ಧನದಾಹಕ್ಕೆ ದಿಕ್ಕೆಟ್ಟ ಬದುಕು ಆರ್ ಕೆ. ನಾರಾಯಣ್ ರ – The Financial Expert ನ ಮಾರ್ಗಯ್ಯ: ನಾಗರೇಖಾ ಗಾಂವಕರ
ಅದೊಂದು ಮುಂಜಾನೆ ಮಾರ್ಗಯ್ಯ ತನ್ನ ಕೆಂಪು ಬಣ್ಣದ ಅಕೌಂಟ್ ಪುಸ್ತಕದಲ್ಲಿ ಪೂರ್ಣ ತಲ್ಲೀನ. ತಂದೆ ತಾನು ಕೇಳಿದ ಆನೆ ಆಟಿಕೆ ಕೊಡಿಸಲಿಲ್ಲವೆಂದು ಕೋಪಗೊಂಡ ಬಾಲು ಕಾಲಿಂದ ಶಾಯಿ ಬಾಟಲಿಯ ಜೋರಾಗಿ ತೂರಿದ ರಭಸಕ್ಕೆ ಪುಸ್ತಕ ಬಣ್ಣಮಯವಾಗುತ್ತದೆ. ಸಿಟ್ಟಿಗೆದ್ದ ಮಾರ್ಗಯ್ಯ ಮಗನನ್ನು ದರದರ ಎಳೆದು ಕೋಣೆಯೊಳಗೆ ಕೂಡಿಹಾಕಲು ಯತ್ನಿಸುತ್ತಲೇ ತಪ್ಪಿಸಿಕೊಂಡ ಬಾಲು ಬಣ್ಣಮೆತ್ತಿದ ಪುಸ್ತಕ ಎತ್ತಿಕೊಂಡು ಹೊರಗೋಡಿ ತಟ್ಟನೆ ಗಟಾರಕ್ಕೆ ಚೆಲ್ಲಿ ಬಿಡುತ್ತಾನೆ. ಮಾರ್ಗಯ್ಯ ಹಣಕಾಸಿನ ಭಂಡಾರವೇ ಕೈತಪ್ಪಿದಂತೆ ಕಂಗಾಲಾಗುತ್ತಾನೆ. ಅದೇ ಬಾಲು ಪ್ರಾಯಕ್ಕೆ ಬರುತ್ತಲೂ ಇನ್ನಷ್ಟು ಅವಿವೇಕಿ … Read more