ಕನಸುಗಾರನ ಒಂದು ಸುಂದರ ಕನಸು: ನಟರಾಜು ಎಸ್. ಎಂ.

ಜನವರಿ ತಿಂಗಳ ಒಂದು ದಿನ ನಾಟಕವೊಂದನ್ನು ನೋಡಲು ಬರುವಂತೆ ಹುಡುಗನೊಬ್ಬ ಆಮಂತ್ರಣ ನೀಡಿದ್ದ. ಆ ದಿನ ಸಂಜೆ ಆರು ಗಂಟೆಗೆ ಜಲ್ಪಾಯ್ಗುರಿಯ ಆರ್ಟ್ ಗ್ಯಾಲರಿ ತಲುಪಿದಾಗ ಆ ಕಲಾಮಂದಿರವನ್ನು ನೋಡಿ ನಾನು ಅವಕ್ಕಾಗಿದ್ದೆ. ಆ ಪುಟ್ಟ ಊರಿನಲ್ಲಿ ಅಷ್ಟೊಂದು ದೊಡ್ಡ ಸುಸಜ್ಜಿತ ಕಲಾಮಂದಿರವಿರುವುದ ಕಂಡು ಖುಷಿ ಸಹ ಆಗಿತ್ತು. ಸುಮಾರು ಎಂಟುನೂರು ಜನ ಕೂರುವಷ್ಟು ಜಾಗವಿರುವ ಇಡೀ ಕಲಾಮಂದಿರ ಜನರಿಂದ ಕಿಕ್ಕಿರಿದು ತುಂಬಿತ್ತು. ಎಷ್ಟೋ ವರ್ಷಗಳ ನಂತರ ನಾಟಕವೊಂದನ್ನು ನೋಡಲು ಹೋಗಿದ್ದೆ. ನಾಟಕ ನೋಡುತ್ತಿದ್ದೇನೆ ಎಂಬ ಖುಷಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 2): ಹನುಮಂತ ಹಾಲಿಗೇರಿ

ನನ್ನ ಈ ನೌಕರೀ ಬಗ್ಗೆ ಹೇಳೋ ಮುನ್ನ ನನ್ನನ್ನು ಬಾಳಷ್ಟು ಕಾಡಿಸಿ ಪೀಡಿಸಿ ಬದಲಾವಣೆಗೆ ಕಾರಣಾದ ನನ್ನ ಕುಟುಂಬದ ಹಿನ್ನೆಲೆಯ ಬಗ್ಗೆ ಸ್ವಲ್ಪ ಮೊದಲಾ ಹೇಳಿದರೆ ಒಳ್ಳೇದು. ಬಾಗಲಕೋಟಿಯ ಭೀಮನಕೊಪ್ಪ ಅನ್ನೋ ಕುಗ್ರಾಮದ ಮ್ಯಾಲ ಯಾರಾದರೂ ವಿಮಾನದಾಗ ಬಂದ್ರ, ಆ ಊರಿನ ಅಂಚಿನಲ್ಲಿ ನನ್ನ ದಲಿತ ಕೇರಿಯ ಗುಡಿಸಲಗೊಳು ಒತ್ತೊತ್ತಾಗಿ ಚಲ್ಲಿಕೊಂಡಿರುವುದು ಕಾಣಿಸತೈತಿ. ಆ ಗುಡಿಸಲುಗಳ ನಡುವು ಒಂದು ಮಂಗಳೂರು ಹೆಂಚಿನ ಅರಮನೆಯಂಥ ಮನಿ ಎದ್ದು ಕಾಣುತೈತಿ. ಅದು ನನ್ನವ್ವ ತಾರವ್ವ ಜೋಗತಿಯ ಮನಿ. ಅಂದ್ರ ಅದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂಕ ಕರು: ಸಂತು

