ಹಿಜಾಬ್ ಮತ್ತು ವಿದ್ಯಾಭ್ಯಾಸ: ರಾಘವೇಂದ್ರ ಅಡಿಗ ಎಚ್ಚೆನ್

ಕಳೆದ ಕೆಲ ದಿನಗಳಿಂದ ದೇಶದಾದ್ಯಂತ ಹಿಜಾಬ್ ಕುರಿತ ವಿವಾದ ಹೊಗೆಯಾಡುತ್ತಿದೆ. ಉಡುಪಿಯ ಕಾಲೇಜಿನಲ್ಲಿ ಪ್ರಾರಂಭವಾದ ಚಿಕ್ಕ ಘಟನೆಯೊಂದು ದೇಶದ ಗಡಿಗಳನ್ನು ಮೀರಿ ವಿವಾದವಾಗಿ ಮಾರ್ಪಟ್ಟಿದೆ ಎಂದರೆ ಈ ಆಧುನಿಕ ಕಾಲದಲ್ಲಿಯೂ ಮಾನವನು ಧರ್ಮದ ಸಂಬಂಧವಾಗಿ ಹೇಗೆ ಭಾವಿಸಿಕೊಂಡಿದ್ದಾನೆ ಎನ್ನುವುದಕ್ಕೆ ಸಾಕ್ಷಿ. ರಾಜ್ಯದ ನಾನಾ ಶಾಲೆ, ಕಾಲೇಜುಗಳಲ್ಲಿನ ಕೆಲ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಿಕೊಳ್ಳಲು ಅವಕಾಶ ಸಿಗದಿದ್ದರೆ ಶಿಕ್ಷಣವನ್ನೇ ಮೊಟಕು ಮಾಡುತ್ತೇವೆ ಎನ್ನುವವರೆಗೆ ಮುಂದುವರಿದಿದ್ದಾರೆ. ಇದು ನಿಜಕ್ಕೂ ಆಘಾತಕರ. ”ನಮಗೆ ನಮ್ಮ ಇಸ್ಲಾಂ ಧರ್ಮ, ಹಿಜಾಬ್ ಮುಖ್ಯ, ಶಾಲೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೋಜಿಗದ ಬಳ್ಳಿ ಎಂಬ ನವಿರು ಪ್ರೇಮ ಕಥನ: ನಟರಾಜು ಎಸ್.‌ ಎಂ.

ಎಂ ಆರ್‌ ಭಗವತಿಯವರ ನಿರೂಪಣೆ ಮತ್ತು ಸಂಯೋಜನೆ ಇರುವ ಸೋಜಿಗದ ಬಳ್ಳಿ ಮೊನ್ನೆ ಮೊನ್ನೆಯಷ್ಟೇ ನನ್ನ ಕೈ ಸೇರಿತು. ಪುಸ್ತಕವನ್ನು ಒಂದೆರಡು ದಿನಗಳಲ್ಲಿ ಪಟ್ಟು ಹಿಡಿದು ಓದಿ ಮುಗಿಸಿದೆ. ಒಮ್ಮೊಮ್ಮೆ ಕುತೂಹಲದಿಂದಲೂ, ಒಮ್ಮೊಮ್ಮೆ ಆಲಸ್ಯದಿಂದಲೂ, ಒಮ್ಮೊಮ್ಮೆ ನಿದ್ದೆಗಣ್ಣಿನಿಂದಲೂ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಈ ಪುಸ್ತಕದ ಕುರಿತು ಬರೆಯಲೇಬೇಕು ಅನಿಸಿತು. ಆ ಕಾರಣಕ್ಕೆ ಈ ಲೇಖನ. ಸೋಜಿಗದ ಬಳ್ಳಿ ಪುಸ್ತಕ ನನಗೆ ಗಮನ ಸೆಳೆದಿದ್ದು ಅದರಲ್ಲಿ ಮಿಳಿತಗೊಂಡಿರುವ ನವಿರಾದ ಪ್ರೇಮದ ಕಾರಣಕ್ಕೆ. ಅದಕ್ಕೆ ಸಾಕ್ಷಿ ಎಂಬಂತೆ ನವಿರಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಮುಕ್ತಿ ಎಂದು? ಮಾನವೀಯತೆ ಸತ್ತುಹೋಯಿತೆಜಾತಿ ಧರ್ಮ ಕುಲ ನಶಿಸಿ ಹೋಯಿತೆಶವಗಳು ಬಿಸಾಡುವ ಸ್ಥಿತಿ ಬಂದಿತೆ ಲಕ್ಷಾಂತರ ಜೀವ ನೋವು ನರಳಾಟ ಸಾವಿನೆಡೆಭೀಕರ ಮಾರಕ ರೋಗಗಳು ವಿಶ್ವದೆಲ್ಲೆಡೆ ಚಿಕಿತ್ಸೆ ಇಲ್ಲದೆ ನರಳಿ ನರಳಿ ಸಾಯುತಿಹರುರೋಗದ ಸೋಂಕು ಎಲ್ಲೆಡೆ ಹರಡುತ್ತ ನೆತ್ತರು ಮಮತೆ ವಾತ್ಸಲ್ಯ ಪ್ರೀತಿ ಸಮಾಧಿ ಆಯಿತುಬದುಕಿ ಉಳಿದವರು ಶವದಂತೆ ಬದುಕುವಂತಾಯಿತುಸಾವು-ನೋವು ಹಿಂಬಾಲಿಸುವ ಭಯಾನಕ ನೆರಳಾಯಿತು ವಿಶ್ವವೇ ಭಯಭೀತ ವಾಗಿರಲೂ ನೆಮ್ಮದಿ ಇಲ್ಲಕಾಲದ ಗರ್ಭಪಾತವಾಗಿ ರಕ್ತಸಿಕ್ತ ಭಾವಗಳೆಲ್ಲ ಮೇಲು ಕೀಳು ಎನ್ನದೆ ಸಹಸ್ರಾರು ಬಲಿಯಾದರುಸಂಸ್ಕೃತಿ ಇಲ್ಲ ಸಂಸ್ಕಾರವಿಲ್ಲ ಸ್ಮಶಾನವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಹಾಕಾವ್ಯಗಳ ಮಹಾಯಾನ: ಎನ್.ಎಸ್.ಶ್ರೀಧರ ಮೂರ್ತಿ

