ಪಂಜು ಕಾವ್ಯಧಾರೆ

ನನ್ನಲ್ಲಿಷ್ಟು ಕನಸುಗಳಿವೆಮಾರಾಟಕ್ಕಲ್ಲ,ಎಲ್ಲರೆದೆಯ ಬರಡು ಭೂಮಿಯಲ್ಲಿಹೂಳುತ್ತೇನೆ,ಹೊಸ ನಾಳೆಗಳನ್ನೇ ಚಿಗುರಿಸುತ್ತೇನೆ ! ನನ್ನೀ ಕನಸುಗಳು-ಬುದ್ದನ ನಗೆಯ ನೆರಳಲ್ಲಿಬೆಳೆದು ಬಂದಂತಹವು,ಊರಾಚೆಯ ಒಲೆಯ – ಊರೊಳಗೆನೆಮ್ಮದಿಯ ನಗೆ ಬೀರುವಕನಸು ಕಾಣುತ್ತದೆ, ನನ್ನೀ ಕನಸು ! ಮೈಲು ದೂರದಲ್ಲಿಯ ಬೆಟ್ಟದ ಮ್ಯಾಲಿನದೇವದಾಸಿಯೂ ಅಂಗಲಾಚುತ್ತಾಳೆ-ನನ್ನೀ ಕನಸುಗಳಿಗಾಗಿ !ಮುಟ್ಟಾದ ಪುಟ್ಟ ತಂಗಿಯತುಂಬಿ ನಿಂತ ಕಣ್ಣಾಲೆಯೂ ಕೈಚಾಚಿದೆ-ನನ್ನ ಕನಸುಗಳತ್ತ ! ಸುಸ್ತಾಗಿದ್ದ ‘ಗಸ್ತಿ’ಯೂ ಗಸ್ತು ತಿರುಗಲು-ಅಣಿಯಾಗುತಿದ್ದಾನೆ , ಮತ್ತೇನಂಬಿಕೆಯಿದೆ ನನ್ನೀ ಕನಸುಗಳಲ್ಲಿ,ಅಪ್ಪ ಮುಟ್ಟಿದ ನೀರು ಮೈಲಿಗೆಯೆಂದದೊರೆಗಳಿಂದುಕನಸುಗಳ ಕಂಡು – ದಡಬಡಿಸುತ್ತಿದ್ದಾರೆ ! ಇಂದು ಬದುಕಿದ್ದರೆ -ನನ್ನಅಂಬೇಡ್ಕರ್ ?ನನ್ನೀ ಕನಸುಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾಲ: ಅನಂತ ರಮೇಶ್

1 ಹದಿನೈದು ವರ್ಷಗಳಿಂದ ಅಭ್ಯಾಸವಾಗಿ ಹೋಗಿದೆ. ಲತಾಳ ಅದೇ ವ್ಯಂಗ್ಯದ ಮಾತು. “ಸಾಹೇಬರ ಸವಾರಿ ಈವತ್ತು ಯಾವ ಕಡೆಗೆ?”. ನಾನು ಉತ್ತರಿಸುವ ಗೊಡವೆಗೆ ಹೋಗುವುದಿಲ್ಲ. ತಿಂಡಿಯೊಟ್ಟಿಗೆ ಕಾಫಿ ಲೋಟ ಟೇಬಲ್‌ಮೇಲೆ ಬಡಿಯುತ್ತಾಳೆ. ಸಾವಕಾಶ ತಿಂದು ಹೊರಡುತ್ತೇನೆ. ಆ ಸಮಯ ಮೀರುವುದಿಲ್ಲ. ಈಗ ಬೆಳಗಿನ 9:30. ಸಾಮಾನ್ಯವಾಗಿ ಎಲ್ಲರೂ ಆಫೀಸಿಗೆ ಹೊರಡುವ ಸಮಯ! ಹೊರಗೆ ರಸ್ತೆಯಲ್ಲಿ ನಡೆಯುವಾಗ, ಲತಾಳ ಬಗೆಗೆ ಕನಿಕರ ಅನ್ನಿಸುತ್ತೆ. ಅವಳಾದರೂ ಏನು ಮಾಡಿಯಾಳು? ನನಗಂತೂ ತಿಂಗಳಿಗೊಮ್ಮೆ ಸಂಬಳ ತರುವ ಕೆಲಸವಿಲ್ಲ. ಯಾವುದಾದರೂ ಮನೆ ಬಾಡಿಗೆ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಳಾ: ಗಿರಿಜಾ ಜ್ಞಾನಸುಂದರ್‌

“ಪಿಂಕಿ, ಬಬ್ಲೂ ಬನ್ನಿ ಮನೆಗೆ… ತುಂಬ ಹೊತ್ತಾಗಿದೆ.. ಆಶಾ ಆಂಟಿ ಮನೆಗೆ ಬಂದ್ರೆ ನಿಮಗೆ ಏನು ಬೇಡ” ಅಂತ ತಮ್ಮ ಮಕ್ಕಳನ್ನು ಕರೆದುಕೊಂಡು ಹೋದಳು ಪಿಂಕು ಬಬ್ಲೂ ಅಮ್ಮ. ಆಗಲೇ ರಾತ್ರಿ ಎಂಟು ಗಂಟೆ ಆಗಿದೆ… ಇನ್ನೊಂದು ಹತ್ತು ನಿಮಿಷಕ್ಕೆ ಇನ್ನು ಆಶಾ ಆಂಟಿ ಮನೆಯಲ್ಲಿ ಉಳಿದುಕೊಂಡಿದ್ದ ೫- ೬ ಮಕ್ಕಳನ್ನೆಲ್ಲ ಅವರವರ ಮನೆಯವರು ಕರೆದುಕೊಂಡು ಹೋದರು. ಆಶಾ ಎಲ್ಲ ಮಕ್ಕಳು ಹೋದಮೇಲೆ ಸಪ್ಪೆ ಮುಖ ಹಾಕಿಕೊಂಡು ಕುಳಿತಿದ್ದಳು. ಮನೆಯೆಲ್ಲ ಚಾಕಲೇಟ್ ಪೇಪರ್ಸ್, ತಿಂಡಿ ತಿನಿಸುಗಳನ್ನು ಚೆಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಕೊನೆಯ ಭಾಗ): ನಾರಾಯಣ ಎಮ್ ಎಸ್

ಅಯ್ಯರೊಂದಿಗೆ ಮಾತಾಡಿದ್ದು ಎಲ್ಲರಿಗೂ ಸಮಾಧಾನ ತಂದಿತ್ತು. ತನಿಯಾವರ್ತನದ ನಂತರ ಸಿಂಧು ಭೈರವಿ, ತಿಲಂಗ್ ಮತ್ತು ಶಿವರಂಜನಿಯಲ್ಲಿ ಹಾಡಿದ ದೇವರನಾಮಗಳು ಮುದ ಕೊಟ್ಟವು. ಕಛೇರಿ ಕೊನೆಯ ಭಾಗ ತಲುಪಿದ್ದರಿಂದ ಮೈಕು ಹಿಡಿದ ಮೋಹನ ವೇದಿಕೆ ಹತ್ತಿದ. ನೇದನೂರಿಯವರಿಂದ ಪ್ರಾರಂಭಿಸಿ, ಒಬ್ಬೊಬ್ಬರಾಗಿ ಪಿಟೀಲು, ಮೃದಂಗ, ಖಂಜಿರ ಮತ್ತು ತಂಬೂರಿಯಲ್ಲಿ ಸಾಥ್ ನೀಡಿದ ಪ್ರತಿಯೊಬ್ಬ ಕಲಾವಿದರ ಬಗ್ಗೆಯೂ ಒಂದೆರಡು ಒಳ್ಳೆಯ ಮಾತನಾಡಿ ಧನ್ಯವಾದ ಅರ್ಪಿಸಿದ. ಒಬ್ಬೊಬ್ಬರಿಗೂ ಧನ್ಯವಾದ ಹೇಳಿದ ಬೆನ್ನಲ್ಲೇ ಕ್ರಮವಾಗಿ ಆಯಾ ಕಲಾವಿದರಿಗೆ ಕೃಷ್ಣಯ್ಯರ್ ಖುದ್ದು ತಮ್ಮ ಹಸ್ತದಿಂದ ಸೂಕ್ತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಾರುವ ಹಂಸೆಯ ಕಾವ್ಯಗುಣ: ವಿನಯಚಂದ್ರ

