ಪ್ರೀತಿಯು ಪ್ರೀತಿಯಾಗಬೇಕೇ ವಿನಃ ಹಿಂಸೆಯಾಗಬಾರದು: ನಾಗೇಶ್ ಪ್ರಸನ್ನ.ಎಸ್.

ಬಯಸಿದ್ದೆಲ್ಲಾ ಸಿಕ್ಕಿಬಿಡಬೇಕು – ಹುಟ್ಟಿದ ದಿವಸದಿಂದಲೂ ಇದು ಮನುಷ್ಯನಿಗೆ ಅಂಟಿಕೊಂಡಿರುವ ಒಂದು ತೆರನಾದ ವಿಚಿತ್ರ ಖಾಯಿಲೆ. ಈ ಖಾಯಿಲೆಯಿಂದ ಯಾರು ಹೊರಬರುತ್ತಾರೋ ಅವರೇ ಸುಖಜೀವಿಗಳು. ಇಲ್ಲದಿದ್ದರೆ, ಅವರಷ್ಟು ವಿಚಿತ್ರವಾಗಿ ನಡೆದುಕೊಳ್ಳುವವರೇ ಸಿಗುವುದಿಲ್ಲ. ಇದಕ್ಕೆ ಬುದ್ಧ ಹೇಳಿದ “ಆಸೆಯೇ ದುಃಖಕ್ಕೆ ಮೂಲ” ಎಂಬ ಮಾತು ಒಂದು ಉದಾಹರಣೆ. ಬದುಕಿನಲ್ಲಿ ಆಸೆಯನ್ನು ತ್ಯಜಿಸಿದವರು ಬಹಳಷ್ಟು ಮಂದಿ ಸಿಗುತ್ತಾರೆ. ಆದರೆ, ಪ್ರೀತಿಯಲ್ಲಿ ಆಸೆ ತ್ಯಜಿಸುವವರು ಅಥವಾ ಪ್ರೀತಿಯೆಂಬ ಆಸೆಯನ್ನೇ ತ್ಯಜಿಸುವವರು ಕೇವಲ ಬೆರಳೆಣಿಕೆಯ ಹೃದಯಗಳಷ್ಟೇ. ಈಗ ನಾನು ಆ ದಾರಿಯಲ್ಲಿ ಹೆಜ್ಜೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುದ್ಧ ಗೆದ್ದ ಬಂದ ಪಾರ್ವತಿ: ಚಂದ್ರಿಕಾ ಆರ್ ಬಾಯಿರಿ

ಇದೇನಿದು ? ಯುದ್ಧ ಗೆದ್ದು ಬಂದ ಪಾರ್ವತಿ ಎಂದಾಕ್ಷಣ ಶಿವ ಪಾರ್ವತಿಯರ ಪುರಾಣ ಕಥೆ ಅಂದುಕೊಂಡಿರಾ? ಅಲ್ಲ, ಶಿವಪಾರ್ವತಿಯಂತಿರುವ ದಂಪತಿಗಳ ಕಥೆ. ಹೌದು ಮೊದಲನೆಯ ಮಗ ಸುಬ್ರಹ್ಮಣ್ಯ ಹುಟ್ಟಿ ಈಗಾಗಲೇ ಮೂರು ವರುಷ ಕಳೆದಿದೆ. ಮಗನ ಲಾಲನೆ ಪಾಲನೆ ಮಾಡಲು ಅಜ್ಜ ಅಜ್ಜಿ ಇರುವುದರಿಂದ ಮಗ ಬೆಳೆದು ದೊಡ್ಡವನಾದದ್ದೆ ಗೊತ್ತಾಗಲಿಲ್ಲ ಅವರಿಗೆ. ಕೆಲಸಕ್ಕೆ ಹೋಗಿ ಬಂದು ಮಗ ಅತ್ತೆ ಮಾವ ಗಂಡನನ್ನು ಬಹಳ ಅಕ್ಕರೆಯಿಂದಲೇ ನೋಡಿಕೊಂಡಳು ಪಾರ್ವತಿ. ಎರಡನೇ ಮಗುವಿಗಾಗಿ ಹಂಬಲಿಸುತ್ತಿದ್ದ ಗಂಡ ಈಗಲೇ ಇನ್ನೊಂದು ಮಗು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಡಾ. ಹೆಚ್. ಶಾಂತಾರಾಮ್ ಪ್ರಶಸ್ತಿಗೆ ಕೃತಿ ಆಹ್ವಾನ

ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ನ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ ಹೆಸರಿನಲ್ಲಿ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಕಾದಂಬರಿಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ. 2018 ಜನವರಿಯಿಂದ 2019 ಡಿಸೆಂಬರ್ ಒಳಗೆ ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕಾದಂಬರಿಗಳನ್ನು ಆಹ್ವಾನಿಸಲಾಗಿದೆ. ಕಾದಂಬರಿಗಳ ನಾಲ್ಕು ಪ್ರತಿಗಳನ್ನು ಜೂನ್ 5,2020ರ ಒಳಗೆ ( 5/6/2020) ಡಾ.ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು, ಕುಂದಾಪುರ, ಉಡುಪಿ ಜಿಲ್ಲೆ 576201.ಈ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರವಿವಾರದ ಸಂತೆ: ವೆಂಕಟೇಶ ಚಾಗಿ

ಇತ್ತೀಚಿನ ವರ್ಷಗಳಲ್ಲಿ ಸಂತೆಗೆ ಹೋಗುವುದೇ ತೀರ ಕಡಿಮೆ ಆಗಿದೆ. ದಿನಬೆಳಗಾದರೆ ತಾಜಾ ತಾಜಾ ತರಕಾರಿಗಳನ್ನು ತರಕಾರಿ ತಮ್ಮಣ್ಣ ತನ್ನ ತಳ್ಳುವ ಗಾಡಿಯಲ್ಲಿ ಮನೆ ಮುಂದೆ ತಂದು ನಿಲ್ಲಿಸ್ತಾನೆ. ಇನ್ನು ಕಿರಾಣಿ ಸಾಮಾನು ಬೇಕಾದ್ರೆ ರಸ್ತೆಯ ಕೊನೆಯಲ್ಲಿ ಇರುವ ಕಿರಾಣಿ ಅಂಗಡಿಯಲ್ಲಿ ಬೇಕಾದಾಗ ತಂದು ಬಿಡುತ್ತೇವೆ. ಡ್ಯೂಟಿಗೆ ಹೋದಾಗ ಹೆಂಡತಿ ಪೋನ್ ಮಾಡಿ “ರೀ , ವಾಟ್ಸ್ಯಾಪ್ ಲಿ ಲಿಸ್ಟ್ ಹಾಕಿದೀನಿ. ಕೆಲಸ ಮುಗಿಸಿ ಬರುವಾಗ ಅದರಲ್ಲಿನ ಸಾಮಾನೆಲ್ಲಾ ತಂದು ಬಿಡಿ.” ಎಂದು ಆದೇಶ ಮಾಡಿಬಿಡುತ್ತಾಳೆ. ಮನೆ ಯಜಮಾನಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಕ್ಕಿ ಗೂಡು ಬಿಟ್ಟ ಮೇಲೆ ಗೂಡಿಗೇನು ಬೆಲೆಯಿದೆ . . ?: ಜಯಶ್ರೀ.ಜೆ. ಅಬ್ಬಿಗೇರಿ