  "ಲೋ ಮಗಾ, ಬಿಸಿಲು ನೆತ್ತಿಗೇರ್ತಾ ಅದೆ, ಕರಾನ ಜಮೀನ್ ತಾವ ಹೊಡ್ಕಂಡ್ ಹೋಗಿ ಮರಕ್ ಕಟ್ಟಾಕಿ ಮೇಯಕ್ ಬುಡು. ಹಾಂ… ಹೋಗಕ್ ಉಂಚೆ ಮನೆತಾವ್ ಒಸಿ ನೀರು ಕುಡುಸ್ಬುಡು. ಬರದ್ ಹೊತ್ತಾಗ್ಬೋದು. ಇಸ್ಕೂಲಿಂದ ಬಂದ್ ಮ್ಯಾಕೆ ಮತ್ತೆ ಹೊಡ್ಕಂಡ್ ಬಂದ್ ಕೊಟ್ಟಿಗೇಲಿ ಕಟ್ಟಾಕ್ ಬುಡು. ಮರಿಬ್ಯಾಡ" ಪೇಟೆಗೆ ಹೊರಟಿದ್ದ ನಮ್ಮಪ್ಪ ಕೂಗಿ ಹೇಳಿದರು. ಒಲ್ಲದ ಮನಸ್ಸಿಂದ ನಾ "ಹೂಂ…..ಸರಿ" ಅಂದಿದ್ದು ಅಪ್ಪಂಗೆ ಕೇಳಿಸಲೇ ಇಲ್ಲ.  ನಮ್ಮದೊಂದು ಚಿಕ್ಕ ಹಳ್ಳಿ. ನಮ್ಮ ಜಮೀನಿದ್ದದ್ದು ಹಳ್ಳಿಯಿಂದ ಹೊರಗೆ. ಮೂರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ರಾಶೇಕ್ರ, ಮಂಜುಳಾ ಬಬಲಾದಿ, ಲತೀಶ್.

            ಬರೆಯಲೇ ಬೇಕೆಂದು ಕುಳಿತೆ 'ನಾ'? ಬರೆಯಲೇ ಬೇಕೆಂದು ಕುಳಿತೆ 'ನಾ' ಇರಲಾಗಲಿಲ್ಲ ನನ್ನಿಂದ ಬರೆಯದೆ ಇನ್ನೆಷ್ಟು ಕಾಲ, ಕಾಲ ಕೆಳಗೆ ಹೊಸಕಿಸಿಕೊಳ್ಳುವುದು, ಇಲ್ಲವೇ ಇದಕೆ ಇನ್ನೊಂದು ಪರ್ಯಾಯ ಪದ ಹುಡುಕಿ ಬರೆಯುವುದು,  ತುಳಿತಕ್ಕೊಳಗಾದೆ, ತುಳಿದವರ ಮೀಸೆಗೆ ಅಂಟದಾದೆ, ಹಿಡಿದು ಜಗ್ಗಾಡಿ ಆರೋಹಣಕಪವಾದವಾದೆ, ತುಳಿಸಿಕೊಂಡ ಮೇಲೂ ಎದ್ದು ನಿಲ್ಲದಾದೆ, ಹಿಂದೆ ಬಿದ್ದ ಇನ್ನೊಂದು ಕೆರ ಹುಡುಕಿ ನಿಮ್ಮೆದುರು ಗೌಣವಾದೆ, ಹೀಗೇ ಹಿಂದೆ ಬಿದ್ದೆ ಎದ್ದು ಎಡವಿ ಬಿದ್ದೆ, ಹೆಣ್ಮನದ ಪ್ರೀತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಿನ್ನಿ-ಪಲ್ಲು ಪ್ರಳಯ ಪ್ರಸಂಗ: ಸುಮನ್ ದೇಸಾಯಿ

      ತಿಂಗಳದ ಎರಡನೆ ಶನಿವಾರ್ ಆಫೀಸಿಗೆ ಸೂಟಿ ಇರತದ. ದಿನಾ ಒಂದಕ್ಕು ಗಂಡಾ ಮಕ್ಕಳಿಗೆ ಮಾಡಿ ಹಾಕಿ,ಆಫೀಸು ಮನಿ ಅಂತ ಬ್ಯಾಸತ್ತ ಶುಕ್ರವಾರ ದಿನಾ ಮುಂಝಾನೆ " ನಾಳೆ, ನಾಡದ ಸೂಟಿ ಅದ, ನಾ ಇವತ್ತ ನಮ್ಮ ಅಮ್ಮನ ಮನಿಗೆ ಹೋಗಿಬರತೇನಿ. ಒಮ್ಮೆಲೆ ಸೋಮವಾರ ಸಂಜೀಕೆ ಆಫೀಸ್ ಮುಗಿಸಿಕೊಂಡ ಬರತೇನಿ" ಅಂತ ಒದರಿದೆ. ಅದಕ್ಕ ಗಂಡಾ ಮಕ್ಕಳು ಕೂಡೆ ಒಂದ ಧ್ವನಿಲೆ "ನಾವು ಬರತೇವಿ  ಅಂತ ಅಂದ್ರು. ಅದಕ್ಕ ನಾ ಒಂದ ನಮ್ಮಮ್ಮನ ಮನಿಗೆ ಕಾಲರ ಇಡ್ರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಾಸ್ಯ ತಾತ ಈಗ: ಡಾ. ಗವಿ ಸ್ವಾಮಿ

