ಆಡಿ ಬಾ ನನ ಕಂದ ; ಅಂಗಾಲ ತೊಳೆದೇನು!: ಡಾ. ಹೆಚ್ ಎನ್ ಮಂಜುರಾಜ್,
ಮಕ್ಕಳನ್ನು ಕುರಿತು ನಮ್ಮ ಜನಪದರು ಇನ್ನಿಲ್ಲದಂತೆ ಹಾಡಿ ಹರಸಿದ್ದಾರೆ. ಜನವಾಣಿ ಬೇರು; ಕವಿವಾಣಿ ಹೂವು ಎಂದು ಆಚಾರ್ಯ ಬಿಎಂಶ್ರೀಯವರು ಹೇಳಿದಂತೆ, ಜನಪದ ಹಾಡು, ಗೀತ ಮೊದಲಾದ ಸಾಹಿತ್ಯದ ಸೃಷ್ಟಿಕರ್ತರು ಬಹುತೇಕ ಹೆಣ್ಣುಮಕ್ಕಳೇ. ಅದರಲ್ಲೂ ತವರು, ದಾಂಪತ್ಯ, ಬಡತನ, ದೇವರು, ಸೋದರರು, ಗಂಡ, ಗಂಡನಮನೆ ಹೀಗೆ ಜನಪದ ತ್ರಿಪದಿಗಳನ್ನು ಗಮನಿಸಿದರೆ ಸಾಕು, ನಮಗೆ ಅರ್ಥವಾಗುತ್ತದೆ. ಏಕೆಂದರೆ ಭಾರತೀಯ ಕುಟುಂಬ ವ್ಯವಸ್ಥೆ ಹಾಗಿತ್ತು. ಈಗಿನದೆಲ್ಲ ಮೈಕ್ರೋ ಫ್ಯಾಮಿಲಿ ಯುಗ. ಕೂಡು ಕುಟುಂಬ ಮತ್ತು ಹಿರಿಯರ ಯಾಜಮಾನ್ಯಗಳು ನಮ್ಮ ಕೌಟುಂಬಿಕ ಪದ್ಧತಿಯನ್ನು … Read more