ನನ್ನವಳು: ಗಿರಿಜಾ ಜ್ಞಾನಸುಂದರ್

   ಎಲ್ಲೋ ತುಂಬಾ ಸದ್ದು ಕೇಳಿಸುತ್ತಿರುವಂತೆ ಅನುಭವ. ಕಣ್ಣು ತೆರೆಯಲು ಆಗುತ್ತಲೇ ಇಲ್ಲ. ರೆಪ್ಪೆಗಳು ತುಂಬಾ ಭಾರ. ತನ್ನ ಮೈ ತನ್ನ ಮತ್ತೆ ಕೇಳುತ್ತಿಲ್ಲ ಅನ್ನಿಸುತ್ತಿದೆ. ತನ್ನಷ್ಟಕ್ಕೆ ತಾನು ಅತಿ ನೋವು ಅನುಭವಿಸುತ್ತಿದೆ. ಸುತ್ತಲೂ ಮಷೀನ್ ಗಳ ಶಬ್ದ. ತನಗೇನಾಗುತ್ತಿದೆ ಎಂದು ತಿಳಿದುಕೊಳ್ಳಲು ಕಷ್ಟವಾಗುತ್ತಿದೆ. ಸ್ವಲ್ಪ ಸಮಯ ತೆಗೆದುಕೊಂಡ ಮೇಲೆ ತಿಳಿಯುತ್ತಿದೆ ನಾನು ಆಸ್ಪತ್ರೆಯಾ ಐ ಸೀ ಯು ವಾರ್ಡ್ನಲ್ಲಿದ್ದೀನಿ ಎಂದು. ಎದೆನೋವೆಂದು ಹೇಳಿದ್ದೊಂದೇ ನೆನಪು. ಆಮೇಲೇನಾಯಿತೋ ಗೊತ್ತಿಲ್ಲ. ಆಸ್ಪತ್ರೆ ನನ್ನನ್ನು ಆಲಂಗಿಸಿದೆ. ತನ್ನ ಅರೋಗ್ಯ ಹದಗೆಟ್ಟಿದೆ … Read more

ಶಶಿ (ಕೊನೆಯ ಭಾಗ): ಗುರುರಾಜ ಕೊಡ್ಕಣಿ

ಇಲ್ಲಿಯವರೆಗೆ ಮರುದಿನ ಬೆಂಗಳೂರಿಗೆ ತೆರಳಿದ ನನಗೆ ಒಂದು ಗಳಿಗೆಯೂ ಪುರುಸೊತ್ತು ಇಲ್ಲದಂತಾಗಿತ್ತು. ಕಂಪನಿಯ ವಾರ್ಷಿಕ ಸಮ್ಮೇಳನದ ಸಮಾರಂಭದಲ್ಲಿ ನನಗೆ ಬೆಸ್ಟ್ ರೆಪ್ರಸೆಂಟಿಟಿವ್ ಆಫ್ ದಿ ಇಯರ್’ ಪ್ರಶಸ್ತಿ ಬಂದಾಗ ನನ್ನ ಸಂತೋಷ ಹೇಳತೀರದು. ಕಂಪನಿಗೆ ಸೇರಿದ ಎರಡೇ ವರ್ಷಗಳಲ್ಲಿ ಇಂಥದ್ದೊಂದು ಪ್ರಶಸ್ತಿ ಪಡೆದುಕೊಳ್ಳುವುದು ನಿಜಕ್ಕೂ ಹೆಮ್ಮೆಯ ಸಂಗತಿಯೇ ಆಗಿತ್ತು. ಪ್ರಶಸ್ತಿ ಫಲಕ , ಪ್ರಶಸ್ತಿಪತ್ರ ಸ್ವೀಕರಿಸಿ ಕಂಪನಿಯ ರೀಜನಲ್ ಮ್ಯಾನೇಜರಿನೊಂದಿಗೆ ಸೆಲ್ಫಿ ತೆಗೆಸಿಕೊಳ್ಳುವಷ್ಟರಲ್ಲಿ ರಿಂಗಣಿಸಿದ ಫೋನಿನ ತೆರೆಯ ಮೇಲೆ ’ಅಮ್ಮ’ಎಂದು ತೋರಿಸುತ್ತಿತ್ತು. ತಕ್ಷಣ ಕರೆಯನ್ನು ಕಟ್ ಮಾಡಿ … Read more

ವ್ಯಕ್ತಿ – ದೇಶಭಕ್ತಿ- ಭೂಶಕ್ತಿ: ಅಖಿಲೇಶ್ ಚಿಪ್ಪಳಿ

ಪಶ್ಚಿಮಘಟ್ಟಗಳ ತಪ್ಪಲಿನಲ್ಲಿಂದ ಹಿಡಿದು ಪ್ರಪಂಚದ ಬಹುತೇಕ ಎಲ್ಲಾ ಭಾಗಗಳಲ್ಲೂ ಅದೆಷ್ಟೋ ಪ್ರಭೇದಗಳು ನಾಶವಾಗಿವೆ. ಋತುಮಾನಗಳ ಬದಲಾವಣೆಯಿಂದಾಗಿ ಹೊಸ-ಹೊಸ ಪ್ರಭೇದಗಳು ಸೃಷ್ಟಿಯೂ ಆಗುತ್ತಿವೆ. ಸ್ಟೀಫನ್ ಹಾಕಿಂಗ್ಸ್‍ನಂತಹ ಮೇಧಾವಿಗಳು ಮಾನವನ ಕಾರಣಕ್ಕಾಗಿ ಬದಲಾವಣೆಯಾಗುತ್ತಿರುವ ಹವಾಗುಣದಿಂದ ಮನುಷ್ಯಕುಲಕ್ಕೇ ಆಪತ್ತು ಬಂದಿದೆ. ಇನ್ನೊಂದು ಸಾವಿರ ವರ್ಷದ ಒಳಗೆ ನಮ್ಮಗಳ ವಾಸಕ್ಕೆ ಬೇರೆ ಗ್ರಹವನ್ನು ಹುಡುಕಿಕೊಳ್ಳದಿದ್ದರೆ ನಮ್ಮ ಅವಸಾನ ಖಂಡಿತ ಎನ್ನುವ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಪ್ರತಿಕೂಲ ಪರಿಸ್ಥಿತಿಯಲ್ಲೂ ಬದುಕುವ ವಿಜ್ಞಾನವನ್ನು ಕಂಡುಕೊಳ್ಳುವ ಹಂತದಲ್ಲಿ ನಮ್ಮ ವೈಜ್ಞಾನಿಕ ಕಾರ್ಯಕ್ಷೇತ್ರ ತ್ವರಿತವಾಗಿ ಬದಲಾಗಬೇಕಿದೆ.  ವ್ಯಕ್ತಿಗಳನೇಕರು ಸೇರಿ … Read more

