“ಜ಼ೀರೋ ಬ್ಯಾಲೆನ್ಸ್- ಒಂದು ಚೌಕಟ್ಟಿನೊಳಗೆ ಹುದುಗಿರುವ ವಿಷಾದ ಹಾಗು ಜೀವಗಳ ತೀವ್ರ ಸತ್ಯದ ಶೋಧ”: ಎಂ.ಜವರಾಜ್

ಕವಿತೆ, ಕವನ, ಕಾವ್ಯ, ಪದ್ಯ, ಕಥನ ಕಾವ್ಯ, ನೀಳ್ಗಾವ್ಯ ಹೀಗೆ ಗುರುತಿಸುವ ವಿವಿಧ ರೂಪದ ಬಾಹ್ಯ ಮತ್ತು ಆಂತರಿಕ ಭಾವದ ರಚನೆ ಒಂದೇ ತರಹದ್ದೆನಿಸುವ ಕನ್ನಡದ ಸಾಂಸ್ಕೃತಿಕ ಆಸ್ಮಿತೆ ಹೆಚ್ವಿಸಿದ ಸಾಹಿತ್ಯ ಪ್ರಕಾರವಿದು. ಕಾಲಗಳುರುತ್ತ ಭಾಷೆಯ ಅಸ್ತಿತ್ವದ ಪ್ರಶ್ನೆ ಎದುರಾಯಿತು. ಜನರ ಭಾವನೆಗಳ ಮೇಲೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಯ್ತು. ಧಾರ್ಮಿಕವಾದ ಜಟಿಲ ಸಮಸ್ಯೆಗಳೂ ಸೃಷ್ಟಿಯಾದವು. ಅಸಮಾನ ಸಾಮಾಜಿಕ ವ್ಯವಸ್ಥೆ ವಿರುದ್ಧ ಸಾಹಿತ್ಯದ ಮನಸ್ಸುಗಳು ಕವಿತೆಗಳನ್ನು ಬರೆದು ರಾಗ ಕಟ್ಟಿ ಕೆಚ್ಚೆದೆಯಲ್ಲಿ ದನಿಯೇರಿಸಿ ಹಾಡಿ ಜನ ಸಮೂಹವನ್ನು ಎಚ್ಚರಿಸಿದವು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಾಳಿ ಬದುಕಿದವರು: ಎಸ್.ಗಣೇಶ್, ಮೈಸೂರು.

ಇತ್ತೀಚೆಗೆ ನನ್ನ ಸಂಬಂಧಿಯೊಬ್ಬರು ಮರಣ ಹೊಂದಿದರು, ಕುಟುಂಬದವರೆಲ್ಲಾ ಒಂದು ಕಡೆ ಸೇರಿ, ಮೃತರ ಆತ್ಮ ಶಾಂತಿಗಾಗಿ ಉತ್ತರಕ್ರಿಯೆಗಳನ್ನು ಹೇಗೆ ನೆರವೇರಿಸಬೇಕು? ದಾನಗಳನ್ನು ಏನು ಕೊಡಬೇಕು? ಪ್ರತ್ಯಕ್ಷ ದಾನಗಳನ್ನು ಕೊಡಬೇಕೋ? ಅದರ ವೆಚ್ಚವೆಷ್ಟು? ಎಲ್ಲಿ ಕರ್ಮಗಳನ್ನು ಮಾಡಬೇಕು? ಹೀಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ಆಗುತ್ತಿತ್ತು.. ನಾನು ತದೇಕಚಿತ್ತದಿಂದ ಎಲ್ಲವನ್ನು ಗಮನಿಸುತ್ತಿದ್ದೆ, ಗುಂಪಿನಲ್ಲಿನ ಹಿರಿಯರೊಬ್ಬರು ಪ್ರತಿಯೊಂದು ಪ್ರಶ್ನೆಗಳಿಗೂ ಸಲಹೆಗಳನ್ನು ನೀಡುತ್ತಿದ್ದರು, ಅದನ್ನ ಉಳಿದವರು ಅನುಮೋದಿಸುತ್ತಿದ್ದರು.. ಒಟ್ಟಿನಲ್ಲಿ ಆ ಹಿರಿಯರ ಮಾತನ್ನು ಯಾರು ಮರು ಪ್ರಶ್ನಿಸುತ್ತಿರಲಿಲ್ಲ.. ಅವರ ಮಾತೇ ಅಂತಿಮವಾಗುತ್ತಿತ್ತು.. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೊಫೆಷನಲ್ ಅಲ್ಲದ ಫೋಟೋಗ್ರಾಫರ್ ನ ಒಂದು ಪ್ರಸಂಗ…: ಪಿ.ಎಸ್. ಅಮರದೀಪ್.

ಸಮಾರಂಭದ ಊಟಕ್ಕೆ ಮುಂಚೆ ಬಾಳೆ ಎಲೆಯಲ್ಲಿ ಉಪ್ಪು, ಕೋಸಂಬರಿ, ಉಪ್ಪಿನಕಾಯಿ ಮುಂಚೆಯೇ ನೀಡುವ ಅಭ್ಯಾಸ ಎಷ್ಟರಮಟ್ಟಿಗೆ ಇದೆಯೋ ಹಾಗೆಯೇ ಒಂದು ಕಾರ್ಯಕ್ರಮ, ಅದರಲ್ಲೂ ಕೌಟುಂಬಿಕ ಕಾರ್ಯಕ್ರಮ ಅಂದರೆ ನಿಶ್ಚಿತಾರ್ಥ, ಹರಿಶಿಣ ಶಾಸ್ತ್ರ, ಮದುವೆ, ರೆಸೆಪ್ಷನ್ನು, ಸೀಮಂತ‌ ಕಾರ್ಯ, ನಾಮಕರಣ ಶಾಸ್ತ್ರ, ಹೀಗೆ ಯಾವುದೇ ಇರಲಿ, ಫೋಟೋಗ್ರಾಫರ್, ವಿಡಿಯೋಗ್ರಾಫರ್ ಅವರಂತೂ ಊರ ಮುಂಚಿತವಾಗಿ ರೆಡಿಯಾಗಿರಬೇಕು.. ಈಗೀಗಂತೂ ಎಲ್ಲದಕ್ಕೂ ಪ್ರೀ ಮತ್ತು ಪೋಸ್ಟ್ ಫೋಟೋ ಶೂಟ್ ಟ್ರೆಂಡ್ ಶುರುವಾಗಿದೆ. ಮೊದಲು‌ ಹೇಳಿದ್ನಲ್ಲ? ಆ ಎಲ್ಲಾ ಕಾರ್ಯಕ್ರಮಗಳದ್ದೂ ಪ್ರೀ ಮತ್ತು ಪೋಸ್ಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮ ಜಿಲ್ಲೆಯ ಗಜಲ್ ಕಾರರು… (ಭಾಗ ೧): ವೇಣು ಜಾಲಿಬೆಂಚಿ

ಗಜಲ್ ಬರೆಯುವ ವಿಷಯದಲ್ಲಿ ಬಹಳಷ್ಟು ಪಳಗಿದ ಕೈಗಳು ನಮ್ಮಲ್ಲಿ ಸಾಕಷ್ಟಿವೆ. . . . (ಇಲ್ಲಿ ಕೇವಲ ನಮ್ಮ ರಾಯಚೂರು ಜಿಲ್ಲೆಯನ್ನು ಸೀಮಿತವಾಗಿಟ್ಟುಕೊಂಡು ಹೇಳುವ ಪ್ರಯತ್ನ ಹಾಗೂ ಈ ಬರಹದ ಹಿಂದೆ ಯಾವ ಉದ್ದೇಶವೂ ಇಲ್ಲ. . . ಕೇವಲ ವಿಚಾರ ವಿನಿಮಯ ಮಾತ್ರ) ನಮ್ಮ ಭಾಗದ ಹೆಮ್ಮೆಯ ಗರಿಮೆ ದಿವಂಗತ ಶಾಂತರಸರನ್ನು ಈ ಗಜಲ್ ವಿಷಯದಲ್ಲಿ ಮೂಲ ಸಂಸ್ಥಾಪಕರಾಗಿ ನಾವು ಕಾಣುತ್ತೇವೆ. . ತರುವಾಯ ಶ್ರೀಮತಿ ಎಚ್. ಎಸ್ ಮುಕ್ತಾಯಕ್ಕ, ತರುವಾಯ ದಿವಂಗತ ಶ್ರೀ ಜಂಬಣ್ಣ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 61 & 62): ಎಂ. ಜವರಾಜ್

