ಪಂಜು ಕಾವ್ಯಧಾರೆ

ಮಾವು -ಬೇವು, ಚಿಗುರಿ, ಧವಸ-ಧಾನ್ಯ ತುಂಬಿರಲು, ವರುಷದ ಆದಿ ಯುಗಾದಿ, ಅದುವೇ ಚೈತ್ರದ ತೊಟ್ಟಿಲು..!! ಬೇವು -ಬೆಲ್ಲವ ಸವಿದು, ಹೋಳಿಗೆ ಹೂರಣ ನೈವೇದಿಸಿ; ಮನೆ -ಮನೆಗೂ ಕಟ್ಟಿದ ಹಸಿರು ತೋರಣ…! ಅದುವೇ ಚೈತ್ರದ ತೊಟ್ಟಿಲು..! ಕಹಿ-ನೆನಪು ಅಳಿದು; ಇರಲಿ ಮಧು-ಮಧುರ ನೆನಪು.. ವರುಷವೆಲ್ಲಾ ಇರಲಿ ಸಂತಸ..! ಅದುವೇ ಚೈತ್ರದ ತೊಟ್ಟಿಲು..!! ನೇಗಿಲ ಹಿಡಿವ ಸಂಭ್ರಮ; ಆಗಾಗ ಮುಂಗಾರು ಸಿಂಚನ.., ರೈತನ ಮೊಗದಲ್ಲಿ ಆಶಾ ಕಿರಣ .! ಅದುವೇ ಚೈತ್ರದ ತೊಟ್ಟಿಲು.. !! ಯುಗಾದಿ ಚಂದ್ರ ದರ್ಶನ; ಪಾಪ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ರಾಗ ಅನುರಾಗಕ್ಕೆ ಒಗ್ಗಿಕೊಂಡ ಕವಿತೆಗಳು “ಅಳಿದ ಮೇಲೆ”: ಅಶ್ಫಾಕ್ ಪೀರಜಾದೆ.

ವಿಷಯ ವೈವಿಧ್ಯತೆಗಳಿಂದ ಕೂಡಿದ ಒಟ್ಟು ನಾಲವತ್ತಾರು ಕವನಗಳು ಮತ್ತು ಐವತ್ತು ಹನಿಗವನಗಳಿಂದ ಸಂಕಲಿತಗೊಂಡ ಕವನ ಸಂಕಲನ “ಅಳಿದ ಮೇಲೆ”. ಇದು ಪ್ರೇಮಾನಂದ ಶಿಂಧೆ ಅವರ ಚೊಚ್ಚಿಲು ಕೃತಿ. ಕೃತಿಯ ಕುರಿತು ಪ್ರಸ್ತಾವನೆ ಮಂಡಿಸಿರುವ ಸಾಹಿತಿ ಮಾರ್ತಾಂಡಪ್ಪ ಕತ್ತಿ ” ಪ್ರತಿ ಮನುಷ್ಯ ಇತರೆಲ್ಲ ಆಯಾಮಗಳಿಗಿಂತಲೂ ಕವಿತೆಗೆ, ಹಾಡಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ಕೊಡುತ್ತಾನೆ. ಮಾತಿನಲ್ಲಿ ಹೇಳಲು ಅಸಾಧ್ಯವಾದುದನ್ನು ಕವಿತೆಯ ಮೂಲಕ ಹೊರ ಹಾಕಲು ಸಾಧ್ಯ. ಇದು ಕವಿತೆಗಿರುವ ಶಕ್ತಿ ಮತ್ತು ಆಕರ್ಷಿಸುವ ಗುಣ. ಅನಿವರ್ಚನೀಯವಾದ ಕವಿತೆ ಜೀವನದ ಅತ್ತ್ಯುತ್ತಮ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪ್ರೇಮ ಷರತ್ತು: ಸುಜಾತ ಕೋಣೂರು

ಕುಶಲ ಶಿಲ್ಪಿಯ ಕಲೆಯ ಸಾಕಾರವೆಂಬಂತೆ ಅಲಂಕಾರಿಕ ಕಂಬಗಳು. ಈಗ ತಾನೆ ಗರಿಗೆದರಿ ನರ್ತಿಸುವುದೇನೋ ಎಂಬಂತೆ ನವಿಲು, ಹಂಸಗಳು ತೇಲುವ ಸುಂದರ ಸರೋವರ ನಿಜವಾದುದೇ ಎನಿಸುವಂತೆ, ಕಾಳಿದಾಸ ಕಾವ್ಯದ ಶೃಂಗಾರ ಜೋಡಿ ದು:ಶ್ಯಂತ ಶಕುಂತಲಾರ ಏಕಾಂತದ ಹೂವಿನ ಉಯ್ಯಾಲೆ, ಸುತ್ತಲೂ ಹಸಿರು ವನದ ದೃಶ್ಯಾವಳಿಗಳನ್ನು ಚಿತ್ರಿಸಲಾಗಿರುವ ಸುಂದರ ಭಿತ್ತಿಗಳು. ಕಾಲಡಿಗೆ ಮಕಮಲ್ಲಿನ ಮೆತ್ತನೆ ಹಾಸು. ಬಣ್ಣ ಬಣ್ಣದ ಹೂವಿನ ಅಲಂಕಾರ ತುಂಬಿಕೊಂಡಿರುವ ಚಿನ್ನ ಲೇಪನದ ಕಿಟಕಿ ಮತ್ತು ಬಾಗಿಲಿನ ಚೌಕಟ್ಟುಗಳು. ಹೊಸ್ತಿಲಿಗೆ ಸುಂದರ ರಂಗೋಲಿ.ಕುಸುರಿಯ ರೇಶಿಮೆಯ ಮೇಲುಹೊದಿಕೆಯ ಪಲ್ಲಂಗಕ್ಕೆ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾನಸಿಕವಾಗಿ ಸಿದ್ದರಾಗಿ: ಸಿಂಧು ಭಾರ್ಗವ್ ಬೆಂಗಳೂರು

ಸನ್ನಿವೇಶ ೧: ಮಾಲತಿ ಮದುವೆಯಾಗಿ ಮೂರು ತಿಂಗಳೊಳಗೆ ಹೆತ್ತವರಿಗೆ ಸಿಹಿಸುದ್ದಿ ತಲುಪಿಸುವ ಬದಲು ತವರು ಮನೆಯವರು ಮದುವೆ ದಿನ ನೀಡಿದ ಬಳುವಳಿಯ ಸೂಟ್ ಕೇಸ್ ಅನ್ನು ಹಿಡಿದುಕೊಂಡು ತಾಯಿ ಎದುರು ನಿಂತಿದ್ದಳು‌. ದಿಗ್ಭ್ರಮೆಗೊಂಡ ತಾಯಿ, ಅವಳನ್ನು ಕೂರಿಸಿ ನಿಧಾನವಾಗಿ ವಿಚಾರಿಸಿ ಕೇಳಿದಾಗ, ಮಾಲತಿ ತನ್ನ ನೋವಿನ ಕಥೆಯನ್ನು ಒಂದೊಂದಾಗಿ ಬಿಡಿಸಿ ಹೇಳತೊಡಗಿದಳು‌ .ಮರುಗಟ್ಟಿದ್ದ ನೋವನ್ನೆಲ್ಲ ಜೋರಾಗಿ ಅತ್ತು ಕಣ್ಣೀರು ಸುರಿಸಿ ಮನಸ್ಸಿನ ಭಾರವನ್ನು ಕಡಿಮೆ ಮಾಡಿಕೊಂಡಳು. ಸಿಟ್ ಔಟ್ ನಲ್ಲಿ ಕೂತಿದ್ದ ತಂದೆಗೆ ತಲೆಯ ಮೇಲೆ ಬಂಡೆಕಲ್ಲು‌ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 10): ಎಂ. ಜವರಾಜ್

