ಗೆಜ್ಜೆಪೂಜೆ: ವಾಸುಕಿ ರಾಘವನ್ ಅಂಕಣ

  ಮನೆಯ ಮೇಲಿನ ಮಹಡಿಯ ಕೋಣೆಯಲ್ಲಿರುವ ಬಸುರಿ ಪಿಟೀಲಿನಲ್ಲಿ ವಿಷಾದಗೀತೆ ನುಡಿಸುತ್ತಿರುತ್ತಾಳೆ. ಕೆಳಮಹಡಿಯಲ್ಲಿ ಅವಳ  ಅಮ್ಮ ತಲೆಯ ಮೇಲೆ ಕೈ ಹೊತ್ತುಕೊಂಡು “ಅಯ್ಯೋ ಗಂಡು ಮಗು ಹುಟ್ಟಿಬಿಟ್ಟರೆ ಹೆಂಗಪ್ಪಾ?” ಅಂತ ಚಿಂತಾಕ್ರಾಂತಳಾಗಿ ಕುಳಿತಿರುತ್ತಾಳೆ. ಆಗಿನ ಕಾಲದ ಚಿತ್ರಗಳಲ್ಲಿ ಹೆಣ್ಣುಮಗು ಹುಟ್ಟಿದಾಕ್ಷಣ ಕುಟುಂಬದ ಕೆಲವರಾದರೂ ನಿರಾಶರಾಗುವ, ತಾಯಿ ಸಂತಸಗೊಂಡಿದ್ದರೂ ಸಂಭ್ರಮ ಪಡಲಾಗದೆ ಒದ್ದಾಡುವ ಸನ್ನಿವೇಶಗಳು ಅಪರೂಪವೇನಲ್ಲ. ಆದರೆ ಆಶ್ಚರ್ಯ ಅನ್ನುವಂತೆ ಇಲ್ಲಿನ ಸನ್ನಿವೇಶ ಅದಕ್ಕೆ ತದ್ವಿರುದ್ಧ. ನಂತರ ಹೆಣ್ಣುಮಗು ಚಂದ್ರಾ ಹುಟ್ಟಿದಾಗ ಅದರ ಅಜ್ಜಿ ಸಂಭ್ರಮಿಸುತ್ತಾಳೆ, ತಾಯಿ ಬೇಸರದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಿಕ್ಕ ಪುಟ್ಟ ಪದ್ಯಗಳು: ಅಶೋಕ ಶೆಟ್ಟರ್

  ೧. ಚರಿತ್ರೆಯ ತತ್ವವ ತಿಳಿಯ ಹೊರಟು ಜಗದ ಜಟಿಲ ದ್ವಂದ್ವಗಳ ಗೋಜಲಿನಲ್ಲಿ ಸಿಗೆಬಿದ್ದ ತತ್ವಜ್ಞಾನಿ ಹಾಲುಗಲ್ಲದ ಮೊಮ್ಮಗಳ ನಗೆಯ ಮಡುವಿನಲ್ಲಿ ಸುಳಿತಿರುಗಿ ಮುಗುಳ್ನಕ್ಕ   ೨. ಇಂದಿನ ನಡುಹಗಲ ಕಾಡಿನ ಮೌನ ಮನುಕುಲದ ಶೈಶವದ ಸಕಲ ತೊಳಲಾಟ ಕಳವಳ ದಿಗ್ಭ್ರಮೆ ನಲಿವು ಹಸಿ ಹಸಿ ಕಾಮ ಎಲ್ಲ ಮೇಳೈಸಿದ ಆದಿಮ ಸಂಗೀತ   ೩. ಶಬ್ದಗಳ ಭಾಷೆ, ಹೆಜ್ಜೆ – ಗೆಜ್ಜೆಗಳ ಭಾಷೆ ಲಯಗಳ, ರೇಖೆ ಬಣ್ಣಗಳ ಭಾಷೆ ಎಲ್ಲದರ ಹಂಗ ಹರಕೊಂಡು ಎರಡು ಜೋಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚೌತಿ ಹಬ್ಬ: ವೆಂಕಟೇಶ್ ಪ್ರಸಾದ್

