ಸಾಫಲ್ಯ: ಉಮೇಶ್‌ ದೇಸಾಯಿ

ಅದು ಅಖಿಲ ಭಾರತ ಮಟ್ಟದ ಸಂಗೀತದ ಅಂತಿಮ ಕಾರ್ಯಕ್ರಮ. ಕನ್ನಡದ ಆ ವಾಹಿನಿ ಅನೇಕ ವರ್ಷಗಳಿಂದ ಈ ಸ್ಫರ್ಧೆ ಏರ್ಪಡಿಸುತ್ತ ಬಂದಿದೆ. ಇಂದು ಅಂತಿಮ ಸುತ್ತು. ಎಲ್ಲ ಸ್ಫರ್ಧಿಗಳಲ್ಲೂ ವಿಚಿತ್ರ ತಳಮಳ ಈಗಾಗಲೇ ಈ ವಾಹಿನಿಯ ಈ ಅಂತಿಮಸ್ಫರ್ಧೆಯ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಂತೆಯೇ ಇತರೇ ಸುದ್ದಿವಾಹಿನಿಗಳಲ್ಲಿ ಈ ಕುರಿತು ಅನೇಕ ಚರ್ಚೆಗಳಾಗಿವೆ…ಯಾರು ಗೆಲ್ಲಬಹುದು ಪ್ರಶಸ್ತಿಯನ್ನು ಈ ಕುರಿತಾಗಿ ಅಲ್ಲಲ್ಲಿ ಬೆಟಿಂಗ್ ಕೂಡ ನಡೆಯುತ್ತಿದೆ ಎಂಬ ಸುದ್ದಿಯೂ ಅನೇಕ ವಾಹಿನಿಗಳಲ್ಲಿ ಹರಿದಾಡುತ್ತಿತ್ತು. ಸ್ಫರ್ಧಿಗಳಲ್ಲಿ ತಳಮಳವಿತ್ತು ನಿಜ ಅಂತೆಯೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ತಲಾಖ್: ಸಿದ್ದರಾಮ ತಳವಾರ, ದಾಸ್ತಿಕೊಪ್ಪ.

ಊರಿನ ಮುಂಭಾಗದಲ್ಲೇ ಶತಮಾನಗಳಷ್ಟು ಹಳೆಯದಾದ ಹುಣಸೀಮರದ ಬುಡದಲ್ಲಿ ಪೇಚು ಮಾರಿ ಹಾಕಿಕೊಂಡು ತಲೆ ಮೇಲೆ ಕೈ ಹೊತ್ತು ಕೂತ ಕರವೀರನನ್ನು ಸಮಾಧಾನ ಮಾಡಲು ಯಾರೊಬ್ಬರೂ ಮುಂದೆ ಬರಲಿಲ್ಲ. ಅಷ್ಟಕ್ಕೂ ಅಲ್ಲೇನಾಗಿತ್ತು ಎಂದು ಅದಾರಿಗೂ ಸ್ಪಷ್ಟವಾಗಿ ಗೊತ್ತಾಗಿರಲಿಲ್ಲ. ಎಲ್ಲರ ಮುಖದಲ್ಲೂ ಭಯ, ಸಂಶಯ, ಆಶ್ಚರ್ಯ, ಸಂದೇಹವೇ ಮನೆ ಮಾಡಿದಂತಿತ್ತು. ಆಗಷ್ಟೇ ಕಚೇರಿಯಿಂದ ಬಂದ ಮಂಜನಿಗೆ ಇದಾವುದರ ಪರಿವೆಯೂ ಇರಲಿಲ್ಲವಾದರೂ ಅಲ್ಲಿ ಏನೋ ಒಂದು ದುರ್ಘಟನೆ ಜರುಗಿರಬಹುದೆಂಬ ಗುಮಾನಿಯಂತೂ ಮಂಜನ ತಲೆಯಲ್ಲಿ ಓಡುತ್ತಿತ್ತು. “ ಹಾಂ,, ನನ್ ಮಗಳು ಅಂಥಾದ್ದೇನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಭಾರತ ಭಾಗ್ಯವಿಧಾತನಿಗೊಂದು ಸಲಾಂ: ನಾಗರಾಜನಾಯಕ ಡಿ.ಡೊಳ್ಳಿನ

ಇತ್ತ ಧಾರವಾಡದ ಕೆ.ಸಿ.ಡಿ ಮೈದಾನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅವರ ಭಾರತ ಭಾಗ್ಯವಿಧಾತ ಕಾರ್ಯಕ್ರಮ ಧ್ವನಿ ಬೆಳಕು ಎಲ್ಲ ಕಲಾಪ್ರಕಾರಗಳನ್ನೊಳಗೊಂಡ ಕಾರ್ಯಕ್ರಮ ಉತ್ತಮವಾಗಿ ಮೂಡಿಬರುತ್ತಿತ್ತು. ಆ ಅದ್ಧೂರಿ ಸೆಟ್, ಝಗಮಗಿಸುವ ಬೆಳಕು, ಹಿನ್ನೆಲೆ ಧ್ವನಿ, ಗೊರವರ ಕುಣಿತ, ಪುರವಂತಿಕೆ, ಯಕ್ಷಗಾನ, ಗೀಗಿ ,ತಮಾಷಾ ,ಡೊಳ್ಳು ಇನ್ನಿತರ ಕಲಾಪ್ರಕಾರಗಳ ಕಾರ್ಯಕ್ರಮ ಅದ್ಭುತವಾಗಿದ್ದ ಈ ಕಾರ್ಯಕ್ರಮ ನೋಡುತ್ತಿದ್ದಂತೆಯೇ ನನ್ನ ಮನಸ್ಸು 2008 ರಲ್ಲಿ ಬುದ್ಧವಿಹಾರದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಅಂತರ ಮಹಾವಿದ್ಯಾಲಯದ ಶಿಬಿರದ ಘಟನೆಗಳತ್ತ ಮನಸ್ಸು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗೃಹ ಬಂಧನದ ಸದ್ಬಳಕೆ: ಸೂರಿ ಹಾರ್ದಳ್ಳಿ

ಕೊರೋನಾ ಮಾರಿಯಿಂದಾಗಿ ಭಾರತದಲ್ಲಿ ಲಾಕ್‍ಡೌನ್ ಅನುಭವಿಸಬೇಕಾಗಿ ಬಂದಿದೆ. ನಾಲ್ಕು ಗೋಡೆಗಳ ನಡುವೆ ಬಂಧಿಯಾಗಿರಬೇಕಾಧ ಇಂತಹ ಸಂದರ್ಭಗಳಲ್ಲಿಯೂ ನಮ್ಮ ಸಮಯವನ್ನು ಹೇಗೆ ಉಪಯೋಗಿಸಿಕೊಳ್ಳಬಹುದು ಎಂಬುದಕ್ಕೆ ಕೆಲ ಟಿಪ್ಸ್‍ಗಳು ಇಲ್ಲಿವೆ. ನಿಮ್ಮ ಸಂಬಂಧಿಕರ, ಗೆಳೆಯರ, ಶತ್ರುಗಳ ಹೆಸರಿನ ಪಟ್ಟಿ ಮಾಡಿ. ಅವರ ವಿಳಾಸಗಳು, ದೂರವಾಣಿ ಸಂಖ್ಯೆಗಳು, ಇ-ಮೈಲ್ ಐಡಿಗಳು, ಇವನ್ನೆಲ್ಲಾ ಸಂಗ್ರಹಿಸಿ ನಿಮ್ಮ ಕಂಪ್ಯೂಟರಿನಲ್ಲಿ ಅಥವಾ ಪುಸ್ತಕಗಳಲ್ಲಿ ಬರೆದಿಡಿ. ಅರೆರೆ, ಇವರ ಸಂಖ್ಯೆ ಇಷ್ಟೊಂದಿದೆಯೇ ಎಂಬ ಅಚ್ಚರಿ ನಿಮಗಾಗಿಯೇ ಆಗುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಅವಶ್ಯಕ ಕೆಲಸಗಳಿಗೆ ಬೇಕಾದವರ ಹೆಸರನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಳಾ ಕಾದಂಬರಿ: ಚಂದ್ರು ಪಿ ಹಾಸನ್