೧೦- ಅವ್ವಾ..ಅವ್ವಾ..ನೀ ಏಳವ್ವಾ.. ಶಂಕ್ರಪ್ಪೋರು ಅಳಳ್ತ ಅಳಳ್ತ ನೀಲವ್ವೋರು ವಾಲಾಡ್ತ ಗೋಳಾಡ್ತ ಅಯ್ನೋರ ಕಣ್ಣು ಕೆಂಪಗಾಗ್ತ  ಉರಿ ಉರಿ ಉರಿತಾ ಮೊರಿತಾ ಓಡೋಡಿ ಕಾಲೆತ್ತಿ ಜಾಡಿಸಿ ಒದ್ದನಲ್ಲೊ ಆ ಶಂಕ್ರಪ್ಪೋರು ಮಾರ್ದೂರ ಬಿದ್ದು ಅಯ್ಯಪ್ಪೋ ಅಂತ ಸೊಂಟ ಹಿಡ್ದು  ಆ ನೀಲವ್ವ ಬಿದ್ದ ಮೋರಿಗೇ ಬಿದ್ದು  ಕೊಸರಾಡ್ತ ಇದ್ದನಲ್ಲೊ…. ನನ್ನೆಡ್ತಿ ಮುಟ್ಟಕೆ  ನೀಯಾವನಲೇ ಬಂಚೊತ್ ಲೌಡೆ ಬಂಚೊತ್… ಆ ನೀಲವ್ವ ತವಿತಾ ಕೈ ಚಾಚ್ತ ಶಂಕ್ರಾ.. ಶಂಕ್ರಾ ಅಂತ ಕೂಗ್ತ ಹತ್ರತ್ರ ಬಂದ್ಲಲ್ಲೊ.. ಅಯ್ನೋರು ನನ್ ಮೆಟ್ಟೇ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಉತ್ತರ-ಅನುತ್ತರ-ನಿರುತ್ತರಗಳ ಜೊತೆಗೊಂದು ಪ್ರತ್ಯುತ್ತರ: ಹೆಚ್ ಎನ್ ಮಂಜುರಾಜ್, ಮೈಸೂರು

ಎಲ್ಲ ಪ್ರಶ್ನೆಗಳಿಗೂ ಉತ್ತರವಿಲ್ಲವೆಂಬುದು ಗೊತ್ತಿದ್ದರೂ ಪ್ರಶ್ನೆಗಳನ್ನು ಕೇಳುತ್ತಲೇ ಇರುತ್ತೇವೆ. ನನ್ನ ಮಟ್ಟಿಗೆ ಪ್ರಶ್ನೆಗಳನ್ನು ಇನ್ನೊಬ್ಬರಿಗೆ ಕೇಳುವುದಲ್ಲ; ನಮ್ಮಲ್ಲಿಯೇ ಕೇಳಿಕೊಳ್ಳುವುದು ಹೆಚ್ಚು ಸರಿ. ಆಗ ಪ್ರಶ್ನೋತ್ತರಗಳೆರಡೂ ನಮ್ಮವೇ ಆಗಿರುತ್ತವೆ. ಇದರಿಂದ ಮೊದಲಿಗಿಂತ ಹೆಚ್ಚು ‘ಎಚ್ಚರ’ದ ಸ್ಥಿತಿಯನ್ನು ಹೊಂದಬಹುದು. ಇರಲಿ. ಆಚಾರ್ಯ ರಜನೀಶರು ಚಾಂಗ್ ತ್ಸು ಕುರಿತು ಕೊಟ್ಟ ಡಿಸ್‍ಕೋರ್ಸ್- ಪುಸ್ತಕದ ಹೆಸರು ಶೂನ್ಯ ನಾವೆ-ಇದರಲ್ಲೊಂದು ಪ್ರಸಂಗ ಉಲ್ಲೇಖಿತವಾಗಿದೆ: ನಾವೆಯೊಂದರಲ್ಲಿ ಕುಳಿತು ಒಬ್ಬರೇ ವಿಹರಿಸುತ್ತಿರುವಾಗ, ಹಿಂದಿನಿಂದ ಇನ್ನೊಂದು ನಾವೆ ಏಕ್‍ದಂ ಡಿಕ್ಕಿ ಹೊಡೆದಾಗ ಮನದಲ್ಲುದಿಸುವ ಭಾವ: ವ್ಯಗ್ರತೆ ಮತ್ತು ಅಸಹನೆ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಮ್ಮಲ್ಲಿರುವ ಮೌಢ್ಯತೆ: ಷೌಕತ್‌ ಅಲಿ, ಮದ್ದೂರು

ವಿಜ್ಞಾನಯುಗ, ಕಂಪ್ಯೂಟರ್‍ಯುಗ, ಹೊಸ ಹೊಸ ಆವಿಷ್ಕಾರಗಳ ಹೊಸ ಮಾಧ್ಯಮಗಳ ಪರಿಚಯ, ದಿನ ನಿತ್ಯ ಅನೇಕ ಸುದ್ದಿಗಳು ನಮ್ಮನ್ನು ನಮ್ಮ ಬುದ್ಧಿಶಕ್ತಿಯನ್ನು ಸೇರಿ, ಮಾನವ, ಯಂತ್ರ ಮಾನವನ್ನಾಗಿಸಿದ್ದೇವೆ. ನಾವು 21ನೇ ಶತಮಾನಕ್ಕೆ ಸಮೀಪಿಸುತ್ತಿದ್ದು ಈ ಯುಗ ಯುಗಾಂತರದಲ್ಲಿ ನಾವು ನಮ್ಮೊಡನೆ ಒಂದು ಗಂಟು ಉಳಿಸಿಕೊಂಡೇ ಬಂದಿದ್ದೇವೆ. ಆ ಗಂಟು ಬೇರೇನಲ್ಲ ನಮ್ಮಲ್ಲಿರುವ ಮೌಢ್ಯತೆ, ಮೂಢನಂಬಿಕೆಗಳಿಂದ ನಮ್ಮ ಬದುಕಿನ ಆಚಾರ ವಿಚಾರ ಅಳತೆ ಮಾಡುವುದು, ಭಯದ ವಾತಾವರಣ ಸೃಷ್ಟಿಕೊಳ್ಳುವುದು. ಬದುಕಿನ ವಿನಾಶಗೊಳಿಸುವುದು ಈ ಎಲ್ಲಾ ಅಂಶಗಳು ನಮ್ಮ ಕಲ್ಪನೆಯಿಂದ ಬಂದದ್ದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಸ್ವಗತ: ನಾಗರೇಖಾ ಗಾಂವಕರ