ಬಾಳ ದಾರಿಯಲ್ಲಿ ಕೈ ಹಿಡಿದು ನಡೆಸುವ ಬಂಧಗಳ ಶಕ್ತಿ ಅಪರಮಿತವಾದದ್ದು. ಮಗ್ಗಲು ಮುಳ್ಳುಗಳಂತೆ ಚುಚ್ಚುವ ಸಮಸ್ಯೆಗಳು ಹಣಿಯುತ್ತಿರುವಾಗಲಂತೂ ಇವುಗಳು ಸಲುಹುವ ರೀತಿ ಪದಗಳಲ್ಲಿ ಹಿಡಿದಿಡಲಾಗದು. ಇತ್ತಿತ್ತಲಾಗಿ ಸಂಬಂಧಗಳೇ ಮಾಯವಾಗುತ್ತಿವೆ. ಅನ್ನುವ ಮಟ್ಟಿಗೆ ಬದುಕಿನ ಸವಾರಿ ನಡೆಸುತ್ತಿದ್ದೇವೆ. ದೂರ ದೂರ ಸರಿದು ನಿಂತು ಒಂದೊಂದು ಗೂಡಿನಲ್ಲಿ ಜೀವಿಸುತ್ತಿದ್ದೇವೆ. ಸಂಬಂಧಗಳ ಸವಿರುಚಿಯನ್ನು ಸವಿಯುವುದು ಕ್ವಚ್ಚಿತ್ತಾಗಿ ಬಿಟ್ಟಿದೆ. ಈ ಹಿಂದೆ ಸಂಬಂಧಗಳು ನಮ್ಮನ್ನು ಕೂಡು ಕುಟುಂಬದಲ್ಲಿ ಹತ್ತು ಹಲವು ರೀತಿಯಲ್ಲಿ ಆವರಿಸುತ್ತಿದ್ದವು. ಇನ್ನಿಲ್ಲದಂತೆ ಪೋಷಿಸುತ್ತಿದ್ದವು. ಅಜ್ಜ ಅಜ್ಜಿಯರಿಂದ ನೀತಿ ಕಥೆಗಳು ಹೇಳಲ್ಪಡುತ್ತಿದ್ದವು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುರಿಯ ಹಾಲಿನ ಐಸ್ ಕ್ರೀಮು (ಭಾಗ ೨): ಗುರುಪ್ರಸಾದ‌ ಕುರ್ತಕೋಟಿ

ಇಲ್ಲಿಯವರೆಗೆ ನಾವು ಅಮೆರಿಕೆಯ, ನೆಬ್ರಾಸ್ಕಾ ರಾಜ್ಯದ ಒಮಾಹಾದಲ್ಲಿ ಧರೆಗೆ ಬಂದು ಇಳಿದಿದ್ದು ಸೆಪ್ಟೆಂಬರದಲ್ಲಿ. ಆಗ ಅಲ್ಲಿ ಜಿಟಿ ಜಿಟಿ ಮಳೆ ಶುರು ಆಗಿತ್ತು. ಆದರೆ ಕಿಚಿ ಪಿಚಿ ಕೆಸರು ಇರಲಿಲ್ಲ! ಮಹಾ ನಿರ್ದಯಿ ಚಳಿಗಾಲಕ್ಕಿಂತ ಸ್ವಲ್ಪ ಮೊದಲು. ಹೀಗಾಗಿ ಮಳೆಯ ಜೊತೆಗೆ ಸ್ವಲ್ಪ ಚುಮು ಚುಮು ಚಳಿಯೂ ಇತ್ತು. ನಾವು ಹೋದ ಆ ಸಮಯ ಮುಂಬರುವ ಚಳಿಯ ಪರಿಚಯ ಮಾಡಿಕೊಳ್ಳಲು ತುಂಬಾ ಸಹಾಯ ಮಾಡಿತು. ಒಂದು ವೇಳೆ ಚಳಿಗಾಲದ ಹೊತ್ತಿನಲ್ಲಿ ಅಲ್ಲಿಗೆ ಹೋಗಿದ್ದರೆ ಹೊಂದಿಕೊಳ್ಳಲು ತುಂಬಾ ಕಷ್ಟ ಪಡುತ್ತಿದ್ದೆವೇನೋ ಅನಿಸಿತು. ಆದರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನುಣುಪುಗಲ್ಲು: ತಿರುಪತಿ ಭಂಗಿ

“ಆದದ್ದು ಆಗೇತಿ ಹ್ವಾದುದ್ದು ಹೋಗೈತಿ, ಇನ್ನ ಏನಮಾಡಿದ್ರ ಹೊಡಮರಳಿ ಬರಾಕ, ಹೆಂಗ ಸಾದ್ಯ ಆದಿತವ್ವಾ..? ನಿನ್ನ ಹಣಿಬರ್ದಾಗ ಏನ್ ಬರದಿದ್ದೋ ಆ ಹಾಟ್ಯಾನ ದೇವ್ರಾ, ಅದನೇನಾರ ತಪ್ಪಸಾಕ ಬರತೈತೇನವ್ವಾ.. ಸಮಾಧಾನ ತಗೋ ತಂಗಿ, ನಿಂದರ ಏನ್ ದೊಡ್ಡ ವಯಸ್ಸಲ್ಲಾ ಈಗ ಬಲೆಬಾರ ಆದ್ರ ಇಪ್ಪತೈದ ಇರ್ಬೇಕ, ಇಷ್ಟ ಸಣ್ಣ ವಯ್ಯಸ್ದಾಗ ಗಂಡನ ಕಳಕೊಂಡ, ಮನಿಮೂಳಿಯಾಗಿ ಕುಂದ್ರೂದಂದ್ರ ನಿನ್ನ ಹಣಿಬರಾ ಎಷ್ಟಾರ ಸುಮಾರ ಇರ್ಬಾರ್ದ, ಸತ್ತಾರ ಜೋಡಿ ನಾಂವೂ ಸಾಯಾಕ ಹೆಂಗ ಸಾದ್ಯ ಆದೀತವ್ವಾ..? ನಾಂವ ನಮಗೋಸ್ಕರಾ ಇರ್ಬೇಕ, … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆಂಬಿಡದ ಭೂತ: ರಾಜೇಂದ್ರ ಬಿ. ಶೆಟ್ಟಿ

ಸುಮಾರು ಅರುವತ್ತು ವರ್ಷಗಳ ಹಿಂದೆ * ಅಪ್ಪ ಇನ್ನೂ ಮನೆಗೆ ಬಂದಿಲ್ಲ. ಅವರು ಮಂಗಳೂರಿನಿಂದ ಬರಬೇಕು. ಅದು ನಮ್ಮ ಊರಿನಿಂದ ಹತ್ತೊಂಬತ್ತು ಮೈಲು ದೂರವಂತೆ. ನಾನು, ಅಣ್ಣ ಮತ್ತು ಅಮ್ಮ ಅಪ್ಪನಿಗಾಗಿ ಕಾದು ಕುಳಿತಿದ್ದೇವೆ. ಯಾವಾಗಲೂ ರಾತ್ರಿ ಆಗುವ ಮೊದಲೇ ಬರುವ ಅಪ್ಪ ಇವತ್ತು ಇನ್ನೂ ಬಂದಿಲ್ಲ. “ಅಪ್ಪ ಕೊನೆಯ ಬಸ್ಸಿನಲ್ಲಿ ಬರಬಹುದು. ನೀವು ಊಟ ಮಾಡಿ ಮಲಗಿ” ಎಂದು ಅಮ್ಮ ನಮಗೆ ಗಂಜಿ ಬಡಿಸಿದರು. ಊಟ ಮಾಡಿ, ನಿದ್ದೆ ತಡೆಯಲಾರದೆ ನಾನು ಮಲಗಿದೆ. ನಡುವೆ ಎಚ್ಚರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪದ್ಯಗಳೂ ಹೂನಗೆ ಬೀರಲಿ: ಹೆಚ್. ಷೌಕತ್ ಆಲಿ