-೬೧-ಈ ಅಯ್ನೋರ್ ಪಾದಬೀದ್ಬೀದಿಲಿ ತಿರ್ಗಾಡ್ತಿತ್ತುಆ ಪಾದ ತಿರ್ಗಾಡ ಬಿರುಸ್ಗಬೀದ್ಬೀದಿಲಿ ಲಾರಿಗಳು ತಿರುಗ್ತಿದ್ದುಆ ತಿರುಗ್ತಿದ್ದ ಲಾರಿಗಳು ಮಣ್ಸುರ್ಸ್ದುಬರ್ಗುಟ್ಗ ಮೊರ್ಗುಟ್ಗ ಹೋಯ್ತಿದ್ದು ಚೇರ್ಮನ್ನಾಗಿ ವರ್ಸಾಗಿತ್ತುಊರೊಳ್ಗ ಮೋರಿಗಳು ದಿಕ್ಕಾಪಾಲು ಹರಿತಾಬೀದಿ ಯಾವ್ದ ಮೋರಿ ಯಾವ್ದ ಅನ್ನದೇ ತಿಳಿದೆಪುಂಡೆಲ್ಲ ಸೇರಿ ಪಂಚಾಯ್ತಿಲಿ ಗುಲ್ಲೆಬ್ಬಿತ್ತು ಆ ಆಳು ಇದ ಮೊದುಲ್ಗೆ ಹೇಳಿದ್ದಆದ್ರ ಈ ಅಯ್ನೋರುಆ ಆಳ್ ಮಾತ್ನ ಬೀದಿ ಪಾಲ್ ಮಾಡಿನಗಾಡ್ತ ಇದ್ದದ ನಾ ಕಂಡಿದ್ದಿ ಈಗ ಈ ಅಯ್ನೋರ್ ಪಾದ್ಗಳುಬೀದಿ ಬುಟ್ಟು ದೂರಸ್ಟ ನಡ್ದುಜೊತ್ಗ ಆ ಆಳೂಹಿಂದಿಂದ ನಡಿತಾ ಬತ್ತಿದ್ನಸಂದ ಆಯ್ತ ಬಂತುಆಗಆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಧಣೇರ ಬಾವಿ”ಪುಸ್ತಕದ ಕುರಿತ ನನ್ನ ಸಣ್ಣ ವಿಮಶೆ೯: ಸುರೇಶ್ ಮಲ್ಲಿಗೆ ಮನೆ

ಈ ಕಥೆಗಳೇ ಹಾಗೆ ಅನಿಸುತ್ತೆ, ನಮ್ಮ ಮುಖದಲ್ಲಿನ ನವರಸಗಳನ್ನು ಹೊರಹಾಕಲು ಕಥೆಗಾರರು ಕಾಯುತ್ತಿರುತ್ತಾರೆ..!!? ನಮ್ಮ ತುಟಿಯ ಪಿಸು ನಗುವಿನಿಂದ ಪ್ರಾರಂಭವಾದ ಕೆಲ ಕಥೆಗಳು ಕೊನೆಗೆ ಕೊನೆಗೊಳ್ಳುವುದು ದುರಂತ ಕಣ್ಣೀರಿನ ಹನಿಗಳಿಂದ..!! ಕೆಲವು ಮೂಕವಿಸ್ಮಿತನನ್ನಾಗಿ ಮಾಡುತ್ತವೆ, ಕೆಲವು ಒಂದು ಬಗೆಯ ಮ್ಲಾನತೆಯ ಭಾವನೆಯನ್ನು ಮೂಡಿಸುತ್ತದೆ, ಕೆಲವಂತೂ ನಮ್ಮದೇ ಕಥೆಯೇ ಎನ್ನಿಸುವಂತಿರುತ್ತವೆ, ಕೆಲವು ನಮ್ಮ ಗತಕಾಲವನ್ನು ನೆನಪಿಸುವಂತಿರುತ್ತವೆ. ಹೀಗೆ ನಾನಾ ಬಗೆಯವು. ಕಥೆಗಳೇ ದಾರಿತಪ್ಪಿರುವ ಕಾಲದಲ್ಲಿ ಕಥೆಗಾರ ರಾಗುವುದು ಕಥೆಗಳಲ್ಲಿ ಮಾತ್ರ ನೋಡುವಂತಹ ಈ ಕಾಲದಲ್ಲಿ ಕಥೆಗಳು ಕಥೆಗಳಾಗಿ ಮಾತ್ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಸ್ಪೃಶ್ಯತೆಯ ಅನಾವರಣ- ಮುಲ್ಕ ರಾಜ ಆನಂದರ-Untouchable: ನಾಗರೇಖಾ ಗಾಂವಕರ

ಆತ ಭಾಕಾ. ಹದಿನೆಂಟರ ದಲಿತ ಯುವಕ. ಆತನ ಬಹುದಿನದ ಆಸೆ ಹಾಕಿ ಆಡುವುದು. ಅದಕ್ಕಾಗಿ ಹಾಕಿ ಕೋಲು ಅನಿವಾರ್ಯ. ಬಡವ ಭಾಕಾನಿಗೆ ಅದು ಕಷ್ಟಸಾಧ್ಯ. ಆದರೆ ಅದನ್ನು ಕರುಣಿಸುವ ಹವಾಲ್ದಾರ ಚರತ್‍ಸಿಂಗ್ ಆತನಿಗೆ ದೇವರಂತೆ ಕಾಣುತ್ತಾನೆ. ಸಾವಿರಾರು ವರ್ಷಗಳ ಕೋಟಲೆಗಳು ಕ್ಷಣಮಾತ್ರದಲ್ಲಿ ಕಣ್ಮರೆಯಾಗುತ್ತದೆ. ಬುಲಂದಶಹರನ ಹೊರವಲಯದಲ್ಲಿರುವ ಬಾವಿ. ಸವರ್ಣಿಯರಿಗೆ ಮಾತ್ರ ನೀರು ಸೇದುವ ಹಕ್ಕು. ಕೆಳಜಾತಿ ದಲಿತ ಹೆಣ್ಣುಮಕ್ಕಳು ಅವರು ನೀಡುವ ನೀರಿಗಾಗಿ ದಿನಗಟ್ಟಲೆ ಕಾಯಬೇಕು.ಸೋಹಿನಿ ಆಗಷ್ಟೇ ಪ್ರಾಯಕ್ಕೆ ಬಂದ ತರುಣಿ. ಭಾಕಾನ ಮುದ್ದಿನ ತಂಗಿ. ತನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬದಲಾವಣೆಯೊಂದಿಗೆ ಬದುಕು: ವೇದಾವತಿ. ಹೆಚ್. ಎಸ್.

