ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ ೫): ಎಂ. ಜವರಾಜ್
-೫- ಅಯ್ಯೋ ದೇವ್ರೇ ಯಾಕಪ್ಪ ಈ ಕ್ವಾಟ್ಲ ಕೊಟ್ಟ ನಂಗ ಈ ಅಯ್ನೋರು ಒಳಗ ಹೋದೋರು ಇನ್ನುವ ಅದೇನ್ಮಾಡ್ತಿದ್ದರೋ.. ಈ ಅಯ್ನೋರ್ ದೆಸೆಯಿಂದ ಈ ಕತ್ಲೊಳ್ಗ ನಾ ಒಬ್ನೆ ಆದ್ನಲ್ಲೊ.. ಒಳಗೆ ಅದೇನೋ ಸದ್ದು ನಾ ನೋಡವ ಅಂದ್ರ ಬಾಗಿಲು ಮುಚ್ಚಿತ್ತು “ನೋಡು ಅವತ್ತು ಬಂದಾಗ ಏನಂದೆ ನೀನು ಬಂದು ಬಂದು ಹೋದ್ರ ನಾ ಬುಟ್ಟಿನಾ ತಂದು ಕೊಡಗಂಟ ನನ್ನ ಮುಟ್ಟಂಗಿಲ್ಲ” ಮಾತು ಬಾಗಿಲು ಸೀಳಿ ಬಂದದ್ದು ಗೊತ್ತು. ಈ ನಾಯಿ ಬಡ್ಡೆತದು ಈ ಕತ್ತಲ ಸಾಮ್ರಾಜ್ಯದಲಿ … Read more