ಕರೋನಾದ ಹಿನ್ನೆಲೆಯಲ್ಲಿ ರಜೆಯೊಂದಿಗೆ ಮಜಾ ಮಾಡುತ್ತಿದ್ದ ಸಂದರ್ಭದಲ್ಲಿ , ದಿನದ ಕೆಲಕಾಲ ಸಾಹಿತ್ಯದಲ್ಲಿ ಒಲವು ಮೂಡುತ್ತಿತ್ತು. ಇಂದಿನ ಸಾಹಿತ್ಯಾಸಕ್ತಿಯ ಆ ಕಾಲದಲ್ಲಿ ನನ್ನ ಹಿತಚಿಂತಕರು, ಮಾರ್ಗದರ್ಶಕರು ಆದಂತಹ ಶ್ರೀಮತಿ ವಾಣಿ ಮಹೇಶ್ ರವರು ಒಮ್ಮೆ ಪರಿಚಯಿಸಿದ ಪುಸ್ತಕ ಶ್ರೀಮತಿ ಶೈಲಜಾ ಹಾಸನ ಇವರ ಇಳಾ ಕಾದಂಬರಿಯನ್ನು ಓದಿದೆ ಎಂದು ಹೇಳಲು ಹರ್ಷಿಸುತ್ತೇನೆ. ಸಕಲ ಸದ್ಗುಣಗಳನ್ನು ತನ್ನಲ್ಲಿ ತುಂಬಿಕೊಂಡಿರುವ ಭೂಮಿಯಂತೆ, ಒಂದು ಹೆಣ್ಣಿನ ಕಥೆ ಇಳಾ. ತನ್ನ ತಂದೆಯ ಸಾವಿನಿಂದ ಕೃಷಿ ಜಗತ್ತಿಗೆ ತಿಳಿಯಬೇಕಾದ ಇಳಾ ತಂದೆಯನ್ನು ದೂಷಿಸದೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಲೆನಾಡಿನ ಸ್ಥಿತಿ-ಗತಿಯೂ ಕೊರೋನ-ಮಂಗನ ಖಾಯಿಲೆಯಂತಹ ಮಹಾಮಾರಿಯೂ. . . . : ವಿಜೇತ ಎಂ. ವಿ

ಮಲೆನಾಡು ಹಚ್ಚ ಹಸಿರು ಹೊದಿಕೆಯ ಮೇಲ್ಮೈ,ದಟ್ಟ ಕಾನನದ ನಡುವೆ ಅಲ್ಲಲ್ಲಿ ಒಂದೋ ಎರಡೋ ಮನೆಗಳು ಮತ್ತೆಲ್ಲೋ ಚಿಕ್ಕ ಹಳ್ಳಿ ಊರು ಕೇರಿ ಇತ್ಯಾದಿ. ಸ್ವರ್ಗಕ್ಕೆ ಮೂರೇ ಗೇಣು ಎಂಬಂತಿರುವ ಪ್ರಕೃತಿಯ ಮಡಿಲು . ಕೆರೆ ನದಿ ಹಳ್ಳ ಕೊಳ್ಳಗಳಿಂದ ಸಮೃದ್ಧ ಗಾಳಿ ಬೀಸುತ್ತಿದೆ. ಬೇಸಿಗೆಯಲ್ಲೂ ಮರದ ನೆರಳು ರಸ್ತೆಗಳನ್ನು ಮುಚ್ಚುವಷ್ಟು ತಂಪಾಗಿರುತ್ತದೆ. ಹಲವು ಹಣ್ಣು ಹೂಗಳು ಹಾಗೇ ಪ್ರಾಣಿ ಪಕ್ಷಿಗಳು ಹೀಗೆ ವೈವಿಧ್ಯಮಯವಾಗಿದೆ ಮಲೆನಾಡು. ಮಾನವರಿಗೆ ಮಾತ್ರವಲ್ಲ ಪ್ರಾಣಿ ಪಕ್ಷಿಗಳಿಗೂ ವಿವಿಧತೆಯ ತಾಣವಾಗಿದೆ. ಇಷ್ಟೆಲ್ಲಾ ಸಕಲ ಸಮೃದ್ಧ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಒಡಲಾಳದ ಪದ್ಯಗಳು: ಎಚ್.‌ ಷೌಕತ್‌ ಅಲಿ, ಮದ್ದೂರು

ಕ್ರಿಯಾಶೀಲ ಬರಹಗಾರ ಕವಿ ವಿಮರ್ಶಕ ಕಥಾಸಂಕಲನಕಾರ ನಾಗೇಶ್ ನಾಯಕ್ ಬೆಳಗಾವಿ ಜಿಲ್ಲೆಯ ಸವದತ್ತಿ ಹುಟ್ಟೂರು. ಶಿಕ್ಷಕರಾಗಿ ಮಡಿಕೇರಿಯಲ್ಲಿ ಸೇವೆ. ಜೊತೆ ಜೊತೆಯಲ್ಲಿ ಕಥೆ-ಕವನಗಳನ್ನು ನಾಡಿನ ಪತ್ರಿಕೆಗಳಲ್ಲಿ ಪ್ರಕಟಿಸಿ ತೃಪ್ತಿಯಿಂದ ಸ್ಪೂರ್ತಿಗೊಂಡು ಹತ್ತು ಹಲವು ಪ್ರಕಾರಗಳಲ್ಲಿ ಕನ್ನಡ ಸಾಹಿತ್ಯ ಸೇವೆ ಮಾಡುತ್ತಿರುವ ಮತ್ತು ಪ್ರಮುಖ ಬರಹಗಾರರಲ್ಲಿ ಗುರುತಿಸಿಕೊಂಡ ಆತ್ಮೀಯ ಲೇಖಕ. ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡು ಅನೇಕ ಸಮ್ಮೇಳನಗಳಲ್ಲಿ ಆಕಾಶವಾಣಿಯಲ್ಲಿ ಮತ್ತು ಚಂದನ ವಾಹಿನಿಯ ಸಂದರ್ಶನದ ಮೂಲಕ ಕನ್ನಡಿಗರಿಗೆ ಚಿರಪರಿಚಿತ ನಾಗೇಶ್ ನಾಯಕ್. ಪ್ರಸ್ತುತ ಇವರ ಕವನ ಸಂಕಲನ ‘ಒಡಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವೈಷಮ್ಯ ಮತ್ತು ಒಪ್ಪಂದದ ಮೇಲಿನ ಕಥಾನಕ –The Merchant Of Venice : ನಾಗರೇಖ ಗಾಂವಕರ

