ಸಂವೇದನಾಶೀಲ ಯುವ ಕವಿ ಕಾಜೂರು ಸತೀಶ್: ಕಾವ್ಯ ಎಸ್

ನಾನು ಇಂದು ಪರಿಚಯಿಸುತ್ತಿರುವುದು, ನಮ್ಮ ನಿಮ್ಮೆಲ್ಲರೊಂದಿಗೆ ಸಾಮಾನ್ಯರಂತಿರುವ, ಭಿನ್ನತೆಯಲ್ಲಿ ವಿಭಿನ್ನತೆ ಮೆರೆಯುವ ಕೊಡಗಿನ ಪ್ರತಿಭಾನ್ವಿತ., ಸಂವೇದನಾಶೀಲ ಯುವ ಕವಿ.. ಶಿಕ್ಷಕ.. ಅನುವಾದಕ.. ಸಾಹಿತಿ.. ಚಿಂತಕ ಕಾಜೂರು ಸತೀಶ್ ರವರ ಬಗ್ಗೆ. ಶ್ರೀ. ನಾರಾಯಣ್ ಮತ್ತು ಶ್ರೀಮತಿ. ವಿಶಾಲಾಕ್ಷಿ ಯವರ ಪ್ರೀತಿಯ ಪುತ್ರ K. N. ಸತೀಶ್. ಇವರ ವಾಸ್ತವ್ಯ ಸೋಮವಾರಪೇಟೆ ತಾಲೋಕಿನ ಕಾಜೂರು ಗ್ರಾಮ. ಸತೀಶ್ ರವರ ಕವಿತೆಗಳನ್ನು ಜೀರ್ಣಿಸಿಕೊಳ್ಳಲು ಎರೆಡೆರೆಡು ಬಾರಿಯಾದರೂ ಓದುವ ನಾನು ಅವರ ಕವಿತೆಗಳ ಬಗ್ಗೆ ಏನು ಹೇಳಲು ಸಾಧ್ಯ..? ಎಂಬ ಪ್ರಶ್ನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಬೆಳಕಾದವರಿಗೆ ನಮಸ್ಕಾರ… ಮೊದಲು ತಾಯಿಗೆ ಜನ್ಮ ಕೊಟ್ಟ ತಂದೆಗೆ ಎರಡೂ ಕಣ್ಣು ಕೊಟ್ಟ ದೇವರಿಗೆ ಭೂಮಿಯಿಂದ ಜನಿಸಿದಾಗ ಸುತ್ತಾ ಮುತ್ತಾ ಪಸರಿಸಿತ್ತು ಪ್ರೀತಿ ಪ್ರೇಮದ ಗಂಧ ಪ್ರೀರಿಗೊಂದು‌ ಅರ್ಥ ಕೊಟ್ಟು ರೂಪ ಕೊಟ್ಟ ತಾಯಿಗೆ ಸಹನೆಯೆಂಬ ಜೇನು ಸುರಿದು ಬರಗಾಲ-ಉಳಿಗಾಲ-ಅಳಿಗಾಲದಲ್ಲೂ ಗರಿಕೆಯ ರಸಕುಡಿಸಿ ಭರವಸೆಯ ಬೆಳಕಾದ ತಾಯಿಗೆ ಗರಿಕೆಯೊಳಗೆ ಜೀವವಾಗಿ ಉಸುರು ತುಂಬಿ ತಾಯಿ ಮಗುವ ತಬ್ಬಿದ ತಂದೆಗೆ ಯಾವ ಭೂಮಿ ಎಲ್ಲಿಯ ಜಲ ಆಕಾಶವೆಂಬುವುದು ನಿತ್ಯಜನ್ಯಲೋಕ ಅರಿವಿನ ಕಿರಣ ಕೊಟ್ಟ ಗುರುವಿಗೆ ಬೆಳಕಾದ ಮನದಿಂದ ನಮಸ್ಕಾರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹುಲಿ ಬಂತು ಹುಲಿ: ನಂದಾದೀಪ, ಮಂಡ್ಯ

ಹುಲಿ ಬಂತು ಹುಲಿ ಎಂದು ಅಜ್ಜಿ ಕತೆ ಶುರು ಮಾಡಿ ಹುಲಿ ಜಿಂಕೆನಾ ತಿಂದು ಬಿಡ್ತು ಎಂದು ಕತೆ ಮುಗಿಸುವಾಗ ನಮ್ಮೆಲ್ಲರ ಮನಸಲ್ಲಿ ಹುಲಿ ಎಂದರೆ ಏನೋ ಒಂದು ಅವ್ಯಕ್ತ ಭಯ ಆವರಿಸುತ್ತದೆ..! ಭಯದ ಜೊತೆಗೆ ಹುಲಿಯನ್ನು ನೋಡಬೇಕೆಂಬ ಕುತೂಹಲವು ಹೆಚ್ಚಾಗುತ್ತದೆ..! ಮೃಗಾಲಯದಲ್ಲಿ ದೂರದಿಂದಲೇ ಹುಲಿಯನ್ನು ಬೆರಗುಗಣ್ಣಿಂದಲೇ ತುಂಬಿಕೊಂಡಿದ್ದು ಉಂಟು..! ಹುಲಿಯ ಮೇಲಿನ ಕುತೂಹಲ ಹೆಚ್ಚಿದಂತೆ ಅದರ ಬಗ್ಗೆ ತಿಳಿಯಲು ಒಂದಷ್ಟು ವಿಷಯಗಳನ್ನು ತಿಳಿಯಲು ಹೊರಟಾಗ ಅದು ಭಯ ಹುಟ್ಟಿಸುವ ಜೀವಿ ಅನ್ನೋದಕ್ಕಿಂತ ಸ್ವಾಭಿಮಾನಿ ಜೀವಿ ಎನ್ನುವುದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಾವು… ನಮ್ಮದು: ಗುರುಪ್ರಸಾದ ಕುರ್ತಕೋಟಿ