ಮಹಾಕಾವ್ಯಗಳು ಜಗತ್ತಿನ ಎಲ್ಲಾ ನಾಗರೀಕತೆಯಲ್ಲಿಯೂ ಮೂಡಿ ಬಂದಿವೆ, ಇನ್ನೂ ಕೆಲವು ಮಹಾ ಕಾವ್ಯಗಳು ಮೂಡಿ ಬರುತ್ತಲೇ ಇವೆ. ಮಹಾಕಾವ್ಯ ಎಂದು ಕರೆಸಿ ಕೊಳ್ಳುವುದು ಕೇವಲ ಗಾತ್ರದ ದೃಷ್ಟಿಯಿಂದಲ್ಲ ಅದರ ಅಂತಸತ್ವದ ದೃಷ್ಟಿಯಿಂದ. ಅದರಲ್ಲಿ ಒಂದು ರೀತಿಯಲ್ಲಿ ಪರಂಪರೆಯ ಮೌಲ್ಯಗಳೇ ಅಂತರ್ಗತವಾಗಿರುತ್ತವೆ. ಕೆಲವು ಜಗತ್ತಿನ ಅಂತಹ ಮಹಾಕಾವ್ಯಗಳ ಪರಿಶೀಲನೆ ಈ ಲೇಖನದ ಉದ್ದೇಶ. ಸಮೇರಿಯನ್ನರ ‘ಗಿಲ್ಗಮೇಶ್’ ಮತ್ತು ಜಪಾನಿನ ಮುರಸಾಕಿಯ ‘ಗೆಂಜಿ ಮನೋಗಟರಿ’ ಪ್ರಾರಂಭಿಕ ಮಹಾಕಾವ್ಯಗಳು ಎಂದು ಕರೆಸಿ ಕೊಂಡರೂ ಹೋಮರ್‍ನ ‘ಇಲಿಯಡ್’ನಿಂದ ಮಹಾಕಾವ್ಯಗಳ ಪರಂಪರೆ ಆರಂಭ. ಹೆಲನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಸೆ: ವಿಜಯಾಮೋಹನ್

ಆಸೆಊರೆಂದರೆ ಅದು ಎಲ್ಲ ಊರುಗಳಂತ ಊರಾಗಿರಲಿಲ್ಲ, ಅದೇನೊ ಅದೊಂತರ ರೀತಿ ನೀತಿಯೆಂಬಂಗೆ ಕಾಣ್ತ್ತಿರಲಿಲ್ಲ. ಆ ಊರಿನ ಮೊಗ್ಗುಲಿಗೆ ಹೋಗಿ ನಿಂತು ನಿಗಾ ಮಾಡಿದರೆ, ಅಲ್ಲಿ ಒಂದು ಕೇರಿಯಲ್ಲ, ಅದು ಒಂದು ಬೀದಿಯು ಅಲ್ಲ, ಏನೋ ಒಂತರ ಲೆಕ್ಕ ಬುಕ್ಕಕ್ಕೆ ಕಾಣದ ಮನೆಗಳು. ಈ ತಗ್ಗಿನೊಳಗೆ ನಾಕೈದು ಮನೆಗಳು, ಆ ಎತ್ತರಕ್ಕೆ ಮೂರು ನಾಕು ಮನೆಗಳು, ಈ ಬಾಗಕ್ಕೆ ನೋಡಿದರೆ ಎರೆಡೆ ಎರಡು ಮನೆಗಳು, ಆ ಪಕ್ಕಕ್ಕೆ ನೋಡಿದರೆ ಒಂದೊ ಎರಡೊ ಮನೆಗಳು, ಇಂತ ಸಾಲು ಮೂಲೆ ಕಾಣದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸಿನ ರಾಜಕುಮಾರ: ಮಧುಕರ್ ಬಳ್ಕೂರ್