ಕಳೆದ ನಾಲ್ಕು ದಿನಗಳಿಂದ ಮಳೆಯಿಲ್ಲದೆ ಬೇಸಿಗೆಯಂತಾಗಿದ್ದ ನನ್ನೂರು ಮೊನ್ನೆ ಶನಿವಾರ ಸುರಿದ ಹಠಾತ್ ಮಳೆಗೆ ಮತ್ತೆ ಮಳೆಗಾಲವನ್ನು ನೆನಪಿಸಿತ್ತು. ಚಹಾ ಕುಡಿಯುತ್ತ ಟೆರೆಸ್ನಲ್ಲಿ ಅಡ್ದಾಡುತ್ತಿದ್ದ ನನಗೆ ಪಕ್ಕದ ಶಾಲೆಯಿಂದ ತೇಲಿಬಂದ  ಗಜಮುಖನೇ ಗಣಪತಿಯೇ ನಿನಗೆ ವಂದನೇ ನಂಬಿದವರ ಬಾಳಿನ ಕಲ್ಪತರು ನೀನೇ ……. ಹಿನ್ನೆಲೆ ಸಂಗೀತ  ರಹಿತ ಎಸ್. ಜಾನಕಿ ಹಾಡು ಕ್ಷಣಕಾಲ ಆಶ್ಚರ್ಯವನ್ನುಂಟುಮಾಡಿತ್ತು. ಇದರ ಬೆನ್ನಿಗೆ ಬಂದ ಶರಣು ಶರಣಯ್ಯ …..  ಪಿ. ಬಿ . ಶ್ರೀನಿವಾಸ್ ಹಾಡು ಆಶ್ಚರ್ಯವನ್ನು ಇಮ್ಮಡಿಗೊಳಿಸಿತ್ತು!! ಇದೇನಪ್ಪಾ ನೋಡಿಬಿಡೋಣ ಎಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಧ್ಯಾಪಕನಾಗಿ ನನ್ನ ಅನುಭವ…: ಪ್ರಶಾ೦ತ ಕಡ್ಯ

ನನ್ನ ಮನಸ್ಸಿನಲ್ಲಿ ಬಾಲ್ಯದಲ್ಲೇ ನಾನೊಬ್ಬ ಶಿಕ್ಷಕನಾಗುವವನು ಎ೦ದು ಠಸೆ ಒತ್ತಿ ಆಗಿತ್ತು. ಚಿಕ್ಕ೦ದಿನಲ್ಲಿ ನನಗೆ ಗೋವಿ೦ದ ಮಾಸ್ಟರು ಆದರ್ಷರಾಗಿದ್ದರು. ಅವರು ಪಾಠಮಾಡುವ ರೀತಿ, ಬಯ್ಯುವ ರೀತಿ, ಮಕ್ಕಳು ಅವರನ್ನು ಗೌರವಿಸುವ ರೀತಿ ಎಲ್ಲವೂ ನನಿಗೆ ತು೦ಬಾ ಇಷ್ಟವಾಗಿದ್ದವು. ಆಗಲೇ ನಿರ್ಧಾರ ಮಾಡಿ ನಾನು ಅಧ್ಯಾಪಕ ವೃತ್ತಿಯನ್ನು ಆಯ್ಕೆಮಾಡಿದ್ದೆನು. ಬಾಲ್ಯದಿ೦ದಲೇ ಅದಕ್ಕೆ ಅನುಕೂಲವಾಗುವ೦ತೆಯೇ ನನ್ನ ತಯಾರಿಗಳಿದ್ದವು. ಅದಕ್ಕೆ ಸರಿಯಾಗುವ೦ತೆ ಒಳ್ಳೇ ಅ೦ಕಗಳನ್ನು ಪಡೆದು, ಅಧ್ಯಾಪಕನಾಗಲು ಬೇಕಾಗುವ ದಿಶೆಯಲ್ಲೇ ವ್ಯಾಸ೦ಗವನ್ನು ನಡೆಸಿದೆನು.   ವ್ಯಾಸ೦ಗ ಮಾಡಬೇಕಿದ್ದರೆ ಮನದಲ್ಲಿ ತು೦ಬಾ ಅಳುಕಿತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೋಪಾಗ್ನಿಕುಂಡ: ಪ್ರಶಸ್ತಿ ಬರೆವ ಅಂಕಣ

  ಓದುಗ ಮಿತ್ರರಿಗೆಲ್ಲಾ ಗೌರಿ ಗಣೇಶ ಹಬ್ಬದ ಶುಭಾಶಯಗಳು. ನೀವು ಈ ಲೇಖನ ಓದೋ ಹೊತ್ತಿಗೆ ನಿಮ್ಮ ಮನೆಗೆ ಗಣಪತಿ ಬಂದಿರಬಹುದು. ಮನೆಯಲ್ಲಿ ಗಣಪತಿ ತರದಿದ್ದರೂ ನೆಂಟರ ಮನೆಯ, ಬೀದಿಯಲ್ಲಿಟ್ಟ ಗಣಪತಿ ಪೆಂಡಾಲಿನ, ಮೈಕಿನ , ಟೀವಿಗಳ ಕಲರ್ ಕಲರ್ ವಾರ್ತೆ, ಶುಭಾಶಯ, ಸ್ನೇಹಿತರ ಶುಭ ಹಾರೈಕೆಗಳಿಂದ, ಮಕ್ಕಳಿಗೆ ಸಿಕ್ಕಿರೋ ಹಬ್ಬದ ರಜೆಯಿಂದ.. ಹೀಗೆ ತರಹೇವಾರಿ ತರದಿಂದ ಹಬ್ಬದ ಕಳೆ ಮೂಡಿರಬಹುದು.ಹಬ್ಬಕ್ಕೆ ಬಸ್ ಬುಕ್ ಮಾಡಲಾಗದೇ, ಸಿಕ್ಕಾಪಟ್ಟೆ ರಶ್ಷಿನ ಬಸ್ಸು, ಟ್ರೈನುಗಳಲ್ಲಿ ಎದ್ದೂ ಬಿದ್ದು ಬೇರೆ ಊರಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೌನರಾಗದ ನೆನಪ ಜೋಗುಳದಲಿ: ದಿವ್ಯ ಟಿ.