(ಇಲ್ಲಿಯವರೆಗೆ) ನಮ್ಮ ಜೀವನದ ಗತಿಯನ್ನು, ನಮ್ಮ ಯೋಚನಾ ಲಹರಿಯನ್ನು ಬದಲಿಸಬಲ್ಲ ತಾಕತ್ತು ಇರುವುದು ಪುಸ್ತಕಗಳಲ್ಲಿ ಮಾತ್ರ ಎಂದು ಬಲವಾಗಿ ನಂಬಿರುವವನು ನಾನು. ನಮ್ಮ ಮನೆಯಲ್ಲಿದ್ದ ಪುಸ್ತಕಗಳು, ವಾರಕ್ಕೊಮ್ಮೆ ಬರುತ್ತಿದ್ದ ತರಂಗ, ಸುಧಾ ಗಳಂತಹ ಪತ್ರಿಕೆಗಳು ನಮ್ಮ ಓದಿನ ಹುಚ್ಚು ಹೆಚ್ಚಿಸಿದ್ದಲ್ಲದೆ ನಮ್ಮ ಯೋಚನಾ ಕ್ರಮವನ್ನೇ ಬದಲಿಸಿದ್ದವು. ಅವುಗಳು ಈಗಿನ ಗೂಗಲ್ ಗಿಂತ ಹೆಚ್ಚಿನ ಮಾಹಿತಿಗಳನ್ನು ಕೊಡುತ್ತಿದ್ದವು. ಈಗಿನ ಅಂತರ್ಜಾಲ ಒಂದು ಸಾಗರ. ಅದರಲ್ಲಿ ನಮಗೆ ಬೇಕಾದ ನಿಖರ ಮಾಹಿತಿ ತೊಗೊಳ್ಳೋದು ಅಂದರೆ ಒಳ್ಳೆಯ ಬಲೆಯಲ್ಲಿ ಮೀನು ಹಿಡಿದಂತೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 4): ನಾರಾಯಣ ಎಮ್ ಎಸ್

ಇಲ್ಲಿಯವರೆಗೆ ಅಂದು ವೈಕುಂಠಸಮಾರಾಧನೆ. ಹನ್ನೆರಡು ದಿನದ ಅಶುಭ ಕಳೆದು ನಡೆಯುತ್ತಿದ್ದ ಶುಭಕಾರ್ಯವದು. ನೆಂಟರಷ್ಟರಿಂದ ತುಂಬಿದ ಮನೆ ಚಟುವಟಿಕೆಗಳ ಗಿಜಿಗಿಜಿಯಿಂದ ತುಂಬಿತ್ತು. ಅಂದಿನ ಸಮಾರಂಭ ಮುಗಿಸಿ ಅಯ್ಯರ್ ಮರುದಿನ ತಿರುವಾರೂರಿಗೆ ಹೊರಡುವವರಿದ್ದರು. ಬೆಳಗಿನ ಕಾಫಿ ಕುಡಿದು ಕೊಳಕ್ಕೆ ಹೋಗಿ ಸ್ನಾನ ಮುಗಿಸಿದ ಅಯ್ಯರ್ ಆಗಷ್ಟೆ ಮನೆಗೆ ಹಿಂತಿರುಗಿ ಹಜಾರದಲ್ಲಿ ಕುಳಿತಿದ್ದ ಇನ್ನೂ ಐದಾರು ಜನರೊಂದಿಗೆ ಕುಳಿತು ತಿಂಡಿತಿನ್ನುತ್ತಿದ್ದರು. ಅಷ್ಟರಲ್ಲಿ ಸಾಲಾಗಿ ಕುಳಿತಿದ್ದವರಿಗೆಲ್ಲಾ ಚಟ್ನಿ ಬಡಿಸಿಕೊಂಡು ಬಂದ ಮುಕ್ತಾಳನ್ನು ಕಂಡ ಅಯ್ಯರಿನ ಸ್ಥಿಮಿತ ತಪ್ಪಿದಂತಾಯಿತು. ಚಿಕ್ಕಚಿಕ್ಕ ವಿಷಯಗಳು ಮಾಡುವ ದೊಡ್ಡ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸೌಂದರ್ಯವೇ ಸತ್ಯ, ಸತ್ಯವೇ ಸೌಂದರ್ಯ – ಅಮರ ಕವಿ ಜಾನ್ ಕೀಟ್ಸ್: ನಾಗರೇಖಾ ಗಾಂವಕರ

ಅತಿ ಚಿಕ್ಕ ವಯಸ್ಸಿನಲ್ಲಿ, ಅತೀ ಕಡಿಮೆ ಅವಧಿಯಲ್ಲಿ ಅಪಾರ ಅದ್ವಿತೀಯ ಪ್ರಗಾಥ ಸಾಹಿತ್ಯವನ್ನು ರಚಿಸಿ ಜಾಗತಿಕ ಸಾರಸ್ವತ ಲೋಕದ ಧ್ರುವತಾರೆಯಂತೆ ಬೆಳಗಿದವನೆಂದರೆ ಜಾನ್ ಕೀಟ್ಸ್. ಅಕ್ಷರ ಜಗತ್ತಿನಲ್ಲಿ ಚಿಮ್ಮಿದ ಬೆಳಕಿನ ಸೂಡಿ ಕೀಟ್ಸ್. ಆತನ ಜೀವನದುದ್ದಕ್ಕೂ ಸಾವು ಸುಳಿಯುತ್ತಲೇ ಇತ್ತು. ಹೆತ್ತವರ, ಒಡಹುಟ್ಟಿದವರ, ಸಾವು ಆತನ ವಿಚಲಿತಗೊಳಿಸುತ್ತಲೇ ಇದ್ದರೂ ಸಾವಿನಲ್ಲೂ ಸೌಂದರ್ಯ ಕಂಡ ಕವಿ. ತನ್ನ ಗೋರಿ ವಾಕ್ಯವನ್ನು ತಾನೇ ಬರೆದಿಟ್ಟ ಧೀರ. ವಿಲಿಯಂ ವಡ್ರ್ಸವರ್ಥ, ಎಸ್ ಟಿ. ಕೋಲ್ರಿಡ್ಜ್ ಇಂಗ್ಲೆಂಡಿನಲ್ಲಿ ರೋಮ್ಯಾಂಟಿಕ್ ಯುಗದ ಪ್ರವರ್ತಕರಾಗಿ “ಲಿರಿಕಲ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಳೆಯನಲ್ಲ (ಭಾಗ 4): ವರದೇಂದ್ರ ಕೆ.

