ಚುಟುಕಗಳು: ಹೇಮಲತಾ ಪುಟ್ಟನರಸಯ್ಯ

ಉಗುರುಗಳದು ನೆನಪಿನದು , ಕತ್ತರಿಸಿದಷ್ಟು ವೇಗದಲಿ ಮೂಡುವುದು , ಸಿಬಿರಾಗಿ ನಿಂತು ಚುಚುತ್ತಲೇ ಇರುವುದು ******************** ನೀ ಕೊಟ್ಟ ನೋವಿನ ವಿಷವನ್ನು  ಗಟಗಟನೆ ಕುಡಿದೂ ಸಾಯದೆ ಉಳಿಯಲು ನಾನೇನು ನೀಲಕಂಠನಲ್ಲ ಒಳಗೆ ಸತ್ತಿರುವೆ ಆದರು ಇನ್ನು ಬದುಕೇ ಇರುವೆ *************** ಅವನ ಗಂಡಸುತನವ ದಿಕ್ಕರಿಸಿದ ನನ್ನ ಹೆಣ್ತನ ಕದವಿಕ್ಕಿ ಅಳುತ್ತಿತ್ತು ಒಳಗೆ ********** ಇಂಚಿಂಚು ಕೊಂದಿರುವೆ ಚುಚ್ಚಿ ಚುಚ್ಚಿ ಹುಡುಕಲು ನಿನ್ನ ಬಿಂಬವನ್ನು ಚೂರುಗಳಲ್ಲಿ ನಾನೇನು ಕನ್ನಡಿಯಲ್ಲ ********** ನವಿಲಿಗೆ ಕುಣಿವುದೇ ಧರ್ಮ ಕೆಂಬೂತದ ಸಹವಾಸಕ್ಕೆ ಕುಣಿವುದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಓ ಮನಸೇ, ಸ್ವಲ್ಪ ರಿಲ್ಯಾಕ್ಸ್ ಪ್ಲೀಸ್:ಪ್ರಶಸ್ತಿ ಅಂಕಣ

ಇವತ್ತಿನ ಯಶಸ್ಸನ್ನು ನಾಳೆಯ ಗುರಿಗಳೆದುರು ನಿಲ್ಲಿಸಿ ಕಡೆಗಣಿಸೋ ಮುನ್ನ.. ಜೀವನದೋಟದಲಿ ಎಲ್ಲರಿಗಿಂತ ಮುಂದಿರೋ ಬಯಕೆಯಲಿ ದಾಟಿದ ಎಷ್ಟೋ ಮೈಲುಗಳ ಮರೆಯೋ ಮುನ್ನ.. ಜತೆಗಿದ್ದವರ ನೋವಲ್ಲಿ ದನಿಯಾಗಿ, ನಲಿವಲ್ಲಿ ಅನಾಥನಾಗೋ ಮುನ್ನ.. ಓ ಮನಸ್ಸೇ ರಿಲ್ಯಾಕ್ಸ್ ಪ್ಲೀಸ್.. ಯಶವೆಂಬುದು ಗುರಿಯಲ್ಲ, ಅನುದಿನದ ದಾರಿ.. ಓ ಮನಸ್ಸೇ ರಿಲ್ಯಾಕ್ಸ್ ಪ್ಲೀಸ್ 🙂 ಬಾಳು, ಗೋಳು, ನೋವು, ನಲಿವು .. ಉಫ್ ಏನಪ್ಪಾ ಇದು ವೇದಾಂತ ಅಂದ್ಕೊಂಡ್ರಾ ? ಹಾಗೇನಿಲ್ಲ. ಪ್ರತೀ ವಾರದಂತೆಯೇ.. ಆದರೆ ಸ್ವಲ್ಪ ಭಿನ್ನವಾಗಿ. ಸ್ವಗತದ ಮಾತುಗಳನ್ನು ಪದಗಳಿಗಿಳಿಸೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸ್ಸು ಒಮ್ಮೊಮ್ಮೆ ಹೀಗೆಲ್ಲಾ ಯೋಚಿಸುವುದು೦ಟು…!: ರಾಮಚಂದ್ರ ಶೆಟ್ಟಿ