“ವಾವ್ಹ್..! ಯಶು ಈ ನಡುವೆ ಅದೆಷ್ಟು ಸುಂದರವಾಗಿ ಕಾಣ್ತಾಳೆ..! ಅದ್ಯಾಕೆ ನನ್ನನ್ನು ಅಷ್ಟೊಂದು ಅಟ್ರಾಕ್ಟಿವ್ ಮಾಡ್ತಿದಾಳೆ..! ಈಗ ಇದ್ದ ರೂಪವಲ್ಲವೆ ಆಗಲೂ ಇದ್ದಿದ್ದು..! ನನಗಂತೂ ಅರ್ಥ ಆಗ್ತಾ ಇಲ್ಲ. ಒಂದಂತೂ ನಿಜ. ಇಷ್ಟು ದಿನ ನಾನು ನೋಡಿರೋ ಹುಡುಗಿರಲ್ಲೆ ಯಶು ತುಂಬಾನೆ ಸ್ಪೇಷಲ್. ಅವಳಲ್ಲೆನೋ ಒಂದು ನಿಗೂಢತೆ ಇದೆ..! ಅದೇನು ಒಮ್ಮೆಲೇ ಹುಟ್ಟಿ ಸಾಯುವಂತ ಆಕರ್ಷಣೆ ಅಲ್ಲ. ಮುಗಿಲಾರದ ಸೆಳೆತವೆನೋ ಅನ್ನಿಸ್ತಾ ಇದೆ..! ಜೀವನ ಸಂಗಾತಿಯಲ್ಲಿ ನೋಡುವ ಸೆಳೆತವದು. ಸ್ಟುಪಿಡ್ ನಾನು. ಹೋಗಿ ಹೋಗಿ ಇಂತಹ ಹುಡುಗಿಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅನುಭವದ ಅನಾವರಣ: ಸಂಕಲ್ಪ (ಸದಾಶಿವ ಡಿ ಓ)

ಬರಹವು ಆದಿ ಅನಾದಿ ಕಾಲದಿಂದ ತನ್ನದೇ ಆದ ಗಟ್ಟಿತನವನ್ನು ಉಳಿಸಿಕೊಂಡು ಬಂದಿದೆ. ಇದರಲ್ಲಿನ ತಮ್ಮ ಆದಿ ಗ್ರಂಥಗಳು ಮಾತಿನ ರೂಪದಲ್ಲಿರದೆ ಇಂದು ಓದುಗನ ಕೈಯಲ್ಲಿ ನಲಿದಾಡುತ್ತಿವೆ. ಈ ಬರಹಗಳನ್ನು ಎರಡು ರೀತಿಯಾಗಿ ನಾವು ಕಾಣಬಹುದು. ಮೊದಲನೆಯದು ಕಲ್ಪನೆ ಎರಡನೆಯದು ವಾಸ್ತವತೆ. ಹಾಗೂ ಅಲ್ಲಿ ಇಲ್ಲಿ ಎಲ್ಲೋ ಒಬ್ಬರಿಂದ ಮತ್ತೊಬ್ಬರ ಬಾಯಿ ಮಾತುಗಳಿಂದ ರವಾನೆಯಾದ ವಿಷಯಗಳು ಇಂದು ಪ್ರಸ್ತುತದಲ್ಲಿವೆ ಆದರೆ ಇದರ ಪ್ರಮಾಣ ಅತ್ಯಲ್ಪ. ಆದ್ದರಿಂದ ಒಬ್ಬೇ ಒಬ್ಬ ಆ ಭಾಷೆ ತಿಳಿದಿರುವ ಕೊನೆಯ ವ್ಯಕ್ತಿ ಇರುವುವವರೆಗೂ ಶಾಶ್ವತವಾಗಿರುತ್ತವೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಳೆ ಊರಿನ ಹುಡುಗಿಗೆ: ವೃಶ್ಚಿಕ ಮುನಿ (ಪ್ರವೀಣಕುಮಾರ ಸುಲಾಖೆ)