ಯಾಕೋ ಬೇಸರವಾಗುತ್ತಿದೆ ಎಂದು ರಾತ್ರಿ ಬೇಗ ಮಲಗಿದವಳಿಗೆ ನಿದ್ರೆಯೂ ಬರುತ್ತಿರಲಿಲ್ಲ. ಒಂದೆರೆಡು ಹಾಡು ಕೇಳುತ್ತಾ ಹಾಗೆಯೇ ಮಲಗಿಬಿಟ್ಟಿದ್ದೆ. ಒಂದು ಗಂಟೆಯ ನಂತರ ಸರಿಯಾಗಿ 12.10ಕ್ಕೆ ಎಚ್ಚರಿಕೆಯಾಯಿತು. ನಿಶ್ಚಿಂತೆಯಿಂದ ಮಲಗಿದ ಕೊಠಡಿಯಲ್ಲಿ ಗಡಿಯಾರದ ಟಿಕ್ ಟಿಕ್ ಸದ್ದು, ಫ್ಯಾನ್ ಗಾಳಿಯ ಸದ್ದು ಬಿಟ್ಟರೆ ಬೇರೆನೂ ಇಲ್ಲ. ವಾಹನಗಳ ಸದ್ದಿನಿಂದ ಗಿಜಿ ಗಿಜಿ ಎನ್ನುತ್ತಿದ್ದ ರಸ್ತೆಯೂ ಮೌನವಾಗಿದೆ. ಅಲ್ಲೆಲ್ಲೋ ಇರುವ ರೈಲ್ವೆ ಹಳಿಯ ಮೇಲೆ ಸಂಚರಿಸುತ್ತಿರುವ ರೈಲಿನ ಸದ್ದು ಗಾಳಿಯಲ್ಲಿ ತೇಲಿ ಬರುತ್ತಿದೆ. ಇತ್ತೀಚಿಗೆ ಎಚ್ಚರವಾಗುವುದು ನಿದ್ರೆಯಿಲ್ಲದೆ ಹೊರಳಾಡುವುದು ಸಾಮಾನ್ಯವಾಗಿದ್ದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುರಿಯುವ ಫುಕೊಶಿಮ-ಎರವಾಗಲಿರುವ ಕೊಡಂಕುಳಂ: ಅಖಿಲೇಶ್ ಚಿಪ್ಪಳಿ ಅಂಕಣ

ಫುಕೊಶಿಮ ಅಣು ದುರಂತದ ಬೆನ್ನಲ್ಲೆ ಬಹಳಷ್ಟು ಅವಘಡಗಳು ಅಲ್ಲಿ ಸಂಭವಿಸುತ್ತಿವೆ. ಇದೀಗ ಹೊಸದಾಗಿ ಸೇರ್ಪಡೆಯೆಂದರೆ, ಅಣು ರಿಯಾಕ್ಟರ್‍ಗಳ ಬಿಸಿಯನ್ನು ತಣ್ಣಗಾಗಿಸುವ ನೀರಿನ ಭದ್ರವಾದ ಟ್ಯಾಂಕ್‍ಗಳ ಸೋರಿಕೆ. ಬಳಕೆಯಾದ ವಿಕಿರಣಯುಕ್ತ ನೀರಿನ ಟ್ಯಾಂಕ್ ಸೋರಿಕೆಗೊಂಡು ಪೆಸಿಫಿಕ್ ಸಮುದ್ರಕ್ಕೆ ಸೇರಿದೆ. 2011ರ ಬೀಕರ ಸುನಾಮಿ ಮತ್ತು ಭೂಕಂಪ ಜಪಾನಿನ ಪುಕೊಶಿಮಾದ ಅಣು ಸ್ಥಾವರಗಳನ್ನು ಹಾಳುಗೆಡವಿ ಅಂತಾರಾಷ್ಟ್ರೀಯ ಬಿಕ್ಕಟ್ಟನ್ನುಂಟುಮಾಡಿತ್ತು. ಈಗಾಗಲೇ 8 ಟ್ಯಾಂಕಿನಿಂದ ಸುಮಾರು 300 ಟನ್‍ಗಳಷ್ಟು ವಿಕಿರಣಯುಕ್ತ ನೀರು ಸೋರಿಕೆಯಾಗಿದೆ ಎಂದು ಬಿಬಿಸಿ ವರದಿ ಮಾಡಿದೆ. ಸೋರಿಕೆಯಾದ ಜಾಗದಿಂದ 50 … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 10): ಹನುಮಂತ ಹಾಲಿಗೇರಿ