"ನನಗೆ ದೇವರು ಏನನ್ನೂ ಕೊಟ್ಟಿಲ್ಲ" ಇದು ಸಾಮಾನ್ಯವಾಗಿ ಎಲ್ಲಾ ಇರುವವರ ಒ೦ದು ದೂರು,ಒ೦ದು ಹೇಳಿಕೆ ದೇವರೆಡೆಗೆ .ನನ್ನನ್ನೂ ಸಹ ಸೇರಿಸಿ..ಸಾಮಾನ್ಯವಾಗಿ ನಾವು ನೋವಿನ ಪರಿಧಿಯೊಳಗೆ ಸಿಕ್ಕಿಕೊ೦ಡು ಒದ್ದಾಡುತ್ತಿರುವಾಗ ,ನಾವು ಆಸೆ ಪಟ್ಟಿದ್ದು ನಮಗೆ ದಕ್ಕದಿದ್ದಾಗ, ಅಥವಾ ನಮಗೆ ಹತ್ತಿರ ಎ೦ದೆನಿಸಿದವರೂ ನಮ್ಮಿ೦ದ ದೂರ ನಡೆದಾಗ ಇ೦ಥ ಅನೇಕ ಸ೦ಧರ್ಭದಲ್ಲಿ ಅದರ ಪರಿಣಾಮವನ್ನು ಸ್ವೀಕರಿಸಲಾಗದೆ ಮಾನಸಿಕ ಸ್ಥಿತಿಯಲ್ಲಿ ವ್ಯತ್ಯಯವಾಗಿ ಅಥವಾ ಗೊ೦ದಲವಾಗಿ ನಾವು ಪೂರ್ತಿಯಾಗಿ ಸೋತು ಬಿಟ್ಟೆವು ಅ೦ದುಕೊ೦ಡುಬಿಡುತ್ತೇವೆ..ಈ ಸಮಯದಲ್ಲಿನ ನೋವು, ನಿರಾಶೆ ಹತಾಶೆಯನ್ನು ಹತ್ತಿಕ್ಕಲಾಗದೆ ಗೊ೦ದಲದಲ್ಲಿದ್ದಾಗ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಳ್ಳಿಯಾವ ಕಳಿಸಿಕೊಟ್ಟ ಪಾಠ: ಶ್ರೀಕಾಂತ್ ಮಂಜುನಾಥ್

ನಾಗರೀಕ ಸಮಾಜ ಎಂದು ಬೀಗುವ ಪಟ್ಟಣದಲ್ಲಿ ಸಂಸ್ಕೃತಿ ಮರೆತು ಹೇಗೆ ಆಡುತ್ತೇವೆ ಅನ್ನುವ ಭಾವ ಇರುವ ಒಂದು ಕಿರು ಲೇಖನ. ಗುಡ್ಡ-ಗಾಡುಗಳನ್ನು ಸುತ್ತಿ ಬಸವಳಿದಿದ್ದ ಒಂದು ಗುಂಪು, ತುಂಬಾ ದಿನಗಳಾದ ಮೇಲೆ, ಒಂದೇ ಛಾವಣಿಯಡಿಯಲ್ಲಿ ಸೇರಿದ್ದವು. ಹೊರಗಡೆ ಬಿಸಿಲು ಚೆನ್ನಾಗಿ ಕಾದಿತ್ತು, ಒಳಗೆ ಹೊಟ್ಟೆ ಹಸಿವಿನಿಂದ ಕುದಿಯುತ್ತಿತ್ತು. ಏನು ಸಿಕ್ಕಿದರು ತಿಂದು ತೇಗಿಬಿಡುವ ಧಾವಂತದಲ್ಲಿದ್ದರು. ಸುಮಾರು ಎಂಟು ಮಂದಿಯಿದ್ದ ಗುಂಪಾದ್ದರಿಂದ ಹೋಟೆಲ್ನಲ್ಲಿ ಒಂದೇ ಟೇಬಲ್ ನಲ್ಲಿ ಜಾಗ ಸಿಗುವುದು ಕಷ್ಟವಾಗಿತ್ತು. ಅಲ್ಲಿದ್ದ ಮೇಲ್ವಿಚಾರಕರು "ಸರ್ ಸ್ವಲ್ಪ ಹೊತ್ತು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಲೆಮಾರಿ ಏಕಲವ್ಯ ಮುನಿತಿಮ್ಮಯ್ಯ – ಡಾ. ರಾಜರಿಂದ ಪ್ರೇರಣೆ: ಪ್ರಮೋದ್ ಶೇಟ್ ಗುಂಡಬಾಳ