ಬೆಣ್ಣೆನಗರಿಯ ಸರಿತ ಕೆ.ಗುಬ್ಬಿ ಹೊಸಪೇಟೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಂತೆ ಸಾಹಿತ್ಯಸಕ್ತಿ ಬೆಳೆಸಿಕೊಂಡ ಕವಯತ್ರಿಯು ಹೌದು ಅನೇಕ ವಿಷಯಗಳು ವಿಚಾರಗಳು, ಘಟನೆಗಳು ಕಣ್ಣಿನ ಮುಂದೆ ಘಟಿಸಿದಾಗ ಆ ಚಿತ್ರಗಳನ್ನು ಮನದಾಳದಲ್ಲಿ ರೂಪನೀಡಿ ಸುಂದರ ಕವಿತೆಗಳಿಗೆ ತಮ್ಮ ಲೇಖನಿಯ ಮುಖಾಂತರ ಬರೆಯುವ ಹವ್ಯಾಸಿ ಕನ್ನಡತಿ. ಬದುಕು ಸುಲಭದ ವಿಚಾರವಲ್ಲ ಇಲ್ಲಿ ಅನೇಕ ಹಂತಗಳಿವೆ, ಮಜಲುಗಳಿವೆ. ಸಂತಸ ಸಂಭ್ರಮ ನೋವು ಹಿಂಸೆ ಎಲ್ಲವನ್ನು ಮೆಟ್ಟಿನಿಲ್ಲಲ್ಲಿ ಸಮಾಜದ ವಕ್ರತೆಯಲ್ಲಿಯು ಗಮನಿಸಬೇಕಾದ ಜವಾಬ್ದಾರಿಯು ತಮ್ಮ ಕವನಗಳ ಮೂಲಕ ಓದುಗರ ಮುಂದೆ ಪ್ರಸ್ತುತ ಪಡೆಸುವಲ್ಲಿ ಸಫಲತೆಯನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೈ ಫಿರ್ ಭೀ ತುಮ್ ಕೋ ಚಾಹುಂಗಾ…: ಬೀರೇಶ್ ಎನ್ ಗುಂಡೂರ್

ಕಗ್ಗತ್ತಲ ರಾತ್ರಿಗೂ ಒಂದು ಕೊನೆಯುಂಟು. ಅಲ್ಲಿ ಹೊಸ ಬೆಳಕಿನ ಹೊಸ ಚಿಗುರಿನ ಆಶಯ ಉಂಟು. ಕಪ್ಪುಗಟ್ಟಿ ಆರ್ಭಟಿಸಿ ಸುರಿಯುವ ಮಳೆಯು ಕೂಡ ಒಂದರೆ ಕ್ಷಣ ಯೋಚಿಸಿ ರಂಗುರಂಗಿನ ಕಾಮನಬಿಲ್ಲಿನ ಅಂದವನಿಕ್ಕುತ್ತದೆ. ಆದರೆ ಆ ನಿನ್ನ ಓರೆನೋಟದ ಬಿಸುಪು ಮಾತ್ರ ಇನ್ನೂ ಕರುಣೆ ತೋರುತ್ತಿಲ್ಲ ನೋಡು. ದಿನವೂ ಖಾಲಿ ಮಾಡಿಕೊಳ್ಳುವ ಚಂದಿರನ ಕಾಂತಿಗೂ ಹೊಟ್ಟೆ ಕಿಚ್ಚುಪಡುವಷ್ಟು ಕಾಂತಿಯನ್ನು ಕಣ್ಣಲ್ಲೇ ಕಾಪಿಟ್ಟುಕೊಂಡಿದ್ದೀಯಾ. ನನ್ನ ಕೆಣಕಲೆಂದೆ ಆ ನೀಳ ಹುಬ್ಬುಗಳ ಸಂಗ ಬೆಳೆಸಿದ್ದೀಯ. ಮುಂಗುರುಳ ಸರಿಸಿ ಸರಿಸಿ ಆ ಮೂಗುತಿಗೆ ಅಷ್ಟು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 21 & 22): ಎಂ. ಜವರಾಜ್

-೨೧- ಅಯ್ಯಯ್ಯೋ ಅಯ್ಯಯ್ಯಪ್ಪಾ ಅಂತಂತಾಗಿ ಮೈಕೈ ನೋವ ತಡಿದೆ ಪಕ್ಕಂತ ಕಣ್ಬುಟ್ಟು ನೋಡುದ್ರಾ.. ಸೂರ್ಯ ಮೂಡಿ ನಾ ಗಬ್ಬುನಾತ ಬೀರೋ ಮೋರಿ ಬದಿಲಿ ಬಿದ್ದು ನನ್ನ ಆಕಡ ಒಂದು ಈಕಡ ಒಂದು ಹಾಲ್ಕುಡಿಯೋ ಸಣ್ಣ ನಾಯಿ ಮರಿಗಳು ಎಳಿತಾ ಈಜಾಡ್ತ ಆಟ ಆಟ್ತ ಪಣ್ಣ ಪಣ್ಣಾಂತ ಆಕಡ್ಕು ಈಕಡ್ಕು ನೆಗೆದಾಡ್ತ ಗುರುಗುಡ್ತ ಇದ್ದು. ಅಸ್ಟೊತ್ಗ ಬಾಗ್ಲು ಕಿರುಗುಟ್ತು ನನ್ನ ದಿಗಿಲು ಅತ್ತಗೋಗಿ ನೋಡ್ತು.. ಸವ್ವಿ ಕಣ್ಣುಜ್ಕೊಂಡು ತಲ ಕೆರಕೊಂಡು ಲಂಗ ಮ್ಯಾಲಕ್ಕೆತ್ಕಂಡು ಬಾಯಾನಿ ಆಕುಳಿಸ್ಕಂಡು ಮೂಲಲಿರ ಸೀಗಕಡ್ಡಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಏನು ಬರೆಯಬೇಕೆಂಬುದೇ ಗೊತ್ತಾಗುತ್ತಿಲ್ಲ: ನಾಗೇಶ್ ಪ್ರಸನ್ನ.ಎಸ್.