ನೆಂಟರೊಬ್ಬರನ್ನು  ನೋಡಲು ಮೊನ್ನೆ ಆಸ್ಪತ್ರೆಗೆ ಹೋಗಿದ್ದೆ . ಆಸ್ಪತ್ರೆಯ ಗೇಟಿನ ಬಳಿ ಬೈಕು ನಿಲ್ಲಿಸುತ್ತಿದ್ದಾಗ ಇಬ್ಬರು ಹೊರಬರುತ್ತಿದ್ದರು. ಒಬ್ಬ ಹೆಂಗಸು ಮಗುವನ್ನು ಕಂಕುಳಿಗೆ ಹಾಕಿಕೊಂಡಿದ್ದಳು. ಪಕ್ಕದಲ್ಲಿ ಬರುತ್ತಿದ್ದಾತ ಮಗುವಿನ ಕೆನ್ನೆ ಚಿವುಟುತ್ತಾ ಅಂದ, '' ಈ ಗಣಾಂದಾರನ್ಗ ಮುನ್ನೂರ್ರುಪಾಯ್ ಆಯ್ತು ಇವತ್ತು '' ಆ ಹೆಂಗಸು ಹುಸಿಮುನಿಸಿನಿಂದ   ''ಚುರ್ಕ್ ಅಂದ್ಬುಡ್ತನ ನಿನ್ಗ ..  ನೋಡುಕಂದ ತಾತ ವೊಟ್ಟುರ್ಕತನ'' ಎಂದು ಕಂಕುಳಲ್ಲಿದ್ದ ಮಗುವನ್ನು ನೋಡಿ ಹೇಳಿದಳು. ಮಗು ಪಿಳಿಪಿಳಿ ಕಣ್ಣು ಮಿಟುಕಿಸುತ್ತಾ ಅವ್ವನನ್ನು ನೋಡಿತು. ''ಸುಮ್ನಂದಿಕವ್ವೈ ತಮಾಸ್ಗ .. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಯಣ : ಪ್ರಶಸ್ತಿ ಅಂಕಣ

ರೈಲು ಸುರಂಗದಲ್ಲಿ ಸಾಗ್ತಾ ಇತ್ತು. ಕತ್ತಲೆಯ ತೀರ್ವತೆ ತಿಳಿಯಲೆಂದೇ ಎಲ್ಲಾ ಲೈಟುಗಳನ್ನೂ ಆಫ್ ಮಾಡಿದ್ದರು. ರೈಲು ಸುರಂಗದಲ್ಲಿ ಸಾಗ್ತಿರೋ ಸದ್ದು ಬಿಟ್ಟರೆ ಬೇರೇನೂ ಇಲ್ಲ. ಎಷ್ಟುದ್ದದ ಸುರಂಗವೋ ತಿಳಿಯದು. ಜೀವನವೇ ಮರಳದ ಕತ್ತಲೆಯ ಕೂಪಕ್ಕೆ ಧುಮುಕಿದಂತೆ ಎಲ್ಲೆಡೆ ಗಾಢಾಂಧಕಾರ. ಕಣ್ಣು ತೆರೆದರೂ , ಮುಚ್ಚಿದರೂ ಒಂದೇ ಎನಿಸುವಂತಹ ಕತ್ತಲು. ಕೆಲ ಕ್ಷಣಗಳ ಮೌನದ ನಂತರ ಎಲ್ಲಾ ಕಿರಿಚತೊಡಗಿದರು. ಕತ್ತಲೆಯನ್ನು ಎಂದೂ ಕಾಣದಂತೆ ಕಂಡ ಖುಷಿಗೋ ಅಥವಾ ಪಕ್ಕದವರು ಕಿರಿಚುತ್ತಿದ್ದಾರೆಂದೋ ತಿಳಿಯದು. ಎಲ್ಲೆಡೆ ಹೋ  ಎಂಬ ಕೂಗು. ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-11): ಹಿಪ್ಪರಗಿ ಸಿದ್ದರಾಮ್