ಎರಡನೇಯ ಗರ್ಭವೂ ಹೆಣ್ಣೆಂದು ಗೊತ್ತಾಗಿದೆ. ಗಂಡ ಆತನ ಕುಟುಂಬ ಸುತಾರಂ ಮಗುವನ್ನು ಇಟ್ಟುಕೊಳ್ಳಲು ತಯಾರಿಲ್ಲ. ತಾಯಿಯೊಬ್ಬಳು ಒತ್ತಾಯದ ಗರ್ಭಪಾತಕ್ಕೆ ಸಿದ್ಧಳಾಗಿ ಕೂತಿದ್ದಾಗಿದೆ, ತಾಯಿಯ ಗರ್ಭದೊಳಗಿನ ಭ್ರೂಣ ಬಿಕ್ಕಳಿಸುತಿದೆ. ಅಯ್ಯೋ! ಅವರು ಬಂದೇ ಬರುತ್ತಾರೆ. ನನ್ನನ್ನು ಕತ್ತರಿಸಿ ಹೊರಗೆಸೆಯಲು. ಅವರಿಗೇನೂ ಅದು ಹೊಸತಲ್ಲ. ಆದರೆ ನನ್ನಮ್ಮನಿಗೆ ನಾನು ಏನೂ ಅಲ್ಲವೇ? ಅವಳ ರಕ್ತದ ರಕ್ತ ನಾನು. ಅವಳ ಮಾಂಸದ ಮುದ್ದೆ ನಾನು. ಅಮ್ಮ ದಯವಿಟ್ಟು ಹೇಳಮ್ಮ. ಅವಳಿಗೆ ನನ್ನ ದನಿ ಕೇಳುತ್ತಿಲ್ಲವೇ? ಅಮ್ಮನ್ಯಾಕೆ ಮೂಕಿಯಾಗಿದ್ದಾಳೆ.. ಸಪ್ಪಗಿದ್ದಾಳೆ.. ನನಗೆ ಗೊತ್ತು. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜಗವನ್ನೆ ಒಂದು ತುರ್ತು ನಿಗಾ ಘಟಕವನ್ನಾಗಿಸಿದ ಧನದಾಹಿಗಳು: ಎಂ.ಎಲ್‌.ನರಸಿಂಹಮೂರ್ತಿ

ಪರಿಸರದ ಎಚ್ಚರಿಕೆ ಮಳೆಗಾಲದಲ್ಲಿ ಪ್ರವಾಹಗಳು, ಬೆಟ್ಟಗುಡ್ಡ ಕುಸಿತಗಳ ಮೂಲಕ ನೀಡಿತ್ತು. ಆ ಸಂದರ್ಭದಲ್ಲಿ ನಾವೆಲ್ಲ ಮಾನವೀಯತೆಯ ಮಹಾ ಸಾಗರವನ್ನೆ ಹರಿಸಿದೆವು. ನೆರೆ ಸಂತ್ರಸ್ತರಿಗೆ ಆಹಾರ,ಬಟ್ಟೆ, ವಸತಿ ಕೊಡಿಸುವಲ್ಲಿ ಕೈಯಲ್ಲಾದ ಮಟ್ಟಿಗೆ ಜೊತೆಯಾದೆವು. ಆದರೆ ಬುದ್ದಿ ಕಲಿಯದ ನಾವು ಮತ್ತೆ ಮತ್ತೆ ಅದೆ ಕೃತ್ಯಗಳನ್ನು ಮುಂದುವರೆಸುತ್ತಾ ಪರಿಸರದ ಮೇಲಿನ ಹಲ್ಲೆ ಮಾತ್ರ ನಿಲ್ಲಿಸಲಿಲ್ಲ. ಈಗ ಚಳಿಯಿಂದ ಬೇಸಿಗೆ‌ ಕಾಲಕ್ಕೆ ಬಂದೆವು. ಕೊರೋನಾದಂತಹ‌ ಮಾರಕ ಸೋಂಕುಗಳು ಬಂದಾಗಲೂ ಪರಿಸರದ ಬಗ್ಗೆ ಯಾವೊಬ್ಬನೂ‌ ಚಕಾರ ಎತ್ತುತ್ತಿಲ್ಲ. ಬದಲಾಗಿ ಕೈ ತೊಳಿ, ಬಾಯಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆರು ವರ್ಷದ ಬಾಲ ಪ್ರತಿಭೆ ಕುಮಾರಿ ಮೈತ್ರಿ : ನಿಯಾಜ್ ಪಡೀಲ್

ವಯಸ್ಸು ಆರು ಸಾಧನೆ ನೂರಾರು ಮಾಡಿದ ಬೇಲೂರಿನ ನಾಟ್ಯ ಶಾಂತಲೆ, ನಾಟ್ಯ ಮಯೂರಿ ಕುಮಾರಿ ಮೈತ್ರಿ ಎಸ್ ಮಾದಗುಂಡಿ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತು ಎಷ್ಟು ಸತ್ಯ. ಈ ಪದವನ್ನು ಕೇಳಲು ಹಿತ ಅನ್ನಿಸುತ್ತದೆ. ಸಾಧಕರಿಗೆ ಸಾಧನೆಯ ಹಾದಿಯಲ್ಲಿ ಇರುವವರಿಗೆ ಈ ಮಾತು ನಿಜಕ್ಕೂ ಅಕ್ಷರಶಃ ಹೇಳಿ ಮಾಡಿಸಿದಂತಿದೆ. ಇಂದಿನ ಬಾಲ ಪ್ರತಿಭೆಗಳಿಗೂ ಈ ಮಾತು ಹೊಂದಿಕೆಯಾಗುತ್ತದೆ. ಅದೆಷ್ಟೋ ಬಾಲ ಪ್ರತಿಭೆಗಳು ನಮ್ಮ ನಿಮ್ಮ ನಡುವೆ ಇದ್ದಾರೆ. ಅಂತಹ ಪ್ರತಿಭೆ ಬೇಲೂರಿನ ಆರು ವರ್ಷದ ಬಾಲ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹೋಲಿಕೆಗಳು ಮಕ್ಕಳನ್ನೇ ಆಗಲಿ ಮನಸ್ಸುಗಳನ್ನೇ ಆಗಲಿ ಸೋಲಿಸಿ ಬಿಡುತ್ತವೆ.: ನಿಮ್ಮೊಳಗೊಬ್ಬ ನಾರಾಯಣ

ನೋಡು ಅವರು ಹೇಗಿದ್ದಾರೆ ಈ ಮಾತು ಉದಾಹರಣೆಗೆ ಆದರೆ ಸ್ವಲ್ಪ ಮಟ್ಟಿಗೆ ಸರಿ ಆದರೆ ಪದೇಪದೇ ಇದೆ ಒಂದು ಆಯುಧವಾದರೆ. ನಾವು ನಮ್ಮಲ್ಲಿರುವ ಬಲವನ್ನು ಗುರುತಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರತಿಯೊಂದು ಕಲ್ಲಿನಲ್ಲಿ ಒಂದು ವೈಶಿಷ್ಟ್ಯ ಇರುತ್ತದೆ. ಅದನ್ನು ಗುರುತಿಸುವ ಜಾಣ್ಮೆ ನಮಗಿರಬೇಕು. ಶಾಲೆಯಲ್ಲಿ ಓದಿ ಉತ್ತಮ ಅಂಕಗಳನ್ನು ಗಳಿಸುವುದು ಮಕ್ಕಳ ಕರ್ತವ್ಯ. ಹಾಗೆಯೇ ಕೆಲಸದಲ್ಲಿ ಉನ್ನತ ಮಟ್ಟ ತಲುಪಿ ಉತ್ತಮ ಸಂಪಾದನೆ ಮಾಡುವುದು ನಮ್ಮ ಕರ್ತವ್ಯ. ಆದರೆ ಆ ಕ್ಷೇತ್ರಗಳಲ್ಲಿ ಉತ್ತಮ ಮಟ್ಟ ತಲುಪಬೇಕೆಂಬ ನಿರೀಕ್ಷೆ ನಮ್ಮ ಒತ್ತಡಗಳಿಂದಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕರೋನ ಕರೋನ- ಮನೆಯಲ್ಲಿ ಇರೋಣ!: ಸಹನಾ ಪ್ರಸಾದ್‌

