ನಿರಾಳ ಭಾವ: ವಸುಂಧರಾ ಕದಲೂರು
ಇಪ್ಪತ್ತಾರರ ಟಿಕೇಟಿಗೆ ನಾನು ಐದುನೂರು ರೂಪಾಯಿ ನೋಟು ಕೊಟ್ಟೆ. ಕಂಡಕ್ಟರ್ ‘ಚಿಲ್ಲರೆ ಇಲ್ವೇನ್ರಿ?’ ಗೊಣಗಾಡುತ್ತಲೇ ಚೀಟಿ ಹಿಂದೆ ನಾನೂರಎಪ್ಪತ್ನಾಲ್ಕು ಎಂಬ ಅಂಕಿಗಳನ್ನು ಗೀಚಿ ‘ಸರಿಯಾಗಿ ಚಿಲ್ಲರೆ ತರಕಾಗಲ್ವೇನ್ರೀ’ ಎನ್ನುತ್ತಾ ಟಿಕೇಟಿಕೆ ಕೈ ಚಾಚಿದ ನನ್ನ ಅಂಗೈಗೆ ತುಸು ಬಿರುಸಿನಿಂದಲೇ ತುರುಕಿ ಮುಂದೆ ಹೋದರು. ಬಸ್ಸಿನೊಳಗಿದ್ದವರ ಮುಂದೆ ಕಂಡಕ್ಟರ್ ಹೀಗೆ ಮಾಡಿದಕ್ಕೆ ಪಿಚ್ ಎನಿಸಿದರೂ ನನ್ನದೇ ತಪ್ಪೆನಿಸಿದ್ದರಿಂದ ಸುಮ್ಮನಾದೆ. ಆದರೆ ಬೆಳಿಗ್ಗೆ ಮನೆಯಿಂದ ಹೊರಟಾಗ ಬಸ್ಸಿನಲ್ಲಿ ಹೊರಡಬೇಕಾಗುತ್ತೆ ಎಂದುಕೊಂಡಿರಲಿಲ್ಲ. ಸಮಯಕ್ಕೆ ಸರಿಯಾಗಿ ಸ್ಕೂಟರ್ ಸ್ಟಾರ್ಟೇ ಆಗಲಿಲ್ಲ. ಕ್ಯಾಬ್ ಗೆ … Read more
ಜಾನಪದದಲ್ಲಿ ಪ್ರೇಮ: ಚಿನ್ನು ಪ್ರಕಾಶ್ ಶ್ರೀರಾಮನಹಳ್ಳಿ
ಈ ಜಗತ್ತು ಸುಂದರ ಮತ್ತು ಸುಖಮಯವಾಗಿ ಕಾಣುವಲ್ಲಿ ಪ್ರೇಮದ ಕೊಡುಗೆಯು ಸಿಂಹಪಾಲು ಬಹುಶಃ ಮಾನವನೆದೆಯಲ್ಲಿ ಉಂಟಾಗುವ ಭಾವನೆಗಳಿಗೆ ಮೂರ್ತ ರೂಪ ನೀಡುವಲ್ಲಿ ಈ ಪ್ರೇಮಕ್ಕೆ ಹಲವು ರೀತಿಯ ಮುಖಗಳಿವೆ. ಮೊದಲ ನೋಟಕ್ಕ ಉಂಟಾಗುವಂತಹದ್ದು ಪ್ರೀತಿ ಆತ್ಮೀಯತೆ ಅರಳಿಸುವಂತಹದ್ದು ಪ್ರೇಮ ಕನಸುಗಳ ಮೈದಡವಿ ಬಯಕೆಗಳ ಬೆನ್ನೇರಿಸಿಕೊಂಡು ಭೂಮ್ಯಾಕಾಶದ ಆಚೆಗೂ ಪಯಣಿಸುವ ಹುಮ್ಮಸ್ಸು ತುಂಬುವಂತಹದ್ದು ಒಲವು. ಇಹಲೋಕದಲ್ಲವನ್ನೂ ಧಿಕ್ಕರಿಸುತ್ತಾ ಅನೂಹ್ಯ ಲೋಕದ ಸುಖವನ್ನು ಅನುಭವಿಸುವ ಸ್ವರ್ಗಲೋಕದ ತುತ್ತ ತುದಿಗೆ ಒಯ್ದು ಬದುಕನ್ನು ಸುಂದರಗೊಳಿಸುವಂತಹದ್ದು ಪ್ರಣಯ. ಗಂಡು ಹೆಣ್ಣುಗಳ ಮನಸ್ಸುಗಳು ಹುಟ್ಟಾ … Read more
ಉಗುಳುವುದೂ ಒಂದು ಕಲೆ ; ಬೇಡವಾದ ಅಗುಳನು: ಸುಂದರಿ ಡಿ.
ಉಗುಳುವುದು ಎಂದೊಡನೇ ಬಾಯಿಯ ಮುಖೇನ ಬೇಡವಾದ ಎಂಜಲನು ಹೊರಹಾಕುವ ಕ್ರಿಯೆ ಎಂದೇ ಗ್ರಹಿಸುವ ನಾವು ಉಗುಳುವ ಕ್ರಿಯೆಯನ್ನು ಸೀಮಿತಾರ್ಥದಲ್ಲಿ ಬಳಸುತ್ತಿದ್ದೇವೆ ಎನಿಸುತ್ತದೆ. ಏಕೆಂದರೆ ಬೇರೆಯವರನ್ನು ಬೈಯ್ಯುವ, ನಮಗೆ ಬೇಡವಾದವರನ್ನು ಬಿಡುವ ಕ್ರಿಯೆಯನ್ನೂ ಈ ಪರಿಭಾಷೆಯಲೇ ಕರೆಯುವುದು ರೂಢಿ. ಆದರೆ ಬೇಡವಾದುದನು ಹೊರ ಹಾಕುವ ಕ್ರಿಯೆಯನ್ನೇ ಉಗುಳುವುದು ಎಂದು ಗ್ರಹಿಸಬೇಕಾಗುತ್ತದೆ ಎಂದು ನನಗನಿಸುತ್ತದೆ. ಇದೊಂದು ನುಡಿಗಟ್ಟೆಂಬುದನು ತಕ್ಷಣಕೆ ನಾವು ಮರೆತಿರುತ್ತೇವೆ. ಜೀವರಾಶಿಯಲಿ ಈ ಸಂಗತಿ ಕ್ಷಣ ಕ್ಷಣವೂ ಜರುಗುತ್ತಲೇ ಇರುತ್ತದೆ. ನಮ್ಮ ದೇಹದ ಪ್ರತಿಯೊಂದು, ಪ್ರತಿಯೊಂದೂ ಅಂಗೋಪಾಂಗಗಳೂ ಕೂಡಾ … Read more
ಹೆಣ್ಣೆಂದರೆ ಶಕ್ತಿ..: ಪೂಜಾ ಗುಜರನ್ ಮಂಗಳೂರು