  ಇಲ್ಲಿಯವರೆಗೆ   ಅವತ್ತು ಹಾಗೆ ಆತ್ಮೀಯಳಾದ ಅವಳು ಸ್ವಲ್ಪ ದಿನಗಳವರೆಗೆ ಆಶ್ರಯದಾತಳು ಆದಳು. ತನ್ನ ಕಥೆಯನ್ನೆಲ್ಲ ಹೇಳಿಯಾದ ಮೇಲೆ ನನ್ನ ಕಥೆಯನ್ನು ಕೇಳಿದ ಅವಳು, ನಾನು ಕೂಡ ದಂಧÉಗೆ ಹಳಬಳೇ ಎಂಬುದನ್ನು ಅರ್ಥ ಮಾಡಿಕೊಂಡಾದ ಮೇಲೆ ‘ನಮ್ಮ ರತ್ನಮ್ಮನ ದಂಧೆಮನೆಗೆ ನೀನು ಸೈತ ಬರುವುದಾದರೆ ಬಾ' ಎಂದು ಕರೆದಳು. ಮರುಕ್ಷಣ ‘ಬೇಡ ಬೇಡ ನನ್ನ ಮಗನಿಗಾದ ದುರ್ಗತಿಯೇ ನಿನ್ನ ಮಗಳಿಗೂ ಆಗಬಹುದು, ಇಲ್ಲವೇ ನಿನ್ನ ಮಗಳನ್ನು ಸ್ವಲ್ಪ ದೊಡ್ಡವಳಾದ ತಕ್ಷಣವೆ ದಂಧೆಗೆ ಇಳಿಸಿಬಹುದು. ಈ ಕೂಪದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-19) : ಹಿಪ್ಪರಗಿ ಸಿದ್ದರಾಮ್, ಧಾರವಾಡ

ಆತ್ಮೀಯ ಓದುಗಪ್ರಭುಗಳೇ, ಇಲ್ಲಿಯವರೆಗೆ ನಾವು ಕವಿ ಹೃದಯದ ಮಹಾಕವಿ ಕುವೆಂಪುರವರ ಪೌರಾಣಿಕ, ಐತಿಹಾಸಿಕ ಮತ್ತು ಸಾಮಾಜಿಕ ಕಥಾವಸ್ತುಗಳೊಂದಿಗೆ ಅವರ ವಾಙ್ಮಯದ ವಿಸ್ತಾರತೆಯಲ್ಲಿ ಅರಳಿದ ರಂಗ(ಕೃತಿ)ಕುಸುಮಗಳು ಕರುನಾಡಿನ ಸಾಹಿತ್ಯದ ಸಂದರ್ಭದಲ್ಲಿ ಮಹತ್ವಪೂರ್ಣವಾಗಿರುವುದನ್ನು ನಾವೀಗಾಗಲೇ ಗಮನಿಸಿದ್ದೇವೆ. ಅವರ ರಂಗಕೃತಿಗಳು ರಚನೆಯಾದಂದಿನಿಂದ (ಶತಮಾನದುದ್ದಕ್ಕೂ) ವಿಶ್ವದ ಹಲವೆಡೆ ಅನೇಕ ಸಾಂಸ್ಕೃತಿಕ ವಾಗ್ವಾದಗಳಿಗೆ ಎಡೆಮಾಡಿಕೊಡುವುದರೊಂದಿಗೆ ತಮ್ಮ ತಾಜಾತನವನ್ನು ಕಾಪಿಟ್ಟುಕೊಂಡಿವೆ. ಹಾಗೆಯೇ ರಂಗಕೃತಿಗಳ ವಸ್ತು, ಭಾಷೆ, ಪಾತ್ರ, ಸನ್ನಿವೇಶಗಳನ್ನು ಮಾತ್ರ ಗಮನಿಸದೆ ಅವುಗಳ ರೂಪಕ, ಅರ್ಥ, ಅನುಸಂಧಾನ ಮತ್ತು ಮುನ್ನೋಟಗಳನ್ನು ನಾವು ಹೆಚ್ಚು ಹೆಚ್ಚು ಅರ್ಥಮಾಡಿಕೊಂಡಂತೆಲ್ಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಮನ್ ದೇಸಾಯಿ ಅಂಕಣದಲ್ಲಿ ನೆನಪಿನ ಲಹರಿ…