ಓದಿಕೊಂಡಿದ್ದನ್ನೆಲ್ಲಾ ಬರೆಯಲಾಗುವುದಿಲ್ಲ, ಅರಿತುಕೊಂಡಿದ್ದನ್ನಷ್ಟೇ ಬರೆಯಲಾಗುವುದು. ಅದಲ್ಲದೇ, ಅರಿತುಕೊಂಡ ಎಷ್ಟೋ ವಿಷಯಗಳಲ್ಲಿ ಕೆಲವು ಮರೆತು ಹೋಗುವುದೂ ಉಂಟು. ಮರೆತ ವಿಷಯಗಳನ್ನು ಜ್ಞಾಪಿಸಿಕೊಂಡು ಬರೆಯುವುದು ಮಾತ್ರ ಕೆಲವೇ ಕೆಲವು. ಅಂತಹ ಕೆಲವು ವಿಷಯಗಳನ್ನು ಬರೆಯಲೆತ್ನಿಸಿದಾಗಲೇ ತಿಳಿದುಕೊಂಡಿರುವುದು ಎಷ್ಟೆಂದು ತಿಳಿಯುವುದು. ಈ ಒಂದೆರಡು ವಿಷಯಗಳನ್ನು ತಿಳಿದ ಮೇಲೂ #ಏನು ಬರೆಯಬೇಕೆಂಬುದೇ ಗೊತ್ತಾಗುತ್ತಿಲ್ಲ# ನಾವು ಮೊದಲೇ ಸಿದ್ಧರಿರುತ್ತೇವೆ. ಯಾವ ವಿಷಯದ ಬಗ್ಗೆ ಬರೆಯಬೇಕು, ಯಾವ ಅಂಶಗಳನ್ನು ಬರೆಯಬೇಕು, ಯಾವ ಅಳತೆಯಲ್ಲಿ ಬರೆಯಬೇಕು ಮತ್ತು ಇತ್ಯಾದಿ. ಬರವಣೆಗಯಲ್ಲಿ ಶುದ್ಧತೆಯ ಜೊತೆಗೆ ಪಕ್ವತೆ ಇರಬೇಕು. ಬರೆಯುತ್ತಿರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಸು ಬೇವಿನಗಿಡದ ಅವರ “ನೆರಳಿಲ್ಲದ ಮರ”: ಅಶ್ಫಾಕ್ ಪೀರಜಾದೆ.

ನಾಡು ಕಂಡ ಪ್ರಮುಖ ಕಥೆಗಾರರಲ್ಲಿ ಬೇವಿನಗಿಡದ ಕೂಡ ಒಬ್ಬರು. ಅದರಲ್ಲೆ ವಿಶೇಷವಾಗಿ ಉತ್ತರ ಕರ್ನಾಟಕದ ಅತ್ಯಂತ ಪ್ರಖ್ಯಾತ ಕಥೆಗಾರರು ಬಸು ಅವರು. ತಾಯವ್ವ, ಬಾಳೆಂಬ ಕಂಬ, ಹೊಡಿ ಚಕ್ಕಡಿ, ಹಾಗು ಉಗುಳು ಬುಟ್ಟಿ ಹೀಗೆ ಒಟ್ಟು ಐದು ಕಥಾಸಂಕಲನಗಳನ್ನು ಕನ್ನಡ ಸಾರಸ್ವತ ಲೋಕಕ್ಕೆ ಅರ್ಪಿಸಿರುವ ಬಸುಬೇವಿನ ಗಿಡದ ಅವರು ಇತ್ತೀಚೆಗೆ ಆರನೇಯ ಕಥಾ ಸಂಕಲನ “ನೆರಳಿಲ್ಲದ ಮರ” ಕತಾಪ್ರಿಯರ ಕೈಗಿಟ್ಟಿದ್ದಾರೆ. ಪ್ರತಿಷ್ಠಿತ ಪಲ್ಲವ ಪ್ರಕಾಶನದಿಂದ ಪ್ರಕಟಗೊಂಡಿರುವ ಈ ಕೃತಿ ತನ್ನ ಬಾಹ್ಯ ಸೌಂದರ್ಯದಿಂದ ಮನ ಸೆಳೆಯುವಂತೆ ಒಳ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸಾವನ್ ಕೆ ಸಿಂಧನೂರು ರವರ ಮಗರಿಬ್‌ ಗಜಲ್‌ ಸಂಕಲನ: ಶಿವಕುಮಾರ ಮೋ ಕರನಂದಿ

ಕೃತಿ: ಮಗರಿಬ್ ಗಜಲ್ ಸಂಕಲನ ಲೇಖಕರು: ಸಾವನ್ ಕೆ ಸಿಂಧನೂರು ಪ್ರಕಾಶನ: ಅಮ್ಮಿ ಪ್ರಕಾಶನ ಗಜಲ್ ಉರ್ದು ಕಾವ್ಯದ ಅತ್ಯಂತ ಜನಪ್ರಿಯ ರೂಪ. ಉರ್ದು ಸಾಹಿತ್ಯದಲ್ಲಿ ಜನಪ್ರಿಯವಾಗಿರುವ ಗಜಲ್ ಗಂಭೀರ ಕಾವ್ಯವೂ ಹೌದು. ಪ್ರಾಯಶಃ ಹನ್ನೊಂದನೇ ಶತಮಾನದಲ್ಲಿ ಪ್ರಾರಂಭವಾಗಿರಬೇಕು. ಗಜಲ್ ಅನ್ನು ಉರ್ದು ಕಾವ್ಯದ ರಾಣಿ ಎನ್ನುತ್ತಾರೆ. ಗಜಲ್ ಅಂದರೆ ಫಾರಸಿ ಭಾಷೆಯಲ್ಲಿ ಜಿಂಕೆ! ಸ್ವಚ್ಛಂದವಾಗಿ ಕಾಡಿನಲ್ಲಿ ಓಡಾಡುವ ಈ ಜಿಂಕೆ ಸೆರೆಸಿಕ್ಕಾಗ ಹೊರಡಿಸುವ ಅರ್ತನಾದವೇ ಕರುಣಾ ರಸವನ್ನೊಳಗೊಂಡ `ಗಜಲ್~ ಎಂದು ಅರ್ಥೈಸುತ್ತಾರೆ. ಗಜಲ್ ರಾಣಿಯ ಹುಚ್ಚು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ನಂಕ್ಯಾಕೋ…. ಬೆತ್ತಿಂಗ್ಳುನ ಕಂಡ್ರೇ ಭಯಾ ಆತೈತೆ ಬಾಗ್ಲಾಕ್ಕಂಡು ಬುಡ್ಡೀದೀಪಾನ ಆರಿಸಿ ಸುಮ್ಜೆ ಕೂಕಂತೀನಿ ಗವ್ವನ್ನೋ ಕತ್ಲು ಮೈಮ್ಯಾಗೇ ನಿಧಾನುಕ್ಕೆ ರೇಷ್ಮೇ ಹುಳ ತಲೆಯಾಡ್ಸಂಗೆ ನಿನ್ನ ಗ್ಯಾಪ್ನದ ನೆನಪುಗಳು ಎದ್ದು ನಿಂತ್ಕಂತವೆ ಗ್ವಾಡೇ ಮ್ಯಾಗೆ ನೀನೇ ಬಂದಂಗಾತು ದಾಳಿಂಬೆ ಬೀಜದ ಸಾಲಿಟ್ಟಂಗೆ ನಗ್ತಿದ್ದೆ ನನ್ನ ಮನುಸ್ನಾಗೆ ಒಲವಿನ ದೀಪ ಬೆಳುಗ್ತು ನಂಕಾಗ ಗೊತ್ತಾತು ನಾನೂನು ಒಬ್ಮನ್ಸಾ ಅಂತಾ ಗ್ವಾಡೇ ಮ್ಯಾಗೇ ಕೂಕಂಡು ನಗ್ತಾ ಇರೋಳ್ಗೇ ನಡುಮನೆತಾಕ ಬಂದು ಆಸರಿಕೆ- ಬ್ಯಾಸರಿಕೆ ಕಳಿಯಾಕೆ ಮನುಸಾಗ್ತಿಲ್ವಾ… ನಂಕ್ಯಾಕೋ ಬೆಳಕೇ ಬ್ಯಾಡಾ ಅನ್ನುಸ್ಬುಟೈತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮನೆ ಬಾಡಿಗೆಗಿದೆ!: ಎಸ್.ಜಿ.ಶಿವಶಂಕರ್

