ವರ್ಕ್ ಪ್ರಮ್ ಹೊಮ್ (WFH) ಆಗು -ಹೋಗುಗಳು: ಪ್ರವೀಣ್ ಶೆಟ್ಟಿ, ಕುಪ್ಕೊಡು

ಹಿಂದೆ ಒಂದು ಕಾಲ ಇತ್ತು, ತಿಂಗಳಿಗೆ ಒಂದು WFH ತಗೆದುಕೊಳ್ಳಲು ಮ್ಯಾನೇಜರ್ ಗಳ ಕೈಕಾಲು ಹಿಡಿಯಬೇಕಾಗುತಿತ್ತು. ಆದರೆ ಕೊರೊನಾ ಎಲ್ಲಾ ರೀತಿಯ ವರ್ಕ್ ಕಲ್ಚರ್ ಅನ್ನೇ ಬುಡಮೇಲು ಮಾಡಿಬಿಟ್ಟಿದೆ. ಸರಕಾರ ಲಾಕಡೌನ್ ಜೊತೆಗೆ ಐಟಿ ಕಂಪನಿ ನೌಕರರು ಮನೆಯಿಂದಲೇ ಕಾರ್ಯನಿರ್ವಹಿಸಿ ಎಂದು ಆದೇಶ ನೀಡಿದ ನಂತರ ಕಂಪನಿಗಳು ಮೊದ ಮೊದಲಿಗೆ ಹೆದರಿದರೂ, ಅತೀ ಶೀಘ್ರವಾಗಿ ಹೊಸ ರೀತಿಯ ಕೆಲಸದ ವಾತಾವರಣಕ್ಕೆ ಹೊಂದಿಕೊಂಡವು. ತಮ್ಮ ಉದ್ಯೋಗಿಗಳಿಗೆ ಲ್ಯಾಪ್‌ಟಾಪ್, ಡೆಸ್ಕ್‌ಟಾಪ್ ಗಳನ್ನು ಅವರವರ ಮನೆಗಳಿಗೆ ತಲುಪಿಸಲಾಯಿತು. ನೆಟ್ವರ್ಕ್ ಗಾಗಿ ಕಂಪನಿಯಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಕ್ರಮಣ (ಭಾಗ ೩): ಜೆ.ವಿ. ಕಾರ್ಲೊ

ಇಲ್ಲಿಯವರೆಗೆ ಜಿಂಕೆಯ ಗ್ರಾಚ್ಚಾರ ಕೆಟ್ಟು ರಾಕ್ಷಸ ಇರುವೆಗಳ ಆಕ್ರಮಣಕ್ಕೆ ತುತ್ತಾಗಿತ್ತು. ಮೊಟ್ಟ ಮೊದಲಿಗೆ ಕಣ್ಣುಗಳ ಮೇಲೆ ಆಕ್ರಮಣ ನಡೆಸುವುದೇ ಈ ಇರುವೆಗಳ ವಿಶಿಷ್ಠತೆಯಾಗಿತ್ತು. ಬೇಟೆಯನ್ನು ಕುರುಡಾಗಿಸಿ ಅಸಹಾಯಕ ಸ್ಥಿತಿಗೆ ದೂಡುವುದೇ ಇರುವೆಗಳ ಕಾರ್ಯಾಚರಣೆಯ ಗುಟ್ಟಾಗಿತ್ತು. ತನ್ನ ಹೆಗಲಿನ ಮೇಲಿದ್ದ ಕೋವಿಯಿಂದ ಲೆನಿಂಜೆನ್ ಆ ಪ್ರಾಣಿಯನ್ನು ನೋವಿನಿಂದ ಮುಕ್ತಗೊಳಿಸಿ ತನ್ನ ಜೇಬುಗಡಿಯಾರವನ್ನು ಹೊರತೆಗೆದು ಸಮಯವನ್ನು ನೋಡಿ೮ದ. ನೋಡಲು ಕಿರಿಕಿರಿ ಅನಿ೯ಸಿದರೂ ಅವನೂ ಮುಂದಿದ್ದ ದೃಶ್ಯವನ್ನು ನೋಡಿದ.. ಆರು ನಿಮಿಷ. ಕೇವಲ ಆರು ನಿಮಿಷಗಳು. ಜಿಂಕೆಯ ಅಸ್ಥಿಪಂಜರ ಅವನ ಎದುರಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪತ್ರಿಕೋದ್ಯಮಕ್ಕೆ ಕಾಲಿಡುತ್ತಿದೆ “ಡಬಲ್ ಸ್ಟಾಂಡರ್ಡ್” ಎಂಬ ಭೂತ!: ಚವೀಶ್‌ ಜೈನ್‌

ಪತ್ರಿಕೋದ್ಯಮ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ನಾಲ್ಕನೇ ಆಧಾರ ಸ್ಥಂಬ. ದೇಶದ ಪ್ರತಿಯೊಂದು ವಿಚಾರಗಳಲ್ಲಿ ಮಹತ್ತರ ಪಾತ್ರವಹಿಸುವ ಸಮಾಜದ ಅವಿಭಾಜ್ಯ ಅಂಗ. ಧಮನಿತರ ಮತ್ತು ದನಿ ಇಲ್ಲದವರ ಧ್ವನಿಯಾಗುವುದೇ ಪತ್ರಿಕೋದ್ಯಮದ ಉದ್ದೇಶ. ನಿಷ್ಪಕ್ಷಪಾತವಾಗಿ, ಜಾತಿ-ಮತಗಳನ್ನು ಲೆಕ್ಕಿಸದೆ, ಅಧಿಕಾರ-ಸ್ಥಾನವನ್ನು ಚಿಂತಿಸದೆ, ತಪ್ಪು-ಒಪ್ಪುಗಳ ಕುರಿತು ಅವಲೋಕಿಸಿ, ಧೈರ್ಯದಿಂದ ತಪ್ಪನ್ನು, ಆಡಳಿತ ಲೋಪವನ್ನು ಪ್ರಶ್ನಿಸುವುದೇ ಪತ್ರಿಕೋದ್ಯಮದ ಜವಾಬ್ದಾರಿ ಮತ್ತು ಕರ್ತವ್ಯ. ರಾಷ್ಟ್ರವಾದ, ರಾಷ್ಟ್ರದ ಹಿತಾಸಕ್ತಿ, ಭದ್ರತೆ, ಅಖಂಡತೆ, ಸಮಗ್ರತೆ ಪತ್ರಿಕೋದ್ಯಮದ ಸಿದ್ಧಾಂತದಲ್ಲಿ ಅಡಗಿರಬೇಕಾದ ಮೂಲ ಚಿಂತನೆಗಳು. ಇವೆಲ್ಲವನ್ನೂ ಒಳಗೊಂಡ ಪತ್ರಿಕೋದ್ಯಮ ಸುಸ್ಥಿರ ಸಮಾಜದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 8): ನಾರಾಯಣ ಎಮ್ ಎಸ್