“ಹಾರುವ ಹಂಸೆ” ಇತ್ತೀಚಿನ ದಿನಗಳಲ್ಲಿ ನಾನು ಓದಿ ಮೆಚ್ಚಿದ, ಇತ್ತೀಚಿನ ತಲೆಮಾರಿನವರು ರಚಿಸಿದ ಕೃತಿಗಳಲ್ಲಿ ಬಹಳ ಉತ್ತಮವಾದ ಕೃತಿ ಎಂದು ನಿಸ್ಸಂಶಯವಾಗಿ ಹೇಳಿಬಿಡಬಹುದು. ಇದು ಚಾಮರಾಜನಗರದ ಆರ್ ದಿಲೀಪ್ ಕುಮಾರ್ ರವರ ಕವಿತೆಗಳ ಸಂಕಲನ. ಗಂಭೀರವಾದ ಸಾಹಿತ್ಯ ವಿದ್ಯಾರ್ಥಿಯೊಬ್ಬ ತನ್ನ ಅಧ್ಯಯನದ ಆಧಾರದ ಮೇಲೆ, ಉತ್ತಮ ಕಾವ್ಯಗಳಲ್ಲಿ ಇರಬಹುದಾದ ಲಕ್ಷಣಗಳನ್ನು ಗುರುತು ಹಾಕಿಕೊಂಡು, ಅದಕ್ಕೆ ನಿಷ್ಠನಾಗಿ ಕಾವ್ಯ ರಚನೆ ಮಾಡಿದರೆ ಕವಿತೆಗಳು ಹೇಗೆ ಮೂಡಬಹುದೋ, ಕ್ವಚಿತ್ತಾಗಿ ಹಾಗೆಯೇ ಮೂಡಿವೆ ದಿಲೀಪರ ಕವಿತೆಗಳು. ಕಾವ್ಯದಲ್ಲಿ ಮುಖ್ಯವಾಗಿ ವಸ್ತು ವಿಷಯ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡಿಸೆಂಬರ್ ಎಂದರೆ ಪ್ರವಾಸಗಳ ನೆನಪು..: ವಿನಾಯಕ ಅರಳಸುರಳಿ

ಶಾಲಾ ಪ್ರವಾಸವೆನ್ನುವುದು ಬದುಕಿನ ಮತ್ತೆಲ್ಲ ಪ್ರವಾಸಗಳನ್ನೂ ಮೀರಿಸುವಂಥಹಾ ಸವಿನೆನಪು. ಅರ್ಧವಾರ್ಷಿಕ ಪರೀಕ್ಷೆಗಳೆಲ್ಲಾ ಮುಗಿದು ಛಳಿಗಾಲದ ಪ್ರವೇಶವಾಗುವ ಹೊತ್ತಿಗೆ ಶೈಕ್ಷಣಿಕ ಪ್ರವಾಸದ ಘೋಷಣೆಯನ್ನು ಸ್ವತಃ ಹೆಡ್ ಮಾಷ್ಟರೇ ಮಾಡುತ್ತಿದ್ದರು. ಬರುವ ಆಸೆ ಎಲ್ಲರಲ್ಲೂ ಇರುತ್ತಿತ್ತಾದರೂ ನೂರಿನ್ನೂರು ರೂಪಾಯಿಗಳ ಪ್ರವಾಸ ಶುಲ್ಕವನ್ನು ಹೊಂದಿಸುವುದು ಎಲ್ಲರಿಗೂ ಸಾಧ್ಯವಿರುವ ವಿಷಯವಾಗಿರಲಿಲ್ಲ. ಕೆಲವರಿಗೆ ಸುಲಭವಾಗಿ ಸಿಗುತ್ತಿದ್ದ ಈ ಹಣ ಇನ್ನು ಕೆಲವರಿಗೆ ಅಪ್ಪ-ಅಮ್ಮನಿಂದ ಬೆನ್ನಿನ ಮೇಲೆ ನಾಲ್ಕು ಗುದ್ದಿಸಿಕೊಂಡ ಬಳಿಕವೇ ಸಿಗುತ್ತಿತ್ತು. ಇನ್ನೂ ಕೆಲವರು ತಾವು ಅಲ್ಲಿಲ್ಲಿ ಅಡಿಕೆ ಸುಲಿದು, ಗೇರುಬೀಜ ಹೆಕ್ಕಿ ಸಂಪಾದಿಸಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 55 & 56): ಎಂ. ಜವರಾಜ್

-೫೫-ಓಟಾಗಿ ಎಂಟೊಂಬತ್ದಿನ ಆಗಿತ್ತುಇವತ್ತು ಎಣ್ಕ ಅದನಾಳಿದ್ದು ಕಳ್ದು ಆಚ ನಾಳನೀಲವ್ವೋರ್ ತಿಥಿ ಅದ ಈ ಅಯ್ನೋರು ಆಳ್ಗಳ್ ಬುಟ್ಕಂಡುಸುಣ್ಣನುವ ಗೋಪಿ ಬಣ್ಣನುವಮನಗ್ವಾಡ್ಗ ತುಂಬುಸ್ತಿದ್ರು ಈಗ ಈ ದೊಡ್ಡವ್ವ ಬುಟ್ರ ಯಾರಿದ್ದರು..ಈ ಅಯ್ನೋರ್ಗ ಈ ದೊಡ್ಡವ್ವನೇ ಗತ್ಯಾದ್ಲುಈ ದೊಡ್ಡವ್ವ ಹೇಳ್ದಾಗೇ ಕೇಳ್ಬೇಕುಈ ದೊಡ್ಡವ್ವನ ಮಾತ್ನಂತೆಸತ್ತೋದ ನೀಲವ್ವೋರ ಅವ್ವ ಅಪ್ಪಬಂದುಮಗಳ ನೆನ್ಕಂಡು ಮನ ಕೆಲ್ಸ ಮಾಡ್ತಿದ್ರು ಈಗ ಈ ಅಯ್ನೋರು ದೊಡ್ಡವ್ವನ್ಗ ಹೇಳಿತಾಲ್ಲೊಕ್ಕಚೇರಿ ಕಡ ನಡುದ್ರುಹಿಂಗ ತಾಲ್ಲೊಕ್ಕಚೇರಿ ಕಡ ನಡ್ದಾಗಆ ಆಳು ದಾರಿಲಿ ಸಿಕ್ಕಿಗುಸುಗುಸು ಮಾತಾಡ್ತ ನಡ್ದಹಂಗೆ ಇನ್ನಿಬ್ರು ಬಂದ್ರುತಾಲ್ಲೊಕ್ಕಚೇರಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆರಗೊಂದು ಕೊರಗಾಗಿ ಕಾಡಿದಾಗ…. : ಸುಂದರಿ ಡಿ.