ಇಲ್ಲಿಯವರೆಗೆ… (7) ಇತ್ತ ಕಮಲಮ್ಮ ಸಂಪತ್ಗೆ ಫೋನ್ ಮಾಡಿ ಪ್ರೀತಿ ತವರು ಮನೆಗೆ ಹೋದ ವಿಷಯ ತಿಳಿಸಿ, ಮನೆಗೆ ಬೇಗ ಬರಲು ಹೇಳುತ್ತಾಳೆ. ಸಂಜೆ ಆಯಿತು ಮಗ ಮನೆಗೆ ಬರುವ ಸಮಯ ಬದಲಾಗಿದೆ, ಫೋನ್ ಮಾಡಿದರೆ ಸ್ವೀಕರಿಸುವುದಿಲ್ಲ. ಸ್ವೀಕರಿಸಿದರೂ ಸರಿಯಾಗಿ ಮಾತನಾಡುವುದಿಲ್ಲ. ಯಾವಾಗಲೂ ಏನೋ ಚಿಂತೆಯಲ್ಲಿರುವಂತೆ ಕಾಣಿಸುತ್ತಾನೆ. ಮದುವೆಯಾಗಿ ಹೊಸತರಲ್ಲಿ ಹೇಗಿರಬೇಕು? ಸಂಪತ್ನ ವಿಚಾರಿಸಬೇಕು ಮನೆಗೆ ಬಂದ ಕೂಡಲೆ ಎಂದು ಕಮಲಮ್ಮ ಕಾದು ಕೂಡುತ್ತಾರೆ. ತಡರಾತ್ರಿ ಮನೆಗೆ ಬಂದ ಸಂಪತ್ ಅನ್ನು ತಾಯಿ ವಿಚಾರಿಸುತ್ತಾಳೆ, “ಸಂಪತ್, ಪ್ರೀತಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನದ ಗತಿಯನ್ನು ಬದಲಿಸುವ ‘ಗುರು’: ತೇಜಾವತಿ ಎಚ್.ಡಿ

ಮಾತೃ ದೇವೋಭವ ಪಿತೃ ದೇವೋಭವ ಆಚಾರ್ಯ ದೇವೋಭವ ಅತಿಥಿ ದೇವೋಭವ ಬ್ರಹ್ಮನಾಗಿದ್ದಾನೆ, ಅವನೇ ವಿಷ್ಣುವೂ ಕೂಡ. ಅವನೇ ಸಾಕ್ಷಾತ್ ಪರಬ್ರಹ್ಮ ಆದ್ಯಂತಿಕ ಸತ್ಯ. ಅಂತಹ ಗುರುವಿಗೆ ನಮಸ್ಕಾರ. ಗುರುವಿನಲ್ಲೇ ಪರಬ್ರಹ್ಮನನ್ನು ಕಾಣುವ ಮೂಲಕ ಅವನನ್ನು ಪೂಜ್ಯ ಭಾವನೆಯಿಂದ ನೋಡುತ್ತೇವೆ. ಇಂದಿಗೂ ಕೂಡ ಯಾವುದೇ ಕಾರ್ಯವನ್ನು ಮಾಡುವ ಸಂದರ್ಭದಲ್ಲಿ ನಾವು ಈ ಶ್ಲೋಕವನ್ನು ಪಠಿಸುತ್ತೇವೆ. ಸಮಾಜ ಇಷ್ಟೊಂದು ಗೌರವವನ್ನು ಶಿಕ್ಷಕರಿಗೆ ನೀಡುವಾಗ ಅವರೂ ಕೂಡ ತಮ್ಮ ಜವಾಬ್ದಾರಿಯನ್ನು ನಿಭಾಯಿಸುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಶಿಕ್ಷಕ ಸಕಾರಾತ್ಮಕತೆಯ ಕಿರಣವಾಗಿದ್ದು ಎಂತಹ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 35 & 36): ಎಂ. ಜವರಾಜ್

-೩೫- ‘ದೊಡ್ಡವ್ವವ್..’ ಎದುರು ಮನ ಪಡ್ಸಾಲ್ಲಿ ಕುಂತು ಎಲ ಅಡ್ಕ ಹಾಕತ ಅಯ್ನೋರ್ ದನಿ. ಆ ದನಿಗ, ‘ಕುಸೈ ಒಳ್ಳಿ ಕೆಲ್ಸ ಮಾಡ್ದ ಬುಡು ಊರು ಸುಮ್ನಿದ್ದಾ.. ಈ ವಯ್ಸಲಿ ಇದ್ಯಾನ ಹಿಂಗಾ.. ನೀಲ ಒಳ್ಳೋಳೆ ಆದ್ರ ಹಣಬರ ಇರ್ಬೇಕಲ್ಲ ಬುಡು ಈಗೇನ ಶಂಕ್ರಿಲ್ವ.. ಸಾಕು ಬುಡು ಹೆಂಗು ಅವ್ನುಗು ಗಂಡಾಗದ ವಂಶ ಹೆಸರೇಳಕಾದ್ರು ಆಯ್ತಲ್ಲ ಬುಡು’ ‘ದೊಡ್ಡವ್ವವ್ ಸುಮ್ನಿದ್ದಯ.. ಕುಲ್ಗೆಟ್ಟವೆಲ್ಲ ನನ್ ವಂಶನಾ..’ ‘ಮೊಗ ಅವ ಕುಲ್ಗೆಟ್ಟ ಹೆಣ್ಣೇ ಇರಬೋದು ನಿನ್ ರಕ್ತ ಕುಲ್ಗೆಟ್ಟೊಗಿದ್ದಾ.. ಶಂಕ್ರನ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಲಾಕ್ಡೌನ್ – ವರ್ಕ್ ಫ಼್ರಮ್ ಹೋಮ್ ಮತ್ತು ಫ಼ಾರ್ ಹೋಮ್!!: ಸಹನಾ ಪ್ರಸಾದ್

ಅಬ್ಬಾ, ೪ ತಿಂಗಳು!! ಇಷ್ಟು ಸಮಯ ಒಟ್ಟಿಗೆ ಮನೆಯಲ್ಲಿ ಇದ್ದದ್ದು ನೆನಪಿಲ್ಲ. ಮೊದಲ ಸಲ ಮಾರ್ಚ್ ೨೪ರಿಂದ ಎಲ್ಲಾ ಲಾಕ್ ಎಂದು ಘೋಷಿಸಿದಾಗ ಮೊದಲು ಅನಿಸಿದ್ದು ” ಅಯ್ಯೊ, ಕೆಲಸದವಳು ಇಲ್ಲವಲ್ಲ, ಹೇಗೆ ನಿಭಾಯಿಸುವುದು” ಎಂದು. ಎಲ್ಲರೂ ಕೋವಿಡ್, ಕೋವಿಡ್ ಎಂದು ಕೂಗಾಡುತ್ತಿದ್ದರೂ ಅಷ್ಟೇನು ಭಯವಿರಲಿಲ್ಲ. ಶಾಲಾ, ಕಾಲೇಜು ರಜೆ ಎಂದಾಗ ಮನಸ್ಸು ಸ್ವಲ್ಪ ಸೀರಿಯಸ್ ಆಗಿದ್ದು ನಿಜ. ಬೆಳಗ್ಗೆ ಎದ್ದ ತಕ್ಷಣ ಶುರುವಾದ ಕೆಲಸಗಳು ಮುಗಿಯುತ್ತಲೇ ಇಲ್ಲ, ಪಾತ್ರೆಗಳು ಸಿಂಕ್ ಅಲ್ಲಿ ಕರಗುತ್ತಲೇ ಇಲ್ಲ! ಮನೆಯ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಎಲ್ಲರೂ ಮಲಗಿದ್ದಾಗ…: ಗುರುಪ್ರಸಾದ ಕುರ್ತಕೋಟಿ