ಮಹಾಕವಿಗಳ ‘ಬಿರುಗಾಳಿ’ ರಂಗಕೃತಿಯು ಷೇಕ್ಸ್‍ಪಿಯರ್‍ನ ‘ಟೆಂಪೆಸ್ಟ್’ ನಾಟಕದ ಅನುವಾದವಾದರೂ ಇಂಗ್ಲಿಷ ಬಾರದ ಜನರಿಗೆ ಸ್ವತಂತ್ರ ಕೃತಿಯಂತೆ ಕಾಣುತ್ತದೆ. ಮಾನವನ ಮನೋರಂಗದಲ್ಲಿ ಯಾವಾಗಲೂ ದುಷ್ಟ ಶಕ್ತಿ ಮತ್ತು ಶಿಷ್ಟಶಕ್ತಿಗಳ ಹೋರಾಟ ನಿರಂತರ ನಡೆಯುತ್ತಲೇ ಇರುತ್ತದೆ. ಒಂದು ಕಡೆ ಲೋಭ, ಮೋಹ, ಛಲ, ವಂಚನೆ, ಅಹಂಕಾರ ಮೊದಲಾದ ಪಾಶವೀ ಶಕ್ತಿಗಳು, ಮತ್ತೊಂದು ಕಡೆ ತ್ಯಾಗ, ಪ್ರೇಮ, ಕ್ಷಮೆ, ಸತ್ಯ ಶಾಂತಿ ಮೊದಲಾದ ದೈವೀಶಕ್ತಿಗಳು. ಇವುಗಳ ಹೋರಾಟವೇ ಬಾಹ್ಯಪ್ರಪಂಚದಲ್ಲಿ ಯುದ್ಧ, ಕೊಲೆ, ರಕ್ತಪಾತ ಮೊದಲಾದ ಅನಾಹುತಗಳ ರೂಪದಲ್ಲಿ ಪ್ರಕಟಗೊಳ್ಳುತ್ತವೆ. ಈ ಹೋರಾಟದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ: ಉಪೇಂದ್ರ ಪ್ರಭು

’ಹೆಂಡ ಹೆಂಡ್ತಿ ಕನ್ನಡ ಪದಗೋಳ್ ಅಂದ್ರೆ ರತ್ನಂಗ್ ಪ್ರಾಣ" ಅನ್ನೋ ರಾಜರತ್ನಂ ಅವರ ಸಾಲು ಭಾಗಶಃ ನನಗೂ ಅನ್ವಯಿಸುತ್ತದೆ. ಯಾಕೆ ಭಾಗಶಃ ಅಂತೀರಾ? ಆ ಸಾಲಿನ ’ಹೆಂಡ್ತಿ’ ಅನ್ನೋ ಪದ ರತ್ನಂ ಅವರಿಗೆ ಪ್ರಾಣ ಆಗಿರಬಹುದು ಆದ್ರೆ ನನಗಲ್ಲ. ಇರಲಿ ಬಿಡಿ. ಅವಕಾಶ ಸಿಕ್ಕಾಗೆಲ್ಲ (ಹೆಂಡತಿಯ ಗೈರು ಹಾಜರಿಯಲ್ಲಿ) ವಿದೇಶಿ ಹೆಂಡದ ಜತೆ ಕನ್ನಡ ಪದಗಳು ನನ್ನ ಸಂಗಾತಿಗಳಾಗುತ್ತವೆ. ಇಂದೂ ಆಗಿದ್ದು ಅದೇ. ಹೆಂಡತಿ ಮುಖ ಉಬ್ಬಿಸಿಕೊಂಡು ತವರುಮನೆ ಸೇರಿದ್ದ ಕಾರಣ ವ್ಹಿಸ್ಕಿ ಜತೆ ಮೈಸೂರು ಅನಂತಸ್ವಾಮಿಯವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ: ರಘು ನಿಡುವಳ್ಳಿ ಅವರ ಚುಟುಕಗಳು