ಹನುಮಾನ್ ಜಂಕ್ಷನ್ನಿನ ಪೋಲೀಸ್ ಚೌಕಿಯಲ್ಲಿ ಅಯ್ಯರ್ ಕಾಣೆಯಾಗಿದ್ದ ದೂರನ್ನು ಅಧಿಕೃತವಾಗಿ ದಾಖಲಿಸಲು ತಂಗಮಣಿಯವರಿಗೆ ಸಾಕಷ್ಟು ಸಮಯ ಹಿಡಿಯಿತು. ಪೋಲೀಸರು ಅಯ್ಯರ್ ಹಿನ್ನಲೆ ಕುರಿತು ಹತ್ತುಹಲವು ಪ್ರಶ್ನೆಗಳನ್ನು ಕೇಳಿದರು. ವೇಲಾಯಧನ್ ಮತ್ತು ತಂಗಮಣಿ ತಮಗೆ ತಿಳಿದಿದ್ದ ಎಲ್ಲ ಮಾಹಿತಿಗಳನ್ನು ಒದಗಿಸಿದರು. ಮದ್ರಾಸು ಸ್ಟೇಷನ್ನಿನಿಂದ ರೈಲು ಹೊರಟಾಗ ಅಯ್ಯರ್ ರೈಲಿನಲ್ಲಿದ್ದುದು ರೈಲ್ವೇ ಪೋಲೀಸರಿಗೆ ಖಾತ್ರಿಯಾಗಿತ್ತು. ಹಾಗಾಗಿ ಹನುಮಾನ್ ಜಂಕ್ಷನ್ನಿನಿಂದ ಹಿಡಿದು ಮದ್ರಾಸಿನವರೆಗೆ ಆ ಮಾರ್ಗದಲ್ಲಿದ್ದ ಎಲ್ಲಾ ನಿಗದಿತ ನಿಲ್ದಾಣಗಳಿಗೂ ಅಯ್ಯರ್ ಕಾಣೆಯಾಗಿದ್ದ ದೂರಿನ ಮಾಹಿತಿ ಕಳುಹಿಸುವ ವ್ಯವಸ್ಥೆ ಮಾಡಿದರು. ಅಯ್ಯರ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಳೆಯನಲ್ಲ (ಕೊನೆಯ ಭಾಗ): ವರದೇಂದ್ರ ಕೆ.

ಇಲ್ಲಿಯವರೆಗೆ (11) “ತಪ್ಪು ಮಾಡುವುದು ಸಹಜ, ಅದನ್ನು ಅರಿತು ಪಶ್ಚಾತ್ತಾಪದಿಂದ ಬದಲಾಗಿ ಉತ್ತಮ ವ್ಯಕ್ತಿ ಆಗುವವನೇ ನಿಜವಾದ ಮನುಜ. ನಾವು ಖಂಡಿತ ನಿಮ್ಮನ್ನು ಕ್ಷಮಿಸುತ್ತೇವೆ, ನಿಮ್ಮ ಮೇಲಿನ ಕೋಪವೆಲ್ಲ ಪ್ರೀತಿಗೆ ಇಂದು ಇಳಿದಿದೆ. ಅವಳ ಮನದಲ್ಲಿನ ನೋವು ಇಂದು ಹೊರ ಬಂದು ಅವಳ ಮನಸು ನಿರಾಳವಾಗಿದೆ. ಪ್ರೀತಿ ಇಷ್ಟು ನೊಂದಕೊಂಡ ಮನುಷ್ಯನಿಗೆ ಮತ್ತೆ ನೋವು ಕೊಡುವುದು ತರವಲ್ಲ. ನಿಮ್ಮ ಸ್ನೇಹ ಯಾವತ್ತಿಗೂ ಚಿರಾಯುವಾಗಿರಬೇಕು. ನೀನೂ ನಿನ್ನ ಸ್ನೇಹಿತನ ತಪ್ಪನ್ನು ಮನ್ನಿಸಬೇಕು ಎಂದು ಪ್ರೀತಿಗೆ ಹೇಳುತ್ತಾನೆ ಸಂಪತ್. ಸಂತೋಷ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೆಲಕಿರುಬನೆಂಬ ಜೇಡ: ಚರಣಕುಮಾರ್

ನಾವು ಚಿಕ್ಕವರಿರುವಾಗ ನಮ್ಮ ತುಂಟಾಟಗಳನ್ನು ನಿಭಾಯಿಸುವುದು ಮನೆಮಂದಿಗೆಲ್ಲಾ ಬಲು ಕಷ್ಟವಾಗಿರುತ್ತಿತ್ತು. ನಮ್ಮನ್ನು ನಿಯಂತ್ರಿಸಲು ಭೂತದ ಕಥೆ, ಹುಲಿ, ಚಿರತೆ ಮತ್ತು ಮಂಗಗಳ ಚಿತ್ರಗಳನ್ನು ತೋರಿಸಿಯೋ ಅಥವಾ ಅವುಗಳ ಹೆಸರುಗಳನ್ನು ಹೇಳಿಯೋ ಹೆದರಿಸುತ್ತಿದ್ದರು. ನನ್ನೂರಿನಲ್ಲಿ ಅಜ್ಜಿಯು, ನೀನೊಬ್ಬನೆ ಮನೆಯಿಂದ ಆಚೆ ಹೋದರೆ ನೆಲಗುಮ್ಮ ಬಂದು ನಿನ್ನನ್ನು ನುಂಗಿಬಿಡುತ್ತದೆ ಎಂದು ಒಮ್ಮೆಯಾದರೆ, ನೋಡು ಆಚೆ ಹೋದರೆ ಆ ಗೋಡೆಯ ಪಕ್ಕದಲ್ಲಿ ನೆಲಪಟ್ಟು ಅಡಗಿ ಕುಳಿತಿದೆ ನಿನ್ನನ್ನು ಕಚ್ಚಿ ತಿಂದುಬಿಡುತ್ತದೆ ಎಂದು ಮತ್ತೊಮ್ಮೆಯಾದರೆ, ನಾವು ಊಟಮಾಡದೆ ಹಠಮಾಡುತ್ತಿರುವಾಗ ಒಂದು ಕೊಳವೆಯಾಕಾರದಲ್ಲಿ ಪಿ.ವಿ.ಸಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇದೇ ‘ರಮ್ಯ’ ಚೈತ್ರ ಕಾಲ: ಬೀರೇಶ್ ಎನ್. ಗುಂಡೂರ್

ಇಲ್ಲಿ ಎಲ್ಲದಕ್ಕೂ ಉತ್ತರವಿಲ್ಲ. ಪ್ರಶ್ನೆಗಳೇ ಎಲ್ಲ. ನಿನ್ನ ಒಪ್ಪಿಸುವ ಭರದಲ್ಲಿ ನಾನೆಲ್ಲೋ ಸೋತು ನಿಸ್ಸಾಯಕನಾಗಿ ನಿಂತುಬಿಟ್ಟೆ ಅನಿಸುತ್ತದೆ. ಅದೇನೋ, ಬೇರೆಯವರಲ್ಲಿ ನಿನ್ನನ್ನು ಹುಡುಕಿಕೊಳ್ಳುವುದು..ನೀರಿಲ್ಲದೆ ಮೀನು ತನ್ನ ಅಸ್ತಿತ್ವ ಹುಡುಕಿಕೊಂಡಂತೆ ಅನಿಸುತ್ತದೆ. ಈ ಜಗತ್ತಿನ ಸೊಬಗಿಗೆ, ನಾಳೆಗಳ ಆಕಾಂಕ್ಷೆಗಳಿಗೆ, ಎಲ್ಲವನ್ನು ಮೀರಿ ಬದುಕಿಬಿಡುತ್ತೇನೆ, ಗೆದ್ದುಬಿಡುತ್ತೇನೆ ಎನ್ನುವ ಈ ಮಂದಿಯ ಅದಮ್ಯ ಚೇತನಕ್ಕೆ ಅದೊಂದೇ, ‘ಪ್ರೀತಿ’ಯೇ ಕಾರಣ ಅಂತ ಅಷ್ಟು ಬಾರಿ ಓದಿಕೊಂಡಿದ್ದೇನೆ. ಅದೊಂದು ತಪಸ್ಸು. ಆರಾಧನೆ. ಎಲ್ಲವನ್ನೂ ಸಾದ್ಯವಾಗಿಸುವ, ಎಲ್ಲವನ್ನೂ ಮರೆಸುವ, ಮೆರೆಸುವ, ಇನ್ನೆಲ್ಲವನ್ನೂ ತೆಕ್ಕೆಗೆ ಬಾಚಿಕೊಳ್ಳುವ, ಎಲ್ಲವನ್ನೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವಮಾನವ: ಡಾ. ದೋ. ನಾ. ಲೋಕೇಶ್

