ಸಂವಿಧಾನದ ಮಹತ್ವವನ್ನು ಸಾರುವ ಮನೋಜ್ಞ ಸಿನಿಮಾ – 19.20.21: ಚಂದ್ರಪ್ರಭ ಕಠಾರಿ

ಹರಿವು, ನಾತಿಚರಾಮಿ, ಆಕ್ಟ್ 1978 ಸಿನಿಮಾಗಳಿಂದ ಸಂವೇದನಾಶೀಲ ನಿರ್ದೇಶಕರೆಂದು ಗುರುತಿಸಲ್ಪಟ್ಟಿರುವ  ಮಂಸೋರೆಯವರ ಹೊಸ ಸಿನಿಮಾ-19.20.21. ಟೈಟಲ್ ಸೇರಿದಂತೆ ಹಲವು ಕುತೂಹಲಗಳೊಂದಿಗೆ ಅವರು ಸಿನಿಮಾವನ್ನು ತೆರೆಗೆ ತಂದಿದ್ದಾರೆ. ಹಾಗೆ ತರುವಾಗ ಹಲವು ಸವಾಲುಗಳನ್ನು ತಮ್ಮ ಸಿನಿಮಾ ತಯಾರಿಕೆಯ ಅನುಭವದಿಂದ, ಪ್ರತಿಭಾವಂತಿಕೆಯಿಂದ ನಿಭಾಯಿಸಿದ್ದಾರೆ.   ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಲ್ಲಿರುವ ಕುತ್ಲೂರು ಗ್ರಾಮದಲ್ಲಿ ಶತಮಾನಗಳಿಂದ ಬದುಕಿರುವ ಆದಿವಾಸಿ ಬುಡಕಟ್ಟು ಜನಾಂಗವಾದ ಮಲೆಕುಡಿಯರನ್ನು, ಸರ್ಕಾರ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಯೋಜನೆಯನ್ನು ಜಾರಿ ಮಾಡಿ ಒಕ್ಕಲೆಬ್ಬಿಸುವ ಸಂದರ್ಭದಲ್ಲಿ, ಆಳುವ ಪ್ರಭುತ್ವದಿಂದ ನಡೆದ ದೌರ್ಜನ್ಯಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೀಚನ ಸಾವು: ಮಂಜು ಡಿ ಈಡಿಗೆರ್

ಓದೋಕ್ಕೆ ಅಂತ ರೂಮ್ ಮಾಡ್ಕೊಂಡು ಕೊಪ್ಪಳ ದಲ್ಲೇ ಇದ್ದೆ. ದಿನ ಬೆಳಗ್ಗೆ ರನ್ನಿಂಗು ವರಮಪ್ಪು ವರ್ಕೌಟು ಮಾಡೋದು ನನ್ನ ದಿನ ನಿತ್ಯದ ಅಭ್ಯಾಸ ಆಗಿತ್ತು. ಹಾಗಾಗಿ ದಿನ ಬೆಳಗ್ಗೆ ಸ್ಟೇಡಿಯಂಗೆ ಪ್ರಾಕ್ಟೀಸ್ ಗೆ ಹೋಗ್ತಾ ಇದ್ದೆ. ಸಂಡೇ ಪ್ರಾಕ್ಟೀಸ್ ಮುಗಿಸಿಕೊಂಡು ರೂಮ್ಗೆ ಬಂದೆ. ನನ್ನ ರೂಮಿನ ಪಕ್ಕ ಮನೆ ಖಾಲಿ ಆಗಿತ್ತು, ಅದಕ್ಕೆ ಯಾರೋ ಹೊಸಬರು ಬಂದಾಗೆ ಇತ್ತು. ನನ್ನ ರೂಮು ಮತ್ತೆ ಅವರ ಮನೆ ಎರಡು ಪಕ್ಕದಲೆ ಇರುವುದರಿಂದ ಯಾರು ಎಂದು ಗಮನಿಸಬೇಕಾಯಿತು. ಮನೆ ಇಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾ ಕಂಡಂತೆ: ಶೀತಲ್

ನಾನು ಈ ಮನೆಗೆ ಬಂದು ಈಗ ನಾಲ್ಕು ವರ್ಷವಾಯಿತು. ಮನೆಯೆಂದರೆ ಅಬ್ಬಾ! ಇವರ ಮನೆಯಂತೆ ಯಾವ ಮನೆಯೂ ಇಲ್ಲ ಆ ಲೇಔಟ್ ನಲ್ಲಿ ಎಂದು ಆಗಾಗ ಕೆಲಸದಾಕೆ ಸುಗುಣ ಮನೆಯೊಡತಿ ವೈದೇಹಿ ಯವರ ಬಳಿ ಹೇಳುವುದನ್ನು ಕೇಳಿದ್ದೇನೆ. ಇವರ ಮನೆಯಲ್ಲದೆ ನಾನು ಯಾವ ಮನೆಗೂ ಹೋಗುವ ಹಾಗಿಲ್ಲವಲ್ಲ ಹಾಗಾಗಿ ನನ್ನ ಸ್ವಂತ ಅಭಿಪ್ರಾಯವಲ್ಲ ಇದು. ಇವರ ಮನೆಯಿಂದ ಎದುರು ಕಾಣುವ ಎರಡು ಮನೆಗಳು, ಹಾಗೆ ಬಲಗಡೆಗೆ, ಇವರ ಮನೆಯ ಹೂದೋಟ ದಾಟಿದರೆ ಕಾಣುವ ಮನೆ ಕೂಡ ಇವರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೈಸಿಕಲ್ ಥೀವ್ಸ್ ವಿಮರ್ಶೆ: ಕಿರಣ್ ಕುಮಾರ್ ಡಿ