ಸಹನೆಯೇ ಸ್ತ್ರಿ ಅರಿವು: ನಾಗರೇಖಾ ಗಾಂವಕರ

“ಅಲ್ಲೊಂದು ಕಾಗೆಗಳ ಆಕ್ರಮಣಕ್ಕೆ ಗುರಿಯಾದ ಸಾಯುತ್ತ ಬಿದ್ದಿರುವ ಹದ್ದು. ಸೀತಾ ಅದನ್ನು ಉಳಿಸುವ ಪ್ರಯತ್ನ ಮಾಡುತ್ತಾಳೆ ಆದರೆ ಉಪಯೋಗವಾಗುವುದಿಲ್ಲ. ಗಾಯಗೊಂಡು ಜೀವಕ್ಕಾಗಿ ಅಸಹಾಯಕತೆಯಲ್ಲೆ ಗುದ್ದಾಡುತ್ತಿರುವ ಆ ಹದ್ದು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುತ್ತದೆ ಆದರೆ ಸಾಧ್ಯವಾಗದೇ ಕಾಗೆಗಳಿಗೆ ಆಹಾರ ವಾಗುತ್ತದೆ. ”ಈ ಸ್ಥಿತಿಯೇ ಸೀತಾಳ ಮನಸ್ಥಿತಿ ಕೂಡ. ಅನಿತಾ ದೇಸಾಯಿಯ shall we go this summer? ಕಾದಂಬರಿಯ ಕೇಂದ್ರ ಪಾತ್ರ ಸೀತಾ. ಒತ್ತಡದ ದಬ್ಬಾಳಿಕೆಯ ಬದುಕಿನಿಂದ ಆಕೆ ಪಲಾಯನ ಮಾಡ ಬಯಸುತ್ತಾಳೆ ಹದ್ದಿನಂತೆ. ಆದರೆ ಸಂಸಾರದ ಬಂಧನದಲ್ಲಿ … Read more

ಭವಿಷ್ಯದ ಭರವಸೆಯ ಕಥೆಗಾರ ತಿರುಪತಿ ಭಂಗಿ: ಮಹಾದೇವ ಎಸ್, ಪಾಟೀಲ

  ಬಾಗಲಕೋಟೆ ನಗರದಗೌರಿ ಪ್ರಕಾಶನದಿಂದ ಲೋಕಾರ್ಪಣೆಗೊಂಡ"ಕೈರೊಟ್ಟಿ"ಕಥಾಸಂಕಲನ,  ಕನ್ನಡ ಸಾಹಿತ್ಯದಲ್ಲಿ ಸಣ್ಣಕಥೆ ಪ್ರಕಾರಸಫಲ ಸಮೃದ್ಧತೆಯಿಂದ, ಉಳಿದೆಲ್ಲ ಪ್ರಕಾರಗಳನ್ನು ಮೀರಿ ನಿಂತು ಹೊಸ ಸಾಧ್ಯತೆಗಳನ್ನು ಹುಟ್ಟು ಹಾಕುತ್ತಿದೆ ಎನ್ನುವ: ಶ್ರೀಇಂದ್ರಕುಮಾರ ಎಚ್,ಬಿ ದಾವಣಗೆರೆ ರವರು "ಕೈರೊಟ್ಟಿ" ಕಥಾಸಂಕಲನಕ್ಕೆ ಮುನ್ನುಡಿ  ಬರೆಯುತ್ತಾ ಹೇಳಿರುವಮಾತು' ತಿರುಪತಿ ಭಂಗಿಯಂತ ಇನ್ನು ಅನೇಕ ಹೋಸ ಕಥೆಗಾರರಿಗೆ ಬೆನ್ತಟ್ಟಿದಂತಾಗಿದೆ'. ಬಾಗಲಕೋಟೆ ಜಿಲ್ಲೆಯ ದೇವನಾಳದ ತಿರುಪತಿ ಭಂಗಿಯವರು ರ್ಬಾಲ್ಯದಲ್ಲಿಯೇಹೆತ್ತವರ ಕಳೆದುಕೊಂಡುಅಜ್ಜ- ಅಜ್ಜಿಯರ ಆಶ್ರಯದಲ್ಲಿ ಬೆಳೆಯುವ ಅನಿವಾರ್ಯದೊಂದಿಗೆ, ಕೂಲಿ- ನಾಲಿ ಮಾಡುತ್ತಲೇ ಓದುವ ಮೂಲಕ; ಅಜ್ಜ- ಅಜ್ಜಿಯರನ್ನು ಕಳೆದುಕೊಂಡು, ತಂಗಿಯನ್ನು … Read more

ಯುಗಾದಿ ಹೊಸ ವರ್ಷಾರಂಭವೆ?: ಕೆ ಟಿ ಸೋಮಶೇಖರ ಹೊಳಲ್ಕೆರೆ.

ಭಾರತದ ಕೆಲವು ರಾಜ್ಯಗಳಲ್ಲಿ ಹೊಸ ವರ್ಷವನ್ನು ಯುಗಾದಿ ಅಥವಾ ಉಗಾದಿ ಎಂದು ಆಚರಿಸುತ್ತಾರೆ. ' ಯುಗ ' ಎಂದರೆ ಒಂದು ನಿಗಧಿತ ಕಾಲಾವಧಿ. ವರ್ಷ ಎಂದೂ ಅರ್ಥವಿದೆ. ' ಆದಿ ' ಎಂದರೆ ಆರಂಭ. ಯುಗಾದಿ ಎಂದರೆ ವರ್ಷದ ಆರಂಭ. ದಕ್ಷಿಣ ಭಾರತೀಯರಿಗೆ ಚೈತ್ರ ಮಾಸದ ಆರಂಭದ ದಿನವೇ ವರ್ಷದ ಆರಂಭ. ಅಂದು ಯುಗಾದಿಯನ್ನು ಕರ್ನಾಟಕ, ಆಂದ್ರಪ್ರದೇಶದಲ್ಲಿ ಆಚರಿಸುತ್ತಾರೆ. ಮಹಾರಾಷ್ಟ್ರದಲ್ಲಿ ಗುಡಿಪಾಡ್ಯ ಎಂದು ಆಚರಿಸುತ್ತಾರೆ. ಯಾವುದೇ ಸಂತೋಷ ಸಂಭ್ರಮಾಚರಣೆಗಳು ಬದುಕಿಗೆ ನವಚೇತನವನ್ನು ನೀಡುತ್ತವೆ. ಆದ್ದರಿಂದಾಗಿ ಅಂತಹ ಅವಕಾಶಗಳನ್ನು … Read more