ಮಾಸ್ಕ್ ಗಳನ್ನು ಕರೊನ, ಕರೊನ ಅಂತ ಮಾರುತ್ತಿದ್ದ ವೀಡಿಯೊ ಎಲ್ಲರೂ ನೋಡಿದ್ದಾರೆ. ಕರೊನ ವಿರುದ್ಧ ಹೋರಾಡಲು ಬೇಕಾದ ಅವುಗಳನ್ನೇ ಕರೊನ ಎಂದು ಕರೆದು ಒಂದು ತಮಾಷೆಯ ನೋಟವಾಗಿಸಿದ ಅವನ ಮನಸ್ಸಲ್ಲಿ ಏನಿತ್ತೋ? ” ಅಬ್ಬಾ, ಈ ಮಕ್ಕಳಿಗೆ ರಜೆ ಕೊಟ್ಟುಬಿಟ್ಟರಲ್ಲಾ, ಇನ್ನು ೩ ತಿಂಗಳು ಇವರನ್ನು ಹಿಡಿದಿಟ್ಟುಕೊಳ್ಳುವುದು ಹೇಗಪ್ಪಾ? ಮ್ಯೂಸಿಕ್ ಕ್ಲಾಸ್ ಇಲ್ಲ, ಸ್ವಿಮ್ಮಿಂಗ್ ತರಗತಿಗಳಿಲ್ಲ, ಸಮ್ಮರ್ ಕ್ಯಾಂಪುಗಳು ರದ್ದು. ನೆನೆಸಿಕೊಂಡರೆ ಭಯ ಆಗುತ್ತೆ” ಇದು ಬಹಳಷ್ಟು ತಾಯಂದಿರ ಅಳುಕು. ಹೌದು. ಮಕ್ಕಳನ್ನು ಹಿಡಿದಿಟ್ಟುಕೊಳ್ಳುವುದು ಬಲು ಕಷ್ಟ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಹಿರಿಯರು ಹೇಳಿಕೊಟ್ಟ ನಾವು ಬಿಟ್ಟ ಆಚರಣೆಗಳು: ಶೀಲಾ. ಎಸ್. ಕೆ.

ಅಜ್ಜಿ ಹೇಳಿಕೊಟ್ಟ ಮಾತದು, ನಾವು ಕಲಿಯಲಿಲ್ಲ. ನಮ್ಮ ಹಿರಿಯರ ಮಾತಿನಲ್ಲಿ ಉದ್ದೇಶ, ಪ್ರಯೋಜನ ಹುಡಿಕಿದ ನಾವು, ಹಿಂದೆ ಮುಂದೆ ನೋಡದೆ ಉದ್ದೇಶ, ಪ್ರಯೋಜನ ಕೇಳದೆ, ತಿಳಿಯದೆ ಹೊರಗಡೆ ಅಂತರ್ರಾಷ್ಟ್ರೀಯ ಆಚರಣೆಗಳನ್ನು ಅಪ್ಪಿಕೊಂಡೆವು . ನಿಜ, ನಮ್ಮ ಹಿರಿಯರು ಅವರ ಆಚರಣೆಗೆ ಪ್ರಯೋಜನ, ಉದ್ದೇಶಗಳನ್ನು ಬರೆದಿಡಲು ಅಥವಾ ಮುಂದಿನ ಪೀಳಿಗೆಗೆ ಹೇಳಲು ಸೋತರು ಆದ್ರೆ ತಪ್ಪಾಗಿರಲಿಲ್ಲ. ಈಗ ಕೊರೋನ ಎಂಬ ವೈರಸ್‌ ಪ್ರಪಂಚ ನುಂಗಲಾರಂಭಿಸಿದೆ. ಪ್ರಪಂಚ ನಮ್ಮ ಹಿರಿಯರ ಆಚರಣೆ, ಅನುಸರಣೆಗಳನ್ನು ಅಪ್ಪುತ್ತಿವೆ. ಈಗ ಬೇರೆಯವರು ಹಿಂದಿನ ಆಚರಣೆಗಳತ್ತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುಗಾದಿಯೋ ಯುಗಾಂತ್ಯವೋ?: ಕೆ ಟಿ ಸೋಮಶೇಖರ್ ಹೊಳಲ್ಕೆರೆ

ಯುಗಾದಿ ಬರುತ್ತಿದ್ದಂತೆ ” ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ” ಎಂಬ ದ ರಾ ಬೇಂದ್ರೆಯವರ ಪ್ರಸಿದ್ದ, ಜನಪ್ರಿಯ ನಿತ್ಯನೂತನ ಗೀತೆ ಪ್ರತಿ ವರುಷ ನೆನಪಾಗುವುದು. ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತಂದು ಹೊಸತೆಂಬಂತೆ ಯುಗಾದಿ ಗೋಚರಿಸಿದರೆ ಈ ಗೀತೆಯೂ ಹೊಸತೆಂಬಂತೆ ಹಾಡಿಸಿಕೊಳ್ಳುವುದು. ಹೊಸತೆಂಬ ಯುಗಾದಿ ಸುಂದರವೂ ಹಿತಕಾರಿಯೂ ಮನಮೋಹಕವು ಆಗಿರುವುದರಿಂದ ಇಷ್ಟವಾಗುವುದು! ಚೈತ್ರಮಾಸದಲ್ಲಿ ಇಡೀ ಪ್ರಕೃತಿಯೇ ಹರಿದ ಹಾಳಾದ ತೂತುಬಿದ್ದ ಅಂದಗೆಟ್ಟ ಎಲೆಗಳೆಂಬ ಹಳೆ ಕೊಳೆ ಮಲಿನ ಉಡುಪು ಇಲ್ಲವಾಗಿಸಿಕೊಂಡು ಹೊಸ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಯುಗಾದಿ ವಿಶೇಷಾಂಕಕ್ಕೆ ಬರಹ ಆಹ್ವಾನ