ಮಾಸಿದ ಬಟ್ಟೆ, ತಲೆಗೆ ಸುತ್ತಿದ ಕೊಳಕು ಟವೆಲ್, ಎಣ್ಣೆ, ನೀರು ಕಾಣದೆ ಧೂಳು ತುಂಬಿದ, ಕನಿಷ್ಟ ದಿನಕೊಮ್ಮೆ ಬಾಚಣಿಗೆಯೂ ಕಾಣದೆ ಗುಂಗುರು ಗುಂಗುರಾದ ಕೇಶರಾಶಿಯನ್ನು ಹೊಂದಿದ್ದ, ತನ್ನ ಶಿಳ್ಳೆಯೊಂದರಿಂದಲೇ ಹಯವೇಗದಲ್ಲಿ ಓಡುತ್ತಿದ್ದ ಬಸ್ಸನ್ನು ನಿಲ್ಲಿಸುತ್ತಿದ್ದ, ಹಾಗೂ ನಿಂತಿದ್ದ ಬಸ್ಸನ್ನು ಅದೇ ಶಿಳ್ಳೆಯಿಂದ ಚಲಿಸುವಂತೆ ಮಾಡುತಿದ್ದ ಎಲ್ಲರ ನಡುವೆ ಇದ್ದೂ ಇಲ್ಲದಂತಿದ್ದ ಅವನೊಬ್ಬನಿದ್ದ. ಅವನ ಹೆಸರೇ ಕ್ಲೀನರ್. ಹಿಂದೆ ನಮ್ಮ ಬಾಲ್ಯದಲ್ಲಿ ಹಳ್ಳಿಗಾಡಿನ ಸಾರಿಗೆ ಸಂಪರ್ಕ ಸಾಧನಗಳೆಂದರೆ ಖಾಸಗಿ ಬಸ್ಸುಗಳೇ. ಈಗಿನಂತೆ ಸಾರಿಗೆ ಸಂಸ್ಥೆಯ ಬಸ್ಸುಗಳಾಗಲಿ, ಜನಗಳನ್ನು ಸರಕು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಕ್ರಮಣ (ಭಾಗ 2): ಜೆ.ವಿ. ಕಾರ್ಲೊ

ಇಲ್ಲಿಯವರೆಗೆ ತಾನೊಬ್ಬ ಮಹಾನ್ ಬುದ್ಧಿವಂತ ಎಂದು ತಿಳಿದುಕೊಂಡಿರುವ ಮನುಷ್ಯನಿಗೆ ಒಂದು ಯಕಃಶ್ಚಿತ್ ಇರುವೆ ಯೋಚಿಸಲು ಶಕ್ತವಾಗಿರುವುದಷ್ಟೇ ಅಲ್ಲದೆ ಯೋಜನೆಯನ್ನೂ ರೂಪಿಸಲೂ ಶಕ್ತವಾಗಿರುತ್ತದೆ ಎಂದರೆ ನಂಬುವುದು ಕಷ್ಟವೇ. ಲೆನಿಂಜೆನ್ನನ ಐರೋಪ್ಯ ಬುದ್ಧಿವಂತಿಕೆ ಮತ್ತು ಬ್ರೆಜಿಲಿನ್ನಿಯರರ ದೇಶಿ ಬುದ್ಧಿವಂತಿಕೆ ಈ ಇರುವೆಗಳ ಬುದ್ದಿವಂತಿಕೆಗೆ ಸರಿಸಾಟಿಯಾಗಬಲ್ಲುದೇ? ನಿಜ. ಲೆನಿಂಜೆನ್, ಇರುವೆಗಳು ಒಳಗೆ ಬರದಂತೆ ನೀರಿನ ಕಾಲುವೆಯನ್ನೇನೋ ನಿರ್ಮಿಸಿದ್ದ. ಲೆನಿಂಜೆನ್ನನ ಯೋಜನೆ ಏನೇ ಇರಲಿ.. ಅದನ್ನು ಹಾಳುಗೆಡುವುದೇ ಇರುವೆಗಳ ಪ್ರತಿಯೋಜನೆಯಾಗಿತ್ತು. ಸಂಜೆ ನಾಲ್ಕರಷ್ಟೊತ್ತಿಗೆ ಇರುವೆಗಳ ಆಕ್ರಮಣದ ಅಂತಿಮ ರೂಪುರೇಷೆಗಳು ತಯಾರಾದಂತೆ ಕಾಣಿಸಿತು. ಕಾಲುವೆಯೊಂದೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 7): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ -೭- ’ಶ್ಯೀ…ಕುಯ್ಯ್… ಶ್ಯೀ…ಕುಯ್ಯ್… ಶ್ಯೀ…ಕುಯ್ಯ್… ಕುಯ್ಯ್…’ ಎಂದಾದ ಸದ್ದಿಗೆ ಅಯ್ಯರಿಗೆ ಎಚ್ಚರವಾಯ್ತು. ಕೂತಲ್ಲೇ ಕಣ್ತೆರೆದರು. ಎದುರಿಗೆ ಒಂದು ಬಡಕಲು ಕುನ್ನಿ ಕಂಡಿತು. ಅದೀಗ ಸ್ವಲ್ಪದೂರದಲ್ಲಿ ಬಿದ್ದಿದ್ದ ನಶ್ಯದಕವರಿನತ್ತ ದಿಟ್ಟಿಸಿ ತನ್ನ ಕೋರೆಹಲ್ಲು ತೋರುತ್ತಾ ಗುರ್ರ್ ಎಂದು ಗುರುಗುಟ್ಟತೊಡಗಿತು. ಪಾಪ ಪ್ರಾಣಿ ಏನೋ ತಿನ್ನಲು ಸಿಕ್ಕಿತೆಂದು ನಶ್ಯದಕವರಿಗೆ ಬಾಯಿಹಾಕಿರಬೇಕು. ನಶ್ಯದ ಫಾಟಿಗೆ ಸೀನುಬಂದು ನಾಯಿ ಗಾಬರಿಗೊಂಡಿತ್ತು. ಅಯ್ಯರಿಗೆ ತಾನೆಲ್ಲಿದ್ದೇನೆ ತಿಳಿಯಲಿಲ್ಲ. ಅಪರಾತ್ರಿಯ ನೀರವತೆಯಲ್ಲಿ ದೂರದಲ್ಲೆಲ್ಲೋ ಜೀರುಂಡೆಗಳು ಗುಯ್ಗುಟ್ಟುತ್ತಿದ್ದುವು. ನಿಧಾನಕ್ಕೆ ಸಿಕ್ಕಿಕೊಂಡಿದ್ದ ಪರಿಸ್ಥಿತಿ ಅರಿವಾಗಹತ್ತಿತು. ಕೈಯಲ್ಲಿ ಬಿಡುಗಾಸಿಲ್ಲ. ಮೈಮೇಲೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 39 & 40): ಎಂ. ಜವರಾಜ್