ಚಿಕ್ಕಂದಿನಲ್ಲಿ ನನಗೆ ನಿದ್ದೆಯಲ್ಲಿ ನಡೆದಾಡುವ (Sleep walking) ಖಾಯಿಲೆ ಇತ್ತು. ಹಾಗೆ ರಾತ್ರಿ ಅಡ್ಡಾಡಿದ್ದು ಬೆಳಿಗ್ಗೆ ಎದ್ದಾಗ ನನಗೆ ನೆನಪೇ ಇರುತ್ತಿರಲಿಲ್ಲ. ಆ ನನ್ನ ಖಾಯಿಲೆಯಿಂದ ತುಂಬಾ ಕಷ್ಟ ಅನುಭವಿಸಿದವಳು ನನ್ನಮ್ಮ. ಮಗ ಹೀಗೆ ಒಂದು ರಾತ್ರಿ ಎದ್ದು ಹೊರಗೆ ಹೋಗಿಬಿಟ್ಟರೆ ಎನು ಗತಿ ಅಂತ ಮನೆಯ ತಲಬಾಗಿಲಿಗೆ ಹಾಗು ಹಿತ್ತಲ ಬಾಗಿಲಿಗೆ ಒಳಗಿನಿಂದ ಕೀಲಿ ಹಾಕಿ ಮಲಗುತ್ತಿದ್ದಳು. ನಾನು ಎದ್ದು ಅಡ್ಡಾಡುತ್ತಿದ್ದೆನೆ ವಿನಃ ಕೀಲಿ ತೆಗೆದು ಹೊರಗೆ ಹೋಗುತ್ತಿರಲಿಲ್ಲ, ಅದೊಂದು ವಿನಾಯತಿ ನೀಡಿತ್ತು ಆ ಖಾಯಿಲೆ! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಖಾಲಿಯಿದೆ… ಈಗಲೂ ನನ್ನೀ ಹೃದಯ ನೆತ್ತರು ಚಿಮ್ಮುತಿದೆ ನಿತ್ಯವೂ ಮಿಡಿಯುತಿದೆ ಬದುಕಿಗಾಗಿ ತುಡಿಯುತಿದೆ ಹೃದಯವಿನ್ನೂ ಖಾಲಿಯಿದೆ ದಣಿವಿಲ್ಲ ಗುರಿಯಿಲ್ಲ ಕನಸೇಕೋ ಕಾಡುತಿಲ್ಲ ಯಾವುದೋ ನೋವಿನಲ್ಲಿ ಹೇಳಲಾರೆ ದನಿಯಿಲ್ಲ ಯಾತರದ್ದೋ ಗೊಣಗಾಟ ಯಾತಕ್ಕಾಗಿಯೋ ಹೆಣಗಾಟ ಹಾರಿ ಹೋಗದು ಜೀವ ತೂರಾಡುತಿಹುದು ಭಾವ ಬೀಸುತಿದೆ ಬಿರುಗಾಳಿ ಹೃದಯವಂತೂ ಖಾಲಿಯಿದೆ ಏನ ಬಯಸಿ ಸೋಸುತಿಹುದು ಜೀವ ಹಿಡಿಯಲಾಗದೇನೋ ಮನದ ನೋವಾ ದಕ್ಕುವುದೇ ಎಂದಿಗಾದರೂ ಪ್ರೇಮಾಮೃತಪಾನ ಹೃದಯವು ಸದಾ ಖಾಲಿಯೇ ಖಾಲಿ ಕಾವಲಿಯ ಕಾವಲಿಗೆ ನಿಂತು ಮಾಡುವುದೇನು ಹೃದಯವೀಗಲೂ ಖಾಲಿ ಖಾಲಿ –ಚಿನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 3): ನಾರಾಯಣ ಎಂ ಎಸ್

   ಇಲ್ಲಿಯವರೆಗೆ -೩- ಇತ್ತೀಚೆಗೆ ಸೀತಮ್ಮನ ತಂದೆಯವರ ಆರೋಗ್ಯ ಕ್ಷೀಣಿಸಿ ಹಾಸಿಗೆ ಹಿಡಿದುಬಿಟ್ಟಿದ್ದರು. ಮಧುರಮ್ಮನವರಲ್ಲೂ ಮುಂಚಿನ ಕಸುವು ಉಳಿದಿರಲಿಲ್ಲ. ಹಾಗಾಗಿ ಈ ಬಾರಿ ತನ್ನ ಏಳನೇ ಹೆರಿಗೆಗೆ ಸೀತಮ್ಮ ಕಾವಶ್ಯೇರಿಗೆ ಹೋಗಲಿಲ್ಲ. ಆದರೆ ಬಸುರಿ ಹೆಂಗಸಿಗೆ ತಗುಲಿದ ಟಯ್ಫಾಡ್ ಖಾಯಿಲೆ ಸೀತಮ್ಮಳನ್ನು ಹಣಿದುಬಿಟ್ಟಿತು. ಸಾಲದ್ದಕ್ಕೆ ಏಳನೇ ತಿಂಗಳಿಗೆ ಗರ್ಭಪಾತವೂ ಆಗಿಹೋಯಿತು. ಸೀತಮ್ಮಳ ಪುಣ್ಯ! ಅವಳ ಆಯಸ್ಸು ಗಟ್ಟಿಯಿದ್ದಿರಬೇಕು. ತಿರವಾರೂರಿನಲ್ಲಿ ಉಳಿಯದೆ ವಾಡಿಕೆಯಂತೆ ಕಾವಶ್ಯೇರಿಗೆ ಹೋಗಿಬಿಟ್ಟಿದ್ದರೆ ಏನೇನೂ ವೈದ್ಯಕೀಯ ಸೌಕರ್ಯಗಳಿಲ್ಲದ ಆ ಕುಗ್ರಾಮದಲ್ಲಿ ಅವಳು ಬದುಕುಳಿಯುತ್ತಿದ್ದದು ಅನಮಾನವೇ. ಒಂದೆರಡು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊಡೆಯ ಕಡ್ಡಿಗಳು ಮತ್ತು ಬೆಚ್ಚನೆಯ ನೆನಪು: ಸಾವಿತ್ರಿ ಹಟ್ಟಿ