ತನ್ನ ಪಾಡಿಗೆ ತಾನು ಹಾಡಿಕೊಂಡು, ಹನಿಗಳ ಚುಮುಕಿಸಿ, ಬಳುಕುತ ಬಿಸಿಲ ನೇರ ಕೋಲುಗಳ ಸ್ಪರ್ಶದಿಂದಲೇ ಮತ್ತಷ್ಟು ಹೊಳಪಿನಿಂದ ತನ್ನಾಳದ ಮರಳನೂ ಚಿನ್ನದಂತೆ ಹೊಳೆಯಿಸುತ, ಜುಳು-ಜುಳು ನಾದದೊಂದಿಗೇ ಹರಿಯುತಿದ್ದ ನೀರ ಬದಿಯಲಿ ತನ್ನ ಸೊಬಗತೋರುತ, ನೀರ ಸೊಬಗನೂ ಹೆಚ್ಚಿಸಲೆಂಬಂತೆ ಅದರ ಸತ್ವವನೇ ಹೀರಿ ನಿಜವಾದ ಹಸಿರೆಂದರೆ ಇದೇ ಎಂಬಂತೆ ಬೆಳೆದು ನಿಂತಿದ್ದ ಗಿಡಗೆಂಟೆಗಳು, ಅವುಗಳಲ್ಲಿ ಬೆಟ್ಟದ ಹೂವಿನಂತೆ ಇತರರನು ತಮ್ಮತ್ತ ಸೆಳೆವ ಯಾವ ಗೋಜಿಗೂ ಹೋಗದೆ ಬೇಲಿಯ ಹೂವೆಂದೇ ಕರೆಸಿಕೊಂಡರೂ ಸಹಜ ಸೌಂದರ್ಯದ ಕಾರಣವೊಂದರಿಂದಲೇ ತಮ್ಮತ್ತ ತಿರುಗಿ ನೋಡುವಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ

ಸಾಹಿತ್ಯಾಸಕ್ತರೇ,ಸಹೃದಯೀ ಕವಿಮನಸ್ಸುಗಳೇ,ಫೆಬ್ರವರಿಯಲ್ಲಿ ನಮ್ಮ ಸಂಸ್ಥೆಯ ಕಡೆಯಿಂದ “ಮಕ್ಕಳ ಸಾಹಿತ್ಯ ಸಂಪಾದಕತ್ವ ಕೃತಿ”ಯ ಲೋಕಾರ್ಪಣಾ ಕಾರ್ಯಕ್ರಮ ನಡೆಯಲಿದೆ. 🎉 ಆಸಕ್ತರು ನಿಮ್ಮ ಸ್ವರಚಿತ ಕುತೂಹಲ ಭರಿತ ನೀತಿಕಥೆ ಮತ್ತು ಮಕ್ಕಳಿಗೆ ಸುಲಲಿತವಾಗಿ ಹಾಡಲು ಬರುವಂತಹ ಮಕ್ಕಳ ಪದ್ಯವನ್ನು ಕಳುಹಿಸಿಕೊಡಬೇಕಾಗಿ ಕೋರಿಕೆ. ವಿದ್ಯಾರ್ಥಿಗಳು ಕೂಡ ಭಾಗವಹಿಸಬಹುದು. ನಿಮ್ಮ ಗುರುತಿನ ಚೀಟಿ ಅಗತ್ಯವಾಗಿ ಲಗತ್ತಿಸಿದರೆ ದತ್ತ ಮೊತ್ತದಲ್ಲಿ ಕಡಿತಗೊಳಿಸಲಾಗುವುದು. ÷ ಮಕ್ಕಳ ಪದ್ಯ (೧ ಪುಟ)÷ ಕಥನ-ಕವನವಾದರೆ ( ೧-೨ ಪುಟಗಳು)÷ ಮಕ್ಕಳ ನೀತಿಕಥೆ ( ೨-೩ ಪುಟಗಳು ) ಅಲ್ಲದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೇತುವೆ….: ಸತೀಶ್ ಶೆಟ್ಟಿ ವಕ್ವಾಡಿ.

ಅದು ಶರದೃತುವಿನ ಬೆಳಗಿನ ಜಾವ. ಮುಂಗಾರಿನ ಮೋಡಗಳು ತೆರೆಮರೆಗೆ ಸರಿದು ಆಕಾಶ ಶುಭ್ರವಾಗಿತ್ತು. ಹುಣ್ಣಿಮೆಯ ದಿನವಾಗಿದ್ದರಿಂದ ಚಂದಿರ ಬೆಳ್ಳಿಯ ಬಟ್ಟಲಂತೆ ಸುಂದರವಾಗಿ ಕಾಣಿಸುತ್ತಿದ್ದ. ಮೋಡಗಳ ಸವಾಲುಗಳಿಲ್ಲದ ಕಾರಣ ತಾರೆಗಳು ಇಡೀ ಆಗಸವನ್ನು ಆಕ್ರಮಿಸಿ ತಮ್ಮ ಆಧಿಪತ್ಯ ಸ್ಥಾಪಿಸಿ, ಭಾನ ತುಂಬೆಲ್ಲಾ ಬೆಳಕಿನ ಸರಪಳಿ ನಿರ್ಮಿಸಿದ್ದವು. ಹುಣ್ಣಿಮೆಯ ಚಂದಿರ, ರಾತ್ರಿಯ ಕತ್ತಲೆಯನ್ನೆಲ್ಲ ತನ್ನ ಒಡಲೊಳಗೆ ತುಂಬಿಕೊಂಡು ಬೆಳದಿಂಗಳ ಮಳೆಯನ್ನೇ ಸುರಿಸುತ್ತಿದ್ದ. ಪಶ್ಚಿಮದಿಂದ ಬೀಸುತ್ತಿದ್ದ ತಂಗಾಳಿ, ನುಸುಕಿನ ಮಂಜಿನ ಹನಿಗಳ ಸಾಂಗತ್ಯದಿಂದ ಚಳಿಯು ಅನ್ನಿಸಿದ ತಣ್ಣನೆಯ ವಾತಾವರಣ ಸೃಷ್ಟಿಸಿತ್ತು. ಮರಗಿಡಗಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮನಾದ: ಸುಮ ಉಮೇಶ್

ರಾಧಮ್ಮನವರ ನಂತರ ಬಹಳ ವರ್ಷಗಳ ಮೇಲೆ ಹುಟ್ಟಿದವನೇ ಅವರ ತಮ್ಮ ಸುಧಾಕರ್. ರಾಧಮ್ಮನಿಗೂ ಸುಧಾಕರ್ ಗೂ ಅಂತರ ಹೆಚ್ಚಾಗಿದ್ದರಿಂದ ಅವನನ್ನು ಕಂಡರೆ ಎಲ್ಲರಿಗೂ ಅತೀವ ಪ್ರೀತಿ. ಅಕ್ಕನ ಮುದ್ದಿನ ತಮ್ಮ ಅವನು. ರಾಧಮ್ಮನವರ ಮದುವೆ ಆದಾಗ ಸುಧಾಕರ್ಗೆ ಕೇವಲ ಎಂಟು ವರ್ಷ. ಮದುವೆ ಆದ ವರ್ಷದೊಳಗೆ ರಾಧಮ್ಮ ಹೆಣ್ಣು ಮಗುವಿನ ತಾಯಿ ಆದಾಗ ಎಲ್ಲರಿಗೂ ಸಂತಸ. ರಾಧಳ ತಂದೆ ತಾಯಿಗೆ ದೂರದ ಒಂದು ಆಸೆ ಮೊಳೆಯಲಾರಂಭಿಸುತ್ತದೆ. ಪುಟ್ಟ ಸುರಭಿಯೇ ಮುಂದೆ ಸುಧಾಕರ್ನ ಕೈ ಹಿಡಿದು ಮೊಮ್ಮಗಳು ಮನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾರ್ಥಕ್ಯ: ಡಾ. ಅಜಿತ್ ಹರೀಶಿ