ಅದೊಂದು ದಿನ ರಾಶಿ ಹಳೆಯ ಪುಸ್ತಕಗಳ ನಡುವೆ ಒಂದು ನೆನೆಪಿನ ಬುತ್ತಿಯಂತಿದ್ದ ಡೈರಿಯೊಂದು ನನ್ನ ಕೈಗೆ ಸಿಕ್ಕಿತ್ತು. ಆ ಡೈರಿಯು ೨೫ಸಂವಸ್ಸರವನ್ನು ಕಂಡು ಸಿಲ್ವರ್ದ ಜ್ಯೂಬಿಲಿಯ ಗಡಿಯನ್ನು ದಾಟಿತ್ತು. ಒಂದೊಂದೇ ಪುಟಗಳನ್ನು ತಿರುವುತ್ತಾ ಹೋದಂತೆ ಆ ಪುಟಗಳಲ್ಲಿ ನನ್ನ ಸ್ನೇಹಿತೆಯರ ಸುಂದರವಾದ ಒಂದೊಂದು ರೀತಿಯಲ್ಲಿರುವ ಹಸ್ತಾಕ್ಷರಗಳಿದ್ದವು. ಅದರಲ್ಲಿರುವ ಬರಹಗಳನ್ನು ಓದುತ್ತಾ ಒಂದೊಂದೇ ಪುಟಗಳನ್ನು ತಿರುವುತ್ತಾ ಹೋದಂತೆ ಡೈರಿಯ ಒಂದೊಂದು ಪುಟಗಳಲ್ಲೂ ವೈವಿಧ್ಯಮಯ ರೀತಿಯಲ್ಲಿ ನನ್ನ ಗುಣಗಾನವನ್ನು ಹೊಗಳಿ ಬರೆದ ಬರಹಗಳನ್ನು ನೋಡಿ ಒಮ್ಮೆ ಕಣ್ಣು ಮಂಜಾದರೆ, ಇನ್ನೊಮ್ಮೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಪಳೆಯುಳಿಕೆಗಳು ಅದೆಷ್ಟು ಕಾಲ ಕಣಿವೆಗಳಲಿನಿಶ್ಯಬ್ದವಾಗಿ ಬಿದ್ದಿವೆ ಅಸ್ಥಿಗಳು ಗತಕಾಲದ ರೋಚಕತೆಗೆ ಸಾಕ್ಷಿಯಾಗಿತಮ್ಮ ಇರುವಿಕೆಯ ಸ್ಪಷ್ಟ ಪಡಿಸಲು ಬದ್ದವಾಗಿಕಾದು ಕೂತಿವೆ ಪಳೆಯುಳಿಕೆಗಳಾಗಿ ಚರ್ಮ ಮಾಂಸ ಮಜ್ಜೆಗಳಿಲ್ಲಜೀವ ಆತ್ಮದ ಜೊತೆ ತಮಗಿಲ್ಲಆದರೂ ಇತಿಹಾಸವಾಗುವ ಆಸೆ ತೀರಿಲ್ಲ ಎಂದೋ ಯಾರೋ ಬರಬಹುದೆಂದುಹೊರಗೆಳೆದು ಪರಿಶೀಲಿಸಿ ದಾಖಲಿಸಬಹುದೆಂದುನಮ್ಮ ಕಥೆಗೂ ಜೀವ ತರಬಹುದೆಂದು ಆಸ್ತಿಗಳ ಆಸೆಗಷ್ಟೆ ಅಲ್ಲದೇಅಸ್ಥಿಗೂ ಬೆಲೆ‌ ಇರಬಹುದೆಂದುಸರಿದು ಹೋದ ತಮ್ಮನ್ನುಸಮಾಜದೆದುರು ತರಬಹುದೆಂದು ಆ ಕಲ್ಲು, ಬಂಡೆ, ಕೋಟೆ, ಅರಮನೆಯಂತೆಜೊತೆಗೆ ಸಿಕ್ಕ ನಿಧಿಗಳಂತೆ, ಬಳಸಿ ಎಸೆದ ಆಭರಣದಂತೆಹಿಂದೆ ಕೇಳಿದ ಪುರಾಣಗಳಂತೆ ತಮಗೂ ಬೆಲೆಯು ಸಿಗಬಹುದೆಂದುತಮ್ಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಾಣಿ ಪಕ್ಷಿಗಳಲ್ಲಿ ಸಂವಹನ: ಡಾ. ಯುವರಾಜ ಹೆಗಡೆ

ಆಧುನೀಕರಣದ ಕಪಿಮುಷ್ಠಿಗೆ ಸಿಕ್ಕು ನಲುಗಿದ ಪಶ್ಚಿಮ ಘಟ್ಟದ ಹೆಬ್ಬಾಗಿಲಿಗೆ ರಸ್ತೆ ಅಗಲೀಕರಣವೆಂಬ ನೆಪವೊಡ್ಡಿ ಟಿಂಬರ್ ಲಾಬಿಯವರು ಲಗ್ಗೆ ಇಟ್ಟಿದ್ದರು. ರಸ್ತೆಯ ಇಕ್ಕೆಲಗಳಲ್ಲಿಯ ಬೃಹದಾಕಾರದ ಮರಗಳು ನೆಲಕ್ಕುರುಳುತ್ತಾ ಇರುವಾಗ ಒಂದೂವರೆ ಶತಮಾನದಷ್ಟು ಹಳೆಯ ಮಾಮರದ ಸರದಿ ಬಂದೇ ಬಿಟ್ಟಿತು. ಮರದ ಬುಡಕ್ಕೆ ಮರ ಕಡಿಯುವ ಯಂತ್ರವನನ್ನಿಟ್ಟು ಗಿರ ಗಿರನೆ ಶಬ್ಧ ಮಾಡುತ್ತಿದ್ದಂತೆ ಮರದ ಪೊಟರೆಯಿಂದ ಹೊರಬಂದು ಗಿಳಿಗಳೆರಡು ಕಿಟಾರನೆ ಕೂಗುತ್ತಾ ಸಂಕಟಪಡುತ್ತಿದ್ದವು. ಕೆಲವೇ ನಿಮಿಷದಲ್ಲಿ ಮಾವಿನ ಮರ ದರೆಗುರುಳುತ್ತಿದ್ದಂತೆ ಪೊಟರೆಯಲ್ಲಿದ್ದ ಇನ್ನು ಪುಕ್ಕವೂ ಹುಟ್ಟದ 3 ಗಿಣಿ ಮರಿಗಳು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅರೆಹೊಟ್ಟೆಯಲ್ಲಿ ಬಳಲಿದ ಸಮಾರಂಭದ ಅತಿಥಿ: ಮಹಾಬಲ ಕೆ ಎನ್‌

ಸ್ನೇಹದ ದಾಕ್ಷಿಣ್ಯಕ್ಕೆ ಸಿಕ್ಕಿಬಿದ್ದು ಆಗಾಗ್ಗೆ(ವರ್ಷಕ್ಕೊಮ್ಮೆ ಅನ್ನಿ. ಮೈಸೂರಿನಲ್ಲಿ ದಿನಪೂರ್ತಿ ನಡೆಯುವ ಕಾರ್ಯಕ್ರಮವೊಂದಕ್ಕೆ ಬಹುತೇಕ ವೇದಿಕೆಯಲ್ಲಿ ಕುಳಿತ (ಮೂಕ)ಪ್ರೇಕ್ಷಕನಾಗಿ ಭಾಗವಹಿಸುವ ದೌರ್ಭಾಗ್ಯ ನನ್ನ ಪಾಲಿಗೆ ಬಿಟ್ಟೆನೆಂದರೂ ಬಿಡದೀ ಮಾಯೆ ಎನ್ನುವಂತೆ ಮೆಟ್ಟಿಕೊಂಡು ಬಂದಿದೆ. ಹತ್ತು ಗಂಟೆಗೆ ಆರಂಭವಾಗಿ ಒಮ್ಮೊಮ್ಮೆ ಸಾಯಂಕಾಲ ಏಳರವರೆಗೆ ನಡೆಯುವ ಸಾಹಿತ್ಯಕ, ಸಾಮಾಜಿಕ, ಸಾಸ್ಕೃತಿಕ ಮತ್ತು ವೈದ್ಯಕೀಯ(ಏಕೆಂದರೆ ನೇತ್ರ ವಾಗ್ದಾನ ಕಾರ್ಯಕ್ರಮವನ್ನೂ ಹಮ್ಮಿಕೊಂಡಿರುತ್ತಾರೆ) ಕಲಾಪ ಹೊಂದಿರುವ ವ್ಯಾಪಕ ಯೋಜನೆಯ ಕಾರ್ಯಕ್ರಮವಿದು. ಬೆಳಿಗ್ಗೆ ಸಭಾಕಲಾಪ ಉದ್ಘಾಟನೆ. ದೀಪ ಹಚ್ಚುವ ಕಾರ್ಯಕ್ರಮದಲ್ಲಿ ಗಣ್ಯರ ಕೈಯಿಂದ ಕೈಗೆ ರಿಲೇ ರೇಸಿನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಜು ಸನದಿ ಅವರ “ದುಗುಡದ ಕುಂಡ”: ಅಶ್ಫಾಕ್ ಪೀರಜಾದೆ.