ಆಂಟೋನಿಯೋ ಇಟಲಿಯ ವೆನಿಸ್‍ನ ನಿವಾಸಿ. ಪ್ರಸಿದ್ಧ ವ್ಯಾಪಾರಿ. ಆತ ವ್ಯಾಪಾರಿಯಾಗಿದ್ದರೂ ಸದಾಚಾರ ಸಂಪನ್ನ, ಸ್ನೇಹಜೀವಿ, ದಯಾಳುವಾದ ಆತನ ಸ್ನೇಹ ಬಳಗ ದೊಡ್ಡದಾಗಿತ್ತು. ಬಸ್ಸಾನಿಯೋ, ಗ್ರೇಸಿಯಾನೋ, ಲೊರೆಂಜೋ, ಸಲೆರಿಯೋ, ಸಲಾನಿಯೋ ಇವರೆಲ್ಲರ ಅಚ್ಚುಮೆಚ್ಚಿನ ಗೆಳೆಯನಾತ. ಅವರಿಗಾಗಿ ತನ್ನೆಲ್ಲ ಆಸ್ತಿ ಸಂಪತ್ತು, ಜೀವವನ್ನು ಕೊಡಲು ಸಿದ್ದನಿದ್ದ. ಆತನ ವ್ಯಕ್ತಿತ್ವ, ವೈಚಾರಿಕತೆ,ಕರುಣಾಪೂರಿತ ವ್ಯಕ್ತಿತ್ವ ಇತರರಿಗೆ ಮಾದರಿ. ಆತ ಮಮತೆ ಕರುಣೆಗಳ ಕ್ರೈಸ್ತ ತತ್ವಕ್ಕೆ ಮತ್ತೊಂದು ರೂಪಕವೆಂಬಂತೆ ಕಂಡುಬರುತ್ತಾನೆ. ಆದರೆ ಆತ ಅದೇನೋ ಉದ್ವಿಗ್ನತೆಯಲ್ಲಿ ಮಾನಸಿಕ ಕ್ಲೇಶದಿಂದ ನೋಯುತ್ತಿದ್ದಾನೆ. ಆಂಟೋನಿಯೋ ಅದಕ್ಕೆ ನಿರ್ದಿಷ್ಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶೃತಿ ನೀ ಮಿಡಿದಾಗ (ಭಾಗ ೨): ವರದೇಂದ್ರ.ಕೆ ಮಸ್ಕಿ

ಸುಶಾಂತನ ಪ್ರೇಮ ಪತ್ರ ಓದುತ್ತ ಓದುತ್ತ ಶೃತಿಯ ಅಂತರಂಗದಿ ಪ್ರೇಮದ ಬೀಜ ಮೊಳಕೆ ಒಡೆದು ಬಿಟ್ಪಿತು. ಇದು ಪ್ರೇಮವೋ, ಅಥವಾ ಪ್ರಥಮಬಾರಿಗೆ ಒಬ್ಬ ಹುಡುಗನ ಮನದ ಭಾವಕೆ ಸ್ಪಂದಿಸುವ ವಯೋಸಹಜ ಆಕಾಂಕ್ಷೆಯೋ ತಿಳಿಯದ ದ್ವಂದ್ವಕ್ಕೆ ಶೃತಿಯ ಮನಸು ಹೊಯ್ದಾಡಿ ವಯೋಸಹಜವಾಗಿ ಮೂಡುವ ಭಾವನೆಯೇ ಪ್ರೀತಿ ಅಲ್ಲವೆ? ಹೌದು ಎಂದುಕೊಂಡಳು. ಯವ್ವನ ದೇಹಕ್ಕೆ ಮಾತ್ರ ಆಗಿದ್ದ ಶೃತಿಯ ಮನಸಿಗೂ ಯವ್ವನ ಬಯಸುವ ಪ್ರೀತಿ, ಪ್ರೀತಿ ನೀಡುವ ಹೃದಯ ಒಂದಿದೆ ಎಂದು ತೋರಿಸಿದ ನಿಜ ಪ್ರೇಮಿ ಸುಶಾಂತ. ಅವನ ಪ್ರೇಮವನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸಿನ ಮಾಯಾಲೋಕಕ್ಕೆ ಡ್ರೀಮ್ ಕ್ಯಾಚರ್ ನ ಕೊಡುಗೆ..: ಚೈತ್ರಭೂಲಕ್ಷ್ಮಿ ಬೆಂಗಳೂರು

ಕೆಲವು ಸ್ಥಳೀಯ ಅಮೆರಿಕನ್ ಸಂಸ್ಕೃತಿಗಳಲ್ಲಿ, ಡ್ರೀಮ್‌ಕ್ಯಾಚರ್ ಗಳನ್ನು ಕೆಲವು ಗರಿಗಳು ಅಥವಾ ಮಣಿಗಳಂತಹ ಪವಿತ್ರ ವಸ್ತುಗಳನ್ನ ಬಳಸಿ ತಯಾರಿಸಲಾಗುತ್ತದೆ. ಸಾಂಪ್ರದಾಯಿಕವಾಗಿ ಅವುಗಳನ್ನು ಹೆಚ್ಚಾಗಿ ತೊಟ್ಟಿಲಿನ ಮೇಲೆ ರಕ್ಷಣೆಯಾಗಿ ನೇತುಹಾಕಲಾಗುತ್ತದೆ. ಇದು ಒಜಿಬ್ವೆ ಸಂಸ್ಕೃತಿಯಲ್ಲಿ ಬಹಳ ಶ್ರೇಷ್ಠವಾದ ತಾಯತರೂಪವಾಗಿದೆ. ಡ್ರೀಮ್ ಕ್ಯಾಚರ್ ರಾತ್ರಿಯ ದುಃಸ್ವಪ್ನಗಳನ್ನು ಗೊಂದಲಗೊಳಿಸುತ್ತದೆ ಮತ್ತು ಆಹ್ಲಾದಕರ ಕನಸುಗಳೊಂದಿಗೆ ಒಳ್ಳೆಯದನ್ನು ಆಕರ್ಷಿಸುತ್ತದೆ. ಒಂದು ಕಾಲದಲ್ಲಿ, ಕನಸಿನ ಕ್ಯಾಚರ್ ಅನ್ನು ಆಸಕ್ತಿ ಹೊಂದಿರುವ ಜನರ ಮನೆಗಳಲ್ಲಿ ಮಾತ್ರ ಕಾಣಬಹುದಾಗಿತ್ತು. ಇತ್ತೀಚಿನ ದಿನಗಳಲ್ಲಿ, ಸಂಪೂರ್ಣವಾಗಿ ವಿಭಿನ್ನ ಜನರು ಇದನ್ನು ಆಯ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 15 & 16): ಎಂ. ಜವರಾಜ್

– ೧೫- ಇಲ್ಲಿ ಕತ್ಲು ಅಂದ್ರ ಕತ್ಲು ಅಲ್ಲಿ ಕಾಣ್ತ ಮಾರ್ದೂದಲ್ಲಿರ ಹೆಂಡದಂಗಡಿಲಿ ಲಾಟೀನ್ ಬೆಳಕು ಇಲ್ಲಿ, ಯಾರು ಹೋದ್ರು ಯಾರ್ ಬಂದ್ರು ಗೊತ್ತಾಗದ ಹೊತ್ತು ಈ ಅಯ್ನೋರು ಅತ್ತಿಂದಿತ್ತ ಇತ್ತಿಂದತ್ತ ತಿರುಗಾಡ್ತ ಬೀಡಿ ಸೇದ್ತ ಎಳೆಯೋ ದಮ್ಮು ದಮ್ಮಿಗೂ ಬೀಡಿ ಮೊನೆಲಿ ಬೆಂಕಿನುಂಡೆ ಕಾಣ್ತಿತ್ತು ಅರೆ ಹೆಂಡದಂಗಡಿಲಿ ಜಗಳ ಅಯ್ನೋರು ದಿಟ್ಟಿಸಿ ನೋಡ್ದಾಗಾಯ್ತು ನಂಗು ದಿಗಿಲು ಯಾರ ಈ ಜಗಳ ಮಾಡ್ತ ಇರದು? ಆ ದನಿಯ ಎಲ್ಲೊ ಕೇಳಿರ ನೆಪ್ಪು ಆ ದನಿ ಜೋರಾಯ್ತು ಅರೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನಸುಗಳಿಗೆ ರೆಕ್ಕೆ ಬಂದಾಗ: ನಿಂಗಪ್ಪ ಹುತಗಣ್ಣವರ