ಹೌದು, ನನ್ನ ಮನೆಯ ಮೊದಲ ಮಹಡಿ ಮನೆ ಬಾಡಿಗೆಗಿದೆ! ಫ್ಯಾಕ್ಟ್ರಿ ಕೆಲಸ ಮಾಡಿದವರಿಗೆ ನನ್ನ ಕಾಲದಲ್ಲಿ ಪೆನ್ಷನ್ ಇರಲಿಲ್ಲ. ಅದಕ್ಕೇ ಪಿಎಫ್ ಸಾಲ ತೆಗೆದು ಬಾಡಿಗೇಗೇಂತ ಇಪ್ಪತ್ತು ವರ್ಷದ ಹಿಂದೆ ಮಹಡಿ ಮೇಲೊಂದು ಮನೆ ಕಟ್ಟಿಸಿದ್ದೆ. ಕೆಳಗೆ ನಾನು ವಾಸ, ಮೇಲಿನದು ಬಾಡಿಗೆಗೇಂತ ಯೋಜನೆ ಮಾಡಿ ಕಾರ್ಯ ಅರೂಪಕ್ಕಿಳಿಸಿದ್ದೆ. ಕಳೆದ ಇಪ್ಪತ್ತು ವರ್ಷದಲ್ಲಿ ಐದಾರು ಜನ ಬಾಡಿಗೆದಾರರು ನೆಮ್ಮದಿಯಿಂದ ಇದ್ದು ಹೋದರು. ಆದರೆ ಈಗ ಮಾತ್ರ ವಿಚಿತ್ರ ಪರಿಸ್ಥಿತಿ ಎದುರಾಗಿತ್ತು. ಪ್ರತೀ ರೂಮಿಗೂ ಅಟ್ಯಾಚ್ಡ್ ಬಾತ್ರೂಮು ಕೇಳುತ್ತಿದ್ದರು! … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾವೈಕ್ಯತೆಯೆಂಬ ಬಳ್ಳಿಯ ಹೂವುಗಳು: ಹೆಚ್. ಷೌಕತ್ ಆಲಿ

ಯುವ ಕವಿ ಮೆಹಬೂಬ ಪಾಷ ಎ.ಮಕಾನದಾರ ಕೊಪ್ಪಳದವರು.ಸಮಾಜಶಾಸ್ತ್ರದಲ್ಲಿ ಎಂ.ಎ ಮತ್ತು ಬಿ.ಎಡ್ ಶಿಕ್ಷಣದ ಬಳಿಕ ಅತಿಥಿ ಉಪನ್ಯಸಕರಾಗಿ ಸೇವಾ ಕಾರ್ಯ ಆರಂಭ. ಕವಿಯ ಬಗ್ಗೆ ನಾನು ಒಂದಷ್ಟು ವಿಚಾರ ಹೇಳಬೇಕನ್ನಿಸುತ್ತೆ, ಬದುಕಿಗೆ ತುಂಬ ಹತ್ತಿರದನೆಂಟು ಮೆಹಬೂಬ ಪಾಷರವರ ಚಿಂತನೆಗಳು ಆಳಕ್ಕೆ ಹೋದರೂ ಅಲ್ಲಿಯು ಒಂದು ಚಿಗುರು ಕಾಣುವಂಥದ್ದು. ಜಾತಿ, ನೀತಿ, ರೀತಿ, ರೀವಾಜುಗಳಿಂದ ಆಚೆಗೆ ಇವರ ಹೃದಯ ಚಿಂತಿಸುತ್ತದೆ. ಬದುಕು ಅನೇಕ ಘಟ್ಟಗಳಲ್ಲಿ ಅನೇಕ ಅನುಭವ ನೀಡಿ ಅದರಿಂದ ಕಲಿತ ಪಾಠವೇ ಜೀವನದ ಸಾರ್ಥಕದ ಮುನ್ನೋಟವಾಗಿರುತ್ತೆ ಇಂತಹ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಹಮಿಲ್ಲದ ಮಹಮದರ ಬದುಕೇ ಕವಿತಾಸಾರ: ಡಾ. ಹೆಚ್ಚೆನ್ ಮಂಜುರಾಜ್

ಎಲ್ಲ ಮರೆತಿರುವಾಗ ಇಲ್ಲ ಸಲ್ಲದ ನೆವವ ಹೂಡಿ ಬರದಿರು ಮತ್ತೆ ಹಳೆಯ ನೆನಪೇ ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ ರಾಡಿಗೊಳಿಸುವೆ ಏಕೆ, ಮಧುರ ನೆನಪೇ? ಬಹಳ ಒಳ್ಳೆಯ ಕವಿ ಹಾಗೂ ಅದಕಿಂತಲೂ ಒಳ್ಳೆಯ ಮನುಷ್ಯರಾದ ನಿಸಾರ್ ಅಹಮದ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ‘ಕನ್ನಡವೆಂದರೆ ಬರಿ ನುಡಿಯಲ್ಲ. ………’ ಎಂದು ತಿಳಿಸಿ ಕೊಟ್ಟವರಿವರು. ಮನಸು ಗಾಂಧಿಬಜಾರು ಎಂದವರು. ಕನ್ನಡ ನಾಡು ನುಡಿಗಳ ನಿತ್ಯೋತ್ಸವವನ್ನು ಸತ್ಯವಾಗಿಸಿದವರು. ಕುರಿಗಳು ಸಾರ್ ಕುರಿಗಳು ಎಂದು ವಿಡಂಬಿಸಿದವರು. ಮೂಲತಃ ಭೂಗರ್ಭ ವಿಜ್ಞಾನಿಯಾದರೂ ನವೋಲ್ಲಾಸದ ಕವಿಗಳಾಗಿಯೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕುರಿಯ ಹಾಲಿನ ಐಸಕ್ರೀಮು (ಭಾಗ ೧): ಗುರುಪ್ರಸಾದ ಕುರ್ತಕೋಟಿ