ಪ್ರಿಯ ಪಂಜುವಿನ ಓದುಗರೇ ಹಾಗು ಬರಹಗಾರರೇ, ನಿಮ್ಮೆಲ್ಲರ ಸಹಕಾರದಿಂದ ಪಂಜು ತನ್ನ ಎಂಟನೇ ವರ್ಷದ ಯುಗಾದಿಯ ಸಂಭ್ರಮದಲ್ಲಿದೆ. ಕಳೆದ ವರ್ಷಗಳಂತೆ ಈ ಬಾರಿಯೂ ಯುಗಾದಿ ವಿಶೇಷಾಂಕವನ್ನು ತರಲು ಪಂಜು ಬಯಸುತ್ತದೆ. ಆದ ಕಾರಣ ಈ ವಿಶೇಷಾಂಕಕ್ಕಾಗಿ ನಿಮ್ಮ ಲೇಖನ, ಪ್ರಬಂಧ, ಕವಿತೆ, ಕತೆ ಇತ್ಯಾದಿ ಸಾಹಿತ್ಯದ ಬರಹಗಳನ್ನು ಪಂಜುವಿಗಾಗಿ ಕಳಿಸಿಕೊಡಿ. ನಿಮ್ಮ ಲೇಖನಗಳು ಮಾರ್ಚ್ 23 ರ ಸಂಜೆಯೊಳಗೆ ನಮಗೆ ತಲುಪಲಿ… ನಿಮ್ಮ ಬರಹಗಳನ್ನು editor.panju@gmail.com ಮತ್ತು smnattu@gmail.com ಮೇಲ್ ಐಡಿಗಳಿಗೆ ಕಳುಹಿಸಿಕೊಡಿ. ನಿಮ್ಮ ಲೇಖನಗಳ ನಿರೀಕ್ಷೆಯಲ್ಲಿ… … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಹೈಕುಗಳು. ಅಮ್ಮನ ಪ್ರೇಮ ಎಲ್ಲೆಲ್ಲಿಯೂ ಸಿಗದ ಅಮೃತದಂತೆ. * ಏನು ಚೆಂದವೋ ಸೂರ್ಯನ ಕಿರಣವು ಪ್ರತಿ ಮುಂಜಾವು. * ಗುರು ಬಾಳಿಗೆ ದೇವತಾ ಮನುಷ್ಯನು ಜೀವನ ಶಿಲ್ಪಿ. * ಬಾಳ ಬೆಳಗೋ ಆ ಸೂರ್ಯ, ಚಂದ್ರರಿಗೆ ಕೋಟಿ ಪ್ರಣಾಮ. * ನಿರ್ಗತಿಕರ ಸೇವೆ ನೀ ಮಾಡುತಲಿ ದೇವರ ಕಾಣು. * ಸಿರಿಗನ್ನಡ ನಮ್ಮ ಕಣಕಣದಿ ಪುಟಿಯುತ್ತಿದೆ. * ದಾನ ಹಸ್ತಕ್ಕೆ ಜಾತಿ ಕಾರಣವೇಕೆ ಮಾನವ ಧರ್ಮ. * ತಾಯಿಯ ಪ್ರೇಮ ದೇವನಿಗೆ ಸಮಾನ ಮಿಕ್ಕದ್ದು ಮಿಥ್ಯ. * … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ದುರಂತ: ಗೀತಾ ಜಿ. ಹೆಗಡೆ, ಕಲ್ಮನೆ.

ಅದೊಂದು ಮಲೆನಾಡಿನ ಪುಟ್ಟ ಹಳ್ಳಿ.  ಅಲ್ಲಿ ಸುರೇಶನದು ಒಪ್ಪವಾದ ಸಂಸಾರ.  ಅವನಿಶ್ಚೆಯನರಿತ ಸತಿ, ಮುದ್ದಾದ ಒಬ್ಬಳೇ ಮಗಳು, ವಯಸ್ಸಾದ ಪ್ರೀತಿಯ ಅಮ್ಮ.  ಇವರೊಂದಿಗೆ ಬದುಕಿನ ಗತಿ ಸುಗಮವಾಗಿ ಸಾಗುತ್ತಿರುವಾಗ ಕೂಡಿಟ್ಟ ಅಲ್ಪ ಸ್ವಲ್ಪ ಹಣ ಸೇರಿಸಿ ಸರ್ಕಾರದ ಯೋಜನೆಯಡಿಯಲ್ಲಿ ಸಿಕ್ಕ ಒಂದೂವರೆ ಲಕ್ಷ ರೂಪಾಯಿ ಹಾಗೂ ಹೆಂಡತಿಯ ಒತ್ತಾಯದ ಮೇರೆಗೆ ಅವಳ ತವರಿನ ಒಡವೆ ಕೂಡಾ ಮಾರಿ ಎರಡು ರೂಮಿರುವ ಪುಟ್ಟದಾದ ಹೆಂಚಿನ ಮನೆ ಕಟ್ಟಿದ.  ಅದೇನೊ ಸಂಭ್ರಮ, ಸಂತೋಷ ಮನೆಯವರೆಲ್ಲರ ಮುಖದಲ್ಲಿ.  ತಮ್ಮದೇ ಆದ ಸ್ವಂತ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆತ್ಮ(ಮಿಯ)ಗೆಳೆಯ: ಜಯಂತ್ ದೇಸಾಯಿ

ಅದೊಂದು ದಿನ ಸುಬ್ಬರಾಯ ಆಟ ಆಡುತ್ತಾ ಆಡುತ್ತಾ ಮನೆಯಿಂದ ಎಷ್ಟೋ ದೂರ ಇರೋ ಮೊಬೈಲ್ ಟವರ್ ಹತ್ತಿರ ಹೋದ. ಅಲ್ಲಿ ಬಿದ್ದಿದ್ದ ಬಾಲ್ ತೆಗೆದುಕೊಂಡು ಯಾರ ಜೊತೆ ಮಾತಾಡುತ್ತಾ ಇದ್ದಂತೆ ಮಾಡಿ ತಿರುಗಿ ವಾಪಸ ಬಂದ. ಬಂದ ಮಗನನ್ನು ತಾಯಿ ರಾಧಾ ಯಾರ್ ಜೊತೆ ಮಾತಾಡುತ್ತಿದ್ದೆ ಅಲ್ಲಿ ಅಂದರೆ, ಅಮ್ಮ ಅವನು ಯಾರೋ ನನ್ನ ಸಹಾಯ ಬೇಕು ಅಂತಿದ್ದ ಅಮ್ಮ ಕಾಯುತ್ತಿದ್ದಾಳೆ ನಾಳೆ ನೋಡುವ ಅಂತ ಹೇಳಿ ಬಂದೆ ಅಂದ. ಆದ್ರೆ ತಾಯಿಗೆ ಏನೋ ಅನುಮಾನ ಬಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕಾಮಣ್ಣ ಮಕ್ಕಳೊ: ರೇಣುಕಾ ಕೋಡಗುಂಟಿ

ಅಂದು ಹೋಳಿ ಹುಣ್ಣಿಮೆಯ ದಿನ ಬಳಿಗಾರ ಓಣಿಯ ಮಕ್ಕಳೆಲ್ಲ ಸೇರಿ ರಾಗಾ, ಶರಣಾ, ಮಲ್ಲಾ, ಮಂಜಾ ಇವರ ಮುಂದಾಳತ್ವದಲ್ಲಿ ಒಟ್ಟು 12 ಜನ ಮಕ್ಕಳು ಕಾಮಣ್ಣನ್ನ ಕೂರಿಸಾಕ ನಿರ್ಧಾರ ಮಾಡಿದ್ದರು. ಅಲ್ಲಿ ಇಲ್ಲಿ ಸ್ವಲ್ಪ ಪಟ್ಟಿ ಎತ್ತಿ ಒಂದು ಟೆಂಟ್ ಹೊಡೆದು ತಯಾರಿ ಮಾಡಿದ್ದರು. ಒಂದು ಹಳೆ ಅಂಗಿ ಪ್ಯಾಂಟು ತಂದು ಅದರಲ್ಲಿ ಹುಲ್ಲು ತುಂಬಿ, ಅಂಗಿನ್ನು ಪ್ಯಾಂಟನ್ನು ಸೂಜಿ ದಾರದಿಂದ ಹೊಲಿದು ಕಾಮಣ್ಣನ್ನ ರೆಡಿ ಮಾಡಿದ್ದರು. ಕಾಮಣ್ಣನ ಹೊಟ್ಟೆಯನ್ನು ದಪ್ಪವಾಗಿ ಕಾಣುವಂತೆ ಮಾಡಿದ್ದರು. ಕುಂಬಾರ ಮನಿಯಿಂದ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಬರವಣಿಗೆ: ಭಾರ್ಗವಿ ಜೋಶಿ

