2022 ರ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ ಪ್ರಕಟಿತ ಕೃತಿಗಳ ಆಹ್ವಾನ

2022 ರ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ ಪ್ರಕಟಿತ ಕೃತಿಗಳ ಆಹ್ವಾನ ಅವ್ವ ಪುಸ್ತಕಾಲಯ ಸಾಹಿತ್ಯ ಬಳಗ ಕುಣಿಗಲ್ ವತಿಯಿಂದ “ಶ್ರೀಮಾನ್ ಲೇ. ನರಸಯ್ಯ” ಅವರ ಸ್ಮರಣಾರ್ಥ ಕೊಡಮಾಡುವ “ಅವ್ವ ಸೃಜನಶೀಲ ಸಾಹಿತ್ಯ ಪ್ರಶಸ್ತಿ” ಗಾಗಿ 2020 ರ ಜುಲೈ ತಿಂಗಳಿಂದ 2022 ರ ಜೂನ್ ತಿಂಗಳವರೆ ಪ್ರಕಟವಾಗಿರುವ ಕನ್ನಡ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. ಈ ಹಿಂದೆ ಪ್ರಶಸ್ತಿ ಪಡೆದವರು ಈ ವರ್ಷದ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. 2022 ರ ಆಗಸ್ಟ್ 31 ರೊಳಗೆ ತಮ್ಮ ಕೃತಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಂಗಳಮುಖಿಯ ಮುಖದಲ್ಲಿ ಕಂಡ ತಾಯಿಯ ಒಲುಮೆ: ಪ್ರಜ್ವಲ್‌ ಎಸ್.ಜಿ., ಸೀಗೆಕೋಟೆ

ಸೃಷ್ಟಿಯಲ್ಲಿ ಕೋಟ್ಯಾಂತರ ಜೀವರಾಶಿಗಳು ಉಂಟು. ಪ್ರತಿಯೊಂದು ಜೀವಿಗೂ ಅದರದೇ ಆದ ದೇಹರಚನೆ, ಆಹಾರಪದ್ದತಿ, ಬಣ್ಣ, ವರ್ತನೆ ಹೀಗೆ ಹಲವಾರು ವಿಭಿನ್ನವಾದ ವ್ಯತ್ಯಾಸಗಳನ್ನು ನೋಡಬಹುದು. ಈ ಸೃಷ್ಟಿಯನ್ನು ಬುದ್ದಿವಂತ ಜೀವಿಯಾದ ಮಾನವನು ವಿವಿಧ ರೀತಿಯಲ್ಲಿ ಅಧ್ಯಯನ ಮಾಡುತ್ತಾನೆ ಮತ್ತು ವ್ಯಾಖ್ಯಾನಿಸುತ್ತಾನೆ. ಕೆಲವರು ವೈಜ್ಞಾನಿಕ ದೃಷ್ಟಿಯಿಂದ, ಕೆಲವರು ಜೋತಿಷ್ಯ ಮತ್ತು ಖಗೋಳ ವೈಜ್ಞಾನಿಕ ದೃಷ್ಟಿಯಿಂದ ಅವರವರ ಮನಸ್ಥಿಗೆ ತಕ್ಕಂತೆ ಸೃಷ್ಟಿಯನ್ನು ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ಪ್ರತಿಯೊಂದು ಜಾತಿಯ ಪ್ರಾಣಿಗಳು, ಪಕ್ಷಿಗಳು, ಜೀವಜಂತುಗಳು ಪ್ರಕೃತಿಯ ಭಾಗಗಳಾಗಿ ಭೂಮಿಯಲ್ಲಿ ಮತ್ತು ನೀರಿನಲ್ಲಿ ವಾಸಿಸುತ್ತವೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿಲುಗನ್ನಡಿ ಪುಸ್ತಕ ಕುರಿತು ಕುಂ.ವೀ.ಅವರ ಅನಿಸಿಕೆ

ಸಹಸ್ರಾರು ವರ್ಷಗಳ ಹಿಂದೆಯೇ ‘ಮಸ್ಕಿ’ ಸಾಮ್ರಾಟ್ ಅಶೋಕನನ್ನು ಆಕರ್ಷಿಸಿದ ರಾಜ್ಯದ ಪ್ರಾಚೀನಾತಿ ಪ್ರಾಚೀನ ಸ್ಥಳ. ಆದರೆ ಸ್ವಾತಂತ್ರ್ಯೋತ್ತರವಾಗಿ ಮಸ್ಕಿ, ‘ಕೋಡಗುಂಟಿ’ ಎಂಬ ಹೆಸರಿನಿಂದ ಸಾಹಿತ್ಯಿಕವಾಗಿ ಹೆಸರಾಗಿದೆ. ಇಲ್ಲಿನ ಈ ಫ್ಯಾಮಿಲಿಗೆ ಸಾಂಸ್ಕೃತಿಕ ಹಿನ್ನಲೆ ಇದೆ, ಸದಭಿರುಚಿ ವ್ಯಕ್ತಿತ್ವವಿದೆ. ಬಸವರಾಜ ಮತ್ತು ಅವರ ತಂಗಿ ರೇಣುಕಾ, ಬಂಡಾರ ಹೆಸರಿನ ಪ್ರಕಾಶನ ಸಂಸ್ಥೆ ಆರಂಭಿಸಿದವರು, ತನ್ಮೂಲಕ ಸದಭಿರುಚಿ ಕಿತಾಬುಗಳನ್ನು ಪ್ರಕಟಿಸಿದವರು, ಈ ಹೆಸರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಯುವ ಮನಸ್ಸುಗಳನ್ನು ಪ್ರೋತ್ಸಾಹಿಸಿದವರು. ರೇಣುಕಾಳ ಚಟವಟಿಕೆಗಳನ್ನು ಹಲವು ವರ್ಷಗಳಿಂದ ಸೂಕ್ಷ್ಮವಾಗಿ ಗಮನಿಸುತ್ತಿರುವೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂರು ಕವಿತೆಗಳು: ಶಿವಮನ್ಯೂ ಪಾಟೀಲ