ಯೋಗಾ ಇದು ಭಾರತ ದೇಶದ ಪಾರಂಪರಿಕ ವಿದ್ಯೆ. ಇದರಿಂದ ಆಕರ್ಷಿತರಾದವರಿಗೇನು ಕಡಿಮೆ ಇಲ್ಲ. ಇದರ ಬಗ್ಗೆ ಒಬ್ಬೊಬ್ಬರು ಒಂದೊದು ರೀತಿಯಲ್ಲಿ ಆಕರ್ಷಿತರಾಗುತ್ತಾರೆ, ಅಂತವರಲ್ಲಿ ಶ್ರೀ ಮುನಿತಿಮ್ಮಯ್ಯ ಕೂಡ ಒಬ್ಬರು. ಇವರು ಒಬ್ಬ ಏಕಲವ್ಯನಿದ್ದಂತೆ. ಇವರಿಗೆ ಪ್ರೇರಣೆ ಕನ್ನಡದ ಮೇರು ನಟ ಡಾ. ರಾಜಕುಮಾರವರು. ೮೦ರ ದಶಕದಲ್ಲಿದ್ದಂತಹ ಪ್ರಜಾಮತ ಪತ್ರಿಕೆಯಲ್ಲಿ ಡಾ. ರಾಜ್ ರವರ ಯೋಗಾಸನದ ಕುರಿತು ವಿವಿದ ಭಂಗಿಯ ಚಿತ್ರಗಳ ಸಹಿತ ಲೇಖನ ಪ್ರಕಟವಾಗುತಿತ್ತು. ಅದನ್ನು ನೋಡಿ ಪ್ರೇರಿತರಾದವರು ಶ್ರೀ ಮುನಿತಿಮ್ಮಯ್ಯನವರು. ಬೆಂಗಳೂರಿನ ಹೆಬ್ಬಾಳದ ನಿವಾಸಿಯಾದ ಇವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾನು ನಿನ್ನ ಮಿಸ್ ಮಾಡಿಕೊಂಡರೂ ಪರವಾಗಿಲ್ಲ: ರೂಪ ರಾವ್

ನನ್ನ ಪ್ರೀತಿಯ ವಿಕಿಗೆ,   ನೆನ್ನೆ ನೀನು ಐ ಲವ್ ಯು ಸುಮಾ ಅಂದಾಗ ಎಷ್ಟು ಖುಷಿಯಾಯ್ತು ಗೊತ್ತಾ ಮಾತಾಡೋಕೆ ಆಗಲಿಲ್ಲ. ಒಂದು ವರ್ಷದಿಂದ ಪ್ರೀತ್ಸೋ ಪ್ರೀತ್ಸೋ ಅಂತ ನಿನ್ನ ಹಿಂದೆ ಬಿದ್ದಿದ್ದ ನನ್ನನ್ನ ಫ್ರೆಂಡ್ ಆಗೇ ನೋಡ್ತಿದ್ದ ನೀನು ಇದ್ದಕಿದ್ದ ಹಾಗೆ ಬೇಸಿಗೆಕಾಲದ ಮಳೆ ಥರ ಪ್ರೀತಿಸ್ತೀನಿ ಅಂದ್ರೆ……. ಒಂದು ಕ್ಷಣ ಎದೆ ಝಲ್ಲೆಂತು… ಪ್ರೀತಿಸಿದ ಹುಡುಗನ ಬಾಯಲ್ಲಿ ಇಂಥ ಮಾತು ಕೇಳುವಾಗಿನ ಸ್ವರ್ಗ ಸುಖವೇ ಬೇರೆ ಕಣೋ..ಅಂತಹ ಗಾಳೀಲಿ ತೇಲ್ತಾ ತೇಲ್ತಾ ನಗ್ತಾ  ಇದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಕ್ಷಯ ತೃತೀಯದಲ್ಲಿ ಚಿನ್ನ ಕೊಳ್ಳುವುದು ಅಂದರೆ…:ವಿ.ಆರ್.ಕಾರ್ಪೆಂಟರ್