ಒಂಬತ್ತು ವರ್ಷದ ಹಿಂದಿನ ನೆನಪು. ಕೊಡೆ ಹಿಡ್ಕೊಂಡು ಅವಸರದಾಗ ಹೊಂಟಾಕಿಗಿ “ಹಿ ಹೀ ಹೀ ಸಾವಿತ್ರಿ ಊಟ ಆಯ್ತಾ” ಅಂತ ಆ ಹಾಲಿನ ಚಿಗವ್ವ ಕೇಳಿದಾಗ ಅಕಿಗೆ ಉತ್ತರ ಹೇಳೂಕ್ಕಿಂತ ನನ್ನೊಳಗ ಎದ್ದ ಪ್ರಶ್ನೆಗೆ ಉತ್ರ ಹೊಳೀಲಿಲ್ಲ. ‘ಊಟಾಯ್ತಾ ಸಾವಿತ್ರಿ’ ಅಂತಷ್ಟೇ ಕೇಳಿದ್ರ ನಡೀತಿರಲಿಲ್ಲನು! ಮತ್ಯಾಕ ಈಕಿ ಅಷ್ಟೂ ಬೆಳ್ಳನ್ನ ಹಲ್ಲು ತಗದು ಹಿಹೀಹೀ ಅಂತ ನಕ್ಳು ಅಂತ ತಲಿ ಕೆರಕೊಂಡು ಆಕಿಗಿ ಉತ್ತರಿಸೂವಷ್ಟರಾಗ ಮತ್ತೆ ಕೇಳೀದ್ಲು, “ ಅಲ್ಲಾ ಸಾವಿತ್ರಿ ತುಂಬಾ ಬೆಳ್ಳಗಿದ್ದೀಯಲ್ಲಾ, ಕಪ್ಪಾಗ್ತೀನಿ ಅಂತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಾನ್ ಡನ್ – ಎರಡು ಅನುಭಾವಿಕ ಕವಿತೆಗಳು: ನಾಗರೇಖಾ ಗಾಂವಕರ

ಹದಿನಾರನೇ ಶತಮಾನ ಜ್ಞಾನ ಪುನರುಜ್ಜೀವನದ ಮೇರು ಕಾಲ. ಅದರ ಉತ್ತರಾರ್ಧದಲ್ಲಿ ಜನಿಸಿದ ಡನ್ ಜಗತ್ತಿನ ಶ್ರೇಷ್ಟ ಸಾಹಿತಿಗಳಾದ ಶೇಕ್ಸಪಿಯರ್, ಸ್ಪೆನ್ಸರ್,ಮಿಲ್ಟನ್ , ಡ್ರೈಡನ್ ಮುಂತಾದ ಪ್ರಮುಖ ಕವಿಗಳ ಸಾಲಿನಲ್ಲಿ ಕಾಣಿಸಿಕೊಂಡರೂ ಆ ರಿನೇಸ್ಸಾನ್ಸ್‍ನ ಪ್ರಭಾವಕ್ಕೆ ಸಿಲುಕಿಯೂ ಸಿಲುಕದಂತೆ ಹೊಸ ಕಾವ್ಯ ಜಗತ್ತನ್ನು ಸೃಷ್ಟಿಸಿದ. ವಿದ್ವತ್ತಿನ ಪ್ರಭಾವಕ್ಕಿಂತಲೂ ಅನುಭವದ ನೈಜ ಸಂವೇದನೆಗಳು ಆತನ ಕಾವ್ಯವನ್ನು ಪ್ರಚಲಿತಗೊಳಿಸಿದವು. ಹೊಸತನಕ್ಕೆ ತೆರೆದುಕೊಂಡಿದ್ದ ಕಾವ್ಯ ಲಹರಿ, ಪದವಿನ್ಯಾಸಗಳು, ಲಯ ಎಲ್ಲವೂ ಡನ್‍ನ ಕಾವ್ಯವನ್ನು ಅಮರಗೊಳಿಸಿದವು. ಡನ್ ಮೆಟಾಫಿಸಿಕಲ್ ಕಾವ್ಯ ಪರಂಪರೆಯ ಪ್ರಮುಖ ಕವಿ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊರೋನಾ ವಾರಿಯರ್ಸಗೊಂದು ನಮನ : ತೇಜಾವತಿ ಹೆಚ್. ಡಿ.(ಖುಷಿ)

ಮಾನವೀಯತೆಯ ದೀಪದಲ್ಲಿ ಕರುಣೆಯ ಬತ್ತಿ ಹಚ್ಚಿ ಜ್ಯೋತಿಯಾದೆ ನೀನುಅಂತಃಕರಣದ ಮಿಡಿತದಿಂದ ಆತ್ಮವಿಶ್ವಾಸದ ಕಿರಣಬೀರಿ ಬೆಳಕಾದೆ ನೀನು ಶುಭ್ರ ಶ್ವೇತ ವಸನವನ್ನುಟ್ಟು ಸ್ವಚ್ಛ ಮನವ ತೊಟ್ಟು ರೋಗಿಗಳ ಆರೈಕೆ ಮಾಡಿ ಮರಣದ ಕದ ತಟ್ಟಿದವರಿಗೆ ಹೆಗಲಾಗಿ ಸಾಂತ್ವನ ನೀಡುವ ದಿಟ್ಟೆಯಾದೆ ನೀನು ಅಬ್ಬಬ್ಬಾ…… ಮಹಿಳೆಯರ ಒಳಹೊರಗಿನ ಮಾನಸಿಕ ಸ್ಥಿತಿಗತಿಗಳು ಅವರಿಗಷ್ಟೇ ಗೊತ್ತು. ತಮ್ಮ ಹಾದಿಯಲ್ಲಿ ಬರುವ ಎಲ್ಲಾ ಅಡೆತಡೆಗಳನ್ನೂ ಮೀರಿ ದಿಟ್ಟ ಹೆಜ್ಜೆಯನ್ನಿಟ್ಟು ಎಲ್ಲಾ ಕ್ಷೇತ್ರಗಳಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಮಹಿಳಾಮಣಿಗಳು ಅವರಿಗೆ ಅವರೇ ಸಾಟಿ ಎನ್ನುವುದನ್ನು ತಾವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 33 & 34): ಎಂ. ಜವರಾಜ್