೧ ಆ ಬೆಳಕೊಂದು ಕತ್ತಲ ಆ ಬೆಳಕೊಂದು ಕತ್ತಲಗರ್ಭ ಸೀಳಿ ಬರುತಲಿದೆ ಈ ಜಗಕೆ.ಧರಣಿ ಒಡಲ ಬಿಗಿದಪ್ಪಿಕೊಳ್ಳಲುಹಸಿರ ಹುಲ್ಲು ಹಾಸಿನ ಇಬ್ಬನಿಯ ಚುಂಬಿಸಲು. ಜಗವೆಲ್ಲಾ ಗಾಢ ನಿದ್ರೆಯಲ್ಲಿಮೈಮರೆತಿರಲುಹೊಂಬೆಳಕು ತಾ ಹೊಸತನದಿಕೋಳಿ ಕೂಗುವ ದನಿಗೆ ದನಿಗೂಡಿಸುತಿದೆ.ಸ್ಫೂರ್ತಿಯ ದಾರಿ ತೆರೆದು, ಹೊಸಹೆಜ್ಜೆಗೆ ಹೆಜ್ಜೆ ಹಾಕುತ್ತಾ ಜೊತೆ ಸಾಗಿದೆ. ಹಸಿರ ಬನದ ಸೊಬಗಿಗೆಹಾರೋ ಹಕ್ಕಿಯ ಹುರುಪಿಗೆ.ಬಾಗಿಲು ತಾ ತೆರೆದು ನಲಿಸುತಿದೆ.ಹರಿವ ಜಲಧಾರೆಯ ನಾದದೊಳಗೆಮೀಯುತ.ಮೂಡುವ ಕಾಮನಬಿಲ್ಲಲಿ ಹೊಳೆಯುತ್ತಾ.ಇರುಳ ತೆರೆಯ ಪರದೆಯ ಸರಿಸುತ್ತಾಬೆಳಕೊಂದೂ ಓಡೋಡಿ ಬರುತಿದೆಕತ್ತಲ ಗರ್ಭ ಸೀಳಿ, ಜಗಕೆ. ೨ ಜನನಿಗೊಂದು ಪ್ರಣಾಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಡಲಿಲ್ವೇ ! ಕೊಡಲಿಲ್ವೇ ! ?: ಎಂ ಆರ್ ವೆಂಕಟರಾಮಯ್ಯ

ಏನು ಕೊಡಲಿಲ್ಲಾ ! ಯಾರು ಕೊಡಲಿಲ್ಲಾ ? ಯಾತಕ್ಕೆ ಕೊಡಲಿಲ್ಲಾ ! ಏನೂ ಅರ್ಥವಾಗದೇ ! ಯಾರದೀ ಆಲಾಪ, ಪ್ರಲಾಪ, ಎಂದಿರಾ ! ಇದೆಲ್ಲಾ ನಮ್ಮವರದೇ, ನಮ್ಮ ಜನರದೇ, ಈ ಸಮಾಜದಲ್ಲಿರುವ ಹಲವರದೇ ಎಂದರೆ, ಉಹೂಂ, ಇದರಿಂದಲೂ ಏನೂ ಅರ್ಥವಾಗಲಿಲ್ಲಾ. ಎಲ್ಲಾ ಒಗಟು, ಗೊಂದಲಮಯವಾಗಿದೆ ಎನ್ನಬಹುದು ಕೆಲವು ಓದುಗರು. ಕೆಲ ಕೆಲವರ ಆಲಾಪ ಅವರವರದೇ ಆದ ಕಾರಣಗಳಿಗಾಗಿರುತ್ತದೆ, ಇವುಗಳ ಜಲಕ್ ಹೀಗಿದೆ : ಪ್ರತಿ ದಿನವೂ ನಿಮ್ಮ ವ್ಯಾಪಾರ, ವ್ಯವಹಾರ, ಕಸುಬಿನ ಸಂಬಂಧವಾಗಿ ನೀವು ಭೇಟಿ ಮಾಡುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡಾ.ಅರವಿಂದ ಪಟೇಲ್ ಅವರ “ಹಾಲು ಚೆಲ್ಲಿದ ಹೊಲ” ಕವನ ಸಂಕಲನ ಬಿಡುಗಡೆ ಸಮಾರಂಭ

ಅಂಕುರ ಪ್ರಕಾಶನ ಪ್ರಕಟಿಸಿರುವ ಡಾ.ಅರವಿಂದ ಪಟೇಲ್ ಅವರ “ಹಾಲು ಚೆಲ್ಲಿದ ಹೊಲ” ಕವನ ಸಂಕಲನವನ್ನು ಮಾರ್ಚ್ 20, ಭಾನುವಾರ, ಬೆಳಿಗ್ಗೆ 10.30ಕ್ಕೆ ಚಾಮರಾಜಪೇಟೆಯ ಐಎಂಎ ಸಭಾಂಗಣದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ಜನಾರ್ಪಣೆ ಮಾಡಲಿದ್ದಾರೆ.  ಉಪಸ್ಥಿತಿ: ವಿಪ್ರೋ ಸಂಸ್ಥೆಯ ತರಬೇತಿ ವಿಭಾಗದ ಜಾಗತಿಕ ಮುಖ್ಯಸ್ಥರಾದ ಪಿ.ಬಿ.ಕೋಟೂರ, ವೈದ್ಯ ಲೇಖಕ ಡಾ.ಸಲೀಮ ನದಾಫ, ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ದಕ್ಷಿಣ ವಲಯ) ಉಪಾಧ್ಯಕ್ಷರಾದ ಸಿರಿಗೇರಿ ಪನ್ನರಾಜ, ಕನ್ನಡ ಸಹಾಯಕ ಪ್ರಾಧ್ಯಾಪಕಿ ಸೌಮ್ಯಾ ಕೋಡೂರು, ಕವಿ ಡಾ.ಅರವಿಂದ ಪಟೇಲ್, ಪ್ರಕಾಶಕ ಚಂದ್ರಕಾಂತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅನುವಾದಿತ ಕವಿತೆಗಳು: ಡಾ. ಮಲರ್ ವಿಳಿ . ಕೆ

ನಿನ್ನ ಮತ್ತು ನನ್ನ ನಡುವಿನ ಪದ‌ ಪ್ರಾಣಿಯೊಂದನುಬೇಟೆಯಾಡುವಂತೆಆ ಪದವನು ಹಿಡಿಯಲುನನ್ನ ಬಲೆ/ಕುಣಿಕೆಗಳನ್ನು ಹಾಕಿಕಾದಿದ್ದೇನೆ. ಗಾಳಿಯಂತೆ ಸಂವೇದನಾಶೀಲವಾದದೇವರಂತೆ ಯಾಮಾರಿಸುವ ಆ ಪದನನಗೆ ಸಿಗದೆ ತೊಂದರೆ ಕೊಡುತ್ತಿದೆ. ಎಲ್ಲರ ಸಮ್ಮುಖದಲ್ಲೂನಿಮ್ಮನ್ನು ನನ್ನ ಮಡಿಲಲ್ಲಿಟ್ಟುನಿಮ್ಮ ಹೊಟ್ಟೆಯಿಂದಕರುಳನ್ನು ಕೀಳುವಂತೆಆ ಪದವನುಕೀಳಬೇಕು ಎಂಬುದು ನನ್ನ ಬಯಕೆ ನನ್ನ ಮೂಳೆಗಳನು ಚುರುಗುಟ್ಟಿಸುವಆ ಪದವಂತೂನಿಮ್ಮ ರಕ್ತದ ನಂಜಾಗಿ ಹರಿಯುತ್ತಿದೆ ಒಂದು ಪದ ಅಷ್ಟೇ!ನಿಮಗೆ ವರವಾಗಿಯೂನಮಗೆ ಶಾಪವಾಗಿಯೂಜನಿವಾರವ ಎದೆಯ ಮೇಲೆ ಧರಿಸುವಮಂತ್ರವಾಗಿಯೂ ನನ್ನ ಅಗಲಿಸಿ ನಿಲ್ಲಿಸುವಬೈಗುಳವಾಗಿಯೂ ನಾನು ಸೋಲಬಹುದುಇಂದಲ್ಲ ನಾಳೆನಮ್ಮ ಮಕ್ಕಳುಆ ಪದದ ಕೊಂಬನ್ನು ಹಿಡಿದು ನೂಕಿಅದರ ಧ್ವನಿಪೆಟ್ಟಿಗೆಯನ್ನೇಕತ್ತರಿಸುವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೇತುರಾಮ್.ಎಸ್.ಎನ್. ಇವರ ದಹನ ಪುಸ್ತಕದ ಬಗ್ಗೆ ಅನಿಸಿಕೆ: ದೀಪು ಹುಲ್ಕುಳಿ