ಕೊಟ್ಟೂರ ಜಾತ್ರೆ ಮತ್ತು ಜಯಂತ: ಪಾರ್ಥಸಾರಥಿ ಎನ್

ಜಯಂತ ಅಮ್ಮನ ಕೈ ಹಿಡಿದು ನಡೆಯುತ್ತಿರುವಂತೆ ಸುತ್ತಲು ಕಾಣುತ್ತಿದ್ದ ರಂಗು ರಂಗು ಅವನ ಕಣ್ಣು ತುಂಬುತಿತ್ತು.  ಅಮ್ಮ, ಸರೋಜ ತನ್ನದೆ ರಸ್ತೆಯ ಅಕ್ಕಪಕ್ಕದ ಮನೆಯ ಗೆಳತಿಯರೊಡನೆ ಜಾತ್ರೆಯ  ಸಂಭ್ರಮ   ನೋಡಲು ಹೊರಟಾಗ ಜಯಂತನದೇ ಚಿಂತೆ ಸರೋಜಳಿಗೆ, ಮನೆಯಲ್ಲಿ ಬಿಟ್ಟು ಹೋಗುವಂತಿಲ್ಲ, ಕರೆದುಕೊಂಡು ಹೋಗುವಂತಿಲ್ಲ. ಅಂತಹ ವಯಸ್ಸು ಅವನದು. ಬೆಳೆಯುವ ವಯಸಿನ ಮಕ್ಕಳದೆ ಒಂದು ಸಮಸ್ಯೆ ಬಿಡಿ, ತೀರ ಚಿಕ್ಕ ಮಕ್ಕಳಾದರೆ ಅಮ್ಮಂದಿರು ಎತ್ತಿ ಸೊಂಟದ ಮೇಲೆ ಕೂಡಿಸಿಕೊಂಡು, ಆ ಕಡೆ ಈಕಡೆ ಎನ್ನುತ್ತ ಬಾರ ಬದಲಾಯಿಸುವಂತೆ, … Read more

ನಿಲ್ಲಿಸದಿರು ವನಮಾಲಿ ಕೊಳಲಗಾನವ..: ಅನುರಾಧ ಪಿ. ಸಾಮಗ

ಎಂದಿನಂಥದೇ ಒಂದು ಬೆಳಗು, ಸುಂದರ ಬೆಳಗು. ನಿನ್ನೆಯೊಡಲಿನೆಲ್ಲ ನೋವಿಗೂ ಮುಲಾಮಾಗಬಲ್ಲ ಮುದ್ದಿಸಿ ಎದ್ದೇಳಿಸುವ ಅಮ್ಮನ ನಗುಮುಖದಂಥ, ಅಪ್ಪನ ಮುಖದ ಆಶ್ವಾಸನೆಯಂಥ ಬೆಳ್ಳಂಬೆಳಗು.  ಯಮುನೆ ಹರಿಯುತ್ತಿದ್ದಾಳೆ ಮಂಜುಳಗಮನೆಯಾಗಿ; ಒಡಲಲ್ಲಿ ಮಾತ್ರ ಅತ್ಯುತ್ಸುಕತೆಯ ಉಬ್ಬರ, ಅದೇ ಪರಿಚಿತ ಸುಖದ ಭಾವ. ಎಂದಾಗಿತ್ತೋ ಈ ಅನುಭವ! ತಕ್ಷಣಕ್ಕೆ ನೆನಪಾಗದು, ಹೆಣ್ಣೊಡಲಿನ ಭರತವಿಳಿತಗಳೆಲ್ಲವನ್ನೂ ಸುಮ್ಮಸುಮ್ಮನೆ ಹೊರಗೆಡಹಿ ಉಕ್ಕಿ ಹರಿಯಬಿಡಲಾದೀತೇ, ಜನ ಏನಂದಾರು? ಹಾಗಾಗಿ ತೋರಗೊಡದೆ ಹೊರಗವಳದು ಅದೇ ಗಂಭೀರ ಹರಿವು, ಆದರೂ ಒಳಗಿನ ಅಲೆಗಳ ಏರಿಳಿತವದೆಷ್ಟು ಹೊತ್ತು ಬಚ್ಚಿಡಬಲ್ಲಳೋ ಆಕೆಗೇ ಗೊತ್ತಿಲ್ಲ. ದಡದ … Read more

ನೆನಪಾಗುವರು: ಶೈಲಜ ಮಂಚೇನಹಳ್ಳಿ

ಈ ಹಿಂದೆ ಸಂಕ್ರಾಂತಿಯ ಮುನ್ನಾದಿನ ನನ್ನ ಪುಟ್ಟ ಕಂಪ್ಯೂಟರ್ ಸೆಂಟರ್‍ಗೆ ಒಂದು ಪ್ರಿಂಟರನ್ನು ಕೊಂಡು ತರಲು ಎಸ್.ಪಿ. ರಸ್ತೆಗೆ ಹೋಗಿದ್ದೆ, ಜೊತೆಯಲ್ಲಿ ನನ್ನಕ್ಕನ ಕಿರಿ ಮಗನನ್ನು ಕರೆದುಕೊಂಡು ಹೋಗಿದ್ದೆ. ಹಲವಾರು ಅಂಗಡಿಗಳಲ್ಲಿ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಅವುಗಳ ಗುಣ-ಲಕ್ಷಣಗಳನ್ನು, ಬೆಲೆಗಳನ್ನು ಕೇಳಿ ತಿಳಿದುಕೊಂಡು ಅಲ್ಲಿರುವ ಒಂದು ಕಾಂಪ್ಲೆಕ್ಸ್‍ನಲ್ಲಿದ್ದ ಕೆಲವು ಅಂಗಡಿಯಲ್ಲಿ ಕೆಲವು ಪ್ರಿಂಟರ್‍ಗಳನ್ನು ವಿಚಾರಿಸಿ ಕಡೆಗೆ ಒಂದು ಅಂಗಡಿಯಲ್ಲಿ, ನಾನು ತೆಗೆದುಕೊಳ್ಳಬೇಕೆಂದಿದ್ದ ಪ್ರಿಂಟರ್ ಮತ್ತು ಇನ್ನೂ ಹಲವಾರು ಬಗೆಯ ಪ್ರಿಂಟರ್‍ಗಳನ್ನು ಮಾಲೀಕ ಕುಳಿತುಕೊಳ್ಳುವ ಜಾಗವನ್ನು ಸುತ್ತುವರೆದು ಪಟ್ಟಿಯಂತಿದ್ದ, … Read more