ಪ್ರತಿ ವರ್ಷವೂ ಹೆಣ್ಣಿನ ಬಗ್ಗೆ ಅವಳ ನೋವು ಸಾಧನೆಯ ಬಗ್ಗೆ ಬರೆಯುವಾಗಲೆಲ್ಲ ಏನೋ ಕಸಿವಿಸಿ. ಯಾರು ಎಷ್ಟೆ ಬರೆದರೂ ಏನೇ ಹೇಳಿದರೂ ಅವಳ ಅಂತರಂಗವನ್ನು ಮುಟ್ಟಲು ಯಾರಿಂದಲೂ ಆಗುವುದಿಲ್ಲ. ಅವಳ ಒಳಗಿರುವ ನೋವು ಅಸಹಾಯಕತೆ ಯಾರ ಕಣ್ಣಿಗೂ ಗೋಚರವಾಗುವುದಿಲ್ಲ. ಯಾಕೆಂದರೆ ಅವಳು ಹೆಣ್ಣು. ಕಲ್ಪನೆಗೂ ಮೀರಿದ ವ್ಯಕ್ತಿತ್ವದವಳು. ಬರೆದರೂ ಮುಗಿಯದಷ್ಟಿದೆ ಹೇಳಿದರೂ ಹೇಳದಷ್ಟು ಬಾಕಿ ಉಳಿಯುತ್ತದೆ. ಹೊಗಳಿಕೆ ತೆಗಳಿಕೆಗಳು ಅವಳಿಗೆ ಸರ್ವೇಸಾಮಾನ್ಯ. ಆದರೂ ಅವಳನ್ನು ವರುಷಕ್ಕೊಮ್ಮೆ ಗುಣಗಾನ ಮಾಡಿ ತೋಚಿದನ್ನು ಗೀಚಿದಾಗ ಒಂದು ದಿನದ ಮಟ್ಟಿಗೆ ಅವಳು … Read more
ಹೆಣ್ಣು ಕೇವಲ ಹೆರುವ ಯಂತ್ರವಲ್ಲ: ಗಾಯತ್ರಿ ನಾರಾಯಣ ಅಡಿಗ
” ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ” ಪ್ರತಿ ಹೆಣ್ಣು ಸುಶಿಕ್ಷಿತಳಾಗಿ ತನ್ನ ಕುಟುಂಬ ಮತ್ತು ಇಡೀ ಸಮಾಜವನ್ನು ಸಂಸ್ಕಾರಯುತವನ್ನಾಗಿ ರೂಪಿಸುತ್ತಾಳೆ. ಮುಂದುವರೆದು, ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಮಹಿಳೆಯು ಪುರುಷನಿಗೆ ಸಮಾನಳು. ನಮ್ಮ ದೇಶದಲ್ಲಿ ಅನಾದಿ ಕಾಲದಿಂದಲೂ ಮಹಿಳೆಯು ಮನೆ, ಮಕ್ಕಳು, ಕುಟುಂಬ ನಿರ್ವಹಣೆ, ಹಬ್ಬ ಹರಿದಿನಗಳು, ಸಂಪ್ರದಾಯಗಳು, ಕಟ್ಟುಪಾಡುಗಳು, ಪರಂಪರೆಗಳು, ಅರೋಗ್ಯ, ಶಿಕ್ಷಣ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನ ಶಕ್ತಿ ಮೀರಿ ಪ್ರಯತ್ನಿಸಿ ಸಫಲತೆಯನ್ನು ಕಂಡಿದ್ದಾಳೆ. ಇತ್ತೀಚಿನ ದಿನಗಳಲ್ಲಿ ಸ್ತ್ರೀ ತನ್ನ ಮನೆಯ ಪರಿಸ್ಥಿತಿಯನ್ನು ನಾಜೂಕಾಗಿ … Read more
ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 68): ಎಂ. ಜವರಾಜ್
-೬೮-ತ್ವಾಟ ಒಣ್ಗಿ ದಳ್ಳಿಡ್ದಿತ್ತುಬಿದ್ದಿರದು ಬಿದ್ದಿರತವೇ ಇತ್ತುಇದ ನಂಬದ ಬುಡದ ಅನ್ನಗಾಯ್ತುಕಪಲ ಬಾವಿಲಿ ಜೊಂಡು ಬೆಳ್ದುಬಾವಿ ಇದ್ದದ ಇಲ್ವ ಅನ್ನಗಿತ್ತುಮೋಟ್ರು ಸದ್ದಾಯ್ತ ಇರದು ಕೇಳ್ತನೀರು ಚೊಳಚೊಳ ಚೊಳ್ಗುಟ್ತದಿಕ್ಕಾಪಾಲು ಹರಿತಿತ್ತುತಿಗುನ್ ಮರಗಳು ಬೆಳ್ದುಚೊಕ್ವಿಲ್ದೆ ಗರಿಗಳು ಒಣಿಕಂಡುಅಲ್ಲಲ್ಲೆ ನ್ಯಾತಾಡ್ತ ಗಾಳಿಗ ಅಳ್ಳಾಡ್ತಮ್ಯಾಲ ತಾರ್ಗಟ್ಲ ಕಾಯಿ ಒಣ್ಗಿ ಉದ್ರತರ ಕಾಣ್ತಿದ್ದು ಈ ಅಯ್ನೋರು ನನ್ನ ಮೆಟ್ದೆಈ ತ್ವಾಟ ನೋಡ್ದೆಬಲು ಜಿನ್ವಾಗಿತ್ತುಆ ಆಳುವ ಆ ಆಳ್ನೆಡ್ತುವಮಣುಮಾತ ಆಡ್ಕಂಡುಅಯ್ನೋರ್ ತಿಕುದ್ ಸಂದಿಲೆ ಒಸುಗ್ತತ್ವಾಟನ ಬರುದು ಮಾಡಿರದು ನಂಗೇನು ಗೊತ್ತು..ಈ ಅಯ್ನೋರು ಕೇಳ್ದೆ ಸುಮ್ನ ಯಾಕಿದ್ದರು.. ಅಲಲಲಾ.. … Read more
ಪಂಜು ಕಾವ್ಯಧಾರೆ