1 ಸಮಾನತೆ ಭೋರ್ಗರೆವ ಶರಧಿ ಅದರ ಸೆರಗಲ್ಲೆ  ಮಹಾಮೌನಿ 'ಹಿನ್ನೀರು' ದಿಗ್ಗನೆ ಬೆಳಗುವ ದೀಪ  ಅದರ ಬದಿಯಲ್ಲೆ ದಿವ್ಯಧ್ಯಾನಿ 'ಕತ್ತಲು ಸೃಷ್ಟಿಗಿಲ್ಲ  ಅದರ ದೃಷ್ಟಿಗಿಲ್ಲ  ಭೇಧ ಬಿನ್ನ ಪಕ್ಷಪಾತ ಹುಟ್ಟು ಸಾವು ನೋವು ನಲಿವು ಎಲ್ಲ ನಮ್ಮ ನಿಮ್ಮ ವರಾತ!   2  ಚೋದ್ಯ ಕತ್ತಲೆಗೆ ಗೊತ್ತಿರುವ.. ಗುಟ್ಟು.. ಬೆಳಕಿನ ಪಾಲಿಗೆ ಅಪರಿಚಿತ  ಹಣತೆ ಕಂಡಿರೋ ಸತ್ಯ.. ಕತ್ತಲಪಾಲಿಗೆ ಅದೃಶ್ಯ .. ಇದು ಸೃಷ್ಟಿಯ..ಚೋದ್ಯ   3 ಅಪೂರ್ಣ ಒರಟು ವಜ್ರಕ್ಕೆ..ಹೊಳಪು ಕೊಟ್ಟ.. ಸುವಾಸನೆ ಕೊಡಲಿಲ್ಲ.. ಮೃದುಲ..ಮಲ್ಲಿಗೆಯಲಿ.. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದಾನೊಂದು ಕಾಲದಲ್ಲಿ ಹೊಳಲ್ಕೆರೆ ಎಂಬ ಚಿಕ್ಕ ಹಳ್ಳಿ ಇತ್ತು : ಹೊಳಲ್ಕೆರೆ ವೆಂಕಟೇಶ್

ನಮ್ಮ ಹೊಳಲ್ಕೆರೆ ಮನೆ. ನಾವು ಚಿಕ್ಕವರಾಗಿದ್ದಾಗ, ಅಮ್ಮ, ಮತ್ತು ನಮ್ಮಣ್ಣ ತಲೆಯ ಬಳಿ  ಕುಳಿತು ತಲೆಗೂದಲನ್ನು  ನೇವರಿಸುತ್ತಾ ಪ್ರೀತಿಯಿಂದ ನಮಗೆ ನಿದ್ದೆ ಬರುವವರೆಗೂ ಕಥೆಗಳನ್ನು ಹೇಳುತ್ತಿದ್ದರು. ಅಮ್ಮನ ಕಥೆಗಳು ಹೆಚ್ಚಾಗಿ ರಾಜಕುಮಾರ,  ರಾಜಕುಮಾರಿ ಕುದುರೆ ಸವಾರಿ, ಅರಮನೆ, ಮದುವೆ ಮೊದಲಾದವುಗಳನ್ನು ಒಳಗೊಂಡಿರುತ್ತಿತ್ತು. ನಮ್ಮಣ್ಣ ಹೇಳುತ್ತಿದ್ದ ಕಥೆಗಳು   ಕಾಡು, ಹುಲಿ ಬೇಟೆ, ರಾಜ, ನದಿ ಇತ್ಯಾದಿಗಳನ್ನು ತಿಳಿಸುವ ಪ್ರಯತ್ನದ್ದಾಗಿತ್ತು.  ನಾನು ಬೊಂಬಾಯಿಗೆ ಬಂದಮೇಲೆ ಮದುವೆಯಾಗಿ ಮಕ್ಕಳಾದಾಗ ನನ್ನ ಮಕ್ಕಳಿಗೆಕಥೆ ಹೇಳುವ ಪ್ರಮೇಯ ಬಂತು. ಆದರೆ ನನ್ನ ತಲೆ ಖಾಲಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