ಎಂದಿನಂತೆ ಊರ ಈಶ್ವರ ದೇವರ ಪೂಜೆ ಮುಗಿಸಿ ಜನಾರ್ದನ ಭಟ್ಟರು ದೇವಸ್ಥಾನದ ಮೆಟ್ಟಿಲಿಳಿಯುತ್ತಿದ್ದರು. ಅಲ್ಲಿಂದ ಕೂಗಳತೆಯ ದೂರದಲ್ಲೇ ಅವರ ಮನೆ. ಪೂಜೆ ಮುಗಿಸಿ ಏಳುವಾಗಲೇ ತಲೆಯಲ್ಲಿ ಏನೋ ಒಂಥರಾ ಭಾರವಾದ ಹಾಗೆ ಅವರಿಗೆ ಅನ್ನಿಸಿತ್ತು. ನಾಲ್ಕು ಹೆಜ್ಜೆ ಹಾಕಿದಾಗ ದೇಹ ತೂಗಿದಂತೆ ಭಾಸವಾಗಿತ್ತು. ಆದರೂ ಅಲ್ಲಿ ಕುಳಿತುಕೊಳ್ಳದೇ ಬೇಗ ಮನೆಗೆ ಹೋಗಿ ವಿಶ್ರಾಂತಿ ತೆಗೆದುಕೊಂಡರಾಯಿತು ಎಂದುಕೊಂಡು ಕೊನೆಯ ಮೆಟ್ಟಿಲು ಇಳಿಯುತ್ತಿದ್ದರು. ಇಡೀ ದೇಹವು ಬಾಳೆದಿಂಡನ್ನು ಕತ್ತಿಯಿಂದ ಕಡಿದಾಗ ಬೀಳುವಂತೆ ಕುಸಿದು ಬಿತ್ತು. ಕೆಲ ಕ್ಷಣಗಳ ಮಟ್ಟಿಗೆ ಅವರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಣ್ಣೆಲೆಯ ಹಾಡು: ಗಿರಿಜಾ ಜ್ಞಾನಸುಂದರ್

ಎಳೆ ಬಿಸಿಲು ಅಂದವಾದ ಬೆಳಕು ಬೀರುತ್ತಾ ಎಲ್ಲೆಡೆ ಹರಡುತ್ತಿದೆ. ಅಂಗಳದಲ್ಲಿ ಆರಾಮ ಖುರ್ಚಿಯಲ್ಲಿ ಬಿಸಿಲು ಕಾಯುತ್ತ ಮೈಯೊಡ್ಡಿರುವ ಕೃಷ ದೇಹದ ವೃದ್ಧ ಶ್ರೀನಿವಾಸ. ವಯಸ್ಸು ಸುಮಾರು ೮೯- ೯೦ ಆಗಿರಬಹುದು. ಸುಕ್ಕುಗಟ್ಟಿದ ಮುಖ, ಪೂರ್ತಿ ನರೆತ ಕೂದಲು. ಹಣೆಯಮೇಲೆ ಎದ್ದು ಕಾಣುವ ಗೆರೆಗಳು, ಬೊಚ್ಚು ಬಾಯಿ. ಇಷ್ಟೆಲ್ಲದರ ಮಧ್ಯೆ ಏನನ್ನೋ ಕಳೆದುಕೊಂಡು ಹುಡುಕುತ್ತಿರುವಂಥ ಕಣ್ಣುಗಳು. ತನ್ನ ಮಕ್ಕಳು ಮೊಮ್ಮಕ್ಕಳೊಂದಿಗೆ ಸುಖವಾದ ಜೀವನ ಕಾಣುತ್ತಿರುವ ಹಿರಿಯ ಜೀವ. ದಿನವೂ ವಿಶ್ರಮಿಸುತ್ತ, ತನ್ನ ಹಿಂದಿನ ದಿನಗಳನ್ನು ನೆನೆಯುತ್ತ ಮೆಲುಕು ಹಾಕುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಣ್ಣಾ ಮುಚ್ಚಾಲೆ..: ಜೆ.ವಿ.ಕಾರ್ಲೊ

ಇಂಗ್ಲಿಶ್ ಮೂಲ: ಗ್ರಹಾಂ ಗ್ರೀನ್ಅನುವಾದ: ಜೆ.ವಿ.ಕಾರ್ಲೊ ಬೆಳಕು ಮೂಡುತ್ತಿದ್ದಂತೆ ಪೀಟರನಿಗೆ ತಕ್ಷಣ ಎಚ್ಚರವಾಯಿತು. ಕಿಟಕಿಯ ಗಾಜಿನ ಮೇಲೆ ಮಳೆ ರಪರಪನೆ ಬಡಿಯುತ್ತಿತ್ತು. ಅಂದು ಜನವರಿ ಐದುಅವನ ಕಣ್ಣುಗಳು ಪಕ್ಕದ ಮಂಚದ ಮೇಲೆ ಮುಸುಕು ಎಳೆದುಕೊಂಡು ಇನ್ನೂ ಮಲಗಿದ್ದ ಅವನ ತಮ್ಮ ಫ್ರಾನ್ಸಿಸನ ಮೇಲೆ ನೆಲೆಗೊಂಡವು. ಅವನಿಗೆ ತನ್ನ ಪ್ರತಿರೂಪವನ್ನೇ ನೋಡಿದಂತಾಯಿತು! ಅದೇ ಕೂದಲು, ಕಣ್ಣುಗಳು, ತುಟಿಗಳು, ಕೆನ್ನೆ.. ಅವನ ತುಟಿಗಳ ಮೇಲೆ ಮಂದಹಾಸ ಮೂಡಿತು.ಜನವರಿ ಐದು. ಮಿಸೆಸ್ ಫಾಲ್ಕನಳ ಮಕ್ಕಳ ಪಾರ್ಟಿ ನಡೆದು ಆಗಾಗಲೇ ಒಂದು ವರ್ಷವಾಯಿತೆಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೂಡಿದ ಬೆಳಕು…: ಭಾರ್ಗವಿ ಜೋಶಿ

ಎಲ್ಲ ಕಡೆ ಝಗಮಗಿಸುತ್ತಿದ್ದ ದೀಪಗಳ ಸಂಭ್ರಮ. ಸಾಲು ಸಾಲು ದೀಪಗಳು ಇಡೀ ಬೀದಿಯ ಸಂಭ್ರಮ ಸೂಚಿಸುತ್ತಿತ್ತು.. ಆ ಬೀದಿಯ ಕೊನೆಯ ಮನೆಯಲ್ಲಿ ಮಾತ್ರ ಮೌನ. ಬೆಳಕು ತುಸು ಕೊಂಚ ಕಡಿಮೆಯೇ ಇತ್ತು. ಬಡವ -ಬಲ್ಲಿದ ಯಾರಾದರೇನು ಜ್ಯೋತಿ ತಾನು ಬೆಳಗಲು ಬೇಧ ಮಾಡುವುದಿಲ್ಲ ಅನ್ನೋ ಮಾತು ನಿಜವೇ? ಎಣ್ಣೆಗೆ ಕಾಸು ಇಲ್ಲದ ಬಡವರ ಮನೆಯಲ್ಲಿ ಜ್ಯೋತಿ ಉರಿದಿತೇ? ಬೆಳಕು ಚಲ್ಲಿತೇ? ಹೀಗೆ ಕತ್ತಲು ಆವರಿಸಿದ ಆ ಮನೆ, ಮನೆಯೊಡತಿ ಜಾನಕಮ್ಮ, ಪತಿ ರಾಮಣ್ಣ ಅವರ ಒಬ್ಬನೇ ಮಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಂಟೆ ಡುಬ್ಬ: ಡಾ. ಅಶೋಕ್. ಕೆ. ಆರ್