ಹಿಡಿಯಷ್ಟು ಕನಸುಗಳನ್ನು ಎದೆಗಪ್ಪಿಕೊಂಡು ಧಾರಾಳವಾಗಿ ಜಗತ್ತಿನ ಬಗ್ಗೆ ಒಂದಷ್ಟು ಕಾಳಜಿಯಿಲ್ಲದೆ ಬದುಕಿಬಿಡುತ್ತೇವಲ್ಲ ಅದಕ್ಕಿಂತಲೂ ನಾಚಿಕೆಗೇಡಿನ ಸಂಗತಿ ಬೇರೊಂದಿಲ್ಲ. ಬದುಕಿನ ಅಸ್ತಿತ್ವಕ್ಕಾಗಿ ಯಾವುದೇ ಸಿದ್ಧಾಂತದೊಂದಿಗೆ ಮುಲಾಜಿಲ್ಲದೆ ರಾಜಿಯಾಗುವ ನಮ್ಮ ಮನಸ್ಥಿತಿಯ ಬಗ್ಗೆಯೂ ಒಂದಷ್ಟು ತಕರಾರಿದೆ. ಏನೇ ಇರಲಿ ನೇರವಾಗಿ ವಿಷಯಕ್ಕೆ ಬಂದುಬಿಡೋಣ. ಮಕ್ಕಳ ಬಾಲ್ಯವನ್ನು ಕಸಿಯಲಾಗುತ್ತಿದೆ ಮತ್ತು ಅವರ ವರ್ತಮಾನದ ಜೀವನದೊಂದಿಗೆ ಚೆಲ್ಲಾಟವಾಡಿ, ಭವಿಷ್ಯದ ಬದುಕಿಗೆ ಕೊನೆಯ ಮೊಳೆ ಹೊಡೆದಂತೆ ಭಾಸವಾಗುತ್ತದೆ. ನಾವು ಚೆನ್ನಾಗಿ ನಟಿಸುತ್ತಿದ್ದೇವೆ ಶಿಕ್ಷಣ ಮಗುವಿನ ಮೂಲಭೂತ ಹಕ್ಕು ಎಂಬುದನ್ನು ಮರೆತು. ಇದನ್ನು ನಾನು ಹೇಳುವುದಕ್ಕೂ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಷಾದ-೨: ಬದುಕಿನ ಕನಸುಗಳಲ್ಲಿ ವಿಷಾದ: ಸಹನಾ ಪ್ರಸಾದ್‌

ಕಳೆದ ಲೇಖನದಲ್ಲಿ ವಿಷಾದ, ರಿಗ್ರೆಟ್ ಮ್ಯಾಟ್ರಿಕ್ಸ್ ಬಗ್ಗೆ ಚರ್ಚೆ ನಡೆಯಿತು. ಅಲ್ಲಿ ನಮ್ಮ ಸಂಬಂಧಗಳಲ್ಲಿ ವಿಷಾದದ ಕುರಿತು ಮಾತಾಯಿತು. ಸಂಬಂಧಗಳು ಬೇರೆಯವರ ಮೇಲೆ ಸಾಕಷ್ಟು ನಿರ್ಭರವಾಗಿರುತ್ತೆ. ನಾವು ಸರಿ ಇದ್ದರೂ ಅವರಿರದೆ ಇರಬಹುದು. ಇಲ್ಲಾ, ಇಬ್ಬರೂ ಸರಿ ಇಲ್ಲದಿರಬಹುದು. ಅಥವಾ ಇಬ್ಬರೂ ಸರಿ ಇದ್ದರೂ ಪರಿಸ್ಥಿತಿ, ಸುತ್ತಮುತ್ತಲಿನ ಜನ ಸರಿ ಇಲ್ಲದಿರಬಹುದು. ಹೀಗೆ ಬಹಳಷ್ಟು ನಮ್ಮ ನಿಯಂತ್ರಣಕ್ಕೆ ಮೀರಿದ ಅಂಶಗಳು ಇದ್ದಾಗ ವಿಷಾದ ಹುಟ್ಟುವ ಸಾಧ್ಯತೆ ಹೆಚ್ಚು. ವೈಯಕ್ತಿಕ ಜೀವನಕ್ಕೆ ಬಂದಾಗ ವಿಷಾದ ಉಂಟು ಮಾಡುವ ಪರಿಸ್ಥಿತಿಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಗಣಿತದ ಸುಲಭ ಅಧ್ಯಯನಕ್ಕೆ ವೇದ ಗಣಿತ: ಶ್ರೇಯ ಕೆ.ಎಂ.

ಮೊದಲಿನಿಂದಲೂ ನನಗೆ ಗಣಿತ ಎಂದರೆ ಅಚ್ಚುಮೆಚ್ಚು, ಎಷ್ಟೇ ಕ್ಲಿಷ್ಟ ಸಮಸ್ಯೆ ಇದ್ದರು ಲೀಲಾಜಾಲವಾಗಿ ಬಿಡಿಸುವುದು ನನ್ನ ಹವ್ಯಾಸಗಳಲ್ಲಿ ಒಂದು ಹಾಗಾಗಿ ನಾ ಆಯ್ದುಕೊಂಡ ವೃತ್ತಿ ಗಣಿತದ ಶಿಕ್ಷಕಿ. ಗಣಿತ ಎಂದರೆ ಮಾರು ದೂರ ಹೋಗುವವರೇ ಹೆಚ್ಚು, ಗಣಿತ ಅಂದರೆ ಕಬ್ಬಿಣದ ಕಡಲೆ ಅಂತ ತುಂಬಾ ಜನ ಹೇಳೋದು ಕೇಳಿದ್ದೇನೆ, ಆದರೆ ಗಣಿತ ಅನ್ನುವುದು ಕಬ್ಬಿಣದ ಕಡಲೆಯಲ್ಲ ಅದನ್ನ ನಾವು ಆಸಕ್ತಿ ಹಾಗೂ ಶ್ರಮವಹಿಸಿ ಕಲಿತಾಗ ಎಂಥಹ ಕ್ಲಿಷ್ಟ ಸಮಸ್ಯೆಯನ್ನು ಕೂಡ ಸುಲಭವಾಗಿಸಬಹುದು. ಗಣಿತವು ನಮ್ಮ ದೈನಂದಿನ ಜೀವನದಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಂತ್ಯಸಂಸ್ಕಾರ: ಪ್ರಭುರಾಜ್‌ ಹೂಗಾರ್

ಮಗು ಹುಟ್ಟಿದ ನಂತರ ಎಲ್ಲರೂ ಒಳ್ಳೆಯ ಪಾಲನೆ, ಪೋಷಣೆ, ಶಿಕ್ಷಣ ಕೊಡುವ ಕುರಿತು ಯೋಚಿಸುತ್ತಾರೆ. ಒಟ್ಟಾರೆಯಾಗಿ ಹೇಳುವುದಾದರೆ ಒಳ್ಳೆಯ ಸಂಸ್ಕಾರಗಳನ್ನು ನೀಡುವುದು ಪಾಲಕರ ಕರ್ತವ್ಯ/ಜವಾಬ್ದಾರಿ. ಈಗ ನಾನು ಪ್ರಸ್ತಾಪಿಸಬೇಕೆಂದಿರುವುದು ಮರಣೋತ್ತರ ಸಂಸ್ಕಾರದ ಬಗ್ಗೆ, ಅಂತ್ಯಸಂಸ್ಕಾರದ ಆಸುಪಾಸಿನ ಕೆಲ ಸನ್ನಿವೇಶಗಳ ಬಗ್ಗೆ. ಕೆಲವು ವಿಷಯಗಳಲ್ಲಿ ನಂಬಿಕೆ ಇಲ್ಲದಿದ್ದಲ್ಲಿ ಧಾರ್ಮಿಕವಾಗಿ ನೋಡದೆ ಮಾನವೀಯ ದೃಷ್ಟಿಯಿಂದ ನೋಡೋಣ, ಮನಸಿದ್ದಲ್ಲಿ ಭಾವನೆಗಳು ಇರಲೇಬೇಕಲ್ಲವೇ. ದಿನಕ್ಕೆ ನೂರು ರೂಪಾಯಿ ಸಂಪಾದಿಸುವ ಒಬ್ಬ ದಿನಗೂಲಿ ನೌಕರ ದೇವಸ್ಥಾನಕ್ಕೆ ಹೋದಾಗಲೆಲ್ಲ ಹತ್ತು ರೂಪಾಯಿ ದಾನ ಮಾಡುತ್ತಿದ್ದ, ಅವನಂತೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಗು ಮತ್ತು ಶಿಕ್ಷಣ: ಗಾಯತ್ರಿ ನಾರಾಯಣ ಅಡಿಗ

