ಮರೆಯಲಾಗದ ಮದುವೆ (ಭಾಗ 11): ನಾರಾಯಣ ಎಮ್ ಎಸ್
-೧೧- ಗಂಡಿನಮನೆಯವರನ್ನು ಸ್ವಾಗತಿಸಲೆಂದು ಈಗಾಗಲೇ ರೈಲ್ವೇಸ್ಟೇಷನ್ನಿಗೆ ಬಂದಿದ್ದ ಕೃಷ್ಣಯ್ಯರ್ ಮಕ್ಕಳಾದ ಶೇಖರ್ ಮತ್ತು ಮೋಹನ್ ತಮ್ಮ ಪತ್ನಿಯರೊಂದಿಗೆ ಅಯ್ಯರ್ ಕುಟುಂಬದವರಿಗಾಗಿ ಕಾಯುತ್ತಿದ್ದರು. ಸುಮಾರು ನಾಲ್ಕು ಘಂಟೆಹೊತ್ತಿಗೆ ತಿರುವಾರೂರಿನ ರೈಲು ವಿಶಾಖಪಟ್ಟಣ ಸ್ಟೇಷನ್ನಿಗೆ ಬಂದು ತಲುಪಿತು. ಜೋತುಮೋರೆ ಹಾಕಿಕೊಂಡು ಒಲ್ಲದ ಮನಸ್ಸಿನಿಂದ ಯಾಂತ್ರಿಕವಾಗಿ ಒಬ್ಬೊಬ್ಬರೇ ರೈಲಿನಿಂದಿಳಿಯುತ್ತಿದ್ದ ಗಂಡಿನ ಮನೆಯವರನ್ನು ಕಂಡ ಶೇಖರ್ ಮತ್ತು ಮೋಹನರಿಗೆ ಎಲ್ಲವೂ ಸರಿಯಿಲ್ಲವೆಂಬ ಸುಳಿವು ಮೇಲ್ನೋಟಕ್ಕೇ ಸಿಕ್ಕಿಹೋಯಿತು. ಅತಿಥಿಗಳ ಲಗೇಜುಗಳನ್ನು ಒತ್ತಾಯದಿಂದ ಕೆಳಗಿಳಿಸಿಕೊಳ್ಳುವಾಗ ಹೆಂಗಸರು ಸಣ್ಣಗೆ ಅಳುತ್ತಿದ್ದುದು ಗಮನಿಸಿ ಏನೋ ಎಡವಟ್ಟಾಗಿರಬೇಕೆಂದು ಗಾಬರಿಯಾಯ್ತು. ಸುಬ್ಬುವನ್ನು … Read more