1 35+5 36 40: ಬಸವರಾಜು ಕ್ಯಾಶವಾರ

ನನ್ನ ನೆನಪ ರಾಡಿಯಲ್ಲಿ ಅವಳೊಂದು ನೈದಿಲೆ ಅತ್ತರೆ ಕಣ್ಣೀರಾಗಿ ಸ್ರವಿಸುವಳು ನೊಂದರೆ ನೋವಾಗಿ ಖಾಲಿಯಾಗುವಳು ನಗುತ್ತಲೆ ಇದ್ದರೆ ಸುಮ್ಮನೆ ತೊನೆಯುವಳು, ಕೆನೆಯುವಳು ಮತ್ತೆ ಮತ್ತೆ ಹುಟ್ಟುವಳು ನನ್ನ ನೆನಪ ರಾಡಿಯಲ್ಲಿ ಮುದ್ದು ನೈದಿಲೆ. ಇದು 1998ರಲ್ಲಿ ನೀನು ಬರೆದ ಕವನ. ಹಚ್ಚ ಹಸಿರು ಹೊಲದಲ್ಲಿ ಪುಟಾಣಿ ಹುಡುಗಿಯೊಬ್ಬಳು ಕುರಿ ಮರಿಯನ್ನು ಎತ್ತಿ ಮುದ್ದಾಡುತ್ತಿರುವ ನೀನೇ ಬರೆದ ಚಿತ್ರದ ಗ್ರೀಟಿಂಗ್ ಕಾಡರ್್ನ್ನ ಹೊಸ ವರ್ಷದ ಶುಭಾಷಯವಾಗಿ ಕೊಟ್ಟಿದ್ದೆ. ಮೇಲೆ ನೋಡಿದ್ರೆ ಹೊಸ ವರ್ಷದ ಹಾಧರ್ಿಕ ಶುಭಾಷಯಗಳನ್ನು ಅಂತಿತ್ತು. ಆದ್ರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೋಟಾರ್ ಸೈಕಲ್ ಡೈರೀಸ್: ವಾಸುಕಿ ರಾಘವನ್

ಚೆ ಗೆವಾರ ನಿಮಗೆಲ್ಲರಿಗೂ ಗೊತ್ತಿರಬಹುದು. ಚರಿತ್ರೆಯನ್ನು ಅಷ್ಟಾಗಿ ಓದಿಲ್ಲದವರಿಗೂ ಟಿ-ಶರ್ಟ್ ಮೇಲಿನ “ಆ ಮುಖ” ಅಂತಾದ್ರೂ  ಪರಿಚಯ ಇದ್ದೇ ಇರುತ್ತೆ. ನನಗೆ ಅವನ ಸಿದ್ಧಾಂತಗಳು, ನಿಲುವುಗಳು, ಆದರ್ಶಗಳ ಬಗ್ಗೆ ಆಳವಾದ ಅರಿವು ಇಲ್ಲ, ಆದರೂ ಅವನ ಜೀವನವನ್ನು ಬದಲಿಸಿದ ಕಥೆ ಇರುವ ಈ ಚಿತ್ರ ಬಹಳ ಇಷ್ಟವಾಯಿತು. ಆ ಚಿತ್ರವೇ 2004ರಲ್ಲಿ ಬಂದ ಅದೇ ಹೆಸರಿನ ಆತ್ಮಕಥನದ ಪುಸ್ತಕವನ್ನು ಆಧರಿಸಿದ “ಮೋಟಾರ್ ಸೈಕಲ್ ಡೈರೀಸ್”.   ಎರ್ನೆಸ್ಟೋ ‘ಚೆ’ ಗೆವಾರ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ ನಮ್ಮಂಥ ಒಬ್ಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓದುವ ಬರೆಯುವ ಸುಖಕ್ಕೆ ಸೀಮಾರೇಖೆಗಳ ಹಂಗೇಕೆ: ನಟರಾಜು ಎಸ್. ಎಂ.

ಕೋಲ್ಕತ್ತಾದಲ್ಲಿದ್ದ ದಿನಗಳಲ್ಲಿ ಕನ್ನಡ ಪೇಪರ್ ಗಳು ಸಿಗದ ಕಾರಣ ಟೈಮ್ಸ್ ಆಫ್ ಇಂಡಿಯಾ ಪೇಪರ್ ಓದುವ ಅಭ್ಯಾಸವಿತ್ತು. ಬೆನೆಟ್ ಕೋಲೆಮನ್ ಕಂಪನಿ ಹೆಸರಿನಲ್ಲಿ 390 ರೂಪಾಯಿಯ ಚೆಕ್ ಒಂದರ ಜೊತೆ ಆ ಪೇಪರ್ ನ ಚಂದಾದಾರರಾಗುವ ಅರ್ಜಿಯೊಂದನ್ನು ಸ್ಥಳೀಯ ಪೇಪರ್ ವೆಂಡರ್ ಗೆ ನೀಡಿದರೆ ಒಂದು ವರ್ಷ ಪೂರ್ತಿ ಆ ಪೇಪರ್ ಮನೆ ಬಾಗಿಲಿಗೆ ಬಂದು ಬೀಳುತ್ತಿತ್ತು. ಆ ಒಂದು ವರ್ಷದಲ್ಲಿ ಪಡೆದ ಪೇಪರ್ ಗಳನ್ನು ತೂಕಕ್ಕೆ ಹಾಕಿದರೆ ಸುಮಾರು 200 ರೂಪಾಯಿ ತೂಕ ಹಾಕಿದ ಪೇಪರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಮಾಷೆ: ಮಾಲತಿ ಶೆಣೈ