ಯುವ ಕವಿ “ರಾಜು ಸನದಿ” ತಮ್ಮ ಚೊಚ್ಚಿಲ ಕವಿತಾ ಗುಚ್ಚ “ದುಗುಡದ ಕುಂಡ” ತುಂಬ ಪ್ರೀತಿಯಿಂದ ಕಳಿಸಿಕೊಟ್ಟು ದಿನಗಳೇ ಕಳೆದವು. ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧನ ಸಹಾಯ ಪಡೆದುಕೊಂಡು ಪ್ರಕಟವಾಗಿರುವ ಈ ಪುಸ್ತಕವನ್ನು ಕೆಲಸದ ಒತ್ತಡದಲ್ಲಿ ಓದಿ ಪ್ರತಿಕ್ರಿಯಿಸಲು ಆಗಿರಲಿಲ್ಲ. ಕೆಲಸದ ನಡುವೆಯೇ ಒಂದಿಷ್ಟು ಬಿಡುವು ಮಾಡಿಕೊಂಡು ದುಗುಡದ ಕುಂಡ ಕೈಗೆತ್ತಿಕೊಂಡು ಈಗಷ್ಟೇ ಕೆಂಡದ ಕಾವು ಅನುಭವಿಸಿದ್ದೇನೆ. ಇಲ್ಲಿ ದಾಖಲಾದ ಪ್ರತಿ ಪದವೂ ಕಿಡಿಗಳಾಗಿ, ಪದಗಳು ಕೆಂಡದುಂಡೆಗಳಾಗಿ, ಮತ್ತು ಕವಿತೆಗಳು ಜ್ವಾಲಾಮುಖಿಯಾಗಿ ಹೊರಹೊಮ್ಮಿವೆ ಎಂದು ಹೇಳಬಹುದು. ಉತ್ತಮವಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಭಾವತಿ ದೇಸಾಯಿಯವರ ಗಜಲ್‌ ಸಂಕಲನ “ಭಾವಗಂಧಿ”: ಶಿವಕುಮಾರ ಮೋ ಕರನಂದಿ

ಕೃತಿ: ಭಾವಗಂಧಿ (ಗಜಲ್ ಸಂಕಲನ)ಲೇಖಕಿ: ಶ್ರೀಮತಿ ಪ್ರಭಾವತಿ ದೇಸಾಯಿಪ್ರಕಾಶನ: ಗಗನ ಪ್ರಕಾಶನ ವಿಜಯಪುರ ಸುಕೋಮಲವಾದ ಭಾವನೆಗಳ ಅಭಿವ್ಯಕ್ತಿಯೇ ‘ಗಜಲ್’ ಅರಬ್ಬಿ ಭಾಷೆಯ ಕಾವ್ಯರೂಪವಾದ ಇದು ಉರ್ದುವಿನಲ್ಲಿ ಅತ್ಯಂತ ಜನಪ್ರಿಯವಾದ ಕಾವ್ಯಪ್ರಕಾರವಿದು. ಉರ್ದುವಿನಲ್ಲಿ ಗಜಲ್ ಗೆ ಕಾವ್ಯರಾಣಿ ಎಂದು ಕರೆಯುತ್ತಾರೆ. ಕನ್ನಡ ಮಣ್ಣಿನೊಂದಿಗೆ ಬೆರೆತು ಸಮೃದ್ಧವಾಗಿ ಬೆಳೆಯುತ್ತಿರುವ ಗಜಲ್ ಕಾವ್ಯ ಪ್ರಕಾರವೂ ಹೈದ್ರಾಬಾದ್ ಕರ್ನಾಟಕದ ಶಾಂತರಸರಿಂದ ಕನ್ನಡಕ್ಕೆ ಪರಿಚಿತವಾಯಿತು, ಶಾಂತರರಸರು, ಎಚ್ ಎಸ್ ಮುಕ್ತಾಯಕ್ಕ, ಬಸವರಾಜ ಸಬರದ, ದಸ್ತಗಿರಸಾಬ್ ದಿನ್ನಿ, ಕಾಶಿನಾಥ ಅಂಬಲಿಗೆ, ಅಲ್ಲಾಗಿರಿರಾಜ್, ಗಿರೀಶ್ ಜಕಾಪುರೆ, ದೊಡ್ಡಕಲ್ಲಹಳ್ಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದರ ಜನ್ಮದಿನ: ಡಾ. ಅವರೆಕಾಡು ವಿಜಯ ಕುಮಾರ್

ಸ್ವಾಮಿ ವಿವೇಕಾನಂದರು 1863 ಜನವರಿ 12 ರಂದು ಕಲ್ಕತ್ತಾ ನಗರದಲ್ಲಿ ಜನಿಸಿದರು. ನರೇಂದ್ರನಾಥ ದತ್ತ ಎಂಬುದು ಇವರ ಹುಟ್ಟಿದ ಹೆಸರು. ಕಾಲಕ್ರಮೇಣ ಅದು ಬದಲಾಗಿ ವಿವೇಕನಂದವಾಯಿತು. ತಂದೆ ವಿಶ್ವನಾಥ ದತ್ತ ಇವರು ಕಲ್ಕತ್ತದ ಉಚ್ಚನ್ಯಾಯಾಲಯದಲ್ಲಿ ಅಟಾರ್ನಿಯಾಗಿ ಸೇವೆಸಲ್ಲಿಸುತ್ತಿದ್ದರು. ತಾಯಿ ಭುವನೇಶ್ವರಿ ದೇವಿ. ಅಜ್ಜ ದುರ್ಗಾ ಚರಣ್ ದತ್ತ, ಇವರು ಸಂಸ್ಕೃತ ಮತ್ತು ಪರ್ಷಿಯನ್ ಭಾಷೆಯ ಸಾಹಿತಿಯಾಗಿದ್ದರು. ತನ್ನ 25ನೇ ವಯಸ್ಸಿನಲ್ಲಿ ಸನ್ಯಾಸತ್ವವನ್ನು ಸ್ವೀಕರಿಸಿದರು. ಕೊಲ್ಕತ್ತ ನಗರದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಶಿಕ್ಷಣವನ್ನು ಪಡೆದರು. 1884 … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 59 & 60): ಎಂ. ಜವರಾಜ್

-೫೯-ರಾತ್ರ ಹತ್ತಾಗಿತ್ತೇನೋಊರಲ್ಲಿ ಎದ್ದಿರ ಗಲಾಟಿಈ ಅಯ್ನೋರ್ ಗಮನುಕ್ಕ ಬಂತು ಈ ಗಲಾಟಿ ಯಾಕ ಅನ್ತಅಯ್ನೋರ್ ತಲ ಕೊರಿತಿತ್ತೇನಾಅಸ್ಟೊತ್ಗ ಕುಲೊಸ್ತರು ಬಂದ್ರುಈ ಅಯ್ನೋರು ಜಗುಲಿ ಅಂಚ್ಗ ಕುಂತಿದ್ರು ‘ಅಯ್ನೋಅ ನೀವು ಚೇರ್ಮನ್ ಆದ್ರಿಆದ್ರ ಊರ್ಲಿ ಪುಂಡೈಕ ಹೆಚ್ಚವಊರ್ಲಿ ಚನೈನಬ್ಬ ಮಾಡ್ದಾಗಇದ್ದ ಒಗ್ಗಟ್ಟು ಹೊಂದಾವಣಿಈಗ ಕಾಣ್ದುಒಂದಲ್ಲ ಒಂದು ಗಲಾಟಿಕುಲ ಸೇರ್ಸಿಏನಾರ ಬಿಗಿ ಭದ್ರ ಮಾಡ್ಬೇಕಲ್ಲಾ..’ಅನ್ತ ಕುಲೊಸ್ತರು ವರದಿ ಒಪ್ಸುದ್ರು ಈ ಅಯ್ನೋರು‘ಸುಮ್ ಸುಮ್ನೆ ಈ ಗಲಾಟಿ ಯಾಕ..ಏನನ್ತ ಕುಲ ಮಾಡ್ದರಿಯಾರ್ ಮ್ಯಾಲ ಅನ್ತ ಹೇಳ್ದರಿ’ ಅನ್ತ ಕೇಳುದ್ರು ‘ಅಯ್ನೋರಾ ಕಾಲುನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೈತ್ರಿ ಪ್ರಕಾಶನವು ಏರ್ಪಡಿಸಿರುವ ಮೈತ್ರಿಪುಸ್ತಕ-2021 ಸ್ಫರ್ಧೆ