ಕಲ್ಪನೆ,  ವಾಸ್ತವ ಯಾವುದೇ ಇರಲಿ ಅದಕ್ಕೆ ಅಕ್ಷರ ರೂಪ ಕೊಡುವುದೇ ಬರಹ. ಮನದ ಗೂಡಲ್ಲಿ ಒಡಮೂಡಿ,  ರೆಕ್ಕೆ ಕಟ್ಟಿ ಹಾರ ಬಯಸುವ ಪ್ರತಿ ಭಾವನೆಗಳು ಒಂದು ಬರಹವೇ.  ಹಾಗಾದರೆ ಯಾರು ಏನಾದರು ಗೀಚಿದರು ಅದು ಬರಹ ಆಗುತ್ತದಾ ಅನ್ನುವ ಪ್ರಶ್ನೆ ಎಲ್ಲರನ್ನು ಕಾಡುತ್ತದೆ.  ನನ್ನ ಅನಿಸಿಕೆ  ಖಂಡಿತವಾಗಿಯೂ ಹೌದು.  ಯಾಕೆಂದರೆ ಬರಹಗಾರರ ಪ್ರೀತಿ,  ಶ್ರದ್ಧೆ ಅಲ್ಲಿ ಅಡಕವಾಗಿರುತ್ತದೆ.  ಎಲ್ಲರು ಒಮ್ಮೆಲೆ ಉತ್ತಮ ಬರಹಗಾರರು,  ಪ್ರಶಸ್ತಿ ವಿಜೇತರು ಆಗಲು ಸಾಧ್ಯವಿಲ್ಲ.  ಎಲ್ಲವು ಅ, ಆ, ಇ, ಈ ಇಂದಲೇ ಆರಂಭವಾಗಬೇಕು.  ಬರಹ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ವಾಹನದ ವೇಗ ಮತ್ತು ಮಿತಿ: ಗಾಯತ್ರಿ ನಾರಾಯಣ ಅಡಿಗ

‘ಅವಸರವೇ ಅಪಾಯಕ್ಕೆ ಕಾರಣ ‘ ಎಂಬ ಮಾತೊಂದಿದೆ. ಪ್ರತಿಯೊಂದು ವಿಷಯದಲ್ಲಿಯೂ ಈ ಮಾತು ನೂರಕ್ಕೆ ನೂರು ಸತ್ಯ. ಈ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರೂ ಕನಿಷ್ಠ ಒಂದಾದರೂ ವಾಹನವನ್ನು ಹೊಂದಿರುತ್ತಾರೆ. ಒಂದೆಡೆ ವಾಹನಗಳಿಂದ ನಮಗೆ ಎಷ್ಟು ಅನುಕೂಲಗಳಿವೆಯೋ  ಇನ್ನೊಂದೆಡೆ ಆಷ್ಟೇ ಅನನುಕೂಲಗಳಿವೆ. ಅತಿಯಾದರೆ ಅಮೃತವೂ ವಿಷ ಎಂಬ ಮಾತೊಂದು ಇಲ್ಲಿ ನೆನಪಿಗೆ ಬರುತ್ತದೆ. ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ನಮ್ಮ ವಾಹನದ ವೇಗಕ್ಕೆ ಮಿತಿ ಇಲ್ಲದ ಕಾರಣ ಅಪಘಾತಗಳು ಹೆಚ್ಚು ಸಂಭವಿಸುತ್ತದೆ. ಇಂದಿನ ಯುವಕರಿಗಂತೂ ಇರುವ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 9): ಎಂ. ಜವರಾಜ್

೯- ಅಯ್ಯಯ್ಯೋ ಬನ್ರಪ್ಪ ಅಯ್ಯಯ್ಯೋ ಬನ್ರವ್ವ ಅಯ್ಯಯ್ಯೋ ಬನ್ರಣ್ಣ ಅಯ್ಯಯ್ಯೋ ಬನ್ರಕ್ಕ ಅಯ್ಯಯ್ಯೋ ಯಾರ್ಯಾರ ಬನ್ನಿ ಈ ಅಯ್ನೋರು  ಆ ನೀಲವ್ವನ ನನ್ನ ಮೆಟ್ದ ಮೆಟ್ಲಿ ತುಳ್ದು ತುಳ್ದು ಜೀವ ತಗಿತಾವ್ನ ಬನ್ನಿ ಬನ್ಬಿ.. ಅಂತಂತ ನಾನ್ ಕೂಗದು ಕೇಳ್ನಿಲ್ವಲ್ಲೊ.. ಆಗ ಜನ ಜಗನ್ ಜಾತ್ರಾಗಿ ಆ ನೀಲವ್ವ  ಅಯ್ಯೋ ಉಸ್ಸೋ ಅನ್ಕಂಡನ್ಕಂಡು ಸುದಾರುಸ್ಕಂಡು ಮೇಲೆದ್ದು  ನಿಂತ ಜನ ನೋಡ್ತ ನೋಡ್ತ ಮೋರಿ ದಾಟಿ ಜಗುಲಿ ಅಂಚಿಗೆ ಕುಂತು ಗೋಳಾಡ್ತ ಗೋಳಾಡ್ತ  ಜಗುಲಿ ಕಂಬ ಒರಗಿದಳಲ್ಲೋ… ‘ಅಯ್ನೋರಾ.. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕ್ಷಮೆ ಮತ್ತು ರಾಜಿ ಸೂತ್ರ ಪ್ರತಿಪಾದಿಸುವ The tempest: ನಾಗರೇಖ ಗಾಂವಕರ

ಆಫ್ರಿಕಾದ ಟ್ಯುನಿಸ್‍ನಲ್ಲಿ ವಿವಾಹಕಾರ್ಯದಲ್ಲಿ ಭಾಗವಹಿಸಿ ಮರಳುತ್ತಿದ್ದ Neapolitansಗಳಾದ [ನೇಪಲ್ಸ್‍ನ ನಿವಾಸಿಗಳು] ಇಟಲಿಯ ನೇಪಲ್ಸ್‍ನ ರಾಜ ಅಲೆನ್ಸೋ ಆತನ ಪುತ್ರ ಫರ್ಡಿನಾಂಡ್, ಸಹೋದರ ಸೆಬಾಸ್ಟಿಯನ್ ಹಾಗೂ ಮಿಲನ್‍ನ ಡ್ಯೂಕ್ ಅಂಟೋನಿಯೋ ಮತ್ತು ಇತರ ಸಂಗಡಿಗರಿದ್ದ ಹಡಗು ಸಮುದ್ರ ಮಧ್ಯೆ ಬಿರುಗಾಳಿಯ ಹೊಡೆತಕ್ಕೆ ನಲುಗಿ ಹೋಗಿದೆ. ಇದಕ್ಕೆ ಕಾರಣ ಪ್ರೊಸ್ಪೆರೋ. ಆತನ ಉದ್ದೇಶವೆಂದರೆ ಅವರೆಲ್ಲಾ ತಾನು ವಾಸವಾಗಿದ್ದ ಆ ನಡುಗಡ್ಡೆಗೆ ಬರುವಂತಾಗಬೇಕು. ಅದಕ್ಕಾಗಿ ಅತ ತನ್ನ ಮಾಂತ್ರಿಕ ವಿದ್ಯೆಯನ್ನು ಬಳಸಿ ಚಂಡಮಾರುತವನ್ನೆಬ್ಬಿಸಿದ್ದಾನೆ. ಇದಕ್ಕೆ ಕಾರಣವಿದೆ. ಆತನಿಗೆ ಅವರಿಂದ ಅನ್ಯಾಯವಾಗಿದೆ. ಮಿಲನ್‍ನ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಆಧ್ಯಾತ್ಮಿಕತೆಯ ಆಧುನಿಕ ನೆಲೆ……: ಪ್ರವೀಣ್.ಪಿ