ನಾನು ಓದಿದ ಪುಸ್ತಕ : ದಹನಲೇಖಕರು : ಶ್ರೀ ಸೇತುರಾಮ್ ಇಲ್ಲಿ ಬಂಡಾಯವಿಲ್ಲ … ಭಾವವಿದೆನೈತಿಕತೆಗೆ ಬಣ್ಣಗಳಿಲ್ಲ … ಒಳ ನೊಟವಿದೆ. ಕನ್ನಡ ಸಾಹಿತ್ಯ ಲೋಕದಲ್ಲಿ ಅನೇಕ ಸ್ತ್ರೀ ಸಂವೇದಿಶೀಲ ಸಾಹಿತಿಗಳಿದ್ದಾರೆ, ಆಗಿ ಹೋಗಿದ್ದಾರೆ, ಮುಂದೆ ಭವಿಷ್ಯದಲ್ಲಿ ಆಗುವರು ಇದ್ದಾರೆ. ಆ ಎಲ್ಲಾ ಸಾಹಿತಿಗಳ ಸಾಹಿತ್ಯ ಒಳಗೊಂಡ ಮಹಿಳಾ ಸಂವೇದನಾ ಶೀಲ ಸಾಹಿತ್ಯದ ವಿಮರ್ಷೆ ಸಂಪೂರ್ಣವೆನಿಸುವುದು ಶ್ರೀ ಸೇತುರಾಮರ ದಹನ ಹಾಗೂ ನಾವಲ್ಲ ಈ ಎರಡು ಪುಸ್ತಕಗಳ ಬಗ್ಗೆ ಉಲ್ಲೇಖಿಸಿದಾಗ ಮಾತ್ರ ಎಂಬುವುದು ನನ್ನ ದೃಢವಾದ ಅಭಿಮತ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಜ್ಜೆ: ವಿಜಯಾಮೋಹನ್‍ ಮಧುಗಿರಿ

ಇನ್ನು ಮಸುಕರಿಯದ ಮೋಡ, ಅದು ನೆಟ್ಟಗೆ ಕಣ್ಣಿಗ್ಗಲಿಸ್‍ತ್ತಿಲ್ಲ. ಆವತ್ತು ಬೆಳಕರದ್ರೆ ಊರು ನಾಡಿಗೆ ಹೊಸ ಸಮೇವು(ಸಂದರ್ಭ) ಚೆಲ್ಲುವ. ಬೇವು ಬೆಲ್ಲ ಒಂದಾಗಿ,ಭೂಮಿ ಮ್ಯಾಲೆ ಬದುಕೀರೆ ಕಷ್ಟ ಸುಖದ ಸಮಪಾಲಾಗಿ ಹಂಚಿ ಬದುಕ ಬೇಕೆಂದು, ಮತ್ತು ಅಂಗೆ ಹಂಚಿ ಉಣ್ಣುಬೇಕೆಂದ, ಅಜ್ಜ ಮುತ್ತಜ್ಜಂದಿರೆಲ್ಲ ಹೇಳುತ್ತಿದ್ದ ಯುಗಾದಿ ಹಬ್ಬ. ಮೊಗ್ಗುಲಲ್ಲಿ ಮಲಗಿದ್ದ ಹೆಂಡತಿಯ ಗೊರಕೆ, ಅದು ಅದ್ರ ಪಾಡಿಗದು ಯಾರ ಮುಲಾಜಿಗಜಂದೆ ಏರಿಳಿತದ ಸವಾರಿ ಮಾಡುತ್ತಿತ್ತು. ಹಬ್ಬದ ದಿನಗಳೇನಾದರು ಬಂದರೆ ಯಾರಿಗ್ ಮಾಡ್‍ಬೇಕ್ ಹಬ್ಬ ಅದು ಇಂಗೆ ಮಾಡ್‍ಬೇಕ್‍ಅಂಬೋದೇನೈತೆ? ಹೆಂಡತಿಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೇಸರನಿಲ್ಲದ ಬಾನ ಎದೆಯಲ್ಲಿನ ಮೌನ: ಚೇತನ್ ಪೂಜಾರಿ, ವಿಟ್ಲ.

ನೀನೊಂತರ ಹವಳದ ಮುತ್ತು. ಬಳಿ ಇಲ್ಲದೆಯೂ ಏರಿಸುತ್ತಿರುವೆ ನಿನ್ನದೇ ಮತ್ತು. ನಗು ನಗುತ ನನ್ನೆದೆ ಹೊಕ್ಕು ಬಾಳ ಕಣ್ಣಾದವಳು ಇಂದು ಕಣ್ಣಂಚಲಿ ನೆನಪಾಗಿ ಕುಳಿತಿರುವೆ. ಕರೆವೆನೆಂದರೂ ಕೇಳಿಸದ ಊರಲಿ ನೀ ಕುಳಿತಿರುವೆ. ನಕ್ಕು ನಲಿವ ನಕ್ಷತ್ರವಾಗಿ ಮಿನುಗುತ ಎಲ್ಲರಿಗೂ ಮೆರುಗು ತರುತ್ತಿರುವೆ ಎಂದು ಭಾವಿಸುವೆ. ಏಕೆಂದರೆ ನೀ ಎನಗೆ ಕಲಿಸಿದ ಮೊದಲ ಪ್ರೇಮವೇ ನಗು. ನೋವಿನಲ್ಲೂ ನಗು. ನೋವ ಮರೆಸಲು ನಗು. ಮಗುವಾಗಿಸೋ ನಗು. ಪೆದ್ದು ಪೆದ್ದು ಮಾತಿನಲೂ ಪ್ರಬುದ್ಧೆ ನೀ.ತಿದ್ದಿ ಬುದ್ಧಿ ಹೇಳೋ ತಿಳುವಳಿಕೆಯಲಿ ಬುದ್ಧೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗ ಘಟಕದಿಂದ 2021 ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಶಿವಮೊಗ್ಗಸೃಜನ ಶಿಕ್ಷಣ ಸಂಶೋಧನಾ ಟ್ರಸ್ಟ್ (ರಿ)ಮಕ್ಕಳ ಮಂದಾರ ಬಳಗ ಸಹಯೋಗದಲ್ಲಿ2021 ನೇ ಸಾಲಿನ ವಿವಿಧ ಐದು ವಿಭಾಗಗಳ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1. ಡಾ.ಕೊಡಕ್ಕಲ್ ಶಿವಪ್ರಸಾದ್ ದತ್ತಿ ಪುರಸ್ಕಾರ ರಾಜ್ಯದ ಅಂಗವಿಕಲ ಮಕ್ಕಳ ಶಿಕ್ಷಣ , ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದವರಿಗೆ ಈ ಪುರಸ್ಕಾರ ಮೀಸಲಾಗಿದೆ. ಸಂಬಂಧಿಸಿದ ತಮ್ಮ ಸೇವಾ ವಿವರಗಳನ್ನು ಪಿಡಿ ಎಪ್ ಕಳುಹಿಸಲು ಕೋರಿದೆ. Makkalamandara@gmail.com 2 .”ಮಕ್ಕಳ ಮಂದಾರ ರಾಜ್ಯ ಪ್ರಶಸ್ತಿ” ಪುರಸ್ಕಾರಕ್ಕೆ ಅರ್ಜಿ ಆಹ್ವಾನ 21 … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉತ್ತರ ಪುಸ್ತಕ ಪರಿಚಯ: ಪೂಜಾ ಮಂಗಳೂರು