‘ಬೈಸಿಕಲ್ ಥೀವ್ಸ್’ ೧೯೪೮ರಲ್ಲಿ ಇಟಾಲಿಯನ್ ಭಾಷೆಯಲ್ಲಿ ತೆರೆಕಂಡ ಚಲನಚಿತ್ರ. ಇಟಾಲಿಯಲ್ಲಿ “ಲಾದ್ರಿ ದಿ ಬೈಸಿಕ್ಲೆಟ್” ಹೆಸರಿನಲ್ಲಿ ತೆರೆಕಂಡಿತು. ಚಲನಚಿತ್ರದ ಕಥೆಯನ್ನು ಸಿಸೇರ್ ಜವಟ್ಟಿನಿಯವರು ೧೯೪೬ರಲ್ಲಿ ಪ್ರಕಟಗೊಂಡ “ಲಾದ್ರಿ ದಿ ಬೈಸಿಕ್ಲೆಟ್” ಕಾದಂಬರಿಯಿಂದ ಅಳವಡಿಸಿಕೊಂಡು ಬರೆದಿದ್ದಾರೆ. ಈ ಚಲನಚಿತ್ರವನ್ನು ವಿಟ್ಟೋರಿಯಾ ಡಿ ಸಿಕಾ ಅವರು ನಿರ್ದೇಶಿಸಿದ್ದಾರೆ. ಈ ಚಲನಚಿತ್ರ ೨ನೇ ವಿಶ್ವಯುದ್ಧದ ನಂತರ ತೆರೆಕಂಡಿದ್ದು. ೨ನೇ ವಿಶ್ವಯುದ್ಧ ಮುಗಿದ ಮೇಲೆ ಇಟಾಲಿಯಲ್ಲಿ ಎದುರಾದ ಉದ್ಯೋಗದ ಸಮಸ್ಯೆಯನ್ನು ಮತ್ತು ಬಡತನವನ್ನು ಹಲವಾರು ಪಾತ್ರದ ಮೂಲಕ ಹೇಳುತ್ತದೆ ಈ ಚಲನಚಿತ್ರ. ಚಲನಚಿತ್ರದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ನೇರ ವ್ಯಕ್ತಿತ್ವ ಶಕ್ತಿಯೇ…?? “: ರೇಖಾ ಶಂಕರ್.

ಆತ್ಮೀಯ ಓದುಗರೇ, ನಾನಿವತ್ತು ಹೇಳ್ತಿರೊ ವಿಷ್ಯ ಅಂದ್ರೆ ನೇರ ವ್ಯಕ್ತಿತ್ವದ ಬಗ್ಗೆ, ಅದೇ ಇದ್ದಿದ್ದು ಇದ್ದಂಗೆ ಹೇಳುದ್ರೆ ಎದ್ ಬಂದ್ ಎದೆಗೆ ಒದ್ರಂತೆ ಅಂತ ಗಾದೆ ಹೇಳ್ತಾರಲ್ಲ. ಅದೇ ವಿಷಯ…., ಅದಕ್ಕೆ ನೇರ ನುಡಿಯ ವ್ಯಕ್ತಿತ್ವ ಅಂತ್ಲೂ ಹೇಳ್ಬೌದು. ನೋಡೋಕೆ ಮನುಷ್ಯ ಒಂದೆ ಥರ ಕಾಣ್ತಿದ್ರೂ ಅವನಲ್ಲಿ ಇರೊ ಗುಣ ಸ್ವಭಾವಗಳು ವಿಭಿನ್ನವಾಗಿರತ್ತೆ, ಅವ ನಡೆಯೊ ಹಾದಿ ಆಡುವ ಮಾತು ತನ್ನ ನೋಡುವ ನೋಟ ಒಟ್ಟಾರೆ ತನ್ನ ಬದುಕುವ ಶೈಲಿಯನ್ನೆ ವಿಭಿನ್ನವಾಗಿಟ್ಕೊಂಡಿರ್ತಾನೆ. ” ಲೋಕೊ ಭಿನ್ನ ರುಚಿಃ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಸಿಕ ಪುರಾಣ: ಡಾ.ವೃಂದಾ ಸಂಗಮ್,