‘ವಿದ್ಯೆ ಇಲ್ಲದವನ ಮುಖ ಹಾಳೂರ ಹದ್ದಿನಂತಿಕ್ಕು ಸರ್ವಜ್ಞ’ ಎಂಬ ಸರ್ವಜ್ಞನ ನುಡಿಗಳು ವಿದ್ಯೆಯ ಮಹತ್ವವನ್ನು ತಿಳಿಸುತ್ತದೆ. ಮುಂದುವರಿದ ಈ ಯುಗದಲ್ಲಿ ಶಿಕ್ಷಣವು ತನ್ನದೇ ಆದ ವಿಶಿಷ್ಟತೆಯನ್ನು ಪಡೆದಿದೆ. ಮಗು ಇಡೀ ಶಿಕ್ಷಣ ಪ್ರಕ್ರಿಯೆಯಲ್ಲಿ ಕೇಂದ್ರಬಿಂದು. ಮಗುವಿನ ಆಸಕ್ತಿ, ಅಭಿರುಚಿಯನ್ನು ಗ್ರಹಿಸುತ್ತಾ, ಮನ್ನಣೆ ನೀಡುತ್ತಾ ಸಂಪೂರ್ಣ ಸ್ವಾತಂತ್ರ್ಯ ನೀಡಿ ಸರ್ವತೋಮುಖ ಬೆಳವಣಿಗೆಗೆ ಅನುವು ಮಾಡಿಕೊಡುವುದೇ “ಮಗು ಕೇಂದ್ರಿತ ಶಿಕ್ಷಣ ಪದ್ಧತಿ. “ “ಮನೆಯೇ ಮೊದಲ ಪಾಠಶಾಲೆ. ತಾಯಿಯೇ ಮೊದಲ ಗುರು”. ಪ್ರಥಮತವಾಗಿ ಮಗು ತನ್ನ ಮನೆಯಿಂದಲೇ ಶಿಕ್ಷಣ ಪಡೆಯಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬಿಸಿಲು ಮಾಗಿ ಬೆಳದಿಂಗಳಾಗುವ ಸೊಗಸಿದೆ!: ಜಯಶ್ರೀ. ಜೆ. ಅಬ್ಬಿಗೇರಿ

ದಿನವೂ ದೇವರ ಮೂರ್ತಿಗಳನ್ನು ನೀರಿನಿಂದ ತೊಳೆದು, ಹಾಲಿನ ಅಭಿಷೇಕ ಮಾಡಿ,ಮೆತ್ತನೆಯ ಬಟ್ಟೆಯಲ್ಲಿ ಒರೆಸಿ, ವಿಭೂತಿ, ಅರಿಷಿಣ, ಕುಂಕುಮ, ಗಂಧ,ಅಕ್ಷತೆ,ಬಿಲ್ವಪತ್ರೆಯನ್ನು ಏರಿಸಿ ಕೈ ಮುಗಿದರೆ ಸಾಕು ಮನದಲ್ಲಿ ಅಂದುಕೊಂಡದ್ದು ನಡೆಯುತ್ತದೆ ಎನ್ನುವುದು ನಮ್ಮಲ್ಲಿಬಹುತೇಕರ ನಂಬಿಕೆ. ದೇವರ ಪೂಜೆ ಭದ್ರತಾ ಭಾವವನ್ನು ಒದಗಿಸುವುದು ಎನ್ನುವ ಭಾವ ಸುಳ್ಳೇನಲ್ಲ. ಇಷ್ಟೇ ಅಲ್ಲ ಆಶಾಭಾವ ಲವಲವಿಕೆಯ ಮನೋಭಾವನೆಯನ್ನೂ ಹೆಚ್ಚಿಸುವುದು. ಪ್ರಯತ್ನಿಸದೇ, ಬದಲಾವಣೆಯ ಗಾಳಿಗೆ ಮೈ ಒಡ್ಡದೇ, ವಾಸ್ತವವನ್ನು ಅರಿಯದೇ, ಅದೊಂದೇ ಬದುಕಿನ ಚಿತ್ರವನ್ನು ಬದಲಿಸಿಬಿಡುವುದು ಎನ್ನುವುದು ನಾವು ಸೃಷ್ಟಿಸಿಕೊಂಡ ಮಾಯದ ಬಲೆಯಲ್ಲಿ ನಾವೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಗಜಲ್ ಕಣ್ಣು ಬೇರಸಿ ಬಿಡು ಏಕಾಂತದ ಸುಖ ಸಿಗಲಿ ಸಖ ಮನಸಿನ ಸಂಭ್ರಮಕೆ ಸುಖ ತುಂಬಿ ಬರಲಿ ಸಖ ಯಾರ ಸಲುವಾಗಿ ಬದುಕು ನೊಂದಿತ್ತು ಅವರೆ ಆನಂದಿಸಲಿ ಇಬ್ಬರು ಕಳೆದ ಕತ್ತಲೆಗೆ ನೆನಪುಗಳ ಬೆಳಕು ಬರಲಿ ಸಖ ಗಿಡ ಮರ ಬಳ್ಳಿಗಳು ಹೂವ ಚೆಲ್ಲಿ ನಿಂತಿವೆ ನಮ್ಮೊಲವಿನ ಮಾತು ಸವಿಯಲು ಮೌನ ಮುರಿದು ಹೂವಿನ ಹಾಸಿಗೆ ಮೇಲೆ ನಡೆದು ಹೋಗಲಿ ಸಖ ಕಾಡಿ ಜೀವ ಹಿಂಡಿ ಜಾತಿಯ ಕೆಂಬಣ್ಣ ಹಚ್ಚಿ ಅಡ್ಡಗೋಡೆ ಕಟ್ಟಿದರು ವೈಭವದ ಮೆರವಣಿಗೆಯಲಿ ಬಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಇಂದಿರಾ ಕ್ಯಾಂಟೀನ್‌ ಹೆಸರನ್ನು ಡಾ. ಅಂಬೇಡ್ಕರ್‌ ಕ್ಯಾಂಟೀನ್‌ ಅಂತ ಮರುನಾಮಕರಣ ಮಾಡೋಕೆ ಆಗುತ್ತಾ?: ಡಾ. ನಟರಾಜು ಎಸ್.‌ ಎಂ.