ಅಮೇರಿಕೆಗೆ ಹೋಗುವುದು ಖಚಿತವಾಗಿ, ವೀಸಾ ಸಂಭ್ರಮಗಳೆಲ್ಲ ಮುಗಿದಾಗ ನಮ್ಮ ಕಂಪನಿಯಲ್ಲಿ ನನಗೆ ಕರೆಗಳು ಬರಲು ಶುರುವಾಗಿದ್ದವು. ಅಮೆರಿಕೆಯ ವೀಸಾ ಸೀಲು ಬಿದ್ದವರು ಅಂದರೆ ಮದುವೆಗೆ ತಯಾರಾದ ಕನ್ಯೆಯರು ಇದ್ದಂತೆ. ಹುಡುಗಿಗೆ ವಯಸ್ಸಾದಂತೆ ತಂದೆತಾಯಿಯರಿಗೆ ಎಷ್ಟು ಆತಂಕ ಇರುತ್ತದೋ (ನಮ್ಮ ಕಾಲದಲ್ಲಿ ಹಾಗಿತ್ತು, ಈಗ ಹುಡುಗನ ತಂದೆತಾಯಿಗೆ ಅಂತ ಓದಿಕೊಳ್ಳಿ!) ಅದಕ್ಕಿಂತ ಹೆಚ್ಚು ಆತಂಕ ಆಯಾ ವಿಸಾಧಾರಿಗಳ ಮ್ಯಾನೇಜರ್ ಗಳಿಗೆ. ನಾವು ಒಂಥರಹದ ಬಿಸಿ ತುಪ್ಪ ಅವರಿಗೆ. ಅದಕ್ಕೆ ಕಾರಣವೂ ಇದೆ. ವೀಸಾಕ್ಕೆ ಅಂತ ಸಿಕ್ಕಾಪಟ್ಟೆ ಖರ್ಚು ಮಾಡಿರುತ್ತಾರೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬೆನ್ ಜಾನಸನ್‍ನ ನಾಟಕ- Every Man In His Humour- ಅವಿವೇಕತನಕ್ಕೆ ಕನ್ನಡಿ: ನಾಗರೇಖಾ ಗಾಂವಕರ

ಇಂಗ್ಲೆಂಡಿನ ಹಳೆಯ ಉಪನಗರ ಹಾಗ್ಸ್‍ಡೆನ್‍ನ ನೋವೆಲ್ಲ್ ವಯೋವೃದ್ದ, ಆದರೆ ಧೀಮಂತ, ವ್ಯವಹಾರಿಕ ಕಲೆಯಲ್ಲಿ ನಿಪುಣ. ಆತನ ಮಗ ತರುಣ ಎಡ್ವರ್ಡ. ಮಗನ ಆಸಕ್ತಿಗಳು ಆತನ ಶ್ರೇಯಸ್ಸು ಇವುಗಳ ಬಗ್ಗೆಯೇ ತಂದೆಯ ಮೊದಲ ಆದ್ಯತೆ. ಮಗನಿಗೆ ಆಪ್ತವಾಗಿರುವ ಕಾವ್ಯ ಸಾಹಿತ್ಯಗಳೆಲ್ಲವೂ ಆತನಿಗೆ ಉಪಯೋಗಕ್ಕೆ ಬಾರದ ಸಂಗತಿಗಳು. ಲಾಭವಿಲ್ಲದ ವಿದ್ಯೆ. ಅದರೊಂದಿಗೆ ಆತನ ಇನ್ನೊಂದು ಚಿಂತೆ ಸದಾ ಗಿಡುಗಗಳ ಪಳಗಿಸುತ್ತ ಕಾಲಹರಣ ಮಾಡುವ ಆತನ ಅಣ್ಣನ ಮಗ ಹಳ್ಳಿ ಗಮಾರ ಸ್ಟೀಫನ್ ಬಗ್ಗೆ. ಒಬ್ಬ ವ್ಯಾವಹಾರಿಕ ಚಾತುರ್ಯವುಳ್ಳ ನೊವೆಲ್ಲ್ ತಂದೆಯಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸುಖಾಂತ: ಅಶ್ಫಾಕ್ ಪೀರಜಾದೆ

-೧- ಮೊದಮೊದಲು ಕ್ಷೇಮವಾಗಿಯೇ ಇತ್ತು ಜೀವನ, ಹೂವಿನಹಾಸಿಗೆಯಾಗಿತ್ತು. ಯಾರಿಗೆ ಗೊತ್ತಿತ್ತು? ಹೀಗೆ ಮುಳ್ಳಿನದಾರಿಯಾಗುವುದೆಂದು?, ಬದುಕು ಕಣ್ಣೀರ ಕಡಲಾಗುವದೆಂದು. ಮನೆಗೆನಾನೊಬ್ಬಳೆ ಮಗಳು, ಅರಮನೆಯಂಥ ಮನೆಗೆ ನಾನೇ ಒಡತಿ. ಅವ್ವನನ್ನನ್ನು ಅಪ್ಪನ ಕೈಗಿಟ್ಟು ಶಿವನ ಪಾದಾ ಸೇರಿದ್ದಳು. ಅವ್ವ ಹೋದಮ್ಯಾಗ ಊರ ಜನ ಅಪ್ಪನಿಗೆ ಇನ್ನೊಂದು ಮದುವೆ ಆಗುವ ಸಲಹೆನೀಡಿದ್ದರೂ, ಹೊಸದಾಗಿ ಬರುವ ಹೆಂಗಸು ಹೆಂಗಿರತಾಳೋ?. ತಾಯಿ ಇಲ್ಲದ ತಬ್ಬಲಿಗೆ ಮಲತಾಯಿ ಹಿಂಸೆ ಬೇರೆ ಬೇಡ ಅಂತಾ ಕಣ್ಣಲ್ಲಿ ಕಣ್ಣಿಟ್ಟು, ಅಂಗೈಯಲಿ ಅರಗಿಣಿ ಸಾಕಿದಾಂಗ ನನ್ನ ಸಾಕಿದ್ದ. ನಾ ಬೆಳದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 19 & 20): ಎಂ. ಜವರಾಜ್

-೧೯- ಸೂರ್ಯ ಕಣ್ಬುಟ್ಟು ನಾನು ಕಪಿಲ ಬಾವಿ ಮೆಟ್ಲತ್ರ ಇದ್ದಿ ಅಯ್ನೋರು ಬಾವಿ ನೀರೊಳ್ಗ ಈಜ್ತಾ.. ಚೆಂಗುಲಿ ಬಾವಿ ಕಟ್ಟ ಮ್ಯಾಲ ನಗ್ತಾ.. ಅರೆ, ಮ್ಯಾಲಿಂದ ತಿಗುನ್ ತಳ್ಳು ಬೀಳ್ತಲ್ಲಾ.. ಚೆಂಗುಲಿ, ‘ಅಯ್ನೋರಾ ತಳ್ಳು ಉದುರ್ತಾ ಅವ ಆದು ಗುಡ್ಯಾಕಕಿಲ್ವ. ಶಂಕ್ರಪ್ಪೋರು ಈಚೀಚ್ಗ ಬರದೇ ಇಲ್ಲ’ ‘ಅಂವ ನಿಗುರ್ತ ಅವ್ನ ನೀನೆ ಮಾಡ್ಲಾ ಸಂತಗೋಗಿ ಹರಾಜಾಕ್ಲಾ ನಿಂಗೇನ್ ಕೇಮಿ ಇದ್ದದು..’ ‘ಆಯ್ತು ಅಯ್ನೋರಾ ಆಗ ನನ್ನೇನಾರ ಶಂಕ್ರಪ್ಪೋರ್ ಕೇಳುದ್ರಾ..’ ‘ಏಯ್, ಲೌಡೆ ಬಂಚೊತ್ ಅಂವ ಹಂಗೇನಾರ ಬಂದ್ರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೀತಿಯ ದೇವತೆಗಾಗಿ……: ಜಹಾನ್ ಆರಾ