ಮನಸ್ಸನ್ನು ಕಾಡಿಸುವ ಪ್ರಶ್ನೆಗಳು ಬದುಕಲ್ಲಿ ಬಂದಾಗ “ಉತ್ತರ” ದ ಮೂಲವನ್ನು ಹುಡುಕುವ ನಿರ್ಧಾರವನ್ನು ಮನಸ್ಸು ಮಾಡುತ್ತದೆ. ಆ “ಉತ್ತರ”ಕ್ಕಾಗಿಯೇ ಸುಪ್ರೀತ್ ಕೆ.ಎನ್. ಅವರು ಈ ಕೃತಿಯನ್ನು ಆಧ್ಯಾತ್ಮದ ಬೇರೆ ಬೇರೆ ಆಯಾಮದಲ್ಲಿ ರಚಿಸಿದ್ದಾರೆ.ಕೆಲಸದ ಒತ್ತಡದ ಮಧ್ಯೆಯೂ ಈ ಪುಸ್ತಕವನ್ನು ಓದಿ ಕೆಳಗಿಟ್ಟಾಗ ಮನಸ್ಸು ಒಮ್ಮೆ ಅಧ್ಯಾತ್ಮದತ್ತ ವಾಲಿದ್ದೂ ನಿಜ.‌ ಇದರ ಮೊದಲು ಸುಪ್ರೀತ್ ಅವರ ಎಲ್ಲ ಬರವಣಿಗೆಯನ್ನು ಓದಿದ್ದೇನೆ. ಕಳೆದ ಬಾರಿ ಅವರು ಬರೆದ “ಸಾವು” ಕಾದಂಬರಿಯು ತುಂಬಾ ಕಾಡಿಸಿತ್ತು. ಈಗ “ಉತ್ತರ” ದ ಮೂಲಕ ಅವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಿಜಾಬ್ ಮತ್ತು ವಿದ್ಯಾಭ್ಯಾಸ: ರಾಘವೇಂದ್ರ ಅಡಿಗ ಎಚ್ಚೆನ್

ಕಳೆದ ಕೆಲ ದಿನಗಳಿಂದ ದೇಶದಾದ್ಯಂತ ಹಿಜಾಬ್ ಕುರಿತ ವಿವಾದ ಹೊಗೆಯಾಡುತ್ತಿದೆ. ಉಡುಪಿಯ ಕಾಲೇಜಿನಲ್ಲಿ ಪ್ರಾರಂಭವಾದ ಚಿಕ್ಕ ಘಟನೆಯೊಂದು ದೇಶದ ಗಡಿಗಳನ್ನು ಮೀರಿ ವಿವಾದವಾಗಿ ಮಾರ್ಪಟ್ಟಿದೆ ಎಂದರೆ ಈ ಆಧುನಿಕ ಕಾಲದಲ್ಲಿಯೂ ಮಾನವನು ಧರ್ಮದ ಸಂಬಂಧವಾಗಿ ಹೇಗೆ ಭಾವಿಸಿಕೊಂಡಿದ್ದಾನೆ ಎನ್ನುವುದಕ್ಕೆ ಸಾಕ್ಷಿ. ರಾಜ್ಯದ ನಾನಾ ಶಾಲೆ, ಕಾಲೇಜುಗಳಲ್ಲಿನ ಕೆಲ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಿಕೊಳ್ಳಲು ಅವಕಾಶ ಸಿಗದಿದ್ದರೆ ಶಿಕ್ಷಣವನ್ನೇ ಮೊಟಕು ಮಾಡುತ್ತೇವೆ ಎನ್ನುವವರೆಗೆ ಮುಂದುವರಿದಿದ್ದಾರೆ. ಇದು ನಿಜಕ್ಕೂ ಆಘಾತಕರ. ”ನಮಗೆ ನಮ್ಮ ಇಸ್ಲಾಂ ಧರ್ಮ, ಹಿಜಾಬ್ ಮುಖ್ಯ, ಶಾಲೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೋಜಿಗದ ಬಳ್ಳಿ ಎಂಬ ನವಿರು ಪ್ರೇಮ ಕಥನ: ನಟರಾಜು ಎಸ್.‌ ಎಂ.

ಎಂ ಆರ್‌ ಭಗವತಿಯವರ ನಿರೂಪಣೆ ಮತ್ತು ಸಂಯೋಜನೆ ಇರುವ ಸೋಜಿಗದ ಬಳ್ಳಿ ಮೊನ್ನೆ ಮೊನ್ನೆಯಷ್ಟೇ ನನ್ನ ಕೈ ಸೇರಿತು. ಪುಸ್ತಕವನ್ನು ಒಂದೆರಡು ದಿನಗಳಲ್ಲಿ ಪಟ್ಟು ಹಿಡಿದು ಓದಿ ಮುಗಿಸಿದೆ. ಒಮ್ಮೊಮ್ಮೆ ಕುತೂಹಲದಿಂದಲೂ, ಒಮ್ಮೊಮ್ಮೆ ಆಲಸ್ಯದಿಂದಲೂ, ಒಮ್ಮೊಮ್ಮೆ ನಿದ್ದೆಗಣ್ಣಿನಿಂದಲೂ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಈ ಪುಸ್ತಕದ ಕುರಿತು ಬರೆಯಲೇಬೇಕು ಅನಿಸಿತು. ಆ ಕಾರಣಕ್ಕೆ ಈ ಲೇಖನ. ಸೋಜಿಗದ ಬಳ್ಳಿ ಪುಸ್ತಕ ನನಗೆ ಗಮನ ಸೆಳೆದಿದ್ದು ಅದರಲ್ಲಿ ಮಿಳಿತಗೊಂಡಿರುವ ನವಿರಾದ ಪ್ರೇಮದ ಕಾರಣಕ್ಕೆ. ಅದಕ್ಕೆ ಸಾಕ್ಷಿ ಎಂಬಂತೆ ನವಿರಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಮುಕ್ತಿ ಎಂದು? ಮಾನವೀಯತೆ ಸತ್ತುಹೋಯಿತೆಜಾತಿ ಧರ್ಮ ಕುಲ ನಶಿಸಿ ಹೋಯಿತೆಶವಗಳು ಬಿಸಾಡುವ ಸ್ಥಿತಿ ಬಂದಿತೆ ಲಕ್ಷಾಂತರ ಜೀವ ನೋವು ನರಳಾಟ ಸಾವಿನೆಡೆಭೀಕರ ಮಾರಕ ರೋಗಗಳು ವಿಶ್ವದೆಲ್ಲೆಡೆ ಚಿಕಿತ್ಸೆ ಇಲ್ಲದೆ ನರಳಿ ನರಳಿ ಸಾಯುತಿಹರುರೋಗದ ಸೋಂಕು ಎಲ್ಲೆಡೆ ಹರಡುತ್ತ ನೆತ್ತರು ಮಮತೆ ವಾತ್ಸಲ್ಯ ಪ್ರೀತಿ ಸಮಾಧಿ ಆಯಿತುಬದುಕಿ ಉಳಿದವರು ಶವದಂತೆ ಬದುಕುವಂತಾಯಿತುಸಾವು-ನೋವು ಹಿಂಬಾಲಿಸುವ ಭಯಾನಕ ನೆರಳಾಯಿತು ವಿಶ್ವವೇ ಭಯಭೀತ ವಾಗಿರಲೂ ನೆಮ್ಮದಿ ಇಲ್ಲಕಾಲದ ಗರ್ಭಪಾತವಾಗಿ ರಕ್ತಸಿಕ್ತ ಭಾವಗಳೆಲ್ಲ ಮೇಲು ಕೀಳು ಎನ್ನದೆ ಸಹಸ್ರಾರು ಬಲಿಯಾದರುಸಂಸ್ಕೃತಿ ಇಲ್ಲ ಸಂಸ್ಕಾರವಿಲ್ಲ ಸ್ಮಶಾನವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಹಾಕಾವ್ಯಗಳ ಮಹಾಯಾನ: ಎನ್.ಎಸ್.ಶ್ರೀಧರ ಮೂರ್ತಿ