ಒಂದ ವಾರ ಹಚ್ಚಿ ಹೊಡದ ಮಳಿ ಅವತ್ತ ಒಂದ ಸ್ವಲ್ಪ ಹೊರಪಾಗಿತ್ತು. ಇಡಿ ದಿನಾ ಬಿದ್ದ ಬಿಸಲಿಂದ ಹಸಿಯಾಗಿದ್ದ ನೆಲ ಎಲ್ಲ ಒಣಗಿ ಬೆಚ್ಚಗಿನ ವಾತಾವರಣ ಇತ್ತು. ಒಂದ ವಾರದಿಂದ ಮನ್ಯಾಗ ಕೂತು ಕೂತು ಬ್ಯಾಸರಾಗಿತ್ತು. ಸಂಜಿಮುಂದ ವಾಕಿಂಗ್ ಹೋಗಬೇಕನಿಸಿ ನಮ್ಮ ಕಾಲೋನಿಯೊಳಗಿದ್ದ ಪಾರ್ಕಿಗೆ ಮಕ್ಕಳನ್ನ ಕರಕೊಂಡು ಹೋದೆ. ಅದೊಂದು ಸಣ್ಣ ಪಾರ್ಕು. ಅಷ್ಟರೊಳಗನ ಮಕ್ಕಳಿಗೆ ಆಡಲಿಕ್ಕೆ ಜಾರಬಂಡಿ, ಜೋಕಾಲಿ, ಒಂದ ಸಣ್ಣ ಪರ್ಣಕುಟಿರ, ಹೆಣ್ಣಮಕ್ಕಳಿಗೆ ಒಂದ ಕಡೆ ಗುಂಪಾಗಿ ಕೂತು ಹರಟಿಹೊಡಿಲಿಕ್ಕೆ ಹೇಳಿ ಮಾಡಿಸಿದಂಗ ಸುತ್ತಲೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅವಳು!: ಗುರುಪ್ರಸಾದ ಕುರ್ತಕೋಟಿ

  ಇವತ್ತಿಗೆ ಸರಿಯಾಗಿ ಆರು ವರುಷಗಳ ಹಿಂದೆ ನಾನವಳ ಭೇಟಿಯಾಗಿದ್ದೆ. ಮೊದಲ ನೋಟದಲ್ಲೇ ಅವಳಲ್ಲಿ ಅನುರಕ್ತನಾದೆ. ಅವಳಲ್ಲಿ ತುಂಬಾ ಇಷ್ಟವಾಗಿದ್ದು ಅವಳ ಸ್ನಿಗ್ಧ ಸೌಂದರ್ಯ ಹಾಗು ಅವಳ ಬಣ್ಣ! ಅವತ್ತೇ ಅವಳನ್ನು ಮನೆಗೆ ಕರೆದುಕೊಂಡು ಬಂದಿದ್ದೆ. ಅಪ್ಪ ಎಂದಿನಂತೆ ಬೈದಿದ್ದ. ನಾನವಳನ್ನು ಕರೆದುಕೊಂಡು ಬಂದಿದ್ದು ಅವನಿಗೆ ಸುತಾರಾಮ್ ಇಷ್ಟವಿರಲಿಲ್ಲ. ಆತ ನನ್ನ ಮೇಲೆ ಕೋಪಗೊಂಡಿದ್ದು ಸ್ಪಷ್ಟವಾಗಿತ್ತು. ಆದರೆ ಮುಂದೆ ಎಲ್ಲಾ ಸರಿ ಹೋಗುವುದೆಂಬ ಭರವಸೆ ನನಗೆ. ಅವತ್ತಿಗೆ ಅವನಿಗೆ ಎದುರು ಮಾತನಾಡದೇ ಸುಮ್ಮನಿದ್ದೆ. ಆದರೆ ನನಗಿದ್ದ ದೊಡ್ಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆನೆ ನೆನೆ ಮನವೆ: ಟಿ.ಕೆ.ನಾಗೇಶ್

