಗದೆ ಬಿದ್ದುಕೊಂಡಿದ್ದೆ. ಕಿವಿಯಲ್ಲಿ ಶಾರಿಯ ಮಾತುಗಳೆ ಗುಂಯ್ಗುಡುತ್ತಿದ್ದವು. ಒಂದಿಷ್ಟು ಮಂಪರು, ಒಂದಿಷ್ಟು ಅರೆ ಎಚ್ಚರ ಮತ್ತೆ ಮಂಪರು. ಶಾರಿ ಬದುಕಿನ ಗೋಳಿಗೆ ಇತಿಶ್ರೀ ಹಾಡುವುದೆಂತು ಎಂದು ಯೋಚಿಸಿದ್ದೇ ಬಂತು. ಒಮ್ಮೊಮ್ಮೆ ನೆಮ್ಮದಿಯಿಂದ ಇರುವ ನಾನು ಶಾರಿಯ ಗದ್ದಲದಲ್ಲಿ ಯಾಕೆ ಸಿಲುಕಿಕೊಳ್ಳಬೇಕು? ನಾನು ಮೊದಲಿನಂತಾಗಬೇಕಾದರೆ ಶಾರಿಯನ್ನು ಮತ್ತೆ ಭೇಟಿಯಾಗಲೇಬಾರದು ಎನಿಸಿತು. ಆದ್ರೆ ಮನಸ್ಸಿಗೆ ಒಗ್ಗಲಿಲ್ಲ. ವರದಿ ತಯಾರಿಸಿಕೊಂಡು ಬಾ ಎಂದ ರಾಜನ್ ಹೇಳಿದ್ದು ನೆನಪಾಯಿತು. ಈಗ ಆಗಿರೋದನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಗಿ ಕಾಗಿ ಕವ್ವಾ…:ಸುಮನ್ ದೇಸಾಯಿ ನಗೆ ಅಂಕಣ

ಮುಂಝಾನೆ ಹತ್ತು ಗಂಟೆ ಸುಮಾರ ನಾ ಆಫೀಸನ್ಯಾಗ ಇದ್ದೆ. ನಮ್ಮ ತಮ್ಮನ ಫೋನ್ ಬಂತು. ಇಗ ಇನ್ನ ಹೊಸದಾಗಿ ಮದುವಿ ಮಾಡಕೊಂಡಾನ. ಮದ್ವಿಕಿಂತಾ ಮದಲ ಯಾವಾಗರೆ ಒಮ್ಮೆ ಫೋನ್ ಮಾಡಾಂವಾ ಈಗೀಗ ಎರಡ ದಿನಕ್ಕ ಒಮ್ಮೆ ಮಾಡತಿದ್ದಾ. ತನ್ನ ಗೋಳ ತೋಡ್ಕೊತಿದ್ದಾ.  ಪಾಪ ಇತ್ಲಾಕಡೆ ಅಮ್ಮ ಮತ್ತ ಅತ್ಲಾಕಡೆ ಹೆಂಡ್ತಿ ಕೈಯ್ಯಾಗ ಸಿಕ್ಕು ’ಧೋಬಿ ಕಾ ಕುತ್ತಾ ನಾ ಘರ್ ಕಾ ನ ಘಾಟ್ ಕ’ ಅನ್ನೊಹಂಗ ಆಗಿತ್ತು ನನ್ನ ತಮ್ಮನ ಬಾಳು. ಆವತ್ತು ಫೋನ್ ಮಾಡಿದಾಗನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತುರುಬಿಗೆ ತರುಬಿದ ಮನಸು: ನಾಗರಾಜ ಅಂಗಡಿ

ನಾನು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಕನ್ನಡ ಪಾಠ ಮಾಡುತ್ತಿದ್ದೆ. ಅದು ಚಂದ್ರಶೇಖರ ಕಂಬಾರವರ ಆಹ್ವಾನವೆಂಬ ಪದ್ಯವನ್ನು  ವಿಶ್ಲೇಷಿಸುತ್ತಿರುವಾಗ ಆ ಪದ್ಯದಲ್ಲಿಯ ಒಂದು ಸಾಲು  ಹಳೆಯ ಪ್ರಕೃತಿಯ ತುರುಬು ಜಗ್ಗಿ ಆಚೆಗೆ ನೂಕಿ ಎಂಬುದು ಗಕ್ಕನೆ ನನ್ನ ಮನಸ್ಸು ತರುಣಿಯ ತುರುಬಿಗೆ ವಾಲಿಸಿತು. ಪಾಠವನ್ನು ಮುಗಿಸಿ ಬಂದ ಮೇಲೆ ತುರುಬಿನ ಬಗ್ಗೆಯೇ ಚಿಂತೆಯೇ ಶುರುವಾಯಿತು. ಹಾಗೆ ನೋಡಿದರೆ ಪಂಪನಿಂದ ಹಿಡಿದು ಕುವೆಂಪುವರೆಗೆ ಕೂದಲಿನ ಬಗ್ಗೆ ಬರೆಯದವರೇ ಇಲ್ಲವೆಂದು ಹೇಳಬೇಕು. ನಾರಿಗೆ ಗುಣವೇ ಶೃಂಗಾರವೆಂಬಂತೆ ನಾರಿಗೆ ಕೇಶವೇ ಶೃಂಗಾರವೆಂದು ಹೇಳಬಹುದು. ನಾರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