ನಮ್ಮೂರಿನ ಬಳಿ ಒಂದು ಗಾರ್ಮೆಂಟ್ಸ್ ಫ್ಯಾಕ್ಟರಿ ಇದೆ. ಅಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಾರೆ. ಪುಟ್ಟ ಹಳ್ಳಿಯಲ್ಲಿ ತೆರೆದುಕೊಂಡ ಈ ಗಾರ್ಮೆಂಟ್ ಫ್ಯಾಕ್ಟರಿ ನಮ್ಮ ಕಡೆಯ ಅನೇಕ ಜನರಿಗೆ ಉದ್ಯೋಗ ಕಲ್ಪಿಸಿದೆ. ದೂರದ ಊರುಗಳಿಂದಲೂ ಸಹ ಜನ ಬಂದು ಅಲ್ಲಿ ದುಡಿಯುತ್ತಾರೆ. ಫ್ಯಾಕ್ಟರಿ ಅಕ್ಕ ಪಕ್ಕ ಸಣ್ಣಪುಟ್ಟ ಅಂಗಡಿ, ಹೋಟೆಲ್ ಗಳು ತೆರೆದುಕೊಂಡಿವೆ. ಫ್ಯಾಕ್ಟರಿ ಊಟದ ಸಮಯ ಮತ್ತು ಬಿಟ್ಟ ಸಮಯದಲ್ಲಿ ಇಲ್ಲಿನ ಅಂಗಡಿ ಮತ್ತು ಹೋಟೆಲ್ ಗಳಲ್ಲಿ ಸಣ್ಣಪುಟ್ಟ ವ್ಯಾಪಾರ ವಹಿವಾಟು ನಡೆಯೋದು ಸಹಜ. ಸಣ್ಣಪುಟ್ಟ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದೇವ್ರಾಟ..: ತಿರುಪತಿ ಭಂಗಿ

ಪ್ಯಾಟಿಗೆ ಹೋಗಿದ್ದ ಹನಮ್ಯಾ ಪೋಲಿಸರ ಕೈಯಾಗ ಸಿಕ್ಕಾಕ್ಕೊಂಡ ಬಲ್ಲಂಗ ಗಜ್ಜತಿಂದಿದ್ದ. ‘ಸತ್ನೋ ಯಪ್ಪಾ..’ ಅಂತ ನರಳ್ಯಾಡಕೋತ, ಕುಂಟಕೋತ, ಕುಂಡಿಮ್ಯಾಲ ಗಸಾಗಸಾ ತಿಕ್ಕೋತ ಮನಿಹಾದಿ ಹಿಡದಿದ್ದ. “ಈ ಪೋಲಸ್ರಿಗೆ ಮುಕಳಿ-ಮಾರಿ ಯಾವ್ದಂತ ಒಂದೂ ಗೊತ್ತಿಲ್ಲ, ದಬಾದಬಾ ದನಾ ಬಡ್ದಂಗ ಬಡಿತಾರ, ನಮ್ದ ಎಂತ ಸರಕಾರೋ,ಎಂತಾ ಕಾನೂನೋ..ಏನ್ ಆಡಳಿತಾನೋ..ನಮ್ಮ ದೇಶದಾಗ..! ಎಲ್ಲ ದೇವ್ರಾಟ. ಮೈತುಂಬ ಹಿಗ್ಗಾಮುಗ್ಗಾ ಪೋಲಿಸ್ರು ಥಳಸಿದ ಏಟಿಗೆ ಹನಿಮ್ಯಾನಿಗೆ ಎಂದೂ ನೆನಪಾಗದ ದೇಶದ ಸರಕಾರ, ಕಾನೂನು, ಆಡಳಿತಗಳೆಲ್ಲ ನೆನಪಾಗಿ ಮೈತುಂಬ ಪರಚಿದಂತಾದವು. ನಮಗ ರಕ್ಷಣಾ ಕೊಡವ್ರ ನಮಗ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಮಾಯಣದಲ್ಲಿ ಕಾಡುವ ಪಾತ್ರ ಉರ್ಮೀಳಾ: ಶ್ರೇಯ ಕೆ ಎಂ ಶಿವಮೊಗ್ಗ

ನಾವು ಹುಟ್ಟಿದಾಗಿನಿಂದಾನು ರಾಮಾಯಣ ಮಹಾಭಾರತಗಳೆರಡನ್ನು ನೋಡಿಕೊಂಡು ಕೇಳಿಕೊಂಡು ಓದಿಕೊಂಡು ಬೆಳೆದವರು.. ನಮ್ಮ ಅಜ್ಜಿ ದೊಡ್ಡಮ್ಮನ ಬಾಯಲ್ಲಿ ಎಲ್ಲಾ ಪಾತ್ರಗಳು ಕರತಲಾಮಲಕ ಆಗಿದ್ದವು, ಯಾವುದೇ ಸನ್ನಿವೇಶವನ್ನಾದರೂ ಲೀಲಾಜಾಲವಾಗಿ ಹೇಳುತ್ತಿದ್ದ ಪರಿ ಎಂಥವರನ್ನು ಭಾವಪರವಶ ಮಾಡುತ್ತಿತ್ತು. ಹಾಗೆಯೆ ನಾವೇನು ಇದರಿಂದ ಹೊರತಲ್ಲ, ಹೀಗೆ ಕೇಳುತ್ತ ಬೆಳೆದ ನಾವು ಅವರ ಬಾಯಲ್ಲಿ ರಾಮ ಲಕ್ಷ್ಮಣ ಸೀತೆ ಎಲ್ಲರೂ ದೇವರೇ, ಆದರೆ ಅ ಚಿಕ್ಕ ವಯಸ್ಸಲ್ಲೇ ನಂಗೆ ಕಾಡುತ್ತಿದ್ದ ಪಾತ್ರ ಊರ್ಮಿಳೆ, ದೊಡ್ಡವರು ಹೇಳುವ ಪ್ರಕಾರ ಊರ್ಮಿಳೆ ಆರಾಮಾಗಿ ರಾಜ್ಯದಲ್ಲಿ ಇದ್ದು ರಜಾ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕರೋನಾ ಕರ್ಫ್ಯೂ ಕಲಿಸುತ್ತಿರುವ ಪಾಠ: ಹೊ.ರಾ.ಪರಮೇಶ್ ಹೊಡೇನೂರು

ಅತ್ಯಾಧುನಿಕ ಕಾಲಘಟ್ಟದಲ್ಲಿ ಬದುಕುತ್ತಿರುವ ನಾವು ಇಂದು ವೈಜ್ಞಾನಿಕವಾಗಿ ಸಾಕಷ್ಟು ಸಾಧಿಸಿದ್ದೇವೆ, ವೈಚಾರಿಕ ಪ್ರಜ್ಞೆಯನ್ನು ಮೈಗೂಡಿಸಿಕೊಂಡು ಬುದ್ಧಿವಂತರೆಂದು ಬೀಗುತ್ತಿದ್ದೇವೆ, ಉನ್ನತ ಶಿಕ್ಷಣವನ್ನು ಪಡೆದು, ಲಕ್ಷಾಂತರ ರೂಪಾಯಿಗಳನ್ನು ಸಂಪಾದಿಸುವ ನೌಕರಿ ಹಿಡಿದುಕೊಂಡು ಐಷಾರಾಮಿ ಜೀವನವನ್ನು ನಡೆಸುತ್ತಿದ್ದೇವೆ. ತಾಂತ್ರಿಕವಾಗಿ ಮುಂದುವರೆದು ಇಡೀ ಪ್ರಪಂಚದ ಯಾವುದೇ ಮೂಲೆಯಲ್ಲಿ ಏನೇ ವಿದ್ಯಮಾನ ಘಟಿಸಿದರೂ ಕ್ಷಣಾರ್ಧದಲ್ಲಿ ವೀಕ್ಷಿಸುವ ಮಾಧ್ಯಮಗಳನ್ನು ಸೃಷ್ಟಿಸಿಕೊಂಡಿದ್ದೇವೆ. ಮಂಗಳನ ಅಂಗಳದಲ್ಲಿ ಆಟವಾಡುವಷ್ಟು ಸಾಮರ್ಥ್ಯವನ್ನು ಹೊಂದಿದ್ದೇವೆ, ಚಂದ್ರನ ಮೈಲ್ಮೈಯಲ್ಲಿ ತುಸುಹೊತ್ತು ವಿರಮಿಸುವಷ್ಟರ ಮಟ್ಟಿಗೆ ಸಂಶೋಧನಾ ಕಾರ್ಯಗಳನ್ನು ಕೈಗೊಂಡು ಯಶಸ್ಸು ಕಂಡಿದ್ದೇವೆ. ವೈದ್ಯಕೀಯ ಲೋಕದ ಅದ್ಭುತವಾದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶೃತಿ ನೀ ಮಿಡಿದಾಗ: ವರದೇಂದ್ರ.ಕೆ ಮಸ್ಕಿ