ಮಾಯವಾಗಿದೆ ಖಾಸಗಿತನ ಮಾಯವಾಗಿದೆ ನಮ್ಮ ಖಾಸಗಿತನಮಾಯವಾಗಿದೆಅಬ್ಬರದ “ಸೆಲ್ಪಿ”ಗಳ ನಡುವೆಸೂತು ಸೊರಗಿದೆ ಎಲ್ಲವನ್ನು ಕ್ಷಣಾರ್ಧದಲ್ಲಿ ಕ್ಲಿಕ್ಕಿಸಿಸಾಮಾಜಿಕ ಜಾಲಕ್ಕೆ ಹರಿಬಿಡುವ,ಅಳಿಯದ ಗೋಡೆಗೆ ಅಂಟಿಸುವಧಾವಂತದಲಿ ಮಾಯವಾಗಿ ನಮ್ಮ ಖಾಸಗಿತನ ಎನಿದ್ದರು ಆಗದು ಬಣ್ಣದ ಪಟಎಷ್ಷೂ ತೆಗೆದರು ಸಾಲದುಕಾಯಕವೇ ಕೈಲಾಸ ಮರೆತುಹೊಯಿತುಎಲ್ಲೆಂದರಲ್ಲಿ ಸೇಲ್ಪಿ ಕಾಯಕವಾಯಿತುಕಾರು ,ಬಸ್ಸುಗಳಲ್ಲದೆ, ತಿಂದ್ದು ,ಹೇತದ್ದು ಎಲ್ಲ ಪಟಗಳನ್ನು“ಅಪ್ಲೋಡ್ ” ಮಾಡುವದೇ ಕೆಲಸವಾಯಿತು ..!ಖಾಸಗಿತನ ಮಾಯಾವಾಯಿತು . ಮರೆಯದ ಗೋಡೆಗೆ ಅಂಟಿಸಿ ,ಮನೆಯಲ್ಲೂ ,ಮನದಲ್ಲೂ ಗೋಡೆಗಳುಎದ್ದುನಿಲ್ಲವಂತಾಯಿತು .ಗೋಡೆ ಮರೆಯುವದಿಲ್ಲಮನಗಳು ಒಂದಾಗುವದಿಲ್ಲ ..! ಸಾಮಾಜಿಕ ತಾಣ ಖಾಸಗಿತನದಸರಕಾಯಿತು ಸಮಾಜ ,ಬದುಕಿನನಡುವಿನ ಸೂಕ್ಷ್ಮ … Read more
“ಸಾವು” ಯಾರು ನಿರಾಕರಿಸಲಾಗದ ಸತ್ಯ: ಪೂಜಾ ಗುಜರನ್. ಮಂಗಳೂರು
ಸಾವಿನ ನಂತರ ಏನು? ಸ್ವರ್ಗ, ನರಕ, ಇದೆಲ್ಲ ಇದೆಯಾ? ಇದೆ ಅನ್ನುತ್ತದೆ ಪುರಾಣ. ಪುರಾಣ ಹೇಳುತ್ತದೆ ಸತ್ತ ವ್ಯಕ್ತಿ ಒಳ್ಳೆಯವನು ಆಗಿದ್ದರೆ ಸ್ವರ್ಗಕ್ಕೆ ಹೋಗುತ್ತಾನೆ. ಕೆಟ್ಟವನು ನರಕಕ್ಕೆ ಹೋಗುತ್ತಾನೆ? ಈ ಸ್ವರ್ಗ, ನರಕ,ಪಾಪ, ಪುಣ್ಯ, ಸಾವಿನ ನಂತರ ಏನು? ಇದೆಲ್ಲವನ್ನೂ ನೋಡಿದವರು ಯಾರು? ಸಾವು ಎಂದರೇನು? ಹುಟ್ಟಿದವನು ಸಾಯಲೇಬೇಕೆ? ಇದೆಲ್ಲವನ್ನೂ ಮನುಷ್ಯ ಆಳವಾಗಿ ಚಿಂತಿಸಿ ವಿಮರ್ಶೆ ಮಾಡುತ್ತಾನೆ. ವೇದ ಮಹರ್ಷಿಗಳಿಂದ ಹಿಡಿದು ಜಗತ್ತಿನ ಮೇಧಾವಿಗಳೆಲ್ಲ ಸಾವಿನ ಬಗ್ಗೆ ಅದರ ಅನುಭವದ ಬಗ್ಗೆ ಬರೆದಿದ್ದಾರೆ. ಈ ಭೂಮಿ ಮೇಲಿನ … Read more
ನಾಲ್ವರ ಗಜ಼ಲ್ ಗಳು
ಗಜ಼ಲ್ ಕಪ್ಪೆಂದು ಜರಿದು ದೂರ ಉಳಿಸಿದವರು ಕೆಲವರುಅಸಹ್ಯದಿಂದ ಮುಖ ಸಿಂಡರಿಸಿದವರು ಕೆಲವರು ನನ್ನ ಬಣ್ಣ ನಿಮ್ಮ ಮುಖಕ್ಕೇನಾದರೂ ಮೆತ್ತಿಕೊಂಡೀತೇ?ಕೇಳಬೇಕೆನಿಸಿತ್ತು ಕ್ಷಣ ಮಾತ್ರವೂ ನಿಲ್ಲದೇ ಹೋದವರು ಕೆಲವರು ಬಣ್ಣದಲ್ಲೇನಿದೆ ಬಾ ಗೆಳೆಯ ಕೂಡಿ ಆಡೋಣವೆಂದ ಮಾತುಗಳು ಸಾಕಷ್ಟಿವೆಅವುಗಳನ್ನೆಲ್ಲಾ ಗಣನೆಗೆ ತೆಗೆದುಕೊಳ್ಳದವರು ಕೆಲವರು ದೂಷಿಸಿದವರ ಕೇಳಿದೆ ನಿಮ್ಮ ನೆರಳಿನ ಬಣ್ಣ ಯಾವುದು?ಉತ್ತರಿಸಲಾಗದೆ ಗರಬಡಿದಂತೆ ನಿಂತವರು ಕೆಲವರು ದೇಸು ಇದೇ ಬಣ್ಣ ಬೇಕೆಂದು ಬೇಡಿಕೊಂಡನೆ? ಇಲ್ಲವಲ್ಲಾ!!!ಕೇಳಿದ್ದಕ್ಕೇ…ನಕ್ಕು ಅಪಹಾಸ್ಯ ಮಾಡಿ ಹೊರಟವರು ಕೆಲವರು ದೇಸು ಆಲೂರು… ಗಜಲ್ ಸರಿದು ಹೋಯ್ತು ಮತ್ತೊಂದು ಪ್ರೇಮಿಗಳ … Read more
ಹನಿಗವನಗಳು: ಆರ್.ಸುನೀಲ್.ತರೀಕೆರೆ, ವಾದಿರಾಜ ಕುಲಕರ್ಣಿ, ಪುಣೆ, ಪುಷ್ಪ ಪ್ರಸಾದ್, ಉಡುಪಿ