-೩೩- ಕರಿ ನಾಯಿ ಕಿಂವ್ಞ್ ಕಿಂವ್ಞ್ ಅನ್ತ ಬಾಲ ಅಳ್ಳಾಡುಸ್ತ ಬಂದು ಶಂಕ್ರಪ್ಪೋರ ಕಾಲ್ನೆಕ್ಕಕ ಶುರು ಮಾಡ್ತು ಈ ಶಂಕ್ರಪ್ಪೋರು ಬಂದು ಕುಂತು ಎಸ್ಟೊತ್ತಾಯ್ತು ಈ ಅಯ್ನೋರ್ ನಿದ್ದ ಮುಗಿನೇ ಇಲ್ಲ.. ತ್ವಾಟದ ಬೇಲಿ ಇಣುಕುದ್ರ ಊರೊಳಗ ತಮ್ಟ ಸದ್ದು ಜೋರಾಯ್ತು ಜೊತ್ಗ ಬೆಳಕೂ ಹರಿತು. ಈ ಅಯ್ನೋರು ಈಗ ಈಚ ಬಂದು ಮೈ ಮುರಿತಾ… ಆಕುಳುಸ್ತಾ ಕಣ್ಣಾಡುಸ್ತ ಕಣ್ಣಾಡುಸ್ತ ಕಲ್ಲಾಸಿನ ಮ್ಯಾಲ ಶಂಕ್ರಪ್ಪೋರು ಕುಂತಿರದ ನೋಡುದ್ರು ಈ ಅಯ್ನೋರು, ‘ಹ್ಞು ಈಗ ಗ್ಯಾನ ಬತ್ತಾ’ ‘ನಾನೇನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಳೆಯನಲ್ಲ (ಭಾಗ 3): ವರದೇಂದ್ರ ಕೆ.

(5) ಆ ದಿನ ರಾತ್ರಿ, ಸಂಪತ್ಗೂ ರಿಪ್ಲೈ ಮಾಡದೆ ಅತೀವ ದುಃಖದಿಂದ ಮಲಗಿಬಿಟ್ಟಳು. ಮರುದಿನ ಎದ್ದು, ತಲೆ ಸ್ನಾನ ಮಾಡಿ ದೇವರಿಗೆ ದೀಪ ಹಚ್ಚಿ, ಆದ ದುರ್ಘಟನೆಯನ್ನು ನೆನೆದು ಕಣ್ಣೀರಾದಳು. ಮುಖ ಸಪ್ಪೆ, ಕಣ್ಣುಗಳಲ್ಲಿ ಕಾಂತಿ ಇಲ್ಲ. ಮದುವೆ ಆಗುವ ಹುಡುಗಿಗೆ ಇರುವ ಲವಲವಿಕೆ ಇಲ್ಲ. ತವರು ಮನೆ ಬಿಟ್ಟು ಹೋಗುವ ದುಃಖ ಇರಬಹುದೆಂದು ಎಲ್ಲರೂ ಸುಮ್ಮನಾದರು. ಸಂತೋಷ್ ನಿಂದ ಮೆಸೇಜೂ ಇಲ್ಲ, ಕರೆನೂ ಇಲ್ಲ. ಎಂದಿನಂತೆ ಸಂಪತ್ನ ಜೊತೆ ಮಾತನಾಡುತ್ತಿದ್ದರೂ, ಮನಸಲ್ಲಿ ಮಾತ್ರ ಮೋಸ ಮಾಡುತ್ತಿರುವೆನೆಂಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಐರ್ಲೆಂಡಿನಲ್ಲಿ ಹಾವುಗಳೇ ಇಲ್ಲವಂತೆ!: ಜೆ.ವಿ.ಕಾರ್ಲೊ.

ಇಂಗ್ಲಿಶಿನಲ್ಲಿ: ಫ್ರೆಡ್ರಿಕ್ ಫೊರ್ಸೈತ್ ಸಂಗ್ರಹಾನುವಾದ: ಜೆ.ವಿ.ಕಾರ್ಲೊ. ಕೆಲಸ ಕೇಳಿಕೊಂಡು ಬಂದಿದ್ದ ಹೊಸ ಹುಡುಗನ ಕಡೆಗೆ ಮ್ಯಾಕ್ವೀನ್ ತಲೆ ಎತ್ತಿ ಕೊಂಚ ಹೊತ್ತು ನೋಡಿದ. ಅವನಿಗೆ ಸಮಧಾನವಾಗಲಿಲ್ಲ. ತನ್ನಷ್ಟಕ್ಕೆ ತಲೆಯಲ್ಲಾಡಿಸಿದ. ಈ ಮೊದಲು ಕೆಲಸ ಕೇಳಿಕೊಂಡು ಇಂತವರು ಯಾರೂ ಅವನ ಬಳಿ ಬಂದಿರಲಿಲ್ಲ. ಹಾಗಂತ ಅವನೇನು ನಿರ್ದಯಿಯಾಗಿರಲಿಲ್ಲ. ಹುಡುಗನಿಗೆ ಕೆಲಸ ಅಷ್ಟೊಂದು ಜರೂರಿಯಾಗಿದ್ದು ಎಲ್ಲರಂತೆ ಕೆಲಸ ಮಾಡುವಂತವನಾಗಿದ್ದರೆ ಅವನದೇನು ಅಭ್ಯಂತರವಿರಲಿಲ್ಲ. “ಇದು ಲೆಕ್ಕ-ಪತ್ರ ಬರೆದಿಡುವ ಕುರ್ಚಿ ಕೆಲಸ ಅಲ್ಲ, ಮೈಮುರಿಯುವಂತ ಕೆಲಸ ಕಣಪ್ಪ. ಯೋಚಿಸು.” ಎಂದ ತನ್ನ ಬೆಲ್ಫಾಸ್ಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಿಗಂಬರ ಸತ್ಯ (ಭಾಗ ೨): ಗುರುಪ್ರಸಾದ್ ಕುರ್ತಕೋಟಿ

ಇಲ್ಲಿಯವರೆಗೆ ಚಳಿಗಾಲ ಬಂದರೆ ಹೇಗೆ ಟೈಮ್ ಪಾಸು ಮಾಡೋದು ಅನ್ನುವ ಪ್ರಶ್ನೆಗೆ ಅಲ್ಲಿನ ಎನ್ನಾರೈ ಹೈಕ್ಳು ಕೆಲವು ವಿಧಾನಗಳನ್ನು ಹೇಳಿಕೊಟ್ಟರು. ಅವುಗಳಲ್ಲಿ ನನಗೆ ತುಂಬಾ ಇಷ್ಟವಾಗಿದ್ದು ಅಂದರೆ “spiritual” ದಾರಿ. ಅಯ್ಯೋ ಆಧ್ಯಾತ್ಮ, ದೇವರು, ಭಜನೆ ಅಲ್ಲಾ ರೀ… ನಾ ಹೇಳಿದ ‘ಸ್ಪಿರಿಟ್’ ಬೇರೆಯದು! ಭಾರತದಲ್ಲಿ ‘ಚಾ ಮಾಡ್ಲಾ’ ಅಂತ ಕೇಳಿದಂಗೆ ಅಲ್ಲಿನ ಗೆಳೆಯರ ಮನೆಗೆ ಹೋದಾಗ ‘ನಿಮಗೆ ಯಾವುದು ಅಡ್ಡಿ ಇಲ್ಲ? ಅಂತ ಸ್ಪಿರಿಟ್ ಗಳ ಹಲವಾರು ಬಗೆಗಳನ್ನು ತೋರಿಸಿ ಬಾಯಲ್ಲಿ ನೀರು ಹರಿಸಿ ದೇಹಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 2): ನಾರಾಯಣ ಎಂ ಎಸ್