-೩೯- ಕುಲ ಸೇರಿತ್ತು ಈ ಅಯ್ನೋರು ಕೆಂಡವಾಗಿದ್ರು ಶಂಕ್ರಪ್ಪೋರು ಕೈಕಟ್ಟಿದ್ರು. ‘ಅಯ್ನೋರಾ, ನೀವಿಲ್ಗ ಬರಂಗೇ ಇರ್ನಿಲ್ಲ ನಾವು ಕುಲ ಸೇರ್ಬೇಕೇ ಇರ್ನಿಲ್ಲ ಆದ್ರ ಕುಲ ಕುಲನೆ ಈ ಕುಲ್ಕ ಬ್ಯಲ ಕೊಟ್ಟು ಬಂದಿದರಿ… ಇಸ್ಟು ಜಿನ್ವು ನೀವೆ ನ್ಯಯ ಮಾಡ್ತಿದ್ರಿ ಆದ್ರ ದೂರು ನಿಮ್ಮನ ಕಡಿಂದ ಅದ ಕುಲ್ದ ನಿಯ್ಮ ಎಲ್ರುಗು ಒಂದೆ ಅನ್ತ ಗೊತ್ತಿರದೆ ಅಲ್ವ. ನಾವು ನಿಮ್ಬುಟ್ಟು ಕುಲ ಮಾಡ್ಬೇಕಾಗಿ ಬಂದುದಾ. ಈ ಕಾರ್ಣ ನಿಮ್ಮ ಕರೆಸ್ಬೇಕಾಯ್ತು, ಕರಸ್ದು.. ನೀವು ಬಂದಿದರಿ ಅದ್ಕ ಈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಳೆಯನಲ್ಲ (ಭಾಗ 5): ವರದೇಂದ್ರ ಕೆ.

ಇಲ್ಲಿಯವರೆಗೆ… (9) ಪ್ರೀತಿಯ ತಂದೆ ಬಂದು “ಅಳಿಯಂದ್ರೆ, ಗೋಪಾಲಯ್ಯ ಎಂದರೆ ಯಾರು? ಒಂದೇ ಸಮನೆ ನಿಮ್ಮ ತಾಯಿಯವರು, ಗೋಪಾಲಯ್ಯ ಕೊಲೆ ಕೊಲೆ ಎನ್ನುತ್ತಿದ್ದಾರೆ. ಬೇಗ ಬನ್ನಿ” ಎನ್ನುತ್ತಾರೆ. ಗೋಪಾಲಯ್ಯ ಹೋ ನನ್ನ ತಂದೆಯವರನ್ನು ಕೊಲ್ಲಿಸಿದವನು ಎಂದು ಆಗಾಗ ಅಮ್ಮ ಹೇಳುತ್ತಿದ್ದರು. ಈಗ್ಯಾಕೆ ಅವನ ಹೆಸರು ಹೇಳುತ್ತಿದ್ದಾರೆ. ಎಂದು ಆಶ್ಚರ್ಯದಿಂದ ಒಳ ಓಡುತ್ತಾನೆ. ಕಮಲಮ್ಮಗೆಎಚ್ಚರವಾಗಿರುತ್ತೆ. ಅಮ್ಮಾ, ಏನಾಯಿತಮ್ಮ? ಎಂದಾಗ ಬೆಳಿಗ್ಗೆ ಗೋಪಾಲಯ್ಯನ ಹಾಗೆಯೇ ಇದ್ದವ ಯಾರೋ ನಮ್ಮ ಮನೆ ಮುಂದೆ ಬಂದಿದ್ದ, ನಿಮ್ಮಪ್ಪನನ್ನು ಕೊಲ್ಲಿಸಿದ್ದು ಸಾಕಾಗಲಿಲ್ಲವೇನೋ, ಮತ್ಯಾರನ್ನು ಕೊಲ್ಲಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನದ ಆಸೆ ಆಕಾಂಕ್ಷೆಗಳು ಹಾಗೂ…..?: ಶೀಲಾ ಎಸ್.‌ ಕೆ.

ಒಂದು ಲೋಟ ಕಾಫಿ ಕೊಡ್ತಿಯಾ ಪದ್ಮ ಎಂದು ಹಜಾರಕ್ಕೆ ಬಂದು ಕುಳಿತರು ನಂಜುಂಡಪ್ಪ. ಕೈಯಲ್ಲಿ ಕಾಫಿ ಲೋಟ ಹಿಡಿದು ಬಂದ ಪದ್ಮ ತುಂಬ ಸುಸ್ತಾದವರಂತೆ ಕಾಣುತಿದ್ದಿರಿ ಎಂದು ಕೇಳಿದರು, ಆಗ ತಾನೇ ಕೆಲಸ ಮುಗಿಸಿ ಬಂದಿದ್ದ ತನ್ನ ಗಂಡನನ್ನ. ಸ್ವಲ್ಪ ಕೆಲಸ ಜಾಸ್ತಿ ಈಗ ಮೊದಲಿನಂತೆ ಅಲ್ಲ ಎಲ್ಲ ಹೊಸ ಹೊಸ ಪ್ರಯೋಗಗಳು, ಹೊಸ ಬಗೆಯ ಕೋಚಿಂಗ್ ಅಂತಾರೆ, ಈಗ ಅದನ್ನು ಕಲಿಯಲು ಅಥವಾ ಅಳವಡಿಸಿಕೊಳ್ಳಲು ಸ್ವಲ್ಪ ಸಮಯ ಹಾಗು ಶ್ರಮವಾಗುತ್ತಿದೆ ಅಷ್ಟೆ ಎಂದರು. ಸರಿ ಬೇಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಸಾದ್‌ ನಾಯ್ಕ್‌ ಅವರ ಸಫಾ ಪುಸ್ತಕದಿಂದ

