ಡಿಪೋ ಅಕ್ಕಿ: ಹನಿಯೂರು ಚಂದ್ರೇಗೌಡ
"ನ್ಯಾಯಬೆಲೆ ಅಂಗಡಿ" ಎಂಬೀ ಮೂರಕ್ಷರದ ಬೋರ್ಡಿನತ್ತ ಗಮನವಹಿಸಿದರೆ, ನನ್ನ ಮನವು ಪುಲಕಿತಗೊಳ್ಳುತ್ತದೆ. ಚನ್ನಪಟ್ಟಣ ತಾಲೂಕು ಬಹುತೇಕವಾಗಿ ಮಳೆಯನ್ನಾಶ್ರಯಿಸಿದ, ಅಲ್ಲಲ್ಲಿ ಕೊಂಚ ಪಂಪ್ ಸೆಟ್ಟನ್ನಾಶ್ರಯಿಸಿದ ಬೇಸಾಯ ಪದ್ದತಿಯನ್ನು ಹೊಂದಿದೆ. ಇಂಥ ತಾಲೂಕಿನ ನಮ್ಮನ್ನೂ ಸೇರಿಸಿ ಎಷ್ಟೋ ಜನರಿಗೆ ಅನ್ನದ ಆಸರೆಯಾಗಿದ್ದು ಮಾತ್ರ ಈ ಸೊಸೈಟಿಯ ಅಕ್ಕಿಯೇ. ನಾನು ಚಿಕ್ಕವನಾಗಿದ್ದಾಗ ನನ್ನ ಅಪ್ಪ-ಅವ್ವನ ಜತೆಯಲ್ಲಿ ತಿಂಗಳಿಗೊಂದಾವರ್ತಿ ಬರುತ್ತಿದ್ದ ಈ ಅಕ್ಕಿಯನ್ನು ತರಲು ಡಿಪೋ ಅಥವಾ ಸೊಸೈಟಿಗೆ ಹೋಗುತ್ತಿದ್ದದ್ದು, ಅದನ್ನು ನಾನೇ ಬಹಳ ಉತ್ಸಾಹದಿಂದ ಹೊತ್ತು ತರುತ್ತಿದ್ದದ್ದು ಈಗಲೂ ಪುಳಕಗೊಳಿಸುವ … Read more