ನನ್ನ ಸ್ನೇಹಿತನೊಬ್ಬ ಸೇನೆಯಲ್ಲಿದ್ದಾನೆ. ಕಳೆದ ವಾರವಷ್ಟೇ ರಜೆಯ ಮೇಲೆ ಊರಿಗೆ ಬಂದಿದ್ದಾನೆ. ಅವನಿಗೆ ಅವನ ತಂಗಿಯ ಕಡೆಯವರು ಅವನ ಮದುವೆಯ ವಾರ್ಷಿಕೋತ್ಸವ ಸಮಾರಂಭಕ್ಕೆಂದು ಸ್ವಲ್ಪ ದುಬಾರಿ ಉಂಗುರವನ್ನು ಉಡುಗೊರೆಯಾಗಿ ನೀಡಿದ್ದನ್ನು ಹೆಚ್ಚಿಗೆ ಅನ್ನಿಸುವಷ್ಟು ಉಬ್ಬಿಕೊಂಡು ನನ್ನ ಬಳಿ ಹೇಳಿಕೊಂಡ. ಇಂದು ತನಗೆ ಸಿಕ್ಕ ಈ ಅನಿರೀಕ್ಷಿತ ಉಡುಗೊರೆಯ ಹಿನ್ನೆಲೆಯನ್ನು ಹೇಳಿಕೊಂಡ. ಅದು ಮುಂದಿನಂತಿದೆ. ಕಳೆದ ಎರಡು ವಾರದ ಯಾವುದೋ ದಿನ ಅಕ್ಷಯ ತೃತೀಯವಂತೆ. ಅಂದು ಅವನ ಹೆಂಡತಿ ’ರೀ ಇವತ್ತು ಅಕ್ಷಯ ತೃತೀಯ ಜಾಸ್ತೀ ಅಲ್ಲದಿದ್ದರೂ ಚೂರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಚುಟುಕ ಸ್ಪರ್ಧೆ:ಶಿವು.ಕೆ ಅವರ ಚುಟುಕಗಳು

೧. ಜೀನ್ ಜಿನುಗದೆ ಕವಿ ಹೃದಯದ ಜೀನ್ ಜಿನುಗದೆ ದಿನವೂ ತೊಳಲಾಡುತ್ತಿದ್ದೇನೆ ನಾ ಕವನ ಬರೆಯಲಾಗದೆ ಕಣ್ಣ ಕದ ತೆರೆದು ಓದುತ್ತೀಯಾ ನನ್ನೊಳಗಿನ ಕವಿತೆಗಳನ್ನು ೨. ಬೇರಿನೊಳಗೆ ಅಡಗಿ ಕುಳಿತ ಆಕಾಶದಗಲದ ದೊಡ್ಡಮರದಂತೆ ನನ್ನ ಪುಟ್ಟ ಹೃದಯದೊಳಗೆ ಬಚ್ಚಿಟ್ಟಿರುವ ಸಾಗರದಗಲದ ಒಲವು ನಿನಗೆ ಗೊತ್ತಾ? ೩. ಹಸಿರು-ಉಸಿರು ಆವಿಯಾದ ಸಾಗರದನಿಗಳು ಆಕಾಶಕ್ಕೇರಿ ಪರಸ್ಪರ ಡಿಕ್ಕಿಸಿದಾಗ ಮಳೆಸುರಿದು ನೆಲವೆಲ್ಲಾ ಹಸಿರು ದೈನಂದಿನ ಚಿತ್ರಗಳು ನನ್ನೆದೆಯಲ್ಲಿ ಭಾವಗಳಾಗ ಪರಸ್ಪರ ಡಿಕ್ಕಿಸಿದಾಗ ಪದ ಸುರಿದು ಕಾಗದದಲ್ಲಿ ಕವನದ ಉಸಿರು. ೪.  ಬದುಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಕದ್ದಾಲಿಕೆ: ಹರಿಪ್ರಸಾದ್

ನನಗೆ ನಾಲಿಗೆ ಬಗ್ಗೆ ಒಲವು ಇಲ್ಲದಿದ್ದರೂ ಕಿವಿಯ ಬಗ್ಗೆ ಅಪಾರ ಪ್ರೀತಿ. ಈ ಕಿವಿಗಳಾದರೋ ಎಲ್ಲೇ ಹೋದರೂ ಸುಮ್ಮನಿರುವುದಿಲ್ಲ. ಏನಾದರೂ ಕೇಳಿಸಿಕೊಳ್ಳುತ್ತಲೇ ಇರುತ್ತವೆ. ಕೇಳಿಸಿಕೊಂಡು ಅವು ಸುಮ್ಮನಿರುವುದಿಲ್ಲ. ನನ್ನನ್ನು ವಿನಾಕಾರಣ ಪೀಡಿಸುತ್ತಿರುತ್ತವೆ. ಒಂದಿನ ಟೀ ಅಂಗಡೀಲಿ ಯಾರೋ ಮಾತಾಡಿದ್ದು ಕೇಳಿಸಿಕೊಂಡು ಬಂದಿದ್ದವು. ರಾತ್ರಿ ನಿದ್ದೆ ಮಾಡಲು ಬಿಡದೆ ಪೀಡಿಸಿದವು. ಆ ಪೀಡನೆಯೇ ಸಾರಾಂಶವೇ ಈ ಬರಹ. ಅವನು ಏನೋ ಮದುವೆ ಆಕ್ಕುಲ್ವ? ಇವನು ಆಯ್ತಿನಿ ಅವನು ಅಂಗಾರೆ ಉಡ್ಗಿ ನೋಡ್ಕಂಡಿದೀಯ, ಯಾವ ಕ್ಯಾಷ್ಟು ಇವನು ನಿಂಗೆ ನನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಘಟಶ್ರಾದ್ಧ:ಮಹಾದೇವ ಹಡಪದ