ಇಲ್ಲಿಯವರೆಗೆ ಮದುವೆ ನಿಶ್ಚಯವಾದ ಮನೆಗಳು ಸಡಗರ ಸಂಭ್ರಮಗಳಿಂದ ತುಂಬಿಹೋಗುವುದು ಸಹಜ. ಇನ್ನು ಇಲ್ಲಿ ತೀರ ಎರಡೇ ತಿಂಗಳಲ್ಲಿ ಮದುವೆ ಗೊತ್ತಾಗಿರುವಾಗ ಕೇಳಬೇಕೆ? ಮಾಡಲು ಬೆಟ್ಟದಷ್ಟು ಕೆಲಸಗಳಿದ್ದವು. ವಿಶಾಖಪಟ್ಟಣದ ಕೃಷ್ಣಯ್ಯರ್ ಮನೆಯಲ್ಲಿ ಮದುವೆ ತಯಾರಿಯ ಕಲರವದ ತಾಂಡವ ಜೋರಾಗೇ ನಡೆದಿತ್ತು. ಹಾಗಂತ ತಿರುವಾರೂರಿನ ಗಂಡಿನ ಮನೆಯಲ್ಲೇನೂ ಕಡಿಮೆ ಗದ್ದಲವಿರಲಿಲ್ಲ. ಮುದ್ರಿಸಬೇಕಿದ್ದ ಲಗ್ನಪತ್ರಿಕೆಯ ವಿನ್ಯಾಸ, ಕರೆಯಬೇಕಿದ್ದ ಅತಿಥಿಗಳ ಪಟ್ಟಿ, ಕೊಡಬೇಕಿದ್ದ ಉಡುಗೊರೆಗಳು, ತೆಗೆಯಬೇಕಾದ ಜವಳಿ, ಗೊತ್ತುಮಾಡಬೇಕಿದ್ದ ಫೋಟೋಗ್ರಾಫರ್ ಒಂದೇ… ಎರಡೇ? ಪ್ರತಿಯೊಂದಕ್ಕೂ ಚರ್ಚೆ, ಸಮಾಲೋಚನೆ ಅಭಿಪ್ರಾಯ ಭೇದಗಳಿಂದ ದಿನವಿಡೀ ಮನೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೆಳೆಯನಲ್ಲ (ಭಾಗ 2): ವರದೇಂದ್ರ ಕೆ.

ಇಲ್ಲಿಯವರೆಗೆ.. 3 ತನ್ನನ್ನು ಹುಡುಗ ನೋಡಿ ಹೋಗಿದ್ದು, ಅವನು ತನ್ನನ್ನು ಒಪ್ಪಿದ್ದು. ಮನೆಯಲ್ಲಿ ಎಲ್ಲರಿಗೂ ಇಷ್ಟವಾಗಿದ್ದು, ತಾನೂ ಒಪ್ಪಿದ್ದು ಎಲ್ಲ ವಿಷಯವನ್ನು ಸಂತೋಷ್ಗೆ ಹೇಳಬೇಕೆಂದು ಎಷ್ಟು ಪ್ರಯತ್ನಿಸಿದರೂ ಸಂತೋಷ್ ಸಂಪರ್ಕಕ್ಕೆ ಸಿಗ್ತಾನೇ ಇರ್ಲಿಲ್ಲ. ಮದುವೆ ಆಗುವ ಹುಡುಗ ಸಂಪತ್ನ ಫೋಟೋ ಕಳಿಸಬೇಕು ಎಂದು ಎಷ್ಟು ಬಾರಿ ಅಂದುಕೊಂಡರೂ ಸಂತೋಷ್ ಸಂಪರ್ಕಕ್ಕೆ ಸಿಗದ ಕಾರಣ ಸುಮ್ಮನಾದಳು. ಮದುವೆ ದಿನವೂ ಗೊತ್ತಾಯ್ತು, ಪ್ರೀತಿ ತನ್ನ ಎಲ್ಲ ಸ್ನೇಹಿತರಿಗೆ ಬರಲು ತಿಳಿಸಿದಳು. ಹಾಗೆ ಸಂತೋಷ್ಗೆ ಕಾಲ್ ಮಾಡಿ ಹೇಳಬೇಕು. ನನ್ನ ಮದುವೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟಾಫಿಸಿಕಲ್ ಸ್ಕೂಲ್‍ನ – ಜಾನ್ ಡನ್: ನಾಗರೇಖಾ ಗಾಂವಕರ

ಮೆಟಾಫಿಸಿಕಲ್ ಸ್ಕೂಲ್‍ನ ಪ್ರಮುಖ ಇಂಗ್ಲೀಷ ಕವಿ ಜಾನ್ ಡನ್. 1572ರ ಜನವರಿ 24ರಿಂದ ಜೂನ 19 ರ ಮಧ್ಯಭಾಗದಲ್ಲಿ ಲಂಡನ್ನಿನಲ್ಲಿ ಜನಿಸಿದ ಜಾನ್ ಡನ್. ರೋಮನ್ ಕ್ಯಾಥೋಲಿಕ್ ಕುಟುಂಬದಲ್ಲಿ ಜನಿಸಿದ್ದ. ಡನ್‍ನ ತಂದೆ ಇಜಾಕ್ ವಾಲ್ಟನ್ ಎಂಬಾತ ಶ್ರೀಮಂತ ವ್ಯಾಪಾರಿಯಾಗಿದ್ದ. ಆದರೆ ಡನ್ ತನ್ನ ತಂದೆಯನ್ನು ತನ್ನ ನಾಲ್ಕನೇ ವಯಸ್ಸಿಗೆ ಕಳೆದುಕೊಂಡ. ತಾಯಿ ಸರ್ ಥಾಮಸ್ ಮೋರ್‍ನ ಸಹೋದರಿ, ನಾಟಕಕಾರ ಜಾನ್ ಹೇವುಡ್‍ನ ಪುತ್ರಿಯಾಗಿದ್ದು ಪತಿ ಇಜಾಕ್‍ನ ಮರಣದ ನಂತರ ಡಾ. ಜಾನ್ ಸೈಮಂಜೆಸ್‍ನನ್ನು ಮರುವಿವಾಹವಾದಳು. ಹೀಗಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ತೆರೆಮರೆಯ ಕಲೆಗಾರ ಅಪ್ಪ”: ಕವಿತಾ ಜಿ. ಸಾರಂಗಮಠ