ನಾಸಿಕದಾಗ ಅಂತ ನಮ್ಮ ಶೀನೂ ಮಾಮಾ ಮಾತು ಶುರು ಮಾಡಿದರೂಂದರ, ನಾವೆಲ್ಲಾ, ಮೂಗಿನ ಮೇಲೊಂದು ಬೆರಳಿಟ್ಟುಕೊಂಡು ಕೂತಿರಬೇಕು. ಯಾಕಂದರ ನಮ್ಮ ಶೀನೂ ಮಾಮಾ ಅಂದರ ಅಸಾಧಾರಣ ವ್ಯಕ್ತಿ. ಹಂಗಂತ, ಭಾಳ, ಭಾಳ ಸಾಧನಾ ಮಾಡ್ಯಾರ ಅಂತಲ್ಲ. ಸೀದಾ ಹಾದಿಯವರಲ್ಲ. ಸೊಟ್ಟ ಮೂಗಿನವರು. ಅಂದರ, ಹೀಂಗ, ಮಾತು ಶುರು ಮಾಡಿದಾಗ, ನಾವು ಯಾವ ರೀತಿ ವಿಚಾರ ಮಾಡಿದರೂ, ಇವರು ಈ ವಿಷಯದ ಹರಟಿ ಪ್ರಾರಂಭಿಸಬಹುದು ಅಂತ ಒಂದು ಅಂದಾಜು ಇಟ್ಟಕೊಂಡಿದ್ದರ, ಅದನ್ನೆಲ್ಲಾ, ಮುರದು, ಹೊಸಾ ದಾರಿಯೊಳಗೇನೇ ಹರಟೀ ಪ್ರಾರಂಭ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶಿವಧ್ಯಾನ: ಡಾ. ರಶ್ಮಿ ಕಬ್ಬಗಾರ

ಅಲ್ಲಿಗೆ ಹೋದ ಮೇಲೆ ಗೊತ್ತಾದದ್ದುನಮ್ಮೂರ ಶಿವ ಎಷ್ಟು ಸಿಂಪಲ್ಲು ಅಂತ !ಶಿವರಾತ್ರಿಯೋ- ಮಡಿಹುಡಿ ನೈವೇದ್ಯದತಲೆಬಿಸಿ ಎಳ್ಳಷ್ಟೂ ಇರದಶುದ್ಧ ಪ್ರೀತಿಯ ಸಮಾವೇಶವೇ ಸರಿಯೆನ್ನಿ ಆ ದಿನ ಯಾವ ಹೊಳೆಯೂ ಆದೀತು ಪಕ್ಕದಲ್ಲೊಂದು ಶಿಲೆಯಿದ್ದರಲ್ಲಿ ಶಿವರಾತ್ರಿ ನೀರೆಲ್ಲವೂ ಗಂಗೆ’ ಕಲ್ಲ ತಲೆಮೇಲೊಂದಿಷ್ಟು ಅಭಿಷೇಕಗೈದುನಿರುಮ್ಮಳವಾಗಿ ಬನ್ನಿ ಮನೆಗೆ’- ಹಿರಿಯರ ನುಡಿ ನಮ್ಮಜನ ಊರು-ಕೇರಿಯ ಗೆಳೆಯರನ್ನಸಹಜೀವಗಳನ್ನ ಕೂಡಿಸಿ,ಗೂಡ್ಸು, ಲಾರಿ ತುಂಬಿಕೊಂಡುಗಲ್ಲದ ಗೌಜುಗಳೊಂದಿಗೆಶಿವರಾತ್ರಿ ಪಿಕ್ ನಿಕ್ ಹೋಗಿದ್ದುಂಟು. ಪ್ರತಿವರ್ಷವೂ- ಮುಂದಿನ್ವರ್ಷ ನಿನ್ನ ಮುದ್ದಾಂ ಕರಕೊಂಡ್ಹೋಗ್ತೆವೇ ಅಂತ್ಹೇಳಿ ಕೈಕೊಟ್ಟು ಓಡಿದ ಅಕ್ಕ, ಅಣ್ಣ, ಚಿಕ್ಕಮ್ಮನ ನೆನೆದು,ಚಳ್ಳೇಪಿಳ್ಳೆಗಳಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಮಾನದಂಡ ! ಮಿಥಿಲಾಪುರದೊಳಗೆ ಪಂದ್ಯ;ಸೀತೆಗೆ ಸ್ವಯಂವರ….ಹರಧನುವ ಮುರಿಯುವುದೇಮಾನದಂಡ !ರಾಮ ಮುರಿದ; ಸೀತೆ ಒಲಿದಳುನಂತರದ ವಿಚಾರವೀಗ ಬೇಡ ! ಪಾಂಚಾಲನಂದನೆ ದ್ರೌಪದಿ;ಸ್ವಯಂವರದಿ ಗೆದ್ದವನ ಮಡದಿ !ಮತ್ಸ್ಯಯಂತ್ರವ ಭೇದಿಸುವುದೇಮಾನದಂಡ !ಪಾರ್ಥ ಬಾಣ ಹೂಡಿದ; ದ್ರೌಪದಿ ಒಲಿದಳುನಂತರದ ವಿಚಾರವೀಗ ಬೇಡ ! ಅಷ್ಟೋ ಇಷ್ಟೋ ಓದಿದ ಹೆಣ್ಣು,ಸ್ವಯಂವರ ಅನ್ನಬಹುದೆ ಇದನು ?‘ಸರ್ಕಾರಿ ನೌಕರಿ’ಯೇಮಾನದಂಡ !ಸಂ(ಗಿಂ)ಬಳ ತಂದವನ ಹುಸಿನಗೆಗೆ ಒಲಿದಾಳುನಂತರದ ಬದುಕು ? ಈಗ ಬೇಡ ! ಜನಕರಾಜನ ಮಗಳಿಗೆವನವಾಸ ವರವಾಯ್ತು;ದ್ರುಪದ ರಾಜನ ಮಗಳು ಬದುಕುಐವರ ಪಾಲಾಯ್ತು ! ಅತಿ ಆಸೆ ಪಟ್ಟಷ್ಟೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾಲ್ವರ ಗಝಲ್‌ಗಳು: ಶಿವರಾಜ್. ಡಿ., ಜಯಶ್ರೀ ಭ ಭಂಡಾರಿ., ಜೊನ್ನವ, ರೇಣುಕಾ ಕೋಡಗುಂಟಿ