ಸುಬ್ಬೀ ಮದುವೆ: ಕೃಷ್ಣವೇಣಿ ಕಿದೂರ್

   ಮಗಳನ್ನು  ಕರೆದುಕೊಂಡು  ರೈಲು  ಹತ್ತಿದ್ದ  ಭಟ್ಟರು  ಪ್ರಯಾಣದ ಉದ್ದಕ್ಕೂ  ಸುಬ್ಬಿ ಹತ್ತಿರ  ಒಂದೇಒಂದು  ಮಾತನ್ನೂ ಆಡಲಿಲ್ಲ.  ಅಪ್ಪನ  ದೂರ್ವಾಸಾವತಾರಕ್ಕೆ ಹೆದರಿ ಕೈಕಾಲು ಬಿಟ್ಟಿದ್ದ  ಅವಳು  ತೆಪ್ಪಗೆ  ಕುಸುಕುಸು  ಮಾಡುತ್ತ   ಮುಖ  ಊದಿಸಿಕೊಂಡೇ  ಕೂತಳು. ಎರ್ನಾಕುಲಂ   ನಿಲ್ದಾಣ  ಹತ್ತಿರವಾಗಿ ಇನ್ನೇನು  ಇಳಿಯುವ  ಹೊತ್ತು ಬಂತು ಅನ್ನುವಾಗ  ಭಟ್ಟರು  ಕೆಂಗಣ್ಣು  ಬಿಟ್ಟು  ಮಗಳತ್ತ  ದುರುಗುಟ್ಟಿದರು.                         " ಬಾಯಿ ಮುಚ್ಚಿಕೊಂಡು … Read more

ಕಾದಿದೆ ಈ ಮನ ಪ್ರಮೋಷನ್ ಗಾಗಿ: ಚೈತ್ರ ಎಸ್.ಪಿ.

ಎಂದಿಗೂ ವೈವಾಹಿಕ ಜೀವನದ ಕನಸು ಕಂಡವಳಲ್ಲ. ಇಂದು ಕಂಡೆ. ಒಬ್ಬ ಪರಿಪೂರ್ಣ ಮಹಿಳೆಯಾಗಿ ನಾನು ನನ್ನ ಪೂರ್ಣ ಪೂರ್ಣವಾಗಿ ತನ್ನ ಜೀವನವನ್ನು ಸಂತೊಷದಿಂದ ಕಳೆಯುವ ಕನಸ ಕಂಡೆ. ಸಣ್ಣ ಸಣ್ಣ ಕನಸುಗಳು. ಅದು ನಸುಕಿನ ಮಂಜಿನಲ್ಲಿ ಅವನ ಬಿಟ್ಟೇಳಲು ಮನಸ್ಸಿಲ್ಲದಿದ್ದರೂ ತಬ್ಬಿದ ಅವನ ಕೈಯನ್ನು ಬಿಡಿಸಿ ಅವನ ಕಾಲುಗಳಿಗೊಂದು ಸಿಹಿ ಮುತ್ತಿಟ್ಟು ದಿನದ ಕೆಲಸ ಪ್ರಾರಂಭ ಮಾಡುವುದೇ ಅಗಿರಬಹುದು. ಮಾತೃ ಸಮಾನವಾಗಿ ನೋಡುವ ನನ್ನ ಪ್ರೀತಿಯ ಗೋವುಗಳ ಸೇವೆಗೆ ಅವನು ಕೊಟ್ಟ ಪ್ರೋತ್ಸಾಹಕ್ಕೆ ಪ್ರತಿಯಾಗಿ ನಾ ಅವುಗಳೊಂದಿಗೆ … Read more

ಪ್ರೇಮಖೈದಿ-೩: ಅಭಿಸಾರಿಕೆ

ಇಲ್ಲಿಯವರೆಗೆ ಹೀಗೆ ಯೋಚಿಸುತ್ತಿದ್ದ ವಿಶ್ವನಿಗೆ ಸಮಯವಾಗಿದ್ದೆ ತಿಳಿಯಲಿಲ್ಲ, ಈ ಮಧ್ಯೆ ನರ್ಸ್ ಬಂದು ಎರಡು ಬಾರಿ ಡ್ರಿಪ್ಸ್ ಬದಲಾಯಿಸಿ ಹೋಗಿದ್ದಳು. ವಿಶ್ವ ಬೆಳಗ್ಗೆ ಸ್ಪಂದನ ಕೊಟ್ಟ ಮೊಬೈಲ್ ತೆಗೆಯಲು ಪ್ರಯತ್ನಿಸಿದ, ತುಂಬಾ ಕಷ್ಟವಾಯಿತು ಕೈಗಳಿಗೆ ಆದರೂ ತೆಗೆದು ಸಮಯ ನೋಡಿದ, ಸಂಜೆ ಐದಾಗಿತ್ತು ಸ್ಪಂದನ ಬರಬಹುದೆಂದು ಕಾದು ಕುಳಿತ, ಅವಳ ಸುಳಿವಿರಲಿಲ್ಲ, ಆರಕ್ಕೆ ವಿಶ್ವನಿಗೆ ಕರೆ ಮಾಡಿದ ಸ್ಪಂದನ ತನಗೆ ತುಂಬಾ ಕೆಲಸವಿರುವುದಾಗಿಯೂ ತಾನಿಂದು ಬರುವುದಿಲ್ಲವೆಂದು ಹೇಳಿದಳು, "ನಿನ್ನ ಸ್ನೇಹಿತ ಪ್ರಕಾಶ್ ಫೋನ್ ಮಾಡಿದ್ದರು ಬೆಳಿಗ್ಗೆ ನಿನ್ನ … Read more

ಮೋಹಪುರವೆಂಬ ಸಾಮಾಜಿಕ ಮಾಯೆ: ಕೆ.ಎಂ.ವಿಶ್ವನಾಥ ಮರತೂರ.