ಮಹಾಕಾವ್ಯಗಳು ಜಗತ್ತಿನ ಎಲ್ಲಾ ನಾಗರೀಕತೆಯಲ್ಲಿಯೂ ಮೂಡಿ ಬಂದಿವೆ, ಇನ್ನೂ ಕೆಲವು ಮಹಾ ಕಾವ್ಯಗಳು ಮೂಡಿ ಬರುತ್ತಲೇ ಇವೆ. ಮಹಾಕಾವ್ಯ ಎಂದು ಕರೆಸಿ ಕೊಳ್ಳುವುದು ಕೇವಲ ಗಾತ್ರದ ದೃಷ್ಟಿಯಿಂದಲ್ಲ ಅದರ ಅಂತಸತ್ವದ ದೃಷ್ಟಿಯಿಂದ. ಅದರಲ್ಲಿ ಒಂದು ರೀತಿಯಲ್ಲಿ ಪರಂಪರೆಯ ಮೌಲ್ಯಗಳೇ ಅಂತರ್ಗತವಾಗಿರುತ್ತವೆ. ಕೆಲವು ಜಗತ್ತಿನ ಅಂತಹ ಮಹಾಕಾವ್ಯಗಳ ಪರಿಶೀಲನೆ ಈ ಲೇಖನದ ಉದ್ದೇಶ. ಸಮೇರಿಯನ್ನರ ‘ಗಿಲ್ಗಮೇಶ್’ ಮತ್ತು ಜಪಾನಿನ ಮುರಸಾಕಿಯ ‘ಗೆಂಜಿ ಮನೋಗಟರಿ’ ಪ್ರಾರಂಭಿಕ ಮಹಾಕಾವ್ಯಗಳು ಎಂದು ಕರೆಸಿ ಕೊಂಡರೂ ಹೋಮರ್‍ನ ‘ಇಲಿಯಡ್’ನಿಂದ ಮಹಾಕಾವ್ಯಗಳ ಪರಂಪರೆ ಆರಂಭ. ಹೆಲನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಸೆ: ವಿಜಯಾಮೋಹನ್

ಆಸೆಊರೆಂದರೆ ಅದು ಎಲ್ಲ ಊರುಗಳಂತ ಊರಾಗಿರಲಿಲ್ಲ, ಅದೇನೊ ಅದೊಂತರ ರೀತಿ ನೀತಿಯೆಂಬಂಗೆ ಕಾಣ್ತ್ತಿರಲಿಲ್ಲ. ಆ ಊರಿನ ಮೊಗ್ಗುಲಿಗೆ ಹೋಗಿ ನಿಂತು ನಿಗಾ ಮಾಡಿದರೆ, ಅಲ್ಲಿ ಒಂದು ಕೇರಿಯಲ್ಲ, ಅದು ಒಂದು ಬೀದಿಯು ಅಲ್ಲ, ಏನೋ ಒಂತರ ಲೆಕ್ಕ ಬುಕ್ಕಕ್ಕೆ ಕಾಣದ ಮನೆಗಳು. ಈ ತಗ್ಗಿನೊಳಗೆ ನಾಕೈದು ಮನೆಗಳು, ಆ ಎತ್ತರಕ್ಕೆ ಮೂರು ನಾಕು ಮನೆಗಳು, ಈ ಬಾಗಕ್ಕೆ ನೋಡಿದರೆ ಎರೆಡೆ ಎರಡು ಮನೆಗಳು, ಆ ಪಕ್ಕಕ್ಕೆ ನೋಡಿದರೆ ಒಂದೊ ಎರಡೊ ಮನೆಗಳು, ಇಂತ ಸಾಲು ಮೂಲೆ ಕಾಣದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸಿನ ರಾಜಕುಮಾರ: ಮಧುಕರ್ ಬಳ್ಕೂರ್

“ವಾವ್ಹ್..! ಯಶು ಈ ನಡುವೆ ಅದೆಷ್ಟು ಸುಂದರವಾಗಿ ಕಾಣ್ತಾಳೆ..! ಅದ್ಯಾಕೆ ನನ್ನನ್ನು ಅಷ್ಟೊಂದು ಅಟ್ರಾಕ್ಟಿವ್ ಮಾಡ್ತಿದಾಳೆ..! ಈಗ ಇದ್ದ ರೂಪವಲ್ಲವೆ ಆಗಲೂ ಇದ್ದಿದ್ದು..! ನನಗಂತೂ ಅರ್ಥ ಆಗ್ತಾ ಇಲ್ಲ. ಒಂದಂತೂ ನಿಜ. ಇಷ್ಟು ದಿನ ನಾನು ನೋಡಿರೋ ಹುಡುಗಿರಲ್ಲೆ ಯಶು ತುಂಬಾನೆ ಸ್ಪೇಷಲ್. ಅವಳಲ್ಲೆನೋ ಒಂದು ನಿಗೂಢತೆ ಇದೆ..! ಅದೇನು ಒಮ್ಮೆಲೇ ಹುಟ್ಟಿ ಸಾಯುವಂತ ಆಕರ್ಷಣೆ ಅಲ್ಲ. ಮುಗಿಲಾರದ ಸೆಳೆತವೆನೋ ಅನ್ನಿಸ್ತಾ ಇದೆ..! ಜೀವನ ಸಂಗಾತಿಯಲ್ಲಿ ನೋಡುವ ಸೆಳೆತವದು. ಸ್ಟುಪಿಡ್ ನಾನು. ಹೋಗಿ ಹೋಗಿ ಇಂತಹ ಹುಡುಗಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅನುಭವದ ಅನಾವರಣ: ಸಂಕಲ್ಪ (ಸದಾಶಿವ ಡಿ ಓ)