ನೆನಪಾಗುತ್ತೀಯ ಎಂದು ಪತ್ರ ಬರೆಯುತ್ತಿಲ್ಲ, ಪತ್ರ ಬರೆಯುತ್ತಿರುವುದು ನೆಪವಷ್ಟೆ ನೆನಪಿಗೆ ಉತ್ತರಿಸಲು.ಗೆ. .ಮಳೆ ಊರಿನ ಹುಡುಗಿಗೆರಥ ಬೀದಿಯ ಕೊನೆಯ ತಿರುವುಕೆಂಪು ಹೆಂಚಿನ ಮನೆಫೋಸ್ಟ :ಮಳೆಊರು ಇಂದ. .ಅಲೆಮಾರಿಯ ನೆಲೆಯಿಂದಖಾಸಾಕೋಣೆಯ ಬಿಸಿಯುಸಿರುಶಾಯಿಯಲ್ಲಿ. ಕ್ಷೇಮ ವಿಚಾರವಾಗಿ ಬರೆದ ಸಾಲುಗಳಲ್ಲಿ ಸಾಕಾಗುವಷ್ಟು ನೆನಪುಗಳಿವೆ. ಜಗದ ಯಾವ ಖಜಾನೆಯಲ್ಲಿ ತುಂಬಿ ಇಡಲು ಆಗದಷ್ಟು ಖಜಾನೆ ಲೂಟಿ ಗೆ ಕಳ್ಳರ ಭಯವಿಲ್ಲ. ನಾನು ನೀನು ಮಾತ್ರ ಜೀವಿತದ ಚಿತ್ರ ಶಾಲೆಯಲ್ಲಿ. ನೋಡು. . . ನಾನು ಎಷ್ಟು ಪೆದ್ದು ಅಂತಾ. . . ! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅನುರಣನ: ಡಾ. ಅನುಪಮಾ ದೇಶಮುಖ್

ಡಾ. ಪ್ರದೀಪ್ ಬಳ್ಳಾರಿಯ ಪ್ರಸಿದ್ಧ ವೈದ್ಯರು. ಅಕ್ಕರೆಯ ಹೆಂಡತಿ ಶಾಂತಾ ಹಾಗೂ ಮುದ್ದಾದ, ಮಿತಭಾಷಿಯಾದ ಮಗ ರಾಘವ ಅವರ ಪ್ರಪಂಚ. ಶಾಂತಾ ಅಚ್ಚುಕಟ್ಟಾಗಿ ಮನೆಯನ್ನೂ, ಮಗನನ್ನೂ ನೋಡಿಕೊಂಡು, ತಕ್ಕಮಟ್ಟಿಗೆ ಸಂಪ್ರದಾಯವನ್ನೂ ಪಾಲಿಸಿಕೊಂಡು, ಗಣ್ಯಸಮಾಜದ ರೀತಿನೀತಿಗಳಿಗೆ ಹೊಂದಿಕೊಂಡಂತಹ ಹೆಣ್ಣು. ಶಿಸ್ತು, ಕಟ್ಟುನಿಟ್ಟಿನ ಆಸಾಮಿಯಾದ ಡಾ ಪ್ರದೀಪ್ ಗೆ ಮುಂದೆ ತನ್ನ ಮಗ ಒಬ್ಬ ಒಳ್ಳೆಯ ವೈದ್ಯನೋ, ನ್ಯಾಯಮೂರ್ತಿಯೋ ಆಗಬೇಕೆಂಬ ಹಂಬಲ. ಆದ್ದರಿಂದಲೇ ಶಿಕ್ಷಣ, ಸಂಸ್ಕೃತಿಗಳಿಗೆ ಹೆಸರುವಾಸಿಯಾಗಿದ್ದ ತೋರಣಗಲ್ಲಿನ ಹತ್ತಿರದ ಪ್ರತಿಷ್ಠಿತ ವಸತಿ ಶಾಲೆಯೊಂದರಲ್ಲಿ ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣಕ್ಕಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನಸಿನ ಹೊಯ್ದಾಟ: ನೀರಜಾ ಎಚ್. ಕೆ., ಸುಮಾ ರಾಯ್ಕರ್, ಗೀತಾ ಕೆ. ಆರ್., ಶ್ರೀದೇವಿ, ಗಾಯತ್ರಿ ಜೋಯಿಸ್, ಅರ್ಚನಾ ಕೆ. ಎನ್., ಮತ್ತು ಸುಮತಿ ಮುದ್ದೇನಹಳ್ಳಿ