“ಒಂದು ರೊಟ್ಟಿಯ ತುಣುಕು ಕೊಡಿ” “ಏನಾದರೂ ತಿನ್ನಲು ಕೊಡಿ " ಆಕೆ ದೈನ್ಯತೆಯಿಂದ ಬೇಡಿದಳು. ಗಟ್ಟಿ ಕಲ್ಲಿನ ಅಂಗಳದ ಸುಡು ಬಿಸಿಲಿನಲ್ಲಿ ನಿಂತಿದ್ದಳು ಹುಡುಗಿ. ಮೈಯಲ್ಲಿ ಮಾಂಸದ ಹೆಸರೇ ಇರಲಿಲ್ಲ, ಎಲುಬಿನ ಗೂಡು. ಮಕ್ಕಳಿಗೆ  ಅನಾಟಮಿಯ  ಪಾಠ ಕಲಿಸುವಷ್ಟು ಅವಳ ಎಲುಬು ನಿಚ್ಚಳವಾಗಿ ಮೈಯಿಂದ ಕಾಣುತ್ತಿದ್ದವು. “ಅಮ್ಮ ಅವಳಿಗೆ ಸ್ವಲ್ಪ ತಿಂಡಿ ಕೊಡು. ನಿನ್ನೆಯಿಂದ ತಿಂಡಿಗೋಸ್ಕರ ಆಕೆ ಬೀದಿ ಬೀದಿ ಅಲೆಯುತ್ತಿದ್ದಾಳೆ’ ಕನಿಕರದಿಂದ ತನ್ನ ಅಮ್ಮನಿಗೆ ಹೇಳಿದ ಅದಿಲ್. “ಹೋಗಾಚೆ”- ಅಮ್ಮ ಗಟ್ಟಿ ದನಿಯಿಂದ ಗದರಿದರು. “ನಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೆಂಗುಲಾಬಿ (ಭಾಗ 1): ಹನುಮಂತ ಹಾಲಿಗೇರಿ

ಒಬ್ಬೊಬ್ಬರ ಬದುಕು ಒಂದೊಂಥರಾ. ಒಂದರೊಳಗ ಸಿಕ್ಕ ಹಾಕ್ಕೊಂಡವರು ಅದರಿಂದ ಬಿಡಿಸಿಕೊಳ್ಳಾಕ ಅವರ ಹಿಂದಿನ ಬದುಕಿನ ಅಧ್ಯಾಯಗಳು ಅಷ್ಟು ಸರಳ ಬಿಡುದಿಲ್ಲ. ಸುತ್ತಲಿನ ಪ್ರಪಂಚವನ್ನು ಕಣ್ಣರಳಿಸಿ ನೋಡುವ ಮುನ್ನವೇ, ಯಾರದೋ ಹುನ್ನಾರಕ್ಕೆ ಬಲಿಯಾಗಿ, ತಾವು ಮಾಡದ ತಪ್ಪಿಗಾಗಿ, ಎಷ್ಟೋ ಹೆಣ್ಮಕ್ಕಳು ಇಂದು ತಮ್ಮ ಮೈಯನ್ನೇ ಸಂತೆಯೊಳಗ ಬಿಕರಿಗಿಟ್ಟು ತುತ್ತಿನ ಚೀಲ ತುಂಬಿಸಿಕೊಳ್ಳಾಕ ಹತ್ಯಾರ. ಅಂಥ ಮೈ ಮಾರೊಳ ಹೊಟ್ಟಿಯೊಳಗಿಂದ ಭೂಮಿಗೆ ಇಳಿದು ಬಂದವ ನಾ. ಹಿಂದೆ, ಇಂದು, ಮುಂದೆಂದೂ ಈ ಬ್ಯಾನಿ ನನ್ನನ್ನು ಬಿಟ್ಟು ಬಿಡದ ಕಾಡಕೋತನ ಇರತೈತಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ೦ಜು ನಾ ಕ೦ಡ೦ತೆ: ವೆಂಕಟೇಶ್ ಪ್ರಸಾದ್