ನನ್ನ ಮುದ್ದು ಮಮ್ಮಿ ಜಾನ್‍ಗೆ ನನ್ನ ಮನದಾಳದಿಂದ ಪ್ರೀತಿ ತುಂಬಿದ ಒಂದು ಸಲಾಮ್. ಅಮ್ಮೀಜಾನ್ ತುಂಬಾ ನೆನಪಾಗ್ತಿದ್ದೀರಾ ನಿಮ್ಮ ಮಡಿಲಿಗೆ ಹಾಗೆ ಓಡಿ ಬಂದು ಮಗುವಾಗಿ ನೆಮ್ಮದಿಯ ತುಸು ಗಳಿಗೆ ಕಳಿಬೇಕು ಅಂತಾ ಅನಿಸ್ತಿದೆ ಆದರೆ ಏನ್ಮಾಡಲಿ ನಿಮ್ಮಿಂದ ನನ್ನನ್ನು ಬಹಳ ದೂರಕ್ಕೆ ಕಳಿಸಿದ್ದೀರಾ. ಮಮ್ಮೀಜಾನ್ ನೆನ್ನೆ ಒಂದು ಪದ್ಯ ಓದ್ದೆ ಸುಭದ್ರಕುಮಾರಿ ಚೌಹಾನ್ ‘ಮೈ ಬಚ್‍ಪನ್ ಕೊ ಭೂಲ್ ರಹಿತಿ ಬೋಲ್ ಉಲಿ ಬಿಟಿಯಾ ಮೇರಿ’ ‘ನಂದನ ವನಸಿ ಖಿಲ್ ಉಟ್ಟಿ ಯಹ ಛೋಟಿಸಿ ಕುಟಿಯಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

“ಮಾನಸ ಗುರುವಿಗೆ ನನ್ನ ನಮನ”: ಶ್ರೀ ಕೊಯಾ

” ಮನೋರಮಾ ಮನೋರಮಾ ಮಲಗೋಬದ ಘಮ ಘಮ ” ನಾನು ಅದುವರೆವಿಗೂ ಹೈಸ್ಕೂಲು ದಿನಗಳಲ್ಲಿ ಕೇಳಿ, ಕಲಿತ ಪದ್ಯಗಳಿಗಿಂತಲೂ ಭಿನ್ನವಾಗಿದ್ದ ಪದ್ಯ ಇದಾಗಿತ್ತು. ಕಾಲೇಜಿನ ಮೆಟ್ಟಿಲು ಏರಿದ್ದ ದಿನಗಳವು : ಇಸವಿ ೧೯೭೬ , ದ್ವಿತೀಯ ಪಿಯುಸಿ. ನನಗೆ ನಿಸಾರ್ ಅಹಮದ್ ರವರಂತಹ ಕವಿಯ ಪರಿಚಯ ಮಾಡಿಸಿದ್ದು ಅಂದಿನ ಕನ್ನಡ ಪ್ರಾಧ್ಯಾಪಕರಾಗಿದ್ದ ಶ್ರೀಯುತ ಬಸವರಾದ್ಯರು. ಅಂದಿನ ದಿನಗಳಲ್ಲಿ ತಾಲೂಕ್ ಆಗಿದ್ದ ಚಾಮರಾಜನಗರದ ಕಾಲೇಜಿನಲ್ಲಿ ಕೇವಲ ಮೂವತ್ತು ವಿದ್ಯಾರ್ಥಿಗಳ ವೃಂದಕ್ಕೆ ; ಪಂಪ , ರನ್ನ , ಕುವೆಂಪು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನೀವು ಬಡಿಸಿದ್ದು ಪಾಯಸವೋ ಅಥವಾ ಪ್ರೀತಿಯೋ???: ನಾಗೇಶ್‌ ಪ್ರಸನ್ನ

ನಲ್ಮೆಯ ಗೆಳತಿಯೇ, ನೆನಪಿರಲಿ, ಇದು ನಾನು ಬರೆಯುತ್ತಿರವ ಮೊಟ್ಟಮೊದಲ ಪ್ರೇಮಪತ್ರ. ಈ ಹಿಂದೆ ಯಾರಿಗೂ ಬರೆದಿಲ್ಲ, ಮಂದೆಯೂ ಬರೆಯುವುದಿಲ್ಲ – ನಿಮಗೆ ಹೊರತಾಗಿ. ನಂಬುವುದು, ಬಿಡುವುದು ನಿಮ್ಮ ಕ್ಷಮೆಗೆ ಬಿಟ್ಟಿದ್ದು. ನೀವು ಬಡಿಸಿದ್ದು ಪಾಯಸವೋ ಅಥವಾ ಪ್ರೀತಿಯೋ??? ಸುಮಾರು 5-6 ವರ್ಷಗಳಾಯಿತು ನಾನು ನಿಮ್ಮನ್ನು ಮೊದಲ ಬಾರಿ ನೋಡಿ. ಆ ದಿನದ ನೆನಪು ನನ್ನೆದೆಯಲ್ಲಿ ಇನ್ನೂ ಉಸಿರಾಡುತ್ತಲೇ ಇದೆ. ಅಂದು, ನಿಮ್ಮ ಮನೆಯಲ್ಲಿ ಯಾವುದೋ ಪೂಜಾ ಕಾರ್ಯಕ್ರಮವಿತ್ತು, ಎಷ್ಟೋ ಜನ ನೆರೆದಿದ್ದರು. ಆದರೆ, ಅಷ್ಟೂ ಜನಗಳಲ್ಲಿ ನನ್ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಿತ್ಯೋತ್ಸವ ಮತ್ತು ನಾನು : ಉಷಾ ನರಸಿಂಹನ್

ಬದುಕಿನಲ್ಲಿ ಎಲ್ಲದಕ್ಕು ಮೊದಲೆಂಬುದಿರುತ್ತದೆ. ಭಾವಗೀತೆ ಕೇಳುವುದಕ್ಕು… ಸಾವಿರದೊಂಬೈನೂರ ಎಂಬತ್ತನೆ ಇಸವಿ. ನಮ್ಮ ಮನೆಗೆ ನಿತ್ಯೋತ್ಸವ ಕ್ಯಾಸೆಟ್ ತಂದರು. ಎಲ್ಲರ ಸಮಕ್ಷಮ ಟೇಪ್ ರೆಕಾರ್ಡರ್ ನಲ್ಲಿ ಹಾಕಿದರು. ನಾನು ಭಾವಗೀತೆಗಳನ್ನು ಕೇಳಿದ ಮೊದಲ ಬಾರಿಯದು. ಕವಿಯೇ ಕಾವ್ಯಸಾರಾಂಶ ಹೇಳಿದ ಪರಿ ಅನನ್ಯ. ಮನೋಜ್ಞ ಸಾಹಿತ್ಯ, ಸಂತುಲಿತ ರಾಗಸಂಯೋಜನೆ, ರತ್ನಮಾಲಾಪ್ರಕಾಶ್ ಅವರ ಮಧುಸಿಂಚಿತ ನುಣ್ದನಿ, ಮೈಸೂರು ಅನಂತಸ್ವಾಮಿ ಅವರ ಭಾವಪೂರ್ಣಗಾಯನ… ನಾನು ಹಾಡಿಗೆ ಪರವಶವಾದ ಮೊದಲ ಸಲವದು. ಬದುಕಿನಲ್ಲಿ ವಸಂತ ಅಡಿಯಿಡುತ್ತಿದ್ದ ರಮ್ಯಕಾಲದಲ್ಲಿದ್ದೆ! ನವಿರು, ಪುಳಕ, ತವಕಗಳಿಗೆ ಹಾತೊರೆಯುತ್ತಿದ್ದ ಮೈ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವರ್ತಮಾನದಲ್ಲಿ ಬುದ್ಧ-ಬಸವ-ಬಾಬಾಸಾಹೇಬರು ಕುರಿತು ಸ್ವರಚಿತ ಬರಹಗಳ ಆಹ್ವಾನ