ನಾವಿಬ್ಬರೂ ಸಮಾನ೦ತರ ರೇಖೆಗಳು. ಎಲ್ಲೂ ಸ೦ಧಿಸಲಾಗದ, ಒ೦ದಾಗಲಾಗದ ರೇಖೆಗಳು.  ಇದಕ್ಕೆ ಪರಿಹಾರವೇ ಇಲ್ವೆ ಆ೦ತ ಯೋಚಿಸುತ್ತಾ ಕೂತವಳಿಗೆ ಯಾವಾಗ ಝೊ೦ಪು ಹತ್ತಿ ಸಣ್ಣಗೆ ನಿದ್ರೆ ಬ೦ತೋ ಗೊತ್ತಾಗಲೇ ಇಲ್ಲ. ಬಾಗಿಲಿನ ಕರೆಗ೦ಟೆ ಶಬ್ದ ಮಾಡುತ್ತಾ ವಾಸ್ತವಕ್ಕೆ ಕರೆತ೦ದಿತು. ಕಣ್ಣುಜ್ಜಿಕೊಳ್ಳುತ್ತಾ ಹೋಗಿ ಬಾಗಿಲು ತೆರೆದವಳು, ಬಾಗಿಲುದ್ದಕ್ಕೂ ನಿ೦ತಿದ್ದ ನಗುಮುಖದ ಆಜಾನುಬಾಹುವನ್ನು ಎಲ್ಲೋ  ನೋಡಿದ್ದೇನೆ ಅ೦ತ ಆಲೋಚಿಸುತ್ತಾ ಮಾತು ಹೊರಡದೇ ನಿ೦ತಳು.  ಆ ವ್ಯಕ್ತಿ, ಪರಿಚಯ ಸಿಗಲಿಲ್ವೆ? ಅನ್ನುತ್ತಾ ಮತ್ತೊಮ್ಮೆ ನಗು ತೂರಿದನು.  ಹೌದು, ಆ ನಗು ತುಂಬಾ ಚಿರಪರಿಚಿತ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತ್ತಲ ಗರ್ಭಕ್ಕೆ ಬೆಳಕು ಹಿಡಿದ ಗಜಲ್ಗಳು: ಕಲ್ಲೇಶ್ ಕುಂಬಾರ್

ಕವಿಯಾದವನು ತಾನು ಬದುಕಿದ ಕಾಲದ ಸಂವೇದನೆಗಳಿಂದ ಪಾರಾಗಿ ಏಕಾಂತವಾಗಿ ಉಳಿಯಲಾರ ಏಕೆಂದರೆ ಅವನು ಬದುಕಿದ ಕಾಲಘಟ್ಟದಲ್ಲಿನ ವ್ಯವಸ್ಥೆ ಅವನ ಮೇಲೆ ಖಚಿತವಾದ ಪರಿಣಾಮವನ್ನು ಬೀರಿರುತ್ತದೆ. ಅಂತೆಯೇ ಕವಿಯು ತನ್ನ ಕಾಲದ ವ್ಯವಸ್ಥೆಯನ್ನು ತಾನೇ ರೂಪಿಸಿಕೊಂಡ ಆಕೃತಿ(ದೃಷ್ಟಿಕೋನ)ಯ ನೆಲೆಯಲ್ಲಿ ವಿಶ್ಲೇಷಿಸುತ್ತಿರುತ್ತಾನೆ. ಹಾಗೆಯೇ ಬದುಕು ಮತ್ತು ಮನುಷ್ಯನನ್ನು ಸೂಕ್ಷ್ಮವಾಗಿ ಗಮನಿಸಿ ಅದಕ್ಕೆ ಮಾತು ಕೊಡುವ ಗುಣವನ್ನು ಬೆಳೆಸಿಕೊಂಡಿರುತ್ತಾನೆ. ಇದು ಒಂದು ರೀತಿಯಲ್ಲಿ ಕವಿಯ ಸಮಾಧಾನಕ್ಕೆ ದಾರಿ ಮಾಡಿಕೊಡುವಂತಹ ಸೃಜನಶೀಲ ಪ್ರಕ್ರಿಯೆ ಎನ್ನಬೇಕು. ಪ್ರಸ್ತುತ ಈ ಮಾತಿಗೆ ಪೂರಕವಾದ ಗುಣಗಳನ್ನು ಮೈಗೂಡಿಸಿಕೊಂಡಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನನ್ನ ಮನವ ತಿಳಿಯಾಗಿಸಿದ ಆ ನವಿಲು: ಹರೀಶ್ ಆರ್ ಅಡವಿ