ಪುಸ್ತಕವಾಗಿ ಹೊರಬಂದಿದ್ದ ನನ್ನ ಆತ್ಮಕಥನವನ್ನು ಚಲನಚಿತ್ರವಾಗಿ ತೆರೆಯ ಮೇಲೆ ಮೂಡಿಸಲು ಆಫರ್ ಗಳು ಬರುತ್ತಲೇ ಇದ್ದರೂ ನಾನು ಹಲವು ವರ್ಷಗಳ ಕಾಲ ನಿರಾಕರಿಸುತ್ತಲೇ ಬಂದಿದ್ದೆ. 1998 ರಲ್ಲಿ ಪುಸ್ತಕವು ಬಿಡುಗಡೆಯಾದಾಗಿನಿಂದ ಹಾಲಿವುಡ್ ನ ಹಲವು ಖ್ಯಾತ ನಿರ್ದೇಶಕರುಗಳು ನನ್ನ ಬಳಿ ಬಂದು ಈ ಕಥೆಯನ್ನು ಚಲನಚಿತ್ರವಾಗಿ ಪ್ರೇಕ್ಷಕರ ಮುಂದಿಡುವ ಇಂಗಿತವನ್ನು ವ್ಯಕ್ತಪಡಿಸಿದ್ದರು. ಈ ಸಂಬಂಧವಾಗಿ ಹಲವು ಕಾನ್ಸೆಪ್ಟುಗಳನ್ನೂ ನನ್ನ ಮುಂದಿಡಲಾಯಿತು. ಆದರೆ ಈ ಎಲ್ಲಾ ಕಾನ್ಸೆಪ್ಟುಗಳಲ್ಲಿ ಇದ್ದಿದ್ದು ಒಂದೇ ಥೀಮ್: ಆಫ್ರಿಕಾದ ಸಿಂಡ್ರೆಲ್ಲಾ; ಮರುಭೂಮಿಯಿಂದ ಫ್ಯಾಷನ್ ರ್ಯಾಂಪ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರಥಮ ಆಂಗ್ಲೋ ಇಂಡಿಯನ್ ಕವಯತ್ರಿ-ತೋರು ದತ್ತ: ನಾಗರೇಖಾ ಗಾಂವಕರ

ತೋರು ದತ್ತ ಆಂಗ್ಲ ಹಾಗೂ ಪ್ರೇಂಚ ಭಾಷೆಯಲ್ಲಿ ಬರೆದ ಭಾರತೀಯ ಕವಯತ್ರಿ. ಆಕೆಗೆ ಕಾವ್ಯ ರಚನೆ ಜನ್ಮತಃ ಸಿದ್ಧಿಸಿದ ಕಲೆ. ಹಾಗಾಗೆ ಅತೀ ಅಲ್ಪಾಯುಷಿಯಾದ ಬರೀ 21 ವರ್ಷಕ್ಕೆ ಇಹಲೋಕ ತ್ಯಜಿಸಿದ ತೋರು ದತ್ತ ಅವಿಸ್ಮರಣೀಯವೆನಿಸುವ ಕೃತಿಗಳನ್ನು ರಚಿಸಿ ಇಂಗ್ಲೀಷ ಸಾಹಿತ್ಯ ಲೋಕದಲ್ಲಿ ತನ್ನದೇ ಛಾಪು ಒತ್ತಿದ್ದಾಳೆ. ರಾಮ ಬಾಗನ್ ದತ್ತ ಕುಟುಂಬದಲ್ಲಿ 1856 ಮಾರ್ಚ 4ರಂದು ಜನಿಸಿದ ತೋರು ದತ್ತರ ತಂದೆ ಗೋವಿನ್ ಚಂದರ ದತ್ತ. 1862ರಲ್ಲಿ ಕುಟುಂಬ ಕ್ರೈಸ್ತಧರ್ಮಕ್ಕೆ ಮತಾಂತರಗೊಂಡಿತು. ತೋರುವಿನ ಸಹೋದರ ಅಬ್ಜು,ಅಕ್ಕ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಮಾಚಾರಿ ಹಾಡುವ ಲಾಲಿ ಹಾಡ ಕೇಳವಾ…: ಗುರುಪ್ರಸಾದ ಕುರ್ತಕೋಟಿ

ಅವತ್ತಿನ ಒಂದೊಂದು ಕ್ಷಣಗಳು ನನಗೆ ಒಂದು ಚಲನಚಿತ್ರದ ಫ್ರೆಮುಗಳಂತೆ ನೆನಪಿವೆ, ಅದೂ ಕಲರ್ ಸಿನಿಮಾ! ಹುಬ್ಬಳ್ಳಿಯ ಸುಧಾ ಚಿತ್ರಮಂದಿರದಲ್ಲಿ ರಾಮಾಚಾರಿ ಚಿತ್ರವನ್ನು ಅಮ್ಮನ ಜೊತೆ ಕುಳಿತುಕೊಂಡು ನೋಡಿದ ಮಧುರ ಕ್ಷಣಗಳವು. ಅದು ನನ್ನಮ್ಮನ ಜೊತೆ ನೋಡಿದ ಕೊನೆಯ ಸಿನೆಮಾ. ಹತ್ತು ಹಲವಾರು ಅರೋಗ್ಯ ಸಮಸ್ಯೆಗಳು ಅವಳನ್ನು ತುಂಬಾ ಬಸವಳಿಯುವಂತೆ ಮಾಡಿದ್ದವು. ದಿನ ದಿನಕ್ಕೂ ಅವಳಲ್ಲಿ ಜೀವಿಸುವ ಹಂಬಲ ಕಡಿಮೆಯಾಗುತ್ತಿದ್ದ ಸಮಯವದು. ಆದರೆ ತುಂಬಾ ಜೀವನೋತ್ಸಾಹಿಯಾಗಿದ್ದ ಅವಳು ಇಂತಹ ಸಂಧರ್ಬದಲ್ಲೂ ‘ರಾಮಾಚಾರಿ’ ಯನ್ನು ನೋಡಲು ಬಯಸಿದ್ದಳು. ಸಿನೆಮಾದ ಕೆಲವೊಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತೆರೆಯ ಮರೆಗೆ ಸರಿದ ಧೋನಿಯ ಮರೆಯುವ ಮುನ್ನ: ಸತೀಶ್ ಶೆಟ್ಟಿ ವಕ್ವಾಡಿ

ಪ್ರತಿಯೊಂದಕ್ಕೂ ಅಂತ್ಯವಿರಲೆ ಬೇಕು ಮತ್ತು ಆ ಅಂತ್ಯದ ಆರಂಭದ ಮೊದಲೆ ಅಂತ್ಯವಾದರೆ ಆ ಅಂತ್ಯಕ್ಕೊಂದು ಅಂತ್ಯವಿಲ್ಲದ ಇತಿಹಾಸವಿರುತ್ತದೆ. ಹೌದು ಸ್ವಲ್ಪ ಕಷ್ಟವಾದರೂ ಜೀರ್ಣಿಸಿಕೊಳ್ಳಲು ಸಾಧ್ಯವಾಗುವ ಸಾಲಿದು ಮತ್ತು ಕ್ರೀಡಾಪಟುಗಳಿಗೆ ಅನಂತ ಸಂತೃಪ್ತಿ ನೀಡುವ ಸಾಲಿದು. ಪ್ರತಿಯೊಬ್ಬ ಕ್ರೀಡಾಪಟುವಿಗೂ ತನ್ನ ವೃತ್ತಿ ಜೀವನದ ಅಂತ್ಯದ ಆರಂಭ ಜಗತ್ತಿಗೆ ತಿಳಿಯುವ ಮೊದಲೆ ಗೋಚರಿಸುತ್ತೆ . ಆದರೆ ಅದನ್ನು ಅವನು ಯಾವ ರೀತಿ ನಿರ್ವಹಿಸುತ್ತಾನೆ ಅನ್ನೊದರ ಮೇಲೆ ಅವನ ವೃತ್ತಿಯೋತ್ತರ ಜೀವನ ರೂಪಿತವಾಗುತ್ತೆ. ಎಷ್ಟೋ ಕ್ರೀಡಾಳುಗಳು ಜಗತ್ತು ನಿಬ್ಬೆರಗಾಗುವಂತೆ ತಮ್ಮ ವೃತ್ತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಂಜೆ ಪದಕ್ಕೆ ಪುಲ್ಲಿಂಗ ಏನು?: ಗಿರಿಜಾ ಜ್ಞಾನಸುಂದರ್