ಗಝಲ್. ನಾನು-ನೀನು ಅವನು-ಇವನು ಬೇರೆ-ಬೇರೆಯಿಲ್ಲ ನಾವು ಒಂದೇರಾಮ-ರಹೀಮ ಕೃಷ್ಣ-ಕರೀಮ ಭೇದ-ಭಾವವಿಲ್ಲ ನಾವು ಒಂದೇ ಸ್ವರ್ಗ ನರಕ ಪಾಪ ಪುಣ್ಯವೆಲ್ಲ ಮನುಜನ ಕರ್ಮದ ಫಲಗಳುಜಗತ್ತಿನ ಧರ್ಮ ಗ್ರಂಥಗಳ ಸಾರಗಳಲಿ ಭೇದವಿಲ್ಲ ನಾವು ಒಂದೇ ಆಲಯ ಬಯಲಾಗಿ ಬಯಲಲಿ ಬೆಳಕಾಗಿ ಬಾಳಬೇಕು ಮನುಜಮನುಷ್ಯ ಮನುಷ್ಯತ್ವದಲಿ ಮೇಲು-ಕೀಳುಗಳಿಲ್ಲ ನಾವು ಒಂದೇ ಅಜ್ಞಾನದ ತಮವಳಿದು ವಿಜ್ಞಾನದಿ ಮೌಡ್ಯವಳಿಯಲಿಜ್ಞಾನಜ್ಯೋತಿ ಬೆಳಗಲು ತರ-ತಮಗಳಿಲ್ಲ ನಾವು ಒಂದೇ ಜಾತಿ,ಧರ್ಮಗಳ ಗೋಡೆ ಕಟ್ಟಿ ವಿಶ್ವಗುರು ಆಗಲು ಹೊರಟಿದ್ದಾರೆ ಶಿವುಪರಿಶುದ್ಧ ಪ್ರೀತಿಗೆ ಕಾರುಣ್ಯದ ಮನಸಿಗೆ ಜಾತಿ-ಧರ್ಮಗಳಿಲ್ಲ ನಾವು ಒಂದೇ -ಶಿವರಾಜ್. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬರೆ: ಲಿಂಗರಾಜ ಸೊಟ್ಟಪ್ಪನವರ

ಆಡಿದ ಮಾತುಗಳೆಲ್ಲ ಮರೆತು ಹೋದವುಉಳಿದ ಮಾತುಗಳನುನೀನೆ ಆಡಬೇಕು ಈ ಬರೆ ಮೇಲೆ ಕೈ ಆಡಿಸುನಿನಗೆ ಏನಾದರೂ ದಕ್ಕಬಹುದುಪದ ನಾದ ನೋವುರಕ್ತ ಕೀವುಬಿರಿತ ಚರ್ಮ ಒಡೆದ ಮಾಂಸ ಖಂಡತೆರೆದ ಎದೆ ಗೂಡುಈ ಎಲ್ಲವನು ಪದ ಮಾಡಿ ಹಾಡಿಕೋ ಹಂಚುಬೇಕಿದ್ದರೆ ಮಾರಿಕೋ ತಾಕಬಹುದು ಎಲುಬಿನ ಹಂದರನೆತ್ತರ ವಾಸನೆಸಿಗದೇ ಹೋಗಬಹುದು ಹೆಣಗಳ ಲೆಕ್ಕಗುಳಿಬಿದ್ದ ಕಣ್ಣುಗಳಲಿ ಒಮ್ಮೆ ಇಳಿದು ಹೋಗುನೀನು ಗತಕೆ ಸರಿದು ಹೋಗುಚರಿತೆಯ ಚರ್ಮ ಸುಲಿದ ಕಥನಗಳಲ್ಲಿ ನಾನುಸಿಕ್ಕೆ ಸಿಗುತ್ತೇನೆಒಂದು ವಿನಂತಿ ಇಷ್ಟೇಇಷ್ಟು ಕಾಲವಾದ ನಂತರವಾದರೂ ಸರಿನೀನು ಯಾರು? ಎಂದು ಮಾತ್ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿ ಹುಟ್ಟೀತು ಹೇಗೆ?: ಎಂ ನಾಗರಾಜ ಶೆಟ್ಟಿ