ಎಲ್ಲರಿಗೂ ಹೊಸವರ್ಷದ ಶುಭಾಷಯಗಳು.ಮೈತ್ರಿಪುಸ್ತಕ -2021 ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದ್ದೇವೆ.ಆಸಕ್ತರು ತಮ್ಮ 10 ಕತೆಗಳನ್ನು ಕೆಳಕಂಡ ವಿಳಾಸಕ್ಕೆ ಕಳಿಸಿಕೊಡಬೇಕು.ಆಯ್ಕೆಯಾದ ಹಸ್ತಪ್ರತಿಗೆ 7000 ಬಹುಮಾನ, ಫಲಕ ಹಾಗೂ ಪುಸ್ತಕ ಪ್ರಕಟಿಸಲಾಗುತ್ತದೆ. ಈ ಕೆಳಗಿನ ಆಂಶಗಳನ್ನು ಗಮನಿಸಿ.1) ಇದುವರೆಗೂ ಒಂದೂ ಕತಾಸಂಕಲನ ಪ್ರಕಟಿಸದ ಕತೆಗಾರರಿಗೆ ಈ ಸ್ಫರ್ಧೆಯಲ್ಲಿ ಭಾಗವಹಿಸುವ ಅವಕಾಶವಿದೆ. ಸಾಹಿತ್ಯದ ಇತರೇ ಪ್ರಕಾರಗಳಲ್ಲಿಒಂದೆರಡು ಪುಸ್ತಕ ಪ್ರಕಟವಾಗಿದವರೂ ಸ್ಫರ್ಧೆಯಲ್ಲಿ ಭಾಗವಹಿಸಬಹುದು.2) ಕತೆಗಳನ್ನು ಕಡ್ಡಾಯವಾಗಿ ನುಡಿ./ಯುನಿಕೋಡ ಮೂಲಕ ಟಂಕಿಸಿ ಪ್ರಿಂಟರೂಪದಲ್ಲಿ ಕಳಿಸಬೇಕು. ಇಮೇಲ ಮೂಲಕ ಕಳಿಸಿದ ಕತೆಗಳನ್ನು ಸ್ವೀಕರಿಸುವುದಿಲ್ಲ.3) ಹಸ್ತಪ್ರತಿಯಲ್ಲಿ ಎಲ್ಲಿಯೂ ಲೇಖಕರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಹನಿಗಳು.. ನಗಲು ಹೇಳಿದಬುದ್ಧಆದರೆಮಾನವ ನಗದು ಗಾಗಿನಗುವುದನ್ನೇಮರೆತಬುದ್ಧಮೌನನಾದ… ನಾನು ಅಹಂಕಾರದಲ್ಲಿಶಾಂತಿ ನೆಮ್ಮದಿಗಾಗಿಊರೂರುಅಲೆದೆಶಾಂತಿ ತನ್ನೊಳಗೆ ಇದೆಎಂದು ತಿಳಿದಾಗಅವನ್ನಲ್ಲಿನ‘ನಾನು’ ಚಿರನಿದ್ರೆಗೆಜಾರಿತ್ತು… ನಾಕಷ್ಟವೆಂದುಬುದ್ಧನೆಡೆಗೆ ಹೋದೆಬುದ್ಧನ ನಗುಕಂಡನನ್ನ ಕಷ್ಟಗಳುನನ್ನಲ್ಲಿಯೇಲೀನವಾದವು… ಬುದ್ಧನೆಂಬ ಬೆಳಕುಇಲ್ಲಿ ಹಚ್ಚಿಟ್ಟ ದೀಪದ ಪ್ರಭೆಬೆಳಕ ನಡುವೆದುಃಖಕಷ್ಟಅಹಿಂಸೆಅಶಾಂತಿಅಸುನಿಗಿದ್ದವು… ಜಗತ್ತಿನ್ನು ನಿದ್ದೆಯಿಂದ ಎಬ್ಬಿಸಲುನಡುರಾತ್ರಿ ನಿದ್ದೆತೊರೆದ ಬುದ್ದುಜಗತ್ತಿನ ನಿದ್ದೆಯಿಂದ ಏಳುವಯಾವ ಪ್ರಯತ್ನಮಾಡಲಿಲ್ಲ.. ನಗುವಿನ ಶಾಂತಿಯಮಹತ್ವ ಹೇಳಿದಬುದ್ದನಗರದ ಗದ್ದಲದನಡುವೆಬುದ್ದ ನಗುವಿತ್ತುಯಾರ ಮನಸ್ಸಿನಲ್ಲಿನಗುವಿನ ಕುರುಹು ಇರಲಿಲ್ಲ.. ಬುದ್ದನಪ್ರತಿಮೆಗೆಗೆದ್ದಲು ಕಟ್ಟಿರಬಹುದುಪ್ರತಿ ಎದೆಯಲ್ಲಿ ನೆಲೆಸಿರುವಬುದ್ಧನವಿಚಾರಗಳಿಗಲ್ಲ.. -ವೃಶ್ಚಿಕ ಮುನಿ.. ಶಾಲ್ಮಲೆಯ ಸ್ವಗತ ಧಾರವಾಡದ ಸೋಮೇಶ್ವರ ತಾಣದಿಹುಟ್ಟುವೆ ನಾನು ಚಿಕ್ಕ ಚಿಲುಮೆಯ ರೂಪದಿಶಾಲ್ಮಲಾ ಎಂದೆನುವ ಸುರನದಿಯು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಸಮಾನತೆಯ ಹರಿಕಾರ” ಕುವೆಂಪು: ಡಾ. ಅವರೆಕಾಡು ವಿಜಯ ಕುಮಾರ್

ಪ್ರತಿಯೊಂದು ಮಗುವೂ ಹುಟ್ಟುತ್ತಲೇವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪಮಾನವ’ನನ್ನಾಗಿ ಮಾಡುತ್ತೇವೆ.ಮತ್ತೆ ಅದನ್ನು ‘ವಿಶ್ವಮಾನವ’ನನ್ನಾಗಿ ಮಾಡುವುದೇ ಶಿಕ್ಷಣದ ಕರ್ತವ್ಯವಾಗಬೇಕು. -ಕುವೆಂಪು ಪ್ರಕೃತಿಯ ತಾಣವಾದ ಮಲೆನಾಡಿನ ಅಪ್ರತಿಷ್ಠಿತ ಮನೆತನ ಒಂದರಲ್ಲಿ 1904, ಡಿಸೆಂಬರ್ 29ರಂದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆ ಗ್ರಾಮದಲ್ಲಿ ಶ್ರೀ ವೆಂಕಟಪ್ಪ ಮತ್ತು ಶ್ರೀಮತಿ ಸೀತಮ್ಮ ಅವರ ಬಾಳಿನ ಬೆಳಕಾಗಿ ಪುಟ್ಟಪ್ಪನವರು ಜನಿಸಿದರು. ಶಿವಮೊಗ್ಗ ಜಿಲ್ಲೆಯ ಕುಪ್ಪಳ್ಳಿ ಗ್ರಾಮದಲ್ಲಿ ಬೆಳೆದವರು ವಿಶ್ವಮಾನವರಾಗಿ ವಿಜೃಂಭಿಸಿ ಇತಿಹಾಸ ಪುಟದ ಸ್ವರ್ಣ ಅಕ್ಷರಗಳಲ್ಲಿ ಸೇರ್ಪಡೆಯಾದರು. ಆಗಿನ ಕಾಲದ ಬಡತನ, ದಾರಿದ್ರ್ಯ, ಅಸಾಯಕತೆ ಇವುಗಳನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಬಯಲುಡುಗೆಯ ಬೊಂತಾ – ಕತ್ತಲ ಗರ್ಭದ ಬೇಗೆಯಲಿ ಬೇಯುವ ಸಾವಿರದ ಒಂದು ಚಿತ್ರಕಾವ್ಯ”: ಎಂ.ಜವರಾಜ್