  ಪುಸ್ತಕದ ಹೆಸರು : “ಮೋಹಪುರ”                                          ಪ್ರಕಾರ : ಕಾದಂಬರಿ ಪ್ರಕಾಶಕರು : ಕನ್ನಡ ನಾಡು ಪ್ರಕಾಶನ              ಬೆಲೆ : ರೂ.90            ಪುಟಗಳು : 88 ಪ್ರಕಟಣೆಯ ವರ್ಷ : 2015   … Read more

ಮೂವರ ಕವಿತೆಗಳು ಕು.ಸ.ಮಧುಸೂದನರಂಗೇನಹಳ್ಳಿ, ಅನಿತಾ ಕೆ.ಗೌಡ, ರಾಜೇಶ್ವರಿ ಎಂ.ಸಿ.

ಅದೊಂದು ರಾಜ್ಯದಲ್ಲಿ! ಅಷ್ಟೆತ್ತರದ ಅರಮನೆ ಅಂಬರ ಮುಟ್ಟುವ ಕಳಸಗೋಪುರಗಳು ಸುತ್ತೇಳು ಕೋಟೆ ಗೋಡೆಗಳ ಮೇಲೆ ಫಿರಂಗಿಗಳ  ಹಿಂಡು ಸುತ್ತ ಶಸ್ತ್ರಸಜ್ಜಿತ ಸೈನಿಕರ ದಂಡು ಅಲ್ಲಲ್ಲಿ ವಿಶಾಲ ದೇವಳಗಳು ಸಾಹಿತ್ಯ ಸಂಗೀತ ಸಭಾಭವನಗಳು ಮೀಟಿದರೆ ನಾದ ಹೊಮ್ಮಿಸುವ ತಂತಿವಾದ್ಯಗಳು! ಕಲ್ಯಾಣಮಹೋತ್ಸವಕ್ಕಾಗಿ ಕಟ್ಟಿಸಿದಷ್ಟಗಲದ ಛತ್ರಗಳು ಕಸದ ತೊಟ್ಟಯ ಸುತ್ತ ಕಂತ್ರಿನಾಯಿಗಳು ತಲೆ ಹಿಡಿಯಲು ಗಿರಾಕಿಯನುಡುಕಿ ಹೊರಟ ಛತ್ರಿಗಳು ಬರೆದಿಟ್ಟ ಬೊಗಳೆ ಗ್ರಂಥಗಳು ಆಳುವ ಅರಸರು ಅವರ ಹೆಂಡಂದಿರು ಹೆಂಡಂದಿರ ಮಿಂಡರು ಮನೆಹಾಳು ವಂದಿಮಾಗದಿಗರಿಗಾಗಿ ಕಟ್ಟಿಸಿದ ಮಹಲುಗಳು ಅದರೊಳಗಿನವರ ತೆವಲುಗಳು ಐದು … Read more

ಕಾಡು(ವ) ಕಟ್ಟುವ ಕತೆ!! ಭಾಗ-7: ಅಖಿಲೇಶ್ ಚಿಪ್ಪಳಿ

ತುಡುಗು ದನಗಳ ಕಾಟವನ್ನು ತಡೆಯಲು ಬೇರಾವುದೇ ಉಪಾಯ ಕಾಣಲಿಲ್ಲ. ಇಡೀ ದಿನ ಕಾಯುವುದಂತೂ ಸಾಧ್ಯವಿಲ್ಲ. ನೀರಿನ ಅಭಾವದಿಂದ ಸಾಯುತ್ತಿರುವ ಗಿಡಗಳನ್ನು ಉಳಿಸುವುದು ಹೇಗೆ ಎಂಬುದೇ ಪ್ರಶ್ನೆ. ಬಾವಿಯನ್ನೋ, ಕೊಳವೆ ಬಾವಿಯನ್ನೋ ತೆಗೆಸಲು ತಕ್ಷಣದಲ್ಲಿ ಸಾಧ್ಯವಿಲ್ಲ. ನೀರಿನ ಅಭಾವಕ್ಕೆ ಮೊಟ್ಟಮೊದಲಿಗೆ ಬಲಿಯಾಗುತ್ತಿರುವುದು ಊರಹೊನ್ನೆಯೆಂಬ ಗಿಡಗಳು. ಇವುಗಳನ್ನು ಹೊನ್ನಾವರ-ಕುಮುಟದ ಕಡೆಯಿಂದ ತರಿಸಿದ್ದೆ. ಮೊದಲ ವರ್ಷ ನೀರು ಬೇಡುವ ಸಸ್ಯಗಳವು. ನೀರನ್ನು ಕೊಡದಿದ್ದರೆ ಊರಹೊನ್ನೆ ಗಿಡಗಳು ಬದುಕಲಾರವು. ಈಗ ನೆರೆಯವರಿಗೆ ಕೊಂಚ ಹೊರೆಯಾದರೆ ಹೇಗೆ ಎಂಬ ಯೋಚನೆಯೊಂದು ಬಂತು. ಪಕ್ಕದ ಆಶ್ರಮದವರ … Read more

ಜಾಲ: ಪ್ರಶಸ್ತಿ ಪಿ.

ಆಗಾಗ ಒಳಸೇರೋ ಶುದ್ಧ ನೀರು ಖುಷಿ ಕೊಡುತ್ತೆ, ಆರೋಗ್ಯವನ್ನೂ. ಆದ್ರೆ ಆ ನೀರೊಳಗೇ ನಾವು ಸೇರಿದ್ರೆ ? ಕಚ್ಚೋ ಸೊಳ್ಳೆಯ ಸಾವಾಗೋ ಚಪ್ಪಾಳೆ ಹಿತವೀಯುತ್ತೆ. ಆದ್ರೆ ಸಾವೇ ಚಪ್ಪಾಳೆ ಹೊಡೆದು ನಮ್ಮ ಕರೆದ್ರೆ ? ಓದೋ ಕಥೆಯೊಂದು ಖುಷಿ ಕೊಡುತ್ತೆ. ಆದ್ರೆ ಅದೇ ಜಾಲವಾಗಿ ನಮ್ಮ ಸೆಳೆದ್ರೆ ?  ಊರಲ್ಲೊಂದು ಹೊಸ ಅಂಗಡಿ. ಹೆಸರು ಊರಾಗಿದ್ರೂ ಅದು ಹಳ್ಳಿಯೇನಲ್ಲ.ಹಂಗಂತ ಮಹಾನಗರಿಯೂ ಅಲ್ಲ. ಸಾವಿರದ ಸುಮಾರಿಗೆ ಜನರಿದ್ದ ಜಾಗವದು. ಅಲ್ಲಿನ ಜನಕ್ಕೆ ಅಂಗಡಿಗಳು ಹೊಸದಲ್ಲದಿದ್ದರೂ ತಮ್ಮೂರಿಗೆ ಪುಸ್ತಕದಂಗಡಿಯೊಂದು ಬಂದಿದ್ದು … Read more