ಬರಹವು ಆದಿ ಅನಾದಿ ಕಾಲದಿಂದ ತನ್ನದೇ ಆದ ಗಟ್ಟಿತನವನ್ನು ಉಳಿಸಿಕೊಂಡು ಬಂದಿದೆ. ಇದರಲ್ಲಿನ ತಮ್ಮ ಆದಿ ಗ್ರಂಥಗಳು ಮಾತಿನ ರೂಪದಲ್ಲಿರದೆ ಇಂದು ಓದುಗನ ಕೈಯಲ್ಲಿ ನಲಿದಾಡುತ್ತಿವೆ. ಈ ಬರಹಗಳನ್ನು ಎರಡು ರೀತಿಯಾಗಿ ನಾವು ಕಾಣಬಹುದು. ಮೊದಲನೆಯದು ಕಲ್ಪನೆ ಎರಡನೆಯದು ವಾಸ್ತವತೆ. ಹಾಗೂ ಅಲ್ಲಿ ಇಲ್ಲಿ ಎಲ್ಲೋ ಒಬ್ಬರಿಂದ ಮತ್ತೊಬ್ಬರ ಬಾಯಿ ಮಾತುಗಳಿಂದ ರವಾನೆಯಾದ ವಿಷಯಗಳು ಇಂದು ಪ್ರಸ್ತುತದಲ್ಲಿವೆ ಆದರೆ ಇದರ ಪ್ರಮಾಣ ಅತ್ಯಲ್ಪ. ಆದ್ದರಿಂದ ಒಬ್ಬೇ ಒಬ್ಬ ಆ ಭಾಷೆ ತಿಳಿದಿರುವ ಕೊನೆಯ ವ್ಯಕ್ತಿ ಇರುವುವವರೆಗೂ ಶಾಶ್ವತವಾಗಿರುತ್ತವೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಳೆ ಊರಿನ ಹುಡುಗಿಗೆ: ವೃಶ್ಚಿಕ ಮುನಿ (ಪ್ರವೀಣಕುಮಾರ ಸುಲಾಖೆ)

ನೆನಪಾಗುತ್ತೀಯ ಎಂದು ಪತ್ರ ಬರೆಯುತ್ತಿಲ್ಲ, ಪತ್ರ ಬರೆಯುತ್ತಿರುವುದು ನೆಪವಷ್ಟೆ ನೆನಪಿಗೆ ಉತ್ತರಿಸಲು.ಗೆ. .ಮಳೆ ಊರಿನ ಹುಡುಗಿಗೆರಥ ಬೀದಿಯ ಕೊನೆಯ ತಿರುವುಕೆಂಪು ಹೆಂಚಿನ ಮನೆಫೋಸ್ಟ :ಮಳೆಊರು ಇಂದ. .ಅಲೆಮಾರಿಯ ನೆಲೆಯಿಂದಖಾಸಾಕೋಣೆಯ ಬಿಸಿಯುಸಿರುಶಾಯಿಯಲ್ಲಿ. ಕ್ಷೇಮ ವಿಚಾರವಾಗಿ ಬರೆದ ಸಾಲುಗಳಲ್ಲಿ ಸಾಕಾಗುವಷ್ಟು ನೆನಪುಗಳಿವೆ. ಜಗದ ಯಾವ ಖಜಾನೆಯಲ್ಲಿ ತುಂಬಿ ಇಡಲು ಆಗದಷ್ಟು ಖಜಾನೆ ಲೂಟಿ ಗೆ ಕಳ್ಳರ ಭಯವಿಲ್ಲ. ನಾನು ನೀನು ಮಾತ್ರ ಜೀವಿತದ ಚಿತ್ರ ಶಾಲೆಯಲ್ಲಿ. ನೋಡು. . . ನಾನು ಎಷ್ಟು ಪೆದ್ದು ಅಂತಾ. . . ! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅನುರಣನ: ಡಾ. ಅನುಪಮಾ ದೇಶಮುಖ್

ಡಾ. ಪ್ರದೀಪ್ ಬಳ್ಳಾರಿಯ ಪ್ರಸಿದ್ಧ ವೈದ್ಯರು. ಅಕ್ಕರೆಯ ಹೆಂಡತಿ ಶಾಂತಾ ಹಾಗೂ ಮುದ್ದಾದ, ಮಿತಭಾಷಿಯಾದ ಮಗ ರಾಘವ ಅವರ ಪ್ರಪಂಚ. ಶಾಂತಾ ಅಚ್ಚುಕಟ್ಟಾಗಿ ಮನೆಯನ್ನೂ, ಮಗನನ್ನೂ ನೋಡಿಕೊಂಡು, ತಕ್ಕಮಟ್ಟಿಗೆ ಸಂಪ್ರದಾಯವನ್ನೂ ಪಾಲಿಸಿಕೊಂಡು, ಗಣ್ಯಸಮಾಜದ ರೀತಿನೀತಿಗಳಿಗೆ ಹೊಂದಿಕೊಂಡಂತಹ ಹೆಣ್ಣು. ಶಿಸ್ತು, ಕಟ್ಟುನಿಟ್ಟಿನ ಆಸಾಮಿಯಾದ ಡಾ ಪ್ರದೀಪ್ ಗೆ ಮುಂದೆ ತನ್ನ ಮಗ ಒಬ್ಬ ಒಳ್ಳೆಯ ವೈದ್ಯನೋ, ನ್ಯಾಯಮೂರ್ತಿಯೋ ಆಗಬೇಕೆಂಬ ಹಂಬಲ. ಆದ್ದರಿಂದಲೇ ಶಿಕ್ಷಣ, ಸಂಸ್ಕೃತಿಗಳಿಗೆ ಹೆಸರುವಾಸಿಯಾಗಿದ್ದ ತೋರಣಗಲ್ಲಿನ ಹತ್ತಿರದ ಪ್ರತಿಷ್ಠಿತ ವಸತಿ ಶಾಲೆಯೊಂದರಲ್ಲಿ ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣಕ್ಕಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸಿನ ಹೊಯ್ದಾಟ: ನೀರಜಾ ಎಚ್. ಕೆ., ಸುಮಾ ರಾಯ್ಕರ್, ಗೀತಾ ಕೆ. ಆರ್., ಶ್ರೀದೇವಿ, ಗಾಯತ್ರಿ ಜೋಯಿಸ್, ಅರ್ಚನಾ ಕೆ. ಎನ್., ಮತ್ತು ಸುಮತಿ ಮುದ್ದೇನಹಳ್ಳಿ