ಗಿರೀಶ ಕಾಸರವಳ್ಳಿಯ “ಘಟಶ್ರಾದ್ಧ” ನನ್ನ ಕತೆಯ ಜೊತೆ ಅತ್ಯಂತ ನಿಕಟವಾದ ಸಂಬಂಧ ಇಟ್ಟುಕೊಂಡಿದೆ. ನಾನು ಬೆಳೆದ ಪರಿಸರ ಗಿರೀಶ ಕಾಸರವಳ್ಳಿ ಬೆಳೆದ ಪರಿಸರಗಳ ನಡುವೆ ಅನೇಕ ಸಾಮ್ಯಗಳಿವೆ. ಒಬ್ಬ ಹುಡುಗ ಬೆಳೆದು ದೊಡ್ಡವನಾಗುವ ಕಷ್ಟ, ಮುಗ್ಧತೆ ಕಳೆದುಕೊಳ್ಳಬೇಕಾದ ಅನಿವಾರ್ಯ, ಅದರ ಸಂಕಟ, ನೈತಿಕ ಪ್ರಜ್ಞೆ ಬೆಳೆಸುವ ಮಾನವೀಯ ಸಂಬಂಧಗಳಲ್ಲಿ ಹುಟ್ಟುವ ತೊಡಕುಗಳು – ಇಂಥ ವಿಷಯಗಳಲ್ಲಿ ನನ್ನ ಅನುಭವಗಳೆಲ್ಲ ತನ್ನ ಸ್ವಂತ ಅನುಭವಗಳು ಎನ್ನುವಂತೆ ಗಿರೀಶ ಕಾಸರವಳ್ಳಿ “ಘಟಶ್ರಾದ್ಧ ” ಮಾಡಿದ್ದಾರೆ. – ಯು.ಆರ್.ಅನಂತಮೂರ್ತಿ ಸಾರ್ವಕಾಲಿಕವಾದದ್ದು ಯಾವಾಗ ಕಂಡರೂ, ಕಾಣಿಸಿದರೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಾರೂ ನೋಡಿರದ ಎವರ್-ಗ್ರೀನ್ ಕ್ಲಾಸಿಕ್:ವಾಸುಕಿ ರಾಘವನ್

ನಿಮಗೆ ಈ ಚಿತ್ರದ ಎಲ್ಲಾ ಹಾಡುಗಳು ಗೊತ್ತಿರಬಹುದು. ಕೇಳಿದ್ದರೆ ಮರೆತಿರಲಿಕ್ಕೆ ಸಾಧ್ಯಾನೇ ಇಲ್ಲ ಬಿಡಿ. ಆದರೂ ನೀವು ಈ ಸಿನಿಮಾ ನೋಡಿರೋ ಸಾಧ್ಯತೆಗಳು ಕಡಿಮೆ. ನಿಮಗೆ ಪರಿಚಯ ಇರೋರಲ್ಲಿ ಕೂಡ ಈ ಚಿತ್ರವನ್ನ ಯಾರೂ ನೋಡಿರಲಾರರು. ಚಾನ್ಸ್ ಸಿಕ್ಕರೆ ಈ ಚಿತ್ರವನ್ನ ನೋಡ್ತೀರಾ ಅಂದ್ರೆ ಇಲ್ಲಪ್ಪಾ ಅಂತೀರ! ಇದ್ಯಾವ ಚಿತ್ರನಪ್ಪಾ ಅಂತ ತಲೆ ಕೆರ್ಕೊತಾ ಇದೀರಾ? ತಡೀರಿ ಆ ಚಿತ್ರದ ಒಂದು ಹಾಡು ಇಲ್ಲಿದೆ: ಕಣ್ಣು ಕಡಲ ಹೊನ್ನು ನಸು ನಾಚಿದಾಗ ನೀನು ಸೌಂದರ್ಯ ನಿನ್ನ ನೋಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಂಗಳೂರಿನ ದಾಖಲೆ ಮಳೆ: ಪ್ರಶಸ್ತಿ ಅಂಕಣ