ತೊದಲು ನುಡಿಯಿಂದ ಮೊದಲುಗೊಂಡು ನನ್ನ ಜೀವನ ರೂಪಿಸಿಕೊಳ್ಳುವವರೆಗೂ ನನ್ನನ್ನು ತಿದ್ದಿ ತೀಡಿ ನನಗೆ ವಿದ್ಯಾದಾನ ಮಾಡಿದ ನನ್ನ ಎಲ್ಲಾ ಶಿಕ್ಷಕರಿಗೂ ಹಾಗು ತಂದೆ ತಾಯಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ನಾನು ಒಬ್ಬ ಶಿಕ್ಷಕನಾಗಿ ಈ ದಿನ ನನ್ನ ನೆಚ್ಚಿನ ಶಿಕ್ಷಕರೊಬ್ಬರನ್ನು ನೆನೆ ನೆನೆದು ನನ್ನ ಪೂಜ್ಯ ಪ್ರಣಾಮಗಳನ್ನು ತಿಳಿಸಲು ಇಚ್ಚಿಸುತ್ತೇನೆ.  ಸಾವಿರದ ಒಂಬೈನೂರ ಎಂಬತ್ತೇಳರಲ್ಲಿ ನಾನು ಶಾಲೆಗೆ ಸೇರಿದ್ದು. ಶಿಕ್ಷಕರು ನಿವೃತ್ತಿಯ ಹಂತ ತಲುಪಿದ್ದರೂ ಬೆಳಿಗ್ಗೆ ನನ್ನ ಸ್ಲೇಟಿನಲ್ಲಿ ಮೂರು ಅಕ್ಷರಗಳನ್ನು ಬರೆದುಕೊಟ್ಟರೆ ಸಂಜೆಯವರೆಗೂ ಅದೇ ಅಕ್ಷರಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಂಗಾರದಕ್ಕಿ ಮತ್ತು ಇತರೆಗಳು:ಅಖಿಲೇಶ್ ಚಿಪ್ಪಳಿ ಅಂಕಣ

 ವಿಟಮಿನ್ ಎ ಕೊರತೆಯಿಂದ ಪ್ರಪಂಚದಲ್ಲಿ ಪ್ರತಿವರ್ಷ ೨೦ ಲಕ್ಷ ಜನ ಸಾಯುತ್ತಾರೆ ಮತ್ತು ೫ ಲಕ್ಷ ಮಕ್ಕಳು ಕುರುಡರಾಗುತ್ತಿದ್ದಾರೆ ಎಂಬುದೊಂದು ಅಂಕಿ-ಅಂಶ. ವಿಟಮಿನ್ ಎ ಮನುಷ್ಯ ದೇಹಕ್ಕೆ ಅಗತ್ಯವಾಗಿ ಬೇಕಾಗುವ ಜೀವಸತ್ವ. ವಿಟಮಿನ್ ಎ ಕೊರತೆಯು ಮುಖ್ಯವಾಗಿ ಕಣ್ಣಿನ ಮೇಲಾಗುತ್ತದೆ ಎಂಬುದು ಆರೋಗ್ಯ ವಿಜ್ಞಾನ ಕಂಡುಕೊಂಡಿರುವ ಸತ್ಯ. ಏರುತ್ತಿರುವ ಜನಸಂಖ್ಯೆ, ಬಡತನ ಇತ್ಯಾದಿ ಕಾರಣಗಳಿಂದಾಗಿ ಬಡವರ ಮಕ್ಕಳಿಗೆ ವಿಟಮಿನ್ ಎ ಕೊರತೆಯಾಗಿ ಕಾಡುತ್ತದೆ ಮತ್ತು ಇದರಿಂದಾಗಿ ಪ್ರಪಂಚದ ಮೇಲೆ ತೀವ್ರವಾದ ಪರಿಣಾಮವಾಗುತ್ತದೆ. ಹೆಚ್ಚಿನ ಬಡ ಮಕ್ಕಳು ದೃಷ್ಟಿಮಾಂದ್ಯರಾದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರೂಪಾಯಿ, ಪೆಟ್ರೋಲು ಮತ್ತು ಸ್ವದೇಶಿ:ಪ್ರಶಸ್ತಿ ಬರೆವ ಅಂಕಣ

ರೂಪಾಯಿ ಮೌಲ್ಯ ಅಪಮೌಲ್ಯ ಆಗ್ತಾ ಆಗ್ತಾ ಅದ್ರ ಬೆಲೆ ಅರವತ್ತೆಂಟು ದಾಟಾಯ್ತು.. ಇನ್ನಾದ್ರೂ ನಾವು ಎಚ್ಚೆತ್ತಿಲ್ಲ. ಮನೆಗೊಂದು ಕಾರು, ತೆಲೆಗೊಂದು ಬೈಕು ಅಂತ ಜುಂ ಜಾಮಾಗಿರೋ ನಾವು ನಮ್ಮೀ ವೈಭವದಿಂದಲೇ ಪೆಟ್ರೋಲ್ ದರ ಗಗನಕ್ಕೇರಿರೋದು ಅಂತಲೂ ತಿಳೀತಿಲ್ಲ. ಪೆಟ್ರೋಲ್ ಬೆಲೆ ಏನಾದ್ರಾಗ್ಲಿ, ಅದ್ರಿಂದ ಡಾಲರ್ ದರ ಅರವತ್ತಲ್ಲ ನೂರು ಮುಟ್ಟಿದ್ರೂ ನಮಗೇನು ಅಂದ್ರಾ ? ಡಾಲರ್ ದರ ಹೆಚ್ಚಾದಷ್ಟೂ ಟೆಕ್ಕಿಗಳಿಗೆ, ರಫ್ತು ಮಾಡೋರಿಗೆ ಲಾಭವೇ ಅಲ್ವಾ ? ದೇಶಕ್ಕೇನಾದ್ರೆ ನಮಗೇನು ಅಂದ್ರಾ ? ! ರಫ್ತೆಂದರೆ ಚೀನಾದಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಣೇಶ-ಕಲ್ಲೋಳ ಹಾಸ್ಯದ್ವಯರ ಸಂಗಮ:ಗುಂಡೇನಟ್ಟಿ ಮಧುಕರ ಕುಲಕರ್ಣಿ

