ನಾಟಕಕಾರರಾಗಿ ಕುವೆಂಪು (ಭಾಗ-17) : ಹಿಪ್ಪರಗಿ ಸಿದ್ದರಾಮ್, ಧಾರವಾಡ
ಆತ್ಮೀಯ ಓದುಗಪ್ರಭುಗಳೇ, ಕಳೆದ ಸಂಚಿಕೆಯಲ್ಲಿ ಮಹಾಕವಿಗಳ ಸಾರ್ವಕಾಲಿಕ ಸರ್ವಶ್ರೇಷ್ಟ ರಂಗಕೃತಿಗಳಲ್ಲಿಯೇ ವಿಭಿನ್ನ ಕಥಾವಸ್ತುವನ್ನು ಹೊಂದಿರುವ ಮತ್ತು ಆಧುನಿಕ/ಇಂದಿನ ಕಾಲದಲ್ಲಿ ಜಾಣ್ಮೆ, ವಿದ್ಯೆ ಮುಂತಾದ ಸಂಗತಿಗಳು ಕೇವಲ ಉನ್ನತ ಕುಲದವರ ಸ್ವತ್ತಲ್ಲ, ಅದು ಸ್ಥಾಪಿತ ಸ್ವ-ಹಿತಾಸಕ್ತಿಯ ಬಂಧನಕ್ಕೊಳಗಾಗುವುದಿಲ್ಲ ಮುಂತಾದ ಅಂಶಗಳ ಕುರಿತು ಆತ್ಮಾವಲೋಕನಕ್ಕೆ ಗುರಿಪಡಿಸುವ ‘ಜಲಗಾರ’ ಕೃತಿಯ ಕುರಿತು ತಿಳಿದುಕೊಂಡಿದ್ದೇವೆ. ಹಾಗೆ ನೋಡಿದರೆ ‘ಜಲಗಾರ’ ರಂಗಕೃತಿಯ ವಸ್ತು ವರ್ಣ-ವರ್ಗಗಳ ಸಂಘರ್ಷದ ನೆಲೆಯಾಗಿದೆ. ‘ಜಲಗಾರ’ ಇಲ್ಲಿ ಪರಂಪರೆಯ ಶೋಷಣೆಯ ಎಲ್ಲಾ ಮಗ್ಗಲುಗಳನ್ನು ಅರಿತವನು. ಅದರಿಂದ ಬಿಡುಗಡೆ ಪಡೆದು ತನ್ನ ಜೀವನದಲ್ಲಿ … Read more