ಹುಟ್ಟು, ಬಣ್ಣ, ಬಟ್ಟೆಗಳ ಗುರುತಿನಲ್ಲಿತಿನ್ನುವ ಅನ್ನ, ಇರುವ ಜಾಗ, ಮಾಡುವ ಕೆಲಸಅವರಿವರಲ್ಲಿ ಹಂಚಿ,ಮುಟ್ಟದೆಯೇ ದೂರ ನಿಲ್ಲುವಲ್ಲಿಪ್ರೀತಿ ಹುಟ್ಟೀತು ಹೇಗೆ? ಮನೆಗೊಬ್ಬ ದೇವನ ಮಾಡಿಇಲ್ಲಿಗಿಂತ ಅಲ್ಲಿಯೇ ಸರಿಯೆಂದು ಹಾಡಿಇಂದಿನದಕ್ಕೆ ಅಂದಿನ ಕಾರಣ ಗಂಟು ಹಾಕಿತೊತ್ತುಗಳಾಗಿಸಿದವರ ನಡುವೆಪ್ರೀತಿ ಹುಟ್ಟೀತು ಹೇಗೆ? ಮನಸ್ಸುಗಳ‌‌ ಸುಟ್ಟು ಬೂದಿ ಮಾಡಿಶಾಖದ ಸುತ್ತ ಕುಣಿವವರಕರಕಲು ಎದೆಗಳಲ್ಲಿಪ್ರೀತಿ ಹುಟ್ಟೀತು ಹೇಗೆ? ಅವನು ನಾನೆಂದು, ನಾನು ಅವನೆಂದುಅವನೂ ಅವಳೂ ಒಂದೇ ಎಂದುನಮ್ಮನ್ನು ನಾವೇ ಅರಿಯದೆಪ್ರೀತಿ ಹುಟ್ಟೀತು ಹೇಗೆ? -ಎಂ ನಾಗರಾಜ ಶೆಟ್ಟಿ ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪೋಲಿ ಹುಡುಗ: ವಿದ್ಯಾ ಗಾಯತ್ರಿ ಜೋಶಿ

ಭಾರತಿ ಮತ್ತು ಆರತಿಇಬ್ಬರದೂ ಬಾರಿ ಪ್ರೀತಿ ದೇಹ ಎರಡು ಅತ್ಮ ಒಂದೇಅಂತ ಎಲ್ಲರೂ ಅನ್ನುವುದೇ ದಿನವೂ ಒಬ್ಬ ಹುಡುಗಮುಗುಳ್ನಗುತ್ತಿದ್ದ ಕಾಲೇಜಲಿ ಪಾಠ ಕೇಳುವಾಗ ಆರತಿಗೆ ಹಿಡಿಸಿದ ಪೋರಕಾರಣ ಆತ ಭಾರೀ ಸುಂದರ ಭಾರತಿಗೆ ಹೇಳಿದಳು ಗುಟ್ಟುಭಾರತಿ ನೋಡಿದಳು ದುರುಗುಟ್ಟಿ ಅಂದಳು “ಆತ ನೋಡೋದು ನಿನ್ನನ್ನುಪ್ರೀತಿ ಮಾಡೋದು ನನ್ನನ್ನು!” ಹುಡುಗ ಬಂದನು ಇವರ ಹತ್ತಿರಹೆಚ್ಚಾಯ್ತು ಹುಡುಗಿಯರ ಕಾತರ ಕೇಳಿದರು “ಪ್ರೀತಿಸುವೆ ಯಾರನ್ನ?ನನ್ನನ್ನ ಇಲ್ಲಾ ಇವಳನ್ನ?” ಸುಂದರ ಅಂದ”ನಕ್ಕಿದ್ದು ನೋಡಿ ನಿಮ್ಮಿಬ್ಬರನ್ನನಾ ಪ್ರೀತಿಸುವದು ನಿಮ್ಮಿಬ್ಬರಲ್ಲಿ ಒಬ್ಬಳ ಅಕ್ಕನ್ನ!” -ವಿದ್ಯಾ ಗಾಯತ್ರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವದೂತ ನನ್ನಪ್ಪ: ಶಕುಂತಲಾ ಪ್ರ. ಬರಗಿ