ನಾವಿಬ್ಬರೂ ಸಮಾನ೦ತರ ರೇಖೆಗಳು. ಎಲ್ಲೂ ಸ೦ಧಿಸಲಾಗದ, ಒ೦ದಾಗಲಾಗದ ರೇಖೆಗಳು.  ಇದಕ್ಕೆ ಪರಿಹಾರವೇ ಇಲ್ವೆ ಆ೦ತ ಯೋಚಿಸುತ್ತಾ ಕೂತವಳಿಗೆ ಯಾವಾಗ ಝೊ೦ಪು ಹತ್ತಿ ಸಣ್ಣಗೆ ನಿದ್ರೆ ಬ೦ತೋ ಗೊತ್ತಾಗಲೇ ಇಲ್ಲ. ಬಾಗಿಲಿನ ಕರೆಗ೦ಟೆ ಶಬ್ದ ಮಾಡುತ್ತಾ ವಾಸ್ತವಕ್ಕೆ ಕರೆತ೦ದಿತು. ಕಣ್ಣುಜ್ಜಿಕೊಳ್ಳುತ್ತಾ ಹೋಗಿ ಬಾಗಿಲು ತೆರೆದವಳು, ಬಾಗಿಲುದ್ದಕ್ಕೂ ನಿ೦ತಿದ್ದ ನಗುಮುಖದ ಆಜಾನುಬಾಹುವನ್ನು ಎಲ್ಲೋ  ನೋಡಿದ್ದೇನೆ ಅ೦ತ ಆಲೋಚಿಸುತ್ತಾ ಮಾತು ಹೊರಡದೇ ನಿ೦ತಳು.  ಆ ವ್ಯಕ್ತಿ, ಪರಿಚಯ ಸಿಗಲಿಲ್ವೆ? ಅನ್ನುತ್ತಾ ಮತ್ತೊಮ್ಮೆ ನಗು ತೂರಿದನು.  ಹೌದು, ಆ ನಗು ತುಂಬಾ ಚಿರಪರಿಚಿತ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತ್ತಲ ಗರ್ಭಕ್ಕೆ ಬೆಳಕು ಹಿಡಿದ ಗಜಲ್ಗಳು: ಕಲ್ಲೇಶ್ ಕುಂಬಾರ್

ಕವಿಯಾದವನು ತಾನು ಬದುಕಿದ ಕಾಲದ ಸಂವೇದನೆಗಳಿಂದ ಪಾರಾಗಿ ಏಕಾಂತವಾಗಿ ಉಳಿಯಲಾರ ಏಕೆಂದರೆ ಅವನು ಬದುಕಿದ ಕಾಲಘಟ್ಟದಲ್ಲಿನ ವ್ಯವಸ್ಥೆ ಅವನ ಮೇಲೆ ಖಚಿತವಾದ ಪರಿಣಾಮವನ್ನು ಬೀರಿರುತ್ತದೆ. ಅಂತೆಯೇ ಕವಿಯು ತನ್ನ ಕಾಲದ ವ್ಯವಸ್ಥೆಯನ್ನು ತಾನೇ ರೂಪಿಸಿಕೊಂಡ ಆಕೃತಿ(ದೃಷ್ಟಿಕೋನ)ಯ ನೆಲೆಯಲ್ಲಿ ವಿಶ್ಲೇಷಿಸುತ್ತಿರುತ್ತಾನೆ. ಹಾಗೆಯೇ ಬದುಕು ಮತ್ತು ಮನುಷ್ಯನನ್ನು ಸೂಕ್ಷ್ಮವಾಗಿ ಗಮನಿಸಿ ಅದಕ್ಕೆ ಮಾತು ಕೊಡುವ ಗುಣವನ್ನು ಬೆಳೆಸಿಕೊಂಡಿರುತ್ತಾನೆ. ಇದು ಒಂದು ರೀತಿಯಲ್ಲಿ ಕವಿಯ ಸಮಾಧಾನಕ್ಕೆ ದಾರಿ ಮಾಡಿಕೊಡುವಂತಹ ಸೃಜನಶೀಲ ಪ್ರಕ್ರಿಯೆ ಎನ್ನಬೇಕು. ಪ್ರಸ್ತುತ ಈ ಮಾತಿಗೆ ಪೂರಕವಾದ ಗುಣಗಳನ್ನು ಮೈಗೂಡಿಸಿಕೊಂಡಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನ ಮನವ ತಿಳಿಯಾಗಿಸಿದ ಆ ನವಿಲು: ಹರೀಶ್ ಆರ್ ಅಡವಿ

ನಮ್ಮ ಚಳ್ಳಕೆರೆ(ಚಿತ್ರದುರ್ಗ ಜಿಲ್ಲೆ) ಅರಣ್ಯ ಪ್ರದೇಶವು ಅಂದಾಜು ಒಂದು ಸಾವಿರ ಹೆಕ್ಟೇರ್ ಕಾಯ್ದಿಟ್ಟ ಅರಣ್ಯ ಪ್ರದೇಶವಾಗಿದೆ ಹಾಗೂ ಅನೇಕ ಪ್ರಾಣಿ ಪಕ್ಷಿಗಳಿಗೆ, ಬಯಲುಸೀಮೆಯ ವನ್ಯಜೀವಿಗಳಿಗೆ ಆವಾಸ ಸ್ಥಾನವಾಗಿದೆ. ಇಲ್ಲಿನ ಅಪರೂಪದ ಅರಣ್ಯ ಪ್ರದೇಶದಲ್ಲಿ ಓಡಾಡುವುದೆಂದರೆ ನನಗೆ ಒಂದು ಖುಷಿಯ ವಿಷಯವಾಗಿದೆ. ಕೆಲವೊಮ್ಮೆ ಕಾನನದ ಒಳಗೆ ಹೋಗಿ ಹೆದರಿದ್ದೂ ಉಂಟು, ಜೋರು ಗಾಳಿ ಬೀಸುವಾಗ ನೀಲಗಿರಿಮರದ ಎಲೆಯ ಶಭ್ಧಕ್ಕೆ ಹೆದರಿ ಓಡಿದ್ದೂ ಉಂಟು, ಅದೆಷ್ಟೋ ಬಾರಿ ನನ್ನ ಹೆಜ್ಜೆಯ ಸಪ್ಪಳಕ್ಕೆ ನಾನೇ ಭಯದಿಂದ ನಡುಗಿದ್ದೇನೆ, ದೂರದಲ್ಲೆಲ್ಲೋ ಕೇಳುವ ಕೋಗಿಲೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಅವು ಮತ್ತು ನಾನು ಯಾವ ನೋವುಗಳುಹೆಚ್ಚಾಗಿ ಕಾಡುವವೋ,ಆ ನೋವುಗಳನ್ನಇಚ್ಚೆಯಿಂದ ಅನುಭವಿಸುವ ಭರವಸೆಯಅವುಗಳಿಂದಲೇ ಕಲಿತುಕೊಳ್ಳುವೆ…. ಅವು ಹಟಮಾರಿಯಾದರೆನಾನೂ ಹಟಮಾರಿಯಾಗುವೆಅವು ಬಿಡಲೆನ್ನುವವಾದರೆನಾನೂ ಬರಲೆನ್ನುವವನಾಗುವೆ ಅವು ಹಿಂಡುತ್ತಿರುವಾಗನಾನು ಕಂಡವನುಅದ ಉಂಡವನೂ…ಅವು ಕುಣಿಯುತ್ತಿರುವಾಗನಾನು ಅವಕ್ಕೆ ಅಟ್ಟ ಆದವನು ಅವು ನಾನಿರುವವರೆಗೂ ಮಾತ್ರ-ನನ್ನ ತಿನ್ನುವವುನಾ ಇಲ್ಲವಾದೊಡನೆ ಅವುಗಳ ಸಾವುಅವುಗಳಿಗಾಗಿಯೇ ನಾ ಜೀವಾ ಹಿಡಿದಿರುವಾಗನನಗೆ ಗೊತ್ತು;ಸಾವೆಂಬುದು ಕ್ರೂರಿಯಲ್ಲವೆ?!… ಇರುವಷ್ಟು ದಿನ;ಅವುಗಳಿಗೆ ಉಪಕಾರಿಯಾಗಲಿ ಈ ದೇಹ;ಅವುಗಳಿಗೂ ಬದುಕಿದೆ ತಿಂದು;ತಿಂದರೂ, ಹಿಂಡಿದರೂ ಅವುಗಳದೇಎಲ್ಲಿಂದ ಮೀಟಿದರೂಅನುಮತಿ ಕೊಟ್ಟಿರುವೆ ಇಚ್ಚೆ ಇರಲಿ;ಹಟವಿರಲಿನನಗೂ;ಅವುಗಳಿಗೂ… -ಕಾಸಿಂ ನದಾಫ್ ಭೈರಾಪುರ ನಮ್ಮಮ್ಮನ ಸೊಸೆ ನಾನು ಪ್ರಾಯಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“The Critic -ವಿಮರ್ಶಕ’ನ ವಿಮರ್ಶೆಯ ದಿಕ್ಕುದೆಸೆಗಳಿಗೆ ಎಸೆದ ಸವಾಲು”: ಎಂ.ಜವರಾಜ್