ನಮ್ಮ ಚಳ್ಳಕೆರೆ(ಚಿತ್ರದುರ್ಗ ಜಿಲ್ಲೆ) ಅರಣ್ಯ ಪ್ರದೇಶವು ಅಂದಾಜು ಒಂದು ಸಾವಿರ ಹೆಕ್ಟೇರ್ ಕಾಯ್ದಿಟ್ಟ ಅರಣ್ಯ ಪ್ರದೇಶವಾಗಿದೆ ಹಾಗೂ ಅನೇಕ ಪ್ರಾಣಿ ಪಕ್ಷಿಗಳಿಗೆ, ಬಯಲುಸೀಮೆಯ ವನ್ಯಜೀವಿಗಳಿಗೆ ಆವಾಸ ಸ್ಥಾನವಾಗಿದೆ. ಇಲ್ಲಿನ ಅಪರೂಪದ ಅರಣ್ಯ ಪ್ರದೇಶದಲ್ಲಿ ಓಡಾಡುವುದೆಂದರೆ ನನಗೆ ಒಂದು ಖುಷಿಯ ವಿಷಯವಾಗಿದೆ. ಕೆಲವೊಮ್ಮೆ ಕಾನನದ ಒಳಗೆ ಹೋಗಿ ಹೆದರಿದ್ದೂ ಉಂಟು, ಜೋರು ಗಾಳಿ ಬೀಸುವಾಗ ನೀಲಗಿರಿಮರದ ಎಲೆಯ ಶಭ್ಧಕ್ಕೆ ಹೆದರಿ ಓಡಿದ್ದೂ ಉಂಟು, ಅದೆಷ್ಟೋ ಬಾರಿ ನನ್ನ ಹೆಜ್ಜೆಯ ಸಪ್ಪಳಕ್ಕೆ ನಾನೇ ಭಯದಿಂದ ನಡುಗಿದ್ದೇನೆ, ದೂರದಲ್ಲೆಲ್ಲೋ ಕೇಳುವ ಕೋಗಿಲೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಅವು ಮತ್ತು ನಾನು ಯಾವ ನೋವುಗಳುಹೆಚ್ಚಾಗಿ ಕಾಡುವವೋ,ಆ ನೋವುಗಳನ್ನಇಚ್ಚೆಯಿಂದ ಅನುಭವಿಸುವ ಭರವಸೆಯಅವುಗಳಿಂದಲೇ ಕಲಿತುಕೊಳ್ಳುವೆ…. ಅವು ಹಟಮಾರಿಯಾದರೆನಾನೂ ಹಟಮಾರಿಯಾಗುವೆಅವು ಬಿಡಲೆನ್ನುವವಾದರೆನಾನೂ ಬರಲೆನ್ನುವವನಾಗುವೆ ಅವು ಹಿಂಡುತ್ತಿರುವಾಗನಾನು ಕಂಡವನುಅದ ಉಂಡವನೂ…ಅವು ಕುಣಿಯುತ್ತಿರುವಾಗನಾನು ಅವಕ್ಕೆ ಅಟ್ಟ ಆದವನು ಅವು ನಾನಿರುವವರೆಗೂ ಮಾತ್ರ-ನನ್ನ ತಿನ್ನುವವುನಾ ಇಲ್ಲವಾದೊಡನೆ ಅವುಗಳ ಸಾವುಅವುಗಳಿಗಾಗಿಯೇ ನಾ ಜೀವಾ ಹಿಡಿದಿರುವಾಗನನಗೆ ಗೊತ್ತು;ಸಾವೆಂಬುದು ಕ್ರೂರಿಯಲ್ಲವೆ?!… ಇರುವಷ್ಟು ದಿನ;ಅವುಗಳಿಗೆ ಉಪಕಾರಿಯಾಗಲಿ ಈ ದೇಹ;ಅವುಗಳಿಗೂ ಬದುಕಿದೆ ತಿಂದು;ತಿಂದರೂ, ಹಿಂಡಿದರೂ ಅವುಗಳದೇಎಲ್ಲಿಂದ ಮೀಟಿದರೂಅನುಮತಿ ಕೊಟ್ಟಿರುವೆ ಇಚ್ಚೆ ಇರಲಿ;ಹಟವಿರಲಿನನಗೂ;ಅವುಗಳಿಗೂ… -ಕಾಸಿಂ ನದಾಫ್ ಭೈರಾಪುರ ನಮ್ಮಮ್ಮನ ಸೊಸೆ ನಾನು ಪ್ರಾಯಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“The Critic -ವಿಮರ್ಶಕ’ನ ವಿಮರ್ಶೆಯ ದಿಕ್ಕುದೆಸೆಗಳಿಗೆ ಎಸೆದ ಸವಾಲು”: ಎಂ.ಜವರಾಜ್

