ಮುಂದಿನ ಪೀಳಿಗೆಯ ಭವಿಷ್ಯವನ್ನು ಕಿತ್ತುಕೊಳ್ಳದಿರೋಣ !: ನಿಂಗಪ್ಪ ಹುತಗಣ್ಣವರ
ನಿಸರ್ಗವು ನಮ್ಮ ಆಸೆಗಳನ್ನು ಪೂರೈಸುತ್ತದೆ, ನಮ್ಮ ದುರಾಸೆಗಳನ್ನಲ್ಲ ! ಗಾಂಧೀಜಿಯವರ ಈ ಮಾತನ್ನು ನಾವು ಅರ್ಥೈಸಿಕೊಳ್ಳದೆ ಹೋದರೆ ಇಡೀ ಭೂಮಿಯನ್ನು ನಾವು ಅಂತ್ಯದೆಡೆಗೆ ಕೊಂಡುಯ್ಯುತ್ತೇವೆ. ಇದು ನನ್ನ ಗೆಳತಿ ಭೂಮಿಯ ಮಾತು. ಹೌದು ನಿಜಕ್ಕೂ ಗಂಭೀರವಾಗಿ ಯೋಚಿಸಬೇಕಾದ ಸಂಗತಿಯಿದು. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಏರುತ್ತಿದೆ ಆದರೂ ಕಾರ್ಖಾನೆಗಳು ಹೊಗೆಯುಗುಳುತ್ತಿವೆ, ವಾಹನಗಳು ಇಂಧನವನ್ನು ಸುಡುತ್ತಲಿವೆ. ಬದುಕಲು ಆಮ್ಲಜನಕ ಅವಶ್ಯಕವೆಂದು ತಿಳಿದಿದ್ದರೂ ಒಂದು ಸಸಿಗೆ ನೀರುಣಿಸಲಾಗದಷ್ಟು ಅವಿಶ್ರಾಂತರಾಗಿ ದುಡಿಯುವವರ ಹಾಗೆ ನಡೆದುಕೊಳ್ಳಿತ್ತಿದ್ದೇವೆ. ಮತ್ತೊಂದು ಪರಿಸರ ದಿನವನ್ನು ನಾವು ಆಚರಿಸಿ … Read more