ಅದು ೨೦೧೧ ನವ೦ಬರ ಆಗ ನಾನು ಅ೦ತಿಮ ವರ್ಷದ ಪದವಿಯಲ್ಲಿದ್ದೆ. ಎಲ್ಲಾ ಕಾಲೇಜು ಹುಡುಗರ೦ತೆ ನಾನೂ ಫೇಸ್ ಬುಕ್ಕನ್ನು ಬಲವಾಗಿ ಅ೦ಟಿ ಕೊ೦ಡಿದ್ದೆ. ದಿನಾ ಬೆಳಗಾದರೆ ಫೇಸ್ಬುಕ್ ನೋಡದೆ ಮುಖ ಪ್ರಕ್ಷಾಳನ ಮಾಡಿಕ್ಕೊಳ್ಳುತ್ತಿರಲಿಲ್ಲ. ಹೀಗೆ ಒ೦ದು ದಿನ  ಫೇಸ್ ಬುಕ್ ನಲ್ಲಿ ಸ೦ಚರಿಸುತ್ತಿದ್ದಾಗ ‘ಕನ್ನಡ ಬ್ಲಾಗ್’ ಎ೦ಬ ಮಿತ್ರರ ಸಮೂಹದ ಪರಿಚಯವಾಯಿತು. ‘ಕನ್ನಡದ ಕ೦ಪ’ನ್ನು ಪಸರಿಸುವ ತಾಣಕ್ಕೆ ನಾನೂ ಸೇರಿಕೊ೦ಡೆ. ಅದರಲ್ಲಿ ಪ್ರಕಟವಾಗುತ್ತಿದ್ದ ಕಥೆ , ಕವನ , ಹಾಸ್ಯ ಲೇಖನ ಇತ್ಯಾದಿಗಳನ್ನ ಓದಿ/ಓದದೇ ಒ೦ದು ‘ಲೈಕ್’ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-10): ಹಿಪ್ಪರಗಿ ಸಿದ್ದರಾಮ್

ಆತ್ಮೀಯ ರಂಗಾಸಕ್ತ ಓದುಗಸ್ನೇಹಿತರೇ, ಇಲ್ಲಿಯವರೆಗೆ ಮಹಾಕವಿಗಳ ರಂಗಕೃತಿಗಳ ಪೌರಾಣಿಕ ಲೋಕದಲ್ಲಿ ವಿಹರಿಸುತ್ತಾ, ಅವರ ಪ್ರತಿಭಾಜ್ವಾಲೆಯಲ್ಲಿ ಅರಳಿದ ಹಲವು ಪೌರಾಣಿಕ ಪ್ರಸಂಗಗಳು ಆಧುನಿಕ ರಂಗರೂಪದೊಂದಿಗೆ ಹೊರಹೊಮ್ಮುವುದರೊಂದಿಗೆ, ಇಂದಿಗೂ ಕನ್ನಡ ರಂಗಭೂಮಿಯಲ್ಲಿ ಹೊಸತನಕ್ಕೆ ಪ್ರಚೋಧನಾತ್ಮಕವಾಗಿರುವ ಪೌರಾಣಿಕ ರಂಗಕೃತಿಗಳ ಕುರಿತಾಗಿ ಇಲ್ಲಿಯವರೆಗೆ ನೋಡಿದ್ದೇವೆ. ಮಹಾಕವಿಗಳು ಕೇವಲ ಪೌರಾಣಿಕ ಪ್ರಸಂಗಗಳಿಗೆ ಸೀಮಿತವಾಗದೇ ಮುಂದುವರೆದು ತಮ್ಮ ಲೇಖನಿಯಲ್ಲಿ ಐತಿಹಾಸಿಕ ಕಥನಕಗಳನ್ನು ಸಹ ಹೊಸ ರೂಪಾಂತರದೊಂದಿಗೆ ಇಂದಿನ ಕಾಲದ ರಂಗಕರ್ಮಿಗಳ ಪ್ರತಿಭೆಗೆ ಸವಾಲೊಡ್ಡುವಂತಹ ವಿಷಯಾಧಾರಿತ ಮತ್ತು ಪ್ರಸಂಗಾಧಾರಿವಾದ ರಂಗಕೃತಿಗಳನ್ನು ನೀಡಿದ್ದಾರೆ. ಅವುಗಳನ್ನು ನಾವೀಗ ಅವುಗಳ ರಚನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