ನಜ಼ರುದ್ದೀನ್‌ ಕತೆಗಳು: ಗೋವಿಂದ ರಾವ್ ವಿ. ಅಡಮನೆ

೧. ಕುದುರೆ ವ್ಯಾಪಾರಿ ಮಾರುಕಟ್ಟೆಯಲ್ಲಿ ಕುದುರೆ ವ್ಯಾಪಾರಿಯೊಬ್ಬ ತಾನು ಮಾರುತ್ತಿದ್ದ ಕುದುರೆಯ ಗುಣಗಾನ ಮಾಡುತ್ತಿದ್ದದ್ದನ್ನು ಕೇಳುತ್ತಾ ನಿಂತಿದ್ದ ನಜ಼ರುದ್ದೀನ್‌. “ಇಡೀ ಹಳ್ಳಿಯಲ್ಲಿ ಇರುವ ಕುದುರೆಗಳ ಪೈಕಿ ಅತ್ಯಂತ ಉತ್ಕೃಷ್ಟವಾದ್ದು ಇದು. ಇದು ಮಿಂಚಿನ ವೇಗದಲ್ಲಿ ಓಡುತ್ತದೆ. ಎಷ್ಟುಹೊತ್ತು ಓಡಿದರೂ ಸುಸ್ತಾಗುವುದೇ ಇಲ್ಲ. ನಿಜ ಹೇಳಬೇಕೆಂದರೆ, ಈಗ ನೀವು ಈ ಕುದುರೆಯನ್ನೇರಿ ಇಲ್ಲಿಂದ ಹೊರಟರೆ ಬೆಳಗ್ಗೆ ೫ ಗಂಟೆಯ ವೇಳೆಗೆ ಸಮರ್‌ಕಂಡ್‌ನಲ್ಲಿ ಇರುತ್ತೀರಿ.” ತಕ್ಷಣ ನಜ಼ರುದ್ದೀನ್‌ ಪ್ರತಿಕ್ರಿಯಿಸಿದ: “ಅಯ್ಯೋ ದೇವರೇ! ಅಷ್ಟು ಬೆಳಗಿನ ಜಾವ ಸಮರ್‌ಕಂಡ್‌ ಸೇರಿ ಮಾಡಬೇಕಾದದ್ದು … Read more

ಸಾಲಿ ಪಡಸಾಲಿ: ತಿರುಪತಿ ಭಂಗಿ

ನಾನು ಕೆಲಸವಿಲ್ಲದೆ ಅಲೆದಾಡುತ್ತಿದ್ದೆ. ಆದ್ರೆ ಯಾರೂ ನನಗೆ ನಿರುದ್ಯೋಗಿ ಅಂದಿರಲಿಲ್ಲ.ಪಾಪ..! ನಮ್ಮೂರ ಜನರು ನನ್ನ ಮೇಲೆ ತುಂಬಾ ಪ್ರೀತಿ ಇಟ್ಟುಕೊಂಡಿದ್ದರು. ನಮ್ಮ ಅಪ್ಪನಿಗಂತೂ  ಒಬ್ಬನೆ ಮಗಾ. ಹಿಂಗಾಗಿ ನಾ ಮಾಡಿದ್ದೆ ಮಾರ್ಗ ಎಂದು ನನ್ನ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ನಾನು ನಾಲ್ಕು ಸಾರಿ ಹತ್ತನೇ ತರಗತಿ ಪೇಲಾದರೂ ನನ್ನ ಅಪ್ಪ ಮಗಾ ಮನಸಿಗೆ ಬೇಜಾರ ಮಾಡ್ಕೊಂಡಿತು ಎಂದು ತಿಳಿದು “ಮಗನೇ ನಿನ್ನ ಪಾಸ ಮಾಡಿದ್ರೆ ಎಲ್ಲಿ ನೀ ಡಿ.ಸಿ ಅಕ್ಕಿ ಅನ್ನೋ ಹೊಟ್ಟೆ ಕಿಚ್ಚು ಆ ಮಾಸ್ತರ … Read more

​ಲಡಾಯಿ ಪ್ರಕಾಶನದಿಂದ ಶೂದ್ರ ಶ್ರೀನಿವಾಸ್ ಅವರ ಮೂರು ಪುಸ್ತಕಗಳ ಬಿಡುಗಡೆ

ಲಡಾಯಿ ಪ್ರಕಾಶನದಿಂದ ಶೂದ್ರ ಶ್ರೀನಿವಾಸ್ ಅವರ ಮೂರು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಏಪ್ರಿಲ್ 3 ರಂದು ಬೆಂಗಳೂರಿನ ನ್ಯಾಶನಲ್ ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10.15 ಗಂಟೆಗೆ ನಡೆಯುವುದು. ಆಸಕ್ತರು ಭಾಗವಹಿಸಬಹುದು…

ಅನ್ನದಾತನೊಬ್ಬನ ಜೊತೆ ಇಡೀ ದಿನ..: ನಟರಾಜು ಎಸ್. ಎಂ.

 ಚಳಿಯ ಕಾರಣಕ್ಕೆ ವಾಕಿಂಗ್ ಮತ್ತು ಜಾಗಿಂಗ್ ಅನ್ನು ಅಕ್ಷರಶಃ ನಿಲ್ಲಿಸಿಬಿಟ್ಟಿದ್ದ ನಾನು ಇತ್ತೀಚೆಗೆ ಶಿವರಾತ್ರಿಯ ತರುವಾತ ಚಳಿ ಕಡಿಮೆ ಆದ ಕಾರಣ ಬೆಳಿಗ್ಗೆ ಅಥವಾ ಸಂಜೆ ಮತ್ತೆ ವಾಕ್ ಶುರು ಮಾಡಿದ್ದೆ. ಆಫೀಸಿನ ದಿನಗಳಾದರೆ ಸಂಜೆ ಐದೂವರೆ ಆರು ಗಂಟೆ ಆಗುತ್ತಿದ್ದಂತೆ ಆಫೀಸಿನಿಂದಲೇ ಸೀದಾ ತೀಸ್ತಾ ನದಿಯ ಪಕ್ಕದಲ್ಲಿರುವ ಕಟ್ಟೆಯ ಮೇಲೆ ಒಂದೂ ಒಂದೂವರೆ ಗಂಟೆ ತಪ್ಪದೆ ವಾಕ್ ಮಾಡುತ್ತೇನೆ. ಇವತ್ತು ಭಾನುವಾರ ರಜೆ ಇದ್ದುದರಿಂದ ಬೆಳಿಗ್ಗೆ ಬೇಗನೆ ಎದ್ದವನು ರೆಡಿಯಾಗಿ ಮಾರ್ನಿಂಗ್ ವಾಕ್ ಗೆಂದು ತೀಸ್ತಾ ನದಿಯ … Read more