“ಸಂಸಾರವೆಂಬುದೊಂದು ಗಾಳಿಯ ಸೊಡರು,ಸಿರಿಯೆಂಬುದೊಂದು ಸಂತೆಯ ಮಂದಿ, ಕಂಡಯ್ಯ!ಇದ ನೆಚ್ಚಿ ಕೆಡಬೇಡ ಸಿರಿಯೆಂಬುದ!ಮರೆಯದೆ ಪೂಜಿಸುಆಚಾರವೇ ಸ್ವರ್ಗ, ಅನಾಚಾರವೇ ನರಕ,ನೀವೇ ಪ್ರಮಾಣು ಕೂಡಲಸಂಗಮದೇವ”(-ಬಸವಣ್ಣ) ಲೇಖಕ, ತಾನು ಅನುಭಿಸಿದ ನೋವು, ಯಾತನೆ, ತುಮುಲ, ರಂಜನೆ, ಕಾಮ, ಭೋಗ, ಶೀಲ, ಶೋಷಣೆ, ಚಳುವಳಿ, ಹೋರಾಟ, ಧರ್ಮ, ದೇವರು, ಜಾತಿ, ಮತ, ಪಂಥ, ಕುರಿತಾದ ತನ್ನೊಳಗಿನ ಅನುಭವವನ್ನು ಹೊಸದೇ ಎನುವ ಸೃಜನಶೀಲ ಕತೆ ಕವಿತೆ ಕಾದಂಬರಿ ಮತ್ತು ಮಹಾಕಾವ್ಯವಾಗಿ ಚಿತ್ರಿಸಿದ್ದಿದೆ. ಇದರ ಆಚೆಗು ಲೇಖಕನೊಬ್ಬನ ಮೂಲಕ ತಾನು ಹುಟ್ಟುವ ಮುನ್ನಿನ – ಈಗಾಗಲೇ ನಡೆದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂದು ನಾಯಿಮರಿಗಾಗಿ….: ಜೆ.ವಿ.ಕಾರ್ಲೊ

ಅಂದು ಸಂಜೆ ಲಂಡನಿನಲ್ಲಿ ಮೈ ಕೊರೆಯುವಂತ ಚಳಿ. ಬಸ್ಸಿನೊಳಗೆ ಹಲ್ಲು ಕಚ್ಚಿಕೊಂಡು ಮುದುಡಿ ಕುಳಿತಿದ್ದ ಪ್ರಯಾಣಿಕರಿಗೆ ಯಾರೋ ಎಡೆಬಿಡದೆ ಚೂರಿಯಿಂದ ಕೊಚ್ಚುತ್ತಿರುವಂತ ಅನುಭವವಾಗುತ್ತಿತ್ತು. ಸದ್ದು ಮಾಡುತ್ತಾ ರೊಂಯ್ಯನೆ ಬಸ್ಸಿನೊಳಗೆ ನುಗ್ಗುತ್ತಿದ್ದ ಗಾಳಿಯಿಂದ ರಕ್ಷಣೆ ಪಡೆದುಕೊಳ್ಳಲು ಜನ ಹರಸಾಹಸ ಪಡುತ್ತಿದ್ದರು. ಬಸ್ಸು ಮುಂದಿನ ಸ್ಟಾಪಿನಲ್ಲಿ ನಿಂತಾಗ ಇಬ್ಬರು ಮಹಿಳೆಯರು, ಮತ್ತೊಬ್ಬ ಪುರುಷ ಬಸ್ಸು ಹತ್ತಿ ಖಾಲಿ ಇದ್ದ ಸೀಟುಗಳಲ್ಲಿ ಆಸೀನರಾದರು, ಮಹಿಳೆಯರಲ್ಲಿ ಒಬ್ಬಾಕೆಗೆ ಅಷ್ಟೇನೂ ವಯಸ್ಸಾಗಿರಲಿಲ್ಲ. ಆಕೆ ಸೀಲ್ ಚರ್ಮದ ಕೋಟು ಧರಿಸಿದ್ದಳು. ಅಂದಿನ ಮೇಲ್ಮಧ್ಯಮ ವರ್ಗದ ಸ್ತ್ರೀಯರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಂತ ಪುರಾಣ: ಸಂಗೀತ ರವಿರಾಜ್

ಹಾಲು ಕುಡಿಯಲೊಲ್ಲದ ಮಗಳಿಗೆ ಪ್ರೇರೇಪಿಸಲು ಚಂದ್ರನ ತೋರಿಸಿ ಗಣಪತಿಯ ದಂತ ಮುರಿದದ್ದು ಹೇಗೆ ಗೊತ್ತಾ ಎಂಬ ಕತೆಯನ್ನು ಪ್ರಾರಂಭಿಸಿದೆ. ಆನೆ ತಲೆ ಜೋಡಿಸಿದ್ದನ್ನು ನೋಡಿ ನಕ್ಕ ಚಂದ್ರನಿಗೆ ಗಣಪತಿ ಸಿಟ್ಟಿನಿಂದ ತನ್ನ ಮುಖದ ದಂತವನ್ನು ತುಂಡರಿಸಿ ಎಸೆದ ಎಂದು ನನಗೆ ತಿಳಿದ ಗಣಪತಿಯ ‘ ದಂತ’ ಕತೆಯನ್ನು ಹೇಳಿ ಲೋಟ ಖಾಲಿ ಮಾಡಿಸಿದೆ. ಆದರೆ ಈಗ ನಾನು ಮನುಷ್ಯರ ದಂತದ ಕುರಿತ ಸ್ವಾರಸ್ಯಕರ ಕತೆಗಳನ್ನು ಹೇಳಹೊರಟಿರುವೆ. ದೇಹದ ಯಾವ ಅಂಗಕ್ಕು ಚಿಕ್ಕ ಗಾಯವಾದರು ಆ ದಿನ ಏನೋ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕತ್ತಲ ಗುಮ್ಮ: ಶೀಲಾ ಗೌಡ

ಕಾಲೇಜ್, ಟುಟೋರಿಯಲ್ಸ್, ಟೆಸ್ಟ್, ಪರೀಕ್ಷೆ ಬರೀ ಇದೇ ಆಗಿದೆ ನಮ್ಮ ದೈನಂದಿನ ಕೆಲಸ. ಬೇಜಾರು ಮಾಡಿಕೊಳ್ಳೋ ಹಾಗಿಲ್ಲ, ಅಕಾಸ್ಮಾತ್ತಾದರೂ ಹೇಳುವ ಹಾಗಿಲ್ಲ. ಅಪ್ಪಿ ತಪ್ಪಿ ಹೇಳಿದರೆ ಕೇಳಿದವರ ಪುಕಸಟ್ಟೆ ಭೋದನೆ ಜೊತೆಗೆ ನಗು ಮೊಗದಿಂದ ಆಲಿಸುವ ಶಿಕ್ಷೆ. ಒಟ್ಟಿನಲ್ಲಿ ಓದೋ, ಮಾರ್ಕ್ಸ್ ತೆಗೆಯೋ ರೇಸಿನಲ್ಲಿ ಓಡ್ತಿದಿವಿ. ಹೀಗೆ ತಮ್ಮ ಬೇಸರವನ್ನು ಹಂಚಿಕೊಳ್ಳುತ್ತ ಟುಟೋರಿಯಲ್ಸ ಕಡೆ ಹೆಜ್ಜೆ ಹಾಕುತಿದ್ದರು ಐವರು ಗೆಳೆಯರು. ಅರವಿಂದನ ಹಾಗೆ ನಾವೆಲ್ಲ ಡಿಪ್ಲೋಮ ಮಾಡಬೇಕಿತ್ತು ಹೀಗೆ ಒಂದೆ ಸರಿ ಟೆನ್ನಷನ್ ಇರ್ತಿರ್ಲಿಲ್ಲ ಎಂದ ಸುನಿಲನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಷ್ಟವೇ ದೇವರು………?: ದೀಪಾ ಜಿ.ಎಸ್