Act -1978, ನಾತಿಚರಾಮಿ, ಹರಿವು ಚಿತ್ರ ನಿರ್ದೇಶಕ ಮಂನ್ಸೋರೆ ಅವರ ‘The Critic’ ಸದ್ಯ ಈಗ ಸದ್ದು ಮಾಡುತ್ತಿರುವ ಒಂದು ಕಿರುಚಿತ್ರ. ಹಾಗೆ ’19 20 21′ ಮತ್ತು ‘ಅಬ್ವಕ್ಕ’ ಬಹು ನಿರೀಕ್ಷೆಯ ಮುಂದಿನ ಚಿತ್ರಗಳು ಎಂಬ ಸುದ್ದಿ ಇದೆ. ಸಿನಿಮಾದಲ್ಲಿ ಎರಡು ಬಗೆ. ಒಂದು length movie ಇನ್ನೊಂದು Short movie. ಸದ್ಯ Short movie ಗಳದೇ ಕಾರುಬಾರು. ಏಕೆಂದರೆ ವೆಚ್ಚದ ದೃಷ್ಟಿಯಿಂದಲೂ ಮತ್ತು ಪ್ರಯಾಣ ರಹಿತವಾಗಿಯೂ ಒಂದು ನಿಗದಿತ ಸ್ಥಳದಲ್ಲಿ ತಮ್ಮ ಕಲ್ಪನೆಯ ಒಂದಿಡೀ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಭರಣಗಳು: ಜೆ.ವಿ.ಕಾರ್ಲೊ

ಮೂಲ: ಗೈ ಡಿ ಮೊಪಾಸಾಅನುವಾದ: ಜೆ.ವಿ.ಕಾರ್ಲೊ ಆ ದಿನ ಸಂಜೆ ಕಛೇರಿಯ ಮೇಲ್ವಿಚಾರಕರು ಇರಿಸಿದ್ದ ಔತಣಕೂಟದಲ್ಲಿ ‘ಆ’ ಹುಡುಗಿಯನ್ನು ನೋಡಿದ್ದೇ ಲ್ಯಾಂಟಿನ್ ಅವಳ ಮೋಹಪಾಶದಲ್ಲಿ ಸಿಲುಕಿ ನುಜ್ಜುಗುಜ್ಜಾಗಿಬಿಟ್ಟಿದ್ದ. ಆಕೆ ಕೆಲವೇ ವರ್ಷಗಳ ಹಿಂದೆ ಗತಿಸಿದ್ದ ತೆರಿಗೆ ಅಧಿಕಾರಿಯೊಬ್ಬರ ಮಗಳಾಗಿದ್ದಳು. ಆಗಷ್ಟೇ ಅವಳು ತನ್ನ ತಾಯಿಯೊಂದಿಗೆ ಪ್ಯಾರಿಸಿಗೆ ಬಂದಿಳಿದಿದ್ದಳು. ಅವಳ ತಾಯಿ ಮಗಳಿಗೊಬ್ಬ ಯೋಗ್ಯ ವರನನ್ನು ಹುಡುಕುವ ಉದ್ದೇಶದಿಂದ ಹಲವು ಮಧ್ಯಮ ವರ್ಗದ ಕುಟುಂಬಗಳ ಸಂಪರ್ಕಗಳನ್ನು ಬೆಳೆಸಿಕೊಳ್ಳುತ್ತಾ ಕಾರ್ಯೊನ್ಮುಖಳಾಗಿದ್ದಳು. ಬಡವರಾಗಿದ್ದರೂ ಸುಸಂಸ್ಕøತ ಮನೆತನದವರಾಗಿದ್ದರು. ಹುಡುಗಿಯಂತೂ, ಯಾವನೇ ಹುಡುಗನು ತನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಂಸಭಾವಿಯ ಹಸಿ ಸುಳ್ಳು ..!: ಶರಣಗೌಡ ಬಿ ಪಾಟೀಲ ತಿಳಗೂಳ

ಊರ ಜನಾ ಹಸಿ ಸುಳ್ಳು ಹೇಳತಿದ್ದಾರೆ ನಾನು ಹೇಳುವ ಮಾತು ಖರೇ ಅಂತ ಯಾರೂ ನಂಬತಿಲ್ಲ ಯಾಕಂದ್ರೆ ನಾನೊಬ್ಬ ಹುಚ್ಚ ಅಂತ ಹರಿದ ಅಂಗಿ, ಗೇಣುದ್ದ ಗಡ್ಡ ಅಸ್ತವ್ಯಸ್ತ ಮುಖದ ಹುಚ್ಚನೊಬ್ಬ ಹಂಸ ಬಾವಿ ಕಟ್ಟೆಗೆ ಕುಳಿತು ತನ್ನಷ್ಟಕ್ಕೆ ತಾನೇ ವಟಗುಟ್ಟಿದ. ಜನರ ಮಾತು ಸುಳ್ಳು ಅಂತಾನೆ ನೋಡ್ರೋ ಎಂಥಾ ಹುಚ್ಚನಿವನು ಅಂತ ಆತನ ಮಾತು ಕೇಳಿಸಿಕೊಂಡ ಕೆಲವರು ಗಹಿಗಹಿಸಿ ನಗತೊಡಗಿದರು. ನಗರೋ ನಗರಿ ಯಾರ ಬ್ಯಾಡ ಅಂತಾರೆ ಮುಂದೊಂದಿನ ಸುಳ್ಯಾವದು ಖರೇ ಯಾವುದು ಅಂತ ಸಮಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