ವಿದ್ಯುತ್ ಎಂಬ ಮಹದುಪಕಾರಿ ಯಾಮಾರಿದರೆ ಬಲು ಅಪಾಯಕಾರಿ: ರೋಹಿತ್ ವಿ. ಸಾಗರ್

ಕರೆಂಟ್ ಅಥವಾ ವಿದ್ಯುತ್ ಎಂಬ ಶಬ್ದ ಯಾರಿಗೆ ತಾನೆ ಗೊತ್ತಿಲ್ಲ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ವರೆಗೂ ತರಹೇವಾರಿ ವಿಧಗಳಲ್ಲಿ ನಾವು ಅವಲಂಬಿಸಿರುವ, ಅದಿಲ್ಲದ ಜೀವನವನ್ನು ಊಹಿಸಲೂ ಹೆದರಬೇಕಾಗಿರುವಂತಹ ಅಪೂರ್ವ ಶಕ್ತಿಯ ಆಕರವೇ ಈ ’ವಿದ್ಯುತ್’ ಅಥವಾ ’ಕರೆಂಟ್’.    ಹಗಲು ರಾತ್ರಿಗಳೆನ್ನದೆ ಸೂರ್ಯ ಚಂದ್ರರನ್ನೂ ನಾಚಿಸುವ ಬೆಳಕಿನ ದೀಪಗಳು, ಬೆಳಗ್ಗೆ ಎದ್ದಕೂಡಲೇ ಸುಪ್ರಭಾತ ಹಾಡುವ ರೇಡಿಯೋ, ಎಫ್.ಎಮ್ ಗಳು, ಮುಂದೆ ಕೂತವರ ಕಾಲವನ್ನೇ ಕರಗಿಸಬಲ್ಲ ಮೂರ್ಖರ ಪೆಟ್ಟಿಗೆ ಎಂದೇ ಖ್ಯಾತಿ ಪಡೆದ ಟಿ.ವಿ.ಗಳು, ಜಾಣರ ಪೆಟ್ಟಿಗೆಯಂತಿರುವ ನಮ್ಮ … Read more

ಕರಿಯನ ಕತೆ: ಅಖಿಲೇಶ್ ಚಿಪ್ಪಳಿ

ಊರಿನಲ್ಲಿ ಹೊಸ ಮನೆ ಕಟ್ಟಿಕೊಂಡು, ಬೇಕಾದಷ್ಟು ತರಕಾರಿ ಬೆಳೆದುಕೊಂಡು, ಸೊಂಪಾಗಿ ತಿನ್ನಬಹುದು ಎಂದು ಕನಸು ಕಾಣುತ್ತಿದ್ದವನಿಗೆ, ಎರವಾಗಿದ್ದು ಮಂಗಗಳು, ಏನೇ ಬೆಳೆದರೂ ಅದ್ಯಾವುದೋ ಹೊತ್ತಿನಲ್ಲಿ ಬಂದು ತಿಂದು, ಗಿಡಗಳನ್ನು ಹಾಳು ಮಾಡಿ, ಇಡೀ ಶ್ರಮವನ್ನು ವ್ಯರ್ಥಮಾಡಿ ಹೋಗುತ್ತಿದ್ದವು, ಮಂಗಗಳ ಅಸಹಾಯಕತೆ ಗೊತ್ತಿದ್ದರೂ, ಅದೇಕೋ ಅವುಗಳ ಮೇಲೆ ಸ್ವಲ್ಪ ಕೋಪವೂ ಬರುತ್ತಿತ್ತು. ತರಕಾರಿಗಳನ್ನು ತಿನ್ನುವುದಲ್ಲದೇ, ಗಿಡಗಳನ್ನು ಹಾಳು ಮಾಡುವ ಪರಿಗೆ ಕೆಲವೊಂದು ಬಾರಿ ಖಿನ್ನತೆಯೂ ಆವರಿಸುತ್ತಿತ್ತೇನೋ ಎಂಬ ಅನುಮಾನವೂ ಕಾಡುತ್ತಿತ್ತು. ಇದಕ್ಕೊಂದು ಉಪಾಯವೆಂದರೆ, ನಾಯಿಯೊಂದನ್ನು ತಂದು ಸಾಕುವುದು, ನಾಯಿ … Read more

ಮಗುವಿನ ಆರೈಕೆ: ಮಹಿಮಾ ಸಂಜೀವ್

ನಾನು ನಾಲ್ಕು ವರ್ಷದ ಮಗುವಿನ ತಾಯಿ..ಅಂದರೆ ನನಗು ನಾಲ್ಕೇ ವರ್ಷ!! ಹೌದು ಒಂದು ಮಗುವಿನೊಂದಿಗೆ ತಾಯಿಯೂ ಹುಟ್ಟುತ್ತಾಳೆ .. ನನ್ನ ತಾಯ್ತನದ ಜನನವು ಹಾಗೆ ಆದದ್ದು .. ಮಗು ಬೆಳೆಸುವದೇನು  ಸಹಜದ ಕಲೆಯಲ್ಲ…ಆದರೆ ಅದರ ತಯಾರಿಯನ್ನ ಬಹಳ ಮುಂಚಿನಿಂದ  ಮಾಡಬೇಕಾಗುತ್ತೆ ..ಒಂದು ಮಾನಸಿಕ ತಯಾರಿಯದ್ದು ಮತ್ತೊಂದು ದೈಹಿಕ ತಯಾರಿಯದ್ದು  ಮಾನಸಿಕವಾಗಿ ಹೆಣ್ಣು ತಾಯ್ತನಕ್ಕೆ ಬಹಳ ಬೇಗ ಸಜ್ಜುಗೊಳ್ಳುತ್ತಾಳೆ  ಅನ್ನೋ ನಂಬಿಕೆ ಇದೆ..ನಾನು ಹೇಳುತ್ತೇನೆ ಅದು ಸುಳ್ಳು, ಆಕೆಗೂ ಸಮಯ ಬೇಕು..ಅಲ್ಪ ಸಲ್ಪದ ತರಬೇತಿಯು ಬೇಕು..ಮನೆಯಲ್ಲಿ ಹಿರಿಯರಿದ್ದಾರೆ ಸರಿ, … Read more

ಕನ್ನಡಿಗಳು: ಪ್ರಸಾದ್ ಕೆ.