Act -1978, ನಾತಿಚರಾಮಿ, ಹರಿವು ಚಿತ್ರ ನಿರ್ದೇಶಕ ಮಂನ್ಸೋರೆ ಅವರ ‘The Critic’ ಸದ್ಯ ಈಗ ಸದ್ದು ಮಾಡುತ್ತಿರುವ ಒಂದು ಕಿರುಚಿತ್ರ. ಹಾಗೆ ’19 20 21′ ಮತ್ತು ‘ಅಬ್ವಕ್ಕ’ ಬಹು ನಿರೀಕ್ಷೆಯ ಮುಂದಿನ ಚಿತ್ರಗಳು ಎಂಬ ಸುದ್ದಿ ಇದೆ. ಸಿನಿಮಾದಲ್ಲಿ ಎರಡು ಬಗೆ. ಒಂದು length movie ಇನ್ನೊಂದು Short movie. ಸದ್ಯ Short movie ಗಳದೇ ಕಾರುಬಾರು. ಏಕೆಂದರೆ ವೆಚ್ಚದ ದೃಷ್ಟಿಯಿಂದಲೂ ಮತ್ತು ಪ್ರಯಾಣ ರಹಿತವಾಗಿಯೂ ಒಂದು ನಿಗದಿತ ಸ್ಥಳದಲ್ಲಿ ತಮ್ಮ ಕಲ್ಪನೆಯ ಒಂದಿಡೀ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಭರಣಗಳು: ಜೆ.ವಿ.ಕಾರ್ಲೊ

ಮೂಲ: ಗೈ ಡಿ ಮೊಪಾಸಾಅನುವಾದ: ಜೆ.ವಿ.ಕಾರ್ಲೊ ಆ ದಿನ ಸಂಜೆ ಕಛೇರಿಯ ಮೇಲ್ವಿಚಾರಕರು ಇರಿಸಿದ್ದ ಔತಣಕೂಟದಲ್ಲಿ ‘ಆ’ ಹುಡುಗಿಯನ್ನು ನೋಡಿದ್ದೇ ಲ್ಯಾಂಟಿನ್ ಅವಳ ಮೋಹಪಾಶದಲ್ಲಿ ಸಿಲುಕಿ ನುಜ್ಜುಗುಜ್ಜಾಗಿಬಿಟ್ಟಿದ್ದ. ಆಕೆ ಕೆಲವೇ ವರ್ಷಗಳ ಹಿಂದೆ ಗತಿಸಿದ್ದ ತೆರಿಗೆ ಅಧಿಕಾರಿಯೊಬ್ಬರ ಮಗಳಾಗಿದ್ದಳು. ಆಗಷ್ಟೇ ಅವಳು ತನ್ನ ತಾಯಿಯೊಂದಿಗೆ ಪ್ಯಾರಿಸಿಗೆ ಬಂದಿಳಿದಿದ್ದಳು. ಅವಳ ತಾಯಿ ಮಗಳಿಗೊಬ್ಬ ಯೋಗ್ಯ ವರನನ್ನು ಹುಡುಕುವ ಉದ್ದೇಶದಿಂದ ಹಲವು ಮಧ್ಯಮ ವರ್ಗದ ಕುಟುಂಬಗಳ ಸಂಪರ್ಕಗಳನ್ನು ಬೆಳೆಸಿಕೊಳ್ಳುತ್ತಾ ಕಾರ್ಯೊನ್ಮುಖಳಾಗಿದ್ದಳು. ಬಡವರಾಗಿದ್ದರೂ ಸುಸಂಸ್ಕøತ ಮನೆತನದವರಾಗಿದ್ದರು. ಹುಡುಗಿಯಂತೂ, ಯಾವನೇ ಹುಡುಗನು ತನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಂಸಭಾವಿಯ ಹಸಿ ಸುಳ್ಳು ..!: ಶರಣಗೌಡ ಬಿ ಪಾಟೀಲ ತಿಳಗೂಳ