ಬೈಕೋಡಿಸುವಾಗ ರಶಿಕ ಕನ್ನಡ ಹಾಡುಗಳನ್ನು ಕೇಳುವುದಿಲ್ಲ.ಬ್ಲೂಟೂಥ್ ಹೆಲ್ಮೆಟ್ಟಿನಲ್ಲಿ ಸಣ್ಣಗಿನ ದನಿಯಲ್ಲಿ ಗುನುಗುತ್ತಿದ್ದುದು ಮಲಯಾಳಂ, ತಮಿಳು ಹಾಡುಗಳು.ಕನ್ನಡ ಹಾಡ್ ಹಾಕಂಡ್ರೆ ಪ್ರತಿ ಪದಾನೂ ಅರ್ಥವಾಗ್ತ ಆಗ್ತ ಹಾಡಿನ ಗುಂಗಲ್ಲಿ ಸುತ್ತಲಿನ ಪರಿಸರ ಮರ್ತೋಗ್ತದೆ, ಹಂಗಾಗಿ ಭಾಷೆ ಅರ್ಥವಾಗ್ದಿರೋ ಹಾಡುಗಳೇ ವಾಸಿ.ರಾತ್ರಿಯಿಂದ ಬೋರ್ಗರೆದಿದ್ದ ಮಳೆ ಬೆಳಿಗ್ಗೆ ವಿರಮಿಸಿತ್ತು.“ಈ ಕಡೆ ರೋಡಲ್ಲಿ ಒಂದ್ ಮೂವತ್ ಕಿಲೋಮೀಟ್ರು ಹೋದ್ರೆ ಕರ್ಮುಗಿಲು ಅನ್ನೋ ಊರು ಸಿಗ್ತದೆ. ಹೆಚ್ಚೇನಿಲ್ಲ ಅಲ್ಲಿ. ಒಳ್ಳೆ ಸನ್ ರೈಸ್ ಪಾಯಿಂಟಿದೆ ಅಲ್ಲಿ. ಮೋಡ ಇದ್ರೆ ನಿರಾಸೆಯಾಗ್ತದೆ. ನೋಡಿ. ಡಿಸೈಡ್ ಮಾಡಿ” … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮತ್ತೆ ವಸಂತ: ಶ್ರೇಯ ಕೆ ಎಂ

ಸ್ಮಿತಾ ಹಾಗೆಯೇ ಚೇರ್ ಗೆ ಒರಗಿದ್ದಾಳೆ. ಕಣ್ಣಂಚಲ್ಲಿ ನೀರಾಡಿದೆ. ಹಾಗೇ ಹಿಂದಿನ ನೆನಪುಗಳತ್ತ ಜಾರುತ್ತಿದೆ ಮನಸು. ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಸ್ಮಿತಾ ಓದಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ಎಲ್ಲದರಲ್ಲೂ ಮುಂದು. ಮನೆಯಲ್ಲಿ ಮುದ್ದಿನ ಮಗಳು. ಒಡಹುಟ್ಟಿದವರೊಂದಿಗೆ ಬೆಳೆದ ಸ್ಮಿತಾ ಮನೆಯವರೆಲ್ಲರ ಪಾಲಿನ ಅಚ್ಚುಮೆಚ್ಚು. ಮಧ್ಯಮವರ್ಗದ ಕುಟುಂಬವಾದರೂ ಇದ್ದುದರಲ್ಲಿಯೇ ಸುಖವಾಗಿದ್ದ ಸಂಸಾರ. ಪದವಿ ಓದಿನ ಜೊತೆಗೆ ಹಲವಾರು ಕಲೆಗಳನ್ನು ಕಲಿತವಳು. ಹೀಗೆ ಸಾಗುತ್ತಿದ್ದ ಸಂಸಾರದಲ್ಲಿ ಒಮ್ಮೆ ಅದೆಲ್ಲಿಂದಾನೋ ಒಂದು ಗಂಡಾಂತರ ಬಂದು ಸ್ಮಿತಾಳ ಬಾಳೇ ಛಿದ್ರವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಯಲಾಗದ ಬಣ್ಣ: ಅನುರವಿಮಂಜು

ಶೋಭಿತಾಳ ಗಂಡ ತೀರಿಕೊಂಡು ವರ್ಷ ಕಳೆದಿದೆ, ಅವಳೀಗ ಒಂಟಿ ಜೀವನ ನಡೆಸುತ್ತಿದ್ದಾಳೆ. ನಿನ್ನ ಅಂದಿನ ಪ್ರೀತಿ ಇನ್ನು ಜೀವಂತ ಇರುವುದಾದರೆ ಅವಳನ್ನು ಮದುವೆಯಾಗಿ ಹೊಸ ಬದುಕನ್ನು ನೀಡು. ಆಕಸ್ಮಿಕವಾಗಿ ಭೇಟಿಯಾದ ಆತ್ಮೀಯ ಗೆಳೆಯ ಗೌತಮ್ ಆಚ್ಚರಿಯ ಸಂಗತಿ ತಿಳಿಸಿ ಸಲಹೆ ನೀಡಿದ. ಆತನ ಮಾತು ಕೇಳಿ ನನ್ನೊಳಗಿದ ಸೂಕ್ತ ಬಯಕೆಗಳು ಗರಿಗೆದರಿದವು. ಒಂದು ನಿರ್ಧಾರಕ್ಕೆ ಸಿದ್ದನಾದೆ, ಶೋಭಿತಾಳೊಂದಿಗೆ ಉತ್ತಮ ಸ್ನೇಹ ಸಂಬಂಧ ವಿರಿಸಿದ್ದರಿಂದ ನನ್ನ ಮಾತನ್ನು ತಿರಸ್ಕರಿಸಲಾರಳೆಂಬ ನಂಬಿಕೆ ಇತ್ತು. ಒಂಟಿ ಜೀವನ ಅವಳಿಗೂ ಬೇಸರ ತಂದಿರಬಹುದು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಿರುಗತೆಗಳು: ಜಯಂತ್ ದೇಸಾಯಿ

ಬಣ್ಣದ ಬಾರಿಗೆ( ಬಣ್ಣದ ಪೊರಕೆ) ಬಾರಿಗೆಮ್ಮೋ ಬಾರಿಗೆ 30 ರೂಪಾಯಿಗೆ ಜೊತಿ ಬಾರಿಗೆ ಸ್ವಲ್ಪವೇ ಅವ ನೋಡ್ರೆಮ್ಮೋ ಅಂತ ಕೂಗುತ್ತಾ ಹಳ್ಳಿಯ ಸಂದಿಸಂದಿಯ ಒಳಗೆ ನುಗ್ಗಿ ಹೋಗುತ್ತಿದ್ದ ಶರಣಪ್ಪ ನ ದ್ವನಿ ಕೇಳಿ ನಿರ್ಮಲ ನುಡಿದಳು ಹೇ ನಿಂದ್ರಪ್ಪ ನಿಂದ್ರು ಹೆಂಗ್ ಕೊಟ್ಟಿ ಅಂದಿ, 30 ರೂಪಾಯಿಗೆ ಅಂದ್ರ ಭಾಳಾ ಫೀರೆ ಆತು ಕಡಿಮೆ ಮಾಡು, ನೋಡಿದ್ರ ನಾಕು ಕಡ್ಡಿ ಇಲ್ಲ ಇದ್ರಾಗ, ಅವ್ವ ಹಂಗನ್ನ ಬ್ಯಾಡ ಗಿರಿ ಗಿರಿ ಹಾಕಿ ಎಳೆದು ಎಳೆದು ತೀಡಿ ನೆಲಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ ೧