ಸುಮಾರು ಹತ್ತು ವರ್ಷಗಳ ಹಿಂದೆ ಹಾಸ್ಯಲೇಖಕ ಅನಂತ ಕಲ್ಲೋಳರಿಂದ ಒಂದು ಕಾಗದ ನನಗೆ ಬಂದಿತ್ತು. ನಾನೊಂದು ಕಾರ್‍ಯಕ್ರಮದಲ್ಲಿ ಯುವಕನೊಬ್ಬನ ಹಾಸ್ಯ ಭಾಷಣವನ್ನು ಕೇಳಿದೆ, ತುಂಬಾ ಚನ್ನಾಗಿ ಮಾತನಾಡುತ್ತಾರೆ. ಜನ ಬಿದ್ದು ಬಿದ್ದು ನಕ್ಕರು. ನೀವು ’ಕ್ರಿಯಾಶೀಲ ಬಳಗ’ದಿಂದ ಆ ಯುವ ಹಾಸ್ಯಭಾಷಣಕಾರನ ಕಾರ್‍ಯಕ್ರಮವನ್ನಿಟ್ಟುಕೊಳ್ಳಬೇಕು. ಬೆಳಗಾವಿ ಜನರಿಗೆ ಅವರ ಭಾಷಣವನ್ನು ಕೇಳುವ ಅವಕಾಶ ಮಾಡಿಕೊಡಿ ಎಂದು ಕಾಗದ ಬರೆದಿದ್ದರು. ಅನಂತ ಕಲ್ಲೋಳರ ಪತ್ರದಲ್ಲಿ ಬರೆದಿರುವಂತೆ ಮುಂದೆ ನಗರದ ಸಾಹಿತ್ಯ ಭವನದಲ್ಲಿ ಆ ನಗೆಭಾಷಣಕಾರನ ಭಾಷಣವನ್ನಿಟ್ಟುಕೊಂಡಿದ್ದೆವು. ಅಂದು ಸಾಹಿತ್ಯ ಭವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರತ್ನನ ಪರ್ಪಂಚದಲ್ಲಿ ಉಪ್ಪಿ ಚಪ್ಪರಿಸಿದ ಉಪ್ಗಂಜಿ:ಹೃದಯಶಿವ ಅಂಕಣ

ರಾಜರತ್ನಂ ಬೀದಿಯಲ್ಲಿ ಅಡ್ಡಾಡುತ್ತಾ… ಟಿ.ಪಿ. ಕೈಲಾಸಂ ಗ್ರಾಮ್ಯಭಾಷೆಯನ್ನು ನಾಟಕಗಳಲ್ಲಿ ತಂದರೆ ಜಿ.ಪಿ. ರಾಜರತ್ನಂ ರವರು ಕಾವ್ಯಕ್ಕೆ ತಂದವರು. ಬಡತನದಲ್ಲಿ ಹುಟ್ಟಿ ಬೆಳೆದು ವಿದ್ಯಾಭ್ಯಾಸಕ್ಕಾಗಿ ಪಡಬಾರದ ಕಷ್ಟಪಟ್ಟು ಸಾಂಸಾರಿಕ ಕಷ್ಟಗಳ ನಡುವೆಯೇ ಆಶಾವಾದಿತ್ವ ಸಾರುವ ರತ್ನನ ಪದಗಳನ್ನು ರಚಿಸಿದ ರಾಜರತ್ನಂ 1904ರಲ್ಲಿ ಮೈಸೂರಿನಲ್ಲಿ ಜನಿಸಿ 1938 ರಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ ಇವರು 1979 ರಲ್ಲಿ ತೀರಿಕೊಂಡರು. ಶಾಂತಿ ಮೊದಲಾದ ಗ್ರಂಥಸ್ಥ ಭಾಷೆಯ ರೀತಿ ರಚನೆಗಳಿಂದ ಹೊರಬಂದು ಬೇಂದ್ರೆಯವರಂತೆ ಗ್ರಾಮೀಣ ಸೊಗಡಿನ ಸ್ಪರ್ಶದೊಂದಿಗೆ ವಿದ್ಯಾರ್ಥಿದೆಸೆಯಲ್ಲಿದ್ದಾಗಲೇ ರಾಜರತ್ನಂ ರಚಿಸಿದ 'ಯೆಂಡ್ಕುಡ್ಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮುಗ್ಧತೆ, ಭೀಕರತೆಯ ನಡುವಿನ ಬೇಲಿ:ವಾಸುಕಿ ರಾಘವನ್ ಅಂಕಣ