  ಟ್ರಾಫಿಕ್ ಜಾಂಗೂ ಬೆಂಗ್ಳೂರಿಗೂ ಖಾಸಾ ಖಾಸಾ ಅನ್ನೋದು ಎಲ್ಲರಿಗೂ ಗೊತ್ತಿರೋ ವಿಷಯನೇ..ಆದರೆ ಬೆಂಗ್ಳೂರಲ್ಲಿ ದಾಖಲೆ ಮಳೆಯೆಂಬ ದಾಖಲೆಯಲ್ಲಿ ದಾಖಲಾಗಿದ್ದು, ಮುಕ್ಕಾಲು ಘಂಟೆಯ ಪಯಣ ಮಳೆರಾಯನಿಂದ ಮೂರು ಘಂಟೆಯಷ್ಟಾಗಿದ್ದು  ಮಾತ್ರ ಮರೆಯಲಾರದ ನೆನಪುಗಳು..   ಮೊನ್ನೆ ಎಂದಿನಂತೆ ಶುಭ ಶುಕ್ರವಾರ. ಅಕ್ಷರಶ: ಸೆಕೆಯಲ್ಲಿ ಬೇಯ್ತಿರೋ ಬೆಂಗಳೂರಿಂದ ದೂರ ನನ್ನ ಹುಟ್ಟೂರೆಡೆಗೆ ತೆರಳೋ ಖುಷಿಯಿಂದ ಸಹಜವಾಗೇ ಶುಕ್ರವಾರ ಶುಭದ್ದೆನಿಸಿತ್ತು. ಆದರೆ ಸಂಜೆ ಆರು ಘಂಟೆಯಾಗುತ್ತಿದ್ದಂತೆಯೇ ಎಲ್ಲಿಂದಲೋ ಕವಿದ ಮೋಡಗಳು ಅದ್ಯಾವ ಮಾಯೆಯಲ್ಲಿ ಮಳೆ ಸುರಿಸತೊಡಗಿದವೋ ತಿಳಿಯಲೇ ಇಲ್ಲ…ಯಾರೋ  ಬಾಗಿಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಾಯಿಯ ಮನಸ್ಸು: ಲಿಂಗರಾಜು

           ಅಂದು ಸೋಮವಾರ, ನಾನು ಒಬ್ಬ ಮುಖ್ಯ ವ್ಯಕ್ತಿಯೊಬ್ಬರನ್ನು ಬೇಟಿ ಮಾಡಲು ಬೆಂಗಳೂರಿನ ಗಾಂದಿನಗರದ ಕಡೆ ಹೋಗಬೇಕಾಗಿತ್ತು..ಬೆಳಿಗ್ಗೆ 10 ಗಂಟೆಯ ಸಮಯ, ಕೆಂಪೇಗೌಡ ಬಸ್ ನಿಲ್ಧಾಣದಲ್ಲಿ ಬಸ್ಸಿನಿಂದ ಇಳಿದು ನಿಂತೆ.  ಸುತ್ತಲೂ ನೋಡಿ ಒಮ್ಮೆ ಬೆರಗಾದೆ ಎತ್ತ ನೋಡಿದರೂ ಜನರ ಗಜಿಬಿಜಿ. ಒಂದು ರಸ್ತೆಯಿಂದ ಮತ್ತೂಂದು ರಸ್ತೆಗೂ ದಾಟಲು ಅಸಾದ್ಯವಾದ ವಾಹನಗಳ ಸಾಲು.          ಮನಸ್ಸಿನಲ್ಲಿ ಏನೋ ಗೊಂದಲ, ಒಂದು ಕಡೆ ಸುಮ್ಮನೆ ನಿಂತುಬಿಟ್ಟೆ. ತಕ್ಷಣ ಒಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂವರ ಕವಿತೆಗಳು: ಪ್ರಭಾಕರ ತಾಮ್ರಗೌರಿ, ನಾಗರಾಜ್ ಹರಪನಹಳ್ಳಿ, ಸುಷ್ಮಾ ಮೂಡುಬಿದರೆ