ಈ ಜಗವ ತೋರಲೆಂದೇ ಬಂದ ದೇವದೂತಈ ಜಗವ ತೋರಿ ತಾನೊಬ್ಬನೆ ದೂರ ನಿಂತನನ್ನಪ್ಪ ಈ ಜಗವ ತೋರಿಸಲು ಕರೆತಂದವಎನ್ನ ಕರೆದು ಜಗವ ತೋರಿ ಸುಮ್ಮನೆ ನಿಂತುಬಿಟ್ಟವ. ಈ ಜಗದ ಪೈಪೋಟಿ, ಅಂಕು ಡೊಂಕುನಾವು -ಅವರು -ಇವರು ಎಂಬುದನ್ನೇ ತಿಳಿಸದೆ ಸುಮ್ಮನೆ ನಿಂತುಬಿಟ್ಟವಅವನು ಈ ಭೂಮಿಗೆ ಕರೆತಂದ ಅಷ್ಟೇ,ಈ ಜಗವ ಏನೆಂದು ತಿಳಿಸಲಿಲ್ಲ ಎನಗೆ ಈ ಭೂಮಿಯ ಆಕಾಶದಲ್ಲಿ ಹಾರಾಡುವ ರೆಕ್ಕೆಯಾಗಿರೆಕ್ಕೆ ಕೊಟ್ಟು ಹಾರಲು ಹಚ್ಚಿ ದೂರ ನಿಂತವಅಪ್ಪನ ರೆಕ್ಕೆಗಿರುವ ಶಕ್ತಿಯೇ ನನ್ನೊಳಗೆ ಇದೆಅಪ್ಪನ ರೆಕ್ಕೆಗಿರುವ ಬಲವೇ ನನ್ನೊಳಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಿಸು ಮಾತು: ಶ್ರೀವಲ್ಲಭ ಕುಲಕರ್ಣಿ

ಎಲ್ಲೆಲ್ಲೂ ನೀರವ ಮೌನತಾಳಲಾರೆ ನಾ ವೇದನೆಬಳಿ ಒಮ್ಮೆ ನೀ ಬಂದುತೀರಿಸುವೆಯ ಮನದ ಕಾಮನೆ ಕಣ್ಣು ರೆಪ್ಪೆ ಆಲಂಗಿಸಿಕಳೆದಿವೆ ದಿನ ಸಾವಿರನೆಮ್ಮದಿಯ ತಾಣ ಹುಡುಕುತದಾಟಿರುವೆ ಸಪ್ತ ಸಾಗರ ಮನವೆಂದೋ ಕೊಟ್ಟಾಗಿದೆಈ ತನುವೂ ಎಂದಿಗೂ ನಿನಗೇನೀರವ ಈ ಮೌನದಲಿಸಖಿ ಗೀತದ ಜೊತೆಗೆ ಕದ್ದು ನೋಡದಿರು ಹೀಗೆಕಣ್ಣಂಚಿನಲಿ ಕೊಲ್ಲದಿರು ಹಾಗೆಬಂದು ಬಿಡು ಸುಮ್ಮನೇಪ್ರೇಮ ಲೋಕವೇ ನಮ್ಮನೆ ರಂಗೇರಲಿ ಮಾತಿನಾ ರಂಗೋಲಿಮುದ್ದಾದ ನಮ್ಮೀ ಸಾಂಗತ್ಯದಲಿಮೌನಕೂ ಪದವುಂಟುಅದಕಿದೆ ಪಿಸು ಮಾತಿನಾ ನಂಟು! -ಶ್ರೀವಲ್ಲಭ ಕುಲಕರ್ಣಿ ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡದ ಬರಹಗಳನ್ನು ಹಂಚಿ ಹರಡಿ

“ದೇವರ ಹೊಲ”ದಲ್ಲಿ ಭರ್ಜರಿ ಫಸಲು: ಡಾ. ನಟರಾಜು ಎಸ್‌ ಎಂ

ಮಂಜಯ್ಯ ದೇವರಮನಿ ಅವರ “ದೇವರ ಹೊಲ” ಪುಸ್ತಕ ನನ್ನ ಕೈ ಸೇರಿ ಒಂದು ತಿಂಗಳ ಮೇಲೆ ಒಂದು ವಾರವಾಗಿತ್ತು. ಸುಮಾರು ದಿನಗಳ‌ ಹಿಂದೆ ನೂರಾ ಐವತ್ತಕ್ಕೂ ಹೆಚ್ಚು ಜನರಿಗೆ ಕೃತಜ್ಙತೆ ಅರ್ಪಿಸಿರುವ ಮಂಜಯ್ಯ ಅವರ‌ ಮೊದಲ ಮಾತುಗಳನ್ನು ಅವರ ಈ ಪುಸ್ತಕದಲ್ಲಿ ಓದಿದ್ದೇನಾದರೂ ಇಡೀ ಪುಸ್ತಕವನ್ನು ಓದಲು ಯಾಕೋ ಸಾಧ್ಯವಾಗಿರಲಿಲ್ಲ. ನಿನ್ನೆ ಭಾನುವಾರ ಬಿಡುವು‌ ಮಾಡಿಕೊಂಡು ಇಡೀ ದಿನ ಒಂದೊಂದೇ ಕತೆಗಳನ್ನು ಓದುತ್ತಾ ಓದುತ್ತಾ ಮಂಜಯ್ಯ ಅವರ ಕಥನ ಕಲೆಗೆ ಬೆರಗಾಗಿ ಹೋದೆ. “ದೇವರ ಹೊಲ” ಪುಸ್ತಕವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತೇರ ಹಳ್ಳಿಯ ಸಿನಿಮಾ ತೇರು: ಎಂ ನಾಗರಾಜ ಶೆಟ್ಟಿ