“ಚಪಾತಿ ಹೊತ್ತಿಹೋಗ್ತಿದೆ, ಸ್ವಲ್ಪ ನೋಡ್ಬಾರ್ದಾ?” ತನ್ನ ಅತ್ತೆಯ ಕೂಗಿನಿಂದ ವರ್ತಮಾನಕ್ಕೆ ಬಂದಳು ಪ್ರೀತಿ. “ಅಡುಗೆಮನೆಲ್ಲಿದೀಯ….. ಮಾಡೋ ಕೆಲ್ಸದ ಕಡೆ ಗಮನ ಇರ್ಲಿ” ಅಂದು ಯಾಕೋ ಅವಳ ಅತ್ತೆ ಕಮಲಾ ಸ್ವಲ್ಪ ಖಾರವಾಗಿಯೇ ಇದ್ದಳು. ಪ್ರೀತಿಗೆ ಏನು ಹೇಳಲು ತೋಚದೆ ಸುಮ್ಮನೆ ತಲೆ ಬಗ್ಗಿಸಿ ಚಪಾತಿ ಮಾಡುವ ಕಡೆ ಗಮನ ಮಾಡಿದ್ದಳು. ” ಏನ್ರಿ, ನೆನ್ನೆ ಸೀತಮ್ಮನ ಮನೆಗೆ ಕುಂಕುಮಕ್ಕೆ ಹೋಗಿದ್ದೆ. ಅವಳ ಮಗನ ಮಾಡುವೆ ಮಾಡಿ ಇನ್ನು ೩ ವರ್ಷ ಆಗಿಲ್ಲ…. ಆಗ್ಲೇ ಮನೆಲ್ಲಿ ಅವಳಿ ಜವಳಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಕ್ರಮಣ (ಭಾಗ 1): ಜೆ.ವಿ. ಕಾರ್ಲೊ

ಮೂಲ: ಕಾರ್ಲ್ ಸ್ಟೀಫನ್ ಸನ್ ಅನುವಾದ: ಜೆ.ವಿ. ಕಾರ್ಲೊ “ಒಂದು ವೇಳೆ ಅವು ದಿಕ್ಕು ಬದಲಿಸಿದರೆ, ಬೇರೆ ಮಾತು.. ಆದರೆ ಹಾಗೆಂದು ಭಾವಿಸಲು ಯಾವುದೇ ಆಧಾರಗಳಿಲ್ಲ. ಅವು ನಿಮ್ಮ ತೋಟದ ಕಡೆಗೇ ಬರುತ್ತಿವೆ. ಹೆಚ್ಚೆಂದರೆ ಇನ್ನು ಎರಡು ದಿವಸ!” ಲೆನಿಂಜೆನ್ನನ ಮುಖದ ಮೇಲೆ ಆತಂಕದ ಗೆರೆಗಳು ಮೂಡಿದವು. ತನ್ನ ನಂದಿ ಹೋಗಿದ್ದ ದಪ್ಪನೆಯ ಚಿರೂಟನ್ನು, ಹಸಿದವನಂತೆ ಗಬಗಬನೆ ಸೇದತೊಡಗಿದ. ಅವನಿಗೆ ಸುದ್ಧಿ ಕೊಡಲು ಬಂದಿದ್ದ ಜಿಲ್ಲಾಧಿಕಾರಿಯ ಮುಖದ ಮೇಲೂ ಚಿಂತೆಯ ಗೆರೆಗಳು ಮೂಡಿದ್ದವಷ್ಟೇ ಅಲ್ಲದೆ ಅವನು ಯಥೇಚ್ಛವಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 6): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ -೬- ರಾತ್ರಿ ಎರಡು ಘಂಟೆಗೆ ರೈಲು ನೆಲ್ಲೂರನ್ನು ತಲುಪಿತು. ಅದು ಎಲ್ಲರೂ ಹೆಣಗಳಂತೆ ನಿದ್ರಿಸುವ ಹೊತ್ತು. ಕಳ್ಳ ಕಾಕರು ಸಕ್ರಿಯರಾಗುವ ಹೊತ್ತು. ಸಾಮಾನ್ಯವಾಗಿ ಆ ಸಮಯದಲ್ಲಿ ರೈಲ್ವೇ ಪೋಲೀಸರು ಪ್ರಯಾಣಿಕರನ್ನು ಜಾಗೃತಗೊಳಿಸುವುದು ಪದ್ಧತಿ. ಅದರಂತೆ ನೆಲ್ಲೂರಿನಲ್ಲಿ ರೈಲುಹತ್ತಿದ ಇಬ್ಬರು ರೈಲ್ವೇ ಪೋಲೀಸರು “ನಿಂ ನಿಂ ಬೆಲೆಬಾಳೋ ವಸ್ತು ಜೋಪಾನಾ… ಕಿಟ್ಕಿ ಬಾಗ್ಲು ಹಾಕ್ಕಳೀ…ಒಡವೆ ವಸ್ತ್ರ ಜೋಪಾನಾ…” ಎಂದು ಪ್ರತಿಬೋಗಿಯಲ್ಲೂ ಕೂಗುತ್ತಾ ಬರುತ್ತಿದ್ದರು. ಅಯ್ಯರ್ ಬೋಗಿಯಲ್ಲಿಯೂ ಬಂದು ಕೂಗುತ್ತಿದ್ದಂತೆ ಅಯ್ಯರ್ ತಂಡಕ್ಕೆ ಸೇರದ ಅಲ್ಲಿದ್ದ ಪ್ರಯಾಣಿಕನೊಬ್ಬ “ಬೋಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 37 & 38): ಎಂ. ಜವರಾಜ್

-೩೭- ಬಾಗ್ಲು ‘ಕಿರ್..’ ಅನ್ತು ನನ್ಗ ಮಂಪ್ರು ನೋಡ್ಬೇಕು ಅಂದ್ರು ಆಯ್ತಿಲ್ಲ ಹಂಗೆ ಕಣ್ಮುಚ್ದಿ ‘ಕಿರ್..’ ಅದೆ ಬಾಗ್ಲು ಸದ್ದು ಇನ್ನೊಂದ್ಸಲ. ಈ ಅಯ್ನೋರು ನಾಟ್ಕ ನೋಡ್ತ ಎದ್ಬಂದಾಗ ಬೆಳುಗ್ಗ ನಾಕತ್ರ ಆಗಿತ್ತು ಈಗ್ತಾನೆ ನಿದ್ದ ಹತ್ತಿತ್ತು ಅರಗಣ್ಣು ಬುಟ್ಟಿ ನೀಲವ್ವೋರು ಕಂಡ್ರು ಅದ್ಯಾಕಾ ಏನಾ ಇವತ್ತು ಸೀಗಕಡ್ಡಿ ಹಿಡಿದೆ ಇಟ್ಗ ಗುಡ್ಡಲಿ ತಿಕ ಊರಿ ಮಂಡಿ ತಬ್ಕಂಡು ಬಿಸುಲ್ಗ ಮುಖ ಕೊಟ್ಗಂಡು ಕುಂತ್ರು. ದೊಡ್ಡವ್ವ ಬಂದು ‘ಕುಸೈ ನೀಲ ಹೆಂಗಿದ್ದಯ್ ನೀ ಯೋಚ್ನ ಮಾಡ್ಬೇಡ ಮೈಯಿಳಿಸ್ಕಂಡದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 35 & 36): ಎಂ. ಜವರಾಜ್