ಕಾಲ ಬದಲಿಸಿದ ಬದುಕು ತಂಗಳು ತಡಿಯ ತಿಂದುಅರೆಬೆಂದದ್ದು ಬುತ್ತಿಹೊತ್ತುಕೊಂಡು ಓಡುತ್ತಿತ್ತು ಜೀವಸಮಯದ ಜೊತೆಗೆಪೈಸೆ, ಪೈಸೆಯೂ ಕೂಡಿಟ್ಟುಜೋಪಾನ ಮಾಡಿತ್ತು ಭಾವ,ವಾಸ್ತವದಲ್ಲಿ ನಿಲುಕದ ಬಣ್ಣದ ಕನಸುಗಳ ಭವಿಷ್ಯದ ಜೊತೆಗೆ! ಕಣ್ಣಿಗೆ ಕಾಣದ ಜೀವಿಯತಲ್ಲಣಕೆ ಬದುಕು ಬೀದಿಗೆ ಬಿತ್ತುವರ್ತಮಾನವೇ ಬುಡಮೇಲಾಯಿತುಕೈಗಳಿಗೆ ಕೆಲಸವಿಲ್ಲ ,ಕಾಲುಗಳಿಗೆ ಹೋಗಲುದಾರಿಯೇ ಇಲ್ಲ !ಹಗಲಿನಲ್ಲೂ ಮನೆಯಲ್ಲೇ ಕೊಳೆತವುದೇಹಗಳು,ಆಂತಕದಿಂದ ದಿನ ದೂಡಿದವುಮನಸುಗಳು ಕೆಲವರು ಊರು ಬಿಟ್ಟರುಹಲವರು ಜಗತ್ತೇ…… ಬಿಟ್ಟರುವಲಸೆ ಯುಗ ಪ್ರವಾಹದಂತೆಹರಿಯಿತು ಗಡಿಗಡಿಗಳ ದಾಟಿಸ್ತಬ್ದವಾದವು ಮಹಾನಗರಗಳುಅಮ್ಮನಾಗಿ, ಮಗಳಾಗಿ, ಅರ್ಧಾಂಗಿಯಾಗಿಹೆಣ್ತನ ನಡೆಯಿತು ದಾರಿಗೆ ಊರುಗೋಲಾಗಿವಲಸೆ ಭಾರತದ ಭಾಗವಾಗಿ. ಮಾತು ಮೌನ ವಾಯಿತುಮುಖಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಹಕ್ಕೂ ಮನಕ್ಕೂ ಬೆಳಕ ಸುರಿವ ದೀಪಾವಳಿ: ಗೌರಿ.ಚಂದ್ರಕೇಸರಿ, ಶಿವಮೊಗ್ಗ

ಜಗದ ಕತ್ತಲೆಯನ್ನೆಲ್ಲ ಹೊಡೆದೋಡಿಸುವ ಬೆಳಕು ಯಾರಿಗೆ ತಾನೆ ಇಷ್ಟವಿಲ್ಲ? ಝಗಮಗಿಸುವ ದೀಪಗಳ ಹಬ್ಬವಾದ ದೀಪಾವಳಿ ಎಂದರೆ ಬಾಲ್ಯದಿಂದಲೂ ಏನೋ ಒಂದು ಆಕರ್ಷಣೆ. ಕಳೆದು ಹೋದ ಅದೆಷ್ಟೋ ದೀಪಾವಳಿಗಳು ಮತ್ತೆ ಮತ್ತೆ ನೆನಪಿಗೆ ಬರುತ್ತವೆ. ಈಗಿನ ತರಾವರಿ ಬಣ್ಣದ ಬಲ್ಬುಗಳ ದೀಪಗಳು ಹಿಂದಿನ ಮಣ್ಣಿನ ಹಣತೆಗಳ ಮುಂದೆ ಮಸುಕಾಗಿ ಬಿಡುತ್ತವೆ. ದೀಪಾವಳಿ ಇನ್ನೂ ತಿಂಗಳಿರುವಾಗಲೇ ಮನೆಯಲ್ಲಿ ಸಡಗರ ಪ್ರಾರಂಭವಾಗುತ್ತಿತ್ತು. ಸೊಂಟಕ್ಕೆ ಸೆರಗನ್ನು ಸಿಕ್ಕಿಸಿ ಉದ್ದವಾದ ಕೋಲೊಂದಕ್ಕೆ ಹಳೆಯ ಬಟ್ಟೆಯನ್ನು ಕಟ್ಟಿ ಜೇಡರ ಬಲೆಗಳನ್ನೆಲ್ಲ ಅವ್ವ ತೆಗೆಯುತ್ತಿದ್ದಳು. ನಂತರ ಅದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಳಕನು ಚೆಲ್ಲಿ ಬಂದೇ ಬಂತು ದೀಪಾವಳಿ..: ವಿನಾಯಕ ಅರಳಸುರಳಿ

ದೀಪಾವಳಿ ಮರಳಿ ಬಂದಿದೆ. ಆಫೀಸಿನ ಬಾಸಿನ ಟೇಬಲ್ ಮೇಲೀಗ ರಜೆಯ ಅರ್ಜಿಗಳೆಲ್ಲ ನಾ ಮೊದಲು, ತಾ ಮೊದಲು ಎಂದು ತಳ್ಳಾಡುತ್ತಾ ಸಾಲಾಗಿ ನಿಂತಿವೆ. ಯಾರಿಗೆ ಕೊಡುವುದು, ಯಾರಿಗೆ ಬಿಡುವುದು ಎಂದು ಯೋಚಿಸುತ್ತಿರುವಾಗಲೇ ಅವರ ಹೆಂಡತಿ ಕಾಲ್ ಮಾಡಿದ್ದಾರೆ. ‘ಹಬ್ಬಕ್ಕೆ ಊರಿಗೆ ಹೋಗಲಿಕ್ಕಿದೆ. ಟಿಕೇಟು ಬುಕ್ ಮಾಡೋದು ಮರೀಬೇಡಿ!” ಎಂದು ನೆನಪಿಸಿದ್ದಾಳೆ. ಹೀಗೆ ಬಾಸೆಂಬ ಬಾಸೇ ರಜೆ ಹಾಕಿ ಹೋದ ಆಫೀಸಿನಲ್ಲಿ ಕೆಲವರಿಗಷ್ಟೇ ರಜೆ ಮಂಜೂರಾಗಿದೆ. ಅವರೆಲ್ಲ ಸಂಭ್ರಮದಲ್ಲಿ ಊರಿನ ಬಸ್ಸು ಹತ್ತುತ್ತಿದ್ದರೆ ರಜೆ ಸಿಗದ ಹತಾಷರು ಹೊರಟವರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೇನು ಮುಟ್ಟಿ ತುಟಿ ಕಚ್ಚಿಸಿಕೊಂಡಂತೆ: ಪಿ.ಎಸ್. ಅಮರದೀಪ್.