ಮಹೋತ್ಸವಗಿಡ ನೆಟ್ಟರೆವನ ಮಹೋತ್ಸವಇಂಟರ್ ನೆಟ್ಟಿರೆಮನ ಮಹೋತ್ಸವ..! ಆಮಂತ್ರಣಅನ್ನುವುದಿಲ್ಲ ನಾಊರು ಕೊಳ್ಳೆ ಹೊಡೆದ ಮೇಲೆಮುಚ್ಚಿದಂತೆ ಊರ ಬಾಗಿಲು,ಬಾ ಗೆಳತಿ ಸೂರೆ ಮಾಡುಎನ್ನ ಹೃದಯ ಸದಾತೆರೆದ ಬಾಗಿಲು..! ರಂಗುಎಷ್ಟೊಂದು ರಂಗುಮನುಜನ ಕಾಯಕೆನೆರಳು ಕಪ್ಪು ಊಟನೀರವ ರಾತ್ರಿಯಲ್ಲಿನೂರು ಭಾವನೆಗಳವಿನಿಮಯದ ನೋಟ..;ಆಹಾ ಅದೆಷ್ಟು ಚೆನ್ನ ಪ್ರಿಯೆಕಣ್ಣುಗಳಾ ಈಬೆಳದಿಂಗಳ ಊಟ..! ಲೋಕಎಷ್ಟು ವಿಚಿತ್ರಭಾವನೆಗಳ ಲೋಕನಕ್ಕು ಅಳುವಅತ್ತು ನಗುವ ಶೋಕಬಾಳು ನೀರವ ಶ್ಲೋಕ..! ಕ್ಷಣಿಕಕತ್ತಲೆ ಕೂಪಕ್ಷಣಿಕ ಮರೆ ಅದುಕಿರಣ ತೂರಿಹೊರಬಂದೊಡೆ ಪ್ರಭೆಕಾಲ ಎಂದೂ ನಿಲ್ಲದು –ಆರ್.ಸುನೀಲ್.ತರೀಕೆರೆ. ಫೇಸ್ಬುಕ್ಕು.. ವಾಟ್ಸಪ್ಪು…. –ಕೊರಗು–ಮೊದಲು ಸಿಗುತ್ತಿತ್ತುನಲ್ಲೆಯ ಸಿಹಿ ಅಪ್ಪುಗೆ |ಈಗ … Read more
ಸಾಂಪ್ರದಾಯಿಕ ಹಾವಸೆಯನ್ನು ಕಿತ್ತೆಸೆದ -ಸ್ತ್ರೀ ವಾದಿ -ಕಮಲಾದಾಸ: ನಾಗರೇಖಾ ಗಾಂವಕರ
“You turn me into a bird of stoneA granite dove,You build round me a shabby drawing roomAnd stroke my face absentmindedly while you read” ಇದು ಕಮಲಾದಾಸರ ‘The Stone age’ ಕವಿತೆಯಲ್ಲಿನ ಸಾಲುಗಳು. ಈ ಕವಿತೆಗೂ ಪಾಕಿಸ್ತಾನಿ ಕವಯತ್ರಿ Kishwar Naheed’ರ ‘ Iam not that Woman’ ಕವಿತೆಗೂ ಸಾಮ್ಯತೆ ಇದೆ.ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಸ್ತ್ರೀಯ ಘನವ್ಯಕ್ತಿತ್ವ ನಲುಗುವ ಪರಿಯನ್ನು ಬಣ್ಣಿಸುವ ಕಮಲಾದಾಸ ಪುರುಷನ ದೌರ್ಜನ್ಯವನ್ನು … Read more
ಇದು ಮುಗಿಯದ ಕತೆ; ಮನ- ಮನೆಗಳ ವ್ಯಥೆ!: ಡಾ.ಗೀತಾ ಪಾಟೀಲ
ಇಂದಿನ ದಿನಗಳ ಅನೇಕ ಗಂಭೀರವಾದ ಸಾಮಾಜಿಕ ಸಮಸ್ಯೆಗಳಲ್ಲಿ ಹಿರಿಯರ ಆರೈಕೆ ಹಾಗೂ ನಿರ್ವಹಣೆಯೂ ಒಂದು. ಜೀವನೋಪಾಯ, ಅವಕಾಶಗಳಿಗಾಗಿ ಬೇರೆಯಾಗುತ್ತಿರುವ ಕುಟುಂಬದ ಸದಸ್ಯರು, ಹಬ್ಬ, ಹರಿದಿನ, ಮದುವೆ, ಶವಸಂಸ್ಕಾರ ಮೊದಲಾದ ಕೌಟುಂಬಿಕ ಪರಿಸ್ಥಿತಿಗಳಿಗೂ ಸಹ ಜೊತೆ ಸೇರಲಾಗದಷ್ಟು ಸಾವಿರಾರು ಮೈಲು ದೂರ ನೆಲೆಸಿರುವ ಕುಟುಂಬಗಳು, ಬಡತನ, ಆರ್ಥಿಕ ಸಮಸ್ಯೆಗಳು, ವ್ಯಕ್ತಿ ಸ್ವಾತಂತ್ರ್ಯ, ವ್ಯಕ್ತಿತ್ವ ಹಾಗೂ ಮಾನಸಿಕ ಸಂಘರ್ಷಗಳು, ಒಂಟಿ ಜೀವಿಗಳ ಕಳವಳವನ್ನಿರಿಯದ ಕರುಳ ಬಳ್ಳಿಗಳು, ! ಇವೆಲ್ಲವುಗಳ ನಡುವೆ ಸಿಲುಕಿರುವ ಈ ವಿಷಯ ನಿಜಕ್ಕೂ ಕೌಟುಂಬಿಕವಾಗಿ ಹಾಗೂ ಸಾಮಾಜಿಕವಾಗಿ … Read more
ಎಂದೂ ಬಾಡದ ಮಂದಾರ: ಸುಂದರಿ ಡಿ,
ಮುಳುಗಿ ಉಸಿರುಕಟ್ಟುವ ಅತಿಯಲಿ ಬದುಕಲೋಸುಗವೇ ನಗೆಗಡಲ ಆಳದಿಂದ ಮೇಲೆದ್ದು ಬಂದು ಅದರಲಿ ತೇಲಿದ ಆ ದಿನಗಳ ಅದೆಂತು ಮರೆಯಲು ಸಾಧ್ಯ! ಆ ಸವಿದಿನಗಳ ಮರೆಯುವುದಾದರೂ ಏತಕ್ಕೇ.. ಮರೆಯಬಾರದು. ಏಕೆಂದರವು ಲಾಡುವಿನಲಿ ಸಿಗುವ ಕರ್ಬೂಜದ ಬೀಜಗಳಂತೆ, ಛಳಿಯಲಿ ಆಗ ತಾನೇ ಹದವಾಗಿ ಹುರಿದು ಬೆಲ್ಲದೊಡನೆ ಮೆಲ್ಲಲೆಂದೇ ಕೊಟ್ಟ ಕಡಲೇ ಬೀಜದಂತೆ, ಬಿರಬಿಸಿಲ ದಾರಿಯಲಿ ಹೊಂಗೆಯ ನೆರಳೊಂದು ಸಿಕ್ಕಂತೆ, ದಣಿದ ಜೀವಕೆ ನೀರುಮಜ್ಜಿಗೆಯ ನಿರಾಳವಾಗಿ ಕುಡಿಯಲು ಅವಕಾಶ ಸಿಕ್ಕಂತೆ ಇವುಗಳ ಅನುಭವಿಸದ ಭವಿ ಯಾರಿದ್ದಾರು!. ಬಿದ್ದು ಬಿದ್ದು, ಎದ್ದು ಬಿದ್ದು … Read more
ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 67): ಎಂ. ಜವರಾಜ್
-೬೭-ಆ ಮಾರ ಕಡ್ಡಿಗೀರಿಮೋಟು ಬೀಡಿ ಹಸ್ಸಿ ಬಾಯ್ಗಿಟ್ಗಂಡುಅದೆ ಕಡ್ಡಿಲಿ ಲಾಟೀನ್ ಕೀಲೆತ್ತಿಲಾಟೀನ್ ಗಳಸೊಳ್ಗಿರ ಬತ್ತಿಗ ಇಟ್ಮೇಲಮೊದುಲ್ಗ ಲಾಟೀನ್ ಬತ್ತಿ ದಗ್ಗಂತ ಹತ್ಕಂಡುಆಮೇಲಮೇಲ ಆ ಲಾಟೀನಲಿಸೀಮೆಣ್ಣ ಇಲ್ದೆ ಇರವತ್ಗೇನೋಅದು ಕವುರ್ತ ಕವುರ್ತಬೆಳ್ಕು ಸಣ್ಣುಕ್ಕ ಪಿಣುಗುಡ್ತಿತ್ತು ಆ ಪಿಣ್ಗುಡ ಬೆಳುಕ್ಲಿಆ ಮಾರುನ್ ಹೆಡ್ತಿಹೊಸೂರ್ ಬೀದಿಯಿಂದಹೆಡ್ಗಲಿ ಹೊತ್ಗ ಬಂದಿರಬಾಡು ಬಳ್ಳ ತಿಂದು ತೇಗಿಅಂಗುಳ್ಗಂಟ ಕುಡ್ದುಬಿದ್ದು ಪೇಚಾಡ್ತ ಇರದು ಕಾಣ್ತು ಆ ಮಾರನೂ ಅಂಗುಳ್ಗಂಟ ತಿಂದು ಕುಡ್ದುಆ ಅಂಗುಳ್ಳೇ ತೇಗ್ತಹಳ ಬಕೀಟೊಳಗ ಇರಕೊಳ ನೀರ್ಲಿ ಮುಳುಗ್ಸಿಉನಿಯಾಕಿದ್ದ ನನ್ನ ಎತ್ತಿ ಕೆಳಗಿಟ್ಟುಬಾಯ್ಗಿಟ್ಟಿದ್ದ ಬೀಡಿನ ಎಡಗೈಲಿ … Read more
‘ರಾಗವಿಲ್ಲದಿದ್ದರೂ ಸರಿ’ ನಾಲಿಗೆ ಮೇಲೆ ನುಲಿಯುತಿರಲಿ: ಜಹಾನ್ ಆರಾ ಕೋಳೂರು
ಗಜಲ್ ಕಾವ್ಯ ನಿಜಕ್ಕೂ ಬಹಳ ನಿಯಮಬದ್ಧವಾದ ಸಾಹಿತ್ಯಪ್ರಕಾರ ಎಂದು ಹೇಳಬಹುದು ಇದು ಸಾಮಾನ್ಯವಾಗಿ ಒಂದೆರಡು ಪ್ರಯತ್ನಗಳಲ್ಲಿ ಒಲಿಯುವಂಥದ್ದಲ್ಲ ಉಮರ್ ರವರ ಕಠಿಣ ಪರಿಶ್ರಮ ಮತ್ತು ಅಧ್ಯಯನಶೀಲತೆಯಿಂದಾಗಿ ಇದು ಅವರಿಗೆ ಒಲಿಯಲು ಸಾಧ್ಯವಾಗಿರಬಹುದು. ” ರಾಗವಿಲ್ಲದಿದ್ದರೂ ಸರಿ” ಎಂದು ಹೇಳಿ ಭಾವ ತೀವ್ರವಾದ ಹೃದಯಸ್ಪರ್ಶಿಯಾದ ಪ್ರಾಮಾಣಿಕವಾದ ರಾಗಗಳನ್ನು ಕವಿ ನಮ್ಮ ಕೈಗೆ ಇಟ್ಟಿದ್ದಾರೆ. ಸೂಫಿ ಮಾದರಿಯ ಮುಖಪುಟ ದೊಂದಿಗೆ ಮಾನವೀಯತೆಯ ಗಜಲ್ ಗಳ ಅನಾವರಣಗೊಂಡಿವೆ. ಈ ಕೃತಿಗೆ ವಿಶಿಷ್ಟವಾದ ಶೈಲಿಯಲ್ಲಿ ಮುನ್ನುಡಿಯನ್ನು ಬರೆದಿರುವಂತಹ ಶ್ರೀಮತಿ ಮೆಹಬೂಬ್ ಬಿ ಶೇಕ್ … Read more
ನೀನು ಅಣ್ಣನಲ್ವಾ…: ಸಿಂಧು ಭಾರ್ಗವ್ ಬೆಂಗಳೂರು
ಮಧ್ಯಾಹ್ನ ಸುಮಾರು ಮೂರು ಗಂಟೆಯಾಗಿರಬಹುದು. ಶ್ಯಾಮರಾಯರು ಮನೆಯಿಂದ ಹೊರಬಂದು, ಕಮಲಿಯಲ್ಲಿ ಮಾತಿಗಿಳಿದರು… “ಅಲ್ಲಾ…ನಾವೆಲ್ಲ ವಯಸ್ಸಾದವರು. ಊಟ ಮಾಡಿ ಮಲಗೋ ಸಮಯ.. ನಿಮ್ಮ ಮಕ್ಕಳಿಗೆ ಶಾಲೆ ಇಲ್ಲ ನಿಜ… ಆದರೆ ಗಲಾಟೆ ಮಾಡಬಾರದು ಅಂತ ಒಂದು ಮಾತು ಹೇಳಬಾರದಾ?? ನನಗಂತೂ ಈ ಬಿಪಿ ,ಶುಗರ್ ನ ಮಾತ್ರೆ ತಿನ್ನೊದ್ರಿಂದ ಮಲಗಿದ್ರೆ ನಿದ್ದೇನೆ ಬರೋದಿಲ್ಲ… ಈ ಮಕ್ಕಳ ಗಲಾಟೆ ಸದ್ದು ಮಲಗೋಕೂ ಬಿಡೋದಿಲ್ಲ… ಯಾವಾಗಲೋ ಕರೆದು ಹೇಳಬೇಕು ಅಂತ ಎನಿಸಿದ್ದೆ….ಇಂದು ನೀನೇ ಸಿಕ್ಕಿದೆ ನೋಡು….” ಎಂದರು.. ಕಮಲಿಗೆ ಸಿಟ್ಟು ನೆತ್ತಿಗೇರಿತು. … Read more
ರಾಷ್ಟ್ರೀಯ ವಿಜ್ಞಾನ ದಿನ: ಡಾ.ಅವರೆಕಾಡು ವಿಜಯ ಕುಮಾರ್