ಸಾಮಾಜಿಕ ಪರಿವರ್ತನ ಚಳುವಳಿಗಾರರ ಸ್ಮರಣೆಯಲ್ಲಿ ಗಣಕರಂಗ, ಧಾರವಾಡ ಆಯೋಜಿಸುವ ಸಾಮಾಜಿಕ ಶಾಂತಿ-ಮೈತ್ರಿಗಾಗಿ, ಬುದ್ಧ-ಬಸವ-ಬಾಬಾಸಾಹೇಬ(ತ್ರಿಬಿ) ನೆನಪಿನ ಕವಿಗೋಷ್ಠಿ-22ರಲ್ಲಿ, 2564ನೇ ಬುದ್ಧ ಪೂರ್ಣಿಮೆಯ ಪ್ರಯುಕ್ತ, “ವರ್ತಮಾನದಲ್ಲಿ ಬುದ್ಧ-ಬಸವ-ಬಾಬಾಸಾಹೇಬರು” ಕುರಿತು ಸ್ವರಚಿತ ಕವನ/ಪ್ರಬಂಧಗಳನ್ನು ಆಹ್ವಾನಿಸಲಾಗಿದೆ. ಕವನ/ಪ್ರಬಂಧ ಕಳಿಸಲು ಕೊನೆಯ ದಿನಾಂಕ: 24-05-2020 ಕಳಿಸಬೇಕಾದ ಇ-ಮೇಲ್ : ganakaranga@gmail.com ಆಸಕ್ತರ ಗಮನಕ್ಕೆ : 1.ಹೊಸತನದ ಪರಿಕಲ್ಪನೆಯ ಎಲ್ಲಿಯೂ ಪ್ರಕಟವಾಗಿರದ ಕನಿಷ್ಟ 30-35 ಸಾಲುಗಳ ಮಿತಿಯುಳ್ಳ ಸ್ವರಚಿತ ಕವನ ಅಥವಾ ಕನಿಷ್ಟ ಐದು ಪುಟಗಳಿಗೆ ಮೀರದಂತಿರುವ 1500 ಪದಗಳ ಮಿತಿಯಲ್ಲಿರುವ ಟೈಪಿಸಿದ ಪ್ರಬಂಧವನ್ನು ಕಳಿಸಬೇಕು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾರ್ಮಿಕರ ಅಳಲು: ಸುನಿತಾ. ಎಸ್. ಪಾಟೀಲ

ಎಲ್ಲರೂ ಮಾಡುವುದು ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಎಂಬ ಪದವನ್ನು ನಾವೆಲ್ಲರೂ ಕೇಳಿದ್ದೇವೆ. ಕೇಳಿ ತಲೆದೂಗಿದ್ದೇವೆ. ನಾವೆಲ್ಲಾ ಒಂದಲ್ಲಾ ಒಂದು ಉದ್ಯೋಗ ಮಾಡುತ್ತೇವೆ ಹಣಗಳಿಸುತ್ತೇವೆ. ಹೊಟ್ಟೆ ಮತ್ತು ಬಟ್ಟೆಗಾಗಿ ಸಂಪಾದನೆ ಮಾಡುತ್ತೇವೆ ಹಾಗಾದರೆ ನಮ್ಮ ಉದ್ಯೋಗದ ಉದ್ದೇಶ ಇಷ್ಟೇನಾ? ಹೊಟ್ಟೆ ತುಂಬಲು ದುಡಿಯುವುದು ಕಣ್ತುಂಬಾ ನಿದ್ದೆ ಮಾಡುವುದು, ಕೆಲಸಗಳು ಪ್ರಾರಂಭಿಸುವಾಗ ಬಹು ಕಷ್ಟವೆನಿಸುತ್ತದೆ ನಿಜ, ಆದರೆ ಒಂದು ಕಡೆ ಸಿದ್ದಯ್ಯ ಪುರಾಣಿಕರು ಹೇಳುವಂತೆ ‘ಸುಲಭವಾದದ್ದೆಲ್ಲಾ ಶುಭಕರವಲ್ಲ; ಕಷ್ಟವಾದದೆಲ್ಲ ಕಷ್ಟಪರವಲ್ಲ, ಎಂದು ಭಾವಿಸಿ, ಪ್ರಾರಂಭದಲ್ಲಿ ಕಷ್ಟವೆನಿಸಿದರೂ ಪರಿಣಾಮದಲ್ಲಿ ಫಲಪ್ರದವಾಗಿರುತ್ತದೆ ಎಂಬ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತರ್ಜಾಲ ಬಳಸಿ ಪಾಠಬೋಧನೆ: ವೈ. ಬಿ. ಕಡಕೋಳ

ಕೊರೋನಾ ಬಂದಿದ್ದರಿಂದ ಶಿಕ್ಷಣ ಕ್ಷೇತ್ರದಲ್ಲಿ ಬಹುದೊಡ್ಡ ಪರಿವರ್ತನೆಗೆ ನಾಂದಿಯಾಗಿದೆ. ಅದು ಅಂತರ್ಜಾಲ ಬಳಸಿ ಮನೆಯಿಂದಲೇ ಪಾಠವನ್ನು ಬೋಧನೆ ಮಾಡುವ ಮೂಲಕ ಎಲ್ಲರೂ ಈಗ ಅಂತರ್ಜಾಲ ಬಳಸುವ ಅನಿವಾರ್ಯತೆ ಎದುರಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಣದಲ್ಲಿ ಟೆಲಿ ಎಜುಕೇಶನ್ ಈಗಾಗಲೇ ಸೀಮಿತ ಶಾಲೆಗಳಿಗೆ ಬಂದಿತ್ತು. ಅಲ್ಲಿ ಕಂಪ್ಯೂಟರ ಮತ್ತು ಅಂತರ್ಜಾಲ ಸೌಕರ್ಯ ಬ್ಯಾಟರಿ ಇತ್ಯಾದಿ ಪರಿಕರಗಳನ್ನು ನೀಡಲಾಗಿತ್ತು. ಆ ರೀತಿ ವೇಳಾಪಟ್ಟಿಯ ಮೂಲಕ ಪಾಠಬೋಧನೆ ಕೂಡ ಸಾಗಿತ್ತು. ಹಾಗೆಯೇ ಹಲವಾರು ಸಭೆಗಳು ತರಭೇತಿಗಳು ಕೂಡ ಅಂತರ್ಜಾಲ ಬಳಸಿ ಸೆಟ್ ಲೈಟ್ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