ಗಡಿನಾಡ ಊರುಗಳಲ್ಲಿರುವ ಒಂದು ಉಪಯೋಗವೆಂದರೆ, ಅದು ಒಂದಕ್ಕಿಂತ ಹೆಚ್ಚು ಭಾಷಾ ಕಲಿಕೆ ಮತ್ತು ಸರಾಗವಾಗಿ ಮಾತಾಡುವ ರೂಢಿಯಾಗುವುದು. ಕನ್ನಡ – ತೆಲುಗು, ಕನ್ನಡ-ತಮಿಳು, ಕನ್ನಡ-ತುಳು, ಕನ್ನಡ- ಮರಾಠಿ, ಹೀಗೆ. ಅದಲ್ಲದೇ ಹಿಂದಿ ಉರ್ದು ಕೂಡ. ಚೂರು ಇಂಗ್ಲೀಷು ಬೆರೆತರಂತೂ ಬಹುಭಾಷಾ ವಿದ್ಯೆ. ಅಂಥದೊಂದು ಸೌಕರ್ಯ ನಮ್ಮ ಭಾಗದಲ್ಲೂ ಇದೆ. ಬಳ್ಳಾರಿ ರಾಯಚೂರು ಆಂಧ್ರ ಸೀಮೆಯ ಅಂಚಿನಲ್ಲಿರುವುದರಿಂದಲೂ ಜೊತೆಗೆ ತಮಿಳುನಾಡು ಆಂಧ್ರದಿಂದ ತುಂಗಭದ್ರ ಆಣೆಕಟ್ಟು ನಿರ್ಮಾಣ ಹಂತದಲ್ಲಿಂದ ಬಂದು ಸೆಟ್ಲ್ ಆದಂಥ ತಮಿಳಿಗರು, ತೆಲುಗರು ಇಲ್ಲೇ ನೆಲೆ ಊರಿರುವುದರಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಚಿನ್ನಮ್ಮನ ಲಗ್ನದ ಪರಿಚಯ: ಡಾ. ಹೆಚ್ಚೆನ್ ಮಂಜುರಾಜ್

ಪುಸ್ತಕದ ಹೆಸರು: ಚಿನ್ನಮ್ಮನ ಲಗ್ನ-1893(ಮಲೆಗಳಲ್ಲಿ ಮದುಮಗಳು ಕುರಿತ ಟಿಪ್ಪಣಿಗಳು)ಲೇಖಕರು: ಕೆ ಸತ್ಯನಾರಾಯಣ, ಪ್ರಕಾಶಕರು: ಅಂಕಿತ ಪುಸ್ತಕ, ಬಸವನಗುಡಿ, ಬೆಂಗಳೂರುಮೊದಲ ಮುದ್ರಣ: 2020, ₹ 170, ಡೆಮಿ 1/8, ಪುಟಗಳು: 176 ಕೆ ಸತ್ಯನಾರಾಯಣ ಅವರು ನಮ್ಮ ಕನ್ನಡದ ಹೆಮ್ಮೆಯ, ಮಹತ್ವದ ಹಾಗೂ ಸುಸಂವೇದನಾಶೀಲ, ಸೃಜನಶೀಲ ಬರೆಹಗಾರರು. ಅವರ ಕತೆಗಳು ಮತ್ತು ಪ್ರಬಂಧಗಳು ನಮ್ಮ ಭಾಷೆ-ಸಮಾಜ ಮತ್ತು ಸಂಸ್ಕೃತಿಯನ್ನು ವಿಶೇಷವಾಗಿ ವ್ಯಾಖ್ಯಾನಿಸುತ್ತಾ ಅದರ ಪರಿಧಿಯನ್ನು ವಿಸ್ತರಿಸಿವೆ, ಪುನಾರಚಿಸಿವೆ ಮತ್ತು ಆಪ್ಯಾಯಮಾನವಾಗಿ ನಿರ್ವಚಿಸಿವೆ. ಅವರ ಕತೆಗಳು ಮತ್ತು ಪ್ರಬಂಧಗಳ ಶೈಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವರ್ಕ್ ಫ್ರಂ ಹೋಂ ಮತ್ತದರ ಸಮಸ್ಯೆಗಳು: ಪ್ರಶಸ್ತಿ ಪಿ.

ಪೇಟೆಯಲ್ಲಿನ ಸಾಫ್ಟವೇರ್ ಕಂಪೆನಿಗಳಲ್ಲಿ ಕೆಲಸ ಮಾಡ್ತಿದ್ದ ಹುಡುಗರೆಲ್ಲಾ ಈಗ ಹಳ್ಳಿ ಸೇರಿದ್ದಾರೆ. ಮನೇಲೇ ಕೂತ್ಕೊಂಡು ಅದೇನೋ ವರ್ಕ್ ಫ್ರಂ ಹೋಂ ಮಾಡ್ತಿದ್ದಾರೆ ಅನ್ನೋ ಮಾತನ್ನ ಸುಮಾರು ಕಡೆ ಕೇಳಿರ್ತೀರ . ಮುಂಚೆಯೆಲ್ಲಾ ಆಫೀಸಿಗೆ ಅಂತ ಬೆಂಗಳೂರಿಗೆ ಹೋಗ್ತಿದ್ದೆ. ಈಗ ಇಲ್ಲೇ ಇದ್ದೀಯಲ್ಲ. ರಜೆಯೇನಪ್ಪ ನಿಂಗೆ ಅಂತಾರೆ ನಮ್ಮಜ್ಜಿ. ಇಲ್ಲಜ್ಜಿ ಮನೆಯಿಂದ್ಲೇ ಕೆಲಸ ಮಾಡ್ಬೋದು ಲ್ಯಾಪ್ಟಾಪಲ್ಲಿ, ಕಂಪ್ಯೂಟರಲ್ಲಿ ಅಂದ್ರೆ ಏನ್ಮಾಡ್ತೀಯ ಅದ್ರಲ್ಲಿ ? ಲೆಕ್ಕ ಮಾಡೋದಿರುತ್ತಾ ಅಂತಾರೆ. ನಾವು ಏನ್ಮಾಡ್ತೀವಿ ಅಂತ ಹೊರಗೆ ಹೇಳದ ಹಾಗೆ ನಮ್ಮ ಅನ್ನದಾತರಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಬೆಳಕಿನ ಬೆರಗು ನೀನು”: ಮಹಾಂತೇಶ್ ಯರಗಟ್ಟಿ

ಹಾಯ್ ಹೇಗಿದ್ದೀಯಾ…? ಇವತ್ತು ನಿನ್ನದೇ ಇಷ್ಟದ ಹಬ್ಬ ದೀಪಾವಳಿ. ಪ್ರತಿ ದೀಪಾವಳಿಗೊಮ್ಮೆ ಮನದ ಮನೆಯ ದೀಪ ಬೆಳಗಿ ಇಷ್ಟದ ಮಾತುಗಳ ಜೊತೆಗೆ ಕಷ್ಟದ ಕರ್ಮಗಳನ್ನು ತೊರೆದು ನನ್ನ ಮನಸ್ಸನ್ನ ಗಟ್ಟಿ ಮಾಡುತ್ತಿದ್ದೀಯ ನೀನು. ನೀನಿಲ್ಲದ ಮೇಲು ಈಗಲೂ ಹಾಗೆ ಇದ್ದೇನೆ. ದೇವರ ನೆನೆಯೋದನ್ನ ಬಿಟ್ಟು ಸುಮಾರು ವರ್ಷಗಳಾಯಿತು, ಬದಲಿಗೆ ನೀನು ನೆನಪಾಗುತಿ. ಆಸರೆಯ ಅಡಿಪಾಯ ಮುರಿದು ಬಿದ್ದಮೇಲೆ ಶವದ ರೂಪ ತಾಳಿದೆ ಈಗ ಈ ಹೃದಯ. ವರ್ಷದ ಹಬ್ಬಕ್ಕೆ ದೀಪ ಹಿಡಿದು ಶುಭಾಶಯ ಕೋರುವ ನಿನ್ನದೊಂದು ಪುಟ್ಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ ೨