ಆಧುನಿಕತೆಯ ಸುಳಿಯಲ್ಲಿ ಸಿಲುಕಿರುವ ಇಂದಿನ ಸಮಾಜ ವಿಭಿನ್ನತೆಯೊಂದಿಗೆ ಹೊಸ ಬದುಕಿಗೆ ತೆರದುಕೊಳ್ಳಲು ಹವಣಿಸುತ್ತಿದೆ. ಬದಲಾದ ಸಾಮಾಜಿಕ ವ್ಯವಸ್ಥೆಯಲ್ಲಿ ಹೊಸತನದ ಅಲೆಯೊಂದು ಜನರನ್ನ ಬೇರೆ ದಿಕ್ಕಿಗೆ ಸೆಳೆಯುತ್ತಿದೆ. ಮಾರ್ಡನಿಟಿಗೆ ಮಾರುಹೋದ ಜನರು ತಮ್ಮ ಆಲೋಚನೆ ಹಾಗೂ ಜೀವನ ಶೈಲಿಯನ್ನು ಬದಲಾಯಿಸಿಕೊಳ್ಳಲು ಆರಂಭಿಸಿದ್ದಾರೆ. ಪ್ರೀತಿಯು ಆಧುನಿಕತೆಯ ನೆಲೆಯಲ್ಲಿ ನಡೆಯುತ್ತಿದೆ. ಇದರಲ್ಲಿ ಆಧ್ಯಾತ್ಮಿಕ ಕ್ಷೇತ್ರವು ಹೊರತಾಗಿಲ್ಲ. ಆಧ್ಯಾತ್ಮವು ಇಂದು ಉದ್ಯಮಶೀಲತೆಯ ತಳಹದಿಯಲ್ಲಿ ಸಾಗುತ್ತಿದೆ. ಆಚಾರ, ಸಂಪ್ರದಾಯ, ಪೂಜೆ, ಪುನಸ್ಕಾರ, ಸಂಸ್ಕೃತಿ ಎಲ್ಲವೂ ಆಧುನೀಕರಣದೊಂದಿಗೆ ಬೆರೆತು ಹೋಗಿದೆ. ಇದರ ಪರಿಣಾಮ ಹುಡುಗರಲ್ಲಿ ಬೇರೊಂದು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಜೀವನ ಕೌಶಲ್ಯಗಳು: ಕೆ ಟಿ ಸೋಮಶೇಖರ್ ಹೊಳಲ್ಕೆರೆ

ತಗ್ಗು ದಿಬ್ಬ ಗುಂಡಿ ಗೊಟರು ಸರೋವರ ಸಂದುಗೊಂದುಗಳಲಿ ಬದುಕಿನಬಂಡಿ ಅಪಾಯಕ್ಕೆ ಸಿಲುಕದಂತೆ ಉಪಾಯವಾಗಿ ಪಾರುಮಾಡಿ ಮುಟ್ಟಬೇಕಾದ ಗುರಿ ತಲುಪುವಂತೆ ಮಾಡುವ ಜೀವನ ಕೌಶಲ್ಯಗಳು ಎಲ್ಲರಿಗೂ ಅವಶ್ಯ ಅಮೂಲ್ಯ! ಬದುಕಿನಲ್ಲಿ ಶಾಲೆ, ಶಾಲೆಯಲ್ಲಿ ಪಠ್ಯಪುಸ್ತಕ, ಪಠ್ಯ ಪುಸ್ತಕದಲ್ಲಿ ಸ್ವಲ್ಪ ಬದುಕು ಇರುವುದು. ಪಠ್ಯಕ್ಕಿಂತ ಪಠ್ಯದಿಂದ ಹೊರಗಡೆಯೇ ಹೆಚ್ಚು ಬದುಕು ವ್ಯಾಪಿಸಿರುವುದು! ಶಾಲೆ, ಪಠ್ಯ ಪುಸ್ತಕ, ಅದರಲ್ಲಿನ ಜ್ಞಾನ ಏಕೆ ಬೇಕು! ಅವಿಲ್ಲದೆ ಬದುಕಲು ಆಗುವುದಿಲ್ಲವೆ? ಆಗುತ್ತದೆ! ಆದರೆ ಪಠ್ಯದಿಂದ ಹೊರಗಿರುವ ಬದುಕನ್ನು ವ್ಯವಸ್ಥಿತವಾಗಿ ಬದುಕುವಂತಾಗಲು, ಈಗ ಇರುವ ಬದುಕನ್ನು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಪಂಜು ಕಾವ್ಯಧಾರೆ

ಬಾಲಲೀಲೆಗಳು ಮರಳಬೇಕೆನಿಸುತಿದೆ ಆ ಸಮೃದ್ಧಿಯ ದಿನಗಳಿಗೆ. ನುಗ್ಗಿಬರುತಿವೆ ನೆನೆಪುಗಳ ಬುಗ್ಗೆ, ಮನಸಿಗೆ ಬಂಧನವಿರದ, ಹೃದಯಕೆ ದಣಿವಾಗದಿರದ, ಆ ಮುಗ್ದ ಮುಕ್ತ ರಸವತ್ತಾದ ದಿನಗಳಿಗೆ. ಕಣ್ಣಿಗೆ ಕಟ್ಟಿದಂತಿವೆ ಆ ಆಟ ಪಾಟಗಳು… ಬೀದಿ ಬೀದಿ ಅಲೆದು ಹುಣೆಸೆ ಬೀಜ ಗುಡ್ಡೆಯಾಕಿ ಅಟಗುಣಿ ಆಡಿದ್ದು. ಹಳ ಕೊಳ್ಳಗಳ ಶೋಧಿಸಿ ಕಲ್ಲುತಂದು ಅಚ್ಚಿನಕಲ್ಲು ಆಡಿದ್ದು. ಬಳಪ ಸೀಮೆಸುಣ್ಣ ಸಿಗದೆ ಇದ್ದಲಿನಲಿ ಚೌಕಬಾರ ಬರೆದಿದ್ದು. ಕುಂಟೆಬಿಲ್ಲೆ ಆಡಿ ಕಾಲು ಉಣುಕಿಸಿಕೊಂಡಿದ್ದು. ಕಣ್ಣಾಮುಚ್ಚಾಲೆ ಹಾಡುವಾಗ ಕಣಜದಲಿ ಅಡಗಿ ನೆಲ್ಲಿನ ನವೆಗೆ ದಿನವೆಲ್ಲಾ ಮೈಕೆರೆದುಕೊಂಡಿದ್ದು. ಬರಿಗಾಲಲ್ಲಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕೋಳಿ ಮತ್ತು ಕೊರೋನ: ಡಾ. ನಟರಾಜು ಎಸ್. ಎಂ.