-೩೫- ‘ದೊಡ್ಡವ್ವವ್..’ ಎದುರು ಮನ ಪಡ್ಸಾಲ್ಲಿ ಕುಂತು ಎಲ ಅಡ್ಕ ಹಾಕತ ಅಯ್ನೋರ್ ದನಿ. ಆ ದನಿಗ, ‘ಕುಸೈ ಒಳ್ಳಿ ಕೆಲ್ಸ ಮಾಡ್ದ ಬುಡು ಊರು ಸುಮ್ನಿದ್ದಾ.. ಈ ವಯ್ಸಲಿ ಇದ್ಯಾನ ಹಿಂಗಾ.. ನೀಲ ಒಳ್ಳೋಳೆ ಆದ್ರ ಹಣಬರ ಇರ್ಬೇಕಲ್ಲ ಬುಡು ಈಗೇನ ಶಂಕ್ರಿಲ್ವ.. ಸಾಕು ಬುಡು ಹೆಂಗು ಅವ್ನುಗು ಗಂಡಾಗದ ವಂಶ ಹೆಸರೇಳಕಾದ್ರು ಆಯ್ತಲ್ಲ ಬುಡು’ ‘ದೊಡ್ಡವ್ವವ್ ಸುಮ್ನಿದ್ದಯ.. ಕುಲ್ಗೆಟ್ಟವೆಲ್ಲ ನನ್ ವಂಶನಾ..’ ‘ಮೊಗ ಅವ ಕುಲ್ಗೆಟ್ಟ ಹೆಣ್ಣೇ ಇರಬೋದು ನಿನ್ ರಕ್ತ ಕುಲ್ಗೆಟ್ಟೊಗಿದ್ದಾ.. ಶಂಕ್ರನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಅಂತ್ಯವೆಲ್ಲಿ? ತೋಳ ತೆಕ್ಕೆಯಲಿಲ್ಲದ ಕಾಣದ ನೋಟ ಆದರೂ ಹಠ ಬಿಡದ ಭಯಂಕರ ಸಾವು-ನೋವು ಮಂದಗತಿಯಲಿ ಹೊಗೆ ಉರಿಯುತ್ತಿದೆ ಬೆಂಕಿ ಅಡಗಿದೆ ಗಾಳಿ ಸೋಕಿ ಸೋಂಕು ಎನಿಸಿಕೊಂಡಿದೆ ಮನೆಯಲ್ಲಿ ಬೀಗ ಜಡಿದಿದ್ದಾರೆ ನೆರೆಯವರು ಗುಸುಗುಸು ಸನಿಹವಂತೂ ಸುಳಿಯೋದೆ ಇಲ್ಲ ಯಾರೂ …ಬೆಳಕು, ಗಾಳಿ, ಕತ್ತಲು ಬಂಧುಗಳಿಲ್ಲ, ಹೆಂಗಳೆಯರು ಎಲ್ಲೋ ತಾಯ್ಮನೆ ನೆನೆಸುತ್ತಿದ್ದಾರೆ ಆದರೆ ಬರಲೊಲ್ಲದ ಸಮಯ ಬೇಲಿ ಹಾಕಿದ್ದಾರೆ ಸರ್ಕಾರದವರು ನಮ್ಮ ಒಳಿತಿಗೆ ಅಲ್ಲವೇ? ಮನೆಯ ಬಾಗಿಲ ದಾರಂದರ ಪಟ್ಟಿಯೊಳಗೆ ಹಸಿ ಬಟ್ಟೆಯ ಸುಳಿವಿಲ್ಲ ರಂಗೋಲಿ, ಒಲೆಗೆ ಬೆಂಕಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಬಡೀ… ಕಬಡೀ… whatever!: ಗುರುಪ್ರಸಾದ ಕುರ್ತಕೋಟಿ

ಮಕ್ಕಳು ಎಲ್ಲಿದ್ದರೂ ಮಕ್ಕಳೇ. ಅದರೂ NRI ಮಕ್ಕಳು ವಿಭಿನ್ನ ಅಂತ ನನಗೆ ಅನಿಸುತ್ತಿದ್ದುದು ಅವರ ಮಾತಾಡುವ ಶೈಲಿಯಲ್ಲಿ. ಅದೊಂಥರ ಅರಗಿಸಿಕೊಳ್ಳಲಾಗದ ವಿಷಯ ನನಗೆ. ವಿಶೇಷವಾಗಿ ಅವರು ಮಾತಾಡುವ american accent ನನ್ನಲ್ಲಿ ಆ ಭಾವನೆ ಹುಟ್ಟಿಸುತ್ತಿತ್ತು. ಮಕ್ಕಳು ಎಲ್ಲಿ ಬೆಳೆಯುತ್ತಾರೋ ಅಲ್ಲಿನ ಭಾಷೆ ಸಂಸ್ಕೃತಿಗಳಿಗೆ ಒಗ್ಗಿಕೊಳ್ಳುತ್ತಾರೆ. ಅದು ಅವರ ತಪ್ಪಲ್ಲ. ಹೊಸದಾಗಿ ಅಮೆರಿಕೆಯಲ್ಲಿ ಹೋಗಿ ಅಲ್ಲಿದ್ದ ಮಕ್ಕಳ ಕುರಿತು ಹಾಗೆ ಯೋಚಿಸಿದ್ದು ನನ್ನ ತಪ್ಪು. ಕ್ರಮೇಣ ಅವರ ಮಾತುಗಳು ನನಗೆ ಒಂತರಹದ ಮಜಾ ಕೊಡುತ್ತಿದ್ದವು. ನನ್ನ ಮಗಳೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬ್ಯಾಚುಲರ್ ಬದುಕಿನ ಬಾನ್ಗಡಿಗಳು…: ವಿನಾಯಕ ಅರಳಸುರಳಿ

ಅದೊಂದು ಅಮಾಯಕ ಟೆರಾಸ್. ಮೂರನೇ ಫ್ಲೋರಿನ ತುತ್ತತುದಿಯಲ್ಲಿ ನಿಶ್ಯಬ್ದವಾಗಿ ಮಲಗಿದೆ. ಸಮಯ ರಾತ್ರಿ ಹನ್ನೆರೆಡೂವರೆ. ಕೆಳಗಡೆ ಬೀದಿಯಲ್ಲಿ ಅಂಡಲೆಯುತ್ತಿರುವ ನಾಯಿಗಳಿಗೂ ಆಕಳಿಕೆ ಶುರುವಾಗಿದೆ. “ನೋಡ್ತಿರು…ದೊಡ್ಡ ಸಾಧನೆ ಮಾಡಿ ನಾನೇನು ಅಂತ ತೋರಿಸ್ತೀನಿ ಅವಳಿಗೆ!” ಅರ್ಧ ಕೆಜಿ ಅಳು, ಎರೆಡು ಕ್ವಿಂಟಾಲ್ ಹತಾಶೆ, ಎರೆಡು ಡಜನ್ ರೊಚ್ಚು, ಐದೂವರೆ ಕ್ವಾಟರ್ ನಶೆ ಹಾಗೂ ಸಾವಿರಾರು ಗ್ಯಾಲನ್ ದುಃಖ… ಇವೆಲ್ಲ ಒಟ್ಟಾಗಿ ಬೆರೆತ ಧ್ವನಿಯೊಂದು ಹಾಗಂತ ಅಬ್ಬರಿಸುತ್ತದೆ. “ಹೂ ಮಚ್ಚೀ.. ನೀನೇನಾದ್ರೂ ಅಚೀವ್ಮೆಂಟ್ ಮಾಡ್ಲೇಬೇಕು. ನಿನ್ನ ಬಿಟ್ಟೋಗಿದ್ದು ಎಷ್ಟು ದೊಡ್ಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊರೋನಾ ಕಾಲದಲ್ಲಿ ಹೆಣ್ಣುಮಕ್ಕಳ ಕೌಟುಂಬಿಕ ಸಮಸ್ಯೆಗಳು: ತೇಜಾವತಿ ಹುಳಿಯಾರು