ಕನ್ನಡಿ ಜಲ  ವಿಶಾಲವಾದ ತಿಳಿಗೊಳ ಅದರೊಳಗೆ ಇಣುಕಿ ನೋಡಿದರೆ ಕಾಣುವುದು ಮಿರಿಮಿರಿ ಮಿಂಚುವ ತಳ ಪ್ರತಿಬಿಂಬ ಕಾಣಲು ಸಾಕು ಈ ಕನ್ನಡಿ ಜಲ ..! ಅಪಾಯವೇನೂ ಇಲ್ಲವಾದರೂ ಇದರಲ್ಲಿ ಯಾರೂ ಸ್ನಾನ ಮಾಡಬೇಡಿ ; ಈಸಬೇಡಿ…. ಅತ್ತಿತ್ತ ಚಲಿಸುತ್ತಾ ಮನಕ್ಕೆ ಮುದ ನೀಡುವ ಬಣ್ಣ ಬಣ್ಣದ ಮೀನುಗಳ ಹಿಡಿದು ಕೊಲ್ಲಬೇಡಿ ಕಸಕಡ್ಡಿ , ಕಲ್ಲೆಸೆಯಬೇಡಿ ಕಾಲು , ಕೋಲು ಹಾಕಿ ಕಲಕಿ ತಿಳಿ ನೀರ ಕೆಡಿಸುವುದು ತಪ್ಪು ಕೊಳಕ ತೊಳೆಯಲು ಇದು ಜಾಗವೇ ಅಲ್ಲ ಶುದ್ದ ಜಲ…! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಫಿಟ್ಟಿಂಗ್ ನಲ್ಲಿ ಫಿಕ್ಸಿಂಗ್ ಫಿಕ್ಸು..!: ಎಂ. ಆರ್. ಸಚಿನ್

ಇವ ಸುಮ್ನೆ ಗೀಚ್ತಾನೆ, ಸೀರಿಯಸ್ ಆಗ್ಬೇಡಿ..!! ಮೊನ್ನೇ ದಾರೀಲಿ ಒಬ್ನೇ ನಡೆದುಕೊಂಡು ಹೋಗ್ತಾ ಇದ್ದೇ. ಎಳಿಯೋಕೆ ಯಾರ ಕಾಲೂ ಸಿಗದೇ, ಜೊತೆಗೆ ಯಾರೂ ಇಲ್ದೆ, ಸಿಕ್ಕಾಪಟ್ಟೆ ಬೋರಾಗ್ತಾ ಇತ್ತು. ಅದೇ ಸಮಯಕ್ಕೆ ಸರಿಯಾಗಿ ಒಂದು ನಾಲ್ಕೈದು ಮಂದಿ ಕೈಲಿ ಕೆಲ ಕ್ರಿಕೇಟ್ ಆಟಗಾರರ ಮಕಕ್ಕೆ ಮಸಿ ಬಳಿದ ಪಟ, ಬ್ಯಾನರ್ ಎಲ್ಲ ಹಿಡಿದು, ಘೋಷಣೆ ಕೂಗುತ್ತಾ ತಮ್ಮ ಹಳೇ ಚಪ್ಪಲಿಯಿಂದ ಪಟಪಟ ಅಂತಾ ಬಾರಿಸುತ್ತಿದ್ದರು. ನಾ ಕೇಳಿದೆ "ಸಾರ್ ಎಂಥಾ ಆಗ್ತಾ ಉಂಟು ಇಲ್ಲಿ? ನೀವ್ಯಾಕೆ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ಲವ್ ಕಹಾನಿ!: ನವೀನ್ ಮಧುಗಿರಿ

ಸುಡು ಸುಡು ಬಿಸಿಲಿನ ಬೇಸಿಗೆಯ ಒಂದು ಮಧ್ಯಾಹ್ನ. ಸಿಮೆಂಟು ಕಾಡಿನ ಮಧ್ಯೆ ಅಪರೂಪಕ್ಕೆ ಅಲ್ಲಲ್ಲಿ ಕಾಣಿಸುವ ರಸ್ತೆ ಬದಿಯಲ್ಲಿರುವ  ಒಂದೆರಡು ಮರಗಳೂ ಸಹ ತಲೆಬಾಗುವುದನ್ನು ಮರೆತು ತಟಸ್ಥ ಧ್ಯಾನಕ್ಕೆ ಶರಣಾಗಿವೆ. ಸೂರ್ಯೋದಯದ ನಂತರ ಆ ಊರಿನಲ್ಲಿ ಒಮ್ಮೆಯೂ ಗಾಳಿ ಬೀಸಿಲ್ಲ. ಒಂದೆಲೆಯೂ ಅಲುಗಿಲ್ಲ. ಮರದ ರೆಂಬೆಗಳು  ಬಿಸಿಲ ಬೇಗೆಗೆ ಬೆಂದು, ಚಲನವಿಲ್ಲದೆ ನಿರ್ಜೀವ ವಸ್ತುವಿನಂತೆ (ಸತ್ತಂತೆ) ಮಲಗಿವೆ.  ಆ ಊರಿನ ಯಾವುದೋ ಒಂದು ಬೀದಿಯಲ್ಲಿನ ಒಂದು ಮೂಲೆಯಲ್ಲಿ ಆಗಷ್ಟೇ ಗೃಹ ಪ್ರವೆಶವೋ, ನಾಮಕರಣವೋ, ಅಥವಾ ಇನ್ನಾವುದೋ ಕಾರ್ಯಕ್ರಮವು ನಡೆದಿತ್ತು. ಬಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯಾವುದು ತಪ್ಪು? ಯಾವುದು ಸರಿ?: ಸುಬ್ರಹ್ಮಣ್ಯ ಹೆಗಡೆ