ಊರ ಜನಾ ಹಸಿ ಸುಳ್ಳು ಹೇಳತಿದ್ದಾರೆ ನಾನು ಹೇಳುವ ಮಾತು ಖರೇ ಅಂತ ಯಾರೂ ನಂಬತಿಲ್ಲ ಯಾಕಂದ್ರೆ ನಾನೊಬ್ಬ ಹುಚ್ಚ ಅಂತ ಹರಿದ ಅಂಗಿ, ಗೇಣುದ್ದ ಗಡ್ಡ ಅಸ್ತವ್ಯಸ್ತ ಮುಖದ ಹುಚ್ಚನೊಬ್ಬ ಹಂಸ ಬಾವಿ ಕಟ್ಟೆಗೆ ಕುಳಿತು ತನ್ನಷ್ಟಕ್ಕೆ ತಾನೇ ವಟಗುಟ್ಟಿದ. ಜನರ ಮಾತು ಸುಳ್ಳು ಅಂತಾನೆ ನೋಡ್ರೋ ಎಂಥಾ ಹುಚ್ಚನಿವನು ಅಂತ ಆತನ ಮಾತು ಕೇಳಿಸಿಕೊಂಡ ಕೆಲವರು ಗಹಿಗಹಿಸಿ ನಗತೊಡಗಿದರು. ನಗರೋ ನಗರಿ ಯಾರ ಬ್ಯಾಡ ಅಂತಾರೆ ಮುಂದೊಂದಿನ ಸುಳ್ಯಾವದು ಖರೇ ಯಾವುದು ಅಂತ ಸಮಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಣ್ಣೆರಡೂ ಲವಂಗದಂತೆ…….: ಪಿ.ಎಸ್. ಅಮರದೀಪ್.

ಪ್ರೀತಿಯ ಬಿ…… ಅದೆಷ್ಟು ಹೇಳಿದರೂ ‍ನೀನು ನನ್ನನ್ನು ನಂಬುವುದಿಲ್ಲವೆಂದು ಗೊತ್ತು…. ಗೊತ್ತು ಮಾಡಿಸಲೇಬೇಕೆಂಬ ಹಠವೂ ನನಗಿಲ್ಲ. ಅದ್ಯಾವಾಗ ಧಾರವಾಡದ ಮಳೆಯಂತೆ ಇರ್ತೀಯೋ. ಒಣ ಬಿಸಿಲ ಬಳ್ಳಾರಿಯಂತಾಗುತ್ತಿಯೋ…. ತಿಳಿಯುವುದಿಲ್ಲ. ಒಮ್ಮೊಮ್ಮೆಯಂತೂ ಚಾರ್ಮಡಿ ಘಾಟಿನಲ್ಲಿ ಸದಾ ತೊಟ್ಟಿಕ್ಕುವ ಮಳೆಯ ನಡುವೆ ಮುಸುಕಿನ ಮಂಜೋ ಮಂಜು. ಹೆಂಗೇ ನಿನ್ನ ಅರ್ಥ ಮಾಡಿಕೊಳ್ಳೋದು? ಬರೀ ಸಂಜೆ, ಮುಂಜಾನೆ ಸೂರ್ಯಾನ ಫೋಟೋ ತೆಗೆದು ಹಂಚಿಕೊಳ್ಳುತ್ತಿದ್ದೆ ನಾನು. ನೀನು ಬಂದೆ ನೋಡು. ಒಳ್ಳೆಯ ಸೌಂದರ್ಯ ಪ್ರಜ್ಞೆ ಕಾಡಲು ಶುರು ಮಾಡಿದೆ. ಅಷ್ಟು ಫೋಟೋ ಹಾಕಿದರೂ ಒಂದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಣದ ಗಾಡಿ: ಜಯರಾಮಚಾರಿ

ಅಲ್ಲೊಂದು ಸಾವಾಗಿದೆ. ಸತ್ತವನ ದೇಹ ಮನೆಯ ಹೊರಗೆ ಇದೆ, ಸತ್ತವನು ಕೆಲವು ವರ್ಷಗಳಿಂದ ಯಾವ ಕೆಲಸವೂ ಮಾಡದೇ ಕುಡಿಯುತ್ತಾ, ಮನೆಯವರನ್ನು ಪೀಡಿಸುತ್ತಾ, ತನ್ನ ಕುಡಿತದ ಚೇಷ್ಟೇಗಳಿಂದ ಪರರನ್ನು ನಗಿಸುತ್ತ ಬದುಕಿದ್ದಾಗಲೇ ಸತ್ತಿದ್ದ. ಈ ಸಂಜೆ ಮತ್ತೆ ಸತ್ತ. ಸತ್ತವನನ್ನು ಮಂಚದ ಮೇಲೆ ಮಲಗಿಸಲಾಗಿದೆ, ಅವನ ದೇಹವನ್ನು ಹಳೇ ಕಂಬಳಿಯಿಂದ ಮುಚ್ಚಲಾಗಿದೆ, ಆ ಕಂಬಳಿಗೆ ಸುಮಾರು ಆರರಿಂದ ಏಳು ತೂತುಗಳಿವೆ. ಅವನ ದೇಹದ ಕೆಳಗೆ ಮಾಸಲಾದ ಬೆಡ್ ಶೀಟ್ ಅದರ ಕೆಳಗೆ ಉಪಯೋಗಿಸದೇ ಇದ್ದ ಹಳೆಯ ಚಾಪೆಯಿದೆ. ಅವನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