ಕಳೆದ ಒಂದೆರಡು ತಿಂಗಳಿನಿಂದ ಇದು ತುಂಬಾ ಕಷ್ಟವಾಗಿಬಿಟ್ಟಿದ್ದರೂ ಅಭ್ಯಾಸವಾಗಿ ಹೋಗಿದೆ.  ನನ್ನ ಸಮಸ್ಯೆಯೇನೆಂದರೆ ನಾನು ನೋಡುತ್ತಿರುವ ದೃಶ್ಯಗಳೆಲ್ಲಾ ತಿರುಗುಮುರುಗಾಗಿ ಕಾಣಿಸುತ್ತಿವೆ. ಮಿರರ್ ಇಮೇಜ್ ಅಂತೀವಲ್ಲಾ, ಆ ಥರಾನೇ. ಪುಸ್ತಕದಲ್ಲಿರುವ ಅಕ್ಷರಗಳು, ಬೀದಿಯ ಸೈನ್ ಬೋರ್ಡುಗಳು, ಕಟ್ಟಡಗಳಿಗೆ ಜೋತುಬಿದ್ದಿರುವ ಫಲಕಗಳು ಹೀಗೆ ಎಲ್ಲವೂ, ಎಲ್ಲೆಲ್ಲೂ ಕನ್ನಡಿಯಿಂದ ನೋಡಿದಂತೆ ಕಾಣುತ್ತಿವೆ. ಮಗುವೊಂದು ಮೊಟ್ಟಮೊದಲ ಬಾರಿಗೆ ನಡೆದಾಡಲು ಆರಂಭಿಸಿದಾಗ ಜಗತ್ತನ್ನು ಹೇಗೆ ಅಚ್ಚರಿಯಿಂದ ಕಣ್ಣರಳಿಸಿ ನೋಡುತ್ತದೆಯೋ ಹಾಗೇ ನನಗೂ ಅನುಭವವಾಗುತ್ತಿದೆ. ಎಲ್ಲವೂ ನಿಗೂಢ, ಎಲ್ಲವೂ ವಿಚಿತ್ರ. ಮೊದಲೊಮ್ಮೆ ಭಯಭೀತನಾಗಿದ್ದರೂ ಈಗ ಸಾಮಾನ್ಯವಾಗಿ … Read more

ಪರಶುವಿನ ದೇವರು (ಕೊನೆ ಭಾಗ): ಶಾಂತಿ ಕೆ. ಅಪ್ಪಣ್ಣ

ಇಲ್ಲಿಯವರೆಗೆ… "ಅವ್ವ, ಚಡ್ಡಿ ಹಾಕ್ಕೊಡು" ಮಗು ಕೈ ಜಗ್ಗಿದಾಗ ಅದರ ಬೆನ್ನಿಗೆ ಗುದ್ದಿದಳು ಸುಜಾತ. "ಏ ಮುಂಡೇದೇ,  ಎಷ್ಟು ಸಲ ಹೇಳಿಲ್ಲ, ಮಮ್ಮಿ ಅನ್ಬೇಕು ಅಂತ, ಇನ್ನೊಂದ್ಸಲ ಅವ್ವ ಪವ್ವ ಅಂದ್ರೇ ಹೂತಾಕ್ಬುಟ್ಟೇನು" ಮಾತೇನೋ ಆಡಿ ಮುಗಿಸಿದಳು. . ಆದರೆ ಅವಳಿಗೆ ತನ್ನದೇ ವರಸೆಯ ಬಗೆ ನಾಚಿಕೆಯೆನಿಸಿತು. ಅಪರೂಪಕ್ಕೂ ಅವಳಲ್ಲಿ ಇಂಥ ಬಯ್ಗುಳಗಳು ಹೊರಬಿದ್ದದ್ದಿಲ್ಲ ಆದರೆ ಇಲ್ಲಿಗೆ ಬಂದ ಮೇಲೆ ತನಗೆ ಇವೆಲ್ಲ ಸಲೀಸಾಗಿ ಬರುತ್ತಿದೆ. ಏಟು ತಂದು ಮಗು ಅಳುವುದಕ್ಕೂ ಕೆಳಗಿನಿಂದ ಪಾಪಯ್ಯನ ಹೆಂಡತಿ ಅವಳನ್ನು … Read more

ಥ್ರೀರೋಜಸ್ ಕಥೆ (ಭಾಗ 2): ಸಾವಿತ್ರಿ ವಿ. ಹಟ್ಟಿ

  ಇಲ್ಲಿಯವರೆಗೆ… ಮೊದಲನೇ ಕಿರು ಪರೀಕ್ಷೆಗಳು ಮುಗಿದಿದ್ದವು. ಅವತ್ತು ಶನಿವಾರ. ಕೊನೆಯಲ್ಲಿ ಆಟದ ಅವಧಿ ಇತ್ತು. ಏಕೋ ಆಟದಲ್ಲಿ ತೊಡಗಿಕೊಳ್ಳಲು ಮನಸ್ಸು ಬರಲಿಲ್ಲ. ನನ್ನ ವಾಸದ ಕೋಣೆಗೆ ಹೋಗಿ ಅಕ್ಕಿ ತೊಳೆದು, ಒಲೆ ಹೊತ್ತಿಸಿಟ್ಟೆ. ಅನ್ನ ಬೇಯುವಷ್ಟರಲ್ಲಿ ರವೀಂದ್ರ ಕಲ್ಲಯ್ಯಜ್ಜನವರ ಖಾನಾವಳಿಯಿಂದ ಕೆಟ್ಟ ಖಾರದ ರುಚಿಯಾದ ಸಾರು ತಂದಿರಿಸಿದ್ದ. ಊಟದ ನಂತರ, ಸಾಕಷ್ಟು ಸಮಯವಿದ್ದುದರಿಂದ ಒಂದೆರಡು ತಾಸು ಚೆಂದಗೆ ನಿದ್ದೆ ಮಾಡಿಬಿಟ್ಟೆ. ಎಚ್ಚರವಾದಾಗ ಕೋಣೆಯಲ್ಲಿ ರವೀ ಇರಲಿಲ್ಲ. ಅವನು ಸಮಯ ಸಿಕ್ಕಾಗೆಲ್ಲ ಗೆಳೆಯರನ್ನು ಹುಡುಕಿಕೊಂಡು ಹೋಗುವವನು. ಎಲ್ಲಿದ್ದಾನೆಂದು … Read more