ಸದಾ ಕಪ್ಪು ಕೂದಲ ಗಡ್ಡಧಾರಿ ಮಿಂಚು ಮಾತುಗಳ ರಾಯಭಾರಿ ನಗುವಿನ ಸಮಯಗಳಿಗೆ ಸೂತ್ರಧಾರಿ. ರಸವತ್ತಾದ ಹೃದಯ ಸಿಂಹಾಸನದಿ ನೆಲೆ ಊರುವ ಅಧಿಕಾರಿ, ಅಂಗಾರಕನ ಬಣ್ಣ ಗರುವಿನ ವಿಶಾಲ ಮನ, ಅವನಿಯ ತಾಳ್ಮೆ ಸುಗುಣಗಳ ಗಣಿ ಸುಶಾಂತ ಒಲವಿನ ಪುಷ್ಪ ಹಿಡಿದು ಬದುಕೆಲ್ಲ ನೀನೆ, ನೀನಿಲ್ಲದೆ ಮತ್ತೇನಿದೆ ನಿನ್ನ ಒಲವಿನ ಒಂದು ಬೊಗಸೆಯಲಿ ನನ್ನ ಹಿಡಿದುಬಿಡು ಗೆಳತಿ ಎಂದು ದೊಂಬಾಲು ಬಿದ್ದವನ ಅಸ್ತಿತ್ವ ಅವಳ ಒಲುಮೆ ಪಡೆಯಲು ಕಳೆದುಹೋದರೂ ಪರವಾಗಿಲ್ಲ ಎನ್ನುವಷ್ಟು ಹುಚ್ಚು ಪ್ರೇಮ ಹಚ್ಚಿಕೊಂಡವನು. ಸದಾ ಕಣ್ಗಳಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೊನೆಗೂ ದುಷ್ಟ ಸಂಹಾರಕ್ಕೆ ಮುನ್ನುಡಿ: ಭಾರ್ಗವಿ ಜೋಶಿ.

ಬರಿ ಈ ಕೊರೊನ, ಕೊರೊನ ಅಂತ ಆ ಕೀಟದ ಹಾವಳಿಯ ಮಧ್ಯ ಬೇರೆ ಬದುಕನ್ನೆಲ್ಲ ಮರೆತು ಬಿಟ್ಟಿದ್ದೇವೆ. ಹೋದ ತಿಂಗಳು ಭಾರತದಲ್ಲಿ ನಡೆದ ಒಂದು ಘಟನೆ ಇಂದು ಇತಿಹಾಸವೇ ಸರಿ. ನಿರ್ಭಯ ಅನ್ನುವ ಹೆಣ್ಣುಮಗಳನ್ನು ಅಷ್ಟು ಅಮಾನುಷವಾಗಿ ಹಿಂಸಿಸಿ ಕೊಂದ ಪಾತಕಿಗಳನ್ನು ಗಲ್ಲಿಗೆ ಬಲಿಕೊಡಲಾಯಿತು. ಅಂದು ಗಲ್ಲಿನ ಕುಣಿಕೆಗೆ ಕತ್ತು ನೀಡುವಾಗ ಅವರ ಮನಸುಗಳು ಎಷ್ಟು ಒದ್ದಾಡಿರಬಹುದು. ಅಯ್ಯೋ ಸಾವು ಕಣ್ಣಮುಂದೆ ಇದೆ ಎಂದಾಗ ಎಷ್ಟು ಭಯಾನಕ. ನಮ್ಮನ್ನು ಬದುಕಿಸಿ, ಒಂದು ಅವಕಾಶ ಕೊಡಿ ಎಂದು ಕೊನೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಶೇಕ್ಸಪಿಯರನ ‘ Measure for measure ’ – ಡಂಭ ಚಹರೆ ಮತ್ತು ಕಟು ವಾಸ್ತವಗಳು: ನಾಗರೇಖ ಗಾಂವಕರ

ಡಾರ್ಕ ಕಾಮೆಡಿ ಎಂದೇ ಪ್ರಸಿದ್ಧವಾದ ಶೇಕ್ಸಪಿಯರನ Measure for measure ನಾಟಕ ತಾತ್ವಿಕ ಮತ್ತು ನೈತಿಕ ಸಂಘರ್ಷಗಳನ್ನು ಆಳವಾಗಿ ವಿಶ್ಲೇಷಿಸುವ ಮೂಲಕ ಗಮನ ಸೆಳೆಯುತ್ತದೆ. ನಾಟಕದ ಮುಖ್ಯ ಪಾತ್ರ ಎಂಜೆಲ್ಲೋ ಹಾಗೂ ಮತ್ತೊಬ್ಬಳು ಇಸಾಬೆಲ್ಲಾ ಈ ಸಂಘರ್ಷದ ಅಡಕತ್ತರಿಯಲ್ಲಿ ಸಿಕ್ಕಿ ಬೀಳುತ್ತಾರೆ. ನಾಟಕದ ಕೇಂದ್ರ ವಸ್ತುವೇ ಅದಾಗಿದ್ದು ತನ್ನ ಶೀಲವನ್ನು ರಕ್ಷಿಸಿಕೊಂಡು ತನ್ನತನವನ್ನು ಉಳಿಸಿಕೊಳ್ಳುವ ಇಲ್ಲವೇ ಅಣ್ಣನ ಪ್ರಾಣ ಉಳಿಸಲು ನೈತಿಕತೆಯನ್ನು ಮಾರಿಕೊಳ್ಳುವ ಸಂದಿಗ್ಧತೆಯಲ್ಲಿ ಇಸಾಬೆಲ್ಲಾ ತೊಳಲಾಡುತ್ತಾಳೆ. ಮುಖವಾಡದ ಧರ್ಮನಿಷ್ಠೆಯನ್ನು, ಸೈದ್ಧಾಂತಿಕ ಪ್ರತಿಪಾದನೆಯನ್ನು ಮಾಡುವ ಎಂಜೆಲ್ಲೋ ವ್ಯಕ್ತಿಗತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಅಳಿವಿನ ಅಂಚಿನಲ್ಲಿ ಮಾನವ ಕುಲ…? !: ಶಶಿಧರ ರುಳಿ

ರಸ್ತೆಯಲ್ಲಿ ಹೋಗುವಾಗ ಗಿಡದಲ್ಲಿಯ ಹೂವೊಂದು ಕಮರಿ ಹೋಗಿದ್ದು ಕಂಡಿತು. ಮುದುಡಿದ ಆ ತಾವರೆ ಕದಡಿದ ನನ್ನ ಮನಸ್ಸಿಗೆ ಸಾಕ್ಷಿಯಾಗಿ ನಿಂತಂತೆ ತೋರುತ್ತಿತ್ತು. ರಣ ಬಿಸಿಲಿನ ಹೊಡೆತಕ್ಕೆ ಬಾಡಿಹೋದ ಅದರ ಸುಂದರ ಪಕಳೆಗಳು ಯಾವುದೋ ಒಂದು ಕಾಲದಲ್ಲಿ ವೈಭವೋಪಿತ ಕಟ್ಟಡವಾಗಿದ್ದು ಈಗ ಬಿದ್ದುಹೋದ ಗೋಡೆಗಳು ಅದರ ಪಳಿಯುಳಕೆಯಂತೆ ಕಂಡವು. ಬೆಳಗಿನ ಜಾವ ಅರಳಿ ಸಂಜೆಯಾಗುತ್ತಿದ್ದಂತೆ ನಿಸ್ತೇಜವಾದ ಹೂವಿನ ಸುಂದರ ತನು, ಜೀವನದ ಕ್ಷಣಿಕತೆಯ ನೀತಿ ಹೇಳುತ್ತಿರುವಂತೆ ಅನಿಸಿತು. ಈ ಮೂಲಕ ಬದುಕಿನ ಪಯಣ ರಭಸದ ಯಾತ್ರೆ ಎಂಬ ಸತ್ಯವನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 13 & 14): ಎಂ. ಜವರಾಜ್