ʼಸಿನ್ಮಾ ಚೆನ್ನಾಗಿತ್ತು, ದರ್ಶನ್ ಸಿನ್ಮಾನೂ ತೋರ್ಸ್‌ಬೇಕಿತ್ತು” ಆರು ವರ್ಷದ ಪೋರ ಹೇಳಿದ ಮಾತು. ಈ ಮಾತಲ್ಲಿ ಸತ್ಯವಿದೆ. ಆರೇನು, ಅರವತ್ತರ ವಯಸ್ಸಿನವರೂ ಒಂದೇ ಬಗೆಯ, ರಂಜನೆಯ ಸಿನಿಮಾಗಳನ್ನು ನೋಡುವುದನ್ನು ಅಭ್ಯಾಸ ಮಾಡಿಕೊಂಡಿರುತ್ತಾರೆ. ಇದಕ್ಕಿಂತ ಭಿನ್ನವಾದ, ಸಾಮಾಜಿಕ ಅರಿವು ಮೂಡಿಸುವ, ಬುದ್ದಿಯನ್ನು ಕೆಣಕುವ, ಕಟು ವಾಸ್ತವವನ್ನು ತಿಳಿಸುವ ಚಿತ್ರಗಳ ಬಗ್ಗೆ ಅರಿವು ಮೂಡಿಸಬೇಕು. ನಮ್ಮ ಪಠ್ಯಕ್ರಮದಲ್ಲಿ ಅದಕ್ಕೆ ಅವಕಾಶವಿಲ್ಲ. ಸಿನಿಮಾ ಹಬ್ಬಗಳು, ಸಿನಿಮೋತ್ಸವಗಳು ಸ್ವಲ್ಪ ಮಟ್ಟಿಗೆ ಈ ಕೊರತೆಯನ್ನು ನೀಗಿಸುತ್ತವೆ. ಅವು ಸಿನಿಮಾ ನೋಡುವ, ಅರ್ಥ ಮಾಡಿಕೊಳ್ಳುವ, ವಿಶ್ಲೇಷಿಸುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತದ ಸ್ವಾತಂತ್ಯ್ರ ಹುತಾತ್ಮ ಕವಿ ಅಶ್ಫಾಖ್‌ ಉಲ್ಲಾಖಾನ್‌ ಪುಸ್ತಕದ ಆಯ್ದ ಭಾಗ: ಜೆ ಕಲೀಂ ಬಾಷ

ಹಿಂದಿ ಮೂಲ: ಎಂ ಐ ರಾಜಸ್ವಿ ಕನ್ನಡಕ್ಕೆ: ಜೆ ಕಲೀಂ ಬಾಷ ಕಾಕೋರಿ ಕಾಂಡ ಸಣ್ನ ಸಣ್ಣ ಪ್ರಯತ್ನಗಳಿಂದಾದ ಅಸಫಲತೆಗಳಿಂದ ರಾಂ ಪ್ರಸಾದ್ ಬಿಸ್ಮಿಲ್ ಹಾಗೂ ಅವರ ಮಿತ್ರರ ಮನಸ್ಸು, ಈ ತರಹದ ವಿಧಿ ವಿಧಾನಗಳಿಂದ ಬೇಸರಗೊಂಡಿತ್ತು. ಆದರೂ ಸಹ ಅವರ ಮನದಲ್ಲಿನ್ನೂ ದೇಶ ಭಕ್ತಿಯ ಸಾಗರದ ಅಲೆಗಳು ಹೊಯ್ದಾಡುತ್ತಿದ್ದವು. ದಬ್ಬಾಳಿಕೆಯ ಬ್ರಿಟಿಷ್ ಸರ್ಕಾರದ ಸವಾಲನ್ನು ಎದುರಿಸುವಲ್ಲಿ ದೇಶಭಕ್ತರ ಕೊರತೆ ಇಲ್ಲ ಎಂಬುದನ್ನು ಸಾಬೀತು ಪಡಿಸಲು ಕ್ರಾಂತಿಕಾರಿಗಳು ಸಿದ್ಧರಿದ್ದರು. ಆದ್ದರಿಂದ ಕ್ರಾಂತಿಕಾರಿಗಳು ತಮ್ಮ ದಳವನ್ನು ಸಂಘಟಿಸುವಲ್ಲಿ ನಿರತರಾದರು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಂಕ್ರಮಣ: ಡಾ. ವೃಂದಾ ಸಂಗಮ್