1986 ರಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಕಮ್ಯುನಿಕೇಶನ್(ಎನ್. ಸಿ. ಎಸ್. ಟಿ. ಸಿ.) ಭಾರತ ಸರ್ಕಾರಕ್ಕೆ ಫೆಬ್ರವರಿ 28 ರಂದು ‘ ರಾಷ್ಟ್ರೀಯ ವಿಜ್ಞಾನ ದಿನ’ವನ್ನಾಗಿ ಆಚರಿಸಲು ಮನವಿಯನ್ನು ಸಲ್ಲಿಸಿತ್ತು.ಈ ಮನವಿಯನ್ನು ಒಪ್ಪಿದ ಅಂದಿನ ಸರ್ಕಾರ ಪ್ರತಿ ವರ್ಷ ಫೆಬ್ರವರಿ 28 ನೇ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ದೇಶದಾದ್ಯಂತ ಆಚರಿಸುವಂತೆ ಘೋಷಿಸಿತು.ಮೊದಲ ಬಾರಿಗೆ ಈ ರಾಷ್ಟ್ರೀಯ ವಿಜ್ಞಾನ ದಿನವನ್ನು 28 ಫೆಬ್ರುವರಿ 1987 ರಂದು ಆಚರಣೆಗೆ ತರಲಾಯಿತು.ವಿಜ್ಞಾನ ಮತ್ತು ನಮ್ಮ ಜೀವನದಲ್ಲಿ … Read more
ವಿಷಾದ ನೋವು ಘರ್ಷಣೆ ಸಂಘರ್ಷ ತೊಳಲಾಟ ತಾಕಲಾಟದ ಒಳಗುದಿ ಹೇಳುವ ಕಥೆಗಳು: ಎಂ.ಜವರಾಜ್
“ನಿರುದ್ಯೋಗಕ್ಕೆ ಹೆಣವಾದ ಅಪ್ಪ” ಇದು ಆನಂದ್ ಎಸ್. ಗೊಬ್ಬಿ ಅವರ ಚೊಚ್ಚಲ ಕಥಾ ಸಂಕಲನ. “ನನ್ನೊಳಗಿನ ಒಬ್ಬ ಕಥೆಗಾರ ಹೊರಗೆ ಬರಲು ತುಂಬ ತಡಕಾಡಿದ. ಅಲ್ಲಿಂದ ಒಂದು ಘಳಿಗೆಗಾಗಿ ರಮಿಸಿಕೊಂಡು ಬಂದೆ. ಬೆಳಿತಾ ಬೆಳಿತಾ ನನಗೆ ನನ್ನ ಊರಿನ ಪರಿಸರ ಹೇಗಿದೆ, ನನ್ನ ಸ್ನೇಹಿತರು ಹೇಗಿದ್ದಾರೆ ಎಂಬುದು ಸ್ಪಷ್ಟವಾಗಿ ಅರಿವಿಗೆ ಬಂತು. “ನೊಂದವರ ನೋವು ನೊಂದವರೇ ಬರೆದರೆ ಗಟ್ಟಿಯಾಗಿರುತ್ತದೆ” ಎಂಬ ದೊಡ್ಡವರ ಮಾತನ್ನು ಕೇಳಿದ್ದೆ ಮತ್ತು ಅನುಭವಿಸಿದ್ದೆ” ಎಂದು ಲೇಖಕ ಆನಂದ್ ಎಸ್. ಗೊಬ್ಬಿ ತಮ್ಮ ಕಥಾಲೋಕ … Read more
ತಾಳ್ಮೆ: ಶರಧಿನಿ
ತಾಳ್ಮೆ, ಆದ್ದರಿಂದ ತಾಳ್ಮೆಯ ಬಗ್ಗೆ ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿಟ್ಟುಕೊಳ್ಳುವ ಮೊದಲ ವಿಷಯವೆಂದರೆ ಫಲಿತಾಂಶಕ್ಕಾಗಿ ಅಸಹಾಯಕತೆಯಿಂದ ಕಾಯುವುದು. ಆದರೆ ತಾಳ್ಮೆ ಎನ್ನುವುದು ನಾವು ಕೊನೆಯಲ್ಲಿ ನಿರೀಕ್ಷಿಸಿದ ಫಲಿತಾಂಶದ ಮೇಲೆ ಕೆಲಸ ಮಾಡುವ ಒಂದು ಕಲೆ ಎಂದು ಹೇಳಲು ಬಯಸುತ್ತೇನೆ. ನಾವು ಯಾವುದೇ ಹೊಸ ಸವಾಲನ್ನು ಕೈಗೆತ್ತಿಕೊಂಡಾಗ, ಹೆಚ್ಚಿನ ಬಾರಿ ನಾವು ನಮ್ಮ ಕೆಲಸವನ್ನು ಇತರರೊಂದಿಗೆ ಹೋಲಿಸಲು ಪ್ರಾರಂಭಿಸುತ್ತೇವೆ ಮತ್ತು ಇತರರಂತೆಯೇ ಕೆಲಸವನ್ನು ಪೂರೈಸಲು ಮತ್ತು ಫಲಿತಾಂಶದಲ್ಲಿ ಯಾವುದೇ ಬದಲಾವಣೆಯಿಲ್ಲದೆ ಕೊನೆಗೊಳ್ಳಲು ನಮ್ಮೊಳಗೆ ಒತ್ತಡದ ವಾತಾವರಣವನ್ನು ಸ್ಥಾಪಿಸುತ್ತೇವೆ. ಇಲ್ಲಿ ನಾವು … Read more
ಅಶ್ಫಾಕರ ” ನನ್ನೊಳಗಿನ ಕವಿತೆ ” ಕವನ ಸಂಕಲನ ಕುರಿತ ಎರಡು ಅಭಿಪ್ರಾಯಗಳು
“ಪ್ರತಿಮೆಯೊಳಗೇ ಕರಗಿಹೋಗುವ ಕಲ್ಲಿನ ಗುಣ ಅಶ್ಫಾಕರ ” ನನ್ನೊಳಗಿನ ಕವಿತೆ ” ಯ ಮೂಲದ್ರವ್ಯ ನೆರಳಿನ ಹಾದಿಯ ಬಿಸಿಲಿನ ಮಂಟಪವೂ ಹೌದು. ಕಲ್ಪನೆಯ ಕನಸುಗಳಲ್ಲಿ ನೆನಪಿನ ಹೆಜ್ಜೆಗಳನ್ನು ಮೂಡಿಸುವ ಪದಪಾದಪಯಣವೂ ಹೌದು. ವಿಶೇಷ ಆಸ್ವಾದನೆಗೆ ಹದಗೊಂಡು ಮುದವೀವ ಪದಪಂಕ್ತಿಯ ಭೋಜನಾಲಯವೂ ಹೌದು. ಕಣ್ಣಿಗೆ ಕಾಣುವ ಅಕ್ಷರಗಳಿಗೆ ಧ್ವನಿನೀಡಿ ಭಾವಸ್ಪರ್ಶಕ್ಕೆ ಮನಸನ್ನು ತೆರೆದಿಡುವಲ್ಲಿ “ನನ್ನೊಳಗಿನ ಕವಿತೆ” ಗಳು ಸಾರ್ಥಕ್ಯವನ್ನು ಕಂಡಿವೆ. ಕಾವ್ಯದೊಳಗಿನ ಕನಸು; ಕನಸಿನೊಳಗಿನ ಕಾವ್ಯ; ಮೌನದೊಳಗಿನ ಮನಸು; ಮನಸಿನೊಳಗಿನ ಮೌನ, ವಾಸ್ತವದ ನೆರಳಿನಲೆಯೊಳಗೆ ಜೀವಂತಿಕೆಯನ್ನು ಪಡೆದುಕೊಳ್ಳುತ್ತವೆ. ಮಹತ್ವಪೂರ್ಣ … Read more
ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 65 & 66): ಎಂ. ಜವರಾಜ್
-೬೫-ಆ ಆಳು ಬೀದಿಗುಂಟದಾಪಗಾಲಾಕಿ ಓಡ್ಬತ್ತಿರಗಆ ಆಳ್ನೆಡ್ತಿ ತನ್ಸೀರನ ತೊಡ್ಗಂಟ ಗೋರ್ಕಂಡುಆ ಗೋರ್ಕಂಡಿರ ತೊಡಮ್ಯಾಲ ಮಲ್ಗಿರೋಈ ಅಯ್ನೋರ್ ತಲನ ಹಿಡ್ಕಂಡುಬತ್ತ ಇರ ಈ ಅಯ್ನೋರಾಳನ್ನೊ ಗಂಡನ್ನವಾರ್ಗಣ್ಲಿ ನೋಡ್ತಾಈ ಅಯ್ನೋರ್ ತಲನಆ ತೊಡಮ್ಯಾಲಿಂದಮೆಲ್ಮೆಲ್ಗ ಉಸಾರಾಗಿ ಕೆಳಕ ಸರ್ಸಿಆ ಮೋರಿ ಸಂಗ್ಡಿರೊಆ ಭೂಮ್ತಾಯಿ ಮ್ಯಾಲ ಮಲುಗ್ಸಿಈ ಅಯ್ನೋರಾಳನ್ನೊತನ್ನ ಗಂಡುನ್ಗ ತೋರುಸ್ತ ಕಣ್ಣೀರಾಕ್ತ..ಆಗ ಆ ಆಳು ಮಂಡಿ ಊರಿ‘ಅಯ್ನೋರಾ.. ಅಯ್ನೋರಾ..ಇದ್ಯಾಕ.. ಏನಾಯ್ತು..’ ಅನ್ತಗೊಳಗೊಳನೆ ಅಳ್ತ ನಿಂತಿರದಆ ಭೂಮ್ತಾಯಿ ಸಂಗ್ಡ ಇರ ಮೋರಿ ಸಯಿತಕಿಲಕಿಲ ನಗ್ತ ನೋಡ್ತಾ ಗಬ್ಬುನಾತ ಬೀರ್ತಿತ್ತಲ್ಲಾ.. ಆಗ ಈ ಅಯ್ನೋರುಆ … Read more
ಬದುಕು ಬಯಲಿಗೆ: ಆನಂದ ಎಸ್ ಗೊಬ್ಬಿ.
ದುಡಕಂದು ತಿನ್ನಾಕ ಅಂತ ಬೆಂಗ್ಳೂರಿಗೆ ಹೋಗಿದ್ದ ಶಂಕ್ರನ ಚಡ್ಡಿ ದೊಸ್ತ ಹಣಮಪ್ಪ ಪೋನ್ ಮಾಡಿ “ಬರ್ತೈಯಿದೀನಿ ಲೇ ಮಗ, ಕೆಲಸ ಇಲ್ಲ ಗಿಲಸ ಇಲ್ಲ. ಬಾಳ ತಿಪ್ಲ ಆಗ್ಯಾದಾ , ಹೋರಗ ಹ್ವಾದ್ರ ಸಾಕು ಪೋಲಿಸ್ರೂ ಕುಂಡಿ ಮ್ಯಾಗ ಬಾರಸದೇ ಬಾರಸಾಕ ಹತ್ಯಾರ ಲೇ ಅವರೌನ್. ನಮಗ ಸುಮ್ನೆ ಕುಂದ್ರದು ಆಗವಲ್ಲದು, ಸುಮ್ನೇ ಕುಂದ್ರು ಅಂದ್ರೇ ಎಷ್ಟು ದಿನ ಅಂತ ಕುಡ್ತಿ , ತಿಂಗ್ಳ ಆಗಕ ಬಂತು, ಕೆಲಸ ಇಲ್ಲದೆ ಬಗಸಿ ಇಲ್ಲದೆ, ಹೊಟ್ಟಿ ನಡಿಬೇಕಲ್ಲಪ್ಪಾ ಮಾರಾಯ.” … Read more
ಸಾವಿತ್ರಿ: ಸುರೇಶ್ ಮಲ್ಲಿಗೆ ಮನೆ
ಆವತ್ತು ಸೋಮಾರ ರಾತ್ರಿ ನಾನು ಒಬ್ಬಾಕೆ ಕತ್ತಲಾಗ ಹುಲಿಕಲ್ಲು ಕಾಡಾಗ ಒಣಗಿದ ಮರನಾ ಕಡೀತಿದ್ನ, ಆ ಬೆವರ್ಸಿ ಹುಲಿ ಗಿಡದ ಮಟ್ಟಿಂದ ಬಂದು ನನ್ನ ನೋಡಿ… ಘರ್… ಅಂತ ಘರ್ಜಿಸ್ತು…!!.. ಹಂಗೆ ಕತ್ತೀನ ಕೈಯಿಂದ ಹಿಡಿದು ಮೇಲಕ್ಕೆತ್ತಿ, ದೊಡ್ಡ ಕಣ್ಣುಬಿಡುತ್ತಾ, ಅಡ್ಡಿಡಿಡಿ……. ಅಡ್ಡಿಡಿಡಿ…… ಅಡ್ಡಿಡಿಡಿ…. ಅಂದೇ ನೋಡು……!!!ಅಹ್..ಹ್….ಹ್…ಹ್..ಹ್…ಹ…. ಇಲಿ ಮರಿತರ ಹೆದರಿ ಹಂದಿ ತರ ಬಿದ್ದು, ಕಾಡೊಳಗೆ ಓಡೋಯಿತು ನೋಡು…….ಅಹ್..ಹ್…ಹ್….ಹ್….ಹ್…ಹ….. ಅಂತ ನಗ್ತಾ,…… ಹುಲಿ ಮುಂದೆ ತಾನು ಒಬ್ಬಂಟಿಯಾಗಿ ತೋರಿದ ಪೌರುಷಾನ ಮುಂಜಾನೆ ತನ್ನ ಅಂಗೈ ಅಗಲದ … Read more
ಮನಸ್ಸುಗಳು ಅನಾಥವಾಗದಿರಲಿ: ಪೂಜಾ ಗುಜರನ್. ಮಂಗಳೂರು.