೧೩- ಬಿಸ್ಲು ಬಿಸ್ಲು ಏನಪ್ಪಾ ಬಿಸ್ಲು ಉಸ್ಸ್… ಅಲಲಲಾ ಏಯ್,  ಮಲ್ಗಿ ನಿದ್ರಾ ಮಾಡ್ತ ಇದ್ದಯ ಎದ್ರು ಮ್ಯಾಕ್ಕೆ.. ಬೆಚ್ಚಿ ಬೆರಗಾಗಿ ಒರಗಿದ ಕಂಬದಿಂದ ತಲೆ ಎತ್ತಿದೆ ಮಂಪರಿಡಿದ ಕಣ್ಣು ತೆರೆಯುತ್ತ ಎದುರು ದಿಟ್ಟಿಸಿದೆ ಫಳಾರ್ ಮಿಂಚಾಯ್ತಲ್ಲಾ.. ಅಯ್ನೋರ್ ಮಲ್ಗಿ ನಿದ್ರ ಮಾಡ್ತ ಒದ್ದಾಡ್ತ ನಾ ಬೆಂಕಿ ಬಿಸುಲ್ಲಿ ನರಳಾಡ್ತ ಇದ್ರ ನೀ ಸುಖವಾಗಿ ನಿದ್ರ ಮಾಡ್ತ ಇದ್ದಯ ನಾನೇನು ದೆವ್ವುಕ್ಕು ಭೂತುಕ್ಕು  ಹೇಳವ್ನು ಅನ್ಕಂಡಿದ್ದಯ.. ಇಲ್ಲ ಹೇಳು ಚೂರು ಮಂಪ್ರಾಯ್ತು.. ಅದೆ ಅಯ್ನೋರು ಮರದ ಕೆಳಗೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೌನಯುದ್ಧದೊಂದಿಗೆ ನನ್ನ ಮಾತು: ಹೆಚ್. ಷೌಕತ್ ಆಲಿ

ಕವಿ ಸುರೇಶ ಎಲ್. ರಾಜಮಾನೆರವರು ಅಪ್ಪಟ ಕನ್ನಡಭಿಮಾನಿ, ವೃತ್ತಿಯಲ್ಲಿ ಶಿಕ್ಷಕನಾಗಿ ಪ್ರವೃತ್ತಿಯಲ್ಲಿ ಒಬ್ಬ ಕವಿಯಾಗಿ ಕನ್ನಡ ಸಾಹಿತ್ಯ ಲೋಕಕ್ಕೆ ತನ್ಮೂಲಕ ಪ್ರಕಾಶಿಸುವ ಬೆಳಗಲಿ ದೀಪ. ಹುಟ್ಟೂರು ಮಹಾಕವಿ ರನ್ನನ ಊರೇ ಆಗಿರುವಾಗ ಆ ಛಾಪು ಕವಿ ಸುರೇಶನಲ್ಲಿಯೂ ಕಾಣಬಹುದಾಗಿದೆ. ಆ ನಿಟ್ಟಿನಲ್ಲಿ ಕವಿಯ ದ್ವೀತಿಯ ಕೃತಿ ರತ್ನ ‘ಮೌನಯುದ್ಧ’ ಮತ್ತೆ ಮತ್ತೆ ಓದಿದ ನಂತರ ಈ ಒಂದು ವಿಮರ್ಶೆಗೆ ನಾನು ಕೈಹಾಕಿದೆ ಓದುಗರು ಇಷ್ಟ ಪಡುವಂತಹ ಅನೇಕ ಅಂಶಗಳು ಈ ಕೃತಿಯಲ್ಲಿ ಅಡಕವಾಗಿದೆ. ಸರಳ ಭಾಷೆಯ ಸುಂದರ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಕ್ಕಳ ಕವಿತೆ

ಅಲ್ಲಿದ್ದವರೆಲ್ಲರೂ ರೈಲಿಗಾಗಿ ಕಾಯುತ್ತಿದ್ದವರೇ, ಆದರೆ ಅವರಲ್ಲಿ ಯಾರಿಗೂ ಕಛೇರಿಗೆ ತಡವಾಗುತ್ತೆ ಅನ್ನುವವರಿರಲಿಲ್ಲ, ಊರಿಗೆ ಹೋಗಲು ಸಮಯವಾಗುತ್ತೆ ಅನ್ನುವ ಛಾಯೆಯೂ ಅವರ ಮುಖದಮೇಲೆ ಕಾಣಲಿಲ್ಲ, ಆದರೂ ಅದು ರೈಲ್ವೆ ನಿಲ್ದಾಣ, ಅಲ್ಲಿದ್ದ ಪ್ರಯಾಣಿಕರಲ್ಲಿ ಮಕ್ಕಳ ಸಂಖ್ಯೆಯೇ ಹೆಚ್ಚು. ಚುಕು ಬುಕು ಚುಕು ಬುಕು ಅಂತ ಕೂಗುತ್ತಾ ಬಂದಿದ್ದು ಮಕ್ಕಳ ನೆಚ್ಚಿನ ಪುಟಾಣಿ ಎಕ್ಸಪ್ರೆಸ್ ಇದೆಲ್ಲಾ ಕಂಡು ಬಂದದ್ದು ಬೆಂಗಳೂರಿ ಕಬ್ಬನ್ ಪಾರ್ಕ ನಲ್ಲಿರುವ ಬಾಲಭವನದಲ್ಲಿ. ಇದು ಕೊರೊನಾಗಿಂತ ಮುಂಚೆ ಇದೀಗ ಬಾಲಭವನದಲ್ಲಿನ ಪುಟಾಣಿ ಎಕ್ಸಪ್ರೆಸ್ ಮಕ್ಕಳನ್ನು ಹೊತ್ತು ತಿರುಗಲು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಿಷಾದ-೧ (ಸಂಬಂಧಗಳಲ್ಲಿ): ಸಹನಾ ಪ್ರಸಾದ್‌

ಮ್ಯಾನೇಜುಮೆಂಟಿನಲ್ಲಿ “ಅಪರೇಷನ್ಸ್ ರಿಸರ್ಚ್” ಎಂಬ ವಿಷಯವುಂಟು. ಮೂಲತಃ ಅದು ಗಣಿತ ಹಾಗೂ ಸಂಖ್ಯಾಶಾಸ್ತ್ರದಲ್ಲಿ ಒಂದು ವಿಭಾಗ. ಇರುವ ಸಮಯ, ಸಾಮಾಗ್ರಿ, ಸಂಪನ್ಮೂಲಗಳು ಅತ್ಯುತ್ತಮವಾಗಿ ಬಳಸಿಕೊಳ್ಳುವುದು ಹೇಗೆ? ಎಂಬುದು ಇದರ ತಿರುಳು. ಇದರಲ್ಲಿರುವ ಬಹಳಷ್ಟು ತತ್ವಗಳನ್ನು ನಾವು ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಬದುಕು ಗಮನಾರ್ಹವಾಗಿ ಸುಧಾರಿಸುತ್ತದೆ. ಇದನ್ನು ಅಳವಡಿಸಿಕೊಳ್ಳಲು ನಾವು ಗಣಿತ ಮತ್ತಿತರ ವಿಷಯಗಳಲ್ಲಿ ನಿಪುಣರಾಗಬೇಕೆಂದಿಲ್ಲ. ಸಾಮಾನ್ಯ ಮಟ್ಟದಲ್ಲಿ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಸ್ವಲ್ಪ ವಿವೇಚನೆ, ಯೋಚನೆ, ವಿವೇಕ ಇರಬೇಕು ಅಷ್ಟೆ! ಇವತ್ತಿನ ಲೇಖನದ ವಿಷಯ ” … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