ಎಲ್ಲಾ ಕತೀಗಳೂ ಸಹ ಒಂದೂರಾಗ, ಅಂತ ಶುರುವಾಗೋ ಹಂಗ, ಹರಟೆಗಳು ಮಾತ್ರ ನಮ್ಮೂರಾಗ ಅಂತ ಶುರುವಾಗತಿರಬೇಕು. ನಮ್ಮೂರಾಗ ಅಷ್ಟ ಅಲ್ಲ, ನಾವು ಸಣ್ಣವರಿದ್ದಾಗ, ಅಂತನೂ ಇರತಾವ. ಯಾಕಂದರ, ಸಣ್ಣವರಿದ್ದಾಗ ಇದ್ದ ಕುತೂಹಲ, ಗಳಿಸಿದ ವಿಶೇಷ ಅನುಭದಷ್ಟು ಮುಂದಿನ ಜೀವನದಾಗ ಇರೋದಿಲ್ಲ. ಹಬ್ಬ ಹರಿದಿನಗಳ ನೆನಪಂತೂ ಬಾಲ್ಯದ ಅನುಭವಕ್ಕಿಂತಾ ಮುಂದ ಯಾವುದೂ ನೆನಪಿರೋದಿಲ್ಲ. ಮತ್ತ, ಅದನ್ನ ಹಂಚಿಕೊಳ್ಳೋದರಾಗೂ ಇರತದ. ಹಂಗನ ಇದು ಸಂಕ್ರಮಣ ಹಬ್ಬ. ಸಂಕ್ರಮಣ ಅಂದರ, ಇರೋ ಹನ್ನೆರಡು ರಾಶಿಗಳೊಳಗ, ಪ್ರತಿಯೊಂದು ರಾಶಿಯೊಳಗ ಸೂರ್ಯ ಚಲಸತಾನ, ಅಂದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಷ್ಟ್ರಕವಿ ಡಾ.ಜಿ.ಎಸ್ ಶಿವರುದ್ರಪ್ಪನವರ ಕಾವ್ಯ ಒಂದು ಅಧ್ಯಯನ: ಸಂತೋಷ್ ಟಿ

ಕನ್ನಡ ಸಾರಸ್ವತ ಲೋಕದ ಕೇಂದ್ರಬಿಂದುವಾಗಿ ಸಾಹಿತ್ಯದ ವಿವಿಧ ಜ್ಞಾನಶಿಸ್ತುಗಳನ್ನು ಬೆಳಗಿಸಿದ ಹಣತೆ ಜಿ.ಎಸ್.ಶಿವರುದ್ರಪ್ಪನವರು. 1926 ಫೆಬ್ರವರಿ 7ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರಿನಲ್ಲಿ ಜನಿಸಿದರು. ತಂದೆ ಶಾಂತವೀರಪ್ಪˌತಾಯಿ ವೀರಮ್ಮ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 1949ರಲ್ಲಿ ಬಿ.ಎ ಅನರ್ಸ್ ಪದವಿˌ1953ರಲ್ಲಿ ಎಂ.ಎ ಪದವಿ ಪಡೆದರು. ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸುವರ್ಣ ಪದಕಗಳನ್ನು ಪಡೆದಿರುವರು.1960ರಲ್ಲಿ ಕುವೆಂಪು ಅವರ ಮಾರ್ಗದರ್ಶನದಲ್ಲಿ ಸೌಂದರ್ಯ ಸಮೀಕ್ಷೆ ಎಂಬ ಸಂಶೋಧನಾ ಪ್ರೌಢಪ್ರಬಂಧ ಮಂಡಿಸಿ ಪಿಎಚ್ ಡಿ ಡಾಕ್ಟರೇಟ್ ಪದವಿ ಪಡೆದರು. ವ್ರತ್ತಿಜೀವನವನ್ನು 1949ರಲ್ಲಿ ಆರಂಭಿಸಿದ ಇವರು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುವ ಮಂದಿಯಲ್ಲಿ ತಂತ್ರಜ್ಞಾನ ಶಿಕ್ಷಣದ ಕೊರತೆ: ಕಿರಣ್ ಕುಮಾರ್ ಡಿ

ಯುವ ಪೀಳಿಗೆಯನ್ನು ದೇಶದ ಶಕ್ತಿ ಎಂದು ಹೇಳುತ್ತಾರೆ. ಅನೇಕ ಮಹನೀಯರು ಯುವ ಸಮೂಹವನ್ನು ದೇಶದ ಭವಿಷ್ಯ ಎಂದು ಕರೆದಿದ್ದಾರೆ. ದೇಶ ಕಟ್ಟಲು ಈ ಯುವಸಮೂಹ ಬಹಳ ದೊಡ್ಡ ಪಾತ್ರವನ್ನು ನಿಭಾಯಿಸುತ್ತಾರೆ. ನಮ್ಮ ದೇಶದ ಸಂಪತ್ತನ್ನು ಹೆಚ್ಚಿಸಲು ಈ ಯುವಸಮೂಹ ಬಹಳ ಶ್ರಮ ವಹಿಸುತ್ತಾರೆ. ನಮ್ಮ ದೇಶದ ಒಂದಿಷ್ಟು ಯುವಸಮೂಹ ಬಹಳಷ್ಟು ಸಾಧನೆ ಮತ್ತು ಅವಿಷ್ಕಾರಗಳನ್ನು ಮಾಡ್ಡಿದ್ದಾರೆ. ನಮ್ಮ ದೇಶದ ಜನಸಂಖ್ಯೆ ೧೩೦ ಕೋಟಿ ಅದರಲ್ಲಿ ಯುವಸಮೂಹ ೬೦ ಕೋಟಿಗೂ ಹೆಚ್ಚು. ಈ ಎಲ್ಲಾ ಯುವ ಮಂದಿಯಲ್ಲಿ ಎಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