ವರ್ಷ ಎರಡು ಸಾವಿರದ ಹದಿಮೂರರ ಡಿಸೆಂಬರ್ ತಿಂಗಳು ಅನಿಸುತ್ತೆ. ಜಲ್ಪಾಯ್ಗುರಿಯಲ್ಲಿ ತುಂಬಾ ಚಳಿ ಇತ್ತು. ಒಂದು ಮುಂಜಾನೆ ಯಾವುದೋ ರೋಗ ಪತ್ತೆ ಹಚ್ಚಲು ನಮ್ಮ ಟೀಮ್ ಜೊತೆ ಕಾರಿನಲ್ಲಿ ಹೊರಟ್ಟಿದ್ದೆ. ನನ್ನ ಜೊತೆ ನನ್ನ ಡಾಟ ಮ್ಯಾನೇಜರ್, ಇಬ್ಬರು ಹೆಲ್ತ್ ವರ್ಕರ್ಸ್ ಮತ್ತು ಡ್ರೈವರ್ ಇದ್ದ. ಹೆಲ್ತ್ ವರ್ಕರ್ ಆಗಿದ್ದ ತೊರಿಕ್ ಸರ್ಕಾರ್ ಗೆ ಅವತ್ತು ತುಂಬಾ ಕೆಮ್ಮಿತ್ತು. ಕೆಮ್ಮಿದ್ದರೂ ಆತ ಮಾರ್ಗ ಮಧ್ಯೆ ಆಗಾಗ ಸಿಗರೇಟ್ ಸೇದುತ್ತಲೇ ಇದ್ದ. ಆತ ಮುಂದೆ ಡ್ರೈವರ್ ಪಕ್ಕ ಕುಳಿತ್ತಿದ್ದ. … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಕನ್ನಡ v/s ಇಂಗ್ಲಿಷ್ : ಸೂರಿ ಹಾರ್ದಳ್ಳಿ

ನಮ್ಮ ಕಂಪನಿಯಲ್ಲಿ ಕನ್ನಡೇತರರಿಗೆ ಕನ್ನಡ ಪಾಠ ಮಾಡುತ್ತಿದ್ದೆ. ಅಕ್ಷರಗಳ ಮಾಲೆ ಕೊಟ್ಟಾಗ ‘ಓಹ್ ಮೈ ಗಾಡ್,’ ಎಂಬೊಂದು ಉದ್ಗಾರ ಹಿಂದಿನಿಂದ ಬಂತು. ಇಂಗ್ಲಿಷಿನ ಇಪ್ಪತ್ತಾರು ಅಕ್ಷರಗಳು ಸರಿಯೆಂದ ನಮ್ಮವರು ಕನ್ನಡದಲ್ಲಿ ಇಷ್ಟೊಂದು ಅಕ್ಷರಗಳೇ, ಕಲಿಯಲು ಕಷ್ಟ ಎಂದು ಮೂಗು ಮುರಿಯುತ್ತಾರೆ. ಆದರೆ ಚೀನೀ ಭಾಷೆಯಲ್ಲಿ ಸುಮಾರು 43 ಸಾವಿರ ಅಕ್ಷರಗಳಿವೆ ಎಂದರೆ ನಂಬುವಿರಾ? ನಂಬಲೇಬೇಕು. ಆದರೆ ಒಬ್ಬ ವ್ಯಕ್ತಿಯು ಮಾತನಾಡಲು ಮೂರನೆಯ ಒಂದು ಭಾಗ ಮಾತ್ರ ಕಲಿತರೆ ಸಾಕಂತೆ. ಆದರ ಇನ್ನೊಂದು ದುರಂತ ಎಂದರೆ ಅದು ಧ್ವನಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ನಂಬಿಕೆ ದ್ರೋಹ ಮತ್ತು ದ್ವೇಷದ ಕಥಾನಕ- ಹ್ಯಾಮ್ಲೆಟ್: ನಾಗರೇಖ ಗಾಂವಕರ

ಆತ ಪ್ರಿನ್ಸ್ ಹ್ಯಾಮ್ಲೆಟ್ ಕಪ್ಪು ಬಟ್ಟೆ ಧರಿಸಿದ ಆತ ಮಾನಸಿಕವಾಗಿ ದ್ವಂದ್ವ ಸ್ಥಿತಿಯಲ್ಲಿದ್ದಾನೆ. ಅಷ್ಟೇ ಅಲ್ಲ ರೊಚ್ಚಿಗೆದ್ದಿದ್ದಾನೆ. ಕಾರಣ ತಂದೆ ಡೆನ್ಮಾರ್ಕನ ರಾಜ ಹ್ಯಾಮ್ಲೆಟ್ ಸಾವನ್ನಪ್ಪಿದ್ದಾರೆ. ತಾಯಿ ರಾಣಿ ನಾಚಿಕೆಯಿಲ್ಲದೇ ನಿಷ್ಠೆ ಇಲ್ಲದೇ ಮರುವಿವಾಹವಾಗಿದ್ದಾಳೆ. ಅದು ರಾಜಕುಮಾರನಿಗೆ ಇಷ್ಟವಿಲ್ಲ. ಆಕೆ ಹಾಗೆ ಮಾಡಿದ್ದು ತನ್ನ ತಂದೆಗೆ ಮಾಡಿದ ದ್ರೋಹವೆಂದೆನ್ನಿತ್ತದೆ.ಹಾಗಾಗಿ ಆತನ ಒಳಗುದಿ ಕುದಿಯುತ್ತಿರುವುದು ಬರಿಯ ತಂದೆಯ ಸಾವಿನಿಂದಲ್ಲ. ಬದಲಿಗೆ ತಾಯಿಯ ಮರುವಿವಾಹ ಅದೂ ತನ್ನ ಚಿಕ್ಕಪ್ಪ ಕ್ಲಾಡಿಯಸ್ ನೊಂದಿಗೆ ಹಾಗೂ ಆತ ರಾಣಿ ಗೆರ್ಟ್ರೂಡ್ ಳನ್ನು ಮದುವೆಯಾಗಿ … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ

ಮಾಯಕಾರ: ತಿರುಪತಿ ಭಂಗಿ

ತಮ್ಮ ತಲೆಯಲ್ಲಿ ಅಲ್ಲಲ್ಲಿ ಹುಟ್ಟಿಕೊಂಡ ಬಿಳಿ ಕೂದಲು ನೋಡಿದೊಡನೆ ಅವತ್ತು, ತನ್ನ ವಯಸ್ಸು ದಿನೆದಿನೆ ಮಂಜುಗಡ್ಡೆಯಂತೆ ಕರಗುತ್ತಿದೆ ಎಂಬ ಅರಿವಾಗಿ ಸಾವಕಾರ ಸಿದ್ದಪ್ಪನ ಮನದಲ್ಲಿ ಶೂನ್ಯ ಆವರಿಸಿತು.“ನನಗೆ ಮಕ್ಕಳಾಗಲಿಲ್ಲ, ಆಗುವುದೂ ಇಲ್ಲ, ನಾನೊಬ್ಬ ಎಲ್ಲ ಇದ್ದು, ಏನೂ.. ಇಲ್ಲದ ನತದೃಷ್ಟ, ಕೈಲೆ ಆಗದವನು, ಮಕ್ಕಳನ್ನು ಹುಟ್ಟಿಸಲು ಆಗದ ಶಂಡ ನಾನು…..”ನೂರೆಂಟು ವಿಚಾರಗಳನ್ನು ಮನದಲ್ಲಿ ರಾಶಿ ಹಾಕಿಕೊಂಡು ನೆನೆ-ನೆನೆದು ವ್ಯಥೆಪಟ್ಟ. ಯಾರಿಗೂ ಗೊತ್ತಾಗದಂತೆ ಬೆಂಗಳೂರು, ಕಾರವಾರ, ಕೇರಳ, ಸುತ್ತಾಡಿ ನಾ..ನೀ.. ಅನ್ನುವ ನಂಬರ್ ಒನ್ ವೈದ್ಯರ ಮುಂದೆ ತಾವು … Read more

ಕನ್ನಡದ ಬರಹಗಳನ್ನು ಹಂಚಿ ಹರಡಿ