‘ಮಂಗಳಮುಖಿ’ ನಮ್ಮೊಳಗೇ ನಾವೇ ಪರಿಚಿತರುಕೇಳಿ ಜಗದ ಮುಮ್ಮುಖಲಿಂಗಮೌನಿಗಳೇ…ರಕ್ಕಸರಸೋಮನದ ದಿಬ್ಬಣಗಳಗೂಡಿಹೊರಳಾಡುವ ನಿಮ್ಮ ಅಪರಿಚಯನಮ್ಮೊಡನೆ ವಿಧಿಯಿರಬಹುದೇ..?ನಮ್ಮೊಳಗೆ ನಾವೇಸಂಚಯ ಕೇಳಿರಿ ಒಮ್ಮುಖ ದನಿಗಳೆ..ನಿಮ್ಮ ಅಸಹಿಷ್ಣುತೆಗೆಸ್ವಕಲ್ಪಿತ ಚಕ್ರದೊಳಗೇಲುಪ್ತಮೋಹದುನ್ನತಿಯೆಡೆಗೆನಡೆದು ನೆಡೆದು ನಿಮ್ಮ ವಿರಚಿತವಸಾಹತು ಬಿಂಧುವೊಂದಕೆಕಟ್ಟಿಹಾಕುವ ದಟ್ಟ ದನಿಯೂನಿಮ್ಮದೇ ಅಲ್ಲವೇ:ತೃಪ್ತ ತೆರಪು ನಮಗಿಲ್ಲವೇನಿಮ್ಮ ಸ್ಥಾಪಿತ ಗಡಿಯೊಳಗೆ?ಅತೃಪ್ತ ತನವ ಎಲ್ಲಿಗೆ ದೂಕಲಿ ನಾವು?…ನಿಮ್ಮವಿಕೃತಿ ಹೂರಣದಲಿಹುದುಗಿ ಹುದುಗಿ ಆನಂದಾಕೃತಿಒಡಮೂಡುವುದೇ ನಮ್ಮಲಿ?…ನಮ್ಮುಖವ ಕಂಡು ಒಬ್ಬೊಬ್ಬರಲ್ಲೂಮುಖಗಂಟು ಎಂಟಾಗಿದೆನೋಡಿಕೊಳ್ಳಿ ನಮ್ಮ ಭಿನ್ನಕಣ್ಣಕನ್ನಡಿಯಲ್ಲಿ ;ನಲಿವೆಲ್ಲ ಅಂಗಾತವಾಗಿ ಮಸಣದಿಬ್ಬಣಹೊರಟಾಗಿದೆ ದಿನ ದಿನವೂ,ಗರ್ಭದುಃಖವು ಕೋಡಿಯೊಡೆದುನಿಮ್ಮ ಅಸಹ್ಯದ ಭಾವಬುವಿಯೊಳಗೆನಿಂತು ನಲಿವಿನ ಬುಗ್ಗೆಯಾಗಿದೆ;ಮನದಬೊಗಸೆಯಲಿ ಹಿಡಿದು ಕುಡಿಯಿರಿಅಪಾರದರ್ಶಕ ಲಿಂಗಿಗಳೇ.–ಚಿಕ್ಕಜಾಜೂರು ಸತೀಶ ಸತ್ಯ…ಅಷ್ಟೇ..!! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾಸಗಳ ವೈಶಿಷ್ಟ್ಯ: ಗೀತಾ ಜಿ ಹೆಗಡೆ ಕಲ್ಮನೆ.

ಹೃದಯದ ಹೆಬ್ಬಾಗಿಲಿಗೆ ತೋರಣ ಕಟ್ಟಿ ಹೂವಿನ ಘಮಲಿನ ಅರಿವಳಿಕೆಯಲ್ಲಿ ಮೈನವಿರೇಳಿಸುವ ಶೃಂಗಾರದ ಕನಸು ಹೆಣೆಯುತ್ತ ಅರಿವಿಲ್ಲದೆ, ಅರಿವಾಗದಂತೆ ಹೃದಯ ಸಿಂಹಾಸನದ ಮೆಟ್ಟಿಲು ಒಂದೊಂದಾಗಿ ನಿಧಾನವಾಗಿ ಹತ್ತಿ ತಳವೂರಿದ ಹರೆಯದ ವಸಂತ ಕಾಲದ ನೆನಪು ಎಂದಾದರೂ ಮರೆಯಲು ಸಾಧ್ಯವೆ.  ಅದು ಪ್ರತಿಯೊಬ್ಬರ ಬದುಕಿನ ಸುಂದರ ಕ್ಷಣವದು.  ಹೆಣ್ಣಾಗಲಿ ಗಂಡಾಗಲಿ ಹರೆಯದ ಹೊಸ್ತಿಲಲ್ಲಿ ಮನಸ್ಸು ಬೆಳೆದಂತೆಲ್ಲ ಕನಸೂ ಬೆಳೆಯುವುದು ಸ್ವಾಭಾವಿಕ.  ಅದಕ್ಕೆ ದಿನಕ್ಕೊಂದು ರೆಕ್ಕೆ ಪುಕ್ಕ.  ಬಣ್ಣ ಬಣ್ಣದ ಓಕುಳಿಯ ಸಿಂಪಡಿಕೆ.  ಹರೆಯದ ಕನಸುಗಳು ನೂರೆಂಟು.  ಅದು ಮಾತಿನಲ್ಲಿ ಅಥವಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೆಣ್ಣೇ ನಿನ್ನ ಅಂತರಾಳದಲ್ಲಿ ನಿತ್ಯವೂ ಸತ್ಯದ ಹುಡುಕಾಟ…..!?: ದೀಪಾ ಜಿ.ಎಸ್.‌

 ಈಗಿನ ಸ್ವತಂತ್ರದ ಬದುಕಿನಲ್ಲಿ ಒಂದು ಹೆಣ್ಣನ್ನ ನಾಲ್ಕು ಗೋಡೆಗಳ ಮಧ್ಯೆ ಬಂಧಿಸಿ ಅವಳಿಗೆ ಕಾನೂನಿನ ಚೌಕಟ್ಟನ್ನ ನಿರ್ಮಿಸಿ ಅವಳ ಜೀವನವನ್ನ ಕತ್ತಲಿನ ಕೋಣೆಗೆ ತಳ್ಳಿ. ಅವಳಿಗೆ ಜೀವನ ಅಂದರೆ ಏನು ಅನ್ನೋದು ಅವಳಿಗೆ ತಿಳಿಯದ ಹಾಗೆ ಅವಳ ಭಾವನೆಗಳನ್ನ ಹೊಸಕಿ ಹಾಕಿ ಸಂಸಾರದ ಸಾಗರದಲ್ಲಿ ಜವಾಬ್ದಾರಿ ಅನ್ನುವ ಗುಂಡಿಗೆ ತಳ್ಳಿ, ಅಲ್ಲೂ ಅವಳನ್ನ ಎಲ್ಲಾ ತರದಲ್ಲು ಮೂರ್ಖಳನ್ನಾಗಿ ಮಾಡಿ ಅವಳ ಕನಸುಗಳನ್ನ ನುಚ್ಚು ನೂರು ಮಾಡಿ ವ್ಯಂಗ್ಯ ಮಾಡುವ ಈ ಸಮಾಜದಲ್ಲಿ ದೈರ್ಯದಿಂದ ಬದುಕಿ ಬಾಳಿ ತೋರಿಸುವಂತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