ಹಿಂದೆಂದೂ ಕಾಣದೊಂದು ಸೂಕ್ಷ್ಮ ಅಣುಜೀವಿ ಇಂದು ವಿಶ್ವದೆಲ್ಲೆಡೆ ಹರಡಿ ತನ್ನ ಕಬಂಧಬಾಹುವನ್ನು ವಿಸ್ತರಿಸಿಕೊಂಡು ದಿನದಿಂದ ದಿನಕ್ಕೆ ದ್ವಿಗುಣಗೊಳ್ಳುತ್ತ ಇಡೀ ಮನುಕುಲವನ್ನೇ ತಲ್ಲಣವನ್ನುಂಟುಮಾಡಿದೆ. ವಿಜ್ಞಾನ – ತಂತ್ರಜ್ಞಾನಕ್ಕೇ ಸವಾಲೊಡ್ಡಿರುವ ಪರಿಸ್ಥಿತಿ ನಮ್ಮ ಕಣ್ಣೆದುರೇ ಇದೆ. ಎಲ್ಲರ ನಿದಿರೆಯಲ್ಲೂ ಸಿಂಹಸ್ವಪ್ನವಾಗಿರುವ ಕೊರೋನಾ ಮಹಾಮಾರಿಯಾಗಿ ತನ್ನ ಅಟ್ಟಹಾಸವನ್ನು ಮರೆಯುತ್ತಾ ಪ್ರಕೃತಿಯ ಮುಂದೆ ಎಲ್ಲವೂ ಶೂನ್ಯವೆಂಬ ನೀತಿಯನ್ನು ನೆನಪಿಸಿದೆ. ಒಂದೆಡೆ ರೋಗದ ಹರಡುವಿಕೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತ ತನ್ನ ವೇಗದ ತೀವ್ರತೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಹೇಗೋ ಜೀವನ ಸಾಗಿಸುತ್ತಿದ್ದ ಹಲವಾರು ಕುಟುಂಬಗಳ ಪರಿಸ್ಥಿತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುಡಿತದ ದಾಸರೇ ನಿಮಗಾಗಿ: ಪ್ರೇಮ್

ಕುಡಿತದ ದುಷ್ಪರಿಣಾಮವನ್ನು ನಾನು ಹಲವು ಕುಟುಂಬಗಳ, ಸಂಬಂಧಿಕರನ್ನು ನೋಡಿ ಕಣ್ಣಾರೆ ಕಂಡವಳು. ಅದೇ ಬೇಸರದಲ್ಲಿ, ಒಟ್ಟಿಗೆ ಭಯ, ಗಾಬರಿ, ಹತಾಶೆ, ನೋವು, ಬೇಸರ, ಕೊಳಕು, ನರಕ ಎಲ್ಲಾ ಭಾವಗಳೂ ಮನದಲ್ಲಿ ಒತ್ತರಿಸಿ ಬರುವುವು. ಯಾರೇ ಆಗಲಿ ಯಾವುದಕ್ಕೂ ದಾಸರಾಗಬಾರದು. ನಮ್ಮ ಮನಸ್ಸು, ನಮ್ಮ ಕೆಲಸ, ನಮ್ಮ ಭಾವನೆಗಳು ನಮ್ಮ ಹಿಡಿತದಲ್ಲಿ ಇರಬೇಕು. ಕುಡಿತ ಸುಳ್ಳನ್ನು ಪ್ರೋತ್ಸಾಹಿಸುತ್ತದೆ. ಯಾಕೋ ಆ ಸುಳ್ಳು ತುಂಬಾ ನೋವು ಕೊಡುತ್ತದೆ. ಹಲವಾರು ಬಾರಿ ಜೀವನದಲ್ಲಿ ಸುಳ್ಳುಗಳಿಂದ ಹತಾಶಳಾಗಿರುವೆವು ನಾವು. ಅದು ಮತ್ತೆ ಜೀವನದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 5): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ -೪- ದಿನಕಳೆದಂತೆ ಕಾವಶ್ಶೇರಿಯ ದನದಕೊಟ್ಟಿಗೆಯಲ್ಲಾದ ಮುಖಭಂಗದ ನೆನೆಪು ಮಾಸಿದಂತಾಗಿ ಕೊನೆಗೆ ಗುರುತುಸಿಕ್ಕದಂತೆ ಅಯ್ಯರ್ ಮನದಾಳದಲ್ಲೆಲ್ಲೋ ಹೂತುಹೋಗಿತ್ತು. ಹೆಚ್ಚೂಕಮ್ಮಿ ವರುಷ ಎರಡು ವರುಷಕ್ಕೊಂದರಂತೆ ಅಯ್ಯರ್ ಒಬ್ಬೊಬ್ಬರೇ ಹೆಣ್ಣುಮಕ್ಕಳ ಮದುವೆ ಮಾಡಿಮುಗಿಸಿದರು. ಅವುಗಳ ಪೈಕಿ ಯಾವುದಾದರೊಂದು ಮದುವೆಗೆ ಮುಕ್ತಾ ಬಂದಿದ್ದರೆ ಮಾಸಿದ ನೆನಪು ಮತ್ತೆ ಹಸಿರಾಗುತ್ತಿತ್ತೇನೋ! ಆದರೆ ಹೈದ್ರಾಬಾದಿನ ಬ್ಯಾಂಕಿನಲ್ಲಿ ಗುಮಾಸ್ತರಾಗಿದ್ದ ಮುರಳೀಧರರಿಗೆ ಉದ್ಯೋಗದಲ್ಲಿ ಭಡ್ತಿ ದೊರೆತಂತೆಲ್ಲಾ ಮೂರುನಾಲ್ಕು ವರ್ಷಗಳಿಗೊಮ್ಮೆ ಬಾಂಬೆ, ಡೆಲ್ಲಿ, ಕಲ್ಕತ್ತಾ, ಎಂದು ವರ್ಗವಾಗುತ್ತಲೇ ಇತ್ತು. ಅಲ್ಲದೇ ಉದ್ಯೋಗನಿಮಿತ್ತ ಕಾಲಿಗೆಚಕ್ರಕಟ್ಟಿಕೊಂಡಂತೆ ಸುತ್ತುತ್ತಿದ್ದ ಅವರಿಗೆ ಮದುವೆ ಮುಂಜಿಗಳೆಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