‘ಬದುಕಿನ ಪುಟಗಳಲ್ಲಿ ಭರವಸೆಯ ಹಾದಿಯಲ್ಲಿ ನೂರು ಕನಸ ಹೊತ್ತು ಸಾಗಿಹನು. . ತಾ ಲಾಲಿಸಿದ ಮಕ್ಕಳಿಗೆ. . ‘ ಅಪ್ಪ ಎಂದರೆ ಭಯ, ಆತಂಕ, ಗೊಂದಲ, ಕೋಪ, ಪಕ್ಷಪಾತಿ ಎಂಬಿತ್ಯಾದಿ ಭಾವನೆಗಳ ಚಿತ್ರ ಎಲ್ಲ ಮಕ್ಕಳ ಮನದಲ್ಲಿ ಮೂಡಿರುತ್ತದೆ. ಆದರೆ ವಾಸ್ತವವೇ ಬೇರೆ. “ಅಪ್ಪ ಎಂದರೆ ಮಕ್ಕಳ ಪಾಲಿನ ಅದ್ಭುತ ಶಕ್ತಿ. ಉತ್ತಮ ಸ್ಥಾನ, ಮಾನ, ನಾಗರೀಕತೆಯ ಹಿರಿಮೆಯನ್ನು ಸಮಾಜದಲ್ಲಿ ಮಕ್ಕಳಿಗೆ ತಂದುಕೊಡುವ ದಿವ್ಯ ಚೇತನ” ನಾವೆಲ್ಲ ಅಮ್ಮನ ಬಗ್ಗೆ ಚಿಂತಿಸುತ್ತೇವೆ. ಅವಳ ತ್ಯಾಗ, ಹೋರಾಟ, ಹಿರಿಮೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮರೆಯಲಾಗದ ಮದುವೆ (ಭಾಗ 1): ನಾರಾಯಣ ಎಂ ಎಸ್

ಇದು ನೆನ್ನೆಮೊನ್ನೆಯ ಮಾತಲ್ಲ. ಸುಮಾರು ಹತ್ತಿಪ್ಪತ್ತು ವರ್ಷಗಳೇ ಕಳೆದಿರಬೇಕು. ಆ ಕಾಲಕ್ಕಾಗಲೇ ಊರ ಕಣ್ಣಲ್ಲಿ ರಾಜನ್ಅಯ್ಯರ್ ಒಬ್ಬ ಹಿರೀಕನೆನಿಸಿದ್ದರು. ಆಗಲೇ ಎರಡು ಮೊಮ್ಮಕ್ಕಳಿಗೆ ಅಜ್ಜನಾಗಿದ್ದ ಅಯ್ಯರನ್ನು ಊರ ಜನ ಹಿರಿಯನೆನ್ನದೆ ಮತ್ತಿನ್ನೇನು ತಾನೇ ಅಂದೀತು? ಆದರೆ ಅಜ್ಜನಾದ ಬೆನ್ನಲ್ಲೇ ರಸಿಕ ರಾಜನ್ ಅಯ್ಯರ್ ಆ ಇಳಿವಯಸ್ಸಿನಲ್ಲೂ ಮಡದಿ ಸೀತಮ್ಮಳನ್ನು ಮತ್ತೊಮ್ಮೆ ಬಸಿರಾಗಿಸಿ ಹಲ್ಗಿಂಜುತ್ತಲೇ ಊರವರು ಆತುರದಲ್ಲಿ ಕಟ್ಟಿದ ಹಿರೀಕನ ಪಟ್ಟವನ್ನು ಮುಗುಮ್ಮಾಗಿ ಪಕ್ಕಕ್ಕೆ ಸರಿಸಿಟ್ಟುಬಿಟ್ಟಿದ್ದರು. ಅದೇಕೋ ಅಯ್ಯರಿಗೆ ಈ ಹಿರಿಯನೆಂಬ ಹೊಸ ಗೌರವದ ಹಣೆಪಟ್ಟಿಗಿಂತ ಲಾಗಾಯ್ತಿನಿಂದ ತನಗಿದ್ದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದಿಗಂಬರ ಸತ್ಯ! (ಭಾಗ ೧): ಗುರುಪ್ರಸಾದ ಕುರ್ತಕೋಟಿ

ನನಗೆ ತುಂಬಾ ಚೆನ್ನಾಗಿ ನೆನಪಿದೆ. ಕನ್ನಡ ಸಂಘದ ಕಾರ್ಯಕ್ರಮವೊಂದಕ್ಕೆ ಅಲ್ಲಿನ ಗೆಳೆಯರೊಬ್ಬರು ಕರೆದುಕೊಂಡು ಹೋಗಿದ್ದರು. ಅದೇ ಮೊದಲ ಸಲ ತುಂಬಾ ಜನ ಕನ್ನಡಿಗರು ಒಟ್ಟಿಗೆ ಸೇರಿದ್ದು ನೋಡಿ ಸಹಜವಾಗಿ ಸಿಕ್ಕಾಪಟ್ಟೆ ಖುಷಿ ಆಗಿತ್ತು. ಅದೂ ಅಲ್ಲದೆ ನಮ್ಮ ಕನ್ನಡಿಗರು ಅಲ್ಲಿ ಕನ್ನಡ ಮಾತಾಡುತ್ತಿದ್ದರು! ಅದು ಮತ್ತೊಂದು ದೊಡ್ಡ ಅದ್ಭುತವಾಗಿತ್ತು. ಕನ್ನಡಿಗರು ಒಂದಾಗಬೇಕು ಹಾಗೂ ಕನ್ನಡ ಮಾತಾಡಬೇಕು ಅಂದರೆ ಅವರು ವಿದೇಶದಲ್ಲಿ ನೆಲಸಿರಬೇಕು ಅನ್ನೋದು ನನಗೆ ಆಗ ಮನದಟ್ಟಾಯಿತು. ಕನ್ನಡ ಸಂಘದಲ್ಲಿ ಪ್ರತಿ ಹಬ್ಬಕ್ಕೆ ಅಂತ ಒಂದು ಕಾರ್ಯಕ್ರಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