ನಮ್ಮ ಜೀವನದಲ್ಲಿ ಕಷ್ಟ ಬಂದಾಗ ಮಾತ್ರ ನಾವುಗಳು ಯಾಕೆ ದೇವರನ್ನ ನೆನಪು ಮಾಡ್ಕೊಂತೀವಿ . ಅದೇ ನಾವು ಸಂತೋಷದಿಂದ ಇದ್ದಾಗ ದೇವರನ್ನ ನೆನಪು ಮಾಡ್ಕೊಳ್ಳೊದೇ ಇಲ್ಲ ಅಲ್ವಾ. ಜೀವನದಲ್ಲಿ ಕಷ್ಟಗಳು ಬಂದಾಗ ನಾವ್ ಯಾಕೆ ತಲೆ ಬಾಗಬೇಕು. ನಾವ್ ಯಾಕೆ ಕಷ್ಟಗಳಿಗೆ ಹೆದರ್ಬೇಕು……? ನಾವ್ ಯಾಕೆ ಕಷ್ಟಗಳಿಗೆ ಅಂಜಬೇಕು…..? ಕಷ್ಟಗಳು ಬಂದಾಗ ನಾವ್ ಯಾಕೆ ಹೆದರಿ ಕೂತ್ಕೋಬೇಕು….? ನಾವ್ ಯಾಕೆ ಅಳ್ಬೇಕು….? ಹೀಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಾಗ ಉತ್ತರ ನಮ್ಮಲ್ಲೇ ಇದೆ ಅಲ್ವ. ನಮ್ಮಲ್ಲೂ ಕೂಡ ಆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಿಮಮಾಂದ ಅಧಿಚೀಯ Americanah: ನಾಗರೇಖಾ ಗಾಂವಕರ

“A white boy and a black girl who grow up in the same working class town in England can get together and race is secondary, but in America even if the white boy and black girl grow up in the same neighbourhood , race would be primary” ಇದು ಆಫ್ರಿಕಾದ ಸಮಕಾಲೀನ ಸಾಹಿತ್ಯ ಲೋಕದ ಶ್ರೇಷ್ಠ ಪ್ರತಿಭೆ ಚಿಮಮಾಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 57 & 58): ಎಂ. ಜವರಾಜ್

-೫೭-ತಿಥಿ ಆಗಿ ತಿಂಗ್ಳಾಯ್ತುಈ ಅಯ್ನೋರು ಅಂದ್ಕೊಂಡಂತೆಪಂಚಾಯ್ತಿ ಚೇರ್ಮನ್ರು ಆದ್ರುಈ ನೆಪ ಮುಂದಿಟ್ಕಂಡುಸುತ್ಮುತ್ಲ ಮುಂದಾಳ್ನೆಲ್ಲತ್ವಾಟ್ಗ ಬರೇಳ್ಕಂಡಿದ್ರು ರಾತ್ರ ಆಗಿತ್ತುಆ ಆಳು ಎಲ್ಲಯವಸ್ತಿ ಮಾಡಿದ್ನಎತ್ತಗ ತಿರಿಕಂಡ್ರು ಬಾಡೆಬಾಡುನ್ ಗಮಲೆಯಾರ್ ಕೈಲ್ನೋಡು ಹೆಂಡುದ್ ಬಾಟ್ಲೆಹೆಂಡುದ್ ವಾಸ್ನೆನೆ ಈಗ ಪಂಚಾಯ್ತಿ ಆಳ್ತನ ಎಲ್ಲಈ ಅಯ್ನೋರ್ ಕೈಲೆ ಆಗ ಆ ಚೆಂಗುಲಿಸೋದುರ್ ಮಾವ ಬಂದ ಅನ್ಸುತ್ತಈ ಅಯ್ನೋರು‘ಹ್ಞು ಏನಾ ಇಲ್ಲಿಗಂಟ ಬಂದಿದೈ’ ಅಂದ್ರು‘ಅಯ್ನೋರಾ ಕೇಸು ಏನಾಯ್ತು’‘ನೀನು ಮೈಸೂರ್ ಸಿಟಿಲಿರಂವಕೋರ್ಟು ಲಾಯಿರಿಕಾನೂನ್ ಗೊತ್ತಿರಂವದುಡ್ಡುಕಾಸು ತುಂಬಿರಂವನೀನ್ತಾನೆ ಕಂಪ್ಲೆಂಟ ಕೊಡ್ಸಿಆ ಪರ್ಶುನ ಎಳಿಸ್ದಂವಕಾಲ್ನು ಕಾಲ್ನೆಡ್ತಿನು ಗಲಾಟಿ ಮಾಡಕರಂಪ ರಾದ್ದಾಂತುಕ್ಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ನನ್ನಲ್ಲಿಷ್ಟು ಕನಸುಗಳಿವೆಮಾರಾಟಕ್ಕಲ್ಲ,ಎಲ್ಲರೆದೆಯ ಬರಡು ಭೂಮಿಯಲ್ಲಿಹೂಳುತ್ತೇನೆ,ಹೊಸ ನಾಳೆಗಳನ್ನೇ ಚಿಗುರಿಸುತ್ತೇನೆ ! ನನ್ನೀ ಕನಸುಗಳು-ಬುದ್ದನ ನಗೆಯ ನೆರಳಲ್ಲಿಬೆಳೆದು ಬಂದಂತಹವು,ಊರಾಚೆಯ ಒಲೆಯ – ಊರೊಳಗೆನೆಮ್ಮದಿಯ ನಗೆ ಬೀರುವಕನಸು ಕಾಣುತ್ತದೆ, ನನ್ನೀ ಕನಸು ! ಮೈಲು ದೂರದಲ್ಲಿಯ ಬೆಟ್ಟದ ಮ್ಯಾಲಿನದೇವದಾಸಿಯೂ ಅಂಗಲಾಚುತ್ತಾಳೆ-ನನ್ನೀ ಕನಸುಗಳಿಗಾಗಿ !ಮುಟ್ಟಾದ ಪುಟ್ಟ ತಂಗಿಯತುಂಬಿ ನಿಂತ ಕಣ್ಣಾಲೆಯೂ ಕೈಚಾಚಿದೆ-ನನ್ನ ಕನಸುಗಳತ್ತ ! ಸುಸ್ತಾಗಿದ್ದ ‘ಗಸ್ತಿ’ಯೂ ಗಸ್ತು ತಿರುಗಲು-ಅಣಿಯಾಗುತಿದ್ದಾನೆ , ಮತ್ತೇನಂಬಿಕೆಯಿದೆ ನನ್ನೀ ಕನಸುಗಳಲ್ಲಿ,ಅಪ್ಪ ಮುಟ್ಟಿದ ನೀರು ಮೈಲಿಗೆಯೆಂದದೊರೆಗಳಿಂದುಕನಸುಗಳ ಕಂಡು – ದಡಬಡಿಸುತ್ತಿದ್ದಾರೆ ! ಇಂದು ಬದುಕಿದ್ದರೆ -ನನ್ನಅಂಬೇಡ್ಕರ್ ?ನನ್ನೀ ಕನಸುಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಲ: ಅನಂತ ರಮೇಶ್