ಆರು ಮಿಲಿಯನ್. ಅಂದರೆ ಅರವತ್ತು ಲಕ್ಷ! ಅರವತ್ತು ಲಕ್ಷದಲ್ಲಿ ಎಷ್ಟು ಸೊನ್ನೆ ಎಂದು ಥಟ್ ಅಂತ ಕೇಳಿದರೆ ಒಂದು ಕ್ಷಣ ನೀವೂ ತಡವರಿಸುತ್ತೀರ. ಈ ಸಂಖ್ಯೆಯ ಅಗಾಧತೆ ಗೊತ್ತಾಗಬೇಕಾದರೆ ಅರವತ್ತು ಲಕ್ಷ ಜನರನ್ನು ಊಹಿಸಿಕೊಳ್ಳಿ. ಅದು ಎರಡನೇ ವಿಶ್ವಮಹಾಯುದ್ಧದಲ್ಲಿ ಬರ್ಬರವಾಗಿ ಕೊಲ್ಲಲ್ಪಟ್ಟ ಯಹೂದಿಗಳ ಸಂಖ್ಯೆ! ಒಂದು ಅಣುಬಾಂಬು ಹಾಕಿ ಅಷ್ಟೂ ಜನರನ್ನು ಕೊಂದಿದ್ದರೆ ಅದನ್ನು ಯುದ್ಧಕಾಲದ ವಿವೇಚನಾರಹಿತ ನಿರ್ಧಾರ ಅನ್ಕೊಬೋದಿತ್ತು. ಆದರೆ ವ್ಯವಸ್ಥಿತವಾಗಿ ಯಹೂದಿಗಳ ಮನೆ, ಆಸ್ತಿ ಎಲ್ಲವನ್ನೂ ವಶಪಡಿಸಿಕೊಂಡು, ಅವರನ್ನು ಸ್ಥಳಾಂತರಿಸಿ, ಸರಿಯಾಗಿ ಊಟ ಕೊಡದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೌಲ್ ಬುರ್ರೆಲ್ ಎಂಬ ಡಯಾನಾರ ತೆರೆಮರೆಯ ತಾರೆ: ಪ್ರಸಾದ್ ಕೆ.

ಕೆಲವೊಂದು ಮುಖಗಳೇ ಹಾಗಿರುತ್ತವೆ. ವರ್ಷಗಳು ಸಂದು ಹೋದರೂ, ಪೀಳಿಗೆಗಳು ಕಳೆದರೂ "ಐಕಾನ್" ಎನಿಸಿಕೊಳ್ಳುತ್ತವೆ. ವಿನ್ಸ್‍ಟನ್ ಚರ್ಚಿಲ್ ಸಿಗಾರ್ ಸೇದುತ್ತಾ ರಾಜಭಂಗಿಯಲ್ಲಿ ಕುಳಿತ ಕಪ್ಪು ಬಿಳುಪು ಛಾಯಾಚಿತ್ರ ಈಗಲೂ ಆ ದಂತಕಥೆಗೆ ಮೆರುಗನ್ನು ನೀಡುತ್ತದೆ. ಮರ್ಲಿನ್ ಮನ್ರೋರ ಮಾದಕ ನಗುಮುಖಕ್ಕೆ ಮರ್ಲಿನ್ ಮನ್ರೋರೇ ಸಾಟಿ. ಇಂತಹ ವಿಶಿಷ್ಟ ಮುಖಗಳ ಬಗ್ಗೆ ಮಾತನಾಡುವಾಗ ಮೊದಲಿಗೆ ಮನಸ್ಸಿನಲ್ಲಿ ಹಾದುಹೋಗುವ ಚಿತ್ರ ಬ್ರಿಟನ್ನಿನ ರಾಜಕುಮಾರಿ ಡಯಾನಾರದ್ದು. ಪ್ರಪಂಚದಲ್ಲೇ ಅತೀ ಹೆಚ್ಚು ಬಾರಿ ಛಾಯಾಚಿತ್ರೀಕರಿಸಲ್ಪಟ್ಟ ಮಹಿಳೆಯೆಂದರೆ ರಾಜಕುಮಾರಿ ಡಯಾನಾ. ತನ್ನ ಜೀವಿತಾವಧಿಯಲ್ಲಿ ವಿಶಿಷ್ಟ ಕಾರ್ಯವೈಖರಿ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