ಟಿಪ್ಪಣಿ: ನಮ್ಮ ಜೀವನವೇ ಹಾಗೆ ಅಲ್ಲವೇ, ಜೀವನಪೂರ್ತಿ ನಾವು ಬದುಕುವುದೇ ಹಾಗೆ. ನಮಗೆ ಯಾವುದು ಸರಿಯಾಗಿ ಕಾಣುತ್ತದೆಯೋ ಅದನ್ನೇ ನಾವು ಮಾಡುತ್ತೇವೆ. ನಮಗೆ ಸರಿಯಾಗಿ ಕಂಡ ನಿರ್ಧಾರ ನಮ್ಮೆದುರಲ್ಲಿರುವವರಿಗೆ ಸಹ ಸರಿಯಾಗಿ ಕಾಣಬೇಕೆಂದೇನಿಲ್ಲ. ಅಷ್ಟೇ ಅಲ್ಲ, ಸ್ವಲ್ಪ ಸಮಯದ ನಂತರ ನಮ್ಮ ನಿರ್ಧಾರ ನಮಗೇ ಸರಿಯಾಗಿ ಕಾಣದೇ ಹೋಗಬಹುದು. ಇಬ್ಬರ ನಡುವಿನ ಒಂದು ವಾದದಲ್ಲಿಯೇ ಆಗಲೀ, ಜೀವನದ ಅತಿಮುಖ್ಯ ನಿರ್ಧಾರಗಳಲ್ಲಿಯೇ ಆಗಲೀ, ಇನ್ನೊಬ್ಬರ ಬಗೆಗಿನ ಸರಿತಪ್ಪುಗಳ ನಿರ್ಣಯದಲ್ಲಿಯೇ ಆಗಲೀ, ಒಂದೇ ಸರಿ ಮತ್ತು ಒಂದೇ ತಪ್ಪು ಇರಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಟಕಕಾರರಾಗಿ ಕುವೆಂಪು (ಭಾಗ-5):ಹಿಪ್ಪರಗಿ ಸಿದ್ದರಾಮ್

1931ರಲ್ಲಿ ರಚನೆಯಾದ ಮಹಾಕವಿ ಕುವೆಂಪರವರ ‘ಸ್ಮಶಾನ ಕುರುಕ್ಷೇತ್ರಂ’ ರಂಗಕೃತಿಯು ಇಂದಿಗೂ ಅತ್ಯಂತ ಪ್ರಸ್ತುತವಾಗುತ್ತಾ, ನಮ್ಮನ್ನು ಸದಾಕಾಲ ಸಾಮಾಜಿಕ ಸನ್ನಿವೇಶಗಳೊಂದಿಗೆ ಅನುಸಂಧಾನ ಮಾಡುವ ಕಥಾವಸ್ತು ಹೊಂದಿರುವ ಈ ರಂಗಕೃತಿಯಲ್ಲಿ ಯುದ್ಧೋತ್ತರ ಮಹಾಭಾರತದ ಚಿತ್ರಣ, ಪಂಪ, ರನ್ನ ಮುಂತಾದ ಕವಿಗಳು ಕುರುಕ್ಷೇತ್ರದ ಯುದ್ಧದ ಕೊನೆಯ ದೃಶ್ಯಗಳನ್ನು ತಮ್ಮ ಕಾವ್ಯಗಳಲ್ಲಿ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಿರುವುದನ್ನು ತಮ್ಮ ಪ್ರಾಂಜಲ ಮನದಿಂದ ಪರೋಕ್ಷವಾಗಿ ಮಹಾಕವಿಗಳು ಕೃತಜ್ಞತೆಯೊಂದಿಗೆ ಸ್ಮರಿಸಿಕೊಳ್ಳುತ್ತಾರೆ. ಇಂದಿನ ಜಾಗತೀಕರಣೋತ್ತರ ಭಾರತ ಮತ್ತು ಸಮಕಾಲೀನ ಸಂದರ್ಭದ ಜಗತ್ತಿನ ಪ್ರಭಲ ರಾಷ್ಟ್ರಗಳೆಲ್ಲವೂ ಸ್ವರಕ್ಷಣೆಯ ನೆಪದಲ್ಲಿ ಸಿಡಿಮದ್ದು, ಕ್ಷಿಪಣಿಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