ಈ ಭೂಮಿ ಮೇಲೆ ಬದುಕುವುದಕ್ಕೆ ಬೇಕಾಗಿರುವುದು ಏನೂ? ಯಾರೋ ಹೇಳಿದರೂ ಗಾಳಿ, ಬೇಕು ನೀರು, ಬೇಕು ಆಹಾರ, ಬೇಕು.. ಸರಿ ಇದೆಲ್ಲ ಈ ಭೂಮಿ ಮೇಲೆ ಸಿಗುತ್ತದೆ. ಉಸಿರಾಡುವುದಕ್ಕೆ ಗಾಳಿ, ಈ ಪ್ರಕೃತಿಯ ಮಡಿಲಿನಲ್ಲಿ ಯಥೇಚ್ಛವಾಗಿ ಸಿಗುತ್ತದೆ. ಅದಕ್ಕಾಗಿ ಯಾರ ಅಪ್ಪಣೆಯು ಬೇಕಾಗಿಲ್ಲ. ಆದರೆ ನೀರು ಆಹಾರ.? ಇದು ಅಪ್ಪಣೆಯಿಲ್ಲದೆ ದೊರೆಯುವುದೇ? ಹರಿದು ಹೋಗುವ ನೀರಿಗೂ ಬೇಲಿ ಹಾಕುವವರು ಇರುವಾಗ ಇದು ಕಷ್ಟವೇ. ಇರಲಿ ಇದು ದೊರೆಯುತ್ತದೆ ಅಂತಿಟ್ಟುಕೊಳ್ಳೋಣ.. ಇನ್ನು ಏನಾದರೂ ಬೇಕಿದೆಯಾ.? ಹೌದು ನೆಮ್ಮದಿ ಬೇಕು … Read more
ವರ್ತಮಾನದ ಗಾಯಗಳಿಗೆ ಮುಲಾಮು ನೀಡುವ ಸಂಕಲನ -ಬಯಲೊಳಗೆ ಬಯಲಾಗಿ: ಡಾ ವೈ. ಎಂ. ಯಾಕೊಳ್ಳಿ, ಸವದತ್ತಿ
ಇಂದು ಕನ್ನಡದಲ್ಲಿ ತುಂಬ ಸದ್ದು ಮಾಡುತ್ತಿರುವ ಕಾವ್ಯ ಪ್ರಕಾರ ಗಜಲ್. ಕೆಲವಾರು ದಶಕಗಳ ಹಿಂದೆ ರಾಯಚೂರು ನಾಡಿನ ಕವಿ ಶ್ರೀ ಶಾಂತರಸ ರಂಥವರಿಂದ ಕನ್ನಡಕ್ಕೆ ಬಂದ ಈ ಕಾವ್ಯ ಪ್ರಕಾರ ಇಂದು ತನ್ನ ಸಮಸ್ತ ಬಾಹುಗಳನ್ನು ಚಾಚಿ ಘಮ ಘಮಿಸುತ್ತಿದೆ. ಗಜಲ್ ರಚನೆಯ ಹೃದಯವನ್ನು ಅರಿತವರು, ಅರಿಯದವರು ಗಜಲ್ ಗಳನ್ನು ಬರೆಯುತ್ತಿದ್ದಾರೆ. ಅವರದೇ “ಮುಷಾಯಿರಿ ಗಳು ನಡೆಯುತ್ತಿದ್ದು ಹಲವಾರು ಗಜಲ್ ಗ್ರೂಪ್ ಗಳೇ ನಿರ್ಮಾಣವಾಗಿವೆ. ಗಜಲ್ ಕುರಿತ ವಿಚಾರ ಗೋಷ್ಠಿ ಗಳು ಅಲ್ಲಲ್ಲಿ ನಡೆಯುತ್ತಿದ್ದು ಕೆಲವೇ ದಿನಗಳಲ್ಲಿ … Read more
ಸಿದ್ಧಾಂತಗಳು ಮರಿಚೀಕೆಯಾದಾಗ…: ಡಾ. ಮಲ್ಲಿನಾಥ ಎಸ್. ತಳವಾರ
‘ಅಕ್ಷರಗಳಿಂದ ಏನೂ ಆಗುವುದಿಲ್ಲ’ ಎಂಬ ಸಿನಿಕತನದ ಜೊತೆಗೆ ‘ಅಕ್ಷರಗಳಿಂದ ಏನೆಲ್ಲಾ ಆಗಬಹುದು’ ಎಂಬ ಸಕರಾತ್ಮಕ ಚಿಂತನೆಯು ವಾಗ್ದೇವಿಯ ಮಡಿಲಲ್ಲಿ ಹಚ್ಚ ಹಸಿರಾಗಿದೆ. ಇದು ನಿತ್ಯ ಹರಿದ್ವರ್ಣವಾಗಬೇಕಾದರೆ ಸಾಹಿತ್ಯವು ಮನುಷ್ಯನ ಅಂತರಂಗಕ್ಕೆ, ಅವನ ಅಂತರ್ಲೋಕಕ್ಕೆ ಸಂಬಂಧಪಟ್ಪಿರಬೇಕಾಗುತ್ತದೆ. ಇದು ಕೇವಲ ಉದರ ನಿಮಿತ್ತವಾಗಿ ಮಾಡುವ ಕೆಲಸವಂತೂ ಅಲ್ಲವೇ ಅಲ್ಲ. ಈ ಕಾರಣಕ್ಕಾಗಿಯೇ ‘ಸಾಹಿತ್ಯ ಅನಂತಕಾಲಕ್ಕೆ ಸಂಬಂಧಪಟ್ಟಿದ್ದು, ತತ್ಕಾಲಕಲ್ಲ’ ಎನ್ನಲಾಗುತ್ತದೆ. ಇದಕ್ಕೆ ಬೇಕಾಗಿರುವುದು ಮನುಷ್ಯತ್ವ. ಮನುಷ್ಯತ್ವವೇ ಈ ಜಗತ್ತಿನ ಅತ್ಯುತ್ತಮವಾದ ತಾತ್ವಿಕ ತಿರುಳು. ಇಲ್ಲಿ ತತ್ ಕ್ಷಣ ಫಲದ ಪ್ರಲೋಭನೆ ಸರಿಯಲ್ಲ. … Read more