1 ಹದಿನೈದು ವರ್ಷಗಳಿಂದ ಅಭ್ಯಾಸವಾಗಿ ಹೋಗಿದೆ. ಲತಾಳ ಅದೇ ವ್ಯಂಗ್ಯದ ಮಾತು. “ಸಾಹೇಬರ ಸವಾರಿ ಈವತ್ತು ಯಾವ ಕಡೆಗೆ?”. ನಾನು ಉತ್ತರಿಸುವ ಗೊಡವೆಗೆ ಹೋಗುವುದಿಲ್ಲ. ತಿಂಡಿಯೊಟ್ಟಿಗೆ ಕಾಫಿ ಲೋಟ ಟೇಬಲ್‌ಮೇಲೆ ಬಡಿಯುತ್ತಾಳೆ. ಸಾವಕಾಶ ತಿಂದು ಹೊರಡುತ್ತೇನೆ. ಆ ಸಮಯ ಮೀರುವುದಿಲ್ಲ. ಈಗ ಬೆಳಗಿನ 9:30. ಸಾಮಾನ್ಯವಾಗಿ ಎಲ್ಲರೂ ಆಫೀಸಿಗೆ ಹೊರಡುವ ಸಮಯ! ಹೊರಗೆ ರಸ್ತೆಯಲ್ಲಿ ನಡೆಯುವಾಗ, ಲತಾಳ ಬಗೆಗೆ ಕನಿಕರ ಅನ್ನಿಸುತ್ತೆ. ಅವಳಾದರೂ ಏನು ಮಾಡಿಯಾಳು? ನನಗಂತೂ ತಿಂಗಳಿಗೊಮ್ಮೆ ಸಂಬಳ ತರುವ ಕೆಲಸವಿಲ್ಲ. ಯಾವುದಾದರೂ ಮನೆ ಬಾಡಿಗೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಳಾ: ಗಿರಿಜಾ ಜ್ಞಾನಸುಂದರ್‌

“ಪಿಂಕಿ, ಬಬ್ಲೂ ಬನ್ನಿ ಮನೆಗೆ… ತುಂಬ ಹೊತ್ತಾಗಿದೆ.. ಆಶಾ ಆಂಟಿ ಮನೆಗೆ ಬಂದ್ರೆ ನಿಮಗೆ ಏನು ಬೇಡ” ಅಂತ ತಮ್ಮ ಮಕ್ಕಳನ್ನು ಕರೆದುಕೊಂಡು ಹೋದಳು ಪಿಂಕು ಬಬ್ಲೂ ಅಮ್ಮ. ಆಗಲೇ ರಾತ್ರಿ ಎಂಟು ಗಂಟೆ ಆಗಿದೆ… ಇನ್ನೊಂದು ಹತ್ತು ನಿಮಿಷಕ್ಕೆ ಇನ್ನು ಆಶಾ ಆಂಟಿ ಮನೆಯಲ್ಲಿ ಉಳಿದುಕೊಂಡಿದ್ದ ೫- ೬ ಮಕ್ಕಳನ್ನೆಲ್ಲ ಅವರವರ ಮನೆಯವರು ಕರೆದುಕೊಂಡು ಹೋದರು. ಆಶಾ ಎಲ್ಲ ಮಕ್ಕಳು ಹೋದಮೇಲೆ ಸಪ್ಪೆ ಮುಖ ಹಾಕಿಕೊಂಡು ಕುಳಿತಿದ್ದಳು. ಮನೆಯೆಲ್ಲ ಚಾಕಲೇಟ್ ಪೇಪರ್ಸ್, ತಿಂಡಿ ತಿನಿಸುಗಳನ್ನು ಚೆಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಕೊನೆಯ ಭಾಗ): ನಾರಾಯಣ ಎಮ್ ಎಸ್

ಅಯ್ಯರೊಂದಿಗೆ ಮಾತಾಡಿದ್ದು ಎಲ್ಲರಿಗೂ ಸಮಾಧಾನ ತಂದಿತ್ತು. ತನಿಯಾವರ್ತನದ ನಂತರ ಸಿಂಧು ಭೈರವಿ, ತಿಲಂಗ್ ಮತ್ತು ಶಿವರಂಜನಿಯಲ್ಲಿ ಹಾಡಿದ ದೇವರನಾಮಗಳು ಮುದ ಕೊಟ್ಟವು. ಕಛೇರಿ ಕೊನೆಯ ಭಾಗ ತಲುಪಿದ್ದರಿಂದ ಮೈಕು ಹಿಡಿದ ಮೋಹನ ವೇದಿಕೆ ಹತ್ತಿದ. ನೇದನೂರಿಯವರಿಂದ ಪ್ರಾರಂಭಿಸಿ, ಒಬ್ಬೊಬ್ಬರಾಗಿ ಪಿಟೀಲು, ಮೃದಂಗ, ಖಂಜಿರ ಮತ್ತು ತಂಬೂರಿಯಲ್ಲಿ ಸಾಥ್ ನೀಡಿದ ಪ್ರತಿಯೊಬ್ಬ ಕಲಾವಿದರ ಬಗ್ಗೆಯೂ ಒಂದೆರಡು ಒಳ್ಳೆಯ ಮಾತನಾಡಿ ಧನ್ಯವಾದ ಅರ್ಪಿಸಿದ. ಒಬ್ಬೊಬ್ಬರಿಗೂ ಧನ್ಯವಾದ ಹೇಳಿದ ಬೆನ್ನಲ್ಲೇ ಕ್ರಮವಾಗಿ ಆಯಾ ಕಲಾವಿದರಿಗೆ ಕೃಷ್ಣಯ್ಯರ್ ಖುದ್ದು ತಮ್ಮ ಹಸ್ತದಿಂದ ಸೂಕ್ತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಾರುವ ಹಂಸೆಯ ಕಾವ್ಯಗುಣ: ವಿನಯಚಂದ್ರ

“ಹಾರುವ ಹಂಸೆ” ಇತ್ತೀಚಿನ ದಿನಗಳಲ್ಲಿ ನಾನು ಓದಿ ಮೆಚ್ಚಿದ, ಇತ್ತೀಚಿನ ತಲೆಮಾರಿನವರು ರಚಿಸಿದ ಕೃತಿಗಳಲ್ಲಿ ಬಹಳ ಉತ್ತಮವಾದ ಕೃತಿ ಎಂದು ನಿಸ್ಸಂಶಯವಾಗಿ ಹೇಳಿಬಿಡಬಹುದು. ಇದು ಚಾಮರಾಜನಗರದ ಆರ್ ದಿಲೀಪ್ ಕುಮಾರ್ ರವರ ಕವಿತೆಗಳ ಸಂಕಲನ. ಗಂಭೀರವಾದ ಸಾಹಿತ್ಯ ವಿದ್ಯಾರ್ಥಿಯೊಬ್ಬ ತನ್ನ ಅಧ್ಯಯನದ ಆಧಾರದ ಮೇಲೆ, ಉತ್ತಮ ಕಾವ್ಯಗಳಲ್ಲಿ ಇರಬಹುದಾದ ಲಕ್ಷಣಗಳನ್ನು ಗುರುತು ಹಾಕಿಕೊಂಡು, ಅದಕ್ಕೆ ನಿಷ್ಠನಾಗಿ ಕಾವ್ಯ ರಚನೆ ಮಾಡಿದರೆ ಕವಿತೆಗಳು ಹೇಗೆ ಮೂಡಬಹುದೋ, ಕ್ವಚಿತ್ತಾಗಿ ಹಾಗೆಯೇ ಮೂಡಿವೆ ದಿಲೀಪರ ಕವಿತೆಗಳು. ಕಾವ್ಯದಲ್ಲಿ ಮುಖ್ಯವಾಗಿ ವಸ್ತು ವಿಷಯ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